Headlines

nagaraj11081993

ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ

ದರ್ಶನ್ ಬಗ್ಗೆ ಜನರಿಗೆ ಯಾವ ರೀತಿ ಕ್ರೇಜ್ ಇದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ದರ್ಶನ್ (Darshan) ಫೋಟೋ ಎದುರು ಈ ಜೋಡಿ ಮದುವೆ ಆಗಿದೆ. ಮದುವೆ ಬಳಿಕ ನವ ದಂಪತಿ ರಾಜರಾಜೇಶ್ವರಿ ನಗರದ ದರ್ಶನ್ ಮನೆ ಮುಂದೆ ಬಂದಿದ್ದಾರೆ. ದರ್ಶನ್ ಅವರ ಆಶೀರ್ವಾದ ಪಡೆಯಬೇಕು ಎಂಬುದು ಈ ಜೋಡಿಯ ಆಸೆ ಆಗಿತ್ತು. ಅಚ್ಚರಿ ಎಂದರೆ ಹುಡುಗನ ಹೆಸರು ದರ್ಶನ್, ಹುಡುಗಿ ಹೆಸರು ವಿಜಯಲಕ್ಷ್ಮಿ! ‘ದರ್ಶನ್ ಫೋಟೋ ಮುಂದೆ ತಾಳಿ ಕಟ್ಟಿದ್ದು. ಅವರ ಮನೆ ಎದುರೇ ತಾಳಿ…

Read More

ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಇಂಡೋನೇಷ್ಯಾದಿಂದ 200-350 ಬಿಲಿಯನ್ ಡಾಲರ್ ಡೀಲ್

ನವದೆಹಲಿ, ಮಾರ್ಚ್ 9: ಭಾರತದ ಬತ್ತಳಿಕೆಯಲ್ಲಿರುವ ಯುದ್ಧಾಸ್ತ್ರಗಳಲ್ಲಿ ಪ್ರಮುಖವಾಗಿರುವ ಬ್ರಹ್ಮೋಸ್ ಮಿಸೈಲ್ ಸಿಸ್ಟಂ (Brahmos missile system) ಅನ್ನು ಖರೀದಿಸಲು ಇಂಡೋನೇಷ್ಯಾ ಒಪ್ಪಂದ ಮಾಡಿಕೊಂಡಿದೆ. ಈ ವಿಚಾರವನ್ನು ಇಂಡೋನೇಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರರಾದ ರಿಕೋ ರಿಕಾರ್ಡೊ ಸಿರಾಯ್ಟ್ ಅವರೇ ಖುದ್ದಾಗಿ ಮಾಹಿತಿ ನೀಡಿದ್ದಾರೆ. 2023ರಲ್ಲೇ ಭಾರತ ಮತ್ತು ಇಂಡೋನೇಷ್ಯಾ ನಡುವೆ ಈ ಒಪ್ಪಂದ ಸಂಬಂಧ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿತ್ತು. ಈ ಡೀಲ್ ಸುಮಾರು 200 ಮಿಲಿಯನ್ ಡಾಲರ್​ನಿಂದ 350 ಮಿಲಿಯನ್ ಡಾಲರ್ ಇರಬಹುದು. ಅಂದರೆ…

Read More

ಟಿ20 ವಿಶ್ವಕಪ್ ಗೆದ್ದು ನಿವೃತ್ತಿಯ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

2024 ರ ಟಿ20 ವಿಶ್ವಕಪ್ (T20 World Cup) ಮುಗಿದ ಬಳಿಕ ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕನಾಗಿ ತಂಡವನ್ನು ದಾಖಲೆಯ ಗೆಲುವುಗಳತ್ತ ಮುನ್ನಡೆಸಿದ್ದಾರೆ. ಆದಾಗ್ಯೂ ಆಟಗಾರನಾಗಿ ಸೂರ್ಯಕುಮಾರ್ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಬರೋಬ್ಬರಿ 1 ವರ್ಷದಿಂದ ರನ್ ಬರ ಎದುರಿಸಿದ್ದರು. ಆದರೆ ವಿಶ್ವಕಪ್ ಸಮೀಪವಾಗುತ್ತಿದ್ದಂತೆ ಫಾರ್ಮ್​ ಕಂಡುಕೊಂಡಿದ್ದ ಸೂರ್ಯ, ಇದೀಗ ತಂಡವನ್ನು ದಾಖಲೆಯ ಗೆಲುವಿನತ್ತ ಮುನ್ನಡೆಸಿದ್ದಾರೆ. ಸೂರ್ಯ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ…

Read More

ಸ್ಕೂಟರ್ ನಿರಾಕರಿಸಿದ್ದಕ್ಕೆ ಗೆಳತಿ ಮತ್ತು ಆಕೆಯ ಪೋಷಕರ ಮೇಲೆ ಬೆಂಕಿ ಹಚ್ಚಿದ ಬೆಂಗಳೂರಿನ ವ್ಯಕ್ತಿ

ಬೆಂಗಳೂರು, ಮಾ.9: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ತಾರಕಕ್ಕೇರಿ, ಯುವತಿ ಮತ್ತು ಆಕೆಯ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಸಂಬಂಧ ನಂದಿನಿ ಲೇಔಟ್ ನಿವಾಸಿ ಪಾಂಡುರಂಗ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತರಬನಹಳ್ಳಿಯಲ್ಲಿ ವಾಸವಾಗಿರುವ ಸುಮಲತಾ (27) ಮತ್ತು ಪಾಂಡುರಂಗ ನಡುವೆ ಸಂಬಂಧವಿತ್ತು ಎನ್ನಲಾಗಿದೆ. ಸೋಮವಾರ ಸುಮಲತಾ ಮನೆಗೆ ಬಂದ ಪಾಂಡುರಂಗ, ಆಕೆಯ ದ್ವಿಚಕ್ರ ವಾಹನವನ್ನು (ಸ್ಕೂಟರ್) ನೀಡುವಂತೆ ಕೇಳಿದ್ದಾನೆ. ಸುಮಲತಾ ಸ್ಕೂಟರ್ ನೀಡಲು ನಿರಾಕರಿಸಿದಾಗ ಇಬ್ಬರ…

Read More

ಸೋಂಪು ನೀರು ಕುಡಿಯುವುದರಿಂದ ದೇಹ ತಂಪಾಗಿರುವುದು ಮಾತ್ರವಲ್ಲ ಈ ಪ್ರಯೋಜನಗಳೂ ಲಭಿಸುತ್ತದೆ‌

ಬೇಸಿಗೆ ಕಾಲ (summer) ಆರಂಭವಾಗಿದೆ. ಈ ಋತುವಿನಲ್ಲಿ ವಿಪರೀತ ಶಾಖ ಇರುವ ಕಾರಣ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆದ, ಜೀರ್ಣಕಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ದೇಹವನ್ನು ತಂಪಾಗಿಡಲು, ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಲು ಜನ ಎಳನೀರು, ನೀರು, ಕಲ್ಲಂಗಡಿಯಂತಹ ಕಾಲೋಚಿತ ಹಣ್ಣುಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಸುಡು ಬೇಸಿಗೆಯಲ್ಲಿ ಸೋಂಪು ನೀರನ್ನೂ ಕುಡಿಯಬಹುದು….

Read More

ದೆಹಲಿ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು

ನವದೆಹಲಿ, (ಮಾರ್ಚ್ 09): ಕರ್ನಾಟಕದಲ್ಲಿ (Karnataka) ಅಧಿಕಾರ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗಿದೆ. ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಬಜೆಟ್ ಮುಗಿತುತ್ತಿದ್ದಂಯೆಯೇ ಡಿಕೆಶಿ ಮತ್ತಷ್ಟು ಆ್ಯಕ್ಟೀವ್ ಆಗಿರುವುದು ಕುತೂಲಹಕ್ಕೆ ಕಾರಣವಾಗಿದೆ. ಮಾರ್ಚ್ 08 (ಭಾನುವಾರ) ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರ್ರದಲ್ಲಿನ ವಿವಿಧ ಅಭಿವೃದ್ಧಿ…

Read More

ಕಾಣದಂತೆ ಇದ್ದ ಖರ್ಗ್ ದ್ವೀಪದ ಮೇಲೆ ಅಮೆರಿಕದ ಕಣ್ಣು; ಏನದರ ಮಹತ್ವ?

ನವದೆಹಲಿ, ಮಾರ್ಚ್ 9: ಯುದ್ಧದ ತೀವ್ರತೆ ಹೆಚ್ಚುತ್ತಿರುವಂತೆಯೇ ಇರಾನ್ ಅನ್ನು ಕಟ್ಟಿಹಾಕಲು ಅಮೆರಿಕ ವಿವಿಧ ಮಾರ್ಗೋಪಾಯಗಳನ್ನು ಅವಲೋಕಿಸುತ್ತಿದೆ. ಇರಾನ್​ನ ಹಲವು ಮಿಲಿಟರಿ ಮತ್ತು ಪರಮಾಣು ಸೌಕರ್ಯಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಪಡೆಗಳಿಂದ ಸಾಕಷ್ಟು ದಾಳಿಗಳಾಗಿವೆ. ಈ ಮಧ್ಯೆ ಅಮೆರಿಕ ಹೊಸ ತಂತ್ರ ಹಾಕಿದೆ. ಇರಾನ್​ನ ಆರ್ಥಿಕತೆಯ ಬೆನ್ನೆಲುಬಾಗಿರುವ ಒಂದು ದ್ವೀಪದ ಮೇಲೆ ಟ್ರಂಪ್ ಕಣ್ಣಾಕಿದ್ದಾರೆ. ಅದು ಖರ್ಗ್ ಐಲ್ಯಾಂಡ್ (Kharg Island). ಖರ್ಗ್ ದ್ವೀಪವು ಇರಾನ್​ನ ಪ್ರಮುಖ ರಫ್ತು ಅಡ್ಡೆ ಎನಿಸಿದೆ. ಈ ದ್ವೀಪವನ್ನು ವಶಕ್ಕೆ…

Read More

‘ಕಲ್ಕಿ 2898 AD’ ಚಿತ್ರಕ್ಕೆ ಹೀರೋಗಿಂತಲೂ ಹೆಚ್ಚು ಸಂಭಾವನೆ ಪಡೆದ ಕಮಲ್ ಹಾಸನ್

2024ರ ಬ್ಲಾಕ್‌ ಬಸ್ಟರ್ ಸಿನಿಮಾ ‘ಕಲ್ಕಿ 2898 AD’ (Kalki 2898 AD) ಕೇವಲ ದೃಶ್ಯ ವೈಭವದಿಂದ ಮಾತ್ರವಲ್ಲದೇ, ಅದರಲ್ಲಿ ನಟಿಸಿದ ಕಲಾವಿದರ ಸಂಭಾವನೆಯ ವಿಚಾರವಾಗಿಯೂ ಈಗ ಸುದ್ದಿಯಲ್ಲಿದೆ. ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಅವರಂತಹ ದಿಗ್ಗಜರ ನಡುವೆ, ತಮಿಳಿನ ಸ್ಟಾರ್ ಹೀರೋ ಕಮಲ್ ಹಾಸನ್ (Kamal Haasan) ಅವರು ಪಡೆದ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ಈಗ ಅವರ ಆಪ್ತ ಗೆಳೆಯ ಯುಗಿ ಸೇತು ತೆರೆ ಎಳೆದಿದ್ದಾರೆ. ಕಮಲ್ ಹಾಸನ್ ಅವರ ದಶಕಗಳ ಕಾಲದ…

Read More

ಅರ್ಚಕ ಮಾಂಸ ತಿನ್ನುವ ಫೋಟೋ ವೈರಲ್​: ದೇವಾಲಯದಿಂದ ಹೊರ ಎಳೆದು ಥಳಿಸಿದ ಗುಂಪು

ಕಾನ್ಪುರ, ಮಾ.9: ಉತ್ತರ ಪ್ರದೇಶದ ಕಾನ್ಪುರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೇವಾಲಯದ ಅರ್ಚಕರೊಬ್ಬರನ್ನು ಜನರ ಗುಂಪು ಮನಬಂದಂತೆ ಥಳಿಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಹೋಟೆಲ್‌ವೊಂದರಲ್ಲಿ ಅರ್ಚಕರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಹಿಂಸಾಚಾರ ನಡೆದಿದೆ. ಕಾನ್ಪುರದ ಭೂತೇಶ್ವರ ದೇವಾಲಯದ ಅರ್ಚಕ ಪ್ರಶಾಂತ್ ಗಿರಿ  ಮೇಲೆ ಸುಮಾರು 50 ರಿಂದ 60 ಜನರ ಗುಂಪೊಂದು ದಾಳಿ ನಡೆಸಿದೆ. ಅರ್ಚಕರನ್ನು ಅವರ ಕೊಠಡಿಯಿಂದ ಹೊರಗೆ ಎಳೆದುಕೊಂಡು…

Read More

ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ಕಳ್ಳತನ: ಅಂತಾರಾಜ್ಯ ಗ್ಯಾಂಗ್​ ಪೊಲೀಸ್​​ ಬಲೆಗೆ

ಬೆಳಗಾವಿ, ಮಾರ್ಚ್​​ 09: ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ವಾಹನ ಕಳವು ಮಾಡುತ್ತಿದ್ದ ಖತರ್ನಾಕ್​​ ಅಂತಾರಾಜ್ಯ ಕಳ್ಳರ ಗ್ಯಾಂಗ್​​ನ ಭೇದಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ಸು ಕಂಡಿದ್ದಾರೆ. ವಾಹನವೊಂದರ ಕಳ್ಳತನ ಪ್ರಕರಣದ ಬೆನ್ನು ಬಿದ್ದ ಖಾಕಿ ಬರೋಬ್ಬರಿ 1 ಕೋಟಿ ಮೌಲ್ಯದ 21 ವಾಹನಗಳನ್ನ ಜಪ್ತಿ ಮಾಡಿದೆ. ಒಟ್ಟು 8 ಜನ ಆರೋಪಿಗಳ ಪೈಕಿ ಐವರನ್ನು ಬಂಧಿಸಿದ್ದು, ನಾಪತ್ತೆಯಾಗಿರುವ ಉಳಿದ ಮೂವರು ಆರೋಪಿಗಳಿಗಾಗಿಯೂ ಬಲೆ ಬೀಸಿದೆ. ಯುಸೂಫ್ ಖಾನ್, ಜಾಕೀರ್ ಹುಸೇನ್, ಶಫೀಕ್ ಅಹಮ್ಮದ್, ಆಜಾದ್ ಹಾಗೂ ಬಶೀರ್…

Read More