Headlines

nagaraj11081993

ಮೆಟ್ಟಿಲು ಹತ್ತಿದ್ರೆ ಹೃದಯ ಬಡಿತ ವೇಗವಾಗುತ್ತಾ? ಈ ರೀತಿ ಆಗುವುದಕ್ಕೆ ಕಾರಣವೇನು ತಿಳಿದುಕೊಳ್ಳಿ

ಮೆಟ್ಟಿಲು ಏರಿ ಮೇಲೆ ಹೋಗುವಾಗ ಅಥವಾ ಸ್ವಲ್ಪ ದೂರ ನಡೆದು ಹೋದಾಗ ಹೃದಯ ಬಡಿತ (Heart Beats) ಹೆಚ್ಚಾಗುವುದು ಸಾಮಾನ್ಯವೆಂದು ಕೆಲವರು ಭಾವಿಸುತ್ತಾರೆ. ಆದರೆ ಕೆಲವರು ಸ್ವಲ್ಪ ದೂರ ನಡೆದರೂ ಉಸಿರಾಟ ಹೆಚ್ಚಾಗಿ ಹೃದಯ ಬಡಿತ ವೇಗವಾಗುತ್ತದೆ. ಇದನ್ನು ಕೆಲವರು ಉಸಿರಾಟದ ಸಮಸ್ಯೆ ಎಂದುಕೊಳ್ಳುತ್ತಾರೆ, ಇನ್ನೂ ಕೆಲವರು ಹೃದಯ ಸಂಬಂಧಿತ ಸಮಸ್ಯೆಯೆಂದು ಭಾವಿಸಿ ಚಿಕಿತ್ಸೆ ಪಡೆಯಲು ಪ್ರಯತ್ನಿಸುತ್ತಾರೆ. ಆದರೆ ಪ್ರತಿಯೊಬ್ಬರಲ್ಲಿಯೂ ಹೃದಯ ಬಡಿತ ಹೆಚ್ಚಾಗುವುದು ಕೇವಲ ದೈಹಿಕ ಸಮಸ್ಯೆಯೇನಾ, ಅಥವಾ ಇದಕ್ಕೆ ಮಾನಸಿಕ ಆರೋಗ್ಯದ ಸಂಬಂಧವೂ ಇದೆಯೇ…

Read More

ಎಂಜಿಆರ್ ಬಗ್ಗೆ ತೆಲುಗು ನಟನ ಹೇಳಿಕೆ: ಕ್ಷಮೆಗೆ ಒತ್ತಾಯಿಸಿದ ತಮಿಳು ನಟರು

ತೆಲುಗು ಚಿತ್ರರಂಗದ (Tollywood) ಜನಪ್ರಿಯ ಹಿರಿಯ ನಟ, ಪದ್ಮಶ್ರೀ ಪ್ರಶಸ್ತಿ ವಿಜೇತ ರಾಜೇಂದ್ರ ಪ್ರಸಾದ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ತಮಿಳಿನ ಸೂಪರ್ ಸ್ಟಾರ್ ನಟ ಮತ್ತು ಮಾಜಿ ಸಿಎಂ ಸಹ ಆಗಿರುವ ಎಂಜಿಆರ್ ಬಗ್ಗೆ ತೀರ ತುಚ್ಛವಾಗಿ ಮಾತನಾಡಿದ್ದರು. ಆ ವಿಡಿಯೋ ಸಖತ್ ವೈರಲ್ ಆಗಿತ್ತು. ಅದರ ಬೆನ್ನಲ್ಲೆ ಇದೀಗ ತಮಿಳಿನ ಕೆಲವು ನಟರು, ಸ್ಟಾರ್ ನಟರುಗಳು ಇದನ್ನು ತೀವ್ರವಾಗಿ ಖಂಡಿಸಿದ್ದು, ರಾಜೇಂದ್ರ ಪ್ರಸಾದ್ ಕೂಡಲೇ ಕ್ಷಮೆ ಕೇಳಬೇಕು ಎಂದಿದ್ದಾರೆ. ತೆಲುಗಿನ ಹಿರಿಯ ನಟ ಕಾಂತಾರಾವ್…

Read More

ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್

ಬೆಂಗಳೂರು, (ಮಾರ್ಚ್ 12):  ಭಾರೀ ಸಂಚಲನ ಮೂಡಿಸಿದ್ದ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ (Biklu Shiva murder case) ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ (MLA Bairathi Basavaraj) ಕೊನೆಗೂ ಜಾಮೀನು ದೊರೆತಿದೆ. ಬೆಂಗಳೂರಿನ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾ ಬಳಿಕ ಶಾಸಕನನ್ನು ಬಂಧಿಸಲಾಗಿತ್ತು. ಇದೀಗ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಬಸವರಾಜ್​​ಗೆ ರಿಲೀಫ್‌ ಸಿಕ್ಕಿದೆ….

Read More

ಎಲ್​ಪಿಜಿಗೆ ಪ್ಯಾನಿಕ್ ಬುಕಿಂಗ್ ಬೇಡ; ಕೆಲ ವಲಯಗಳಿಗೆ ಆದ್ಯತೆ ಮೇರೆಗೆ ಕಮರ್ಷಿಯಲ್ ಗ್ಯಾಸ್ ನೀಡುತ್ತೇವೆ: ಸರ್ಕಾರದ ಹೇಳಿಕೆ

ನವದೆಹಲಿ, ಮಾರ್ಚ್ 12: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳನ್ನು (LPG) ಬಿಡುಗಡೆ ಮಾಡಲಾಗುವುದು. ಆದರೆ, ರಾಜ್ಯ ಸರ್ಕಾರಗಳು ಯಾರಿಗೆ ಕೊಡಬಹುದು ಎಂದು ಫಲಾನುಭವಿಗಳನ್ನು ಗುರುತಿಸುತ್ತವೆ ಎಂದು ಕೇಂದ್ರ ಪೆಟ್​ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ (Sujata Sharma) ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸುಜಾತಾ ಶರ್ಮಾ, ಎಲ್​ಪಿಜಿ ವಿಚಾರದಲ್ಲಿ ಜನರು ಆತಂಕ ಪಡಬಾರದು ಎಂದು ಮನವಿ ಮಾಡಿದ್ದಾರೆ. ‘ಗೃಹೇತರ ಬಳಕೆಯ ಎಲ್​ಪಿಜಿ ಅಥವಾ ಕಮರ್ಷಿಯಲ್ ಎಲ್​ಪಿಜಿ ವಿಚಾರದಲ್ಲಿ ನಾವು ಆಸ್ಪತ್ರೆ, ಶಿಕ್ಷಣ…

Read More

‘ಜನ ನಾಯಗನ್’ ಸಿನಿಮಾಗೆ ಇನ್ನೊಂದು ಶಾಕ್: ಕ್ಯಾನ್ಸಲ್ ಆಯ್ತಾ 120 ಕೋಟಿ ರೂ. ಒಟಿಟಿ ಡೀಲ್?

ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಚಿತ್ರವು ವಿವಾದಗಳ ಸುಳಿಯಲ್ಲಿ ಸಿಲುಕಿದೆ. ಸೆನ್ಸಾರ್ ಮಂಡಳಿಯ ಜೊತೆಗಿನ ಸಂಘರ್ಷದಿಂದಾಗಿ ಸಿನಿಮಾ ಬಿಡುಗಡೆ ವಿಳಂಬವಾಗುತ್ತಿದೆ. ಅಲ್ಲದೇ, ಚಿತ್ರದ ಡಿಜಿಟಲ್ ಪ್ರಸಾರ ಹಕ್ಕುಗಳನ್ನು ಹೊಂದಿದ್ದ ಪ್ರಮುಖ ಒಟಿಟಿ ಸಂಸ್ಥೆ ‘ಅಮೇಜಾನ್ ಪ್ರೈಮ್ ವಿಡಿಯೋ’ (Amazon Prime Video) ತನ್ನ ಒಪ್ಪಂದದಿಂದ ಹಿಂದೆ ಸರಿದಿದೆ ಎಂಬ ವದಂತಿಗಳು ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ. ಇದರಿಂದಾಗಿ ದಳಪತಿ ವಿಜಯ್ (Thalapathy Vijay) ಅವರ ಅಭಿಮಾನಿಗಳಿಗೆ…

Read More

20 ವರ್ಷದ ಹಿಂದೆಯೇ 16,700 ರೂ ಕಟ್ಟಿದ್ರೂ ಇದುವರೆಗೂ ಇ ಖಾತಾ ಸಿಕ್ಕಿಲ್ಲ, ಇದು ಅಧಿಕಾರಿಗಳ ಕಾರ್ಯವೈಖರಿ

ಬೆಂಗಳೂರು, (ಮಾರ್ಚ್ 12): ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಯಾವುದೇ ಆಸ್ತಿ ವಹಿವಾಟು ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸಿದೆ. ಇದರಿಂದ ಹಲವು ಸಮಸ್ಯೆಗಳು ಸಹ ಉಂಟಾಗಿದ್ದು, ಇ ಖಾತಾಕ್ಕಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಜಿಬಿಎ ಅಧಿಕಾರಿಗಳು ಮಾತ್ರ ಜನರ ಸಮಸ್ಯೆ ಏನು ಎನ್ನುವುದನ್ನೂ ತಿಳಿದುಕೊಳ್ಳುವ ಗೋಚಿಗೂ ಹೋಗಲ್ಲ. ಇದಕ್ಕೆ ಪೂರಕವೆಂಬಂತೆ ಬೆಂಗಳೂರಿನ ರಂಗನಾಯಕಿ ಮಹಿಳೆಯೊಬ್ಬರು ಇ ಖಾತಾಕ್ಕಾಗಿ ಇಪ್ಪತ್ತು ವರ್ಷಗಳಿಂದ ಹಿಂದೆ ಅಂದ್ರೆ 2006ರಲ್ಲಿ 16,700 ರೂಪಾಯಿ ಶುಲ್ಕ ಕಟ್ಟಿದ್ದಾರೆ….

Read More

ತಪ್ಪು ನನ್ನದೇ.. ಟಿ20 ವಿಶ್ವಕಪ್ ಗೆದ್ದು ಅಕ್ಷರ್ ಪಟೇಲ್ ಬಳಿ ಕ್ಷಮೆಯಾಚಿಸಿದ ಸೂರ್ಯ

ಕಳೆದ ಭಾನುವಾರ ನಡೆದ 2026 ರ ಟಿ20 ವಿಶ್ವಕಪ್ (T20 World Cup) ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸುವ ಮೂಲಕ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದುಕೊಂಡಿತು. ಈ ಗೆಲುವಿನ ನಂತರ ಭಾರತದಲ್ಲಿ ಭಾರಿ ಸಂಭ್ರಮಾಚರಣೆ ನಡೆಯಿತು. ಇದೀಗ ವಿಶ್ವಕಪ್ ಮುಗಿದ ನಾಲ್ಕು ದಿನಗಳ ನಂತರ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ತಂಡದ ಉಪನಾಯಕ ಅಕ್ಷರ್ ಪಟೇಲ್ (Axar Patel) ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ತಾನು…

Read More

ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ

ನವದೆಹಲಿ, ಮಾರ್ಚ್ 12: ಕಳೆದ ಕೆಲವು ವರ್ಷಗಳಿಂದ ಪ್ರಪಂಚದಾದ್ಯಂತ ಮೊಬೈಲ್ ಫೋನ್ ಸ್ಫೋಟಗೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಚಾರ್ಜ್ ಮಾಡುವಾಗ ಅಥವಾ ಬಳಸುತ್ತಿರುವಾಗಲೇ ಮೊಬೈಲ್ ಅತಿಯಾಗಿ ಬಿಸಿಯಾಗುವುದು ಅಥವಾ ಸ್ಫೋಟಗೊಳ್ಳುವ ಘಟನೆಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಚೀನಾದಲ್ಲಿ ಅಂತಹ ಒಂದು ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ (Viral Video) ಬಾಲಕಿಯೊಬ್ಬಳು ಫೋನ್ ಹಿಡಿದಿದ್ದಾಗ ಮೊಬೈಲ್ ಸ್ಫೋಟವಾಗಿದೆ. ಅದೃಷ್ಟವಶಾತ್ ಆಕೆ ತೀವ್ರ ಗಾಯಗಳಿಂದ ಪಾರಾಗಿದ್ದಾಳೆ. ಆಕೆಯ ಮನೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಇನ್ನಷ್ಟು…

Read More

ಸಿಬಿಎಫ್​​ಸಿ ಹೊಸ ನಿಯಮ: ನಿರ್ಮಾಪಕರಿಗೆ ತಂದಿದೆ ತಲೆನೋವು

ಸಿಬಿಎಫ್​​ಸಿ (CBFC) ಯಿಂದ ಇತ್ತೀಚೆಗೆ ಕೆಲವು ನಿರ್ಮಾಪಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಲವು ನಿರ್ಮಾಪಕರು ಇತ್ತೀಚೆಗಿನ ದಿನಗಳಲ್ಲಿ ಸಿಬಿಎಫ್​​ಸಿ ಬಗ್ಗೆ ಅಸಮಾಧಾನ ಸಹ ಹೊರಹಾಕಿದ್ದಾರೆ. ಕೆಲವರು ಕೇಸುಗಳನ್ನು ಸಹ ದಾಖಲಿಸಿದ್ದಿದೆ. ಇದೀಗ ಸಿಬಿಎಫ್​​ಸಿ ಹೊರ ನಿಯಮವೊಂದನ್ನು ಜಾರಿ ಮಾಡಿದ್ದು, ಈ ನಿಯಮ ನಿರ್ಮಾಪಕರಿಗೆ ಇನ್ನಷ್ಟು ತಲೆನೋವು ತರಲಿದೆ. ಆದರೆ ಇದೊಂದು ಉಪಯುಕ್ತ ನಿಯಮವಾಗಿದ್ದು, ನಿರ್ಮಾಪಕರುಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂದು ನೋಡಬೇಕಿದೆ. ಸಿಬಿಎಫ್​​ಸಿಯ ನಿಯಮದ ಪ್ರಕಾರ, ಈ ಭಾನುವಾರದ (ಮಾರ್ಚ್ 15) ಪ್ರಮಾಣ ಪತ್ರಕ್ಕೆ ಸಲ್ಲಿಕೆ ಆಗುವ ಎಲ್ಲ…

Read More

ಫೆಬ್ರುವರಿ 2026ರಲ್ಲಿ ರೀಟೇಲ್ ಹಣದುಬ್ಬರ ಶೇ. 3.21ಕ್ಕೆ ಏರಿಕೆ; ಆರ್​ಬಿಐ ಮಿತಿಯಲ್ಲಿ ಬೆಲೆ ಏರಿಕೆ

ನವದೆಹಲಿ, ಮಾರ್ಚ್ 12: ಭಾರತದ ರೀಟೇಲ್ ಹಣದುಬ್ಬರ (Retail Inflation) ಫೆಬ್ರುವರಿಯಲ್ಲಿ ಶೇ. 3.21ರಷ್ಟಿರುವುದು ದಾಖಲಾಗಿದೆ. ಜನವರಿಯಲ್ಲಿ ಹಣದುಬ್ಬರ ಶೇ. 2.74ರಷ್ಟಿತ್ತು. ಫೆಬ್ರುವರಿಯಲ್ಲಿ ಸ್ವಲ್ಪ ಮಟ್ಟಿಗೆ ಬೆಲೆ ಏರಿಕೆ ಆಗಿದೆ. ಶೇ. 3.2 ದರವು ಆರ್​ಬಿಐನ ಶೇ. 4ರ ಹಣದುಬ್ಬರ ಮಿತಿಯ ಗುರಿಯೊಳಗೆಯೇ ಇದೆ. ಗ್ರಾಮೀಣ ಭಾಗದಲ್ಲಿ ಫೆಬ್ರುವರಿಯಲ್ಲಿ ಹಣದುಬ್ಬರ ಶೇ. 3.37 ಇದ್ದರೆ, ನಗರ ಭಾಗದಲ್ಲಿ ಅದು ಶೇ. 3.02ರಷ್ಟಿದೆ. ಗ್ರಾಹಕ ಆಹಾರ ಬೆಲೆ ಅನುಸೂಚಿ ಆಧಾರಿತವಾದ ಹಣದುಬ್ಬರವು ಜನವರಿಯಲ್ಲಿ ಶೇ. 2.13ರಷ್ಟಿತ್ತು. ಫೆಬ್ರುವರಿಯಲ್ಲಿ ಅದು…

Read More