All posts by nagaraj11081993

ಮೊದಲ ಬಾರಿಗೆ ಡಿಕೆಶಿ ವಿರುದ್ಧ ಅಬ್ಬರಿಸಿ ತೊಡೆ ತಟ್ಟಿದ ವಿಜಯೇಂದ್ರ, ಡಿಸಿಎಂ ತಾಕತ್ತಿಗೆ ಸವಾಲ್ – Kannada News | BJP President BY Vijayendra first time Open Challenged To DCM DK Shivakumar

ಬೆಳಗಾವಿ, (ಡಿಸೆಂಬರ್ 18):ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra)ನಡುವಿನ ಮಾತಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೇ ಮೊದಲ ಬಾರಿಗೆ ವಿಜಯೇಂದ್ರ, ಡಿಕೆಶಿ ವಿರುದ್ಧ ಗಟ್ಟಿ ಧ್ವನಿಯಲ್ಲಿ ಅಬ್ಬರಿಸಿ ತೊಡೆ ತಟ್ಟಲು ಪ್ರಯತ್ನಿಸಿದ್ದಾರೆ. ರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್‌ (Congress) ತನ್ನ ಹೈಕಮಾಂಡ್‌ ತೃಪ್ತಿ ಪಡಿಸುತ್ತಿದೆ ಎಂಬ ವಿಜಯೇಂದ್ರ ಹೇಳಿಕೆಗೆ ಕೆಂಡಮಂಡಲಾದ ಡಿಕೆ ಶಿವಕುಮಾರ್, ಕಲೆಕ್ಷನ್‌ ಕಿಂಗ್‌ ಅಂದ್ರೆ ಅದು ವಿಜಯೇಂದ್ರ. ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರ, ಅವರ ಕಲೆಕ್ಷನ್‌, ವರ್ಗಾವಣೆ ದಂಧೆ ಎಲ್ಲವನ್ನ ಬಿಚ್ಚಿಡಬೇಕಾ ಎಂದು ಎಂದು ತಿರುಗೇಟು ನೀಡಿದ್ದಾರೆ. ಇದಕ್ಕೆ ವಿಜಯೇಂದ್ರ ಪ್ರತಿಕ್ರಿಯಿಸಿ, ಡಿಕೆಶಿ ತಾಕತ್ತಿಗೆ ಸವಾಲು ಹಾಕಿದ್ದಾರೆ.

ಅಧಿಕಾರದ ಮದ ಮಾತನಾಡಿಸಿದೆ

ಬೆಳಗಾವಿಯಲ್ಲಿಂದು ಮಾತನಾಡಿರುವ  ವಿಜಯೇಂದ್ರ,   ಡಿ.ಕೆ.ಶಿವಕುಮಾರ್ ಮನಬಂದಂತೆ ಮಾತಾಡಿದ್ದಾರೆ. ಅಧಿಕಾರದ ಮದ ಮಾತನಾಡಿಸಿರಬಹುದು.ಯಾರಿಗೋ ದಬ್ಬಾಳಿಕೆ ಮಾಡಿದಂತೆ ನನಗೆ ಮಾಡುವುದಕ್ಕೆ ಬರಬೇಡಿ. ನಾನು ಒಬ್ಬ ಪ್ರತಿನಿಧಿ ಹಾಗೂ ಒಂದು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೇನೆ. ಬಿ.ಎಸ್​.ಯಡಿಯೂರಪ್ಪನವರ ವಿರುದ್ಧ ಹೇಗೆ ಷಡ್ಯಂತ್ರ ಮಾಡಿದ್ದರೋ ಗೊತ್ತಿದೆ. ಅದನ್ನೆಲ್ಲಾ ಈಗ ಮಾತನಾಡುವುದಕ್ಕೆ ಬರಬೇಡಿ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ನೋಡಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ಡಿಕೆಶಿ ಬಣಕ್ಕೆ ಮತ್ತೆ ರಾಜಣ್ಣ ಟಾಂಗ್

ಡಿಕೆಶಿ ತಾಕತ್ತಿಗೆ ವಿಜಯೇಂದ್ರ ಸವಾಲ್

ಡಿಕೆ ಶಿವಕುಮಾರ್​​ ಅವರಿಂದ ನಾನು ಪಾಠ ಕಲಿಯುವ ಅಗತ್ಯ ಇಲ್ಲ. ಭ್ರಷ್ಟಾಚಾರದ ಪಿತಾಮಹ ಯಾರು ಎಂದು ಕೇಳಿದರೆ ರಾಜ್ಯದಲ್ಲಿ ಡಿಕೆಶಿ ಹೆಸರೇ ಹೇಳ್ತಾರೆ. ನನ್ನ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿಹಿಡಿದು ಮಾತನಾಡಲಿ. ನಾವೇನು ಹೆದರಿಕೊಂಡು ಓಡಿ ಹೋಗ್ತಿದ್ದೀವಾ? ಕಾಂಗ್ರೆಸ್​ನವರ ಯೋಗ್ಯತೆ ಏನು ಅನ್ನೋದು ಇಡೀ ದೇಶಕ್ಕೆ ಗೊತ್ತಿದೆ. ತಾಕತ್ತು ಇದ್ದರೆ ಅದೇನು ಬಿಚ್ಚಿಡ್ತಾರೋ ಬಿಚ್ಚಿಡ್ಲಿ ಎಂದು ಸವಾಲ್ ಹಾಕಿದ್ದಾರೆ.

ಈ ಸರ್ಕಾರದ ಯೋಗ್ಯತೆಗೆ ಒಂದು ಗುಂಡಿ ಮುಚ್ಚೋದಕ್ಕೂ ಸಾಧ್ಯ ಆಗಿಲ್ಲ.ಡಿಕೆ ಶಿವಕುಮಾರ್ ಭ್ರಷ್ಟಾಚಾರ ಬಗ್ಗೆ ಮಾತನಾಡದಿದ್ದರೆ ಒಳ್ಳೆಯದು. ಭ್ರಷ್ಟಾಚಾರದ ಪಿತಾಮಹ ಯಾರು ಎಂದು ಕೇಳಿದರೆ ರಾಜ್ಯದಲ್ಲಿ ಡಿಕೆಶಿ ಹೆಸರೇ ಹೇಳ್ತಾರೆ. ಯಾವ ಪುರುಷಾರ್ಥಕ್ಕೆ ಮಾತನಾಡ್ತಿದ್ದೀರಿ. ರಾಜ್ಯದಲ್ಲಿ 2.5 ಲಕ್ಷ ಹುದ್ದೆ ಖಾಲಿ ಇವೆ. ಈ ಸರ್ಕಾರ ಬಂದಾಗಿನಿಂದ ಹುದ್ದೆಗಳನ್ನು ಭರ್ತಿ ಮಾಡಲು ಆಗಿಲ್ಲ. ಸಿಎಂ ತವರು ಜಿಲ್ಲೆಯಲ್ಲಿ ಚೈತ್ರ ಬಿ ಕುರುಬುರು ಗ್ರಾಮ 32 ಬಾರಿ ಕೋಕೋ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ನಾಚಿಕೆಗೇಡಿನ ಈ ಸರ್ಕಾರ ಆಕೆ ಕೇವಲ 5 ಲಕ್ಷ ರೂ. ಬಹುಮಾನ ಕೊಟ್ಟಿದ್ದಾರೆ. ಸರ್ಕಾರದ ಮುಖಕ್ಕೆ ಆಕೆ ಹಣವನ್ನು ವಾಪಸ್ ಬಿಸಾಡಿದ್ದಾಳೆ. ಖಜಾನೆ ಖಾಲಿಯಾಗಿದ್ದಕ್ಕೆ ಈ ಸರಕಾರ ಹೀಗೆ ಮಾಡುತ್ತಿದೆ ಇಂಥ ಕೆಟ್ಡ ಪರಿಸ್ಥಿತಿ ಹಿಂದೆ ಯಾವ ಸರ್ಕಾರಕ್ಕೂ ಬಂದಿರಲಿಲ್ಲ. ಯಾರಿಗೋ ದಬ್ಬಾಳಿಕೆ ಮಾಡಿದಂತೆ ನನಗೆ ಮಾಡುವುದಕ್ಕೆ ಬರಬೇಡಿ ಎಂದು ಕಿಡಿಕಾರಿದರು.

ಮೊದಲ ಬಾರಿಗೆ ಅಬ್ಬರಿಸಿದ ವಿಜಯೇಂದ್ರ

ಹೌದು….ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷ ಆಯ್ತು ವಿಜಯೇಂದ್ರ ಈ ರೀತಿ ಯಾವಾತ್ತು ಗಟ್ಟಿ ಧ್ವನಿಯಲ್ಲಿ ಡಿಕೆ ಶಿವಕುಮಾರ್ ಅಥವಾ ಸಿದ್ದರಾಮಯ್ಯನವರ ವಿರುದ್ಧ ಮಾತನಾಡಿದ ಉದಾಹರಣೆಗಳಿಲ್ಲ.  ಹೀಗಾಗಿ ವಿಜಯೇಂದ್ರ ವಿರುದ್ಧ ಅಡ್ಜಸ್ಟ್​ಮೆಂಟ್ ರಾಜಕಾರಣದ ಆರೋಪಗಳು ಕೇಳಿಬಂದಿದ್ದವು.  ಆದ್ರೆ, ಇವತ್ತು ಇದೇ ಮೊದಲ ಬಾರಿಗೆ ವಿಜಯೇಂದ್ರ ಸಿಡಿದೆದಿದ್ದು,  ಡಿಕೆಶಿ ವಿರುದ್ಧ ಮನಸೋ ಇಚ್ಚೇ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಅದೇನು ಬಿಚ್ಚಿ ಇಡ್ತಾರೋ ಇಡಲಿ ಎಂದು ಬಹಿರಂಗ ಸವಾಲು ಹಾಕಿದ್ದಾರೆ.

Source link

World Meditation Day: ಡಿ. 21 ವಿಶ್ವ ಧ್ಯಾನ ದಿನ; ಅಶಾಂತ ಜಗತ್ತಿಗೆ ಧ್ಯಾನವೇ ಶಾಂತಿಯ ದಾರಿ: ರವಿಶಂಕರ್ ಗುರೂಜಿ – Kannada News | World Meditation Day: Sri Sri Ravi Shankar Urges Global Peace and Mental Health

ಕಳೆದ ವರ್ಷ ಜಿನೀವಾದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 21ನ್ನು ಪ್ರಥಮ ‘ವಿಶ್ವ ಧ್ಯಾನ ದಿನ’ವಾಗಿ ಘೋಷಿಸಿತು. ಈ ಐತಿಹಾಸಿಕ ದಿನದಂದೇ, ಜಗತ್ತಿನಾದ್ಯಂತ 8.5 ಮಿಲಿಯನ್‌ಕ್ಕಿಂತ ಹೆಚ್ಚು ಜನರು ಒಂದೇ ಸಮಯದಲ್ಲಿ ಧ್ಯಾನದಲ್ಲಿ ಭಾಗವಹಿಸಿದ್ದರು. ಇದು ಇತಿಹಾಸದಲ್ಲೇ ಅತಿದೊಡ್ಡ ಸಾಮೂಹಿಕ ಧ್ಯಾನ ಸಮಾಗಮವಾಗಿ ದಾಖಲೆ ನಿರ್ಮಿಸಿತು.

ಈ ಸಂದರ್ಭದಲ್ಲಿ ಜಾಗತಿಕ ಆಧ್ಯಾತ್ಮಿಕ ನಾಯಕ ಹಾಗೂ ಮಾನವತಾವಾದಿ ಗುರುದೇವ್ ಶ್ರೀ ಶ್ರೀ ರವಿ ಶಂಕರರು, ಬುಧವಾರ ಜಿನೀವಾದಲ್ಲಿನ ವಿಶ್ವಸಂಸ್ಥೆಯ ಸಭಾಂಗಣದಿಂದ ಮಾತನಾಡುತ್ತಾ, ಅಶಾಂತಿ, ಸಂಘರ್ಷ ಮತ್ತು ಒತ್ತಡದಿಂದ ಬಳಲುತ್ತಿರುವ ಇಂದಿನ ಜಗತ್ತಿಗೆ ಧ್ಯಾನ ಅತ್ಯವಶ್ಯಕ ಎಂದು ಹೇಳಿದರು. ಧ್ಯಾನವನ್ನು ಜೀವನದ ಅವಿಭಾಜ್ಯ ಭಾಗವನ್ನಾಗಿ ಮಾಡಿಕೊಳ್ಳುವಂತೆ ಅವರು ವಿಶ್ವದ ಜನತೆಗೆ ಕರೆ ನೀಡಿದರು.

ಅದರಂತೆ ಈ ಡಿಸೆಂಬರ್ 19ರಂದು ಅವರು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮುಖ್ಯ ಭಾಷಣ ನೀಡಲಿದ್ದು, ಡಿಸೆಂಬರ್ 21ರಂದು ವರ್ಲ್ಡ್ ಟ್ರೇಡ್ ಸೆಂಟರ್‌ನಿಂದ (ಭಾರತೀಯ ಕಾಲಮಾನ ರಾತ್ರಿ 8.30ಕ್ಕೆ) ಜಾಗತಿಕ ಧ್ಯಾನವನ್ನು ನಡೆಸಲಿದ್ದಾರೆ.

ಸಮಾಜಕ್ಕೂ ಅಗತ್ಯವಾದ ಧ್ಯಾನ:

ಧ್ಯಾನವು ಕೇವಲ ವೈಯಕ್ತಿಕ ಸುಖ–ಶಾಂತಿಗಷ್ಟೇ ಸೀಮಿತವಲ್ಲ, ದಣಿವು, ಒತ್ತಡ, ಘರ್ಷಣೆ, ಅನಿಶ್ಚಿತತೆ ಮತ್ತು ಭಾವನಾತ್ಮಕ ಸಂಕಟಗಳಿಂದ ಬಳಲುತ್ತಿರುವ ಸಂಪೂರ್ಣ ಸಮಾಜಕ್ಕೂ ಧ್ಯಾನ ಅತ್ಯಂತ ಪ್ರಸ್ತುತವಾಗಿದೆ ಎಂದು ಎಂದು ಗುರುದೇವ ತಮ್ಮ ಭಾಷಣದಲ್ಲಿ ಹೇಳಿದರು.

‘ಜಾಗತಿಕ ಶಾಂತಿಗಾಗಿ ವಿಶ್ವವು ಧ್ಯಾನ ಮಾಡುತ್ತದೆ’ ಎಂಬ ಶೀರ್ಷಿಕೆಯಡಿ, ಎರಡನೇ ವಿಶ್ವ ಧ್ಯಾನ ದಿನದ ಶುಭಾರಂಭ ಕಾರ್ಯಕ್ರಮ ಜಿನೀವಾದಲ್ಲಿನ ಯುಎನ್ ಕಚೇರಿಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಜಿನೀವಾದಲ್ಲಿನ ಭಾರತದ ಶಾಶ್ವತ ಮಿಷನ್ ಹಾಗೂ ದಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಸಂಯುಕ್ತವಾಗಿ ಆಯೋಜಿಸಿತ್ತು.

ಮಾನವ ಮನಸ್ಸಿನ ಸ್ಥಿರತೆಯ ಅಗತ್ಯ:

ಎಲ್ಲಾ ವಯೋಮಾನದವರಲ್ಲೂ ಮತ್ತು ಎಲ್ಲಾ ದೇಶಗಳಲ್ಲೂ ಆತಂಕ, ದೈಹಿಕ–ಮಾನಸಿಕ ದಣಿವು ಹಾಗೂ ಏಕಾಂಗಿತನ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಬಾಹ್ಯ ಪರಿಹಾರಗಳಷ್ಟೇ ಸಾಕಾಗುವುದಿಲ್ಲ; ಮಾನವ ಮನಸ್ಸಿನ ಸ್ಥಿರತೆಯೂ ಅಗತ್ಯ ಎಂಬ ಸಂದೇಶವನ್ನು ಗುರುದೇವರು ನೀಡಿದರು.

“ಧ್ಯಾನ ಇಂದು ಜಗತ್ತಿಗೆ ಐಶಾರಾಮಿ ವಿಷಯವಲ್ಲ. ಜನಸಂಖ್ಯೆಯ ಮೂರನೇ ಒಂದು ಭಾಗ ಒಂಟಿತನದಿಂದ ಬಳಲುತ್ತಿದ್ದು, ಅರ್ಧದಷ್ಟು ಜನರು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವಾಗ, ಮನಸ್ಸನ್ನು ಶಾಂತಗೊಳಿಸುವ ಮಾರ್ಗ ನಮಗೆ ಬೇಕಾಗಿದೆ. ಇಲ್ಲಿ ಧ್ಯಾನವೇ ಪ್ರಮುಖ ಪಾತ್ರ ವಹಿಸುತ್ತದೆ,” ಎಂದು ಅವರು ಹೇಳಿದರು.

ಧ್ಯಾನದ ಮಹತ್ವ:

ಧ್ಯಾನ ಹಾಗೂ ಪ್ರಜ್ಞಾಪೂರ್ವಕ ಸ್ಥಿತಿ (ಮೈಂಡ್‌ಫುಲ್‌ನೆಸ್) ಕುರಿತು ಮಾತನಾಡಿದ ಗುರುದೇವರು,
“ಮೈಂಡ್‌ಫುಲ್‌ನೆಸ್ ದಾರಿಯಾದರೆ, ಧ್ಯಾನವು ಮನೆ ಇದ್ದಂತೆ. ಧ್ಯಾನ ನಿಮ್ಮನ್ನು ನಿಮ್ಮ ಅಂತರಾಳಕ್ಕೆ ಕೊಂಡೊಯ್ದು ಆಳವಾದ ನೆಮ್ಮದಿಯನ್ನು ನೀಡುತ್ತದೆ. ಕಂಪ್ಯೂಟರ್‌ನಲ್ಲಿ ಅನಾವಶ್ಯಕ ಕಡತಗಳನ್ನು ಡಿಲೀಟ್ ಮಾಡುವಂತೆ, ಧ್ಯಾನ ಮನಸ್ಸಿನಲ್ಲಿರುವ ಅನಗತ್ಯ ಒತ್ತಡವನ್ನು ದೂರಮಾಡುತ್ತದೆ,” ಎಂದು ವಿವರಿಸಿದರು.

ಜಾಗತಿಕ ಸಾಮರಸ್ಯಕ್ಕೆ ಧ್ಯಾನ:

“ನಾವೆಲ್ಲರೂ ಚೈತನ್ಯಮಯವಾಗಿದ್ದೇವೆ. ನಮ್ಮ ಚೈತನ್ಯ ಶಕ್ತಿ ಸಾಮರಸ್ಯಪೂರ್ಣವಾಗಿದೆಯೇ ಎಂಬುದನ್ನು ಗಮನಿಸಬೇಕು. ಇದಕ್ಕೆ ಉತ್ತರವೇ ಧ್ಯಾನ. ಅದು ನಮ್ಮ ಸುತ್ತಲೂ ಏಕತೆ ಮತ್ತು ಶುದ್ಧತೆಯನ್ನು ತರುತ್ತದೆ,” ಎಂದು ಗುರುದೇವರು ಹೇಳಿದರು.

ಐತಿಹಾಸಿಕ ಸಾಧನೆ:

ಕಳೆದ ವರ್ಷ ‘ಗುರುದೇವರೊಂದಿಗೆ ವಿಶ್ವ ಧ್ಯಾನ ಮಾಡುತ್ತದೆ’ ಕಾರ್ಯಕ್ರಮದಲ್ಲಿ 8.5 ಮಿಲಿಯನ್‌ಕ್ಕಿಂತ ಹೆಚ್ಚು ಜನರು ಭಾಗವಹಿಸಿದ್ದು, ಆರು ಗಿನ್ನಿಸ್ ವಿಶ್ವ ದಾಖಲೆಗಳನ್ನು ಸ್ಥಾಪಿಸಿತು. ಮನೆಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ, ಕೆಲಸದ ಸ್ಥಳಗಳಲ್ಲಿ, ಸಂಘರ್ಷಪೀಡಿತ ಪ್ರದೇಶಗಳಲ್ಲೂ ಸೇರಿದಂತೆ ವಿವಿಧ ಸಮಾಜ–ಸಮುದಾಯಗಳಿಂದ ಜನರು ಇದರಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಶಬರಿಮಲೆ ಅಯ್ಯಪ್ಪ ದೇವಾಲಯದ 18 ಪವಿತ್ರ ಮೆಟ್ಟಿಲುಗಳ ಮಹತ್ವವೇನು ಗೊತ್ತಾ?

ಭಾರತದ ಶಾಶ್ವತ ಪ್ರತಿನಿಧಿಯ ಮಾತು:

ಜಿನೀವಾದಲ್ಲಿನ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿ ಸನ್ಮಾನ್ಯ ಅರಿಂದಮ್ ಬಾಗ್ಚಿ ಮಾತನಾಡುತ್ತಾ,
“ಸಂಕೀರ್ಣ ಸಂಘರ್ಷಗಳಿಂದ ಕೂಡಿರುವ ಇಂದಿನ ಜಗತ್ತಿನಲ್ಲಿ, ಧ್ಯಾನವು ಕೇವಲ ವೈಯಕ್ತಿಕ ಅಭ್ಯಾಸವಲ್ಲ; ಜಾಗತಿಕ ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುವ ಶಕ್ತಿಶಾಲಿ ಸಾಧನವಾಗಿದೆ,” ಎಂದರು.

182ಕ್ಕೂ ಹೆಚ್ಚು ದೇಶಗಳಲ್ಲಿ ಸೇವೆ:

ಒಮ್ಮೆ ಪಾಶ್ಚಾತ್ಯ ಜಗತ್ತಿನಲ್ಲಿ ವಿಚಿತ್ರವೆಂದು ಪರಿಗಣಿಸಲಾಗುತ್ತಿದ್ದ ಧ್ಯಾನವನ್ನು, ಗುರುದೇವ್ ಶ್ರೀ ಶ್ರೀ ರವಿ ಶಂಕರರು ಜಾಗತಿಕ ಚಳವಳಿಯಾಗಿ ರೂಪಿಸಿದ್ದಾರೆ. ಶಿಕ್ಷಣ, ಸಂಘರ್ಷ ಪರಿಹಾರ, ರೈತ ಕಲ್ಯಾಣ, ಕಾರಾಗೃಹ ಪುನರ್ವಸತಿ, ಯುವ ನಾಯಕತ್ವ ಮತ್ತು ಕಾರ್ಪೊರೇಟ್ ಒತ್ತಡ ನಿರ್ವಹಣೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅವರು 182ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅಶಾಂತ ಮತ್ತು ಅನಿಶ್ಚಿತತೆಯಿಂದ ತುಂಬಿರುವ ಇಂದಿನ ಕಾಲಘಟ್ಟದಲ್ಲಿ, ಶಾಂತಿಯ ನಿಜವಾದ ಕೀಲಿಕೈ ಮಾನವ ಮನಸ್ಸಿನಲ್ಲೇ ಇದೆ ಎಂಬುದನ್ನು ಜಗತ್ತಿಗೆ ನೆನಪಿಸುವ ಕ್ಷಣ ಇದಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:15 pm, Thu, 18 December 25

Source link

ಭಾರತೀಯ ಪ್ರಜೆಗಳು ಅಮೆರಿಕದಲ್ಲಿ ಎಷ್ಟು ಸಮಯ ಉಳಿಯಬಹುದು?ವೀಸಾ ಮುಕ್ತಾಯದ ಬಗ್ಗೆ ಸ್ಪಷ್ಟನೆ ಇಲ್ಲಿದೆ – Kannada News | How long can Indian visitors stay in US? Embassy clarification on visa expiry date

ನವದೆಹಲಿ, ಡಿಸೆಂಬರ್ 18: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ವಲಸಿಗರ ಮೇಲಿನ ಕಠಿಣ ಕ್ರಮದ ಮಧ್ಯೆ ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿಯು ವಿದೇಶಿಗರು ಅಮೆರಿಕದಲ್ಲಿ ಎಷ್ಟು ದಿನಗಳು ಉಳಿಯಬಹುದು? ಎಂಬುದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಬಹಿರಂಗಗೊಳಿಸಿದೆ. ಈ ಬಗ್ಗೆ ಮಾಡಿರುವ ಎಕ್ಸ್​ ಪೋಸ್ಟ್‌ನಲ್ಲಿ ರಾಯಭಾರ ಕಚೇರಿಯು ಅಮೆರಿಕದಲ್ಲಿ ವಿಸಿಟರ್​​ಗಳ ವಾಸ್ತವ್ಯದ ಅವಧಿಯು ಅವರ ವೀಸಾ ಮುಕ್ತಾಯ ದಿನಾಂಕದ ಪ್ರಕಾರವಾಗಿರುವುದಿಲ್ಲ ಎಂದು ಹೇಳಿದೆ.

“ಅಂತಾರಾಷ್ಟ್ರೀಯ ವಿಸಿಟರ್​​ಗಳಿಗೆ ಅಮೆರಿಕದಲ್ಲಿ ಉಳಿಯಲು ಅನುಮತಿಸಲಾದ ಸಮಯವನ್ನು ಅವರ ಆಗಮನದ ನಂತರ ಕಸ್ಟಮ್ಸ್ ಮತ್ತು ಗಡಿ ರಕ್ಷಣಾ ಅಧಿಕಾರಿ ನಿರ್ಧರಿಸುತ್ತಾರೆ. ವೀಸಾ ಮುಕ್ತಾಯದ ದಿನಾಂಕಕ್ಕೂ ಅವರು ಅಮೆರಿಕದಲ್ಲಿ ಉಳಿಯಲು ಇರುವ ಗಡುವಿಗೂ ಸಂಬಂಧವಿಲ್ಲ. ವೀಸಾ ಮುಕ್ತಾಯದ ದಿನಾಂಕಕ್ಕೂ ಮೊದಲೇ ಅವರು ಅಮೆರಿಕ ಬಿಟ್ಟು ಹೊರಡಬೇಕಾಗಬಹುದು. ನೀವು ಎಷ್ಟು ಕಾಲ ಉಳಿಯಬಹುದು ಎಂಬುದನ್ನು ನೋಡಲು, https://i94.cbp.dhs.gov ನಲ್ಲಿ ನಿಮ್ಮ I-94 ‘Admit Until Date’ ಅನ್ನು ಪರಿಶೀಲಿಸಿ” ಎಂದು ರಾಯಭಾರ ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸತ್ತ ಆರ್ಥಿಕತೆ ಎಂದಿದ್ದ ಟ್ರಂಪ್​ಗೆ ತಕ್ಕ ಉತ್ತರ; ನವೆಂಬರ್​ನಲ್ಲಿ ಅಮೆರಿಕಕ್ಕೆ ಭಾರತದ ರಫ್ತು ಭರ್ಜರಿ ಏರಿಕೆ

ಅಮೆರಿಕದ ಹೆಚ್ಚಿನ ವಿಸಿಟರ್​​ಗಳಿಗೆ ಕಡ್ಡಾಯವಾಗಿರುವ I-94 ಫಾರ್ಮ್ ‘admit Until date’ ಮಾಹಿತಿಯನ್ನು ಹೊಂದಿರುತ್ತದೆ. ಒಬ್ಬ ವ್ಯಕ್ತಿಯು ಅಮೆರಿಕದ ನೆಲದಲ್ಲಿ ಉಳಿಯಬಹುದಾದ ಕೊನೆಯ ದಿನಾಂಕವನ್ನು ಇದು ತೋರಿಸುತ್ತದೆ. ಪ್ರಯಾಣಿಕರು ಗಮನಿಸಬೇಕಾದ ಅಂಶವೆಂದರೆ ಆ ದಿನಾಂಕವು ಅವರ ವೀಸಾ ಮುಕ್ತಾಯ ದಿನಾಂಕದೊಂದಿಗೆ ಹೊಂದಿಕೆಯಾಗುವುದಿಲ್ಲ. ಅದನ್ನು ಅವರು ಅಮೆರಿಕದ ಗಡಿಯನ್ನು ತಲುಪಿದ ನಂತರ ಕಸ್ಟಮ್ಸ್ ಅಧಿಕಾರಿ ನಿರ್ಧರಿಸುತ್ತಾರೆ.

ಇದನ್ನೂ ಓದಿ: ಅಮೌಂಟು, ಟ್ಯಾಲೆಂಟು ಎರಡೂ ಇದ್ರೆ ಮಾತ್ರ ತೆರೆಯುತ್ತೆ ಅಮೆರಿಕದ ಗೇಟು; ಇಲ್ಲಿದೆ ಟ್ರಂಪ್ ಗೋಲ್ಡ್ ಕಾರ್ಡ್ ವೀಸಾ ರೇಟು

ಸಾಮಾನ್ಯವಾಗಿ ವಿಮಾನ ನಿಲ್ದಾಣ ಅಥವಾ ಬಂದರು ಮೂಲಕ ಅಮೆರಿಕಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಕಸ್ಟಮ್ಸ್ ಮತ್ತು ಗಡಿ ಪೊಲೀಸ್ ಅಧಿಕಾರಿ ಎಲೆಕ್ಟ್ರಾನಿಕ್ I-94 ಫಾರ್ಮ್ ಅನ್ನು ಒದಗಿಸುತ್ತಾರೆ. ಈ ವ್ಯಕ್ತಿಗಳು ಇನ್ನು ಮುಂದೆ I-94 ಗೆ ಅರ್ಜಿ ಸಲ್ಲಿಸಲು ವೆಬ್‌ಸೈಟ್ ಅನ್ನು ಬಳಸಬೇಕಾಗಿಲ್ಲ. ಆದರೆ, ಭೂಮಿ ಅಥವಾ ಹಡಗಿನ ಮೂಲಕ ಅಮೆರಿಕವನ್ನು ಪ್ರವೇಶಿಸುವವರು ತಾತ್ಕಾಲಿಕ I-94 ಗೆ ಅರ್ಜಿ ಸಲ್ಲಿಸಲು ವೆಬ್‌ಸೈಟ್ ಅನ್ನು ಬಳಸಬೇಕಾಗುತ್ತದೆ. ಹೀಗಾಗಿ ಅದಾದ ನಂತರ ಪ್ರವೇಶದ ಹಂತದಲ್ಲಿ ಅವರು ಅಮೆರಿಕದಲ್ಲಿ ವಾಸವಾಗುವ ಗಡುವಿನ ಸಮಯವನ್ನು ನಿರ್ಧರಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಹಿರಿಯ ನಟನ ‘ವಾರಣಾಸಿ’ ಸಿನಿಮಾದಿಂದ ಹೊರಗಟ್ಟಿದರೇ ರಾಜಮೌಳಿ – Kannada News | SS Rajamouli replaces Bollywood actor Rajath Kapoor from Varanasi movie

ರಾಜಮೌಳಿ (Rajamouli) ಈಗ ಪ್ಯಾನ್ ವರ್ಲ್ಡ್ ನಿರ್ದೇಶಕ. ಅವರ ಸಿನಿಮಾನಲ್ಲಿ ಸಣ್ಣ ಪಾತ್ರದಲ್ಲಾಗಲೂ ನಟಿಸಲು ದೊಡ್ಡ ದೊಡ್ಡ ನಟರೇ ಸಾಲುಗಟ್ಟಿ ನಿಂತಿದ್ದಾರೆ. ರಾಜಮೌಳಿ ಸಿನಿಮಾನಲ್ಲಿ ಸಣ್ಣ ಪಾತ್ರದಲ್ಲಿ ನಟಿಸಲು ಸಹ ದೊಡ್ಡ ಸಿನಿಮಾಗಳನ್ನೇ ಕೈಬಿಡಲು ರೆಡಿ ಇದ್ದಾರೆ. ಅವರ ಸಿನಿಮಾನಲ್ಲಿ ನಟಿಸಲು ಅವಕಾಶ ಸಿಗುವುದೇ ಅದೃಷ್ಟವೆಂದು ಭಾವಿಸಲಾಗುತ್ತಿದೆ. ಹೀಗಿರುವಾಗ ಹಿಂದಿಯ ಜನಪ್ರಿಯ ಹಿರಿಯ ನಟರೊಬ್ಬರಿಗೆ ರಾಜಮೌಳಿ ತಮ್ಮ ಸಿನಿಮಾನಲ್ಲಿ ಅವಕಾಶ ನೀಡಿದ್ದರು. ಆದರೆ ಈಗ ಸಿನಿಮಾದಿಂದ ತೆಗೆದು ಹಾಕಿದ್ದಾರೆ.

ಹಿಂದಿ ಸಿನಿಮಾ ಮತ್ತು ಟಿವಿ ಎರಡೂ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ರಜತ್ ಕಪೂರ್ ಅವರು ‘ವಾರಣಾಸಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾನಲ್ಲಿ ನಾಯಕ ಮಹೇಶ್ ಬಾಬು ಅವರ ತಂದೆಯ ಪಾತ್ರದಲ್ಲಿ ರಜತ್ ಕಪೂರ್ ನಟಿಸಲಿದ್ದಾರೆ. ಆದರೆ ಇದೀಗ ರಾಜಮೌಳಿ ಅವರು ರಜತ್ ಕಪೂರ್ ಅವರನ್ನು ಸಿನಿಮಾದಿಂದ ಕೈಬಿಟ್ಟಿದ್ದಾರಂತೆ. ಇದಕ್ಕೆ ಇಬ್ಬರ ನಡುವೆ ಮೂಡಿರುವ ಭಿನ್ನಾಭಿಪ್ರಾಯವೇ ಕಾರಣ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ವಾರಣಾಸಿ’ ಸಿನಿಮಾದಲ್ಲಿ ಕನ್ನಡದ ಖ್ಯಾತ ಹೀರೋಗೆ ಅವಕಾಶ ಕೊಟ್ಟ ರಾಜಮೌಳಿ

ರಜತ್ ಕಪೂರ್ ನಟರಾಗಿರುವ ಜೊತೆಗೆ ಬಾಲಿವುಡ್​ನ ಜನಪ್ರಿಯ ನಿರ್ದೇಶಕ ಸಹ. ಅವರ ಮೂರು ಸಿನಿಮಾಗಳು ರಾಷ್ಟ್ರಪ್ರಶಸ್ತಿಯನ್ನು ಸಹ ಪಡೆದುಕೊಂಡಿವೆ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರೂ ಆಗಿರುವ ರಜತ್ ಕಪೂರ್ ಅವರು, ರಾಜಮೌಳಿ ಅವರು ತಮ್ಮ ಪಾತ್ರವನ್ನು ಪ್ರಸ್ತುತ ಪಡಿಸುತ್ತಿರುವ ರೀತಿಯ ಬಗ್ಗೆ ತಕರಾರು ತೆಗೆದಿದ್ದರಂತೆ. ರಾಜಮೌಳಿ ಹಾಗೂ ರಜತ್ ಕಪೂರ್ ಅವರ ನಡುವೆ ಈ ಬಗ್ಗೆ ಸಾಕಷ್ಟು ಚರ್ಚೆಗಳು ಸಹ ಸೆಟ್​​ನಲ್ಲಿ ನಡೆದಿವೆ ಎನ್ನಲಾಗುತ್ತಿದೆ. ಆದರೆ ಅಂತಿಮವಾಗಿ ರಾಜಮೌಳಿ ಅವರು ಕಠಿಣ ನಿರ್ಧಾರ ತಳೆದಿದ್ದು ರಜತ್ ಕಪೂರ್ ಅವರನ್ನು ಸಿನಿಮಾದಿಂದ ಹೊರಗಿಟ್ಟಿದ್ದಾರೆ.

ತಾವು ಅಂದುಕೊಂಡಂತೆ ಸಿನಿಮಾ ಮೂಡಿಬರಲು ಏನು ಬೇಕಾದರೂ ಮಾಡುವ ರಾಜಮೌಳಿ, ಇದೀಗ ತಾವಂದುಕೊಂಡಂತೆ ಪಾತ್ರ ಮೂಡಿಬರುತ್ತಿಲ್ಲ, ನಟರಿಂದ ನಟನೆ ಹೊಮ್ಮುತ್ತಿಲ್ಲ ಎಂದಾಗ ಸಹಜವಾಗಿಯೇ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಹಿಂದೆ ಸಹ ಕೆಲವು ಬಾರಿ ಹೀಗೆ ಮಾಡಿದ್ದಿದೆ. ‘ಆರ್​​ಆರ್​​ಆರ್’ ಸಿನಿಮಾನಲ್ಲಿ ಆಲಿಯಾ ಭಟ್ ಅವರ ನಟನೆಯ ಹಲವು ದೃಶ್ಯಗಳನ್ನು ರಾಜಮೌಳಿ ಚಿತ್ರೀಕರಿಸಿಕೊಂಡಿದ್ದರು, ಆದರೆ ಸಿನಿಮಾದ ವೇಗಕ್ಕೆ ಅವು ತೊಡಕಾಗುತ್ತಿವೆ ಎಂದು ಡಿಲೀಟ್ ಮಾಡಿದ್ದರು. ಅದೇ ಸಿನಿಮಾನಲ್ಲಿ ಮಕರಂದ್ ದೇಶಪಾಂಡೆ ಅವರ ಸಾಕಷ್ಟು ದೃಶ್ಯಗಳನ್ನು ಸಹ ಶೂಟ್ ಮಾಡಲಾಗಿತ್ತು, ಆದರೆ ಅವನ್ನೂ ಸಹ ಡಿಲೀಟ್ ಮಾಡಿದ್ದರು ರಾಜಮೌಳಿ.

‘ವಾರಣಾಸಿ’ ಸಿನಿಮಾನಲ್ಲಿ ಮಹೇಶ್ ಬಾಬು ನಾಯಕರಾಗಿದ್ದು, ಪ್ರಿಯಾಂಕಾ ಚೋಪ್ರಾ ನಾಯಕಿ. ಪೃಥ್ವಿರಾಜ್ ಸುಕುಮಾರ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಮತ್ತೊಂದು ಪ್ರಮುಖ ಪಾತ್ರದಲ್ಲಿ ಆರ್ ಮಾಧವನ್ ಸಹ ನಟಿಸುತ್ತಿದ್ದಾರೆ. ಇದೇ ಸಿನಿಮಾನಲ್ಲಿ ಹಾಲಿವುಡ್​ನ ಸ್ಟಾರ್ ನಟರೊಬ್ಬರು ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

BPL ಕಾರ್ಡ್​​ದಾರರಿಗೆ ಶೀಘ್ರವೇ ಗುಡ್​​ನ್ಯೂಸ್​?: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ – Kannada News | Karnataka BPL Card Income Limit Revision: Good News for Beneficiaries?

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ ಪರಿಷ್ಕರಣೆ ಕುರಿತು ಚಿಂತನೆ ನಡೆದಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ . ಇಲ್ಲಿನ ಜನಸಂಖ್ಯೆಗೆ ಹೊಲಿಸಿದರೆ ಶೇ.73ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್​ ಪಡೆದಿವೆ. ರಾಜ್ಯವು ಜಿಎಸ್ಟಿ , ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶ ಪರಿಗಣಿಸಿದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50ರಷ್ಟು ಇರಬೇಕಿತ್ತು. ಆದರೆ ಅದಕ್ಕೂ ಹೆಚ್ಚಿನ ಕುಟುಂಬ ಬಿಪಿಎಲ್ ಕಾರ್ಡ್​​ ಪಡೆದುಕೊಂಡಿವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಅನರ್ಹ ಬಿಪಿಎಲ್ ಕಾರ್ಡ್​ದಾರರಿಗೆ ಶಾಕ್ ನೀಡಲಿದೆ ಆಹಾರ ಇಲಾಖೆ; 12 ಲಕ್ಷ ಪಡಿತರ ಚೀಟಿ ರದ್ದತಿಗೆ ತೆರೆಮರೆಯ ಸಿದ್ಧತೆ

ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಹಾಗೂ ಹೊರಗಿಡುವ ಬಗ್ಗೆ 2017ರಲ್ಲಿ ಮಾನದಂಡಗಳನ್ನು ರೂಪಿಸಲಾಗಿದೆ. ಇದರ ಅನ್ವಯ ಸರ್ಕಾರಿ, ಅನುದಾನಿತ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು, ಆದಾಯ, ಸೇವಾ ಹಾಗೂ ಜಿಎಸ್ಟಿ ತೆರಿಗೆ ಪಾವತಿ ಮಾಡುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದಿಲ್ಲ. ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕುಟುಂಬದ ಸದಸ್ಯರು ನೌಕರಿಗೆ ಸೇರಿದ್ದಾರೆ ಎನ್ನುವ ಕಾರಣದಿಂದ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ, ಬಾಧಿತ ಕುಟುಂಬದವರು ನೌಕರಿಗೆ ಸೇರಿದವರು ತಮ್ಮೊಂದಿಗೆ ವಾಸವಾಗಿಲ್ಲ ಎನ್ನುವ ಕಾರಣ ನೀಡಿದಲ್ಲಿ, ಸಂಬಂಧಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿದರೆ 15 ದಿನದ ಒಳಗಾಗಿ ಬಿಪಿಎಲ್ ಕಾರ್ಡ್ ಪುನಃ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Manufacturing sector: ಮತ್ತೆ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್ ಧ್ವನಿ; ಸತ್ಯ ಎಷ್ಟು, ಸುಳ್ಳೆಷ್ಟು? – Kannada News | Rahul Gandhi says Indian manufacturing declining, Amit Malviya and others counter with data

ನವದೆಹಲಿ, ಡಿಸೆಂಬರ್ 18: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿದೇಶಕ್ಕೆ ಹೋದಾಗೆಲ್ಲಾ ಭಾರತದ ಸರ್ಕಾರ ಹಾಗೂ ದೇಶದ ಪರಿಸ್ಥಿತಿ ಬಗ್ಗೆ ಟೀಕೆ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಜರ್ಮನಿಯ ಮ್ಯೂನಿಕ್ ನಗರದಲ್ಲಿ ಬಿಎಂಡಬ್ಲ್ಯು ಕಾರ್ ಕಂಪನಿಯ ಫ್ಯಾಕ್ಟರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಕಾರ್ಯ ಇಳಿಮುಖವಾಗಿದೆ ಎಂದು ಹೇಳಿ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಬಿಎಂಡಬ್ಲ್ಯುದ ಮುಖ್ಯ ಕಚೇರಿ ಮ್ಯೂನಿಕ್ ನಗರದಲ್ಲೇ ಇದೆ. ಅಲ್ಲೇ ಅದರ ವೆಲ್ಟ್ ಅಂಡ್ ಬಿಎಂಡಬ್ಲ್ಯು ಮ್ಯಾನುಫ್ಯಾಕ್ಚರಿಂಗ್ ಘಟಕ ಇದೆ. ಅಲ್ಲಿರುವ ಕೆಲಸಗಳನ್ನು ಅವಲೋಕಿಸಿದ ಅವರು, ನಂತರ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಅದೇ ಘಟಕದಲ್ಲಿ ಟಿವಿಎಸ್ ಹಾಗೂ ಬಿಎಂಡಬ್ಲ್ಯು ಜಂಟಿಯಾಗಿ 450 ಸಿಸಿ ಬೈಕ್ ಅಭಿವೃದ್ಧಿಪಡಿಸುತ್ತಿರುವುದನ್ನು ಕಂಡು ಖುಷಿ ವ್ಯಕ್ತಪಡಿಸಿದ್ದಾರೆ. ಬಳಿಕ ಭಾರತದಲ್ಲಿ ಉತ್ಪಾದನಾ ವಲಯ ಕುಸಿಯುತ್ತಿರುವುದಕ್ಕೆ ಖೇದ ವ್ಯಕ್ತಪಡಿಸಿದ್ದಾರೆ. ಅವರ ಈ ಅನಿಸಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಲವರು ದತ್ತಾಂಶ ಸಹಿತವಾಗಿ ಉತ್ತರ ಕೊಟ್ಟಿದ್ದಾರೆ.

ಇದನ್ನೂ ಓದಿ: ಓಮನ್ ಜೊತೆಗಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದದಿಂದ ಭಾರತಕ್ಕೆ ಆಗುವ ಲಾಭಗಳೇನು?

ಭಾರತದಲ್ಲಿ ಉತ್ಪಾದನೆ ಕಡಿಮೆ ಆಗಿದೆ ಎನ್ನುವುದು ಸುಳ್ಳು: ಅಮಿತ್ ಮಾಳವೀಯ

ಭಾರತದಲ್ಲಿ ಉತ್ಪಾದನೆ ಕುಸಿದಿದೆ ಎಂದ ರಾಹುಲ್ ಗಾಂಧಿ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಅಲ್ಲಗಳೆದಿದ್ದಾರೆ. ಎಲೆಕ್ಟ್ರಾನಿಕ್ಸ್, ಮೊಬೈಲ್ ಮ್ಯಾನುಫ್ಯಾಕ್ಚರಿಂಗ್, ಫಾರ್ಮಾಸ್ಯೂಟಿಕಲ್, ಎಂಜಿನಿಯರಿಂಗ್ ಗೂಡ್ಸ್, ಡಿಫೆನ್ಸ್ ಸೆಕ್ಟರ್​ಗಳಲ್ಲಿ ಭಾರತದ ರಫ್ತು ಹೆಚ್ಚಿರುವುದನ್ನು ಅವರು ಅಂಕಿ ಅಂಶ ಸಮೇತ ತೋರಿಸಿದ್ಧಾರೆ. 2014ರಲ್ಲಿ ಇದ್ದ ಸ್ಥಿತಿ, ಈಗ ಇರುವ ಸ್ಥಿತಿಯನ್ನು ತುಲನೆ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಮಿತ್ ಮಾಳವೀಯ ಪೋಸ್ಟ್ ಮಾಡಿದ್ದಾರೆ.

  • ಎಲೆಕ್ಟ್ರಾನಿಕ್ಸ್ ಉತ್ಪಾದನೆ: 1.9 ಲಕ್ಷ ಕೋಟಿ ರೂನಿಂದ 11.3 ಲಕ್ಷ ಕೋಟಿ ರೂಗೆ ಏರಿಕೆ.
  • ಎಲೆಕ್ಟ್ರಾನಿಕ್ಸ್ ರಫ್ತು: 38,000 ಕೋಟಿ ರೂನಿಂದ 3.27 ಲಕ್ಷ ಕೋಟಿ ರೂಗೆ ಏರಿಕೆ.
  • ಮೊಬೈಲ್ ಮ್ಯಾನುಫ್ಯಾಕ್ಚರಿಂಗ್ ಘಟಕ: 2ರಿಂದ 300ಕ್ಕೆ ಹೆಚ್ಚಳ
  • ಮೊಬೈಲ್ ಫೋನ್ ಉತ್ಪಾದನೆ: 18,000 ಕೋಟಿ ರೂನಿಂದ 5.45 ಲಕ್ಷ ಕೋಟಿ ರೂಗೆ ಏರಿಕೆ.
  • ಮೊಬೈಲ್ ಫೋನ್ ರಫ್ತು: 15,000 ಕೋಟಿ ರೂನಿಂದ 2 ಲಕ್ಷ ಕೋಟಿ ರೂಗೆ ಏರಿಕೆ.

ಅಮಿತ್ ಮಾಳವೀಯ ಅವರ ಎಕ್ಸ್ ಪೋಸ್ಟ್​ಗಳು

ಆಟೊಮೊಬೈಲ್ ಸೆಕ್ಟರ್​ನಲ್ಲಿ ಉತ್ಪಾದನೆ ಎಷ್ಟು ಹೆಚ್ಚಿದೆ?

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿ ಸದಸ್ಯರೂ ಆಗಿರುವ ಅಮಿತ್ ಮಾಳವೀಯ ಅವರು ಮತ್ತೊಂದು ಕುತೂಹಲಕಾರಿ ದತ್ತಾಂಶ ಬಹಿರಂಗಪಡಿಸಿದ್ದಾರೆ. ವಿಶ್ವದ ಅಗ್ರಮಾನ್ಯ 10 ವಾಹನ ಉತ್ಪಾದಕ ದೇಶಗಳ ಪೈಕಿ ಎಂಟು ದೇಶಗಳಲ್ಲಿ ವಾಹನ ಉತ್ಪಾದನೆ ಕಡಿಮೆ ಆಗಿದೆ. 2014ರಲ್ಲಿ ಆಗುತ್ತಿದ್ದುದಕ್ಕಿಂತ 2024ರಲ್ಲಿ ಆಗಿರುವ ಉತ್ಪಾದನೆ ಕಡಿಮೆ. ಉತ್ಪಾದನೆ ಹೆಚ್ಚಿಸಿದ ಎರಡು ದೇಶಗಳಲ್ಲಿ ಭಾರತವೂ ಒಂದು ಎಂದು ಅಮಿತ್ ಮಾಳವೀಯ ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕದಿಂದ ಪಾಕಿಸ್ತಾನಕ್ಕೆ ಮಿಲಿಟರಿ ಪ್ಯಾಕೇಜ್; ಪಾಕ್ ಅಂದ್ರೆ ಅಮೆರಿಕ, ಚೀನಾಗೆ ಯಾಕೆ ಪ್ರೀತಿ?

2014ರಿಂದೀಚೆಗೆ ಭಾರತದ ವಾಹನ ಉತ್ಪಾದನೆ ಎರಡು ಪಟ್ಟು ಹೆಚ್ಚಿದೆ. ಉಕ್ಕು, ಎಲೆಕ್ಟ್ರಾನಿಕ್ಸ್, ರಾಸಾಯನಿಕ, ಎಂಎಸ್​ಎಂಇ ಮತ್ತು ಸರ್ವಿಸ್ ಸೆಕ್ಟರ್​ಗಳೊಂದಿಗೆ ಆಟೊಮೊಬೈಲ್ ಸೆಕ್ಟರ್ ನಿಕಟ ಸಂಬಂಧ ಹೊಂದಿದೆ. ದೇಶದ ಜಿಡಿಪಿಗೆ ಆಟೊಮೊಬೈಲ್ ಸೆಕ್ಟರ್​ನ ಕೊಡುಗೆ ಶೇ 7.1ರಷ್ಟಿದೆ. ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ವಾಹನ ಉತ್ಪಾದಕ ದೇಶವೆನಿಸಿದೆ ಎಂದು ಅಮಿತ್ ಮಾಳವೀಯ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಬರೆದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Agniveer Recruitment: ಅಗ್ನಿವೀರ್ ನೇಮಕಾತಿಯಲ್ಲಿ ಐಟಿಐ-ಡಿಪ್ಲೊಮಾ ಪಡೆದವರಿಗೆ ಆದ್ಯತೆ ಏಕೆ? ಕಾರಣ ತಿಳಿಯಿರಿ – Kannada News | Agniveer Recruitment: ITI Diploma Holders Preferred Amidst Key Changes

ಅಗ್ನಿವೀರ್ ಯೋಜನೆಯಡಿ ನೇಮಕಗೊಂಡ ಮೊದಲ ಬ್ಯಾಚ್ ಮುಂದಿನ ವರ್ಷ ನಿವೃತ್ತರಾಗಲಿದೆ. ಇದರ ಜೊತೆಗೆ, ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಅಗ್ನಿವೀರ್ ನೇಮಕಾತಿಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜನೆಗಳು ನಡೆಯುತ್ತಿವೆ. ಅಗ್ನಿವೀರ್ ನೇಮಕಾತಿ ಯೋಜನೆಗೆ ಮಾಡಿದ ಬದಲಾವಣೆಗಳಿಗೆ ಸಂಬಂಧಿಸಿದಂತೆ, ಐಟಿಐ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳಿಗಿಂತ ಆದ್ಯತೆಯನ್ನು ಪಡೆಯುತ್ತಿದ್ದಾರೆ. ಇದಕ್ಕೆ ಹಲವಾರು ಪ್ರಮುಖ ಕಾರಣಗಳಿವೆ.

ಅಗ್ನಿವೀರ್ ನೇಮಕಾತಿಯಲ್ಲಿ ಐಟಿಐ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ಏಕೆ ಸಿಗುತ್ತಿದೆ, ಇದಕ್ಕೆ ಕಾರಣಗಳೇನು? ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆಗೆ ಐಟಿಐ ಡಿಪ್ಲೊಮಾಗಳು ಹೇಗೆ ಅವಶ್ಯಕವಾಗಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಸೇನೆಯಲ್ಲಿ ತಾಂತ್ರಿಕ ಯುವಕರಿಗೆ ಬೇಡಿಕೆ:

ವಾಸ್ತವವಾಗಿ, ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆಗೆ ಸಾಮಾನ್ಯ GD ಅಭ್ಯರ್ಥಿಗಳ ಜೊತೆಗೆ ತಾಂತ್ರಿಕ ಅಭ್ಯರ್ಥಿಗಳು ಬೇಕಾಗುತ್ತಾರೆ. ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆಯು ಪ್ರಾಥಮಿಕವಾಗಿ ತಮ್ಮ ಅಭ್ಯರ್ಥಿಗಳಲ್ಲಿ ಶೇ.50ಕ್ಕಿಂತ ಹೆಚ್ಚು ಜನರು ತಾಂತ್ರಿಕ ಸಿಬ್ಬಂದಿಯಾಗಿರಬೇಕು ಎಂದು ಬಯಸುತ್ತದೆ. ಈಗ, ಮಿಲಿಟರಿ ನೇಮಕಾತಿಯ ಸ್ವರೂಪ ಬದಲಾಗಿದೆ ಮತ್ತು ಮೂರೂ ಪಡೆಗಳು ಅಗ್ನಿವೀರ್ ನೇಮಕಾತಿಗೆ ಒತ್ತು ನೀಡುತ್ತಿವೆ, ಆದ್ದರಿಂದ ITI ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳಿಗೆ ಅಗ್ನಿವೀರ್ ನೇಮಕಾತಿಯ ಅಡಿಯಲ್ಲಿ ಆದ್ಯತೆ ನೀಡಲಾಗುತ್ತಿದೆ.

ತರಬೇತಿಯ ಸಮಸ್ಯೆಗೆ ಪರಿಹಾರ:

ಅಗ್ನಿವೀರ್ ನೇಮಕಾತಿ ಯೋಜನೆ ಆರಂಭವಾಗುವ ಮೊದಲು, ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆಯು ಸಾಮಾನ್ಯ ನೇಮಕಾತಿ ನಡೆಸಿದ ನಂತರ ಅಭ್ಯರ್ಥಿಗಳಿಗೆ ತಾಂತ್ರಿಕ ತರಬೇತಿಯನ್ನು ನೀಡುತ್ತಿತ್ತು. ಆದಾಗ್ಯೂ, ಈಗ ಕೇವಲ ನಾಲ್ಕು ವರ್ಷಗಳ ಅವಧಿಯನ್ನು ಹೊಂದಿರುವ ಅಗ್ನಿವೀರ್ ನೇಮಕಾತಿ ಯೋಜನೆಯಡಿಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಆದ್ದರಿಂದ, ಯಾವುದೇ ಅಭ್ಯರ್ಥಿಯನ್ನು ದೀರ್ಘಾವಧಿಯ ತರಬೇತಿಗೆ ಕಳುಹಿಸಲು ಸಾಧ್ಯವಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು, ಅಗ್ನಿವೀರ್ ಯೋಜನೆಯಡಿ ನೇಮಕಾತಿಯಲ್ಲಿ ಐಟಿಐ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿದೆ.

ಇದನ್ನೂ ಓದಿ: ಐಪಿಎಸ್ ಅಧಿಕಾರಿಯಾಗಲು 15 ಸರ್ಕಾರಿ ಉದ್ಯೋಗ ತೊರೆದ ತೃಪ್ತಿ ಭಟ್; ಯಶಸ್ಸಿನ ಕಥೆ ಇಲ್ಲಿದೆ

ಒಂದು ವರ್ಷದಲ್ಲಿ 1 ಲಕ್ಷ ಅಗ್ನಿವೀರರನ್ನು ನೇಮಿಸಿಕೊಳ್ಳುವ ಯೋಜನೆ:

ಭಾರತೀಯ ಸೇನೆಯ ಮೂರು ಶಾಖೆಗಳಾದ ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆಗಳು ಪ್ರಸ್ತುತ ಪ್ರತಿ ವರ್ಷ 40 ರಿಂದ 45 ಅಭ್ಯರ್ಥಿಗಳನ್ನು ಅಗ್ನಿವೀರ್ ನೇಮಕಾತಿ ಯೋಜನೆಯಡಿಯಲ್ಲಿ ನೇಮಕ ಮಾಡಿಕೊಳ್ಳುತ್ತವೆ. ಈ ಯುವಕರಲ್ಲಿ ಕೇವಲ 25 ಪ್ರತಿಶತದಷ್ಟು ಜನರನ್ನು ಮಾತ್ರ ಖಾಯಂಗೊಳಿಸಬೇಕಾಗಿದೆ, ಆದರೆ 75 ಅಭ್ಯರ್ಥಿಗಳು ನಿವೃತ್ತರಾಗುತ್ತಾರೆ. ಆದಾಗ್ಯೂ, ಪ್ರತಿ ವರ್ಷ 100,000 ಅಗ್ನಿವೀರ್‌ಗಳನ್ನು ನೇಮಕ ಮಾಡಿಕೊಳ್ಳುವ ಯೋಜನೆಯನ್ನು ಈಗ ಕೈಗೊಳ್ಳಲಾಗುತ್ತಿದೆ. ಭಾರತೀಯ ಸೇನೆಯಲ್ಲಿ ಸೈನಿಕರ ಕೊರತೆಯ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಪರಿಗಣಿಸಲಾಗುತ್ತಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:14 pm, Thu, 18 December 25

Source link

ಸುಲಭವಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ ಪ್ರತಿದಿನ ಬೆಳಗ್ಗೆ ಈ ನಾಲ್ಕು ಕೆಲಸಗಳನ್ನು ಮಾಡಿ – Kannada News | You can easily lose weight by following these habits in your morning routine

ಕಳಪೆ ಆಹಾರ ಪದ್ಧತಿ, ಜಡ ಜೀವನಶೈಲಿ (Lifestyle) ಇವೆಲ್ಲದರ ಕಾರಣದಿಂದಾಗಿ ತೂಕ ಹೆಚ್ಚಾಗುವುದು ಸಾಮಾನ್ಯವಾಗಿಬಿಟ್ಟಿದೆ. ಈ ತೂಕ ಇಳಿಸಿ ಫಿಟ್‌ ಮತ್ತು ಸ್ಲಿಮ್‌ ಆಗಿರುವುದು ಅನೇಕರಿಗೆ ಸವಾಲಿನ ಸಂಗತಿಯಾಗಿದೆ. ಹೌದು ಆಹಾರಕ್ರಮ, ಜಿಮ್‌, ಔಷಧಿ ಇವೆಲ್ಲವನ್ನೂ ಪ್ರಯತ್ನಿಸಿದರೂ ತೂಕ ಮಾತ್ರ ಇಳಿಕೆಯಾಗ್ತಿಲ್ಲ ಎಂದು ಹಲವರು ದೂರುತ್ತಿರುತ್ತಾರೆ. ಇದೇ ರೀತಿ ನೀವು ಸಹ ದೇಹ ತೂಕವನ್ನು ಇಳಿಸಿಕೊಳ್ಳಲು ಸಾಕಷ್ಟು ಸರ್ಕಸ್‌ ಮಾಡ್ತಿದ್ದೀರಾ? ಹಾಗಿದ್ರೆ ಬೆಳಗಿನ ದಿನಚರಿಯಲ್ಲಿ ಈ ಒಂದಷ್ಟು ಅಭ್ಯಾಸವನ್ನು ರೂಢಿಸಿಕೊಳ್ಳಿ ಮತ್ತು ಸುಲಭವಾಗಿ ದೇಹ ತೂಕವನ್ನು ಇಳಿಸಿಕೊಳ್ಳಿ.  ತೂಕ ಇಳಿಕೆಗಾಗಿ ಬೆಳಗ್ಗೆ ಮಾಡಬೇಕಾದ ಕೆಲಸಗಳೇನು ಎಂಬುದನ್ನು ನೋಡೋಣ ಬನ್ನಿ.

ತೂಕ ಇಳಿಕೆಗೆ ಬೆಳಗಿನ ದಿನಚರಿಯಲ್ಲಿ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ:

ಉಗುರು ಬೆಚ್ಚಗಿನ ನೀರು ಕುಡಿಯಿರಿ: ಬೆಳಿಗ್ಗೆ ಎದ್ದ ಕೂಡಲೇ ಒಂದರಿಂದ ಎರಡು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಈ ಅಭ್ಯಾಸವು ದೇಹದ ಚಯಾಪಚಯ ಕ್ರಿಯೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ನಿರ್ಜಲೀಕರಣವನ್ನು ನಿವಾರಿಸುತ್ತದೆ. ಉಗುರು ಬೆಚ್ಚಗಿನ ನೀರು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ, ದೇಹದಲ್ಲಿನ ವಿಷವನ್ನು ಹೊರಹಾಕುತ್ತದೆ ಮತ್ತು ಚಯಾಪಚಯ ದರವನ್ನು ಹೆಚ್ಚಿಸುತ್ತದೆ. ಅಲ್ಲದೆ ನೀವು ನೀರಿಗೆ ನಿಂಬೆ ರಸ, ಜೇನುತುಪ್ಪ ಅಥವಾ ಶುಂಠಿಯ ತುಂಡನ್ನು ಕೂಡ ಸೇರಿಸಬಹುದು. ಇದು ಕೊಬ್ಬನ್ನು ಸುಡುವ ಪ್ರಕ್ರಿಯೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ.

ಬಿಸಿಲಿನಲ್ಲಿ ಸ್ವಲ್ಪ ಸಮಯ ಕಳೆಯಿರಿ: ವಿಟಮಿನ್ ಡಿ ಪಡೆಯಲು ಬೆಳಗ್ಗೆ ಸ್ವಲ್ಪ ಸಮಯ ಬಿಸಿಲಿನಲ್ಲಿ ಕಳೆಯುವುದು ಅತ್ಯಗತ್ಯ. ಇದಲ್ಲದೆ, ಕನಿಷ್ಠ 15-20 ನಿಮಿಷಗಳ ಕಾಲ ಬಿಸಿಲಿನಲ್ಲಿ ಕಳೆಯುವುದರಿಂದ ದೇಹದ ಸಿರ್ಕಾಡಿಯನ್ ಲಯವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದು ಚಯಾಪಚಯ ಕ್ರಿಯೆ ಮತ್ತು ಹಸಿವನ್ನು ನಿಯಂತ್ರಿಸುವ ಹಾರ್ಮೋನುಗಳನ್ನು ಸಮತೋಲನಗೊಳಿಸುತ್ತದೆ. ಇದು ದಿನವಿಡೀ ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಅನಾರೋಗ್ಯಕರ ಆಹಾರದ ಹಂಬಲವನ್ನು ಕಡಿಮೆ ಮಾಡುತ್ತದೆ. ಈ ಮೂಲಕ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.

ಪ್ರೋಟೀನ್ ಭರಿತ ಉಪಹಾರವನ್ನು ಸೇವಿಸಿ: ಬೆಳಗಿನ ಉಪಾಹಾರವು ದಿನದ ಪ್ರಮುಖ ಊಟವಾಗಿದ್ದು, ಪ್ರೋಟೀನ್ ಭರಿತ ಉಪಾಹಾರವು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರೋಟೀನ್ ದೀರ್ಘಕಾಲದವರೆಗೆ ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಹಗಲಿನಲ್ಲಿ ಅನಾರೋಗ್ಯಕರ ತಿಂಡಿಗಳನ್ನು ಕಡಿಮೆ ಮಾಡುತ್ತದೆ. ಮೊಟ್ಟೆ, ಮೊಸರು, ಚೀಸ್ ಮತ್ತು ಬೇಳೆಕಾಳುಗಳಂತಹ ಆಹಾರಗಳನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಹಸಿ ಹಾಲನ್ನು ಮುಖಕ್ಕೆ ಹಚ್ಚುವುದು ನಿಜಕ್ಕೂ ಪ್ರಯೋಜನಕಾರಿಯೇ?

ಕನಿಷ್ಠ 20-30 ನಿಮಿಷಗಳ ಕಾಲ ವ್ಯಾಯಾಮ ಮಾಡಿ: ಬೆಳಿಗ್ಗೆ ವ್ಯಾಯಾಮ ಮಾಡುವುದರಿಂದ ದೇಹದ ಚಯಾಪಚಯ ಕ್ರಿಯೆ ಚುರುಕಾಗುತ್ತದೆ. ಜಾಗಿಂಗ್, ಸೈಕ್ಲಿಂಗ್, ಸ್ಕಿಪ್ಪಿಂಗ್ ಅಥವಾ ಸೂರ್ಯ ನಮಸ್ಕಾರ ಮತ್ತು ಕಪಾಲಭಾತಿ ಪ್ರಾಣಾಯಾಮದಂತಹ ಯೋಗ ಭಂಗಿಗಳಂತಹ ಲಘು ಕಾರ್ಡಿಯೋ ವ್ಯಾಯಾಮಗಳು ಕೊಬ್ಬನ್ನು ಸುಡುವಲ್ಲಿ ಹೆಚ್ಚು ಪರಿಣಾಮಕಾರಿ. ಅಲ್ಲದೆ ಬೆಳಗಿನ ಈ ಅಭ್ಯಾಸಗಳು ನಿಮ್ಮನ್ನು ದಿನವಿಡಿ ಕ್ರಿಯಾಶೀಲವಾಗಿಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದ 1,800 ಹಳ್ಳಿಗಿಲ್ಲ ಬಸ್​​ ಸಂಪರ್ಕ: ಸಾರಿಗೆ ಸಚಿವರೇ ಕೊಟ್ರು ಶಾಕಿಂಗ್​​ ಮಾಹಿತಿ – Kannada News | 1,800 Karnataka villages lack direct bus access, reveals Minister Ramalinga Reddy in the Legislative Council

ಬೆಂಗಳೂರು, ಡಿಸೆಂಬರ್​​ 18: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನಗಳಲ್ಲೊಂದಾದ ಮಹಿಳೆಯರಿಗೆ ಸಾಮಾನ್ಯ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯ ಪ್ರಯೋಜನವನ್ನು ಪ್ರತಿನಿತ್ಯ ಲಕ್ಷಾಂತರ ಮಂದಿ ಪಡೆಯುತ್ತಿದ್ದಾರೆ. ಈ ನಡುವೆಯೂ ಸುಮಾರು 1,800 ಗ್ರಾಮಗಳಲ್ಲಿ ಮಹಿಳೆಯರು ಬಸ್ ಏರಲು ಕನಿಷ್ಠ 2 ಕಿಲೋಮೀಟರ್ ನಡೆದು ಹೋಗುವ ಪರಿಸ್ಥಿತಿ ಇದೆ ಎಂಬ ಮಾಹಿತಿ ಬಹಿರಂಗೊಂಡಿದೆ.

ಬಹುತೇಕ ಪ್ರದೇಶಗಳಲ್ಲಿ ಬಸ್​​ಗಳ ಲಾಸ್ಟ್​​ ಸ್ಟಾಪ್​​ ಕನೆಕ್ಟಿವಿಟಿ ಇಲ್ಲದ ಕಾರಣ ವಿದ್ಯಾರ್ಥಿಗಳನ್ನು ಸೇರಿದಂತೆ ಪ್ರಯಾಣಿಕರು ಪ್ರತಿದಿನ ಕಿಲೋಮೀಟರ್​​ಗಟ್ಟಲೆ ದೂರವನ್ನು ನಡೆಯಬೇಕಾದ ಸ್ಥಿತಿ ಇದೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಬಸ್‌ಗಳ ಸಂಚಾರ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ. ರಸ್ತೆ ದುಃಸ್ಥಿತಿಯ ಕಾರಣ KSRTC, NERTC ಮತ್ತು NWRTC ಅಧಿಕಾರಿಗಳು ಈ ಪ್ರದೇಶಗಳಲ್ಲಿ ಬಸ್​​ ಸಂಚಾರಕ್ಕೆ ಅವಕಾಶ ನೀಡಿಲ್ಲ ಎನ್ನಲಾಗಿದೆ. ತುಮಕೂರು, ಚಿಕ್ಕಮಗಳೂರು, ಉಡುಪಿ, ಮಂಡ್ಯ, ಚಿಕ್ಕಬಳ್ಳಾಪುರ, ಕೊಡಗು, ದಕ್ಷಿಣ ಕನ್ನಡ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಾಮರಾಜನಗರ, ಕಲಬುರಗಿ ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಗ್ರಾಮಗಳಲ್ಲಿ ಸಾರ್ವಕನಿಕರು ಈ ಸಮಸ್ಯೆ ಎದುರಿಸುತ್ತಿದ್ದಾರೆ.

ಇದನ್ನೂ ಓದಿ:  ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಸಾರಿಗೆ ನಿಗಮಗಳಿಗೆ ಶಕ್ತಿ ಅಲ್ಲ, ಶಾಪ! 4 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಬಾಕಿ

ಈ ಬಗ್ಗೆ ವಿಧಾನ ಪರಿಷತ್​​ನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ ಉತ್ತರಿಸಿದ್ದು, KSRTC 17 ಜಿಲ್ಲೆಗಳಲ್ಲಿ ಬಸ್ ಸೇವೆ ನೀಡುತ್ತಿದೆ. ಒಟ್ಟು 21,748 ಗ್ರಾಮಗಳ ಪೈಕಿ 20,090 ಗ್ರಾಮಗಳಿಗೆ KSRTC ಬಸ್ ಸೇವೆ ಒದಗಿಸುತ್ತಿದೆ. ಉಳಿದ 1,658 ಗ್ರಾಮಗಳಲ್ಲಿ ಬಸ್​​ಗಾಗಿ ಜನರು 2 ಕಿಲೋಮೀಟರ್​​ ನಡೆದೇ ಹೋಗಬೇಕಿದೆ. ಅದೇ ರೀತಿ, NWRTC ವ್ಯಾಪ್ತಿಯಲ್ಲಿ ಇರುವ 4,610 ಗ್ರಾಮಗಳಲ್ಲಿ 4,565 ಗ್ರಾಮಗಳಿಗೆ ನೇರ ಬಸ್ ಸೇವೆ ಲಭ್ಯವಿದೆ. NERTC ವ್ಯಾಪ್ತಿಯ 5,283 ಗ್ರಾಮಗಳಲ್ಲಿ 5,237 ಗ್ರಾಮಗಳಿಗೆ ಬಸ್​​ಗಳು ಸಂಪರ್ಕ ಕಲ್ಪಿಸುತ್ತಿವೆ. ಜನರ ಬೇಡಿಕೆಯನ್ನು ಆಧಾರದಲ್ಲಿ ಸಮೀಕ್ಷೆ ನಡೆಸಿ, ಬಸ್ ಸೇವೆ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿರೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:18 pm, Thu, 18 December 25

Source link

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿ ಬಿದ್ದ ಕಾರು – Kannada News | Car Jumps 10 Feet While Avoiding Bike In bidar, here Is Accident video

ಬೀದರ್, (ಡಿಸೆಂಬರ್ 18): ಬೈಕ್ ಸವಾರನನ್ನ ಬಚಾವು ಮಾಡಲು ಹೋಗಿ ಕಾರು ಹತ್ತು ಅಡಿ ಮೇಲೇ ಹಾರಿ ಬುಗುರಿ ತಿರುಗಿದಂತೆ ತಿರುಗಿ ಮತ್ತೆ ರಸ್ತೆ ಮೇಲೆ ಬಿದ್ದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರಿಗೆ ಬೈಕ್ ಅಡ್ಡ ಬಂದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಹತ್ತು ಅಡಿ ಮೇಲಕ್ಕೆ ಹಾರಿ ಬಿದ್ದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link