All posts by nagaraj11081993

ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ; ನಿಮ್ಮ ಜಿಲ್ಲೆಗೆ ಸಿಕ್ಕಿದ್ದೇನು? ಇಲ್ಲಿದೆ ನೋಡಿ

ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ; ನಿಮ್ಮ ಜಿಲ್ಲೆಗೆ ಸಿಕ್ಕಿದ್ದೇನು? ಇಲ್ಲಿದೆ ನೋಡಿ

ಬೆಂಗಳೂರು ಮಾ.6: ರಾಜ್ಯದ ಮುಖ್ಯಮಂತ್ರಿ ಅವರು ಇಂದು (ಮಾ.6) ದಾಖಲೆಯ 17ನೇ ಬಜೆಟ್​​​ ಅನ್ನು ಮಂಡಿಸಿದ್ದಾರೆ. ಹಲವು ಕ್ಷೇತ್ರಗಳಿಗೆ ಭರಪೂರ ಅನುದಾನವನ್ನು ನೀಡಿದ್ದು, ಇದೀಗ ಪೊಲೀಸ್​​​​ ಇಲಾಖೆಗೂ ಹೆಚ್ಚಿನ ಅನುದಾನು ನೀಡಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರವು 12 ಹೊಸ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಿದೆ. ಇದರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸ್ ಠಾಣೆಗಳು ಸೇರಿವೆ.

ಹೊಸ ಠಾಣೆಗಳಿಗೆ ಸುಸಜ್ಜಿತ ಕಟ್ಟಡ ಮತ್ತು ಆಧುನಿಕ ಉಪಕರಣಗಳನ್ನು ಒದಗಿಸಲು ಅನುದಾನ ಮೀಸಲಿಡಲಾಗಿದೆ. 12 ಪೊಲೀಸ್​​​ ಠಾಣೆಗಳಿಗೆ ಅಸ್ತು ಎಂದು ಹೇಳಿದ್ದಾರೆ. ಹೊಸ ಠಾಣೆಗಳ ಕಾರ್ಯಾಚರಣೆಗಾಗಿ ಅಗತ್ಯವಿರುವ ಪೊಲೀಸ್ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲಾಗುವುದು. ದೊಡ್ಡಬಳ್ಳಾಪುರ, ಹಿರಿಯೂರು ಮತ್ತು ಗುಂಡ್ಲುಪೇಟೆಯಂತಹ ಬೆಳೆಯುತ್ತಿರುವ ನಗರಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರಿ ಠಾಣೆಗಳಿಗೆ ಒತ್ತು ನೀಡಲಾಗಿದೆ.

ಜಿಲ್ಲೆ ಪೊಲೀಸ್ ಠಾಣೆಯ ಹೆಸರು ಮಾದರಿ
ದಕ್ಷಿಣ ಕನ್ನಡ ಮಾಣಿ ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ದಕ್ಷಿಣ ಕನ್ನಡ ಸಜಿಪನಡು ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಸಂಚಾರಿ ಠಾಣೆ ಸಂಚಾರ (Traffic)
ಬೆಳಗಾವಿ ಯರಗಟ್ಟಿ ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ಯಾದಗಿರಿ ಕಕ್ಕೇರಾ ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ಚಿತ್ರದುರ್ಗ ಹಿರಿಯೂರು ಸಂಚಾರ ಪೊಲೀಸ್ ಠಾಣೆ ಸಂಚಾರ (Traffic)
ದಾವಣಗೆರೆ ಆನಗೋಡು ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ಹಾವೇರಿ ತಿಳುವಳ್ಳಿ ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ಮೈಸೂರು ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ ಕಾನೂನು & ಸುವ್ಯವಸ್ಥೆ
ವಿಜಯಪುರ ಮುದ್ದೇಬಿಹಾಳ ಗ್ರಾಮಾಂತರ ಠಾಣೆ ಕಾನೂನು & ಸುವ್ಯವಸ್ಥೆ
ಕೋಲಾರ ನರಸಾಪುರ ಕೈಗಾರಿಕಾ ವಲಯ ಠಾಣೆ ಕೈಗಾರಿಕಾ ಸುರಕ್ಷತೆ
ಚಾಮರಾಜನಗರ ಗುಂಡ್ಲುಪೇಟೆ ಸಂಚಾರ ಠಾಣೆ ಸಂಚಾರ (Traffic)

ಇನ್ನು ಇದರ ಜತೆಗೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಶ್ರೇಣಿಯ ಒಟ್ಟು 8,000 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಈ ವರ್ಷ ಭರ್ತಿ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ‘ಖಾಯಂ ಪೊಲೀಸ್ ಮತ್ತು ಪೊಲೀಸ್ ಪೂರಕ ಸೇವೆಗಳ ನೇಮಕಾತಿ ಮಂಡಳಿ’ಯನ್ನು ಸ್ಥಾಪಿಸಲಾಗುವುದು. ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಸೌಕರ್ಯ ಒದಗಿಸಲು 250 ಕೋಟಿ ರೂ. ವೆಚ್ಚದಲ್ಲಿ ಹೊಸ ವಸತಿಗೃಹಗಳ ನಿರ್ಮಾಣ. ಪೊಲೀಸ್ ಇಲಾಖೆಯ ಸಂವಹನ ಮತ್ತು ಫೋರೆನ್ಸಿಕ್ ಸಾಮರ್ಥ್ಯ ಹೆಚ್ಚಿಸಲು 75 ಕೋಟಿ ರೂ. ವೆಚ್ಚದಲ್ಲಿ ಹೊಸ ವಾಹನಗಳು ಮತ್ತು ಆಧುನಿಕ ಉಪಕರಣಗಳ ಖರೀದಿ ಮಾಡಲಾಗುವುದು. ಬೆಳಗಾವಿ ಸುವರ್ಣ ಸೌಧದ ಅಧಿವೇಶನ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ 1,000 ಸಿಬ್ಬಂದಿಗಳ ವಾಸ್ತವ್ಯಕ್ಕಾಗಿ 20 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಖಾಯಂ ಬ್ಯಾರಕ್‌ಗಳ ನಿರ್ಮಾಣ ಕೂಡ ಮಾಡಲಾಗುವುದು.

ಇದನ್ನೂ ಓದಿ: ಬಜೆಟ್​​​ನಲ್ಲಿ ಅಲ್ಪಸಂಖ್ಯಾತರಿಗೆ ಭರಪೂರ ಕೊಡುಗೆ ನೀಡಿದ ಸಿದ್ದರಾಮಯ್ಯ: ಮುಸ್ಲಿಂ ಮಹಿಳೆಯರಿಗೆ ಭರ್ಜರಿ ಗಿಫ್ಟ್

ಅಗ್ನಿಶಾಮಕ ದಳದ ಸಿಬ್ಬಂದಿಗಳ ಆಹಾರ ಭತ್ಯೆಯನ್ನು 150 ರೂ.ನಿಂದ 300 ರೂ.ಗೆ ದ್ವಿಗುಣಗೊಳಿಸಲಾಗಿದೆ. ಕಾರಾಗೃಹಗಳಲ್ಲಿ ಮೊಬೈಲ್ ಬಳಕೆ ಮತ್ತು ಮಾದಕ ದ್ರವ್ಯ ತಡೆಗಟ್ಟಲು 20 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ತಪಾಸಣಾ ವ್ಯವಸ್ಥೆ ಮತ್ತು ಬಾಡಿ ವೋರ್ನ್ ಕ್ಯಾಮೆರಾಗಳ ಅಳವಡಿಕೆ. ಸೈಬರ್ ಅಪರಾಧಗಳನ್ನು ತಡೆಗಟ್ಟಲು ಹೊಸ ಸಾಫ್ಟ್‌ವೇರ್ ಮತ್ತು ತರಬೇತಿಗಾಗಿ ವಿಶೇಷ ಅನುದಾನ ಕೂಡ ನೀಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ

ಬೆಂಗಳೂರು, ಮಾರ್ಚ್ 6: ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸುಧಾರಿಸಲು ಮತ್ತು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದೆ. ಕಚೇರಿಗಳಲ್ಲಿ 72 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಜಿಟಲ್ ಇ ಸ್ಟಾಂಪಿಂಗ್ ಘಟಕಗಳನ್ನು ಸ್ಥಾಪಿಸಲಾಗುವುದು. 50 ಲಕ್ಷಕ್ಕೂ ಹೆಚ್ಚು ಇರುವ ಟಿಪ್ಪಣಿಗಳು ಮತ್ತು ಒಂದು ಕೋಟಿಗೂ ಹೆಚ್ಚು ಅಟ್ಲಾಸ್‌ಗಳನ್ನು ಜಿಐಎಸ್ ತಂತ್ರಾಂಶದ ಮೂಲಕ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾವೇರಿ ತಂತ್ರಾಂಶದಲ್ಲಿನ ತೊಡಕುಗಳನ್ನು ನಿವಾರಿಸಿ, ನೊಂದಣಿ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸಲು 65 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು. ಇದು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮೂಲಕ ಕಾಗದರಹಿತ ನೊಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ. ಉಪನೊಂದಣಾಧಿಕಾರಿಗಳ ಕಚೇರಿಗಳಿಗೆ ಜನರ ಓಡಾಟವನ್ನು ಕಡಿಮೆ ಮಾಡಲು ‘ನೊಂದಣಿ ಕಾಯ್ದೆ 2025’ಕ್ಕೆ ತಿದ್ದುಪಡಿ ತರಲಾಗಿದ್ದು, ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ರಿಮೋಟ್ ನೊಂದಣಿ ಅನುಮತಿಸಲಾಗಿದೆ. ರೇರಾ ಅನುಮೋದಿತ ಯೋಜನೆಗಳ ಖಾಸಗಿ ಸಂಸ್ಥೆಗಳ ರಿಮೋಟ್ ನೊಂದಣಿಗೆ ಕಾಯ್ದೆ ತಿದ್ದುಪಡಿ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗಿದೆ. ಡಿಜಿಟಲ್ ಇ-ಸ್ಟ್ಯಾಂಪಿಂಗ್ ಮತ್ತು ಸಂಪೂರ್ಣ ಕಾಗದರಹಿತ ನೊಂದಣಿಗಾಗಿ ನವೀನ ಪ್ಲಾಟ್‌ಫಾರ್ಮ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು. ನೊಂದಣಿ ಇಲಾಖೆಯಲ್ಲಿ 2003ಕ್ಕೂ ಹಿಂದಿನ ಲೆಗಸಿ ದಾಖಲೆಗಳನ್ನು ಸಂರಕ್ಷಿಸಲು 207 ಉಪನೊಂದಣಿ ಕಚೇರಿಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ನಾಗರಿಕರಿಗೆ ಉತ್ತಮ ಅನುಭವ ನೀಡಲು ಪ್ರತಿ ಜಿಲ್ಲೆಯಲ್ಲಿ ಒಂದು ಕಚೇರಿಯನ್ನು ನೊಂದಣಿ ಖಾತರಿ ಕೇಂದ್ರವನ್ನಾಗಿ ನವೀಕರಿಸಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ಕಾಡುಕೋಣಕ್ಕೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಮಹಿಳೆ, ವೈರಲ್‌ ಆಯ್ತು ದೃಶ್ಯ

ನಮ್ಮ ಸುತ್ತಮುತ್ತಲಿನಲ್ಲಿರುವ ಕೆಲವರಿಗೆ ಪ್ರಾಣಿ ಪಕ್ಷಿಗಳೆಂದರೆ (animal and birds) ಬಲು ಇಷ್ಟ. ಹೀಗಾಗಿ ಅವುಗಳಿಗೆ ಆಹಾರ ನೀಡುವುದು. ನೀರು ಕುಡಿಯಲು ಇಡುವುದು ಹೀಗೆ ಅವುಗಳ ಹಸಿವು ಬಾಯಾರಿಕೆಯನ್ನು ನೀಗಿಸುವಂತಹ ಪ್ರಯತ್ನ ಮಾಡ್ತಾರೆ. ಈ ಮಹಿಳೆಯದ್ದು (woman) ಅಷ್ಟೇ ದೊಡ್ಡ ಮನಸ್ಸು. ಮನೆ ಹತ್ತಿರ ಬಂದ ಕಾಡು ಕೋಣವೊಂದು ಬಾಯಾರಿಕೆಯಿಂದ ಬಳಲಿದೆ. ಹೀಗಾಗಿ  ಈ ಮೂಕ ಪ್ರಾಣಿಯ ನೀರಿನ ದಾಹವನ್ನು ಅರಿತುಕೊಂಡ ಮಹಿಳೆ, ನೀರು ಕೊಟ್ಟು ಅದರ ಬಾಯಾರಿಕೆಯನ್ನು ನೀಗಿಸಿದ್ದಾಳೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮಹಿಳೆಯ ಮಾನವೀಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Deepak Gavada ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಮನೆ ಹತ್ತಿರ ಬಂದ ಬಾಯಾರಿದ ಕಾಡುಕೋಣಕ್ಕೆ ನೀರು ಕೊಟ್ಟಿದ್ದಾಳೆ. ಪಾತ್ರೆಯಲ್ಲಿಟ್ಟ ನೀರನ್ನು ಕುಡಿದು ಕಾಡು ಕೋಣವು ಬಾಯಾರಿಕೆ ನೀಗಿಸಿಕೊಂಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಶಂಖನಾದವು ಕಿವಿಗೆ ಬೀಳುತ್ತಿದ್ದಂತೆ ಗೋಶಾಲೆಯತ್ತ ಓಡೋಡಿ ಬಂದ ಹಸುಗಳು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಅಮ್ಮ ನಿನ್ನ ಹೊಟ್ಟೆ ತಣ್ಣಗೆ ಇರಲಿ ಎಂದಿದ್ದಾರೆ. ಮತ್ತೊಬ್ಬರು, ಒಳ್ಳೆಯ ಕೆಲಸ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನಿಜಕ್ಕೂ ಒಳ್ಳೆಯ ಕೆಲಸ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

ಬೆಂಗಳೂರಿನ ಹೊರೆ ಇಳಿಸಲು ಬಜೆಟ್​ನಲ್ಲಿ ದೊಡ್ಡ ಘೋಷಣೆ: ರಾಜ್ಯದ 2ನೇ ಐಟಿ ಸಿಟಿಯಾಗಲಿದೆ ಮೈಸೂರು

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕರ್ನಾಟಕ ಬಜೆಟ್ 2026 ರಲ್ಲಿ ಬೆಂಗಳೂರಿನ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಇತರ ನಗರಗಳಲ್ಲಿ ತಂತ್ರಜ್ಞಾನ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ. ನವೋದ್ಯಮ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಬೆಂಗಳೂರು ಹೊರತುಪಡಿಸಿ, ಇತರೆ ನಗರಗಳಲ್ಲಿ 1000 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರಲ್ಲಿ, ಮೈಸೂರನ್ನು 2ನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸುವುದು ಸಹ ಪ್ರಮುಖವಾದದ್ದಾಗಿದೆ.

ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ ಮತ್ತು ಮೈಸೂರಿನಂತಹ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಕಿಯೋನಿಕ್ಸ್ ಮೂಲಕ ಇನ್‌ಕ್ಯುಬೇಷನ್ ಸೌಲಭ್ಯಗಳು ಮತ್ತು ಕ್ಲೀನ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. ರಾಜ್ಯದಲ್ಲಿ ESDM ಮತ್ತು ಸೆಮಿಕಂಡಕ್ಟರ್ ವಲಯಕ್ಕೆ ಬೃಹತ್ ಕಂಪನಿಗಳಿಂದ 45,000 ಕೋಟಿ ರೂ. ಹೂಡಿಕೆ ನಿರೀಕ್ಷಿಸಲಾಗಿದೆ. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ರೊಬೊಟಿಕ್ಸ್ ಕ್ಷೇತ್ರಗಳಲ್ಲಿ ಐಐಎಸ್ಸಿ, ಇಸ್ರೋ ಮತ್ತು ಕಿಯೋನಿಕ್ಸ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಕ್ಯಾಂಪಸ್, ಮತ್ತು ರಾಯಚೂರಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸಲಾಗುವುದು. 2029 ರ ವೇಳೆಗೆ 500 ಹೊಸ ಜಿಸಿಸಿಗಳನ್ನು ಸ್ಥಾಪಿಸಿ 3.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಇದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಎರಡು ಕ್ಯಾಚ್​ಗಳು..!

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಗೆಲುವಿಗೆ ಪ್ರಮುಖ ಕಾರಣ ಸಂಜು ಸ್ಯಾಮ್ಸನ್ ಆರ್ಭಟ, ಜಸ್​ಪ್ರೀತ್ ಬುಮ್ರಾ ಅವರ ನಿಖರ ದಾಳಿ ಮತ್ತು ಅಕ್ಷರ್ ಪಟೇಲ್ ಅವರ ಮಿಂಚಿನ ಫೀಲ್ಡಿಂಗ್. ಅದರಲ್ಲೂ ಅಕ್ಷರ್ ಪಟೇಲ್ ಹಿಡಿದ ಎರಡು ಕ್ಯಾಚ್​ಗಳು ಇಡೀ ಪಂದ್ಯದ ಚಿತ್ರಣ ಬದಲಿಸಿತು ಎಂದರೆ ತಪ್ಪಾಗಲಾರದು.

ಏಕೆಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಲಿಗೆ ಸ್ಫೋಟಕ ದಾಂಡಿಗ ಹ್ಯಾರಿ ಬ್ರೂಕ್ ವಿಕೆಟ್ ನಿರ್ಣಾಯಕವಾಗಿತ್ತು. 5ನೇ ಓವರ್​ನ ಮೊದಲ ಎಸೆತವನ್ನು ಬುಮ್ರಾ ನಿಧಾನಗತಿಯಲ್ಲಿ ಎಸೆದರು, ಅತ್ತ ಚೆಂಡಿನ ವೇಗವನ್ನು ಗುರುತಿಸುವಲ್ಲಿ ಎಡವಿ ಬ್ರೂಕ್ ಬ್ಯಾಟ್ ನೀಡಿದ್ದರು.

ಇದಾಗ್ಯೂ ಚೆಂಡು ಬೌಂಡರಿಯತ್ತ ಚಿಮ್ಮಿತ್ತು. ಆದರೆ ವೇಳೆ ಹಿಮ್ಮುಖವಾಗಿ ಓಡಿದ ಅಕ್ಷರ್ ಪಟೇಲ್ ಅದ್ಭುತ ಡೈವಿಂಗ್ ಮೂಲಕ ಚೆಂಡನ್ನು ಹಿಡಿದರು. ಈ ಮೂಲಕ ಭಾರತ ತಂಡಕ್ಕೆ 2ನೇ ವಿಕೆಟ್ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು.

ಇದಾದ ಬಳಿಕ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ವಿಲ್ ಜ್ಯಾಕ್ಸ್ ಕ್ಯಾಚ್ ಹಿಡಿಯುವಲ್ಲಿಯೂ ಅಕ್ಷರ್ ಪಟೇಲ್ ಯಶಸ್ವಿಯಾದರು. ಈ ಬಾರಿ ಹಿಡಿದದ್ದು ಅತ್ಯದ್ಭುತ ಕ್ಯಾಚ್ ಎಂಬುದು ವಿಶೇಷ. ಅರ್ಷದೀಪ್ ಎಸೆತದಲ್ಲಿ ಜ್ಯಾಕ್ಸ್ ಆಫ್ ಸೈಡ್​ನತ್ತ ಭರ್ಜರಿಯಾಗಿ ಬಾರಿಸಿದ್ದರು.

ಚೆಂಡು ಇನ್ನೇನು ಬೌಂಡರಿ ಗೆರೆ ದಾಟಲಿದೆ ಅನ್ನುವಷ್ಟರಲ್ಲಿ ಮಿಂಚಿನ ವೇಗದಲ್ಲಿ ಓಡಿ ಬಂದ ಅಕ್ಷರ್ ಪಟೇಲ್ ಅತ್ಯದ್ಭುತವಾಗಿ ಚೆಂಡನ್ನು ಹಿಡಿದರು. ಆದರೆ ನಿಯಂತ್ರಣ ತಪ್ಪಿ ಬೌಂಡರಿ ಗೆರೆ ದಾಟುವ ಮುನ್ನ ಚೆಂಡನ್ನು ಶಿವಂ ದುಬೆ ಕೈಗಿತ್ತರು. ಈ ಮೂಲಕ ನಿರ್ಣಾಯಕ ಹಂತದಲ್ಲಿ ಟೀಮ್ ಇಂಡಿಯಾ ಮಹತ್ವದ ಯಶಸ್ಸು ತಂದುಕೊಡುವಲ್ಲಿ ಅಕ್ಷರ್ ಪಟೇಲ್ ಪ್ರಮುಖ ಪಾತ್ರವಹಿಸಿದರು. ಇದೀಗ ಈ ಎರಡು ಕ್ಯಾಚ್​ಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್​ಗಳಿಸಿದರೆ, ಇಂಗ್ಲೆಂಡ್ 246 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 7 ರನ್​ಗಳ ಜಯದೊಂದಿಗೆ ಫೈನಲ್​ ಫೈಟ್​ಗೆ ಅರ್ಹತೆ ಪಡೆದುಕೊಂಡಿದೆ.

Source link

ಬಜೆಟ್​​​ನಲ್ಲಿ ಅಲ್ಪಸಂಖ್ಯಾತರಿಗೆ ಭರಪೂರ ಕೊಡುಗೆ ನೀಡಿದ ಸಿದ್ದರಾಮಯ್ಯ: ಮುಸ್ಲಿಂ ಮಹಿಳೆಯರಿಗೆ ಭರ್ಜರಿ ಗಿಫ್ಟ್

ಬೆಂಗಳೂರು, ಮಾ.6: ಇಂದಿನ (ಮಾ.6) ಕರ್ನಾಟಕ ಬಜೆಟ್ 2026ರಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣ ಮತ್ತು ವಸತಿ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಆಧ್ಯಾತ್ಮಿಕರು ಹಾಗೂ ಸಮದಾಯದವರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಪ್ರಕಟಿಸಲಾಗಿದೆ. ಸೇಲಂನ ಬೆನೆಡಿಕ್ಟಿನ್ ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪನೆಗೆ 5 ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು. ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಇತರ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಯಲ್ಲಿ ಅನುವಾದಿಸಲಾಗುವುದು. ವಕ್ಫ್ ಸಂಸ್ಥೆಗಳಲ್ಲಿನ 31 ಮಹಿಳಾ ಪಿಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಮತ್ತು ಸವಣೂರಿನಲ್ಲಿ ಹೊಸ ಮಹಿಳಾ ಪಿಯು ಕಾಲೇಜನ್ನು ಪ್ರಾರಂಭಿಸಲಾಗುವುದು. ವಾಣಿಜ್ಯ ಉದ್ದೇಶಕ್ಕೆ ಬೇಡಿಕೆ ಇರುವ ಪ್ರದೇಶಗಳಲ್ಲಿ ವಕ್ಫ್ ಆಸ್ತಿಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಬೀದರ್‌ನ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪಿಸಲಾಗುವುದು. ವಸತಿ ಯೋಜನೆಗಳಡಿಯಲ್ಲಿ 4,99,454 ಮನೆಗಳನ್ನು ಪೂರ್ಣಗೊಳಿಸಿ ಹಸ್ತಾಂತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಹಿಂದಿನ ಸರ್ಕಾರ ಮಂಜೂರು ಮಾಡಿರುವ 4,90,000 ಮನೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಿಎಲ್‌ಸಿ ಆಧಾರಿತ 1 ಲಕ್ಷ ಮನೆಗಳ ಹೊಸ ಗುರಿ ನಿಗದಿಪಡಿಸಲಾಗಿದ್ದು, ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನವನ್ನು 1,20,000 ರೂ. ರಿಂದ 2 ಲಕ್ಷಕ್ಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ 2 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್! ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್

ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್​​​ದಾರರಿಗೆ ಮಹತ್ವದ ಯೋಜನೆ ಘೋಷಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.54 ಕೋಟಿ ಬಡ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗುತ್ತಿತ್ತು. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಪ್ರತಿ ತಿಂಗಳು ಪೌಷ್ಟಿಕಾಂಶಯುಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ ಒಳಗೊಂಡಿರುತ್ತದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 6,200 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Karnataka Budget 2026: ಉರ್ದು ಶಾಲೆಗಳ ಅಭಿವೃದ್ಧಿಗೆ 400 ರೂ. ಕೋಟಿ ಅನುದಾನ ಘೋಷಣೆ ಮಾಡಿದ ಸಿಎಂ ಸಿದ್ಧರಾಮಯ್ಯ

2026ನೇ ಸಾಲಿನ ಕರ್ನಾಟಕ ಬಜೆಟ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ವ್ಯಾಸಂಗಕ್ಕೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಕಲ್ಯಾಣಕ್ಕಾಗಿ ಹೊಸ ವಿದ್ಯಾರ್ಥಿನಿಲಯಗಳು, ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೆ-ಸಿಇಟಿ, ಜೆಇಇ, ನೀಟ್ ಪರೀಕ್ಷೆಗಳಿಗೆ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು ಸೆಂಟರ್ ಆಫ್ ಎಕ್ಸಲೆನ್ಸ್‌ಗಳನ್ನಾಗಿ ಸ್ಥಾಪಿಸಲಾಗುವುದು. ಜೈನ್, ಬೌದ್ಧ, ಸಿಖ್ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಮತ್ತು ಬೌದ್ಧ ಧರ್ಮಾಚಾರಿಗಳಿಗೆ ಮಾಸಿಕ 6,000 ರೂಪಾಯಿ ಗೌರವಧನ ನೀಡಲಾಗುವುದು. ನಿರುದ್ಯೋಗಿ ಯುವಕರಿಗೆ ಫಾಸ್ಟ್ ಫುಡ್ ಟ್ರಕ್, ಮೊಬೈಲ್ ಕಿಚನ್ ಸೌಲಭ್ಯಗಳಿಗೆ ಸಹಾಯಧನ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಿಗೆ ಉತ್ತೇಜನ ನೀಡಲಾಗುವುದು. 5,000 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಗೆ ತಲಾ 50,000 ರೂಪಾಯಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿವಿ, ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧಾ

ಬೆಂಗಳೂರು, ಮಾರ್ಚ್ 6: ಕಾಲೇಜುಗಳು ಹಾಗು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ (Student Union elections) ನಡೆಸಲು ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿ ಹಂತದಲ್ಲೇ ಮಕ್ಕಳಲ್ಲಿ ನಾಯಕತ್ವದ ಮನೋಭವ ಮತ್ತು ಹೊಣೆಗಾರಿಕೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದು ತಿಳಿದುಬಂದಿದೆ. ಮೂರು ದಶಕಗಳ ನಂತರ ವಿದ್ಯಾರ್ಥಿ ಸಂಘಗಳಿಗೆ ಚುನಾವಣೆ ನಡೆಯುವ ಕಾಲ ಸನ್ನಿಹಿತವಾಗಿದೆ.

ರಾಜ್ಯ ಸರ್ಕಾರ ಕೆಲ ತಿಂಗಳಿಂದಲೇ ಈ ನಿರ್ಧಾರದ ಪರಿಶೀಲನೆಯಲ್ಲಿತ್ತು. 2025ರ ಡಿಸೆಂಬರ್ ತಿಂಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈ ನಿರ್ಧಾರ ತೆಗೆದುಕೊಳ್ಳಲು ಒಂದು ಸಮಿತಿ ರಚಿಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದ ಒಂದು ಮಂದಿ ಹಿರಿಯ ನಾಯಕರು ಈ ಮಂಡಳಿಯಲ್ಲಿದ್ದರು. ಬಹುತೇಕ ರಾಜಕೀಯ ಪಕ್ಷಗಳು ಸರ್ಕಾರದ ಈ ಪ್ರಸ್ತಾಪಕ್ಕೆ ಬೆಂಬಲ ವ್ಯಕ್ತಪಡಿಸಿವೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಇವತ್ತಿನ ಹೆಚ್ಚಿನ ಹಿರಿಯ ರಾಜಕಾರಣಿಗಳು ವಿದ್ಯಾರ್ಥಿ ಸಂಘಗಳ ಚುನಾವಣಾ ರಾಜಕೀಯದಿಂದ ಪಳಗಿ ಬಂದಿರುವವರೆ.

ಇದನ್ನೂ ಓದಿ: Karnataka Budget: ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ- ಸಿದ್ದರಾಮಯ್ಯ

1997ರಿಂದ ನಡೆದಿಲ್ಲ ವಿದ್ಯಾರ್ಥಿ ಸಂಘ ಚುನಾವಣೆ

ಕರ್ನಾಟಕದಲ್ಲಿ 90ರ ದಶಕದವರೆಗೂ ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಬಹಳ ತೀವ್ರತೆಯಿಂದ ನಡೆಯುತ್ತಿತ್ತು. ಸಾರ್ವತ್ರಿಕ ಚುನಾವಣೆಗಳನ್ನೂ ಮೀರಿಸುವ ರೀತಿಯಲ್ಲಿ ಚುನಾವಣೆಗಳಾಗುತ್ತಿದ್ದವು. 1989-90ರ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರ ಮೊದಲ ಬಾರಿಗೆ ವಿದ್ಯಾರ್ಥಿ ಚುನಾವಣೆಗಳಿಗೆ ನಿಷೇಧ ಹಾಕಿತು. ಬಳಿಕ ಅದನ್ನು ತೆರವುಗೊಳಿಸಲಾಯಿತು. 1997-98ರಿಂದ ಚುನಾವಣೆ ಪೂರ್ಣವಾಗಿ ನಿಂತು ಹೋಯಿತು.

ಈಗ ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘದ ಚುನಾವಣೆ ಶುರು ಮಾಡಲು ಕಿಡಿ ಹಚ್ಚಿದ್ದು ಡಿಕೆ ಶಿವಕುಮಾರ್. ಅವರಿಂದ ಪುನಾರಂಭವಾದ ಈ ಯೋಚನೆಗೆ ಎಲ್ಲಾ ಪಕ್ಷಗಳ ಮುಖಂಡರು ಬೆಂಬಲ ನೀಡಿರುವುದು ವಿಶೇಷ. ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳೂ ವಿದ್ಯಾರ್ಥಿ ಘಟಕ ಹೊಂದಿವೆ. ಬಿಜೆಪಿಯಲ್ಲಿ ಎಬಿವಿಪಿ, ಕಾಂಗ್ರೆಸ್​ನಲ್ಲಿ ಎನ್​ಎಸ್​ಯುಐ, ಎಡಪಕ್ಷಗಳ ಎಸ್​ಎಫ್​ಐ, ಎಐಎಸ್​ಎ, ಎಎಪಿಯ ಎಸ್​ಎಸ್​ಎಪಿ, ಅಂಬೇಡ್ಕರ್ ಸ್ಟುಡೆಂಟ್ಸ್ ಅಸೋಸಿಯೇಶನ್ ಇತ್ಯಾದಿ ಹಲವು ವಿದ್ಯಾರ್ಥಿಗಳ ಸಂಘಗಳು ದೇಶಾದ್ಯಂತ ಇವೆ. ಕರ್ನಾಟಕದಲ್ಲಿ ಎಬಿವಿಪಿ, ಎನ್​ಎಸ್​ಯುಐ ಹಿಂದಿನಿಂದಲೂ ಬಲಿಷ್ಠ ಎನಿಸಿವೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ: ಬಜೆಟ್​​​ನಲ್ಲಿ ಮಹತ್ವದ ನಿರ್ಧಾರ

ಸರ್ಕಾರಿ ಕಾಲೇಜು, ಪಬ್ಲಿಕ್ ಯೂನಿವರ್ಸಿಟಿಗಳಲ್ಲಿ ಚುನಾವಣೆ

ಸರ್ಕಾರಿ ಸ್ವಾಮ್ಯದ ಕಾಲೇಜುಗಳು ಮತ್ತು ಯೂನಿವರ್ಸಿಟಿಗಳಲ್ಲಿ ಮಾತ್ರ ವಿದ್ಯಾರ್ಥಿ ಸಂಘಗಳ ಚುನಾವಣೆ ಕಡ್ಡಾಯ ಮಾಡಬಹುದು. ಖಾಸಗಿ ಯೂನಿವರ್ಸಿಟಿಗಳಿಗೆ ಇದು ಅನ್ವಯ ಆಗದೇ ಇರಬಹುದು.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಳೆದ ಬಾರಿ ಮಾಡಿದ ತಪ್ಪು ತಿದ್ದಿಕೊಂಡ ‘ಧುರಂಧರ್’ ತಂಡ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಸಿನಿಮಾ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಬಾಕ್ಸ್ ಆಫೀಸ್​​ನಲ್ಲಿ ಹಲವು ಹಳೆಯ ದಾಖಲೆಗಳನ್ನು ಪುಡಿಗಟ್ಟಿದ ‘ಧುರಂಧರ್’ ಹಲವು ಹೊಸ ದಾಖಲೆಗಳನ್ನು ಬರೆಯಿತು. ಕೇವಲ ಹಿಂದಿ ಭಾಷೆಯಲ್ಲಿ ಮಾತ್ರವೇ ಬಿಡುಗಡೆ ಆಗಿದ್ದರೂ ಸಹ ಭಾಷೆಯ ಹಂಗಿಲ್ಲದೆ ದಕ್ಷಿಣದ ರಾಜ್ಯಗಳ ಜನರೂ ಸಹ ನೋಡಿ ಸಂಭ್ರಮಿಸಿದ್ದರು. ಆದರೆ ಸಿನಿಮಾವನ್ನು ತಮ್ಮ ಸ್ಥಳೀಯ ಭಾಷೆಯಲ್ಲಿ ಬಿಡುಗಡೆ ಮಾಡುವ ಬಗ್ಗೆ ಆಗಲೂ ಸಹ ಕೆಲ ಪ್ರೇಕ್ಷಕರು ಮನವಿ ಮಾಡಿದ್ದರು. ಸಿನಿಮಾವನ್ನು ಆಂಧ್ರ-ತೆಲಂಗಾಣದಲ್ಲಿ ಬಿಡುಗಡೆ ಮಾಡಿದ್ದ ಮೈತ್ರಿ ಮೂವಿ ಮೇಕರ್ಸ್ ಸಹ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಿ ಬಿಡುಗಡೆ ಮಾಡುವಂತೆ ಒತ್ತಾಯಿಸಿತ್ತು. ಇದೀಗ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಬಾರಿ ಮುಂಚಿತವಾಗಿ ಸಜ್ಜಾಗಿರುವ ಚಿತ್ರತಂಡ, ಹಿಂದಿ ಸೇರಿದಂತೆ ಒಟ್ಟಿಗೆ ಐದು ಭಾಷೆಗಳಲ್ಲಿ ಸಿನಿಮಾವನ್ನು ತೆರೆಗೆ ತರುತ್ತಿದೆ.

‘ಧುರಂಧರ್’ ಸಿನಿಮಾಕ್ಕೆ ದಕ್ಷಿಣದ ರಾಜ್ಯಗಳಲ್ಲಿ ಅದರಲ್ಲೂ ಕರ್ನಾಟಕ ಮತ್ತು ತೆಲುಗು ರಾಜ್ಯಗಳಿಂದ ಒಳ್ಳೆಯ ಕಲೆಕ್ಷನ್ ಹರಿದು ಬಂದಿತ್ತು. ಹಾಗಾಗಿ ಸಿನಿಮಾವನ್ನು ಹಿಂದಿಯ ಜೊತೆಗೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಒಟ್ಟಿಗೆ ಬಿಡುಗಡೆ ಮಾಡುತ್ತಿದೆ. ನಾಳೆ (ಮಾರ್ಚ್ 07) ಬಿಡುಗಡೆ ಆಗುತ್ತಿರುವ ಸಿನಿಮಾದ ಟ್ರೈಲರ್ ಸಹ ಹಿಂದಿ ಸೇರಿದಂತೆ ಇತರೆ ದಕ್ಷಿಣ ಭಾಷೆಗಳಲ್ಲಿ ಯೂಟ್ಯೂಬ್​​ನಲ್ಲಿ ಬಿಡುಗಡೆ ಆಗಲಿದೆ. ಸಿನಿಮಾವನ್ನು ಕೇವಲ ಹಿಂದಿಯಲ್ಲಿ ಮಾತ್ರವೇ ಬಿಡುಗಡೆ ಮಾಡದೆ ಇತರೆ ಭಾಷಿಕ ಸಿನಿಮಾ ಪ್ರೇಮಿಗಳಿಗೂ ಗೌರವ ಕೊಡುವ ಕಾರ್ಯವನ್ನು ‘ಧುರಂಧರ್’ ಚಿತ್ರತಂಡ ಮಾಡಿದೆ.

ಇದನ್ನೂ ಓದಿ:‘ಧುರಂಧರ್’ ಬಳಿಕ ಹಾರರ್ ಸಿನಿಮಾಕ್ಕೆ ಕೈ ಹಾಕಿದ ರಣ್ವೀರ್ ಸಿಂಗ್

2025 ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ದಕ್ಷಿಣದ ರಾಜ್ಯಗಳಲ್ಲಿ ಒಳ್ಳೆಯ ಗಳಿಕೆ ಮಾಡಿತ್ತು. ಭಾರತದಲ್ಲಿ ‘ಧುರಂಧರ್’ ಸಿನಿಮಾ ಸುಮಾರು 900 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇದರಲ್ಲಿ ಸುಮಾರು 250 ರಿಂದ 300 ಕೋಟಿ ಹಣ ದಕ್ಷಿಣ ಭಾರತದ ರಾಜ್ಯಗಳಿಂದಲೇ ಬಂದಿತ್ತು ಎನ್ನಲಾಗಿದೆ. ಕರ್ನಾಟಕ ಒಂದರಲ್ಲೇ ಈ ಸಿನಿಮಾಕ್ಕೆ 70 ರಿಂದ 90 ಕೋಟಿ ಗಳಿಕೆ ಆಗಿತ್ತು. ಅದೂ ಕೇವಲ ಹಿಂದಿ ವರ್ಷನ್​​ಗೆ. ಈ ಬಾರಿ ‘ಧುರಂಧರ್ 2’ ಸಿನಿಮಾಕ್ಕೂ ಇನ್ನೂ ಹೆಚ್ಚಿನ ಗಳಿಕೆ ಆಗಬಹುದು ಎನ್ನಲಾಗುತ್ತಿದೆ.

‘ಧುರಂಧರ್ 2’ ಸಿನಿಮಾವು ‘ಧುರಂಧರ್’ ಸಿನಿಮಾದ ಮುಂದಿನ ಭಾಗವಾಗಿದ್ದು, ‘ಧುರಂಧರ್’ ಸಿನಿಮಾನಲ್ಲಿದ್ದ ರಣ್ವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್ ಜೊತೆಗೆ ಇನ್ನೂ ಕೆಲವು ಪಾತ್ರಗಳು ಈ ಸಿನಿಮಾಕ್ಕೆ ಸೇರಿಕೊಂಡಿವೆ. ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ಮತ್ತು ಬಿ62 ನಿರ್ಮಾಣ ಸಂಸ್ಥೆಗಳು ಜಂಟಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡಿವೆ. ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link