All posts by nagaraj11081993

ತಲೆಸ್ನಾನದ ಸಂದರ್ಭದಲ್ಲಿ ಮಾಡುವ ಈ ತಪ್ಪುಗಳು ಸಹ ಕೂದಲು ಉದುರಲು ಮುಖ್ಯ ಕಾರಣ – Kannada News | These mistakes of when washing hair can cause hair loss

ಇಂದಿನ ದಿನಗಳಲ್ಲಿ ಕೂದಲು ಉದುರುವಿಕೆ (Hair Fall) ಸಮಸ್ಯೆ ತೀರಾ ಹೆಚ್ಚಿದೆ. ಅದೆಷ್ಟೇ ಕೂದಲ ಆರೈಕೆ ಮಾಡಿದರೂ ಸಹ ಹೆಚ್ಚಿನವರಿಗೆ ಕೂದಲು ಉದುರುವ ಸಮಸ್ಯೆ ಮಾತ್ರ ಕಡಿಮೆ ಆಗ್ತಿಲ್ಲ. ಇದಕ್ಕೆಲ್ಲಾ ನಾವು ತಿನ್ನುವ ಆಹಾರ, ನಮ್ಮ ಜೀವನಶೈಲಿ ಮುಖ್ಯ ಕಾರಣ. ಈ ಕಾರಣದಿಂದಾಗಿ ಎಷ್ಟೇ ಆರೈಕೆ ಮಾಡಿದರೂ ಕೂದಲು ಉದುರುವ ಸಮಸ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಇದಲ್ಲದೆ ತಲೆ ಸ್ನಾನ ಮಾಡುವ ಸಂದರ್ಭದಲ್ಲಿ ಮಾಡುವ ಕೆಲವೊಂದು ತಪ್ಪುಗಳ ಸಹ ಕೂದಲು ಉದುರಲು ಮುಖ್ಯ ಕಾರಣವಂತೆ. ಹೌದು ಕೂದಲು ತೊಳೆಯುವಾಗ ಮಾಡುವ ಸಣ್ಣ ತಪ್ಪುಗಳು ಕೂದಲಿನ ಬೇರುಗಳನ್ನು ದುರ್ಬಲಗೊಳಿಸುತ್ತವೆ, ಇದರಿಂದ ಕೂದಲು ಉದುರುತ್ತವೆ.  ಹಾಗಾದರೆ ಕೂದಲು ತೊಳೆಯುವಾಗ ಯಾವ ತಪ್ಪುಗಳನ್ನು ಮಾಡಬಾರದು ಎಂಬುದನ್ನು ನೋಡೋಣ ಬನ್ನಿ.

ಕೂದಲು ಉದುರಲು ಸ್ನಾನದ ಸಂದರ್ಭದಲ್ಲಿ ಮಾಡುವ ಈ ತಪ್ಪುಗಳೂ ಕಾರಣ:

ವಿವಿಧ ರೀತಿಯ ಶಾಂಪೂ ಬಳಕೆ: ಜನರು ಸಾಮಾನ್ಯವಾಗಿ ವಿವಿಧ ರೀತಿಯ ಶಾಂಪೂಗಳನ್ನು ಪ್ರಯತ್ನಿಸುತ್ತಾರೆ, ತಪ್ಪಾದ ಶಾಂಪೂ ಆಯ್ಕೆ  ಕೂದಲನ್ನು ನಿರ್ಜೀವಗೊಳಿಸುತ್ತದೆ. ಇದು ಕೂದಲಿನ ಶುಷ್ಕತೆ ಮತ್ತು ಒಡೆಯುವಿಕೆಯನ್ನು ಹೆಚ್ಚಿಸುತ್ತದೆ. ಇದಲ್ಲದೆ ನೇರವಾಗಿ ಶಾಂಪೂ ಹಚ್ಚುವುದು ಸಹ ತಪ್ಪು. ಇದರಿಂದ ಕೂದಲಿನ ಬೇರುಗಳಲ್ಲಿ ಎಣ್ಣೆ, ಬೆವರು, ಧೂಳು ಹಾಗೆಯೇ ಉಳಿದು ಬಿಡುತ್ತದೆ. ಹಾಗಾಗಿ ಅಂತಹ ಪರಿಸ್ಥಿತಿಯಲ್ಲಿ, ಕೂದಲು ತೊಳೆಯುವ ಮೊದಲು ನಿಮ್ಮ ಕೂದಲನ್ನು ಚೆನ್ನಾಗಿ ಮಸಾಜ್ ಮಾಡಿ, ಇದು ಕೂದಲಿನಲ್ಲಿ ರಕ್ತ ಪರಿಚಲನೆ ಹೆಚ್ಚಿಸುತ್ತದೆ.

ಆತುರದಿಂದ ಕೂದಲು ತೊಳೆಯುವುದು: ನಿಮ್ಮ ಕೂದಲನ್ನು ಆತುರದಿಂದ ತೊಳೆಯುವುದರಿಂದ ಶಾಂಪೂ  ಕೂದಲಿನಲ್ಲಿ ಹಾಗೆಯೇ  ಉಳಿಯುವ ಸಾಧ್ಯತೆ ಇರುತ್ತದೆ. ಇದು ಕೂದಲನ್ನು ಭಾರವಾಗಿ, ಜಿಡ್ಡು ಮತ್ತು ನಿರ್ಜೀವವಾಗಿ ಕಾಣುವಂತೆ ಮಾಡುತ್ತದೆ.  ಹಾಗಾಗಿ ಕೂದಲನ್ನು ಚೆನ್ನಾಗಿ ತೊಳೆಯಬೇಕು. ಇದರಿಂದ ನೆತ್ತಿ ಸ್ವಚ್ಛವಾಗಿರುತ್ತದೆ ಮತ್ತು ಕೂದಲು ಹಗುರ ಮತ್ತು ತಾಜಾವಾಗಿರುತ್ತದೆ.

ಶಾಂಪೂವನ್ನು ನೇರವಾಗಿ ನೆತ್ತಿಯ ಮೇಲೆ ಬಳಸುವುದು: ಶಾಂಪೂವನ್ನು ನೇರವಾಗಿ ನೆತ್ತಿಗೆ ಹಚ್ಚುವುದು ಕೂಡ ತುಂಬಾ ತಪ್ಪು. ಶಾಂಪೂವನ್ನು ಯಾವಾಗಲೂ ನಿಮ್ಮ ಅಂಗೈಯಲ್ಲಿ ಸ್ವಲ್ಪ ನೀರಿನೊಂದಿಗೆ ಬೆರೆಸಿ ಹಚ್ಚಬೇಕು. ಅದೇ ರೀತಿ, ಕೂದಲಿನ ಬೇರುಗಳಿಗೆ ಕಂಡಿಷನರ್ ಅನ್ನು ಎಂದಿಗೂ ಹಚ್ಚಬಾರದು, ಕೂದಲಿನ ಉದ್ದಕ್ಕೆ ಮಾತ್ರ ಹಚ್ಚಬೇಕು. ಕಂಡಿಷನರ್ ಬೇರುಗಳಿಗೆ ಹೋದರೆ, ಅದು ನೆತ್ತಿಯನ್ನು ಜಿಡ್ಡಿನನ್ನಾಗಿ ಮಾಡುತ್ತದೆ ಮತ್ತು ಕೂದಲಿನ ಕಿರುಚೀಲಗಳನ್ನು ಮುಚ್ಚುತ್ತದೆ. ಸ್ನಾನದ ನಂತರ, ನಾವು ನಮ್ಮ ಕೂದಲನ್ನು ಒಣಗಿಸಲು ಟವೆಲ್‌ನಿಂದ ಬಲವಾಗಿ ಉಜ್ಜುತ್ತೇವೆ. ಈ ಘರ್ಷಣೆ ಕೂದಲಿನ ಹೊರಪೊರೆಗಳಿಗೆ ಹಾನಿ ಮಾಡುತ್ತದೆ ಮತ್ತು ಕೂದಲನ್ನು ದುರ್ಬಲಗೊಳಿಸುತ್ತದೆ. ಬದಲಾಗಿ, ಮೃದುವಾದ ಹತ್ತಿ ಬಟ್ಟೆ ಅಥವಾ ಮೈಕ್ರೋಫೈಬರ್ ಟವಲ್ ಬಳಸಿ ಕೂದಲಿನ ನೀರಿನಾಂಶವನ್ನು ತೆಗೆಯಬೇಕು.

ಇದನ್ನೂ ಓದಿ: ಯಾವ ಸಮಯದಲ್ಲಿ ಪಪ್ಪಾಯಿ ಹಣ್ಣು ತಿನ್ನೋದು ಬೆಸ್ಟ್?

ಕೂದಲನ್ನು ಆಗಾಗ್ಗೆ ತೊಳೆಯುವುದು: ನಿಮ್ಮ ಕೂದಲನ್ನು ಆಗಾಗ್ಗೆ ತೊಳೆಯುವುದರಿಂದ ಕೂದಲಿನ  ನೈಸರ್ಗಿಕ ಎಣ್ಣೆಗಳು ಕಳೆದುಹೋಗುತ್ತವೆ. ಇದು ನಿಮ್ಮ ಕೂದಲನ್ನು ಒಣಗಿಸುತ್ತದೆ ಮತ್ತು ನಿಮ್ಮ ನೆತ್ತಿಯಲ್ಲಿ ಹೆಚ್ಚು ಎಣ್ಣೆ ಉತ್ಪತ್ತಿಯಾಗುವಂತೆ ಮಾಡುತ್ತದೆ. ಇದರಿಂದಾಗಿ ನಿಮ್ಮ ಕೂದಲು ಬೇಗನೆ ಜಿಡ್ಡಿನಂತಾಗುತ್ತದೆ. ಹಾಗಾಗಿ ವಾರದಲ್ಲಿ ಎರಡು ಅಥವಾ ಮೂರು ಬಾರಿ ಮಾತ್ರ ತಲೆ ಸ್ನಾನ ಮಾಡಿ ಮತ್ತು ಕೂದಲು ತೊಳೆಯಲು ಸೌಮ್ಯವಾದ ಶಾಂಪೂ ಬಳಸಿ. ಈ ಮೂಲಕ ಕೂದಲು ಉದುರುವುದನ್ನು ತಡೆಯಬಹುದು.

ಒದ್ದೆ ಕೂದಲನ್ನು ಬಾಚುವುದು: ಅನೇಕ ಜನರು ಸ್ನಾನ ಮಾಡಿ ಬಂದ ತಕ್ಷಣವೇ ಒದ್ದೆ ಕೂದಲನ್ನು ಬಾಚುತ್ತಾರೆ. ತಜ್ಞರ ಪ್ರಕಾರ, ಕೂದಲು ಒದ್ದೆಯಾಗಿರುವಾಗ ಅತ್ಯಂತ ದುರ್ಬಲವಾಗಿರುತ್ತದೆ. ಈ ಸಮಯದಲ್ಲಿ ಕೂದಲು ಬಾಚಿಕೊಳ್ಳುವುದರಿಂದ ಕೂದಲು ಉದುರುತ್ತದೆ. ಹಾಗಾಗಿ ಮೊದಲು ಕೂದಲನ್ನು ನೈಸರ್ಗಿಕವಾಗಿ ಒಣಗಲು ಬಿಡಬೇಕು ಮತ್ತು ಒಣಗಿದ ನಂತರವೇ  ಅಗಲವಾದ ಹಲ್ಲಿನ ಬಾಚಣಿಗೆಯನ್ನು ಬಳಸಿ ಕೂದಲು ಬಾಚಬೇಕು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ENG: ಸೆಮಿಫೈನಲ್​ನಲ್ಲೂ ನಂಬಿಕೆ ಉಳಿಸಿಕೊಳ್ಳದ ಅಭಿಷೇಕ್ ಶರ್ಮಾ

Source link

ಹಾರ್ಮುಜ್ ಜಲಸಂಧಿ ಅಮೆರಿಕ, ಇಸ್ರೇಲ್, ಯೂರೋಪ್​ಗೆ ಮಾತ್ರ ಬಂದ್; ಬೇರೆ ದೇಶಗಳಿಗಿಲ್ಲ ತಡೆ: ಇರಾನ್ ಸ್ಪಷ್ಟನೆ – Kannada News | Hormuz Strait Is Only Closed To US, Israel, Europe, says Iran

ನವದೆಹಲಿ, ಮಾರ್ಚ್ 5: ಹಾರ್ಮುಜ್ ಜಲಸಂಧಿಯಲ್ಲಿ ತೈಲ ನೌಕೆಗಳನ್ನು ಸಾಗಲು ಬಿಡುವುದಿಲ್ಲ ಎಂದು ಹೇಳಿ ತಡೆ ಹಾಕಿದ್ದ ಇರಾನ್ ದೇಶ ಈಗ ತನ್ನ ನಿಲುವನ್ನು ಸಡಿಲಿಸಿದೆ. ಅಮೆರಿಕ, ಇಸ್ರೇಲ್, ಯೂರೋಪ್ ಹಾಗೂ ಅವರ ಇತರ ಪಶ್ಚಿಮ ಮಿತ್ರರಿಗೆ ಮಾತ್ರ ಈ ಮಾರ್ಗದಿಂದ ತೈಲ ಪೂರೈಕೆಗೆ ಅವಕಾಶ ಕೊಡುವುದಿಲ್ಲ ಎಂದು ಇರಾನ್​ನ ಇಸ್ಲಾಮಿಕ್ ರೆವಲ್ಯೂಶನರಿ ಗಾರ್ಡ್ ಕಾರ್ಪ್ಸ್ ಸೇನೆ ಹೇಳಿದೆ.

ಇದರೊಂದಿಗೆ, ಭಾರತ ಹಾಗೂ ಇತರ ಹಲವು ದೇಶಗಳು ತುಸು ನಿರಾಳಗೊಂಡಂತಾಗಿದೆ. ಹಾರ್ಮುಜ್ ಜಲಸಂಧಿಯು ಪಶ್ಚಿಮ ಏಷ್ಯಾ ಭಾಗದಲ್ಲಿ ಇರಾನ್ ಮತ್ತು ಓಮನ್ ನಡುವಿನ ಸಮುದ್ರ ಭಾಗ. ಇದು ಪರ್ಷಿಯನ್ ಕೊಲ್ಲಿ ಹಾಗೂ ಅರೇಬಿಯನ್ ಸಮುದ್ರವನ್ನು ಇದು ಸಂಪರ್ಕಿಸುತ್ತದೆ. ಬಹಳ ಕಿರಿದಾಗಿರುವ ಈ ಜಲಸಂಧಿಯಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಹಡಗುಗಳು ಸಾಗುತ್ತವೆ. ಗಲ್ಫ್ ರಾಷ್ಟ್ರಗಳ ತೈಲ ನೌಕೆಗಳು ಬೇರೆ ದೇಶಗಳನ್ನು ತಲುಪಬೇಕಾದರೆ ಇಲ್ಲಿಂದಲೇ ಹೊರಗೆ ಹೋಗಬೇಕು. ವಿಶ್ವದ ಶೇ. 20ಕ್ಕಿಂತ ಹೆಚ್ಚು ತೈಲ ಪೂರೈಕೆ ಈ 33 ಕಿಮೀ ಕಿರಿದಾದ ಜಲಸಂಧಿ ಮೂಲಕ ಹೋಗಬೇಕು. ಇದಕ್ಕೆ ತಡೆ ಹಾಕುವುದು ಇರಾನ್​ಗೆ ಸುಲಭ.

ಇದನ್ನೂ ಓದಿ: ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು

ಅಮೆರಿಕ ಮತ್ತು ಇಸ್ರೇಲ್ ಶನಿವಾರ ಇರಾನ್ ಮೇಲೆ ಜಂಟಿಯಾಗಿ ದಾಳಿ ಆರಂಭಿಸಿದಾಗಿನಿಂದ ಈ ಜಲಸಂಧಿಗೆ ತಡೆ ಬಿದ್ದಿದೆ. ಈ ಮಾರ್ಗದಲ್ಲಿ ಶೇ. 90ರಷ್ಟು ಹಡಗುಗಳ ಸಾಗಣೆ ಕಡಿಮೆ ಆಗಿದೆ. ಪರಿಣಾಮವಾಗಿ ಬ್ಯಾರಲ್​ಗೆ 65 ಡಾಲರ್ ಆಸುಪಾಸಿನಲ್ಲಿದ್ದ ತೈಲ ಬೆಲೆ 80 ಡಾಲರ್​ಗಿಂತಲೂ ಮೇಲೆ ಹೋಗಿದೆ.

ಮೊನ್ನೆ ಮಂಗಳವಾರ ಇರಾನ್ ದೇಶವು ಚೀನೀ ಹಡಗುಗಳಿಗೆ ಮಾತ್ರವೇ ಸಾಗಲು ಅವಕಾಶ ಕೊಡುವುದಾಗಿ ಹೇಳಿತ್ತು. ಈಗ ಅಮೆರಿಕ ಹಾಗೂ ಅದರ ಮಿತ್ರ ದೇಶಗಳನ್ನು ಬಿಟ್ಟು ಉಳಿದ ದೇಶಗಳಿಗೆ ಹಾರ್ಮುಜ್ ಜಲಸಂಧಿ ದಾಟಲು ಅವಕಾಶ ಕೊಡುವುದಾಗಿ ಹೇಳುತ್ತಿದೆ.

ಇದನ್ನೂ ಓದಿ: ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್​ಗಳು ಭಾರತದ ಕಡೆಗೆ; ಆಪತ್ಕಾಲದಲ್ಲಿ ಭಾರತಕ್ಕೆ ದಕ್ಕಿದ ನೆರವು

ಹಾರ್ಮುಜ್ ಜಲಸಂಧಿಗೆ ಈ ರೀತಿ ಹಡಗು ಸಾಗಣೆಗೆ ನಿರ್ಬಂಧ ಬಿದ್ದಿದ್ದು ಇದೇ ಪ್ರಥಮ ಬಾರಿಗೆ. ಹಿಂದೆ ಇರಾಕ್ ಅಮೆರಿಕ ಯುದ್ಧದ ಸಂದರ್ಭದಲ್ಲೂ ಇಲ್ಲಿ ಅನಿರ್ಬಂಧಿತವಾಗಿ ತೈಲ ನೌಕೆಗಳ ಸಾಗಣೆ ಆಗುತ್ತಿತ್ತು. ಈಗ ನಿರ್ಬಂಧವನ್ನು ಕೆಲವೇ ದೇಶಗಳಿಗೆ ಸೀಮಿತಗೊಳಿಸಿರುವುದು ಭಾರತ, ಚೀನಾದಂತಹ ದೇಶಗಳು ನಿರಾಳಗೊಳ್ಳುವಂತಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Video: ತನ್ನ ಮುಂದೆ ಡ್ಯಾನ್ಸ್ ಮಾಡ್ತಿದ್ದ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋದ ಹುಂಜ – Kannada News | A rooster chased away a little girl, video goes viral

ಪುಟ್ಟ ಮಕ್ಕಳೇ (little kids) ಹಾಗೆ, ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಏನೋ ಮಾಡಲು ಹೋಗಿ ಎಡವಟ್ಟು ಮಾಡಿಕೊಳ್ಳುವುದೇ ಹೆಚ್ಚು. ಈ ಪುಟ್ಟ ಹುಡುಗಿಯದ್ದು (little girl) ಅದೇ ಕಥೆ. ಹುಂಜದ ಮುಂದೆ ಕುಣಿದಾಡುತ್ತಿದ್ದಂತೆ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋದ ವಿಡಿಯೋ ಸದ್ಯ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರ ಮೊಗದಲ್ಲಿ ನಗು ತರಿಸಿದೆ.

trollhaiklu_.ka10 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಶಾಲಾ ಸಮವಸ್ತ್ರ ಧರಿಸಿರುವ ಪುಟ್ಟ ಹುಡುಗಿಯೊಬ್ಬಳು ಹುಂಜ ಮುಂದೆ ಡ್ಯಾನ್ಸ್ ಮಾಡುತ್ತಿದ್ದಾರೆ. ನೋಡ ನೋಡುತ್ತಿದ್ದಂತೆ ಈ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋಗಿದ್ದು, ಆಕೆ ಒಂದೇ ಸಮನೆ ಓಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಹೋಗಿ ಹೋಗಿ ಗಂಡು ಕೋಳಿನಾ ಕೆಣಕಿದ್ದೀಯಾ ಎಂದು ಹೇಳಿದರೆ, ಮತ್ತೊಬ್ಬರು, ಸ್ಕೂಲ್ ಗೆ ಹೋಗೋದು ಬಿಟ್ಟು ಇದೆಲ್ಲಾ ಬೇಕಿತ್ತಾ ಎಂದು ಕಾಮೆಂಟ್ ನಲ್ಲಿ ಕೇಳಿದ್ದಾರೆ. ಇನ್ನೊಬ್ಬರು, ಸುಮ್ನೆ ಇರಲಾರದೇ ಇರುವೆ ಬಿಟ್ಕೊಳ್ಳೋದು ಅಂದ್ರೆ ಇದೇ ನೋಡಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಿದ್ಯಾಕೆ? ಅಸಲಿ ಕಾರಣ ಬಿಚ್ಚಿಟ್ಟ ಎಸ್ಪಿ – Kannada News | Bidar SP Talks about thousand Of Muslims Protest Infront of basavakalyana police station And Stone Pelting

ಬೀದರ್, (ಮಾರ್ಚ್ 05): ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಗೆ ( basavakalyana police station) ಸಾವಿರಾರು ಮುಸ್ಲಿಮರು (Muslim) ಮುತ್ತಿಗೆ ಯತ್ನಿಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಶಿಕ್ಷಕರ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಾರ್ಚ್ 3ರಂದು ಸಹಸ್ರಾರು ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದು, ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಇದೇ ವೇಳೆ ಕೆಲವರು ಪೊಲೀಸ್ ವ್ಯಾನ್​ ಮೇಲೆ ಕಲ್ಲು ತೂರಿದ್ದರು. ಇದರಿಂದ ಭಾರೀ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಈ ಘಟನೆ ಸಂಬಂಧ ಪೊಲೀಸರು, 49 ಜನರ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದು, ಈ ಪೈಕಿ 20 ಜನರನ್ನ ಬಂಧಿಸಿದ್ದಾರೆ.

ಖಡಕ್ ಎಚ್ಚರಿಕೆ ನೀಡಿದ ಎಸ್ಪಿ

ಇನ್ನು ಈ ಬಗ್ಗೆ ಬೀದರ್ ನಲ್ಲಿ ಎಸ್ಪಿ ಪ್ರದೀಪ್ ಗುಂಟೆ ಪ್ರತಿಕ್ರಿಯಿಸಿದ್ದು, ಮಾರ್ಚ 3 ರಂದು ವಾಕಿಂಗ್ ಮಾಡುತ್ತಿದ್ದಾಗ ಯುವಕರು ರಸ್ತೆ ಬದಿ ನಿಂತುಕೊಂಡ ಅಸಭ್ಯ ವರ್ತನೆ ಮಾಡಿದ್ದಾರೆ. ಅಲ್ಲದೇ 6 ಜನ ಅನ್ಯಕೋಮಿನ ಯುವಕರು ಇಬ್ಬರನ್ನು ಥಳಿಸಿದ್ದಾರೆ. ಅವರಿಗೆ ಬುದ್ದಿ ಹೇಳಲು ಹೋದ ಇಬ್ಬರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದವರು ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ಬಂದು ಕಂಪ್ಲೀಟ್ ಕೊಟ್ಟಿದ್ದಾರೆ.ಅವರ ಕಂಪ್ಲೀಟ್ ಕೊಟ್ಟ ನಂತರ ಹಲ್ಲೆ ಮಾಡಿದ 6 ಯುವಕರನ್ನ ಬಂಧಿಸಲು ಹೋಗುತ್ತಿದ್ದಾಗ ಒಂದು ಸಮುದಾಯಕ್ಕೆ ಸೇರಿದ ಜನರ ನಮ್ಮ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ನಮ್ಮ ವಾಹನವನ್ನು ತಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಸಂಬಂಧ ಸಿಸಿಟಿವಿ ಆಧಾರದ ಮೇಲೆ 49 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಈ ಪೈಕಿ 22 ಜನರನ್ನ ಬಂಧಿಸಿದ್ದೇವೆ. ಇದ್ಯಾವುದು ಕೋಮ ಗಲಭೆ ಅಲ್ಲ. ಹಿಂಸೆಗೆ ಸಪೋರ್ಟ್ ಮಾಡುವ ರೀತಿ ಪೋಸ್ಟ್‌ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ: ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಸಾವಿರಾರು ಮುಸ್ಲಿಮರಿಂದ ಬೃಹತ್ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ

ಘಟನೆ ಹಿನ್ನೆಲೆ

ಮಾರ್ಚ್ 3ರಂದು ಸಂಜೆ ಮುಸ್ಲಿಂ ಸಮುದಾಯದ ಶಿಕ್ಷಕರಾದ ಸೈಯದ್ ಇಮ್ರಾನ್ ಮತ್ತು ಮಹ್ಮದ್ ಆರೀಫ್ ವಾಯು ವಿಹಾರಕ್ಕೆ ತೆರಳಿದ್ದರು. ಈ ವೇಳೆ ಆರು ಜನ ಅಪರಿಚಿತ ಹಿಂದೂ ಯುವಕರು ಶಿಕ್ಷರಿಬ್ಬರ ಮೇಲೆ ಹಲ್ಲೆ ಮಾಡಿದ್ದು, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಗಾದ ಮುಸ್ಲಿಂ ಶಿಕ್ಷಕ ಸೈಯದ್ ಇಮ್ರಾನ್ ಪ್ರಕರಣ ದಾಖಲಿಸಿದ್ದರು. ಈ ಸುದ್ದಿ ಕಾಡ್ಗಿಚ್ಚಿನಂತೆ ಹರುತ್ತಿದ್ದಂತೆಯೇ ಸಾವಿರಾರು ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದು, ಹಲ್ಲೆಕೋರರನ್ನ ಬಂಧಿಸಬೇಕು ಜೊತೆಗೆ ಬಂಧಿತರನ್ನ ನಮ್ಮ ವಶಕ್ಕೆ ಒಪ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

ಅಲ್ಲದೇ ಪೊಲೀಸ್ ಠಾಣೆ‌ ಮುತ್ತಿಗೆಗೆ ಯತ್ನ ನಡೆಸಿದ್ದರು. ಪರಿಸ್ಥಿತಿ ಕೈ ಮೀರುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ಪೊಲೀಸರು, ಆರೋಪಿಗಳನ್ನ ಬಂಧಿಸಿ ಸೂಕ್ತ ಕ್ರಮಕೈಗೊಳ್ಳುತ್ತೇವೆ. ನೀವು ಇಲ್ಲಿಂದ ತೆರಳಿ ಎಂದು ಸಿಪಿಐ ಅಲಿಸಾಬ್ ಮನವಿ ಮಾಡಿದ್ದರು. ಎಷ್ಟೇ ಮನವಿ ಮಾಡಿದರೂ ಸಹ ಸ್ಥಳದಿಂದ ಹೋಗಲಿಲ್ಲ. ಕೊನೆಗೆ ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿ ಉದ್ರಿಕ್ತರ ಗುಂಪು ಚದುರಿಸಿದ್ದಾರೆ. ಈ ವೇಳೆ ಉದ್ರಿಕ್ತರ ಗುಂಪು ಪೊಲೀಸರ ಸಮವಸ್ತ್ರ ಹಿಡಿದು ಎಳೆದಾಡಿದ್ದಲ್ಲದೇ ಕಲ್ಲು ತೂರಾಟ‌ ಮಾಡಿ ಪೊಲೀಸ್ ವಾಹನಗಳಿಗೆ ಹಾನಿ ಮಾಡಿದ್ದಾರೆ. ಘಟನೆಯಲ್ಲಿ ಎಎಸ್‌ಐ ಮುಕ್ತಾರ್ ಪಟೇಲ್ ಎಂಬುವವರಿಗೆ ಗಾಯಗೊಂಡಿದ್ದಾರೆ.

ಉದ್ರಿಕ್ತ ಗುಂಪಿನ 49 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಿಕ್ಷಕರ ಮೇಲಿನ ಹಲ್ಲೆ ಕುರಿತಂತೆ ಐವರು, ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಆರೋಪದಡಿ ಸುಮಾರು 21 ಜನರನ್ನ ಬಂಧಿಸಿದ್ದಾರೆ. ಅಲ್ಲದೇ, ಘಟನೆಯ ದಿನ ವಿಡಿಯೋದಲ್ಲ ಸೆರೆಯಾಗಿರುವವರನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ಉಚಿತ ವಸತಿ ಸೌಲಭ್ಯ – Kannada News | Sonu Sood offers free accommodation for stranded travellers in Dubai crisis

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಅಮೆರಿಕ-ಇರಾನ್ ಸಂಘರ್ಷದ ನಡುವೆ, ವಿಮಾನಯಾನ ರದ್ದತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ನೂರಾರು ಪ್ರವಾಸಿಗರ ನೆರವಿಗೆ ಬಾಲಿವುಡ್ ನಟ ಸೋನು ಸೂದ್ (Sonu Sood) ಧಾವಿಸಿದ್ದಾರೆ. ಸಂಕಷ್ಟದಲ್ಲಿ ಇರುವವರಿಗೆ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸುವ ಮೂಲಕ ಅವರು ಮತ್ತೊಮ್ಮೆ ತಮ್ಮ ದೊಡ್ಡ ಗುಣವನ್ನು ಪ್ರದರ್ಶಿಸಿದ್ದಾರೆ. ಈ ಹಿಂದೆ 2020-21ರ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಮನೆಗಳಿಗೆ ತಲುಪಿಸುವ ಮೂಲಕ ಸೋನು ಸೂದ್ ದೇಶಾದ್ಯಂತ ಅಪಾರ ಪ್ರೀತಿ ಗಳಿಸಿದ್ದರು. ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲೂ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕ ಅವರು ಸುದ್ದಿಯಲ್ಲಿದ್ದಾರೆ.

ಇತ್ತೀಚಿನ ಜಾಗತಿಕ ಮಟ್ಟದ ರಾಜಕೀಯ ಉದ್ವಿಗ್ನತೆಯಿಂದಾಗಿ ಹಲವು ವಿಮಾನಯಾನ ಸಂಸ್ಥೆಗಳು ತಮ್ಮ ಹಾರಾಟವನ್ನು ರದ್ದುಗೊಳಿಸಿವೆ. ಇದರಿಂದಾಗಿ ಪ್ರವಾಸಿಗರು ತಾಯ್ನಾಡಿಗೆ ಮರಳಲಾಗದೆ ದುಬೈನಲ್ಲಿ ಪರದಾಡುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಗಮನಿಸಿದ ಸೋನು ಸೂದ್, ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

‘ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಯಾರೆಲ್ಲಾ ದುಬೈನಲ್ಲಿ ಸಿಲುಕಿಕೊಂಡಿದ್ದಾರೋ, ಅವರಿಗೆ ನಾವು ನೆರವಾಗಲು ಸಿದ್ಧರಿದ್ದೇವೆ. ನೀವು ಉಳಿದುಕೊಳ್ಳಲು ನಾವು ಉಚಿತ ವ್ಯವಸ್ಥೆ ಮಾಡುತ್ತೇವೆ’ ಎಂದು ಅವರು ಭರವಸೆ ನೀಡಿದ್ದಾರೆ. ಕೇವಲ ಭಾರತೀಯರಿಗೆ ಮಾತ್ರವಲ್ಲದೆ, ಯಾವುದೇ ದೇಶದವರಾಗಿದ್ದರೂ ಅವರಿಗೆ ಆಶ್ರಯ ನೀಡುವುದಾಗಿ ಸೋನು ಸೂದ್ ತಿಳಿಸಿದ್ದಾರೆ.

‘ನಮ್ಮ ಭಾರತೀಯ ಸಹೋದರರು ಇರಲಿ ಅಥವಾ ಬೇರೆ ಯಾವುದೇ ರಾಷ್ಟ್ರದವರೇ ಇರಲಿ, ನೀವು ದುಬೈನಲ್ಲಿ ಸಂಕಷ್ಟದಲ್ಲಿದ್ದರೆ ದಯವಿಟ್ಟು ನಮಗೆ ಅಥವಾ ದುಗಾಸ್ತ ಪ್ರಾಪರ್ಟೀಸ್ ಸಂಸ್ಥೆಗೆ ನೇರವಾಗಿ ಸಂದೇಶ ಕಳುಹಿಸಿ. ನೀವು ಸುರಕ್ಷಿತವಾಗಿ ನಿಮ್ಮ ದೇಶಕ್ಕೆ ಮರಳುವವರೆಗೆ ನಿಮ್ಮ ವಾಸ್ತವ್ಯದ ಜವಾಬ್ದಾರಿ ನಮ್ಮದು’ ಎಂದು ಸೋನು ಸೂದ್ ಹೇಳಿದ್ದಾರೆ.

ಇದನ್ನೂ ಓದಿ: ಸೋನು ಸೂದ್ ಸಹಾಯದ ಬಗ್ಗೆ ಅನುಮಾನ ಹೊರಹಾಕಿದ ವ್ಯಕ್ತಿ.. ಆಮೇಲೆ ಏನಾಯ್ತು?

ಸೋನು ಸೂದ್ ಅವರ ಈ ಕಾರ್ಯಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ‘ಬಾಲಿವುಡ್‌ನ ಏಕೈಕ ರಿಯಲ್ ಹೀರೋ ಎಂದರೆ ನೀವೇ’, ‘ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದನ್ನು ನೀವು ಸಾಬೀತುಪಡಿಸಿದ್ದೀರಿ’ ಎಂಬಿತ್ಯಾದಿ ಕಮೆಂಟ್​ಗಳ ಮೂಲಕ ಸೋನು ಸೂದ್ ಅವರನ್ನು ಹೊಗಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶಿವಮೊಗ್ಗದ ಹೊಸನಗರದಲ್ಲಿ ಸಮಂತಾ ಹೋಳಿ: ಗಂಡನ ಜೊತೆ ಸಂಭ್ರಮ – Kannada News | Samantha Ruth Prabhu celebrates Holi 2026 in Hosanagara Shivamogga

ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರು ಮದುವೆ ಬಳಿಕ ಸಖತ್ ಜಾಲಿಯಾಗಿದ್ದಾರೆ. ‘ಮಾ ಇಂಟಿ ಬಂಗಾರಂ’ (Maa Inti Bangaram) ಸಿನಿಮಾದ ಶೂಟಿಂಗ್​​ನಲ್ಲಿ ಅವರು ಬ್ಯುಸಿಯಾಗಿದ್ದಾರೆ. ವಿಶೇಷ ಏನೆಂದರೆ, ಈ ಸಿನಿಮಾದ ಚಿತ್ರೀಕರಣ ಕರ್ನಾಟಕದಲ್ಲಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಶೂಟಿಂಗ್ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಹೋಳಿ ಹಬ್ಬ ಆಚರಿಸಿದ್ದಾರೆ. ಗಂಡ ರಾಜ್ ನಿಡಿಮೋರು ಹಾಗೂ ಚಿತ್ರತಂಡದ ಜೊತೆ ಸಮಂತಾ ರುತ್ ಪ್ರಭು ಅವರು ಹೋಳಿ (Holi) ಆಡಿದ್ದಾರೆ.

ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ಬಹಳ ಆ್ಯಕ್ಟೀವ್ ಆಗಿರುವ ಸಮಂತಾ ರುತ್ ಪ್ರಭು ಅವರು ತಮ್ಮ ಹೋಳಿ ಆಚರಣೆಯ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಹೊಸನಗರದ ಬಸ್ ನಿಲ್ದಾಣದಲ್ಲಿ ಸಮಂತಾ ಅವರು ಹೋಳಿ ಗನ್ ಹಿಡಿದು ಗಂಡನಿಗೆ ಬಣ್ಣ ಹಾಕಿದ್ದಾರೆ. ಚಿತ್ರತಂಡದ ಜೊತೆ ಬಣ್ಣದ ಆಟವಾಡಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಸಮಂತಾ ಹೋಳಿ ಆಚರಣೆಯ ವಿಡಿಯೋ:

‘ಮಾ ಇಂಟಿ ಬಂಗಾರಂ’ ಸಿನಿಮಾಗೆ ನಂದಿನಿ ರೆಡ್ಡಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಿರುಸಿನಿಂದ ಶೂಟಿಂಗ್ ನಡೆಯುತ್ತಿದೆ. ಹೋಳಿ ಹಬ್ಬದ ಸಲುವಾಗಿ ಚಿತ್ರೀಕರಣಕ್ಕೆ ಸಣ್ಣ ಬ್ರೇಕ್ ನೀಡಿದ ಚಿತ್ರತಂಡದವರು ಹೋಳಿ ಆಡಿ ಖುಷಿಪಟ್ಟಿದ್ದಾರೆ. ಮಲೆನಾಡಿನ ಪರಿಸರಕ್ಕೆ ಸಮಂತಾ ಅವರು ಮನಸೋತಿದ್ದಾರೆ. ಅವರು ಎಷ್ಟು ಖುಷಿಯಾಗಿದ್ದಾರೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.

ತೆಲುಗಿನ ‘ಮಾ ಇಂಟಿ ಬಂಗಾರಂ’ ಸಿನಿಮಾಗೆ ಕರ್ನಾಟಕದಲ್ಲಿ ಶೂಟಿಂಗ್ ಮಾಡುತ್ತಿರುವುದರಿಂದ ಕನ್ನಡದ ಪ್ರೇಕ್ಷಕರ ವಲಯದಲ್ಲಿ ಕೂಡ ನಿರೀಕ್ಷೆ ಹೆಚ್ಚಾಗಿದೆ. ಇದೇ ಸಿನಿಮಾದಲ್ಲಿ ಕನ್ನಡದ ನಟ ದಿಗಂತ್ ಮಂಚಾಲೆ ಅವರು ನಟಿಸುತ್ತಿದ್ದಾರೆ ಎಂಬುದು ವಿಶೇಷ. ಮೇ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಸಮಂತಾ ಅವರ ಗೆಟಪ್ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ಹೆಮ್ಮೆಯಿಂದ ತಾಳಿ ಧರಿಸಿ ಓಡಾಡುತ್ತಿರುವ ನಟಿ ಸಮಂತಾ ರುತ್ ಪ್ರಭು

ಈ ಮೊದಲು ನಾಗ ಚೈತನ್ಯ ಜೊತೆ ಸಮಂತಾ ಮದುವೆ ಆಗಿದ್ದರು. ಅವರ ಸಂಸಾರದಲ್ಲಿ ಬಿರುಕು ಮೂಡಿತ್ತು. ಅದೇ ಸಮಯಕ್ಕೆ ಅವರ ಆರೋಗ್ಯ ಕೂಡ ಕೈಕೊಟ್ಟಿತ್ತು. ಅಷ್ಟೆಲ್ಲ ತಾಪತ್ರಯಗಳಿಂದ ಸಮಂತಾ ಮುಖದಲ್ಲಿ ನಗು ಮಾಯವಾಗಿತ್ತು. ಬಳಿಕ ಅವರು ವಿಚ್ಛೇದನ ಪಡೆದರು. ಈಗ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನ ಮಾಡುತ್ತಿರುವ ಸಮಂತಾ ಹ್ಯಾಪಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇನಾಂ ದತ್ತಾತ್ರೇಯ ದರ್ಗಾದಲ್ಲಿ ಉರುಸ್​​ ಆಚರಣೆಗೆ ತಾರತಮ್ಯ: ಕಾಂಗ್ರೆಸ್​​ ವಿರುದ್ಧ ತಿರುಗಿಬಿದ್ದ ಮುಸ್ಲಿಮರು – Kannada News | Chikkamagaluru Datta Peeta Urus Row: Muslim Community spark on congress government

ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾImage Credit source: tv9 kannada

ಚಿಕ್ಕಮಗಳೂರು, ಮಾರ್ಚ್​ 05: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಉರುಸ್ ಆಚರಣೆ ವೇಳೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಸ್ಲಿಂ (Muslims) ಸಮುದಾಯದವರು ರಾಜ್ಯ ಕಾಂಗ್ರೆಸ್ ಸರ್ಕಾರದ ತಿರುಗಿ ಬಿದ್ದಿದ್ದಾರೆ. ಗೋರಿಗಳ ಮೇಲೆ ಹಸಿರು ಬಟ್ಟೆ, ಗಂಧ ಲೇಪನ ಮಾಡದ ಹಿನ್ನಲೆ ಜನ ಶಕ್ತಿ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ವಿವಾದಿತ ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಿನ್ನೆಯಿಂದ ಸೆಂದಿಲ್ ಉರುಸ್ ಆರಂಭವಾಗಿದೆ. ನಿನ್ನೆ ವಿವಾದಿತ ಗುಹೆ ಹಾಗೂ ದತ್ತ ಪೀಠದ ಆವರಣದಲ್ಲಿರುವ ಗೋರಿಗಳಿಗೆ ಗಂಧ‌ ಲೇಪನ ಹಾಗೂ ಸೇಂದಿಲ್​ಗೆ ಅವಕಾಶ ನೀಡಿಲ್ಲ. ಗೋರಿಗಳಿಗೆ ಹಸಿರಿ ಬಟ್ಟೆ ಹೊದಿಸಲು ಬಿಡಲಿಲ್ಲ ಅಂತಾ‌ ಮುಸ್ಲಿಂ ಸಂಘಟನೆಗಳು ಆರೋಪ ಮಾಡುತ್ತಿವೆ.

ಇದನ್ನೂ ಓದಿ: ದತ್ತಪೀಠದಲ್ಲಿ ಹೊಸ ವಿವಾದ: ‘ಕಲಮೆ ತಯ್ಯಬಾ’ ಆಚರಣೆಗೆ ಹಿಂದೂ ಸಂಘಟನೆಗಳ ಆಕ್ರೋಶ

ಹಿಂದೂಗಳಿಗೆ ಗುಹೆಯ ಒಳಗೆ ಪೂಜೆ ಮಾಡುವುದಕ್ಕೆ ಬಿಡುವ ಜಿಲ್ಲಾಡಳಿತ ನಮಗೆ ಮಾತ್ರ ಪೂಜೆಗೆ ಅವಕಾಶ ಕೊಟ್ಟಿಲ್ಲ‌ ಅಂತಾ ಆರೋಪಿಸಿವೆ. ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ‌ ಸರ್ಕಾರದಲ್ಲಿ ಮಾಡಿದ್ದ ಕೆಲವು ಆಚರಣೆಗಳನ್ನೇ ಮುಂದುವರಿಸಿಕೊಂಡು ಹೋಗ್ತಿದೆ. ಹಿಂದಿನ ವರ್ಷ ಯಾವ ರೀತಿ ನಡೆಸಲಾಗಿತ್ತೋ ಅದೇ ರೀತಿ ಕೂಡ ಈ ವರ್ಷವೂ ನಡೆಸೋದಕ್ಕೆ ಅವಕಾಶ ಕೊಡ್ತೀವಿ ಅಂತಾ ಹೇಳ್ತಿದ್ದಾರೆ. ಉರುಸ್ ನಡೆಸಲಾಗುತ್ತಿದೆ ಎಂದು ಕೇವಲ ದಾಖಲೆಗಳನ್ನ‌ ತೋರಿಸೋದಕ್ಕಾಗಿ ಮಾಡ್ತಿರುವ ಷಡ್ಯಂತ್ರ ಎಂದು ಆರೋಪಿಸಿದ್ದು, ರಾಜ್ಯ ಕಾಂಗ್ರೆಸ್ ವಿರುದ್ಧ ಮುಸ್ಲಿಂ‌ ಮುಖಂಡ ಗೌಸ್ ಮೊಹಿದ್ದೀನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆದ ಉರುಸ್ ವೇಳೆ ಜಿಲ್ಲಾಡಳಿತದ‌ ಕೆಲವು ನಿರ್ಧಾರಗಳನ್ನ‌ ಕಂಡು ಇಡೀ‌ ಮುಸ್ಲಿಂ ಸಮುದಾಯವೇ ಒಂದು ಕ್ಷಣ ಶಾಕ್ ಆಗಿದ್ದು, ಜಿಲ್ಲಾಡಳಿತದ ವಿರುದ್ಧ ತಿರುಗಿ ಬಿದ್ದಿದೆ. ಯಾವಾಗ ಮುಸ್ಲಿಂ ಸಮುದಾಯದ ಮುಖಂಡರು ಹಿಂದಿನಿಂದ ನಡೆದುಕೊಂಡು ಬರುತ್ತಿದ್ದಂತೆಯೇ ಈ ವರ್ಷವೂ ಅವಕಾಶ ಕೊಡಬೇಕು ಅಂತಾ ಪಟ್ಟು ಹಿಡಿದರೋ ಕೇವಲ 10 ಜನರನ್ನ‌ ಮಾತ್ರ ವಿವಾದಿತ ಗುಹೆಯ ಒಳಗೆ ಬಿಡಲಾಯ್ತು. ಅಲ್ಲಿ ಕೂಡ ಗೋರಿಗಳಿಗೆ ಗಂಧ‌ ಲೇಪನಕ್ಕೆ ಬಿಟ್ಟಿಲ್ಲ ಎಂದು ಆರೋಪಿಸಿದರು.

 ಕೆ.ಎಲ್ ಅಶೋಕ್ ಸೇರಿದಂತೆ ಪ್ರತಿಭಟನಾ‌ ನಿರತರು ವಶಕ್ಕೆ

ಇದೇ ವಿಚಾರವಾಗಿ ಇಂದು ಕೆ.ಎಲ್ ಅಶೋಕ್ ನೇತೃತ್ವದಲ್ಲಿ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿದ್ದು, ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆಗೆ ಅವಕಾಶ ನೀಡಿರಲಿಲ್ಲ. ಆದರೂ ಪೊಲೀಸರ ಕಣ್ಣು ತಪ್ಪಿಸಿ ನಗರಸಭೆ ಆವರಣದೊಳಗಿಂದ ಜಿಲ್ಲಾಧಿಕಾರಿ ಕಚೇರಿಗೆ‌ ಮುತ್ತಿಗೆ ಹಾಕಲು ಹೊರಟಿದ್ದ ಕೆ.ಎಲ್ ಅಶೋಕ್ ಸೇರಿದಂತೆ ಪ್ರತಿಭಟನಾ‌ ನಿರತರನ್ನ ಪೊಲೀಸರು ನಗರಸಭೆಯ ಆವರಣದಲ್ಲಿಯೇ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಸಿಡಿದೆದ್ದ ಹಿಂದೂ ಸಂಘಟನೆಗಳು

ಒಟ್ಟಿನಲ್ಲಿ ಹಿಂದೂ- ಮುಸ್ಲಿಮರ ನಡುವೆ‌ ಆಚಾರ, ಪೂಜೆ, ಸಂಪ್ರದಾಯ, ಪದ್ದತಿ ವಿಷಯವಾಗಿಯೇ ಮುನ್ನೆಲೆಗೆ ಬರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಈಗ ಮತ್ತೆ ಉರುಸ್ ಆಚರಣೆಯಿಂದ ಸದ್ದು ಮಾಡುತ್ತಿದ್ದು, ಮುಸ್ಲಿಂ ಸಮುದಾಯ ಸರ್ಕಾರದ ವಿರುದ್ಧವೇ‌ ತಿರುಗಿ ಬೀಳುವಂತೆ ಮಾಡಿದ್ದು, ದರ್ಗಾ‌ ವಿವಾದ ಮತ್ತೆ ಯಾವ ಸ್ವರೂಪ ಪಡೆದುಕೊಳ್ಳುತ್ತೆ ಅನ್ನೋದನ್ನ ಕಾದು ನೋಡಬೇಕಿದೆ‌.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಖಮೇನಿ ಸಾವಿಗೆ ಭಾರತ ಸಂತಾಪ; ಇರಾನ್ ರಾಯಭಾರಿಯನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಮಿಶ್ರಿ – Kannada News | India Condoles Iran Supreme Leader Khamenei’s Death Foreign Secretary Meets Iran Ambassador

ನವದೆಹಲಿ, ಮಾರ್ಚ್ 5: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ ನಿಧನಕ್ಕೆ ಭಾರತ ಸಂತಾಪ ಸೂಚಿಸಿದೆ. ಭಾರತದ ಪರವಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಅವರ ಸಂತಾಪ ಸೂಚಿಸುವ ಪುಸ್ತಕಕ್ಕೆ ಸಹಿ ಹಾಕಿದ್ದಾರೆ. ಇಸ್ಲಾಮಿಕ್ ಗಣರಾಜ್ಯದ 86 ವರ್ಷದ ಮಾಜಿ ಸರ್ವೋಚ್ಚ ನಾಯಕ ಖಮೇನಿ 1989ರಿಂದ ಇರಾನ್ ದೇಶವನ್ನು ಆಳುತ್ತಿದ್ದರು. ಶನಿವಾರ ಮುಂಜಾನೆ ಅಮೆರಿಕ ಮತ್ತು ಇಸ್ರೇಲ್ ಪ್ರಾರಂಭಿಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ ಅವರನ್ನು ಕೊಲ್ಲಲಾಗಿತ್ತು. ಖಮೇನಿಯ ನಿಧನಕ್ಕೆ ಭಾರತದ ಮೊದಲ ಪ್ರತಿಕ್ರಿಯೆಯ ಭಾಗವಾಗಿ ಮಿಶ್ರಿ ಸಂತಾಪ ಸೂಚಿಸಿದ್ದಾರೆ.

ಖಮೇನಿ ಅವರ ಸಾವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ರಾತ್ರಿ ಟ್ರೂತ್ ಸೋಷಿಯಲ್‌ನಲ್ಲಿ ಮೊದಲು ಘೋಷಿಸಿದ್ದರು. ಇರಾನ್‌ನ ಜನರು ದೇಶದ ಮೇಲೆ ಹಿಡಿತ ಸಾಧಿಸಲು ಇದು ಅತ್ಯಂತ ದೊಡ್ಡ ಅವಕಾಶ ಎಂದು ಟ್ರಂಪ್ ಟ್ರೂತ್ ಸೋಶಿಯಲ್‌ನಲ್ಲಿ ಬರೆದಿದ್ದರು. “ಇತಿಹಾಸದಲ್ಲಿ ಅತ್ಯಂತ ದುಷ್ಟ ಜನರಲ್ಲಿ ಒಬ್ಬರಾದ ಖಮೇನಿ ನಿಧನರಾಗಿದ್ದಾರೆ. ಇದು ಇರಾನ್‌ನ ಜನರಿಗೆ ಮಾತ್ರವಲ್ಲ, ಎಲ್ಲಾ ಮಹಾನ್ ಅಮೆರಿಕನ್ನರಿಗೆ ಮತ್ತು ಖಮೇನಿಯಿಂದ ಕೊಲ್ಲಲ್ಪಟ್ಟ ಅಥವಾ ಅಂಗವಿಕಲರಾದ ಪ್ರಪಂಚದಾದ್ಯಂತದ ಅನೇಕ ದೇಶಗಳ ಜನರಿಗೆ ಸಿಕ್ಕ ನ್ಯಾಯವಾಗಿದೆ” ಎಂದು ಟ್ರಂಪ್ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಎಲ್ಲೇ ಅಡಗಿದ್ದರೂ ಬಿಡೋದಿಲ್ಲ; ಖಮೇನಿಯ ಉತ್ತರಾಧಿಕಾರಿಯನ್ನು ಕೊಲ್ಲುತ್ತೇವೆಂದ ಇಸ್ರೇಲ್

ಖಮೇನಿ ಸಾವನ್ನಪ್ಪಿದ ವಾಯುದಾಳಿಯನ್ನು ಖಂಡಿಸದ ಮತ್ತು ಯಾವುದೇ ಹೇಳಿಕೆ ಬಿಡುಗಡೆ ಮಾಡದೆ ಮೌನವನ್ನು ಕಾಯ್ದುಕೊಂಡಿದ್ದ ಭಾರತ ಕೊನೆಗೂ ಖಮೇನಿ ಸಾವಿಗೆ ಸಂತಾಪ ಸೂಚಿಸಿದೆ. ಆದರೆ, ಶಾಂತಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಮೋದಿ ಕರೆ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು – Kannada News | Kalaburagi: Complaint Filed Over Alleged Burqa Insult During Holi

ಕಲಬುರಗಿ, ಮಾರ್ಚ್​ 05: ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಬುರ್ಖಾ ಹಾಕಿಕೊಂಡು ಬಣ್ಣ ಹಚ್ಚಿ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ. ಓರ್ವ ವ್ಯಕ್ತಿಗೆ ಬುರ್ಖಾ ಹಾಕಿಸಿ ಬಣ್ಣ ಹಚ್ಚಿದ್ದಾರೆ. ಆ ಮೂಲಕ ಹಿಂದೂ ಯುವಕರು ಬುರ್ಖಾಗೆ ಅವಮಾನಿಸಿದ್ದಾರೆಂದು ದಲಿತ ಸೇನೆ ಮುಖಂಡ ಸಮೀರ್ ಆವಂಟಿ ನಿಂಬರ್ಗಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಎನ್‌ಎಸ್ ಕಾಯ್ದೆ 2003ರ ಸೆಕ್ಷನ್ 196 ಹಾಗೂ 299ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Source link