All posts by nagaraj11081993

ಭೂತಾಯಿಗೆ ಚರಗ, ಹೊಲದಲ್ಲೇ ವೆರೈಟಿ ಊಟ: ಎಳ್ಳಮಾವಾಸ್ಯೆ ಬಗ್ಗೆ ನೀವು ತಿದುಕೊಳ್ಳಲೇಬೇಕು – Kannada News | Ella Amavasya: North Karnataka farmers celebrate festival with Bhoomi Puja rituals; see photos

ವರ್ಷಕ್ಕೊಮ್ಮೆ ಬರುವ ಎಳ್ಳಮಾವಾಸ್ಯೆಯಂದು ಮಹಿಳೆಯರು ನಸುಕಿನ ಜಾವ ಎದ್ದು ನೈವೇದ್ಯಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನ ಮಾಡಿಕೊಳ್ಳುತ್ತಾರೆ. ವಿವಿಧ ಖಾದ್ಯಗಳನ್ನ ತಯಾರಿಸುತ್ತಾರೆ. ವಿಶೇಷವಾಗಿ ಹೊಳಿಗೆ, ಕಡಬು, ಭರ್ತಿ, ಬಜ್ಜಿ, ಪುಂಡೆ ಪಲ್ಲೆ, ಹಸಿ ಇರುಳ್ಳಿ ಚಟ್ನಿ ಸೇರಿದಂತೆ ನಾನಾ ರೀತಿಯ ತಿಂಡಿತಿನಿಸುಗಳನ್ನ ಸಿದ್ದಪಡಿಸುತ್ತಾರೆ. ಇತ್ತ ಮನೆಯ ಗಂಡು ಮಕ್ಕಳು ತಮ್ಮ ಎತ್ತು ಹಾಗೂ ಎತ್ತಿನ ಬಂಡಿಯನ್ನು ಸಿಂಗರಿಸುತ್ತಾರೆ.

Source link

IND vs SA: ಟಾಸ್ ಸೋತ ಟೀಂ ಇಂಡಿಯಾದಲ್ಲಿ 3 ಬದಲಾವಣೆ; ಸಂಜುಗೆ ಕೊನೆಗೂ ಅವಕಾಶ – Kannada News | IND vs SA T20 Final: Series Decider in Ahmedabad toss and playing 11

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತವನ್ನು ತಲುಪಿದೆ. ಉಭಯ ತಂಡಗಳ ನಡುವಿನ ಅಂತಿಮ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟೀಂ ಇಂಡಿಯಾ ಪ್ರಸ್ತುತ ಸರಣಿಯಲ್ಲಿ 2-1 ಮುನ್ನಡೆಯಲ್ಲಿದ್ದು, ಸರಣಿ ಸೋಲುವ ಆತಂಕವಿಲ್ಲ. ಆದರೆ ದಕ್ಷಿಣ ಆಫ್ರಿಕಾ ತಂಡ ಮಾತ್ರ ಸರಣಿ ಸೋಲಿನಿಂದ ಪಾರಾಗಲು ಇಂದಿನ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕು. ಟೆಸ್ಟ್ ಸರಣಿ ಗೆಲುವಿನೊಂದಿಗೆ ಪ್ರವಾಸ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ಇದೀಗ ಮತ್ತದೇ ಗೆಲುವಿನೊಂದಿಗೆ ಪ್ರವಾಸ ಅಂತ್ಯಗೊಳಿಸಲು ನೋಡುತ್ತಿದೆ. ಇತ್ತ ಟೀಂ ಇಂಡಿಯಾ ಏಕದಿನ ಸರಣಿ ಜೊತೆಗೆ ಟಿ20 ಸರಣಿಯನ್ನು ವಶಪಡಿಸಿಕೊಳ್ಳಲು ಸಜ್ಜಾಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಸರಣಿ ನಿರ್ಧಾರಕ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಇತ್ತ ಟಾಸ್ ಸೋತ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಟಾಸ್ ಗೆದ್ದಿದ್ದರೆ ಮೊದಲು ಬ್ಯಾಟಿಂಗ್ ಆಯ್ದುಕೊಳ್ಳುವುದಾಗಿ ಹೇಳಿದರು. ಅಂದರೆ ಟಾಸ್ ಸೋತರೂ ಟೀಂ ಇಂಡಿಯಾಗೆ ಬೇಕಿದ್ದು, ಸಿಕ್ಕಿದೆ. ಇನ್ನು ಟೀಂ ಇಂಡಿಯಾದಲ್ಲಿ ಬರೋಬ್ಬರಿ 3 ಬದಲಾವಣೆಗಳನ್ನು ಮಾಡಲಾಗಿದ್ದರೆ, ಆಫ್ರಿಕಾ ತಂಡದಲ್ಲಿ 1 ಬದಲಾವಣೆಯಾಗಿದೆ.

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ.

Source link

2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ – Kannada News | Simple 15x15x15 formula to become crorepati in 15 years

ಕೋಟ್ಯಾಧಿಪತಿ ಆಗಬೇಕು ಎನ್ನುವುದು ಹಿಂದೆ ಹಲವರ ಕನಸಾಗಿತ್ತು. ಈಗ ಕೋಟಿ ರೂ ಹಣಕ್ಕೆ ಹಿಂದಿನಷ್ಟು ಮೌಲ್ಯ ಉಳಿದಿಲ್ಲ. ಹಣದುಬ್ಬರದ ಪರಿಣಾಮ ಅದು. ಅದೇನೇ ಇರಲಿ, ಇವತ್ತೂ ಕೂಡ ಕೋಟಿ ಹಣ ಹೊಂದುವುದು ಅಷ್ಟು ಸುಲಭದ ಮಾತಲ್ಲ. ಲಕ್ಷಕ್ಕೂ ಹೆಚ್ಚು ಸಂಬಳ ಪಡೆಯುತ್ತಿರುವವರ ಬಳಿಯೂ ಕೂಡ ನಿವ್ವಳ ಆಸ್ತಿ ಮೌಲ್ಯ ಕೋಟಿ ರೂ ಇರುವುದಿಲ್ಲ. ಅಷ್ಟಕ್ಕೂ ಕೋಟಿ ರೂ ಹಣ ಹೊಂದಲು 15x15x15 ಎನ್ನುವ ಸೂತ್ರ ಇದೆ.

ಈ 15x15x15 ಸೂತ್ರ ಬಹಳ ಸರಳ. ನೀವು ತಿಂಗಳಿಗೆ 15 ಸಾವಿರ ರೂ ಉಳಿಸಬೇಕು. ಈ ಹಣವನ್ನು ಪ್ರತೀ ತಿಂಗಳಂತೆ 15 ವರ್ಷದವರೆಗೆ ಹೂಡಿಕೆ ಮಾಡಬೇಕು. ಅಂದರೆ ಎಸ್​ಐಪಿ ಮಾಡಬೇಕು. ಹೀಗೆ ನೀವು ಎಸ್​ಐಪಿ ಮಾಡಿದ ಹಣವು ವರ್ಷಕ್ಕೆ ಶೇ. 15ರಂತೆ ಬೆಳೆಯಬೇಕು. ಈ ಮೂರೂ 15 ಸೇರಿದರೆ ನೀವು ಮುಂದಿನ 15 ವರ್ಷದಲ್ಲಿ ಒಂದು ಕೋಟಿ ರೂ ಹೊಂದಬಹುದು.

ಇದನ್ನೂ ಓದಿ: ಷೇರು, ಚಿನ್ನ, ಎಫ್​ಡಿ- ಕಳೆದ 40 ವರ್ಷದಲ್ಲಿ ಅತಿಹೆಚ್ಚು ರಿಟರ್ನ್ ಕೊಟ್ಟ ಹೂಡಿಕೆಗಳ್ಯಾವುವು?

ಒಂದು ವೇಳೆ, ನೀವು 2010ರಲ್ಲಿ ಈ ರೀತಿ 15,000 ರೂಗಳ ಎಸ್​ಐಪಿ ಮಾಡಿದ್ದರೆ ಈ ವರ್ಷ ನೀವು ಕೋಟ್ಯಾಧಿಪತಿಯಾಗಬಹುದಿತ್ತು. 2010ರ ನಂತರ ಬಹಳಷ್ಟು ಮ್ಯೂಚುವಲ್ ಫಂಡ್​ಗಳು ಶೇ. 12ರಿಂದ 18ರಷ್ಟು ರಿಟರ್ನ್ ಕೊಟ್ಟಿವೆ.

ಇಲ್ಲಿ ಅನಿಶ್ಚಿತತೆ ಇರುವುದು ಹೂಡಿಕೆಯಿಂದ ಎಷ್ಟು ರಿಟರ್ನ್ ಸಿಗುತ್ತೆ ಎನ್ನುವುದು. ಷೇರುಬಜಾರು ದೀರ್ಘಾವಧಿಯಲ್ಲಿ ದೊಡ್ಡ ಲಾಭವನ್ನೇ ಕೊಟ್ಟಿದೆ. ಆದರೆ, ಒಂದೆರಡು ವರ್ಷಕ್ಕೆ ಹೂಡಿಕೆ ಮಾಡಿ ರಿಟರ್ನ್ ಪಡೆಯುತ್ತೇನೆ ಎಂದುಕೊಂಡರೆ ಅದು ಗ್ಯಾರಂಟಿ ಇಲ್ಲ. ಕಳೆದ ಒಂದು ವರ್ಷದಲ್ಲಿ ಷೇರುಗಳಾಗಲೀ, ಮ್ಯೂಚುವಲ್ ಫಂಡ್​ಗಳಾಗಲೀ ಪಾಸಿಟಿವ್ ಆಗಿದ್ದೇ ಹೆಚ್ಚು.

15 ವರ್ಷದ ಅವಧಿಯಲ್ಲಿ ಫಂಡ್​ಗಳು ಶೇ. 15 ಸಿಎಜಿಆರ್​ನಲ್ಲಿ ಲಾಭ ತರುತ್ತವೆ ಎಂದು ಖಾತ್ರಿಯಾಗಿ ಹೇಳಲು ಸಾಧ್ಯವಿಲ್ಲ. ಸಾಮಾನ್ಯವಾಗಿ ಶೇ. 10ರಿಂದ 15ರಷ್ಟು ರಿಟರ್ನ್ ಅನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: ಶೇ. 80 ವಿತ್​ಡ್ರಾಯಲ್; 15 ವರ್ಷ ಹೂಡಿಕೆ, 5 ವರ್ಷ ಲಾಕಿನ್; ಹೊಸ ಆಕರ್ಷಣೆ ಪಡೆದ ಎನ್​ಪಿಎಸ್

ಒಂದು ವೇಳೆ, ನೀವು ಹೂಡಿಕೆ ಮಾಡಿದ ಫಂಡ್ ಶೇ. 15ರಷ್ಟು ರಿಟರ್ನ್ ಕೊಟ್ಟಲ್ಲಿ ನಿಮ್ಮ 15,000 ರು ಎಸ್​ಐಪಿ 15 ವರ್ಷದಲ್ಲಿ 1.01 ಕೋಟಿ ರೂ ಆಗುತ್ತದೆ. ಅಕಸ್ಮಾತ್, ಫಂಡ್ ಶೇ. 12 ಸಿಎಜಿಆರ್​ನಲ್ಲಿ ಬೆಳೆದಲ್ಲಿ ನಿಮಗೆ 15 ವರ್ಷದಲ್ಲಿ ಸಿಗುವುದು ಸುಮಾರು 75 ಲಕ್ಷ ರೂ. ಹೀಗಾಗಿ, ನೀವು ಹೂಡಿಕೆಗೆ ಗುರಿ ನಿಗದಿ ಮಾಡಿಕೊಳ್ಳುವಾಗ ಎರಡು ಮೂರು ಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗಬಹುದು. ನಿಮ್ಮ ಫಂಡ್ ಶೇ. 10, ಶೇ 12 ಮತ್ತು ಶೇ. 15 ಸಿಎಜಿಆರ್​ನಲ್ಲಿ ಬೆಳೆದರೆ ಎಷ್ಟೆಷ್ಟು ಸಿಗಬಹುದು ಎನ್ನುವ ಅಂದಾಜು ಮೊದಲೇ ಮಾಡಿಕೊಳ್ಳಬೇಕು. ಆಗ ಕಡಿಮೆ ಮೊತ್ತವನ್ನೇ ಗುರಿಯಾಗಿಟ್ಟುಕೊಂಡಾಗ ಅಂತ್ಯದಲ್ಲಿ ನಿರಾಸೆಯಾಗುವುದಿಲ್ಲ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ; ಯೂನಸ್ ಸರ್ಕಾರದಿಂದ ಖಡಕ್ ಎಚ್ಚರಿಕೆ – Kannada News | No place for violence in New Bangladesh Yunus government condemns Hindu mans lynching

ಢಾಕಾ, ಡಿಸೆಂಬರ್ 19: ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಅವರ ಸಾವಿನ ನಂತರ ಉಂಟಾದ ಪ್ರತಿಭಟನೆಗಳ ನಡುವೆ, ಧರ್ಮನಿಂದನೆಯ ಆರೋಪದ ಮೇಲೆ ಹಿಂದೂ ವ್ಯಕ್ತಿಯನ್ನು ಕಟ್ಟಿಹಾಕಿ, ಹೊಡೆದು, ಸಜೀವದಹನ ಮಾಡಲಾಗಿದೆ. ಈ ಹತ್ಯೆಯನ್ನು ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ (Bangladesh) ಮಧ್ಯಂತರ ಸರ್ಕಾರ ಬಲವಾಗಿ ಖಂಡಿಸಿದೆ. “ನವ ಬಾಂಗ್ಲಾದೇಶದಲ್ಲಿ ಯಾವುದೇ ರೀತಿಯ ಹಿಂಸಾಚಾರಕ್ಕೆ ಅವಕಾಶವಿಲ್ಲ” ಎಂದು ಯೂನಸ್ ಸರ್ಕಾರ ಎಚ್ಚರಿಕೆ ನೀಡಿದೆ. ಹತ್ಯೆಗಳಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡಲಾಗುವುದಿಲ್ಲ ಎಂದು ಎಚ್ಚರಿಸಿದೆ.

“ಮೈಮೆನ್ಸಿಂಗ್‌ನಲ್ಲಿ ಹಿಂದೂ ವ್ಯಕ್ತಿಯ ಹತ್ಯೆಯನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಹೊಸ ಬಾಂಗ್ಲಾದೇಶದಲ್ಲಿ ಅಂತಹ ಹಿಂಸಾಚಾರಕ್ಕೆ ಸ್ಥಳವಿಲ್ಲ. ಈ ಘೋರ ಅಪರಾಧ ಮಾಡಿದವರನ್ನು ಬಿಡುವುದಿಲ್ಲ” ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ, ಮರಕ್ಕೆ ಕಟ್ಟಿಹಾಕಿ, ಸುಟ್ಟು ಹಾಕಿದ ಪಾಪಿಗಳು

ಬಾಂಗ್ಲಾದೇಶಿಗರು ಎಲ್ಲಾ ರೀತಿಯ ಗುಂಪು ಹಿಂಸಾಚಾರವನ್ನು ವಿರೋಧಿಸಬೇಕು ಎಂದು ಸರ್ಕಾರ ಹೇಳಿದೆ. ಇದು ಕೆಲವು ಸೂಕ್ಷ್ಮ ಅಂಶ. ಎಲ್ಲಾ ಹಿಂಸಾಚಾರ, ಬೆದರಿಕೆ, ಬೆಂಕಿ ಹಚ್ಚುವಿಕೆ ಮತ್ತು ಆಸ್ತಿಗಳ ನಾಶದ ಕೃತ್ಯಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಯೂನಸ್ ಸರ್ಕಾರ ಹೇಳಿದೆ.

ಮೃತ ಯುವಕ ದೀಪು ಚಂದ್ರ ದಾಸ್ ಭಾಲುಕಾ ಉಪಜಿಲಾದ ದುಬಾಲಿಯಾ ಪ್ಯಾರಾ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಆತ ಯುವ ಗಾರ್ಮೆಂಟ್ ಫ್ಯಾಕ್ಟರಿ ಕೆಲಸಗಾರನಾಗಿದ್ದ. ಸ್ಥಳೀಯ ನಿವಾಸಿಗಳ ಗುಂಪೊಂದು ಆತ ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಮೇಲೆ ಹಲ್ಲೆ ನಡೆಸಿತು. ಬಳಿಕ ಆತನನ್ನು ಕಟ್ಟಿಹಾಕಿ ಬೆಂಕಿ ಹಚ್ಚಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

SMAT 2025: 33 ಸಿಕ್ಸರ್‌, 516 ರನ್..! ಇಶಾನ್ ಕಿಶನ್ ಭಾರತ ತಂಡಕ್ಕೆ ಎಂಟ್ರಿ ಯಾವಾಗ? – Kannada News | Ishan Kishan’s Record Century in Syed Mushtaq Ali Final: Is India Comeback Near?

ಜಾರ್ಖಂಡ್ ನಾಯಕ ಇಶಾನ್ ಕಿಶನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಕೇವಲ 45 ಎಸೆತಗಳಲ್ಲಿ ಅಬ್ಬರದ ಶತಕ ಸಿಡಿಸುವ ಮೂಲಕ ತಂಡವನ್ನು ಮೊಟ್ಟ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 10 ಸಿಕ್ಸರ್‌ಗಳನ್ನು ಬಾರಿಸಿದ ಕಿಶನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಶತಕ ಬಾರಿಸಿದ ಮೊದಲ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು, ಶ್ರೇಯಸ್ ಅಯ್ಯರ್ ಕರ್ನಾಟಕ ವಿರುದ್ಧ ಅಜೇಯ 98 ರನ್ ಗಳಿಸುವ ಮೂಲಕ ನಾಯಕನಾಗಿ ಫೈನಲ್‌ನಲ್ಲಿ ಅತ್ಯಧಿಕ ಇನ್ನಿಂಗ್ಸ್‌ಗಳ ದಾಖಲೆಯನ್ನು ಹೊಂದಿದ್ದರು. ಕಿಶನ್ ಶತಕದ ಸಹಾಯದಿಂದ ಮೊದಲು ಬ್ಯಾಟಿಂಗ್ ಮಾಡಿದ ಜಾರ್ಖಂಡ್ ತಂಡವು 262 ರನ್‌ಗಳ ದಾಖಲೆಯ ಸ್ಕೋರ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಹರಿಯಾಣ ತಂಡವು ಕೇವಲ 193 ರನ್‌ಗಳನ್ನು ಕಲೆಹಾಕಲಷ್ಟೇ ಶಕ್ತವಾಯಿತು.

ಈ ಆವೃತ್ತಿಯ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಇಶಾನ್ ಕಿಶನ್ ಬ್ಯಾಟ್ ಅಬ್ಬರಿಸಿದೆ. ಇಡೀ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಕಿಶನ್ ಬರೋಬ್ಬರಿ 516 ರನ್ ಕಲೆಹಾಕಿದರು. ಇದರಲ್ಲಿ ಎರಡು ಶತಕಗಳು ಸೇರಿವೆ. ಸರಿಸುಮಾರು 200 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಕಿಶನ್, 64.5 ರ ಸರಾಸರಿಯಲ್ಲಿ ಒಟ್ಟಾರೆಯಾಗಿ 33 ಸಿಕ್ಸರ್‌ಗಳು ಹಾಗೂ 50 ಕ್ಕೂ ಹೆಚ್ಚು ಬೌಂಡರಿಗಳನ್ನು ಬಾರಿಸಿದರು.

ಇಶಾನ್ ಕಿಶನ್ ಕಳೆದ ಎರಡು ವರ್ಷಗಳಿಂದ ಟೀಂ ಇಂಡಿಯಾದಿಂದ ಹೊರಗಿದ್ದಾರೆ. ಅವರು ಕೊನೆಯ ಬಾರಿಗೆ ನವೆಂಬರ್ 28 ರಂದು ಗುವಾಹಟಿಯಲ್ಲಿ ನಡೆದ ಟಿ20 ಪಂದ್ಯದಲ್ಲಿ ತಂಡದ ಪರ ಆಡಿದ್ದರು. ಅಂದಿನಿಂದ ತಂಡದಿಂದ ಹೊರಗಿದ್ದಾರೆ. 2023 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಅರ್ಧಕ್ಕೆ ಭಾರತಕ್ಕೆ ವಾಪಸ್ಸಾಗಿದ್ದ ಕಿಶನ್ ಅಂದಿನಿಂದ ತಂಡಕ್ಕೆ ಆಯ್ಕೆಯಾಗಿಲ್ಲ. ಈಗ ಇಶಾನ್ ಕಿಶನ್ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವುದರಿಂದ ಆಯ್ಕೆದಾರರು ಅವರನ್ನು ಯಾವಾಗ ತಂಡಕ್ಕೆ ಮರಳಿ ಆಯ್ಕೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Yashasvi Jaiswal: ಯಶಸ್ವಿ ಜೈಸ್ವಾಲ್ ಆರೋಗ್ಯ ಹೇಗಿದೆ? ಹೊರಬಿತ್ತು ಬಿಗ್​ ಅಪ್​ಡೇಟ್

Source link

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ – Kannada News | Pakistan based gangster threatens Bihar CM Nitish Kumar for pulling down woman doctor’s hijab

ಪಾಟ್ನಾ, ಡಿಸೆಂಬರ್ 19: ಪ್ರಧಾನಿ ನರೇಂದ್ರ ಮೋದಿಯವರ (PM Modi) ಜೊತೆ ಬಹಳ ಆಪ್ತವಾಗಿ ಗುರುತಿಸಿಕೊಂಡಿರುವ, ಬಿಹಾರದಲ್ಲಿ ದಾಖಲೆಯ ಅವಧಿಗೆ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೇರಿರುವ ನಿತೀಶ್ ಕುಮಾರ್ (Nitish Kumar) ವಿವಾದದಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಯುವ ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆಯುವ ಮೂಲಕ ಸಾರ್ವಜನಿಕ ವೇದಿಕೆಯಲ್ಲೇ ಆ ಮಹಿಳೆಗೆ ಮುಜುಗರ ತಂದಿದ್ದರು. ಈ ಘಟನೆಗೆ ವಿಪಕ್ಷವಾದ ಆರ್​​ಜೆಡಿ ಸೇರಿದಂತೆ ಅನೇಕ ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಇದುವರೆಗೂ ನಿತೀಶ್ ಕುಮಾರ್ ಈ ವಿಷಯದಲ್ಲಿ ಕ್ಷಮಾಪಣೆ ಕೇಳಿಲ್ಲ, ಸ್ಪಷ್ಟನೆಯನ್ನೂ ನೀಡಿಲ್ಲ.

ಇದೀಗ ಈ ಹಿಜಾಬ್ ವಿವಾದ ಪಾಕಿಸ್ತಾನದ ಅಂಗಳವನ್ನೂ ತಲುಪಿದೆ. ಮಹಿಳೆಯ ಹಿಜಾಬ್ ಎಳೆದ ಘಟನೆಗೆ ಸಂಬಂಧಿಸಿದಂತೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪಾಕಿಸ್ತಾನ ಮೂಲದ ಗ್ಯಾಂಗ್​ಸ್ಟರ್ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಾಗಿದೆ.

ಇದನ್ನೂ ಓದಿ: Video: ಇದೇನ್ ಮಾಡಿದ್ರಿ? ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಸರ್ಕಾರಿ ಸಮಾರಂಭವೊಂದರಲ್ಲಿ ಸಿಎಂ ನಿತೀಶ್ ಕುಮಾರ್ ಮುಸ್ಲಿಂ ಮಹಿಳೆಯ ಹಿಜಾಬ್ ಅನ್ನು ಕಿತ್ತುಹಾಕುತ್ತಿರುವ ವಿಡಿಯೋ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ನಿತೀಶ್ ಕುಮಾರ್ ಹೊಸದಾಗಿ ನೇಮಕಗೊಂಡ ಆಯುಷ್ ವೈದ್ಯೆಗೆ ನೇಮಕಾತಿ ಪತ್ರವನ್ನು ನೀಡುವಾಗ ಅವರ ಮುಖದಿಂದ ‘ಹಿಜಾಬ್’ ಅನ್ನು ಎಳೆದಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ನಿತೀಶ್ ಕುಮಾರ್ ಅವರಿಗೆ ಪಾಕಿಸ್ತಾನದಿಂದ ಬೆದರಿಕೆ ಬಂದಿದೆ. ಹೀಗಾಗಿ, ಪಾಟ್ನಾ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ ಮತ್ತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ನಿತೀಶ್ ಕುಮಾರ್ ಅವರಿಗೆ ಭದ್ರತೆಯನ್ನು ಕೂಡ ಹೆಚ್ಚಿಸಲಾಗಿದೆ. ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್ ಶಹಜಾದ್ ಭಟ್ಟಿ ಎಂಬುವವರು ಇನ್‌ಸ್ಟಾಗ್ರಾಮ್​ನಲ್ಲಿ ಬಿಹಾರದ ಮುಖ್ಯಮಂತ್ರಿಗೆ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: Nitish Kumar Swearing-In: ಹತ್ತನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಇಂದು ಪ್ರಮಾಣವಚನ, ಪ್ರಧಾನಿ ಮೋದಿ ಭಾಗಿ

ಹಿಜಾಬ್​​ಗೆ ಕೈಹಾಕಿದ ನೀವು ಅದಕ್ಕೆ ಸೂಕ್ತವಾದ ಬೆಲೆ ತೆರಬೇಕಾಗುತ್ತದೆ. ಮೊದಲೇ ಎಚ್ಚರಿಕೆ ನೀಡಲಿಲ್ಲ ಎನ್ನಬೇಡಿ. ಅದಕ್ಕಾಗಿಯೇ ಮೊದಲೇ ಹೇಳುತ್ತಿದ್ದೇನೆ. ಹಿಜಾಬ್ ಎಳೆದ ಆ ವ್ಯಕ್ತಿಗೆ ಆ ಮುಸ್ಲಿಂ ಯುವತಿಯ ಬಳಿ ಕ್ಷಮೆ ಯಾಚಿಸಲು ಇನ್ನೂ ಸಮಯವಿದೆ. ಮುಂದೆ ಏನಾದರೂ ತೊಂದರೆಯಾದರೆ ಎಚ್ಚರಿಕೆ ನೀಡಿರಲಿಲ್ಲ ಎಂದು ಹೇಳಬೇಡಿ ಎಂದು ಆ ವ್ಯಕ್ತಿ ವೀಡಿಯೊದಲ್ಲಿ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

‘ಕೊರಗಜ್ಜ’ ಸಿನಿಮಾದಲ್ಲಿ ಡ್ಯುಯೆಟ್ ಸಾಂಗ್? ಕುತೂಹಲ ಮೂಡಿಸಿದ ಚಿತ್ರತಂಡ – Kannada News | Koragajja movie team to release 2nd song by Shreya Ghoshal and Armaan Malik

ಈಗಾಗಲೇ ‘ಕೊರಗಜ್ಜ’ ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿ ಆಗಿದೆ. ಸುಧೀರ್ ಅತ್ತಾವರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಿಂದ 2ನೇ ಹಾಡಿನ ಬಿಡುಗಡೆಗೆ ತಯಾರಿ ನಡೆದಿದೆ. ಈ ಹಾಡನ್ನು ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಅವರು ಹಾಡಿದ್ದಾರೆ. ಇತ್ತೀಚೆಗೆ ಹಾಡಿನ ಸಾಹಿತ್ಯವನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಈಗ ಈ ಹಾಡಿನ‌ಲ್ಲಿ ಬರುವ ಮುಗ್ಧ ಪ್ರೇಮಿಗಳ ಪೋಸ್ಟರ್​ಗಳನ್ನು ಬಿಡುಗಡೆಗೊಳಿಸಿದೆ. ಆ ಮೂಲಕ ‘ಕೊರಗಜ್ಜ’ (Koragajja) ಚಿತ್ರಕ್ಕೆ ಹೊಸ ಆಯಾಮ‌‌ ಇರುವುದನ್ನು ತೋರಿಸಿದೆ.

‘ಕೊರಗಜ್ಜ’ ಸಿನಿಮಾದಲ್ಲಿ ಪ್ರಣಯದ ಸನ್ನಿವೇಶವೇ ಎಂದು ಕೆಲವರು ಮೂಗು ಮುರಿಯಬಹುದು. ಸಿನಿಮಾ ಬಿಡುಗಡೆಗೊಂಡ ನಂತರ ಎಲ್ಲದಕ್ಕೂ ಉತ್ತರ ದೊರಕಲಿದೆ ಎಂದು ಚಿತ್ರತಂಡ ಹೇಳಿದೆ. ತ್ರಿವಿಕ್ರಮ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ವಿದ್ಯಾಧರ್ ಅವರು ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ‘ತ್ರಿವಿಕ್ರಮ‌ ಸಿನಿಮಾಸ್’ ಮತ್ತು ‘ಸಕ್ಸಸ್ ಫಿಲ್ಮ್ಸ್’ ಬ್ಯಾನರ್ ಮೂಲಕ ‘ಕೊರಗಜ್ಜ’ ಸಿನಿಮಾ ಮೂಡಿಬರುತ್ತಿದೆ.

ಅತೀ ವಿನೂತನ ಸ್ಟ್ರಿಂಗ್ಸ್ ಮತ್ತು ವಾದ್ಯಗಳಿಂದ ಟ್ಯೂನ್ ಮಾಡಿರುವ ಎರಡನೆಯ ಹಾಡು ಹೊಸ ಹವಾ ಎಬ್ಬಿಸಲಿದೆ ಎಂಬ ನಂಬಿಕೆ ಚಿತ್ರತಂಡಕ್ಕೆ ಇದೆ. ಈ ಹಾಡು ಇನ್ನೇನು ಬಿಡುಗಡೆ ಆಗುತ್ತಿದೆ ಎನ್ನುವಾಗ ಚಿತ್ರತಂಡ ಮತ್ತೊಂದು ವಿಷಯ ಹಂಚಿಕೊಂಡಿದೆ. ಅಂತಾರಾಷ್ಟ್ರೀಯ ಫುಟ್ ಬಾಲ್ ತಾರೆ ಅರ್ಜಂಟೈನಾದ ಲಿಯೊನಲ್ ಮೆಸ್ಸಿ ಅವರ ಇತ್ತೀಚಿನ ಭಾರತ ಭೇಟಿಯ ಪ್ರಯಕ್ತ ವಿನ್ಯಾಸಗೊಳಿಸಿದ್ದ ಎಐ ಹಾಡಿನ ತಂಡವೇ ಕೊರಗಜ್ಜ ಚಿತ್ರದ 2ನೇ ಹಾಡಿನ ಹಿಂದೆ ಕೆಲಸ ಮಾಡಿದೆ.

ಶ್ರೇಯ ಘೋಷಾಲ್ ಮತ್ತು ಅರ್ಮಾನ್ ಮಲಿಕ್ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ತಂತ್ರಜ್ಞಾನದಿಂದ ವಿನೂತನವಾಗಿ ವಿನ್ಯಾಸಗೊಳಿಸಲಾಗಿದೆ. ಸುಧೀರ್ ಅತ್ತಾವರ್ ಅವರು ‘ಗಾಳಿ ಗಂಧ…ತೀಡಿ ತಂದ..’ ಎಂಬ ಸಾಹಿತ್ಯ ಬರೆದಿದ್ದಾರೆ. ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಅವರು ಸುಮಧುರವಾಗಿ ಕಂಪೋಸ್ ಮಾಡಿದ್ದಾರೆ.

ಇದನ್ನೂ ಓದಿ: ‘ಕೊರಗಜ್ಜ’ ಸಿನಿಮಾದಿಂದ ಬಿಡುಗಡೆ ಆಯ್ತು ‘ಗುಳಿಗ ಗುಳಿಗ ಘೋರ ಗುಳಿಗ’ ಹಾಡು

ಈ ಹಾಡಿನ ಟ್ರ್ಯಾಕ್ ಕೇಳಿದ ಕೂಡಲೇ ಶ್ರೇಯಾ ಘೋಷಾಲ್ ಅವರು ಹಾಡಲು ಒಪ್ಪಿಕೊಂಡರು ಎಂದು ಚಿತ್ರತಂಡ ಹೇಳಿದೆ. ‘ಕೊರಗಜ್ಜ’ ಸಿನಿಮಾದ ಶೂಟಿಂಗ್ ವೇಳೆ ಚಿತ್ರತಂಡಕ್ಕೆ ಸಾಕಷ್ಟು ಸಮಸ್ಯೆಗಳು ಉಂಟಾಗಿದ್ದವು. ಅವುಗಳನ್ನೆಲ್ಲ ನಿವಾರಿಸಿಕೊಂಡು ಚಿತ್ರತಂಡ ಇಲ್ಲಿಯತನಕ ಬಂದಿದೆ. ಭವ್ಯ, ಕಬೀರ್ ಬೇಡಿ, ಶ್ರುತಿ ಮುಂತಾದವರು ‘ಕೊರಗಜ್ಜ’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಆಟವಾಡುತ್ತಿದ್ದ ಬಾಲಕನನ್ನು ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು ಬಯಲು – Kannada News | A man kicked to child In Bengaluru: Reveled Accused gym trainer Ranjan Cases

ಬೆಂಗಳೂರು, (ಡಿಸೆಂಬರ್ 19): ಆಟವಾಡುತ್ತಿದ್ದ ಬಾಲಕನಿಗೆ ಕಾಲಿನಿಂದ ಒದ್ದು ದುರುಳನೊಬ್ಬ ಕ್ರೌರ್ಯ ಮರೆದಿರುವ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯ ತ್ಯಾಗರಾಜನಗರದಲ್ಲಿ ನಡೆದಿದೆ. ತನ್ನ ಪಾಡಿಗೆ ತಾನು ಆಟವಾಡ್ತಿದ್ದ ಬಾಲಕನನ್ನ ರಂಜನ್​ ಎಂಬಾತ ಫುಟ್​ಬಾಲ್​ನಂತೆ ಒದ್ದು ವಿಕೃತಿ ಮೆರೆದಿದ್ದಾನೆ. ರಂಜನ್ ಹಲ್ಲೆಯಿಂದ ಬಾಲಕನ ಮೈ-ಕೈಗೆ ಗಾಯವಾಗಿದ್ದು, ಬಾಲಕನ ತಾಯಿ ದೂರು ಆಧರಿಸಿ ಬನಶಂಕರಿ ಪೊಲೀಸರು ಆರೋಪಿ ರಂಜನ್​ನನ್ನ ಬಂಧಿಸಿದ್ದಾರೆ.

ಹಲ್ಲೆ ಸಂಬಂಧ ಪೋಷಕರು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ರಸ್ತೆಯಲ್ಲಿನ ಸಿಸಿಟಿವಿ ಚೆಕ್ ಮಾಡಿದ್ದಾರೆ. ಈ ವೇಳೆ ಸೈಕೋ ರಂಜನ್ ಮಕ್ಕಳ ಮೇಲೆ ನಡೆಸಿರೋ ವಿಕೃತಿಗಳು ಬೆಳಕಿಗೆ ಬಂದಿವೆ. ಇಂತಹ ಕೃತ್ಯ ಇದೇ ಮೊದಲಲ್ಲ, ಈ ಹಿಂದೆಯೂ ಹಲವರಿಗೆ ಈ ಸೈಕೋ ರಂಜಿತ್‌ ಕಿರುಕುಳ ಕೊಟ್ಟಿದ್ದಾನೆ ಎಂಬುವುದು ತಿಳಿದುಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ನೋಡಿ; ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ

Source link

Bank of India Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ – Kannada News | Bank of India Recruitment 2025: 514 Credit Officer Jobs – Apply Now!

ಬ್ಯಾಂಕ್ ಆಫ್ ಇಂಡಿಯಾ ಬೃಹತ್​​ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದೆ. ದೇಶಾದ್ಯಂತದ ತನ್ನ ಶಾಖೆಗಳಲ್ಲಿ ಜನರಲ್ ಬ್ಯಾಂಕಿಂಗ್ ಆಫೀಸರ್ ಸ್ಟ್ರೀಮ್‌ನಲ್ಲಿ ನಿಯಮಿತವಾಗಿ ಕ್ರೆಡಿಟ್ ಆಫೀಸರ್ (MMGS 3, MMGS 2, SMGS 4) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 514 ಕ್ರೆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 20 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು:

  • ಕ್ರೆಡಿಟ್ ಆಫೀಸರ್ (SMGS 4) ಹುದ್ದೆಗಳು: 36
  • ಕ್ರೆಡಿಟ್ ಆಫೀಸರ್ (MMGS 3) ಹುದ್ದೆಗಳು: 60
  • ಕ್ರೆಡಿಟ್ ಆಫೀಸರ್ (MMGS 2) ಹುದ್ದೆಗಳು: 418

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಪದವಿ, ಎಂಬಿಎ, ಪಿಜಿಡಿಬಿಎಂ, ಪಿಜಿ, ಸಿಎ, ಸಿಎಂಎ ಪದವಿ ಪಡೆದಿರಬೇಕು. ಅಧಿಸೂಚನೆಯಲ್ಲಿ ಸೂಚಿಸಿದಂತೆ ಅವರು ಸಂಬಂಧಿತ ಕೆಲಸದ ಅನುಭವವನ್ನು ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ಜನವರಿ 5 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: 946 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ ಮತ್ತು ಸಂಬಳದ ವಿವರ:

ಸಾಮಾನ್ಯ ಅಭ್ಯರ್ಥಿಗಳು 850 ರೂ., ಎಸ್‌ಸಿ, ಎಸ್‌ಟಿ ಮತ್ತು ದಿವ್ಯಾಂಗ ಅಭ್ಯರ್ಥಿಗಳು ತಲಾ 175 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಎಂಎಂಜಿಎಸ್ 2 ಹುದ್ದೆಗಳಿಗೆ ರೂ. 64,820 ರಿಂದ ರೂ. 93,960, ಎಸ್‌ಎಂಜಿಎಸ್ 4 ಹುದ್ದೆಗಳಿಗೆ ರೂ. 1,02,300 ರಿಂದ ರೂ. 1,20,940 ಮತ್ತು ಎಂಎಂಜಿಎಸ್ 3 ಹುದ್ದೆಗಳಿಗೆ ರೂ. 85,920 ರಿಂದ ರೂ. 1,05,280 ರವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:29 pm, Fri, 19 December 25

Source link