Headlines

nagaraj11081993

Video: ಪಿಜಿಯಿಂದ ಅಪಾರ್ಟ್ಮೆಂಟ್‌ಗೆ ಶಿಫ್ಟ್ ಆದಾಗ ತನ್ನ ಖರ್ಚು ವೆಚ್ಚ ವಿವರಿಸಿದ ಬೆಂಗಳೂರಿನ ಮಹಿಳೆ

ಬೆಂಗಳೂರು, ಮಾರ್ಚ್ 11: ಬೆಂಗಳೂರು (Bengaluru) ಅಂದ್ರೇನೆ ದುಬಾರಿ ಅನ್ನೋದು ಅನೇಕರ ಅಭಿಪ್ರಾಯ. ಇಲ್ಲಿ ಬಾಡಿಗೆ ಮನೆಯಿಂದ ತಿಂಗಳ ಖರ್ಚು ವೆಚ್ಚವನ್ನು ತೂಗಿಸಿಕೊಳ್ಳುವಷ್ಟರಲ್ಲಿ ಕೈ ಖಾಲಿಯಾಗಿರುತ್ತದೆ. ಇದೀಗ ಬೆಂಗಳೂರಿನ ಮಹಿಳೆಗೂ ಇಂತಹದ್ದೇ ಅನುಭವವಾಗಿದೆ.  ಮಹಿಳೆಯೊಬ್ಬರು ಪಿಜಿಯಿಂದ 2ಬಿಹೆಚ್‌ಗೆ ಅಪಾರ್ಟ್ಮೆಂಟ್‌ಗೆ ಸ್ಥಳಾಂತರಗೊಳ್ಳುವಾಗ 62,150 ರೂ ಖರ್ಚು ಮಾಡಿದೆ. ಈ ವೆಚ್ಚಗಳ ಬಗ್ಗೆ ನಿಮಗೆ ಯಾರು ಕೂಡ ಎಚ್ಚರಿಕೆ ಕೊಡಲ್ಲ ಎಂದು ಹೇಳಿದ್ದಾರೆ. ಈ ಮಹಿಳೆ ಹಂಚಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಶಾಕ್ ಆಗಿದ್ದಾರೆ. krishnankuttyy…

Read More

ಪಾಡ್‌ಕ್ಯಾಸ್ಟ್‌ನಲ್ಲಿ ಪತ್ನಿಗೆ ವಿಚ್ಛೇದನ ನೀಡಿದ ಕೋಟ್ಯಾಧಿಪತಿ ಯೂಟ್ಯೂಬರ್

ಪಾಕಿಸ್ತಾನದ ಅತ್ಯಂತ ಶ್ರೀಮಂತ ಯೂಟ್ಯೂಬರ್ ಮತ್ತು ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾದ ರಜಬ್ ಬಟ್ ಪ್ರಸ್ತುತ ತಮ್ಮ ಖಾಸಗಿ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ಪಾಡ್‌ಕ್ಯಾಸ್ಟ್‌ನಲ್ಲಿ, ಅವರು ತಮ್ಮ ಪತ್ನಿ ಎಮಾನ್ ಫಾತಿಮಾ ಅವರಿಗೆ ವಿಚ್ಛೇದನ ನೀಡುತ್ತಿರುವುದಾಗಿ ಘೋಷಿಸುವ ಮೂಲಕ ಎಲ್ಲರಿಗೂ ಆಘಾತ ನೀಡಿದರು. ಅದರ ನಂತರ, ರಜಬ್ ತಮ್ಮ ಪತ್ನಿಗೆ ಕಾನೂನು ನೋಟಿಸ್ ಅನ್ನು ಸಹ ಕಳುಹಿಸಿದ್ದಾರೆ. ವಿಚ್ಛೇದನದ ನೋಟಿಸ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಎಮನ್ ಈ ಬಗ್ಗೆ ಎಲ್ಲರಿಗೂ ತಿಳಿಸಿದ್ದಾರೆ. ಮದುವೆ ಆಗಿ ಕೇವಲ…

Read More

ಬಾಬರ್​ನ  ಕೈಬಿಟ್ಟಿಲ್ಲ… ಬೇರೆಯವರಿಗೆ ಚಾನ್ಸ್ ನೀಡಲು ಹೊರಗಿಟ್ಟಿದ್ದೀವಿ ಅಷ್ಟೇ..!

ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ್ದ ಪಾಕಿಸ್ತಾನ್ ತಂಡವು ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಗಾಗಿ ಸಜ್ಜಾಗಿದೆ. ಮೂರು ಪಂದ್ಯಗಳ ಈ ಏಕದಿನ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಬಾಬರ್ ಆಝಂಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.  ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ಬಾಬರ್​ನನ್ನು ಕೈ ಬಿಡಲಾಗಿದೆ ಎನ್ನಲಾಗಿತ್ತು. ಆದರೆ ಈ ವರದಿಯನ್ನು ಪಾಕ್ ತಂಡದ ನೂತನ ನಾಯಕ ಶಾಹೀನ್ ಶಾ ಅಫ್ರಿದಿ ಅಲ್ಲೆಗೆಳೆದಿದ್ದಾರೆ. ಪಾಕಿಸ್ತಾನ್ ಏಕದಿನ ತಂಡದಿಂದ ಬಾಬರ್ ಆಝಂ ಅವರನ್ನು ಕೈ…

Read More

ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು

ಮಾಗಡಿ, ಮಾ.11: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಗ್ರಾಮದ ಬಳಿ ನಡೆದಿದೆ. ಕುಣಿಗಲ್ ಮೂಲದ ರಾಮು ಎಂಬ ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ನಿಯಂತ್ರಣ ತಪ್ಪಿದ ಕ್ಯಾಂಟರ್ ಎದುರಿಗೆ ಹೋಗುತ್ತಿದ್ದ ಕಾರು ಹಾಗೂ ಮತ್ತೇರಡು ವಾಹನಗಳಿಗೆ ಸರಣಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರೊಂದು ರಸ್ತೆಯಲ್ಲೇ…

Read More

ಕಂಗನಾ ರನೌತ್ ಮುಂದಿನ ಸಿನಿಮಾಕ್ಕೆ ಆ ಧಾರುಣ ಘಟನೆ ಸ್ಪೂರ್ತಿ

ಕಂಗನಾ ರನೌತ್ (Kangana Ranaut), ಬಾಲಿವುಡ್​​ನ ಪ್ರತಿಭಾವಂತ ನಟಿ. ನಟನೆಗೆ ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ನಟಿ ಕಂಗನಾ ರನೌತ್. ಅತಿ ಹೆಚ್ಚು ರಾಷ್ಟ್ರಪ್ರಶಸ್ತಿ ಪಡೆದ ಭಾರತೀಯ ನಟಿಯರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಐದು ಪ್ರಶಸ್ತಿಗಳನ್ನು ಪಡೆದಿರುವ ಶಬಾನಾ ಆಜ್ಮಿ ಮೊದಲ ಸ್ಥಾನದಲ್ಲಿದ್ದಾರೆ. ಸಂಸದೆಯೂ ಆಗಿರುವ ನಟಿ ಕಂಗನಾ ರನೌತ್, ಕಳೆದ ಕೆಲವಾರು ವರ್ಷಗಳಿಂದಲೂ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಿದ್ದಾರೆ. ಅದರಲ್ಲೂ ಐತಿಹಾಸಿಕ, ಸಾಮಾಜಿಕ ಕತೆಯುಳ್ಳ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಕಂಗನಾ ಹೊಸದೊಂದು ಸಿನಿಮಾನಲ್ಲಿ ನಟಿಸಲಿದ್ದು,…

Read More

ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ

ಚಾಮರಾಜನಗರ, ಮಾರ್ಚ್​​ 11: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಿಸಿದೆ. ಬೆಟ್ಟದ ಆನೆ ತಲೆದಿಂಬದ ಬಳಿ ಚಿರತೆ ಓಡಾಟ ಕಂಡುಬಂದಿದ್ದು, ರಸ್ತೆಯ ಇಳಿಜಾರಿನ ತಿರುವಿನಲ್ಲಿ ತಡೆಗೋಡೆ ಪಕ್ಕದಲ್ಲಿ ಚಿರತೆ ಕುಳಿತಿರುವ ದೃಶ್ಯ ವಾಹನದಲ್ಲಿ ತೆರಳುತ್ತಿದ್ದವರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವರಾತ್ರಿ ಜಾತ್ರೆ ವೇಳೆ ಪಾದಯಾತ್ರಿಕನನ್ನು ಚಿರತೆ ಕೊಂದು ತಿಂದಿತ್ತು. ಈಗ ಮತ್ತೆ ಅದೇ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ರೈಲ್ವೆ ನಿಲ್ದಾಣದಲ್ಲಿ ದಿಕ್ಕೇ ತೋಚದೆ ನಿಂತ ಯುವತಿ, ಸಹಾಯಕ್ಕೆ ಬಂದ ಯೋಧ

ಅಪಾಯಕಾರಿ ಗಡಿಯಲ್ಲಿ ನಿಂತು ಶತ್ರುಗಳ ಹುಟ್ಟಡಗಿಸಿ, ನಮ್ಮನ್ನು ರಕ್ಷಣೆ ಮಾಡುವುದರಿಂದ ಹಿಡಿದು, ಯಾರು ಏನೇ ಅಪಾಯದಲ್ಲಿದ್ದರೂ ಅವರನ್ನು ಕಾಪಾಡಲು ಕೂಡ ಸೈನಿಕ(Soldier)ರು ಸದಾ ಸಿದ್ಧರಿರುತ್ತಾರೆ. ಇತ್ತೀಚೆಗೆ ಮಥುರಾದಿಂದ ದೆಹಲಿಗೆ ಪ್ರಯಾಣಿಸುವಾಗ ಒತ್ತಡದ ಪರಿಸ್ಥಿತಿಯಲ್ಲಿ ಸಿಲುಕಿದ ರೂಪ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ಮಾಡಿದ ವೀಡಿಯೊ ಮತ್ತೊಂದು ಉದಾಹರಣೆಯಾಗಿದೆ. ಆಕೆಯ ಫೋನ್ ಬ್ಯಾಟರಿ ಡೆಡ್ ಆಗಿತ್ತು. ಪೋಷಕರು ಕಾಯುತ್ತಿದ್ದರು ಆದರೆ ಅವರೆಲ್ಲಿದ್ದಾರೆ ಎಂದು ಹುಡುಕಲು ಅವರಿಗೆ ಸಾಧ್ಯವಾಗುತ್ತಿರಲಿಲ್ಲ, ಆಗ ಸೈನಿಕರೊಬ್ಬರು ತಮ್ಮಲ್ಲಿರುವ ಪವರ್ ಬ್ಯಾಂಕ್ ಕೊಟ್ಟು ಮೊಬೈಲ್ ಚಾರ್ಜ್​ ಮಾಡಲು…

Read More

Ugadi Horoscope 2026: ಯುಗಾದಿ ಬಳಿಕ ಈ ರಾಶಿಗೆ ಕೀರ್ತಿ, ಪ್ರತಿಷ್ಠೆ ಮತ್ತು ಅನಿರೀಕ್ಷಿತ ಧನಲಾಭ ಪ್ರಾಪ್ತಿ

ಹಿಂದೂ ಪಂಚಾಂಗದ ಪ್ರಕಾರ, 2026ರ ಯುಗಾದಿ ಹಬ್ಬವನ್ನು ಮಾರ್ಚ್ 19, 2026, ಗುರುವಾರದಂದು ಆಚರಿಸಲಾಗುತ್ತದೆ. ಇದನ್ನು ಹಿಂದೂಗಳ ಪಾಲಿನ ಹೊಸ ವರ್ಷವಾಗಿ ಆಚರಿಸಲಾಗುತ್ತದೆ. ಈ ವರ್ಷ 12 ರಾಶಿಗಳ ಪೈಕಿ ಕೆಲವು ರಾಶಿಗಳಿಗೆ ಸಾಕಷ್ಟು ಶುಭ ಫಲಗಳು ಒದಗಿಬರಲಿದೆ. ಅದರಲ್ಲೂ ಧನುಸ್ಸು ರಾಶಿಯವರಿಗೆ ಸಾಕಷ್ಟು ಶುಭ ಫಲಗಳು ದೊರೆಯಲಿವೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ ಬಸವರಾಜ ಗುರೂಜಿಯವರು ಭವಿಷ್ಯ ನುಡಿದಿದ್ದಾರೆ. 2026ರ ಪರಾಭವನಾಮ ಸಂವತ್ಸರದ ಯುಗಾದಿ ವರ್ಷದ ಧನುಸ್ಸು ರಾಶಿಯ ಸಮಗ್ರ ಫಲಾಫಲಗಳನ್ನು…

Read More

ರಜನೀಕಾಂತ್ ಸಿನಿಮಾನಲ್ಲಿ ಶಾರುಖ್ ಖಾನ್ ಪಾತ್ರ ಏನು?

ರಜನೀಕಾಂತ್ (Rajinikanth) ನಟನೆಯ ‘ಜೈಲರ್ 2’ ಚಿತ್ರೀಕರಣ ಚಾಲ್ತಿಯಲ್ಲಿದೆ. 2023 ರಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದೆ. ಇದೀಗ ಅದೇ ಸಿನಿಮಾದ ಮುಂದಿನ ಭಾಗ ಚಿತ್ರೀಕರಣ ಚಾಲ್ತಿಯಲ್ಲಿದ್ದು, ‘ಜೈಲರ್’ ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ನಟಿಸಿದ್ದ ಕೆಲ ಅತಿಥಿ ನಟರುಗಳು ಈ ಸಿನಿಮಾನಲ್ಲಿಯೂ ನಟಿಸಲಿದ್ದಾರೆ. ಜೊತೆಗೆ ಹೆಚ್ಚುವರಿ ಸೇರ್ಪಡೆಯೆಂದರೆ ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ಅವರು ಸಹ ‘ಜೈಲರ್ 2’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಶಾರುಖ್ ಖಾನ್, ರಜನೀಕಾಂತ್ ಜೊತೆ ನಟಿಸುವ ಸುದ್ದಿ ಈ…

Read More

No Smoking Day 2026: ಧೂಮಪಾನ ತ್ಯಜಿಸಿ, ಆರೋಗ್ಯಕರ ಜೀವನವನ್ನು ನಡೆಸಿ

ಧೂಮಪಾನ (Smoking) ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ, ಲಕ್ಷಾಂತರ ಮಂದಿ ಈ ಚಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಅದೆಷ್ಟೋ ಮಂದಿ ನಿರಂತರ ಸ್ಮೋಕಿಂಗ್‌ ಮಾಡಿ ಶ್ವಾಸಕೋಶದ ಕಾಯಿಲೆ, ಹೃದ್ರೋಗ, ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಸುಂದರ ಜೀವನವನ್ನೇ ಹಾಳುಮಾಡಿಕೊಂಡಿದ್ದಾರೆ. ಧೂಮಪಾನದ ಈ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು, ಧೂಮಪಾನವನ್ನು ತ್ಯಜಿಸಲು ಜನರನ್ನು ಪ್ರೇರೇಪಿಸಲು ಪ್ರತಿವರ್ಷ ಮಾರ್ಚ್‌ ತಿಂಗಳ ಎರಡನೇ ಬುಧವಾರದಂದು ಧೂಮಪಾನ ನಿಷೇಧ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು ಎಂಬುದರ…

Read More