ನವದೆಹಲಿ, ಮಾರ್ಚ್ 08: ಮಾಡಿದ್ದುಣ್ಣೋ ಮಹಾರಾಯ ಎಂದು ಇಂಥವರನ್ನೇ ನೋಡಿ ಹೇಳಿರಬೇಕು,ಹೋಳಿ ಆಚರಣೆ ಮಾಡುತ್ತಿದ್ದ ಜನರ ಮೇಲೆ ತಾರಸಿ ಮೇಲಿಂದ ಕಸ ಸುರಿಯಲು ಹೋದ ವ್ಯಕ್ತಿಯೊಬ್ಬ ಕಸದ ಸಮೇತ ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿತ್ತು. ಹಾಗೆಯೇ ಒಬ್ಬರಿಗೊಬ್ಬರು ಬಣ್ಣ ಎರಚಿಕೊಳ್ಳುತ್ತಾ ಸಂತೋಷವಾಗಿದ್ದವರ ಮೇಲೆ ಕಸ, ಮಣ್ಣನ್ನು ಸುರಿಯಲು ಹೋಗಿದ್ದ ವ್ಯಕ್ತಿಯೊಬ್ಬ ಮನೆಯ ತಾರಸಿಯಿಂದ ಕೆಳಗೆ ಬಿದ್ದಿದ್ದಾರೆ. ಬೇರೆ ಯಾರಿಗೋ ಕೆಟ್ಟದ್ದನ್ನು ಬಯಸಿದರೆ ನಮಗೂ ಕಷ್ಟ ಕಟ್ಟಿಟ್ಟ ಬುತ್ತಿ ಎಂಬುದು ಈ ವಿಡಿಯೋ ನೋಡಿ ಕಲಿಯಬೇಕಿದೆ.
ಬೆಂಗಳೂರು, ಮಾರ್ಚ್ 08: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನಮ್ಮ ನೆರಳನ್ನ ನಾವೇ ತುಳಿಯಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ನೆರಳು ನಮ್ಮನ್ನು ಸದಾ ಹಿಂಬಾಲಿಸುತ್ತದೆ ಮತ್ತು ನಮ್ಮ ಒಳ್ಳೆಯ ಹಾಗೂ ಕೆಟ್ಟ ಕಾರ್ಯಗಳನ್ನು ದಾಖಲಿಸುತ್ತದೆ. ನಂಬಿಕೆಯ ಪ್ರಕಾರ, ನಮ್ಮ ನೆರಳು ಮೃತ್ಯುವಿನ ತನಕ ನಮ್ಮ ಜೊತೆಗಿದ್ದು, ಯಮನಿಗೆ ನಮ್ಮ ಲೆಕ್ಕಾಚಾರಗಳನ್ನು ತಲುಪಿಸುತ್ತದೆ. ಅಕಸ್ಮಿಕ ಕಂಟಕಗಳು ಬರುವಾಗ ನೆರಳು ಸೂಕ್ಷ್ಮ ಸೂಚನೆಗಳನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಧನಾತ್ಮಕ ಜೀವನ ನಡೆಸುವ ಮೂಲಕ, ಪಾಪ ಭೀತಿ ಮತ್ತು ಧರ್ಮ ಭೀತಿಯನ್ನು ಅಳವಡಿಸಿಕೊಳ್ಳುವ ಮೂಲಕ ಜೀವನವನ್ನು ಸಾರ್ಥಕಗೊಳಿಸಬಹುದು ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.
ನೆಲಮಂಗಲ, ಮಾರ್ಚ್ 08: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋಗಿ ಪ್ರೇಯಸಿ ಸೇರಿದಂತೆ ಮೂವರ ಮೇಲೆ ಪೆಟ್ರೋಲ್ ಸುರಿದು ವ್ಯಕ್ತಿಯೋರ್ವ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತರಬನಹಳ್ಳಿಯಲ್ಲಿ ನಡೆದಿದೆ. ಆರೋಪಿಯ ಪ್ರೇಯಸಿ ಸುಮಲತಾ, ಆಕೆಯ ತಂದೆ ಶ್ರೀರಾಮ(48) ಹಾಗೂ ತಾಯಿ ಮಂಜಮ್ಮ(42) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಆರೋಪಿ ಪಾಂಡುರಂಗ(29)ನನ್ನು ಬಂಧಿಸಲಾಗಿದ್ದು, ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
4 ವರ್ಷದ ಹಿಂದೆ ಗಂಡನಿಂದ ದೂರವಾಗಿದ್ದ ಸುಮಲತಾ, ಯಶವಂತಪುರದ ಮೆಟ್ರೋದಲ್ಲಿ ಕೆಲಸ ಮಾಡುತ್ತಿದ್ದಳು. ಈ ನಡುವೆ ಇನ್ಸ್ಟಾಗ್ರಾಂನಲ್ಲಿ ಈಕೆಗೆ ಪಾಂಡುರಂಗನ ಪರಿಚಯವಾಗಿತ್ತು. ಬಳಿಕ ಆತನ ಜೊತೆಗೆ ಮನೆ ಬಿಟ್ಟು ಹೋಗಿದ್ದ ಸುಮಲತಾ, 4 ವರ್ಷದಿಂದ ಲೀವಿಂಗ್ ಇನ್ ರಿಲೇಷನ್ಶಿಪ್ನಲ್ಲಿದ್ದಳು. ಮಹಾಲಕ್ಷ್ಮೀ ಲೇಔಟ್ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರೂ ವಾಸವಿದ್ದರು. ಆದರೆ, ಪಾಂಡುವಿನ ಜೊತೆಗೂ ವಿರಸ ಉಂಟಾಗಿ ಕಳೆದ ಎರಡು ತಿಂಗಳ ಹಿಂದೆ ಆತನಿಂದಲೂ ಸುಮಲತಾ ದೂರವಾಗಿದ್ದಳು. ಈಕೆಯ ಜೊತೆ ಇದ್ದುಕೊಂಡೇ ಪಾಂಡುರಂಗ ಮತ್ತೊಂದು ಯುವತಿಯ ಸಹವಾಸ ಮಾಡಿದ್ದ ಕಾರಣ, ಗಲಾಟೆ ಮಾಡಿಕೊಂಡು ಈಕೆ ತಾಯಿ ಮನೆಯನ್ನು ಸೇರಿದ್ದಳು ಎನ್ನಲಾಗಿದೆ.
ಹೀಗಿರುವಾಗ ಮೊನ್ನೆ ತರಬನಹಳ್ಳಿಯ ಸುಮಲತಾ ಮನೆ ಬಳಿ ಬಂದಿದ್ದ ಆರೋಪಿ ಪಾಡುರಂಗ ಸುಮಲತಾಳಿಗೆ ದ್ವಿಚಕ್ರ ವಾಹನ ಕೊಡು ಎಂದಿದ್ದ. ಈ ವೇಳೆ ಅದು ತನ್ನ ಅಕ್ಕನದ್ದು, ನಾನು ಕೊಡಲ್ಲ ಎಂದು ಸುಮಲತಾ ಹೇಳಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಆರೋಪಿ ಗಲಾಟೆ ಮಾಡಿದ್ದಾನೆ. ಸುಮಲತಾ, ಆಕೆಯ ತಂದೆ ಮತ್ತು ತಾಯಿ ಮೂವರೂ ಈ ವೇಳೆ ಬೈದಿದ್ದಾರೆ. ಹೀಗಾಗಿ ಇನ್ನಷ್ಟು ಕೋಪಗೊಂಡಿದ್ದ ಪಾಡುರಂಗ ಸ್ಥಳದಿಂದ ತೆರಳಿದ್ದು, ಸುಮಾರು ಅರ್ಧಗಂಟೆ ಬಳಿಕ ವಾಪಾಸ್ ಆಗಿದ್ದಾನೆ. ಮತ್ತೆ ಗಲಾಟೆ ಶುರುಮಾಡಿ ಸುಮಲತಾ ಮತ್ತು ಆಕೆಯ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಆಟೋದಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಬೆಂಕಿಯಲ್ಲಿ ಸುಟ್ಟ ಮೂವರ ಸ್ಥಿತಿ ಗಂಭೀರವಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಸೋಲದೇವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಿಟ್ಟನ್ನು ಕಡಿಮೆ ಮಾಡಿಕೊಳ್ಳುವ ವಿಧಾನವನ್ನು ಕಂಡುಕೊಳ್ಳುವುದು ಅವಶ್ಯಕ. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು ಔಷಧೋಪಚಾರವನ್ನು ಮಾಡುವಿರಿ. ಒಪ್ಪಂದವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಸ್ಥಿರತೆಯು ಕಾಣದ ಕಾರಣ ಬದಲಿಸುವಿರಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಬಂಧುಗಳ ಅನಿರೀಕ್ಷಿತ ಭೇಟಿಯಾಗಬಹುದು.
ವೃಷಭ ರಾಶಿ :
ಬಹುದಿನಗಳಿಂದ ಇದ್ದ ಚಿಂತೆ ದೂರವಾಗಲಿದೆ. ದಾನ ಕಾರ್ಯಗಳಲ್ಲಿ ಭಾಗಿಯಾಗಿ, ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಯಾರನ್ನೋ ಹಿಂದಿಕ್ಕಿ ಮುಂಬರುವ ಯೋಚನೆ ಸಾಧುವಾಗದು. ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಅನಪೇಕ್ಷಿತ ವಿಚಾರದಲ್ಲಿ ಮೂಗುತೂರಿಸುವುದು ಬೇಡ. ನಿಮ್ಮ ಮಾತನಿಂದ ಇನ್ನೊಬ್ಬರನ್ನು ಘಾಸಿ ಮಾಡುವಿರಿ. ಕಿವಿಯ ನೋವಿನಿಂದ ಸಂಕಟವಾಗುವುದು. ಇಂದು ಫಲವನ್ನು ಅತಿಯಾಗಿ ನಿರೀಕ್ಷಿಸಿ ಸಿಗದೇ ಬೇಸರಗೊಳ್ಳುವಿರಿ.
ಮಿಥುನ ರಾಶಿ :
ಇಂದು ನಿಮಗೆ ಪ್ರಗತಿಯ ಹೊಸ ಮಾರ್ಗಗಳನ್ನು ಕಾಣುತ್ತವೆ. ಸಹಿಸಲಾಗದ ದೇಹಪೀಡೆಯಿಂದ ಒದ್ದಾಡುವಿರಿ. ಕೆಲವರು ಅಕಾರಣವಾಗಿ ಬಿಟ್ಟುಹೋಗಬಹುದು. ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ವೃತ್ತಿಯನ್ನು ಬಿಟ್ಟು ಹೆಚ್ಚಿನ ಆದಾಯದ ಕಡೆಗೆ ಗಮನಹರಿಸುವಿರಿ. ಎಲ್ಲರಿಂದ ದೂರವಾಗಲು ಬಯಸುವಿರಿ. ಸಂಗಾತಿಗೆ ಸಮಯವನ್ನು ಕೊಡುತ್ತೇನೆಂದರೂ ಆಗದು. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ನೀವು ಮನೆಯನ್ನು ಖರೀದಿಸುವ ಅಲೋಚನೆಯಲ್ಲಿ ಇರುವಿರಿ.
ಕರ್ಕಾಟಕ ರಾಶಿ :
ಅವಿವಾಹಿತರಿಗೆ ವಿವಾಹದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಮನಸ್ಸು ಚಂಚಲವಾಗಿ ಇರಬಹುದು. ಕುಟುಂಬ ಜೀವನದಲ್ಲಿ ಒತ್ತಡ ಹೆಚ್ಚಾಗಲಿದೆ. ಕೆಲಸದ ಸ್ಥಳದಲ್ಲಿ ಕಾರಣವಿಲ್ಲದೆ ಯಾರೊಂದಿಗೂ ಜಗಳವಾಡಬೇಡಿ. ಕೆಲವು ಸನ್ನಿವೇಶವನ್ನು ನೀವು ನಗಣ್ಯ ಮಾಡುವುದು ಉತ್ತಮ. ಸಂಗಾತಿಯ ಸಲಹೆಯನ್ನೂ ಪಡೆದು ಉತ್ತಮ ನಿರ್ಧಾರಕ್ಕೆ ಬನ್ನಿ. ಇಂದು ಸ್ತ್ರೀಯರಿಗೆ ಸೌಂದರ್ಯಪ್ರಜ್ಞೆಯು ಅಧಿಕವಾಗಿ ಇರುವುದು.
ಸಿಂಹ ರಾಶಿ :
ಉದ್ಯೋಗದಲ್ಲಿ ಅಭಿವೃದ್ಧಿ ಇಲ್ಲ ಎಂದು ಬೇಸರಗೊಂಡಿದ್ದರೆ ನಿಮಗೆ ಅಲ್ಪ ನೆಮ್ಮದಿಯ ಸಂಗತಿಯು ಇರಲಿದೆ. ನೌಕರರ ಕಾರ್ಯವು ನಿಮಗೆ ಸಂತೋಷವನ್ನು ತರದು. ಪಾಲುದಾರಿಕೆಯಲ್ಲಿ ಅಸಹಜ ಮಾತುಕತೆಗಳು ಬರಬಹುದು. ಪ್ರತಿಷ್ಠಿತ ಸಂಸ್ಥೆಯ ಉನ್ನತ ಅಧಿಕಾರದ ಪ್ರಾಪ್ತಿಯ ಅವಕಾಶವು ಬರಬಹುದು. ಲಾಭವಿಲ್ಲದ ಕಾರ್ಯದಲ್ಲಿ ಆಸಕ್ತಿಯು ಇರದು. ಕೆಲವು ವಿಚಾರದಲ್ಲಿ ನಿಮ್ಮ ಊಹೆಯು ತಪ್ಪಾದೀತು. ಕಣ್ಣಿನ ತೊಂದರೆಯು ಹೆಚ್ಚಾಗಬಹುದು. ನಿಮ್ಮ ಮೇಲಧಿಕಾರಿಗಳು ನಿಮ್ಮ ಕೆಲಸಕ್ಕೆ ಅಸಮಾಧಾನಗೊಳ್ಳಬಹುದು.
ಕನ್ಯಾ ರಾಶಿ :
ಸಂಬಂಧಗಳಲ್ಲಿ ಆತ್ಮೀಯತೆ ಇರುತ್ತದೆ. ಸೃಜನಶೀಲ ಪ್ರಯತ್ನಗಳು ಫಲ ನೀಡುತ್ತವೆ ಇಂದಿನ ಲಾಭವನ್ನು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ಸುಮ್ಮನೇ ನಿಮ್ಮಷ್ಟಕ್ಕೆ ಇರಿ. ವಾಹನದ ಕಾರಣ ಕಲಹವಾಗುವುದು. ವಿತಂಡ ವಾದವನ್ನು ಮಾಡಿ ಎಲ್ಲರಿಂದ ದೂರಾಗುವಿರಿ. ಶತ್ರುಗಳು ಮಾನಸಿಕ ಕಿರುಕುಳವನ್ನು ಯಾವ ರೀತಿಯಿಂದಲೂ ಕೊಡಬಹುದು. ನಿಮ್ಮ ಕೆಲಸಕ್ಕೆ ಸಮಯದ ಮಿತಿಯನ್ನು ಇಟ್ಟುಕೊಳ್ಳುವುದು ಉತ್ತಮ. ಹಿರಿಯರ ತಿಳಿವಳಿಕೆಯು ಅಪಮಾನದಂತೆ ಕಾಣಬಹುದು.
ತುಲಾ ರಾಶಿ:
ಉದ್ಯೋಗ ಕ್ಷೇತ್ರದಲ್ಲಿ ಮಾಡಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಬಾಂಧವರ ನಡುವೆ ವ್ಯವಹಾರದ ಕಾರಣ ಭಿನ್ನಾಭಿಪ್ರಾಯ ಬರಬಹುದು. ದಾಯಾದಿಗಳು ನಿಮ್ಮ ಮೇಲೆ ಅಪವಾದವನ್ನು ಮಾಡಬಹುದು. ಕಾರ್ಯದಲ್ಲಿ ಜಯವಿದ್ದರೂ ಆರ್ಥಿಕ ನಷ್ಟವು ಆಗಬಹುದು. ತಂದೆಯ ಜೊತೆ ನಿಮ್ಮ ಭವಿಷ್ಯದ ಚಿಂತನೆಯನ್ನು ಮಾಡಲಿದ್ದೀರಿ. ಇಂದಿನ ಶುಭವಾರ್ತೆಯು ನಿಮ್ಮ ಕಾರ್ಯಕ್ಕೆ ಉತ್ಸಾಹವನ್ನು ಕೊಡುವುದು. ಇಂದು ಮೌಲ್ಯಯುತವಾದ ವಸ್ತುಗಳನ್ನು ಖರೀದಿಸುವಿರಿ.
ವೃಶ್ಚಿಕ ರಾಶಿ:
ಅನಿರೀಕ್ಷಿತ ಗೆಲುವಿನಿಂದ ಹಿಗ್ಗುವ ಅವಶ್ಯಕತೆ ಇಲ್ಲ. ವಿವಾಹಿತರ ಸಂಬಂಧ ಬಲಗೊಳ್ಳುತ್ತದೆ. ಪ್ರೇಮಿಗಳಿಗೆ ಈ ದಿನ ಆಹ್ಲಾದಕರವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಮತ್ತು ತಿಳುವಳಿಕೆ ಹೆಚ್ಚಾಗುತ್ತದೆ. ಶುಭ ಕಾರ್ಯದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರಲಿದೆ. ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸಲು ಸಿದ್ಧರಿರುವಿರಿ. ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ. ಸಹೋದರರ ನಡುವೆ ವಾಗ್ವಾದವು ಆಗಬಹುದು. ಇಂದಿನ ವ್ಯವಹಾರವು ಎಚ್ಚರಿಕೆಯಿಂದ ಇರಲಿ.
ಧನು ರಾಶಿ:
ನಿಮ್ಮ ಸಂಗಾತಿಯಿಂದ ನಿಮಗೆ ಕೆಲಸದಲ್ಲಿ ಬೆಂಬಲ ಸಿಗುತ್ತದೆ. ಮನಸ್ಸು ಅಪರಿಚಿತ ಭಯಗಳಿಂದ ಪೀಡಿತವಾಗಬಹುದು. ಆತ್ಮವಿಶ್ವಾಸದ ಕೊರತೆ ಇರುತ್ತದೆ. ಎಲ್ಲ ರೀತಿಯಿಂದಲೂ ಅನುಕೂಲವಾಗಲಿ ಎಂಬ ಮನೋಭಾವವು ಇರಲಿದೆ. ಆಸ್ತಿಯ ಗಳಿಕೆಯಲ್ಲಿ ಎಲ್ಲವೂ ಅನಾಯಾಸವಾಗಿ ನಡೆಯದು. ಬಹಳ ದಿನಗಳ ಅನಂತರ ಮನೆಯಲ್ಲಿ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಬರಬಹುದು. ಸಣ್ಣ ವಿಚಾರಕ್ಕೆ ನೀವು ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ.
ಮಕರ ರಾಶಿ:
ಆಪ್ತರಿಂದ ಅಮೂಲ್ಯ ಉಡುಗೊರೆ ಪಡೆಯುವ ಅವಕಾಶವಿದೆ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಸಹೋದ್ಯೋಗಿಗಳಿಂದ ಕಾರ್ಯಗಳಿಗೆ ವಿಘ್ನ ಬರಬಹುದು. ಸತ್ಯಸಂಗತಿಯನ್ನು ನಂಬುವ ಸ್ಥಿತಿಯಲ್ಲಿ ನೀವಿರಲಾರಿರಿ. ಇಂದು ವಿದೇಶಕ್ಕೆ ಪ್ರಯಾಣ ಹೋಗುವ ಅವಕಾಶಗಳು ತೆರೆದುಕೊಳ್ಳಬಹುದು. ನಿಮ್ಮ ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಬೇಡ. ಇಂದು ನೀವು ತಂದೆಯವರಿಗೆ ಎದುರು ಮಾತನಾಡಿ ಅವರ ಮನಸ್ಸನ್ನು ನೋಯಿಸುವಿರಿ.
ಕುಂಭ ರಾಶಿ:
ಹೊಸ ಹೂಡಿಕೆಗಳನ್ನು ಮಾಡಲು ಈ ಸಮಯ ಶುಭವಾಗಿರುತ್ತದೆ. ಕುಟುಂಬದಲ್ಲಿ ಕೆಲವು ಒಳ್ಳೆಯ ಸುದ್ದಿಗಳು ಬರಬಹುದು. ಇದರಿಂದಾಗಿ ಮನೆಯ ವಾತಾವರಣ ಸಂತೋಷವಾಗಿರುತ್ತದೆ. ನೀವು ಪ್ರೀತಿಯ ಮನಃಸ್ಥಿತಿಯಲ್ಲಿರುವಿರಿ. ಯಾವುದಕ್ಕೂ ನಿರಾಸೆ ಇಟ್ಟುಕೊಳ್ಳುವುದು ಬೇಡ. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಯಂತ್ರಗಳಿಂದ ದೇಹಕ್ಕೆ ತೊಂದರೆ ಆಗಬಹುದು. ಬಂದ ಅವಕಾಶವನ್ನು ಬಿಟ್ಟು ಅನಂತರ ದುಃಖಿಸುವುದರಲ್ಲಿ ಅರ್ಥವಿರದು.
ಮೀನ ರಾಶಿ:
ನಿಮ್ಮ ವೃತ್ತಿಜೀವನದಲ್ಲಿ ಹೊಸ ಎತ್ತರವನ್ನು ಮುಟ್ಟುವ ಅವಕಾಶ ನಿಮಗೆ ಸಿಗಬಹುದು. ನೀವು ಉದ್ಯೋಗ ಮಾಡುತ್ತಿದ್ದರೆ ಬಡ್ತಿ ಅಥವಾ ಸಂಬಳ ಹೆಚ್ಚಳದ ಸಾಧ್ಯತೆಯಿದೆ. ವ್ಯಾಪಾರ ಮಾಡುವವರು ಸಹ ದೊಡ್ಡ ಲಾಭ ಗಳಿಸಬಹುದು. ಸ್ವಾದಿಷ್ಟವಾದ ಭೋಜನದಿಂದ ಸಂತೃಪ್ತಿ ಇರಲಿದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ ಬಂದು ಅದು ವೈಯಕ್ತಿಕ ಶತ್ರುತ್ವ ಬರಬಹುದು. ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ.
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಧ್ರುವ, ಕರಣ : ತೈತಿಲ, ಸೂರ್ಯೋದಯ – 06 – 37 am, ಸೂರ್ಯಾಸ್ತ – 06 – 32 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:03 – 18:33, ಯಮಗಂಡ ಕಾಲ 12:35 – 14:05, ಗುಳಿಕ ಕಾಲ 15:34 – 17:03
ಯಾವುದೇ ಎಲೆಕ್ಟ್ರಾನಿಕ್ ಉಪಕರಣ ಅಥವಾ ಮೊಬೈಲ್ ಚಾರ್ಜ್ ಮಾಡುವ ಮೊದಲು “ಓಂ ಗಂ ಗಣಪತಯೇ ನಮಃ” ಎಂದು ಸ್ಮರಿಸಿ. ಈ ದಿನ ಮನೆಯಲ್ಲಿ ದೀಪ ಹಚ್ಚುವಾಗ ಅಥವಾ ವಿದ್ಯುತ್ ಕೆಲಸ ಮಾಡುವಾಗ ಅತಿಯಾದ ಅವಸರ ಬೇಡ. ಜಾಗರೂಕತೆಯೇ ಈ ದಿನದ ದೊಡ್ಡ ಪರಿಹಾರ.
ದಾಂಪತ್ಯದಲ್ಲಿ ಒಂದು ಮಾತು ಬರುತ್ತದೆ, ಒಂದು ಮಾತು ಹೋಗುತ್ತದೆ. ಈ ಕಾರಣಕ್ಕೆ ವಿರಸ ವಿಕೋಪಕ್ಕೆ ಹೋಗಿ, ದಂಪತಿ ಮಧ್ಯೆ ಮಾತನಾಡದೆ ಇರುವಂಥ ಸನ್ನಿವೇಶ ನಿಮ್ಮಲ್ಲಿ ಕೆಲವರಿಗೆ ಸೃಷ್ಟಿ ಆಗಲಿದೆ. ದೇಹದಲ್ಲಿ ನೀರಿನ ಅಂಶ ಕಡಿಮೆ ಆಗದಂತೆ ನೋಡಿಕೊಳ್ಳುವುದಕ್ಕೆ ಆದ್ಯತೆ ನೀಡಿ. ಏಕಾಏಕಿ ಉದ್ಯೋಗ ಸ್ಥಳದಲ್ಲಿ ನಿಮ್ಮ ಅಗತ್ಯ ಕಂಡುಬರಲಿದ್ದು, ಅದಕ್ಕಾಗಿ ಸಮಯ ಮೀಸಲಿಡಬೇಕು ಎಂಬ ಸನ್ನಿವೇಶ ಸೃಷ್ಟಿ ಆಗಲಿದೆ.
ವಿದೇಶಗಳಲ್ಲಿ ಇರುವಂಥವರು ವಾಪಸ್ ತಾಯ್ನಾಡಿಗೆ ಕೆಲವು ಸಮಯದ ಮಟ್ಟಿಗೆ ವಾಪಸ್ ಬರಲಿದ್ದೀರಿ. ಅದು ರಜಾ ದಿನಗಳ ಕಾರಣಕ್ಕೆ ಇರಬಹುದು. ಅಥವಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಕಾರಣಕ್ಕಾದರೂ ಇರಬಹುದು. ಇನ್ನು ಕೃಷಿ ಭೂಮಿ ಅಥವಾ ದೊಡ್ಡ ಅಳತೆಯ ಸೈಟನ್ನು ಹುಡುಕುತ್ತಾ ಇರುವವರು ಈ ದಿನ ಅಂಥ ಕೆಲವು ಆಸ್ತಿಗಳನ್ನು ಖರೀದಿಗಾಗಿ ನೋಡಲಿದ್ದೀರಿ.
ರೆಸಾರ್ಟ್, ರೆಸ್ಟೋರೆಂಟ್ ಅಥವಾ ಮಾಲ್ ಗಳಿಗೆ ಕುಟುಂಬ ಸಮೇತ ತೆರಳುವಂಥ ಯೋಗ ಇದೆ. ಹೊಸ ರುಚಿ ಖಾದ್ಯಗಳನ್ನು ಸವಿಯಲಿದ್ದೀರಿ. ಬಹಳ ಕಾಲದಿಂದ ತೆರಳಬೇಕು ಎಂದುಕೊಂಡಿದ್ದ ಧಾರ್ಮಿಕ ಕೇಂದ್ರಗಳಿಗೆ ನಿಮ್ಮಲ್ಲಿ ಕೆಲವರು ಭೇಟಿ ನೀಡಲಿದ್ದೀರಿ. ಆರೋಗ್ಯಕರ ಜೀವನಕ್ಕೆ ಸಹಾಯ ಮಾಡುವಂಥ ಕೆಲವು ಹವ್ಯಾಸಗಳನ್ನು ಇಂದಿನಿಂದ ಆರಂಭಿಸಲಿದ್ದೀರಿ. ಸೈಕ್ಲಿಂಗ್, ಜಿಮ್, ಅಥವಾ ಯೋಗಾಭ್ಯಾಸ ಇಂಥವುಗಳಿಗೆ ಸೇರ್ಪಡೆ ಆಗುವಂಥ ಯೋಗ ಇದೆ.
ಬೆಳಗ್ಗೆ ಸ್ನಾನದ ನಂತರ ಒಂದು ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಸೂರ್ಯನಿಗೆ ಅರ್ಪಿಸಿ (ಅರ್ಘ್ಯ ನೀಡುವುದು). ಇದರಿಂದ ಮನಸ್ಸಿನ ಗೊಂದಲಗಳು ನಿವಾರಣೆಯಾಗಿ, ದಿನವಿಡೀ ಚೈತನ್ಯ ಇರುತ್ತದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಲ್ಯಾಪ್ ಟಾಪ್- ಮೊಬೈಲ್ ಫೋನ್ ಇಂಥವುಗಳನ್ನು ಚಾರ್ಜ್ ಗೆ ಹಾಕುವಾಗ ಸಹ ಮುಂಜಾಗ್ರತೆಯನ್ನು ವಹಿಸಿ. ಈ ಹಿಂದೆ ನಿಮಗೆ ಕೆಲವು ಹುದ್ದೆ- ಸ್ಥಾನಮಾನ ಸಿಗದ ರೀತಿಯಲ್ಲಿ ನೋಡಿಕೊಂಡಿದ್ದ ವ್ಯಕ್ತಿಗಳು ಯಾರು ಹಾಗೂ ನಿಮಗೆ ಅಡ್ಡಗಾಲು ಹಾಕುವುದಕ್ಕೆ ಏನೆಲ್ಲ ಮಾಡಿದರು ಎಂಬ ಬಗ್ಗೆ ವಿಶ್ವಾಸಾರ್ಹ ಆದ ಮೂಲಗಳಿಂದ ಮಾಹಿತಿ ದೊರೆಯಲಿದೆ. ವಾಹನಗಳ ಕಲಿಕೆ ಆರಂಭಿಸಬೇಕು ಅಂದುಕೊಂಡವರು ಅಥವಾ ಈಗ ಡ್ರೈವಿಂಗ್ ಕ್ಲಾಸ್ ಸೇರಿಕೊಂಡಂತಹವರು ಹೆಚ್ಚು ಏಕಾಗ್ರತೆಯಿಂದ ತೊಡಗಿಸಿಕೊಳ್ಳಿ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ಒಂದು ವೇಳೆ ನೀವೇನಾದರೂ ಲೆಕ್ಕಪತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಾದಲ್ಲಿ ವರ್ಷಗಳಿಂದ ಗಮನಕ್ಕೆ ಬಾರದೆ ಉಳಿದುಹೋದ ಹಣಕಾಸಿನ ಅವ್ಯವಹಾರವೊಂದು ನಿಮ್ಮ ಗಮನಕ್ಕೆ ಬರಲಿದೆ. ಇದನ್ನು ಮೇಲಧಿಕಾರಿಗಳಿಗೆ ತಿಳಿಸಬಾರದು ಎಂದು ನಿಮ್ಮ ಜೊತೆಗೆ ಕೆಲಸ ಮಾಡುವವರು ಕೇಳಿಕೊಳ್ಳಲಿದ್ದಾರೆ. ಎಲೆಕ್ಟ್ರಿಕಲ್ ವಸ್ತುಗಳ ಬಳಕೆ ಮಾಡುವಾಗ ಬಹಳ ಎಚ್ಚರಿಕೆಯನ್ನು ವಹಿಸಬೇಕು. ವಿದ್ಯುತ್ ಶಾಕ್, ಶಾರ್ಟ್ ಸರ್ಕೀಟ್ ಇಂಥದ್ದೇನಾದರೂ ಈ ದಿನ ಸಂಭವಿಸುವ ಸಾಧ್ಯತೆ ಇದೆ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ನಿಮ್ಮಲ್ಲಿ ಕೆಲವರು ಪುಸ್ತಕ ಬರೆಯುವುದಕ್ಕೆ ಅಂತಲೇ ಕೆಲವು ಸ್ಥಳಗಳಿಗೆ ಪ್ರವಾಸ ತೆರಳಲಿದ್ದೀರಿ. ಇನ್ನು ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರು ಯೂಟ್ಯೂಬ್ ಚಾನೆಲ್ ಒಂದನ್ನು ಶುರು ಮಾಡುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಿದ್ದೀರಿ. ಈ ನಿಮ್ಮ ನಿರ್ಧಾರಕ್ಕೆ ಸಂಗಾತಿಯ ಬೆಂಬಲ ಇರಲಿದೆ. ಪ್ರೀತಿಯಲ್ಲಿ ಇರುವಂಥವರು ತಮ್ಮ ಮದುವೆ ಬಗ್ಗೆ ಮನೆಯಲ್ಲಿ ಪ್ರಸ್ತಾವ ಮಾಡುವ ಬಗ್ಗೆ ನಿರ್ಧರಿಸಲಿದ್ದೀರಿ.
ಅಂದುಕೊಂಡ ಕೆಲಸಗಳು ಸ್ವಲ್ಪ ವಿಳಂಬವಾದರೂ ಅಥವಾ ಯಾರಾದರೂ ನಿಮ್ಮನ್ನು ಟೀಕಿಸಿದರೂ ತಕ್ಷಣ ಪ್ರತಿಕ್ರಿಯಿಸಬೇಡಿ. ಅನಗತ್ಯ ವಾದಗಳಿಂದ ದೂರವಿದ್ದರೆ ದಾಂಪತ್ಯ ಮತ್ತು ವೃತ್ತಿ ಜೀವನದಲ್ಲಿ ನೆಮ್ಮದಿ ಇರುತ್ತದೆ. ಸಂಜೆ ವೇಳೆ ಮನೆಯಲ್ಲಿ ಕರ್ಪೂರ ಹಚ್ಚಿ ಆರತಿ ಮಾಡುವುದು ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು ಸಹಾಯ ಮಾಡುತ್ತದೆ.
ಇನ್ನು ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮುಖ್ಯವಾದ ತೀರ್ಮಾನ ಒಂದನ್ನು ಮಾಡುವ ಸಲುವಾಗಿ ನೀವು ಯಾವ ವ್ಯಕ್ತಿಗಳನ್ನು ತುಂಬ ಗೌರವದಿಂದ ಅಂಥವರನ್ನು ಭೇಟಿ ಮಾಡಿ, ಸಲಹೆ- ಮಾರ್ಗದರ್ಶನವನ್ನು ಪಡೆದುಕೊಳ್ಳಲಿದ್ದೀರಿ. ಸರ್ಕಾರಿ ಕೆಲಸದಲ್ಲಿ ಇರುವವರು ಐವತ್ತು ವರ್ಷ ಮೇಲ್ಪಟ್ಟವರು ಆಗಿದ್ದಲ್ಲಿ ವಿಆರ್ಎಸ್ ಪಡೆದುಕೊಂಡು, ಸ್ವಂತ ವ್ಯವಹಾರವನ್ನು ಆರಂಭಿಸುವುದಕ್ಕೋ ಅಥವಾ ಕೃಷಿಯನ್ನು ಆದಾಯಕ್ಕಾಗಿ ಮಾಡುವುದಕ್ಕೋ ತೀರ್ಮಾನ ಮಾಡುವ ಸಾಧ್ಯತೆ ಇದೆ.
ಪ್ರಶಾಂತವಾದ ಸ್ಥಳದಲ್ಲಿ ಸಮಯ ಕಳೆಯಬೇಕೆಂದು ನಿಮ್ಮಲ್ಲಿ ಕೆಲವರು ಒಬ್ಬರೇ ವಾಹನ ಚಲಾಯಿಸಿಕೊಂಡು ಲಾಂಗ್ ಡ್ರೈವ್ ಹೋಗಲಿದ್ದೀರಿ. ಮಾಸ್ಟರ್ ಚೆಕಪ್ ಮಾಡಿಸಿಕೊಳ್ಳಬೇಕು ಎಂದು ಬಹಳ ಸಮಯದಿಂದ ಅಂದುಕೊಳ್ಳುತ್ತಾ ಇದ್ದವರು ಈ ದಿನ ಮಾಡಿಸಿಕೊಳ್ಳುವ ಯೋಗ ಇದೆ. ಹೋರಾಟ- ಚಳವಳಿಗಳಲ್ಲಿ ಗುರುತಿಸಿಕೊಂಡವರಿಗೆ ಸನ್ಮಾನ, ಗೌರವ ದೊರೆಯುವಂಥ ಯೋಗ ಇದೆ.
ವರ್ಕ್- ಲೈಫ್ ಸಮತೋಲನ ಕಾಯ್ದುಕೊಳ್ಳುವುದಕ್ಕೆ ನಿಮಗೆ ಬರುವುದಿಲ್ಲ ಎಂಬ ಮಾತನ್ನು ಕುಟುಂಬ ಸದಸ್ಯರಿಂದ ಕೇಳಿಸಿಕೊಳ್ಳುವಂತೆ ಆಗಲಿದೆ. ಯಾವುದೇ ಜವಾಬ್ದಾರಿಯಾದರೂ ವಹಿಸಿಕೊಳ್ಳುತ್ತೇನೆ, ಯಾವ ಶಿಫ್ಟ್ ನಲ್ಲಿ ಬೇಕಾದರೂ ಕೆಲಸ ಮಾಡುತ್ತೇನೆ ಎಂದಿದ್ದ ವ್ಯಕ್ತಿಯೊಬ್ಬರು, ನೀವು ಅವರ ಪರವಾಗಿ ಮಾತನಾಡಿ ಉದ್ಯೋಗ ಕೊಡಿಸಿದ ನಂತರದಲ್ಲಿ, ಅದು ಸಾಧ್ಯವಿಲ್ಲ- ಇದು ಸಾಧ್ಯವಿಲ್ಲ ಎಂದು ಹೇಳುವುದಕ್ಕೆ ಆರಂಭಿಸಲಿದ್ದಾರೆ.
ಬೆಂಗಳೂರು, (ಮಾರ್ಚ್ 07): ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಹುಟ್ಟು ಹಬಕ್ಕೆ ಬಂದಿದ್ದ ಮಹಿಳೆಯರಿಗಾಗಿ ಟೆಂಪೋದಲ್ಲಿ ಅಭಿಮಾನಿಗಳು ಸೀರೆಗಳನ್ನ ತಂದಿದ್ದರು. ಇದನ್ನು ನೋಡಿದ ಮಹಿಳೆಯರು ಸೀರೆಗಳನ್ನ ಪಡೆಯವುದಕ್ಕೆ ಕ್ಯೂ ನಲ್ಲು ಮುಗಿಬಿದ್ದಿದ್ದು, ನೂಕುನುಗ್ಗಲು ಮಾಡಿದ್ದಾರೆ. ಇದರಿಂದ ಪೊಲೀಸರು ಹೈರಾಣಾದರು.
2026 ರ ಟಿ20 ವಿಶ್ವಕಪ್ನ ಫೈನಲ್ಗೆ (2026 T20 World Cup Final) ಅರ್ಹತೆ ಪಡೆದಿರುವ ಟೀಂ ಇಂಡಿಯಾ ಇದೇ ಭಾನುವಾರ ನಡೆಯಲಿರುವ ಫೈನಲ್ನಲ್ಲಿ ನ್ಯೂಜಿಲೆಂಡ್ (India vs New Zealand) ತಂಡವನ್ನು ಎದುರಿಸಲಿದೆ. ಈ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಲು ನೋಡುತ್ತಿದ್ದರೆ, ಇತ್ತ ನ್ಯೂಜಿಲೆಂಡ್ ಚೊಚ್ಚಲ ಟ್ರೋಫಿಗಾಗಿ ಎದುರು ನೋಡುತ್ತಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲವಾದ್ದರಿಂದ, ಈ ಪಂದ್ಯ ಟೀಂ ಇಂಡಿಯಾಕ್ಕೆ ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಅಜೇಯವಾಗಿ ಉಳಿದಿರುವ ನ್ಯೂಜಿಲೆಂಡ್ ತಂಡವನ್ನು ಮಣಿಸಬೇಕೆಂದರೆ ಟೀಂ ಇಂಡಿಯಾ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿಯಬೇಕಿದೆ. ಹಾಗಿದ್ದರೆ, ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಭಾರತದ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದನ್ನು ನೋಡುವುದಾದರೆ..
ಬ್ಯಾಟಿಂಗ್ ವಿಭಾಗ ಹೇಗಿರಲಿದೆ?
ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಭಾಗಶಃ ಎಲ್ಲರೂ ಅದ್ಭುತ ಫಾರ್ಮ್ನಲ್ಲಿದ್ದಾರೆ. ಆರಂಭಿಕನಾಗಿ ಸಂಜು ಸ್ಯಾಮ್ಸನ್ ತಮ್ಮ ಸಾಮರ್ಥ್ಯವನ್ನು ಸಾಭೀತುಪಡಿಸಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಬರುವ ಇಶಾನ್ ಕಿಶನ್ ಕೂಡ ಇಡೀ ಪಂದ್ಯಾವಳಿಯಲ್ಲಿ ತಂಡದ ಪರ ಅತ್ಯಧಿಕ ರನ್ ಕಲೆಹಾಕಿರುವ ಆಟಗಾರನಾಗಿದ್ದಾರೆ. ಆ ನಂತರ ಬರುವ ನಾಯಕ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಕೂಡ ಮಧ್ಯಮ ಕ್ರಮಾಂಕದಲ್ಲಿ ಇನ್ನಿಂಗ್ಸ್ ನಿಭಾಯಿಸುತ್ತಿದ್ದಾರೆ. ಶಿವಂ ದುಬೆ, ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ಕೂಡ ತಮ್ಮ ಆಲ್ರೌಂಡರ್ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ.
ಅಭಿಷೇಕ್ ಶರ್ಮಾಗೆ ಗೇಟ್ಪಾಸ್?
ಆದರೆ ಟೀಂ ಇಂಡಿಯಾಕ್ಕೆ ದೊಡ್ಡ ತಲೆನೋವಾಗಿರುವುದು ಆರಂಭಿಕ ಅಭಿಷೇಕ್ ಶರ್ಮಾ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ರನ್ಗಳ ಮಳೆ ಹರಿಸಿದ್ದ ಅಭಿಷೇಕ್, ಟಿ20 ವಿಶ್ವಕಪ್ ಆರಂಭದ ಬಳಿಕ ಕಳಪೆ ಫಾರ್ಮ್ಗೆ ಸಿಲುಕಿ ನರಳುತ್ತಿದ್ದಾರೆ. ಇಡೀ ಪಂದ್ಯಾವಳಿಯಲ್ಲಿ ಅಭಿಷೇಕ್ರಿಂದ ಕೇವಲ ಒಂದು ಅರ್ಧಶತಕ ಮಾತ್ರ ಸಿಡಿದಿದೆ. ಉಳಿದಂತೆ ಮೂರು ಪಂದ್ಯಗಳಲ್ಲಿ ಅಭಿಷೇಕ್ಗೆ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಇದೆಲ್ಲ ಸಾಲದೆಂಬಂತೆ ಸೆಮಿಫೈನಲ್ ಪಂದ್ಯದಲ್ಲೂ ಅಭಿಷೇಕ್ ತಮ್ಮ ಫಾರ್ಮ್ ಕಂಡುಕೊಳ್ಳಲಿಲ್ಲ. ಹೀಗಾಗಿ ಅವರನ್ನು ತಂಡದಿಂದ ಹೊರಗಿಡಬೇಕೆಂಬ ಕೂಗು ಜೋರಾಗಿದೆ. ಆದಾಗ್ಯೂ ಫೈನಲ್ ದೃಷ್ಟಿಯಿಂದ ಅಭಿಷೇಕ್ರನ್ನು ಹೊರಗಿಡುವ ಸಾಹಸಕ್ಕೆ ಆಯ್ಕೆ ಮಂಡಳಿ ಕೈಹಾಕುವ ಸಾಧ್ಯತೆಗಳಿಲ್ಲ.
ಬೌಲಿಂಗ್ ವಿಭಾಗದಲ್ಲಿ ಬದಲಾವಣೆ
ಇನ್ನು ಬೌಲಿಂಗ್ ವಿಭಾಗದಲ್ಲೂ ಬೌಲರ್ಗಳು ಕೊಂಚ ದುಬಾರಿಯಾದರೂ ಸಂದರ್ಭಕ್ಕೆ ಅನುಸಾರವಾಗಿ ತಂಡಕ್ಕೆ ನೆರವಾಗುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಹೀಗಾಗಿ ವೇಗದ ಬೌಲಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಅಂದರೆ ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಈ ವಿಭಾಗವನ್ನು ಮುನ್ನಡೆಸಲಿದ್ದಾರೆ. ಆದರೆ ಸ್ಪಿನ್ ವಿಭಾಗದಲ್ಲಿ ವರುಣ್ ಚಕ್ರವರ್ತಿ ದುಬಾರಿಯಾಗುತ್ತಿರುವುದು ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹೀಗಾಗಿ ಅಭಿಷೇಕ್ ಶರ್ಮಾ ಜೊತೆಗೆ ವರುಣ್ ಚಕ್ರವರ್ತಿಯನ್ನು ಹೊರಗಿಟ್ಟು, ಅವರ ಬದಲಿಗೆ ಕುಲ್ದೀಪ್ ಯಾದವ್ಗೆ ಅವಕಾಶ ನೀಡಬೇಕೆಂಬ ಕೂಗು ಜೋರಾಗಿದೆ. ಆದರೆ ಕೊನೆಯ ಪಂದ್ಯದಿಂದ ವರುಣ್ರನ್ನು ಹೊರಗಿಡುವ ಸಾಧ್ಯತೆಗಳಿಲ್ಲ. ಇದರರ್ಥ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ.
ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan), ಉಪ ಮುಖ್ಯಮಂತ್ರಿ ಆಗಿರುವ ಜೊತೆಗೆ ಹಲವು ಕೆಲವು ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿರುವ ಮಂತ್ರಿ ಸಹ. ಪವನ್ ಕಲ್ಯಾಣ್ ಅವರು ರಾಜಕೀಯ ಮತ್ತು ಸಿನಿಮಾಗಳನ್ನು ಜೊತೆಯಾಗಿ ತೂಗಿಸಿಕೊಂಡು ಹೋಗುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುನ್ನ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಅವುಗಳಲ್ಲಿ ಎರಡರ ಚಿತ್ರೀಕರಣ ಮುಗಿಸಿ ಬಿಡುಗಡೆ ಆಗಿದ್ದವು. ಇದೀಗ ಮೂರನೇ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗಲಿದ್ದು, ಸಿನಿಮಾದ ಟೀಸರ್ ಇಂದಷ್ಟೆ ಬಿಡುಗಡೆ ಆಗಿದೆ.
ಇಂದು (ಮಾರ್ಚ್ 07) ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಸಣ್ಣ ಟೀಸರ್ ಅಷ್ಟೇ ಬಿಡುಗಡೆ ಆಗಿದೆ. ಕೇವಲ 43 ಸೆಕೆಂಡುಗಳ ಟೀಸರ್ ಇದಾಗಿದ್ದು, ಅಷ್ಟರಲ್ಲೇ ಸಿನಿಮಾನಲ್ಲಿ ಪವನ್ ಕಲ್ಯಾಣ್ ಎಷ್ಟು ಪವರ್ಫುಲ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ತೋರಿಸಲಾಗಿದೆ. ಸಿನಿಮಾನಲ್ಲಿ ಪವನ್ ಕಲ್ಯಾಣ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದು, ‘ಗಬ್ಬರ್ ಸಿಂಗ್’ ಮಾದರಿಯ ತಮಾಷೆ ಪ್ರವೃತ್ತಿಯ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಪವನ್ ಕಲ್ಯಾಣ್ ಕಾಣಿಸಿಕೊಂಡಿದ್ದಾರೆ. ಟೀಸರ್ನಲ್ಲಿ ಕೆಲವು ಪಂಚಿಂಗ್ ಡೈಲಾಗ್ಗಳು ಸಹ ಇವೆ. ಜೊತೆಗೆ ಸಣ್ಣ ಆಕ್ಷನ್ ತುಣುಕುಗಳು ಸಹ ಇವೆ.
ಹರೀಶ್ ಶಂಕರ್ ನಿರ್ದೇಶನ ಮಾಡಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ, ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಂಚೆ ಶುರು ಮಾಡಿದ್ದ ಸಿನಿಮಾ. ಈ ಸಿನಿಮಾನಲ್ಲಿ ಕನ್ನಡತಿ ಶ್ರೀಲೀಲಾ ನಾಯಕಿ. ಮೈತ್ರಿ ಮೂವಿ ಮೇಕರ್ಸ್ ಸಿನಿಮಾಕ್ಕೆ ಬಂಡವಾಳ ಹೂಡಿದೆ. ಸಿನಿಮಾದ ಟೀಸರ್ನಲ್ಲಿ ಒಂದು ಮಹತ್ವದ ಅಂಶವನ್ನು ಅಭಿಮಾನಿಗಳು ಗುರುತಿಸಿದ್ದಾರೆ. ಸಿನಿಮಾದ ಸಂಗೀತ ನಿರ್ದೇಶಕ ಎಂದು ಎಸ್ ತಮನ್ ಹೆಸರು ಬಳಸಲಾಗಿದೆ. ಅಸಲಿಗೆ ದೇವಿ ಶ್ರೀ ಪ್ರಸಾದ್ ಅವರು ಮೊದಲು ಈ ಸಿನಿಮಾದ ಸಂಗೀತ ನಿರ್ದೇಶಕನಾಗಿದ್ದರು. ದೇವಿಶ್ರೀ ಪ್ರಸಾದ್ ಅವರು ಹಾಡುಗಳನ್ನು ಮಾಡಿದ್ದರೆ, ಹಿನ್ನೆಲೆ ಸಂಗೀತವನ್ನು ಎಸ್ ತಮನ್ ನೀಡಿದ್ದಾರೆ.
ಇದನ್ನೂ ಓದಿ:
ಈ ಮೊದಲು ಮಾರ್ಚ್ 26 ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ, ಈಗ ಒಂದು ವಾರ ಮೊದಲೇ ಅಂದರೆ ಮಾರ್ಚ್ 19 ರಂದೇ ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಬದಲಾವಣೆ ಆದ ಕಾರಣ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಬಿಡುಗಡೆಯನ್ನು ಪ್ರೀಪಾನ್ ಮಾಡಿಕೊಳ್ಳಲಾಗಿದೆ. ಇದೀಗ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ರಣ್ವೀರ್ ಸಿಂಗ್ ಅವರ ‘ಧುರಂಧರ್ 2’ ಸಿನಿಮಾಕ್ಕೆ ಪೈಪೋಟಿ ನೀಡಲಿದೆ. ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿದ್ದು, ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಆದ ಬಳಿಕ ಬಿಡುಗಡೆ ಆಗುತ್ತಿರುವ ಮೂರನೇ ಸಿನಿಮಾ ಇದಾಗಿದೆ.