All posts by nagaraj11081993

ಮೈಸೂರು: ಖರ್ಚಿಗೆ ಹಣ ಕೊಡದ್ದಕ್ಕೆ ಮಂಗಳಮುಖಿಯ ಮುಖವನ್ನೇ ಕೊಚ್ಚಿ ಹಾಕಿದ ಯುವಕರ ಗುಂಪು

ಮೈಸೂರು: ಖರ್ಚಿಗೆ ಹಣ ಕೊಡದ್ದಕ್ಕೆ ಮಂಗಳಮುಖಿಯ ಮುಖವನ್ನೇ ಕೊಚ್ಚಿ ಹಾಕಿದ ಯುವಕರ ಗುಂಪು

ಮೈಸೂರು, ಮಾ. 31: ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಯುವಕರ ತಂಡವೊಂದು ಮಂಗಳಮುಖಿಯರ ಮೇಲೆ ತಲ್ವಾರ್ ಮತ್ತು ಚಾಕುವಿನಿಂದ ಭೀಕರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ನಡೆದಿದೆ. ಅಮೃತ ಬಡಾವಣೆ ನಿವಾಸಿಯಾದ ಆನಮ್ ಎಂಬ ಮಂಗಳಮುಖಿಯ ಬಳಿ ಕೆಲವು ಯುವಕರು ತಮ್ಮ ವೈಯಕ್ತಿಕ ಖರ್ಚಿಗೆ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಆನಮ್ ಹಣ ನೀಡಲು ನಿರಾಕರಿಸಿದಾಗ ಯುವಕರು ಗಲಾಟೆ ಆರಂಭಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಕಂಡು ಆನಮ್ ತನ್ನ ಸ್ನೇಹಿತೆ ಪಾರಿ ಎಂಬಾಕೆಗೆ ಕರೆ ಮಾಡಿ ಸ್ಥಳಕ್ಕೆ ಬರಲು ತಿಳಿಸಿದ್ದಾಳೆ. ಗೌಸಿಯಾನಗರದ ನಿವಾಸಿಯಾದ ಪಾರಿ ಸ್ಥಳಕ್ಕೆ ಬರುತ್ತಿದ್ದಂತೆಯೇ, ಆಕ್ರೋಶಗೊಂಡಿದ್ದ ಯುವಕರು ತಲ್ವಾರ್ ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪಾರಿ ಅವರ ಮುಖಕ್ಕೆ ಚಾಕುವಿನಿಂದ ಇರಿದು ತೀವ್ರವಾಗಿ ಗಾಯಗೊಳಿಸಲಾಗಿದೆ. ಸದ್ಯ ಗಾಯಾಳು ಪಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರೂ ಮಂಗಳಮುಖಿಯರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ರಾತ್ರಿ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಮೈಸೂರಿನ ದಕ್ಷಿಣ (ಸೌತ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಕಿಡಿಗೇಡಿ ಯುವಕರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

MI vs KRR ಪಂದ್ಯದ ಬಳಿಕ ಐಪಿಎಲ್ ಬ್ರಾಡ್​ಕಾಸ್ಟ್ ಇಂಜಿನಿಯರ್ ಸಾವು

ಐಪಿಎಲ್ 2026ರ ಪಂದ್ಯಗಳ ನೇರ ಪ್ರಸಾರ ತಂಡದ ಭಾಗವಾಗಿದ್ದ ಬ್ರಿಟನ್ ಮೂಲದ ಹಿರಿಯ ಬ್ರಾಡ್​ಕಾಸ್ಟ್ ಇಂಜಿನಿಯರ್ ಇಯಾನ್ ವಿಲಿಯಮ್ಸ್ ಲ್ಯಾಂಗ್‌ಫೋರ್ಡ್ (76) ಅವರು ಮೃತಪಟ್ಟಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ (MI) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ನಡುವಣ ಪಂದ್ಯದ ಬಳಿಕ ಮುಂಬೈನ ಹೋಟೆಲ್ ಕೊಠಡಿಗೆ ಮರಳಿದ್ದ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಘಟನೆಯ ಹಿನ್ನೆಲೆ:

ಇಯಾನ್ ವಿಲಿಯಮ್ಸ್ ಅವರು ಬಿಸಿಸಿಐ ಪರವಾಗಿ ಐಪಿಎಲ್ ಪ್ರಸಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮಾರ್ಚ್ 29ರ ಭಾನುವಾರ ರಾತ್ರಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್  ನಡುವಿನ ಪಂದ್ಯದ ಕರ್ತವ್ಯ ಮುಗಿಸಿ ಅವರು ದಕ್ಷಿಣ ಮುಂಬೈನ ನರಿಮನ್ ಪಾಯಿಂಟ್‌ನಲ್ಲಿರುವ ಟ್ರೈಡೆಂಟ್ ಹೋಟೆಲ್‌ಗೆ ಮರಳಿದ್ದರು. ಅವರು ಮಾರ್ಚ್ 24 ರಿಂದ ಇದೇ ಹೋಟೆಲ್‌ನ 2715ನೇ ಸಂಖ್ಯೆಯ ಕೊಠಡಿಯಲ್ಲಿ ತಂಗಿದ್ದರು.

ಮಾರ್ಚ್ 30ರ ಸೋಮವಾರ ಬೆಳಿಗ್ಗೆ, ಹೋಟೆಲ್ ಸಿಬ್ಬಂದಿ ಲ್ಯಾಂಗ್‌ಫೋರ್ಡ್ ಅವರ ಕೊಠಡಿಗೆ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅನುಮಾನಗೊಂಡ ಸಿಬ್ಬಂದಿ ಮಾಸ್ಟರ್ ಕೀ ಬಳಸಿ ಕೊಠಡಿಯನ್ನು ತೆರೆದಾಗ, ಅವರು ನೆಲದ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.

ತಕ್ಷಣ ಹೋಟೆಲ್‌ನ ವೈದ್ಯರನ್ನು ಕರೆಯಿಸಲಾಯಿತು, ಈ ವೇಳೆ ಅವರು ಲ್ಯಾಂಗ್‌ಫೋರ್ಡ್ ಮೃತಪಟ್ಟಿರುವುದನ್ನು ಖಚಿತಪಡಿಸಿದರು. ನಂತರ ಅವರನ್ನು ಮುಂಬೈನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಅಧಿಕೃತವಾಗಿ ಘೋಷಿಸಿದರು.

ಪೊಲೀಸ್ ತನಿಖೆ ಮತ್ತು ಪ್ರಾಥಮಿಕ ವರದಿ:

ಮುಂಬೈನ ಮರೀನ್ ಡ್ರೈವ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಆಕಸ್ಮಿಕ ಸಾವು (ADR – Accidental Death Report) ಪ್ರಕರಣ ದಾಖಲಾಗಿದೆ.

  • ಅನುಮಾನಾಸ್ಪದ ಅಂಶಗಳಿಲ್ಲ: ಪ್ರಾಥಮಿಕ ತನಿಖೆಯ ಪ್ರಕಾರ, ಕೊಠಡಿಯಲ್ಲಿ ಯಾವುದೇ ಅಸಹಜ ಅಥವಾ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.
  • ಆರೋಗ್ಯ ಸಮಸ್ಯೆ: 76 ವರ್ಷ ವಯಸ್ಸಿನ ಇಯಾನ್ ಅವರು ವಯೋಸಹಜ ಆರೋಗ್ಯ ಸಮಸ್ಯೆ ಅಥವಾ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
  • ಮರಣೋತ್ತರ ಪರೀಕ್ಷೆ: ಸಾವಿನ ನಿಖರ ಕಾರಣ ತಿಳಿಯಲು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಲ್ಯಾಂಗ್‌ಫೋರ್ಡ್ ವೃತ್ತಿಜೀವನ:

ಇಯಾನ್ ವಿಲಿಯಮ್ಸ್ ಲ್ಯಾಂಗ್‌ಫೋರ್ಡ್ ಅವರು ದಶಕಗಳಿಂದ ಕ್ರೀಡಾ ಪ್ರಸಾರ ಕ್ಷೇತ್ರದಲ್ಲಿ ಅನುಭವ ಹೊಂದಿದ್ದ ತಂತ್ರಜ್ಞರಾಗಿದ್ದರು. ಐಪಿಎಲ್‌ನಂತಹ ಬೃಹತ್ ಟೂರ್ನಿಗಳ ತಾಂತ್ರಿಕ ಗುಣಮಟ್ಟವನ್ನು ಕಾಪಾಡುವಲ್ಲಿ ಅವರ ಪಾತ್ರ ದೊಡ್ಡದಾಗಿತ್ತು. ಇದೀಗ ಅವರ ಸಾವು ಕ್ರೀಡಾ ಪ್ರಸಾರ ಕ್ಷೇತ್ರದಲ್ಲಿ ತುಂಬಲಾರದ ನಷ್ಟ ಎಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: VIDEO: ಟಾಸ್ ಫಿಕ್ಸಿಂಗ್..? ಮುಂಬೈ ಇಂಡಿಯನ್ಸ್ ವಿರುದ್ಧ ಗಂಭೀರ ಆರೋಪ

ಇನ್ನು ಈ ಸಾವಿನ ಕುರಿತು ಪೊಲೀಸರು ಈಗಾಗಲೇ ಬ್ರಿಟಿಷ್ ರಾಯಭಾರ ಕಚೇರಿಗೆ ಮಾಹಿತಿ ನೀಡಿದ್ದು, ಅವರ ಕುಟುಂಬದ ಸದಸ್ಯರಿಗೆ ಈ ಸಂಬಂಧ ಸಂದೇಶ ರವಾನಿಲಾಗಿದೆ.

 

Source link

ಒಂದು ಪೈರಸಿ ಲಿಂಕ್​​ನಿಂದ ಬಾಲಿವುಡ್​​ಗೆ ಆಯ್ತು ಸಾವಿರಾರು ಕೋಟಿ ಲಾಭ

ಚಿತ್ರರಂಗದವರ ಮೊದಲ ಶತ್ರು ಎಂದರೆ ಪೈರಸಿ (Piracy), ಅದರಿಂದ ಸಾವಿರಾರು ಕೋಟಿ ನಷ್ಟವಾಗುತ್ತಿದೆ ಎಂದು ದೂರುತ್ತಲೇ ಇರುತ್ತಾರೆ ಚಿತ್ರರಂಗದವರು. ಆದರೆ ಅದೇ ಒಂದು ಪೈರಸಿ ಲಿಂಕಿನಿಂದಾಗಿ ಭಾರತೀಯ ಚಿತ್ರರಂಗಕ್ಕೆ ವಿಶೇಷವಾಗಿ ಬಾಲಿವುಡ್​​ಗೆ ಈ ವರೆಗೆ ಸುಮಾರು 5000 ಕೋಟಿ ಲಾಭ ಆಗಿದೆ. ಲಕ್ಷಾಂತರ ಕೋಟಿ ಲಾಭದ ಅವಕಾಶ ತೆರೆದುಕೊಂಡಿದೆ ಎಂಬುದು ಗೊತ್ತೆ? ಅದು ಹೇಗೆ ಸಾಧ್ಯ? ವಿವರ ಇಲ್ಲಿದೆ ನೋಡಿ…

ಚೀನಾ, ವಿಶ್ವದ ಅತಿ ದೊಡ್ಡ ಸಿನಿಮಾ ಮಾರುಕಟ್ಟೆಗಳಲ್ಲಿ ಒಂದು. ಚೀನಾ ಒಂದರಲ್ಲೇ 90 ಸಾವಿರಕ್ಕೂ ಹೆಚ್ಚು ಸ್ಕ್ರೀನ್​​ಗಳು ಇವೆ. ಭಾರತಕ್ಕಿಂತಲೂ ಬಹಳ ಹೆಚ್ಚು ಮಂದಿ ಇಲ್ಲಿ ಸಿನಿಮಾ ನೋಡುತ್ತಾರೆ. ಆದರೆ ಭಾರತದ ಸಿನಿಮಾಗಳು ಚೀನಾದಲ್ಲಿ ಬಿಡುಗಡೆ ಆಗುತ್ತಿದ್ದಿದ್ದೇ ಬಹಳ ಕಡಿಮೆ. 1951ರಲ್ಲಿ ರಾಜ್ ಕಪೂರ್ ಅವರ ‘ಆವಾರ’ ಸಿನಿಮಾ ಇಲ್ಲಿ ‘ಸಾಂಸ್ಕೃತಿಕ ವಿನಿಮಯ’ ಯೋಜನೆಯಡಿ ಪ್ರದರ್ಶನಗೊಂಡು ದೊಡ್ಡ ಹಿಟ್ ಆಗಿತ್ತು. ಇದೇ ಸಿನಿಮಾ ರಷ್ಯಾ, ಜಪಾನ್​​ಗಳಲ್ಲಿಯೂ ಭಾರಿ ದೊಡ್ಡ ಹಿಟ್ ಆಗಿತ್ತು. ಆದರೆ ಈ ಆ ಬಳಿಕ ಚೀನಾದಲ್ಲಿ ಭಾರತೀಯ ಸಿನಿಮಾಗಳು ಹೆಚ್ಚು ಸದ್ದು ಮಾಡಿರಲಿಲ್ಲ. ಆದರೆ 2009-10ರಲ್ಲಿ ಚಿತ್ರಣವೇ ಬದಲಾಯ್ತು. ಅದೂ ಒಂದು ಪೈರಸಿ ಲಿಂಕ್​​ನಿಂದ.

2009 ರಲ್ಲಿ ಆಮಿರ್ ಖಾನ್ ನಟನೆಯ ‘3 ಇಡಿಯಟ್ಸ್’ ಸಿನಿಮಾ ಬಿಡುಗಡೆ ಆಯ್ತು. ಭಾರತದಲ್ಲಿ ಇದು ದೊಡ್ಡ ಹಿಟ್, ಚೈನಾದಲ್ಲಿ ಸಿನಿಮಾ ಬಿಡುಗಡೆ ಆಗಲಿಲ್ಲ. ಆದರೆ ಅಲ್ಲಿನ ಕಾಲೇಜೊಂದರಲ್ಲಿ ಈ ಸಿನಿಮಾವನ್ನು ಪೈರಸಿ ಲಿಂಕ್ ಮೂಲಕ ಡೌನ್​​ಲೋಡ್ ಮಾಡಿಕೊಂಡು ಕೆಲವು ಭಾರತೀಯ ವಿದ್ಯಾರ್ಥಿ ನೋಡಿದರು. ಅದು ಹಾಗೆಯೇ ಹಬ್ಬಿತು. ಯಾವ ಮಟ್ಟಿಗಾಯ್ತೆಂದರೆ ‘3 ಇಡಿಯಟ್ಸ್’ ಸಿನಿಮಾ ಚೀನಾನಲ್ಲಿ ಬಿಡುಗಡೆ ಆಗದಿದ್ದರೂ ಸಹ ಈಗಲೂ ಚೀನಾದ ಅತ್ಯುತ್ತಮ ಸಿನಿಮಾಗಳ ಪಟ್ಟಿಯಲ್ಲಿ ‘3 ಇಡಿಯಟ್ಸ್’ 12ನೇ ಸ್ಥಾನದಲ್ಲಿ ಇದೆ. ಭಾರತದ ರೀತಿಯಲ್ಲೇ ಮಕ್ಕಳನ್ನು ಶಿಕ್ಷಣಕ್ಕಾಗಿ ಅತಿಯಾಗಿ ಒತ್ತಾಯ ಮಾಡುವ, ಬಲವಂತದ ಶಿಸ್ತು ಹೇರುವ ದೇಶ ಚೀನಾ, ಇದರ ವಿರುದ್ಧ ಮಾತನಾಡುವ ‘3 ಇಡಿಯಟ್ಸ್’ ಸಿನಿಮಾ ಸಹಜವಾಗಿಯೇ ಅಲ್ಲಿನ ಜನರಿಗೆ ಬಹಳ ಇಷ್ಟವಾಯ್ತು.

ಇದನ್ನೂ ಓದಿ:ಚೀನಾದ ಡೆಹುವಾದಲ್ಲಿ ಭೀಕರ ಅಗ್ನಿ ಅವಘಡ

ಆಮಿರ್ ಖಾನ್ ಅವರು ಚೀನಾದ ದೊಡ್ಡ ಸ್ಟಾರ್ ಆಗಿಬಿಟ್ಟರು. ಚೀನಾ ಜನ ಆಮಿರ್ ಅವರನ್ನು ‘ಅಂಕಲ್ ಆಮಿರ್’ ಎಂದೇ ಕರೆಯುತ್ತಾರೆ. ಚೀನಾದಲ್ಲಿ ಸೃಷ್ಟಿಯಾಗಿರುವ ತಮ್ಮ ಜನಪ್ರಿಯತೆಯಿಂದಾಗಿ ಆಮಿರ್ ತಮ್ಮ ಮುಂದಿನ ಸಿನಿಮಾ ‘ಪಿಕೆ’ಯನ್ನು ಅಲ್ಲಿ ರಿಲೀಸ್ ಮಾಡಿದರು. ಆ ಸಿನಿಮಾ ಸುಮಾರು 100 ಕೋಟಿ ಮಾಡಿತು. ಆದರೆ ಅದಾದ ಬಳಿಕ ‘ದಂಗಲ್’ ಸಿನಿಮಾ ಬಿಡುಗಡೆ ಮಾಡಿದರು. ಅದು ಬ್ಲಾಕ್ ಬಸ್ಟರ್ ಆಯ್ತು. ಭಾರತದಲ್ಲಿ ಮತ್ತು ಇಡೀ ವಿಶ್ವದಲ್ಲಿ ಸಿನಿಮಾ ಗಳಿಕೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಹಣವನ್ನು ‘ದಂಗಲ್’ ಸಿನಿಮಾ ಕೇವಲ ಚೀನಾನಲ್ಲಿ ಮಾತ್ರವೇ ಗಳಿಕೆ ಮಾಡಿದೆ. ಇದೇ ಕಾರಣಕ್ಕೆ 2016 ರಿಂದ ಈಗಿನ ವರೆಗೆ ‘ದಂಗಲ್’ ಭಾರತದ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎನಿಸಿಕೊಂಡಿದೆ. ‘ಬಾಹುಬಲಿ’, ‘ಧುರಂಧರ್’ ಸಹ ಅದನ್ನು ಬ್ರೇಕ್ ಮಾಡಲು ಆಗಿಲ್ಲ.

‘ದಂಗಲ್’ ಹಿಟ್ ಆಗಲು ಸಹ ಕಾರಣ ಇತ್ತು. ಚೀನಾದ ಸಿಂಗಲ್ ಚೈಲ್ಡ್ ಪಾಲಿಸಿಯಿಂದಾಗಿ ಅಲ್ಲಿ ಹೆಣ್ಣು ಮಕ್ಕಳ ಪೋಷಕರಾದವರನ್ನು ಸಮಾಜ ತುಚ್ಛವಾಗಿ ನೋಡುತ್ತಿತ್ತು, ಆದರೆ ‘ದಂಗಲ್’ನಲ್ಲಿ ಆಮಿರ್, ಹೆಣ್ಣು ಮಕ್ಕಳನ್ನೇ ಗಂಡು ಮಕ್ಕಳಂತೆ ಬೆಳೆಸಿದ ಸಿನಿಮಾ ಸಹಜವಾಗಿಯೇ ಚೀನಾದ ಪೋಷಕರಿಗೆ ಭಾರಿ ಇಷ್ಟವಾಯ್ತು. ಸಿನಿಮಾ ಭಾರಿ ದೊಡ್ಡ ಗಳಿಕೆ ಮಾಡಿದೆ. ಆಮಿರ್, ಚೀನಾದಲ್ಲಿ ಇನ್ನೂ ದೊಡ್ಡ ಸ್ಟಾರ್ ಆಗಿಬಿಟ್ಟರು. ಬಳಿಕ ಆಮಿರ್ ಅವರ ‘ಸೀಕ್ರೆಟ್ ಸೂಪರ್​​ಸ್ಟಾರ್’ ಭಾರತದಲ್ಲಿ ಫ್ಲಾಪ್ ಆಯ್ತು, ಆದರೆ ಚೀನಾದಲ್ಲಿ ದೊಡ್ಡ ಹಿಟ್.

ಕೇವಲ ಆಮಿರ್ ಸಿನಿಮಾ ಮಾತ್ರವಲ್ಲ, ಎಲ್ಲ ಒಳ್ಳೆಯ ಭಾರತೀಯ ಸಿನಿಮಾಗಳನ್ನು ಚೀನಾ ಜನ ನೋಡಲು ಆರಂಭಿಸಿದರು. ವಿಜಯ್ ಸೇತುಪತಿ ನಟನೆಯ ‘ಮಹಾರಾಜ’ ಸಿನಿಮಾ ಚೀನಾ ಬಾಕ್ಸ್ ಆಫೀಸ್​​ನಲ್ಲಿ ಮ್ಯಾಜಿಕ್ ಅನ್ನೇ ಮಾಡಿತು. 500 ಕೋಟಿಗೂ ಹೆಚ್ಚು ಮೊತ್ತವನ್ನು ಆ ಸಿನಿಮಾ ಚೀನಾನಲ್ಲಿ ಗಳಿಕೆ ಮಾಡಿತು. ಭಾರತದಲ್ಲಿ ಫ್ಲಾಪ್ ಆದ ‘ಹಿಂದಿ ಮೀಡಿಯಂ’ ಸಿನಿಮಾ ಸಹ ಚೀನಾದಲ್ಲಿ ದೊಡ್ಡ ಹಿಟ್, ಏಕೆಂದರೆ ಅದು ಇಂಗ್ಲೀಷ್ ಭಾಷೆಯ ಕಲಿಕೆ, ಪೋಷಕರು ಮತ್ತು ಮಕ್ಕಳ ನಡುವಿನ ಕತೆ ಹೊಂದಿತ್ತು.

ಸಲ್ಮಾನ್ ಖಾನ್ ನಟನೆಯ ‘ಭಜರಂಗಿ ಭಾಯಿಜಾನ್’, ‘ಅಂದಾಧುನ್’, ‘ಟಾಯ್ಲೆಟ್: ಏಕ್ ಪ್ರೇಮ್​​ಕಥಾ’ ಇನ್ನೂ ಹಲವು ಸಿನಿಮಾಗಳು ಚೀನಾನಲ್ಲಿ ಭಾರಿ ದೊಡ್ಡ ಹಿಟ್ ಆದವು. ಇದಕ್ಕೆಲ್ಲ ಕಾರಣವಾಗಿದ್ದು ಒಂದು ಪೈರಸಿ ಲಿಂಕ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Hanuman Jayanti 2026: ಏಪ್ರಿಲ್ 02 ಹನುಮ ಜಯಂತಿ; ಈ ದಿನ ತಪ್ಪದೇ ಈ ಸರಳ ಪರಿಹಾರ ಅನುಸರಿಸಿ!

ಹಿಂದೂ ಧರ್ಮದಲ್ಲಿ ಚೈತ್ರ ಮಾಸದ ಹುಣ್ಣಿಮೆಗೆ ಅಪಾರ ಪ್ರಾಮುಖ್ಯತೆಯಿದೆ. ಪುರಾಣಗಳ ಪ್ರಕಾರ, ಶ್ರೀರಾಮನ ಪರಮ ಭಕ್ತ ಹನುಮಂತನು ಜನಿಸಿದ ಈ ಪವಿತ್ರ ದಿನವನ್ನು ‘ಹನುಮ ಜಯಂತಿ‘ ಅಥವಾ ‘ಹನುಮಾನ್ ಜನ್ಮೋತ್ಸವ’ ಎಂದು ದೇಶಾದ್ಯಂತ ಅತ್ಯಂತ ಭಕ್ತಿ-ಭಾವದಿಂದ ಆಚರಿಸಲಾಗುತ್ತದೆ. ಈ ವರ್ಷ ಏಪ್ರಿಲ್ 2 ರಂದು ಹನುಮಾನ್ ಜಯಂತಿ ಬಂದಿದ್ದು, ಈ ದಿನದಂದು ಬಜರಂಗಬಲಿಯನ್ನು ಆರಾಧಿಸುವುದರಿಂದ ಜೀವನದ ಸಕಲ ಭಯ ಹಾಗೂ ಕಷ್ಟಗಳು ದೂರವಾಗುತ್ತವೆ ಎಂಬ ಬಲವಾದ ನಂಬಿಕೆಯಿದೆ. ವಿಶೇಷವಾಗಿ ಜಾತಕದಲ್ಲಿರುವ ಮಂಗಳ ದೋಷದ ಪ್ರಭಾವವನ್ನು ತಗ್ಗಿಸಲು ಈ ದಿನದ ಪೂಜೆ ಅತ್ಯಂತ ಫಲಪ್ರದವಾಗಿದೆ.

ಹನುಮಾನ್ ಜಯಂತಿಯಂದು ಕೆಲವು ವಿಶೇಷ ಧಾರ್ಮಿಕ ಕ್ರಮಗಳನ್ನು ಕೈಗೊಳ್ಳುವುದರಿಂದ ಗ್ರಹಗತಿಗಳ ಅಶುಭ ಫಲಗಳನ್ನು ದೂರ ಮಾಡಬಹುದು. ಅಂತಹ ಕೆಲವು ಪರಿಣಾಮಕಾರಿ ಪರಿಹಾರಗಳು ಇಲ್ಲಿವೆ:

ಸಿಂಧೂರ ಮತ್ತು ಮಲ್ಲಿಗೆ ಎಣ್ಣೆ ಸಮರ್ಪಣೆ:

ಹನುಮಂತನಿಗೆ ಮಲ್ಲಿಗೆ ಎಣ್ಣೆಯಲ್ಲಿ ಬೆರೆಸಿದ ಸಿಂಧೂರವನ್ನು (ಚೋಳ) ಅರ್ಪಿಸುವುದು ಅತ್ಯಂತ ಶ್ರೇಷ್ಠ. ಇದು ಮಂಗಳ ಗ್ರಹದ ನಕಾರಾತ್ಮಕ ಪ್ರಭಾವವನ್ನು ಕಡಿಮೆ ಮಾಡಿ, ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ವೃದ್ಧಿಸುತ್ತದೆ.

ಸುಂದರಕಾಂಡ ಪಠಣೆ:

ಈ ದಿನ ಸುಂದರಕಾಂಡವನ್ನು ಪಠಿಸುವುದರಿಂದ ಮನಸ್ಸಿನಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಹಾಗೂ ಮಾಡಿದ ಪಾಪಕರ್ಮಗಳು ದೂರವಾಗಿ ಶಾಂತಿ ಲಭಿಸುತ್ತದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ರಾಮ ನಾಮ ಜಪ:

ಹನುಮಂತನಿಗೆ ರಾಮ ನಾಮವೆಂದರೆ ಅತ್ಯಂತ ಪ್ರಿಯ. ಆದ್ದರಿಂದ “ರಾಮ್-ರಾಮ್” ಎಂದು 108 ಬಾರಿ ಜಪಿಸುವುದರಿಂದ ಹನುಮಂತನ ಕೃಪೆ ಬೇಗನೆ ದೊರೆಯುತ್ತದೆ ಮತ್ತು ಮಂಗಳ ದೋಷ ನಿವಾರಣೆಯಾಗುತ್ತದೆ.

ನೈವೇದ್ಯ ಮತ್ತು ದಾನ:

ಬಜರಂಗಬಲಿಗೆ ಕೆಂಪು ಗುಲಾಬಿ ಹಾಗೂ ಬೂಂದಿ ಅಥವಾ ಕಡಲೆಹಿಟ್ಟಿನ ಲಡ್ಡುಗಳನ್ನು ಅರ್ಪಿಸುವುದು ಮಂಗಳ ಗ್ರಹವನ್ನು ಶಾಂತಗೊಳಿಸಲು ಸಹಕಾರಿ. ಇದರೊಂದಿಗೆ ಅಗತ್ಯವಿರುವವರಿಗೆ ಕೆಂಪು ಬೇಳೆ ಮತ್ತು ಬೆಲ್ಲವನ್ನು ದಾನ ಮಾಡುವುದರಿಂದ ಗ್ರಹಗಳ ಋಣಾತ್ಮಕ ಪರಿಣಾಮಗಳು ದೂರವಾಗುತ್ತವೆ.

ಬಜರಂಗ ಬಾಣ ಮತ್ತು ಹನುಮಾನ್ ಚಾಲೀಸಾ:

ಮದುವೆಯಲ್ಲಿ ಎದುರಾಗುವ ಅಡೆತಡೆಗಳನ್ನು ನಿವಾರಿಸಲು ಭಕ್ತಿಯಿಂದ ಬಜರಂಗ ಬಾಣ ಪಠಿಸಬೇಕು. ಹಾಗೆಯೇ ದೇವಸ್ಥಾನಕ್ಕೆ ಭೇಟಿ ನೀಡಿ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳು ನಾಶವಾಗಿ ಧನಾತ್ಮಕತೆ ನೆಲೆಸುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐವರು ಮಹಿಳೆಯರಿಂದ ಥಿಯೇಟರ್‌ ಮಾಲೀಕನ ಸುಲಿಗೆ: ಬ್ಲ್ಯಾಕ್​​ಮೇಲ್​​ ಮಾಡಿ ಪೀಕಿದ್ದು 25 ಲಕ್ಷ ರೂ.!

ರಾಮನಗರ, ಮಾರ್ಚ್​​ 31:  ಐದು ಮಹಿಳೆಯರ ಗುಂಪೊಂದು ಬೆದರಿಸಿ ಚಿತ್ರಮಂದಿರದ ಮಾಲೀಕರೊಬ್ಬರಿಂದ 25 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಬಗ್ಗೆ ಪಟ್ಟಣದ ಅಗ್ರಹಾರ ಬಡಾವಣೆ ನಿವಾಸಿಯಾಗಿರುವ 52 ವರ್ಷದ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದಾರೆ. ಏಳು ವರ್ಷಗಳ ಹಿಂದೆ ಪತ್ನಿ ದೂರವಾದ ಬಳಿಕ ಅವರು ಒಬ್ಬರೇ ವಾಸವಾಗಿದ್ದರು. ತಾಯಿ-ತಂದೆ ಅಥವಾ ಮಕ್ಕಳು ಯಾರೂ ಅವರಿಗೆ ಇಲ್ಲ. ಈ ನಡುವೆ ಆರೋಪಿಗಳ ಪೈಕಿ ಓರ್ವಳು ಮೊದಲು ಮದುವೆಯಾಗುವ ಆಸೆ ವ್ಯಕ್ತಪಡಿಸಿ ಸಂತ್ರಸ್ತರನ್ನು ಸಂಪರ್ಕಿಸಿದ್ದಳು. ಬಳಿಕ ಉಳಿದ ನಾಲ್ವರ ಪರಿಚಯವಾಗಿತ್ತು ಎನ್ನಲಾಗಿದೆ. ಆದರೆ ಬ್ಲ್ಯಾಕ್‌ಮೇಲ್‌ನ ನಿಖರ ಕಾರಣ ಏನೆಂಬುದು ತನಿಖೆ ಬಳಿಕ ಸ್ಪಷ್ಟವಾಗಬೇಕಿದೆ.

ಸಂತ್ರಸ್ತ ವ್ಯಕ್ತಿ ನೀಡಿರುವ ದೂರಿನ ಪ್ರಕಾರ, ಆರೇಳು ತಿಂಗಳ ಹಿಂದೆ ಕೋಟಿಪುರ ಪ್ರದೇಶದ ಮಹಿಳೆ ಸಿನಿಮಾ ನೋಡುವ ನೆಪದಲ್ಲಿ ಅವರ ಥಿಯೇಟರ್‌ಗೆ ಬಂದಿದ್ದಳು. ತನ್ನನ್ನು ಪರಿಚಯಿಸಿಕೊಂಡು ಮದುವೆಯಾಗಲು ಇಚ್ಛೆ ಇದೆ ಎಂದು ಹೇಳಿದ್ದಳು. ಆದರೆ ಇವರು ಅದನ್ನು ನಿರಾಕರಿಸಿದ ನಂತರ, ಆಕೆ ಮತ್ತಿಬ್ಬರು ಮಹಿಳೆಯರೊಂದಿಗೆ ಮತ್ತೆ ಭೇಟಿ ನೀಡಿದ್ದಳು. ಬಳಿಕ ವಿವಿಧ ನೆಪಗಳಲ್ಲಿ ಬೆದರಿಕೆ ಹಾಕಿ ಹಣ ಹಾಗೂ ಚಿನ್ನವನ್ನು ಪಡೆದುಕೊಳ್ಳಲು ಆರೋಪಿಗಳು ಯತ್ನಿಸಿದ್ದರು. ಮೊದಲು ಚಿಕ್ಕ ಮೊತ್ತಗಳನ್ನು ಪಡೆದುಕೊಳ್ಳುತ್ತಿದ್ದ ಆರೋಪಿಗಳು, ನಂತರ ದೊಡ್ಡ ಮೊತ್ತಕ್ಕೆ ಬೇಡಿಕೆ ಇಟ್ಟಿದ್ದರು. ಇದಕ್ಕೆ ಸಂತ್ರಸ್ತ ವ್ಯಕ್ತಿ ಒಪ್ಪದಿದ್ದಾಗ ಅತ್ಯಾಚಾರ ಹಾಗೂ ಪೋಕ್ಸೋ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿರೋದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 500 ಗ್ರಾಂ ಚಿನ್ನಾಭರಣಗಳನ್ನು ಕೂಡ ಆರೋಪಿ ಮಹಿಳೆಯರು ಪೀಕಿರೋದಾಗಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಕೌಟಿಂಬಿಕ ಕಲಹ; ಬೆಂಕಿ ಹಚ್ಚಿಕೊಂಡು ರಾಮನಗರದಲ್ಲಿ 5 ತಿಂಗಳ ಗರ್ಭಿಣಿ ಆತ್ಮಹತ್ಯೆ

ಇದರ ಜೊತೆಗೆ ವಿವಿಧ ಮೊಬೈಲ್ ಸಂಖ್ಯೆಗಳ ಮೂಲಕ ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿ ಆನ್‌ಲೈನ್‌ನಲ್ಲಿ ದಿನಸಿ ಸಾಮಗ್ರಿಗಳನ್ನು ಖರೀದಿಸಲು ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಇಜೂರು ಪೊಲೀಸ್ ಠಾಣೆಯಲ್ಲಿ BNS 308 ಸೇರಿದಂತೆ ವಿವಿಧ ಕಲಂಗಳ ಅಡಿಯಲ್ಲಿ ಐದು ಮಹಿಳೆಯರ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ 52 ವರ್ಷದ ವ್ಯಕ್ತಿಯು ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಆಸ್ಪತ್ರೆಗೆ 15 ದಿನಗಳ ಕಾಲ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಎಂಬ ವಿಚಾರವೂ ಈ ವೇಳೆ ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಒಬ್ಬರಿಂದ ಪಕ್ಷ ನಡೆಯಲ್ಲ: ಸಂಚಲನ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ

ದಾವಣಗೆರೆ, (ಮಾರ್ಚ್ 31): ಸಚಿವ ಎಸ್​ಎಸ್​ ಮಲ್ಲಿಕಾರ್ಜು ಆಡಿದ ಮಾತು ಹಾಗೂ ಮುಸ್ಲಿಮರಿಗೆ ಟಿಕೆಟ್ ಕೈತಪ್ಪಿದ್ದರಿಂದ ಜಮಿರ್ ಅಹಮ್ಮದ್ ಖಾನ್ ಮುನಿಸಿಕೊಂಡಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಪ್ರಚಾರದಿಂದ ದೂರ ಉಳಿದುಕೊಂಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸುಮಾರು 80 ಸಾವಿರ ಮುಸ್ಲಿಂ ಮತಗಳಿವೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಅವರನ್ನು ಪ್ರಚಾರಕ್ಕೆ ಕರೆಯುಸುವಂತೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಒಬ್ಬರಿಂದ ಪಕ್ಷ ನಡೆಯಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದು, ಇದು ಭಾರೀ ಸಂಚಲ ಮೂಡಿಸಿದೆ.

ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಶೇ. 79ರಷ್ಟು ಜನ ಕಾಂಗ್ರೆಸ್ ಅಭ್ಯರ್ಥಿ ಪರ ಒಲವು ಹೊಂದಿದ್ದಾರೆ. ಶಾಮನೂರು ಶಿಕ್ಷಣ ಸಂಸ್ಥೆಯಲ್ಲಿ ಲಕ್ಷಾಂತರ ಜನ ಶಿಕ್ಷಣ ಪಡೆದಿದ್ದಾರೆ. ಸಚಿವ ಜಮೀರ್ ಕೇರಳದಲ್ಲಿ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡ್ತಿದ್ದಾರೆ.ಮುಗಿಸಿಕೊಂಡು ಬಂದ ಮೇಲೆ ಎಲ್ಲಿಗೆ ಕಳುಹಿಸುವ ಬಗ್ಗೆ ಚರ್ಚಿಸುತ್ತೇವೆ. ಒಬ್ಬರಿಂದ ಪಕ್ಷ ನಡೆಯಲ್ಲ. ಅದು ಡಿಕೆ, ಸಿಎಂ, ಜಮೀರ್ ಆಗಬಹುದು. 16 ನಿಗಮ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅಧ್ಯಕ್ಷ ಸ್ಥಾನ ನೀಡಿದ್ದೇವೆ. ಅಬ್ದುಲ್ ಜಬ್ಬಾರ್​ಗೆ 3 ಬಾರಿ ಪರಿಷತ್ ಸದಸ್ಯ ಸ್ಥಾನ ನೀಡಿದ್ದೇವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜಮೀರ್ ಅಹಮ್ಮದ್ ಖಾನ್​​ಗೆ ಟಾಂಗ್ ಕೊಟ್ಟರು.

ಇದನ್ನೂ ಓದಿ: ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

Source link

ಒಂದೇ ಒಂದು ಪಂದ್ಯ ಗೆದ್ದಿರುವ RCB ಮತ್ತು RR ನಡುವೆ ಭಾರೀ ಅಂತರ..!

Source link

ಗುಜರಾತ್​ನಲ್ಲಿ 3,300 ಕೋಟಿ ರೂ ವೆಚ್ಚದ ಕೇನ್ಸ್ ಸಮಿಕಾನ್ ಘಟಕ ಉದ್ಘಾಟನೆ ಮಾಡಿದ ನರೇಂದ್ರ ಮೋದಿ

ಅಹ್ಮದಾಬಾದ್, ಮಾರ್ಚ್ 31: ಇಲ್ಲಿಗೆ ಸಮೀಪದ ಸಾನಂದ್​ನಲ್ಲಿ ಕೇನ್ಸ್ ಸಮಿಕಾನ್​ನ ಒಸಾಟ್ (OSAT- Outsourced Semiconductor Assembly and Test) ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇದು 3,300 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟಿಂಗ್ ಫೆಸಿಲಿಟಿ ಆಗಿದೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ಶುರುವಾಗಿರುವ ಎರಡನೇ ಚಿಪ್ ಮ್ಯಾನುಫ್ಯಾಕ್ಚರಿಂಗ್ ಘಟಕ ಇದಾಗಿದೆ. ಇದೇ ತಿಂಗಳು ಗುಜರಾತ್​ನಲ್ಲೇ ಅಮೆರಿಕ ಮೂಲದ ಮೈಕ್ರಾನ್ ಟೆಕ್ನಾಲಜಿಯಿಂದ ಭಾರತದ ಮೊದಲ ಸೆಮಿಕಂಡಕ್ಟರ್ ತಯಾರಕ ಘಟಕ ಶುರುವಾಗಿತ್ತು.

ಕೇನ್ಸ್ ಸಮಿಕಾನ್ ಮೈಸೂರಿನ ಕೇನ್ಸ್ ಟೆಕ್ನಾಲಜಿ ಸಂಸ್ಥೆಯಿಂದ ಶುರುವಾಗಿರುವ ಸೆಮಿಕಂಡಕ್ಟರ್ ಚಿಪ್ ತಯಾರಕ ಘಟಕವಾಗಿದೆ. ಉದ್ಘಾಟನೆಗೆ ಮುಂಚೆಯೇ ಇಲ್ಲಿ ಕಮರ್ಷಿಯಲ್ ಉತ್ಪಾದನೆ ಆರಂಭವಾಗಿದೆ. ಆಟೊಮೋಟಿವ್ ಮತ್ತು ಔದ್ಯಮಿಕ ಅಪ್ಲಿಕೇಶನ್​ಗಳಿಗೆ ಬಳಸಲಾಗುವ ಇಂಟೆಲಿಜೆಂಟ್ ಪವರ್ ಮಾಡ್ಯೂಲ್​ಗಳನ್ನು (ಐಪಿಎಂ) ತಯಾರಿಸುವ ಕಾರ್ಯ ನಡೆಯುತ್ತಿದೆ. ಈ ಒಂದೊಂದು ಮಾಡ್ಯೂಲ್​ನಲ್ಲಿ 17 ಚಿಪ್​ಗಳನ್ನು ಜೋಡಿಸಲಾಗಿರುತ್ತದೆ. ಸುಮಾರು 900 ಮಲ್ಟಿಚಿಪ್ ಮಾಡ್ಯೂಲ್​ಗಳನ್ನು ತಯಾರಿಸಿ ಹೊರಕಳುಹಿಸಲಾಗಿದೆ.

ಇದನ್ನೂ ಓದಿ: ಆನ್​ಲೈನ್ ಪೋಸ್ಟ್ ಹಾಕುವಾಗ ಹುಷಾರ್; ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೂ ಬಿಸಿ; ಇದು ಸರ್ಕಾರದ ಪ್ರಸ್ತಾವಿತ ಐಟಿ ನಿಯಮಗಳ ಎಫೆಕ್ಟ್

ಈ ಘಟಕ ಪೂರ್ಣ ಶಕ್ತಿಯಿಂದ ಕಾರ್ಯಾರಂಭಿಸಿದರೆ ಒಂದು ದಿನಕ್ಕೆ 60 ಲಕ್ಷ ಚಿಪ್ ಯುನಿಟ್​ಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿದೆ.

ಭಾರತದಲ್ಲಿ ಇನ್ನೂ ಹಲವು ಚಿಪ್ ಮ್ಯಾನುಫ್ಯಾಕ್ಚರಿಂಗ್ ಘಟಕಗಳು ಬರಲಿವೆ

ಸರ್ಕಾರವು ಸೆಮಿಕಂಡಕ್ಟರ್ ಮಿಷನ್ ಅನ್ನು ಗಂಭೀರವಾಗಿ ಪರಿಗಣಿಸಿದ್ದು, ಹಲವಾರು ಘಟಕಗಳಿಗೆ ಅನುಮೋದನೆ ಕೊಟ್ಟಿದೆ. ಸದ್ಯಕ್ಕೆ ಅಮೆರಿಕದ ಮೈಕ್ರಾನ್ ಮತ್ತು ಮೈಸೂರಿನ ಕೇನ್ಸ್ ಟೆಕ್ನಾಲಜಿ ಕಂಪನಿಗಳು ಗುಜರಾತ್​ನ ಸಾನಂದ್​ನಲ್ಲಿ ಚಿಪ್ ತಯಾರಿಸುವ ಘಟಕ ಆರಂಭಿಸಿವೆ. ತೈವಾನ್​ನ ಪಿಎಸ್​ಎಂಸಿ ಮತ್ತು ಟಾಟಾ ಎಲೆಕ್ಟ್ರಾನಿಕ್ಸ್ ಮೊದಲಾದ ಸಂಸ್ಥೆಗಳಿಂದಲೂ ಸೆಮಿಕಂಡಕ್ಟರ್ ಘಟಕಗಳು ಶುರುವಾಗಲಿವೆ. ಅನುಮೋದನೆಗೊಂಡಿರುವ ಐದು ಸೆಮಿಕಂಡಕ್ಟರ್ ಘಟಕಗಳು ಇಂತಿವೆ:

  1. ಮೈಕ್ರಾನ್ ಟೆಕ್ನಾಲಜಿ: ಗುಜರಾತ್​ನ ಸಾನಂದ್​ನಲ್ಲಿ
  2. ಕೇನ್ಸ್ ಸೆಮಿಕಾನ್: ಗುಜರಾತ್​ನ ಸಾನಂದ್​ನಲ್ಲಿ
  3. ಟಿಎಸ್​ಎಟಿ (ಟಾಟಾ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್) ಘಟಕ: ಅಸ್ಸಾಮ್​ನಲ್ಲಿ
  4. ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈ ಲಿ (ಟಿಇಪಿಎಲ್) ಫ್ಯಾಬ್ ಘಟಕ: ಗುಜರಾತ್​ನ ಧುಲೆರಾದಲ್ಲಿ
  5. ಸಿಜಿ ಪವರ್ ರೆನಿಸಾಸ್ ಘಟಕ: ಗುಜರಾತ್​ನಲ್ಲಿ

ಇದನ್ನೂ ಓದಿ: ವಿವಿಧ ಪೋಸ್ಟ್ ಆಫೀಸ್ ಸ್ಕೀಮ್ಸ್; ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಬಡ್ಡಿದರ ಘೋಷಣೆ; ಇಲ್ಲಿದೆ ಪಟ್ಟಿ

ಇಲ್ಲಿ ಸಿಜಿ ಪವರ್ ರೆನಿಸಾಸ್ ಘಟಕವು ಭಾರತ, ಜಪಾನ್ ಮತ್ತು ಥಾಯ್ಲೆಂಡ್ ಕಂಪನಿಗಳ ಜಂಟಿ ಯೋಜನೆಯಾಗಿದೆ. ಜಪಾನ್​ನ ರೆನಿಸಾಸ್ ಎಲೆಕ್ಟ್ರಾನಿಕ್ಸ್ ಕಾರ್ಪೊರೇಶನ್, ಥಾಯ್ಲೆಂಡ್​ನ ಸ್ಟಾರ್ಸ್ ಮೈಕ್ರೋಎಲೆಕ್ಟ್ರಾನಿಕ್ಸ್ ಮತ್ತು ಭಾರತದ ಸಿಜಿ ಪವರ್ ಸಂಸ್ಥೆಗಳು ಸೇರಿ ಸಿಜಿ ಪವರ್ ರೆನಿಸಾಸ್ ಘಟಕವನ್ನು ನಿರ್ಮಿಸುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

ದಾವಣಗೆರೆ/ಬಾಗಲಕೋಟೆ, (ಮಾರ್ಚ್ 31): ದಾವಣಗೆರೆ ದಕ್ಷಿಣ ಕ್ಷೇತ್ರದಿಂದ (Davanagere South By Election)  ಮುಸ್ಲಿಂ ಮುಖಂಡ ಸಾದಿಕ್​ ಪೈಲ್ವಾನ್​​ ಅವರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹಮ್ಮದ್ ಖಾನ್ (zameer ahmed khan )ಬಿಗಿಪಟ್ಟು ಹಿಡಿದಿದ್ದರು. ಈ ಸಂಬಂಧ ಸಚಿವ ಎಸ್​​ಎಸ್​ ಮಲ್ಲಿಕಾರ್ಜುನ ಆಕ್ಷೇಪ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ಜಮೀರ್ ಅಹಮ್ಮದ್ ಖಾನ್​​ಗೆ ಏಕವಚಲನದಲ್ಲಿ ನಿಂದಿಸಿದ್ದರು. ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದರಿಂದ ಜಮೀರ್ ಅಸಮಾಧಾನಗೊಂಡಿದ್ದು, ಚುನಾವಣಾ ಪ್ರಚಾರದಿಂದ ದೂರ ಇದ್ದಾರೆ. ಇನ್ನೊಂದೆಡೆ ಅವರ ಅಭಿಮಾನಿಗಳು ಹಾಗೂ ಮುಸ್ಲಿಂ ಸಮಯದಾಯದವರು ಪ್ರಚಾರಕ್ಕೆ ಜಮೀರ್ ಅಹಮ್ಮದ್ ಖಾನ್ ಅವರನ್ನು ಕರೆಯಿಸಿ ಎಂದು ಆಗ್ರಹಿಸಿಸುತ್ತಿದ್ದಾರೆ.

ಮಲ್ಲಿಕಾರ್ಜುನ-ಜಮೀರ್ ನಡುವೆ ತಿಕ್ಕಾಟ

ಉಪಚುನಾವಣೆ ಘೋಷಣೆಯಾದಾಗಿನಿಂದ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ವಸತಿ ಮತ್ತು ವಕ್ಸ್ ಸಚಿವ ಜಮೀರ್ ಅಹ್ಮದ್ ನಡುವಿನ ತಿಕ್ಕಾಟ ಮುಂದುವರೆದಿದ್ದು, ‘ಸ್ವಾಭಿಮಾನ’ ಮಾತುಗಳನ್ನು ಉಭಯ ನಾಯಕರು ಆಡಿದ್ದಾರೆ. ಪುತ್ರ ಸಮರ್ಥ್‌ಗೆ ಟಿಕೆಟ್‌ ನೀಡ ಬೇಕೆಂದು ಸಚಿವ ಮಲ್ಲಿಕಾರ್ಜುನ ಹಾಗೂ ಸಾದಿಕ್ ಪೈಲ್ವಾನ್‌ಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಅಂತಿಮವಾಗಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಕೊಡಲು ಹೈಕಮಾಂಡ್ ತೀರ್ಮಾನಿಸಿದ್ದರೂ ಜಮೀರ್ ಇದನ್ನು ವಿರೋಧಿಸಿಕೊಂಡೇ ಬಂದಿದ್ದರು. ಸಾದಿಕ್ ಬಂಡಾಯವಾಗಿ ಸ್ಪರ್ಧಿಸಲು ಜಮೀರ್ ಕಾರಣ ಎನ್ನುವ ಮಾತುಗಳು ಕೇಳಿಬಂದಿತ್ತು. ಈ ಎಲ್ಲ ಗೊಂದಲಗಳ ಹೊರತಾಗಿಯೂ ಸಿಎಂ ಸಿದ್ದರಾಮಯ್ಯ ಮಧ್ಯಸ್ಥಿಕೆಯಲ್ಲಿ ಜಮೀರ್ ಸಮರ್ಥ್ ಪರವಾಗಿ ಪ್ರಚಾರ ಕೈಗೊಳ್ಳಲು ಮುಂದಾಗಿದ್ದರು. ಬೂದಿ ಮುಚ್ಚಿದ ಕೆಂಡದಂತಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯಕ್ಕೆ ಸಚಿವ ಮಲ್ಲಿಕಾರ್ಜುನ್ ಅವರ ‘ಜಮೀರ್ ಬರುವುದಕ್ಕಿಂತ ಬಾರದಿರುವುದೇ ಒಳ್ಳೆಯದು’ ಎನ್ನುವ ಹೇಳಿಕೆ ಮತ್ತೆ ಕಿಡಿ ಹೊತ್ತಿಸಿದೆ.

ಇದನ್ನೂ ಓದಿ: ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​​ನ ಆಪರೇಷನ್ ಮುಸ್ಲಿಂ ಕ್ಯಾಂಡಿಡೇಟ್ ಕಾರ್ಯಾಚರಣೆ ಫೇಲ್

ಟಿಕೆಟ್ ಕೈತಪ್ಪಿದ್ದಕ್ಕೆ ಮುನಿಸಿಕೊಂಡ ಜಮೀರ್

ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ (ಸುಮಾರರು 80 ಸಾವಿರ) ದಾವಣಗೆರೆ ಕ್ಷೇತ್ರದಲ್ಲಿ ಮುಸ್ಲೀಮರಿಗೆ ಟಿಕೆಟ್ ಕೊಡಿಸಲು ಸಚಿವ ಜಮೀರ್ ಇನ್ನಿಲ್ಲದಂತೆ ಸರ್ಕಸ್ ಮಾಡಿದ್ದರು. ಮುಸ್ಲಿಂ ಮುಖಂಡ ಸಾದಿಕ್​ಗೆ ಟಿಕೆಟ್ ಕೊಡಿ. ಗೆಲ್ಲಿಸಿಕೊಂಡು ಬರುತ್ತೇನೆಂದು ಜಮೀರ್ ಸುರ್ಜೇವಾಲ ಸಭೆಯಲ್ಲೂ ಭರವಸೆ ನೀಡಿದ್ದರು. ಆದ್ರೆ ಹೈಕಮಾಂಡ್ ಶಾಮನೂರು ಮೊಮ್ಮಗ ಸಮರ್ಥ್​ಗೆ ಟಿಕೆಟ್ ಕೊಟ್ಟಿದೆ. ಇನ್ನೊಂದೆಡೆ ಎಸ್​​ಎಸ್​ ಮಲ್ಲಿಕಾರ್ಜುನ ಆಡಿದ ಮಾತುಗಳಿಂದ ಸಹ ಸಿಎಂ ಸಿದ್ದರಾಮಯ್ಯ ಆಪ್ತ, ಸಚಿವ ಜಮೀರ್ ಮುನಿಸಿಕೊಂಡಿದ್ದು, ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದ್ದರೂ ಸಹ ಪ್ರಚಾರದಿಂದ ದೂರ ಉಳಿದಿದ್ದಾರೆ. ಕೇರಳ ಚುನಾವಣೆಗೆ ಪ್ರಚಾರ ಮಾಡಲು ಅಲ್ಲೇ ಠಿಕಾಣಿ ಹೂಡಿರುವ ಜಮೀರ್ ಅಹ್ಮದ್, ದಾವಣಗೆರೆ ದಕ್ಷಿಣ ಕ್ಷೇತ್ರದತ್ತ ಮುಖ ಹಾಕಿಯೂ ನೋಡುತ್ತಿಲ್ಲ.

ಜಮೀರ್​​ಗೆ ಫುಲ್ ಡಿಮ್ಯಾಂಡ್

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ಮಧ್ಯೆ ಅಲ್ಪಸಂಖ್ಯಾತ ಮುಖಂಡರು ಹಾಗೂ ಕಾರ್ಯಕರ್ತರು ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಪ್ರಚಾರಕ್ಕೆ ಕಳುಹಿಸುವಂತೆ ನಾಯಕರಿಗೆ ಬಿಗಿ ಪಟ್ಟು ಹಿಡಿದಿದ್ದಾರೆ. ನಿನ್ನೆ (ಮಾರ್ಚ್ 30) ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ಸಹ ಮುಸ್ಲಿಮರು, ಜಮೀರ್ ಅವರನ್ನ ಪ್ರಚಾರಕ್ಕೆ ಕಳುಹಿಸುವಂತೆ ಆಗ್ರಹಿಸಿದ್ದಾರೆ.

ಇನ್ನೊಂದೆಡೆ ಇಂದು (ಮಾರ್ಚ್ 31) ದಾವಣಗೆರೆಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್​​ ಅವರಿಗೂ ಸಹ ಜಮೀರ್ ಅಭಿಮಾನಿಯೊಬ್ಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪೋಟೋ ಹಿಡಿದ ಹೆಲಿಪ್ಯಾಡ್ ಆಗಮಿಸಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಎದರು ಜಮೀರ್ ಅಹಮ್ಮದ್ ಖಾನ್ ಪೋಟೋ ಹಿಡಿದು ಘೋಷಣೆ ಕೂಗಿದ್ದಾನೆ. ಅಲ್ಲದೇ ಚುನಾವಣೆ ಪ್ರಚಾರಕ್ಕೆ ಜಮೀರ್ ಅವರನ್ನು ಕರೆಸಬೇಕು. ಅವರು ಬರದಿದ್ದರೆ ನಾವು ಬರಲ್ಲ. ಜಮೀದ್ ಅಹಮ್ಮದ್ ಖಾನ್ ಬಂದರೆ ಕಾಂಗ್ರೆಸ್ ಗೆಲ್ಲುತ್ತೆ. ಇಲ್ಲವಾದರೆ ಕಾಂಗ್ರೆಸ್ ಗೆಲುವು ಕಷ್ಟ ಎಂದು ಜಮೀರ್ ಅಭಿಮಾನಿ ಆಸೀಫ್ ಅಲಿ ಬಿಗಿಪಟ್ಟು ಹಿಡಿದಿದ್ದು, ಕೊನೆಗೆ ಮೊಹಮ್ಮದ್ ನಲಪಾಡ್ ಆಸೀಫ್ ಅಲಿಯನ್ನು ಪಕ್ಕಕ್ಕೆ ಕರೆದೊಯ್ದು ಸಮಧಾನಪಡಿಸಿದ್ದಾರೆ.

ಒಬ್ಬರಿಂದ ಪಕ್ಷ ನಡೆಯಲ್ಲ ಎಂದ ಡಿಕೆಶಿ

ಇನ್ನು ದಾವಣಗೆರೆಯಲ್ಲಿ ಮಾತನಾಡಿದ ಡಿಕೆಶಿ, ಶೇ. 79ರಷ್ಟು ಜನ ಕಾಂಗ್ರೆಸ್ ಅಭ್ಯರ್ಥಿ ಪರ ಒಲವು ಹೊಂದಿದ್ದಾರೆ. ಶಾಮನೂರು ಶಿಕ್ಷಣ ಸಂಸ್ಥೆಯಲ್ಲಿ ಲಕ್ಷಾಂತರ ಜನ ಶಿಕ್ಷಣ ಪಡೆದಿದ್ದಾರೆ. ಸಚಿವ ಜಮೀರ್ ಕೇರಳದಲ್ಲಿ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡ್ತಿದ್ದಾರೆ.ಮುಗಿಸಿಕೊಂಡು ಬಂದ ಮೇಲೆ ಎಲ್ಲಿಗೆ ಕಳುಹಿಸಬೇಕು ಬಗ್ಗೆ ಚರ್ಚಿಸುತ್ತೇವೆ. ಒಬ್ಬರಿಂದ ಪಕ್ಷ ನಡೆಯಲ್ಲ. ಅದು ಡಿಕೆ, ಸಿಎಂ, ಜಮೀರ್ ಆಗಬಹುದು. 16 ನಿಗಮ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅಧ್ಯಕ್ಷ ಸ್ಥಾನ ನೀಡಿದ್ದೇವೆ. ಅಬ್ದುಲ್ ಜಬ್ಬಾರ್​ಗೆ 3 ಬಾರಿ ಪರಿಷತ್ ಸದಸ್ಯ ಸ್ಥಾನ ನೀಡಿದ್ದೇವೆ. ಕಣದಲ್ಲಿ ಮುಸ್ಲಿಂ ಅಭ್ಯರ್ಥಿಗಳು ಇದ್ದಾರೆ. ಅದರಿಂದ ತೊಂದರೆ ಆಗಲ್ಲ ಎಂದರು. ಅಲ್ಲದೇ ಒಬ್ಬರಿಂದ ಪಕ್ಷ ನಡೆಯಲ್ಲ ಎಂದು ಹೇಳುವ ಮೂಲಕ ಜಮೀರ್ ಅಹಮ್ಮದ್ ಖಾನ್​​ಗೆ ಪರೋಕ್ಷ ಟಾಂಗ್ ಕೊಟ್ಟರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ?

‘ಆರ್​​ಆರ್​​ಆರ್’ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ನಟನೆಯ ಸತತ ಎರಡು ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಗಿವೆ. ‘ಗೇಮ್ ಚೇಂಜರ್’ ಮತ್ತು ‘ಆಚಾರ್ಯ’ ಎರಡೂ ಸಿನಿಮಾಗಳು ಹೀನಾಯ ಸೋಲು ಕಂಡಿವೆ. ಇದೀಗ ರಾಮ್ ಚರಣ್ ಅವರು ಗೆಲುವಿನ ಹುಡುಕಾಟದಲ್ಲಿದ್ದಾರೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾ ಬಹುತೇಕ ಮುಗಿಸಿದ್ದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 30 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ನಿರ್ಮಾಪಕರೊಬ್ಬರು ಸಿನಿಮಾದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿರುವ ಬಗ್ಗೆ ಸುಳಿವು ನೀಡಿದ್ದು, ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಅಸಲಿಗೆ ‘ಪೆದ್ದಿ’ ಸಿನಿಮಾ ಮಾರ್ಚ್ 27ರಂದೇ ಬಿಡುಗಡೆ ಆಗಬೇಕಿತ್ತು. ಆದರೆ ರಾಮ್ ಚರಣ್ ಅವರ ಚಿಕ್ಕಪ್ಪ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಮಾರ್ಚ್ 26ಕ್ಕೆ ಬಿಡುಗಡೆ ಮಾಡುವುದಾಗಿ ಘೋಷಣೆ ಆಗಿತ್ತು. ಹಾಗಾಗಿ ಸಿನಿಮಾದ ಬಿಡುಗಡೆಯನ್ನು ಏಪ್ರಿಲ್ 30ಕ್ಕೆ ಮುಂದೂಡಲಾಯ್ತು. ಆದರೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಯ್ತು. ಆದರೆ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಈಗ ಏಪ್ರಿಲ್ 30ರ ಬದಲಾಗಿ ಜೂನ್​​ನಲ್ಲಿ ಆಗಲಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಹರಡಲು ಮುಖ್ಯ ಕಾರಣ ನಿರ್ಮಾಪಕ ಎಸ್​​ಕೆನ್. ಇತ್ತೀಚೆಗೆ ಅವರು ‘ಚೆನ್ನೈ ಲವ್​​ಸ್ಟೋರಿ’ ಹೆಸರಿನ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ತಮ್ಮ ‘ಚೆನ್ನೈ ಲವ್​​ಸ್ಟೋರಿ’ ಸಿನಿಮಾ ಬಗ್ಗೆ ಮಾತನಾಡುತ್ತಾ, ನಾವು ಮೊದಲಿಗೆ ಸಿನಿಮಾವನ್ನು ಜೂನ್ 26ಕ್ಕೆ ಬಿಡುಗಡೆ ಮಾಡೋಣ ಎಂದುಕೊಂಡಿದ್ದೆವು, ಆದರೆ ಆಗ ‘ಪೆದ್ದಿ’ ಸಿನಿಮಾ ಬಿಡುಗಡೆ ಆಗುತ್ತದೆ ಎಂದು ಕೆಲವರು ಮಾಹಿತಿ ನೀಡಿದರು. ಹೀಗಾಗಿ ಸಿನಿಮಾದ ಬಿಡುಗಡೆಯನ್ನು ನಾವು ಬದಲಾಯಿಸಿಕೊಂಡೆವು’ ಎಂದಿದ್ದರು.

ಇದನ್ನೂ ಓದಿ;ಚಿರಂಜೀವಿ, ರಾಮ್ ಚರಣ್ ಮನೆಯಲ್ಲಿ ಹೀಗಿತ್ತು ರಾಮ ನವಮಿ

ಎಸ್​​ಕೆಎನ್ ಅವರ ಈ ಮಾತುಗಳು ರಾಮ್ ಚರಣ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ‘ಪೆದ್ದಿ’ ಸಿನಿಮಾದ ಬಿಡುಗಡೆ ಜೂನ್ ತಿಂಗಳಲ್ಲಿ ಆಗಲಿದೆಯೇ ಎಂಬ ಅನುಮಾನ ಮೂಡಿಸಿದೆ. ಇತ್ತೀಚೆಗಷ್ಟೆ ‘ಪೆದ್ದಿ’ ಸಿನಿಮಾದ ಚಿತ್ರೀಕರಣದ ವೇಳೆ ರಾಮ್ ಚರಣ್ ಗೆ ಗಾಯ ಸಹ ಆಗಿದ್ದು, ಸಣ್ಣ ಆಪರೇಷನ್ ಸಹ ಆಗಿದೆ. ಇದರಿಂದ ಚಿತ್ರೀಕರಣ ತಡವಾಗಿ ಸಿನಿಮಾದ ಬಿಡುಗಡೆ ಏಪ್ರಿಲ್​​ನಿಂದ ಜೂನ್​​ಗೆ ವರ್ಗಾವಣೆ ಆಗಿರಬಹುದು ಎಂಬ ಅನುಮಾನ ಮೂಡಿದೆ. ಚಿತ್ರತಂಡದವರು ಸಹ ಯಾವುದೇ ಸ್ಪಷ್ಟನೆ, ಹೇಳಿಕೆ ನೀಡದೇ ಇರುವುದು ರಿಲೀಸ್ ಮುಂದೂಡಿಕೆ ಅನುಮಾನವನ್ನು ಮತ್ತಷ್ಟು ಹೆಚ್ಚಿಸಿದೆ.

‘ಪೆದ್ದಿ’ ಸಿನಿಮಾ ಗ್ರಾಮೀಣ ಆಕ್ಷನ್ ಕತೆಯನ್ನು ಹೊಂದಿದೆ. ಸಿನಿಮಾದ ನಾಯಕ ರಾಮ್ ಚರಣ್ ಕ್ರಿಕೆಟ್ ಆಟಗಾರ ಮತ್ತು ಕುಸ್ತಿ ಪೈಲ್ವಾನನ ಪಾತ್ರದಲ್ಲಿ ಮಿಂಚಿದ್ದಾರೆ. ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಅವರು ನಾಯಕನ ಗುರುವಿನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ನಾಯಕಿಯಾಗಿ ಜಾನ್ಹವಿ ಕಪೂರ್ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಬುಚ್ಚಿಬಾಬು ಸನಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link