All posts by nagaraj11081993

ಬೆಂಗಳೂರು ಆರ್ಥಿಕತೆ ಶೀಘ್ರದಲ್ಲೇ 420 ಶತಕೋಟಿ ಡಾಲರ್‌ಗೆ! – Kannada News | Bengaluru Economic Master Plan Aims USD 420 Billion GDP By 2037

ಬೆಂಗಳೂರು, ಜೂನ್ 18: ನಗರದ ಆರ್ಥಿಕತೆಯನ್ನು ಅಭಿವೃದ್ಧಿ ಮಾರ್ಗಸೂಚಿ (ರೋಡ್‌ಮ್ಯಾಪ್) ಮೂಲಕ 2037ರ ವೇಳೆಗೆ 390 ರಿಂದ 420 ಶತಕೋಟಿ ಡಾಲರ್‌ಗೆ ಹೆಚ್ಚಿಸಲು ಮತ್ತು ಹೆಚ್ಚುವರಿಯಾಗಿ 25 ರಿಂದ 30 ಲಕ್ಷ ಉದ್ಯೋಗಗಳನ್ನು (Jobs) ಸೃಷ್ಟಿಸಲು ಅವಕಾಶವಿದೆ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ.

ಮುಖ್ಯಾಂಶಗಳು

  • 2037ರ ವೇಳೆಗೆ ಬೆಂಗಳೂರು ಆರ್ಥಿಕತೆ 420 ಶತಕೋಟಿ ಡಾಲರ್‌ಗೆ ಏರಿಕೆಯಾಗಲಿದೆ.
  • ಮುಂದಿನ ದಿನಗಳಲ್ಲಿ ಬಿಎಂಆರ್ ವಲಯದಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿವೆ.
  • ಸಂಚಾರ ದಟ್ಟಣೆ ನಿಯಂತ್ರಣಕ್ಕೆ 287 ಕಿಮೀ ವರ್ತುಲ ರೈಲು ಬರಲಿದೆ.

ಪ್ರಸ್ತುತ ಬಿಎಂಆರ್‌ನ ಆರ್ಥಿಕ ಮೌಲ್ಯ 149 ಶತಕೋಟಿ ಡಾಲರ್ ಆಗಿದ್ದು, ಇದು ಕರ್ನಾಟಕದ ಒಟ್ಟು ರಾಜ್ಯ ದೇಶೀಯ ಉತ್ಪನ್ನಕ್ಕೆ (GSDP) ಶೇ 43ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತಿದೆ. ಬೆಂಗಳೂರು ಮಹಾನಗರ ಪ್ರದೇಶದ ತಲಾವಾರು ಜಿಡಿಪಿ ಸುಮಾರು 9,700 ಡಾಲರ್ ಅಂದರೆ ಅಂದಾಜು 9.15 ಲಕ್ಷ ರೂ. ಆಗಿದ್ದು, ಇದು ಕರ್ನಾಟಕದ ಸರಾಸರಿಗಿಂತ (5,000 ಡಾಲರ್) 1.9 ಪಟ್ಟು ಮತ್ತು ಭಾರತದ ರಾಷ್ಟ್ರೀಯ ಸರಾಸರಿಗಿಂತ (2,500 ಡಾಲರ್) ನಾಲ್ಕು ಪಟ್ಟು ಹೆಚ್ಚಾಗಿದೆ.

ಐಎಸ್‌ಇಜಿ (ISEG) ಫೌಂಡೇಶನ್ ಸಿದ್ಧಪಡಿಸಿರುವ ಆರ್ಥಿಕ ಮಹಾಯೋಜನೆ

ಬೆಂಗಳೂರಿನ ಕೇಂದ್ರ ಭಾಗದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ನಗರದ ಒಳಗಡೆ ಮತ್ತು ಹೊರವಲಯದಲ್ಲಿ ಕೈಗಾರಿಕೆ, ಐಟಿ/ಬಿಟಿ, ಸಂಶೋಧನೆ ಮತ್ತು ಲಾಜಿಸ್ಟಿಕ್ಸ್ ಒಳಗೊಂಡ ಹೊಸ ‘ಬೆಳವಣಿಗೆ ಕೇಂದ್ರಗಳನ್ನು’ (Growth Centres) ಸ್ಥಾಪಿಸಲು ಯೋಜಿಸಲಾಗಿದೆ.

ಸಂಚಾರ ದಟ್ಟಣೆ ನಿಯಂತ್ರಿಸಲು 287 ಕಿಲೋಮೀಟರ್ ಉದ್ದದ ವರ್ತುಲ ರೈಲು ಜಾಲ (Circular Rail Network), 400-500 ಕಿಲೋಮೀಟರ್ ಹೆಚ್ಚುವರಿ ಮೆಟ್ರೋ ಜಾಲ, 4 ಹೊಸ ಪ್ರಾದೇಶಿಕ ಕ್ಷಿಪ್ರ ಸಾರಿಗೆ (RRTS) ಕಾರಿಡಾರ್‌ಗಳು ಮತ್ತು ಉಪನಗರ ರೈಲು ಜಾಲದ ವಿಸ್ತರಣೆಯನ್ನು ಈ ಯೋಜನೆ ಒಳಗೊಂಡಿದೆ. ಈ ಅಂತಿಮ ಮಾಸ್ಟರ್ ಪ್ಲಾನ್ ವರದಿಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!: ಉಚ್ಚಾಟಿತ ಶಾಸಕನ ಪತ್ರದ ಸೀಕ್ರೆಟ್ ಬಿಚ್ಚಿಟ್ಟ ಲಿಂಗರಾಜ್ ಪಾಟೀಲ್ – Kannada News | Lingaraj Patil: “I Will Win the Election,” Says Confident BJP Nominee

ಬೆಂಗಳೂರು, ಜೂ.18: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಲಿಂಗರಾಜ್ ಪಾಟೀಲ್, ತಮ್ಮ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟಿವಿ9 ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, “ನೂರಕ್ಕೆ ನೂರು ಪ್ರತಿಶತ ನಾನು ಗೆದ್ದು ಬರುತ್ತೇನೆ” ಎಂದು ದೃಢವಾಗಿ ಹೇಳಿದ್ದಾರೆ. ಈ ಹಿಂದೆ ಎರಡು ಬಾರಿ ವಿಧಾನ ಪರಿಷತ್ ಟಿಕೆಟ್ ಕಳೆದುಕೊಂಡಿದ್ದ ಲಿಂಗರಾಜ್ ಪಾಟೀಲ್, ಈ ಬಾರಿ ಪಕ್ಷ ತೀರ್ಮಾನ ಕೈಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದು ಎಲ್ಲರಿಗೂ ತಿಳಿದಿದೆ. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ನನಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ಪಕ್ಷದ ತೀರ್ಮಾನದಂತೆ ಮತದಾರರು ಮತ ಹಾಕುತ್ತಾರೆ” ಎಂದು ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾವು ಮತ್ತು ರಘು ಅವರು ಜೊತೆಯಾಗಿ ಗೆಲ್ಲುವುದಾಗಿ ಅವರು ತಿಳಿಸಿದ್ದಾರೆ. ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮಗೆ ಮತ ಹಾಕುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಲಿಂಗರಾಜ್ ಪಾಟೀಲ್, ಯತ್ನಾಳ್ ಅವರು ತಮ್ಮ ಆಪ್ತರು ಮತ್ತು ಪಕ್ಷದ ನಾಯಕರು ಅವರೊಂದಿಗೆ ಮಾತನಾಡಿದ್ದಾರೆ. ಹೀಗಾಗಿ, ಅವರು ಖಂಡಿತವಾಗಿಯೂ ತಮ್ಮ ಪರವಾಗಿ ಮತ ಚಲಾಯಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಿಮ್ಲಾ ಅಪಘಾತ: ಕಂದಕಕ್ಕೆ ಉರುಳಿದ ಬೊಲೆರೊ, ಏಳು ಮಂದಿ ಸಾವು – Kannada News | Himachal Road Tragedies: 7 Dead in Bolero Crash, Lack of Crash Barriers Blamed

ಶಿಮ್ಲಾ, ಜೂನ್ 18: ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಬುಧವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ  ಈ ಅಪಘಾತ(Accident) ಸಂಭವಿಸಿದೆ.
ಮೃತಪಟ್ಟವರೆಲ್ಲರೂ ಕುತೇಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಕಾಕ್ರೋಧಾ ಗ್ರಾಮದಲ್ಲಿ ನಡೆದ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ.

ಅಪಘಾತದ ತೀವ್ರತೆಗೆ ಬೊಲೆರೊ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿ ಒಟ್ಟು ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಜಿಲ್ಲಾಡಳಿತ ಅಧಿಕಾರಿಗಳು ಮತ್ತು ಸ್ಥಳೀಯ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದರು. ಆದರೆ, ದಟ್ಟ ಕತ್ತಲೆ ಮತ್ತು ಕಡಿದಾದ ಗುಡ್ಡಗಾಡು ಪ್ರದೇಶವಾಗಿದ್ದರಿಂದ ಕಂದಕಕ್ಕೆ ಇಳಿದು ಮೃತದೇಹಗಳನ್ನು ಹೊರತೆಗೆಯಲು ರಕ್ಷಣಾ ತಂಡಗಳು ತೀವ್ರ ಸವಾಲು ಎದುರಿಸಬೇಕಾಯಿತು.

ಅಪಘಾತ ನಡೆದ ರಸ್ತೆಯಲ್ಲಿ ಸುರಕ್ಷತಾ ತಡೆಗೋಡೆಗಳು ಇಲ್ಲದಿರುವುದೇ ಈ ಭೀಕರ ದುರಂತಕ್ಕೆ ಕಾರಣ ಎಂದು ಸ್ಥಳೀಯ ನಿವಾಸಿಗಳು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ತಡೆಗೋಡೆಗಳಿದ್ದಿದ್ದರೆ ಇಷ್ಟೊಂದು ದೊಡ್ಡ ಸಾವು-ನೋವು ಸಂಭವಿಸುತ್ತಿರಲಿಲ್ಲ ಎಂದು ಅವರು ಆರೋಪಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ದುಬೈ ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದ ಅನಿವಾಸಿ ಭಾರತೀಯ ಉದ್ಯಮಿ: 2.6 ಕೋಟಿ ರೂ. ನೆರವು ಘೋಷಿಸಿದ ಡಾ. ಶಂಶೀರ್ ವಯಾಲಿಲ್

ಚಂಬಾದಲ್ಲಿ ನಡೆದ ಮತ್ತೊಂದು ಅಪಘಾತ: ಇಬ್ಬರು ಸಾವು
ಇದಕ್ಕೂ ಒಂದು ದಿನ ಮುಂಚೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ (NH-154A) ಬನಿಖೇತ್-ಚಂಬಾ ರಸ್ತೆಯ ಅಣೆಕಟ್ಟು ವ್ಯೂ ಪಾಯಿಂಟ್ ಬಳಿ ಮತ್ತೊಂದು ಕಾರು ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಮೇಲಿನ ರಸ್ತೆಯಿಂದ ಕೆಳಗಿನ ಚೋಹ್ರಾ ಅಣೆಕಟ್ಟು ರಸ್ತೆಯ ಕಂದಕಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Video: 25 ಸಾವಿರ ರೂ ಸಂಬಳದ ಉದ್ಯೋಗ ತೊರೆದು ಕ್ಯಾಬ್ ಚಾಲಕನಾದ ಯುವಕ – Kannada News | Businessman shocked to hear the earnings of a young man who quit his Rs. 25,000 a day job and became a cab driver

ಈಗಿನ ಯುವಕ ಯುವತಿಯರು ಸ್ವಂತ ಉದ್ಯಮದತ್ತ ಮುಖ ಮಾಡುತ್ತಿದ್ದಾರೆ. ಯಾರ ಕೈಕೆಳಗೂ ಕೆಲಸ ಮಾಡಲು ಇಷ್ಟ ಪಡದೇ ಸ್ವಂತವಾಗಿ ಬ್ಯುಸಿನೆಸ್ (business) ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇದಕ್ಕೆ ಉದಾಹರಣೆಯಂತಿದ್ದಾರೆ ಈ ಯುವಕ. 25 ಸಾವಿರ ರೂಪಾಯಿ ಸಂಬಳದ ಉದ್ಯೋಗ ತೊರೆದು ಕ್ಯಾಬ್ ಡ್ರೈವರ್ (Cab driver) ಆಗಿದ್ದು ಲಕ್ಷ ರೂಪಾಯಿ ಸಂಪಾದಿಸುತ್ತಿದ್ದಾನೆ. ಈ ಯುವಕನ ಬಗ್ಗೆ ಉದ್ಯಮಿ ಆಕಾಶ್ ಗುಪ್ತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇವಿಒಎಮ್ ಕಂಪನಿಯ ಸಂಸ್ಥಾಪಕ ಹಾಗೂ ಉದ್ಯಮಿ ಆಕಾಶ್ ಗುಪ್ತಾ (Akash Gupta) ಈ ಕ್ಯಾಬ್ ಚಾಲಕನೊಂದಿಗಿನ ಸಂಭಾಷಣೆಯ ವಿಡಿಯೊವನ್ನು ಶೇರ್ ಮಾಡಿದ್ದಾರೆ. ಈ ಕ್ಲಿಪಿಂಗ್ ನಲ್ಲಿ ಆಫೀಸ್ ಕೆಲಸ ತೊರೆದು ಕ್ಯಾಬ್ ಚಾಲಕನಾಗಿರುವುದನ್ನು ಕಾಣಬಹುದು. ಆಫೀಸ್ ಕೆಲಸ ಬಿಟ್ಟು ಕ್ಯಾಬ್ ಚಾಲಕ ವೃತ್ತಿಯನ್ನು ಅತ್ಯದ್ಭುತವಾಗಿ ನಿರ್ವಹಿಸುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಈ ಕ್ಲಿಪಿಂಗ್ ನಲ್ಲಿ ಈಗಿನ ಯುವಕ ಯುವತಿಯರು ಸಂಬಳಕ್ಕಿಂತ ಹೊಂದಿಕೊಳ್ಳುವ ಉದ್ಯೋಗಗಳನ್ನು ಆಯ್ಕೆ ಮಾಡುತ್ತಿದ್ದಾರೆ.. ಆದರೆ ನಾನು ಮಾಡುತ್ತಿದ್ದ ಆಫೀಸ್ ಕೆಲಸದಲ್ಲಿ ಸಂಬಳ ಕಡಿಮೆಯಿತ್ತು. ಇದು ತನ್ನ ಖರ್ಚಿಗೆ ಸಾಲುತ್ತಿರಲಿಲ್ಲ ಎಂದು ಹೇಳುತ್ತಿರುವುದನ್ನು ಕಾಣಬಹುದು.

ನನ್ನ ತಿಂಗಳ ಸಂಬಳ 25,000 ರೂ. ಮಾಸಿಕ ಸಂಬಳದೊಂದಿಗೆ ಕಚೇರಿ ಕೆಲಸ ಮಾಡುತ್ತಿದ್ದೆ. ಆದರೆ ಈ ಕ್ಯಾಬ್ ಡ್ರೈವರ್ ಆದ ಬಳಿಕ ತಿಂಗಳಿಗೆ 1 ಲಕ್ಷ ರೂಪಾಯಿ ಸಂಪಾದಿಸುತ್ತೇನೆ. ಯಾವಾಗ ಕೆಲಸ ಮಾಡಬೇಕು, ಎಷ್ಟು ಗಂಟೆ ಮಾಡ ಬೇಕು ಎಂಬುದನ್ನು ನಾನೇ ನಿರ್ಧರಿಸುತ್ತೇನೆ ಎಂದು ಯುವಕ ಹೇಳಿಕೊಂಡಿದ್ದಾನೆ. ಈ ಯುವಕನ ಆತ್ಮವಿಶ್ವಾಸ ತುಂಬಿದ ಮಾತು ಕೇಳಿದ ಉದ್ಯಮಿ ಆತನನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಕನಸನ್ನು ಬೆನ್ನಟ್ಟಿ ಹೋದ ವ್ಯಕ್ತಿ; ಇಂದು ಏರ್ ಇಂಡಿಯಾದಲ್ಲಿ ಸ್ವಚ್ಛತಾ ಸಿಬ್ಬಂದಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಬೇರೆಯವರ ಕೈ ಕೆಳಗೆ ಕೆಲಸ ಮಾಡೋದಕ್ಕಿಂತ ಸ್ವಂತ ಉದ್ಯಮವೇ ಬೆಸ್ಟ್ ಎಂದಿದ್ದಾರೆ. ಮತ್ತೊಬ್ಬರು, ಈ ಯುವಕನ ಆತ್ಮವಿಶ್ವಾಸದ ಮಾತು ಕೇಳಿ ಖುಷಿಯಾಯ್ತು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನಿಮ್ಮ ಮಾತು, ನಿಮ್ಮ ಧೈರ್ಯ ಇಂದಿನ ಯುವ ಪೀಳಿಗೆಗೆ ಪ್ರೇರಣಾದಾಯಕ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಾಖಲೆ ಬರೆದ ಮಾದಪ್ಪನ ಹುಂಡಿ: ಕೇವಲ 27 ದಿನದಲ್ಲಿ ಬರೋಬ್ಬರಿ 2.73 ಕೋಟಿ ಸಂಗ್ರಹ! – Kannada News | Male Mahadeshwara Betta Hundi Collection Records Rs 2.73 Crore in Just 27 Days

ಚಾಮರಾಜನಗರ, ಜೂನ್ 18: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ.

ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ ನಿಷೇಧಿತ ಹತ್ತು 2,000 ಮುಖಬೆಲೆಯ ಹಳೆಯ ನೋಟುಗಳು ಪತ್ತೆಯಾಗಿವೆ. ಮಲೆ ಮಹದೇಶ್ವರ ಪ್ರಾಧಿಕಾರದ ಸಿಬ್ಬಂದಿ ಸಮ್ಮುಖದಲ್ಲಿ ಈ ಬೃಹತ್ ಮೊತ್ತದ ಹುಂಡಿ ಎಣಿಕೆ ಕಾರ್ಯ ಯಶಸ್ವಿಯಾಗಿ ಜರುಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ಯಾರಿಸ್‌ಗೆ ಪ್ರಧಾನಿ ಮೋದಿ ಆಗಮನ: ಜಾಗತಿಕ ಪ್ರಗತಿಗೆ ಭಾರತ-ಫ್ರಾನ್ಸ್ ಸಹಭಾಗಿತ್ವ ಅತ್ಯಗತ್ಯ – Kannada News | PM Modi Paris: India France Partnership Essential for Global Progress Post G7

ಪ್ಯಾರಿಸ್, ಜೂನ್ 18: ಜಿ7 ಶೃಂಗಸಭೆ ಮುಗಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ ತಲುಪಿದ್ದಾರೆ. ಪ್ಯಾರಿಸ್‌ನಲ್ಲಿ ಅವರಿಗೆ ಭಾರತೀಯರಿಂದ ಅದ್ಧೂರಿ ಸ್ವಾಗತ ದೊರೆತಿದೆ. ಈ ವೇಳೆ ಮಾತನಾಡಿದ ಅವರು, ನಮ್ಮ ಗ್ರಹದ ಒಟ್ಟಾರೆ ಪ್ರಗತಿಗೆ ಭಾರತ ಮತ್ತು ಫ್ರಾನ್ಸ್ ನಡುವಿನ ಪಾಲುದಾರಿಕೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.

ಫ್ರೆಂಚ್ ಕಮ್ಯೂನ್ ಎವಿಯನ್-ಲೆಸ್-ಬೈನ್ಸ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಅತಿಥಿ ರಾಷ್ಟ್ರವಾಗಿ ಭಾರತ ಭಾಗವಹಿಸಿತ್ತು. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಮೋದಿ ಪ್ಯಾರಿಸ್‌ಗೆ ಆಗಮಿಸಿದ್ದಾರೆ.
ಪ್ಯಾರಿಸ್‌ನಲ್ಲಿ ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮೇಳವಾದ ‘ವಿವಾಟೆಕ್ 2026’ ನಲ್ಲಿ ಭಾಗವಹಿಸಲಿದ್ದಾರೆ.

ಜಾಗತಿಕ ಸಮೃದ್ಧಿಯನ್ನು ಸಾಧಿಸಲು ಅಭಿವೃದ್ಧಿಶೀಲ ರಾಷ್ಟ್ರಗಳೊಂದಿಗೆ (ಗ್ಲೋಬಲ್ ಸೌತ್) ನಿಕಟ ಸಂಬಂಧ ಹೊಂದುವುದು ಅಗತ್ಯ ಎಂದು ಮೋದಿ ಒತ್ತಿಹೇಳಿದರು. ಜಿ7 ದೇಶಗಳು ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ಬಲವನ್ನು ಒಟ್ಟುಗೂಡಿಸಿ ವ್ಯಾಪಾರ ಹಾಗೂ ಸಂಪರ್ಕವನ್ನು ಹೆಚ್ಚಿಸುವ ಹೊಸ ಚೌಕಟ್ಟನ್ನು ಮೋದಿ ಪ್ರಸ್ತಾಪಿಸಿದರು.

ಮತ್ತಷ್ಟು ಓದಿ: ಮೋದಿ ರಾಜತಾಂತ್ರಿಕತೆ ಯಶಸ್ವಿ; ಬ್ರಿಟನ್, ಕೆನಡಾ ಮತ್ತು ಐರೋಪ್ಯ ಒಕ್ಕೂಟದಿಂದ ಭಾರತಕ್ಕೆ ಭಾರಿ ಆರ್ಥಿಕ ಲಾಭ!

ಶೃಂಗಸಭೆಯ ನಡುವೆ ಪ್ರಧಾನಿ ಮೋದಿ ಅವರು ವಿಶ್ವದ ಪ್ರಮುಖ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ

ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಮತ್ತು ಯುಎಇ ಅಧ್ಯಕ್ಷರು

ಉಭಯ ದೇಶಗಳು ರಕ್ಷಣೆ, ಭದ್ರತೆ, ಬಾಹ್ಯಾಕಾಶ, ನಾಗರಿಕ ಪರಮಾಣು ಶಕ್ತಿ ಮತ್ತು ಹವಾಮಾನ ಬದಲಾವಣೆಯ ತಡೆಗೆ ಸಂಬಂಧಿಸಿದಂತೆ ಬಲವಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿವೆ. ಪ್ರಸ್ತುತ ಫ್ರಾನ್ಸ್‌ನಲ್ಲಿ ಸುಮಾರು 1.19 ಲಕ್ಷಕ್ಕೂ ಅಧಿಕ ಭಾರತೀಯರು ವಾಸಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಶರ್ಮಿಳಾ ಮಾಂಡ್ರೆ ಮದುವೆ ಸುದ್ದಿ ಕೇಳಿ ಹಾರ್ಟ್​ ಬ್ರೇಕ್ ಎಮೋಜಿ ಹಾಕಿದ ಪವನ್ ಕುಮಾರ್ – Kannada News | Pawan Kumar’s Viral Reel on Sharmiela Mandre’s Engagement: Gaalipata 2 Connection

ಬಹುಭಾಷಾ ನಟಿ ಶರ್ಮಿಳಾ ಮಾಂಡ್ರೆ (Sharmila Mandre) ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮಿಳಿನ ಖ್ಯಾತ ಚಿತ್ರ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ಮುಂದಿನ ವಾರ ಶರ್ಮಿಳಾ ಅವರ ನಿಶ್ಚಿತಾರ್ಥ ನೆರವೇರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಆದರೆ, ಈ ಸಂತಸದ ಸುದ್ದಿ ಹೊರಬೀಳುತ್ತಿದ್ದಂತೆ ಇತ್ತ ಪ್ರಖ್ಯಾತ ನಿರ್ದೇಶಕ, ನಟ ಪವನ್ ಕುಮಾರ್ ಅವರಿಗೆ ‘ಹಾರ್ಟ್ ಬ್ರೇಕ್’ ಆಗಿದೆ.
ಹೌದು, ಶರ್ಮಿಳಾ ಮಾಂಡ್ರೆ ಅವರ ಮದುವೆ ಸುದ್ದಿ ಕಿವಿಗೆ ಬೀಳುತ್ತಿದ್ದಂತೆ ಪವನ್ ಕುಮಾರ್ ತಮ್ಮದೇ ಶೈಲಿಯಲ್ಲಿ ತಮಾಷೆಯ ವಿಡಿಯೋವೊಂದು ಈಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ.

ಏನಿದು ‘ಗಾಳಿಪಟ 2’ ಕನೆಕ್ಷನ್?

ನಿರ್ದೇಶಕ ಯೋಗರಾಜ್ ಭಟ್ ಅವರ ‘ಗಾಳಿಪಟ 2’ ಸಿನಿಮಾದಲ್ಲಿ ಪವನ್ ಕುಮಾರ್ ಮತ್ತು ಶರ್ಮಿಳಾ ಮಾಂಡ್ರೆ ಜೊತೆಯಾಗಿ ನಟಿಸಿದ್ದರು. ಚಿತ್ರದಲ್ಲಿ ಶರ್ಮಿಳಾ ಅವರನ್ನು ಪವನ್ ಜೀವಕಿಂತ ಹೆಚ್ಚಾಗಿ ಪ್ರೀತಿಸುತ್ತಾರೆ. ಆದರೆ, ಶರ್ಮಿಳಾ ಬೇರೆಯವರನ್ನು ಮದುವೆಯಾಗಿ ಪವನ್ ಅವರ ಹೃದಯ ಒಡೆಯುತ್ತಾರೆ. ಇದೀಗ ನಿಜ ಜೀವನದಲ್ಲೂ ಶರ್ಮಿಳಾ ತಮಿಳು ನಿರ್ಮಾಪಕನ ಕೈ ಹಿಡಿಯುತ್ತಿರುವುದಕ್ಕೆ, ಪವನ್ ಕುಮಾರ್ ಸಿನಿಮಾ ಶೈಲಿಯಲ್ಲೇ ರೀಲ್ಸ್ ಮಾಡಿ ಕಾಲೆಳೆದಿದ್ದಾರೆ.

ವೈರಲ್ ವಿಡಿಯೋದಲ್ಲೇನಿದೆ?

ವಿಡಿಯೋದ ಆರಂಭದಲ್ಲಿ ಶರ್ಮಿಳಾ ಮಾಂಡ್ರೆ ಸೋಫಾ ಮೇಲೆ ಕೂತು ಪುಸ್ತಕ ಓದುತ್ತಿರುತ್ತಾರೆ. ಹಿನ್ನೆಲೆಯಲ್ಲಿ ‘ಗಾಳಿಪಟ 2’ ಚಿತ್ರದ ಹಾಡು ಪ್ಲೇ ಆಗುತ್ತಿರುತ್ತದೆ. ಕ್ಯಾಮೆರಾ ತಿರುಗುತ್ತಿದ್ದಂತೆ ಅಲ್ಲಿ ಪವನ್ ಕುಮಾರ್ ಹತಾಶರಾಗಿ ನಿಂತಿರುತ್ತಾರೆ ಮತ್ತು ಅವರ ಎದೆಯ ಮೇಲೆ ಒಡೆದ ಹೃದಯದ ಎಮೋಜಿ ಮೂಡುತ್ತದೆ. ನಂತರ ಶರ್ಮಿಳಾ ಹಾಗೂ ಸುಧನ್ ಸುಂದರಂ ಅವರ ನಿಶ್ಚಿತಾರ್ಥದ ಸುದ್ದಿ ಕಾಣಿಸಿಕೊಳ್ಳುತ್ತದೆ. ಕೊನೆಯಲ್ಲಿ ಪವನ್, ‘ನಿಮ್ಮ ನಿರ್ಧಾರಕ್ಕೆ ನನ್ನ ಸಂತೋಷವಿದೆ ಶಮ್ಮಿ ಮ್ಯಾಮ್’ ಎನ್ನುತ್ತಾ ಅಳುತ್ತಿರುವ ಫನ್ನಿ ಮೀಮ್ ಒಂದನ್ನು ಸೇರಿಸಿ ವಿಡಿಯೋ ಮುಗಿಸಿದ್ದಾರೆ.

ಇದನ್ನೂ ಓದಿ: ಮದುವೆಯಾಗುತ್ತಿದ್ದಾರಾ ಶರ್ಮಿಳಾ ಮಾಂಡ್ರೆ, ವರ ಯಾರು ಗೊತ್ತೆ?

ರೀಲ್ ಲೈಫ್ ಕಥೆ ರಿಯಲ್ ಲೈಫ್‌ನಲ್ಲೂ ಮರುಕಳಿಸಿದೆ ಎಂದು ಪವನ್ ಕುಮಾರ್ ಮಾಡಿರುವ ಈ ಕ್ರಿಯೇಟಿವ್ ಪೋಸ್ಟ್‌ಗೆ ನೆಟ್ಟಿಗರು ಹಾಗೂ ಚಿತ್ರರಂಗದ ಗಣ್ಯರು ಬಿದ್ದು ಬಿದ್ದು ನಗುತ್ತಿದ್ದಾರೆ. ‘ನಿಮ್ಮ ಪ್ರೀತಿ ಸಿನಿಮಾದಲ್ಲೂ ಸಿಗಲಿಲ್ಲ, ನಿಜ ಜೀವನದಲ್ಲೂ ಸಿಗಲಿಲ್ಲವೇ?’ ಎಂದು ನೆಟ್ಟಿಗರು ಪವನ್ ಕಾಲೆಳೆಯುತ್ತಿದ್ದಾರೆ. ಈ ವಿಡಿಯೋಗೆ ‘ಓಹ್ ಮೈ ಗಾಡ್’ ಅಂತ ಶರ್ಮಿಳಾ ಕಮೆಂಟ್ ಹಾಕಿದ್ದಾರೆ. ಇದಕ್ಕೆ ಉತ್ತರಿಸಿರೋ ಪವನ್, ‘ಶರ್ಮಿಳಾ ಮಾಂಡ್ರೆ ಎಂಥಾ ಗೆಳತಿ ಅಂದ್ರೆ, ಯುಗಯುಗಗಳೇ ಕಳೆದ್ರೂ ನನಗೆ ಸಿಗಲ್ಲ. ಆದರೆ, ನಾವು ಯಾವಾಗ ಮಾತನಾಡಿದರೂ ನಮ್ಮ ನಡುವೆ ಅಷ್ಟೇ ಸೂಪರ್ ಕನೆಕ್ಷನ್ ಇರುತ್ತೆ. ಇನ್ನು ನಮ್ಮಿಬ್ಬರ ಮಧ್ಯೆ ಇರೋ ಆ ಚುಚ್ಚುವ, ನೋವುಂಟುಮಾಡುವ,ಕೊಂಕು ಮತ್ತು ರೇಗಿಸುವ ಡಾರ್ಕ್ ಹ್ಯೂಮರ್ ಅಂದ್ರೆ ನಮಗೆ ಸಖತ್ ಇಷ್ಟ. ಕಂಗ್ರಾಜುಲೇಷನ್ಸ್ ಕಣೋ.. ನಾನೇ ಮುಂದೆ ನಿಂತು ಖುಷಿಯಿಂದ ಕನ್ಯಾದಾನ ಮಾಡ್ತೀನಿ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಣ್ಣಿಗೆ ಸನ್​ಗ್ಲಾಸ್… ಆರ್ಚರ್ ಎದುರು ಫಿಲಿಪ್ಸ್ ಮಾಸ್!

ಲಂಡನ್‌ನ ಓವಲ್ ಮೈದಾನದಲ್ಲಿ ಗ್ಲೆನ್ ಫಿಲಿಪ್ಸ್ ಮತ್ತು ಜೋಫ್ರಾ ಆರ್ಚರ್ ನಡುವೆ ನಡೆದ ರೋಚಕ ಹಣಾಹಣಿ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ನ್ಯೂಝಿಲೆಂಡ್ ತಂಡದ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಕಪ್ಪು ಬಣ್ಣದ ಸನ್‌ಗ್ಲಾಸ್ ಧರಿಸಿ, ಇಂಗ್ಲೆಂಡ್‌ನ ಅತ್ಯಂತ ವೇಗದ ಬೌಲರ್ ಜೋಫ್ರಾ ಆರ್ಚರ್ ಅವರ ಬೌನ್ಸರ್‌ಗಳನ್ನು ಎದುರಿಸಿದ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸನ್​ಗ್ಲಾಸ್ ಧರಿಸಲು ಕಾರಣವೇನು?

ಪಂದ್ಯದ 67ನೇ ಓವರ್​ ವೇಳೆ ಓವಲ್ ಮೈದಾನದ ಸೈಟ್‌ಸ್ಕ್ರೀನ್‌ನಿಂದ ಸೂರ್ಯನ ಬೆಳಕು ತೀವ್ರವಾಗಿ ಕಣ್ಣಿಗೆ ಬಡಿಯುತ್ತಿದ್ದ ಕಾರಣ, ಚೆಂಡನ್ನು ಸ್ಪಷ್ಟವಾಗಿ ಗುರುತಿಸಲು ಗ್ಲೆನ್ ಫಿಲಿಪ್ಸ್ ಕಪ್ಪು ಬಣ್ಣದ ಸನ್‌ಗ್ಲಾಸ್ ಧರಿಸಲು ನಿರ್ಧರಿಸಿದರು.

ಫಿಲಿಪ್ಸ್ ಹೆಲ್ಮೆಟ್ ಒಳಗಡೆ ದೊಡ್ಡ ಕನ್ನಡಕ ಧರಿಸಿ ಕ್ರೀಸ್‌ನಲ್ಲಿ ನಿಂತಾಗ, ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರು ಲೇವಡಿ ಮಾಡಿದರು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಇದನ್ನು ಫಿಲಿಪ್ಸ್ ಅವರ ಅಪ್ರತಿಮ “ಸ್ವಾಗ್” ಮತ್ತು ಧೈರ್ಯ ಎಂದು ಬಣ್ಣಿಸಿದ್ದಾರೆ.

ಜೋಫ್ರಾ ಆರ್ಚರ್ vs ಗ್ಲೆನ್ ಫಿಲಿಪ್ಸ್:

ವೇಗವಾಗಿ ರನ್ ಗಳಿಸುತ್ತಿದ್ದ ಗ್ಲೆನ್ ಫಿಲಿಪ್ಸ್ (23 ಎಸೆತಗಳಲ್ಲಿ 33 ರನ್) ಅವರನ್ನು ಕಟ್ಟಿಹಾಕಲು ಇಂಗ್ಲೆಂಡ್ ನಾಯಕ ಜೋ ರೂಟ್, ಜೋಫ್ರಾ ಆರ್ಚರ್ ಅವರನ್ನು ಮರಳಿ ಬೌಲಿಂಗ್‌ಗೆ ತಂದರು. ಆರ್ಚರ್ ಸನ್‌ಗ್ಲಾಸ್ ಧರಿಸಿದ್ದ ಫಿಲಿಪ್ಸ್ ವಿರುದ್ಧ ಸತತ 8 ಓವರ್‌ಗಳ ಕಾಲ ಕೇವಲ ಶಾರ್ಟ್-ಪಿಚ್ ಎಸೆತಗಳ ಮೂಲಕ ದಾಳಿ ನಡೆಸಿದರು. ಫಿಲಿಪ್ಸ್ ಸನ್‌ಗ್ಲಾಸ್ ಧರಿಸಿದ ತಕ್ಷಣ ಎದುರಿಸಿದ ಆರ್ಚರ್ ಅವರ ಮೊದಲ ಬೌನ್ಸರ್ ನೇರವಾಗಿ ಅವರ ಹೆಗಲಿಗೆ ಬಡಿಯಿತು.

ಚಹಾ ವಿರಾಮದ ನಂತರ ಆರ್ಚರ್ ಎಸೆದ 40 ಎಸೆತಗಳಲ್ಲಿ 33 ಎಸೆತಗಳು ಶಾರ್ಟ್-ಪಿಚ್ ಆಗಿದ್ದವು. ಸುಮಾರು 138 ಕಿ.ಮೀ ವೇಗದಲ್ಲಿ ಬಂದ ಕುತ್ತಿಗೆ ಮಟ್ಟದ ಬೌನ್ಸರ್ ಒಂದರಿಂದ ತಪ್ಪಿಸಿಕೊಳ್ಳಲು ಫಿಲಿಪ್ಸ್ ಕ್ರೀಸ್‌ನಲ್ಲಿ ಮಲಗಬೇಕಾಯಿತು.

ಆರ್ಚರ್ ಎಸೆದ ಈ ಭೀಕರ ಬೌನ್ಸರ್‌ನಿಂದ ತಪ್ಪಿಸಿಕೊಂಡು ನೆಲದ ಮೇಲೆ ಬಿದ್ದ ಫಿಲಿಪ್ಸ್, ಹಾಗೆಯೇ ಮಲಗಿ ನ್ಯೂಝಿಲೆಂಡ್ ಡ್ರೆಸ್ಸಿಂಗ್ ರೂಮ್ ಕಡೆಗೆ ‘ಥಂಬ್ಸ್-ಅಪ್’ ತೋರಿಸಿದರು. ಇದನ್ನು ಕಂಡು ಸಹ ಆಟಗಾರ ಡೆರಿಲ್ ಮಿಚೆಲ್ ಸೇರಿದಂತೆ ಇಡೀ ಕಿವೀಸ್ ಬಳಗ ನಗೆಗಡಲಲ್ಲಿ ತೇಲಿದರು.

ಇದಾಗ್ಯೂ ಸನ್​ಗ್ಲಾಸ್ ಧರಿಸಿಯೇ ಏಕಾಂಗಿ ಹೋರಾಟ ಮುಂದುವರೆಸಿರುವ ಗ್ಲೆನ್ ಫಿಲಿಪ್ಸ್ ಮೊದಲ ದಿನದಾಟದ ಅಂತ್ಯಕ್ಕೆ 74 ಎಸೆತಗಳಲ್ಲಿ 9 ಫೋರ್​ ಬಾರಿಸಿ ಅಜೇಯ 49 ರನ್ ಕಲೆಹಾಕಿದ್ದಾರೆ. ಇತ್ತ ಫಿಲಿಪ್ಸ್ ಅವರ ಈ ಕೆಚ್ಚೆದೆಯ ಪ್ರದರ್ಶನದ ಫಲವಾಗಿ ನ್ಯೂಝಿಲೆಂಡ್ ತಂಡವು ಮೊದಲ ದಿನದಲ್ಲೇ ಆಲೌಟ್ ಆಗುವುದರಿಂದ ಬಚಾವಾಗಿದೆ. ಅಲ್ಲದೆ ಮೊದಲ ದಿನದಾಟದ ಅಂತ್ಯಕ್ಕೆ ಪ್ರಥಮ ಇನಿಂಗ್ಸ್​ನಲ್ಲಿ 7 ವಿಕೆಟ್ ಕಳೆದುಕೊಂಡು 291 ರನ್ ಕಲೆಹಾಕಿದೆ.

 

 

Source link

ಶಿವಸೇನೆಯಲ್ಲಿ ಮತ್ತೊಂದು ಬಿರುಕು? ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ – Kannada News | Shiv Sena UBT Split Uddhav Thackeray Calls Urgent Meet Amidst ‘Operation Tiger’ Rumors

ಮುಂಬೈ, ಜೂನ್ 18: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಪಕ್ಷಾಂತರದ ಬಿರುಗಾಳಿ ಎದ್ದಿದೆ. ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೆ ಸೀಳು ಉಂಟಾಗಬಹುದು ಎಂಬ ಊಹಾಪೋಹಗಳ ನಡುವೆ, ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray)ಇಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪಕ್ಷದ ಸಂಸದರ ನಿರ್ಣಾಯಕ ಸಭೆ ಕರೆದಿದ್ದಾರೆ. ಪಕ್ಷವನ್ನು ಒಗ್ಗಟ್ಟಾಗಿಡಲು ಮತ್ತು ಸಂಸದರು ಕೈಕೊಡುವುದನ್ನು ತಪ್ಪಿಸಲು ಈ ಸಭೆಯಲ್ಲಿ ಎಲ್ಲಾ ಲೋಕಸಭಾ ಸದಸ್ಯರಿಗೂ ಹಾಜರಿರಲು ವಿಪ್ ಜಾರಿ ಮಾಡಲಾಗಿದೆ.

ಯುಬಿಟಿ ಪಕ್ಷದ ಒಟ್ಟು 9 ಲೋಕಸಭಾ ಸಂಸದರಲ್ಲಿ 6 ಸಂಸದರು ತಮ್ಮ ಕಡೆ ಇದ್ದಾರೆ ಎಂದು ಬಂಡಾಯ ನಾಯಕರ ಗುಂಪೊಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದೆ. ಈ ಬಂಡಾಯ ಸಂಸದರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ.

ಸಂಸದರನ್ನು ಸೆಳೆಯಲು ತಲಾ 50 ಕೋಟಿ ರೂಪಾಯಿ ಆಫರ್ ನೀಡಲಾಗಿದೆ ಎಂದು ಉದ್ಧವ್ ಠಾಕ್ರೆ ಆಪ್ತ, ರಾಜ್ಯಸಭಾ ಸಂಸದ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. ಶಿವಸೇನೆ (ಯುಬಿಟಿ) ಸಂಸದ ಅನಿಲ್ ದೇಸಾಯಿ ಅವರ ಪ್ರಕಾರ, ಬಂಡಾಯಗಾರರು ಕಾನೂನಿನಿಂದ ತಪ್ಪಿಸಿಕೊಳ್ಳುವುದು ಸುಲಭವಲ್ಲ.
ಕೇವಲ 3ನೇ 2ರಷ್ಟು (6 ಸಂಸದರು) ಬಹುಮತ ಇದೆ ಎಂದ ತಕ್ಷಣ ಮತ್ತೊಂದು ಪಕ್ಷದೊಂದಿಗೆ ವಿಲೀನವಾಗಲು ಕಾನೂನಿನಲ್ಲಿ ಅವಕಾಶವಿಲ್ಲ. ಮೂಲ ಪಕ್ಷ ನಿರ್ಧಾರ ಮಾಡಿದರೆ ಮಾತ್ರ ವಿಲೀನ ಸಾಧ್ಯ. ಹಾಗಾಗಿ ಬಂಡಾಯಗಾರರ ಸಂಖ್ಯೆ ಎಷ್ಟೇ ಇದ್ದರೂ ಸ್ಪೀಕರ್ ನಿಯಮಗಳ ಪ್ರಕಾರ ಅವರನ್ನು ಮಾನ್ಯ ಮಾಡಲು ಬರುವುದಿಲ್ಲ.

ಮತ್ತಷ್ಟು ಓದಿ:ನಿಯತ್ತಿಲ್ಲದವರು ಪಕ್ಷ ಬಿಟ್ಟು ಹೋಗಬಹುದು; ‘ಆಪರೇಷನ್ ಟೈಗರ್’ ಬೆನ್ನಲ್ಲೇ ಸಂಸದರಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ

ಸದ್ಯಕ್ಕೆ ಚೆಂಡು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಅಂಗಳದಲ್ಲಿದೆ. ಯಾವುದೇ ಕಾನೂನುಬಾಹಿರ ಪಕ್ಷಾಂತರಕ್ಕೆ ಅವಕಾಶ ನೀಡದಂತೆ ಉದ್ಧವ್ ಬಣ ಈಗಾಗಲೇ ಸ್ಪೀಕರ್‌ಗೆ ಮನವಿ ಮಾಡಿದೆ. ಉದ್ಧವ್ ಕರೆದಿರುವ ಇಂದಿನ ಸಭೆಗೆ ಎಷ್ಟು ಜನ ಸಂಸದರು ಗೈರಾಗುತ್ತಾರೆ ಎಂಬುದರ ಮೇಲೆ ‘ಆಪರೇಷನ್ ಟೈಗರ್’ ಭವಿಷ್ಯ ನಿರ್ಧಾರವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹಾಸ್ಟೆಲ್ ವಿದ್ಯಾರ್ಥಿಗಳ ಪೋಷಕರೇ ಎಚ್ಚರ: ಸುಲಭ ಹಣ, ಮಜಾ ಉಡಾಯಿಸಲು ಬೈಕ್ ಕಳ್ಳತನಕ್ಕೆ ಇಳಿದ ಬಿಎ, ಬಿಕಾಂ ಸ್ಟೂಡೆಂಟ್ಸ್ – Kannada News | Raichur Police Busts Student Bike Theft Racket, Recovers 15 Stolen Motorcycles

ರಾಯಚೂರು, ಜೂ.18: ಹಾಸ್ಟೆಲ್‌ಗಳಲ್ಲಿ ಮಕ್ಕಳನ್ನು ಬಿಟ್ಟು ಓದಿಸುತ್ತಿರುವ ಪೋಷಕರು ಒಮ್ಮೆ ಈ ಸ್ಟೋರಿ ಓದಲೇಬೇಕು. ರಾಯಚೂರಿನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸುಲಭವಾಗಿ ಹಣ ಗಳಿಸಿ ಮಜಾ ಉಡಾಯಿಸುವ ಹಪಾಹಪಿಗೆ ಬಿದ್ದ ಇಬ್ಬರು ಪದವಿ ವಿದ್ಯಾರ್ಥಿಗಳು ಸ್ಥಳೀಯ ಯುವಕನೊಂದಿಗೆ ಸೇರಿ ದೊಡ್ಡ ಮಟ್ಟದ ಬೈಕ್ ಕಳ್ಳತನದ ಜಾಲವನ್ನು ನಡೆಸುತ್ತಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ. ರಾಯಚೂರು ನಗರದ ನೇತಾಜಿನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಬರೋಬ್ಬರಿ 15 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.

ರಾಯಚೂರು ನಗರದ ಸರ್ಕಾರಿ ಹಾಸ್ಟೆಲ್‌ನಲ್ಲಿ ವಾಸವಿದ್ದ ಬಿಎ (BA) ವಿದ್ಯಾರ್ಥಿ ಆಕಾಶ್, ಬಿಕಾಂ (B.Com) ವಿದ್ಯಾರ್ಥಿ ಕಾರ್ತಿಕ್ ಮತ್ತು ಸ್ಥಳೀಯ ಒಡನಾಡಿ ಆಂಜನೇಯ ಬಂಧಿತ ಆರೋಪಿಗಳಾಗಿದ್ದಾರೆ. ನಾರಾಯಣ ಎಂಬ ವಿದ್ಯಾರ್ಥಿಯ ಪಲ್ಸರ್ ಬೈಕ್ ಮೇ 25 ರಂದು ಕಳ್ಳತನವಾಗಿತ್ತು. ಈ ಕುರಿತು ಆತ ನೇತಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು. ಆಕಾಶ್ ಮತ್ತು ಗ್ಯಾಂಗ್ ನಾರಾಯಣನ ಪಲ್ಸರ್ ಬೈಕ್ ಕದ್ದು, ಅದರ ನಂಬರ್ ಪ್ಲೇಟ್ ಹಾಗೂ ಬಿಡಿಭಾಗಗಳನ್ನು ಸಂಪೂರ್ಣ ಮಾರ್ಪಾಡು (Modify) ಮಾಡಿ ಬೇರೆಯವರಿಗೆ ಮಾರಾಟ ಮಾಡಿದ್ದರು.

ಕೆಲವು ದಿನಗಳ ನಂತರ, ನಾರಾಯಣನ ಮೊಬೈಲ್‌ಗೆ ಗೆಳೆಯರ ಮೂಲಕ “ಸೆಕೆಂಡ್ ಹ್ಯಾಂಡ್ ಪಲ್ಸರ್ ಬೈಕ್ ಮಾರಾಟಕ್ಕಿದೆ” ಎಂಬ ಜಾಹೀರಾತಿನ ಫೋಟೋವೊಂದು ಬಂದಿದೆ. ಆ ಫೋಟೋವನ್ನು ಸೂಕ್ಷ್ಮವಾಗಿ ಗಮನಿಸಿದ ನಾರಾಯಣ, ಅದು ಮಾರ್ಪಾಡಾಗಿದ್ದರೂ ತನ್ನದೇ ಹಳೆಯ ಬೈಕ್ ಎಂಬುದನ್ನು ಖಾತ್ರಿಪಡಿಸಿಕೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿ: ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

ಮಾಹಿತಿ ಸಿಗುತ್ತಿದ್ದಂತೆ ನೇತಾಜಿನಗರ ಪೊಲೀಸರು ವಿಶೇಷ ತಂಡವನ್ನು ರಚಿಸಿ, ಬೈಕ್ ಮಾರಾಟ ಮಾಡುವ ನೆಪದಲ್ಲಿ ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಪೊಲೀಸರ ಕಾರ್ಯಾಚರಣೆ ವೇಳೆ ಇಬ್ಬರು ವಿದ್ಯಾರ್ಥಿಗಳು ಹಾಗೂ ಅವರ ಒಡನಾಡಿ ಲಾಕ್ ಆಗಿದ್ದಾರೆ. ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಇವರು ರಾಯಚೂರು ಸುತ್ತಮುತ್ತಲಿನ ಅಕ್ಕಪಕ್ಕದ ಜಿಲ್ಲೆಗಳು ಹಾಗೂ ನೆರೆಯ ತೆಲಂಗಾಣ ರಾಜ್ಯದಲ್ಲೂ ಬೈಕ್‌ಗಳನ್ನು ಕದ್ದು ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಅವರಿಂದ 15 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದೀಗ ಅವರ ವಿರೋಧ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link