ಚಾಮರಾಜನಗರ ಅಣ್ಣೂರುಕೇರಿಯಲ್ಲಿ ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ: ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್
ಚಾಮರಾಜನಗರ, ಮಾರ್ಚ್ 7: ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಮಾರಿ ಹಬ್ಬದ ವೇಳೆ ವಿಚಿತ್ರ ಹಾಗೂ ಭಯಾನಕ ಆಚರಣೆ ನಡೆದಿರುವುದು ಬೆಳಕಿಗೆ ಬಂದಿದೆ. ದೇವಿಯ ಜಾತ್ರೆ ಸಂದರ್ಭದಲ್ಲಿ ಗ್ರಾಮಸ್ಥರು ಹರಕೆ ತೀರಿಸುವ ಸಲುವಾಗಿ 100ಕ್ಕೂ ಹೆಚ್ಚು ಕುರಿಗಳನ್ನು ಬಲಿ ನೀಡಿದ್ದಾರೆ. ಗ್ರಾಮದಲ್ಲಿರುವ ದೊಡ್ಡಮ್ಮ ತಾಯಿ ದೇವಿಯ ಮಾರಿ ಹಬ್ಬದ ಅಂಗವಾಗಿ ಈ ಆಚರಣೆ ನಡೆಯುತ್ತದೆ ಎಂದು ತಿಳಿದುಬಂದಿದೆ. ಹಬ್ಬದ ಸಂದರ್ಭದಲ್ಲಿ ಹರಕೆ ಹೊತ್ತಿರುವ ಗ್ರಾಮಸ್ಥರು ತಮ್ಮ ಕುರಿಗಳನ್ನು ಬಲಿಯಾಗಿ ಅರ್ಪಿಸುತ್ತಾರೆ. ಕುರಿಗಳ…