Headlines

nagaraj11081993

IPL 2026: ಡಬಲ್ ಧಮಾಕಾ… 4 ದಿನಗಳಲ್ಲಿ 8 ಪಂದ್ಯಗಳು

IPL 2026: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ.  ಈ ಇಪ್ಪತ್ತು ಪಂದ್ಯಗಳಲ್ಲಿ 4 ಡಬಲ್ ಹೆಡ್ಡರ್ ಮ್ಯಾಚ್​ಗಳಿವೆ. ಅಂದರೆ 4 ದಿನಗಳಲ್ಲಿ ಒಟ್ಟು 8 ಮ್ಯಾಚ್​ಗಳು ನಡೆಯಲಿವೆ. ಇಲ್ಲಿ ಮೊದಲ ಮ್ಯಾಚ್ 3.30 ಕ್ಕೆ ಶುರುವಾದರೆ, ದ್ವಿತೀಯ ಪಂದ್ಯ 7.30 ಕ್ಕೆ ಆರಂಭವಾಗಲಿದೆ. ಅದರಂತೆ ಐಪಿಎಲ್​ನ ವೇಳಾಪಟ್ಟಿ ಈ ಕೆಳಗಿನಂತಿದೆ… ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು…

Read More

ಫಾರೂಕ್ ಅಬ್ದುಲ್ಲಾರನ್ನು ಕೊಲ್ಲಲು 20 ವರ್ಷಗಳಿಂದ ನಡೆದಿತ್ತು ಪ್ಲ್ಯಾನ್, ಆರೋಪಿ ಹೇಳಿದ್ದೇನು?

ಶ್ರೀನಗರ, ಮಾರ್ಚ್​ 12: ಜಮ್ಮುವಿನಲ್ಲಿ ಮಾರ್ಚ್​ 11ರ ರಾತ್ರಿ ನಡೆದ ವಿವಾಹ ಸಮಾರಂಭದಲ್ಲಿ ಬಂದೂಕುಧಾರಿಯೊಬ್ಬ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ(Farooq Abdullah) ಅವರತ್ತ ಗುಂಡು ಹಾರಿಸಿದ್ದ. ಆದರೆ ಫಾರೂಕ್ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು. ಜಮ್ಮುವಿನ ಗ್ರೇಟರ್ ಕೈಲಾಶ್‌ನ ರಾಯಲ್ ಪಾರ್ಕ್‌ನಲ್ಲಿ ಅಬ್ದುಲ್ಲಾ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದಾಗ ಈ ಘಟನೆ ನಡೆದಿದೆ. ಕಮಲ್ ಸಿಂಗ್ ಎಂದು ಗುರುತಿಸಲಾದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ದಶಕಗಳಿಂದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲು ಯೋಜಿಸುತ್ತಿದ್ದೆ ಎಂದು…

Read More

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರಿ ಹೈಡ್ರಾಮಾ: ಶಾಸಕರ ಕಿತ್ತಾಟ, ಸಚಿವರ ನಡೆಗೆ ಅಸಮಾಧಾನ!

ಬೆಂಗಳೂರು, ಮಾರ್ಚ್​​ 12: ನಗರದ ಶಾಂಗ್ರೀಲಾ ಹೋಟೆಲ್​​ನಲ್ಲಿ ನಡೆದ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ಭಾರಿ ಹೈಡ್ರಾಮಾಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮತ್ತು ಪರಿಷತ್ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರು ಕೈಗೆ ಸಿಗುತ್ತಿಲ್ಲ ಸಿಗುತ್ತಿಲ್ಲ ಎಂದು  ಆಕ್ರೋಶ ಹೊರಹಾಕಿದ್ದಾರೆ. ಒಂದು ವೇಳೆ ಪರಿಸ್ಥಿತಿ ಹೀಗೆ ಮುಂದುವರಿದರೆ ಬಹಿರಂಗವಾಗಿ ಮಾತನಾಡುವುದಾಗಿಯೂ ಎಚ್ಚರಿಸಿದ್ದಾರೆ. ಮತ್ತೊಂದೆಡೆ ಪರಿಷತ್​​ ಸದಸ್ಯರು ಅನುದಾನಕ್ಕೆ ಬೇಡಿಕೆ ಇಟ್ಟ ಪ್ರಸಂಗವೂ ನಡೆದಿದೆ. ಶಾಸಕರ ನಡುವೆಯೇ ಕಿತ್ತಾಟ ಸಭೆಯಲ್ಲಿ ಶಾಸಕರಾದ ಎಸ್‌.ಎನ್.ನಾರಾಯಣಸ್ವಾಮಿ…

Read More

ಮತ್ತೆ ಬರ್ತಿದೆ ‘ಅಗ್ನಿ ಸಾಕ್ಷಿ’; ಧಾರಾವಾಹಿಗೆ ನಾಯಕ ಯಾರು?

ಕಲರ್ಸ್ ಕನ್ನಡದಲ್ಲಿ ‘ಅಗ್ನಿಸಾಕ್ಷಿ’ ಧಾರಾವಾಹಿ ಈ ಮೊದಲು ಪ್ರಸಾರ ಕಂಡು ಭಾರೀ ವೀಕ್ಷಣೆ ಕಂಡಿತ್ತು. ಹಲವು ವರ್ಷಗಳ ಕಾಲ ಈ ಸೀರಿಯಲ್ ಪ್ರಸಾರ ಆಯಿತು. ಈಗ ಧಾರಾವಾಹಿಯು ಮತ್ತೆ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದೆ. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯು ಪ್ರೋಮೋ ಹಂಚಿಕೊಂಡಿದೆ. ಇದು ವೀಕ್ಷಕರಿಗೆ ಸಾಕಷ್ಟು ಗಮನ ಸೆಳೆದಿದೆ. ಹಳೆಯ ಮ್ಯೂಸಿಕ್ ಅನ್ನು ಬಳಸಲಾಗಿದೆ. ‘ಅಗ್ನಿಸಾಕ್ಷಿ’ ಧಾರವಾಹಿಯು 2013ರ ಡಿಸೆಂಬರ್ 2ರಂದು ಪ್ರಸಾರ ಆರಂಭಿಸಿತು. ಆ ಬಳಿಕ ಧಾರಾವಾಹಿ ಬರೋಬ್ಬರಿ 6 ವರ್ಷ…

Read More

ಬರೋಬ್ಬರಿ 209 ಎಸೆತಗಳು ಬಾಕಿ… ಹೀನಾಯ ಸೋಲುಂಡ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಅತ್ಯಂತ ಹೀನಾಯ ಸೋಲನುಭವಿಸಿದೆ. ಢಾಕಾದಲ್ಲಿ ನಡೆದ ಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 30.4 ಓವರ್‌ಗಳಲ್ಲಿ ಕೇವಲ 114 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಕೇವಲ 15.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಅಂದರೆ ಬರೋಬ್ಬರಿ 209 ಎಸೆತಗಳನ್ನು ಬಾಕಿಯಿಸಿ ಬಾಂಗ್ಲಾ ಪಡೆ ಏಕದಿನ ಪಂದ್ಯ ಗೆದ್ದುಕೊಂಡಿದೆ.  ಇದು ಎಸೆತಗಳ ಆಧಾರದ ಮೇಲೆ…

Read More

ಹಾರರ್, ಸಸ್ಪೆನ್ಸ್ ಸಿನಿಮಾ ಮಾಡಿ ಫೇಮಸ್ ಆಗಿದ್ದ ನಿರ್ದೇಶಕ ಬೆಂಗಳೂರಲ್ಲಿ ನಿಧನ

ತಮಿಳಿನ ಹಿರಿಯ ನಿರ್ದೇಶಕ ಹಾಗೂ ಸಂಗೀತ ಸಂಯೋಜಕ ದಕ್ಕಳಿ ಶ್ರೀನಿವಾಸನ್ ಅವರು ನಿಧನ ಹೊಂದಿದ್ದಾರೆ. ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನಲ್ಲಿ ಅವರು ಕೊನೆಯುಸಿರು ಎಳೆದಿದ್ದು, ಅವರಿಗೆ 72 ವರ್ಷ ವಯಸ್ಸಾಗಿತ್ತು. ಸುಮಾರು ಎರಡೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. 1987ರಲ್ಲಿ ರಿಲೀಸ್ ಆದ ‘ಇವರ್ಗಳ್ ವರುಂಗಳಾ ತೂಂಗಲ್’ ಸಿನಿಮಾದಲ್ಲಿ ಬರಹಗಾರನಾಗಿ ಕೆಲಸ ಮಾಡಿ ಚಿತ್ರರಂಗಕ್ಕೆ ಶ್ರೀನಿವಾಸ ಕಾಲಿಟ್ಟರು. ಈ ಚಿತ್ರವನ್ನು ಅವರು ನಿರ್ಮಾಣವನ್ನೂ ಮಾಡಿದ್ದರು. ಆ ಬಳಿಕ ಕಮಲ್ ಹಾಸನ್ ನಟನೆಯ…

Read More

ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕೆ

ಬೆಂಗಳೂರು, ಮಾರ್ಚ್​​ 12: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್​ಗಳು ಬ್ಲ್ಯಾಕ್​​ ಮಾರ್ಕೆಟ್​​ನಲ್ಲಿ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗುತ್ತಿದ್ದರೂ ಅವುಗಳ ಲಭ್ಯತೆಯೂ ಕಷ್ಟಸಾಧ್ಯವಾಗಿದೆ. ಇದರಿಂದ ಹಲವು ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ತಲುಪಿವೆ ಅಥವಾ ತಮ್ಮ ಮೆನುವಿನ ಐಟಂಗಳನ್ನು ಗಣನೀಯವಾಗಿ ಕಡಿಮೆ ಮಾಡಿವೆ. ಇದರಿಂದಾಗಿ ಹೋಟೆಲ್‌ಗಳನ್ನು ಅವಲಂಬಿಸಿರುವ ವಿದ್ಯಾರ್ಥಿಗಳು, ಉದ್ಯೋಗಿಗಳು ಆಹಾರದ ಕೊರತೆ…

Read More

Video: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ, ಗುಂಡಿನ ದಾಳಿ

ಶ್ರೀನಗರ, ಮಾರ್ಚ್​ 12: ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ತಂದೆ, ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬುಧವಾರ(ಮಾರ್ಚ್​ 11)ರಂದು ಸಂಜೆ ವಿವಾಹ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ದುಷ್ಕರ್ಮಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದಾನೆ. ದಾಳಿಕೋರ ಅಬ್ದುಲ್ಲಾ ಅವರಿಂದ ಕೆಲವೇ ಕೆಲವು ಹೆಜ್ಜೆಗಳ ಅಂತರದಲ್ಲಿದ್ದ. ಆದರೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿ…

Read More

Daily Devotional: ಮನೆಯಲ್ಲಿ ಸೂರ್ಯ ರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?

ಬೆಂಗಳೂರು, ಮಾರ್ಚ್​​ 1 2​​: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯನ ರಶ್ಮಿಯು ಮನೆ, ಕಚೇರಿ ಅಥವಾ ದೇವಾಲಯಗಳಂತಹ ಯಾವುದೇ ಸ್ಥಳಕ್ಕೆ ಪ್ರವೇಶಿಸುವುದು ಅತ್ಯಂತ ಮಹತ್ವದ್ದಾಗಿದೆ. ವಾಸ್ತು ಪ್ರಕಾರ, ಸೂರ್ಯನ ಬೆಳಕು ಮನೆಯಲ್ಲಿ ಹರಿಯುವುದರಿಂದ ಅನೇಕ ಸಕಾರಾತ್ಮಕ ಪರಿಣಾಮಗಳುಂಟಾಗುತ್ತವೆ. ಪೂರ್ವ ದಿಕ್ಕಿನಿಂದ ಸೂರ್ಯರಶ್ಮಿ ಪ್ರವೇಶಿಸುವುದು ಮನೆಗೆ ಶುಭ, ಮಾನಸಿಕ ನೆಮ್ಮದಿ, ಉತ್ತಮ ಆರೋಗ್ಯ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಮತ್ತು ಆದಾಯದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ….

Read More

ಉತ್ತರದವರಾದರೂ ಮೊನಾಲಿಸಾ ಕೇರಳದಲ್ಲಿ ಮದುವೆ ಆಗಿದ್ದೇಕೆ? ಮೊಹಮ್ಮದ್ ಫರ್ಮಾನ್ ಹಿನ್ನೆಲೆ ಏನು?

ಕುಂಭ ಮೇಳದಲ್ಲಿ ಮಿಂಚಿ ಆಲ್ಬಂ ವಿಡಿಯೋ ಸಾಂಗ್ ಹಾಗೂ ಸಿನಿಮಾ ಆಫರ್ ಪಡೆದ ಮೊನಾಲಿಸಾ ಭೋಸ್ಲೆ  (Monalisa) ಅವರು ಈಗ ಸುದ್ದಿಯಲ್ಲಿದ್ದಾರೆ. ಕುಟುಂಬದ ವಿರೋಧದ ನಡುವೆಯೂ ಅವರು ವೈವಾಹಿಕ ಜೀವನಕ್ಕೆ ಕಾಲಿಟಟಿದ್ದಾರೆ. ಮೊಹ್ಮದ್ ಫರ್ಮಾನ್ ಜೊತೆ ಅವರ ವಿವಾಹ ನಡೆದಿದೆ. ಈ ಮದುವೆಗೆ ಮೊನಾಲಿಸಾ ಕುಟುಂಬದವರು ಸಾಕಷ್ಟು ವಿರೋಧ ಹೊರ ಹಾಕಿದ್ದರು. ಮನೆಯವರನ್ನು ಧಿಕ್ಕರಿಸಿ ಮೊನಾಲಿಸಾ ದೇವಸ್ಥಾನದಲ್ಲಿ ವಿವಾಹ ಆಗಿದ್ದಾರೆ. ಅದು ಕೂಡ ಕೇರಳದ ತಿರುವನಂತಪುರದಲ್ಲಿ ಅನ್ನೋದು ವಿಶೇಷ. ಮೊನಾಲಿಸಾ ಇಂದೋರ್​​ ಅವರು. ಮೊಹಮ್ಮದ್ ಫರ್ಮಾನ್ ಅವರು…

Read More