All posts by nagaraj11081993

ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೆ ನುಗ್ಗೆಕಾಯಿ ಹತ್ತಿರಕ್ಕೂ ಹೋಗಬೇಡಿ – Kannada News | Drumstick Consumption: Who Should Be Cautious and Why

ನುಗ್ಗೆಕಾಯಿ (Drumstick) ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಇದರಲ್ಲಿ ಅಗತ್ಯವಾದ ಜೀವಸತ್ವ, ಖನಿಜ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಾನಾ ರೀತಿಯ ಪ್ರಯೋಜನಗಳನ್ನು ಪಡೆಯಬಹುದು. ಸಾಮಾನ್ಯವಾಗಿ ಈ ತರಕಾರಿ ಬಹುತೇಕ ಎಲ್ಲಾ ಋತುಗಳಲ್ಲಿ ಲಭ್ಯವಿದ್ದು ಇದರ ರುಚಿ ಮತ್ತು ಆರೋಗ್ಯ ಪ್ರಯೋಜನಗಳಿಂದಾಗಿ, ಇದನ್ನು ಕರಿ, ಸೂಪ್ ಮತ್ತು ಸಾಂಪ್ರದಾಯಿಕ ಭಕ್ಷ್ಯಗಳಲ್ಲಿಯೂ ಬಳಸಲಾಗುತ್ತದೆ. ಇದರ ಎಲೆಗಳು ಕೂಡ ನೈಸರ್ಗಿಕವಾಗಿ ಪ್ರೋಟೀನ್ ಅನ್ನು ಹೊಂದಿರುತ್ತವೆ. ನುಗ್ಗೆಕಾಯಿ ಕೂಡ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿ ಮತ್ತು ಉರಿಯೂತದ ಸಮಸ್ಯೆಗಳಿಗೆ ಮುಕ್ತಿ ನೀಡಲು ಪ್ರಯೋಜನಕಾರಿ. ಇವುಗಳಲ್ಲಿರುವ ಔಷಧೀಯ ಗುಣಗಳಿಂದಾಗಿಯೇ ಇದನ್ನು ವ್ಯಾಪಕವಾಗಿ ಸೇವನೆ ಮಾಡಲಾಗುತ್ತದೆ. ಆದರೆ ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದರೂ, ಕೂಡ ನುಗ್ಗೆಕಾಯಿ ಕೆಲವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೌದು, ಇವುಗಳನ್ನು ಸೇವನೆ ಮಾಡಬೇಕೆ ಅಥವಾ ಬೇಡವೇ ಎಂಬುದು ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ಅವಲಂಬಿಸಿರುತ್ತದೆ. ಹಾಗಾದರೆ ನುಗ್ಗೆಕಾಯಿ ಸೇವನೆ ಯಾರಿಗೆ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

  • ಗರ್ಭಿಣಿಯರು ನುಗ್ಗೆಕಾಯಿಯನ್ನು ಸೇವಿಸದಿರುವುದು ಒಳ್ಳೆಯದು. ಏಕೆಂದರೆ ಇದು ದೇಹದಲ್ಲಿ ಶಾಖವನ್ನು ಉತ್ಪಾದಿಸುತ್ತದೆ ಅದರ ಪರಿಣಾಮ ಗರ್ಭಾವಸ್ಥೆಯಲ್ಲಿ ಅಸ್ವಸ್ಥತೆ ಅಥವಾ ತೊಡಕುಗಳು ಉಂಟಾಗಬಹುದು.
  • ಮುಟ್ಟಿನ ಸಮಯದಲ್ಲಿ ಭಾರೀ ರಕ್ತಸ್ರಾವವನ್ನು ಅನುಭವಿಸುವ ಮಹಿಳೆಯರು ಕೂಡ ನುಗ್ಗೆಕಾಯಿಯ ಸೇವನೆ ಮಾಡುವುದನ್ನು ತಪ್ಪಿಸಬೇಕು. ಇದರ ಬಿಸಿ ಗುಣ ರಕ್ತಸ್ರಾವವನ್ನು ಮತ್ತಷ್ಟು ಹೆಚ್ಚಿಸಬಹುದು, ಅಷ್ಟು ಮಾತ್ರವಲ್ಲ, ದೌರ್ಬಲ್ಯ ಅಥವಾ ಅಸ್ವಸ್ಥತೆಗೆ ಕಾರಣವಾಗಬಹುದು.
  • ನುಗ್ಗೆಕಾಯಿ ಸ್ವಾಭಾವಿಕವಾಗಿ ರಕ್ತದೊತ್ತಡವನ್ನು ಕಡಿಮೆ ಮಾಡುತ್ತವೆ. ಆದರೆ ಈಗಾಗಲೇ ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿರುವವರು ಈ ತರಕಾರಿಯ ಸೇವನೆ ಮಾಡಬಾರದು. ಏಕೆಂದರೆ ಇದರಿಂದ ಸ್ಥಿತಿ ಇನ್ನಷ್ಟು ಹದಗೆಡಬಹುದು.
  • ಮೂರ್ಛೆ ಅಥವಾ ಆಯಾಸದಂತಹ ಲಕ್ಷಣಗಳು ಕಂಡುಬರುತ್ತಿರುವವರು ಕೂಡ ನುಗ್ಗೆಕಾಯಿ ಸೇವನೆಯನ್ನು ಮಿತಗೊಳಿಸಬೇಕು.
  • ದೀರ್ಘಕಾಲದ ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರು ನುಗ್ಗೆಕಾಯಿಯನ್ನು ಪದೇ ಪದೇ ಸೇವನೆ ಮಾಡಬಾರದು ಅದರ ಸೇವನೆಯನ್ನು ಮಿತಿಗೊಳಿಸಬೇಕು ಅಥವಾ ಸಂಪೂರ್ಣವಾಗಿ ತಪ್ಪಿಸಬೇಕು. ಏಕೆಂದರೆ ಇದರಲ್ಲಿ ಹೆಚ್ಚಿನ ನಾರಿನ ಅಂಶ ಮತ್ತು ಶಕ್ತಿ ಅಂಶ ಹೆಚ್ಚಾಗಿದ್ದು ಕೆಲವರಲ್ಲಿ ಉಬ್ಬುವುದು, ಆಮ್ಲೀಯತೆ ಅಥವಾ ಹೊಟ್ಟೆಯ ಅಸ್ವಸ್ಥತೆಯನ್ನು ಉಂಟುಮಾಡಬಹುದು. ಹಾಗಾಗಿ ನುಗ್ಗೆಕಾಯಿ ಸೇವನೆ ಮಾಡುವಾಗ ಸ್ವಲ್ಪ ಜಾಗೃತವಾಗಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಯಾಣಿಕರೇ ಗಮನಿಸಿ: ಕ್ರಿಸ್ಮಸ್​​ ಹಿನ್ನೆಲೆ ರಸ್ತೆಗಿಳಿಯಲಿವೆ ಹೆಚ್ಚುವರಿ KSRTC ಬಸ್​​ಗಳು – Kannada News | KSRTC to Operate 1,000 Special Buses on the Occasion of Christmas

ಬೆಂಗಳೂರು, ಡಿಸೆಂಬರ್​​ 19: ಕ್ರಿಸ್ಮಸ್​​ ಹಿನ್ನೆಲೆ ಊರುಗಳಿಗೆ, ಪ್ರವಾಸಕ್ಕೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಗುಡ್​​ನ್ಯೂಸ್​​ ಕೊಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಡಿ.19, 20 ಮತ್ತು 24ರಂದು ಹೆಚ್ಚುವರಿಯಾಗಿ 1,000 ಬಸ್​​ಗಳು ಸಂಚಾರ ನಡೆಸಲಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ವಿಶೇಷ ಬಸ್‌ಗಳ ಸಂಚಾರ ನಡೆಯಲಿದ್ದು, ಸಾಮಾನ್ಯ ಸಾರಿಗೆ, ಐರಾವತ ಹಾಗೂ ಸ್ಲೀಪರ್ ಕೋಚ್ ಸೇರಿದಂತೆ ಎಲ್ಲಾ ಐಷಾರಾಮಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಕ್ರಿಸ್ಮಸ್ ಹಬ್ಬ ಮುಗಿದ ಬಳಿಕವೂ ವಿಶೇಷ ಬಸ್​ಗಳ ಕಾರ್ಯಾಚರಣೆ ನಡೆಯಲಿದ್ದು, ಡಿ.26 ಹಾಗೂ 28ರಂದು ವಾಪಸ್ ಬರುವ ಪ್ರಯಾಣಿಕರಿಗೂ ವ್ಯವಸ್ಥೆಇದೆ. ರಾಜ್ಯ ಹಾಗೂ ಅಂತಾರಾಜ್ಯದಿಂದಲೂ ಕೆಎಸ್​​ಆರ್​​ಟಿಸಿ ಬಸ್​ಗಳು ಲಭ್ಯ ಇವೆ ಎಂದು KSRTC ತಿಳಿಸಿದೆ.

ಇದನ್ನೂ ಓದಿ:  ಕ್ರಿಸ್ಮಸ್​​, ಹೊಸ ವರ್ಷದ ಹಿನ್ನೆಲೆ ಈ ಮಾರ್ಗಗಳಲ್ಲಿ ವಿಶೇಷ ರೈಲು

ಕೆಂಪೇಗೌಡ ಬಸ್‌ ನಿಲ್ದಾಣ (ಮೆಜೆಸ್ಟಿಕ್​​)ದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್​​ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ. ಮೈಸೂರು ರಸ್ತೆ ಬಸ್ ನಿಲ್ದಾಣ (ಸ್ಯಾಟಲೈಟ್​)ದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಯ ಬಸ್​​ಗಳು ತೆರಳಲಿವೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುವುದು, ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ

ದರ್ಶನ್ ಅವರು ಜೈಲಿನಲ್ಲಿ ಇರುವಾಗಲೇ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಮೊದಲ ದಿನ ಮೊದಲ ಶೋನ ದರ್ಶನ್ ಪತ್ನಿ ವಿಜಯಲಕ್​ಷ್ಮೀ ಹಾಗೂ ಮಗ ವಿನೀಶ್ ವೀಕ್ಷಣೆ ಮಾಡಿದ್ದರು. ಸಿನಿಮಾ ರಿಲೀಸ್ ಆದ ಒಂದು ವಾರದ ಬಳಿಕ ಮೀನಾ ತೂಗುದೀಪ್ ಅವರು ಸಿನಿಮಾ ನೋಡಿದ್ದಾರೆ. ಮೈಸೂರಿನ ಡಿಆರ್​ಸಿ ಚಿತ್ರಮಂದಿರದಲ್ಲಿ ‘ಡೆವಿಲ್’ ವೀಕ್ಷಿಸಿದರು. ಅಭಿಮಾನಿಗಳು, ಸ್ನೇಹಿತರ ಜೊತೆ ಸಿನಿಮಾ ನೋಡಿದ್ದು ವಿಶೇಷ. ಸಿನಿಮಾ ನೋಡಿದ ಬಳಿಕ ಅವರು ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಎಕ್ಸ್​ನಲ್ಲಿ ಮೋದಿಗೆ ಇಲ್ಲ ಸರಿಸಾಟಿ; ಒಂದು ತಿಂಗಳ ಅತಿ ಮೆಚ್ಚಿನ 10 ಟ್ವೀಟ್​ಗಳಲ್ಲಿ ಮೋದಿಯದ್ದೇ 8 – Kannada News | Narendra Modi’s 8 posts among the top 10 most liked tweets in last month

ನವದೆಹಲಿ, ಡಿಸೆಂಬರ್ 19: ಎಕ್ಸ್ ಸದ್ಯ ವಿಶ್ವದ ಅತಿ ಜನಪ್ರಿಯ ಮತ್ತು ಅತಿ ಹೆಚ್ಚು ಬಳಕೆಯ ಕಿರು ಸಾಮಾಜಿಕ ಮಾಧ್ಯಮ ಎನಿಸಿದೆ. ಬಹಳ ಸುದ್ದಿಗಳು ಈ ಪ್ಲಾಟ್​ಫಾರ್ಮ್​ನಲ್ಲೇ ಸ್ಫೋಟಗೊಳ್ಳುತ್ತವೆ. ವಿಶ್ವದ ಬಹುತೇಕ ಸೆಲಬ್ರಿಟಿಗಳು ಎಕ್ಸ್​ನಲ್ಲಿ ಉಪಸ್ಥಿತಿ ಹೊಂದಿದ್ದಾರೆ. ಎಕ್ಸ್​ನಲ್ಲಿ ಅತಿ ಹೆಚ್ಚು ಫಾಲೋಯರ್ಸ್ ಹೊಂದಿರುವ ರಾಜಕಾರಣಿಗಳಲ್ಲಿ ನರೇಂದ್ರ ಮೋದಿಯೂ (Narendra Modi) ಒಬ್ಬರು. ಇವರು ಹಾಕುವ ಪೋಸ್ಟ್​ಗಳಿಗೆ ಸಿಗುವ ಲೈಕ್​ಗಳೇ ಇವರ ಜನಪ್ರಿಯತೆಗೆ ಅಳತೆಗೋಲೆನಿಸುತ್ತವೆ.

ಕಳೆದ ಒಂದು ತಿಂಗಳಲ್ಲಿ ಎಕ್ಸ್​ನಲ್ಲಿ ಅತಿಹೆಚ್ಚು ಲೈಕ್ ಪಡೆದ ಪೋಸ್ಟ್​ಗಳಲ್ಲಿ ಹೆಚ್ಚಿನವು ನರೇಂದ್ರ ಮೋದಿ ಅವರದ್ದೇ ಆಗಿದೆ. ಒಂದು ತಿಂಗಳಲ್ಲಿ ಅತಿಹೆಚ್ಚು ಲೈಕ್ಸ್ ಪಡೆದ ಭಾರತೀಯರ ಟಾಪ್-10 ಪೋಸ್​ಟ್​ಗಳಲ್ಲಿ ನರೇಂದ್ರ ಮೋದಿ ಅವರ 8 ಪೋಸ್ಟ್​ಗಳಿವೆ. ಪ್ರಧಾನಿಗಳ ಜನಪ್ರಿಯತೆಗೆ ಇದು ದ್ಯೋತಕ ಎನಿಸಿದೆ.

ಇದನ್ನೂ ಓದಿ: ಹುರೂನ್ ವೆಲ್ತ್ ರಿಪೋರ್ಟ್: ಮುಂಬೈಯನ್ನು ಹಿಂದಿಕ್ಕಿದ ಬೆಂಗಳೂರು ನಂ. 1

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ್ದನ್ನು ಡಿಸೆಂಬರ್ 4ರಂದು ಪ್ರಧಾನಿಗಳು ಎಕ್ಸ್​ನಲ್ಲಿ ಹಂಚಿಕೊಂಡಿದ್ದರ. ಆ ಪೋಸ್ಟ್​ಗೆ 2.31 ಲಕ್ಷ ಜನರು ಲೈಕ್ ಮಾಡಿದ್ದಾರೆ. 67 ಲಕ್ಷ ಜನರು ಗಮನಿಸಿದ್ದಾರೆ. ಐದು ಸಾವಿರಕ್ಕೂ ಅಧಿಕ ಮಂದಿ ಕಾಮೆಂಟ್ ಮಾಡಿದ್ದಾರೆ. ಆ ಮಟ್ಟದ ಸ್ಪಂದನೆ ಮೋದಿ ಅವರ ಆ ಪೋಸ್ಟ್​ಗೆ ಸಿಕ್ಕಿದೆ.

ಪುಟಿನ್ ಭೇಟಿ ಕುರಿತ ನರೇಂದ್ರ ಮೋದಿ ಅವರ ಮತ್ತಷ್ಟು ಎಕ್ಸ್ ಪೋಸ್ಟ್​ಗಳಿಗೆ ಒಂದು ಲಕ್ಷಕ್ಕೂ ಅಧಿಕ ಲೈಕ್​ಗಳು ಸಿಕ್ಕಿವೆ. ಭಾರತ ಮತ್ತು ರಷ್ಯಾ ಸ್ನೇಹದ ಮಹತ್ವದ ಬಗ್ಗೆ ತಿಳಿಸಿದ ಒಂದು ಪೋಸ್ಟ್​ಗೆ ಎಂಟು ಸಾವಿರಕ್ಕೂ ಅಧಿಕ ಪ್ರತಿಕ್ರಿಯೆಗಳು ಬಂದಿವೆ.

ಕಳೆದ ಒಂದು ತಿಂಗಳಲ್ಲಿ ಅತಿ ಹೆಚ್ಚು ಲೈಕ್ ಪಡೆದ ಪ್ರಧಾನಿಗಳ ಪೋಸ್ಟ್​ಗಳಲ್ಲಿ 19 ವರ್ಷದ ವೇದಮೂರ್ತಿ ದೇವವ್ರತ್ ಮಹೇಶ್ ರೇಖೆ, ರಾಮಜನ್ಮಭೂಮಿ ಮಂದಿರದ ಧರ್ಮ ಧ್ವಜಾರೋಹಣ್ ಉತ್ಸವ, ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್ ವಿವಾಹ ಶುಭಾಶಯ, ಅಂಧ ಮಹಿಳಾ ಕ್ರಿಕೆಟ್ ತಂಡದ ವರ್ಲ್ಡ್ ಕಪ್ ಗೆಲುವಿನ ಕುರಿತ ಬರೆದ ಪೋಸ್ಟ್​ಗಳು ಒಳಗೊಂಡಿವೆ.

ಇದನ್ನೂ ಓದಿ: ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ

ಡಿಡಿ ನ್ಯೂಸ್​ನಲ್ಲಿ ಈ ಕುರಿತ ಒಂದು ಪೋಸ್ಟ್

ಎಕ್ಸ್​ನಲ್ಲಿ ಇತ್ತೀಚೆಗಷ್ಟೇ ಈ ಹೊಸ ಫೀಚರ್ ಪರಿಚಯಿಸಲಾಗಿದೆ. ಆದರೆ, ಪ್ರೀಮಿಯಮ್ ಸಬ್​ಸ್ಕ್ರಿಪ್ಷನ್ ಪಡೆದಿರುವವರಿಗೆ ಸದ್ಯ ಈ ಫೀಚರ್ ಲಭ್ಯ ಇದ್ದಂತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ, ಬಂಧನ ಭೀತಿ – Kannada News | Biklu Shiva Murder Case: High Court Rejects Anticipatory Bail for Byrati Basavaraj, Arrest Fear Looms

ಬೆಂಗಳೂರು, ಡಿಸೆಂಬರ್ 19: ರೌಡಿ ಶೀಟರ್ ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕ ಭೈರತಿ ಬಸವರಾಜುಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಭೈರತಿ ಬಸವರಾಜು (Byrati Basavaraj) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠ ಈ ಆದೇಶ ನೀಡಿದೆ. ಆದರೆ, ಪ್ರಕರಣಕ್ಕೆ ಕೋಕಾ (KCOCA) ಕಾಯ್ದೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಭೈರತಿ ಬಸವರಾಜು ಅವರು ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲಿಯವರೆಗೂ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಭೈರತಿ ಬಸವರಾಜು ಬಂಧನ ಭೀತಿಯನ್ನು ಎದುರಿಸುವಂತಾಗಿದೆ.

ಇನ್ನೊಂದೆಡೆ, ಕೋಕಾ ಕಾಯ್ದೆ ರದ್ದಾಗಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಇತರ ಆರೋಪಿಗಳಿಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ, ಇನ್ನೂ ಆರೋಪಪಟ್ಟಿ ಸಲ್ಲಿಕೆಯಾಗದಿರುವ ಕಾರಣ ಮುಂದಿನ ದಿನಗಳಲ್ಲಿ ಜಾಮೀನಿಗೆ ಅವಕಾಶವಿದೆ ಎನ್ನಲಾಗಿದೆ.

ಬಿಕ್ಲು ಶಿವ ಕೊಲೆ ಪ್ರಕರಣದ ಹಿನ್ನೆಲೆ

ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವನನ್ನು (40) 2025 ರ ಜುಲೈ 15 ರಂದು ಬೆಂಗಳೂರಿನಲ್ಲಿ ಕೊಚ್ಚಿ ಕೊಲ್ಲಲಾಗಿತ್ತು. ಹಲಸೂರು ಪ್ರದೇಶದ ಭಾರತಿನಗರದ ಮೀನಿ ಅವೆನ್ಯೂ ರಸ್ತೆಯಲ್ಲಿರುವ ಶಿವ ಮನೆಯ ಬಳಿ 12 ಜನರ ಗುಂಪೊಂದು ಮಾರಕ ಆಯುಧಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು.

ಪ್ರಮುಖ ಆರೋಪಿ (A1) ಮತ್ತು ಶಂಕಿತ ಮಾಸ್ಟರ್ ಮೈಂಡ್ ಜಗದೀಶ್ ಅಲಿಯಾಸ್ ಜಗ್ಗ ಕೊಲೆಯಾದ ತಕ್ಷಣ ದುಬೈ ಮತ್ತು ಇತರ ದೇಶಗಳಿಗೆ ಪರಾರಿಯಾಗಿದ್ದ. ಬ್ಲೂ ಕಾರ್ನರ್ ನೋಟಿಸ್ ಜಾರಿಯಾದ ನಂತರ 2025 ರ ಆಗಸ್ಟ್ 26 ರಂದು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲ್ಪಟ್ಟಿದ್ದ.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್: ಹತ್ಯೆಗೆ ಪ್ರಮುಖ ಕಾರಣ ಪತ್ತೆ ಮಾಡಿದ ಪೊಲೀಸರು! ಮತ್ತಷ್ಟು ರೋಚಕ ಅಂಶ ಬಯಲು

ಶಿವನ ತಾಯಿಯ ದೂರಿನ ಆಧಾರದ ಮೇಲೆ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವರ ಭೈರತಿ ಬಸವರಾಜುರನ್ನು 5 ನೇ ಆರೋಪಿ ಎಂದು ಹೆಸರಿಸಲಾಗಿದೆ .

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಕ್ರಮ BPL ಕಾರ್ಡ್​​ದಾರರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: 3 ತಿಂಗಳಲ್ಲಿ ರದ್ದಾದ ಪಡಿತರ ಚೀಟಿಗಳೆಷ್ಟು? – Kannada News | Karnataka Government Cancels 15,000 Fake BPL Ration Cards

ಬೆಂಗಳೂರು, ಡಿಸೆಂಬರ್​​ 19: ಅಕ್ರಮವಾಗಿ ಬಿಪಿಎಲ್​​ ಕಾರ್ಡ್​​ ಹೊಂದಿರುವವರಿಗೆ ಆಹಾರ ಇಲಾಖೆ ಭರ್ಜರಿ ಶಾಕ್​ ಕೊಟ್ಟಿದ್ದು, ಕಳೆದ 3 ತಿಂಗಳ ಅವಧಿಯಲ್ಲಿ ಬರೋಬ್ಬರಿ 15,056 ಬಿಪಿಎಲ್ ಕಾರ್ಡ್​​ಗಳು ರಾಜ್ಯದಲ್ಲಿ ರದ್ದಾಗಿವೆ. 5,632 ಬಿಪಿಎಲ್ ಕಾರ್ಡ್​​ಗಳ ವಿಚಾರಣೆ ಕಾಯ್ದಿರಿಸಿ ತಾತ್ಕಾಲಿಕ ಅಮಾನತು ಮಾಡಲಾಗಿದೆ. ಬರೋಬ್ಬರಿ 3.90 ಲಕ್ಷ ಕಾರ್ಡ್​​ಗಳು ಎಪಿಎಲ್ ಆಗಿ ಬದಲಾಗಿವೆ. ಆ ಮೂಲಕ ಒಟ್ಟು 4.10 ಲಕ್ಷ ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರ ಬಿಸಿ ಮುಟ್ಟಿಸಿದೆ.

4 ಲಕ್ಷ ಅಕ್ರಮ ಫಲಾನುಭವಿಗಳಿಗೆ ಶಾಕ್

2025ರ ಸೆಪ್ಟೆಂಬರ್ 03ರಿಂದ ಡಿಸೆಂಬರ್​​ 14ರ ವರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಡೆಸಿರುವ ಕಾರ್ಯಾಚಣೆಯ ಮಾಹಿತಿ ಟಿವಿ9ಗೆ ಲಭ್ಯವಾಗಿದ್ದು, ಆ ಪ್ರಕಾರ ಸುಮಾರು 14 ಲಕ್ಷ ಅಕ್ರಮ ಫಲಾನುಭವಿಗಳಿಗೆ ಶಾಕ್ ನೀಡಲಾಗಿದೆ.

  • ಸದ್ಯ ರಾಜ್ಯದಲ್ಲಿರುವ ಒಟ್ಟು ರೇಷನ್ ಕಾರ್ಡ್​​ಗಳ ಸಂಖ್ಯೆ- 1,53,65,889
  • ಸದ್ಯ ಸಕ್ರಿಯವಾಗಿರುವ ಬಿಪಿಎಲ್ ಕಾರ್ಡ್​​ಗಳ ಸಂಖ್ಯೆ- 1,13,56,089
  • ಸದ್ಯ ಚಾಲ್ತಿಯಲ್ಲಿರುವ ಅಂತ್ಯೋದಯ ಕಾರ್ಡ್​​ಗಳ ಸಂಖ್ಯೆ- 42,94,924

ಇದನ್ನೂ ಓದಿ: ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಹಚ್ಚೋದು ಹೇಗೆ, ವಿಧಾನ ಏನು? ಇಲ್ಲಿದೆ ನೋಡಿ

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ವಿಧಾನ ಸಭೆಯಲ್ಲಿ ನಿನ್ನೆಯಷ್ಟೇ ತಿಳಿಸಿದ್ದರು. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ ಪರಿಷ್ಕರಣೆ ಕುರಿತು ಚಿಂತನೆ ನಡೆದಿದೆ ಎಂದಿದ್ದರು.

ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಇಲ್ಲಿನ ಜನಸಂಖ್ಯೆಗೆ ಹೊಲಿಸಿದರೆ ಶೇ.73ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್​ ಪಡೆದಿವೆ. ಆದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50ರಷ್ಟು ಮಾತ್ರ ಇರಬೇಕಿತ್ತು ಎಂದಿದ್ದರು.

ವರದಿ: ಲಕ್ಷ್ಮೀನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:53 pm, Fri, 19 December 25

Source link

Yearly Horoscope 2026: 2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ – Kannada News | Gemini 2026 Yearly Horoscope: Astrological Predictions by Dr Basavaraj Guruji

ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರ ವರ್ಷ ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷವಾಗಲಿದೆ. ಈ ವರ್ಷ ಗುರು ಒಂದರಿಂದ ಎರಡನೇ ಸ್ಥಾನಕ್ಕೆ ಬರಲಿದ್ದು, ಜೂನ್ 2ರ ನಂತರ ಕರ್ಕಾಟಕ ರಾಶಿಗೆ (ಉಚ್ಚ ಗುರು) ಬರುವುದು ಶುಭಕರವಾಗಿದೆ. ಇದು ದ್ವಿತೀಯ ಸ್ಥಾನದಲ್ಲಿ ಧನ ಸ್ಥಾನ, ಕುಟುಂಬ ಸ್ಥಾನ ಮತ್ತು ವಾಕ್ ಸ್ಥಾನವನ್ನು ಬಲಪಡಿಸಿ, ಆರ್ಥಿಕ ಪ್ರಗತಿ, ಸಂಪತ್ತಿನ ಹೆಚ್ಚಳ ಮತ್ತು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಳಕ್ಕೆ ಕಾರಣವಾಗುತ್ತದೆ. ಶತ್ರುಗಳು ಮಿತ್ರರಾಗುತ್ತಾರೆ ಮತ್ತು ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುತ್ತವೆ.

ಶನಿ ಹತ್ತನೇ ಅಂದರೆ ಕರ್ಮ ಸ್ಥಾನದಲ್ಲಿ ಇರುವುದರಿಂದ, ಉದ್ಯೋಗದಲ್ಲಿ ಪ್ರಾಮಾಣಿಕತೆ, ತಾಳ್ಮೆ ಮತ್ತು ಸಕಾಲಿಕತೆ ಅತಿ ಮುಖ್ಯ. ಸುಳ್ಳು ಹೇಳುವುದನ್ನು ಮತ್ತು ಅನಗತ್ಯ ಸ್ಪರ್ಧೆಯನ್ನು ತಪ್ಪಿಸಬೇಕು. ಆದಾಯ ಎಂಟು, ವ್ಯಯ 11 ಇರುವುದರಿಂದ ಖರ್ಚುಗಳು ಹೆಚ್ಚಿದ್ದರೂ, ಆರ್ಥಿಕವಾಗಿ ಸಬಲರಾಗುವಿರಿ. ರಾಹು ಒಂಬತ್ತರಿಂದ ಎಂಟನೇ ಸ್ಥಾನಕ್ಕೆ ಸಂಚಾರ ಮಾಡುವುದರಿಂದ ವಾಹನ ಮತ್ತು ಆಕಸ್ಮಿಕ ಅವಘಡಗಳ ಬಗ್ಗೆ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಮತ್ತು ರಾಜಕೀಯ ವ್ಯಕ್ತಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ. ಈ ವರ್ಷದಲ್ಲಿ ಅಕ್ರಮ ಸಂಪಾದನೆ ಮತ್ತು ಉಡುಗೊರೆಗಳನ್ನು ಸ್ವೀಕರಿಸುವುದನ್ನು ತಪ್ಪಿಸಬೇಕು. ಶನಿ ದರ್ಶನ, ಕಾಲಭೈರವ ಸ್ತೋತ್ರ ಮತ್ತು ಕಾರ್ಮಿಕರಿಗೆ ದಾನ ಮಾಡುವುದು ಶುಭ ಫಲಗಳನ್ನು ನೀಡುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮಧ್ಯಪ್ರದೇಶ: ರಕ್ತ ನಿಧಿಯಿಂದ ರಕ್ತ ಪಡೆದಿದ್ದ ನಾಲ್ವರು ಮಕ್ಕಳಿಗೆ ಎಚ್​ಐವಿ ಸೋಂಕು – Kannada News | MP Hospital HIV Scandal: 4 Thalassemia Children Infected After Blood Transfusion

ಭೋಪಾಲ್, ಡಿಸೆಂಬರ್ 19: ರಕ್ತ ನಿಧಿಯಿಂದ ರಕ್ತ ಪಡೆದಿದ್ದ ನಾಲ್ವರು ಮಕ್ಕಳಿಗೆ ಎಚ್​ಐವಿ(HIV) ಸೋಂಕು ತಗುಲಿರುವ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಿಂದ ರಕ್ತ ವರ್ಗಾವಣೆ ಬಳಿಕ ಮಕ್ಕಳಲ್ಲಿ ಸೋಂಕು ದೃಢ ಪಟ್ಟಿದ್ದು, ರಕ್ತ ನಿಧಿಯ ಉಸ್ತುವಾರಿ ವೈದ್ಯರು ಹಾಗೂ ಪ್ರಯೋಗಾಲಯದ ಇಬ್ಬರು ಸಿಬ್ಬಂದಿ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಡಿ.16ರಂದು ಮಕ್ಕಳಲ್ಲಿ ಹೆಚ್​ಐವಿ ಸೋಂಕು ಇರೋದು ಬೆಳಕಿಗೆ ಬಂದಿತ್ತು.

ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ಸೋಂಕು ದೃಢಪಟ್ಟಿತ್ತು.ಮಕ್ಕಳು ಥಲಸ್ಸೇಮಿಯಾ ಎಂಬ ಅನುವಂಶಿಕ ರಕ್ತದ ಕಾಯಿಲೆಯಿಂದ ಬಳಲುತ್ತಿದ್ದರ, ರಕ್ತ ಪಡೆದ ಬಳಿಕ ಮಕ್ಕಳಲ್ಲಿ ಹೆಚ್​ಐವಿ ಸೋಂಕು ದೃಢಪಟ್ಟಿತ್ತು. ವೈದ್ಯರನ್ನು ಅಮಾನತುಗೊಳಿಸಿ ಮಧ್ಯಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಸೋಂಕಿನ ಮೂಲವನ್ನು ಇನ್ನೂ ಗುರುತಿಸಲಾಗಿಲ್ಲ, ವಿಚಾರಣೆಯು ಆಸ್ಪತ್ರೆಯ ಕಾರ್ಯವೈಖರಿ ಮತ್ತು ರಕ್ತ ನಿಧಿಯ ಕಾರ್ಯವಿಧಾನಗಳ ಮೇಲೆ ಕೇಂದ್ರೀಕರಿಸಿದೆ. ಥಲಸ್ಸೇಮಿಯಾ ಇರುವ ಮಕ್ಕಳಿಗೆ ಪದೇ ಪದೇ ರಕ್ತ ವರ್ಗಾವಣೆ ಅಗತ್ಯವಿರುತ್ತದೆ ಎಂದು ಸಿಎಂಎಚ್​ಒ ಡಾ. ಮನೋಜ್ ಶುಕ್ಲಾ ಹೇಳಿದ್ದಾರೆ.

ಮತ್ತಷ್ಟು ಓದಿ: HIV AIDS: ಎಚ್‌ಐವಿ ಏಡ್ಸ್ ಕುರಿತು ಈಗಲೂ ತಿಳಿದುಕೊಳ್ಳಬೇಕಾದ ಅಂಶಗಳಿವು

ಬ್ಯಾಂಕ್ ನೀಡುವ ರಕ್ತವನ್ನು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (NACO) ಮಾರ್ಗಸೂಚಿಗಳಿಗೆ ಅನುಗುಣವಾಗಿ ಪರೀಕ್ಷಿಸಲಾಗುತ್ತದೆ ಮತ್ತು ಯಾವುದೇ ಸೋಂಕಿತ ಮಾದರಿಗಳಿದ್ದರೆ ಅವುಗಳನ್ನು ನಾಶಪಡಿಸಲಾಗುತ್ತದೆ ಎಂದು ಡಾ. ಶುಕ್ಲಾ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಆರೋಗ್ಯ ಇಲಾಖೆಗಳ ಜಂಟಿ ತನಿಖಾ ತಂಡವು ಆಸ್ಪತ್ರೆಗೆ ತಲುಪಿ, ಎಚ್‌ಐವಿ ಸೋಂಕಿತ ರಕ್ತವನ್ನು ಯಾವ ಸಂದರ್ಭಗಳಲ್ಲಿ ನೀಡಲಾಯಿತು ಎಂಬುದನ್ನು ಪರಿಶೀಲಿಸಿದೆ.

ಡಿಸೆಂಬರ್ 16 ರಂದು ಮಧ್ಯಪ್ರದೇಶದ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಚಿಸಲ್ಪಟ್ಟ ಆರು ಸದಸ್ಯರ ಸಮಿತಿಯು ತನಿಖೆ ನಡೆಸುತ್ತಿದೆ. ಜಿಲ್ಲಾ ಆಸ್ಪತ್ರೆಯ ಮಾಜಿ ಸಿವಿಲ್ ಸರ್ಜನ್ ಡಾ. ಮನೋಜ್ ಶುಕ್ಲಾ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ, ಲಿಖಿತ ವಿವರಣೆಯನ್ನು ಸಲ್ಲಿಸುವಂತೆ ಸೂಚಿಸಲಾಯಿತು. ಅವರ ಪ್ರತಿಕ್ರಿಯೆ ತೃಪ್ತಿಕರವಾಗಿಲ್ಲದಿದ್ದರೆ ಕಠಿಣ ಇಲಾಖಾ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯ ಹೊರಗೆ ಅಕ್ರಮ ರಕ್ತ ಮಾರಾಟದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಗುರುವಾರ ಮೂವರನ್ನು ಬಂಧಿಸಲಾಗಿದೆ. ಆಸ್ಪತ್ರೆ ಆವರಣದ ಬಳಿ ರಕ್ತ ಮಾರಾಟ ಮಾಡಲಾಗುತ್ತಿದೆ ಎಂದು ಪದೇ ಪದೇ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಇವರಿಗೆ ಅಧ್ಯಕ್ಷರು ಯಾರು ಎಂಬುದೇ ಗೊತ್ತಿಲ್ಲ: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ – Kannada News | Basanagouda patil Yatnal Backs Siddaramaiah, Mocks BJP Leaders: Says They Don’t Even Know Who Their President Is

ಬೆಳಗಾವಿ, ಡಿಸೆಂಬರ್ 19: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತಿರುವಾಗ, ಪ್ರತಿಪಕ್ಷ ಬಿಜೆಪಿ ಅಧಿಕಾರ ಹಂಚಿಕೆ ಕಿತ್ತಾಟದ ಬಗ್ಗೆ ಪ್ರಸ್ತಾಪಿಸಿತು. ಈ ವೇಳೆ ಮಧ್ಯಪ್ರವೇಶಿಸಿದ ವಿಜಯಪುರ ನಗರ ಶಾಸಕ (ಬಿಜೆಪಿ ಉಚ್ಛಾಟಿತ ಶಾಸಕ) ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಮಾತನಾಡಿ ಬಿಜೆಪಿಗೆ ಟಾಂಗ್ ನೀಡಿದರು. ಉತ್ತರ ಕರ್ನಾಟಕದ ಬಗ್ಗೆ ಮಾತನಾಡುವುದನ್ನು ಬಿಟ್ಟು ಹೇಳಿದ್ದನ್ನೇ ಹೇಳಿಕೊಂಡು ಸಮಯ ಹಾಳು ಮಾಡುತ್ತಾರೆ. ಪಾಪ ಅವರು (ಸಿದ್ದರಾಮಯ್ಯ) ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೋ ಇಲ್ಲವೋ ಅದು ಅವರಿಗೆ ಬಿಟ್ಟ ವಿಚಾರ. ಬಿಜೆಪಿ ಅವರಿಗೆ ಅಧ್ಯಕ್ಷ ಯಾರು ಎಂಬುದೇ ಸ್ಪಷ್ಟತೆ ಇಲ್ಲ ಎಂದು ಯತ್ನಾಳ್ ವ್ಯಂಗ್ಯವಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಮಗಳು ತನ್ನ ಪ್ರೀತಿ ವಿಷ್ಯ ಹೇಳುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ತಂದೆ – Kannada News | Dad’s cute reaction to daughter telling him she has a boyfriend

ಪ್ರೀತಿ (love) ಅಂತ ಬಂದಾಗ ಹೆತ್ತವರ ಬಳಿ ಹೇಳಿದ್ರೆ ಏನು ಅಂದುಕೊಳ್ತಾರೆ, ಬೇಡ ಅಂದ್ರೆ ಏನ್ ಮಾಡೋದು ಹೀಗೆ ನಾನಾ ರೀತಿಯ ಪ್ರಶ್ನೆ ಕಾಡುತ್ತದೆ. ಆದರೆ ಕೆಲವರು ಧೈರ್ಯ ಮಾಡಿಕೊಂಡು ಪ್ರೀತಿ ವಿಷ್ಯ ತಂದೆ ತಾಯಿ ಮುಂದೇ ಹೇಳುವುದನ್ನು ನೋಡಬಹುದು. ಆದರೆ ಇಲ್ಲೊಬ್ಬಳು ಮಗಳು ತನ್ನ ತಂದೆ (father) ಮುಂದೆ ತನಗೆ ಬಾಯ್ ಫ್ರೆಂಡ್ ಇರುವುದಾಗಿ ಹೇಳಿದ್ದಾಳೆ. ಮಗಳ ಮಾತು ಕೇಳಿ ಜೋರಾಗಿ ನಕ್ಕು ಮಗಳ ಪ್ರೀತಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

driiiishtiiii) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಗಳು ತಂದೆಯ ಕೈ ಹಿಡಿದುಕೊಂಡು ತನ್ನ ಪ್ರೀತಿ ವಿಷ್ಯ ಹೇಳುತ್ತಿರುವುದನ್ನು ನೋಡಬಹುದು. ತಂದೆ ಕೈ ಹಿಡಿದುಕೊಂಡು ನನಗೆ ಬಾಯ್‌ಫ್ರೆಂಡ್‌ ಇದ್ದಾನೆ ಪಪ್ಪ ಎಂದು ಹೇಳುತ್ತಾಳೆ. ಆದರೆ ಈ ಯುವತಿಯ ಧ್ವನಿಯಲ್ಲಿ ಭಯ ಹಾಗೂ ದುಃಖ ಎರಡು ಎದ್ದು ಕಾಣುತ್ತಿದೆ. ಆಗ ತಂದೆ ಇರಲಿ ಬಿಡು, ಅದರಲ್ಲೇನಿದೆ, ಎಲ್ಲರೂ ಪ್ರೀತಿ ಮಾಡ್ತಾರೆ, ನಾನು ಮಾಡಿದ್ದೆ, ನಿಮ್ಮಮ್ಮನೂ ಮಾಡಿದ್ರು ಎಂದು ನಗುತ್ತಾ ಹೇಳುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಆ ಬಳಿಕ ಮಗಳು ಹನ್ನೊಂದು ವರ್ಷದಿಂದ ರಿಲೇಷನ್‌ಶಿಪ್‌ನಲ್ಲಿ ಇದ್ದೇನೆ ಎಂದು ಹೇಳುತ್ತಿದ್ದಂತೆ ತಂದೆ ನಗುತ್ತಲೇ ಎಲ್ಲವನ್ನೂ ಕೇಳಿಸಿಕೊಂಡಿದ್ದು, ಹುಡುಗನ ಫೋಟೊ ತೋರಿಸು ಎಂದು ಹೇಳಿ ತಂದೆ ನಗುತ್ತಲೇ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:ಹೆಣ್ಣು ಮಗು ಹುಟ್ಟಿತ್ತೆಂದು ಖುಷಿಯಿಂದ ಆಸ್ಪತ್ರೆಯಲ್ಲೇ ಕುಣಿದಾಡಿದ ತಂದೆ

ಈ ವಿಡಿಯೋ 1.9 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಮುದ್ದಾದ ಕ್ಷಣ, ಅದ್ಭುತ ಸ್ಟೋರಿ ಎಂದಿದ್ದಾರೆ. ಇನ್ನೊಬ್ಬರು, ಬೆಂಬಲ ನೀಡುವ ಹಾಗೂ ಮುದ್ದಾದ ಕುಟುಂಬ ಎಂದು ಹೇಳಿದ್ದಾರೆ. ಮತ್ತೊಬ್ಬರು, ಭಾವನಾತ್ಮಕ ಕ್ಷಣ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link