All posts by nagaraj11081993

ಬೆಂಗಳೂರು, ಮಂಗಳೂರಿನಲ್ಲಿ ಡ್ರಗ್ಸ್ ಬೇಟೆ, ಒಟ್ಟೂ 16 ಕೆಜಿಗೂ ಹೆಚ್ಚು ಗಾಂಜಾ ಸೀಜ್! – Kannada News | Drug Crackdown in Karnataka: Ganja Seized in Mangaluru and Bengaluru Railway Station

ಬೆಂಗಳೂರು, ಮಂಗಳೂರಿನಲ್ಲಿ ಡ್ರಗ್ಸ್ ಬೇಟೆ, ಒಟ್ಟೂ 16 ಕೆಜಿಗೂ ಹೆಚ್ಚು ಗಾಂಜಾ ಸೀಜ್!

ಮಂಗಳೂರು/ಬೆಂಗಳೂರು, ಮೇ 15: ರಾಜ್ಯದ ಪ್ರಮುಖ ನಗರಗಳಲ್ಲಿ ಮಾದಕ ವಸ್ತುಗಳ (Drugs) ಹಾವಳಿ ತಡೆಯಲು ಪೊಲೀಸರು ಮತ್ತು ಅಬಕಾರಿ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಭಾರಿ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಕಡೆಗಳಲ್ಲಿ ಒಟ್ಟಾರೆಯಾಗಿ 16 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಪತ್ತೆಯಾಗಿವೆ.

ಮುಖ್ಯಾಂಶಗಳು

  • ಮಂಗಳೂರಿನ ಮೇರಿಹಿಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇರ್ಷಾದ್ ಎಂಬಾತನ ಬಂಧನ.
  • ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಮಾಲೀಕರಿಲ್ಲದ 13.41 ಕೆಜಿ ಗಾಂಜಾ ಚೀಲ ಜಪ್ತಿ.
  •  ಒಟ್ಟು 26 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು.

ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ 25 ಲಕ್ಷ ಮೌಲ್ಯದ ಗಾಂಜಾ ಪತ್ತೆ

ರಾಜಧಾನಿ ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಅನಾಮಧೇಯವಾಗಿ ಬಿಟ್ಟು ಹೋಗಿದ್ದ ಚೀಲವನ್ನು ತಪಾಸಣೆ ನಡೆಸಿದಾಗ 13.41 ಕೆಜಿ ಗಾಂಜಾ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 25 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಅಬಕಾರಿ ಅಧಿಕಾರಿಗಳು ಸಾಮಾನ್ಯ ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬೀಳುವ ಭೀತಿಯಿಂದ ಪೆಡ್ಲರ್‌ಗಳು ಗಾಂಜಾ ಚೀಲವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಗಾಂಜಾ ಎಲ್ಲಿಂದ ಎಲ್ಲಿಗೆ ರವಾನೆಯಾಗುತ್ತಿತ್ತು ಎಂಬುದು ಇನ್ನು ತಿಳಿದುಬಂದಿಲ್ಲ. ಸದ್ಯ ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ಆರೋಪಿಗಳ ಪತ್ತೆಗೆ ಅಧಿಕಾರಿಗಳು ಬಲೆ ಬೀಸಿದ್ದಾರೆ.

ಇದನ್ನೂ ಓದಿ 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ!

ಮಂಗಳೂರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ – ಆರೋಪಿ ಅರೆಸ್ಟ್

ಮಂಗಳೂರಿನ ಮೇರಿಹಿಲ್ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಕಾವೂರು ಠಾಣೆ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚೇರಿ ನಿವಾಸಿ ಇರ್ಷಾದ್ ಬಂಧಿತ ಆರೋಪಿ. ಬಂಧಿತನಿಂದ ಅಂದಾಜು 1.56 ಲಕ್ಷ ರೂ. ಮೌಲ್ಯದ 3.13 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಡ್ರಗ್ ಜಾಲದ ಹಿಂದಿರುವವರ ಪತ್ತೆಗೆ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಅಮ್ಮ ಪ್ಲೀಸ್ ಮಲಗೋಕೆ ಬಿಡಮ್ಮ; ಹಾಯಾಗಿ ಮಲಗಿರುವ ಕಂದಮ್ಮನನ್ನು ಎಬ್ಬಿಸುತ್ತಿರುವ ತಾಯಾನೆ – Kannada News | A mother elephant gently wakes up her baby elephant with her trunk

ಆನೆಗಳು (elephants) ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಮರಿಯಾನೆಗಳ ಆಟ ತುಂಟಾಟ, ತಾಯಾನೆ ತನ್ನ ಮರಿಗಳ ಮೇಲೆ ತೋರುವ ಪ್ರೀತಿಯ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಹಾಯಾಗಿ ಮಲಗಿ ನಿದ್ರಿಸುತ್ತಿರುವ ಮರಿಯಾನೆಯನ್ನು ತಾಯಾನೆ ಮೆಲ್ಲನೆ ಎಬ್ಬಿಸಲು ಪ್ರಯತ್ನಿಸುವ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

leezahverse ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ತಾಯಿ ಪ್ರೀತಿಯನ್ನು ಕಾಣಬಹುದು. ಮರಿಯಾನೆಯೊಂದು ಹಾಯಾಗಿ ನಿದ್ರಿಸುತ್ತಿದೆ. ನಿದ್ರೆಗೆ ಜಾರಿರುವ ಕಂದಮ್ಮನನ್ನು ತಾಯಿ ಆನೆಯು ಮೆಲ್ಲನೆ ಎಬ್ಬಿಸುತ್ತಿದೆ. ಆದರೆ ಆನೆ ಮರಿ ಮಾತ್ರ ಸ್ವಲ್ಪ ಮಲಗುವೆ, ಇರು ಅಮ್ಮ ಎನ್ನುವಂತೆ ಎಚ್ಚರಗೊಳ್ಳದೇ ಗಡದ್ದಾಗಿ ನಿದ್ರಿಸುತ್ತಿರುವುದನ್ನು ಕಾಣಬಹುದು. ಈ ವಿಡಿಯೋದ ಕೊನೆಗೆ ಮರಿಯಾನೆ ಮೆಲ್ಲನೆ ಎದ್ದು ನಿಂತಿರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ಕಂದಮ್ಮನಿಗೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕನಿಗೆ ಧನ್ಯವಾದ ತಿಳಿಸಿದ ಯುವಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತುಂಬಾನೇ ಮುದ್ದಾಗಿದೆ ಎಂದರೆ, ಮತ್ತೊಬ್ಬರು, ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನನ್ನ ಮುಂಜಾನೆ ಇದೇ ರೀತಿ ಇರುತ್ತದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Vasthu Tips: ಬಾಗಿಲಿನ ಹಿಂದೆ ಈ ವಸ್ತುಗಳನ್ನು ನೇತುಹಾಕಲೇಬೇಡಿ; ಇದು ಸಂಕಷ್ಟಕ್ಕೆ ಆಹ್ವಾನ! – Kannada News | Vastu Tips: 5 Things You Must Never Keep Behind Doors for Positive Home Energy

ಬಾಗಿಲಿನ ಹಿಂದೆ ಈ ವಸ್ತುಗಳನ್ನು ನೇತುಹಾಕಬೇಡಿ
Image Credit source: Pinterest

ಮನೆಯ ಪ್ರತಿಯೊಂದು ಮೂಲೆಯೂ ಒಂದಲ್ಲ ಒಂದು ರೀತಿಯ ಶಕ್ತಿಯನ್ನು (Energy) ಹೊಂದಿರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ವಾಸ್ತು ಪ್ರಕಾರ, ಮನೆಯ ಬಾಗಿಲುಗಳು ಕೇವಲ ಓಡಾಟದ ದಾರಿಯಲ್ಲ, ಅವು ಸುಖ-ಸಮೃದ್ಧಿ ಮನೆಗೆ ಪ್ರವೇಶಿಸುವ ದ್ವಾರಗಳು. ಆದರೆ ನಾವು ತಿಳಿಯದೆಯೇ ಬಾಗಿಲಿನ ಹಿಂದೆ ಕೆಲವು ವಸ್ತುಗಳನ್ನು ನೇತುಹಾಕುತ್ತೇವೆ. ಇದು ಮನೆಯಲ್ಲಿ ನಕಾರಾತ್ಮಕ ಶಕ್ತಿ ನೆಲೆಸಲು ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ, ಬಾಗಿಲಿನ ಹಿಂಭಾಗದಲ್ಲಿ ಯಾವ 5 ವಸ್ತುಗಳನ್ನು ಇಡಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಬಟ್ಟೆಗಳ ರಾಶಿ:

ಬಾಗಿಲಿನ ಹಿಂದೆ ಕೊಂಡಿಗಳಿಗೆ (Hooks) ಬಟ್ಟೆಗಳನ್ನು ರಾಶಿ ಹಾಕುವುದು ಅನೇಕರ ಅಭ್ಯಾಸ. ಆದರೆ ವಾಸ್ತು ಪ್ರಕಾರ, ಬಟ್ಟೆಗಳ ಈ ಹೊರೆ ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಇದು ಕುಟುಂಬದ ಸದಸ್ಯರಲ್ಲಿ ಮಾನಸಿಕ ಕಿರಿಕಿರಿ, ಅಶಾಂತಿ ಮತ್ತು ಸದಾ ಏನೋ ಒಂದು ರೀತಿಯ ಭಾರವಾದ ಭಾವನೆಯನ್ನು ಉಂಟುಮಾಡುತ್ತದೆ.

ಔಷಧಿಗಳು:

ನೆನಪಿರಲಿ ಎಂಬ ಕಾರಣಕ್ಕೆ ಬಾಗಿಲಿನ ಹಿಂದೆ ಔಷಧಿಗಳ ಚೀಲವನ್ನು ನೇತುಹಾಕಬೇಡಿ. ಔಷಧಿಗಳು ರೋಗ ಮತ್ತು ಸಂಕಟದ ಸಂಕೇತ. ಬಾಗಿಲಿನ ಹಿಂದೆ ಇವುಗಳನ್ನು ಇಡುವುದರಿಂದ ಮನೆಯಲ್ಲಿ ಅನಾರೋಗ್ಯದ ಪ್ರಭಾವ ಹೆಚ್ಚಾಗುತ್ತದೆ ಮತ್ತು ಅನಗತ್ಯ ವೈದ್ಯಕೀಯ ವೆಚ್ಚಗಳು ಬೆಳೆಯುತ್ತವೆ ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ.

ಹಳೆಯ ಕ್ಯಾಲೆಂಡರ್‌:

ಸಮಯವು ಪ್ರಗತಿಯ ಸಂಕೇತ. ಹಳೆಯ ವರ್ಷದ ಕ್ಯಾಲೆಂಡರ್‌ಗಳನ್ನು ಬಾಗಿಲಿನ ಹಿಂದೆ ಹಾಗೆಯೇ ಬಿಡುವುದು ನಿಮ್ಮ ಜೀವನದ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ. ಇದು ನಿಮ್ಮನ್ನು ಹಳೆಯ ನೆನಪುಗಳಲ್ಲೇ ಸಿಲುಕಿಸಿ, ಜೀವನದಲ್ಲಿ ಹೊಸ ಅವಕಾಶಗಳು ಬರದಂತೆ ತಡೆಯುತ್ತದೆ.

ಇದನ್ನೂ ಓದಿ: ನಿಮ್ಮ ಜನ್ಮ ದಿನಾಂಕದಲ್ಲೇ ಅಡಗಿದೆ ಮದುವೆಯ ರಹಸ್ಯ; ನಿಮಗಾಗುವುದು ಪ್ರೇಮ ವಿವಾಹವೋ ಅಥವಾ ಅರೇಂಜ್ ಮ್ಯಾರೇಜ್?

ಪಾದರಕ್ಷೆಗಳು:

ಬಾಗಿಲಿನ ಹಿಂದೆ ಚಪ್ಪಲಿ ಅಥವಾ ಬೂಟುಗಳನ್ನು ಇಡುವುದು ವಾಸ್ತು ದೋಷಕ್ಕೆ ಪ್ರಮುಖ ಕಾರಣ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪಾದರಕ್ಷೆಗಳು ರಾಹುವಿಗೆ ಸಂಬಂಧಿಸಿವೆ. ಇವುಗಳನ್ನು ಬಾಗಿಲಿನ ಹಿಂದೆ ಇಟ್ಟಾಗ ರಾಹುವಿನ ನಕಾರಾತ್ಮಕ ಪ್ರಭಾವ ಹೆಚ್ಚಾಗಿ, ಮನೆಯಲ್ಲಿ ದಾರಿದ್ರ್ಯ ಮತ್ತು ಸದಾ ಜಗಳದ ವಾತಾವರಣ ನಿರ್ಮಾಣವಾಗುತ್ತದೆ.

ಒದ್ದೆ ಟವೆಲ್:

ಸ್ನಾನದ ನಂತರ ಒದ್ದೆ ಟವೆಲ್ ಅನ್ನು ಬಾಗಿಲಿನ ಹಿಂದೆ ಒಣಗಲು ಹಾಕುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟುಬಿಡಿ. ಒದ್ದೆಯಾದ ಬಟ್ಟೆಗಳು ನಕಾರಾತ್ಮಕತೆಯನ್ನು ಬೇಗನೆ ಆಕರ್ಷಿಸುತ್ತವೆ. ಇದರಿಂದ ದಂಪತಿಗಳ ನಡುವೆ ಅಥವಾ ಕುಟುಂಬದ ಸದಸ್ಯರ ನಡುವೆ ಮನಸ್ತಾಪಗಳು ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ವಾಸ್ತು ತಜ್ಞರು ಎಚ್ಚರಿಸಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ; ಜೂನ್ 21ಕ್ಕೆ ರೀ-ಎಕ್ಸಾಮ್! – Kannada News | Major NEET Changes: Computer Based Test and June 21 Re exam Confirmed by Govt

ದೆಹಲಿ, ಮೇ.15: ನೀಟ್-ಯುಜಿ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (CBT Mode) ಮಾದರಿಯಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ.

ಇನ್ನು ರದ್ದುಗೊಂಡಿದ್ದ ನೀಟ್-ಯುಜಿ 2026ರ ಮರು ಪರೀಕ್ಷೆಯು ಜೂನ್ 21 ರಂದು ನಡೆಯಲಿದೆ.ಜೂನ್ 14 ರೊಳಗೆ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸಲಾಗುವುದು ಎಂದು ಹೇಳಲಾಗಿದೆ. ವಿದ್ಯಾರ್ಥಿಗಳಿಗೆ ತಮ್ಮ ಪರೀಕ್ಷಾ ಕೇಂದ್ರವಾಗಿ ಆಯ್ಕೆ ಮಾಡಿಕೊಳ್ಳಲು ಒಂದು ವಾರ ಮುಂಚಿತವಾಗಿ ಅವಕಾಶ ನೀಡಲಾಗುವುದು. ಮರು ಪರೀಕ್ಷೆಗೆ ಯಾವುದೇ ಶುಲ್ಕವಿರುವುದಿಲ್ಲ. ಈ ಹಿಂದೆ ಪಾವತಿಸಿದ್ದ ಪರೀಕ್ಷಾ ಶುಲ್ಕವನ್ನು ಅಭ್ಯರ್ಥಿಗಳಿಗೆ ಮರುಪಾವತಿ ಮಾಡಲಾಗುವುದು.

ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಧರ್ಮೇಂದ್ರ ಪ್ರಧಾನ್, “ಪರೀಕ್ಷಾ ವ್ಯವಸ್ಥೆಯಲ್ಲಿ ಅಕ್ರಮ ಎಸಗುವವರ ವಿರುದ್ಧ ನಮ್ಮ ಸರ್ಕಾರವು ‘ಶೂನ್ಯ ಸಹನೆ’ (Zero Tolerance) ನೀತಿಯನ್ನು ಹೊಂದಿದೆ. ಪತ್ರಿಕೆ ಸೋರಿಕೆ ಮಾಡಿದ ‘ಮಾಫಿಯಾ’ಗಳು ಕಷ್ಟಪಟ್ಟು ಓದುವ ವಿದ್ಯಾರ್ಥಿಗಳ ಸೀಟುಗಳನ್ನು ಕಸಿಯಲು ಬಿಡುವುದಿಲ್ಲ,” ಎಂದು ಎಚ್ಚರಿಸಿದ್ದಾರೆ. ಈ ಹಗರಣದ ಬೇರುಗಳನ್ನು ಪತ್ತೆಹಚ್ಚಲು ಸಿಬಿಐ ತನಿಖೆಯನ್ನು ತೀವ್ರಗೊಳಿಸಲಾಗಿದೆ.

ಪೇಪರ್-ಪೆನ್ ಮಾದರಿಯ ಪರೀಕ್ಷೆಯಲ್ಲಿ ಸೋರಿಕೆಯ ಸಾಧ್ಯತೆ ಹೆಚ್ಚಿರುವುದರಿಂದ, ಐಐಟಿ-ಜೆಇಇ ಮಾದರಿಯಲ್ಲಿಯೇ ನೀಟ್ ಪರೀಕ್ಷೆಯನ್ನೂ ಡಿಜಿಟಲ್ ರೂಪಕ್ಕೆ ತರಲಾಗುತ್ತಿದೆ. ಎನ್‌ಟಿಎ (NTA) ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಲಾಗುತ್ತಿದೆ.

ಇದನ್ನೂ ಓದಿ: ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ!

ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ!

ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ತಡರಾತ್ರಿ ನಡೆಸಿದ ಉನ್ನತ ಮಟ್ಟದ ತುರ್ತು ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ರದ್ದಾಗಿದ್ದ ಪರೀಕ್ಷೆಗೆ ಹೊಸ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಜೂನ್ 21 ರಂದು ಮರು ಪರೀಕ್ಷೆ ನಡೆಯಲಿದೆ ಎಂದು ಘೋಷಿಸಲಾಗಿದೆ. ಮೇ 3 ರಂದು ನಡೆದಿದ್ದ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ, ಜೂನ್ 21 ರಂದು ದೇಶಾದ್ಯಂತ ಮರು ಪರೀಕ್ಷೆ ನಡೆಸಲು ಸಚಿವಾಲಯ ಹಸಿರು ನಿಶಾನೆ ತೋರಿಸಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾಧುರಿ ದೀಕ್ಷಿತ್​ಗೆ ಕನಸಲ್ಲೂ ಬಂದು ಕಾಡುತ್ತಿದ್ದ ಈ ಕ್ರಿಕೆಟಿಗ – Kannada News | Madhuri Dixit’s Birthday: Reveals Crush on Sunil Gavaskar

ಬಾಲಿವುಡ್‌ನ ‘ಧಕ್ ಧಕ್ ಗರ್ಲ್’ ಮಾಧುರಿ ದೀಕ್ಷಿತ್ ಅವರಿಗೆ (Madhuri Dixit) ಇಂದು (ಮೇ 15) 59ನೇ ಜನ್ಮದಿನದ ಸಂಭ್ರಮ. ದಶಕಗಳ ಕಾಲ ತಮ್ಮ ನಟನೆ ಮತ್ತು ನೃತ್ಯದ ಮೂಲಕ ಭಾರತೀಯ ಚಿತ್ರರಂಗವನ್ನು ಆಳಿದ ಮಾಧುರಿ, ಇಂದಿಗೂ ಸೌಂದರ್ಯ ಮತ್ತು ಪ್ರತಿಭೆಯ ವಿಷಯದಲ್ಲಿ ಹೊಸ ತಲೆಮಾರಿನ ನಟಿಯರಿಗೆ ಸ್ಫೂರ್ತಿಯಾಗಿದ್ದಾರೆ. ಮಾಧುರಿ ಅವರ ಜನ್ಮದಿನದ ಈ ಸಂದರ್ಭದಲ್ಲಿ ಅವರ ಹಳೆಯ ಸಂದರ್ಶನವೊಂದು ಸಖತ್ ಸುದ್ದಿಯಾಗುತ್ತಿದೆ. ಈ ಹಿಂದೆ ನೀಡಿದ್ದ ಸಂದರ್ಶನವೊಂದರಲ್ಲಿ ಮಾಧುರಿ ಅವರು ತಮಗೆ ಭಾರತೀಯ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಅವರ ಮೇಲೆ ಕ್ರಶ್ ಇತ್ತು ಎಂಬ ವಿಷಯವನ್ನು ಬಹಿರಂಗಪಡಿಸಿದ್ದರು.

ಮಾಧುರಿಗಿಂತ ಗವಾಸ್ಕರ್ ಸುಮಾರು 17 ವರ್ಷ ದೊಡ್ಡವರಾಗಿದ್ದರೂ, ಅವರ ಆಟ ಮತ್ತು ವ್ಯಕ್ತಿತ್ವಕ್ಕೆ ಮಾಧುರಿ ಫಿದಾ ಆಗಿದ್ದರು. ‘ನಾನು ಸುನಿಲ್ ಗವಾಸ್ಕರ್ ಅವರ ಮೇಲೆ ಕ್ರೇಜ್ -ಇದೆ. ಅವರು ತುಂಬಾ ಸುಂದರವಾಗಿದ್ದಾರೆ, ಅವರ ಹಿಂದೆ ಓಡಬೇಕು ಎನಿಸುತ್ತದೆ. ಅವರು ನನ್ನ ಕನಸಿನಲ್ಲೂ ಬರುತ್ತಾರೆ’ ಎಂದು ನಟಿ ಅಂದು ಮುಕ್ತವಾಗಿ ಹೇಳಿಕೊಂಡಿದ್ದರು.

90ರ ದಶಕದಲ್ಲಿ ಮಾಧುರಿ ದೀಕ್ಷಿತ್ ಅವರ ಕ್ರೇಜ್ ಎಷ್ಟಿತ್ತೆಂದರೆ, ಅವರು ಸಂಭಾವನೆ ವಿಷಯದಲ್ಲಿ ಸೂಪರ್‌ಸ್ಟಾರ್ ನಟರನ್ನೇ ಹಿಂದಿಕ್ಕಿದ್ದರು. ಇದಕ್ಕೆ ಅತ್ಯುತ್ತಮ ಉದಾಹರಣೆ ‘ಹಮ್ ಆಪ್ಕೆ ಹೈ ಕೌನ್’ ಸಿನಿಮಾ. 1994ರ ಈ ಬ್ಲಾಕ್‌ಬಸ್ಟರ್ ಚಿತ್ರಕ್ಕಾಗಿ ಮಾಧುರಿ ಬರೋಬ್ಬರಿ 2.7 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು. ವರದಿಗಳ ಪ್ರಕಾರ, ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ಸಲ್ಮಾನ್ ಖಾನ್ ಅವರಿಗಿಂತಲೂ ಮಾಧುರಿ ಅವರೇ ಹೆಚ್ಚು ಹಣ ಪಡೆದಿದ್ದರು. ಆ ಕಾಲಕ್ಕೆ ಈ ಮೊತ್ತವು ಬಾಲಿವುಡ್‌ನಲ್ಲಿ ಅತಿ ದೊಡ್ಡ ದಾಖಲೆಯಾಗಿತ್ತು.

ಇದನ್ನೂ ಓದಿ: ಸೀರಿಯಲ್ ಕಿಲ್ಲರ್ ಆದ ಮಾಧುರಿ ದೀಕ್ಷಿತ್; ಹೊಸ ಅವತಾರದಲ್ಲಿ ಧಕ್ ಧಕ್ ಗರ್ಲ್

ಸದ್ಯ ಮಾಧುರಿ ಬೆಳ್ಳಿತೆರೆಯಿಂದ ಸ್ವಲ್ಪ ದೂರವಿದ್ದರೂ, ರಿಯಾಲಿಟಿ ಶೋಗಳು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. 59ರ ಪ್ರಾಯದಲ್ಲೂ ಅವರ ಫಿಟ್‌ನೆಸ್ ಮತ್ತು ನಗು ಅಭಿಮಾನಿಗಳನ್ನು ಮಂತ್ರಮುಗ್ಧರನ್ನಾಗಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 12:10 pm, Fri, 15 May 26

Source link

ದರ್ಶನ್ ಜಾಮೀನು ಅರ್ಜಿ: ಸುಪ್ರೀಂ ಕೋರ್ಟ್​​ನಲ್ಲಿ ವಾದ-ಪ್ರತಿವಾದ ಹೀಗಿತ್ತು? – Kannada News | Darshan Bail application: here is the detail of argument in Supreme Court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಇತ್ತೀಚೆಗಷ್ಟೆ ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಜೈಲಿನ ಅವ್ಯವಸ್ಥೆ, ಜೈಲಧಿಕಾರಿಗಳ ತಾರತಮ್ಯ, ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ ಇನ್ನೂ ಹಲವು ಕಾರಣಗಳನ್ನು ನೀಡಿ ನಟ ದರ್ಶನ್ ಅವರು ತಮಗೆ ಜಾಮೀನು ನೀಡಬೇಕೆಂದು ಸುಪ್ರೀಂಕೋರ್ಟ್​​ನಲ್ಲಿ ಮನವಿ ಮಾಡಿದ್ದರು. ಇಂದು ನಟ ದರ್ಶನ್ ಪರವಾಗಿ ಖ್ಯಾತ ವಕೀಲ ಮುಕುಲ್ ರೊಹ್ಟಗಿ ವಾದ ಮಂಡಿಸಿದರೆ, ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದರು.

ನ್ಯಾಯಮೂರ್ತಿ ಜೆಬಿ ಪರ್ದಿವಾಲಾ, ನ್ಯಾಯಮೂರ್ತಿ ವಿಜಯ್ ಬಿಷ್ಣೋಯಿ ಅವರ ದ್ವಿಸದಸ್ಯ ಪೀಠವು ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಮೊದಲಿಗೆ ವಾದ ಮಂಡಿಸಿದ ದರ್ಶನ್ ಪರ ವಕೀಲ ಮುಕುಲ್ ರೊಹ್ಟಗಿ, ‘ಜೈಲಿನಲ್ಲಿ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ, ಇನ್ನೂ ಕ್ವಾರಂಟೈನ್ ಸೆಲ್​​ನಲ್ಲೇ ಇಟ್ಟಿದ್ದಾರೆ’ ಎಂದರು. ಅದಕ್ಕೆ ನ್ಯಾಯಮೂರ್ತಿಗಳು, ‘ನಿಮಗೆ (ಆರೋಪಿಗೆ) ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಜೈಲಧಿಕಾರಿಗಳು ವರದಿ ನೀಡಿದ್ದಾರೆ. 70 ಬಾರಿ ಕುಟುಂಬದವರ ಭೇಟಿಗೆ ಅವಕಾಶ ನೀಡಿದ್ದೇವೆ ಎಂದಿದ್ದಾರೆ ಎಂದರು. ಆದರೆ ರೊಹ್ಟಗಿ, ‘ಕುಟುಂಬದೊಂದಿಗೆ ಮಾತನಾಡುವಾಗ ಪೊಲೀಸರು ಜೊತೆಯಲ್ಲಿರುತ್ತಾರೆ ಎಂದರು.

ಬಳಿಕ ಸಾಕ್ಷ್ಯಗಳ ವಿಚಾರಣೆ ಬಗ್ಗೆ ವಾದ ಮಂಡಿಸಿದ ಮುಕುಲ್ ರೊಹ್ಟಗಿ, 272 ಸಾಕ್ಷ್ಯಗಳ ಪೈಕಿ ಕೇವಲ 10 ಸಾಕ್ಷ್ಯಗಳ ವಿಚಾರಣೆಯನ್ನಷ್ಟೆ ಮಾಡಲಾಗಿದೆ’ ಎಂದರು. ನ್ಯಾಯಮೂರ್ತಿಗಳು ಪ್ರಾಸಿಕ್ಯೂಷನ್ ಅವರನ್ನುದ್ದೇಶಿಸಿ, ವಿಚಾರಣೆ ತಡವಾಗುತ್ತಿರುವುದಕ್ಕೆ ಕಾರಣ ಕೇಳಿದರು. ಅದಕ್ಕೆ ಸಿದ್ಧಾರ್ಥ್ ಲೂತ್ರಾ ಅವರು, ‘ಒಂದು ವರ್ಷದಲ್ಲಿ 60 ಪ್ರಮುಖ ಸಾಕ್ಷ್ಯಗಳ ವಿಚಾರಣೆ ಮಾಡುವುದಾಗಿ ಹೇಳಿದರು. ಬಳಿಕ ದರ್ಶನ್ ಪರ ವಕೀಲರು ಪ್ರತ್ಯಕ್ಷದರ್ಶಿ ಸಾಕ್ಷ್ಯಗಳ ವಿಚಾರಣೆಯನ್ನಾದರೂ ಮಾಡಿ ಎಂದು ನಾವು ಕೇಳುತ್ತಿದ್ದೇವೆ ಎಂದರು. ಅದಕ್ಕೆ ಸಿದ್ಧಾರ್ಥ್ ಲೂಥ್ರಾ, ‘ನೀವು (ಆರೋಪಿಗಳು) ಸಾಕ್ಷ್ಯಗಳಿಗೆ ಏನು ಮಾಡಿದ್ದೀರಿ ಎಂದು ನಾನು ಇಲ್ಲಿ ಹೇಳುವುದಿಲ್ಲ, ನಾನು ಹೇಳಿದರೆ ನಿಮ್ಮ ಜಾಮೀನು ಅರ್ಜಿಯೇ ರದ್ದಾಗಲಿದೆ’ ಎಂದು ಖಾರವಾಗಿ ಹೇಳಿದರು.

ಇದನ್ನೂ ಓದಿ:Darshan Thoogudeepa: ದರ್ಶನ್​​ಗೆ ಕನಿಷ್ಟ ಒಂದು ವರ್ಷ ಜೈಲು ಖಾಯಂ

ಬಳಿಕ ನ್ಯಾಯಮೂರ್ತಿಗಳು, ಪ್ರಕರಣದ ವಿಚಾರಣೆ ನಡೆಸುತ್ತಿರುವ 57ನೇ ಸಿಸಿಎಚ್​ ನ್ಯಾಯಾಲಯ ನೀಡಿರುವ ವರದಿಯಂತೆ ನವೆಂಬರ್ 3 ರಂದು ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಕಳೆದ ಏಳು ತಿಂಗಳಲ್ಲಿ 10 ಸಾಕ್ಷ್ಯಗಳ ವಿಚಾರಣೆ ಮಾಡಿರುವುದಾಗಿ ವರದಿ ನೀಡಿದೆ ಎಂಬುದನ್ನು ಓದಿ ತಿಳಿಸಿದರು. ಬಳಿಕ ಆದೇಶ ಬರೆಸಿದ ನ್ಯಾಯಮೂರ್ತಿಗಳು, ‘ಮುಂದಿನ ಒಂದು ವರ್ಷದಲ್ಲಿ ಪ್ರಮುಖವಾದ 60 ಸಾಕ್ಷ್ಯಗಳ ವಿಚಾರಣೆ ನಡೆಸಬೇಕು, ಅನಗತ್ಯ ಕಾರಣ ನೀಡಿ ವಿಚಾರಣೆ ಮುಂದೂಡಬಾರದು. ಒಂದು ವರ್ಷದ ನಂತರ ಜಾಮೀನು ಅರ್ಜಿಯ ಪರಾಮರ್ಶೆ ಮಾಡಬಹುದು. ಆ ಬಳಿಕ ನೇರವಾಗಿ ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಅರ್ಜಿ ಸಲ್ಲಿಸಬಹುದು’ ಎಂದರು.

ಜೈಲಿನಲ್ಲಿ ಸೌಲಭ್ಯ ನೀಡದೇ ಇರುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಿದ ನ್ಯಾಯಮೂರ್ತಿಗಳು, ‘ಜೈಲಿನಲ್ಲಿ ಕನಿಷ್ಠ ಮೂಲ ಸವಲತ್ತು ನೀಡಿಲ್ಲವೆಂದು ಆರೋಪಿಸಲಾಗಿದೆ, ಇದಕ್ಕೆ ಸಂಬಂಧಿಸಿದಂತೆ ವಿವರವಾದ ಪ್ರಮಾಣಪತ್ರ ಸಲ್ಲಿಸಿದ್ದಾರೆ, ಜೈಲಿನ ಮುಖ್ಯ ಅಧೀಕ್ಷಕರೇ ಪ್ರಮಾಣಪತ್ರ ಸಲ್ಲಿಸಿದ್ದಾರೆ, ದರ್ಶನ್​ಗೆ ಎಲ್ಲಾ ಕನಿಷ್ಠ ಮೂಲ ಸವಲತ್ತು ನೀಡಬೇಕು, ಜೈಲು ಕೈಪಿಡಿಯಲ್ಲಿ ನಿಗದಿಪಡಿಸಿರುವ ಸವಲತ್ತು ನೀಡಬೇಕು, ಕ್ವಾರಂಟೈನ್ ಸೆಲ್ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು. ಆ ಮೂಲಕ ಇನ್ನು ಕನಿಷ್ಟ ಒಂದು ವರ್ಷ ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಎಂದಾಗಿದೆ. ಒಂದು ವರ್ಷದಲ್ಲಿ ಸರಿಯಾಗಿ ಸಾಕ್ಷ್ಯಗಳ ವಿಚಾರಣೆ ಆಗದಿದ್ದಲ್ಲಿ ಮಾತ್ರವೇ ದರ್ಶನ್ ಜಾಮೀನು ಅರ್ಜಿ ಸಲ್ಲಿಸಬಹುದಾಗಿದೆ. ಆಗ ನ್ಯಾಯಾಲಯವು ಆ ವರೆಗಿನ ವಿಚಾರಣೆಯನ್ನು ಆಧರಿಸಿ ದರ್ಶನ್​​ಗೆ ಜಾಮೀನು ನೀಡಬೇಕೋ ಬೇಡವೊ ಎಂಬುದನ್ನು ನಿರ್ಧರಿಸಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 12:05 pm, Fri, 15 May 26

Source link

ಸುಪ್ರೀಂಕೋರ್ಟ್​ ಆದೇಶದಿಂದ ದರ್ಶನ್​​ಗೆ ಹೆಚ್ಚಿತು ಸಂಕಷ್ಟ; 2028ರವರೆಗೂ ಬರಲ್ಲ ಡಿ ಬಾಸ್ ಸಿನಿಮಾ? – Kannada News | Darshan Bail Plea Rejected: Renukaswamy Case Delays Career, Future Films at Risk

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಸಾಕ್ಷಿ ವಿಚಾರಣೆ ವಿಳಂಬ ಆಗುತ್ತಿದೆ ಎಂದು ನಟ ದರ್ಶನ್ ಅವರು ಆರೋಪಿಸಿದ್ದರು. ಇದೇ ಕಾರಣ ನೀಡಿ ಸುಪ್ರೀಂಕೋರ್ಟ್​​​ನಲ್ಲಿ ಜಾಮೀನು ಅರ್ಜಿ ಕೂಡ ಸಲ್ಲಿಕೆ ಮಾಡಿದ್ದರು. ಇದೇ ವೇಳೆ ಅವರು ಸುದೀರ್ಘ ಜೈಲುವಾಸದಿಂದ ಜೀವನೋಪಾಯಕ್ಕೂ ಸಮಸ್ಯೆ ಆಗುತ್ತಿದೆ ಎಂದು ಆರೋಪಿಸಿದ್ದರು. ಏನೇ ಹೇಳಿದರೂ ಕೋರ್ಟ್ ಮಾತ್ರ ದರ್ಶನ್ ಮನವಿಯನ್ನು ಪರುಸ್ಕರಿಸಿಲ್ಲ. ಮುಂದಿನ ಒಂದು ವರ್ಷ ದರ್ಶನ್ (Darshan)​​ ಜಾಮೀನು ಕೇಳುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇದರಿಂದ ದರ್ಶನ್ ವೃತ್ತಿ ಜೀವನಕ್ಕೆ ಸಂಕಷ್ಟ ಎದುರಾಗಿದೆ.

ಜಾಮೀನು ಅರ್ಜಿವಿಳಂಬ ಆಗುತ್ತಿದೆ ಎಂದು ಹೇಳುವುದರ ಜೊತೆಗೆ ತಮ್ಮ ಸಿನಿಮಾಗಳ ಬಗ್ಗೆಯೂ ಸ್ಪಷ್ಟವಾಗಿ ಬರೆದಿದ್ದರು. ಜಾಮೀನು ಅರ್ಜಿಯಲ್ಲಿ ದರ್ಶನ್ ಅವರು ತಮ್ಮ ವೃತ್ತಿಜೀವನದ ಸಂಕಷ್ಟಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು. ‘ನಾನು ಪ್ರತಿ ವರ್ಷ ಸರಾಸರಿ 2 ರಿಂದ 3 ಸಿನಿಮಾಗಳನ್ನು ಮಾಡುತ್ತಿದ್ದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮೀಡಿಯಾ ಹೌಸ್ ಸ್ಟೂಡಿಯೋಸ್ ಅಂತಹ ದೊಡ್ಡ ಸಂಸ್ಥೆಗಳ ಚಿತ್ರಗಳಿಗೆ ಈಗಾಗಲೇ ಸಹಿ ಮಾಡಿದ್ದೇನೆ. ನಿರ್ಮಾಪಕರು ಸುಮಾರು 6 ಕೋಟಿ ರೂಪಾಯಿ ಬಂಡವಾಳ ಹೂಡಿದ್ದಾರೆ. ಸುದೀರ್ಘ ಜೈಲುವಾಸವು ನನ್ನ ಸಿನೆಮಾ ಭವಿಷ್ಯಕ್ಕೆ ಮರಣಗಂಟೆಯಾಗಲಿದೆ’ ಎಂದು ಅವರು ಅಲವತ್ತುಕೊಂಡಿದ್ದರು. ಆದರೆ ಕೋರ್ಟ್ ಈ ವಾದವನ್ನು ಪುರಸ್ಕರಿಸಿಲ್ಲ.

2028ರವರೆಗೂ ಸಿನಿಮಾ ಬರುವುದು ಅನುಮಾನ?

ಕೋರ್ಟ್ ಆದೇಶದ ಪ್ರಕಾರ ದರ್ಶನ್ ಇನ್ನೂ ಒಂದು ವರ್ಷ ಜೈಲಿನಲ್ಲೇ ಇರಬೇಕು. ಒಂದು ವೇಳೆ ಮುಂದಿನ ವರ್ಷ ಅವರು ಬಿಡುಗಡೆಯಾದರೂ, ಅವರು ಮತ್ತೆ ಫಿಟ್ ಆಗಿ, ಶೂಟಿಂಗ್ ಆರಂಭಿಸಿ, ಪೋಸ್ಟ್ ಪ್ರೊಡಕ್ಷನ್ ಮುಗಿಸಿ ಸಿನಿಮಾ ತೆರೆಗೆ ಬರಲು ಕನಿಷ್ಠ ಒಂದು ವರ್ಷ ಬೇಕಾಗುತ್ತದೆ. ಈ ಲೆಕ್ಕಾಚಾರದ ಪ್ರಕಾರ, ಮುಂದಿನ ಎರಡು ವರ್ಷಗಳ ಕಾಲ ದರ್ಶನ್ ಅವರ ಯಾವುದೇ ಹೊಸ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಗಳಿಲ್ಲ. ಇದು ಅವರ ವೃತ್ತಿಜೀವನಕ್ಕೆ ಮತ್ತು ಅವರ ಮೇಲೆ ಕೋಟಿಗಟ್ಟಲೆ ಹಣ ಹೂಡಿರುವ ನಿರ್ಮಾಪಕರಿಗೆ ಭಾರಿ ಹೊಡೆತ ನೀಡಿದೆ.

ಇದನ್ನೂ ಓದಿ: ದರ್ಶನ್​​ಗೆ ಕನಿಷ್ಟ ಒಂದು ವರ್ಷ ಜೈಲು ಖಾಯಂ

ಈ ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದಾರೆ. ಕಳೆದ 8 ತಿಂಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಇಷ್ಟು ನಿಧಾನಗತಿಯಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಪ್ರಕರಣ ಶೀಘ್ರವಾಗಿ ಮುಕ್ತಾಯಗೊಳ್ಳುವ ಲಕ್ಷಣಗಳಿಲ್ಲ. ಇದೇ ಅಂಶವನ್ನು ದರ್ಶನ್ ಅವರು ಜಾಮೀನು ಪಡೆಯಲು ಪ್ರಮುಖ ಅಸ್ತ್ರವಾಗಿ ಬಳಸಿದ್ದರು. ‘ಒಂದು ವರ್ಷದ ಒಳಗೆ 60 ಸಾಕ್ಷ್ಯಗಳ ವಿಚಾರಣೆ ಮುಗಿಸಿ, ಆ ಬಳಿಕ ವಿಚಾರಣಾ ನ್ಯಾಯಾಲಯದಲ್ಲಿಯೇ ಆರೋಪಿ (ದರ್ಶನ್) ಜಾಮೀನಿಗೆ ಅರ್ಜಿ ಸಲ್ಲಿಸಬಹುದು’ ಎಂದು ಕೋರ್ಟ್ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಒಟಿಟಿಯಲ್ಲಿ ಬಿಡುಗಡೆ ಆಯ್ತು ‘ಧುರಂಧರ್ 2’ ಆದರೆ ಭಾರತೀಯರಿಗಲ್ಲ – Kannada News | Dhurandhar 2 movie released on Netflix but not in India

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ಅಬ್ಬರದ ಬಳಿಕ ಇದೀಗ ಒಟಿಟಿಗೆ ಬಂದಿದೆ. ‘ಧುರಂಧರ್ 2’ ಸಿನಿಮಾದ ಒಟಿಟಿ ಬಿಡುಗಡೆ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದವು. ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಲಿದೆ, ಜಿಯೋ ಹಾಟ್​​ಸ್ಟಾರ್​​ನಲ್ಲಿ ಮಾತ್ರವೇ ಬರಲಿದೆ ಎಂಬೆಲ್ಲ ಸುದ್ದಿಗಳು ಹಬ್ಬಿದ್ದವು. ಇದೀಗ ಕೊನೆಗೂ ‘ಧುರಂಧರ್ 2’ ಸಿನಿಮಾ ಒಟಿಟಿಗೆ ಬಂದಿದೆ. ಆದರೆ ಭಾರತೀಯರು ‘ಧುರಂಧರ್ 2’ ಸಿನಿಮಾ ವೀಕ್ಷಿಸಲು ಇನ್ನೂ ಸ್ವಲ್ಪ ಸಮಯ ಕಾಯಬೇಕಿದೆ. ಆದರೆ ಸದ್ಯಕ್ಕೆ ವಿದೇಶಿಗರು ಮಾತ್ರವೇ ರಣ್ವೀರ್ ಸಿಂಗ್ ನಟನೆಯ ಈ ಬ್ಲಾಕ್ ಬಸ್ಟರ್ ಸಿನಿಮಾ ವೀಕ್ಷಿಸಬಹುದಾಗಿದೆ.

‘ಧುರಂಧರ್ 2’ ಸಿನಿಮಾ ಇದೀಗ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ. ಆದರೆ ಭಾರತದ ಹೊರತು ಇತರೆ ದೇಶಗಳಲ್ಲಿ ಮಾತ್ರವೇ ಈ ಸಿನಿಮಾವನ್ನು ನೆಟ್​​ಫ್ಲಿಕ್ಸ್​ ಬಳಕೆದಾರರು ವೀಕ್ಷಿಸಬಹುದಾಗಿದೆ. ಆದರೆ ಭಾರತದಲ್ಲಿ ಈ ಸಿನಿಮಾ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಬಿಡುಗಡೆಗೆ ಇನ್ನೂ ಕೆಲ ದಿನಗಳು ಭಾರತೀಯ ಪ್ರೇಕ್ಷಕರು ಕಾಯಬೇಕಿದೆ. ಈ ಹಿಂದೆ ‘ಆರ್​​ಆರ್​​ಆರ್’ ಸಹ ಇದೇ ತಂತ್ರವನ್ನು ಅನುಸರಿಸಿತ್ತು. ಈಗ ‘ಧುರಂಧರ್ 2’ ಸಹ ವಿದೇಶಕ್ಕೆ ನೆಟ್​​ಫ್ಲಿಕ್ಸ್ ಅನ್ನು ಭಾರತಕ್ಕೆ ಜಿಯೋ ಹಾಟ್​​ಸ್ಟಾರ್ ಅನ್ನು ಅವಲಂಬಿಸಿದೆ.

ಇದನ್ನೂ ಓದಿ: ಥಿಯೇಟರ್​ನಲ್ಲಿ ಮುಗಿಯಿತು ‘ಧುರಂಧರ್ 2’ ಆಟ; ಅಂತಿಮ ಕಲೆಕ್ಷನ್ ಎಷ್ಟು?

‘ಧುರಂಧರ್ 2’ ಸಿನಿಮಾ ಸೌದಿ ರಾಷ್ಟ್ರಗಳಲ್ಲಿ ನಿಷೇಧಕ್ಕೆ ಒಳಪಟ್ಟಿತ್ತು. ಅಲ್ಲಿನ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿರಲಿಲ್ಲ. ಪಾಕಿಸ್ತಾನದಲ್ಲಂತೂ ಭಾರತದ ಯಾವ ಸಿನಿಮಾ ಸಹ ಬಿಡುಗಡೆ ಆಗುವುದಿಲ್ಲ. ಆದರೆ ಈಗ ಸೌದಿ ರಾಷ್ಟ್ರಗಳು ಹಾಗೂ ಪಾಕಿಸ್ತಾನದಲ್ಲೂ ಸಹ ನೆಟ್​​ಫ್ಲಿಕ್ಸ್​ನಲ್ಲಿ ‘ಧುರಂಧರ್ 2’ ಸಿನಿಮಾ ವೀಕ್ಷಿಸಬಹುದಾಗಿದೆ. ವಿಶ್ವದಾದ್ಯಂತ ನೆಲೆಸಿರುವ ಭಾರತೀಯರು ಮತ್ತು ವಿಶ್ವ ಸಿನಿಮಾ ಪ್ರೇಮಿಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚು ಜನರಿಗೆ ತಲುಪಲೆಂದು ‘ಧುರಂಧರ್ 2’ ಸಿನಿಮಾವನ್ನು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಮಾಡಲಾಗಿದೆ.

ಇನ್ನು ‘ಧರುಂಧರ್ 2’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್​ನಲ್ಲಿ ದಾಖಲೆಗಳನ್ನೇ ಬರೆದಿದೆ. ಇದೀಗ ಸಿನಿಮಾದ ಬಾಕ್ಸ್ ಆಫೀಸ್ ಓಟ ಮುಗಿದಿದ್ದು, ಸುಮಾರು 1800 ಕೋಟಿ ಮೊತ್ತವನ್ನು ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿದೆ. ಆ ಮೂಲಕ ಹಲವು ಹಳೆಯ ದಾಖಲೆಗಳನ್ನು ಸಿನಿಮಾ ಮುರಿದು ಹಾಕಿದೆ. ಭಾರತದಲ್ಲಿ ಜಿಯೋ ಹಾಟ್​​ಸ್ಟಾರ್ ಅದ್ಧೂರಿಯಾಗಿ ‘ಧುರಂಧರ್ 2’ ಸಿನಿಮಾವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ‘ಧುರಂಧರ್ 2’ ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶನ ಮಾಡಿದ್ದು, ಸಿನಿಮಾನಲ್ಲಿ ರಣ್ವೀರ್ ಸಿಂಗ್ ಜೊತೆಗೆ ಮಾಧವನ್, ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಂಪಾಲ್ ಇನ್ನೂ ಹಲವರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ತಾಯಿ ಆಸ್ತಿ ಬೇಕು, ಆಕೆ ಬೇಡ ಎಂದ ಮಗಳಿಗೆ ಹೈಕೋರ್ಟ್​​ ತಪರಾಕಿ: ಮಹತ್ವದ ಆದೇಶ ನೀಡಿದ ಕೋರ್ಟ್​ – Kannada News | Wanted Mother’s Property, Not Her Care: Karnataka High Court Issues Order Against Daughter

ಕರ್ನಾಟಕ ಹೈಕೋರ್ಟ್​​Image Credit source: dinamalar.com

ಬೆಂಗಳೂರು, ಮೇ 15: ಕಾನೂನುಬದ್ಧ, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಮಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್ (High Court of Karnataka)​​, ತಾಯಿಯಿಂದ ಉಡುಗೊರೆಯಾಗಿ ಪಡೆದಿದ್ದ ಆಸ್ತಿಯನ್ನು ಹಿಂತಿರುಗಿಸುವಂತೆ 44 ವರ್ಷದ ಮಹಿಳೆಗೆ ಆದೇಶಿಸಿದ್ದ ತೀರ್ಪನ್ನು ಎತ್ತಿಹಿಡಿದಿದೆ. ತಾಯಿ ನೀಡಿದ್ದ ಗಿಫ್ಟ್ ಡೀಡ್ ರದ್ದುಗೊಳಿಸಿದ್ದ ಹಿರಿಯ ನಾಗರಿಕ ನಿರ್ವಹಣಾ ನ್ಯಾಮಂಡಳಿ ಮತ್ತು ಉಪವಿಭಾಗಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ಪವಿತ್ರಾ ಎಂಬ ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಮೂರ್ತಿ ಸಚಿನ್ ಎಸ್. ಮಗದುಮ್ ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಸ್ವಂತ ಆಸ್ತಿ ಹೊಂದಿದ್ದರೂ, ಅದನ್ನು ಮಕ್ಕಳಿಗೆ ವರ್ಗಾಯಿಸಿದ ಬಳಿಕ ಬಾಡಿಗೆ ಮನೆಯಲ್ಲಿ ವಾಸಿಸಲು ಒತ್ತಾಯಿತಳಾದ ಹಿರಿಯ ನಾಗರಿಕರ ಅಸಹಾಯಕ ಸ್ಥಿತಿಯನ್ನು ಈ ಪ್ರಕರಣ ಸ್ಪಷ್ಟವಾಗಿ ತೋರಿಸುತ್ತದೆ ಎಂದು ಆದೇಶದಲ್ಲಿ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. ಪತಿ ಜೊತೆಗಿನ ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಹೇಮಾ ಸುಮಾರು ಮೂರುವರೆ ವರ್ಷಗಳ ಕಾಲ ತಮ್ಮ ಮಗಳು ಪವಿತ್ರಾ ಜೊತೆ ತಮ್ಮದೇ ಮನೆಯಲ್ಲಿ ವಾಸಿಸುತ್ತಿದ್ದರು. ಈ ವೇಳೆ, ಬಾಡಿಗೆ ಆದಾಯವನ್ನು ಅವರ ಹಿತಕ್ಕಾಗಿ ಬಳಸಲಾಗುತ್ತದೆ ಎಂಬ ಭರವಸೆಯೊಂದಿಗೆ ಆಸ್ತಿಯನ್ನು ಗಿಫ್ಟ್ ಡೀಡ್ ಮೂಲಕ ತಮ್ಮ ಹೆಸರಿಗೆ ವರ್ಗಾಯಿಸಲು ಮಕ್ಕಳು ಸಲಹೆ ನೀಡಿದ್ದರು.

ಇದನ್ನೂ ಓದಿ: ಮೋದಿ ಮನವಿಗೆ ಸ್ಪಂದನೆ; ಪೆಟ್ರೋಲ್ ಉಳಿಸಲು ಸೈಕಲ್​ನಲ್ಲೇ ನ್ಯಾಯಾಲಯಕ್ಕೆ ಬಂದ ಹೈಕೋರ್ಟ್ ನ್ಯಾಯಮೂರ್ತಿ

ಹೇಮಾ ಇದಕ್ಕೆ ಒಪ್ಪಿಕೊಂಡು ಗಿಫ್ಟ್ ಡೀಡ್ ಮಾಡಿಕೊಟ್ಟ ಬಳಿಕ, ಮಗಳು ಪವಿತ್ರಾ ಮತ್ತು ಮಗ ಆರ್. ವೇಣುಗೋಪಾಲ್ ಆಸ್ತಿಯ ವಿವಿಧ ಭಾಗಗಳಿಂದ ಬಾಡಿಗೆ ಹಣ ಸಂಗ್ರಹಿಸಲು ಆರಂಭಿಸಿದ್ದರು. ಆದರೆ, ನಂತರ ಮಕ್ಕಳು ಮಾನಸಿಕ ಕಿರುಕುಳ ನೀಡಿದರು ಹಾಗೂ ಮೂಲಭೂತ ಅಗತ್ಯಗಳನ್ನು ಪೂರೈಸಲಿಲ್ಲ ಎಂದು ಹೇಮಾ ಆರೋಪಿಸಿದ್ದರು. ಅಲ್ಲದೆ ಇದರಿಂದ ತಾವು ಬಾಡಿಗೆ ಮನೆಯಲ್ಲಿ ವಾಸಿಸಬೇಕಾದ ಸ್ಥಿತಿ ಎದುರಾದರೂ, ಮಕ್ಕಳೇ ಆಸ್ತಿಯ ಬಾಡಿಗೆ ಹಣ ಪಡೆದುಕೊಳ್ಳುತ್ತಿದ್ದರು ಎಂದು ಅವರು ದೂರಿದ್ದರು. ಈ ಸಂಬಂಧ ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ಕಾಯ್ದೆ-2007ರ ಸೆಕ್ಷನ್ 23(1) ಅಡಿಯಲ್ಲಿ ಗಿಫ್ಟ್ ಡೀಡ್ ರದ್ದುಪಡಿಸಲು ಮೆಂಟಿನನ್ಸ್ ಟ್ರಿಬ್ಯೂನಲ್‌ಗೆ ಹೇಮಾ ಅರ್ಜಿ ಸಲ್ಲಿಸಿದರು. ದಾಖಲೆಗಳನ್ನು ಪರಿಶೀಲಿಸಿದ ಟ್ರಿಬ್ಯೂನಲ್, ಗಿಫ್ಟ್ ಡೀಡ್ ರದ್ದುಪಡಿಸಿ ಆಸ್ತಿಯನ್ನು ಹೇಮಾಗೆ ಮರು ಹಸ್ತಾಂತರಿಸಲು ಆದೇಶಿಸಿತ್ತು. ಈ ಆದೇಶವನ್ನು ಉಪಆಯುಕ್ತರೂ ಮಾನ್ಯಗೊಳಿಸಿದ ಬಳಿಕ, ಮಗಳು ಪವಿತ್ರಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಗಿಫ್ಟ್ ಡೀಡ್‌ನಲ್ಲಿ ತಾಯಿಯನ್ನು ನೋಡಿಕೊಳ್ಳಬೇಕೆಂಬ ಸ್ಪಷ್ಟ ಷರತ್ತು ಇಲ್ಲ ಎಂದು ವಾದಿಸಿದ್ದ ಪವಿತ್ರಾ ಪರ ವಕೀಲರು, ಆಸ್ತಿ ಪ್ರೀತಿ ಮತ್ತು ಸ್ನೇಹದಿಂದ ನೀಡಲಾಗಿದೆ. ಹೀಗಾಗಿ ಸೆಕ್ಷನ್ 23(1) ಅನ್ವಯಿಸುವುದಿಲ್ಲ ಎಂಬ ವಾದ ಮುಂದಿಟ್ಟಿದ್ದರು. ಇದಕ್ಕೆ ಪ್ರತಿಯಾಗಿ, ಹಿರಿಯ ನಾಗರಿಕರನ್ನು ನೋಡಿಕೊಳ್ಳುವ ಷರತ್ತು ಗಿಫ್ಟ್ ಡೀಡ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿರಬೇಕೆಂಬ ಅವಶ್ಯಕತೆ ಇಲ್ಲ. ಪರಿಸ್ಥಿತಿ, ನಡೆನುಡಿ ಮತ್ತು ಪ್ರಕರಣದ ಸನ್ನಿವೇಶಗಳಿಂದ ಅದನ್ನು ಅರ್ಥಮಾಡಿಕೊಳ್ಳಬಹುದು ಎಂಬುದನ್ನು ಹೇಮಾ ಪರ ವಕೀಲರು ನ್ಯಾಯಾಲದ ಗಮನಕ್ಕೆ ತಂದಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ಕಾಯ್ದೆ ಒಂದು ಕಲ್ಯಾಣಮುಖಿ ಕಾನೂನು ಎಂದು ಹೇಳಿ, ಪ್ರತಿ ಪ್ರಕರಣದಲ್ಲೂ ಕಡ್ಡಾಯವಾಗಿ ಲಿಖಿತ ಷರತ್ತು ಬೇಕೆಂದು ಒತ್ತಾಯಿಸಿದರೆ ಕಾನೂನಿನ ಉದ್ದೇಶವೇ ವಿಫಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿತು. ಹೇಮಾ ಅವರು ನಿವೃತ್ತ ಸರ್ಕಾರಿ ಶಾಲಾ ಶಿಕ್ಷಕಿಯಾಗಿದ್ದು, ತಮ್ಮ ಸ್ವಂತ ಆಸ್ತಿಯನ್ನು ಮಗ ಮತ್ತು ಮಗಳ ಹೆಸರಿಗೆ ವರ್ಗಾಯಿಸುವ ಮೂಲಕ ಮಕ್ಕಳ ಮೇಲಿನ ನಂಬಿಕೆ ಮತ್ತು ಭದ್ರತೆಯ ನಿರೀಕ್ಷೆ ಇಟ್ಟಿದ್ದರು. ಈಗ ಅವರು ಬಾಡಿಗೆ ಮನೆಯಲ್ಲಿ ವಾಸಿಸುವಂತಾಗಿದೆ. ತಮ್ಮ ಸ್ವಂತ ಆಸ್ತಿಯ ಆಶ್ರಯವನ್ನೂ, ಅದರಿಂದ ದೊರೆಯುವ ಆದಾಯವನ್ನೂ ಕಳೆದುಕೊಂಡಿದ್ದಾರೆ. ಈ ಎಲ್ಲ ಸನ್ನಿವೇಶಗಳನ್ನು ಪರಿಶೀಲಿಸಿದಾಗ, ಆಸ್ತಿ ವರ್ಗಾವಣೆ ಕಾಳಜಿ ಮತ್ತು ಪಾಲನೆ ಎಂಬ ಅಪ್ರತ್ಯಕ್ಷ ಭರವಸೆಯ ಮೇಲೆ ನಡೆದಿತ್ತು ಎಂಬುದು ಸ್ಪಷ್ಟವಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಪವಿತ್ರಾ ಸ್ವಂತ ಮನೆ ಹೊಂದಿದ್ದರೂ, ತಮ್ಮ ವಯೋವೃದ್ಧ ತಾಯಿಯನ್ನು ಬಾಡಿಗೆ ಮನೆಯಲ್ಲಿ ವಾಸಿಸಲು ಬಿಟ್ಟಿರುವುದು ನೈತಿಕ ಮತ್ತು ಕಾನೂನುಬದ್ಧ ಕರ್ತವ್ಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:43 am, Fri, 15 May 26

Source link

‘ಜೈಲರ್ 2’ ಸೆಟ್​​​ನಲ್ಲಿ ಭೀಕರ ಅವಘಡ; ತಂಡದ ಸಿಬ್ಬಂದಿ ಸಾವು – Kannada News | Jailer 2 Set Tragedy: Crew Member Dies From Electrocution; Shivanna’s Role and Release Info

ಎಷ್ಟೇ ಮುನ್ನೆಚ್ಚರಿಕೆ ತೆಗೆದುಕೊಂಡರೂ ಸಿನಿಮಾ ಸೆಟ್​​​ನಲ್ಲಿ ಸಂಭವಿಸುವ ಅವಘಡಗಳು ಕಡಿಮೆ ಆಗೋದಿಲ್ಲ. ಈಗ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ (Jailer 2 Movie) ಸೆಟ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಚಿತ್ರದ ಕಲಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಕಾರ್ತಿಕೇಯನ್ ಎಂಬ ಯುವಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಇದು ಇಡೀ ತಂಡವನ್ನು ಶಾಕ್​​ಗೆ ತಳ್ಳಿದೆ.

1. ಜೈಲರ್ 2 ಸೆಟ್​​​ನಲ್ಲಿ ಅವಘಢ

2. ಯುವ ಆರ್ಟ್ ಕಲಾವಿದನ ಸಾವು

3. ವಿದ್ಯುತ್ ತಂತಿ ತಾಗಿ ಸಾವು

ಚೆನ್ನೈನ ಪಣಯೂರ್‌ನಲ್ಲಿರುವ ಖಾಸಗಿ ಸ್ಟುಡಿಯೋವೊಂದರಲ್ಲಿ ಚಿತ್ರದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದವು. ಮನೆಯ ಮಾದರಿಯ ಸೆಟ್ ನಿರ್ಮಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಕಾರ್ತಿಕೇಯನ್‌ಗೆ ತೀವ್ರವಾಗಿ ಶಾಕ್ ಹೊಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಈ ಕುರಿತು ಕಾನತ್ತೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕನ್ನಡಿಗರಿಗೆ ಈ ಸಿನಿಮಾ ಕೇವಲ ರಜನಿಕಾಂತ್ ಚಿತ್ರವಲ್ಲ, ಬದಲಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಸಿನಿಮಾ ಕೂಡ ಹೌದು. ‘ಜೈಲರ್’ ಮೊದಲ ಭಾಗದಲ್ಲಿ ಶಿವಣ್ಣ ಅವರ ಅತಿಥಿ ಪಾತ್ರ ಇಡೀ ಸಿನಿಮಾಕ್ಕೆ ಒಂದು ದೊಡ್ಡ ಮೈಲೇಜ್ ನೀಡಿತ್ತು. ಥಿಯೇಟರ್‌ನಲ್ಲಿ ಶಿವಣ್ಣನ ಎಂಟ್ರಿಗೆ ಸಿಕ್ಕ ರೆಸ್ಪಾನ್ಸ್ ನೋಡಿ ಚಿತ್ರತಂಡ ಬೆರಗಾಗಿತ್ತು. ಹೀಗಾಗಿ, ‘ಜೈಲರ್ 2’ ಚಿತ್ರದಲ್ಲೂ ಶಿವಣ್ಣ ಅವರ ಪಾತ್ರ ಮುಂದುವರಿಯಲಿದ್ದು, ಸೀಕ್ವೆಲ್‌ನಲ್ಲಿ ಅವರ ಪಾತ್ರ ಇನ್ನಷ್ಟು ಹೈಲೈಟ್ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗ ಸಂಭವಿಸಿದ ಈ ಸಾವು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಇದನ್ನೂ ಓದಿ: ‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್?

ಇತ್ತೀಚಿನ ವರದಿಗಳ ಪ್ರಕಾರ ‘ಜೈಲರ್ 2’ ಸಿನಿಮಾ ಆಗಸ್ಟ್ ಅಥವಾ ಸೆಪ್ಟೆಂಬರ್​​ನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆಯಂತೆ. ಸನ್ ಪಿಕ್ಚರ್ಸ್ ಸಂಸ್ಥೆಯು ಶೀಘ್ರದಲ್ಲೇ ರಿಲೀಸ್ ದಿನಾಂಕವನ್ನು ಘೋಷಿಸುವ ನಿರೀಕ್ಷೆಯಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ರಮ್ಯಾ ಕೃಷ್ಣನ್, ಯೋಗಿ ಬಾಬು ಮೊದಲಾದವರು ನಟಿಸುತ್ತಿದ್ದಾರೆ. ಮೊದಲ ಭಾಗವು ಜಾಗತಿಕವಾಗಿ 600 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಅಬ್ಬರಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link