All posts by nagaraj11081993

AUS vs ENG: ಶತಕ, ಶತಕ, ಶತಕ, ಶತಕ… ಬ್ರಾಡ್ಮನ್ ದಾಖಲೆ ಸರಿಗಟ್ಟಿದ ಟ್ರಾವಿಸ್ ಹೆಡ್ – Kannada News | Ashes 2025: Travis Head’s Adelaide Century Matches Bradman’s Home Ground Record

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಆಶಸ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ತನ್ನ ತವರು ನೆಲವಾದ ಅಡಿಲೇಡ್‌ನಲ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ಹೆಡ್ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಮೂಲಕ ಹೆಡ್, ಡಾನ್ ಬ್ರಾಡ್ಮನ್, ಮೈಕೆಲ್ ಕ್ಲಾರ್ಕ್ ಮತ್ತು ಸ್ಟೀವ್ ಸ್ಮಿತ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

Source link

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಕಲ್ಲು, ದೊಣ್ಣೆಗಳಿಂದ ಬಡಿದಾಟ

ಕೋಲಾರ, ಡಿಸೆಂಬರ್​ 19: ವಕ್ಫ್ ಬೋರ್ಡ್ ಆಸ್ತಿಗಾಗಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ನಡೆದಿದೆ. ಮಾಸ್ತಿ ಗ್ರಾಮದಲ್ಲಿರುವ ವಕ್ಫ್ ಬೋರ್ಡಿಗೆ ಸೇರಿದ 11 ಎಕರೆ ಜಮೀನಿಗಾಗಿ ಗಲಾಟೆ ನಡೆದಿದೆ. ಸಯ್ಯದ್ ರಸೂಲ್ ದರ್ವೇಶ್ ವಂಸಸ್ಥರು ವಕ್ಫ್ ಬೋರ್ಡ್​ಗೆ ಜಮೀನು ದಾನವಾಗಿ ನೀಡಿದ್ದಾರೆ. ಇದರಲ್ಲಿರುವ ಈದ್ಗಾ, ಬಾಡಿಗೆ ಕಟ್ಟಡ ಎಲ್ಲವೂ ವಕ್ಫ್ ಬೋರ್ಡಿಗೆ ಬರುತ್ತೆ. ಆದರೆ ಈ ಆಸ್ತಿ ನಮ್ಮದು ಎಂದು ಸಯ್ಯದ್ ರಸೂಲ್ ಕುಟುಂಬಸ್ಥರು ಗಲಾಟೆ ಮಾಡಿ ಮಸೀದಿ ಮುಖಂಡರ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಶಕ್ತಿ ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ನಗುತ್ತಾ ಕೊಟ್ಟ ಸಂದೇಶ – Kannada News | DCM DK Shivakumar Reacts about Siddaramaiah CM Post After Visiting Andle Jagadeeshwari Temple at Uttara Kannada

ಕಾರವಾರ, (ಡಿಸೆಂಬರ್ 19): ರಾಜ್ಯ ಕಾಂಗ್ರೆಸ್​​ನಲ್ಲಿ ಕುರ್ಚಿ ಕಾಳಗ ದಿನೇ ದಿನೇ ತಾರಕಕ್ಕೇರ್ತಿದೆ. ಸಿಎಂ ಸಿದ್ದರಾಮಯ್ಯ ಬಣ ತಂತ್ರ ಹೆಣೆಯುತ್ತಿದ್ರೆ, ಡಿಕೆ ಬಣ ಕೂಡ ಪ್ರತಿತಂತ್ರ ರೂಪಿಸ್ತಿದೆ. ನಾಯಕರು ಒಂದ್ಕಡೆ ಡಿನ್ನರ್ ಮೀಟಿಂಗ್ ಮಾಡಿದ್ರೆ, ಮತ್ತೊಂದ್ಕಡೆ ಟೆಂಪಲ್ ರನ್ ಮಾಡ್ತಿದ್ದಾರೆ.. ಡಿಸಿಎಂ ಡಿಕೆ ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ. ಇವತ್ತು ಉತ್ತರ ಕನ್ನಡ ಜಿಲ್ಲೆಯ ಶಕ್ತಿಕೇಂದ್ರಗಳಿಗೆ ಭೇಟಿ ನೀಡಿದ್ರು. ಅಂಕೋಲಾ ತಾಲೂಕಿನ ಆಂದ್ಲೆಯಲ್ಲಿರೋ ಕರಾವಳಿ ಶಕ್ತಿದೇವಿ ಜಗದೀಶ್ವರಿ ಸನ್ನಿಧದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಾನು ಯಾವತ್ತೂ ಅವರು 5 ವರ್ಷ ಇರಲ್ಲ ಎಂದು ಹೇಳಿಲ್ಲ. ಹೈಕಮಾಂಡ್ ಅವರ ಪರವಾಗಿಲ್ಲವೆಂದು ಕೂಡ ನಾನು ಹೇಳಿಲ್ಲ. ಅವರ ಪರವಾಗಿ ಹೈಕಮಾಂಡ್ ಇರುವುದಕ್ಕೆ ಸಿಎಂ ಆಗಿರೋದು. ನಾನು ಅವರು ಇಬ್ಬರು ಒಂದ ಒಪ್ಪಂದಕ್ಕೆ ಬಂದಿದ್ದೇವೆ. ಹೈಕಮಾಂಡ್ ಕೂಡ ಒಂದು ಒಪ್ಪಂದಕ್ಕೆ ತಂದಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆಶಿ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಹಾಗಾದ್ರೆ, ಹೈಕಮಾಂಡ್ ತಂದಿರುವ ಒಪ್ಪಂದ ಏನು ಎನ್ನುವುದೇ ನಿಗೂಢವಾಗಿದ್ದು, ಕಾಂಗ್ರೆಸ್​​ನಲ್ಲಿ ಚರ್ಚೆಗೆ ಗ್ರಾಸವಾಗಿದೆ.

Source link

ಜೈಲಿನಲ್ಲಿ ದರ್ಶನ್ ಭೇಟಿ ಮಾಡಲು ಪವಿತ್ರಾ ಗೌಡ ಯತ್ನ: ಬೇಡವೇ ಬೇಡ ಎಂದ ದಾಸ – Kannada News | Pavithra Gowda wants to meet Darshan in Parappana Agrahara Jail

ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈಗಾಗಲೇ ನ್ಯಾಯಾಲಯದಲ್ಲಿ ಈ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭ ಆಗಿದೆ. ಈ ಹೊತ್ತಿನಲ್ಲಿ ದರ್ಶನ್ ಅವರನ್ನು ಭೇಟಿ ಮಾಡಲು ಪವಿತ್ರಾ ಗೌಡ ಪ್ರಯತ್ನಿಸುತ್ತಿದ್ದಾರೆ. ಜೈಲು ಸೇರಿದ ಬಳಿಕ ಅವರಿಬ್ಬರ ನಡುವೆ ಮಾತುಕಥೆ ಆಗಿಲ್ಲ. ಹಾಗಾಗಿ ದರ್ಶನ್ ಜೊತೆ ಮಾತನಾಡಲು ಪವಿತ್ರಾ ಗೌಡ ಹಂಬಲಿಸುತ್ತಿದ್ದಾರೆ. ಆದರೆ ಅದಕ್ಕೆ ದರ್ಶನ್ ಅವಕಾಶ ನೀಡುತ್ತಿಲ್ಲ! ಗೆಳತಿ ಪವಿತ್ರಾ ಗೌಡ ಜೊತೆ ಮಾತನಾಡಲು ದರ್ಶನ್ (Darshan) ಅವರಿಗೆ ಈಗ ಮನಸ್ಸಿಲ್ಲ.

ಡಿಜಿಪಿ ಅಲೋಕ್ ಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾಗ ಪವಿತ್ರಾ ಗೌಡ ಅವರು ಈ ಮನವಿ ಇಟ್ಟಿದ್ದರು. ಈ ಬೇಡಿಕೆಗೆ ಸಂಬಂಧಪಟ್ಟಂತೆ ಕಾನೂನಿನಲ್ಲಿ ಅವಕಾಶ ಇರುವು ಬಗ್ಗೆ ನೋಡುವುದಾಗಿ ಅಲೋಕ್ ಕುಮಾರ್ ಹೇಳಿದ್ದರು. ಅದನ್ನೇ ನೆಪವಾಗಿ ಇಟ್ಟುಕೊಂಡು ಪವಿತ್ರಾ ಗೌಡ ಅವರು ಮರಳಿ ಯತ್ನ ಮಾಡುತ್ತಿದ್ದಾರೆ. ಆದರೆ ದರ್ಶನ ಕಡೆಯಿಂದ ಅವರಿಗೆ ಸಹಕಾರ ಸಿಗುತ್ತಿಲ್ಲ.

ಪವಿತ್ರ ಗೌಡ ಭೇಟಿ ಮಾಡಲು ದರ್ಶನ್ ಅವರು ನಯವಾಗಿಯೇ ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಪವಿತ್ರಾ ಗೌಡ ಅವರನ್ನು ಭೇಟಿ ಮಾಡಲು ದರ್ಶನ್ ಒಪ್ಪುತ್ತಿಲ್ಲ. ನಿನ್ನಿಂದಲೇ ಈ ಪರಿಸ್ಥಿತಿಗೆ ಬಂದಿದ್ದೇನೆ ಎಂಬ ರೀತಿಯಲ್ಲಿ ದರ್ಶನ್ ಅವರು ಭೇಟಿಗೆ ನಿರಾಕರಣೆ ಮಾಡಿದಂತಿದೆ. ತಮ್ಮನ್ನು ನೋಡಲು ಬಂದವರ ಬಳಿ ಕೇವಲ ಕಾನೂನು ಹೋರಾಟದ ಪ್ರಕ್ರಿಯೆಗಳ ಬಗ್ಗೆ ಅವರು ಮಾತನಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಟ್ರಯಲ್ ಆರಂಭ ಆಗಿದೆ. ಡಿಸೆಂಬರ್ 17ರಂದು ರೇಣುಕಾಸ್ವಾಮಿ ತಂದೆ, ತಾಯಿಯನ್ನು ಕರೆದು ವಿಚಾರಣೆ ಮಾಡಲಾಯಿತು. ಇನ್ನೂ ನೂರಾರು ಸಾಕ್ಷಿಗಳಿಗೆ ಸಮನ್ಸ್ ನೀಡಿ ಕೋರ್ಟ್ ಟ್ರಯಲ್ ನಡೆಸಬೇಕಿದೆ. ಇಂಥ ಸಂದರ್ಭದಲ್ಲಿ ದರ್ಶನ್ ಜೊತೆ ಮಾತನಾಡಬೇಕು ಎಂಬುದು ಪವಿತ್ರಾ ಗೌಡ ಅವರ ಹಂಬಲ. ಆದರೆ ಅದಕ್ಕೆ ದರ್ಶನ್ ಕಡೆಯಿಂದ ನೀರಸ ಪ್ರತಿಕ್ರಿಯೆ ಬಂದಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್: ಎ1 ಪವಿತ್ರಾ ಗೌಡ ಇರುವ ಸೆಲ್​ಗೆ ಟಿವಿ ನೀಡಲು ಕೋರ್ಟ್ ಸೂಚನೆ

ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಜೈಲು ಸೇರುವುದಕ್ಕೂ ಮುನ್ನ ದರ್ಶನ್ ಹಾಗೂ ಪವಿತ್ರಾ ಗೌಡ ಅವರು ತುಂಬ ಆಪ್ತವಾಗಿದ್ದರು. ಅದಕ್ಕೆ ಅವರಿಬ್ಬರ ಅನೇಕ ಫೋಟೋ ಮತ್ತು ವಿಡಿಯೋಗಳೇ ಸಾಕ್ಷಿ. ಆದರೆ ಒಂದು ಕೊಲೆ ಪ್ರಕರಣದಿಂದ ಅವರ ಬದುಕು ಬದಲಾಯಿತು. ಇಬ್ಬರೂ ಈಗ ಜೈಲಿನಲ್ಲಿ ಕಾಲ ಕಳೆಯುವಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ – Kannada News | Haveri: Malatesha idol desecrated in Gundenahalli village; locals demand action

ಹಾವೇರಿ, ಡಿಸೆಂಬರ್​ 19: ಕಲ್ಲಿನಿಂದ ಜಜ್ಜಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಾಲತೇಶ ದೇವರ ಮೂರ್ತಿಯ ಮುಖ ಮತ್ತು ಕಣ್ಣಿನ ಭಾಗಕ್ಕೆ ಕಲ್ಲಿನಿಂದ ಜಜ್ಜಲಾಗಿದೆ. ಸದ್ಯ ದುಷ್ಕರ್ಮಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಣ್ಣಪ್ಪ ಬಾರ್ಕಿ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ನೀವು ಗರ್ಭಿಣಿಯಾಗಿದ್ದು ವಾಯುಮಾಲಿನ್ಯದಿಂದಾಗುವ ಸಮಸ್ಯೆಗಳಿಂದ ಮಗುವನ್ನು ಕಾಪಾಡಲು ಈ ಸಲಹೆಗಳನ್ನು ಪಾಲಿಸಿ – Kannada News | Pollution’s Hidden Impact: Risks to Baby’s Cognitive Health

ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಮಟ್ಟವು ಗಮನಾರ್ಹವಾಗಿ ಏರುತ್ತಿದೆ. ಅದರ ಜೊತೆ ಚಳಿಯೂ ಹೆಚ್ಚಾಗುತ್ತಿದ್ದು ಅನೇಕ ಪ್ರದೇಶಗಳಲ್ಲಿ ಮಂಜು ಕಾಣಿಸಿಕೊಳ್ಳಲು ಪ್ರಾರಂಭಿಸಿದೆ. ನಿಮಗೆ ಗೊತ್ತಾ, ಈ ಮಾಲಿನ್ಯ (Air Pollution) ಮತ್ತು ಮಂಜು (Smog) ಗಂಭೀರ ಆರೋಗ್ಯದ ಅಪಾಯವನ್ನುಂಟುಮಾಡುತ್ತದೆ. ಇದು ಎಲ್ಲರ ಮೇಲೆ ಪರಿಣಾಮ ಬೀರುತ್ತದೆ, ಅದರಲ್ಲಿಯೂ ಇದು ಹುಟ್ಟಲಿರುವ ಶಿಶುಗಳಿಗೆ ಹಾನಿ ಮಾಡಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಿದ್ದಾರೆ. ಹೌದು, ಇಂತಹ ವಿಷಯಗಳ ಬಗ್ಗೆ ಕೆಲವರು ಗಮನ ಹರಿಸದಿರಬಹುದು ಆದರೆ ಇದು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೂ ಪರಿಣಾಮ ಬೀರುತ್ತದೆ. ತಜ್ಞರು ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಗರ್ಭಿಣಿಯರು ಆದಷ್ಟು ಮಾಲಿನ್ಯ ಹೆಚ್ಚಾಗಿರುವ ಪ್ರದೇಶಗಳಿಗೆ ಹೋಗುವುದನ್ನು ತಪ್ಪಿಸುವುದು ಒಳ್ಳೆಯದು ಎನ್ನುತ್ತಾರೆ. ಹಾಗಾದರೆ ಗರ್ಭಿಣಿಯರು ತಮ್ಮನ್ನು ತಾವು ರಕ್ಸಿಸಿಕೊಳ್ಳಲು ಏನು ಮಾಡಬಹುದು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಾಮಾನ್ಯವಾಗಿ ಮಾಲಿನ್ಯ ಮತ್ತು ಹೊಗೆ ಎರಡೂ ಕೂಡ ಗರ್ಭದಲ್ಲಿರುವ ಶಿಶುಗಳ ಮೇಲೆ ಪರಿಣಾಮ ಬೀರುತ್ತವೆ ಎಂದು ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಸಂಶೋಧನೆ ತಿಳಿಸಿದೆ. ಮಾಲಿನ್ಯವು PM2.5 ಮತ್ತು PM10 ನಂತಹ ಕಣಗಳನ್ನು ಹೊಂದಿರುತ್ತದೆ, ಇದರಲ್ಲಿ ಸಾರಜನಕ ಡೈಆಕ್ಸೈಡ್ ಮತ್ತು ಕಾರ್ಬನ್ ಮಾನಾಕ್ಸೈಡ್ ಸೇರಿವೆ. ಈ ಕಣಗಳು ಉಸಿರಾಟದ ಮೂಲಕ ಶ್ವಾಸಕೋಶವನ್ನು ಪ್ರವೇಶಿಸುತ್ತವೆ. ಕಲುಷಿತ ಪ್ರದೇಶಗಳಲ್ಲಿ ವಾಸಿಸುವ ಗರ್ಭಿಣಿಯರ ಮೇಲೆ ಹೆಚ್ಚು ಪರಿಣಾಮ ಬೀರುತ್ತಾರೆ. ಕಲುಷಿತ ಕಣಗಳು ರಕ್ತದಲ್ಲಿ ಕರಗುವ ಮೂಲಕ ಮಗುವಿನ ಮಾನಸಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತವೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಸಿಟಿ ಜನರೇ ಜೋಪಾನ! ನಿಮ್ಮ ಜೀವಕ್ಕೆ ಕುತ್ತಾಗಬಹುದು ವಾಯುಮಾಲಿನ್ಯ

ಮಾಲಿನ್ಯವು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ದೆಹಲಿಯ ಏಮ್ಸ್‌ನ ಮಕ್ಕಳ ಚಿಕಿತ್ಸಾ ವಿಭಾಗದ ಡಾ. ಹಿಮಾಂಶು ಭದಾನಿ ಅವರು ಹೇಳುವ ಪ್ರಕಾರ, ಮಾಲಿನ್ಯ, ಹೊಗೆ ಅಥವಾ ಮಂಜಿಗೆ ಹೆಚ್ಚು ಒಡ್ಡಿಕೊಳ್ಳುವುದರಿಂದ ಗರ್ಭಿಣಿಯಿಂದ ಶಿಶುಗಳಿಗೆ ಆಮ್ಲಜನಕದ ಪೂರೈಕೆ ಕಡಿಮೆಯಾಗುತ್ತದೆ ಇದನ್ನು ಹೈಪೋಕ್ಸಿಯಾ ಎಂದು ಕರೆಯಲಾಗುತ್ತದೆ. ಈ ರೀತಿಯಾದಾಗ ಮೆದುಳಿನ ಕೋಶಗಳ ಬೆಳವಣಿಗೆಗೆ ಅಡ್ಡಿಯಾಗುತ್ತದೆ. ಅಷ್ಟೇಅಲ್ಲ, ಇದು ಮೆದುಳಿನಲ್ಲಿ ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡಕ್ಕೆ ಕಾರಣವಾಗಬಹುದು, ಬಳಿಕ ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಮಗು ಬೆಳೆದಂತೆ ಅವರ ಕಲಿಕಾ ಸಾಮರ್ಥ್ಯ ಕಡಿಮೆಯಾಗುವ ಅಪಾಯವನ್ನು ಹೆಚ್ಚಿಸಬಹುದು. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಕೂಡ ದುರ್ಬಲಗೊಳಿಸುತ್ತದೆ, ಅಸ್ತಮಾ ಮತ್ತು ಉಸಿರಾಟದ ಕಾಯಿಲೆಗಳ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಮಾಲಿನ್ಯ ಮತ್ತು ಬೆಳಗಿನ ಮಂಜು ಎರಡೂ ಕೂಡ ಅಪಾಯಕಾರಿ ಏಕೆಂದರೆ ಹೊಗೆಯು ಉಸಿರಾಟದ ಮೂಲಕ ಶ್ವಾಸಕೋಶಕ್ಕೆ ಪ್ರವೇಶಿಸುವ ಅನೇಕ ವಿಷಕಾರಿ ಕಣಗಳನ್ನು ಬಿಡುಗಡೆ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಗರ್ಭಿಣಿಯರು ಮಾಲಿನ್ಯದಿಂದ ರಕ್ಷಿಸಿಕೊಳ್ಳುವುದು ಹೇಗೆ?

  • ಹೊರಗಡೆ ಹೋಗುವಾಗ ಮಾಸ್ಕ್ ಧರಿಸಿ
  • ಮನೆಯಲ್ಲಿ ಗಾಳಿ ಶುದ್ಧೀಕರಣ ಮಾಡುವ ಯಂತ್ರವನ್ನು ಬಳಸಿ
  • ಬೆಳಿಗ್ಗೆ ಮತ್ತು ಸಂಜೆ ಹೊರಗೆ ಹೋಗುವುದನ್ನು ಆದಷ್ಟು ತಪ್ಪಿಸಿ
  • ವೈದ್ಯರು ಸೂಚಿಸಿದ ಆಹಾರ ಪದ್ದತಿಯನ್ನು ಕಟ್ಟುನಿಟ್ಟಾಗಿ ಅನುಸರಿಸಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Tax Collections: ಈ ವರ್ಷ ಸರ್ಕಾರಕ್ಕೆ ಸಿಕ್ಕಿದ ನಿವ್ವಳ ನೇರ ತೆರಿಗೆ ಸಂಗ್ರಹ 17 ಲಕ್ಷ ಕೋಟಿ ರೂ – Kannada News | Govt gets Rs 17 lakh crore net direct taxes this FY, 8pc more than last year

ನವದೆಹಲಿ, ಡಿಸೆಂಬರ್ 19: ಪ್ರಸಕ್ತ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ (2025ರ ಏಪ್ರಿಲ್ 1ರಿಂದ) ಭಾರತದಲ್ಲಿ ತೆರಿಗೆ ಸಂಗ್ರಹದಲ್ಲಿ ಗಣನೀಯ ಏರಿಕೆ ಆಗಿರುವುದು ಕಂಡು ಬಂದಿದೆ. ಸರ್ಕರವೇ ಬಿಡುಗಡೆ ಮಾಡಿದ ಅಂಕಿ ಅಂಶದ ಪ್ರಕಾರ ಈ ವರ್ಷ ಇಲ್ಲಿಯವರೆಗೆ (ಡಿ. 17) ಸಂಗ್ರಹವಾದ ನಿವ್ವಳ ನೇರ ತೆರಿಗೆಯು (Net Direct Taxes) 17.04 ಲಕ್ಷ ಕೋಟಿ ರೂಗಿಂತಲೂ ಅಧಿಕ ಇದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಸಿಕ್ಕಿದುದಕ್ಕಿಂತಲೂ ಶೇ. 8ರಷ್ಟು ಹೆಚ್ಚು ಟ್ಯಾಕ್ಸ್ ಕಲೆಕ್ಷನ್ ಆಗಿದೆ.

ಈ ವರ್ಷದ ತೆರಿಗೆ ಸಂಗ್ರಹದಲ್ಲಿ ಏರಿಕೆ ಆಗಲು ಕಾರ್ಪೊರೇಟ್ ಟ್ಯಾಕ್ಸ್ ಕಲೆಕ್ಷನ್ ಏರಿರುವುದೂ ಒಂದು ಪ್ರಮುಖ ಕಾರಣವಾಗಿದೆ. ಕಳೆದ ವರ್ಷದ ಈ ಅವಧಿಯಲ್ಲಿ ನಿವ್ವಳ ಕಾರ್ಪೊರೇಟ್ ಟ್ಯಾಕ್ಸ್ 7.39 ಲಕ್ಷ ಕೋಟಿ ರೂ ಇತ್ತು. ಈ ವರ್ಷ ಅದು 8.17 ಲಕ್ಷ ಕೋಟಿ ರೂ ಆಗಿದೆ. ಡೈರೆಕ್ಟ್ ಟ್ಯಾಕ್ಸ್ ಕಲೆಕ್ಷನ್​ನಲ್ಲಿ ಬಹುತೇಕ ಅರ್ಧದಷ್ಟು ಪಾಲು ಕಾರ್ಪೊರೇಟ್ ಟ್ಯಾಕ್ಸ್​ನಿಂದ ಹೋಗಿದೆ.

ಇದನ್ನೂ ಓದಿ: ಸರ್ಕಾರ ನೋಟ್ ಪ್ರಿಂಟ್ ಮಾಡಿ ಸಾಲ ತೀರಿಸಬಹುದಲ್ಲ? ಹೆಚ್ಚು ನೋಟ್ ಪ್ರಿಂಟ್ ಮಾಡಿದರೆ ಏನು ಅಪಾಯ?

ಈ ಬಾರಿ ನಿವ್ವಳ ನೇರ ತೆರಿಗೆ ಸಂಗ್ರಹದಲ್ಲಿ ಹೆಚ್ಚಳ ಆಗಲು ಮತ್ತೊಂದು ಕಾರಣವೆಂದರೆ ರೀಫಂಡ್ ಕಡಿಮೆ ಆಗಿರುವುದು. ಈ ವರ್ಷ ರೀಫಂಡ್ ಆಗಿರುವುದು 2.97 ಲಕ್ಷ ಕೋಟಿ ರೂ ಮಾತ್ರ. ಕಳೆದ ವರ್ಷದಕ್ಕೆ ಹೋಲಿಸಿದರೆ ರೀಫಂಡ್ ಶೇ. 13.52ರಷ್ಟು ಕಡಿಮೆಗೊಂಡಿದೆ. ರೀಫಂಡ್ ಲೆಕ್ಕಕ್ಕೆ ತೆಗೆದುಕೊಳ್ಳದೇ ಹೋದರೆ, ಒಟ್ಟೂ ನೇರ ತೆರಿಗೆಯಲ್ಲಿ ಆಗಿರುವ ಹೆಚ್ಚಳ ಶೇ. 4.16 ಮಾತ್ರ.

2025ರ ಏಪ್ರಿಲ್ 1ರಿಂದ ಡಿಸೆಂಬರ್ 17ರವರೆಗಿನ ನೇರ ತೆರಿಗೆ ಸಂಗ್ರಹ

  • ಒಟ್ಟು ನೇರ ತೆರಿಗೆ ಸಂಗ್ರಹ: 20,01,794 ಕೋಟಿ ರೂ
  • ರೀಫಂಡ್​ಗಳು: 2,97,069 ಕೋಟಿ ರೂ
  • ನಿವ್ವಳ ತೆರಿಗೆ: 17,04,725 ಕೋಟಿ ರೂ

ನಿವ್ವಳ ನೇರ ತೆರಿಗೆಯಲ್ಲಿ ಯಾವುದಕ್ಕೆಷ್ಟು?

  • ಕಾರ್ಪೊರೆಟ್ ಟ್ಯಾಕ್ಸ್: 8,17,310 ಕೋಟಿ ರೂ
  • ನಾನ್-ಕಾರ್ಪೊರೇಟ್ ಟ್ಯಾಕ್ಸ್: 8,46,905 ಕೋಟಿ ರೂ
  • ಸೆಕ್ಯೂರಿಟೀಸ್ ಟ್ರಾನ್ಸಾಕ್ಷನ್ ಟ್ಯಾಕ್ಸ್: 40,195 ಕೋಟಿ ರೂ

ಅಡ್ವಾನ್ಸ್ ಟ್ಯಾಕ್ಸ್ ಸುಮಾರು 7,88,388 ಕೋಟಿ ರೂ ಸಿಕ್ಕಿದೆ. ಇದರಲ್ಲಿ ಕಾರ್ಪೊರೇಟ್ ಅಡ್ವಾನ್ಸ್ ಟ್ಯಾಕ್ಸೇ 6 ಲಕ್ಷ ಕೋಟಿ ರೂಗೂ ಅಧಿಕ ಇದೆ. ಕಾರ್ಪೊರೇಟ್ ಅಲ್ಲದವರ ಅಡ್ವಾನ್ಸ್ ಟ್ಯಾಕ್ಸ್ ಬಂದಿರುವುದು 1,81,088 ಕೋಟಿ ರೂ ಮಾತ್ರವೇ. ಇಲ್ಲಿ ನೇರ ತೆರಿಗೆ ಎಂದರೆ ಇನ್ಕಮ್ ಟ್ಯಾಕ್ಸ್. ಕಾರ್ಪೊರೇಟ್ ಸಂಸ್ಥೆಗಳು ತಮ್ಮ ಆದಾಯಕ್ಕೆ ನಿಗದಿತ ಟ್ಯಾಕ್ಸ್ ಕಟ್ಟಬೇಕಾಗುತ್ತದೆ. ವ್ಯಕ್ತಿಗಳೂ ಕೂಡ ತಮ್ಮ ಆದಾಯಕ್ಕೆ ಟ್ಯಾಕ್ಸ್ ಕಟ್ಟುತ್ತಾರೆ. ಇನ್ನು, ಡೈರೆಕ್ಟ್ ಟ್ಯಾಕ್ಸ್ ಅಲ್ಲದೇ, ಇನ್​ಡೈರೆಕ್ಟ್ ಟ್ಯಾಕ್ಸ್ ಸಿಸ್ಟಂ ಇದೆ. ಜಿಎಸ್​ಟಿ ಇತ್ಯಾದಿಯವು ಈ ಪರೋಕ್ಷ ತೆರಿಗೆ ವ್ಯಾಪ್ತಿಗೆ ಬರುತ್ತವೆ.

ಇದನ್ನೂ ಓದಿ: ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ

ಕಳೆದ ವರ್ಷವಾದ 2024-25ರಲ್ಲಿ, ಅಂದರೆ 2024ರ ಎಪ್ರಿಲ್​ನಿಂದ 2025ರ ಮಾರ್ಚ್ 31ರವರೆಗೆ ಸಂಗ್ರಹವಾದ ಒಟ್ಟು ನೇರ ತೆರಿಗೆ 27.02 ಲಕ್ಷ ಕೋಟಿ ರೂ. ರೀಫಂಡ್​ಗಳನ್ನು ಕಳೆದು ಉಳಿಯುವ ನಿವ್ವಳ ನೇರ ತೆರಿಗೆ ಸಂಗ್ರಹ 22.26 ಲಕ್ಷ ಕೋಟಿ ರೂ ಆಗಿತ್ತು. ಈ ವರ್ಷ ಡಿಸೆಂಬರ್ 17ರವರೆಗೆಯೇ 17 ಲಕ್ಷ ಕೋಟಿ ರೂ ನಿವ್ವಳ ತೆರಿಗೆ ಆದಾಯವು ಸರ್ಕಾರಕ್ಕೆ ಸಿಕ್ಕಿದೆ. ಇನ್ನೂ ಮೂರು ತಿಂಗಳಿಗಿಂತ ಹೆಚ್ಚಿನ ಕಾಲ ಬಾಕಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

SMAT 2025: ಇಶಾನ್ ಕಿಶನ್ ನಾಯಕತ್ವದಲ್ಲಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಜಾರ್ಖಂಡ್ – Kannada News | Ishan Kishan’s Century Powers Jharkhand to Maiden Syed Mushtaq Ali Trophy Win

ಇಶಾನ್ ಕಿಶನ್ (Ishan Kishan) ನಾಯಕತ್ವದ ಜಾರ್ಖಂಡ್ ಕ್ರಿಕೆಟ್ ತಂಡವು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ (Syed Mushtaq Ali Trophy) ಹೊಸ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾರತದ ದೇಶೀಯ ಕ್ರಿಕೆಟ್‌ನ ಅತಿದೊಡ್ಡ ಟಿ20 ಟೂರ್ನಿಯಾದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ, ಜಾರ್ಖಂಡ್ ತಂಡವು ಹರಿಯಾಣವನ್ನು 69 ರನ್‌ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಇದರೊಂದಿಗೆ, ಜಾರ್ಖಂಡ್ ಮೊದಲ ಬಾರಿಗೆ ಮುಷ್ತಾಕ್ ಅಲಿ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ನಾಯಕ ಇಶಾನ್ ಕಿಶನ್ 101 ರನ್‌ಗಳ ಸ್ಫೋಟಕ ಶತಕ ಸಿಡಿಸಿದರು. ಇದರಿಂದಾಗಿ ಮೊದಲು ಬ್ಯಾಟಿಂಗ್ ಮಾಡಿದ ಜಾರ್ಖಂಡ್ ತಂಡವು 262 ರನ್‌ಗಳ ದಾಖಲೆಯ ಸ್ಕೋರ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಹರಿಯಾಣ ತಂಡವು ಕೇವಲ 193 ರನ್‌ಗಳನ್ನು ಕಲೆಹಾಕಲಷ್ಟೇ ಶಕ್ತವಾಯಿತು. ಇಶಾನ್ ಜೊತೆಗೆ, ಅನುಕುಲ್ ರಾಯ್ ಕೂಡ ಅತ್ಯುತ್ತಮ ಆಲ್‌ರೌಂಡ್ ಪ್ರದರ್ಶನದೊಂದಿಗೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಸ್ಫೋಟಕ ಶತಕ ಸಿಡಿಸಿದ ಕಿಶನ್

ಡಿಸೆಂಬರ್ 18 ರ ಗುರುವಾರ ಪುಣೆಯ ಎಂಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಾರ್ಖಂಡ್ ತಂಡಕ್ಕೆ ಮೊದಲ ಓವರ್​ನಲ್ಲೇ ಆಘಾತ ಎದುರಾಯಿತು. ಆರಂಭಿಕ ವಿರಾಟ್ ಸಿಂಗ್ ಮೊದಲ ಓವರ್‌ನಲ್ಲೇ ಔಟಾದರು. ಆದರೆ ಇನ್ನೊಂದು ತುದಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್, ಕುಮಾರ್ ಕುಶಾಗ್ರ ಅವರ ಜೊತೆಗೂಡಿ ಎರಡನೇ ವಿಕೆಟ್‌ಗೆ 177 ರನ್‌ಗಳ ಜೊತೆಯಾಟ ನಿರ್ಮಿಸಿದರು.

ಇದೇ ವೇಳೆ ನಾಯಕ ಇಶಾನ್ ಕಿಶನ್ ಕೇವಲ 45 ಎಸೆತಗಳಲ್ಲಿ ಶತಕ ಬಾರಿಸಿದರು. ಇತ್ತ ಶತಕದಂಚಿನಲ್ಲಿದ್ದ ಕುಶಾಗ್ರ 81 ರನ್‌ಗಳಿಗೆ ಔಟಾದರು. ನಂತರ ಅನುಕುಲ್ ರಾಯ್ ಮತ್ತು ರಾಬಿನ್ ಮಿಂಜ್ ಕೇವಲ 32 ಎಸೆತಗಳಲ್ಲಿ 75 ರನ್‌ಗಳನ್ನು ಸೇರಿಸಿ ತಂಡವನ್ನು 262 ರನ್​ಗಳಿಗೆ ಕೊಂಡೊಯ್ದರು. ಮಿನ್ಸ್ 14 ಎಸೆತಗಳಲ್ಲಿ 31 ರನ್ ಗಳಿಸಿದರೆ, ರಾಯ್ 20 ಎಸೆತಗಳಲ್ಲಿ 40 ರನ್ ಬಾರಿಸಿದರು.

ಸುಶಾಂತ್, ಅನುಕೂಲ್ ಮಾರಕ ಬೌಲಿಂಗ್

ಈ ಗುರಿ ಬೆನ್ನಟ್ಟಿದ ಹರಿಯಾಣ ತಂಡವು ಕೂಡ ಮೊದಲ ಓವರ್‌ನಲ್ಲಿ ಕೇವಲ ಒಂದು ರನ್‌ಗೆ ನಾಯಕ ಅಂಕಿತ್ ಕುಮಾರ್ ಸೇರಿದಂತೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತು. ಎಡಗೈ ವೇಗಿ ವಿಕಾಸ್ ಕುಮಾರ್ ಅದ್ಭುತ ಪ್ರದರ್ಶನ ನೀಡಿದರು. ಆದಾಗ್ಯೂ, ನಂತರ ಯಶವರ್ಧನ್ ದಲಾಲ್ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರೆ, ನಿಶಾಂತ್ ಸಿಂಧು ಮತ್ತು ಸಮಂತ್ ಜಖರ್ ಕೂಡ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿದರು. ಆದಾಗ್ಯೂ, ಈ ಮೂವರಲ್ಲಿ ಯಾರಿಗೂ ತಮ್ಮ ಆರಂಭವನ್ನು ದೊಡ್ಡ ಸ್ಕೋರ್‌ಗಳಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ.

ಎಡಗೈ ವೇಗಿ ಸುಶಾಂತ್ ಮಿಶ್ರಾ ಕೂಡ ಇದರಲ್ಲಿ ಪ್ರಮುಖ ಪಾತ್ರ ವಹಿಸಿದರು. ತಮ್ಮ ಖೋಟಾದ ನಾಲ್ಕು ಓವರ್‌ಗಳಲ್ಲಿ 27 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಪಡೆದರು. ಇವರಿಗೆ ಸಾಥ್ ನೀಡಿದ ಅನುಕುಲ್ ರಾಯ್ ಕೂಡ 42 ರನ್ ನೀಡಿ 2 ವಿಕೆಟ್​ಗಳ ರೂಪದಲ್ಲಿ ದಲಾಲ್ ಮತ್ತು ಸಿಂಧು ಅವರನ್ನು ಔಟ್ ಮಾಡಿದರು. ಅಂತಿಮವಾಗಿ, ಇಡೀ ತಂಡವು 18.3 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 193 ರನ್‌ಗಳಿಗೆ ಆಲೌಟ್ ಆಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:09 pm, Fri, 19 December 25

Source link

ಬೈದಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಬಾಲಕ ಆತ್ಮಹತ್ಯೆ: ಹೆತ್ತವರು ಬುದ್ಧಿವಾದ ಹೇಳೋದೇ ತಪ್ಪಾ? – Kannada News | Hubballi: Son suicide after parents warn him excessive mobile phone use, urge focus on studies

ಹುಬ್ಬಳ್ಳಿ, ಡಿಸೆಂಬರ್​​ 19: ಮೊಬೈಲ್ (mobile)​ ಬಿಟ್ಟು ಓದಿನ ಕಡೆ ಗಮನಹರಿಸು ಎಂದಿದ್ದಕ್ಕೆ 16 ವರ್ಷದ ಮಗ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಅರುಣಗೌಡ ಮೃತ ಯುವಕ. ಮೃತ ಅರುಣಗೌಡ ಪ್ರಥಮ ಪಿಯುಸಿ ಓದುತ್ತಿದ್ದ. ಸದ್ಯ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಅರುಣಗೌಡ ಪೋಷಕರು ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸಲು ಹೇಳಿದ್ದಾರೆ. ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಆತ ಡಿಸೆಂಬರ್ 16ರಂದು ಕ್ರಿಮಿನಾಶಕ ಸೇವಿಸಿದ್ದ. ಬಳಿಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅರುಣಗೌಡ ಆಸ್ಪತ್ರೆಯಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ.

ಬೈಕ್​​ ಸ್ಕಿಡ್ ಆಗಿ ಬಿದ್ದ ಪೊಲೀಸ್​ ಕಾನ್ಸ್​ಟೇಬಲ್: ಗಂಭೀರ ಗಾಯ

ಮತ್ತೊಂದು ಪ್ರಕರಣದಲ್ಲಿ ಹುಬ್ಬಳ್ಳಿ ತಾಲೂಕಿನ ಪಾಳ ಗ್ರಾಮದ ಬಳಿ ಬೈಕ್​ ಸ್ಕಿಡ್​ ಆಗಿ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್​ ಶಿವಾನಂದ್ ಮಾದರ್​ಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಾತ್ರಿ ಕರ್ತವ್ಯ ಮುಗಿಸಿಕೊಂಡು ಊರಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಗುದ್ದಿದ ರಭಸಕ್ಕೆ ಕಾರು ಪಲ್ಟಿ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕಾನ್ಸ್​ಟೇಬಲ್ ಶಿವಾನಂದ್​​ಗೆ ಚಿಕಿತ್ಸೆ ನೀಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವೈದ್ಯಾಧಿಕಾರಿಯ ಕಿರುಕುಳ: ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ನರ್ಸ್

ವೈದ್ಯಾಧಿಕಾರಿಯಿಂದ ನಿರಂತರ ಕಿರುಕುಳಕ್ಕೆ ಬೇಸತ್ತು ಕರ್ತವ್ಯನಿರತ ನರ್ಸ್ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌ ನಡೆದಿದೆ.

ಇದನ್ನೂ ಓದಿ: ಪೊಲೀಸ್ರು ಹೋದಾಗ ಯುವತಿ ಬಾಲ್ಕನಿಯಿಂದ ಜಿಗಿದ ಕೇಸಿಗೆ​​ ಟ್ವಿಸ್ಟ್: ಸಿಕ್ಕ ಸಾಕ್ಷಿ ಏನು?

ಸುಮಾರು 20ಕ್ಕೂ ಹೆಚ್ಚು ಮಾತ್ರೆ ಸೇವಿಸಿ ಸುನೀತಾ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಹೊಸಪೇಟೆ 100 ಬೆಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮರಿಯಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಂಜುಳಾ ಅವರ ನಿರಂತರ ಕಿರುಕುಳಕ್ಕೆ ಬೇಸತ್ತು ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪ್ರೇಮ ವಿವಾಹ ವಿಚಾರದಲ್ಲಿ ಜಗಳ, ಕೋಪದಲ್ಲಿ ವ್ಯಕ್ತಿಯ ಮೂಗು ಕತ್ತರಿಸಿದ ಜನ – Kannada News | Family Clash Over Love Marriage Turns Violent in Rajasthan

ಬಾರ್ಮರ್, ಡಿಸೆಂಬರ್ 19: ಪ್ರೇಮ ವಿವಾಹ(Love Marriage)ದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿರುವ ಘಟನೆ ರಾಜಸ್ಥಾನದ ಬಾರ್ಮರ್​ನಲ್ಲಿ ನಡೆದಿದೆ. ಘಟನೆಯಲ್ಲಿ ವರನ ಅಣ್ಣನ ಮೂಗನ್ನು ಹುಡುಗಿಯ ಮನೆಯವರು ಕತ್ತರಿಸಿರುವ ಅಮಾನವೀಯ ಘಟನೆ ಎದುರಾಗಿದೆ. ಮಹಿಳೆಯ ಕಡೆಯವರು ಮೊದಲು ಹಲ್ಲೆ ನಡೆಸಿದ್ದರು. ಆ ವ್ಯಕ್ತಿಯ ಅಣ್ಣನ ಮೂಗನ್ನು ಹರಿತವಾದ ಆಯುಧದಿಂದ ಕತ್ತರಿಸಿ ಹಾಕಿದರು. ಇದಕ್ಕೆ ಪ್ರತೀಕಾರವಾಗಿ, ಆ ವ್ಯಕ್ತಿಯ ಸಂಬಂಧಿಕರು ಮಹಿಳೆಯ ಚಿಕ್ಕಪ್ಪನ ಮೇಲೆ ಹಲ್ಲೆ ನಡೆಸಿ ಅವರ ಕಾಲು ಮುರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

25 ವರ್ಷದ ಶ್ರವಣ್ ಸಿಂಗ್ ಮತ್ತು ಅದೇ ಗ್ರಾಮದ ಹುಡುಗಿಯ ನಡುವಿನ ಪ್ರೇಮ ವಿವಾಹದಿಂದ ಈ ಘರ್ಷಣೆ ಹುಟ್ಟಿಕೊಂಡಿದೆ. ಮಹಿಳೆಯ ಕುಟುಂಬವು ಈ ಮದುವೆಯನ್ನು ಎಂದಿಗೂ ಒಪ್ಪಲಿಲ್ಲ, ಮತ್ತು ಅಂದಿನಿಂದ ಎರಡೂ ಕುಟುಂಬಗಳ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಶ್ರವಣ್ ಸಿಂಗ್ ಈಗ ತನ್ನ ಪತ್ನಿ ಮತ್ತು ಕುಟುಂಬದೊಂದಿಗೆ ಗುಜರಾತ್‌ನಲ್ಲಿ ವಾಸವಿದ್ದಾನೆ. ಶ್ರವಣ್‌ನ ಅಣ್ಣ ಯುಕೆ ಸಿಂಗ್ (35) ಹೊಲದಿಂದ ಹಿಂತಿರುಗುತ್ತಿದ್ದಾಗ ಮಹಿಳೆಯ ಚಿಕ್ಕಪ್ಪ ಧರ್ಮ್ ಸಿಂಗ್ (50) ಮತ್ತು ಅವರ ಸಹಚರರು ಹೊಂಚು ಹಾಕಿ ಹಲ್ಲೆ ನಡೆಸಿದ್ದಾರೆ.

ಅವರು ಯುಕೆ ಸಿಂಗ್ ಅವರ ಮೂಗನ್ನು ಹರಿತವಾದ ಆಯುಧದಿಂದ ಕತ್ತರಿಸಿದ್ದಾರೆ, ಹೇಗೋ ಮನೆ ತಲುಪುವಲ್ಲಿ ಯಶಸ್ವಿಯಾದರು.ಇದರಿಂದ ಕೋಪಗೊಂಡ ಯು.ಕೆ. ಸಿಂಗ್ ಅವರ ಕುಟುಂಬವು ಮಹಿಳೆಯ ಮನೆಯಲ್ಲಿ ಧರ್ಮ್ ಸಿಂಗ್ ಮೇಲೆ ಹಲ್ಲೆ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು, ಇದರಿಂದಾಗಿ ಅವರ ಕಾಲು ತೀವ್ರವಾಗಿ ಮುರಿದು ಹೋಯಿತು.

ಮತ್ತಷ್ಟು ಓದಿ: ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆ ಅಗತ್ಯವೇ? ಭಾರತೀಯ ಕಾನೂನು ಹೇಳೋದೇನು?

ಗಾಯಗೊಂಡ ಇಬ್ಬರನ್ನೂ ಗುಡಮಲನಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಯುಕೆ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಂಚೋರ್‌ಗೆ ಕರೆದೊಯ್ಯಲಾಯಿತು. ಗಂಭೀರ ಸ್ಥಿತಿಯಲ್ಲಿರುವ ಧರ್ಮ್ ಸಿಂಗ್ ಅವರನ್ನು ಜೋಧ್‌ಪುರಕ್ಕೆ ಕಳುಹಿಸಲಾಯಿತು. ಘಟನೆಯ ನಂತರ ಗುಡಮಲನಿ ಪೊಲೀಸ್ ಠಾಣೆಯ ಡಿಎಸ್ಪಿ ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. ಎರಡೂ ಕಡೆಯ ದೂರುಗಳ ಮೇರೆಗೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.

ಕಳೆದ ತಿಂಗಳು ಮಹಾರಾಷ್ಟ್ರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವರನ ಮೇಲೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಡಿಜೆ ನೃತ್ಯದ ವೇಳೆ ನಡೆದ ಸಣ್ಣಪುಟ್ಟ ವಾಗ್ವಾದದ ನಂತರ 22 ವರ್ಷದ ಸಜಲ್ ರಾಮ್ ಮೇಲೆ ರಾಘೋ ಜಿತೇಂದ್ರ ಬಕ್ಷಿ ಎಂಬಾತ ವೇದಿಕೆಯಲ್ಲಿ ಹಲ್ಲೆ ನಡೆಸಿದ್ದ. ಮದುವೆಯ ವಿಡಿಯೋಗ್ರಾಫರ್ ಮತ್ತು ಆತನ ಸಹಚರ ಬೈಕ್​ನಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ದಾಳಿಕೋರನನ್ನು ಡ್ರೋನ್ ಮೂಲಕ ಸುಮಾರು ಎರಡು ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link