‘ಧುರಂಧರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈಗ ಚಿತ್ರದ ಸೀಕ್ವೆಲ್ ‘ಧುರಂಧರ್ 2’ ರಿಲೀಸ್ಗೆ ರೆಡಿ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ವಿಶ್ವ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ಗಾಗಿ ಫ್ಯಾನ್ಸ್ ಕಾದಿದ್ದರು. ಇಂದು (ಮಾರ್ಚ್ 7) ಬೆಳಿಗ್ಗೆ 11.1ಕ್ಕೆ ಸಿನಿಮಾದ ಟ್ರೇಲರ್ ಬಿಡುಗಡೆ ಕಂಡಿದೆ. ಈ ಟ್ರೇಲರ್ ನೋಡಿದ ಬಳಿಕ ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ.
‘ಧುರಂಧರ್’ ಚಿತ್ರವನ್ನು ಆದಿತ್ಯ ಧಾರ್ ನಿರ್ದೇಶನ ಮಾಡಿದ್ದಾರೆ. ಮೊದಲ ಚಿತ್ರ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಸಿನಿಮಾ ಸೀಕ್ವೆಲ್ ಮೊದಲ ಭಾಗಕ್ಕಿಂತಲೂ ಹೆಚ್ಚು ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ‘ಧುರಂಧರ್’ ಸಿನಿಮಾ ಕೇಲವ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿತ್ತು. ಈಗ ‘ಧುರಂದರ್ 2’ ಸಿನಿಮಾ ಹಿಂದಿ ಜೊತೆಗೆ ಕನ್ನಡ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಲಿದೆ.
‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಪಾಕಿಸ್ತಾನಕ್ಕೆ ತೆರಳುತ್ತಾರೆ. ಅಲ್ಲಿ ಪಾಕಿಸ್ತಾನದವರಂತೆ ಇದ್ದು, ಸ್ಪೈ ಆಗಿ ಕೆಲಸ ಮಾಡುತ್ತಾರೆ. ಸಿನಿಮಾ ಭರ್ಜರಿ ಆ್ಯಕ್ಷನ್ಗಳನ್ನು ಒಳಗೊಂಡಿತ್ತು. ಕಂದಾಹಾರ್ ಹೈಜ್ಯಾಕ್, ಮುಂಬೈ ದಾಳಿ ಇತ್ಯಾದಿ ವಿಷಯಗಳನ್ನು ಒಳಗೊಂಡಿತ್ತು.
ಮಹಿಳೆಯರು ಶನಿವಾರದಂದು ತವರು ಮನೆಗೆ ಬರುವುದು ಶುಭವೇ ಅಥವಾ ಅಶುಭವೇ? ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ, ಹೆಣ್ಣುಮಕ್ಕಳನ್ನು ಅತ್ತೆಯ ಮನೆಗೆ ಕಳುಹಿಸುವಾಗ ಭಾನುವಾರ ಅಥವಾ ಮಂಗಳವಾರದಂತಹ ದಿನಗಳನ್ನು ಪೋಷಕರು ಅಷ್ಟು ಸೂಕ್ತವೆಂದು ಪರಿಗಣಿಸುವುದಿಲ್ಲ. ಅದೇ ರೀತಿ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಹೋಗುವ ಪ್ರಯಾಣವನ್ನು ಅಷ್ಟು ಪ್ರಾಶಸ್ತ್ಯವಲ್ಲ ಎಂದು ಭಾವಿಸಲಾಗುತ್ತದೆ. ಶನಿವಾರವು ಕೆಟ್ಟ ದಿನವಲ್ಲ. ಇದು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮಂತನಿಗೆ ಮೀಸಲಾದ ಪವಿತ್ರ ದಿನ. ಆದರೆ, ವೈಜ್ಞಾನಿಕ ದೃಷ್ಟಿಕೋನದಿಂದ ನೋಡಿದಾಗ, ಶನಿವಾರದಂದು ಮನಸ್ಸು ಸಂಪೂರ್ಣವಾಗಿ ಶಾಂತವಾಗಿರಲು ಸಾಧ್ಯವಾಗದಿರಬಹುದು, ಒಂದಷ್ಟು ಸಂಕುಚಿತ ಭಾವನೆಗಳು ಬರಬಹುದು ಎಂದು ಹೇಳಲಾಗುತ್ತದೆ.
ಗುರೂಜಿಯವರು ಹೇಳುವಂತೆ, ಹಿಂದೂ ಸನಾತನ ಸಂಸ್ಕೃತಿಯಲ್ಲಿ, ಪ್ರತಿ ದಿನವೂ ಒಂದೊಂದು ದೇವರಿಗೆ ಮೀಸಲಾಗಿದೆ. ಭಾನುವಾರ ಸೂರ್ಯನಿಗೆ, ಸೋಮವಾರ ಶಿವನಿಗೆ, ಮಂಗಳವಾರ ಸುಬ್ರಹ್ಮಣ್ಯನಿಗೆ, ಬುಧವಾರ ವಿಷ್ಣು, ಗಣಪತಿ ಅಥವಾ ಕಾಲಭೈರವನಿಗೆ, ಗುರುವಾರ ಗುರು ಗ್ರಹಕ್ಕೆ, ಮತ್ತು ಶುಕ್ರವಾರ ದೇವಿಗೆ ಸಮರ್ಪಿತವಾಗಿದೆ. ಶನಿವಾರದಂದು ವಿಷ್ಣು ಭಕ್ತರು ಉಪವಾಸ ಮತ್ತು ಪೂಜೆಗಳನ್ನು ಆಚರಿಸುತ್ತಾರೆ. ಈ ದಿನ ಉಪವಾಸ ಮತ್ತು ಪೂಜೆಗಳನ್ನು ಮಾಡುವ ಮಹಿಳೆಯರಿಗೆ ದೈಹಿಕವಾಗಿ ಸ್ವಲ್ಪ ತೊಂದರೆಯಾಗಬಹುದು ಎಂಬ ಭಾವನೆ ಇದೆ.
ಕುಟುಂಬಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. “ಗೃಹಿಣಿ ಗೃಹ ಮುಚ್ಯತೇ” ಎಂಬ ಮಾತು ಇದನ್ನೇ ಸೂಚಿಸುತ್ತದೆ. ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಹೋದರೆ ಅತ್ತೆಯ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು ಎಂದು ಪೂರ್ವಿಕರ ಅನುಭವಗಳು ಹೇಳುತ್ತವೆ. ಅಲ್ಲದೆ, ಅತ್ತೆ-ಮಾವ ಅಥವಾ ಕುಟುಂಬದ ಇತರ ಸದಸ್ಯರೊಂದಿಗೆ ಮಾನಸಿಕವಾಗಿ ಕೆಲವು ಉದ್ವಿಗ್ನತೆಗಳು ಉಂಟಾಗಬಹುದು. ಶನಿವಾರದಂದು ತವರು ಮನೆಗೆ ಭೇಟಿ ನೀಡಿದಾಗ, ಕೆಲವೊಮ್ಮೆ ಕುಟುಂಬದ ಸದಸ್ಯರಿಂದ ಮಾನಸಿಕವಾಗಿ ಕೆಲವು ಮಾತುಗಳನ್ನು ಕೇಳಬೇಕಾಗಬಹುದು.
ಧಾರ್ಮಿಕವಾಗಿ, ಆಧ್ಯಾತ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಈ ಎಲ್ಲಾ ಅಂಶಗಳನ್ನು ಪರಿಗಣಿಸಿದಾಗ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಭೇಟಿ ನೀಡುವುದು ಅಷ್ಟು ಸೂಕ್ತವಲ್ಲ ಎಂಬುದು ನಂಬಿಕೆಯಾಗಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 07: ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್ಎಂಡಿ ನವಾಜ್ ( Justice A.H.M.D. Nawaz) ತಮ್ಮ ವಿರುದ್ಧ ಆನ್ಲೈನ್ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಹಾಗೂ ಲಂಕಾ ಇ-ನ್ಯೂಸ್ಗೆ ನೋಟಿಸ್ ಜಾರಿ ಮಾಡಿದೆ.
ತನ್ನ ಅಹವಾಲಿಗೆ ತಾನೇ ತೀರ್ಪು ನೀಡಬಾರದೆಂಬ ತತ್ವ
ಅರ್ಜಿಯಲ್ಲಿ, 2015 ಮತ್ತು 2020ರಲ್ಲಿ ತಮ್ಮ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಮಾನಹಾನಿ ಸುದ್ದಿಗಳನ್ನು ಪ್ರಕಟಿಸಲಾಗಿದೆ ಎಂದು ನವಾಜ್ ಆರೋಪಿಸಿದ್ದಾರೆ. ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿರುವ ಕಾರಣ ಅಲ್ಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರೆ ಹಿತಾಸಕ್ತಿ ಸಂಘರ್ಷದ ಪ್ರಶ್ನೆ ಉದ್ಭವಿಸಬಹುದು ಎಂದು ಅವರು ತಿಳಿಸಿದ್ದಾರೆ. ತನ್ನ ಅಹವಾಲಿಗೆ ತಾನೇ ತೀರ್ಪು ನೀಡಬಾರದೆಂಬ ತತ್ವದ ಹಿನ್ನೆಲೆಯಲ್ಲಿ ಭಾರತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಅರ್ಜಿಯಲ್ಲಿ ವಿವರಿಸಲಾಗಿದೆ.
ಇನ್ನು ಆನ್ಲೈನ್ ಸುದ್ದಿ ತಾಣಗಳಲ್ಲಿ ತಮ್ಮ ವಿರುದ್ಧ ದುರುದ್ದೇಶಪೂರಿತವಾಗಿ ಸುದ್ದಿಗಳನ್ನು ಹಂಚಲಾಗಿದೆ ಎಂದು ಹೇಳಿರುವ ಅವರು, ಶ್ರೀಲಂಕಾ ಕೋರ್ಟ್ ಆಫ್ ಅಪೀಲ್ನ ಮುಖ್ಯಸ್ಥರಾಗಿದ್ದಾಗ ನೀಡಿದ ಕಾನೂನು ಅಭಿಪ್ರಾಯವನ್ನು ತಪ್ಪಾಗಿ ಉಲ್ಲೇಖಿಸಿ ಮಾನಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಭಾರತದ ಸಂವಿಧಾನವು ಘನತೆಯಿಂದ ಬದುಕುವ ಹಕ್ಕನ್ನು ವಿದೇಶೀಯರಿಗೂ ವಿಸ್ತರಿಸಿರುವುದರಿಂದ ಈ ಅರ್ಜಿಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.
ಗೂಗಲ್ಗೆ ಈ ಕುರಿತು ನೋಟಿಸ್ ನೀಡಿದ್ದರೂ ಸಹ ಸಂಬಂಧಿತ ಸುದ್ದಿಗಳನ್ನು ಆನ್ಲೈನ್ನಿಂದ ತೆಗೆದುಹಾಕಲಾಗಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಹೀಗಾಗಿ ಅವಹೇಳನಕಾರಿ ಹಾಗೂ ಮಾನಹಾನಿಕರ ವಿಷಯಗಳನ್ನು ತಕ್ಷಣವೇ ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ನ್ಯಾಯಾಲಯವನ್ನು ಕೋರಲಾಗಿದೆ.
ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್ ಅವರನ್ನು ವಿವಾಹವಾದರು. ಅರ್ಜುನ್ ಹೊಸ ಜೀವನವನ್ನು ಪ್ರಾರಂಭಿಸಿದ್ದಾರೆ. ಅವರ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮದುವೆಯ ನಂತರ ಅರ್ಜುನ್ ಮತ್ತು ಸಾನಿಯಾ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಹಾಗಾದರೆ ಸಚಿನ್ ತೆಂಡೂಲ್ಕರ್ ಅವರ ಸೊಸೆ ಎಷ್ಟು ಕೋಟಿ ಮಾಲೀಕರು ಗೊತ್ತಾ? ಆ ಬಗ್ಗೆ ಇಲ್ಲಿದೆ ವಿವರ.
ಅರ್ಜುನ್ ಪ್ರಸ್ತುತ ಈಗಷ್ಟೇ ಬೌಲರ್ ಆಗಿ ಗುರುತಿಸಿಕೊಳ್ಳುತ್ತಿದ್ದಾರೆ. ಐಪಿಎಲ್ನಲ್ಲಿ ಅವರು ಆಡುತ್ತಿದ್ದಾರೆ. ಅರ್ಜುನ್ ಅವರ ವೈಯಕ್ತಿಕ ಸಂಪತ್ತು ಸುಮಾರು 10-15 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ತಂದೆ ಸಚಿನ್ ಅವರ 100 ಕೋಟಿ ರೂ. ಮೌಲ್ಯದ ಐಷಾರಾಮಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.
ಸಾನಿಯಾ ಚಾಂದೋಕ್ ಯಾರು?
ಅರ್ಜುನ್ ಅವರ ಪತ್ನಿ ಸಾನಿಯಾ ಚಾಂದೋಕ್ ಸಾಮಾನ್ಯ ಹೆಸರಲ್ಲ. ಸಾನಿಯಾ ಭಾರತದ ಖ್ಯಾತ ಕೈಗಾರಿಕೋದ್ಯಮಿ ಮತ್ತು ಗ್ರಾವಿಸ್ ಗ್ರೂಪ್ನ ಅಧ್ಯಕ್ಷ ರವಿ ಘಾಯ್ ಅವರ ಮೊಮ್ಮಗಳು. ಸಾನಿಯಾ ವಿದೇಶದಲ್ಲಿಅಧ್ಯಯನ ಮಾಡಿದ್ದಾರೆ ಕುಟುಂಬದ ವ್ಯವಹಾರಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಇದ್ದಾರೆ. ಸಾನಿಯಾ ಅವರ ಕುಟುಂಬವು ಭಾರತದಲ್ಲಿ ಜನಪ್ರಿಯ ಐಸ್ ಕ್ರೀಮ್ ಬ್ರ್ಯಾಂಡ್ ಬಾಸ್ಕಿನ್-ರಾಬಿನ್ಸ್ ಅನ್ನು ಪ್ರಾರಂಭಿಸಿತು.
ಸಾನಿಯಾ ಬಹಳ ಪ್ರಭಾವಿ ವ್ಯಾಪಾರ ಕುಟುಂಬದಿಂದ ಬಂದವರು. ಅವರ ನಿಖರವಾದ ವೈಯಕ್ತಿಕ ಸಂಪತ್ತು ಸಾರ್ವಜನಿಕವಾಗಿ ತಿಳಿದಿಲ್ಲವಾದರೂ, ಅವರ ಕುಟುಂಬದ ವ್ಯವಹಾರವು ಲಕ್ಷ ಕೋಟಿ ರೂಪಾಯಿಗಳಷ್ಟು ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ. ಇದರರ್ಥ ಸಾನಿಯಾ, ಅರ್ಜುನ್ಗಿಂತ ಹೆಚ್ಚಿನ ಸಂಪತ್ತನ್ನು ಹೊಂದಿದ್ದಾರೆ.
ಕುಟುಂಬವು ಯಾವಾಗಲೂ ಐಷಾರಾಮಿ ಕಾರುಗಳನ್ನು ಇಷ್ಟಪಡುತ್ತಾರೆ. ಅರ್ಜುನ್ ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಅದರಲ್ಲಿ BMW i8, BMW X5 ಮತ್ತು ನಿಸ್ಸಾನ್ GT-R ನಂತಹ ಸೂಪರ್ ಕಾರುಗಳು ಸೇರಿವೆ. ಅರ್ಜುನ್ ಮತ್ತು ಸಾನಿಯಾ ಅವರ ಸಂಬಂಧ ಬಹಳ ಕಾಲ ರಹಸ್ಯವಾಗಿಯೇ ಇತ್ತು. ಅವರ ಆಪ್ತ ಮೂಲಗಳ ಪ್ರಕಾರ, ಇಬ್ಬರೂ ಮೊದಲು ಮುಂಬೈನಲ್ಲಿ ಭೇಟಿಯಾದರು. ಕ್ರಮೇಣ, ಅವರ ಸ್ನೇಹ ಸಂಬಂಧಕ್ಕೆ ತಿರುಗಿತು ಮತ್ತು ಎರಡೂ ಕುಟುಂಬಗಳು ಮದುವೆಗೆ ಅನುಮೋದನೆ ನೀಡಿದವು.
ನವದೆಹಲಿ, ಮಾರ್ಚ್ 7: ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚುತ್ತಿದ್ದರೂ ಭಾರತದಲ್ಲಿ ಇಂಧನ ವಿಚಾರದಲ್ಲಿ ಯಾವುದೇ ಸಮಸ್ಯೆ ಎದುರಾಗದು. ಭಾರತ ಸದ್ಯ ಇಂಧನ ವಿಚಾರದಲ್ಲಿ ಭದ್ರವಾಗಿದೆ ಎಂಬುದು ಕೇಂದ್ರ ಸರ್ಕಾರದ ಅಧೀನದ ‘ಪೆಟ್ರೋಲಿಯಂ ಪ್ಲಾನಿಂಗ್ ಆ್ಯಂಡ್ ಅನಾಲಿಸಿಸ್ ಸೆಲ್ (PPAC)’ ನೀಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ. ಮಧ್ಯಪ್ರಾಚ್ಯದ ಉದ್ವಿಗ್ನತೆ, ಸಮುದ್ರ ಮಾರ್ಗಗಳ ಅಡಚಣೆಗಳು ಮತ್ತು ಜಾಗತಿಕ ಬೆಲೆ ಏರಿಳಿತಗಳ ನಡುವೆಯೂ ಭಾರತದಲ್ಲಿ ಇಂಧನ ಪೂರೈಕೆ ಸ್ಥಿರವಾಗಿರುವುದಕ್ಕೆ ಕಳೆದ ದಶಕದಲ್ಲಿ ರೂಪಿಸಿದ ದೀರ್ಘಕಾಲಿಕ ನೀತಿಗಳೇ ಪ್ರಮುಖ ಕಾರಣವೆಂದು ಪಿಪಿಎಸಿ ಅಭಿಪ್ರಾಯಪಟ್ಟಿದೆ.
ದೇಶದಲ್ಲೆಷ್ಟಿದೆ ಕಚ್ಚಾ ತೈಲ, ಪೆಟ್ರೋಲಿಯಂ ಸಂಗ್ರಹ?
ದೇಶದಲ್ಲಿ ಕಚ್ಚಾ ತೈಲ ಮತ್ತು ಸಂಸ್ಕರಿತ ಪೆಟ್ರೋಲಿಯಂ ಉತ್ಪನ್ನಗಳ ಒಟ್ಟು ಸಂಗ್ರಹವು 250 ಮಿಲಿಯನ್ ಬ್ಯಾರೆಲ್ಗಳಿಗಿಂತ ಹೆಚ್ಚು, ಅಂದರೆ ಸುಮಾರು 4,000 ಕೋಟಿ ಲೀಟರ್ ಆಗಿದೆ. ಇದು ಸುಮಾರು 7 ರಿಂದ 8 ವಾರಗಳವರೆಗೆ ದೇಶದ ಇಂಧನ ಅವಶ್ಯಕತೆಗಳನ್ನು ಪೂರೈಸಲು ಸಾಕಾಗುವಷ್ಟು ಸಂಗ್ರಹವಾಗಿದೆ ಎಂದು ಪಿಪಿಎಸಿ ವರದಿ ತಿಳಿಸಿದೆ.
ಇದೇ ವೇಳೆ, ಭಾರತವು ವಿಶ್ವದಲ್ಲೇ ನಾಲ್ಕನೇ ಅತಿ ದೊಡ್ಡ ತೈಲ ಶುದ್ಧೀಕರಣ ಸಾಮರ್ಥ್ಯ ಹೊಂದಿರುವ ದೇಶವಾಗಿದ್ದು, ವರ್ಷಕ್ಕೆ 258 ಮಿಲಿಯನ್ ಮೆಟ್ರಿಕ್ ಟನ್ ಸಾಮರ್ಥ್ಯ ಹೊಂದಿದೆ. ದೇಶೀಯ ಬಳಕೆ 210–230 ಮಿಲಿಯನ್ ಮೆಟ್ರಿಕ್ ಟನ್ ಇರುವುದರಿಂದ ಶುದ್ಧೀಕರಣ ಸಾಮರ್ಥ್ಯವು ದೇಶದ ಅವಶ್ಯಕತೆಯಿಗಿಂತಲೂ ಹೆಚ್ಚಾಗಿದೆ.
ಹಾರ್ಮುಜ್ ಜಲಸಂಧಿಯ ಮೇಲೆ ಸಂಪೂರ್ಣ ಅವಲಂಬನೆ ಇಲ್ಲ
ಭಾರತ ತನ್ನ ಕಚ್ಚಾ ತೈಲ ಆಮದು ಮೂಲಗಳನ್ನು ಕಳೆದ ಕೆಲವು ವರ್ಷಗಳಲ್ಲಿ ಬಹಳವಾಗಿ ವಿಸ್ತರಿಸಿದೆ. ಹಿಂದೆ ಸುಮಾರು 27 ದೇಶಗಳಿಂದ ತೈಲ ಖರೀದಿಸಲಾಗುತ್ತಿದ್ದರೆ, ಈಗ 40 ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಕಾರಣದಿಂದ ಹಾರ್ಮುಜ್ ಜಲಸಂಧಿಯ ಮೇಲೆ ಸಂಪೂರ್ಣ ಅವಲಂಬನೆ ಇಲ್ಲ.
ಒಟ್ಟು ಕಚ್ಚಾ ತೈಲ ಆಮದುಗಳಲ್ಲಿ ಕೇವಲ ಸುಮಾರು ಶೇ 40 ರಷ್ಟು ಹಾರ್ಮುಜ್ ಮಾರ್ಗದ ಮೂಲಕ ಬರುತ್ತದೆ. ಉಳಿದ ಶೇ 60 ಇತರ ಮಾರ್ಗಗಳಿಂದ ಬರುತ್ತಿರುವುದರಿಂದ ಯಾವುದೇ ಒಂದು ಮಾರ್ಗದಲ್ಲಿ ಅಡಚಣೆ ಉಂಟಾದರೂ ದೇಶದಲ್ಲಿ ಇಂಧನ ಕೊರತೆ ಉಂಟಾಗುವ ಸಾಧ್ಯತೆ ಕಡಿಮೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯೂ ಭಾರತದಲ್ಲೇ ಕಡಿಮೆ
ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು ಕಳೆದ ನಾಲ್ಕು ವರ್ಷಗಳಲ್ಲಿ ಗಣನೀಯವಾಗಿ ಏರಿಕೆಯಾಗಿವೆ. ಉದಾಹರಣೆಗೆ ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಸುಮಾರು ಶೇ 55 ರಷ್ಟು ಏರಿಕೆಯಾಗಿದೆ. ಜರ್ಮನಿಯಲ್ಲಿ ಶೇ 21 ಹಾಗೂ ಫ್ರಾನ್ಸ್ನಲ್ಲಿ ಶೇ 19 ಏರಿಕೆಯಾಗಿದೆ. ಆದರೆ ಭಾರತದಲ್ಲಿ ಇದೇ ಅವಧಿಯಲ್ಲಿ ಪೆಟ್ರೋಲ್ ಬೆಲೆ ಶೇ 0.67 ಇಳಿಕೆಯಾಗಿದೆ ಮತ್ತು ಡೀಸೆಲ್ ಬೆಲೆ ಸುಮಾರು 1.15% ಮಾತ್ರ ಏರಿಕೆಯಾಗಿದೆ. ಇದು ಇಂಧನ ಬೆಲೆ ಸ್ಥಿರತೆ ಕಾಯ್ದುಕೊಳ್ಳುವಲ್ಲಿ ಭಾರತದ ನೀತಿ ಪರಿಣಾಮಕಾರಿಯಾಗಿದೆ ಎಂಬುದನ್ನು ತೋರಿಸುತ್ತದೆ.
ಎಥೆನಾಲ್ ಮಿಶ್ರಣದಿಂದ ತೈಲ ಅವಲಂಬನೆ ಕಡಿಮೆ
ಭಾರತದಲ್ಲಿ ಶೇ 20 ಎಥೆನಾಲ್ ಮಿಶ್ರಣ ಕಾರ್ಯಕ್ರಮವು ವರ್ಷಕ್ಕೆ ಸುಮಾರು 6 ಮಿಲಿಯನ್ ಟನ್ ಕಚ್ಚಾ ತೈಲ ಬಳಕೆಯನ್ನು ಕಡಿಮೆ ಮಾಡುತ್ತಿದೆ. ಇದು ಆಮದು ಅವಲಂಬನೆಯನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.
ನೆರೆಯ ದೇಶಗಳಿಗಿಂತ ಕಡಿಮೆ ಎಲ್ಪಿಜಿ ಬೆಲೆ
ದೇಶದಲ್ಲಿ ಎಲ್ಪಿಜಿ ಬೆಲೆಗಳು ಸಹ ನೆರೆಯ ಹಲವಾರು ರಾಷ್ಟ್ರಗಳಿಗಿಂತ ಕಡಿಮೆ ಇವೆ. ಉದಾಹರಣೆಗೆ, ಭಾರತದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 14.2 ಕೆಜಿ ಸಿಲಿಂಡರ್ ಬೆಲೆ ಸುಮಾರು 553 ರೂ. ಆಗಿದ್ದರೆ, ಪಾಕಿಸ್ತಾನದಲ್ಲಿ 1,054 ರೂ, ಶ್ರೀಲಂಕಾದಲ್ಲಿ ₹1,239 ಮತ್ತು ನೇಪಾಳದಲ್ಲಿ 1,195 ರೂ. ಇದೆ ಎಂದು ಪಿಪಿಎಸಿ ವರದಿ ತಿಳಿಸಿದೆ.
ಒಟ್ಟಾರೆ, ಜಾಗತಿಕ ಅನಿಶ್ಚಿತತೆ ನಡುವೆಯೂ ಭಾರತ ತನ್ನ ಇಂಧನ ವ್ಯವಸ್ಥೆಯನ್ನು ಬಲಪಡಿಸಿಕೊಂಡಿದ್ದು, ದೀರ್ಘಕಾಲಿಕ ನೀತಿಗಳ ಪರಿಣಾಮವಾಗಿ ದೇಶದಲ್ಲಿ ಇಂಧನ ಪೂರೈಕೆ ಮತ್ತು ಬೆಲೆ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗಿದೆ ಎಂಬುದು ವರದಿಯಿಂದ ದೃಢಪಟ್ಟಿದೆ.
ಬ್ರೂಕ್ಲಿನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಅಮೆರಿಕದ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ, ಪಾಕಿಸ್ತಾನಿ ಪ್ರಜೆ ಆಸಿಫ್ ರಾಜಾ ಮರ್ಚೆಂಟ್ (47) ದೋಷಿ ಎಂದು ಬ್ರೂಕ್ಲಿನ್ ಫೆಡರಲ್ ನ್ಯಾಯಾಲಯ ತೀರ್ಪು ನೀಡಿದೆ. 2020ರಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಹತ್ಯೆಯಾದ ಇರಾನ್ನ ಕಮಾಂಡರ್ ಖಾಸೆಮ್ ಸೊಲೈಮಾನಿಯ ಸಾವಿಗೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿತ್ತು ಎಂದು ಪ್ರಾಸಿಕ್ಯೂಟರ್ಗಳು ತಿಳಿಸಿದ್ದಾರೆ.
ಗುರಿಯಲ್ಲಿದ್ದ ಪ್ರಮುಖ ನಾಯಕರು:
ವಿಚಾರಣೆಯ ಸಂದರ್ಭದಲ್ಲಿ ಮರ್ಚೆಂಟ್, ಟೆಹ್ರಾನ್ನಲ್ಲಿರುವ ತನ್ನ ಕುಟುಂಬವನ್ನು ಇರಾನಿನ ಕ್ರಾಂತಿಕಾರಿ ಪಡೆಗಳಿಂದ ರಕ್ಷಿಸಿಕೊಳ್ಳಲು ಅನಿವಾರ್ಯವಾಗಿ ಈ ಸಂಚಿನಲ್ಲಿ ಭಾಗಿಯಾಗಿದ್ದಾಗಿ ಹೇಳಿದ್ದಾನೆ. ಇದಲ್ಲದೇ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾನೆ. ತನಗೆ ನೇರವಾಗಿ ಯಾರನ್ನೂ ಕೊಲ್ಲುವ ಆದೇಶ ಇರಲಿಲ್ಲವಾದರೂ, ಇರಾನಿನ ಸಂಪರ್ಕಗಳು ಮೂವರು ಪ್ರಮುಖ ವ್ಯಕ್ತಿಗಳನ್ನು ಅಂದರೆ ಡೊನಾಲ್ಡ್ ಟ್ರಂಪ್, ಜೋ ಬಿಡೆನ್ ಮತ್ತು ನಿಕ್ಕಿ ಹ್ಯಾಲಿ ಹತ್ಯೆ ಮಾಡುವಂತೆ ಸೂಚಿಸಿದ್ದರು ಎಂದು ಆತ ತಿಳಿಸಿದ್ದಾನೆ. ಈ ಪಿತೂರಿಯು ಇರಾನ್ ಆಡಳಿತದ ತಂತ್ರಗಾರಿಕೆಯ ಭಾಗವಾಗಿದೆ ಎಂದು ಅಮೆರಿಕದ ಅಧಿಕಾರಿಗಳು ಬಣ್ಣಿಸಿದ್ದಾರೆ.
ಆಸಿಫ್ ರಾಜಾ ಮರ್ಚೆಂಟ್ ಯಾರು?
ಆಸಿಫ್ ರಾಜಾ ಮರ್ಚೆಂಟ್ ಪಾಕಿಸ್ತಾನದ ಉದ್ಯಮಿಯಾಗಿದ್ದು, ಇರಾನ್ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎಂದು ಅಮೆರಿಕದ ತನಿಖಾ ಸಂಸ್ಥೆಗಳು ಮತ್ತು ಪ್ರಾಸಿಕ್ಯೂಟರ್ಗಳು ತಿಳಿಸಿದ್ದಾರೆ. 2024ರ ಜುಲೈ 12ರಂದು ಅಮೆರಿಕದಿಂದ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಈತನನ್ನು ಅಮೆರಿಕದ ಅಧಿಕಾರಿಗಳು ಬಂಧಿಸಿದ್ದರು. ನಂತರ ಬ್ರೂಕ್ಲಿನ್ನ ಫೆಡರಲ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಅಂತರರಾಷ್ಟ್ರೀಯ ಭಯೋತ್ಪಾದನೆ ಮತ್ತು ಹಣಕ್ಕಾಗಿ ಕೊಲೆ ಸಂಚು ರೂಪಿಸಿದ ಆರೋಪಗಳ ಮೇಲೆ ಈತ ದೋಷಿ ಎಂದು ಸಾಬೀತಾಗಿದೆ.
ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕದ ನಡುವೆ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಇತ್ತೀಚೆಗಷ್ಟೇ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿರುವ ಬೆನ್ನಲ್ಲೇ ಈ ತೀರ್ಪು ಹೊರಬಿದ್ದಿರುವುದು ಭಾರಿ ಸಂಚಲನ ಮೂಡಿಸಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಹೊತ್ತಿನಲ್ಲೇ ಈ ಪ್ರಕರಣದಲ್ಲಿ ತೀರ್ಪು ಬಂದಿರುವುದು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ವಿವಾಹ ಆಗಿದ್ದಾರೆ. ಈ ಮದುವೆ ಸಾಕಷ್ಟು ಅದ್ದೂರಿಯಾಗಿ ನಡೆಯಿತು. ರಶ್ಮಿಕಾ ಹಾಗೂ ವಿಜಯ್ ಜೋಡಿ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಇವರು ಮೊದಲು ನಟಿಸಿದ್ದು, ‘ಗೀತ ಗೋವಿಂದಂ’ ಚಿತ್ರದಲ್ಲಿ. ಇವರಿಬ್ಬರು ಒಂದಾಗಲು ಕನ್ನಡದ ನಟಿಯೊಬ್ಬರು ಕಾರಣ ಎಂಬ ಮಾಹಿತಿ ರಿವೀಲ್ ಆಗಿದೆ. ಈ ವಿಷಯ ಇತ್ತೀಚೆಗೆ ರಿವೀಲ್ ಆಗಿದೆ.
‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಕೆಮಿಸ್ಟ್ರಿ ಸಾಕಷ್ಟು ಗಮನ ಸೆಳೆಯಿತು. ರಶ್ಮಿಕಾ ಮಂದಣ್ಣ ಪಾತ್ರವೇ ಸಿನಿಮಾದಲ್ಲಿ ಹೈಲೈಟ್. ಚಿತ್ರ ಸೂಪರ್ ಹಿಟ್ ಆಗಲು ಅವರು ಕೂಡ ಕಾರಣ. ಇವರ ಮಧ್ಯೆ ಗಾಢ ಆಪ್ತತೆ ಬೆಳೆಯಲು ‘ಗೀತ ಗೋವಿಂದಂ’ ಕಾರಣ ಆಯಿತು ಎಂಬ ಮಾತುಗಳು ಇವೆ. ಒಂದೊಮ್ಮೆ ಕನ್ನಡದ ಆ ನಟಿ ಈ ಚಿತ್ರ ಒಪ್ಪಿ ನಟಿಸಿದ್ದರೆ ವಿಜಯ್ ಹಾಗೂ ರಶ್ಮಿಕಾ ಮಧ್ಯೆ ಇಷ್ಟು ಉತ್ತಮ ಕೆಮಿಸ್ಟ್ರಿ ಬೆಳೆಯುತ್ತಲೇ ಇರಲಿಲ್ಲವೇನೋ.
ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಅರ್ಜುನ್ ಅವರಿಗೆ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಐಶ್ವರ್ಯಾ ಸರ್ಜಾ ಅವರಿಗೆ ‘ಗೀತ ಗೋವಿಂದಂ’ ಸಿನಿಮಾದ ಆಫರ್ ಹೋಗಿತ್ತಂತೆ.ಆದರೆ, ಈ ಆಫರ್ನ ಅವರು ನಿರಾಕರಿಸಿದರು. ಒಂದೊಮ್ಮೆ ಐಶ್ವರ್ಯಾ ಸಿನಿಮಾದಲ್ಲಿ ನಟಿಸಿದ್ದರೆ ವಿಜಯ್ ಹಾಗೂ ರಶ್ಮಿಕಾ ಭೇಟಿ ಅಷ್ಟು ಬೇಗ ಆಗುತ್ತಿರಲಿಲ್ಲ. ಮುಂದೆ ಭೇಟಿ ಆಗಿದ್ದರೂ ಇಬ್ಬರ ಮಧ್ಯೆ ಇಷ್ಟೊಳ್ಳೆಯ ಕೆಮಿಸ್ಟ್ರಿ ಬೆಳೆಯುತ್ತಿತ್ತು ಎಂದು ಹೇಳಲು ಸಾಧ್ಯವಿರಲಿಲ್ಲ.
“I missed the opportunity to act in Geetha Govindam due to certain reasons. Later, I heard the film was offered to several actresses before it was finalized. In the end, the movie turned out very well. Many films I couldn’t be part of later went on to become big successes.”
‘ಗೀತ ಗೋವಿಂದಂ ಆಫರ್ ನನಗೆ ಬಂದಿತ್ತು. ನನ್ನ ಮೊದಲ ಸಿನಿಮಾ ಸೆಟ್ಟೇರುವ ಮೊದಲೇ ಈ ಚಿತ್ರದ ಆಫರ್ ಬಂದಿತ್ತು. ಸಾಕಷ್ಟು ನಟಿಯರಿಗೆ ಈ ಸಿನಿಮಾ ಆಫರ್ ಕೊಡಲಾಗಿತ್ತು. ಆದರೆ, ಸಿನಿಮಾ ಸೂಪರ್ ಹಿಟ್ ಆಯಿತು. ನನಗೆ ಆಫರ್ ಬಂದು, ಅದನ್ನು ನಟಿಸಲಾಗದೆ ಉಳಿದ ಅನೇಕ ಸಿನಿಮಾಗಳು ಸೂಪರ್ ಹಿಟ್ ಆದ ಉದಾಹರಣೆ ಇದೆ’ ಎಂದು ಅವರು ಹೇಳಿದ್ದಾರೆ.
ಪರಶುರಾಮ್ ಪೆಟ್ಲಾ ನಿರ್ದೇಶನದ ‘ಗೀತ ಗೋವಿಂದಂ’ ಸಿನಿಮಾ 2018ರಲ್ಲಿ ರಿಲೀಸ್ ಆಯಿತು. 8 ವರ್ಷಗಳ ಹಿಂದೆ ರಿಲೀಸ್ ಆದ ಈ ಚಿತ್ರ ರಶ್ಮಿಕಾ ವೃತ್ತಿ ಜೀವನಕ್ಕೆ ಅತಿ ದೊಡ್ಡ ಗೆಲುವು ತಂದುಕೊಟ್ಟಿತು. ಈ ಸಿನಿಮಾ ರಶ್ಮಿಕಾಗೆ ಸಿಗೋದಕ್ಕೂ ಮೊದಲು ಲಾವಣ್ಯ ತ್ರಿಪಾಠಿ, ರಾಶಿ ಖನ್ನಾ ಹಾಗೂ ಅನು ಎಮ್ಯಾನ್ಯುವೆಲ್ಗೂ ಹೋಗಿತ್ತು ಎಂದು ವರದಿ ಆಗಿದೆ.
ಚಿಕ್ಕಬಳ್ಳಾಪುರ, ಮಾರ್ಚ್ 07: ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ ರೈತರಿಗೆ ಮಾತ್ರ ಕಹಿಯಾಗಿದೆ. ರೈತರು ಟೊಮ್ಯಾಟೊಗೂ ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬೆಂಗಳೂರು, ಮಾರ್ಚ್ 07: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ (Illegal Immigrants)ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ.
ಒಂದೇ ದಿನದಲ್ಲಿ ನೂರಾರು ವಿದೇಶಿ ಪ್ರಜೆಗಳ ಪತ್ತೆ
ಪೊಲೀಸರು ಹೇಳುವಂತೆ ನಗರದಲ್ಲಿ ಒಟ್ಟು 200ಕ್ಕೂ ಅಧಿಕ ಅಕ್ರಮ ವಲಸಿಗರನ್ನು ಗುರುತಿಸಲಾಗಿದ್ದು, ನಿನ್ನೆ ಒಂದೇ ದಿನದಲ್ಲಿ 100ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗಿದೆ. ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ತಂಗಿದ್ದ ಈ ವಲಸಿಗರು ಅಗತ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಹೆಚ್ಚಿನವರು ಬಾಂಗ್ಲಾದೇಶ ಮೂಲದವರಾಗಿದ್ದು, ಆಫ್ರಿಕಾ ಸೇರಿದಂತೆ ಇನ್ನೂ ಕೆಲವು ದೇಶಗಳಿಂದ ಬಂದವರೂ ಪತ್ತೆಯಾಗಿದ್ದಾರೆ.
ಪತ್ತೆಯಾದ ಅಕ್ರಮ ವಲಸಿಗರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಕಾರ್ಯಾಚರಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ FRRO ಅಧಿಕಾರಿಗಳು ಪೊಲೀಸರಿಗೆ ಸಹಕಾರ ನೀಡುತ್ತಿದ್ದಾರೆ.
ಪೊಲೀಸರು ನಡೆಸಿದ ಪರಿಶೀಲನೆ ವೇಳೆ ಕೆಲವರ ಬಳಿ ಆಧಾರ್ ಕಾರ್ಡ್ ಸೇರಿದಂತೆ ಸ್ಥಳೀಯ ದಾಖಲೆಗಳು ಕೂಡ ಪತ್ತೆಯಾಗಿವೆ. ಅವುಗಳ ನೈಜತೆ ಕುರಿತು ಪರಿಶೀಲನೆ ನಡೆಯುತ್ತಿದೆ. ಪತ್ತೆಯಾದ ವಿದೇಶಿ ಪ್ರಜೆಗಳ ವಿವರಗಳನ್ನು ಸಂಬಂಧಿತ ದೇಶಗಳ ಅಧಿಕಾರಿಗಳಿಗೆ ರವಾನಿಸಲಾಗುತ್ತಿದ್ದು, ಅವರ ಗುರುತು ಮತ್ತು ದಾಖಲೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಈ ಹಿಂದೆ ಪೊಲೀಸ್ ಆಯುಕ್ತರ ಸೂಚನೆಯಂತೆ ವಿವಿಧ ವಿಭಾಗಗಳ ಪೊಲೀಸರು ಅನುಮಾನಾಸ್ಪದ ಪ್ರದೇಶಗಳಲ್ಲಿ ತಲಾಶ್ ನಡೆಸಿ ದಾಖಲೆಗಳ ಪರಿಶೀಲನೆ ವೇಳೆ ಫೆಬ್ರವರಿ 26ರ ಒಂದೇ ದಿನ ಸುಮಾರು 2,000ಕ್ಕೂ ಹೆಚ್ಚು ವಿದೇಶಿಗರು ಪತ್ತೆಯಾಗಿದ್ದರು. ಇದರಲ್ಲಿ ಬಹುತೇಕರು ಸರಿಯಾದ ದಾಖಲೆಗಳಿಲ್ಲದೆ ಅಥವಾ ವೀಸಾ ಅವಧಿ ಮೀರಿಸಿ ನಗರದಲ್ಲಿ ವಾಸಿಸುತ್ತಿರುವುದು ಎಂದು ತಿಳಿದು ಬಂದಿತ್ತು.
ಮೈಸೂರು, ಮಾರ್ಚ್ 7: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪ್ರತಿಕೂಲ ಪರಿಣಾಮ ಭಾರತದ ಮೇಲೆ ಬೀರಲು ಪ್ರಾರಂಭವಾಗಿದೆ. ಎಲ್ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ವಿಶೇಷವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ಗಳ ಬೆಲೆ 115 ರೂಪಾಯಿ ಹೆಚ್ಚಳವಾಗಿದೆ. ಈ ಬೆಲೆ ಏರಿಕೆ ಮತ್ತು ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯ ಮೈಸೂರಿನ ಹೋಟೆಲ್ ಉದ್ಯಮಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ವಾಣಿಜ್ಯ ಸಿಲಿಂಡರ್ಗಳ ಬೆಲೆ ದಿಢೀರ್ ಹೆಚ್ಚಳವಾಗಿದ್ದು, ಜೊತೆಗೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಸಹ ಆಗುತ್ತಿಲ್ಲ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಹೇಳಿದ ತಕ್ಷಣ ಸಿಗುತ್ತಿದ್ದ ಸಿಲಿಂಡರ್ಗಳು ಈಗ ವಿಳಂಬವಾಗಿ ತಲುಪುತ್ತಿವೆ. ಯುದ್ಧದ ಪರಿಸ್ಥಿತಿ ಮತ್ತು ಪೂರೈಕೆ ಕೊರತೆಯನ್ನೇ ಇದಕ್ಕೆ ಕಾರಣವಾಗಿ ನೀಡಲಾಗುತ್ತಿದೆ. ಮೈಸೂರಿನಂತಹ ನಗರದಲ್ಲಿ ಹೋಟೆಲ್ ಉದ್ಯಮಕ್ಕೆ ದಿನಕ್ಕೆ 20-25 ಸಾವಿರ ಸಿಲಿಂಡರ್ಗಳು ಬೇಕಾಗುತ್ತವೆ. ಗ್ಯಾಸ್ ಪೂರೈಕೆಯಲ್ಲಿನ ವ್ಯತ್ಯಾಸದಿಂದ ಉದ್ಯಮದ ಮೇಲೆ ಅವಲಂಬಿತವಾಗಿರುವ ಲಕ್ಷಾಂತರ ಜನರ ಬದುಕು ಅನಿಶ್ಚಿತತೆಗೆ ಒಳಗಾಗಿದೆ.
ಮತ್ತೊಂದೆಡೆ, ಪದೇಪದೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಹೋಟೆಲ್ಗಳಲ್ಲಿ ತಿಂಡಿಗಳ ಬೆಲೆ ಏರಿಕೆಯಾಗುವ ಆತಂಕವೂ ಎದುರಾಗಿದೆ. ಒಂದು ವೇಳೆ ಹೀಗಾದರೆ ಗ್ರಾಹಕರ ಜೇಬಿಗೂ ಹೊರೆಯಾಗಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ