Headlines

nagaraj11081993

ರಿಯಲ್ ಎಸ್ಟೇಟ್ ಏಜೆಂಟ್​ನನ್ನು ಅಪಹರಿಸಿ ಹತ್ಯೆ ಕೇಸ್​: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್, ಮಾರ್ಚ್​ 11: ಆನೇಕಲ್‌ನಲ್ಲಿ ಕಿಡ್ನ್ಯಾಪ್ (kidnapped) ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್​ ತಮಿಳುನಾಡಿನಲ್ಲಿ ಶವವಾಗಿ ಪತ್ತೆ ಪ್ರಕರಣಕ್ಕೆ ಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಠಾಣೆ ಪೊಲೀಸರಿಂದ ಓರ್ವ ಅಪ್ರಾಪ್ತ ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಮೋಹನ್ ಬಾಬು, ತೇಜಸ್, ದರ್ಶನ್, ಲಿಖಿತ್, ನಿಖಿಲ್, ಆನಂದ್​, ಪ್ರಶಾಂತ್ ಮತ್ತು ಓರ್ವ ಅಪ್ರಾಪ್ತ ಬಂಧಿತರು. ಆರೋಪಿಗಳು ಕಿಡ್ನ್ಯಾಪ್ ಮಾಡಲು ಬಳಸಿದ್ದ ಹುಂಡೈ ಕಾರನ್ನು ವಶಕ್ಕೆ ಪಡೆಯಲಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಿ ಕೋರ್ಟ್​ಗೆ…

Read More

ಪಿಜಿಗಳಲ್ಲಿಲ್ಲ ಮಧ್ಯಾಹ್ನದ ಊಟ, ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ: ಸಿಲಿಂಡರ್​​ ಕೊರತೆ ಮತ್ತಷ್ಟು ಉಲ್ಬಣ

ಬೆಂಗಳೂರು, ಮಾರ್ಚ್​​ 11: ಎಲ್​​ಪಿಜಿ ಸಿಲಿಂಡರ್​​ಗಳ ಅಭಾವ ಕರ್ನಾಟಕದಲ್ಲಿ ಮತ್ತಷ್ಟು ಉಲ್ಬಣಿಸಿದ್ದು, ಬೆಂಗಳೂರಿನ ಕೆಲ ಪೇಯಿಂಗ್ ಗೆಸ್ಟ್‌ಗಳಲ್ಲಿ (ಪಿಜಿ) ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯಿಂದಾಗಿ ಮಧ್ಯಾಹ್ನದ ಊಟದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.  ಗ್ಯಾಸ್ ಸಿಲಿಂಡರ್ ಸಮಸ್ಯೆ ಬಗೆಹರಿಯುವವರೆಗೂ ಊಟ ನೀಡದಿರಲು ನಿರ್ಧರಿಸಲಾಗಿದೆ ಎಂದು ಪಿಜಿ ಮಾಲೀಕರು ಘೋಷಿಸಿದ್ದು, ಎಲೆಕ್ಟ್ರಿಕ್ ಸ್ಟವ್ ಅಥವಾ ಸೌದೆ ಬಳಕೆಯಂತಹ ಪರ್ಯಾಯ ವ್ಯವಸ್ಥೆಗಳನ್ನು ರಾತ್ರೋರಾತ್ರಿ ಜಾರಿಗೊಳಿಸುವುದು ಸಾಧ್ಯವಿಲ್ಲ ಎಂದು ಅಲವತ್ತುಕೊಂಡಿದ್ದಾರೆ. ಇನ್ನು ಗ್ಯಾಸ್ ಹೆಚ್ಚು ಬಳಕೆಯಾಗುವ ಆಹಾರಕ್ಕೆ ಬ್ರೇಕ್​​ ಹಾಕಿ ಬೆಂಗಳೂರಿನ ಪಿಜಿಗಳ…

Read More

ಶುಕ್ರಾದಿತ್ಯ ಸಂಯೋಗ: ಈ 6 ರಾಶಿಯವರು ಹೇಳಿದ್ದೇ ನಡೆಯುವುದು, ಆದ್ರೆ ಇದೊಂದು ಕೆಲಸ ಮಾಡಬೇಡಿ

ಮಾರ್ಚ್ 15 ರಿಂದ ಮಾರ್ಚ್ 25ರವೆರಗೆ ಮೀನ ರಾಶಿಯಲ್ಲಿ ಶುಕ್ರ ಮತ್ತು ಸೂರ್ಯನ ಸಂಯೋಜನೆಯಿಂದ ಉಂಟಾಗುವ ಶುಕ್ರಾದಿತ್ಯ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪ್ರಭಾವವನ್ನು ಬೀರುತ್ತದೆ. ಸೂರ್ಯನು ಆತ್ಮಕಾರಕನಾದರೆ, ಶುಕ್ರನು ಸುಖ ಮತ್ತು ಸಂಪತ್ತಿನ ಕಾರಕ. ಮೀನ ರಾಶಿಯು ಶುಕ್ರನಿಗೆ ಉಚ್ಚ ಸ್ಥಾನವಾದರೆ, ಸೂರ್ಯನಿಗೆ ಇದು ಮಿತ್ರ ರಾಶಿಯಾಗಿದೆ. ​ಈ ಸಂಯೋಜನೆಯಿಂದ ವಿವಿಧ ರಾಶಿಗಳಿಗೆ ಲಭಿಸುವ ಫಲಗಳು ಈ ಕೆಳಗಿನಂತಿವೆ. ​ಶುಭ ಫಲ ಪಡೆಯುವ ರಾಶಿಗಳು ​ವೃಷಭ ರಾಶಿ: ಈ ಯೋಗವು ನಿಮ್ಮ ಲಾಭ ಸ್ಥಾನದಲ್ಲಿ…

Read More

ವಿಧಾನಸಭೆಯಲ್ಲೂ ಸಿಲಿಂಡರ್​​ ಕೊರತೆ ಗದ್ದಲ: ಆಡಳಿತ ಮತ್ತು ವಿಕ್ಷದ ನಡುವೆ ವಾಕ್ಸಮರ

ಬೆಂಗಳೂರು, ಮಾರ್ಚ್​​ 11: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್​​ ಪೂರೈಕೆ ವ್ಯತ್ಯಯದಿಂದಾಗಿ ರಾಜ್ಯದಲ್ಲಿ ಹೋಟೆಲ್​​ ಉದ್ಯಮಗಳು, ಜನ ಸಾಮಾನ್ಯರು ವಿಪರೀತ ಸಂಕಷ್ಟಕ್ಕೆ ಸಿಲುಕಿರುವ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಸಿಲಿಂಡರ್​ ಕೊರತೆ ಬಗ್ಗೆ ಚರ್ಚೆಗೆ ಸ್ಪೀಕರ್​​ ಅವಕಾಶ ನೀಡಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಸದನದ ರಣಾಂಗಣವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್​​ ಶಾಸಕರು ಪರಸ್ಪರ ದೂಷಿಸಿಕೊಂಡಿದ್ದಾರೆ. ಚರ್ಚೆ ಮಧ್ಯೆ ಪ್ರಧಾನಿ ಮೋದಿ ಅವರ ಹೆಸರು ಪ್ರಸ್ತಾಪವಾಗಿರೋದು ಉರಿಯುವ…

Read More

ಜಸ್​ಪ್ರೀತ್ ಬುಮ್ರಾ ಭಾರತ ತಂಡದಿಂದ 18 ತಿಂಗಳುಗಳ ಕಾಲ ಹೊರಗೆ!

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah)  ಟಿ20 ಕ್ರಿಕೆಟ್​ನಿಂದ 18 ತಿಂಗಳುಗಳ ಕಾಲ ಬ್ರೇಕ್ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ಏಕದಿನ ವಿಶ್ವಕಪ್​ಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದು ಈ ಮೂಲಕ ತಮ್ಮ ಕೆಲಸದ ಹೊರೆಯನ್ನು ಸರಿದೂಗಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಭಾರತ ತಂಡದ ದ್ವಿಪಕ್ಷೀಯ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಏಕದಿನ ಮತ್ತು ಟೆಸ್ಟ್ ಗಮನ: ಜಸ್​ಪ್ರೀತ್ ಬುಮ್ರಾ 2024ರ ಟಿ20 ವಿಶ್ವಕಪ್​ ಬಳಿಕ ಸತತ ಟಿ20 ಪಂದ್ಯಗಳನ್ನಾಡಿದ್ದಾರೆ. ಇದಕ್ಕೆ ಮುಖ್ಯ ಕಾರಣ 2026ರ ಟಿ20 ವಿಶ್ವಕಪ್….

Read More

Video: ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್

ಹೈದರಾಬಾದ್, ಮಾರ್ಚ್​ 11: ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್​ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ…

Read More

ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ ಯಾರ ಕಾಲದ್ದು ಗೊತ್ತಾ? ಇದರ ಬೆಲೆ ಕೇಳಿದ್ರೆ ಶಾಕ್​​​ ಆಗುವುದು ಗ್ಯಾರಂಟಿ!

ಗದಗ, ಮಾ.11: ಲಕ್ಕುಂಡಿಯಲ್ಲಿ (Lakkundi Gold Treasure) ಈ ವರ್ಷದ (2026) ಜನವರಿ 10ರಂದು ಪತ್ತೆಯಾಗಿದ್ದ ಚಿನ್ನದ ನಿಧಿಯ ಕುರಿತು ಕುತೂಹಲಕಾರಿ ವಿಷಯಗಳು ಹೊರಬಂದಿವೆ. ರಿತ್ತಿ ಕುಟುಂಬದ ಮನೆಯ ಪಾಯ ತೋಡುವಾಗ ಸಿಕ್ಕಿದ್ದ ಈ ಆಭರಣಗಳು ಕೇವಲ ಬಂಗಾರವಲ್ಲ, ಅವು ಇತಿಹಾಸದ ಅಮೂಲ್ಯ ದಾಖಲೆಗಳಾಗಿವೆ. ಗದಗ ಜಿಲ್ಲಾಡಳಿತ ಭವನದಲ್ಲಿ ಡಿಸಿ ನೇತೃತ್ವದಲ್ಲಿ ನಡೆದ ಪರಿಶೀಲನೆಯಲ್ಲಿ ಪುರಾತತ್ವ ಶಾಸ್ತ್ರಜ್ಞರ ಸಮಿತಿ ಈ ಕೆಲವೊಂದು ಅಚ್ಚರಿಯ ವಿಚಾರಗಳನ್ನು ತಿಳಿಸಿದೆ. ಈ ಆಭರಣಗಳು ಯಾವ ಕಾಲದ್ದೂ, ಯಾರಿಗೆ ಸೇರಬೇಕಿರುವುದು, ಹಾಗೂ ಇದರ…

Read More

“ಯಾವ ಪುರುಷಾರ್ಥಕ್ಕೆ ನಿಗಮದ ಅಧ್ಯಕ್ಷರ ನೇಮಕ ಮಾಡಿದ್ರಿ?”: ಸಚಿವ ತಂಗಡಗಿ ವಿರುದ್ಧ ಗುಡುಗಿದ ಶಾಸಕ ಸುನೀಲ್ ಕುಮಾರ್

ಬೆಂಗಳೂರು, ಮಾ.11:ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಶಾಸಕ ಸುನೀಲ್ ಕುಮಾರ್ ಅವರು ಸಚಿವ ತಂಗಡಗಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಿಗಮದ ಅಧ್ಯಕ್ಷರ ನೇಮಕ ಮತ್ತು ಅನುದಾನ ಹಂಚಿಕೆಯಲ್ಲಿನ ಅವ್ಯವಸ್ಥೆಗಳನ್ನು ಎತ್ತಿ ತೋರಿಸಿದ್ದಾರೆ. ನಿಗಮವನ್ನು ಜನವರಿ 2024ರಲ್ಲಿ ನೋಂದಾಯಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದರೂ, ಅಧ್ಯಕ್ಷರ ನೇಮಕವು ಅದಕ್ಕೂ ಎಂಟು ತಿಂಗಳ ಮುಂಚೆಯೇ ನಡೆದಿರುವುದು ವಿರೋಧ ಪಕ್ಷದ ನಾಯಕರ ಪ್ರಮುಖ ಪ್ರಶ್ನೆಯಾಗಿದೆ. “ಯಾವ ಪುರುಷಾರ್ಥಕ್ಕೆ ನಿಗಮದ ಅಧ್ಯಕ್ಷರ ನೇಮಕ…

Read More

ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!

ಬೆಂಗಳೂರು, ಮಾರ್ಚ್​​ 11: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ  ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಮಾರ್ಚ್​​ 9ರಂದೇ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಭಯವೇ ಇಲ್ಲದಂತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಂತೋಷ್​​ ಎಂಬಾತನ ಮೇಲೆ ಡೆಡ್ಲಿ ಅಟ್ಯಾಕ್​​ ನಡೆದಿದ್ದು, ಒಂದೆರಡಲ್ಲ ಬರೋಬ್ಬರಿ 68 ಬಾರಿ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ದಾಳಿ ನಡೆಸಿರೋದು ಶರತ್​​ ಮತ್ತು ಗ್ಯಾಂಗ್​​…

Read More

ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!

ಟಿ20 ವಿಶ್ವಕಪ್ ಫೈನಲ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡ ಟಿ20 ಸರಣಿಗಾಗಿ ಸಜ್ಜಾಗಿದೆ. ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ 8 ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಇನ್ನು ನಾಯಕ ಮಿಚೆಲ್ ಸ್ಯಾಂಟ್ನರ್ ಮೂರು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಇನ್ನುಳಿದ ಎರಡು ಮ್ಯಾಚ್​ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮೂವರು ಹೊಸ ಆಟಗಾರರಿಗೆ ಅವಕಾಶ…

Read More