All posts by nagaraj11081993

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 12ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 12ರ ದಿನಭವಿಷ್ಯ

ಪಾರಿಜಾತ ಅಥವಾ ಮಲ್ಲಿಗೆ ಹೂವುಗಳನ್ನು ಬಳಸಿ ದೇವರ ಪೂಜೆಯನ್ನು ಮಾಡುವುದರಿಂದ ನಿಮ್ಮ ಮಾನಸಿಕ ಒತ್ತಡಗಳಿಂದ ಹೊರಬಂದು ಉತ್ಸಾಹದಿಂದ ಕೆಲಸ- ಕಾರ್ಯಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಸಣ್ಣ ತಪ್ಪು ಮಾತು ಕೂಡ ದೊಡ್ಡ ಅವಮಾನಕ್ಕೆ ಕಾರಣ ಆಗುವಂಥ ಕಡೆಗೆ ಸುಮ್ಮನೆ ಇದ್ದರೆ ಒಳಿತು. ಪ್ರೀತಿ- ಪ್ರೇಮ ವಿಚಾರಗಳು ಪ್ರಾಮುಖ್ಯ ಪಡೆದುಕೊಳ್ಳಲಿದ್ದು, ಹಳೇ ಪ್ರೇಮ ಪ್ರಕರಣಗಳು ಮತ್ತೆ ಜೀವ ಪಡೆದುಕೊಳ್ಳಲಿವೆ. ನೀವಾಗಿಯೇ ಕರೆ ಮಾಡುವುದರ ಮೂಲಕ ಸಮಸ್ಯೆಯೊಂದನ್ನು ಮೈ ಮೇಲೆ ಎಳೆದುಕೊಳ್ಳಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಗ್ಯಾಜೆಟ್, ಲ್ಯಾಪ್ ಟಾಪ್, ಡೆಸ್ಕ್ ಟಾಪ್ ಮೊದಲಾದವುಗಳನ್ನು ಖರೀದಿ ಮಾಡುವುದಕ್ಕೆ ಹಣ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗಿದೆ. ಇದಕ್ಕಾಗಿ ಹಣಕಾಸಿನ ಕೊರತೆ ಕಂಡುಬಂದಲ್ಲಿ ನಿಮ್ಮ ಸ್ನೇಹಿತರು ಅಥವಾ ಸಂಬಂಧಿಗಳು ನೆರವಿಗೆ ನಿಲ್ಲಲಿದ್ದಾರೆ. ನೀವೇನಾದರೂ ಈಗ ಇರುವಂಥ ಮನೆಯನ್ನು ಖಾಲಿ ಮಾಡಿ, ಹೊಸ ಮನೆಗೆ ಹೋಗಬೇಕು ಎಂದುಕೊಳ್ಳುತ್ತಿದ್ದಲ್ಲಿ ಅಂದುಕೊಂಡಂಥ ಮನೆ ದೊರೆಯುವ ಅವಕಾಶ ಹೆಚ್ಚಿಗೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನೀವು ನಿರ್ಧಾರ ತೆಗೆದುಕೊಳ್ಳುವುದರಲ್ಲಿ ತಡ ಮಾಡಿದ್ದರಿಂದಾಗಿ ಕೆಲವು ಉದ್ಯೋಗಾವಕಾಶಗಳು ಕೈ ತಪ್ಪಿ ಹೋಗುವಂಥ ಸಾಧ್ಯತೆಗಳಿದ್ದು, ಅತಿ ಮುಖ್ಯವಾದ ವಿಚಾರಗಳು ಇದ್ದಲ್ಲಿ ತಡ ಮಾಡದೆ ತೀರ್ಮಾನಗಳನ್ನು ತೆಗೆದುಕೊಳ್ಳಿ. ಇನ್ನು ಮದುವೆ ನಿಶ್ಚಯ ಆಗಿರುವಂಥವರು ಸಣ್ಣ- ಪುಟ್ಟ ವಿಚಾರಗಳಿಗೂ ಸಿಟ್ಟು ಮಾಡುವುದು, ಮಾತು ಬಿಡುವುದು ಇಂಥದ್ದನ್ನು ಮಾಡಬೇಡಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 12ರ ದಿನಭವಿಷ್ಯ

ಸಾಯಿಬಾಬಾ ಅಥವಾ ರಾಘವೇಂದ್ರ ಸ್ವಾಮಿಗಳ ದರ್ಶನ ಮಾಡುವುದು ಮತ್ತು ಮನೆಯಲ್ಲಿನ ಹಿರಿಯರ ಕಾಲಿಗೆ ನಮಸ್ಕರಿಸಿ ದಿನದ ಕೆಲಸ ಆರಂಭಿಸುವುದು ಸಕಲ ಕಾರ್ಯಸಿದ್ಧಿಗೆ ಕಾರಣವಾಗುತ್ತದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಮನೆಗೆ ಎಲೆಕ್ಟ್ರಿಕ್ ಅಥವಾ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವಂಥ ಯೋಗ ಇದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇರುವಂಥವರು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವಂಥವರು, ಕಂಪನಿಗಳ ಸಿಇಒ, ಸಿಒಒ ಇಂಥ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುವಂಥವರಿಗೆ ಬಹಳ ಒಳ್ಳೆ ದಿನ ಇದು. ನಿಮ್ಮಲ್ಲಿ ಯಾರಾದರೂ ಸ್ಟಾರ್ಟ್ ಅಪ್ ಶುರು ಮಾಡುವುದಕ್ಕಾಗಿ ಸಿದ್ಧತೆ ನಡೆಸುತ್ತಿದ್ದೀರಿ ಅಂತಾದಲ್ಲಿ ಅದಕ್ಕೆ ಬೇಕಾದ ಹಣಕಾಸಿನ ಅನುಕೂಲಗಳು ಒದಗಿ ಬರಲಿವೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಕಾನೂನಿಗೆ ಸಂಬಂಧಪಟ್ಟ ವಿಚಾರಗಳಲ್ಲಿ ಸಣ್ಣ- ಪುಟ್ಟ ಅಡೆತಡೆಗಳು ಕಾಡುತ್ತಿದ್ದಲ್ಲಿ ಅವುಗಳನ್ನು ನಿವಾರಿಸಿಕೊಂಡು, ಮುಂದಕ್ಕೆ ಸಾಗಲಿದ್ದೀರಿ. ಸ್ವಂತ ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಅವುಗಳ ವಿಸ್ತರಣೆಗೆ ಬಹಳ ಉತ್ತಮವಾದ ದಿನ ಇದಾಗಿರುತ್ತದೆ. ಇನ್ನು ಸರಿಯಾದ ಸಂಪನ್ಮೂಲ ವ್ಯಕ್ತಿಗಳು, ಕೆಲಸಗಾರರನ್ನು ಹುಡುಕಾಡುತ್ತಿದ್ದೀರಿ ಅಂತಾದಲ್ಲಿ ಅಂಥವರು ಸಹ ದೊರೆಯಲಿದ್ದಾರೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಸುಮ್ಮನೆ ಇದ್ದಿದ್ದರೆ ಆಗುತ್ತಿತ್ತು ಎಂದೆನಿಸುವಂಥ ಹಲವು ಘಟನೆಗಳು ಈ ದಿನ ನಡೆಯಲಿವೆ. ಅಂತರಂಗದ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡಿದ್ದಲ್ಲಿ ಅವರು ಅದನ್ನು ಹಲವರ ಬಳಿಗೆ ಹೇಳಿಕೊಂಡು ಬಂದು, ನಿಮಗೆ ಮುಜುಗರದ ಸನ್ನಿವೇಶವನ್ನು ತಂದೊಡ್ಡಲಿದ್ದಾರೆ. ಸಂಗಾತಿಯು ನಿಮ್ಮ ಧೋರಣೆ ಬಗ್ಗೆ ಬೇಸರ ವ್ಯಕ್ತಪಡಿಸಬಹುದು. ನೀವು ಬಳಸುವ ಭಾಷೆ, ಅದನ್ನು ಆಡಿದ ರೀತಿ ಹಾಗೂ ಇತರ ವಿಚಾರಗಳನ್ನು ಮುಂದು ಮಾಡಿಕೊಂಡು, ಹೀಯಾಳಿಸಬಹುದು.

ಲೇಖನ- ಸ್ವಾತಿ ಎನ್.ಕೆ.

Source link

ಡೆಲಿವರಿ ಬಾಯ್​​ ಕೊಟ್ಟ ಪಂಚ್​​​ಗೆ ಗ್ರಾಹಕನ ಮೂಗಿನ ಮೂಳೆ ಮುರಿತ: ಆಗಿದ್ದೇನು?

ಬೆಂಗಳೂರು, ಮಾರ್ಚ್​ 11: ಇವಾಗೇನಿದ್ರೂ ಆನ್ ಲೈನ್ ಜಮಾನಾ. ಎಲ್ಲವೂ ಆನ್​ಲೈನ್​ನಲ್ಲೇ ಸಿಕ್ಕಿಬಿಡುತ್ತೆ. ಊಟ ತಿಂಡಿ, ದವಸ-ಧಾನ್ಯದಿಂದ ಹಿಡಿದು ಗೃಹಪಯೋಗಿ ವಸ್ತುಗಳು ಕೂಡ ದೊರಕಿಬಿಡುತ್ತೆ. ಇದೇ ರೀತಿ ಓರ್ವ ವ್ಯಕ್ತಿ ಬ್ಲಿಂಕ್ ಇಟ್ ಆ್ಯಪ್​ನಲ್ಲಿ ತಿನ್ನುವುದಕ್ಕೆ ಅಂತಾ ಸ್ನ್ಯಾಕ್ಸ್ ಆರ್ಡರ್ ಮಾಡಿದ್ದರು. ಆರ್ಡರ್ ತಗೊಂಡು ಬಂದ ಡೆಲಿವರಿ ಬಾಯ್ (Delivery Boy) ಗ್ರಾಹಕನ ಮೂಗಿನ ಮೂಳೆಯನ್ನೇ ಮುರಿದ ಘಟನೆ ಕೋರಮಂಗಲ 8ನೇ ಬಾಕ್ಲ್​ನಲ್ಲಿ ನಡೆದಿದೆ.

ನಡೆದಿದ್ದೇನು?

ಮಾರ್ಚ್ 7ರ ಬೆಳಗಿನ ಜಾವ 2ಗಂಟೆಯ ಸಮಯ. ಕೋರಮಂಗಲ 8ನೇ ಬ್ಲಾಕ್​ ನಿವಾಸಿ ಪೌಲ್ ಎಂಬಾತ ಬ್ಲಿಂಕ್ ಇಟ್ ಆ್ಯಪ್​ನಲ್ಲಿ ಸ್ನ್ಯಾಕ್ಸ್ ಬುಕ್ ಮಾಡಿದ್ದ. 2 ಗಂಟೆ 8 ನಿಮಿಷಕ್ಕೆ ಬಂದ ಡೆಲಿವರಿ ಬಾಯ್ ನೇರವಾಗಿ ನಾಲ್ಕನೇ ಫ್ಲೋರ್​​ಗೆ ಹೋಗಿದ್ದಾನೆ. ಅಲ್ಲಿಂದ ಕರೆ ಮಾಡ್ತಿದ್ದಂತೆ ಗ್ರಾಹಕ ಎರಡನೇ ಫ್ಲೋರ್​ಗೆ ಬರುವಂತೆ ಸೂಚಿಸಿದ್ದಾರೆ. ಅಲ್ಲಿ ಬಂದ ಡೆಲಿವರಿ ಬಾಯ್ ಗ್ರಾಹಕನ ಜೊತೆಗೆ ಗಲಾಟೆ ಮಾಡಿದ್ದಾನೆ‌.

ಇದನ್ನೂ ಓದಿ: ಉಂಡ ಮನೆಗೆ ಕನ್ನ ಹಾಕಿದ ಕಾರು ಚಾಲಕ: ಮಾಲೀಕ ಗಿರವಿಟ್ಟಿದ್ದ 13 ಲಕ್ಷ ಚಿನ್ನವನ್ನೇ ಮಾರಿದ ಭೂಪ

ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಡೆಲಿವರಿ ಬಾಯ್ ಮತ್ತು ಗ್ರಾಹಕನ ನಡುವೆ ಹೊಡೆದಾಟವೇ ನಡೆದು ಹೋಗಿದ್ದು, ಡೆಲಿವರಿ ಬಾಯ್ ಕೊಟ್ಟ ಪಂಚ್​ಗೆ ಗ್ರಾಹಕ ಪೌಲ್​​ನ ಮೂಗು ಹಾಗೂ ತುಟಿಗೆ ಗಂಭೀರ ಗಾಯವಾಗಿದೆ. ಎಕ್ಸ್ ರೇ ತೆಗೆಸಿ ನೋಡಿದಾಗ ಮೂಗಿನ ಮೂಳೆಯೇ ಮುರಿದಿರುವುದು ಗೊತ್ತಾಗಿದೆ. ಚಿಕಿತ್ಸೆಗೆ ಅಂತ ಪೌಲ್ ಹುಟ್ಟೂರು ಕೇರಳಗೆ ತೆರಳಿದ್ದಾರೆ.

ಇದನ್ನೂ ಓದಿ: ರಿಯಲ್ ಎಸ್ಟೇಟ್ ಏಜೆಂಟ್​ನನ್ನು ಅಪಹರಿಸಿ ಹತ್ಯೆ ಕೇಸ್​: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಗಲಾಟೆ ಆಗಿದ್ದು ನಿಜ, ಆದರೆ ಗಲಾಟೆಗೆ ಕಾರಣ ಏನು ಅನ್ನೋದು ಇನ್ನೂ ನಿಗೂಢವಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಡೆಲಿವರಿ ಬಾಯ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ; ಇರಾನ್ ಮೇಲಿನ ಯುದ್ಧ ಬೇಗ ಕೊನೆಯಾಗಲಿದೆ ಎಂದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 11: ಇರಾನ್‌ನೊಂದಿಗಿನ ಯುದ್ಧವು ಶೀಘ್ರದಲ್ಲೇ ಕೊನೆಗೊಳ್ಳಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸುಳಿವು ನೀಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಈಗಾಗಲೇ ದೇಶದಲ್ಲಿ ಲಭ್ಯವಿರುವ ಹೆಚ್ಚಿನ ಟಾರ್ಗೆಟ್​​ಗಳನ್ನು ನಾಶಪಡಿಸಿವೆ. “ಇರಾನ್​​ನಲ್ಲಿ ಪ್ರಾಯೋಗಿಕವಾಗಿ ಗುರಿಯಿಡಲು ಇನ್ನೇನೂ ಉಳಿದಿಲ್ಲ” ಎಂದು ಟ್ರಂಪ್ ಹೇಳಿದ್ದಾರೆ. ಮಿಲಿಟರಿ ಕಾರ್ಯಾಚರಣೆಯು ಇರಾನಿಗೆ ಈಗಾಗಲೇ ವ್ಯಾಪಕ ಹಾನಿಯನ್ನುಂಟುಮಾಡಿದೆ ಎಂದು ಟ್ರಂಪ್ ಹೇಳಿದ್ದಾರೆ.

ಇರಾನ್​ನವರ ಕ್ಷಿಪಣಿಗಳು ಚದುರಿಹೋಗಿವೆ. ಅವರ ಡ್ರೋನ್‌ಗಳನ್ನು ಎಲ್ಲೆಡೆ ಸ್ಫೋಟಿಸಲಾಗುತ್ತಿದೆ, ಅವುಗಳ ಡ್ರೋನ್‌ಗಳ ತಯಾರಿಕೆಯೂ ನಿಂತಿದೆ. ಟೆಹ್ರಾನ್ ಈಗ ನೌಕಾಪಡೆ, ವಾಯುಪಡೆ ಮತ್ತು ಮಿಲಿಟರಿ ಮೇಲೆ ಯಾವುದೇ ಹಿಡಿತವಾಗಲಿ, ಸಾಮರ್ಥ್ಯವನ್ನಾಗಲಿ ಹೊಂದಿಲ್ಲ. ಅವರು ಏನಾದರೂ ಕೆಟ್ಟದ್ದನ್ನು ಮಾಡಿದರೆ ಅದು ಇರಾನ್‌ನ ಅಂತ್ಯವಾಗಲಿದೆ. ನೀವು ಆ ಹೆಸರನ್ನು ಮತ್ತೆ ಎಂದಿಗೂ ಕೇಳುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ: ಬಹ್ರೇನ್ ಮೇಲಿನ ಇರಾನ್ ದಾಳಿಯ ವಿಡಿಯೋ ಶೇರ್ ಮಾಡಿದ್ದಕ್ಕೆ 5 ಪಾಕಿಸ್ತಾನಿ ಪ್ರಜೆಗಳ ಬಂಧನ

“ಯುದ್ಧವು ಅದ್ಭುತವಾಗಿ ನಡೆಯುತ್ತಿದೆ. ನಾವು ವೇಳಾಪಟ್ಟಿಗಿಂತ ಬಹಳ ಮುಂದಿದ್ದೇವೆ. ಮೊದಲ 6 ವಾರಗಳ ಅವಧಿಯಲ್ಲಿಯೂ ಸಹ ನಾವು ಭಾವಿಸಿದ್ದಕ್ಕಿಂತ ಹೆಚ್ಚಿನ ಹಾನಿಯನ್ನು ಇರಾನ್​ಗೆ ಮಾಡಿದ್ದೇವೆ” ಎಂದು ಟ್ರಂಪ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ವಾಹನ ಮಾಲೀಕರ ಗಮನಕ್ಕೆ: ಇನ್ಮುಂದೆ ಗಾಡಿ ಎಫ್ಸಿಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

ಬೆಂಗಳೂರು, (ಮಾರ್ಚ್ 11): ಬೆಂಗಳೂರಿನ ಆರ್‌ಟಿಒ ಕಚೇರಿಗಳಲ್ಲಿ ಹೊರರಾಜ್ಯದ ವಾಹನಗಳಿಗೆ ಯಾವುದೇ ತಪಾಸಣೆ ಮಾಡದೇ ಅಕ್ರಮವಾಗಿ ಅರ್ಹತಾ ಪತ್ರ (fitness certificate) ನೀಡಲಾಗುತ್ತಿದೆ. ಆರ್ಟಿಓ ಅಧಿಕಾರಿಗಳು ವಾಹನಗಳು ತಪಾಸಣೆ ಮಾಡದೆ,ಕೆಲ ವಾಹನಗಳು ರಾಜ್ಯಕ್ಕೆ ‌ಬಾರದಿದ್ದರೂ ಅಂತಹ ವಾಹನಗಳಿಗೆ ಅನಧಿಕೃತವಾಗಿ ಎಫ್ಸಿ ನೀಡಲಾಗುತ್ತಿದ್ದು, ಈ ಬಗ್ಗೆ ನಿಮ್ಮ ಟಿವಿ9, ಆರ್​​ಟಿಓಗಳ ಕರ್ಮಕಾಂಡದ ಬಗ್ಗೆ ಸುದ್ದಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಎಚ್ಚೆತ್ತುಕೊಂಡ ರಾಜ್ಯ ಸಾರಿಗೆ ಇಲಾಖೆ, ಎಫ್ಸಿ ಮಾಡಲು ಕಠಿಣ ರೂಲ್ಸ್ ಜಾರಿಗೆ ತಂದಿದ್ದು, ಇನ್ಮುಂದೆ ಎಫ್ಸಿ ಮಾಡಬೇಕು ಅಂದರೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿದೆ.

ಎಫ್ಸಿಗೆ ಹೊಸ ರೂಲ್ಸ್​​​ ಏನು?

ಎಫ್ಸಿ ಮಾಡಬೇಕು ಅಂದರೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿದೆ.  ವಾಹನಗಳ 6 ಜಿಪಿಎಸ್ ಫೋಟೋ, ಜಿಪಿಎಸ್ ವಿಥ್ ಲೊಕೇಷನ್ ನಲ್ಲೇ ಎಫ್ಸಿ ಮಾಡಬೇಕು. ಎಲ್ಲಾ ಮಾಹಿತಿಯನ್ನು ಅಪ್ಲಿಕೇಷನ್ ನಲ್ಲಿ ಅಪ್ಲೋಡ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಈ ಹಿಂದೆ ಫೋಟೋ ಅಪ್ಲೋಡ್ ಮಾಡುವಂತಿರಲಿಲ್ಲ. ಇದೀಗ ಅದನ್ನು ಕಡ್ಡಾಯಗೊಳಿಸಿದ್ದು, ಈ ಮೂಲಕ ಆರ್​​ಟಿಓಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲಾಗಿದೆ.

ಇದನ್ನೂ ನೋಡಿ: ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು

ಕೇರಳ, ಮಹಾರಾಷ್ಟ್ರ, ಗುಜರಾತ್ ರಾಜ್ಯದ ವಾಹನಗಳನ್ನು ತಪಾಸಣೆ ಮಾಡದೆ,10,022 ವಾಹನಗಳಿಗೆ ಕೋರಮಂಗಲ ಆರ್ಟಿಓ ಕಚೇರಿಯ ಮೋಟಾರು ವಾಹನ ನಿರೀಕ್ಷಕರು ಎಫ್ಸಿ ನೀಡಿದ್ದ ಬಗ್ಗೆ, ಕಳೆದ ತಿಂಗಳು ಫೆಬ್ರವರಿ 13ರಂದು ಟಿವಿ9 ಕನ್ನಡ ಪ್ರಸಾರ ಮಾಡಿತ್ತು‌‌.ಇತ್ತ ಗುಜರಾತ್ ನ 41 ವಾಹನಗಳಿಗೆ ಅನಧಿಕೃತವಾಗಿ ಎಫ್ಸಿ ನೀಡಿದ ಬಗ್ಗೆಯೂ ಟಿವಿ9 ಕನ್ನಡ ಜನವರಿ- 20 ರಂದು ಸುದ್ದಿ ಪ್ರಸಾರ ಮಾಡಿತ್ತು. ಈ ಹಿನ್ನೆಲೆ ನಿಸಾರ್ ಅಹಮದ್ ನನ್ನ ಸಾರಿಗೆ ಇಲಾಖೆ ಆಯುಕ್ತರು ಸಸ್ಪೆಂಡ್ ಮಾಡಿದ್ದರು. ಬಳಿಕ ಅಲರ್ಟ್ ಆಗಿರುವ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಖಡಕ್ ರೂಲ್ಸ್ ಜಾರಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ವಿವಾದಿತ ಕಥಾಹಂದರ ಹೊಂದಿದೆ ಎಂಬ ಕಾರಣಕ್ಕೆ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗ ಈ ಸಿನಿಮಾವನ್ನು ಬಿಜೆಪಿಯ ಕೆಲವು ಶಾಸಕರು ವೀಕ್ಷಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿಮಾಲ್​​ನಲ್ಲಿ ಸಿನಿಮಾ ವೀಕ್ಷಣೆ ಮಾಡಲಾಗಿದೆ. ವಿಪಕ್ಷ ನಾಯಕರಾದ ಆರ್. ಅಶೋಕ್ (R Ashok), ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಪರಿಷತ್ ಸದಸ್ಯರು ಸಿನಿಮಾ ನೋಡಿದ್ದಾರೆ. ರಾಜ್ಯ ಬಿಜೆಪಿಯಿಂದ ಸಿನಿಮಾ ವೀಕ್ಷಣೆಗಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಸಿನಿಮಾಗೆ ಕಾಮಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಈ ಸಿನಿಮಾದಿಂದ ಕೇರಳ ರಾಜ್ಯದ ಘನತೆಗೆ ಧಕ್ಕೆ ಆಗಿದೆ ಎಂದು ಹಲವರು ಕೋರ್ಟ್ ಮೆಟ್ಟಿಲು ಏರಿದ್ದರು. ಆದ್ದರಿಂದ ಬಿಡುಗಡೆಗೂ ಮುನ್ನ ಈ ಸಿನಿಮಾ ಸಾಕಷ್ಟು ವಿವಾದ ಸೃಷ್ಟಿಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಉಂಡ ಮನೆಗೆ ಕನ್ನ ಹಾಕಿದ ಕಾರು ಚಾಲಕ: ಮಾಲೀಕ ಗಿರವಿಟ್ಟಿದ್ದ 13 ಲಕ್ಷ ಚಿನ್ನವನ್ನೇ ಮಾರಿದ ಭೂಪ

ಬೆಂಗಳೂರು, ಮಾರ್ಚ್​​ 11: ಆತ ಚಾಲಕ (Driver). ಕಳೆದ ಹತ್ತು ವರ್ಷದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದ. ಆತ ಮನೆ ಮಾಲೀಕರ ನಂಬಿಕೆ ಗಳಿಸಿದ್ದ. ಅವರು ಕೂಡ ಈತನನ್ನ ಬಹಳ ಆತ್ಮೀಯತೆಯಿಂದಲೇ ನೋಡಿಕೊಳ್ಳುತ್ತಿದ್ದರು. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಆಸಾಮಿ ಮನೆಯಲ್ಲಿದ್ದ ಚಿನ್ನದ ಮೇಲೆಯೇ ಕಣ್ಣು ಹಾಕಿದ್ದ. ಆ ಮೂಲಕ ಉಂಡ ಮನೆಗೆ ಕನ್ನ ಹಾಕಿದ್ದ. ಚಾಲಕನ ಕಳ್ಳಾಟ ಬಯಲಾಗಿದ್ದೇ ನಿಜಕ್ಕೂ ರೋಚಕ.

ಉಂಡ ಮನೆಗೆ ದ್ರೋಹ

ಉಂಡ ಮನೆಗೆ ಕನ್ನ ಹಾಕಿದ ಕಾರು ಚಾಲಕನ ಹೆಸರು ಅಭಿಲಾಷ್. ಪ್ರತೀಕ್​​ ಎಂಬುವವರ ಪತ್ನಿ ಭುವನಾ ಅವರ ತಾಯಿಯ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಕಳೆದ 10 ವರ್ಷದಿಂದ ಇದ್ದ ಈತನನ್ನ ಮನೆಯವರು ಮನೆಮಗನಂತೆಯೇ ನೋಡಿಕೊಳ್ಳುತ್ತಿದ್ದರು. ಆದರೆ ಈತ ಮಾತ್ರ ಉಂಡ ಮನೆಗೆ ದ್ರೋಹ ಬಗೆದಿದ್ದ. 13 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ಕದ್ದು ಪರಾರಿಯಾಗಿದ್ದ ಅಭಿಲಾಷ್​​ನನ್ನು ಬಂಧಿಸಿ ಪೊಲೀಸರು ಇದೀಗ ಜೈಲಿಗಟ್ಟಿದ್ದಾರೆ.

ನಡೆದಿದ್ದೇನು?

ಪ್ರತೀಕ್ ಪತ್ನಿ ಭುವನಾ ಕುಟುಂಬಸ್ಥರು ಎಮರ್ಜೆನ್ಸಿ ಇದೆ ಅಂತಾ ಚಿನ್ನವನ್ನು ಚಾಲಕ ಅಭಿಲಾಷ್​​ಗೆ ಕೊಟ್ಟು ಗಿರವಿ ಇಟ್ಟು ಬರುವಂತೆ ಹೇಳಿದ್ದಾರೆ. ಸ್ವಲ್ಪ ದಿನ ಕಳೆಯುತ್ತಿದ್ದಂತೆ ಚಿನ್ನ ಬಿಡಿಸಿಕೊಳ್ಳಲು ಮನೆಯವರು ಹೋಗಿದ್ದಾರೆ. ಆದರೆ ಅಲ್ಲಿ ಶಾಕ್ ಕಾದಿತ್ತು. ಏಕೆಂದರೆ ಗಿರವಿ ಅಂಗಡಿ ಸಿಬ್ಬಂದಿ ಈಗಾಗಲೇ ಚಾಲಕ ಅಭಿಲಾಷ್ ಚಿನ್ನವನ್ನು ಬಿಡಿಸಿಕೊಂಡು ಹೋಗಿರೋದಾಗಿ ಹೇಳಿದ್ದಾರೆ. ಅಲ್ಲಿಗೆ ಚಾಲಕನ ಅಸಲಿ ಕಹಾನಿ ಶುರುವಾಗಿದೆ.

ಇದನ್ನೂ ಓದಿ: ಚೀನಾ ಲಿಂಕ್ ಹೊಂದಿರುವ ಮಂಗಳೂರಿನ ಸೈಬರ್ ವಂಚಕರ ಬಂಧನ

ಮಾಲೀಕರು ನೀಡಿದ್ದ ಚಿನ್ನವನ್ನು ಗಿರವಿ ಇಟ್ಟಿದ್ದ ಆಸಾಮಿ ಬಳಿಕ ಅದನ್ನು ಬಿಡಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿಬಿಟ್ಟಿದ್ದ. ಇದರಿಂದ ಅನುಮಾನಗೊಂಡ ಮನೆಯವರು ಮನೆಯಲ್ಲಿದ್ದ ಚಿನ್ನವನ್ನು ಪರಿಶೀಲನೆ ನಡೆಸಿದಾಗ ಮನೆಯಲ್ಲಿದ್ದ ಒಂದಷ್ಟು ಚಿನ್ನ ಕಡಿಮೆ ಆಗಿರುವುದು ಕೂಡ ಗೊತ್ತಾಗಿದೆ. ಚಾಲಕ ಹಂತ ಹಂತವಾಗಿ ಮನೆಯಲ್ಲಿಟ್ಟಿದ್ದ ಚಿನ್ನ ಕದ್ದು ಮಾರಾಟ ಮಾಡಿದ್ದ ಅನ್ನೋದು ಗೊತ್ತಾಗಿದೆ.

ಇದನ್ನೂ ಓದಿ: 6 ತಿಂಗಳ ಸ್ಕೆಚ್​​, ಪಕ್ಕಾ ಪ್ಲ್ಯಾನ್​​ ಮಾಡಿ ಕಳ್ಳತನ: 1.8 ಕೆಜಿ ಬಂಗಾರ, ಡೈಮಂಡ್​​ ಕದ್ದವ ಅರೆಸ್ಟ್​

ಇಂತಹ ವ್ಯಕ್ತಿಗಳಿರುವುದರಿಂದ ಪ್ರತಿ ಕೆಲಸದವರನ್ನು ಮನೆ ಮಾಲೀಕರು ಅನುಮಾನದಿಂದ ನೋಡುವಂತಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಅಮೃತಹಳ್ಳಿ ಪೊಲೀಸರು ಜೈಲಿಗಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ ಮೊನಾಲಿಸಾ

ಒಂದೆಡೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇನ್ನೊಂದೆಡೆ ರಿಯಲ್ ಕೇರಳ ಸ್ಟೋರಿ ನಡೆದಿದೆ. ಮುಸ್ಲಿಂ ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿನಾ ಭೋಸ್ಲೆ (Monalisa Bhosle) ಮದುವೆ ನಡೆದಿದೆ. ತಮ್ಮ ವಿವಾಹಕ್ಕೆ ಕೇರಳವೇ ಸೂಕ್ತ ಮತ್ತು ಸುರಕ್ಷಿತ ಸ್ಥಳ ಎಂದು ತೀರ್ಮಾನಿಸಿ ಮೊನಾಲಿಸಾ ಮತ್ತು ಫರ್ಮಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹಿಂದೂ ದೇವಾಲಯದಲ್ಲಿ ಈ ಜೋಡಿಯ ಮದುವೆ ನಡೆದಿದೆ. ಮೊನಾಲಿಸಾಗೆ ಫರ್ಮಾನ್ ಅವರು ತಾಳಿ ಕಟ್ಟಿ, ಕುಂಕುಮ ಇಟ್ಟಿದ್ದಾರೆ. ಕೇರಳದ ಸ್ಥಳೀಯ ಜನರು ಮತ್ತು ರಾಜಕೀಯ ಮುಖಂಡರು ಈ ಮದುವೆ ಬೆಂಬಲ ನೀಡಿದ್ದಾರೆ. ನವ ದಂಪತಿಗೆ ಕೇರಳ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಮೊನಾಲಿಸಾ ಮತ್ತು ಮೊಹಮ್ಮದ್ ಫರ್ಮಾನ್ (Muhammad Farman) ಅವರು ‘ರಿಯಲ್ ಕೇರಳ ಸ್ಟೋರಿ’ ಎಂಬ ಫಲಕ ಪ್ರದರ್ಶಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಗೆ ಮುಖಭಂಗ; ಸ್ಪೀಕರ್ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ, ಮಾರ್ಚ್ 11: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಇಂದು ಸದನದಲ್ಲಿ ಧ್ವನಿ ಮತದಿಂದ ತಿರಸ್ಕರಿಸಲಾಯಿತು. ಹಲವಾರು ವಿರೋಧ ಪಕ್ಷದ ಸಂಸದರ ಬೆಂಬಲದೊಂದಿಗೆ ಕಾಂಗ್ರೆಸ್‌ನ ಮೊಹಮ್ಮದ್ ಜಾವೇದ್ ಅವರು ಈ ನಿರ್ಣಯವನ್ನು ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಭಾಷಣದ ವೇಳೆ ವಿರೋಧ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಅವರು ಭಾರತದ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಪ್ರಶ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

“ಸಂವಿಧಾನವು ಸ್ಪೀಕರ್‌ಗೆ ಮಧ್ಯವರ್ತಿಯ ಪಾತ್ರವನ್ನು ನೀಡಿದೆ. ನೀವು ಮಧ್ಯವರ್ತಿಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದೀರಿ. 75 ವರ್ಷಗಳಲ್ಲಿ ಎರಡೂ ಸದನಗಳು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವನ್ನು ಪಾತಾಳಕ್ಕಿಂತ ಕೆಳಗೆ ನೂಕಿವೆ. ಸ್ಪೀಕರ್ ಆಡಳಿತ ಪಕ್ಷ ಮತ್ತು ಪಕ್ಷ ಎರಡನ್ನೂ ಪ್ರತಿನಿಧಿಸುವ ನಿಷ್ಪಕ್ಷಪಾತ ರಕ್ಷಕನಾಗಿ ಕಾರ್ಯನಿರ್ವಹಿಸುತ್ತಾರೆ” ಎಂದು ಅಮಿತ್ ಶಾ ಹೇಳಿದರು.

ಇದನ್ನೂ ಓದಿ: ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ: ಓಂ ಬಿರ್ಲಾ ಬಗ್ಗೆ ಮೋದಿ ಹೇಳಿದ್ದಿಷ್ಟು

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗಾಗ ತನಗೆ ಮಾತನಾಡಲು ಅವಕಾಶ ಸಿಗುತ್ತಿಲ್ಲ. ತನ್ನ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಸಮಯ ನೀಡಿದಾಗ ಅವರು ಹಾಜರಿರುವುದು ಮತ್ತು ಕಲಾಪಗಳಲ್ಲಿ ಭಾಗವಹಿಸುವುದು ಅವರ ಜವಾಬ್ದಾರಿ. ಅಂತಹ ಅವಕಾಶಗಳು ಬಂದಾಗ ರಾಹುಲ್ ಗಾಂಧಿ ಹೆಚ್ಚಾಗಿ ವಿದೇಶದಲ್ಲಿಯೇ ಇರುತ್ತಾರೆ ಎಂದು ಅಮಿತ್ ಶಾ ಟೀಕಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ

2025ರ ಕುಂಭಮೇಳದ ಸಮಯದಲ್ಲಿ ತನ್ನ ಸೌಂದರ್ಯದಿಂದಲೇ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಭೋಸ್ಲೆ (Monalisa Bhosle) ಈಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬುಧವಾರ (ಮಾರ್ಚ್ 11) ಸಂಜೆ ಕೇರಳದ ತಿರುವನಂತಪುರಂ ಸಮೀಪದ ದೇವಸ್ಥಾನವೊಂದರಲ್ಲಿ ನಟ ಮೊಹಮ್ಮದ್ ಫರ್ಮಾನ್ ಅವರೊಂದಿಗೆ ಮೊನಾಲಿಸಾ ವಿವಾಹ (Monalisa Bhosle Marriage) ನೆರವೇರಿದೆ. ಮೊನಾಲಿಸಾ ಮತ್ತು ಮೊಹಮ್ಮದ್ ಫರ್ಮಾನ್ (Muhammad Farman) ಅವರದ್ದು ಅಂತರ್ ಧರ್ಮೀಯ ವಿವಾಹವಾಗಿದ್ದು, ಮನೆಯವರ ವಿರೋಧದ ನಡುವೆ ಅವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ.

ತಿರುವನಂತಪುರಂನ ಅರುಮನೂರಿನಲ್ಲಿರುವ ಮಂದಿರದಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಸ್ಥಳೀಯ ನಿವಾಸಿಗಳು ಮತ್ತು ರಾಜಕೀಯ ನಾಯಕರು ಭಾಗವಹಿಸಿದ್ದರು. ಅರ್ಚಕರು ನೀಡಿದ ತಾಳಿಯನ್ನು ಕಟ್ಟಿ, ಕುಂಕುಮವನ್ನು ಇಡುವ ಮೂಲಕ ಫರ್ಮಾನ್ ಅವರು ಮೊನಾಲಿಸಾ ಅವರನ್ನು ವರಿಸಿದರು. ಮದುವೆಯ ನಂತರ ಮಾತನಾಡಿದ ಈ ಜೋಡಿ, ‘ನಮಗೆ ಕೇರಳ ಎಂದರೆ ತುಂಬಾ ಇಷ್ಟ. ಇಲ್ಲಿನ ಸುರಕ್ಷತೆ ಮತ್ತು ಪರಿಸರ ಕಂಡು ನಾವು ಇಲ್ಲಿಯೇ ಮದುವೆಯಾಗಲು ನಿರ್ಧರಿಸಿದೆವು’ ಎಂದು ಹೇಳಿದ್ದಾರೆ.

ಮೊನಾಲಿಸಾ ಅವರು ಇಂದೋರ್‌ ಮೂಲದವರು. ಮೊಹಮ್ಮದ್ ಫರ್ಮಾನ್ ಮಹಾರಾಷ್ಟ್ರದವರು. ಇವರಿಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು, ಆರು ತಿಂಗಳ ಹಿಂದೆ ಚಿತ್ರೀಕರಣದ ವೇಳೆಯಲ್ಲಿ ಭೇಟಿಯಾಗಿದ್ದರು. ‘ನಾನು ಮೊನಾಲಿಸಾಳನ್ನು ಚಿತ್ರೀಕರಣದ ಸೆಟ್‌ನಲ್ಲಿ ಭೇಟಿಯಾದೆ. ಆರು ತಿಂಗಳಿನಿಂದ ನಮ್ಮ ಪ್ರೀತಿ ಬೆಳೆದಿದೆ. ಈ ಆರು ತಿಂಗಳು ನಮಗೆ 60 ವರ್ಷಗಳ ಸುದೀರ್ಘ ಬಾಂಧವ್ಯದಂತೆ ಭಾಸವಾಗುತ್ತಿದೆ’ ಎಂದು ಫರ್ಮಾನ್ ಹೇಳಿದ್ದಾರೆ.

ಸಿನಿಮಾ ಚಿತ್ರೀಕರಣಕ್ಕಾಗಿ ಕೇರಳಕ್ಕೆ ಬಂದಿದ್ದ ಈ ಜೋಡಿ, ಇಲ್ಲಿನ ಸಂಸ್ಕೃತಿಗೆ ಮಾರುಹೋಗಿದ್ದಾರೆ. ‘ಕೇರಳದ ಸೌಂದರ್ಯ ಮತ್ತು ಅಲ್ಲಿನ ಜನರ ಗುಣ ನಮಗೆ ತುಂಬಾ ಇಷ್ಟವಾಯಿತು. ಬೇರೆ ರಾಜ್ಯಗಳಲ್ಲಿ ನಮ್ಮ ಸಂಬಂಧಕ್ಕೆ ವಿರೋಧ ವ್ಯಕ್ತವಾಗುವ ಆತಂಕವಿತ್ತು. ಆದ್ದರಿಂದ ಸುರಕ್ಷಿತ ಎನಿಸಿದ ಕೇರಳದ ದೇವಸ್ಥಾನದಲ್ಲಿ ಮದುವೆಯಾಗಲು ಸಮಿತಿಯ ಅನುಮತಿ ಪಡೆದೆವು’ ಎಂದು ಫರ್ಮಾನ್ ತಿಳಿಸಿದ್ದಾರೆ. ಫರ್ಮಾನ್ ಅವರ ತಂದೆ ಈ ಸಂಬಂಧಕ್ಕೆ ಇನ್ನು ಸಂಪೂರ್ಣ ಸಮ್ಮತಿ ನೀಡಿಲ್ಲ ಎಂಬ ವಿಷಯವನ್ನೂ ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾಕುಂಭದ ಸುಂದರಿ ಮೊನಾಲಿಸಾ ತಿಂಗಳ ಆದಾಯ ಇಷ್ಟೊಂದಾ?

ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಅವರು ಈ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದರು. ಹೊರರಾಜ್ಯದ ಕಲಾವಿದರು ಕೇರಳಕ್ಕೆ ಬಂದು ಅಲ್ಲಿನ ಸಂಪ್ರದಾಯದಂತೆ ಮದುವೆ ಆಗಿರುವುದು ವಿಶೇಷವಾಗಿದೆ. ಮದುವೆ ಬಳಿಕ ತಮಗೆ ರಕ್ಷಣೆ ಬೇಕು ಎಂದು ಫರ್ಮಾನ್ ಮತ್ತು ಮೊನಾಲಿಸಾ ಅವರು ಕೇರಳ ಪೊಲೀಸರ ಮೊರೆ ಹೋಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link