All posts by nagaraj11081993

ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದು ಕಿಡಿಗೇಡಿಗಳಿಂದ ವಿಕೃತಿ – Kannada News | Drug Influenced Miscreants Vandalise Car in Shivamogga, Case Registered

ಶಿವಮೊಗ್ಗ, ಮಾರ್ಚ್​ 04: ನಗರದಲ್ಲಿ ಗಾಂಜಾ ಹಾವಳಿ ಮತ್ತೆ ಮುನ್ನೆಲೆಗೆ ಬಂದಿದ್ದು, ಮಾದಕ ವಸ್ತುವಿನ ಅಮಲಿನಲ್ಲಿ ದುಷ್ಕರ್ಮಿಗಳು ಹೊಸ ಕಾರನ್ನು ಜಖಂಗೊಳಿಸಿರುವ ಘಟನೆ ಶರಾವತಿ ನಗರದ ಹಂದಿಜೋಗಿ ಕ್ಯಾಂಪ್‌ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್‌ಗಳನ್ನು ಪುಡಿಪುಡಿ ಮಾಡಿದ್ದಾರೆ. ಕಾರಿನ ಮಾಲೀಕ ಸುರೇಶ್ ಅವರು ಕೇವಲ ನಾಲ್ಕು ತಿಂಗಳ ಹಿಂದೆ ಈ ಕಾರನ್ನು ಖರೀದಿಸಿದ್ದರು ಎನ್ನಲಾಗಿದೆ. ಈ ಪ್ರದೇಶದಲ್ಲಿ ಗಾಂಜಾ ಸೇದುವುದು, ಕುಡಿಯುವುದು, ಗಲಾಟೆ ಮಾಡುವುದು, ಹಾಗೂ ಜನರಿಗೆ ತೊಂದರೆ ನೀಡುವುದು ಸಾಮಾನ್ಯವಾಗಿದೆ. ಬೈಕ್‌ಗಳನ್ನು ಜಖಂಗೊಳಿಸುವುದು, ಪೆಟ್ರೋಲ್ ಕಳವು ಮಾಡುವುದು ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಈ ಪುಂಡರ ಹಾವಳಿಯಿಂದ ಬೇಸತ್ತ ಸ್ಥಳೀಯ ನಿವಾಸಿಗಳು ತಮಗೂ ಮತ್ತು ತಮ್ಮ ಆಸ್ತಿಪಾಸ್ತಿಗಳಿಗೂ ರಕ್ಷಣೆ ನೀಡುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ. ಇಂದು ಕಾರುಗಳಿಗೆ ಹಾನಿ ಮಾಡಿರುವ ಇವರು ನಾಳೆ ತಮ್ಮ ಕುಟುಂಬಗಳಿಗೂ ತೊಂದರೆ ನೀಡಬಹುದೆಂಬ ಆತಂಕ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಿಂದಿಯಲ್ಲಿ ರಾಯನ ಪಾತ್ರಕ್ಕೆ ಯಶ್​​ನಿಂದಲೇ ಡಬ್ಬಿಂಗ್? ಮುಂಬೈ ಸ್ಟುಡಿಯೋದಲ್ಲಿ ಯಶ್ ಇರೋದೇಕೆ? – Kannada News | Yash Oversees Toxic Hindi Dubbing: Sachin Gole Returns as KGF Voice Artist

ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ‘ಟಾಕ್ಸಿಕ್’ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಜವಾಬ್ದಾರಿಗಳನ್ನು ಅವರು ಹೆಗಲಮೇಲೆ ಹಾಕಿಕೊಂಡು ಎಲ್ಲಾ ಕೆಲಸಗಳನ್ನು ಮಾಡುತ್ತಿದ್ದಾರೆ. ಮಲಯಾಳಂನ ಗೀತು ಮೋಹನ್​ ದಾಸ್ ಜೊತೆ ಸೇರಿ, ಜವಾಬ್ದಾರಿ ಹಂಚಿಕೊಂಡು ಯಶ್ . ಈಗ ‘ಟಾಕ್ಸಿಕ್’ ಚಿತ್ರದ ಹಿಂದಿ ಡಬ್ಬಿಂಗ್ ನಡೆಯುತ್ತಿದೆ. ಹಾಗಾದರೆ ಯಶ್ ಅವರೇ ಹಿಂದಿಗೂ ಡಬ್ ಮಾಡುತ್ತಿದ್ದಾರಾ? ಯಶ್ ಮುಂಬೈ ಡಬ್ಬಿಂಗ್ ಸ್ಟುಡಿಯೋದಲ್ಲಿ ಕುಳಿತಿದ್ದು ಏಕೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಾಕಿಂಗ್ ಸ್ಟಾರ್ ಯಶ್ ಅವರು ಸದ್ಯ ‘ಟಾಕ್ಸಿಕ್’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗಾಗಲೇ ಅವರು ಕನ್ನಡ ವರ್ಷನ್​​ಗೆ ಡಬ್ಬಿಂಗ್ ಮುಗಿಸಿದ್ದಾರೆ ಎನ್ನಲಾಗಿದೆ. ಸದ್ಯ ಅವರು ಹಿಂದಿ ವರ್ಷನ್​ ಕಡೆ ಗಮನ ಹರಿಸುತ್ತಿದ್ದಾರೆ. ಈ ಚಿತ್ರ ಸದ್ಯ ತನ್ನ ರಿಲೀಸ್ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಿಕೊಂಡಿದೆ. ಸದ್ಯ ಯಶ್ ಅವರು ಹಿಂದಿ ವರ್ಷನ್ ಅನ್ನು ಉತ್ತಮವಾಗಿ ಮಾಡುವ ಉದ್ದೇಶ ಹೊಂದಿದ್ದಾರೆ. ಈ ಕಾರಣದಿಂದ ಅವರು ಡಬ್ಬಿಂಗ್​​ಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಿದ್ದಾರೆ.

‘ಟಾಕ್ಸಿಕ್’ ಸಿನಿಮಾದ ಹಿಂದಿ ವರ್ಷನ್​​ಗೆ ಯಶ್ ಡಬ್ಬಿಂಗ್ ಮಾಡುತ್ತಿಲ್ಲ. ಬದಲಿಗೆ ಹಿರಿಯ ಕಲಾವಿದ ಸಚಿನ್ ಗೋಲೆ ಅವರು ಧ್ವನಿ ನೀಡುತ್ತಿದ್ದಾರೆ. ಅವರು ಈ ಮೊದಲು ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಚಿತ್ರದ ರಾಕಿ ಪಾತ್ರಕ್ಕೆ ವಾಯ್ಸ್ ಕೊಟ್ಟಿದ್ದರು. ‘ಕೆಜಿಎಫ್ 2’ ರಿಲೀಸ್ ವೇಳೆ ಯಶ್​​ಗೆ ಹಿಂದಿ ವರ್ಷನ್​ಗೆ ಧ್ವನಿ ಕೊಡೋ ಬಗ್ಗೆ ಕೋರಿಕೆ ಬಂದಿತ್ತು. ಆಗ ಯಶ್ ಈ ಬಗ್ಗೆ ಪ್ರತಿಕ್ರಿಯಿಸಿದ್ದರು.

ಹಿಂದಿ ಪ್ರೇಕ್ಷಕರಿಗೆ ಯಶ್ ಎಂದಾಗ ಸಚಿನ್ ಧ್ವನಿಯೇ ನೆನಪಾಗುತ್ತದೆ. ಹೀಗಾಗಿ, ಧ್ವನಿ ಬದಲಿಸಿದರೆ ಪ್ರೇಕ್ಷಕರು ಅದನ್ನು ಒಪ್ಪಿಕೊಳ್ಳದೆ ಇರುವ ಸಾಧ್ಯತೆ ಇರುತ್ತದೆ. ಹೀಗಾಗಿ, ಸಚಿನ್ ಅವರೇ ಧ್ವನಿ ನೀಡಲಿ ಎಂದು ಯಶ್ ಹೇಳಿದ್ದರು. ಈ ಕಾರಣದಿಂದ ‘ಟಾಕ್ಸಿಕ್’ ಚಿತ್ರಕ್ಕೂ ಯಶ್ ಅವರನ್ನೇ ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ: ಯಶ್ ಅವರ ಈ ಆಲೋಚನೆಯೇ ಅವರನ್ನು ಇಲ್ಲಿಯವರೆಗೆ ಕರೆ ತಂದಿದೆ..

ಸದ್ಯ ಯಶ್ ಅವರು ಮುಂಬೈನ ಡಬ್ಬಿಂಗ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅವರು ಸಚಿನ್ ಅವರಿಗೆ ಡೈಲಾಗ್ ಡೆಲಿವರಿಗೆ, ಡೈಲಾಗ್​​ ಅಲ್ಲಿ ಭಾವನೆ ತುಂಬಲು ಸಹಕಾರಿ ಆಗುತ್ತಿದ್ದಾರೆ. ಇದು ಅವರ ಸಿನಿಮಾ ಪ್ರೇಮವನ್ನು ತೋರಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ಶಾಕ್ ಕೊಟ್ಟ ಕೆಇಆರ್​ಸಿ: ವಿರೋಧದ ನಡುವೆ ವಿದ್ಯುತ್​​ ದರ ಏರಿಕೆ – Kannada News | Karnataka Power Hike 2025 26: KERC Raises Commercial & Industrial Electricity Rates

ಬೆಂಗಳೂರು, ಮಾರ್ಚ್​​ 04: ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಶಾಕ್​​ ಕೊಟ್ಟಿದೆ. 2025-26ರ ಆರ್ಥಿಕ ವರ್ಷಕ್ಕೆ ಅನ್ವಯಿಸುವಂತೆ ವಿದ್ಯುತ್ ದರ ಏರಿಕೆ ಮಾಡಲಾಗಿದ್ದು, ಈ ನಿರ್ಧಾರ ಖಂಡಿಸಿ ಕೈಗಾರಿಕೋದ್ಯಮಿಗಳು ಮತ್ತು ವಾಣಿಜ್ಯೋದ್ಯಮಿಗಳು ಗರಂ ಆಗಿದ್ದಾರೆ. ದರ ಏರಿಕೆ ಸಂಬಂಧ ಫೆಬ್ರವರಿ 20ರಂದು ಸಾರ್ವಜನಿಕರ ಜೊತೆ ಚರ್ಚೆ ನಡೆದಿದ್ದು, ಈ ವೇಳೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿದ್ಯುತ್ ದರ ಏರಿಕೆ ಮಾಡಲ್ಲವೆಂದು ಕೆಇಆರ್​ಸಿ ಭರವಸೆ ನೀಡಿತ್ತು. ಆದರೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಯುಟರ್ನ್​​ ಹೊಡೆದಿರೋದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಯೂನಿಟ್​​ಗೆ ಎಷ್ಟು ದರ ಏರಿಕೆ?

  • LT-3(A) ವಾಣಿಜ್ಯ ಬಳಕೆ ವಿದ್ಯುತ್ ದರ ₹7ರಿಂದ ₹7.10ಕ್ಕೆ ಏರಿಕೆ
  • LT-5 ಕೈಗಾರಿಕೆಗೆ ಬಳಸುವ ವಿದ್ಯುತ್ ದರ ₹4.50ನಿಂದ ₹5.20ಕ್ಕೆ ಏರಿಕೆ
  • HT-2(A) ಮೆಟ್ರೋ, ರೈಲ್ವೆ & ಇತರೆ ವಿದ್ಯುತ್ ದರ ₹6.60ನಿಂದ 6.70ಕ್ಕೆ ಏರಿಕೆ
  • HT-2(B) ಕಾಂಪ್ಲೆಕ್ಸ್, ಥಿಯೇಟರ್, ಹೋಟೆಲ್​ಗೆ ಬಳಸು ವಿದ್ಯುತ್ ದರ 5.95 ರೂ.ನಿಂದ 6.90 ರೂ.ಗೆ ಏರಿಕೆ

ಇದನ್ನೂ ಓದಿ: ಕೆಪಿಎಸ್​ಸಿ ವಿರುದ್ಧ ಮತ್ತೆ ಅಕ್ರಮ ಆರೋಪ; ಧ್ವನಿ ಎತ್ತಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್

ಪ್ರಹ್ಲಾದ್ ಜೋಶಿ ಕಿಡಿ

KERCಯಿಂದ ವಾಣಿಜ್ಯ, ಕೈಗಾರಿಕೆ ಬಳಕೆ ವಿದ್ಯುತ್ ದರ ಹೆಚ್ಚಳ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ. ದರ ಏರಿಸುವುದರಲ್ಲಿ ರಾಜ್ಯ ಸರ್ಕಾರ ಹಾಫ್​ ಸೆಂಚುರಿ ಬಾರಿಸಿದೆ. ಇದುವರೆಗೆ 50ಕ್ಕೂ ಹೆಚ್ಚು ವಸ್ತುಗಳು, ಸೇವೆಗಳ ದರ ಹೆಚ್ಚಿಸಿದ್ದಾರೆ. ದೊಡ್ಡ ಪ್ರಮಾಣದಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ತೀರ್ಮಾನಿಸಿದ್ದು, ಇದು ಕಾಂಗ್ರೆಸ್ ದುರಾಡಳಿತದ ಪರಮಾವಧಿಯಾಗಿದೆ. ಕೈಗಾರಿಕೆಗಳು ಕರ್ನಾಟಕ ಬಿಟ್ಟೋಗುವಂತೆ ಈ ರೀತಿ ಮಾಡ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಕೈಗಾರಿಕಾ ವಿರೋಧಿಯಾಗಿದ್ದು, ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಭ್ರಷ್ಟಾಚಾರ ಮಿತಿ ಮೀರಿದ್ದು, ವಿತ್ತೀಯ ಶಿಸ್ತು ಮಾಯವಾಗಿದೆ. ಕರ್ನಾಟಕ ರಾಜ್ಯದ ಒಟ್ಟು ಸಾಲ 8.4 ಲಕ್ಷ ಕೋಟಿಗೆ ತಲುಪಿದೆ ಎಂದವರು ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:35 pm, Wed, 4 March 26

Source link

ಕೆಪಿಎಸ್​ಸಿ ವಿರುದ್ಧ ಮತ್ತೆ ಅಕ್ರಮ ಆರೋಪ: ಬಿಜೆಪಿ ಮುಖಂಡ ಭಾಸ್ಕರ್ ರಾವ್ ಕಿಡಿ – Kannada News | BJP leader Bhaskar Rao spark on KPSC accuses of illegality again

ಬೆಂಗಳೂರು, ಮಾರ್ಚ್​ 04: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ ಕೇಳಿಬಂದಿದೆ. ಕೆಪಿಎಸ್​ಸಿಯ ಕೆಎಎಸ್​​ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ್ ರಾವ್ (Bhaskar Rao)​​ ತೀವ್ರ ಕಳವಳ ವ್ಯಕ್ತಪಡಿಸಿದ್ದು, ರಾಜ್ಯದ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಜವಾಬ್ದಾರಿಯುತ ಸಂಸ್ಥೆಯ ನಂಬಿಕೆಯನ್ನು ಸಾರ್ವಜನಿಕರು ಸಂಪೂರ್ಣವಾಗಿ ಕಳೆದುಕೊಳ್ಳುತ್ತಾರೆಂದು ಕಿಡಿಕಾರಿದ್ದಾರೆ.

ಕೆಪಿಎಸ್​ಸಿ ಹಗರಣದ ಸುದ್ದಿಗಳು ತೀವ್ರ ಕಳವಳಕಾರಿ ಎಂದ ಭಾಸ್ಕರ್ ರಾವ್

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಮುಖಂಡ ಭಾಸ್ಕರ್ ರಾವ್ ಪೋಸ್ಟ್ ಮಾಡಿದ್ದು, ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಮತ್ತೊಂದು ಅಕ್ರಮದ ಸುದ್ದಿ ಹೊರಬಿದ್ದಿರುವುದು ಕೇವಲ ಆತಂಕಕಾರಿಯಷ್ಟೇ ಅಲ್ಲ, ಇದು ನಮ್ಮ ಆಡಳಿತ ವ್ಯವಸ್ಥೆಯ ನೈತಿಕ ಅಧಃಪತನದ ಸಂಕೇತವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳೆಂದರೆ ಅರ್ಹತೆ ಮತ್ತು ಪ್ರತಿಭೆಯನ್ನು ಒರೆಗೆ ಹಚ್ಚುವ ಪವಿತ್ರ ಪ್ರಕ್ರಿಯೆಯಾಗಬೇಕು. ಆದರೆ, ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ, ಮೌಲ್ಯಮಾಪನದಲ್ಲಿನ ಅಕ್ರಮಗಳು ಮತ್ತು ನೇಮಕಾತಿ ಭ್ರಷ್ಟಾಚಾರಗಳು, ವ್ಯವಸ್ಥೆಯ ಮೇಲಿನ ಯುವಜನತೆಯ ನಂಬಿಕೆಯನ್ನು ಬುಡಮೇಲು ಮಾಡುತ್ತಿವೆ. ಇದು ಕೇವಲ ಒಂದು ಹುದ್ದೆಯ ಕಳ್ಳತನವಲ್ಲ, ಬದಲಾಗಿ ನಾಡಿನ ಭವಿಷ್ಯದ ಆಡಳಿತ ಯಂತ್ರದ ಮೇಲೆ ನಡೆಯುತ್ತಿರುವ ಪ್ರಹಾರವಾಗಿದೆ ಎಂದಿದ್ದಾರೆ.

ಭಾಸ್ಕರ್ ರಾವ್ ಟ್ವೀಟ್​​

ಸಾಂವಿಧಾನಿಕ ಸಂಸ್ಥೆಯಾಗಿರುವ ಕೆಪಿಎಸ್ಸಿ, ತನ್ನ ಪಾವಿತ್ರ್ಯತೆ ಮತ್ತು ಸ್ವಾಯತ್ತತೆಯನ್ನು ಕಾಪಾಡಿಕೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲವಾಗುತ್ತಿರುವಂತೆ ಗೋಚರಿಸುತ್ತಿದೆ. ಒಂದು ಕಾಲದಲ್ಲಿ ಪ್ರತಿಭಾವಂತ ಯುವಕರು ಹೆಮ್ಮೆಯಿಂದ ನೋಡುತ್ತಿದ್ದ ಈ ಸಂಸ್ಥೆ, ಇಂದು ಆಡಳಿತಾತ್ಮಕ ಲೋಪಗಳ ಆರೋಪದ ನೆರಳಿನಲ್ಲಿ ನರಳುತ್ತಿದೆ. ಪರೀಕ್ಷಾ ಪ್ರಕ್ರಿಯೆಗಳಲ್ಲಿನ ಪಾರದರ್ಶಕತೆಯ ಕೊರತೆ, ತಂತ್ರಜ್ಞಾನದ ಸಮರ್ಪಕ ಅಳವಡಿಕೆಯಿಲ್ಲದಿರುವುದು ಮತ್ತು ಆಂತರಿಕ ಭದ್ರತೆಯನ್ನು ಕಾಪಾಡುವಲ್ಲಿನ ಅಸಹಾಯಕತೆ ಸಂಸ್ಥೆಯ ದೌರ್ಬಲ್ಯವನ್ನು ಎತ್ತಿ ತೋರಿಸುತ್ತದೆ. ಅರ್ಹರನ್ನು ಆಯ್ಕೆ ಮಾಡಬೇಕಾದ ವ್ಯವಸ್ಥೆಯೇ ಅನುಮಾನದ ಹುತ್ತವಾದರೆ, ರಾಜ್ಯದ ಆಡಳಿತದಲ್ಲಿ ದಕ್ಷತೆಯನ್ನು ನಿರೀಕ್ಷಿಸುವುದು ಹೇಗೆ ಎಂಬುದು ಬೌದ್ಧಿಕ ವಲಯದ ಪ್ರಮುಖ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: KAS ಗ್ರೂಪ್ ಎ,ಬಿ ಪರೀಕ್ಷೆ ರಿಸಲ್ಟ್ ವಿರುದ್ಧ ವಿದ್ಯಾರ್ಥಿಗಳ ಅಪಸ್ವರ: ಸಿಬಿಐ ತನಿಖೆಗೆ ಒತ್ತಾಯ

ಈ ಸಾಲು ಸಾಲು ಅಕ್ರಮಗಳಿಗೆ ಕೇವಲ ಕೆಪಿಎಸ್ಸಿ ಮಾತ್ರವಲ್ಲ, ಆಡಳಿತ ಯಂತ್ರವನ್ನು ನಿಯಂತ್ರಿಸುವ ಸರ್ಕಾರಗಳ ವ್ಯವಸ್ಥಿತ ನಿರ್ಲಕ್ಷ್ಯ ಮತ್ತು ಇಚ್ಛಾಶಕ್ತಿಯ ಕೊರತೆಯೂ ಕಾರಣವಾಗಿದೆ. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ, ಈ ಅಕ್ರಮಗಳ ತನಿಖೆಗಳು ಕೇವಲ ತಾತ್ಕಾಲಿಕ ಶಮನದ ತಂತ್ರಗಳಾಗುತ್ತಿವೆಯೇ ಹೊರತು, ವ್ಯವಸ್ಥೆಯ ಶಾಶ್ವತ ಶುದ್ಧೀಕರಣಕ್ಕೆ ದಾರಿಮಾಡಿಕೊಡುತ್ತಿಲ್ಲ. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಕಟ್ಟುನಿಟ್ಟಾದ ಹೊಸ ಕಾಯ್ದೆಗಳನ್ನು ಜಾರಿಗೆ ತರುವಲ್ಲಿ ಮತ್ತು ಭ್ರಷ್ಟರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸುವಲ್ಲಿ ಸರ್ಕಾರಗಳು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ. ರಾಜಕೀಯ ಇಚ್ಛಾಶಕ್ತಿಯ ಕೊರತೆಯು ಪರೋಕ್ಷವಾಗಿ ಇಂತಹ ಅಕ್ರಮ ಜಾಲಗಳಿಗೆ ರಕ್ಷಣಾ ಕವಚವನ್ನು ಒದಗಿಸುತ್ತಿದೆ.
ಈ ಸಾಂಸ್ಥಿಕ ವೈಫಲ್ಯದ ಅತಿ ದೊಡ್ಡ ಬಲಿಪಶುಗಳೆಂದರೆ ಹಗಲಿರುಳು ಎನ್ನದೆ, ವರ್ಷಾನುಗಟ್ಟಲೆ ಓದಿ ಪರೀಕ್ಷೆ ಬರೆಯುವ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ಅಭ್ಯರ್ಥಿಗಳು. ತಮ್ಮ ಯೌವನದ ಅಮೂಲ್ಯ ವರ್ಷಗಳನ್ನು ಸಿದ್ಧತೆಗಾಗಿ ಮುಡಿಪಾಗಿಡುವ ಈ ಯುವಜನತೆಗೆ, ಇಂತಹ ಅಕ್ರಮದ ಸುದ್ದಿಗಳು ತೀವ್ರ ಮಾನಸಿಕ ಆಘಾತವನ್ನು ನೀಡುತ್ತವೆ. ಹಣ ಮತ್ತು ಪ್ರಭಾವವಿದ್ದವರಿಗೆ ಮಾತ್ರ ಅವಕಾಶ ಎಂಬ ಅಲಿಖಿತ ನಿಯಮ ಸೃಷ್ಟಿಯಾದರೆ, ಪ್ರತಿಭೆಗೆ ಬೆಲೆ ಎಲ್ಲಿದೆ? ಇದು ಕೇವಲ ನಿರುದ್ಯೋಗದ ಸಮಸ್ಯೆಯಲ್ಲ, ಯುವಸಮುದಾಯವನ್ನು ಹತಾಶೆಗೆ ತಳ್ಳಿ, ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಮತ್ತಷ್ಟು ಹೆಚ್ಚಿಸುವ ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದಿದ್ದಾರೆ.

ಇದು ಪರಸ್ಪರ ಕೆಸರೆರಚಾಟದ ಸಮಯವಲ್ಲ

ಇದು ಪರಸ್ಪರ ಕೆಸರೆರಚಾಟದ ಸಮಯವಲ್ಲ, ಬದಲಾಗಿ ಸಂಪೂರ್ಣ ನೇಮಕಾತಿ ವ್ಯವಸ್ಥೆಯನ್ನು ರಚನಾತ್ಮಕ ಸುಧಾರಣೆಗೆ ಒಳಪಡಿಸುವ ತುರ್ತು ಅಗತ್ಯವಿದೆ. ಕೆಪಿಎಸ್ಸಿಯನ್ನು ಯುಪಿಎಸ್ಸಿ ಮಾದರಿಯಲ್ಲಿ ಸಂಪೂರ್ಣವಾಗಿ ವೃತ್ತಿಪರಗೊಳಿಸುವುದು, ಪರೀಕ್ಷಾ ವ್ಯವಸ್ಥೆಯನ್ನು ಆಧುನಿಕ ತಂತ್ರಜ್ಞಾನದ ಮೂಲಕ ಡಿಜಿಟಲೀಕರಣಗೊಳಿಸಿ ಮಾನವ ಹಸ್ತಕ್ಷೇಪವನ್ನು ಕನಿಷ್ಠಗೊಳಿಸುವುದು ಇಂದಿನ ಜರೂರಾಗಿದೆ. ಸರ್ಕಾರವು ಕೇವಲ ತನಿಖೆಯ ಭರವಸೆ ನೀಡದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಒಂದು ನಿದರ್ಶನವನ್ನು ಸೃಷ್ಟಿಸಬೇಕು. ಇಲ್ಲವಾದಲ್ಲಿ, ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳ ಪರಿಕಲ್ಪನೆ ಕೇವಲ ಭ್ರಮೆಯಾಗಿ ಉಳಿಯುತ್ತದೆ ಎಂದು ಭಾಸ್ಕರ್ ರಾವ್​ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಸ್ಕ್ಯಾನಿಂಗ್ ಸೆಂಟರ್​ನ​ ಶೌಚಾಲಯದಲ್ಲಿ ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ – Kannada News | Nagarkurnool: Minor Student Delivers Baby in Scan Center Restroom

ಹೈದರಾಬಾದ್, ಮಾರ್ಚ್​04: ಬಾಲಕಿಯೊಬ್ಬಳಿಗೆ ಹತ್ತನೇ ತರಗತಿ ಪರೀಕ್ಷೆ ಬರೆದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಸಲಹೆ ಮೇರೆಗೆ ಸ್ಕ್ಯಾನಿಂಗ್ ಸೆಂಟರ್​ಗೆ ಹೋಗಿದ್ದಾಗ ಬಾತ್​​ರೂಮಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿಯೊಂದಿಗೆ ಸೇರಿ ಮಗುವನ್ನು ಕಸದ ಬುಟ್ಟಿಗೆ ಎಸೆದು ಹೋಗಿದ್ದಾಳೆ.ಇದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬಾಲಕಿ ಯಾರನ್ನಾದರೂ ಪ್ರೇಮಿಸಿ ಮೋಸ ಹೋಗಿದ್ದಳೋ, ಅಥವಾ ಆಕೆಯ ಮೇಲೇನಾದರೂ ಲೈಂಗಿಕ ಕಿರುಕುಳ ನಡೆದಿತ್ತೇ ಎನ್ನುವ ಮಾಹಿತಿ ತಿಳಿದುಬಂದಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿದೇಶ ಪ್ರವಾಸ ಮುಗಿಸಿ ಕಾಂಗ್ರೆಸ್​​ ಶಾಸಕರು ವಾಪಸ್: ಟ್ರಿಪ್​​ಗೆ ಹೋಗಿದ್ಯಾಕೆ? ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ! – Kannada News | Karnataka Congress MLAs Return: Foreign Trip Purpose Sparks Political Row

ವಿದೇಶ ಪ್ರವಾಸದಿಂದ ಕಾಂಗ್ರೆಸ್​​ ಸಾಸಕರು ವಾಪಸ್​

ದೇವನಹಳ್ಳಿ, ಮಾರ್ಚ್​​ 04: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಚ್ಚಾಟದ ನಡುವೆ ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್​​ ಶಾಸಕರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದರೆ ಟ್ರಿಪ್ಗೆ ಹೋಗಿದ್ದೇಕೆ ಎಂಬ ವಿಚಾರದಲ್ಲಿ ಶಾಸಕರ ಹೇಳಿಕೆಯಲ್ಲೇ ಗೊಂದಲ ಕಂಡುಬಂದಿದೆ. ಇನ್ನು ಕೆಲ ಶಾಸಕರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಕಣ್ಣುತಪ್ಪಿಸಿ ತೆರಳಿದ್ದಾರೆ. ಹೆಚ್​.ಡಿ.ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್​ ಶಾಸಕರು ಮಧ್ಯರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದು, ಕ್ಯಾಮರಾ ಕಾಣುತ್ತಿದ್ದಂತೆ ಈ ಪೈಕಿ ಕೆಲ ಶಾಸಕರು ತರಾತುರಿಯಲ್ಲಿ ಕಾರು ಹತ್ತಿದ್ದಾರೆ.

ಇನ್ನು ಟೂರ್​​ ಬಗ್ಗೆ ಮಾತನಾಡಿರುವ ದೇವೇಂದ್ರಪ್ಪ, ಈ ಪ್ರವಾಸವು ಮುಖ್ಯವಾಗಿ ಹೈನುಗಾರಿಕೆ ಮತ್ತು ಕೃಷಿ ಕ್ಷೇತ್ರಗಳ ಕುರಿತು ಅಧ್ಯಯನ ನಡೆಸುವ ಉದ್ದೇಶವನ್ನು ಹೊಂದಿತ್ತು. ವಿದೇಶದಲ್ಲಿನ ಕೃಷಿ ಪದ್ಧತಿಗಳು ಮತ್ತು ಜನರಿಗೆ ಸಂಬಂಧಿಸಿದ ವ್ಯವಸ್ಥೆಗಳು, ಕಾನೂನುಗಳ ಅನುಷ್ಠಾನದಲ್ಲಿ ನಮ್ಮ ದೇಶಕ್ಕಿಂತ ಭಿನ್ನತೆಗಳಿವೆ. ಅಲ್ಲಿನ ಉತ್ತಮ ವ್ಯವಸ್ಥೆಗಳನ್ನು ಕರ್ನಾಟಕದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಪ್ರವಾಸವು ವೈಯಕ್ತಿಕ ಕಲಿಕೆಯ ಅನುಭವವಾಗಿದ್ದು, ಭವಿಷ್ಯದಲ್ಲಿ ಇದನ್ನು ಕಾರ್ಯರೂಪಕ್ಕೆ ತರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಬೆಂಬಲಿಗರು ವಿದೇಶಕ್ಕೆ ಹೋಗಿದ್ದಾರೆ ಎಂಬ ವದಂತಿಗಳನ್ನು ಅವರು ತಳ್ಳಿಹಾಕಿದ ಅವರು, ವಿದೇಶದಲ್ಲಿ ಯಾವುದೇ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್​​ ಆದ ಕಾಂಗ್ರೆಸ್​ ಶಾಸಕರು

‘ರಾಜಕೀಯ ಅಧ್ಯಯನ ಎಂಬುದು ಸುಳ್ಳು’


ಆದರೆ ಇವರ ಹೇಳಿಕೆ ವ್ಯತಿರಿಕ್ತವಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಬಿ ಎಂ ನಾಗರಾಜ್, ತಮ್ಮ ಪ್ರವಾಸ ರಾಜಕೀಯ ಅಧ್ಯಯನಕ್ಕೆ ಮೀಸಲಾಗಿತ್ತು ಎಂಬ ಸುಳ್ಳು ಮಾಹಿತಿ . ನಾನು ಕುಟುಂಬದ ಜೊತೆ ಹೋಗಿದ್ದು. ಇದು ಕುಟುಂಬದ ಟ್ರಿಪ್. ತಮ್ಮ ಪ್ರವಾಸ ರಾಜಕೀಯ ಚರ್ಚೆ ಅಥವಾ ಅಧ್ಯಯನಕ್ಕೆ ಸಂಬಂಧಿಸಿಲ್ಲ ಎಂದಿದ್ದಾರೆ. ನೆಟ್‌ವರ್ಕ್ ಸಮಸ್ಯೆಗಳಿಂದಾಗಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇರಲಿಲ್ಲ ಎಂದೂ ಅವರು ತಿಳಿಸಿದ್ದಾರೆ. ಈ ನಡುವೆ ವಿದೇಶ ಪ್ರವಾಸದಿಂದ ಶಾಸಕರು ವಾಪಸಾದ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್​​, ಏಕೆ ಹೋಗಿದ್ರು? ಯಾವ ಅಧ್ಯಯನಕ್ಕೆ ಹೋಗಿದ್ರು? ಎಂಬುದನ್ನ ಅವರ ಬಳಿಯೇ ಕೇಳಿ. ನಾನು ಹೇಳಿದ್ರೆ ಬರೀ ಊಹೆ ಆಗುತ್ತೆ. ಪ್ರವಾಸಕ್ಕೆ ಹೋದವರನ್ನೇ ಕೇಳಿದ್ರೆ ಸ್ಪಷ್ಟವಾಗಿ ಹೇಳುತ್ತಾರೆ ಎಂದಿದ್ದಾರೆ. ಒಟ್ಟಿನಲ್ಲಿ ವಿದೇಶ ಪ್ರವಾಸಕ್ಕೆ ತೆರಳಿದ್ದ ಶಾಸಕರ ಈ ಗೊಂದಲದ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿರೋದಂತೂ ಸತ್ಯ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ – Kannada News | Karna Serial Update Actor Nagabharana Exit from Serial

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಕರ್ಣ’ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆ ಆಗಿದೆ. ರಮೇಶ್ ಪಾತ್ರ ಮಾಡುತ್ತಿದ್ದ ನಾಗಾಭರಣ ಅವರು ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈ ಸ್ಥಾನಕ್ಕೆ ಹಿರಿಯ ನಟ ಅಭಿಜಿತ್ ಆಗಮಿಸಿದ್ದಾರೆ. ಇನ್ನುಮುಂದೆ ಕರ್ಣನ ಪಾತ್ರದಲ್ಲಿ ಅಭಿಜಿತ್ ಅವರೇ ಮುಂದುವರಿಯಲಿದ್ದಾರೆ. ಈ ವಿಷಯವನ್ನು ಜೀ ಕನ್ನಡ ವಾಹಿನಿ ಅಧಿಕೃತ ಮಾಡಿದೆ. ರಿಲೀಸ್ ಆಗಿರೋ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಲ್ಲು ಅರ್ಜುನ್ ಮುಂದಿನ ಸಿನಿಮಾ ನಿರ್ದೇಶಿಸಲಿರುವ ಮಲಯಾಳಂ ಸ್ಟಾರ್ ನಟ – Kannada News | Basil Joseph to direct Allu Arjun’s next movie

ಅಲ್ಲು ಅರ್ಜುನ್ (Allu Arjun) ಪ್ರಸ್ತುತ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ನಟರುಗಳಲ್ಲಿ ಒಬ್ಬರು. ಅವರೊಟ್ಟಿಗೆ ಸಿನಿಮಾ ಮಾಡಲು ದೊಡ್ಡ ನಿರ್ಮಾಣ ಸಂಸ್ಥೆಗಳು, ನಿರ್ದೇಶಕರುಗಳು ಸಾಲುಗಟ್ಟಿ ನಿಂತಿದ್ದಾರೆ. ಅಲ್ಲು ಅರ್ಜುನ್ ಸಹ ‘ಪುಷ್ಪ 2’ ಬಳಿಕ ಅದಕ್ಕಿಂತಲೂ ದೊಡ್ಡ ಸಿನಿಮಾವನ್ನೇ ಮಾಡಬೇಕು ಎಂಬ ಯೋಜಿತ ನಿರ್ಧಾರ ಹಾಕಿಕೊಂಡೇ ಮುಂದಿನ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಇದೀಗ ಅಟ್ಲಿ ಜೊತೆಗೆ ಹಾಲಿವುಡ್ ಮಾದರಿಯ ಫ್ಯಾಂಟಸಿ, ಸೂಪರ್ ಹೀರೋ ಸಿನಿಮಾ ಮಾಡುತ್ತಿರುವ ಅಲ್ಲು ಅರ್ಜುನ್, ತಮ್ಮ ಮುಂದಿನ ಸಿನಿಮಾಕ್ಕೆ ಭಿನ್ನ ಶೈಲಿಯ ನಿರ್ದೇಶಕರೊಬ್ಬರಿಗೆ ಓಕೆ ಹೇಳಿದ್ದಾರೆ.

ಮಲಯಾಳಂ ಸಿನಿಮಾಗಳ ಮೂಲಕ ತಮ್ಮ ನಟನೆ ಇಂದ ದೇಶದಾದ್ಯಂತ ಪ್ರತ್ಯೇಕ ಅಭಿಮಾನಿ ವರ್ಗವನ್ನೇ ಗಳಿಸಿರುವ ಬಾಸಿಲ್ ಜೋಸೆಫ್ ಅವರು ಅಲ್ಲು ಅರ್ಜುನ್ ಅವರ ಮುಂದಿನ ಸಿನಿಮಾ ನಿರ್ದೇಶಿಸಲಿದ್ದಾರೆ. ಬಾಸಿಲ್ ಜೋಸೆಫ್, ಮಲಯಾಳಂ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರು. ಅವರ ನಟನೆಯ ಹಲವು ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಇದೀಗ ಅವರು ತುಸು ಸಮಯ ನಟನೆಯಿಂದ ವಿರಾಮ ಪಡೆದು ಅಲ್ಲು ಅರ್ಜುನ್ ಅವರಿಗಾಗಿ ಸಿನಿಮಾ ನಿರ್ದೇಶನ ಮಾಡಲಿದ್ದಾರಂತೆ.

ಬಾಸಿಲ್ ಅವರು ಅದ್ಭುತ ನಟರಾಗಿರುವ ಜೊತೆಗೆ ಒಳ್ಳೆಯ ನಿರ್ದೇಶಕ ಸಹ, ಈ ಹಿಂದೆ ‘ಮಿನ್ನಲ್ ಮುರಳಿ’ ಹೆಸರಿನ ಅದ್ಭುತ ಸೂಪರ್ ಹೀರೋ ಸಿನಿಮಾ ನಿರ್ದೇಶಿಸಿದ್ದರು ಬಾಸಿಲ್. ಇದೀಗ ಅಲ್ಲು ಅರ್ಜುನ್ ಅವರಿಗಾಗಿ ಬಾಸಿಲ್ ಅವರು ಫ್ಯಾಂಟಸಿ ಸೂಪರ್ ಹೀರೋ ಸಿನಿಮಾವನ್ನೇ ನಿರ್ದೇಶಿಸಲಿದ್ದಾರೆ. ಅಸಲಿಗೆ ಬಾಲಿವುಡ್​ ನಟ ರಣ್ವೀರ್ ಸಿಂಗ್ ಅವರಿಗಾಗಿ ಮಾಡಿದ್ದ ಕತೆ ಅದಾಗಿದ್ದು, ಕಾರಣಾಂತರಗಳಿಂದ ರಣ್ವೀರ್ ಸಿಂಗ್ ಆ ಸಿನಿಮಾನಲ್ಲಿ ನಟಿಸಲಿಲ್ಲ. ಇದೀಗ ಅದೇ ಕತೆಯನ್ನು ತುಸು ಬದಲಾವಣೆ ಮಾಡಿ ಅಲ್ಲು ಅರ್ಜುನ್ ಅವರಿಗಾಗಿ ಮಾಡುತ್ತಿದ್ದಾರೆ ಬಾಸಿಲ್.

ಇದನ್ನೂ ಓದಿ:ಅಲ್ಲು ಅರ್ಜುನ್ ಮೇಲೆ 42 ನಿಯಮಗಳ ಆರೋಪ ಮಾಡಿ ಕ್ಷಮೆ ಕೇಳಿದ ಮಹಿಳೆ

ಇತ್ತೀಚೆಗಷ್ಟೆ ಬಾಸಿಲ್ ಜೋಸೆಫ್ ಅವರು ಅಲ್ಲು ಅರ್ಜುನ್ ಅವರ ಸಹೋದರ ಅಲ್ಲು ಸಿರೀಶ್ ಅವರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಅಲ್ಲಿ ಅವರು ‘ಪುಷ್ಪ’ ನಿರ್ದೇಶಕ ಸುಕುಮಾರ್, ಅಲ್ಲು ಅರ್ಜುನ್ ಅವರ ಈಗಿನ ಸಿನಿಮಾ ನಿರ್ದೇಶಕ ಅಟ್ಲಿ ಅವರನ್ನು ಭೇಟಿ ಆಗಿದ್ದರು. ಇದೀಗ ಅಲ್ಲು ಅರ್ಜುನ್ ಅಟ್ಲಿ ಜೊತೆಗಿನ ಸಿನಿಮಾನಲ್ಲಿ ನಟಿಸುತ್ತಿದ್ದು, ಆ ಸಿನಿಮಾ ಮುಗಿದೊಡನೆ ಬಾಸಿಲ್ ಜೋಸೆಫ್ ಜೊತೆಗಿನ ಸಿನಿಮಾ ಪ್ರಾರಂಭಿಸಲಿದ್ದಾರೆ.

ಅಲ್ಲು ಅರ್ಜುನ್ ಅವರು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾನಲ್ಲಿಯೂ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ ಆ ಸಿನಿಮಾ ಮತ್ತೆ ಬೇರೊಬ್ಬ ನಟನ ಪಾಲಾಗಿದೆ ಎನ್ನಲಾಗುತ್ತಿದೆ. ಜೂ ಎನ್​​ಟಿಆರ್ ಅವರು ಆ ಸಿನಿಮಾದ ನಾಯಕನ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Kitchen Sink Vastu: ಅಡುಗೆಮನೆಯ ಸಿಂಕ್ ಅಡಿ ಈ ವಸ್ತು ಇಡಲೇಬೇಡಿ; ಸಂಕಷ್ಟ ತಪ್ಪಿದ್ದಲ್ಲ! – Kannada News | Kitchen Sink Vastu: 5 Things NOT to Keep Under Your Sink for Home Prosperity

ನಮ್ಮ ಮನೆಯ ಅಡುಗೆಮನೆಯು ಕೇವಲ ಅಡುಗೆ ತಯಾರಿಸುವ ಸ್ಥಳವಲ್ಲ, ಬದಲಾಗಿ ಅದು ಇಡೀ ಕುಟುಂಬಕ್ಕೆ ಚೈತನ್ಯ ಮತ್ತು ಆರೋಗ್ಯವನ್ನು ನೀಡುವ ಶಕ್ತಿ ಕೇಂದ್ರ. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯು ಮನೆಯ ಸಮೃದ್ಧಿ ಮತ್ತು ಯೋಗಕ್ಷೇಮದ ಅಡಿಪಾಯವಾಗಿದೆ. ಅಡುಗೆಮನೆಯನ್ನು ಎಷ್ಟು ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇಟ್ಟುಕೊಳ್ಳುತ್ತೇವೆಯೋ, ಅಷ್ಟು ಸಕಾರಾತ್ಮಕ ಶಕ್ತಿ ಮನೆಯಲ್ಲಿ ನೆಲೆಸುತ್ತದೆ. ಆದರೆ, ಅನೇಕ ಮನೆಗಳಲ್ಲಿ ಜಾಗದ ಉಳಿತಾಯಕ್ಕಾಗಿ ಅಥವಾ ಅರಿವಿಲ್ಲದೆ ಅಡುಗೆಮನೆಯ ಸಿಂಕ್ ಅಡಿಯಲ್ಲಿ ಬೇಡದ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತದೆ. ಈ ಸಣ್ಣ ತಪ್ಪು ಹೇಗೆ ದೊಡ್ಡ ವಾಸ್ತು ದೋಷವಾಗಿ ಪರಿಣಮಿಸುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ವರುಣ ದೇವನ ಸಂಕೇತ:

ಅಡುಗೆಮನೆಯ ಸಿಂಕ್ ನೀರಿನ ಮೂಲವಾಗಿದೆ ಮತ್ತು ಹಿಂದೂ ಧರ್ಮದಲ್ಲಿ ನೀರನ್ನು ವರುಣ ದೇವನ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅಂತಹ ಪವಿತ್ರ ಸ್ಥಾನದ ಅಡಿಯಲ್ಲಿ ಕಸದ ಬುಟ್ಟಿಯನ್ನು ಇಡುವುದು ವರುಣ ದೇವನಿಗೆ ಮಾಡುವ ಅಪಮಾನಕ್ಕೆ ಸಮಾನ. ಸಿಂಕ್‌ನ ಒಳಚರಂಡಿ ಮತ್ತು ಕಸದ ಬುಟ್ಟಿಯ ಕೆಟ್ಟ ವಾಸನೆ ಒಂದಾದಾಗ ಮನೆಯಲ್ಲಿ ನಕಾರಾತ್ಮಕ ಶಕ್ತಿ ತಾಂಡವವಾಡುತ್ತದೆ. ಇದು ಕುಟುಂಬ ಸದಸ್ಯರ ಮಾನಸಿಕ ಶಾಂತಿಯನ್ನು ಕೆಡಿಸುವುದಲ್ಲದೆ, ಅನಗತ್ಯ ವೈದ್ಯಕೀಯ ಖರ್ಚುಗಳು ಮತ್ತು ಆರ್ಥಿಕ ಮುಗ್ಗಟ್ಟಿಗೆ ಕಾರಣವಾಗಬಹುದು. ಹೀಗಾಗಿ, ಕಸದ ಬುಟ್ಟಿಯನ್ನು ಯಾವಾಗಲೂ ಅಡುಗೆಮನೆಯ ವಾಯುವ್ಯ (North-West) ಮೂಲೆಯಲ್ಲಿ ಇರಿಸುವುದು ಶ್ರೇಯಸ್ಕರ.

ಪೊರಕೆ ಇಡಬೇಡಿ:

ಅನೇಕ ಗೃಹಿಣಿಯರು ಪೊರಕೆಯನ್ನು ಹೊರಗಿನವರಿಗೆ ಕಾಣದಂತೆ ಇಡಲು ಸಿಂಕ್ ಅಡಿಯಲ್ಲಿ ಅಡಗಿಸಿಡುತ್ತಾರೆ. ಆದರೆ ವಾಸ್ತು ಪ್ರಕಾರ, ಪೊರಕೆಯು ಭೂಮಿಯ ಅಂಶವನ್ನು ಮತ್ತು ಸಿಂಕ್ ನೀರಿನ ಅಂಶವನ್ನು ಪ್ರತಿನಿಧಿಸುತ್ತದೆ. ಇವೆರಡೂ ಪರಸ್ಪರ ವಿರುದ್ಧ ಅಂಶಗಳಾಗಿದ್ದು, ಇವುಗಳನ್ನು ಒಟ್ಟಿಗೆ ಇಡುವುದರಿಂದ ಮನೆಯಲ್ಲಿ ಬಡತನ ಆವರಿಸಬಹುದು. ಪೊರಕೆಯು ಲಕ್ಷ್ಮಿಯ ಸಂಕೇತವೂ ಹೌದು, ಅದನ್ನು ನೀರು ಹರಿಯುವ ಸಿಂಕ್ ಅಡಿ ಇಡುವುದು ಶುಭವಲ್ಲ.

ರಾಹು ದೋಷ ತರುವ ಕೊಳಕು ಪಾತ್ರೆಗಳು:

ಇಂದಿನ ಧಾವಂತದ ಜೀವನದಲ್ಲಿ ರಾತ್ರಿ ಪಾತ್ರೆಗಳನ್ನು ತೊಳೆಯದೆ ಸಿಂಕ್‌ನಲ್ಲಿ ಬಿಡುವುದು ರೂಢಿಯಾಗಿದೆ. ಆದರೆ, ರಾತ್ರಿಯಿಡೀ ಸಿಂಕ್‌ನಲ್ಲಿ ಕೊಳಕು ಪಾತ್ರೆಗಳನ್ನು ರಾಶಿ ಹಾಕುವುದು ಅತ್ಯಂತ ಅಶುಭ. ಇದು ಮನೆಯಲ್ಲಿ ರಾಹು ದೋಷವನ್ನು ಉಂಟುಮಾಡುತ್ತದೆ ಮತ್ತು ಮನೆಯಲ್ಲಿ ಅನಾರೋಗ್ಯದ ವಾತಾವರಣ ಸೃಷ್ಟಿಸುತ್ತದೆ. ಪಾತ್ರೆಗಳಲ್ಲಿನ ಹಳಸಿದ ಆಹಾರದ ಅಂಶಗಳು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ. ಆದ್ದರಿಂದ ಮಲಗುವ ಮುನ್ನ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಉತ್ತಮ. ಅನಿವಾರ್ಯ ಸಂದರ್ಭದಲ್ಲಿ, ಪಾತ್ರೆಗಳು ಒಣಗದಂತೆ ಅವುಗಳ ಮೇಲೆ ನೀರನ್ನು ಸುರಿದು ಇಡಬೇಕು.

ಇದನ್ನೂ ಓದಿ: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ!

ರಾಸಾಯನಿಕ ಮತ್ತು ಪ್ಲಾಸ್ಟಿಕ್ ಚೀಲಗಳ ಸಂಗ್ರಹ:

ಸಿಂಕ್ ಅಡಿಯಲ್ಲಿ ಫಿನೈಲ್, ಹಾರ್ಪಿಕ್ ಅಥವಾ ಲಾಂಡ್ರಿ ಸೋಪುಗಳನ್ನು ಇಡುವುದು ಸಾಮಾನ್ಯ ರೂಢಿ. ಆದರೆ ಇವು ಹಾನಿಕಾರಕ ರಾಸಾಯನಿಕಗಳಾಗಿರುವುದರಿಂದ, ಶುದ್ಧ ಆಹಾರ ತಯಾರಿಸುವ ಅಡುಗೆಮನೆಯಲ್ಲಿ ಇವುಗಳ ಪ್ರಭಾವ ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ. ಅದೇ ರೀತಿ, ತರಕಾರಿ ತಂದ ಪ್ಲಾಸ್ಟಿಕ್ ಚೀಲಗಳನ್ನು ಸಿಂಕ್ ಅಡಿ ತುರುಕುವುದು ಆರ್ಥಿಕ ಪ್ರಗತಿಗೆ ಅಡ್ಡಿಯುಂಟುಮಾಡುತ್ತದೆ. ಇವುಗಳು ತ್ಯಾಜ್ಯದ ಸಂಕೇತವಾಗಿದ್ದು, ಮನೆಯಲ್ಲಿ ಹಣಕಾಸಿನ ತೊಂದರೆಗಳನ್ನು ತಂದೊಡ್ಡುತ್ತವೆ. ಈ ವಸ್ತುಗಳನ್ನು ಸಂಗ್ರಹಿಸಲು ಪ್ರತ್ಯೇಕ ಕ್ಯಾಬಿನೆಟ್ ಅಥವಾ ಎತ್ತರದ ಸ್ಥಳವನ್ನು ಬಳಸುವುದರಿಂದ ವಾಸ್ತು ದೋಷವನ್ನು ತಡೆಯಬಹುದು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಬ್ಬ ಮಗನನ್ನು ಬಿಟ್ಟು ಉಳಿದ ಮಕ್ಕಳಿಗೆ ಆಸ್ತಿ ಹಂಚಿಕೆ ಮಾಡಿ ವಿಲ್ ಬರೆದ ತಾಯಿ; ಕೇಸ್ ಹಾಕಿದ ಮಗನಿಗೆ ಸೋಲು; ಕಾರಣ ಏನು? – Kannada News | Can a mother cut a son out of her Will? Kerala HC backs mother who inherited 46 cents of land from her husband and denied son a share

ತಿರುವನಂತಪುರಂ, ಮಾರ್ಚ್ 4: ಗಂಡನಿಂದ ದಾನವಾಗಿ ಬಂದ ಭೂಮಿಯನ್ನು ಮಹಿಳೆಯೊಬ್ಬರು ತನ್ನ ಆರು ಮಕ್ಕಳಲ್ಲಿ ಐವರಿಗೆ ಮಾತ್ರವೇ ಹಂಚಿಕೆ ಮಾಡಿ ವಿಲ್ ಬರೆದಿದ್ದರು. ಈಗ ಆಸ್ತಿ ಸಿಗದ ಆ ಒಬ್ಬ ಮಗ ಕೋರ್ಟ್ ಮೆಟ್ಟಿಲೇರಿದರು. ಆದರೆ, ನ್ಯಾಯಾಲಯದಲ್ಲಿ ತಾಯಿಯ ಪರವಾಗಿ ತೀರ್ಪು ಬಂದಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ತನಗೆ ಹಕ್ಕಿದೆ ಎನ್ನುವ ಮಗನ ವಾದವನ್ನು ಕೋರ್ಟ್ ಒಪ್ಪಿಲ್ಲ.

ಏನಿದು ಪ್ರಕರಣ?

ವೆಂಕಿಟನ್ ಎಂಬ್ರಾಂದಿರಿ ಎಂಬುವವರು 1925ರಲ್ಲಿ ಒಂದು ಎಕರೆ 26 ಸೆಂಟ್ ಜಮೀನನ್ನು ಖರೀದಿ ಮಾಡುತ್ತಾರೆ. ಅವರಿಗೆ ಇಬ್ಬರು ಹೆಣ್ಮಕ್ಕಳು ಸೇರಿ ಆರು ಮಕ್ಕಳಿದ್ದರು. ಅವರಲ್ಲಿ ಟಿ.ವಿ. ರಾಮಚಂದ್ರ ರಾವ್ ಒಬ್ಬರು.

ವೆಂಕಿಟನ್ ಮೃತಪಟ್ಟಾಗ ಮಕ್ಕಳೆಲ್ಲರೂ 1967ರಲ್ಲಿ ಪಾರ್ಟಿಶನ್ ಡೀಡ್ ಮಾಡಿದರು. ಆಗ ರಾಮಚಂದ್ರ ರಾವ್ ಅವರಿಗೆ 37 ಸೆಂಟ್ ಆಸ್ತಿ ಸಿಕ್ಕಿತು. ರಾಧಮ್ಮ ಎನ್ನುವ ಸಹೋದರಿಯೊಬ್ಬರು ತನ್ನ ಪಾಲಿನ 9 ಸೆಂಟ್ ಜಾಗವನ್ನು ಬಿಟ್ಟುಕೊಡುತ್ತಾರೆ. ಟಿ.ವಿ. ರಾಮಚಂದ್ರರಾವ್ ಅವರಿಗೆ ಸಿಕ್ಕ ಜಾಗ 46 ಸೆಂಟ್​ಗೆ ಏರುತ್ತದೆ.

ಇದನ್ನೂ ಓದಿ:

1978ರಲ್ಲಿ ರಾಮಚಂದ್ರರಾವ್ ಈ 46 ಸೆಂಟ್ ಜಾಗವನ್ನು ತಮ್ಮ ಧರ್ಮಪತ್ನಿಗೆ ದಾನವಾಗಿ ನೀಡುತ್ತಾರೆ. 1986ರಲ್ಲಿ ರಾವ್ ಮೃತರಾಗುತ್ತಾರೆ. ಇವರಿಗೆ ಆರು ಮಕ್ಕಳಿದ್ದಾರೆ. ರಾಮಚಂದ್ರರಾವ್ ನಿಧನರಾಗಿ ಕೆಲ ವರ್ಷಗಳ ಬಳಿಕ ಅವರ ಪತ್ನಿ ವಿಲ್ ಬರೆಯುತ್ತಾರೆ. ಒಬ್ಬ ಮಗನನ್ನು ಬಿಟ್ಟು ಉಳಿದ ಐವರಿಗೆ ಆಸ್ತಿ ಹಂಚಿಕೆ ಮಾಡಿ ವಿಲ್ ಬರೆಯುತ್ತಾರೆ.

ಇದನ್ನು ಆಕ್ಷೇಪಿಸಿ ಮಗ ಕೋರ್ಟ್ ಮೆಟ್ಟಿಲೇರುತ್ತಾನೆ. ಇದು ಪಿತ್ರಾರ್ಜಿತ ಆಸ್ತಿಯಾಗಿದ್ದು ತನಗೆ ಹಕ್ಕು ಇದೆ ಎಂದು ವಾದಿಸುತ್ತಾನೆ. ಆದರೆ, ರಾಮಚಂದ್ರ ರಾವ್ ಅವರ ಕಾಪರ್ಸನರಿ ಪ್ರಾಪರ್ಟಿಯಲ್ಲವಾದ್ದರಿಂದ ಅವರ ಮಗನಿಗೆ ಆಸ್ತಿ ಹಕ್ಕು ಇಲ್ಲ. ಇದರ ಪೂರ್ಣ ಹಕ್ಕು ತನಗೇ ಸೇರಿದ್ದು ಎಂದು ಆತನ ತಾಯಿ ವಾದ ಮಾಡುತ್ತಾರೆ. ಕೋರ್ಟ್ ಕೂಡ ಈ ವಾದವನ್ನು ಪುರಸ್ಕರಿಸಿ, ತಾಯಿ ಪರವಾಗಿ ತೀರ್ಪು ಕೊಡುತ್ತದೆ.

ಇದನ್ನೂ ಓದಿ:

ಪಿತ್ರಾರ್ಜಿತ ಆಸ್ತಿ ಎನಿಸುವುದು ಹೇಗೆ?

ನಾಲ್ಕು ತಲೆಮಾರುಗಳಿಂದ ಯಾವುದೇ ಪಾರ್ಟಿಶನ್ ಇಲ್ಲದೇ ಆಸ್ತಿಯು ಬಳುವಳಿಯಾಗಿ ಬಂದಿರಬೇಕು. ಪಾರ್ಟಿಶನ್ ಆದಾಗ ಅದು ಸ್ವಂತ ಸಂಪಾದನೆ ಎಂದು ಪರಿಗಣಿತವಾಗುತ್ತದೆ. ರಾಮಚಂದ್ರರಾವ್ ಅವರು ತಮ್ಮ ತಂದೆಯಿಂದ ಆಸ್ತಿಯನ್ನು ಪಾರ್ಟಿಶನ್ ಡೀಡ್ ಮೂಲಕ ಪಡೆದಿದ್ದರು. ಹೀಗಾಗಿ, ಅದು ಅವರ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಗೆ ಹಕ್ಕುದಾರರನ್ನಾಗಿ ಮಾಡಿರಲಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link