Headlines

nagaraj11081993

‘ಚಿಕ್ನಿ ಚಮೇಲಿ’ ಹಾಡಿನ ವಿವಾದಕ್ಕೆ ಸ್ಪಷ್ಟನೆ ನೀಡಿದ ಗಾಯಕಿ ಶ್ರೇಯಾ ಘೋಷಾಲ್ – Kannada News | Shreya Ghoshal responds to trolling over chikni chameli and objectifying lyrics

ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಇತ್ತೀಚೆಗೆ ‘ಚಿಕ್ನಿ ಚಮೇಲಿ’ (Chikni Chameli) ರೀತಿಯ ಹಾಡುಗಳ ಬಗ್ಗೆ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ನಾನು ಇನ್ಮುಂದೆ ಇಂತಹ ಹಾಡುಗಳನ್ನು ಹಾಡುವುದಿಲ್ಲ’ ಎಂದು ಅವರು ಹೇಳಿದ್ದನ್ನು ಕೆಲವರು ಟ್ರೋಲ್ ಮಾಡಿದ್ದರು. ಈಗ ಈ ಎಲ್ಲಾ ಟ್ರೋಲ್‌ಗಳಿಗೆ ಶ್ರೇಯಾ ಖಡಕ್ ಆಗಿಯೇ ಉತ್ತರ ನೀಡಿದ್ದು, ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ರಾಜ್ ಶಾಮನಿ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಶ್ರೇಯಾ ಘೋಷಾಲ್ (Shreya Ghoshal), ಚಿತ್ರರಂಗದಲ್ಲಿ ಮಹಿಳೆಯರನ್ನು ಅತಿ…

Read More

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಬದಲಿ ರಸ್ತೆಗಳ ಮಾಹಿತಿ ಇಲ್ಲಿದೆ – Kannada News | Bengaluru Road Closures: MG Road Resurfacing and University Road Diversions from Tomorrow

ಬೆಂಗಳೂರು, ಮಾರ್ಚ್​​ 04: ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವೃತ್ತದವರೆಗೆ 2.2 ಕಿಮೀ ಉದ್ದದ ರಸ್ತೆಯ ಮರು ಡಾಂಬರೀಕರಣ ನಡೆಯಲಿದೆ.  ಮಾಹಿತಿಯ ಪ್ರಕಾರ, ಮಾರ್ಚ್ 4ರ ಸಂಜೆ (ಇಂದು) ಪೂರ್ವಸಿದ್ಧತಾ ಕಾಮಗಾರಿಗಳು ಆರಂಭವಾಗಲಿವೆ. ಟ್ರಾಫಿಕ್ ಪೊಲೀಸ್ ಅನುಮತಿ ಬಾಕಿ ಇರುವುದರಿಂದ ಸ್ವಲ್ಪ ವಿಳಂಬ ಸಾಧ್ಯತೆ ಇದೆ. ಹೀಗಿದ್ದರೂ 15 ದಿನಗಳೊಳಗೆ ಕಾಮಗಾರಿ…

Read More

ಎಲ್ಲೇ ಅಡಗಿದ್ದರೂ ಬಿಡೋದಿಲ್ಲ; ಖಮೇನಿಯ ಉತ್ತರಾಧಿಕಾರಿಯನ್ನು ಕೊಲ್ಲುತ್ತೇವೆಂದ ಇಸ್ರೇಲ್ – Kannada News | Israel Defence Minister threatens to assassinate Irans New Supreme Leader

ಜೆರುಸಲೇಂ, ಮಾರ್ಚ್ 4: ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಇಂದು ಇರಾನ್​ನ ನೂತನ ಸುಪ್ರೀಂ ನಾಯಕ ಮೊಜ್ತಾಬಾಗೆ ಜೀವ ಬೆದರಿಕೆ ಹಾಕಿದ್ದಾರೆ. ಟೆಹ್ರಾನ್ ಮೇಲೆ ನಡೆದ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಕೊಲ್ಲಲ್ಪಟ್ಟ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ (Ayatollah Ali Khamenei) ಉತ್ತರಾಧಿಕಾರಿಯಾಗಿ ಆಯ್ಕೆಯಾಗುವ ಇರಾನಿನ ನಾಯಕನನ್ನು ಹತ್ಯೆ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಅಯತೊಲ್ಲಾ ಅಲಿ ಖಮೇನಿಯ ಹತ್ಯೆಯ ನಂತರ ಖಾಲಿಯಾಗಿರುವ ನಾಯಕತ್ವ ಸ್ಥಾನವನ್ನು ವಹಿಸಿಕೊಳ್ಳಲು ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ…

Read More

ನಾನು ಗಂಡಸಾಗಿ ಹುಟ್ಟಿರುವುದೇ ತಪ್ಪಾ? ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ – Kannada News | Teachers Personal Dispute Disrupts School in Komalapura, Karnataka

ಕೊಪ್ಪಳ, ಮಾ.4: ಜಿಲ್ಲೆಯ ಕುಕನೂರ ತಾಲೂಕಿನ ಕೋಮಲಾಪುರ ಗ್ರಾಮದ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ವೈಯಕ್ತಿಕ ಬದುಕಿನ ವಿವಾದ ಶಾಲಾ ಆವರಣದಲ್ಲಿ ಸಾರ್ವಜನಿಕ ಗಲಾಟೆಗೆ ಕಾರಣವಾಗಿದೆ. ತಮ್ಮ ಪತ್ನಿ ಪ್ರತಿದಿನ ಶಾಲೆಗೆ ಬಂದು ಕಿರಿಕ್​​ ಮಾಡುವುದು, ತಮ್ಮ ವೃತ್ತಿ ಬದುಕಿಗೆ ಮತ್ತು ಸಾರ್ವಜನಿಕ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಶಿಕ್ಷಕ ಸಿದ್ದೇಶ ಶೆಟ್ಟರ್ ಆರೋಪಿಸಿದ್ದಾರೆ. ಸಿದ್ದೇಶ ಶೆಟ್ಟರ್ ಅವರ ಹೇಳಿಕೆಯ ಪ್ರಕಾರ, ತಮ್ಮ ಪತ್ನಿ ತಮ್ಮನ್ನು ಮನೆಯಲ್ಲಿ ಕೈದಿ ತರಹ ಇಟ್ಟುಕೊಂಡಿದ್ದು, ಕುಟುಂಬದ ಸದಸ್ಯರೊಂದಿಗೆ…

Read More

ಹೊಸ ಕಂಪನಿಗಳ ನೊಂದಣಿ ಫೆಬ್ರುವರಿಯಲ್ಲಿ ಶೇ. 37 ಹೆಚ್ಚಳ; ಆರೋಗ್ಯಕರ ಆರ್ಥಿಕತೆಗೆ ಇದು ಸಾಕ್ಷ್ಯವಾ? – Kannada News | New company registrations in 2026 February rises by 37pc indicating healthy economy

ನವದೆಹಲಿ, ಮಾರ್ಚ್ 4: ಫೆಬ್ರುವರಿ ತಿಂಗಳಲ್ಲಿ 24,136 ಸಂಖ್ಯೆಯಷ್ಟು ಹೊಸ ಕಂಪನಿಗಳ ರಿಜಿಸ್ಟ್ರೇಶನ್​ಗಳಾಗಿವೆ. ಕಳೆದ ವರ್ಷದಕ್ಕೆ ಹೋಲಿಸಿದರೆ ಶೇ. 37ರಷ್ಟು ಹೆಚ್ಚು ನೊಂದಣಿಯಾಗಿದೆ. ಪ್ರಸಕ್ತ ಹಣಕಾಸು ವರ್ಷದ ಈವರೆಗಿನ 11 ತಿಂಗಳಲ್ಲೇ ಹೊಸ ಕಂಪನಿಗಳ ನೊಂದಣಿಯಲ್ಲಿ (New company registrations) ಆಗಿರುವ ಎರಡನೇ ಅತಿ ಹೆಚ್ಚಳ ಎನಿಸಿದೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಹೊಸ ಬ್ಯುಸಿನೆಸ್ ನೊಂದಣಿಗಳ ಸಂಖ್ಯೆ ಕಡಿಮೆ ಆಗಿದ್ದವು. ಅಕ್ಟೋಬರ್​ನಲ್ಲಿ 15,000, ಹಾಗೂ ನವೆಂಬರ್​ನಲ್ಲಿ ಹತ್ತಿರಹತ್ತಿರ 14,000 ನೊಂದಣಿಗಳಾಗಿವೆ. ಜನವರಿ ತಿಂಗಳಲ್ಲಿ ಹೊಸ ಕಂಪನಿಗಳ…

Read More

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ: ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು – Kannada News | Iran Closes Strait of Hormuz; 37 Indian Ships Stranded in Persian Gulf with 1109 Crew Onboard

ನವದೆಹಲಿ, ಮಾರ್ಚ್ 4: ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ನಡುವೆಯೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇರಾನ್​​ನ ಈ ನಿರ್ಧಾರದಿಂದಾಗಿ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಈ ಹಡಗುಗಳಲ್ಲಿ 1,109 ಸಿಬ್ಬಂದಿ ಇದ್ದು, ಸುಮಾರು 10,000 ಕೋಟಿ ರೂ. ಮೌಲ್ಯದ ಸರಕು ಸಾಗಾಟವಾಗುತ್ತಿದೆ. ಭಾರತದ ಬಂದರು ಸಚಿವಾಲಯವು ಹಡಗುಗಳಿಗೆ ನಿರಂತರ ರಾಡಾರ್ ಸಂಪರ್ಕ ಕಾಯ್ದುಕೊಳ್ಳಲು ಮತ್ತು ದೆಹಲಿಯೊಂದಿಗೆ ಟೋಲ್ ಫ್ರೀ ಸಹಾಯವಾಣಿ ಮೂಲಕ ಸಂಪರ್ಕದಲ್ಲಿರಲು ಸೂಚನೆ ನೀಡಿದೆ….

Read More

ಹಾಲು ಮಾರುವ ಕೆಲಸ ಕೊಟ್ಟದ್ದಾರೆ, ಮತ್ತೆ ಚುನಾವಣೆಗೆ ನಿಲ್ತೀನೋ ಇಲ್ವೋ ಗೊತ್ತಿಲ್ಲ: ಡಿ.ಕೆ.ಸುರೇಶ್ – Kannada News | Magadi’s Water Lifeline: YG Gudda Project Inaugurated Amidst DK Suresh’s Election Buzz

ರಾಮನಗರ, ಮಾ.4: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಆಡಿದ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. “ಮುಂದೆ ಮತ್ತೆ ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ” ಎಂದು ಹೇಳುವ ಮೂಲಕ ಅವರು ಅಚ್ಚರಿ ಮೂಡಿಸಿದ್ದಾರೆ.”ಮುಂದೆ ನಾನು ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ನನಗೆ ಗೊತ್ತಿಲ್ಲ. ಸದ್ಯಕ್ಕೆ ನನ್ನನ್ನು ಬಮೂಲ್ (BAMUL) ಅಧ್ಯಕ್ಷನನ್ನಾಗಿ ಮಾಡಿದ್ದಾರೆ, ಹಾಲು ಮಾರುವ ಕೆಲಸ…

Read More

ಇರಾನ್​ನ ಹೊಸ ಸುಪ್ರೀಂ ನಾಯಕ ಮುಜ್ತಾಬಾ ಖಮೇನಿಯ ಆಸ್ತಿ ಎಷ್ಟು? – Kannada News | Iran’s New Supreme Leader Mojtaba Hosseini Khamenei net worth and Family

ನವದೆಹಲಿ, ಮಾರ್ಚ್ 4: ಇರಾನ್‌ನ ತಜ್ಞರ ಸಭೆಯು ಹತ್ಯೆಗೀಡಾದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ (Ayatollah Ali Khamenei) ಎರಡನೇ ಮಗ 56 ವರ್ಷದ ಮೊಜ್ತಬಾ ಹೊಸೇನಿ ಖಮೇನಿ ಅವರನ್ನು ಇರಾನ್ ದೇಶದ ಹೊಸ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಿದೆ. ಮೊಜ್ತಾಬಾ ಅವರು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆಂದು ಹೇಳಲಾಗಿದೆ. ಇರಾನ್‌ನ ತಜ್ಞರ ಸಭೆಯು ರೆವಲ್ಯೂಷನರಿ ಗಾರ್ಡ್ಸ್‌ನ ಒತ್ತಡದ ಮೇರೆಗೆ ಮೊಜ್ತಾಬಾ ಅವರನ್ನು ಆಯ್ಕೆ ಮಾಡಿದೆ ಎಂದು ಕೂಡ…

Read More

ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ – Kannada News | DC G.M. Gangadharaswamy’s Home Faces Bomb Threat in Davangere; Police Probe

ದಾವಣಗೆರೆ, ಮಾ.4: ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಬಂದ ಕೇವಲ ಒಂದು ತಿಂಗಳ ಅಂತರದಲ್ಲಿ, ಈಗ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೂ ಬಾಂಬ್ ಬೆದರಿಕೆ ಬಂದಿರುವುದು ಪೊಲೀಸರನ್ನು ಹೈರಾಣಾಗಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜಿಲ್ಲಾಧಿಕಾರಿಗಳ ಮನೆಗೆ ಬಿಗಿ ಭದ್ರತೆ ಒದಗಿಸಿದ್ದಾರೆ. ಪೊಲೀಸ್ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರು, ದಾವಣಗೆರೆ ನಗರದ ರಿಂಗ್ ರೋಡ್‌ನಲ್ಲಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ…

Read More

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್​ಮರೀನ್ ದಾಳಿ: ಕನಿಷ್ಠ 101 ಮಂದಿ ಕಣ್ಮರೆ – Kannada News | Submarine Attack on Iranian Ship off Sri Lanka Coast; 101 Missing, 78 Injured in Major Maritime Incident

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್​ಮರೀನ್ ದಾಳಿImage Credit source: @clashreport ಕೊಲಂಬೋ, ಮಾರ್ಚ್​ 4: ಇರಾನ್ ಹಾಗೂ ಇಸ್ರೇಲ್ ಸೇನಾ ಸಂಘರ್ಷ (Iran Isreal Conflict) ತೀವ್ರಗೊಂಡಿದ್ದು, ಭಾರತದ ನೆರೆಯ ಶ್ರೀಲಂಕಾ ಕರಾವಳಿ ವರೆಗೂ ಅದರ ಬಿಸಿ ತಟ್ಟತೊಡಗಿದೆ. ಶ್ರೀಲಂಕಾ ಸಮುದ್ರ ಗಡಿಯೊಳಗೆ ಇರಾನ್‌ಗೆ ಸೇರಿದ ಹಡಗೊಂದಕ್ಕೆ ಬುಧವಾರ ಸಬ್‌ಮರೀನ್ ಮೂಲಕ ದಾಳಿ ನಡೆಸಲಾಗಿದೆ ಎಂದು ಅಂತರರಾಷ್ಟ್ರೀಯ ಸುದ್ದಿಸಂಸ್ಥೆ ‘ರಾಯಿಟರ್ಸ್’ ವರದಿ ಮಾಡಿದೆ. ಈ ದಾಳಿಯ ಪರಿಣಾಮ ಕನಿಷ್ಠ 101 ಮಂದಿ ಕಣ್ಮರೆಯಾಗಿದ್ದು, 78…

Read More