ಚುನಾವಣೆ ಇಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ, ಯಾರ್ಯಾರು? – Kannada News
ಬೆಂಗಳೂರು, (ಜೂನ್ 09): ಕರ್ನಾಟಕ ರಾಜ್ಯಸಭೆಯ (Karnataka Rajyasabha) ನಾಲ್ಕು ಸ್ಥಾನಗಳಿಗೆ ಸ್ಪರ್ಧಿಸಿದ್ದ ಮೂವರು ಕಾಂಗ್ರೆಸ್ (Congress) ಅಭ್ಯರ್ಥಿಗಳು ಹಾಗೂ ಓರ್ವ ಬಿಜೆಪಿ (BJP) ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಲ್ಲಿಕಾರ್ಜುನ್ ಖರ್ಗೆ, ಪವನ್ ಖೇರಾ,ಮನ್ಸೂರ್ ಆಲಿ ಖಾನ್ ಹಾಗೂ ಬಿಜೆಪಿಯ ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ರಾಜ್ಯಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ ಎಲ್ಲಾ ನಾಮಪತ್ರಗಳನ್ನು ಇಂದು (ಜೂನ್ 09) ಚುನಾವಣಾಧಿ ಕಾರಿ ಕೆ.ಎಂ.ವಿಶಾಲಾಕ್ಷಿ ಅವರು ಪರಿಶೀಲನೆ ನಡೆಸಿದ್ದು, ನಾಲ್ವರ ನಾಪತ್ರಗಳು ಕ್ರಮಬದ್ಧವಾಗಿವೆ….