ದಳಪತಿ ವಿಜಯ್ (Vijay) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ನಟಿಯೊಬ್ಬರ ಜೊತೆ ಅವರಿಗೆ ಅಕ್ರಮ ಸಂಬಂಧ ಇದೆ ಎಂದು ಪತ್ನಿ ಕಡೆಯಿಂದಲೇ ಆರೋಪ ಬಂದಿತ್ತು. ಈ ವಿಷಯವಾಗಿ ದಳಪತಿ ವಿಜಯ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ದಳಪತಿ ವಿಜಯ್ ಅವರು ಒಂದು ದೊಡ್ಡ ಬಾಂಬ್ ಹಾಕಿದ್ದಾರೆ. ತ್ರಿಷಾ ಜೊತೆ ಅವರು ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದರು. ಇದನ್ನು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ವಿಜಯ್ ಎಲ್ಲರಿಗೂ ಉತ್ತರ ಕೊಟ್ಟು ಎಂದು ಹೇಳುತ್ತಿದ್ದಾರೆ. ಇದಕ್ಕೆ ಕೆಲವರು ಉತ್ತರಿಸಿದ್ದು, ‘ಪತ್ನಿ ಜೊತೆ ಬಂದು ಸ್ಪಷ್ಟನೆ ಕೊಡಬೇಕು, ಸಂಬಂಧ ಇಟ್ಟುಕೊಂಡವರ ಜೊತೆಯಲ್ಲ’ ಎಂದು ಹೇಳಿದ್ದಾರೆ.
ವಿಜಯ್ ಅವರು ತಮ್ಮ ಕೊನೆಯ ಸಿನಿಮಾ ‘ಜನ ನಾಯಗನ್’ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಸೆನ್ಸಾರ್ ತೊಡಕು ಚಿತ್ರಕ್ಕೆ ಉಂಟಾಗಿದೆ. ಈ ಬೆಳವಣಿಗೆ ಮಧ್ಯೆ ವಿಜಯ್ ಅವರಿಗೆ ಸಮಸ್ಯೆ ತಂದಿದ್ದು ಅವರ ಪತ್ನಿ ಸಂಗೀತಾ ಸಲ್ಲಿಕೆ ಮಾಡಿರೋ ಡಿವೋರ್ಸ್ ಅರ್ಜಿ. ಪತಿಗೆ ನಟಿ ಜೊತೆ ಅಕ್ರಮ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ.
ದಳಪತಿ ವಿಜಯ್ ಹಾಗೂ ತ್ರಿಷಾ ಮಧ್ಯೆ ಏನೋ ನಡೆಯುತ್ತಿದೆ ಎಂಬ ಚರ್ಚೆ ಮೊದಲಿನಿಂದಲೂ ದೆ. ಇಬ್ಬರೂ ಒಟ್ಟಿಗೆ ಇದ್ದರು ಎಂಬುದಕ್ಕೆ ಪೂರಕವಾದ ಸಾಕ್ಷಿಗಳನ್ನು ಕೆಲವರು ತಂದಿದ್ದಾರೆ. ಆದರೆ, ವಿಜಯ್ ಆಗಲಿ, ತ್ರಿಷಾ ಆಗಲಿ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಹೀಗಿರುವಾಗಲೇ ಚೆನ್ನೈನಲ್ಲಿ ಗುರುವಾರ (ಮಾರ್ಚ್ 5) ಸಂಜೆ ನಡೆದ ಎಸ್. ಕಲ್ಪತಿ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ವಿಜಯ್ ಹಾಗೂ ತ್ರಿಷಾ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಅವರು ಒಂದೇ ಕಾರಲ್ಲಿ ಬಂದರು ಎನ್ನಲಾಗುತ್ತಿದೆ.
When someone makes an accusation that you’re in an extra-marital relationship with someone else, you shut down rumors by showing up with your wife for functions, not with the woman they are alleging you’re in a relationship with. https://t.co/fA7jMnxhtg
ಈ ವಿಡಿಯೋ ಟ್ವೀಟ್ ಮಾಡಿದ್ದ ಅಭಿಮಾನಿ, ‘ವಿಜಯ್ ಅವರು ತಮ್ಮ ಸ್ಟೈಲ್ ಅಲ್ಲಿ ಎಲ್ಲರಿಗೂ ಉತ್ತರ ನೀಡಿದ್ದಾರೆ. ಎಲ್ಲಾ ವದಂತಿಗೆ ತೆರೆ ಎಳೆದಿದ್ದಾರೆ. ಅವರಿಗೆ ಧೈರ್ಯ ಇದೆ’ ಎಂದು ಮೋಹನ್ ಕ್ಷತ್ರೀಯಾ ಎಂಬುವವರು ಟ್ವೀಟ್ ಮಾಡಿದ್ದರು. ಇದಕ್ಕೆ ವ್ಯಕ್ತಿಯೋರ್ವ ಉತ್ತರಿಸಿದ್ದಾನೆ.
‘ನೀವು ಬೇರೊಬ್ಬರೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದೀರಿ ಎಂದು ಯಾರಾದರೂ ಆರೋಪಿಸಿದಾಗ, ನೀವು ನಿಮ್ಮ ಹೆಂಡತಿಯೊಂದಿಗೆ ಸಮಾರಂಭಗಳಿಗೆ ಕಾಣಿಸಿಕೊಳ್ಳುವ ಮೂಲಕ ವದಂತಿಗಳಿಗೆ ತೆರೆ ಎಳೆಯಬೇಕೆ ಹೊರತೂ, ನೀವು ಸಂಬಂಧ ಹೊಂದಿದ್ದೀರಿ ಎಂದು ಆರೋಪಿಸುವ ಮಹಿಳೆಯೊಂದಿಗೆ ಬಂದು ಅಲ್ಲ’ ಎಂದು ಉತ್ತರಿಸಲಾಗಿದೆ.
ಬೆಂಗಳೂರು, ಮಾರ್ಚ್ 06: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೇವಾಲಯಗಳಲ್ಲಿ ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ತವರು ಮನೆಯು ಯಾವುದೇ ಹೆಣ್ಣುಮಗುವಿಗೆ ಸದಾ ವಿಶೇಷ ಬಾಂಧವ್ಯದ ತಾಣ. ಆದರೆ, ಶಾಸ್ತ್ರಗಳು ಮತ್ತು ಧರ್ಮಗಳ ಪ್ರಕಾರ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಪ್ರಯಾಣಿಸುವುದು ಅಷ್ಟು ಶುಭಕರವಲ್ಲ ಎಂದು ಹೇಳಲಾಗುತ್ತದೆ.
ಶನಿವಾರವು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮಂತನಿಗೆ ಮೀಸಲಾದ ದಿನವಾದರೂ, ಈ ದಿನ ಪ್ರಯಾಣಿಸುವುದರಿಂದ ಒಂದಷ್ಟು ಸಂಕುಚಿತ ಭಾವನೆಗಳು ಮನಸ್ಸನ್ನು ಆವರಿಸಬಹುದು ಎಂಬ ವೈಜ್ಞಾನಿಕ ಅಭಿಪ್ರಾಯವೂ ಇದೆ. ಹಿಂದೂ ಸಂಸ್ಕೃತಿಯಲ್ಲಿ ಪ್ರತಿ ದಿನವೂ ಒಂದೊಂದು ದೇವರಿಗೆ ಮೀಸಲಾಗಿದೆ. ಶನಿವಾರದಂದು ವ್ರತ ಅಥವಾ ಪೂಜೆಗಳನ್ನು ಆಚರಿಸುವವರಿಗೆ ದೈಹಿಕವಾಗಿ ಸ್ವಲ್ಪ ತೊಂದರೆಯಾಗಬಹುದು. ಅಲ್ಲದೆ, ಪೂರ್ವಿಕರ ಅನುಭವದಂತೆ, ಈ ದಿನದ ಭೇಟಿಯು ಅತ್ತೆಯ ಮನೆಯಲ್ಲಿ ಭಿನ್ನಾಭಿಪ್ರಾಯಗಳಿಗೆ ಕಾರಣವಾಗಬಹುದು ಅಥವಾ ಎರಡೂ ಕಡೆ ಮಾನಸಿಕ ಒತ್ತಡವನ್ನು ಸೃಷ್ಟಿಸಬಹುದು. ಈ ಎಲ್ಲಾ ಅಂಶಗಳು ನಂಬಿಕೆಗಳ ಆಧಾರದ ಮೇಲೆ ಶನಿವಾರದ ಪ್ರಯಾಣವನ್ನು ಅಷ್ಟು ಪ್ರಾಶಸ್ತ್ಯವಲ್ಲ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 6, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ತದಿಗೆ, ಹಸ್ತಾ ನಕ್ಷತ್ರ, ಗಂಡ ಯೋಗ ಮತ್ತು ಭದ್ರಕರ್ಣದಿಂದ ಕೂಡಿದೆ.
ಬೆಳಗಿನ ಜಾವ 11:03 ರಿಂದ 12:30ರ ವರೆಗೆ ರಾಹುಕಾಲವಿದ್ದು, ಮಧ್ಯಾಹ್ನ 12:31 ರಿಂದ 2:02ರ ವರೆಗೆ ಸರ್ವ ಸಿದ್ದಿ ಕಾಲ, ಸಂಕಲ್ಪ ಕಾಲ ಮತ್ತು ಶುಭ ಕಾಲವಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಕನ್ಯಾ ರಾಶಿಯಲ್ಲಿ ಹಸ್ತಾ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ. ಇದು ಸಂಕಷ್ಟ ಚತುರ್ಥಿ ಇರತಕ್ಕಂತಹ ವಿಶೇಷ ದಿನವಾಗಿದೆ. ಜೊತೆಗೆ ಉಳ್ಳಾಲ ರಥ, ಕದನೂರಿನ ಉತ್ಸವ, ನವವೃಂದಾವನ ವ್ಯಾಸರಾಯ ತೀರ್ಥರ ಆರಾಧನೆ, ಕಳಲೆಯ ಜಾತ್ರೆ ಮಹೋತ್ಸವದಂತಹ ವಿಶೇಷ ಕಾರ್ಯಕ್ರಮಗಳ ದಿನವಾಗಿದೆ ಎಂದು ಗುರೂಜಿ ವಿವರಣೆ ನೀಡಿದ್ದಾರೆ.
ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ದಾಖಲೆಯ 16ನೇ ಬಜೆಟ್ (Karnataka Budget 2026) ಮಂಡಿಸುತ್ತಿದ್ದು, ಇದು ರಾಜ್ಯದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿದೆ. ಈಗಾಗಲೇ, ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಅವರು ಜನವರಿಯಲ್ಲಿ ಪಾತ್ರರಾಗಿದ್ದು, ಇದೀಗ ಬಜೆಟ್ ಮಂಡನೆಯಲ್ಲೂ ದಾಖಲೆ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಮಕೃಷ್ಣ ಹೆಗಡೆ 13 ಹಾಗೂ ಬಿಎಸ್ ಯಡಿಯೂರಪ್ಪ 8 ಬಜೆಟ್ಗಳನ್ನು ಮಂಡಿಸಿದ್ದರೆ ಇದೀಗ ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಕರ್ನಾಟಕ ಬಜೆಟ್ ಅಧಿವೇಶನ ಮಾರ್ಚ್ 6 ರಿಂದ ಮಾರ್ಚ್ 27ರವರೆಗೆ ನಡೆಯಲಿದೆ. ಒಟ್ಟು 14 ದಿನಗಳ ಅವಧಿಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ನಲ್ಲಿ ಬಜೆಟ್ ಸಂಬಂಧಿತ ಚರ್ಚೆಗಳು ನಡೆಯಲಿವೆ.
ಕರ್ನಾಟಕ ಬಜೆಟ್ ಲೈವ್ ವಿಡಿಯೋ ಇಲ್ಲಿ ನೋಡಿ
ರಾಜಕೀಯವಾಗಿಯೂ ಈ ಬಜೆಟ್ ಬಹಳ ಮಹತ್ವ ಪಡೆದಿದೆ. ಒಂದೆಡೆ ಅಧಿಕಾರ ಹಂಚಿಕೆ ಜಿದ್ದಾಜಿದ್ದಿಯ ನಡುವೆ ಸಿದ್ದರಾಮಯ್ಯ ಬಜೆಟ್ ಸಿದ್ಧಪಡಿಸಿದ್ದು, ಐದು ಉಚಿತ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿ ಯೋಜನೆಗಳನ್ನು ನೀಡಬೇಕಾದ ಸವಾಲೂ ಅವರ ಮುಂದಿದೆ. ರಾಜ್ಯದ ಆರ್ಥಿಕ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಯೋಜನೆಗಳಲ್ಲಿ ಕೆಲವು ಬದಲಾವಣೆ ಮಾಡಲಿದ್ದಾರೆಯೇ ಎಂಬ ಕುತೂಹಲವೂ ಇದೆ.
ಶಿಕ್ಷಣ, ಕೃಷಿ, ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಈಗಾಗಲೇ ತಿಳಿಸಿದ್ದವು.
ಕರ್ನಾಟಕದಲ್ಲಿ ಈವರೆಗೆ 1956 ರ ನಂತರ ಚುನಾವಣಾ ವರ್ಷಗಳ ಮಧ್ಯಂತರ ಆಯವ್ಯಯಗಳನ್ನು ಹೊರತುಪಡಿಸಿ 70ಕ್ಕೂ ಹೆಚ್ಚು ಬಜೆಟ್ಗಳು ಮಂಡನೆಯಾಗಿವೆ. 2025–26ನೇ ಹಣಕಾಸು ವರ್ಷದಲ್ಲಿ ಬಜೆಟ್ ಗಾತ್ರ ಮೊದಲ ಬಾರಿಗೆ 4 ಲಕ್ಷ ಕೋಟಿ ರೂ. ಗಡಿ ದಾಟಿತ್ತು ಎಂಬುದು ಗಮನಾರ್ಹ.
ಒಟ್ಟಿನಲ್ಲಿ, ಸಿದ್ದರಾಮಯ್ಯ ಮಂಡಿಸುತ್ತಿರುವ ಈ ದಾಖಲೆಯ ಬಜೆಟ್ ಕರ್ನಾಟಕದ ಆರ್ಥಿಕ ಸ್ಥಿತಿ, ಅಭಿವೃದ್ಧಿ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳ ದಿಕ್ಕನ್ನು ನಿರ್ಧರಿಸುವ ಮಹತ್ವದ ಆಯವ್ಯಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
Karnataka Budget 2026-27 LIVE News Updates in Kannada: ಬೆಂಗಳೂರು, ಮಾರ್ಚ್ 06: ಇಂದು ಎಲ್ಲರ ಚಿತ್ತ ಕರ್ನಾಟಕ ಬಜೆಟ್(Karnataka Budget) ಮೇಲೆ ನೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದು ಅವರ 17ನೇ ಬಜೆಟ್. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ ನಾಲ್ಕೂವರೆ ಲಕ್ಷ ಕೋಟಿ ರೂ.ತಲುಪುವ ನಿರೀಕ್ಷೆ ಇದೆ. 2025ರಲ್ಲಿ ಆದಾಯ ಸಂಗ್ರಹದ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗದ ಕಾರಣ 2026-27ನೇ ಸಾಲಿನ ಬಜೆಟ್ ಮೇಲೆ ಅದರ ಪರಿಣಾಮ ಗೋಚರಿಸುವ ಸಾಧ್ಯತೆಗಳಿವೆ.
1995-96ರಲ್ಲಿ ಮೊದಲ ಮುಂಗಡಪತ್ರ ಮಂಡಿಸಿದ್ದ ಸಿದ್ದರಾಮಯ್ಯ ಕಳೆದ 30 ವರ್ಷಗಳಲ್ಲಿ ಇದೀಗ 17 ಬಜೆಟ್ ಮಂಡಿಸಲಿದ್ದಾರೆ. 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಹಣಕಾಸು ಖಾತೆಯನ್ನೂ ಹೊಂದಿದ್ದರು. ಆ ಅವಧಿಯ ಎಲ್ಲಾ ಬಜೆಟ್ಗಳನ್ನ ಅವರೇ ಮಂಡಿಸಿದ್ದರು. ಎರಡನೇ ಅವಧಿ ಮುಖ್ಯಮಂತ್ರಿಯಾದ ಬಳಿಕ ಈವರೆಗೂ ಮೂರು ಬಾರಿ ಬಜೆಟ್ ಮಂಡಿಸಿದ್ದು, 4ನೇ ಬಜೆಟ್ ಮಂಡನೆಗೆ ಈಗ ಸಿದ್ಧವಾಗಿದ್ದಾರೆ.
2026ರ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಮೀಸಲಿಡಬಹುದು, ಪಂಜಾಬ್ ಮಾದರಿಯಲ್ಲಿ ರೈತರ ಓಡಾಟಕ್ಕೆ ಟೋಲ್ ಫ್ರೀ ವ್ಯವಸ್ಥೆ, ನಗರಗಳ ಅಭಿವೃದ್ಧಿಗೆ ಮೆಗಾಸಿಟಿ ಯೋಜನೆ ಘೋಷಣೆ ಸಾಧ್ಯತೆ, ಟನಲ್ ರೋಡ್ ಹಾಗೂ ಡಬಲ್ ಡೆಕ್ಕರ್ ರೋಡ್ ಯೋಜನೆ ವಿಸ್ತರಣೆ, ರೈತರ ಎಲ್ಲಾ ಬೆಳೆಗಳಿಗೆ ವಿಶೇಷ ವಿಮಾ ಯೋಜನೆ ಘೋಷಣೆ ಸಾಧ್ಯತೆ ಇದೆ.
ಗ್ಯಾರಂಟಿ ಯೋಜನೆಗಳ ಜಾರಿಯಿಂದ ಯಶಸ್ಸು ಸಿಕ್ಕಿದೆ ಎನ್ನುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದೆ ಎನ್ನುವ ವಿಚಾರಗಳೂ ಜನರ ಬಾಯಲ್ಲಿ ಕೇಳಿಬರುತ್ತಿದೆ. ಸಿದ್ದರಾಮಯ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ಕೊಡುವ ಸಾಧ್ಯತೆ ಇದೆ. ಪ್ರಸ್ತುತ ಬಜೆಟ್ನಲ್ಲಿ ಸಿದ್ದರಾಮಯ್ಯ ಅಬಕಾರಿ ಸೆಸ್, ಇಂಧನ ಸೆಸ್ ಹೆಚ್ಚಿಸುವ ಸಾಧ್ಯತೆಗಳೂ ಇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ರಲ್ಲಿ ಒಟ್ಟು 3.71 ಲಕ್ಷ ಕೋಟಿ ರೂ. ಗಾತ್ರದ ಹಾಗೂ 2025-2026ರಲ್ಲಿ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿ ಯಾವೆಲ್ಲಾ ಘೋಷಣೆಗಳನ್ನು ಮಾಡಲಿದ್ದಾರೆ, ಯಾವುದೆಲ್ಲಾ ದುಬಾರಿಯಾಗಲಿವೆ, ಯಾವ್ಯಾವ ಜಿಲ್ಲೆಗಳಿಗೆ ಎಷ್ಟು ಹಣ ಸಿಗಲಿದೆ ಎಂಬುದರ ಕುರಿತ ಬಜೆಟ್ನ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಕನ್ನಡ ವೆಬ್ಸೈಟ್ನಲ್ಲಿ ವೀಕ್ಷಿಸಿ.
ಕ್ರಿಕೆಟ್ ಅಂಗಳಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತೊಂದಿದೆ. ಈ ಮಾತು ಇಂಗ್ಲೆಂಡ್ ಪಾಲಿಗೆ ಅಕ್ಷರಶಃ ನಿಜವಾಗಿದೆ. ಏಕೆಂದರೆ ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಬಿಟ್ಟಂತಹ ಒಂದೇ ಒಂದು ಕ್ಯಾಚ್ನಿಂದಾಗಿ ಇದೀಗ ಆಂಗ್ಲರು ಟಿ20 ವಿಶ್ವಕಪ್ನಿಂದ ಹೊರಬಿದ್ದಿದ್ದಾರೆ. ಇತ್ತ ಅಕ್ಷರ್ ಪಟೇಲ್ ಹಿಡಿದಂತಹ ಎರಡು ಅದ್ಭುತ ಕ್ಯಾಚ್ಗಳಿಂದಾಗಿ ಭಾರತ ತಂಡವು ಫೈನಲ್ಗೇರಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಆರಂಭಿಕ ಆಘಾತ ನೀಡುವಲ್ಲಿ ವಿಲ್ ಜ್ಯಾಕ್ಸ್ ಯಶಸ್ವಿಯಾದರು.
2ನೇ ಓವರ್ನ ಕೊನೆಯ ಎಸೆತದಲ್ಲಿ ಅಭಿಷೇಕ್ ಶರ್ಮಾ (6) ವಿಕೆಟ್ ಪಡೆಯುವ ಮೂಲಕ ಜ್ಯಾಕ್ಸ್ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಕೂಡ ಔಟಾಗಿ ಪೆವಿಲಿಯನ್ ಸೇರಬೇಕಿದ್ದರು. ಆದರೆ ಇಂಗ್ಲೆಂಡ್ ತಂಡದ ಹ್ಯಾರಿ ಬ್ರೂಕ್ ನೀಡಿದ ಜೀವದಾನ ಇಡೀ ಪಂದ್ಯದ ಚಿತ್ರಣ ಬದಲಿಸಿತು.
ಜೋಫ್ರಾ ಆರ್ಚರ್ ಎಸೆದ ಈ ಪಂದ್ಯದ ಮೂರನೇ ಓವರ್ನ 2ನೇ ಎಸೆತದಲ್ಲಿ ಸಂಜು ಸ್ಯಾಮ್ಸನ್ ಸುಲಭ ಕ್ಯಾಚ್ ನೀಡಿದ್ದರು. ಆದರೆ ಮಿಡ್ ಆನ್ನಲ್ಲಿದ್ದ ಹ್ಯಾರಿ ಬ್ರೂಕ್ ಚೆಂಡನ್ನು ಹಿಡಿಯುವಲ್ಲಿ ವಿಫಲರಾದರು.
Ohhhhh, Harry Brook! 😳
Sanju Samson makes the most of the lifeline and sends it into the stands! 🚀
ಈ ವೇಳೆ ಸಂಜು ಸ್ಯಾಮ್ಸನ್ ಕಲೆಹಾಕಿದ್ದ ಸ್ಕೋರ್ 7 ಎಸೆತಗಳಲ್ಲಿ 15 ರನ್ಗಳು ಮಾತ್ರ. 15 ರನ್ಗಳ ವೇಳೆಗೆ ಸಿಕ್ಕ ಜೀವದಾನವನ್ನು ಬಳಸಿಕೊಂಡ ಸ್ಯಾಮ್ಸನ್ ಅಬ್ಬರಿಸಲಾರಂಭಿಸಿದರು. ಪರಿಣಾಮ ಪವರ್ಪ್ಲೇ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಮೊತ್ತ 67 ಕ್ಕೆ ಬಂದು ನಿಂತಿತು.
ಇದಾದ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ಸಂಜು ಸ್ಯಾಮ್ಸನ್ 35 ಎಸೆತಗಳಲ್ಲಿ 74 ರನ್ ಚಚ್ಚಿದರು. ಅಂದರೆ ಕ್ಯಾಚ್ ಡ್ರಾಪ್ ಆ ಬಳಿಕ ಸಂಜು ಸ್ಯಾಮ್ಸನ್ 200ರ ಸ್ಟ್ರೈಕ್ ರೇಟ್ನಲ್ಲಿ ರನ್ ಕಲೆಹಾಕಿದರು. ಈ ಮೂಲಕ 42 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 89 ರನ್ಗಳ ಕೊಡುಗೆ ನೀಡಿದರು.
ಇತ್ತ ಸಂಜು ಸ್ಯಾಮ್ಸನ್ 89 ರನ್ಗಳಿಸುತ್ತಿದ್ದಂತೆ 13 ಓವರ್ಗಳಲ್ಲಿ ಟೀಮ್ ಇಂಡಿಯಾ ಸ್ಕೋರ್ 160 ರನ್ಗೆ ಬಂದು ನಿಂತಿತು. ಇನ್ನುಳಿದ 7 ಓವರ್ಗಳಲ್ಲಿ ಅಬ್ಬರಿಸಿದ ಟೀಮ್ ಇಂಡಿಯಾ ಬ್ಯಾಟರ್ಗಳು ಅಂತಿಮವಾಗಿ 253 ರನ್ಗಳಿಸುವಲ್ಲಿ ಯಶಸ್ವಿಯಾದರು. ಈ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್ಗಳಲ್ಲಿ 246 ರನ್ಗಳಿಸಿ 7 ರನ್ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.
ಅಂದರೆ ಸಂಜು ಸ್ಯಾಮ್ಸನ್ ಅವರ ಕ್ಯಾಚ್ ಅನ್ನು ಹ್ಯಾರಿ ಬ್ರೂಕ್ ಕೈ ಚೆಲ್ಲಿದ್ದು ಇಂಗ್ಲೆಂಡ್ ಪಾಲಿಗೆ ಅತ್ಯಂತ ದುಬಾರಿಯಾಯಿತು. ಅದು ಕೂಡ 74 ರನ್ಗಳ ದುಬಾರಿ. ಅಂದರೆ ಕ್ಯಾಚ್ ಕೈ ಬಿಟ್ಟ ಬಳಿಕ ಸ್ಯಾಮ್ಸನ್ ಬರೋಬ್ಬರಿ 74 ರನ್ಗಳನ್ನು ಕಲೆಹಾಕಿದ್ದರು. ಈ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು.
ಒಂದು ವೇಳೆ ಸಂಜು ಸ್ಯಾಮ್ಸನ್ ಅವರ ಕ್ಯಾಚ್ ಹಿಡಿದಿದ್ದರೆ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿ ಎಚ್ಚರಿಕೆಯ ಬ್ಯಾಟಿಂಗ್ಗೆ ಒತ್ತು ನೀಡಿದ್ದರು. ಆದರೆ ಬ್ರೂಕ್ ಮಾಡಿದ ತಪ್ಪಿನಿಂದಾಗಿ ಇಂಗ್ಲೆಂಡ್ 7 ರನ್ಗಳ ಸೋಲೊಪ್ಪಿಕೊಳ್ಳಬೇಕಾಯಿತು. ಈ ಸೋಲಿನೊಂದಿಗೆ ಆಂಗ್ಲರು ಗಂಟು ಮೂಟೆ ಕಟ್ಟಿದರೆ, ಟೀಮ್ ಇಂಡಿಯಾ ಫೈನಲ್ಗೆ ಎಂಟ್ರಿ ಕೊಟ್ಟಿದೆ.
ಬೆಂಗಳೂರು, ಮಾರ್ಚ್ 6: ಕರ್ನಾಟಕ (Karnataka) ಲೋಕಸೇವಾ ಆಯೋಗ (KPSC) ನಡೆಸಿದ ಕೆಎಎಸ್ (KAS) ಮುಖ್ಯಪರೀಕ್ಷೆಯ ಫಲಿತಾಂಶದ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ. ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂಬ ಆರೋಪದ ನಡುವೆ, ಒಂದೇ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆದ 15 ಮಂದಿ ಅಭ್ಯರ್ಥಿಗಳು ಪಾಸಾಗಿ ಸಂದರ್ಶನಕ್ಕೆ ಆಯ್ಕೆಯಾಗಿರುವುದು ವ್ಯಾಪಕ ಸಂಶಯಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಾವಿರ ಕೋಟಿ ರೂಪಾಯಿ ಮಟ್ಟದ ಹಗರಣ ನಡೆದಿರಬಹುದು ಎಂಬ ಆರೋಪವನ್ನು ಕೆಲ ಅಭ್ಯರ್ಥಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಮಾಡಿವೆ.
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಂತಕುಮಾರ್ ಮಾತನಾಡಿ, ಕೆಪಿಎಸ್ಸಿ ಪರೀಕ್ಷೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಕೆಪಿಎಸ್ಸಿ ಅಧ್ಯಕ್ಷರು, ಕೆಲವು ಅಧಿಕಾರಿಗಳು, ರಾಜ್ಯದ ಕೆಲ ಸಚಿವರು ಹಾಗೂ ಶಾಸಕರು ಭಾಗಿಯಾಗಿರುವ ಸಾಧ್ಯತೆಯಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲ ಆರೋಪಗಳ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಫಲಿತಾಂಶದ ಬಗ್ಗೆ ಸಂಶಯ ಏಕೆ?
ಕೆಎಎಸ್ ಮುಖ್ಯಪರೀಕ್ಷೆಯ ಫಲಿತಾಂಶದ ಕುರಿತು ಹಲವು ಅಂಶಗಳು ಅನುಮಾನಗಳಿಗೆ ಕಾರಣವಾಗಿವೆ. ಒಂದೇ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆದ 15 ಮಂದಿ ಅಭ್ಯರ್ಥಿಗಳು ಸಂದರ್ಶನಕ್ಕೆ ಆಯ್ಕೆಯಾಗಿರುವುದು ಮೊದಲ ಸಂಶಯವಾಗಿದೆ. ಇದಲ್ಲದೆ, ಅಕ್ಕಪಕ್ಕದ ಕ್ರಮ ಸಂಖ್ಯೆಯ ಅಭ್ಯರ್ಥಿಗಳು ಮುಖ್ಯಪರೀಕ್ಷೆಯಲ್ಲಿ ತೇರ್ಗಡೆಯಾಗಿರುವುದು ಕೂಡ ಅನುಮಾನಕ್ಕೆ ಕಾರಣವಾಗಿದೆ.
ಇದರ ಜೊತೆಗೆ ಒಂದೇ ಕುಟುಂಬದ ಇಬ್ಬರು ಅಥವಾ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿರುವುದು, ಸಹೋದರ-ಸಹೋದರಿಯರು ಅಂತಿಮ ಹಂತಕ್ಕೆ ತಲುಪಿರುವುದು, ಆಯ್ಕೆಯಾದ ಒಬ್ಬ ಅಭ್ಯರ್ಥಿಯ ತಾಯಿ ಕೆಎಎಸ್ ಅಧಿಕಾರಿಯಾಗಿರುವುದು ಮುಂತಾದ ವಿಚಾರಗಳು ಚರ್ಚೆಗೆ ಕಾರಣವಾಗಿವೆ. ಇನ್ನೂ ಒಂದೇ ಹಳ್ಳಿಯ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿರುವುದು ಮತ್ತು ಕೆಪಿಎಸ್ಸಿ ಅಧ್ಯಕ್ಷರ ಪರಿಚಯದವರು ಆಯ್ಕೆಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಆಂತರಿಕ ತನಿಖೆ ಆರಂಭಿಸಿದ ಕೆಪಿಎಸ್ಸಿ
ಈ ಆರೋಪಗಳು ಹೊರಬಿದ್ದ ತಕ್ಷಣ ಕೆಪಿಎಸ್ಸಿ ಆಂತರಿಕ ತನಿಖೆಗೆ ಮುಂದಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಕೆಪಿಎಸ್ಸಿ ಕಾರ್ಯದರ್ಶಿ ಜ್ಯೋತಿ, ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂಬುದಾಗಿ ಪ್ರಾಥಮಿಕ ವರದಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಯಾರಾದರೂ ಅಭ್ಯರ್ಥಿಗಳ ಬಳಿ ಸಾಕ್ಷ್ಯಗಳಿದ್ದರೆ ಅವನ್ನು ನೀಡುವಂತೆ ಅವರು ಮನವಿ ಮಾಡಿದ್ದಾರೆ.
ರಾಜಕೀಯ ವಾಗ್ವಾದ
ಈ ವಿಚಾರ ರಾಜಕೀಯ ವಲಯದಲ್ಲಿಯೂ ಚರ್ಚೆಗೆ ಗ್ರಾಸವಾಗಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕೆಪಿಎಸ್ಸಿಯಲ್ಲಿ ನಿರಂತರವಾಗಿ ಅಕ್ರಮ ಆರೋಪಗಳು ಕೇಳಿಬರುತ್ತಿರುವುದರಿಂದ ಆಯೋಗವನ್ನೇ ಮುಚ್ಚುವುದು ಒಳ್ಳೆಯದು ಎಂದು ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ, ಈ ಕುರಿತು ಕೆಪಿಎಸ್ಸಿ ಅಧ್ಯಕ್ಷರು ಸ್ಪಷ್ಟನೆ ನೀಡಬೇಕಾಗಿದೆ ಎಂದು ಹೇಳಿದ್ದಾರೆ.
ಒಟ್ಟಾರೆ, ಕೆಎಎಸ್ ಮುಖ್ಯಪರೀಕ್ಷೆಯ ಫಲಿತಾಂಶದ ಬಗ್ಗೆ ಎದ್ದಿರುವ ಆರೋಪಗಳು ರಾಜ್ಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಇದರ ಬಗ್ಗೆ ಸಮಗ್ರ ತನಿಖೆ ನಡೆಯಬೇಕೆಂದು ಅಭ್ಯರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಒತ್ತಾಯಿಸುತ್ತಿವೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ವೃತ್ತಿಜೀವನದಲ್ಲಿ ನೀವು ಯಶಸ್ಸಿನ ಏಣಿಯನ್ನು ಏರುತ್ತೀರಿ. ವ್ಯವಹಾರದಲ್ಲಿ ಆರ್ಥಿಕ ಲಾಭಕ್ಕಾಗಿ ನಿಮಗೆ ಹೊಸ ಅವಕಾಶಗಳು ಸಿಗುತ್ತವೆ. ವಿವಾಹದ ಕಾರ್ಯದಲ್ಲಿ ನೀವು ಮಗ್ನರಾಗಿ ಮುಖ್ಯ ಕೆಲಸಗಳನ್ನು ಮರೆಯಬೇಕಾಗುವುದು. ಎಷ್ಟೇ ತೊಂದರೆಯಾದರೂ ಇನ್ನೊಬ್ಬರಿಗೆ ನೋವನ್ನು ಕೊಡುವುದು ಇಷ್ಟವಾಗದು. ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ. ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಕಳೆದ ಕೆಟ್ಟ ಕಾಲವನ್ನು ನೆನಪಿಸಿಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಕೇಂದ್ರವಾಗಿ ಇರಿಸಿಕೊಂಡು ಮಾತನಾಡುವರು.
ವೃಷಭ ರಾಶಿ:
ನಿಮ್ಮ ವಿವಾಹಕ್ಕೆ ಸಂಬಂಧಿಸಿದ ದೋಷಗಳನ್ನು ದೈವಜ್ಞರ ಬಳಿ ಕೇಳಿ ಸರಿಪಡಿಸಿಕೊಳ್ಳಿ. ಊಹಾಪೋಹಗಳಿಗೆ ಕಿವಿಗೊಡದೇ ನಿಮ್ಮ ಕಾರ್ಯದಲ್ಲಿ ಮುಂದುವರಿಯಿರಿ. ಸತ್ಯವನ್ನೇ ಹೇಳುವುದಾದರೂ ನೋವಾಗದಂತೆ ಹೇಳಬೇಕು ಎನ್ನುವುದು ನಿಮ್ಮ ಕ್ರಮವಾಗಿರಲಿದೆ. ನೀವು ಇಂದು ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ವಿದ್ಯಾರ್ಥಿಗಳು ತಮಗೆ ಸಿಗಬೇಕಾದ ಲಾಭದಿಂದ ವಂಚಿತರಾಗುವರು. ಅನಪೇಕ್ಷಿತ ವಿಚಾರದಲ್ಲಿ ಹೆಚ್ಚು ಮನಸ್ಸು ಇರುವುದು. ಉದರಬಾಧೆಯಿಂದ ನಿಮಗೆ ಕಷ್ಟವಾದೀತು.
ಮಿಥುನ ರಾಶಿ:
ವ್ಯವಹಾರದಲ್ಲಿ ವಿಸ್ತರಣೆ ಇರುತ್ತದೆ, ಆದರೆ ಇಂದು ಹೂಡಿಕೆ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಅಗ್ನಿಯ ಬಳಿಯಲ್ಲಿ ಎಚ್ಚರಿಕೆಯಿಂದ ಓಡಾಡಿ. ಸ್ತ್ರೀಯರು ವಿಶೇಷವಾದ ಗಮನಕೊಡುವುದು ಅಗತ್ಯ. ಒತ್ತಡದಿಂದ ನಿಮ್ಮ ಕಾರ್ಯವು ಮಂದಗತಿಯಲ್ಲಿ ಸಾಗುವುದು. ತಂತ್ರಜ್ಞರು ಇಂದು ಬಹಳ ಒತ್ತಡದಿಂದ ಇರುವರು. ನಿಮ್ಮ ಜಾಣ್ಮೆಯಿಂದ ನಿಮ್ಮ ಸಂಸ್ಥೆಯು ಹೆಚ್ಚಿನ ಯಶಸ್ಸನ್ನು ಗಳಿಸಬಹುದು. ನಿಮ್ಮ ಆಲೋಚನೆಗಳೇ ನಿಮ್ಮನ್ನು ನಿರೂಪಿಸುತ್ತವೆ.
ಕರ್ಕಾಟಕ ರಾಶಿ:
ಇಷ್ಟವಾಗದ ಬಂಧುಗಳು ಮನೆಗೆ ಆಗಮಿಸಬಹುದು. ಹೊಸ ಯೋಜನೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ಶುಭ ಕಾರ್ಯದಲ್ಲಿ ನೀವು ಭಾಗವಹಿಸುವಿರಿ. ಕಳೆದುಕೊಂಡ ಸಂಪತ್ತು ಮತ್ತಾವುದೋ ರೀತಿಯಲ್ಲಿ ಬರಬಹುದು. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು. ರಾಜಕಾರಣದತ್ತ ನಿಮ್ಮ ಒಲವು ಹೆಚ್ಚಾಗುವುದು. ಪ್ರಭಾವಿ ವ್ಯಕ್ತಿಗಳು ನಿಮ್ಮನ್ನು ಪರಿವರ್ತಿಸುವರು. ಆದಾಯದ ಮೂಲವು ಸರಿಯಾಗಿ ಇರಲಿದೆ. ನಿಮ್ಮ ಸಹೋದರನ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸಬಹುದು.
ಸಿಂಹ ರಾಶಿ:
ನೀವಂದುಕೊಂಡಿದ್ದನ್ನೇ ಮಾಡುವ ಛಾತಿ ಇರುವುದು. ವಿದ್ಯಾರ್ಥಿಗಳು ಅಹಂಕಾರದ ವರ್ತನೆಯನ್ನು ತೋರಿಸಬಹುದು. ಇಂದಿನ ಓಡಾಟದ ದಣಿವು ನಿಮ್ಮ ಉತ್ಸಾಹವನ್ನು ಕುಗ್ಗಿಸೀತು. ನಿಮ್ಮ ಜೀವನ ಸಂಗಾತಿಯಿಂದ ನಿಮಗೆ ಅಚ್ಚರಿಯೊಂದು ಸಿಗಬಹುದು. ವ್ಯವಹಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ಧೈರ್ಯದಿಂದ ಮುನ್ನಡೆದರೆ ಯಾವ ತೊಂದರೆಯೂ ತೊಂದರೆಯಾಗಿ ಉಳಿಯದು. ಬಾರದ ಭಾಗ್ಯವನ್ನು ಬಯಸುತ್ತ ಬಳಲುವುದು ಬದುಕಾಗದು. ಪ್ರಯಾಣದಲ್ಲಿ ಯಾವುದೇ ತೊಂದರೆಯು ಬಾರದಂತೆ ದೈವವನ್ನು ಪ್ರಾರ್ಥಿಸಿ.
ಕನ್ಯಾ ರಾಶಿ:
ದುಡುಕಿ ಏನನ್ನಾದರೂ ತಪ್ಪನ್ನು ಮಾಡಿಕೊಳ್ಳುವುದು ಬೇಡ. ಕಛೇರಿಯಲ್ಲಿ ನಿಮ್ಮ ಅನುಪಸ್ಥಿತಿಯಿಂದ ಗೊಂದಲವಾದೀತು. ನಿಮ್ಮ ಕೆಲಸದಲ್ಲಿ ಅಜಾಗರೂಕರಾಗಿರಬೇಡಿ. ಇದು ಸವಾಲುಗಳಿಗೆ ಕಾರಣವಾಗಬಹುದು. ಒಂದೇ ಬಾರಿಗೆ ಹಲವು ಮನೆಯಲ್ಲಿಯೂ ನಿಮ್ಮ ಮಾತಿಗೆ ಸರಿಯಾದ ಬೆಲೆಯೂ ಸಿಗದು. ಕಛೇರಿಯಲ್ಲಿ ಇಂದು ನಿಮ್ಮಿಂದ ತಪ್ಪಾಗಿದ್ದು ಅದನ್ನು ನೀವು ಒಪ್ಪಿಕೊಳ್ಳಲಾರಿರಿ. ಅಪಾಯದ ಮನ್ಸೂಚನೆಯಿಂದ ಭಯ.
ತುಲಾ ರಾಶಿ:
ಮಂಗಲ ಕಾರ್ಯದಲ್ಲಿ ಇಂದು ನೀವು ಸಂತೋಷದಿಂದ ಪಾಲ್ಗೊಳ್ಳುವಿರಿ. ಇದರಿಂದ ನಿಮ್ಮ ನೆಮ್ಮದಿಯೂ ದೂರವಾದೀತು. ವಿದ್ಯಾಭ್ಯಾಸದಲ್ಲಿ ಯಶಸ್ಸನ್ನು ಸಾಧಿಸಲು ಅನೇಕ ಮಾರ್ಗಗಳು ಇರಲಿದೆ. ಜೀವನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಗಟ್ಟಿಯಾದ ತೀರ್ಮಾನವನ್ನು ಪಡೆಯುವುದು ಕಷ್ಟವಾಗುವುದು. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಭೀತಿಯು ಇರಲಿದೆ. ನಿಮ್ಮವರ ತಪ್ಪುಗಳನ್ನು ತಿದ್ದಿಕೊಳ್ಳಲು ಸಮಯವನ್ನು ಕೊಡಿ.
ವೃಶ್ಚಿಕ ರಾಶಿ:
ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ ಇರುತ್ತದೆ. ಕುಟುಂಬದಲ್ಲಿ ಎಲ್ಲರೂ ಸುಖದಿಂದ ಜೀವಿಸುವ ಕಾರಣ ನಿಮ್ಮಲ್ಲಿಯೂ ನೆಮ್ಮದಿಯು ಕಾಣಿಸುವುದು. ದಾಂಪತ್ಯದಲ್ಲಿ ಪರಸ್ಪರ ನೋವು ಹಂಚಿಕೊಂಡು ಸಮಾಧಾನವಾಗುವಿರಿ. ಮನೆಯ ನಿರ್ಮಾಣ ಕಾರ್ಯವು ಬಹಳ ವಿಳಂಬದಂತೆ ಅನ್ನಿಸುವುದು. ಮೂವರ ನಡುವೆ ಪರಸ್ಪರ ಗೊತ್ತಿಲ್ಲದ ವಿಚಾರವನ್ನು ಮಾತನಾಡಿಕೊಳ್ಳುವುದು ಬೇಡ. ಅನೇಕ ದಿನಗಳಿಂದ ಉದ್ಯೋಗ ನಿರ್ವಹಣೆಯಲ್ಲಿ ಬೇಸರ ಉಂಟಾಗಿದ್ದು ಹೊರಗೆ ಸುತ್ತಾಡುವಿರಿ.
ಧನು ರಾಶಿ:
ಜೀವನದಲ್ಲಿ ಹೊಸ ಅನುಭವಗಳನ್ನು ಆನಂದಿಸಲು ಸಿದ್ಧರಾಗಿರಿ. ಸಂಗಾತಿಯ ಬದಲಾವಣೆಯು ನಿಮಗೆ ಅನಿರೀಕ್ಷಿತ ಆದೀತು. ಇನ್ನೊಬ್ಬರ ಅನುಭವವು ನಿಮಗೆ ಪಾಠವಾಗಬಹುದು. ನಿಮ್ಮ ವಸ್ತುಗಳು ಕಾಣೆಯಾಗಿದ್ದು ಹಲವು ದಿನಗಳ ಅನಂತರ ತಿಳಿದೀತು. ಇಂದಿನ ಮನೆಯ ಕೆಲಸದಿಂದ ನಿಮಗೆ ಶ್ರಮವಾಗುವುದು. ಹಳೆಯ ಆಸೆಯನ್ನು ನೀವು ತೀರಿಸಿಕೊಳ್ಳುವ ಅವಕಾಶವಿರಲಿದೆ. ಮನಸ್ಸಿಗೆ ಸಹೋದರನ ಮಾತು ಘಾಸಿಮಾಡೀತು. ಇಂದು ನಿಮ್ಮ ಅನಗತ್ಯ ಮಾತುಗಳು ಕಲಹಕ್ಕೆ ಕಾರಣವಾಗಬಹುದು.
ಮಕರ ರಾಶಿ:
ಮನೋರಂಜನೆಯೇ ನಿಮಗೆ ಇಂದು ಮುಖ್ಯವಾದೀತು. ಆಪ್ತರಿಗಾಗಿ ಕೊಟ್ಟ ಸಮಯವೂ ವ್ಯರ್ಥವಾದೀತು. ಸ್ಥಿರಾಸ್ತಿಗಾಗಿ ಹೆಚ್ಚು ಓಡಾಡುವಿರಿ. ವಿದೇಶ ಪ್ರಯಾಣವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡುವುದು ಅನಿವಾರ್ಯವಾದೀತು. ಉದ್ಯಮವು ಬೆಳೆಯುತ್ತಿರುವುದು ಸಂತೋಷ ಕೊಡುವುದು. ಚಾಲಕರಿಗೆ ಕರ್ತವ್ಯಕ್ಕೆ ಪ್ರಶಂಸೆ ಸಿಗುವುದು. ಅರಿವಿಲ್ಲದೆ ಇಂದಿನ ತುರ್ತು ಕಾರ್ಯವನ್ನು ಮರೆಯುವಿರಿ. ಅಸಹಜ ವರ್ತನೆಯಿಂದ ಸಂಗಾತಿಗೆ ಅನುಮಾನ ಬರುವುದು. ಮಕ್ಕಳ ಶಿಕ್ಷಣದ ಬಗ್ಗೆ ನಿಮಗೆ ತೃಪ್ತಿ ಇರದು.
ಕುಂಭ ರಾಶಿ:
ವೃತ್ತಿಪರ ಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಹೊಸ ಹೊಸ ಕಾರ್ಯ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಬಾಡಿಗೆ ಮನೆಯಲ್ಲಿ ಇರುವವರು ಹೊಸ ಮನೆಗೆ ಹೋಗುವಿರಿ. ಸರ್ಕಾರದ ನಿಮ್ಮ ಕೆಲಸವು ಬೇಗನೆ ಮುಗಿದುಹೋಗುವುದು. ಅವಿವಾಹಿತರಿಗೆ ಅಭಾವದ ಕೊರಗು ಕಾಣಿಸಬಹುದು. ಆದಾಯವು ಕಡಿಮೆ ಆದಂತೆ ಅನ್ನಿಸುವುದು. ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿಯು ಸಿಗುವುದು ಕಷ್ಟವಾದೀತು. ಇಂದಿನ ಪ್ರಯಾಣದಲ್ಲಿ ಅಪರಿಚಿತರ ಗೆಳೆತನವಾಗಬಹುದು.
ಮೀನ ರಾಶಿ:
ವೈವಾಹಿಕ ಸಮಸ್ಯೆಗಳು ಬಹಳ ಸಮಯದಿಂದ ಇದ್ದರೆ, ಹಿರಿಯರ ಸಹಾಯದಿಂದ ಪರಿಹರಿಸಲು ಸಾಧ್ಯವಾಗುತ್ತದೆ. ಇರುವ ಒಂದು ವ್ಯಾಪಾರವನ್ನು ಕ್ರಮಬದ್ಧವಾಗಿ ನೋಡಿಕೊಳ್ಳಲಾಗದು. ಸಹೋದ್ಯೋಗಿಗಳು ನಿಮ್ಮನ್ನು ಎಲ್ಲದಕ್ಕೂ ಬೊಟ್ಟು ಮಾಡಿ ತೋರಿಸಿಯಾರು. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ಸ್ನೇಹಿತರ ಜೊತೆ ನೋವನ್ನು ಹಂಚಿಕೊಂಡು ಸಮಾಧಾನ ತಂದುಕಳ್ಳುವಿರಿ. ತಂದೆಯ ಜೊತೆ ಅಪರೂಪದ ಸಮಾರಂಭಕ್ಕೆ ಹೋಗುವಿರಿ.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಶುಕ್ರ ಪಕ್ಷ : ಕೃಷ್ಣ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಹಸ್ತಾ, ಯೋಗ : ಗಂಡ, ಕರಣ : ಭದ್ರ, ಸೂರ್ಯೋದಯ – 06 – 39 am, ಸೂರ್ಯಾಸ್ತ – 06 – 32 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 11:07 – 12:36, ಯಮಗಂಡ ಕಾಲ 15:34 – 17:03, ಗುಳಿಕ ಕಾಲ 08:08 – 09:37
ನಿಮ್ಮದೆಷ್ಟೋ ಅಷ್ಟು ಕೆಲಸವನ್ನು ಮಾತ್ರ ಮಾಡುವ ಕಡೆಗೆ ಲಕ್ಷ್ಯವನ್ನು ನೀಡಿ. ಅತ್ಯುತ್ಸಾಹದಲ್ಲೋ ಅಥವಾ ಇನ್ನೊಬ್ಬರಿಗೆ ಸಹಾಯ ಆಗಲಿ ಅಂದುಕೊಂಡೋ ಏನಾದರೂ ಅಗತ್ಯಕ್ಕಿಂತ ಹೆಚ್ಚು ಮಾತನಾಡುವುದೋ ಅಥವಾ ಕೆಲಸಕ್ಕೆ ತೊಡಗುವುದೋ ಮಾಡಿದರೆ ಆ ನಂತರ ಪರಿತಪಿಸುವಂತೆ ಆಗಲಿದೆ. ವಸ್ತ್ರಾಭರಣಗಳ ಖರೀದಿಗೆ ಹೆಚ್ಚಿನ ಖರ್ಚಾಗುವಂಥ ಯೋಗ ಇದೆ.
ಸಂಬಂಧಿಗಳೋ- ಸ್ನೇಹಿತರೋ ತಮ್ಮ ಶಾಪಿಂಗ್ ಗೆ ನೀವೂ ಬರಬೇಕು ಎಂದು ಒತ್ತಡ ಹಾಕಿ, ಕರೆದುಕೊಂಡು ಹೋಗಲಿದ್ದಾರೆ. ಮನೆಗೆ ಬೇಕಾದ ವಸ್ತುಗಳು ಕೆಲವನ್ನು ತರಲೇಬೇಕು ಎಂಬ ಕಾರಣಕ್ಕೆ ಕ್ರೆಡಿಟ್ ಕಾರ್ಡ್ ಬಳಸಲಿದ್ದೀರಿ. ಇಷ್ಟು ಕಾಲ ಅಷ್ಟೇನೂ ತಲೆ ಕೆಡಿಸಿಕೊಳ್ಳದೆ ಸುಮ್ಮನೆ ಇದ್ದಂಥ ವಸ್ತು- ವಿಷಯಗಳಿಗೆ ಸಿಕ್ಕಾಪಟ್ಟೆ ಪ್ರಾಶಸ್ತ್ಯ ಬಂದುಬಿಡುತ್ತದೆ.
ಪ್ರಯಾಣದಿಂದ ಆಯಾಸ ಕಾಡಲಿದೆ. ಉದ್ಯೋಗ ಸ್ಥಳದಲ್ಲಿಯೂ ಕೆಲಸದ ಒತ್ತಡ ಇದ್ದು, ಅದರಿಂದ ಮಾನಸಿಕವಾದ ದಣಿವು ಕೂಡ ಜತೆಯಾಗುತ್ತದೆ. ಸಂಬಂಧಿಗಳು ಆಡಿದ ಮಾತುಗಳಿಂದ ಅಥವಾ ಈ ದಿನ ನಿಮಗೆ ಫೋನ್ ಮಾಡಿ, ಆಡುವಂಥ ಕೆಲವು ಮಾತುಗಳಿಂದ ವಿಪರೀತ ಸಿಟ್ಟು ಬರುವಂತೆ ಆಗಲಿದೆ. ವಿವಾಹಿತರಿಗೆ ಸಂಗಾತಿಯು ಹಣಕಾಸಿನ ವಿಚಾರದಲ್ಲಿ ತೆಗೆದುಕೊಳ್ಳುವ ತೀರ್ಮಾನ ಸಿಟ್ಟು ತರಿಸುತ್ತದೆ.
ಇಂಟರ್ ವ್ಯೂಗಳಿಗೆ ತೆರಳುವಂತೆ ಇದ್ದರೆ, ಶೈಕ್ಷಣಿ ಪರೀಕ್ಷೆ ಬರೆಯುತ್ತಾ ಇರುವವರು ಮನೆಯಿಂದ ಹೊರಡುವ ಮುನ್ನ ಸ್ವಲ್ಪ ಮೊಸರು-ಸಕ್ಕರೆ ಸೇವಿಸಿ ಹೊರಡಿ. ಇದರ ಜೊತೆಗೆ ಹಯಗ್ರೀವ ಮಂತ್ರವನ್ನು ಸ್ಮರಣೆ ಮಾಡಿ.
ವೈವಾಹಿಕ, ಪ್ರೀತಿ- ಪ್ರೇಮದ ವಿಚಾರ ಆದ್ಯತೆ ಪಡೆದುಕೊಳ್ಳುತ್ತವೆ. ಗ್ಯಾರೇಜ್ ನಡೆಸುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ವಾಹನಗಳ ಬಿಡಿ ಭಾಗಗಳ ಹೋಲ್ ಸೇಲ್ ಮಾರಾಟ ಮಾಡುವಂಥವರಿಗೆ ವಿಸ್ತರಣೆಗೆ ಅವಕಾಶಗಳು ತೆರೆದುಕೊಳ್ಳಲಿವೆ. ರಿಯಾಯಿತಿಯಲ್ಲಿ ಸಿಗುತ್ತಿದೆ ಎಂಬ ಕಾರಣಕ್ಕೋ ಅಥವಾ ಬೇರೆ ಯಾವುದೋ ಆಫರ್ ಗಳಿವೆ ಅಂತಲೋ ವಾಷಿಂಗ್ ಮಶೀನ್, ರೆಫ್ರಿಜರೇಟ್, ಟಿವಿ ಇಂಥವುಗಳನ್ನು ಖರೀದಿ ಮಾಡುವ ಸಾಧ್ಯತೆ ಇದೆ.
ನಿಮಗೆ ತುಂಬ ಚೆನ್ನಾಗಿ ಗೊತ್ತಿರುವಂಥ- ಅನುಭವ ಇರುವಂಥ ವಿಷಯಗಳಲ್ಲಿಯೇ ನಿರೀಕ್ಷಿತ ಮಟ್ಟದ ಫಲಿತಾಂಶ ಪಡೆದುಕೊಳ್ಳಲು ಹರಸಾಹಸ ಪಡುವಂತೆ ಆಗಲಿದೆ. ನಿಮ್ಮ ಸುತ್ತಮುತ್ತ ಏನೋ ಬದಲಾವನೆ ಆಗುತ್ತಿದೆ ಎಂಬುದು ಬಲವಾಗಿ ಮನಸ್ಸಿನಲ್ಲಿ ಬೇರೂರಲಿದೆ. ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಕೆಲವು ಕೋರ್ಸ್ ಗಳಿಗೆ ಸೇರ್ಪಡೆ ಆಗುವುದಕ್ಕೆ ಆಲೋಚನೆ ಮಾಡಲಿದ್ದೀರಿ.
ಕ್ಲಿಕ್ ಆಗಿಯೇ ಆಗುತ್ತದೆ ಎಂಬ ಲೆಕ್ಕಾಚಾರದಲ್ಲಿ ನೀವು ಆರಂಭಿಸಿದ ವೃತ್ತಿ- ವ್ಯಾಪಾರ ಅಂದುಕೊಂಡ ದಿಕ್ಕಿನಲ್ಲಿಯೇ ಸಾಗಲಿದೆ. ಹಣಕಾಸಿನ ಹೊಂದಾಣಿಕೆ ಮಾಡಬೇಕು ಎಂದಿದ್ದಲ್ಲಿ ಅದು ಕೂಡ ಸಲೀಸಾಗಿ ಆಗಲಿದೆ. ನೀವು ಮುಂಜಾಗ್ರತೆಯಿಂದ ಹಣ ಉಳಿತಾಯ ಮಾಡಿಕೊಂಡು ಬಂದಿದ್ದು ಅಂತೂ ಪ್ರಯೋಜನಕ್ಕೆ ಬಂತು ಎಂಬ ಸಮಾಧಾನ ಈ ದಿನ ನಿಮಗೆ ಸಿಗಲಿದೆ.