All posts by nagaraj11081993

ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ ರಿಲೀಫ್

ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ ರಿಲೀಫ್

ಬೆಂಗಳೂರು, (ಮಾರ್ಚ್ 31): ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ (Karnataka Government)  ಮಹತ್ವದ ನಿರ್ಧಾರ ಕೈಗೊಂಡಿದೆ.  ಹೌದು…ಬಿಸಿಲಿನ ತಾಪಮಾನದ  (summer temperature) ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ (Kittur Karnataka) ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ (Kalyana Karnataka) 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಸ್ತುತ ಇರುವ ಕಚೇರಿ ವೇಳಾಪಟ್ಟಿಯ ಬದಲಾಗಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ನಿಗದಿ ಮಾಡಿ ಇಂದು (ಮಾರ್ಚ್ 31) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ.

2 ತಿಂಗಳು ಸರ್ಕಾರಿ ಕಚೇರಿ ಸಮಯ ಚೇಂಜ್

ಬೆಳಗಾವಿ ವಿಭಾಗದ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿದೆ. ಇನ್ನು ಕಲಬುರಗಿ ವಿಭಾಗಕ್ಕೆ ಒಳಪಡುವ ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ  ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1:30ರ ತನಕ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಸರ್ಕಾರಿ ಕಚೇರಿ ಸಮಯ ಬದಲಾವಣೆ ಜಾರಿಯಲ್ಲಿ ಇರಲಿದೆ.

ಇದನ್ನೂ ಓದಿ: ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಶಾಕ್​​: ಎಸ್ಕಾಂಗಳಿಂದ ಹಳೆ ಬಾಕಿ ವಸೂಲಿ; ಯಾವ ವರ್ಗಕ್ಕೆ ಎಷ್ಟು ದರ ಏರಿಕೆ?

ಆದೇಶದಲ್ಲೇನಿದೆ?

ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ, 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಲಾಗಿದೆ. ಪ್ರಸ್ತಾಪಿಸಿದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದನ್ನು ಪರಿಗಣಿಸಿ, ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಗಿನಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2026ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾವಣೆ ಮಾಡಿ ಆದೇಶಿಸಿದೆ.

ಇನ್ನು ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಪ, ಅಡೆತಡೆಯಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸತಕ್ಕದ್ದು, ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಏಪ್ರಿಲ್​​​​​​​​​​​​ನಲ್ಲಿ ಈ ರಾಶಿಯವರ ಜೀವನದಲ್ಲಿ ಗುರು, ಶುಕ್ರ, ಮಂಗಳನ ಆಗಮನ; ಆದರೆ ಇವನ ಬಲ ಇಲ್ಲ

ಕರ್ಕಾಟಕ ರಾಶಿಯವರಿಗೆ 2026 ಏಪ್ರಿಲ್ ನಲ್ಲಿ ಗ್ರಹಗತಿಗಳ ದೃಷ್ಟಿಯಿಂದ ಮತ್ತು ಸಂಚಾರದಿಂದ ವಿಶೇಷ ಬದಲಾವಣೆಯಾಗಲಿದೆ. ಈ ತಿಂಗಳು ನಿಮ್ಮ ರಾಶ್ಯಾಧಿಪತಿ ಚಂದ್ರನ ಸಂಚಾರದೊಂದಿಗೆ, ಗುರುವಿನಿಂದ ದ್ವಿತೀಯ, ಶುಕ್ರನಿಂದ ತೃತೀಯ, ಸೂರ್ಯ ಮತ್ತು ಬುಧನಿಂದ ಚತುರ್ಥ, ಮಂಗಳ ಹಾಗೂ ಶನಿಯಿಂದ ಪಂಚಮದಲ್ಲಿರುವ ಕಾರಣ ಎಲ್ಲ ಗ್ರಹರ ಪ್ರಭಾವವೂ ಈ ರಾಶಿಯ ಮೇಲೆ ಇರಲಿದೆ. ಮಾನಸಿಕ ಒತ್ತಡವನ್ನು ಎಲ್ಲ ಕಾರ್ಯದಲ್ಲಿಯೂ ಅನುಭವಿಸಬೇಕಾಗುವುದು.

ಉದ್ಯೋಗ ಮತ್ತು ವೃತ್ತಿ ಜೀವನ:

​ಉದ್ಯೋಗಿಗಳಿಗೆ ಈ ತಿಂಗಳು ಪ್ರಗತಿದಾಯಕವಾಗಿದೆ. ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ದೊರೆಯುವ ಸಾಧ್ಯತೆ ಇದೆ. ವೃತ್ತಿ ಜೀವನದಲ್ಲಿ ವರ್ಗಾವಣೆ ಅಥವಾ ಬಡ್ತಿಯ ನಿರೀಕ್ಷೆಯಲ್ಲಿದ್ದವರಿಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ. ಅತಿಯಾದ ಆತ್ಮವಿಶ್ವಾಸದಿಂದ ಸಹೋದ್ಯೋಗಿಗಳೊಂದಿಗೆ ಘರ್ಷಣೆ ಮಾಡಿಕೊಳ್ಳಬೇಡಿ. ಸಮಾಧಾನದಿಂದ ಕೆಲಸ ನಿರ್ವಹಿಸುವುದು ಉತ್ತಮ.

ವಿದ್ಯಾಭ್ಯಾಸ:

​ವಿದ್ಯಾರ್ಥಿಗಳಿಗೆ ಈ ತಿಂಗಳು ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರಂಭದಲ್ಲಿ ಸ್ವಲ್ಪ ಗಮನ ಹರಿಯುವ ಸಾಧ್ಯತೆ ಇದ್ದರೂ, ದ್ವಿತೀಯಾರ್ಧದಲ್ಲಿ ಪಠ್ಯದ ಮೇಲೆ ಹಿಡಿತ ಸಾಧಿಸುವಿರಿ. ಉನ್ನತ ವ್ಯಾಸಂಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಉತ್ತಮ ಮಾರ್ಗದರ್ಶನ ಸಿಗಲಿದೆ. ನಿರಂತರ ಅಭ್ಯಾಸವೊಂದೇ ನಿಮ್ಮ ಯಶಸ್ಸಿನ ಸೂತ್ರ.

ಹಣಕಾಸು ಸ್ಥಿತಿ:

​ಆರ್ಥಿಕವಾಗಿ ಈ ತಿಂಗಳು ಸಬಲರಾಗುವಿರಿ. ಹಳೆಯ ಹೂಡಿಕೆಗಳಿಂದ ಲಾಭ ಬರುವ ಸಾಧ್ಯತೆ ಇದೆ. ಆದಾಯದ ಮೂಲಗಳು ಹೆಚ್ಚಾಗಲಿವೆ. ಭೂಮಿ ಅಥವಾ ಸ್ಥಿರಾಸ್ತಿಯಲ್ಲಿ ಹೂಡಿಕೆ ಮಾಡಲು ಇದು ಸಕಾಲ. ಹಣದ ಹರಿವು ಚೆನ್ನಾಗಿದ್ದರೂ, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಅನಿವಾರ್ಯ.

ವಿವಾಹ ಮತ್ತು ಕೌಟುಂಬಿಕ ಜೀವನ:

​ಕುಟುಂಬದಲ್ಲಿ ಮಂಗಳ ಕಾರ್ಯಗಳು ಜರುಗುವ ಸೂಚನೆ ಇದೆ. ಕಂಕಣ ಬಲ ಕೂಡಿ ಬರಲಿದೆ. ಸೂಕ್ತ ಸಂಬಂಧಗಳು ಹುಡುಕಿಕೊಂಡು ಬರಬಹುದು. ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು. ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ.

ವಿದೇಶ ಪ್ರವಾಸ:

​ವಿದೇಶಕ್ಕೆ ಹೋಗುವ ಹಂಬಲ ಇರುವವರಿಗೆ ಈ ತಿಂಗಳು ಶುಭ ಸುದ್ದಿಯೊಂದು ಕಾಯುತ್ತಿದೆ. ತಾಂತ್ರಿಕ ಕಾರಣಗಳಿಂದ ನಿಂತುಹೋಗಿದ್ದ ವೀಸಾ ಅಥವಾ ಪಾಸ್‌ಪೋರ್ಟ್ ಕೆಲಸಗಳು ವೇಗ ಪಡೆದುಕೊಳ್ಳಲಿವೆ. ಉದ್ಯೋಗದ ನಿಮಿತ್ತ ಅಲ್ಪಾವಧಿಯ ವಿದೇಶ ಪ್ರವಾಸದ ಯೋಗವಿದೆ.

ಸಾಲದ ಬಾಧೆ:

​ಸಾಲದ ಸುಳಿಯಲ್ಲಿ ಸಿಲುಕಿರುವವರಿಗೆ ಸ್ವಲ್ಪ ಸಮಾಧಾನಕರ ಸುದ್ದಿ ಸಿಗಲಿದೆ. ಆದಾಯ ಹೆಚ್ಚಾಗುವುದರಿಂದ ಹಳೆಯ ಸಾಲಗಳನ್ನು ತೀರಿಸಲು ಯೋಜನೆ ರೂಪಿಸುವಿರಿ. ಸದ್ಯಕ್ಕೆ ಹೊಸದಾಗಿ ದೊಡ್ಡ ಮೊತ್ತದ ಸಾಲ ಮಾಡುವುದು ಬೇಡ. ಜಾಮಿನು ಹಾಕುವ ಮುನ್ನ ಎಚ್ಚರಿಕೆ ವಹಿಸಿ.

​ಈ ತಿಂಗಳು ನೀವು ಮಾನಸಿಕ ಶಾಂತಿಗಾಗಿ ಶಿವನ ಆರಾಧನೆ ಅಥವಾ ನಮಃ ಶಿವಾಯ ಮಂತ್ರ ಜಪ ಮಾಡುವುದು ಉತ್ತಮ. ಸೋಮವಾರದಂದು ಬಿಳಿ ಬಣ್ಣದ ವಸ್ತುಗಳನ್ನು ದಾನ ಮಾಡುವುದರಿಂದ ಶುಭ ಫಲಗಳು ಹೆಚ್ಚಾಗಲಿವೆ.

– ಲೋಹಿತ ಹೆಬ್ಬಾರ್

Source link

ವಿಮಾನ ನಿಲ್ದಾಣದಲ್ಲೇ ಧೂಮಪಾನ; ಸಿಬ್ಬಂದಿ ಎಚ್ಚರಿಸಿದರೂ ಡೋಂಟ್ ಕೇರ್! ವೀಡಿಯೋ ವೈರಲ್

ಬೆಂಗಳೂರು, ಮಾರ್ಚ್​ 31: ವಿಮಾನ ನಿಲ್ದಾಣದಲ್ಲಿ ಧೂಮಪಾನ ಮಾಡಿರುವ ವೈರಲ್ ವೀಡಿಯೋ (Airport Smoking Video) ಒಂದು ತೀವ್ರ ಆಕ್ರೋಶ ಹುಟ್ಟುಹಾಕಿದೆ. ವಿಡಿಯೋದಲ್ಲಿ ಒಬ್ಬ ವ್ಯಕ್ತಿ ವಿಮಾನ ನಿಲ್ದಾಣದ ಟರ್ಮಿನಲ್ ಪ್ರದೇಶದಲ್ಲಿ ಅಸಡ್ಡೆಯಿಂದ ಧೂಮಪಾನ ಮಾಡುತ್ತಿರುವುದು ಕಾಣಿಸಿಕೊಂಡಿದೆ. ಈ ಘಟನೆ ಮಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ಹೇಳಲಾಗಿದ್ದು, ಇನ್ನೂ ದೃಢಪಟ್ಟಿಲ್ಲ. ಈ ವೀಡಿಯೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿತ್ರಿಸಲಾಗಿದೆ ಎಂಬ ಊಹಾಪೋಹಗಳು ಹರಿದಾಡಿತ್ತು. ಆದರೆ ಈ ವೀಡಿಯೋ ಬೆಂಗಳೂರಿನಲ್ಲಿ ನಡೆದಿದ್ದಲ್ಲ ಎಂದು ತಿಳಿದು ಬಂದಿದೆ.

ಸಿಬ್ಬಂದಿ ಎಚ್ಚರಿಸಿದರೂ ಕೇಳದ ವ್ಯಕ್ತಿ

ವೈರಲ್ ವೀಡಿಯೋದಲ್ಲಿರುವ ವ್ಯಕ್ತಿಯನ್ನು ಉತ್ತಕರ್ಷ್ ಗೌತಮ್ ಎಂದು ಗುರುತಿಸಲಾಗಿದ್ದು, ವಿಡಿಯೋದಲ್ಲಿ ಆತ ಟಾರ್ಮಾಕ್ ಪ್ರದೇಶದಲ್ಲಿ ವಿಮಾನದ ಹತ್ತಿರವೇ ಧೂಮಪಾನ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಏರ್‌ಲೈನ್ ಕಚೇರಿ ಒಳಗಿನಿಂದ ಚಿತ್ರೀಕರಿಸಲ್ಪಟ್ಟ ದೃಶ್ಯದಲ್ಲಿ, ಗಾಜಿನ ಕಿಟಕಿಯ ಮೂಲಕ ಸಿಬ್ಬಂದಿಯ ಮುಖದತ್ತಲೇ ಧೂಮವನ್ನು ಹೊರಬಿಡುತ್ತಿರುವುದು ಕಂಡುಬಂದಿದೆ. ಸಿಬ್ಬಂದಿ ಇಲ್ಲಿ ಧೂಮಪಾನ ಮಾಡಬಾರದು ಎಂದು ಎಚ್ಚರಿಸಿದರೂ, ಆತ ನಿಯಮಗಳನ್ನು ಲೆಕ್ಕಿಸದೇ ವರ್ತಿಸಿದ್ದಾನೆ ಎನ್ನಲಾಗಿದೆ.

ಇನ್ನೊಂದು ದೃಶ್ಯದಲ್ಲಿ, ಆ ವ್ಯಕ್ತಿ ಏರ್‌ಲೈನ್ ಸಿಬ್ಬಂದಿಯ ಕಡೆಗೆ ಹಣ ಎಸೆದು ಅಸಭ್ಯವಾಗಿ ನಡೆದುಕೊಂಡಿರುವುದು ಕಂಡುಬಂದಿದೆ. ಈ ನಡೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದೆ. ಕೆಲವರು ಆ ವ್ಯಕ್ತಿ ಗೂಗಲ್ ಉದ್ಯೋಗಿ ಎಂದು ಹೇಳಿಕೊಂಡಿದ್ದು, ಈ ಆರೋಪ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ನೆಟ್ಟಿಗರು ವಿಮಾನ ನಿಲ್ದಾಣಗಳು ಅತ್ಯಂತ ಭದ್ರತಾ ವಲಯವಾಗಿರುವುದರಿಂದ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ್ದಲ್ಲದೆ, ಬಿಟ್ಟುಕಳುಹಿಸಿದ ಪೊಲೀಸರನ್ನೇ ನಿಂದಿಸಿದಾತನ ವಿರುದ್ಧ ಎಫ್​ಐಆರ್

ಹಾರುತ್ತಿದ್ದ ವಿಮಾನದ ತುರ್ತು ಬಾಗಿಲನ್ನು ತೆಗೆದಿದ್ದವನೂ ಇವನೇ!

ಇದಲ್ಲದೆ, ಲೈಟರ್‌ನ್ನು ಆತ ವಿಮಾನ ನಿಲ್ದಾಣದೊಳಗೆ ಹೇಗೆ ತಂದನು ಎಂಬ ಪ್ರಶ್ನೆಯೂ ಉದ್ಭವಿಸಿದೆ. ಈ ವ್ಯಕ್ತಿ ಹಲವು ಕಡೆ ಇದೇ ರೀತಿ ವರ್ತಿಸಿದ್ದಾನೆಂಬ ಆರೋಪವೂ ಕೇಳಿ ಬರುತ್ತಿದೆ. ಮಾರ್ಚ್​ 22ರಂದು ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿಯೂ ಸಹ ಇದೇ ವ್ಯಕ್ತಿ ಹಾರುತ್ತಿದ್ದ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ್ದ ಎನ್ನಲಾಗಿದೆ. ಹೋಗಲಿ ಎಂದು ಬಿಟ್ಟು ಕಳುಹಿಸಿದ ಬೆಂಗಳೂರು ಪೊಲೀಸರನ್ನೇ ‘ಬಸ್ಟರ್ಡ್ಸ್’ ಎಂದು ನಿಂದಿಸಿದ್ದಲ್ಲದೆ, ಎಕ್ಸ್ (X) ಖಾತೆಯಲ್ಲಿ ಪೊಲೀಸರ ವಿರುದ್ಧ ಸುಳ್ಳು ಆರೋಪ ಮಾಡಿ ಪೋಸ್ಟ್ ಕೂಡ ಹಾಕಿದ್ದ ಆರೋಪಿಯ ವಿರುದ್ಧ ಕೆಂಪೇಗೌಡ ಏರ್‌ಪೋರ್ಟ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬೆಂಗಳೂರು ಏರ್‌ಪೋರ್ಟ್‌ಗೆ ಮಾಟ ಮಂತ್ರ ಕೇಸಿಗೆ ಟ್ವಿಸ್ಟ್: ಸ್ವಯಂ ಘೋಷಿತ ಬಾಬಾ ಅರೆಸ್ಟ್!

ಬೆಂಗಳೂರು, (ಮಾರ್ಚ್ 31): ಕೆಐಎಎಲ್ (kempegowda international airport bengaluru) ಆಡಳಿತ ಕಚೇರಿಯ ವಿಳಾಸಕ್ಕೆ ಪೋಸ್ಟ್ ಆಫೀಸ್ ಮೂಲಕ ಪಾರ್ಸೆಲ್ ಒಂದು ಬಂದಿತ್ತು. ವಿಳಾಸ ಸರಿಯಾಗಿದ್ದರಿಂದ ಸಿಬ್ಬಂದಿ ಕುತೂಹಲದಿಂದ ಅದನ್ನು ತೆರೆದಿದ್ದಾರೆ. ಆದರೆ ಬಾಕ್ಸ್‌ನೊಳಗೆ ಇದ್ದದ್ದು ಯಾವುದೋ ಬೆಲೆಬಾಳುವ ವಸ್ತುವಲ್ಲ, ಬದಲಾಗಿ ಭೀತಿ ಹುಟ್ಟಿಸುವ ಮಾಟ-ಮಂತ್ರದ ಸಾಮಗ್ರಿಗಳು ಇದ್ದವು. ಇದರಿಂದ ಸಿಬ್ಬಂದಿ ಬೆಚ್ಚಿಬಿದ್ದಿದ್ದು, ಪೂಜೆ ಮಾಡಿ ಪಾರ್ಸೆಲ್ ಮಾಡಲಾಗಿದ್ದ ಈ ವಸ್ತುಗಳನ್ನು ಕಂಡು ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದರು. ಇದೀಗ ಈ ಪಾರ್ಸೆಲ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಬ್ಲ್ಯಾಕ್ ಮಾಜಿಕ್ ಪಾರ್ಸೆಲ್ ​ ಹಿಂದಿನ ರೂವಾರಿ ಸ್ವಯಂ ಘೋಷಿತ ಬಾಬಾನನ್ನು ಬಂಧಿಸಲಾಗಿದೆ.

ಪಾರ್ಸೆಲ್ ಬಂದಿದ್ದ ಬಾಕ್ಸ್​ ಸಂಬಂಧ ಕೆಐಎಎಲ್ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಾರ್ಯಚರಣೆ ನಡೆಸಿ ಪಾರ್ಸೆಲ್ ಕಳುಹಿಸಿದ್ದ ವ್ಯಕ್ತಿಯನ್ನು ಹೈದರಾಬಾದ್​​ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮಾಟ ಮಂತ್ರ ಮಾಡಿಸಿದ ರೀತಿಯ ಪಾರ್ಸೆಲ್ ಕಳುಹಿಸಿದ್ದು ನ್ಯೂಜಿಲೆಂಡ್ ಸುಬಾಷ್ ಜೈ ಅಜೀಜ್ ಎಂದು ಗುರುತಿಸಲಾಗಿದೆ. ಇನ್ನು ವಿಚಾರಣೆ ನಡೆಸಿದಾಗ ತಾನೊಬ್ಬ ದೇವಮಾನವ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನ ಏರ್​ಪೋರ್ಟ್​ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್​ ನೋಡಿ ಸಿಬ್ಬಂದಿ ಶಾಕ್

ವಿಮಾನ ದುರಂತ ಸಂಭವಿಸದಿರಲಿ ಎಂದು ಪೂಜೆ

ಹೈದರಾಬಾದ್​​ನಲ್ಲಿ ಸಿಕ್ಕ ಸುಬಾಷ್ ಜೈ ಅಜೀಜ್ ನನ್ನು ಹಿಡಿದು ಬೆಂಗಳೂರು ಕರೆತಂದು ವಿಚಾರಣೆ ನಡೆಸಿದಾಗ ತಾನೊಬ್ಬ ಬಾಬಾ ಎಂದು ಹೇಳಿಕೊಂಡಿದ್ದಾನೆ. ಅಲ್ಲದೇ ಬ್ಲ್ಯಾಕ್ ಮಾಜಿಕ್ ರೀತಿಯ ಪಾರ್ಸೆಲ್ ಏಕೆ ಕಳುಹಿಸಿದ್ದು ಎಂದು ಕೇಳಿದಾಗ ವಿಮಾನ ದುರಂತ ಸಂಭವಿಸದಿರಲಿ ಎಂದು ಪೂಜೆ ಮಾಡಿ ಕಳುಹಿಸಿರುವುದಾಗಿ ಹೇಳಿದ್ದಾನೆ.

ಈ ಹಿಂದೆ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತ ಬೆಂಗಳೂರಿನಲ್ಲಿ ನಡೆಯದಿರಲಿ ಎಂದು ಪೂಜೆ ಮಾಡಿದ್ದು, ತಾನು ಬಳಸಿದ್ದ ಹಾರ, ಅರಿಶಿನ ಕುಂಕುಮ ಹಾಗೂ ಪೋಟೋಗಳನ್ನ ನೀಡಿದ್ದಾಗಿ ಹೇಳಿದ್ದಾನೆ. ಜೊತೆಗೆ ನಾನೊಬ್ಬ ದೇವ ಮಾನವನಾಗಿದ್ದು, ನಾನು ಹಾಕಿದ ಹಾರವನ್ನ ಒಳ್ಳೆ ಕೆಲಸಗಳಿಗೆ ನೀಡುತ್ತೇನೆ. ಎಲ್ಲೆಂದರಲ್ಲಿ ಬಿಸಾಕಲ್ಲ ಎಂದಿದ್ದಾನೆ.

ಯುಪಿಯಿಂದ ಬೆಂಗಳೂರಿಗೆ ಬಂದಿದ್ದ

ಈ ಸುಬಾಷ್ ಜೈ ಅಜೀಜ್ ಕಳೆದ ತಿಂಗಳು ಉತ್ತರ ಪ್ರದೇಶಕ್ಕೆ ಬಂದಿದ್ದು, ಅಲ್ಲಿಂದ ಬೆಂಗಳೂರಿನ ಕೆಂಪೇಗೌಡ ಏರ್ಪೋಟ್ ಗೆ ಆಗಮನಿಸಿದ್ದ. ಈ ವೇಳೆ ತನ್ನ ಕೊರಳಲ್ಲಿದ್ದ ಹಾರ, ಅರಿಶಿನ ಕುಂಕುಮ, ತಿನ್ನಲ್ಲು ತೆಗೆದುಕೊಂಡಿದ್ದ ಕಬ್ಬು, ಕೆಲ ದೇವರ ಪೋಟೋಗಳನ್ನೆಲ್ಲ ಒಂದು ಬಾಕ್ಸ್ ನಲ್ಲಿಟ್ಟು ಜೊತೆಗೆ ಶ್ರೀಲಂಕಾ ಭಾಷೆಯಲ್ಲಿ ಪತ್ರವನ್ನ ಬರೆದು ಬಾಕ್ಸ್​​ನಲ್ಲಿ ಹಾಕಿದ್ದ. ಬಳಿಕ ಬಾಕ್ಸ್ ಹಿಡಿದು ಕೆಂಪೇಗೌಡ ಏರ್ಪೋಟ್ ನಲ್ಲಿರುವ ಪೋಸ್ಟ್​​ ಆಫೀಸ್​​ಗೆ ತೆರಳಿ ಕೆಐಎಎಲ್ ಸಿಇಓ ಹೆಸರಿಗೆ ಕೋರಿಯರ್ ಮಾಡಿ ಹೋಗಿದ್ದ. ಬಳಿಕ ಪೋಸ್ಟ್ ಆಫೀಸ್ ಸಿಬ್ಬಂದಿ ಕೆಐಎಎಲ್ ಕಚೇರಿಗೆ ತೆರಳಿ ಬಾಕ್ಸ್ ಡೆಲೆವರಿ ಮಾಡಿದ್ದು, ಆ ವೇಳೆ ಬಾಕ್ಸ್ ಓಪನ್ ಮಾಡಿದಾಗ ಎಲ್ಲಾ ವಸ್ತು ಮಾಟ ಮಂತ್ರಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿದ್ದು, ಇದನ್ನು ಕಂಡು ಸಿಬ್ಬಂದಿ ಶಾಕ್ ಆಗಿದ್ದರು. ಈ ಸಂಬಂಧ ಕೆಂಪೇಗೌಡ ಏರ್ಪೋಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದರು.

ಒಟ್ಟಾರೆ ಹೈ ಪೈ ಟೆಕ್ನಾಲಜಿ ಮೂಲಕ ದೇಶದಲ್ಲೇ ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣಕ್ಕೆ ಬ್ಲಾಕ್ ಮ್ಯಾಜಿಕ್ ರೀತಿಯ ವಸ್ತು ಕಳುಹಿಸಿ ಎಲ್ಲರು ಆತಂಕಗೊಳ್ಳುವಂತೆ ಮಾಡಿದ್ದು, ಪಾರ್ಸೆಲ್ ಕಳಿಸಿದ್ದ ಸ್ವಯಂ ಘೋಷಿತ ಬಾಬಾ ಕಂಬಿ ಎಣಿಸುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಚಿತ್ರರಂಗಕ್ಕೆ ಬರಲು ಸಜ್ಜಾದ ಹೃತಿಕ್ ರೋಷನ್ ಮಗ ಹೃದಾನ್ ರೋಷನ್

ಬಾಲಿವುಡ್‌ನ ಖ್ಯಾತ ರೋಶನ್ ಕುಟುಂಬದಿಂದ ಮತ್ತೊಬ್ಬ ಪ್ರತಿಭೆ ಚಿತ್ರರಂಗಕ್ಕೆ ಬರಲು ಸಿದ್ಧವಾಗುತ್ತಿದೆ. ಹೃತಿಕ್ ರೋಷನ್ ಮತ್ತು ಸುಸೇನ್ ಖಾನ್ ಅವರ ಕಿರಿಯ ಪುತ್ರ, 17ರ ಪ್ರಾಯದ ಹೃದಾನ್ ರೋಷನ್ (Hridaan Roshan) ಅವರು ಸಿನಿಮಾ ನಿರ್ಮಾಣದಲ್ಲಿ ಉನ್ನತ ಶಿಕ್ಷಣ ಪಡೆಯಲು ಅಮೆರಿಕಕ್ಕೆ ಹಾರುತ್ತಿದ್ದಾರೆ. ಅಲ್ಲಿನ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಸಿನಿಮಾ ಮೇಕಿಂಗ್ ಕಲಿಯುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಸಿಕ್ಕಿದೆ. ಶಿಕ್ಷಣ ಮುಗಿಸಿದ ಬಳಿಕ ಅವರು ಕೂಡ ತಂದೆ ಹೃತಿಕ್ ರೋಷನ್ (Hrithik Roshan) ರೀತಿಯೇ ಚಿತ್ರರಂಗದಲ್ಲಿ ಭವಿಷ್ಯ ಕಟ್ಟಿಕೊಳ್ಳಲಿದ್ದಾರೆ.

ಹೃದಾನ್ ಅವರು ಅಮೆರಿಕದ ಪ್ರಸಿದ್ಧ ‘ಲ ಫಿಲ್ಮ್ ಮತ್ತು ಟೆಲಿವಿಷನ್ ಪ್ರೊಡಕ್ಷನ್ ಕೋರ್ಸ್‌ಗೆ ದಾಖಲಾಗಿದ್ದಾರೆ. ಈ ವಿಶ್ವವಿದ್ಯಾಲಯವು ವಿಶ್ವದಾದ್ಯಂತ ಸಿನಿಮಾ ರಂಗಕ್ಕೆ ಅನೇಕ ದಿಗ್ಗಜರನ್ನು ನೀಡಿದ ಖ್ಯಾತಿ ಹೊಂದಿದೆ. ಹೃದಾನ್ ಅವರ ಶಾಲೆಯಾದ ‘ಅಮೆರಿಕನ್ ಸ್ಕೂಲ್ ಆಫ್ ಬಾಂಬೆ’ ಈ ಸುದ್ದಿಯನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ ಹೃದಾನ್‌ಗೆ ಅಭಿನಂದನೆ ಸಲ್ಲಿಸಿದೆ.

‘ಹೃದಾನ್ ಯುಎಸ್‌ಸಿಯಲ್ಲಿ ಸಿನಿಮಾ ಕಲಿಯಲಿದ್ದಾರೆ ಎಂಬುದು ನಮಗೆ ಆಶ್ಚರ್ಯವೇನಲ್ಲ. ನಿಮ್ಮ ಬಗ್ಗೆ ನಮಗೆ ಹೆಮ್ಮೆಯಿದೆ’ ಎಂದು ಶಾಲೆಯು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಇದಕ್ಕೆ ಹೃತಿಕ್ ಅವರ ಕುಟುಂಬದವರು ಮತ್ತು ಸ್ನೇಹಿತರು ಮೆಚ್ಚುಗೆ ಸೂಚಿಸಿದ್ದಾರೆ.

ಹೃದಾನ್ ಅವರ ರಕ್ತದಲ್ಲೇ ಸಿನಿಮಾ ಇದೆ ಎನ್ನಬಹುದು. ಅವರ ತಂದೆ ಹೃತಿಕ್ ರೋಷನ್ ಜಾಗತಿಕ ಮಟ್ಟದ ನಟರಾಗಿದ್ದರೆ, ತಾತ ರಾಕೇಶ್ ರೋಷನ್ ಖ್ಯಾತ ನಟ ಮತ್ತು ಯಶಸ್ವಿ ನಿರ್ದೇಶಕ. ಇನ್ನು ತಾಯಿಯ ಕಡೆಯಿಂದ ಸಂಜಯ್ ಖಾನ್ ಕೂಡ ಚಿತ್ರರಂಗದ ದೊಡ್ಡ ಹೆಸರು. ಈಗ ಹೃದಾನ್ ಚಿತ್ರನಿರ್ಮಾಣದ ತಾಂತ್ರಿಕ ಮಗ್ಗಲುಗಳನ್ನು ಕಲಿಯುತ್ತಿರುವುದು ಅವರು ಭವಿಷ್ಯದಲ್ಲಿ ತಂದೆಯಂತೆ ನಟರಾಗುತ್ತಾರೋ ಅಥವಾ ತಾತನಂತೆ ನಿರ್ದೇಶಕರಾಗುತ್ತಾರೋ ಎಂಬ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಹೃತಿಕ್ ರೋಷನ್​​ಗೆ ವಿಚಿತ್ರ ರೋಗ; ಇದ್ದಕ್ಕಿದ್ದಂತೆ ಕೆಲಸ ನಿಲ್ಲಿಸುತ್ತವೆ ಕಾಲುಗಳು

ವಿಶೇಷವೆಂದರೆ, ಹೃತಿಕ್ ರೋಷನ್ ಕೂಡ ಶೀಘ್ರದಲ್ಲೇ ಕ್ಯಾಮೆರಾ ಹಿಂದೆ ನಿಲ್ಲಲು ಸಜ್ಜಾಗುತ್ತಿದ್ದಾರೆ. ತಮ್ಮ ಜನಪ್ರಿಯ ‘ಕ್ರಿಶ್’ ಸರಣಿಯ ಮುಂದಿನ ಭಾಗವನ್ನು ಹೃತಿಕ್ ಅವರೇ ನಿರ್ದೇಶಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಂದೆಡೆ ತಂದೆ ನಿರ್ದೇಶನದತ್ತ ಮುಖ ಮಾಡುತ್ತಿದ್ದರೆ, ಇನ್ನೊಂದೆಡೆ ಮಗ ಫಿಲ್ಮ್ ಮೇಕಿಂಗ್ ಕಲಿಯುತ್ತಿರುವುದು ರೋಶನ್ ಕುಟುಂಬದ ಸಿನಿಮಾ ಪ್ರೇಮಕ್ಕೆ ಸಾಕ್ಷಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇಂದಿರಾಗಾಂಧಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ವರ್ಷವಿಡೀ ಬೆಡ್ ಹಿಡಿದಿದ್ದ ಬಾಲಕ; ಖಾಸಗಿ ಆಸ್ಪತ್ರೆಯ ಚಿಕಿತ್ಸೆಯಿಂದ ಗುಣಮುಖ!

ಹೊಸಕೋಟೆ, ಮಾ.31 : ಬಡ ಮಕ್ಕಳಿಗಾಗಿಯೇ ಮೀಸಲಾಗಿರುವ ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದ ಆರೋಪ ಭಾರಿ ಸಂಚಲನ ಮೂಡಿಸಿದೆ. ಸ್ಪೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಹೊಸಕೋಟೆಯ 14 ವರ್ಷದ ಬಾಲಕನಿಗೆ ಸರಿಯಾದ ಚಿಕಿತ್ಸೆ ನೀಡದೇ ಒಂದು ವರ್ಷಗಳ ಕಾಲ ಪರಿತಪಿಸುವಂತೆ ಮಾಡಿದ್ದ ಆಸ್ಪತ್ರೆಯ ವಿರುದ್ಧ ಬಡ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕಳೆದೊಂದು ವರ್ಷದಿಂದ ಬೆಡ್ ಹಿಡಿದಿದ್ದ ಬಾಲಕನ ಪೋಷಕರು, ಇಂದಿರಾಗಾಂಧಿ ಆಸ್ಪತ್ರೆಗೆ ತಿಂಗಳಾನುಗಟ್ಟಲೆ ಓಡಾಡಿದ್ದಾರೆ. ಆದರೆ ವೈದ್ಯರು ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವಲ್ಲಿ ವಿಫಲರಾಗಿದ್ದರು. ಬ್ರೈನ್, ಐ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ಗಳನ್ನು ಮಾಡಿಸಿದರೂ ಫಲಿತಾಂಶ ಶೂನ್ಯವಾಗಿತ್ತು. ಕೊನೆಯಲ್ಲಿ “ಬಾಲಕನಿಗೆ ಚಿಕಿತ್ಸೆ ಸಾಧ್ಯವಿಲ್ಲ” ಎಂದು ಹೇಳಿ ಆತನನ್ನು ಮನೆಗೆ ಕಳುಹಿಸಿದ್ದರು. ಇದರಿಂದ ಅಸಹಾಯಕಗೊಂಡ ಪೋಷಕರು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯ ಮೊರೆ ಹೋಗಿದ್ದಾರೆ.

ಸಿಲಿಕಾನ್ ಸಿಟಿ ಆಸ್ಪತ್ರೆಯ ವೈದ್ಯರು ಬಾಲಕನ ಸಮಸ್ಯೆಯನ್ನು ಸರಿಯಾಗಿ ಗುರುತಿಸಿ, ತುರ್ತು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಕೇವಲ ಒಂದು ತಿಂಗಳಲ್ಲೇ ಬಾಲಕ ನಡೆದಾಡುವಂತಾಗಿದ್ದು, ಅವನ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ. “ದೊಡ್ಡ ಸರ್ಕಾರಿ ಆಸ್ಪತ್ರೆಗಳಲ್ಲಿ ಆಗದ ಚಿಕಿತ್ಸೆ ಸಣ್ಣ ಖಾಸಗಿ ಆಸ್ಪತ್ರೆಗಳಲ್ಲಿ ಯಾಕೆ ಸಾಧ್ಯವಾಗುತ್ತಿದೆ?” ಎಂದು ಬಾಲಕನ ಕುಟುಂಬ ಆಕ್ರೋಶ ವ್ಯಕ್ತಪಡಿಸಿದ್ದು, ಇಂದಿರಾಗಾಂಧಿ ಆಸ್ಪತ್ರೆಯ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ.

ಇದನ್ನೂ ಓದಿ: ‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು

ಈ ಕುರಿತು ಪ್ರತಿಕ್ರಿಯಿಸಿದ ಖಾಸಗಿ ಆಸ್ಪತ್ರೆಯ ಸರ್ಜನ್ ಡಾ. ಸುಪ್ರಿತ್, “ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಸೂಕ್ತ ಚಿಕಿತ್ಸೆ ಸಮಯಕ್ಕೆ ಸಿಗುತ್ತಿಲ್ಲ. ಸರ್ಕಾರ ವೈದ್ಯರ ನೇಮಕಾತಿಯನ್ನು ಹೆಚ್ಚಿಸಿ ಎಲ್ಲರಿಗೂ ಉತ್ತಮ ಚಿಕಿತ್ಸೆ ದೊರೆಯುವಂತೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ. ಆರೋಗ್ಯ ಇಲಾಖೆ ಈ ಬಗ್ಗೆ ತಕ್ಷಣ ಎಚ್ಚೆತ್ತು ಬಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

PBKS vs GT IPL 2026 Live Score: ಕಿಂಗ್ಸ್​ vs ಟೈಟಾನ್ಸ್ ನಡುವಣ ಕದನಕ್ಕೆ ಕ್ಷಣಗಣನೆ

ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಉಭಯ ತಂಡಗಳು ಐಪಿಎಲ್ ಅಭಿಯಾನ ಆರಂಭಿಸಲಿದ್ದಾರೆ. ಇಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಿದರೆ, ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ಶುಭ್​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಈ ಮ್ಯಾಚ್​ನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.

ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಪ್ರಭ್​ಸಿಮ್ರಾನ್ ಸಿಂಗ್, ಪ್ರಿಯಾಂಶ್ ಆರ್ಯ, ಶಶಾಂಕ್ ಸಿಂಗ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಅಝ್ಮತುಲ್ಲಾ ಒಮರ್​ಝಾಹಿ, ಮಾರ್ಕೊ ಯಾನ್ಸೆನ್, ಹರ್ಪ್ರೀತ್ ಬ್ರಾರ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಶೀರ್ ಖಾನ್, ಪ್ಯಾಲಾ ಅವಿನಾಶ್, ಹರ್ನೂರ್ ಪನ್ನು, ಸೂರ್ಯಾಂಶ್ ಶೆಡ್ಗೆ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಲಾಕಿ ಫರ್ಗುಸನ್, ವೈಶಾಕ್ ವಿಜಯ್‌ಕುಮಾರ್, ಯಶ್ ಠಾಕೂರ್, ವಿಷ್ಣು ವಿನೋದ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಪ್ರವೀಣ್ ದುಬೆ, ವಿಶಾಲ್ ನಿಶಾದ್.

 

Source link

ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ: ವಿಡಿಯೋ

ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರ ತಾಯಿ ನಿಧನ ಹೊಂದಿದ್ದಾರೆ. ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ನಿನ್ನೆ ನಿಧನ ಹೊಂದಿದ್ದು, ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ಸ್ವರ್ಣಲತಾ ಹೈದರಾಬಾದ್​ ಅಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸ್ವರ್ಣಲತಾ ಅವರ ಅಂತಿಮ ಸಂಸ್ಕಾರ ಕ್ರೈಸ್ತ ಪದ್ಧತಿಯಂತೆ ನೆರವೇರಿದ್ದು, ಇಂದು ಶಾಂತಿನಗರ ಚರ್ಚ್​​ನಲ್ಲಿ ಸ್ವರ್ಣಲತಾ ಅವರಿಗಾಗಿ ವಿಶೇಷ ಪ್ರಾರ್ಥನೆ ಸಹ ಮಾಡಲಾಯ್ತು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಾಕ್ ಆಟಗಾರ ಫಖರ್ ಝಮಾನ್​ಗೆ 2 ಪಂದ್ಯಗಳ ನಿಷೇಧ!

ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ಆವೃತ್ತಿಯಲ್ಲಿ ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಆರಂಭಿಕ ಆಟಗಾರ ಫಖರ್ ಝಮಾನ್ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಚೆಂಡು ವಿರೂಪಗೊಳಿಸಿದ (Ball Tampering) ಗಂಭೀರ ಆರೋಪದ ಮೇಲೆ ಅವರಿಗೆ ಎರಡು ಪಂದ್ಯಗಳ ನಿಷೇಧ ಹೇರಲಾಗಿದೆ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಮಂಗಳವಾರ ಅಧಿಕೃತವಾಗಿ ತಿಳಿಸಿದೆ.

ಮಾರ್ಚ್ 29 ರಂದು ನಡೆದ ಕರಾಚಿ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಫಖರ್ ಝಮಾನ್ ಚೆಂಡನ್ನು ವಿರೂಪಗೊಳಿಸಿದ್ದರು. ಇದನ್ನು ಗಮನಿಸಿದ್ದ ಅಂಪೈರ್ ಚೆಂಡನ್ನು ಬದಲಿಸಿ ಮ್ಯಾಚ್ ಮುಂದುವರೆಸಿದ್ದರು. ಅಲ್ಲದೆ ಲಾಹೋರ್ ಖಲಂದರ್ಸ್ ತಂಡಕ್ಕೆ 5 ರನ್​ಗಳ ಪೆನಾಲ್ಟಿಯನ್ನು ಸಹ ವಿಧಿಸಲಾಗಿತ್ತು.

ಇದೀಗ ಫಖರ್ ಝಮಾನ್  ಪಿಸಿಬಿ ನೀತಿ ಸಂಹಿತೆಯ ಆರ್ಟಿಕಲ್ 2.14 ಅನ್ನು ಉಲ್ಲಂಘಿಸಿರುವುದು ದೃಢವಾಗಿರುವ ಕಾರಣ ಅವರನ್ನು 2 ಪಂದ್ಯಗಳಿಂದ ಬ್ಯಾನ್ ಮಾಡಲಾಗಿದೆ.

ಯಾವ ಪಂದ್ಯಗಳಿಂದ ಹೊರಕ್ಕೆ?

ಈ ನಿಷೇಧದ ಕಾರಣದಿಂದ ಫಖರ್ ಝಮಾನ್ ಏಪ್ರಿಲ್ 3 ರಂದು ನಡೆಯುವ ಮುಲ್ತಾನ್ ಸುಲ್ತಾನ್ಸ್ ವಿರುದ್ಧದ ಹಾಗೂ ಏಪ್ರಿಲ್ 9 ರಂದು ನಡೆಯಲಿರುವ ಇಸ್ಲಾಮಾಬಾದ್ ಯುನೈಟೆಡ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಾಗುವುದಿಲ್ಲ.

 

Source link

ಭಾರತದ ಟೆನಿಸ್ ಲೆಜೆಂಡ್ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ; ಬಂಗಾಳದಲ್ಲಿ ಮತ್ತಷ್ಟು ಸ್ಟಾರ್​ಗಳ ಮೆರಗು

ಕೋಲ್ಕತಾ, ಮಾರ್ಚ್ 31: ಭಾರತೀಯ ಟೆನಿಸ್​ನ ಸರ್ವಶ್ರೇಷ್ಠ ಆಟಗಾರನೆಂದು ಪರಿಗಣಿಸಲಾಗಿರುವ ಲಿಯಾಂಡರ್ ಪೇಸ್ (Leander Paes) ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಅಖಾಡಕ್ಕೆ ಪೇಸ್ ಧುಮುಕಿದ್ದಾರೆ. ಇದರೊಂದಿಗೆ, ಬಂಗಾಳದ ಚುನಾವಣಾ ರಂಗು ಮತ್ತಷ್ಟು ಹೆಚ್ಚಿದೆ. ಸೆಲಬ್ರಿಟಿಗಳ ಸಂಖ್ಯೆಯೂ ಹೆಚ್ಚಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ಪಕ್ಷವಾದ ತೃಣಮೂಲ ಕಾಂಗ್ರೆಸ್ ಇದೀಗ ಪೇಸ್​ರ ಬಿಜೆಪಿ ಸೇರ್ಪಡೆಯನ್ನು ಲೇವಡಿ ಮಾಡಿದ್ದಾರೆ. ಮತ್ತೊಬ್ಬ ಹೊರಗಿನವರು ಬಿಜೆಪಿಗೆ ಬಂದಿದ್ದಾರೆ ಎಂದು ಟಿಎಂಸಿ ಟೀಕಿಸಿದೆ.

ಲಿಯಾಂಡರ್ ಪೇಸ್ ಬಂಗಾಳಿಯಲ್ಲವಾ?

ಲಿಯಾಂಡರ್ ಪೇಸ್ ಅವರು ಅರ್ಧ ಬಂಗಾಳಿ, ಅರ್ಧ ಗೋವನ್. ಅವರ ತಂದೆ ವೀಸ್ ಪೇಸ್ ಗೋವಾದವರು. ತಾಯಿ ಬಂಗಾಳಿಯವರು. ಲಿಯಾಂಡರ್ ಪೇಸ್ ಹುಟ್ಟಿ ಬೆಳೆದಿದ್ದೆಲ್ಲಾ ಕೋಲ್ಕತಾದಲ್ಲಿ. ನಂತರದ ಅವರ ಕಾರ್ಯಕ್ಷೇತ್ರ ಗೋವಾಗೆ ವರ್ಗವಾಯಿತು.

ಇದನ್ನೂ ಓದಿ: ಭಾರತದ ನಂ. 1 ಏರ್ಲೈನ್ಸ್ ಸಂಸ್ಥೆ ಇಂಡಿಗೋಗೆ ವಿಲಿಯಮ್ ವಾಲ್ಷ್ ನೂತನ ಸಿಇಒ

ಅಪ್ಪಟ ಕ್ರೀಡಾ ಕುಟುಂಬ ಪೇಸ್​ರದ್ದು

ಲಿಯಾಂಡರ್ ಪೇಸ್ ಅವರ ತಂದೆ ವೀಸ್ ಪೇಸ್ ಅವರು ಪ್ರಖ್ಯಾತ ಹಾಕಿ ಆಟಗಾರ. 1972ರಲ್ಲಿ ಜರ್ಮನಿಯ ಮ್ಯೂನಿಕ್​ನಲ್ಲಿ ನಡೆದ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡದ ಸದಸ್ಯರಾಗಿದ್ದರು.

ಪೇಸ್ ಅವರ ತಾಯಿ ಜೆನ್ನಿಫರ್ ಅವರು ಬಂಗಾಳಿ ಕವಿ ಮೈಕೇಲ್ ಮಧುಸೂದನ್ ದತ್ತ ಅವರ ಮರಿಮೊಮ್ಮಗಳು. 1980ರ ಏಷ್ಯನ್ ಬ್ಯಾಸ್ಕೆಟ್​ಬಾಲ್ ಚಾಂಪಿಯನ್​ಶಿಪ್​ನಲ್ಲಿ ಭಾರತ ತಂಡದ ಕ್ಯಾಪ್ಟನ್ ಆಗಿದ್ದರು.

ಇದನ್ನೂ ಓದಿ: ಗುಜರಾತ್​ನಲ್ಲಿ 3,300 ಕೋಟಿ ರೂ ವೆಚ್ಚದ ಕೇನ್ಸ್ ಸಮಿಕಾನ್ ಘಟಕ ಉದ್ಘಾಟನೆ ಮಾಡಿದ ನರೇಂದ್ರ ಮೋದಿ

ಟೆನಿಸ್ ಮಾಂತ್ರಿಕ ಲಿಯಾಂಡ್ ಪೇಸ್

ಲಿಯಾಂಡರ್ ಪೇಸ್ ಅವರು ಒಲಿಂಪಿಕ್ಸ್ ಪದಕ ಗೆದ್ದಿರುವ ಹೆಗ್ಗಳಿಕೆ ಹೊಂದಿದ್ಧಾರೆ. ಅನೇಕ ಗ್ರ್ಯಾನ್ ಸ್ಲಾಂ ಪ್ರಶಸ್ತಿಗಳನ್ನು ಜಯಿಸಿದ್ದಾರೆ. ವಿಶ್ವ ಸಾರ್ವಕಾಲಿಕ ಟೆನಿಸ್ ಡಬಲ್ಸ್ ಆಟಗಾರರಲ್ಲಿ ಅವರೂ ಒಬ್ಬರು. ಲಿಯಾಂಡರ್ ಪೇಸ್ ಮತ್ತು ಮಹೇಶ್ ಭೂಪತಿ ಜೋಡಿ ವಿಶ್ವ ಟೆನಿಸ್ ಡಬಲ್ಸ್​ನಲ್ಲಿ ಅದ್ವಿತೀಯ ಎನಿಸಿತ್ತು. 1986ರಿಂದ 2020ರವರೆಗೂ ಅವರು ಟೆನಿಸ್​ನಲ್ಲಿ ಸಕ್ರಿಯವಾಗಿದ್ದರು. 47ರ ವಯಸ್ಸಲ್ಲಿ ನಿವೃತ್ತಿಯಾಗುವ ಮುನ್ನ 18 ಗ್ರ್ಯಾನ್ ಸ್ಲಾಂ ಜಯಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಹೊರಟಿರುವ ಬಿಜೆಪಿಗೆ ಪೇಸ್ ಸೇರ್ಪಡೆ ಎಷ್ಟು ಸಹಾಯವಾದೀತು ಗೊತ್ತಿಲ್ಲ? ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತದೆ. ಮೇ 4ರಂದು ಫಲಿತಾಂಶ ಪ್ರಕಟವಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link