All posts by nagaraj11081993

Gold Rates: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 4th March 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮಾರ್ಚ್ 4: ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿದೆ. 10 ಗ್ರಾಮ್ ಚಿನ್ನದ ಬೆಲೆ (Gold Rates) 5,000 ರೂಗೂ ಅಧಿಕ ಮೊತ್ತದಷ್ಟು ಇಳಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಸ್ವರ್ಣ ದರ ಭರ್ಜರಿ ಕುಸಿತ ಕಂಡಿದೆ. ಬೆಳ್ಳಿ ಬೆಲೆಯೂ ಕುಸಿದಿದೆ. ಗ್ರಾಮ್​ಗೆ 10 ರೂನಷ್ಟು ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,50,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,64,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,50,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 4ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,451 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,080 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,338 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,451 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,080 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,080 ರೂ
  • ಚೆನ್ನೈ: 15,200 ರೂ
  • ಮುಂಬೈ: 15,080 ರೂ
  • ದೆಹಲಿ: 15,095 ರೂ
  • ಕೋಲ್ಕತಾ: 15,080 ರೂ
  • ಕೇರಳ: 15,080 ರೂ
  • ಅಹ್ಮದಾಬಾದ್: 15,085 ರೂ
  • ಜೈಪುರ್: 15,095 ರೂ
  • ಲಕ್ನೋ: 15,095 ರೂ
  • ಭುವನೇಶ್ವರ್: 15,080 ರೂ

ಇದನ್ನೂ ಓದಿ: ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 645 ರಿಂಗಿಟ್ (15,062 ರುಪಾಯಿ)
  • ದುಬೈ: 568.75 ಡಿರಾಮ್ (14,273 ರುಪಾಯಿ)
  • ಅಮೆರಿಕ: 159.50 ಡಾಲರ್ (14,702 ರುಪಾಯಿ)
  • ಸಿಂಗಾಪುರ: 205.60 ಸಿಂಗಾಪುರ್ ಡಾಲರ್ (14,834 ರುಪಾಯಿ)
  • ಕತಾರ್: 560 ಕತಾರಿ ರಿಯಾಲ್ (14,151 ರೂ)
  • ಸೌದಿ ಅರೇಬಿಯಾ: 577 ಸೌದಿ ರಿಯಾಲ್ (14,171 ರುಪಾಯಿ)
  • ಓಮನ್: 60.10 ಒಮಾನಿ ರಿಯಾಲ್ (14,388 ರುಪಾಯಿ)
  • ಕುವೇತ್: 46.51 ಕುವೇತಿ ದಿನಾರ್ (14,009 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Chittoor Accident: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ, ಕರ್ನಾಟಕದ ಐವರು ಸಾವು – Kannada News | Bengaluru–Tirupati Journey Ends in Tragedy After Highway Crash in Chittoor

ಚಿತ್ತೂರು, ಮಾರ್ಚ್​ 04: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ(Accident)ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ.

ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಪಲಮನೇರು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಚಾಲಕ ನಿದ್ದೆ ಮಂಪರಿನಲ್ಲಿದ್ದನೋ ಅಥವಾ ಕಾರಿನ ವೇಗದಿಂದಾಗಿ ನಿಯಂತ್ರಣ ತಪ್ಪಿದ್ದನೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಲಿಪಶುವಿನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಮತ್ತಷ್ಟು ಓದಿ: ಯಮುನಾ ಎಕ್ಸ್​​ಪ್ರೆಸ್​​ವೇನಲ್ಲಿ ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು

ಸ್ಥಳೀಯರ ಮಾಹಿತಿಯ ಆಧಾರದ ಮೇಲೆ, ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದ್ದಾರೆ. ಅವರ ವಿವರಗಳನ್ನು ಸಹ ಸಂಗ್ರಹಿಸಲಾಗುತ್ತಿದೆ. ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ  – Kannada News | Yash Starrer Toxic Movie Release date postponed due to On Going War Situation

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾ ತಂಡ ಶಾಕಿಂಗ್ ಅಪ್​​ಡೇಟ್ ಕೊಟ್ಟಿದೆ. ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ರಿಲೀಸ್​​ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಹೊಸ ರಿಲೀಸ್ ದಿನಾಂಕವನ್ನು ಕೂಡ ಘೋಷಣೆ ಮಾಡಲಾಗಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಆಗಲಿದೆ.

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣ ಆಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ ಆಗುವ ಲಕ್ಷಣ ಕಾಣಿಸುತ್ತಿಲ್ಲ. ಅಬುದಾಬಿ ಮೊದಲಾದ ಕಡೆಗಳಲ್ಲಿ ದಾಳಿ ಆಗುತ್ತಿದೆ. ಈ ಕಾರಣವನ್ನು ನೀಡಿ ಟಾಕ್ಸಿಕ್ ಮುಂದಕ್ಕೆ ಹಾಕಿರೋದಾಗಿ ತಂಡ ಮಾಹಿತಿ ಕೊಟ್ಟಿದೆ.

‘ಟಾಕ್ಸಿಕ್’ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿದ್ದವು. ಈ ಚಿತ್ರದ ಟ್ರೇಲರ್ ಮಾರ್ಚ್ 8ರಂದು ರಿಲೀಸ್ ಆಗಬೇಕಿತ್ತು. ಇದಕ್ಕೆ ಎಲ್ಲಾ ಸಿದ್ಧತೆಗಳು ಕೂಡ ನಡೆದಿದ್ದವು. ಆದರೆ, ಇಸ್ರೇಲ್-ಇರಾನ್ ಮಧ್ಯೆ ಸಮರ ನಡೆಯುತ್ತಿರುವುದರಿಂದ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

ಗಲ್ಫ ರಾಷ್ಟ್ರಗಳಲ್ಲಿ ‘ಧುರಂಧರ್ 2’ ರಿಲೀಸ್ ಆಗುತ್ತಿಲ್ಲ. ಹೀಗಾಗಿ, ಈ ರಾಷ್ಟ್ರವನ್ನು ದೊಡ್ಡ ಮಾರುಕಟ್ಟೆ ಮಾಡಿಕೊಳ್ಳಬೇಕು ಎಂಬುದು ‘ಟಾಕ್ಸಿಕ್’ ಸಿನಿಮಾ ತಂಡದ ಪ್ಲ್ಯಾನ್ ಆಗಿತ್ತು. ಆದರೆ, ಇದು ಸಾಧ್ಯವಾಗುತ್ತಿಲ್ಲ. ಇದನ್ನು ತಂಡ ಗಮನದಲ್ಲಿ ಇಟ್ಟುಕೊಂಡಿದೆ.

ಇದನ್ನೂ ಓದಿ: ರಣವೀರ್ ನಟನೆಯ ‘ಧುರಂಧರ್ 2’ ವಿಳಂಬಕ್ಕೆ ಕಾರಣವಾಯ್ತು ಚಂದ್ರ ಗ್ರಹಣ

‘ಟಾಕ್ಸಿಕ್’ ಸಿನಿಮಾ ಮುಂದಕ್ಕೆ ಹೋಗಲು ‘ಧುರಂಧರ್ 2’ ಕಾರಣ ಎಂಬ ಚರ್ಚೆ ಕೂಡ ನಡೆದಿದೆ. ಆದರೆ, ತಂಡ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ನಮ್ಮ ಪಾಲುದಾರರನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿಕೊಂಡಿದೆ.

‘ಟಾಕ್ಸಿಕ್’ ಸಿನಿಮಾನ ‘ಕೆವಿಎನ್’ ಸಂಸ್ಥೆ ನಿರ್ಮಾಣ ಮಾಡಿದೆ. ಈ ಚಿತ್ರಕ್ಕೆ ಯಶ್ ಕೂಡ ನಿರ್ಮಾಪಕ. ಗೀತು ಮೋಹನ್ ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:08 am, Wed, 4 March 26

Source link

SA vs NZ: ಅವರ ಮೇಲೆ ಇವರು ಗೆದ್ದಿಲ್ಲ, ಇವರ ಮೇಲೆ ಅವರು ಸೋತಿಲ್ಲ..! – Kannada News | South Africa vs New Zealand semi final: Head To Head

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಇಂದು (ಮಾ.4) ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಹೀಗಾಗಿಯೇ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಏಕೆಂದರೆ ಉಭಯ ತಂಡಗಳ ಈ ಹಿಂದಿನ ಮುಖಾಮುಖಿಯೇ ರೋಚಕತೆಯಿಂದೆ ಕೂಡಿದೆ.

  • ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್ಲಾ ಪಂದ್ಯಗಳಲ್ಲೂ ಸೌತ್ ಆಫ್ರಿಕಾ ತಂಡವೇ ಜಯ ಸಾಧಿಸಿದೆ. ಅಂದರೆ ಟಿ20 ವಿಶ್ವಕಪ್​ನಲ್ಲಿ ಆಫ್ರಿಕಾ ಪಡೆ ವಿರುದ್ಧ ನ್ಯೂಝಿಲೆಂಡ್ ತಂಡ ಒಮ್ಮೆಯೂ ಗೆಲುವು ದಾಖಲಿಸಿಲ್ಲ.
  • ಐಸಿಸಿ ಟೂರ್ನಿಯ ನಾಕೌಟ್ ಪಂದ್ಯಗಳಲ್ಲಿ ನ್ಯೂಝಿಲೆಂಡ್ ವಿರುದ್ಧ ಸೌತ್ ಆಫ್ರಿಕಾ ತಂಡ ಕೂಡ ಗೆಲುವು ದಾಖಲಿಸಿಲ್ಲ. ಅಂದರೆ ಈ ಹಿಂದೆ ಐಸಿಸಿ ಟೂರ್ನಿಯ 3 ನಾಕೌಟ್ ಪಂದ್ಯಗಳಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಿವೆ. ಈ ವೇಳೆ ಮೂರು ಪಂದ್ಯಗಳಲ್ಲೂ ನ್ಯೂಝಿಲೆಂಡ್ ತಂಡವೇ ಜಯ ಸಾಧಿಸಿದೆ.

ಅಂದರೆ ಐಸಿಸಿ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಸೋಲುಣಿಸುವಲ್ಲಿ ನ್ಯೂಝಿಲೆಂಡ್ ತಂಡ ಯಶಸ್ವಿಯಾಗುತ್ತಾ ಬಂದಿದೆ. ಇದೀಗ ಇದೇ ಮೊದಲ ಬಾರಿಗೆ ಉಭಯ ತಂಡಗಳು ಟಿ20 ವಿಶ್ವಕಪ್​ನ ನಾಕೌಟ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ.

ಅತ್ತ ಟಿ20 ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಸೌತ್ ಆಫ್ರಿಕಾ ತಂಡವು ಒಮ್ಮೆಯೂ ಸೋತಿಲ್ಲ. ಇತ್ತ ನ್ಯೂಝಿಲೆಂಡ್ ತಂಡವು ಸೌತ್ ಆಫ್ರಿಕಾ ವಿರುದ್ಧದ ಎಲ್ಲಾ ನಾಕೌಟ್​ ಪಂದ್ಯಗಳನ್ನು ಗೆದ್ದ ಇತಿಹಾಸವಿದೆ. ಹೀಗಾಗಿಯೇ ಇಂದಿನ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ನಡುವಣ ಕದನವು ವಿಶೇಷ ಪಂದ್ಯವಾಗಿ ಮಾರ್ಪಟ್ಟಿದೆ.

ಏಕೆಂದರೆ ಈ ಬಾರಿ ಸೌತ್ ಆಫ್ರಿಕಾ ವಿರುದ್ಧ  ನ್ಯೂಝಿಲೆಂಡ್ ತಂಡ ಗೆದ್ದರೆ, ಅದು ಟಿ20 ವಿಶ್ವಕಪ್​ನಲ್ಲಿ ಆಫ್ರಿಕಾ ವಿರುದ್ಧದ ಕಿವೀಸ್ ಪಡೆಯ ಮೊದಲ ಜಯವಾಗಿರಲಿದೆ. ಇದೇ ವೇಳೆ ನ್ಯೂಝಿಲೆಂಡ್ ವಿರುದ್ಧ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, ಅದು ನ್ಯೂಝಿಲೆಂಡ್ ವಿರುದ್ಧದ ಐಸಿಸಿ ನಾಕೌಟ್ ಪಂದ್ಯದಲ್ಲಿ ಆಫ್ರಿಕಾ ಪಡೆಯ ಮೊದಲ ಗೆಲುವುವಾಗಿರಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಈ ಪೈಪೋಟಿಯಲ್ಲಿ ಗೆಲ್ಲುವ ಮೂಲಕ ಮಾರ್ಚ್ 8 ರಂದು ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್​ಗೆ ಯಾವ ತಂಡ ಅರ್ಹತೆ ಪಡೆಯಲಿದೆ ಎಂಬುದನ್ನು ಕಾದು ನೋಡೋಣ.

ಸೌತ್ ಆಫ್ರಿಕಾ ಟಿ20 ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಝಿ, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಕ್ವೆನಾ ಮಫಕಾ, ಲುಂಗಿ ಎನ್‌ಗಿಡಿ, ಜೇಸನ್ ಸ್ಮಿತ್, ಜಾರ್ಜ್ ಲಿಂಡೆ, ಕಾರ್ಬಿನ್ ಬಾಷ್, ಅನ್ರಿಕ್ ನೋಕಿಯ.

ಇದನ್ನೂ ಓದಿ: RCB ತಂಡದ 2 ಪಂದ್ಯಗಳನ್ನು ಶಿಫ್ಟ್ ಮಾಡಲು ಇದುವೇ ಕಾರಣ..!

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ಆಡಮ್ ಮಿಲ್ನ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ಸೈಫರ್ಟ್​, ಇಶ್ ಸೋಧಿ.

Published On – 10:21 am, Wed, 4 March 26

Source link

ಲಕ್ನೋ: ಬಿರಿಯಾನಿ ಅಂಗಡಿಯ ಫ್ರೀಜರ್​ನಲ್ಲಿ ವ್ಯಕ್ತಿಯ ಶವ ಪತ್ತೆ – Kannada News | Man’s Body Discovered Inside Freezer at Biryani Outlet in Lucknow

ಲಕ್ನೋ, ಮಾರ್ಚ್​ 04: ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬಿರಿಯಾನಿ ಅಂಗಡಿಯ ಫ್ರೀಜರ್​​ನಲ್ಲಿ 35 ವರ್ಷ ವ್ಯಕ್ತಿಯೊಬ್ಬರ ಶವ(Dead body )ಪತ್ತೆಯಾಗಿರುವ ಘಟನೆ ನಡೆದಿದೆ. ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿರುವ ಅಂಡಗಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನ ವಿಜಯ್ ಪಾಲ್ ಎಂದು ಗುರುತಿಸಲಾಗಿದೆ. ಅವರು ಬಿಕೆಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಿಶನ್​ಪುರ್ ಮಾಜ್ರಾ ನಿವಾಸಿಯಾಗಿದ್ದರು.

ಅಂಗಡಿ ಮಾಲೀಕರಾದ ಶನಿ ರಾವತ್​ ಅವರ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಅಂಗಡಿಯು ಕಳೆದ ನಾಲ್ಕು ದಿನಗಳಿಂದ ಮುಚ್ಚಿತ್ತು. ರಾವತ್ ಭಾನುವಾರ ಬೆಳಗ್ಗೆ ಔಟ್ಲೆಟ್ ಅನ್ನು ಮತ್ತೆ ತೆರೆಯಲು ರಾವತ್ ಬಂದಾಗ, ಫ್ರೀಜರ್ ಒಳಗೆ ಶವವನ್ನು ಕಂಡು ಆಘಾತಕ್ಕೊಳಗಾದರು. ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಶವವನ್ನು ಫ್ರೀಜರ್‌ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ದಿನಗೂಲಿ ಕೆಲಸಗಾರ ವಿಜಯ್ ಪಾಲ್ ಐದು ವರ್ಷಗಳ ಹಿಂದೆ ತನ್ನ ಹೆಂಡತಿಯಿಂದ ಬೇರ್ಪಟ್ಟ ನಂತರ ಒಂಟಿಯಾಗಿ ವಾಸಿಸುತ್ತಿದ್ದರು ಮತ್ತು ಮದ್ಯದ ಚಟಕ್ಕೆ ಒಳಗಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಎಡಿಸಿಪಿ (ಉತ್ತರ ವಲಯ) ರಿಷಭ್ ರನ್ವಾಲ್ ಹೇಳಿದ್ದಾರೆ.

ಮತ್ತಷ್ಟು ಓದಿ: ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು?

ಮತ್ತೊಂದು ಘಟನೆ
ಕೊಡಲಿಯಿಂದ ತಂದೆಯನ್ನೇ ಕಡಿದು ಕೊಂದು, ಟ್ಯಾಂಕ್​ಗೆ ಎಸೆದು ನೆಮ್ಮದಿಯಿಂದ ಕುಳಿತು ಬಿರಿಯಾನಿ ತಿಂದ ಮಗ
ಹೋಳಿ(Holi)ಯ ಹಬ್ಬದ ಅಂಗವಾಗಿ ನಡೆಸುವ ಹೋಳಿ ಕಾ ದಹನ್ ಹಬ್ಬದ ರಾತ್ರಿ ನಡೆದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಛತ್ತೀಸ್​ಗಢದ ಅಂಬಿಕಾಪುರದಲ್ಲಿ ನಡೆದಿದೆ. ಅಲ್ಲಿ ವ್ಯಕ್ತಿಯೊಬ್ಬ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿ, ಮನೆಯ ಪಕ್ಕದಲ್ಲಿರುವ ನೀರಿನ ತೊಟ್ಟಿಯಲ್ಲಿ ಎಸೆದು ನಂತರ ಶಾಂತವಾಗಿ ಬಿರಿಯಾನಿ ತಿಂದು ಮಲಗಿದ್ದಾನೆ ಎನ್ನಲಾಗಿದೆ.

ಪೊಲೀಸರು ಅದೇ ರಾತ್ರಿ ಆರೋಪಿ ಮಗನನ್ನು ಬಂಧಿಸಿದ್ದಾರೆ.ಮೃತ ಪರಾಸ್ ಕರ್ಕೆಟ್ಟಾ ಬೇರೆ ಮನೆಯಲ್ಲಿ ವಾಸವಾಗಿದ್ದರು, ಅವರ ಮಗ ಪ್ರಭಾತ್ ಅಲಿಯಾಸ್ ಲೆಡಾ ಮನೆ ಕೆಲವೇ ಕೆಲವು ಮೀಟರ್ ದೂರದಲ್ಲಿತ್ತು. ಇಬ್ಬರ ಮನೆಗಳ ಮಧ್ಯೆ ಕೇವಲ ಎರಡು ಮನೆಗಳಿದ್ದವು.

ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಪ್ರಕಾರ, ಹೋಳಿಕಾ ದಹನ್ ದಿನ ರಾತ್ರಿ 11 ಗಂಟೆ ಸುಮಾರಿಗೆ ಪ್ರಭಾತ್ ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ, ಅವರ ತಂದೆ ಬೈದಿದ್ದರು. ಬಳಿಕ ಇದು ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ಕೋಪದ ಭರದಲ್ಲಿ ಪ್ರಭಾತ್ ಮನೆಯೊಳಗೆ ಇಟ್ಟಿದ್ದ ಕೊಡಲಿಯನ್ನು ಎತ್ತಿಕೊಂಡು ತಂದೆಯ ತಲೆಗೆ ಹಲವು ಬಾರಿ ಹೊಡೆದಿದ್ದಾನೆ. ಪರಾಸ್​ಗೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಲೆ ಮಾಡಿದ ನಂತರ ಆರೋಪಿಯು ಶವವನ್ನು ಎಳೆದುಕೊಂಡು ಹೋಗಿ ಮನೆಯ ಪಕ್ಕದಲ್ಲಿರುವ ಸಣ್ಣ ನೀರಿನ ಟ್ಯಾಂಕ್​​ಗೆ ಎಸೆದಿದ್ದಾನೆ ಎಂದು ಹೇಳಲಾಗಿದೆ. ಶವವನ್ನು ವಿಲೇವಾರಿ ಮಾಡಿದ ನಂತರ ಹತ್ತಿರದ ಅಂಗಡಿಗೆ ಹೋಗಿ ಬಿರಿಯಾನಿ ಕೊಂಡು ಮನೆಗೆ ಬಂದು ತಿಂದು ಕಂಬಳಿ ಹೊದ್ದು ನೆಮ್ಮದಿಯಿಂದ ನಿದ್ರಿಸಿದ್ದಾನೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

National Safety Day 2026: ಭಾರತದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುವುದು ಏಕೆ ಗೊತ್ತಾ? – Kannada News | National Safety Day 2026: Do you know why National Safety Day is celebrated in India?

ರಾಷ್ಟ್ರೀಯ ಸುರಕ್ಷತಾ ದಿನImage Credit source: vecteezy

ಅಪಘಾತಗಳು ಯಾವಾಗ ಬೇಕಾದರೂ ಮತ್ತು ಎಲ್ಲಿ ಬೇಕಾದರೂ ಸಂಭವಿಸಬಹುದು, ಆದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಅಥವಾ ಸಂಭವನೀಯ ಅಪಘಾತಗಳ ಬಗ್ಗೆ ತಿಳಿದಿರುವುದರಿಂದ ಅವುಗಳನ್ನು ತಪ್ಪಿಸಬಹುದು. ಬೆಂಕಿ ಅವಘಡಗಳು, ಕೈಗಾರಿಕಾ ಅಪಘಾತಗಳು, ರಸ್ತೆ ಅಪಘಾತಗಳು ಸೇರಿದಂತೆ ವಿವಿಧ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅಪಘಾತಗಳನ್ನು ತಪ್ಪಿಸಲು ಜನರು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವಂತೆ ಸುರಕ್ಷತೆಯ (Safety) ಬಗ್ಗೆ ಮಾಹಿತಿ ಮತ್ತು ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 4 ರಂದು ಭಾರತದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ರಾಷ್ಟ್ರೀಯ ಸುರಕ್ಷತಾ ದಿನದ ಇತಿಹಾಸವೇನು?

ಸುರಕ್ಷತಾ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದು ಹಾಗೂ ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಕುರಿತು ಅರಿವು ಮೂಡಿಸುವ ಸಲುವಾಗಿ  ಭಾರತ ಸರ್ಕಾರದ ಕಾರ್ಮಿಕ ಸಚಿವಾಲಯವು ರಾಷ್ಟ್ರೀಯ ಸುರಕ್ಷತಾ ಮಂಡಳಿಯನ್ನು ಸ್ಥಾಪಿಸಿತು. ರಸ್ತೆ ಸುರಕ್ಷತೆ, ಕೆಲಸದ ಸ್ಥಳದಲ್ಲಿನ ಸುರಕ್ಷತೆ, ಮಾನವ ಆರೋಗ್ಯ ಮತ್ತು ಪರಿಸರ ಸುರಕ್ಷತೆಯ ಕುರಿತು ಅರಿವು ಮೂಡಿಸುವ ಈ ಮಂಡಳಿಯ ಗುರಿಯಾಗಿದೆ.  ಈ ರಾಷ್ಟ್ರೀಯ ಸುರಕ್ಷತಾ ಮಂಡಳಿ ಪ್ರಾರಂಭವಾದ ಸವಿನೆನಪಿಗಾಗಿ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. ಮೊದಲ ರಾಷ್ಟ್ರೀಯ ಸುರಕ್ಷತಾ ದಿನವನ್ನು 1972 ರಲ್ಲಿ ಆಚರಿಸಲಾಯಿತು. ಕೈಗಾರಿಕಾ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಅಲ್ಲದೆ ಪ್ರತಿವರ್ಷವು ಮಾರ್ಚ್ 6ರಿಂದ 10ರ ವರೆಗೆ ರಾಷ್ಟ್ರದಾದ್ಯಂತ ರಾಷ್ಟ್ರೀಯ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಭದ್ರತಾ ದಿನದ ಉದ್ದೇಶವೇನು?

ಸುರಕ್ಷತೆಯ ಮಹತ್ವವನ್ನು ಉತ್ತೇಜಿಸಲು ಮತ್ತು ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಜನರು ಕೆಲಸದ ಸ್ಥಳಗಳಲ್ಲಿ, ತಮ್ಮ ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಈ ದಿನ ಸುರಕ್ಷತಾ ರ್ಯಾಲಿಗಳು, ಸುರಕ್ಷತಾ ತರಬೇತಿ, ಜಾಗೃತಿ ಅಭಿಯಾನಗಳು ಮತ್ತು ಕೆಲಸದ ಸ್ಥಳದಲ್ಲಿ ಸುರಕ್ಷತಾ ಪ್ರಮಾಣಪತ್ರಗಳ ವಿತರಣೆಯಂತಹ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಇದನ್ನೂ ಓದಿ: ನಮ್ಮಂತೆಯೇ ವನ್ಯಜೀವಿಗಳಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ

ರಾಷ್ಟ್ರೀಯ ಭದ್ರತಾ ದಿನದ ಮಹತ್ವವೇನು?

  • ಎಲ್ಲಾ ವಲಯಗಳಲ್ಲಿ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅಪಘಾತಗಳನ್ನು ಕಡಿಮೆ ಮಾಡುವುದು ರಾಷ್ಟ್ರೀಯ ಸುರಕ್ಷತಾ ದಿನದ ಉದ್ದೇಶವಾಗಿದೆ.
  • ಕೈಗಾರಿಕಾ ಅಪಘಾತಗಳನ್ನು ಕಡಿಮೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಈ ದಿನವು ಕಾರ್ಮಿಕರು ಮತ್ತು ಉದ್ಯೋಗಿಗಳ ಜೀವಗಳನ್ನು ರಕ್ಷಿಸಲು ಕಾರ್ಖಾನೆಗಳು, ನಿರ್ಮಾಣ ಸ್ಥಳಗಳು ಮತ್ತು ಇತರ ಕೆಲಸದ ಸ್ಥಳಗಳಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಕಾರ್ಮಿಕರಿಗೆ ನೆನಪಿಸುತ್ತದೆ.
  • ಯಾವುದೇ ವಲಯದಲ್ಲಿ ಕೆಲಸ ಮಾಡುವ ನಾಗರಿಕರ ಸುರಕ್ಷತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಸುರಕ್ಷತಾ ಸಪ್ತಾಹವನ್ನು ಸಹ ಆಚರಿಸಲಾಗುತ್ತದೆ. ಈ ಸಮಯದಲ್ಲಿ, ಪ್ರತಿಯೊಂದು ವಲಯದ ಕಾರ್ಮಿಕರಿಗೆ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮತ್ತು ಕೈಗಾರಿಕಾ ಅಪಘಾತಗಳನ್ನು ತಪ್ಪಿಸುವ ಮಾರ್ಗಗಳು ಮತ್ತು ಅವುಗಳಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿಸಲಾಗುತ್ತದೆ. ಇದಕ್ಕಾಗಿ, ಅನೇಕ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Mantras: ಯಾವುದೇ ಮಂತ್ರ ಪಠಿಸುವ ಮುನ್ನ ಈ ವಿಷಯ ನೆನಪಿಟ್ಟುಕೊಳ್ಳಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Mantras: A Guide to Their Auspicious and Inauspicious Effects

ಮಂತ್ರಗಳು ಆಧ್ಯಾತ್ಮಿಕ ಅಭ್ಯಾಸದಲ್ಲಿ ಮಹತ್ವದ ಸ್ಥಾನವನ್ನು ಪಡೆದುಕೊಂಡಿವೆ. “ಮನನಾ ತ್ರಾಯತೇ ಇತಿ ಮಂತ್ರಃ” ಎಂಬುದು ಮಂತ್ರದ ಮೂಲಭೂತ ವ್ಯಾಖ್ಯಾನವಾಗಿದೆ, ಅಂದರೆ ಮನಸ್ಸಿನಿಂದ ಧ್ಯಾನಿಸುವುದರಿಂದ ನಮ್ಮನ್ನು ರಕ್ಷಿಸುವ ಶಕ್ತಿ. ಮಂತ್ರಗಳ ಪಠಣೆಯು ವ್ಯಕ್ತಿಯಲ್ಲಿ ನಂಬಿಕೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ, ಭಕ್ತ ಮತ್ತು ಭಗವಂತನ ನಡುವೆ ಗಾಢವಾದ, ಉತ್ತಮ ಸಂಬಂಧವನ್ನು ಏರ್ಪಡಿಸುತ್ತದೆ. ಆದರೆ, ಈ ಮಂತ್ರಗಳು ಶುಭ ಮತ್ತು ಅಶುಭ ಎರಡೂ ಪರಿಣಾಮಗಳನ್ನು ಉಂಟುಮಾಡಬಲ್ಲವು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ.

ಗುರೂಜಿಯವರು ಹೇಳುವಂತೆ, ಮಂತ್ರಗಳನ್ನು ಯಾವುದೇ ಸಮಯದಲ್ಲಿ ಅಥವಾ ಎಲ್ಲಿ ಬೇಕಾದರೂ ಪಠಿಸಬಾರದು. ಅವುಗಳ ಜಪಕ್ಕೆ ಸೂಕ್ತವಾದ ಕಾಲವಿದೆ. ಬ್ರಾಹ್ಮೀ ಮುಹೂರ್ತ, ಅಭಿಜಿನ್ ಮುಹೂರ್ತ ಮತ್ತು ಸಂಧ್ಯಾಕಾಲದಲ್ಲಿ ಬರುವ ಗೋದೋಳಿ ಮುಹೂರ್ತದಂತಹ ಮಂಗಳಕರ ಸಮಯಗಳಲ್ಲಿ ಮಂತ್ರಗಳನ್ನು ಪಠಿಸುವುದು ಅತ್ಯಂತ ಶುಭಕರ ಎಂದು ಹೇಳಲಾಗುತ್ತದೆ. ಸರಿಯಾದ ಸಮಯದಲ್ಲಿ ಮತ್ತು ಸದುದ್ದೇಶದಿಂದ ಪಠಿಸಿದಾಗ ಮಂತ್ರಗಳು ಹೆಚ್ಚಿನ ಶಕ್ತಿಯನ್ನು ನೀಡುತ್ತವೆ. ಉದಾಹರಣೆಗೆ, ವಿದ್ಯಾರ್ಥಿಗೆ ನಂಬಿಕೆಯ ಮಂತ್ರ ಉತ್ತಮ ಫಲಿತಾಂಶಗಳನ್ನು ನೀಡಿದರೆ, ರೈತರಿಗೆ ಸಮೃದ್ಧ ಬೆಳೆಗಳನ್ನು ತರುತ್ತದೆ. ಉದ್ಯೋಗಸ್ಥರಿಗೆ, ಇದು ವೃತ್ತಿ ಪ್ರಗತಿಗೆ ಸಹಕಾರಿಯಾಗಿದೆ.

ಆದರೆ, ಮಂತ್ರಗಳ ದುರುಪಯೋಗವು ಅಶುಭ ಫಲಿತಾಂಶಗಳಿಗೆ ಕಾರಣವಾಗಬಹುದು. ವಿಶೇಷವಾಗಿ, ತಾಂತ್ರಿಕ ಮಂತ್ರಗಳನ್ನು ಬೇರೆಯವರಿಗೆ ಕೆಟ್ಟದನ್ನು ಬಯಸಲು ಅಥವಾ ನಾಶ ಮಾಡಲು ಬಳಸಿದಾಗ, ಅವು ಜಪಿಸುವ ವ್ಯಕ್ತಿಗೇ ತೊಂದರೆಯನ್ನುಂಟುಮಾಡಬಹುದು. ಸರಿಯಾದ ಗುರುಗಳ ಮಾರ್ಗದರ್ಶನವಿಲ್ಲದೆ ಕೇವಲ ಪುಸ್ತಕಗಳನ್ನು ಓದಿ ಇಂತಹ ಮಂತ್ರಗಳನ್ನು ಪ್ರಯೋಗಿಸಲು ಪ್ರಯತ್ನಿಸಿದರೆ, ಅವು ದೇಹವನ್ನು ಆಕ್ರಮಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಅನೇಕರು ಇಂತಹ ಮಾರ್ಗದರ್ಶನವಿಲ್ಲದ ಪ್ರಯೋಗಗಳಿಂದ ತಮ್ಮನ್ನೇ ನಾಶಪಡಿಸಿಕೊಂಡಿರುವ ಉದಾಹರಣೆಗಳಿವೆ. ಸಣ್ಣ ಮಂತ್ರವಾಗಲಿ, ದೊಡ್ಡ ಮಂತ್ರವಾಗಲಿ, ಅದನ್ನು ಸದುದ್ದೇಶದಿಂದ ಮತ್ತು ಸೂಕ್ತ ಕಾಲದಲ್ಲಿ ಪಠಿಸಿದರೆ ಅದು ಸಕಾರಾತ್ಮಕ ಶಕ್ತಿಯನ್ನು ನೀಡುತ್ತದೆ. ತಾಂತ್ರಿಕ ಮಂತ್ರಗಳನ್ನು ನೇರವಾಗಿ ಮುಟ್ಟಿ ಜಪಿಸುವುದು ಅಪಾಯಕಾರಿ.

ಇದನ್ನೂ ಓದಿ: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಗೆ ಡಬಲ್ ಧಮಾಕ!

ಮಂತ್ರದ ಪರಿಣಾಮಕಾರಿತ್ವದಲ್ಲಿ ಅದರ ಉಚ್ಚಾರಣೆ ಮತ್ತು ಧ್ವನಿ ಕೂಡಾ ಮುಖ್ಯ ಪಾತ್ರ ವಹಿಸುತ್ತವೆ. ಓಂಕಾರವು ಇಡೀ ಬ್ರಹ್ಮಾಂಡದ ಮೂಲ ಮಂತ್ರವಾಗಿದೆ. ಗಾಯತ್ರೀ ಮಂತ್ರ, ಮೃತ್ಯುಂಜಯ ಮಂತ್ರ, ವಿಷ್ಣು ಸ್ತೋತ್ರಗಳಂತಹ ಮಂತ್ರಗಳು ಧನಾತ್ಮಕ ಶಕ್ತಿಯನ್ನು ನೀಡಿ ಶುಭವನ್ನು ಉಂಟುಮಾಡುತ್ತವೆ. ಸಂಪೂರ್ಣ ಫಲಕ್ಕಾಗಿ, ಮಂತ್ರಗಳನ್ನು ನಂಬಿಕೆಯಿಂದ ಮತ್ತು ಗುರುಗಳ ಮುಖೇನ ದೀಕ್ಷೆ ಪಡೆದು ಜಪಿಸಬೇಕು. ಇದು ಹೆಚ್ಚಿನ ಶಕ್ತಿಯನ್ನು ನೀಡಿ ಉತ್ತಮ ಸ್ಥಿತಿಗೆ ಕೊಂಡೊಯ್ಯುತ್ತದೆ.

ದೇವಸ್ಥಾನದಲ್ಲಿ, ನಿಮ್ಮ ದೇವರ ಕೋಣೆಯಲ್ಲಿ, ಅಥವಾ ವಿಶೇಷ ವೃಕ್ಷಗಳ ಕೆಳಗೆ, ಉತ್ತಮ ಸ್ಥಳಗಳಲ್ಲಿ ಏಕಾಂತವಾಗಿ ಕುಳಿತು ಮಂತ್ರಗಳನ್ನು ಜಪಿಸುವುದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಮಂತ್ರಗಳನ್ನು ಸದುದ್ದೇಶದಿಂದ, ಉತ್ತಮ ಮನಸ್ಸಿನಿಂದ ಮತ್ತು ಧನಾತ್ಮಕ ಚಿಂತನೆಯೊಂದಿಗೆ ಬಳಸಿದಾಗ ಅವು ಅಧಿಕ ಫಲಗಳನ್ನು ನೀಡುತ್ತವೆ. ಕೆಟ್ಟ ಉದ್ದೇಶಗಳಿಂದ, ಕೆಟ್ಟ ಮಂತ್ರಗಳನ್ನು ದುರ್ಬಳಕೆ ಮಾಡಲು ಪ್ರಯತ್ನಿಸಿದಾಗ, ಅದು ನ್ಯೂಟನ್‌ನ ಮೂರನೇ ನಿಯಮದಂತೆ, ಕ್ರಿಯೆಗೆ ಸಮಾನ ಮತ್ತು ವಿರುದ್ಧ ಪ್ರತಿಕ್ರಿಯೆ ಇದ್ದಂತೆ, ಪಠಿಸುವವರಿಗೇ ಹಾನಿ ಮಾಡಬಹುದು ಎಂದು ಗುರೂಜಿ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಂದ್ರಗ್ರಹಣ ಮೋಕ್ಷ ಬಳಿಕ ದೇಗುಲಗಳಲ್ಲಿ ಶುದ್ಧೀಕರಣ, ವಿಶೇಷ ಪೂಜೆ! – Kannada News | Karnataka Temples Reopen with Rituals After Rare Lunar Eclipse

ಬೆಂಗಳೂರು, ಮಾರ್ಚ್​ 04: ನಭೋಮಂಡಲದಲ್ಲಿ ಅಪರೂಪದ ಖಗೋಳ ಕೌತುಕವಾಗಿ ರಕ್ತ ಚಂದ್ರಗ್ರಹಣ (Lunar Eclipse) ನಿನ್ನೆ ಸ್ಪಷ್ಟವಾಗಿ ಗೋಚರಿಸಿದೆ. ಭೂಮಿಯ ನೆರಳು ಚಂದ್ರನ ಮೇಲೆ ಸಂಪೂರ್ಣವಾಗಿ ಆವರಿಸಿದ ಪರಿಣಾಮ, ಬೆಳ್ಳಗೆ ಹೊಳೆಯುತ್ತಿದ್ದ ಚಂದ್ರನು ತಾಮ್ರದ ಕೆಂಪು ಬಣ್ಣದಲ್ಲಿ ಕಂಗೊಳಿಸಿದ್ದ. ಮಧ್ಯಾಹ್ನ 3 ಗಂಟೆ 13 ನಿಮಿಷಕ್ಕೆ ಆರಂಭವಾದ ವರ್ಷದ ಮೊದಲ ಕೇತುಗ್ರಸ್ತ ಚಂದ್ರಗ್ರಹಣ ಸಂಜೆ 6 ಗಂಟೆ 47 ನಿಮಿಷಕ್ಕೆ ಮೋಕ್ಷವಾಯಿತು. ಭಾರತಕ್ಕಿಂತ ಹೆಚ್ಚಾಗಿ ಅಮೆರಿಕದ ಕ್ಯಾಲಿಫೋರ್ನಿಯಾ, ಲಾಸ್ ಏಂಜೆಲಸ್ ಹಾಗೂ ಮೆಕ್ಸಿಕೋ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬ್ಲಡ್ ಮೂನ್ ಸ್ಪಷ್ಟವಾಗಿ ಕಾಣಿಸಿಕೊಂಡಿತು.

ಗ್ರಹಣದ ಹಿನ್ನಲೆಯಲ್ಲಿ ರಾಜ್ಯದ ಅನೇಕ ದೇವಾಲಯಗಳು ತಾತ್ಕಾಲಿಕವಾಗಿ ಬಂದ್ ಆಗಿದ್ದವು. ಗ್ರಹಣ ಮೋಕ್ಷವಾಗುತ್ತಿದ್ದಂತೆ ದೇವಾಲಯಗಳಲ್ಲಿ ಶುದ್ಧೀಕರಣ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಿವೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಾಲಯದಲ್ಲಿ ಶುಚಿತ್ವ ಕಾರ್ಯ ನಡೆಸಿ ಮಹಾಪೂಜೆ ನೆರವೇರಿಸಲಾಯಿತು. ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಗಂಗಾಜಲ ಮತ್ತು ಗೋಮೂತ್ರದಿಂದ ಶುದ್ಧೀಕರಣ ಮಾಡಿ ಕ್ಷೀರಾಭಿಷೇಕ ಹಾಗೂ ಮಹಾಮಂಗಳಾರತಿ ನಡೆಯಿತು.

ಯಾವೆಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ?

ಕಲಬುರಗಿಯ ಶರಣ ಬಸವೇಶ್ವರ ದೇವಸ್ಥಾನದಲ್ಲೂ ಸ್ವಚ್ಛತಾ ಕಾರ್ಯದ ನಂತರ ಪೂಜಾ ವಿಧಿವಿಧಾನಗಳು ನಡೆದವು. ಶಿವಮೊಗ್ಗದ ಜೆಪಿಎನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ದೇಗುಲದಲ್ಲಿ ಗ್ರಹಣಮೋಕ್ಷದ ಬಳಿಕ ಅಭಿಷೇಕ ಮತ್ತು ಗ್ರಹಣ ಶಾಂತಿ ಹೋಮ ನೆರವೇರಿಸಲಾಯಿತು. ದಾವಣಗೆರೆಯ ದುರ್ಗಾಂಬಿಕಾ ದೇವಾಲಯದಲ್ಲಿ ವಿಶೇಷ ಅಲಂಕಾರ ಮತ್ತು ಪೂಜೆಗಳು ಜರುಗಿದವು.

ಮೈಸೂರಿನ ದೇವರಾಜ ಮೊಹಲ್ಲಾದ ಅಮೃತೇಶ್ವರ ದೇವಾಲಯದಲ್ಲಿ ಶುದ್ಧೀಕರಣ ಮಾಡಿ ಗ್ರಹಣದೋಷ ಹೋಮ ನಡೆಸಲಾಯಿತು. ಹಾಸನದ ಪ್ರಸನ್ನ ಗಣಪತಿ ದೇವಾಲಯದಲ್ಲಿ ನವಗ್ರಹ ಶಾಂತಿ ಹಾಗೂ ಜಪತಪ ಹೋಮಗಳು ನೆರವೇರಿದವು. ಕೊಪ್ಪಳದ ಹುಲಿಗೆಮ್ಮ ದೇವಾಲಯದಲ್ಲೂ ವಿಶೇಷ ಅಲಂಕಾರ ಮತ್ತು ಪೂಜಾ ಕೈಂಕರ್ಯಗಳು ನಡೆದವು.

ಇದನ್ನೂ ಓದಿ Mahakali Temple: ಗ್ರಹಣ ಕಾಲದಲ್ಲಿ ಬೆಂಗಳೂರಿನ ಈ ಕಾಳಿ ದೇವಾಲಯದಲ್ಲಿ ನಡೆಯುತ್ತೆ ವಿಶೇಷ ಪೂಜೆ

ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಗ್ರಹಣದ ವೇಳೆ ಯಜ್ಞಕಾರ್ಯಗಳು ನೆರವೇರಿದ್ದು, ಮೋಕ್ಷದ ಬಳಿಕ ಶಿವಲಿಂಗಕ್ಕೆ ವಿಶೇಷ ಅಭಿಷೇಕ ಮಾಡಲಾಯಿತು. ಗುಟ್ಟಹಳ್ಳಿಯ ಬಂಡೆ ಮಹಾಂಕಾಳಿ ದೇವಾಲಯದಲ್ಲಿ ಚಂದ್ರ ಹಾಗೂ ಕೇತು ಶಾಂತಿ ಹೋಮ, ಪೂರ್ಣಾಹುತಿ ಮತ್ತು ಕಳಸಾಭಿಷೇಕ ನೆರವೇರಿಸಲಾಯಿತು. ಸಾವಿರಾರು ಭಕ್ತರು ದರ್ಶನ ಪಡೆದರು. ಒಟ್ಟಾರೆ, ಗ್ರಹಣದ ನಂತರ ಎಲ್ಲಾ ಪ್ರಮುಖ ದೇವಾಲಯಗಳು ಪುನಃ ಭಕ್ತರಿಗೆ ತೆರೆಯಲ್ಪಟ್ಟಿದ್ದು, ಬೆಳಗ್ಗಿನಿಂದಲೇ ಶುದ್ಧೀಕರಣ ಮತ್ತು ಪೂಜಾ ಕಾರ್ಯಗಳು ಭಕ್ತಿಭಾವದಿಂದ ನಡೆಯುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ – Kannada News | Drone Strike Reportedly Targets US Consulate in Dubai, Blast Captured on Video

ದುಬೈ, ಮಾರ್ಚ್​ 04: ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್‌ನ ಡ್ರೋನ್ ದಾಳಿ ನಡೆಸಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟೆಹ್ರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಪ್ರದೇಶದಾದ್ಯಂತದ ಇತರ ಇಸ್ರೇಲಿ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ. ಅದಕ್ಕೂ ಮುನ್ನ ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು, ಅದಾದ ಬಳಿಕ ಸಂಘರ್ಷ ಮತ್ತಷ್ಟು ಹೆಚ್ಚಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಘಟನೆಯನ್ನು ದೃಢಪಡಿಸಿದರು. ಮಂಗಳವಾರ ಬೆಳಗಿನ ಜಾವ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್‌ಗಳು ಡಿಕ್ಕಿ ಹೊಡೆದಿದ್ದು, ಸಣ್ಣ ಪ್ರಮಾಣದ ಬೆಂಕಿ ಹೊತ್ತಿಕೊಂಡಿತ್ತು. ಸೋಮವಾರ ಕುವೈತ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಕಟ್ಟಡದಿಂದ ಹೊಗೆ ಕಂಡುಬಂದಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿದ ಲಕ್ಷ್ಯ ಸೇನ್ – Kannada News | All England Open: Lakshya Sen stuns top seed Shi Yu Qi

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಆಲ್ ಇಂಗ್ಲೆಂಡ್ ಓಪನ್ 2026 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಲಕ್ಷ್ಯ ಸೇನ್ ಅಮೋಘ ಪ್ರದರ್ಶನ ನೀಡಿದ್ದಾರೆ. ಮೊದಲ ಸುತ್ತಿನಲ್ಲೇ ವಿಶ್ವದ ನಂ.1 ಆಟಗಾರ ಮತ್ತು ಹಾಲಿ ಚಾಂಪಿಯನ್ ಚೀನಾದ ಶಿ ಯು ಕಿ ಅವರನ್ನು ಸೋಲಿಸಿ ದೊಡ್ಡ ಸಂಚಲನ ಮೂಡಿಸಿದ್ದಾರೆ.

ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದ ಮೊದಲ ಸೆಟ್​ ಅನ್ನು 23–21 ಅಂತರದಿಂದ ಗೆದ್ದುಕೊಂಡಿದ್ದರು. ಇದಾಗ್ಯೂ ದ್ವಿತೀಯ ಸೆಟ್​ನಲ್ಲಿ ಕಂಬ್ಯಾಕ್ ಮಾಡಿದ ಶಿ ಯು ಕಿ 19–21 ಅಂತರದಿಂದ ಗೆಲ್ಲುವಲ್ಲಿ ಯಶಸ್ವಿಯಾದರು.

ಇನ್ನು ನಿರ್ಣಾಯಕವಾಗಿದ್ದ ಮೂರನೇ ಸೆಟ್​ನಲ್ಲಿ ಮತ್ತೊಮ್ಮೆ ಲಯಕ್ಕೆ ಮರಳಿದ ಲಕ್ಷ್ಯ ಸೇನ್ 21–17 ಅಂತರದಿಂದ ಶಿ ಯು ಕಿಗೆ ಸೋಲುಣಿಸಿದರು. ಈ ಮೂಲಕ 78 ನಿಮಿಷಗಳ ಕಾಲ ನಡೆದ ಈ ಪಂದ್ಯವನ್ನು ಭಾರತೀಯ ತಾರೆ  23–21, 19–21, 21–17 ಸೆಟ್‌ಗಳಿಂದ ಗೆದ್ದುಕೊಂಡರು.

ವಿಶೇಷ ಎಂದರೆ ಬಿಡಬ್ಲ್ಯೂಎಫ್ (BWF) ವರ್ಲ್ಡ್ ಟೂರ್‌ನಲ್ಲಿ ವಿಶ್ವದ ನಂ.1 ಆಟಗಾರನ ವಿರುದ್ಧ ಲಕ್ಷ್ಯ ಸೇನ್ ಸಾಧಿಸಿದ ಮೊದಲ ವೈಯಕ್ತಿಕ ಜಯ ಇದಾಗಿದೆ. ಈ ಗೆಲುವಿನೊಂದಿಗೆ ಲಕ್ಷ್ಯ ಸೇನ್ ಪ್ರೀ-ಕ್ವಾರ್ಟರ್ ಫೈನಲ್ (ರೌಂಡ್ ಆಫ್ 16) ಪ್ರವೇಶಿಸಿದ್ದಾರೆ.

ಮಾರ್ಚ್ 5 ರಂದು ನಡೆಯಲಿರುವ ಮುಂದಿನ ಪಂದ್ಯದಲ್ಲಿ ಅವರು ಹಾಂಗ್ ಕಾಂಗ್‌ನ ಎನ್ಜಿ ಕಾ ಲಾಂಗ್ ಆಂಗಸ್ ಅವರನ್ನು ಎದುರಿಸಲಿದ್ದಾರೆ.

Source link