All posts by nagaraj11081993

ಬೆಂಗಳೂರಿನ ಹೊರೆ ಇಳಿಸಲು ಬಜೆಟ್​ನಲ್ಲಿ ದೊಡ್ಡ ಘೋಷಣೆ: ರಾಜ್ಯದ 2ನೇ ಐಟಿ ಸಿಟಿಯಾಗಲಿದೆ ಮೈಸೂರು

ಬೆಂಗಳೂರಿನ ಹೊರೆ ಇಳಿಸಲು ಬಜೆಟ್​ನಲ್ಲಿ ದೊಡ್ಡ ಘೋಷಣೆ: ರಾಜ್ಯದ 2ನೇ ಐಟಿ ಸಿಟಿಯಾಗಲಿದೆ ಮೈಸೂರು

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕರ್ನಾಟಕ ಬಜೆಟ್ 2026 ರಲ್ಲಿ ಬೆಂಗಳೂರಿನ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಇತರ ನಗರಗಳಲ್ಲಿ ತಂತ್ರಜ್ಞಾನ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ. ನವೋದ್ಯಮ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಬೆಂಗಳೂರು ಹೊರತುಪಡಿಸಿ, ಇತರೆ ನಗರಗಳಲ್ಲಿ 1000 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರಲ್ಲಿ, ಮೈಸೂರನ್ನು 2ನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸುವುದು ಸಹ ಪ್ರಮುಖವಾದದ್ದಾಗಿದೆ.

ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ ಮತ್ತು ಮೈಸೂರಿನಂತಹ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಕಿಯೋನಿಕ್ಸ್ ಮೂಲಕ ಇನ್‌ಕ್ಯುಬೇಷನ್ ಸೌಲಭ್ಯಗಳು ಮತ್ತು ಕ್ಲೀನ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. ರಾಜ್ಯದಲ್ಲಿ ESDM ಮತ್ತು ಸೆಮಿಕಂಡಕ್ಟರ್ ವಲಯಕ್ಕೆ ಬೃಹತ್ ಕಂಪನಿಗಳಿಂದ 45,000 ಕೋಟಿ ರೂ. ಹೂಡಿಕೆ ನಿರೀಕ್ಷಿಸಲಾಗಿದೆ. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ರೊಬೊಟಿಕ್ಸ್ ಕ್ಷೇತ್ರಗಳಲ್ಲಿ ಐಐಎಸ್ಸಿ, ಇಸ್ರೋ ಮತ್ತು ಕಿಯೋನಿಕ್ಸ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಕ್ಯಾಂಪಸ್, ಮತ್ತು ರಾಯಚೂರಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸಲಾಗುವುದು. 2029 ರ ವೇಳೆಗೆ 500 ಹೊಸ ಜಿಸಿಸಿಗಳನ್ನು ಸ್ಥಾಪಿಸಿ 3.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಇದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಶರಣಾಗತಿ ಬಿಟ್ಟರೆ ಯಾವುದೇ ಒಪ್ಪಂದದ ಆಯ್ಕೆಯಿಲ್ಲ; ಇರಾನ್​ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್, ಮಾರ್ಚ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಇರಾನ್ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಇರಾನ್ ಮುಂದೆ ಇರುವುದು ಬೇಷರತ್ತಾದ ಶರಣಾಗತಿಯ ಮಾರ್ಗವೊಂದೇ. ಇರಾನ್ ಜೊತೆ ಬೇರಾವುದೇ ಒಪ್ಪಂದ ಸಾಧ್ಯವಿಲ್ಲ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಟೆಹ್ರಾನ್ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಶರಣಾಗತಿ ಮಾತ್ರ ಅವರ ಮುಂದೆ ಉಳಿದಿರುವ ಆಯ್ಕೆಯಾಗಿದೆ” ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಸಂಘರ್ಷ ಪೀಡಿತ ದೇಶದಲ್ಲಿ ಮುನ್ನಡೆಸಲು ಅಮೆರಿಕ ಮತ್ತು ಅದರ ಮಿತ್ರಪಕ್ಷಗಳು ಉತ್ತಮ ನಾಯಕನನ್ನು ಆಯ್ಕೆ ಮಾಡುತ್ತವೆ. ನಾವು ಇರಾನ್ ಅನ್ನು ವಿನಾಶದ ಅಂಚಿನಿಂದ ಮರಳಿ ತರಲು ಅವಿಶ್ರಾಂತವಾಗಿ ಕೆಲಸ ಮಾಡುತ್ತೇವೆ. ಅದನ್ನು ಆರ್ಥಿಕವಾಗಿ ಹಿಂದೆಂದಿಗಿಂತಲೂ ದೊಡ್ಡದಾಗಿ, ಉತ್ತಮ ಮತ್ತು ಬಲಶಾಲಿಯಾಗಿ ಮಾಡುತ್ತೇವೆ. ಇರಾನ್ ಉತ್ತಮ ಭವಿಷ್ಯವನ್ನು ಹೊಂದುವುದರಲ್ಲಿ ಅನುಮಾನವಿಲ್ಲ” ಎಂದು ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ನಿಮ್ಮ ಮೇಲೆ ದಾಳಿ ನಿಲ್ಲಬೇಕಾದರೆ ಅಮೆರಿಕನ್ನರನ್ನು ಹೊರಹಾಕಿ; ಗಲ್ಫ್ ದೇಶಗಳಿಗೆ ಇರಾನ್ ಎಚ್ಚರಿಕೆ

ಕಳೆದ ವಾರದಲ್ಲಿ, ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಇರಾನ್‌ನಲ್ಲಿ ನಿರಂತರ ಮಿಲಿಟರಿ ದಾಳಿಗಳನ್ನು ನಡೆಸಿವೆ. ಈ ದಾಳಿಗಳಲ್ಲಿ ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಕೊಲ್ಲಲ್ಪಟ್ಟರು. ಇದು ಇನ್ನೂ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಇದಕ್ಕೆ ಪ್ರತಿಕಾರವಾಗಿ, ಇರಾನ್ ಇಸ್ರೇಲ್ ಮತ್ತು ಗಲ್ಫ್ ಪ್ರದೇಶದಾದ್ಯಂತ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಪ್ರಾರಂಭಿಸಿತು. ಇರಾನ್‌ನಲ್ಲಿ ಯುದ್ಧದಿಂದಾಗಿ ಇದುವರೆಗೂ 1,200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

‘ಟಟೀರೀ’ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ: ವಿವಾದಕ್ಕೆ ಸಿಲುಕಿದ ಗಾಯಕ ಬಾದ್​ಶಾ

ಖ್ಯಾತ ಗಾಯಕ ಬಾದ್‌ಶಾ (Badshah) ಅವರು ಮತ್ತೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹರಿಯಾಣ್ವಿ ಭಾಷೆಯಲ್ಲಿ ಅವರ ಹೊಸ ಹಾಡು ‘ಟಟೀರಿ’ (Tateeree) ಇತ್ತೀಚೆಗೆ ಬಿಡುಗಡೆ ಆಯಿತು. ಈ ಹಾಡಿನಲ್ಲಿ ಮಹಿಳೆಯರನ್ನು ಅವಹೇಳನ ಮಾಡುವ ಮತ್ತು ಅಶ್ಲೀಲ ಸಾಹಿತ್ಯ ಬಳಸಲಾಗಿದೆ ಎಂಬ ಆರೋಪದ ಮೇಲೆ ಹರಿಯಾಣ ರಾಜ್ಯ ಮಹಿಳಾ ಆಯೋಗ (HSCW) ಸಮನ್ಸ್ ಜಾರಿ ಮಾಡಿದೆ. ಈ ಮೊದಲು ಕೂಡ ಬಾದ್​ಶಾ ಅವರ ಹಾಡುಗಳ ಸಾಹಿತ್ಯದ ಬಗ್ಗೆ ಅನೇಕರಿಂದ ತಕರಾರು ವ್ಯಕ್ತವಾಗಿತ್ತು.

ಕೆಲವೇ ದಿನಗಳ ಹಿಂದಷ್ಟೇ ಬಿಡುಗಡೆಯಾದ ‘ಟಟೀರಿ’ ಹಾಡಿನಲ್ಲಿರುವ ಕೆಲವು ಪದಗಳು ಅಸಭ್ಯತೆಯಿಂದ ಕೂಡಿವೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಕೆಡಿಸುವಂತಿವೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಈ ಹಾಡು ವಿಶೇಷವಾಗಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಆಯೋಗ ಆತಂಕ ವ್ಯಕ್ತಪಡಿಸಿದೆ.

ವಿವಾದಿತ ‘ಟಟೀರಿ’ ಹಾಡು:

ಮಾರ್ಚ್ 6ರಂದು ಹೊರಡಿಸಲಾದ ಸಮನ್ಸ್ ಪ್ರಕಾರ, ಬಾದ್‌ಶಾ ಅವರು ಮಾರ್ಚ್ 13ರಂದು ಬೆಳಿಗ್ಗೆ 11.30ಕ್ಕೆ ಪಾಣಿಪತ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕು. ಈ ಸಂಬಂಧ ಪಾಣಿಪತ್ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಆಯೋಗವು ಪತ್ರ ಬರೆದಿದ್ದು, ಸಂಬಂಧಪಟ್ಟವರು ವಿಚಾರಣೆಗೆ ಹಾಜರಿರುವುದನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶಿಸಿದೆ.

ಇದನ್ನೂ ಓದಿ: ‘ದುಡ್ಡುಕೊಟ್ರೆ ನಿಮಗಿಂತ ಚೆನ್ನಾಗಿ ಕನ್ನಡ ಮಾತಾಡ್ತೀನಿ’ ಎಂದು ಟೀಕೆ; ಖಡಕ್ ಉತ್ತರ ಕೊಟ್ಟ ಬಾದ್​ಶಾ

ಈ ಕುರಿತು ಪ್ರತಿಕ್ರಿಯಿಸಿದ ಹರಿಯಾಣ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ, ‘ಇಂತಹ ಆಕ್ಷೇಪಾರ್ಹ ಸಾಹಿತ್ಯವುಳ್ಳ ಹಾಡುಗಳು ಹೇಗೆ ಬಿಡುಗಡೆಯಾಗುತ್ತವೆ? ಸೆನ್ಸಾರ್ ಮಂಡಳಿಯ ಕಣ್ಣಿನಿಂದ ಇವು ಹೇಗೆ ತಪ್ಪಿಸಿಕೊಳ್ಳುತ್ತವೆ ಎಂಬುದು ದೊಡ್ಡ ಪ್ರಶ್ನೆ’ ಎಂದು ಕಿಡಿಕಾರಿದ್ದಾರೆ. ಈ ಹಿಂದೆ ತಾವೂ ಕೂಡ ಸೆನ್ಸಾರ್ ಮಂಡಳಿಯ ಸದಸ್ಯೆಯಾಗಿ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡ ಅವರು, ಇಂತಹ ವಿಷಯಗಳು ಸಮಾಜದ ನೈತಿಕತೆಯ ಮೇಲೆ ಪರಿಣಾಮ ಬೀರುತ್ತವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ಕೇಂದ್ರಕ್ಕಿಂತ ರಾಜ್ಯದ ಬೆಳವಣಿಗೆ ಉತ್ತಮ ಎಂದ ಸಿದ್ದು

ಬೆಂಗಳೂರು, ಮಾರ್ಚ್​​ 06: ಜಿಎಸ್‌ಟಿ ಹಣ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ. ಆದರೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್​​ ಮಂಡನೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026-27ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿದ್ದೇನೆ. ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ. ಕೆಲ ರಾಜ್ಯಗಳು ಇನ್ನೂ ಚೇತರಿಸಿಕೊಂಡಿಲ್ಲ, ಮೈನಸ್ ಗ್ರೋತ್‌ನಲ್ಲಿದ್ದಾವೆ. ಆದರೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ. ರಾಜ್ಯಕ್ಕೆ ಬರಬೇಕಿದ್ದ ತೆರಿಗೆ ಪಾಲು 10,000 ಕೋಟಿ ರೂ ಕಡಿಮೆ. ಮುಂದೆ ಇದು 15 ಸಾವಿರ ಕೋಟಿ ರೂ ಕಡಿಮೆಯಾಗುತ್ತೆ. ಆದರೂ ನಾವು ವಿತ್ತೀಯ ಶಿಸ್ತು ಉಲ್ಲಂಘನೆಯನ್ನು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Source link

ಸಾಮಾಜಿಕ ಜಾಲತಾಣ ಬಳಕೆ ನಿಷೇಧ ಮಾಡಿದ್ದು ಸರಿನಾ ತಪ್ಪಾ? ವಿದ್ಯಾರ್ಥಿಗಳು ಏನ್ ಹೇಳ್ತಾರೆ?

ಬೆಂಗಳೂರು, (ಮಾರ್ಚ್ 06): ಚಿಕ್ಕ ಮಕ್ಕಳನ್ನು (children) ಕಾಡುತ್ತಿರುವ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ (social media) ವ್ಯಸನಕ್ಕೆ ಬ್ರೇಕ್​ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ದಿನವಿಡೀ ಮೊಬೈಲ್​ ಬಳಕೆಯನ್ನೇ ಮಗ್ನರಾಗಿರುತ್ತಿದ್ದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರದ ಈ ನಡೆಗೆ ಮೆಚ್ಚುಗಳು ವ್ಯಕ್ತವಾಗಿವೆ. ಇನ್ನು ಈ ಬಗ್ಗೆ ಮಕ್ಕಳನ್ನು ವಿಚಾರಿಸಿದಾಗ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್ ಮಾಡಿರುವ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Karnataka Budget 2026:16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ! ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ

Source link

ಬೆಂಗಳೂರಿನಲ್ಲಿ ಸೈನ್ಸ್ ಸಿಟಿ, ಎಲ್ಲಾ ಜಿಲ್ಲೆಗಳಲ್ಲಿ ಸೈನ್ಸ್ ಸೆಂಟರ್, 11 ಜಿಲ್ಲೆಗಳಲ್ಲಿ ಪ್ಲಾನಿಟೇರಿಯಂ ಸ್ಥಾಪನೆ: ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 6: ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ (Bio Technology), ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜಿಸಲು ಬಜೆಟ್​ನಲ್ಲಿ ಸಿದ್ದರಾಮಯ್ಯ (Siddaramaiah) ಹಲವು ಕ್ರಮಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಹೊಸ ಸೈನ್ಸ್ ಸಿಟಿ ಸ್ಥಾಪಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಇಂದು ನಾಲ್ಕೂವರೆ ಲಕ್ಷ ಕೋಟಿ ರೂ ಮೊತ್ತದ ದಾಖಲೆಯ ಬಜೆಟ್ (Karnataka Budget 2026) ಮಂಡಿಸಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಆದಿನಾರಾಯಣ ಹೊಸಹಳ್ಳಿಯಲ್ಲಿ ‘ವಿಜ್ಞಾನ ನಗರ’ (Science City) ಸ್ಥಾಪಿಸಲಾಗುವುದು ಎಂದಿದ್ದಾರೆ. ಈ ಸೈನ್ಸ್ ಸಿಟಿಯನ್ನು 233 ಕೋಟಿ ರೂ ವೆಚ್ಚದಲ್ಲಿ ಸ್ಥಾಪಿಸಲು ವಿಸ್ತೃತವಾದ ಯೋಜನಾ ವರದಿಯನ್ನು ತಯಾರಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಲಿದೆ. ಇದಕ್ಕೆ ಅನುಮೋದನೆ ದೊರೆತ ನಂತರ ವಾಸ್ತುವಿನ್ಯಾಸ ತಯಾರಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳೀಸಿದ್ದಾರೆ.

ಇದಲ್ಲದೇ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಹಾಗೂ 11 ಜಿಲ್ಲೆಗಳಲ್ಲಿ ತಾರಾಲಯಗಳನ್ನು (ಪ್ಲಾನಿಟೋರಿಯಂ) ಸ್ಥಾಪಿಸಲಾಗುತ್ತಿದೆ. ಪ್ರಸ್ತುತ ಸಾಲಿನಲ್ಲಿ ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಯಾದಗಿರಿ, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳಲ್ಲಿ ತಲಾ 4 ಕೋಟಿ ರೂಗಳಂತೆ ಒಟ್ಟು 24 ಕೋಟಿ ರೂ ವೆಚ್ಚದಲ್ಲಿ ಆರು ತಾರಾಲಯಗಳನ್ನು ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಿವಿ, ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ಮಾಹಿತಿ ತಂತ್ರಜ್ಞಾನದಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿ: ಸಿದ್ದರಾಮಯ್ಯ

ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಹೇಳಿದ ಸಿದ್ದರಾಮಯ್ಯ, ರಾಜ್ಯದ ಟೆಕ್ ಕ್ಷೇತ್ರದ ಬೆಳವಣಿಗೆಗೆ ಮತ್ತಷ್ಟು ಪುಷ್ಟಿ ಕೊಡಲು ಈ ಕೆಳಗಿನ ಕೆಲ ಕ್ರಮಗಳನ್ನು ಪ್ರಕಟಿಸಿದ್ದಾರೆ.

  • KDEM ಸಂಸ್ಥೆಯ ಸಹಯೋಗದೊಂದಿಗೆ “Super 100 Industry-Academia Adoption Program” ಅನ್ನು ಜಾರಿಗೊಳಿಸಲಾಗುವುದು.
  • ಕೆ–ಕಾಂಬಿನೇಟರ್ (K-Combinator) ಮೂಲಕ ನವೋದ್ಯಮಿಗಳಿಗೆ ವೇಗವರ್ಧಕ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.
  • ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ ಮತ್ತು ಮೈಸೂರಿನಲ್ಲಿ ಉದ್ಯಮಿಗಳಿಗೆ Incubation ಸೌಲಭ್ಯಗಳನ್ನು ಒದಗಿಸಲು ಕಿಯೋನಿಕ್ಸ್ ಸಂಸ್ಥೆಯ ಮೂಲಕ ಪ್ಲಗ್-ಅಂಡ್-ಪ್ಲೇ ಸೌಲಭ್ಯದ ʻಲೀಪ್‌ ಲ್ಯಾಬ್ಸ್‌ʼ ಗಳನ್ನು ಸ್ಥಾಪಿಸಲಾಗುವುದು.
  • ಜಾಗತಿಕ ಟೆಕ್ನಾಲಜಿ ಕಂಪನಿಗಳಿಂದ ರಾಜ್ಯದಲ್ಲಿ 45,000 ಕೋಟಿ ರೂಗಳ ಹೂಡಿಕೆ ಆಗಲಿದೆ.
  • GCC ನೀತಿಯಡಿಯಲ್ಲಿ 2029ರ ವೇಳೆಗೆ ರಾಜ್ಯದಲ್ಲಿ 500 ಹೊಸ GCCಗಳನ್ನು ಸ್ಥಾಪಿಸುವ ಗುರಿ ಇದೆ. ಈಗಾಗಲೇ ರಾಜ್ಯದಲ್ಲಿ 550ಕ್ಕೂ ಅಧಿಕ ಗ್ಲೋಬಲ್ ಕೇಪಬಿಲಿಟಿ ಸೆಂಟರ್​ಗಳಿವೆ.
  • ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡ್ರೋನ್ ಪರೀಕ್ಷಾ ಸೌಲಭ್ಯ ಕೇಂದ್ರ ಸ್ಥಾಪಿಸಲು ಕ್ರಮ.
  • ಐಐಐಟಿ ಬೆಂಗಳೂರು ಮತ್ತು ನಿಮ್ಹಾನ್ಸ್ ಸಹಭಾಗಿತ್ವದಲ್ಲಿ ನರಶಸ್ತ್ರಚಿಕಿತ್ಸೆಗೆ ಪೂರಕವಾಗಲು ಸುಧಾರಿತ ಸರ್ಜಿಕಲ್ ಸಹಾಯಕ ರೋಬೋಗಳನ್ನು ತಯಾರಿಸಲಾಗುವುದು.
  • ಕ್ವಾಂಟಂ ಕ್ಷೇತ್ರಕ್ಕೆ ಮಾನವ ಸಂಪನ್ಮೂಲ ಪೂರೈಸಲು ಕರ್ನಾಟಕ ಕ್ವಾಂಟಂ ರೋಡ್​ಮ್ಯಾಪ್​ನ ಪ್ರಥಮ ಹಂತದ ಅನುಷ್ಠಾನಕ್ಕೆ ಕ್ರಮ
  • ಬೆಂಗಳೂರಿನಲ್ಲಿ ಸೈನ್ಸ್ ಸಿಟಿ ನಿರ್ಮಾಣ ಮಾಡಲಾಗುತ್ತದೆ. 11 ಜಿಲ್ಲೆಗಳಲ್ಲಿ ತಾರಾಲಯಗಳನ್ನೂ ನಿರ್ಮಿಸಲಾಗುತ್ತದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ತ್ರಿಷಾನ ರಾಜಕುಮಾರಿ ಎಂದು ಕರೆದಿದ್ದ ದಳಪತಿ ವಿಜಯ್

ದಳಪತಿ ವಿಜಯ್ ಹಾಗೂ ಸಂಗೀತಾ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಪತಿಗೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿ, ಸಂಗೀತಾ ಅವರು ಕೌಟುಂಬಿಕ ನ್ಯಾಯಾಲದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ಈ ವಿಷಯ ಚರ್ಚೆ ಹುಟ್ಟುಹಾಕಿದೆ. ದಂಪತಿ ಬೇರೆ ಆಗಲು ತ್ರಿಷಾ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಹೀಗಿರುವಾಗಲೇ ಇವರಿಬ್ಬರೂ ವಿವಾಹ ಕಾರ್ಯಕ್ರಮ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಬಳಿಕೆ ಅವರ ಹಳೆಯ ವಿಡಿಯೋಗಳು ವೈರಲ್ ಆಗುತ್ತಿವೆ.

ತ್ರಿಷಾ ಹಾಗೂ ವಿಜಯ್ ಒಟ್ಟಾಗಿ ಕಾಣಿಸಿಕೊಂಡ ಬೆನ್ನಲ್ಲೇ ಅಭಿಮಾನಿಗಳು ವಿಜಯ್ ಅವರನ್ನು ಬೆಂಬಲಿಸಿದರು. ವಿಜಯ್ ಅವರು ಮಾಡಿದ್ದು ಸರಿ ಇದೆ ಎಂದು ಹೇಳಿದರು. ಸಾಮಾನ್ಯವಾಗಿ ಈ ರೀತಿಯ ಅಫೇರ್ ವಿಷಯ ಬಂದಾಗ ಪರಸ್ಪರ ದೂರ ಆಗುತ್ತಾರೆ. ಒಟ್ಟಾಗಿ ಕಾಣಿಸಿಕೊಳ್ಳುವುದನ್ನು ತಪ್ಪಿಸಲು ನೋಡುತ್ತಾರೆ. ಆದರೆ, ವಿಜಯ್ ಆ ರೀತಿ ಮಾಡಿಲ್ಲ. ಅವರು ಯಾವುದೇ ಮುಚ್ಚುಮರೆ ಇಲ್ಲದೆ ವಿವಾಹ ಸಮಾರಂಭಕ್ಕೆ ಬಂದರು. ಈಗ ತ್ರಿಷಾ ಹಾಗೂ ವಿಜಯ್ ಇಬ್ಬರೂ ಆಡಿದ ವಿಷಯ ಚರ್ಚೆ ಆಗುತ್ತಿದೆ.

ಈವೆಂಟ್ ಒಂದರಲ್ಲಿ ವಿಜಯ್ ಹಾಗೂ ತ್ರಿಷಾ ಇಬ್ಬರೂ ಇದ್ದರು. ವಿಜಯ್ ನನ್ನ ಮನೆ ಇದ್ದಂತೆ ಎಂದು ತ್ರಿಷಾ ಹೇಳಿದ್ದರು. ಇದು ಇಬ್ಬರ ಬಾಂಡಿಂಗ್ ಹೇಗಿದೆ ಎಂಬುದನ್ನು ತೋರಿಸುತ್ತದೆ. ‘ವಿಜಯ್ ನನ್ನ ಕುಟುಂಬದವರ ರೀತಿ’ ಎಂದು ಹೇಳಲು ತ್ರಿಷಾ ಆ ರೀತಿ ಹೇಳಿರಬಹುದು ಎಂದು ಅನೇಕರರು ಊಹಿಸುತ್ತಿದ್ದಾರೆ. ಇದನ್ನು ಕೆಲವರು ತಪ್ಪಾಗಿ ಅರ್ಥೈಸುತ್ತಿದ್ದಾರೆ.

ಇದನ್ನೂ ಓದಿ: ದಳಪತಿ ವಿಜಯ್ ವಿಚ್ಛೇದನಕ್ಕೆ ದೊಡ್ಡ ಟ್ವಿಸ್ಟ್: ತ್ರಿಷಾ ಜತೆ ಮದುವೆಗೆ ಹಾಜರಿ

ವೇದಿಕೆ ಒಂದರಲ್ಲಿ ತ್ರಿಷಾ ಅವರನ್ನು ವಿಜಯ್ ಹೊಗಳಿದ್ದರು. ‘ಚಿತ್ರರಂಗಕ್ಕೆ ಬಂದ 20 ವರ್ಷಗಳ ನಂತರವೂ ಅದೇ ಸೌಂದರ್ಯವನ್ನು ಕಾಪಾಡಿಕೊಂಡು ಟಾಪ್ ಹೀರೋಯಿನ್ ಆಗಿ ಮುಂದುವರೆಯುತ್ತಿರುವ ತ್ರಿಷಾಗೆ ಅಭಿನಂದನೆಗಳು. ಅವರು ರಾಜಕುಮಾರಿ’ ಎಂದು ವಿಜಯ್ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಂದಿನ ಗೊರಜು ಭೂಮಿಗೆ ಇಂದು ಬಂಗಾರದ ಬೆಲೆ: ಏನಿದು ನೂರಾರು ಕೋಟಿ ಬೆಲೆಬಾಳುವ ಭೂಮಿಯ ಕಥೆ

ಕೋಲಾರ, ಮಾರ್ಚ್​​ 06: ಅದು ಬೆಟ್ಟಗುಡ್ಡಗಳಿರುವ ಭೂಮಿ (land). ಅಲ್ಲಿ ಕೃಷಿ ಮಾಡಲು ಯೋಗ್ಯವಲ್ಲ, ಹಾಗಾಗಿ ಅದನ್ನು ರೈತರಿಗೆ ಮಂಜೂರು ಮಾಡುವುದು ಬೇಡ ಎಂದು ಅಧಿಕಾರಿಗಳೇ ತಿರಸ್ಕರಿಸಿದ್ದರು. ಆದರೆ ಇಂದು ಆ ಭೂಮಿಗೆ ಬಂಗಾರದ ಬೆಲೆ ಬಂದ ಹಿನ್ನಲೆ ಅಧಿಕಾರಿಗಳೇ ಶಾಮೀಲಾಗಿ ನೂರಾರು ಕೋಟಿ ರೂ ಬೆಲೆಬಾಳುವ ಭೂಮಿಯನ್ನು ಅಕ್ರಮವಾಗಿ ರಾತ್ರೋರಾತ್ರಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ.

ಕೋಲಾರ ಜಿಲ್ಲೆಯ ಮಾಲೂರು ಬಹುತೇಕ ಬೆಂಗಳೂರಿಗೆ ಹೊಂದಿಕೊಂಡಿರುವ ತಾಲ್ಲೂಕು. ಹಾಗಾಗಿ ಮಾಲೂರು ತಾಲ್ಲೂಕಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಕಳೆದ ಕೆಲವು ದಿನಗಳಿಂದ ಮಾಲೂರು ತಾಲ್ಲೂಕಿನಲ್ಲಿ ಮೇಲಿಂದ ಮೇಲೆ ಭೂ ಹಗರಣಗಳು ನಡೆಯುತ್ತಿವೆ. ಅದರಂತೆ ಮಾಲೂರು ತಾಲ್ಲೂಕು ಚೆನ್ನಿಗರಾಯಪುರ ಗ್ರಾಮದ ಸರ್ವೆ ನಂ-6ರಲ್ಲಿನ ಸುಮಾರು 250 ಕೋಟಿ ರೂ ಬೆಲೆಬಾಳುವ ಸುಮಾರು 81 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದರಲ್ಲಿ ಕೆಲವೊಂದು ಪ್ರಭಾವಿಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳೇ ಶಾಮೀಲಾಗಿರುವ ಆರೋಪವೂ ಇದೆ.

ಕೂಲಂಕುಷವಾಗಿ ತನಿಖೆಗೆ ಸೂಚನೆ

ಸದ್ಯ ನೂರಾರು ಕೋಟಿಯ ಭೂ ಅಕ್ರಮ ಕುರಿತು ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಈ ವಿಚಾರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆಯ ವಿಷಯವಾಗಿದ್ದು ಸ್ವತ: ಜಿಲ್ಲಾ ಉಸ್ತವಾರಿ ಸಚಿವರೇ ಚೆನ್ನಿಗರಾಯಪುರ ಭೂ ಅವ್ಯವಹಾರದ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಕೂಡಲೇ ಜಮೀನು ಮಂಜೂರಾತಿಗೆ ತಡೆಯಾಜ್ಞೆ ನೀಡಿ ಕೂಲಂಕುಷವಾಗಿ ತನಿಖೆ ನಡೆಸಿ ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ!

ಅಷ್ಟಕ್ಕೂ ಏನಿದು ಚೆನ್ನಿಗರಾಯಪುರ ಗ್ರಾಮದ ನೂರಾರು ಕೋಟಿ ರೂ ಬೆಲೆಬಾಳುವ ಭೂಮಿಯ ಕಥೆ ಅಂತ ನೋಡುವುದಾರೆ ಅದು ಸುಮಾರು 44 ವರ್ಷಗಳ ಹಿಂದೆ ಅಂದರೆ 1982ರಲ್ಲಿ ಚೆನ್ನಿಗರಾಯಪುರ ಗ್ರಾಮದ ಸರ್ವೆ ನಂ-6 ರಲ್ಲಿದ್ದ ಗೊರಜು ಹಾಗೂ ಮಣ್ಣು ಗುಡ್ಡವಿದ್ದ ಭೂಮಿಯನ್ನು ಮಂಜೂರು ಮಾಡುವಂತೆ 27 ಜನರು ತಲಾ ಮೂರು ಎಕರೆಯಂತೆ 81 ಎಕರೆ ಭೂಮಿ ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಅಂದಿನ ಭೂ ವಿತರಣಾ ಸಲಹಾ ಸಮಿತಿ ಸ್ಥಳ ಪರಿಶೀಲನೆ ನಡೆಸಿ ಈ ಭೂಮಿ ವ್ಯವಸಾಯ ಮಾಡಲು ಯೋಗ್ಯವಿಲ್ಲ, ಅಲ್ಲಿ ಕಲ್ಲುಗುಡ್ಡ, ಬೆಟ್ಟಗಳಿದ್ದು ಅಲ್ಲಿ ವ್ಯವಸಾಯ ಮಾಡಲು ಆಗೋದಿಲ್ಲ. ಅದನ್ನು ಅರಣ್ಯ ಬೆಳೆಸಲು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿತ್ತು. ಅದರಂತೆ ಜಿಲ್ಲಾಧಿಕಾರಿಗಳು ತಾಲ್ಲೂಕು ಅಭಿವೃದ್ದಿ ಮಂಡಳಿಗೆ ನಿರ್ದೇಶನ ನೀಡಿ ಆದೇಶಿಸಿದ್ದರು. ಆದರೆ ಈ ಆದೇಶವನ್ನು ಪ್ರಶ್ನಿಸಿ ಭೂ ಮಂಜೂರಾತಿಗೆ ಅರ್ಜಿಸಲ್ಲಿಸಿದ್ದ ಅರ್ಜಿದಾರರು ಎ.ಸಿ. ಅವರಿಗೆ ಮೇಲ್ಮನವಿ ಸಲ್ಲಿಸಿದ್ದರು. ನಂತರ ಎಸಿ ಅವರು ಕೂಡ ಅವರ ಮನವಿಯನ್ನು ತಿರಸ್ಕರಿಸಿದ್ದರು.

ಎಸಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್​ 2011-12 ರಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್ 2017ರಲ್ಲಿ ಭೂ ಮಂಜೂರಾತಿ ಕಮಿಟಿಯವರು ಅರ್ಜಿದಾರರಿಗೆ ನೋಟಿಸ್ ನೀಡಿ. ವಿಚಾರಣೆ ನಡೆಸಿ ಮುಂದಿನ ಕ್ರಮ ಜರುಗಿಸುವಂತೆ ಆದೇಶ ನೀಡಿತ್ತು. 2017ರಿಂದ ಬಂದಂತ ಯಾವುದೇ ಅಧಿಕಾರಿಗಳು ಈ ಪ್ರಕರಣವನ್ನು ಕೈಗೆತ್ತುಕೊಂಡಿರಲಿಲ್ಲ. 2025 ಅಕ್ಟೋಬರ್​​ನಲ್ಲಿ ಎಸಿ ಅವರು ಏಕಾಏಕಿ ಮಂಜೂರಾತಿ ಆದೇಶವನ್ನು ಮಾಡಿದ್ದಾರೆ. ಆದರೆ ಮಂಜೂರಾತಿ ಮಾಡುವ ವೇಳೆಯಲ್ಲಿ ಮಂಜೂರಾತಿಗೆ ಅರ್ಜಿಸಲ್ಲಿಸಿದ್ದ ಅರ್ಜಿದಾರರಿಗೆ ನೋಟಿಸ್​ ನೀಡಿಲ್ಲ. 44 ವರ್ಷದ ಹಿಂದಿನ ಪ್ರಕರಣವಾಗಿದ್ದ ಹಿನ್ನೆಲೆ ಅವರ ಪ್ರಸ್ತುತ ಪರಿಸ್ಥಿತಿ ಸ್ಥಿತಿಗತಿ, ಎಲ್ಲಿ ವಾಸವಿದ್ದಾರೆ ಅನ್ನೋದರ ಕುರಿತು ವರದಿ ಪಡೆದಿಲ್ಲ. ಅವರ ಹೇಳಿಕೆಗಳನ್ನು ದಾಖಲಿಸದೆ ಏಕಾಏಕಿ ಆದೇಶ ಮಾಡಿದ್ದಾರೆ. ಇದು ಅಕ್ರಮ ಮಂಜೂರಾತಿಗೆ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.

ಇನ್ನು 44 ವರ್ಷಗಳ ಹಿಂದೆ ಈ ಪ್ರದೇಶ ಬೆಟ್ಟ, ಗುಡ್ಡಗಳಿಂದ ಕೂಡಿದ್ದ ಗೊರಜು ಪ್ರದೇಶವಾಗಿತ್ತು, ಆದರೆ ಈಗ ಅಲ್ಲಿದ್ದ ಬೆಟ್ಟಗುಡ್ಡವನ್ನು ಹೆದ್ದಾರಿ ಕಾಮಗಾರಿಗೆ ಹಾಗೂ ಅಕ್ರಮ ಮಣ್ಣು ಮಾಫಿಯಾ ಮಣ್ಣನ್ನೇ ಲೂಟಿ ಮಾಡಿದ್ದು, ಅಲ್ಲಿದ್ದ ಬೆಟ್ಟವೇ ನಾಪತ್ತೆಯಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಗೆ ಕೂಗಳತೆ ದೂರದಲ್ಲಿದ್ದು, ಸದ್ಯ ಅದು ರಿಯಲ್​ ಎಸ್ಟೇಟ್​ ಉದ್ಯಮಿಗಳ ಕಣ್ಣುಕುಕ್ಕುವ ಸ್ಥಳವಾಗಿ ಮಾರ್ಪಟ್ಟಿದೆ. ಹಾಗಾಗಿ ಇಂದಿಗೆ ಆ ಪ್ರದೇಶದಲ್ಲಿ ಒಂದು ಎಕರೆಗೆ ನಾಲ್ಕರಿಂದ ಐದು ಕೋಟಿ ರೂ ಮಾರುಕಟ್ಟೆ ಬೆಲೆ ಇದ್ದು 81 ಎಕರೆ ಭೂಮಿ ಮಂಜೂರಾತಿ ಹಿಂದೆ ಪ್ರಭಾವಿಗಳು ಹಾಗೂ ರಿಯಲ್ ಎಸ್ಟೇಟ್​ ಉದ್ಯಮಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಆ ಭೂಮಿಯನ್ನು ಪ್ರಸ್ತುತ ಅನುಭೋಗದಲ್ಲಿರುವವರಿಗೆ ಮಂಜೂರು ಮಾಡಬೇಕು. ಇಲ್ಲ ಅದನ್ನು ಸರ್ಕಾರ ವಾಪಸ್​ ಪಡೆಯಬೇಕು. ಅದರ ಜೊತೆಗೆ ಅಕ್ರಮದ ತನಿಖೆ ನಡೆಸಬೇಕು ಅನ್ನೋದು ಗ್ರಾಮಸ್ಥರ ಆಗ್ರಹವಾಗಿದೆ.

ಇದನ್ನೂ ಓದಿ: ಕೋಗಿಲು ಲೇಔಟ್:​ ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ

ಒಟ್ಟಾರೆ ಕಾಲ ಬದಲಾದಂತೆ ಅಲ್ಲಿನ ಪರಿಸ್ಥಿತಿಯೂ ಬದಲಾಗುತ್ತದೆ ಎನ್ನುವಂತೆ 44 ವರ್ಷಗಳ ಹಿಂದೆ ಯಾವುದಕ್ಕೂ ಯೋಗ್ಯವಲ್ಲದ ಭೂಮಿಗೆ ಇಂದು ಬಂಗಾರದ ಬೆಲೆ ಬಂದಿದೆ. ತಿರಸ್ಕರವಾಗಿದ್ದ ಭೂಮಿಯನ್ನು ಪಡೆಯಲು ಇಂದು ನೂರಾರು ಕೋಟಿ ರೂ ಅಕ್ರಮ ಮಾಡಲು ಮುಂದಾಗಿರುವುದು ನಿಜಕ್ಕೂ ಆಶ್ಚರ್ಯವಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಅಕ್ರಮ ಬಯಲಿಗೆಳೆಯಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಂತಾರಾಷ್ಟ್ರೀಯ ಬಿಕ್ಕಟ್ಟಿನ ನಡುವೆಯೂ ಭಾರತದಲ್ಲಿ ಸಿಎನ್​ಜಿ, ಪಿಎನ್​ಜಿ ಗ್ಯಾಸ್ ಬೆಲೆಗಳ ಏರಿಕೆ ಮಾಡದ ಅದಾನಿ ಕಂಪನಿ

ನವದೆಹಲಿ, ಮಾರ್ಚ್ 6: ಇರಾನ್ ಯುದ್ಧದಿಂದಾಗಿ ಜಾಗತಿಕವಾಗಿ ತೈಲ ಪೂರೈಕೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗಿದ್ದರೂ ಭಾರತದಲ್ಲಿ ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್ ಸಂಸ್ಥೆ (Adani Total Gas Ltd) ತನ್ನ ಸಿಎನ್​ಜಿ ಮತ್ತು ಪಿಎನ್​ಜಿ ಅನಿಲಗಳ ಬೆಲೆ ಏರಿಕೆ ಮಾಡಿಲ್ಲ. ಔದ್ಯಮಿಕ ಗ್ರಾಹಕರಿಗೆ ಅದಾನಿ ಕಂಪನಿ ಎಲ್​ಎನ್​ಜಿ ಪೂರೈಕೆಯನ್ನು ಮಿತಿಗೊಳಿಸಿದೆ. ಅದು ಬಿಟ್ಟರೆ ಗೃಹಬಳಕೆಗೆ ಎಟಿಜಿಎಲ್​ನಿಂದ ಸರಬರಾಜಾಗುವ ಕೊಳವೆ ಅಡುಗೆ ಅನಿಲ ಹಾಗೂ ವಾಹನಗಳಿಗೆ ಬಳಕೆಯಾಗುವ ಸಿಎನ್​ಜಿ ಗ್ಯಾಸ್​ನ ಪೂರೈಕೆಯಲ್ಲಿ ಯಾವ ನಿರ್ಬಂಧ ಇಲ್ಲ. ಬೆಲೆಯಲ್ಲೂ ವ್ಯತ್ಯಯವಾಗಿಲ್ಲ.

ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್ ಕಂಪನಿಯು ತನ್ನ ಶೇ. 70ರಷ್ಟು ಗ್ಯಾಸ್ ಅನ್ನು ದೇಶೀಯವಾಗಿ ಪಡೆಯುತ್ತಿದೆ. ಸಿಎನ್​ಜಿ ಬಳಕೆದಾರರಿಗೆ ಮತ್ತು ಗೃಹ ಅಡುಗೆಮನೆಗಳಿಗೆ ಇವು ಸರಬರಾಜಾಗುತ್ತವೆ. ಕಂಪನಿಯ ಉಳಿದ ಶೇ. 30ರಷ್ಟು ಅನಿಲವು ಎಲ್​ಎನ್​ಜಿಯಾಗಿದ್ದು ಇದನ್ನು ಮಾತ್ರ ಆಮದು ಮಾಡಿಕೊಳ್ಳಲಾಗುತ್ತದೆ. ಎಲ್​ಎನ್​ಜಿ ಗ್ಯಾಸ್ ಅನ್ನು ಕಮರ್ಷಿಯಲ್ ಮತ್ತು ಕೈಗಾರಿಕಾ ಬಳಕೆಗೆ ನೀಡಲಾಗುತ್ತದೆ.

ಇದನ್ನೂ ಓದಿ: ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ- ಸಿದ್ದರಾಮಯ್ಯ

ಎಲ್​ಎನ್​ಜಿಯನ್ನು ಭಾರತೀಯ ಕಂಪನಿಗಳು ಗಲ್ಫ್ ರಾಷ್ಟ್ರಗಳಿಂದ ಪಡೆಯುತ್ತವೆ. ಆದರೆ, ಹಾರ್ಮುಜ್ ಜಲಸಂಧಿಯಲ್ಲಿ ಕಚ್ಚಾ ತೈಲ ಮತ್ತು ಅನಿಲಗಳ ಸಾಗಣೆಗೆ ತಡೆ ಬಿದ್ದಿರುವುದರಿಂದ ಅದಾನಿ ಟೋಟಲ್ ಗ್ಯಾಸ್ ಕಂಪನಿಗೆ ಎಲ್​ಎಲ್​ಜಿ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ.

ಎಲ್​ಎನ್​ಜಿ ಗ್ಯಾಸ್ ಅನ್ನು ಬಳಸುವ ಕಮರ್ಷಿಯಲ್ ಹಾಗೂ ಕೈಗಾರಿಕಾ ಗ್ರಾಹಕರು, ಗ್ಯಾಸ್ ಬಳಕೆಯನ್ನು ಶೇ. 40ರಷ್ಟು ಕಡಿಮೆ ಮಾಡಬೇಕೆಂದು ಮನವಿ ಪಡೆದಿದ್ದಾರೆ. ಈ ಗ್ರಾಹಕರು ಈಗಾಗಲೆ ಒಪ್ಪಂದ ಮಾಡಿಕೊಂಡಿದ್ದಾರಾದರೂ ಕಾಂಟ್ರಾಕ್ಟ್​ನಲ್ಲಿರುವಷ್ಟು ಎಲ್​ಎನ್​ಜಿ ಗ್ಯಾಸ್ ಬಳಕೆಗೆ ಮುಕ್ತಾವಕಾಶ ಇರುವುದಿಲ್ಲ. ಕಾಂಟ್ರಾಕ್ಟ್ ದರವು ಪ್ರತೀ ಸ್ಟ್ಯಾಂಡರ್ಸ್ ಕ್ಯೂಬಿಕ್ ಮೀಟರ್​ಗೆ 40 ರೂ ಇದೆ. ಶೇ. 40ರಷ್ಟು ಎನ್​ಎನ್​ಜಿಯನ್ನು ಇದೇ ಬೆಲೆಯಲ್ಲಿ ಬಳಸಬಹುದು. ಇದಕ್ಕಿಂತ ಹೆಚ್ಚಿನ ಸಿಎನ್​ಜಿ ಗ್ಯಾಸ್ ಬಳಸಿದರೆ, ಹಾಲಿ ಮಾರುಕಟ್ಟೆ ದರ ಅಥವಾ ಸ್ಪಾಟ್ ಪ್ರೈಸ್ ಪಾವತಿಸಬೇಕಾಗುತ್ತದೆ. ಸ್ಪಾಟ್ ಪ್ರೈಸ್ ಸಾಮಾನ್ಯವಾಗಿ ಕಾಂಟ್ರಾಕ್ಟ್ ಪ್ರೈಸ್​ಗಿಂತ ಎರಡು ಪಟ್ಟು ಹೆಚ್ಚಿರುತ್ತದೆ.

ಇದನ್ನೂ ಓದಿ: ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು

ಔದ್ಯಮಿಕ ಗ್ರಾಹಕರು ಎಲ್​ಎನ್​ಜಿ ಬಿಟ್ಟು ಪರ್ಯಾಯ ಇಂಧನ ಮೂಲಗಳನ್ನು ಅವಲೋಕಿಸಲು ಸಲಹೆ ನೀಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ವಾಕಿಂಗ್ ಹೋದ ಮಹಿಳೆ 25 ಅಡಿ ಗುಂಡಿಗೆ ಬಿದ್ದು ಪರದಾಟ: ಪತ್ತೆ ಮಾಡಿ ರಕ್ಷಿಸಿದ್ದೇ ರೋಚಕ!

ಬೆಂಗಳೂರು, (ಮಾರ್ಚ್ 06): ವಾಕಿಂಗ್ ಹೋಗಿದ್ದ ಮಹಿಳೆ 25 ಅಡಿ ಆಳದ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ 56 ವರ್ಷದ ಮಹಿಳೆಯನ್ನು (Woman) ಬೆಂಗಳೂರಿನ (Bengaluru) ಚಂದ್ರಲೇಔಟ್ ಪೊಲೀಸರು ಮಿಂಚಿನ ಕಾರ್ಯಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. 56 ವರ್ಷದ ಮಹಿಳೆಯೊಬ್ಬರು ಇಂದು (ಮಾರ್ಚ್ 06) ವಾಕಿಂಗ್ ಹೋಗುವಾಗ ನಾಗರಭಾವಿ ಪಾರ್ಕ್ ಸಮೀಪದ ಸುಮಾರು 25 ಅಡಿ ಆಳದ ಗುಂಡಿಗೆ ಬಿದ್ದು ಮೇಲೆ ಬರಲಾಗದೇ ಒಳಗೆ ಅಪಾಯಕ್ಕೆ ಸಿಲುಕಿದ್ದರು. ಬಳಿಕ ಮಗ ತಾಯಿ ಮನೆಗೆ ಬರದಿರುವುದರಿಂದ ಆತಂಕಗೊಂಡು 112ಗೆ ಕರೆ ಮಾಡಿ ತಿಳಿಸಿದ್ದ. ಈ ಕರೆ ಬಳಿಕ ಅಲರ್ಟ್ ಆದ ಚಂದ್ರಲೇಔಟ್ ಪೊಲೀಸರು, ಮಹಿಳೆಯ ಮೊಬೈಲ್ ಲೋಕೇಷನ್ ಟ್ರೇಸ್ ಮಾಡಿ ಆಕೆಯನ್ನು ಹುಡುಕಿಕೊಂಡು ಹೋಗಿ ರಕ್ಷಸಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸುಧಾ ಪರಿಮಳ (56) ಎಂಬ ಮಹಿಳೆ ಮಾರ್ಚ್ 06ರ ಬೆಳಗಿನ ಜಾವ ನಾಗರಭಾವಿ ಪಾರ್ಕ್ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ, ಅಲ್ಲಿ ಅಗೆಯಲಾಗಿದ್ದ ಸುಮಾರು 25 ಅಡಿ ಆಳದ ಬೃಹತ್ ಗುಂಡಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆ. ಗುಂಡಿ ತೀವ್ರ ಆಳವಾಗಿದ್ದರಿಂದ ಹೊರಬರಲು ಸಾಧ್ಯವಾಗದೆ ಸುಧಾ ಅವರು ಅಲ್ಲಿಯೇ ಪರದಾಡಿದ್ದಾರೆ. ಬೆಳಗಿನ ಜಾವವಾಗಿದ್ದರಿಂದ ಅಲ್ಲಿ ಜನಸಂಚಾರವೂ ವಿರಳವಾಗಿತ್ತು. ಗುಂಡಿಯೊಳಗೆ ಬಿದ್ದ ಆಘಾತದಿಂದ ಸುಧಾ ಅವರು ಅಲ್ಲೇ ಅಸ್ವಸ್ಥರಾಗಿದ್ದರು.

ಇದನ್ನೂ ಒದಿ: ಡಿಕೆ ಶಿವಕುಮಾರ್ ಬ್ರ್ಯಾಂಡ್ ಬೆಂಗಳೂರಿಗೆ ಬಜೆಟ್​ನಲ್ಲಿ ಸಿದ್ದರಾಮಯ್ಯ ಭರಪೂರ ಕೊಡುಗೆ

ಇತ್ತ ಸುಧಾ ಅವರು ಸಮಯಕ್ಕೆ ಸರಿಯಾಗಿ ಮನೆಗೆ ಮರಳದಿದ್ದಾಗ ಆತಂಕಗೊಂಡ ಮಗ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಚಂದ್ರಲೇಔಟ್ ಪೊಲೀಸ್ ಠಾಣೆಯ ಹೊಯ್ಸಳ ಸಿಬ್ಬಂದಿ, ಮಹಿಳೆಯ ಮೊಬೈಲ್ ಲೊಕೇಶನ್ ಟ್ರ್ಯಾಕ್ ಮಾಡಿದ್ದಾರೆ. ಆಗ ಮಹಿಳೆಯ ಮೊಬೈಲ್ ಸಿಗ್ನಲ್ ನಾಗರಭಾವಿ ಪಾರ್ಕ್ ಬಳಿ ತೋರಿಸಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ.

ಈ ವೇಳೆ ಪಾರ್ಕ್ ಬಳಿ ಅಗೆಯಲಾಗಿದ್ದ ಆಳವಾದ ಗುಂಡಿಯೊಳಗೆ ಮಹಿಳೆ ಅಸ್ವಸ್ಥರಾಗಿ ಬಿದ್ದಿರುವುದು ಕಂಡುಬಂದಿದ್ದು, ಕೂಡಲೇ ಪೊಲೀಸರು, ಸ್ಥಳೀಯ ಸಾರ್ವಜನಿಕರ ಸಹಾಯ ಪಡೆದ ಹರಸಾಹಸ ಪಟ್ಟು 25 ಅಡಿ ಆಳದ ಗುಂಡಿಯಿಂದ ಸುಧಾ ಅವರನ್ನು ಮೇಲೆತ್ತಿದ್ದಾರೆ. ಬಳಿಕ ಸ್ವಸ್ಥರಾಗಿದ್ದ ಸುಧಾ ಅವರನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ಪೊಲೀಸರ ರೋಚಕ ಕಾರ್ಯಚರಣೆ ಕುಟುಂಬದವರು, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನು ಗುಂಡಿ ಅಗೆದು ಹಾಗೆ ಬಿಟ್ಟು ಹೋಗಿರುವವರು ಯಾರು ಎನ್ನುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link