ಪೂಜೆಗೆಂದು ಹೋದ ಅರ್ಚಕ ನಾಲೆಯಲ್ಲಿ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ
ಮಂಡ್ಯ/ ಬಳ್ಳಾರಿ, ಮಾರ್ಚ್ 08: ಪಕ್ಕದ ಊರಿಗೆ ಪೂಜೆಗೆ ಹೋಗುತ್ತಿರೋದಾಗಿ ತಿಳಿಸಿ ಹೊರಟಿದ್ದ ಅರ್ಚಕರೋರ್ವರ ಶವ ನಗ್ನ ಸ್ಥಿತಿಯಲ್ಲಿ ನಾಲೆಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ ನಡೆದಿದೆ. ಸಿದ್ದಲಿಂಗಪ್ಪ (46) ಮೃತ ವ್ಯಕ್ತಿ. ಪಕ್ಕದ ಶೆಟ್ಟಿಹಳ್ಳಿ ಗ್ರಾಮಕ್ಕೆ ಪೂಜೆಗೆ ಹೋಗುತ್ತಿದ್ದೇನೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಸಿದ್ದಲಿಂಗಪ್ಪ ಅವರ ಸ್ಕೂಟರ್ ಸಿಡಿಎಸ್ ನಾಲೆಯಲ್ಲಿ ತೇಲುತ್ತಿರೋದನ್ನು ಕಂಡ ಗ್ರಾಮಸ್ಥರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದರು. ಹೀಗಾಗಿ ನಾಪತ್ತೆಯಾದ ಸಿದ್ದಲಿಂಗಪ್ಪಗಾಗಿ ಹುಡುಕಾಟ ನಡೆಸಿದಾಗ ಮೈಮೇಲೆ ಬಟ್ಟೆ…