Headlines

nagaraj11081993

ಅಭಿಮಾನಿಗಳು ಇಟ್ಟ ಹೆಸರೇ ಅಂತಿಮವಾಯ್ತೆ ಎನ್​​ಟಿಆರ್-ನೀಲ್ ಸಿನಿಮಾಕ್ಕೆ? – Kannada News | Jr NTR and Prashanth Neel movie officially named as Dragon

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಕೆಲಸಗಳು ಬಲು ನಿಧಾನಗತಿಯಲ್ಲಿ ಸಾಗುತ್ತಿವೆ. ಭಾರಿ ಬಜೆಟ್​ನ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿ ಈಗಾಗಲೇ ಒಂದು ವರ್ಷವಾಗಿದ್ದು, ಸಿನಿಮಾದ ಚಿತ್ರೀಕರಣಕ್ಕೆ ಇನ್ನೂ ಒಂದು ವರ್ಷ ಬೇಕಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಸಿನಿಮಾದ ಹೆಸರನ್ನು ಸಹ ಚಿತ್ರತಂಡ ಘೋಷಣೆ ಮಾಡಿಲ್ಲ, ಆದರೆ ಅಭಿಮಾನಿಗಳು ಈ ಸಿನಿಮಾವನ್ನು ‘ಡ್ರ್ಯಾಗನ್’ ಎಂದು ಕರೆಯುತ್ತಿದ್ದಾರೆ. ಅಭಿಮಾನಿಗಳು ಇಟ್ಟ ಈ ಹೆಸರನ್ನೇ ಸಿನಿಮಾಕ್ಕೆ ಅಂತಿಮಗೊಳಿಸಲು ಚಿತ್ರತಂಡ…

Read More

ಆರ್​ಎಸ್​ಎಸ್ ಸಿನಿಮಾ: ವಿವಾದದ ನಡುವೆಯೂ ರಾಷ್ಟ್ರಪತಿ ಭವನದಲ್ಲಿ ‘ಆಖ್ರಿ ಸವಾಲ್’ ಪ್ರದರ್ಶನ? – Kannada News | Sanjay Dutt starrer Aakhri Sawal Special Screening at Rashtrapati Bhavan amid controversy

ಬಾಲಿವುಡ್‌ನ ಹಿರಿಯ ನಟ ಸಂಜಯ್ ದತ್ ಅಭಿನಯದ ‘ಆಖ್ರಿ ಸವಾಲ್’ (Aakhri Sawal) ಸಿನಿಮಾ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದರ ನಡುವೆ ಈ ಸಿನಿಮಾಗೆ ಸಂಬಂಧಿಸಿದಂತೆ ದೊಡ್ಡ ಬೆಳವಣಿಗೆಯೊಂದು ಮುನ್ನಲೆಗೆ ಬಂದಿದೆ. ಹಲವು ವಿವಾದಗಳ ಸುಳಿಯಲ್ಲಿ ಸಿಲುಕಿರುವ ಈ ಚಿತ್ರಕ್ಕೆ ಇಂದು (ಮೇ 17) ರಾಷ್ಟ್ರಪತಿ ಭವನದಲ್ಲಿ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಕಳೆದ ಕೆಲವು ದಿನಗಳಿಂದ ‘ಆಖ್ರಿ ಸವಾಲ್’ ಸಿನಿಮಾ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಯುನೈಟೆಡ್…

Read More

ಭಾರತಕ್ಕೆ 2ನೇ ಅತಿದೊಡ್ಡ ರಫ್ತು ಮಾರುಕಟ್ಟೆ ಈಗ ಯುಎಇ ಅಲ್ಲ, ಸಿಂಗಾಪುರ – Kannada News | India’s big export markets, Singapore replaces UAE for second position

ನವದೆಹಲಿ, ಮೇ 17: ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ (west asia conflict) ಭಾರತದ ವಿದೇಶಿ ವ್ಯಾಪಾರ ವಲಯದಲ್ಲಿ ಮಹತ್ವದ ಬದಲಾವಣೆಯಾಗಿದೆ. ಮಾಧ್ಯಮ ವರದಿಯ ಪ್ರಕಾರ, ಯುಎಇ (UAE) ದೇಶವನ್ನು ಹಿಂದಿಕ್ಕಿ ಸಿಂಗಾಪುರವು ಈಗ ಭಾರತದ ಎರಡನೇ ಅತಿ ದೊಡ್ಡ ರಫ್ತು ಮಾರುಕಟ್ಟೆಯಾಗಿ ಹೊರಹೊಮ್ಮಿದೆ. ಮಧ್ಯಪ್ರಾಚ್ಯದಲ್ಲಿ ತಲೆದೋರಿರುವ ಯುದ್ಧದ ಪರಿಸ್ಥಿತಿ ಮತ್ತು ಮಾರ್ಚ್ ತಿಂಗಳಿನಿಂದ ಹಾರ್ಮುಜ್ ಜಲಸಂಧಿ (Strait of Hormuz) ಬಹುತೇಕ ಮುಚ್ಚಿರುವುದು ಜಾಗತಿಕ ಇಂಧನ ಮತ್ತು ಸರಕು ಸಾಗಣೆಗೆ ಭಾರಿ ಹೊಡೆತ ನೀಡಿದೆ. ಇರಾನ್…

Read More

ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೆ ‘ಕುತ್ತು’ – Kannada News | Suryakumar Yadav’s T20I Captaincy Under Threat

ಭಾರತ ತಂಡಕ್ಕೆ ಟಿ20 ವಿಶ್ವಕಪ್ 2026ರ ಟ್ರೋಫಿ ತಂದುಕೊಟ್ಟ ನಾಯಕ ಸೂರ್ಯಕುಮಾರ್ ಯಾದವ್ ಅವರ ಟಿ20 ಭವಿಷ್ಯ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ಅವರ ಇತ್ತೀಚಿನ ಕಳಪೆ ಬ್ಯಾಟಿಂಗ್ ಫಾರ್ಮ್, ಹೆಚ್ಚುತ್ತಿರುವ ವಯಸ್ಸು ಮತ್ತು ಪದೇ ಪದೇ ಕಾಡುತ್ತಿರುವ ಫಿಟ್‌ನೆಸ್ ಸಮಸ್ಯೆಗಳು ಬಿಸಿಸಿಐ ಆಯ್ಕೆ ಸಮಿತಿಯನ್ನು ತೀವ್ರ ಚಿಂತೆಗೆ ದೂಡಿವೆ. ಮುಂದಿನ 2028ರ ವಿಶ್ವಕಪ್ ದೃಷ್ಟಿಯಿಂದ ಟಿ20 ತಂಡಕ್ಕೆ ಹೊಸ ನಾಯಕನನ್ನು ಹುಡುಕಲು ಅಜಿತ್ ಅಗರ್ಕರ್ ನೇತೃತ್ವದ ಸಮಿತಿಯು ಮೇ 19ರ ಗುವಾಹಟಿ ಸಭೆಯಲ್ಲಿ ಮಹತ್ವದ ಚರ್ಚೆ…

Read More

Kashi Yatra: ಕಾಶಿಯಲ್ಲಿ 9 ರಾತ್ರಿಗಳು ಕಳೆದರೆ ಮೋಕ್ಷ ಸಿಗುತ್ತಾ? ಇದರ ಹಿಂದಿರುವ ಆಚರಣೆಗಳೇನು? – Kannada News | Kashi Yatra for Moksha: Spiritual Significance of 9 Nights in Varanasi

ಕಾಶಿಯಲ್ಲಿ 9 ರಾತ್ರಿಗಳು ಕಳೆದರೆ ಮೋಕ್ಷ ಸಿಗುತ್ತಾ? Image Credit source: Pinterest ಹಿಂದೂ ಧರ್ಮದಲ್ಲಿ ಪ್ರತಿಯೊಬ್ಬ ಭಕ್ತನ ಜೀವಿತಾವಧಿಯ ಅಂತಿಮ ಆಧ್ಯಾತ್ಮಿಕ ಗುರಿ ಎಂದರೆ ಅದು ‘ಕಾಶಿ ವಿಶ್ವನಾಥನ’ ದರ್ಶನ ಪಡೆಯುವುದು. ಪವಿತ್ರ ನಗರಿ ಕಾಶಿಗೆ ಭೇಟಿ ನೀಡಿ ಭಗವಂತನ ಪಾದಕ್ಕೆ ಶರಣಾದರೆ ಜನ್ಮ ಜನ್ಮಾಂತರಗಳ ಪಾಪಗಳು ಕರಗಿ, ಮೋಕ್ಷ ಸಿಗುತ್ತದೆ ಎಂಬುದು ಶತಶತಮಾನಗಳ ನಂಬಿಕೆ. ಅದಕ್ಕಾಗಿಯೇ ಕಾಶಿಯಲ್ಲಿ ಕಳೆಯುವ ಪ್ರತಿ ಕ್ಷಣವೂ ಅತ್ಯಂತ ಪವಿತ್ರ. ಅದರಲ್ಲೂ ವಿಶೇಷವಾಗಿ, ಶಾಸ್ತ್ರ ಸಂಪ್ರದಾಯಗಳ ಪ್ರಕಾರ “ಕಾಶಿಯಲ್ಲಿ 9…

Read More

RCB ವಿರುದ್ಧದ ಪಂದ್ಯಕ್ಕೂ ಮುನ್ನ ಶ್ರೇಯಸ್ ಅಯ್ಯರ್ ಖಡಕ್ ಸಂದೇಶ! – Kannada News | Shreyas Iyer Sends Strong Message to RCB Ahead of Clash!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಪ್ಲೇಆಫ್ ರೇಸ್ ರೋಚಕ ಹಂತ ತಲುಪಿದೆ. ಇಂದು ನಡೆಯಲಿರುವ ಐಪಿಎಲ್​ನ 61ನೇ ಪಂದ್ಯದಲ್ಲಿ ಎರಡು ತಂಡಗಳ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ. ಅಂದರೆ ಇಂದಿನ ಮ್ಯಾಚ್​ನಲ್ಲಿ ಆರ್​ಸಿಬಿ ಗೆದ್ದರೆ 18 ಅಂಕಗಳೊಂದಿಗೆ ಪ್ಲೇಆಫ್​ಗೇರುವುದು ಖಚಿತ. ಮತ್ತೊಂದೆಡೆ ಪ್ಲೇಆಫ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಪಂಜಾಬ್ ಕಿಂಗ್ಸ್ (PBKS) ಆರ್​ಸಿಬಿ ವಿರುದ್ಧ ಗೆಲ್ಲಲೇಬೇಕು. ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ…

Read More

ಜೆಜೆನಗರ ಪಿಎಸ್​ಐ ಪದ್ಮನಾಭ್ ಮೇಲೆ ಹಲ್ಲೆ ಆರೋಪ! – Kannada News | JJ Nagar PSI Accused of Assault in Domestic Dispute Case

ಬೆಂಗಳೂರು, ಮೇ 17: ಜೆಜೆನಗರ ಪೊಲೀಸ್ ಠಾಣೆಯ ಪಿಎಸ್‌ಐ ಪದ್ಮನಾಭ್ ವಿರುದ್ಧ ಕೌಟುಂಬಿಕ ವಿವಾದದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಬರ್ಕತ್ ಪಾಷಾ ಎಂಬುವವರನ್ನು ಪಿಎಸ್‌ಐ ಪದ್ಮನಾಭ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕುತ್ತಿಗೆ ಹಿಸುಕುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆ ಜೆಜೆನಗರ ಠಾಣಾ ವ್ಯಾಪ್ತಿಯ ಪಾದರಾಯನಪುರದಲ್ಲಿ ನಡೆದಿದೆ. ಪತಿ-ಪತ್ನಿ ನಡುವೆ ಕೆಲಸಕ್ಕೆ ಹೋಗುವ ವಿಚಾರವಾಗಿ ಪದೇ ಪದೇ ಜಗಳ ನಡೆಯುತ್ತಿತ್ತು. ಸೀಮಂತದ ನಂತರ ಪತ್ನಿ ತವರಿಗೆ ಹೋದಾಗ, ಆಕೆಯನ್ನು ಕರೆತರಲು ಹೋದಾಗ…

Read More

ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರನ ದರ್ಶನಕ್ಕೆ ಜನವೋ ಜನ! – Kannada News | Devotee Surge at Male Mahadeshwara Hill for Shani Amavasya and Weekend

ಚಾಮರಾಜನಗರ, ಮೇ 17: ಶನಿ ಅಮಾವಾಸ್ಯೆ ಮತ್ತು ವೀಕೆಂಡ್ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡೇ ಹರಿದುಬಂದಿದೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ಮಾದಪ್ಪನ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದ್ದಾರೆ. ನಿನ್ನೆಯಿಂದಲೂ ಮಾದಪ್ಪನ ಭಕ್ತ ಸಮೂಹವು ಬೆಟ್ಟದ ಕಡೆಗೆ ಬರುತ್ತಿದ್ದು, ದೇವಾಲಯದ ಆವರಣ ಭಕ್ತರಿಂದ ತುಂಬಿಹೋಗಿದೆ. ಭಕ್ತರು ತಮ್ಮ ಭಕ್ತಿ ಸಮರ್ಪಿಸಲು ಚಿನ್ನದ ರಥ, ಬೆಳ್ಳಿ ರಥ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಹಾಗೂ ಬಸವ ರಥ ಸೇರಿದಂತೆ ಹಲವು ವಿಭಿನ್ನ…

Read More

‘ನಾನು ಅಷ್ಟು ಚೀಪ್ ಅಲ್ಲ, ಸಿಎಂ ವಿಜಯ್ ಮೇಲೆ ಅಸೂಯೆ ಇಲ್ಲ’: ರಜನಿಕಾಂತ್ ಸ್ಪಷ್ಟನೆ – Kannada News | Rajinikanth clarifies rumors of jealousy after Vijay became Tamil Nadu CM

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ (Thalapathy Vijay) ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷ ಬಹುಮತ ಪಡೆದು ಸರ್ಕಾರ ರಚಿಸಿದ ಬೆನ್ನಲ್ಲೇ, ಸೂಪರ್‌ಸ್ಟಾರ್ ರಜನಿಕಾಂತ್ ಅವರ ನಡೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗಳು ನಡೆಯುತ್ತಿದ್ದವು. ಚುನಾವಣೆಯಲ್ಲಿ ಸೋಲುಂಡ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರನ್ನು ರಜನಿಕಾಂತ್ ಭೇಟಿಯಾಗಿದ್ದನ್ನು ನೋಡಿ ಕೆಲವರು ಟೀಕೆ ಮಾಡಿದ್ದರು. ವಿಜಯ್ ಸಿಎಂ ಆಗಿರುವುದಕ್ಕೆ ರಜನಿ ಅವರಿಗೆ ಇಷ್ಟವಿಲ್ಲ ಎಂದು ಹಲವರು ಬಿಂಬಿಸಿದ್ದರು. ಸದ್ಯ ಈ ಎಲ್ಲಾ ವದಂತಿಗಳಿಗೆ ರಜನಿಕಾಂತ್…

Read More

Video: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಕೊಲೆ; ಸಂಬಂಧಿಕರೇ ಹಣ ದೋಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಂಡೋನೇಷ್ಯಾದ ಪೆಕನ್‌ಬಾರು ನಗರದ ರುಂಬೈನಲ್ಲಿ ದುಮರಿಸ್ ಬೋರು ಸಿಟಿಯೊ (60) ಎಂಬ ವೃದ್ಧೆಯನ್ನು ಕೊಲೆ ಮಾಡಿ ದರೋಡೆ ಮಾಡಿರುವುದು ವರದಿಯಾಗಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಘಟನಾ ಸ್ಥಳದ ಮರು ಪರಿಶೀಲನೆ ನಡೆಸಿ ನಾಲ್ಕು ಮಂದಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮನೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಮರದ ದಿಂಬಿನಿಂದ ವೃದ್ಧೆಯ ಮೇಲೆ ಹಲ್ಲೆ ನಡೆಸಿರುವುದು ಮತ್ತು ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವುದು ಪತ್ತೆಯಾಗಿದೆ. ಸಿಸಿಟಿವಿ ಮತ್ತು ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಮೃತರ ಸಂಬಂಧಿಯೇ ಆದ ‘AF’ ಎಂಬ…

Read More