Headlines

nagaraj11081993

ಪೂಜೆಗೆಂದು ಹೋದ ಅರ್ಚಕ ನಾಲೆಯಲ್ಲಿ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಮಂಡ್ಯ/ ಬಳ್ಳಾರಿ, ಮಾರ್ಚ್​ 08: ಪಕ್ಕದ ಊರಿಗೆ ಪೂಜೆಗೆ ಹೋಗುತ್ತಿರೋದಾಗಿ ತಿಳಿಸಿ ಹೊರಟಿದ್ದ ಅರ್ಚಕರೋರ್ವರ ಶವ ನಗ್ನ ಸ್ಥಿತಿಯಲ್ಲಿ ನಾಲೆಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ ನಡೆದಿದೆ. ಸಿದ್ದಲಿಂಗಪ್ಪ (46) ಮೃತ ವ್ಯಕ್ತಿ. ಪಕ್ಕದ ಶೆಟ್ಟಿಹಳ್ಳಿ ಗ್ರಾಮಕ್ಕೆ ಪೂಜೆಗೆ ಹೋಗುತ್ತಿದ್ದೇನೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಸಿದ್ದಲಿಂಗಪ್ಪ ಅವರ ಸ್ಕೂಟರ್​​ ಸಿಡಿಎಸ್ ನಾಲೆಯಲ್ಲಿ ತೇಲುತ್ತಿರೋದನ್ನು ಕಂಡ ಗ್ರಾಮಸ್ಥರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದರು. ಹೀಗಾಗಿ ನಾಪತ್ತೆಯಾದ ಸಿದ್ದಲಿಂಗಪ್ಪಗಾಗಿ ಹುಡುಕಾಟ ನಡೆಸಿದಾಗ ಮೈಮೇಲೆ ಬಟ್ಟೆ…

Read More

Horoscope Today 8​​​​th​​ March​: ಇಂದು ಈ ರಾಶಿಯವರಿಗೆ ಧನಾತ್ಮಕ ಶಕ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 8​​​​, ಭಾನು ವರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಪಂಚಮಿ, ಸ್ವಾತಿ ನಕ್ಷತ್ರ, ಧ್ರುವ ಯೋಗ ಮತ್ತು ಕೌಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4 ಗಂಟೆ 59 ನಿಮಿಷದಿಂದ 6 ಗಂಟೆ 29 ನಿಮಿಷದವರೆಗೆ ಇರಲಿದೆ. ಬೆಳಗಿನ ಜಾವ 11 ಗಂಟೆ…

Read More

ಮದುವೆಗೆ ಕರೆದಿಲ್ಲ ಅಂತ ಕೋಪ ಮಾಡಿಕೊಂಡ ರಶ್ಮಿಕಾ, ವಿಜಯ್ ಅಭಿಮಾನಿ

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರಿಗೆ ಎಲ್ಲ ವಯಸ್ಸಿನ ಅಭಿಮಾನಿಗಳು ಇದ್ದಾರೆ. ಈ ಜೋಡಿಯನ್ನು ಕೋಟ್ಯಂತರ ಮಂದಿ ಇಷ್ಟಪಡುತ್ತಾರೆ. ಪುಟ್ಟ ಮಕ್ಕಳು ಕೂಡ ಇವರಿಗೆ ಫ್ಯಾನ್ ಆಗಿದ್ದಾರೆ. ಇತ್ತೀಚೆಗೆ ವಿಜಯ್ ಮತ್ತು ರಶ್ಮಿಕಾ ಅವರು ರಾಜಸ್ಥಾನದ ಉದಯಪುರದಲ್ಲಿ ಮದುವೆ ಮಾಡಿಕೊಂಡರು. ನಂತರ ಹೈದರಾಬಾದ್​​ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಲಾಯಿತು. ತನ್ನನ್ನು ಈ ಮದುವೆಗೆ ಆಹ್ವಾನಿಸಿಲ್ಲ ಎಂದು ಪುಟ್ಟ ಬಾಲಕಿಯೊಬ್ಬಳು ಕೋಪ ಮಾಡಿಕೊಂಡಿದ್ದಾಳೆ. ಆಕೆಗೆ ವಿಜಯ್ ದೇವರಕೊಂಡ (Vijay Devarakonda) ಸಮಾಧಾನ ಮಾಡಿದ್ದಾರೆ. ಈಗಿನ…

Read More

Video: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ನವದೆಹಲಿ, ಮಾರ್ಚ್​ 08: ಮಾಡಿದ್ದುಣ್ಣೋ ಮಹಾರಾಯ ಎಂದು ಇಂಥವರನ್ನೇ ನೋಡಿ ಹೇಳಿರಬೇಕು,ಹೋಳಿ ಆಚರಣೆ ಮಾಡುತ್ತಿದ್ದ ಜನರ ಮೇಲೆ ತಾರಸಿ ಮೇಲಿಂದ ಕಸ ಸುರಿಯಲು ಹೋದ ವ್ಯಕ್ತಿಯೊಬ್ಬ ಕಸದ ಸಮೇತ ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿತ್ತು. ಹಾಗೆಯೇ ಒಬ್ಬರಿಗೊಬ್ಬರು ಬಣ್ಣ ಎರಚಿಕೊಳ್ಳುತ್ತಾ ಸಂತೋಷವಾಗಿದ್ದವರ ಮೇಲೆ ಕಸ, ಮಣ್ಣನ್ನು ಸುರಿಯಲು ಹೋಗಿದ್ದ ವ್ಯಕ್ತಿಯೊಬ್ಬ ಮನೆಯ ತಾರಸಿಯಿಂದ ಕೆಳಗೆ ಬಿದ್ದಿದ್ದಾರೆ. ಬೇರೆ ಯಾರಿಗೋ ಕೆಟ್ಟದ್ದನ್ನು ಬಯಸಿದರೆ…

Read More

Daily Devotional: ನಮ್ಮ ನೆರಳನ್ನ ನಾವೇ ತುಳಿದರೆ ತಪ್ಪಿದ್ದಲ್ಲ ಕಂಟಕ!

ಬೆಂಗಳೂರು, ಮಾರ್ಚ್​​ 08​​​​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನಮ್ಮ ನೆರಳನ್ನ ನಾವೇ ತುಳಿಯಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ನೆರಳು ನಮ್ಮನ್ನು ಸದಾ ಹಿಂಬಾಲಿಸುತ್ತದೆ ಮತ್ತು ನಮ್ಮ ಒಳ್ಳೆಯ ಹಾಗೂ ಕೆಟ್ಟ ಕಾರ್ಯಗಳನ್ನು ದಾಖಲಿಸುತ್ತದೆ. ನಂಬಿಕೆಯ ಪ್ರಕಾರ, ನಮ್ಮ ನೆರಳು ಮೃತ್ಯುವಿನ ತನಕ ನಮ್ಮ ಜೊತೆಗಿದ್ದು, ಯಮನಿಗೆ ನಮ್ಮ ಲೆಕ್ಕಾಚಾರಗಳನ್ನು ತಲುಪಿಸುತ್ತದೆ. ಅಕಸ್ಮಿಕ ಕಂಟಕಗಳು ಬರುವಾಗ ನೆರಳು ಸೂಕ್ಷ್ಮ ಸೂಚನೆಗಳನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಧನಾತ್ಮಕ ಜೀವನ ನಡೆಸುವ ಮೂಲಕ, ಪಾಪ ಭೀತಿ ಮತ್ತು ಧರ್ಮ…

Read More

ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಪ್ರೇಯಸಿ ಸೇರಿ ಮೂವರ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ಭೂಪ

ನೆಲಮಂಗಲ, ಮಾರ್ಚ್​​ 08: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋಗಿ ಪ್ರೇಯಸಿ ಸೇರಿದಂತೆ ಮೂವರ ಮೇಲೆ ಪೆಟ್ರೋಲ್​​ ಸುರಿದು ವ್ಯಕ್ತಿಯೋರ್ವ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತರಬನಹಳ್ಳಿಯಲ್ಲಿ ನಡೆದಿದೆ. ಆರೋಪಿಯ ಪ್ರೇಯಸಿ ಸುಮಲತಾ, ಆಕೆಯ ತಂದೆ ಶ್ರೀರಾಮ(48) ಹಾಗೂ ತಾಯಿ ಮಂಜಮ್ಮ(42) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಆರೋಪಿ ಪಾಂಡುರಂಗ(29)ನನ್ನು ಬಂಧಿಸಲಾಗಿದ್ದು, ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 4 ವರ್ಷದ ಹಿಂದೆ ಗಂಡನಿಂದ ದೂರವಾಗಿದ್ದ ಸುಮಲತಾ, ಯಶವಂತಪುರದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮೇಲೆ ಎಲ್ಲರಿಗೂ ನಂಬಿಕೆ ಹೆಚ್ಚು ಉಂಟಾಗಲಿದೆ

ಮೇಷ ರಾಶಿ : ಸಿಟ್ಟನ್ನು ಕಡಿಮೆ ಮಾಡಿಕೊಳ್ಳುವ ವಿಧಾನವನ್ನು ಕಂಡುಕೊಳ್ಳುವುದು ಅವಶ್ಯಕ. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು ಔಷಧೋಪಚಾರವನ್ನು ಮಾಡುವಿರಿ. ಒಪ್ಪಂದವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಸ್ಥಿರತೆ‌ಯು ಕಾಣದ ಕಾರಣ ಬದಲಿಸುವಿರಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಬಂಧುಗಳ ಅನಿರೀಕ್ಷಿತ ಭೇಟಿಯಾಗಬಹುದು. ವೃಷಭ ರಾಶಿ : ಬಹುದಿನಗಳಿಂದ ಇದ್ದ ಚಿಂತೆ ದೂರವಾಗಲಿದೆ. ದಾನ ಕಾರ್ಯಗಳಲ್ಲಿ ಭಾಗಿಯಾಗಿ, ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ.‌ ಯಾರನ್ನೋ ಹಿಂದಿಕ್ಕಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 8ರ ದಿನಭವಿಷ್ಯ

ಯಾವುದೇ ಎಲೆಕ್ಟ್ರಾನಿಕ್ ಉಪಕರಣ ಅಥವಾ ಮೊಬೈಲ್ ಚಾರ್ಜ್ ಮಾಡುವ ಮೊದಲು “ಓಂ ಗಂ ಗಣಪತಯೇ ನಮಃ” ಎಂದು ಸ್ಮರಿಸಿ. ಈ ದಿನ ಮನೆಯಲ್ಲಿ ದೀಪ ಹಚ್ಚುವಾಗ ಅಥವಾ ವಿದ್ಯುತ್ ಕೆಲಸ ಮಾಡುವಾಗ ಅತಿಯಾದ ಅವಸರ ಬೇಡ. ಜಾಗರೂಕತೆಯೇ ಈ ದಿನದ ದೊಡ್ಡ ಪರಿಹಾರ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ದಾಂಪತ್ಯದಲ್ಲಿ ಒಂದು ಮಾತು ಬರುತ್ತದೆ, ಒಂದು ಮಾತು ಹೋಗುತ್ತದೆ. ಈ ಕಾರಣಕ್ಕೆ ವಿರಸ ವಿಕೋಪಕ್ಕೆ ಹೋಗಿ, ದಂಪತಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 8ರ ದಿನಭವಿಷ್ಯ

    ಬೆಳಗ್ಗೆ ಸ್ನಾನದ ನಂತರ ಒಂದು ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಸೂರ್ಯನಿಗೆ ಅರ್ಪಿಸಿ (ಅರ್ಘ್ಯ ನೀಡುವುದು). ಇದರಿಂದ ಮನಸ್ಸಿನ ಗೊಂದಲಗಳು ನಿವಾರಣೆಯಾಗಿ, ದಿನವಿಡೀ ಚೈತನ್ಯ ಇರುತ್ತದೆ.   ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಲ್ಯಾಪ್ ಟಾಪ್- ಮೊಬೈಲ್ ಫೋನ್ ಇಂಥವುಗಳನ್ನು ಚಾರ್ಜ್ ಗೆ ಹಾಕುವಾಗ ಸಹ ಮುಂಜಾಗ್ರತೆಯನ್ನು ವಹಿಸಿ. ಈ ಹಿಂದೆ ನಿಮಗೆ ಕೆಲವು ಹುದ್ದೆ- ಸ್ಥಾನಮಾನ ಸಿಗದ ರೀತಿಯಲ್ಲಿ ನೋಡಿಕೊಂಡಿದ್ದ ವ್ಯಕ್ತಿಗಳು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 8ರ ದಿನಭವಿಷ್ಯ

ಅಂದುಕೊಂಡ ಕೆಲಸಗಳು ಸ್ವಲ್ಪ ವಿಳಂಬವಾದರೂ ಅಥವಾ ಯಾರಾದರೂ ನಿಮ್ಮನ್ನು ಟೀಕಿಸಿದರೂ ತಕ್ಷಣ ಪ್ರತಿಕ್ರಿಯಿಸಬೇಡಿ. ಅನಗತ್ಯ ವಾದಗಳಿಂದ ದೂರವಿದ್ದರೆ ದಾಂಪತ್ಯ ಮತ್ತು ವೃತ್ತಿ ಜೀವನದಲ್ಲಿ ನೆಮ್ಮದಿ ಇರುತ್ತದೆ. ಸಂಜೆ ವೇಳೆ ಮನೆಯಲ್ಲಿ ಕರ್ಪೂರ ಹಚ್ಚಿ ಆರತಿ ಮಾಡುವುದು ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು ಸಹಾಯ ಮಾಡುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇನ್ನು ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮುಖ್ಯವಾದ ತೀರ್ಮಾನ ಒಂದನ್ನು ಮಾಡುವ ಸಲುವಾಗಿ…

Read More