All posts by nagaraj11081993

ಬೆಂಗಳೂರಿನ ಸೆಖೆಗೆ ಬೆದರಿ ಕೆಫೆ ಸೇರುತ್ತಿದ್ದಾರೆ ಟೆಕ್ಕಿಗಳು! ದಿನಕ್ಕೆ 800 ರೂ. ಖರ್ಚು ಮಾಡಿದ್ರೂ ಎಸಿ ಅಂದ್ರೆ ಪ್ರಾಣ! – Kannada News | Viral Post Highlights the High Cost of ‘Work From Cafe’ in Sweltering Bengaluru

ಬೆಂಗಳೂರು, ಮೇ,12: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷ ಬಿಸಿಲಿನ ತಾಪ ದಾಖಲೆ ಮಟ್ಟದಲ್ಲಿದೆ. ಮನೆಯಲ್ಲಿ ಕುಳಿತು ಕೆಲಸ ಮಾಡುವ ಉದ್ಯೋಗಿಗಳಿಗೆ ಸೆಖೆ ತಾಳಲಾರದೆ ಈಗ ಹೊಸ ಟ್ರೆಂಡ್ ಶುರುವಾಗಿದೆ. ಅದೇ ‘ವರ್ಕ್ ಫ್ರಮ್ ಕೆಫೆ’ (Work From Cafe). ಇತ್ತೀಚೆಗೆ ಬೆಂಗಳೂರಿನ ಯುವತಿಯೊಬ್ಬಳು ಹಂಚಿಕೊಂಡಿರುವ ಕೆಫೆ ಖರ್ಚಿನ ವಿವರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಯುವತಿ, ತಾನು ಮನೆಯಲ್ಲಿ ಸೆಖೆ ತಡೆಯಲಾಗದೆ ಕೆಫೆಗೆ ಹೋಗಿ ಕೆಲಸ ಮಾಡಿದ್ದಾಗಿ ತಿಳಿಸಿದ್ದಾಳೆ.ಈ ರೀತಿಯಲ್ಲಿ ಮಾಡಿದ ಕಾರಣ ಒಂದು ದಿನದ ತಿಂಡಿ, ಊಟ ಮತ್ತು ಕಾಫಿಗೆ ಸುಮಾರು 800 ರೂಪಾಯಿ ಖರ್ಚಾಗಿದೆ. ಇಷ್ಟೊಂದು ಹಣ ಖರ್ಚಾದರೂ ಆಕೆಗೆ ಬೇಸರವಿಲ್ಲ. ಯಾಕೆಂದರೆ, ದಿನವಿಡೀ ಸಿಗುವ ಹವಾನಿಯಂತ್ರಿತ (AC) ವ್ಯವಸ್ಥೆಯೇ ಅತಿದೊಡ್ಡ ಸಮಾಧಾನ ಎಂದು ಆಕೆ ಹೇಳಿಕೊಂಡಿದ್ದಾಳೆ. ಬೆಂಗಳೂರಿನ ಹರ್ಲೀನ್ ಕೆಫೆಯಲ್ಲಿ ಪ್ರತಿದಿನ ಈ ಕೆಲಸ ಮಾಡುತ್ತೇನೆ. ಬೆಳಿಗ್ಗೆ ತಿಂಡಿ, ಊಟ, ಕಾಫಿ ಎಲ್ಲವೂ ಸೇರಿ 700 ರೂ ಆಗುತ್ತದೆ. ದಿನದ ಕೊನೆಯಲ್ಲಿ 800 ರೂ. ಖರ್ಚಾಗುತ್ತದೆ ಎಂದು ಹೇಳಿದ್ದಾಳೆ.

ಇಲ್ಲಿದೆ ನೋಡಿ ವಿಡಿಯೋ:

ಈ ಪೋಸ್ಟ್​​ನಲ್ಲಿ ಯಾವುದೇ ಕಾರಣಕ್ಕೂ ಕೆಲಸ ನಿಲ್ಲಬಾರದು ಎಂದು ಬರೆದುಕೊಂಡಿದ್ದಾಳೆ. ಇನ್ನು ಈ ವಿಡಿಯೋದಲ್ಲಿ ಆಕೆ, ಕೆಲಸ ಮಾಡುವುದನ್ನು ಕಾಫಿ ಮತ್ತು ಆಹಾರವನ್ನು ಆರ್ಡರ್ ಮಾಡುವಾಗ ಮತ್ತು ಹಗಲಿನಲ್ಲಿ ಸಣ್ಣ ವಿರಾಮಗಳನ್ನು ತೆಗೆದುಕೊಳ್ಳುವಾಗ ಶಾಂತವಾದ ಕೆಫೆ ವಾತಾವರಣವನ್ನು ಆನಂದಿಸುವುದನ್ನು ತೋರಿಸಲಾಗಿದೆ. ಈ ವಿಡಿಯೋ ಬೆಂಗಳೂರಿನ ಅನೇಕ ಕೆಲಸ ಮಾಡುವ ವೃತ್ತಿಪರರನ್ನು, ವಿಶೇಷವಾಗಿ ವರ್ಕ್​​ ಫ್ರಮ್​​ ಹೋಂ ಮಾಡುವವರಿಗೆ ಇದೊಂದು ಪರ್ಯಯ ವ್ಯವಸ್ಥೆಯಾಗಿತ್ತು. ಇದು ಕೆಲವರಿಗೆ ಪರಿಸರದ ಬದಲಾವಣೆ, ಉತ್ತಮ ಗಮನ ಮತ್ತು ಸೌಕರ್ಯವನ್ನು ನೀಡುತ್ತವೆ. ಇನ್ನು ಕೆಲವರಿಗೆ, ಪ್ರತಿದಿನ ಕೆಫೆಯಿಂದ ಕೆಲಸ ಮಾಡುವ ವೆಚ್ಚವು ಕಳವಳಕಾರಿಯಾಗಿಯೇ ಉಳಿದಿದೆ.

ಇದನ್ನೂ ಓದಿ: ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ: ಕರಾವಳಿ ಜನರೇ ಎಚ್ಚರ

ಈ ಪೋಸ್ಟ್ ನೋಡಿದ ಹಲವು ಬೆಂಗಳೂರಿಗರು ತಮಗೂ ಇದೇ ಪರಿಸ್ಥಿತಿ ಎದುರಾಗಿದೆ ಎಂದು ಕಮೆಂಟ್ ಮಾಡಿದ್ದಾರೆ. “ಮನೆಯಲ್ಲಿ ಎಸಿ ಹಾಕಿದರೆ ಕರೆಂಟ್ ಬಿಲ್ ಜಾಸ್ತಿ ಬರುತ್ತದೆ, ಅದಕ್ಕಿಂತ ಕೆಫೆ ಉತ್ತಮ” ಎಂದು ಕೆಲವರು ಹೇಳಿದರೆ, “ದಿನಕ್ಕೆ 800 ರೂಪಾಯಿ ಅಂದರೆ ತಿಂಗಳಿಗೆ ದೊಡ್ಡ ಮೊತ್ತವಾಗುತ್ತದೆ, ಇದು ಸಾಮಾನ್ಯರಿಗಲ್ಲ” ಎಂದು ಇನ್ನು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಾರೆಯಾಗಿ, ಬೆಂಗಳೂರಿನ ಉದ್ಯೋಗಿಗಳಿಗೆ ಈಗ ‘ಹಸಿವಿಗಿಂತ ಎಸಿ’ ಮುಖ್ಯ ಎನ್ನುವಂತಾಗಿದೆ!

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತ್ರಿಶಾ ನಟನೆಯ ‘ಕರುಪ್ಪು’ ಸಿನಿಮಾಗೆ ವಿಶೇಷ ಅನುಮತಿ ನೀಡಿದ ಸಿಎಂ ವಿಜಯ್ – Kannada News | Tamil Nadu CM Vijay grants special permission for Suriya Trisha starrer Karuppu 9 AM shows

ಕಾಲಿವುಡ್‌ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಕರುಪ್ಪು’ (Karuppu) ಸಿನಿಮಾ ಮೇ 14ರಂದು ತೆರೆಗೆ ಬರಲು ಸಜ್ಜಾಗಿದೆ. ಈ ಸಿನಿಮಾದಲ್ಲಿ ಸೂರ್ಯ ಮತ್ತು ತ್ರಿಶಾ ಕೃಷ್ಣನ್ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ. ಚಿತ್ರದ ಬಿಡುಗಡೆ ಸಮಯದಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (Tamil Nadu CM Vijay) ಅವರು ಚಿತ್ರತಂಡಕ್ಕೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಮೊದಲ ಪ್ರದರ್ಶನ ಮಾಡಲು ವಿಜಯ್ ಅವರು ಅನುಮತಿ ನೀಡಿದ್ದಾರೆ. ವಿಜಯ್ ಜೊತೆ ತ್ರಿಶಾ (Trisha) ಅವರು ಆಪ್ತತೆ ಹೊಂದಿದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ.

ಸಾಮಾನ್ಯವಾಗಿ ತಮಿಳುನಾಡಿನಲ್ಲಿ ಮುಂಜಾನೆಯ ಪ್ರದರ್ಶನಗಳಿಗೆ ಕಟ್ಟುನಿಟ್ಟಿನ ನಿಯಮಗಳಿವೆ. ಆದರೆ, ಆರ್.ಜೆ. ಬಾಲಾಜಿ ನಿರ್ದೇಶನದ ‘ಕರುಪ್ಪು’ ಚಿತ್ರದ ಕ್ರೇಜ್ ಪರಿಗಣಿಸಿ, ಮುಖ್ಯಮಂತ್ರಿ ವಿಜಯ್ ಅವರು ಮೇ 14ರಿಂದ ಬೆಳಿಗ್ಗೆ 9 ಗಂಟೆಗೆ ವಿಶೇಷ ಪ್ರದರ್ಶನಗಳನ್ನು ನಡೆಸಲು ಅನುಮತಿ ನೀಡಿದ್ದಾರೆ. ಇದರಿಂದ ಸೂರ್ಯ ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ.

ಚಿತ್ರದ ನಿರ್ಮಾಣ ಸಂಸ್ಥೆಯಾದ ‘ಡ್ರೀಮ್ ವಾರಿಯರ್ ಪಿಕ್ಚರ್ಸ್’ ಈ ಕುರಿತು ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಸಿಎಂ ವಿಜಯ್ ಅವರು ಕಡತಕ್ಕೆ ಸಹಿ ಹಾಕುತ್ತಿರುವ ಫೋಟೋವನ್ನು ಹಂಚಿಕೊಂಡಿರುವ ನಿರ್ಮಾಪಕರು, ‘ನಮ್ಮ ಗೌರವಾನ್ವಿತ ಮುಖ್ಯಮಂತ್ರಿಗಳಾದ ತಿರು ಜೋಸೆಫ್ ವಿಜಯ್ ಅವರಿಗೆ ಧನ್ಯವಾದಗಳು. ನಿಮ್ಮ ವಿಶೇಷ ಅನುಮತಿಯಿಂದ ಮೇ 14ರಿಂದ ಬೆಳಿಗ್ಗೆ 9 ಗಂಟೆಗೆ ಮೊದಲ ಪ್ರದರ್ಶನ ಆರಂಭವಾಗಲಿದೆ’ ಎಂದು ಬರೆದುಕೊಂಡಿದ್ದಾರೆ.

ಕಳೆದ ವಾರವಷ್ಟೇ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷ ಭರ್ಜರಿ ಜಯ ದಾಖಲಿಸಿದಾಗ, ನಟ ಸೂರ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸಿದ್ದರು. ‘ತಮಿಳುನಾಡು ಜನರು ನನ್ನ ಗೆಳೆಯ ವಿಜಯ್ ಮೇಲೆ ಅಪಾರ ನಂಬಿಕೆ ಇಟ್ಟಿದ್ದಾರೆ. ಅವರ ರಾಜಕೀಯ ಜೀವನ ಯಶಸ್ವಿಯಾಗಲಿ’ ಎಂದು ಸೂರ್ಯ ಹಾರೈಸಿದ್ದರು. ಇದೀಗ ವಿಜಯ್ ಅವರು ಸಿಎಂ ಆದ ನಂತರ ಸೂರ್ಯ ಅವರ ಚಿತ್ರಕ್ಕೆ ಬೆಂಬಲ ಸೂಚಿಸಿರುವುದು ಇಬ್ಬರ ನಡುವಿನ ಆತ್ಮೀಯತೆಯನ್ನು ಎತ್ತಿ ತೋರಿಸಿದೆ.

ಇದನ್ನೂ ಓದಿ: ವಿಜಯ್ ಪ್ರಮಾಣವಚನ ನೋಡಲು ಬರಲಿಲ್ಲ ಪತ್ನಿ, ಮಕ್ಕಳು; ಮಿಂಚಿದ್ದು ಮಾತ್ರ ತ್ರಿಶಾ

‘ಕರುಪ್ಪು’ ಚಿತ್ರವನ್ನು ಎಸ್.ಆರ್. ಪ್ರಭು ಮತ್ತು ಎಸ್.ಆರ್. ಪ್ರಕಾಶ್ ಬಾಬು ನಿರ್ಮಿಸಿದ್ದು, ಸೂರ್ಯ ಅವರು ಭಿನ್ನವಾದ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದ್ದರಿಂದ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇದೆ. ಈ ಚಿತ್ರದ ಮೂಲಕ ತ್ರಿಶಾ ಮತ್ತು ಸೂರ್ಯ ದೀರ್ಘಕಾಲದ ನಂತರ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಾಸನ: ಪ್ರಧಾನಿ ಮೋದಿ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ – Kannada News | Hassan: PM Modi to Inaugurate Mega Dairy; HD Deve Gowda

ಹಾಸನ, ಮೇ 12: ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಹಾಲು ಮಹಾಮಂಡಳ (KMF) ವತಿಯಿಂದ 830 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಡೇರಿ ಕಾಮಗಾರಿ ಅಂತಿಮ ಹಂತ ತಲುಪಿದೆ. ಮಾಜಿ ಪ್ರಧಾನಿ, JDS ವರಿಷ್ಠ ಹೆಚ್.ಡಿ. ದೇವೇಗೌಡ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರೊಂದಿಗೆ ಮಂಗಳವಾರ ಡೇರಿ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್​ಡಿ. ದೇವೇಗೌಡ, ಜುಲೈ ಮೊದಲ ಅಥವಾ 2ನೇ ವಾರದಲ್ಲಿ ಮೆಗಾ ಡೇರಿ ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡುತ್ತಾರೆ. ಪ್ರಧಾನಿ ಮೋದಿ ಉದ್ಘಾಟನೆ ಮಾಡುವ ಈ ಮೆಗಾ ಡೇರಿ ದೇಶಕ್ಕೆ ಮಾದರಿ ಆಗಬೇಕು ಎಂದರು. ಮೆಗಾ ಡೇರಿ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ನೀಡಿಲ್ಲ. ಕೇಂದ್ರ ಸರ್ಕಾರ ಸುಮಾರು 280 ಕೋಟಿ ರೂ. ಅನುದಾನ ಕೊಟ್ಟಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ದೇವಸ್ಥಾನದ ಗೋಡೆ ಕುಸಿದು 6 ಜನ ಸಾವು, 14 ಮಂದಿಗೆ ಗಾಯ – Kannada News | 6 people killed 14 injured after Temple Wall Collapses in Maharashtra’s Sangli

ಸಾಂಗ್ಲಿ, ಮೇ 12: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇಂದು ಸಂಜೆ ಬಿರುಗಾಳಿಯಿಂದಾಗಿ ದೇವಸ್ಥಾನದ ಆವರಣದ ಗೋಡೆ ಕುಸಿದು 6 ಜನರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಾಂಗ್ಲಿ ಜಿಲ್ಲೆಯ ಜಾಟ್ ತಾಲ್ಲೂಕಿನ ಮೋಟೆವಾಡಿ ಗ್ರಾಮದಲ್ಲಿರುವ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಮಾರ್ಗುಬಾಯಿ ದೇವಿ ಯಾತ್ರೆಯ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಹಲವಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಆಗಲೇ ಈ ದುರಂತ ಸಂಭವಿಸಿದೆ.

ಇದ್ದಕ್ಕಿದ್ದಂತೆ ಶುರುವಾದ ಬಿರುಗಾಳಿ ಮತ್ತು ಮಳೆಯಿಂದ ಗೋಡೆ ಕುಸಿದಿದೆ. ಆಗ ಭಕ್ತರು ದೇವಸ್ಥಾನದ ಆವರಣದಲ್ಲಿದ್ದರು. ಭಕ್ತರು ಇದ್ದ ಸ್ಥಳದಲ್ಲಿಯೇ ಗೋಡೆ ಕುಸಿದು, ಹಲವರು ಅದರಡಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳು ಮತ್ತು ಸ್ಥಳೀಯರು ತಕ್ಷಣ ಅವರನ್ನು ರಕ್ಷಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದರು. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆಗ 6 ಜನರು ಗಾಯಗೊಂಡರು. ಅವರಲ್ಲಿ ಮೂವರು ಸ್ಥಳೀಯರು ಮತ್ತು ಉಳಿದ ಮೂವರು ಬಿಜಾಪುರ ತಾಲೂಕಿನವರು.

ಇದನ್ನೂ ಓದಿ: ಕಲ್ಲಂಗಡಿ ಹಣ್ಣಿಗೆ ಮತ್ತೊಂದು ಬಲಿ: ಛತ್ತೀಸ್‌ಗಢದಲ್ಲಿ 15 ವರ್ಷದ ಬಾಲಕ ಸಾವು; ಮೂವರು ಮಕ್ಕಳ ಸ್ಥಿತಿ ಗಂಭೀರ!

ಕನಿಷ್ಠ 14 ಜನರು ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಹೇಗೆ ಸಂಭವಿಸಿದೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಮಂಗಳವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಸಾಮಾನ್ಯವಾಗಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ದೇವಾಲಯದ ಆವರಣದಲ್ಲಿ ಸುಮಾರು 350 ಭಕ್ತರು ಇದ್ದರು. ಈ ವೇಳೆ ಬಲವಾದ ಗಾಳಿ ಮತ್ತು ಭಾರೀ ಮಳೆಯಾಯಿತು. ಮಳೆಯಿಂದ ಭಕ್ತರು ಗೋಡೆಯ ಬಳಿ ನಿಂತರು. ಆಗ ಗೋಡೆ ಇದ್ದಕ್ಕಿದ್ದಂತೆ ಕುಸಿದು ಹಲವಾರು ಭಕ್ತರು ಅದರಡಿ ಸಿಲುಕಿಕೊಂಡರು” ಎಂದು ಸಾಂಗ್ಲಿ ಎಸ್​ಪಿ ತುಷಾರ್ ದೋಷಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:28 pm, Tue, 12 May 26

Source link

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್ – Kannada News | Mandya Heatwave Impact: Water Level Drops in KRS Dam

ಮಂಡ್ಯ, ಮೇ 12: ರಾಜ್ಯದ ಹಲವೆಡೆ ಮಳೆಯ ಕೊರತೆಯ ನಡುವೆ ತೀವ್ರ ಬಿಸಿಲಿನ ಬೇಗೆಯಿಂದ ಜನ ತತ್ತರಿಸಿದ್ದಾರೆ. ಇದು ಜೀವಜಲದ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಈ ಜಲಾಶಯವು ಒಟ್ಟು 49 TMC ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಆದರೆ, ಪ್ರಸ್ತುತ ಕೇವಲ 16 TMC ನೀರು ಮಾತ್ರ ಸಂಗ್ರಹವಾಗಿದೆ. ಇದರಲ್ಲಿ ಬಳಕೆಗೆ ಸಿಗುವುದು ಬರೀ 9 TMC ನೀರು ಮಾತ್ರ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಸರಿಯಾಗಿ ಆಗದಿದ್ದರೆ, ಕುಡಿಯುವ ನೀರಿಗೆ ದೊಡ್ಡ ಹಾಹಾಕಾರ ಶುರುವಾಗಲಿದೆ ಎಂಬ ಆತಂಕ ಎದುರಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಸಿದ್ದರಾಮಯ್ಯ ಸಹಕಾರ ನೆನೆದ ಕುಮಾರ್ ಬಂಗಾರಪ್ಪ – Kannada News | Kumar Bangarappa talks about CM Siddaramaiah in Sarkari Nyaya Bele Angadi press meet

ಖ್ಯಾತ ನಟ ಕುಮಾರ್ ಬಂಗಾರಪ್ಪ ಅವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ (Sarkari Nyaya Bele Angadi) ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಕುಮಾರ್ ಬಂಗಾರಪ್ಪ ಅವರು ಸಿದ್ದರಾಮಯ್ಯ (Siddaramaiah), ನರೇಂದ್ರ ಮೋದಿ ಮುಂತಾದವರಿಗೆ ಧನ್ಯವಾದ ತಿಳಿಸಿದರು. ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರಿಗಾಗಿ ಆಹಾರ ಭದ್ರತೆ ಕಾಯ್ಕೆ ಪ್ರಕಾರ ದಿನಸಿ ನೀಡುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಸಿನಿಮಾದ ಹಾಡನ್ನು ಬಹಳ ಖುಷಿಯಿಂದ ಬಿಡುಗಡೆ ಮಾಡಿದರು. ಈ ಸಿನಿಮಾದಲ್ಲಿ ಪ್ರತಿ ಪಾತ್ರವೂ ವಿಶೇಷವಾಗಿದೆ. ಆ ಎಲ್ಲ ಪಾತ್ರಗಳು ಸೇರಿ ಸಿನಿಮಾ ಆಗಿದೆ. ಇಡೀ ತಂಡ ಈ ಚಿತ್ರಕ್ಕಾಗಿ ಬಹಳ ಶ್ರಮಪಟ್ಟಿದೆ’ ಎಂದು ಕುಮಾರ್ ಬಂಗಾರಪ್ಪ (Kumar Bangarappa) ಅವರು ಹೇಳಿದರು. ಈ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ಕೂಡ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಒಂದು ವಾಟ್ಸಾಪ್ ಮೆಸೇಜಿನಿಂದ ರದ್ದಾಯ್ತು ಯುಜಿ ಪರೀಕ್ಷೆ – Kannada News | NEET UG 2026 paper leak; How a WhatsApp Group message led to exams cancellation in India

ನವದೆಹಲಿ, ಮೇ 12: 22 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಆಕಾಂಕ್ಷಿಗಳ ಕನಸು ಇಂದು ಛಿದ್ರವಾಗಿದೆ. NEET-UG 2026 ಪರೀಕ್ಷೆಯು ವ್ಯವಸ್ಥಿತ ವೈಫಲ್ಯದ ದುಃಸ್ವಪ್ನವಾಗಿ ಮಾರ್ಪಟ್ಟಿದೆ. ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯು (NEET) ಈಗ ಭಾರಿ ಹಗರಣವಾಗಿ ಬೆಳೆದಿದೆ. ತೀವ್ರ ಪ್ರತಿಭಟನೆಗಳ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರೀಕ್ಷೆಯನ್ನು ರದ್ದುಗೊಳಿಸಲಾಯಿತು. ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ತನ್ನ ತಂದೆಗೆ ಕಳುಹಿಸಿದ್ದ ವಾಟ್ಸಾಪ್ ಮೆಸೇಜಿನಿಂದಾಗಿಯೇ ಈ ಇಡೀ ಹಗರಣ ಬಯಲಾದಂತಾಗಿದೆ. ಅಷ್ಟಕ್ಕೂ ಆ ಮೆಸೇಜ್ ಏನು?

ದೇಶದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪ್ರಮಾಣವು ದಿಗ್ಭ್ರಮೆಗೊಳಿಸುವಂತಿದೆ. ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳಲ್ಲಿ ಕಂಡುಬರುವ ಖಾಸಗಿ ಮಾಫಿಯಾ ವಾಟ್ಸಾಪ್ ಗುಂಪಿನಿಂದಲೇ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿರುವ ಸಾಧ್ಯತೆಯ ಬಗ್ಗೆ ತನಿಖಾಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳನ್ನು ಅಪ್‌ಲೋಡ್ ಮಾಡಲೆಂದೇ ರಚಿಸಲಾದ ಈ ಗುಂಪಿನಲ್ಲಿ ಸುಮಾರು 400 ಸದಸ್ಯರು ಇದ್ದರು ಎಂದು ವರದಿಯಾಗಿದೆ. ಇದು ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯವನ್ನು ಅತಿ ಹೆಚ್ಚು ಬಿಡ್ ಮಾಡಿದವರಿಗೆ ಹರಾಜು ಹಾಕುವ ಡಿಜಿಟಲ್ ಮಾರುಕಟ್ಟೆಯಾಗಿ ಕಾರ್ಯನಿರ್ವಹಿಸಿತು. ಪೊಲೀಸ್ ತನಿಖೆಯು “ಖಾಸಗಿ ಮಾಫಿಯಾ” ಎಂಬ ವಾಟ್ಸಾಪ್ ಗುಂಪಿನ ಹೆಸರು ಮತ್ತು ಆರೋಪಿ ಮನೀಶ್ ಯಾದವ್ ಅವರ ಹೆಸರು ಬಹಿರಂಗಗೊಂಡಿದೆ.

ಇದನ್ನೂ ಓದಿ: NEET Exam 2026 Cancelled: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು!

ವಾಟ್ಸಾಪ್ ಗುಂಪಿನಿಂದ ಪ್ರಶ್ನೆ ಪತ್ರಿಕೆಯ ಸೋರಿಕೆ ಆಕಸ್ಮಿಕವಾಗಿ ಸಂಭವಿಸಿಲ್ಲ. ಇದು ಪ್ಲಾನ್ ಮಾಡಿಯೇ ನಡೆಸಲಾದ ಕೃತ್ಯವಾಗಿತ್ತು. ಮೂಲಗಳ ಪ್ರಕಾರ, ಈ ಪತ್ರಿಕೆಯು ನಾಸಿಕ್‌ನ ಮುದ್ರಣಾಲಯದಿಂದ ನೇರವಾಗಿ ಸೋರಿಕೆಯಾಗಿದೆ. ಪ್ರಶ್ನೆ ಪತ್ರಿಕೆಯ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಯೊಬ್ಬರಿಂದಲೇ ಈ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗುತ್ತಿದೆ. ಅದು ಎಲ್ಲೆಡೆ ಹರಡಿ ಸೋರಿಕೆಯಾಗಿದೆ.

ಆರಂಭದಲ್ಲಿ ಈ ಪ್ರಶ್ನೆಪತ್ರಿಕೆಯನ್ನು “ಊಹೆ ಪತ್ರಿಕೆ”ಯ ಸೋಗಿನಲ್ಲಿ ಪ್ರಸಾರ ಮಾಡಲಾಗಿತ್ತು. ಆದರೆ, ಸೋರಿಕೆಯಾದ ಸೆಟ್‌ನಲ್ಲಿರುವ 281 ಪ್ರಶ್ನೆಗಳಲ್ಲಿ, 90 ಜೀವಶಾಸ್ತ್ರದ ಪ್ರಶ್ನೆಗಳಲ್ಲಿ ಪ್ರತಿಯೊಂದೂ ನಿಜವಾದ ನೀಟ್ ಪರೀಕ್ಷೆಯಲ್ಲಿ ಬಂದಿತ್ತು. ಅಷ್ಟೇ ಅಲ್ಲ ಆ ಪ್ರಶ್ನೆಗಳಲ್ಲಿದ್ದ ಅನುಕ್ರಮ, ಅಲ್ಪವಿರಾಮಗಳು ಮತ್ತು ಪೂರ್ಣ ವಿರಾಮಗಳು ಸಹ ಒಂದೇ ರೀತಿಯಲ್ಲಿದ್ದವು.

ಇದನ್ನೂ ಓದಿ: NEET UG 2026: ನೀಟ್ ಯುಜಿ ಪರೀಕ್ಷಾ ದಿನದ ಡ್ರೆಸ್ ಕೋಡ್ ಮತ್ತು ಪ್ರಮುಖ ಮಾರ್ಗಸೂಚಿ ಪ್ರಕಟ!

ಸೋರಿಕೆಯಾದ ಈ ಪ್ರಶ್ನೆ ಪತ್ರಿಕೆಗಳ ಬೆಲೆ 30,000 ರೂ.ಗಳಿಂದ 28 ಲಕ್ಷ ರೂ.ಗಳವರೆಗೆ ಇತ್ತು. ದೆಹಲಿಯಿಂದ ಸುಳಿವು ಪಡೆದ ನಂತರ ನಾಗೌರ್‌ನ ಒಬ್ಬ ವಿದ್ಯಾರ್ಥಿ ಪರೀಕ್ಷೆಗೆ ಕೇವಲ 4 ದಿನಗಳ ಮೊದಲು 28 ಲಕ್ಷ ರೂ.ಗಳನ್ನು ಪಾವತಿಸಿದ್ದಾನೆ ಎಂದು ವರದಿಯಾಗಿದೆ. ಬಳಿಕ ಆ ಹುಡುಗ ಆ ಪತ್ರಿಕೆಯನ್ನು ಕೇರಳದ ಎಂಬಿಬಿಎಸ್ ವಿದ್ಯಾರ್ಥಿಗೆ ಮಾರಿದನು. ನಂತರ ಅವನು ಅದನ್ನು ಸಿಕಾರ್‌ನಲ್ಲಿರುವ ಪಿಜಿ ಹಾಸ್ಟೆಲ್ ನಿರ್ವಾಹಕನಾದ ತನ್ನ ತಂದೆಗೆ ಕಳುಹಿಸಿದನು.

ವಾಟ್ಸಾಪ್ ಮೆಸೇಜಿನಲ್ಲೇನಿತ್ತು?:

ಆ ವಿದ್ಯಾರ್ಥಿಯ ವಾಟ್ಸಾಪ್ ಮೆಸೇಜ್​ನಲ್ಲಿ ಸ್ಪಷ್ಟವಾಗಿ ಬರೆಯಲಾಗಿತ್ತು. “ಅಪ್ಪಾ, ಇದನ್ನು ನನ್ನ ಒಬ್ಬ ಸ್ನೇಹಿತ ಕಳುಹಿಸಿದ್ದಾನೆ. ಹಾಸ್ಟೆಲ್‌ನಲ್ಲಿರುವ ಹುಡುಗಿಯರಿಗೆ ಕೊಡಿ. ನಾಳೆಯ ಪರೀಕ್ಷೆಯಲ್ಲಿ ಇದೇ ಪ್ರಶ್ನೆ ಬರುತ್ತದೆ.” ಎಂದು ಸ್ಪಷ್ಟವಾಗಿ ಆ ಮೆಸೇಜಿನಲ್ಲಿ ತಿಳಿಸಲಾಗಿತ್ತು. ಹಾಸ್ಟೆಲ್ ನಿರ್ವಾಹಕರು ಇದನ್ನು ಎಲ್ಲೆಡೆ ಶೇರ್ ಮಾಡಿದ್ದರು. ಆದರೆ, ಪರೀಕ್ಷೆ ನಡೆದ ಬಳಿಕ ಅಲ್ಲಿ ನೀಡಿದ ಪ್ರಶ್ನೆ ಪತ್ರಿಕೆ ಹಾಗೂ ತಾವು ಶೇರ್ ಮಾಡಿದ್ದ ಪ್ರಶ್ನೆ ಪತ್ರಿಕೆ ಸಂಪೂರ್ಣವಾಗಿ ಒಂದೇ ರೀತಿಯಿತ್ತು ಎಂಬುದು ಗೊತ್ತಾದಾಗ ಅವರು ಆತಂಕಕ್ಕೊಳಗಾದರು. ತಾವು ಸಿಕ್ಕಿಬೀಳಬಹುದು ಎಂಬ ಭೀತಿಯಲ್ಲಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದರು. ಆರಂಭದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳು ಇದನ್ನು ವದಂತಿ ಎಂದು ತಳ್ಳಿಹಾಕಿದರೂ, ಎನ್‌ಟಿಎ ಮತ್ತು ಗುಪ್ತಚರ ಬ್ಯೂರೋ ಮಧ್ಯಪ್ರವೇಶಿಸಿ ತನಿಖೆ ನಡೆಸಿದಾಗ ಪ್ರಶ್ನೆ ಪತ್ರಿಕೆ ಸೋರಿಕೆಯ ಜಾಲ ಪತ್ತೆಯಾಯಿತು. ಬಳಿಕ ಇದನ್ನು ಸಿಬಿಐಗೆ ವಹಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು: 2.20 ಲಕ್ಷ ಕುಟುಂಬಗಳಿಗೆ ಸಿಕ್ಕಿತು ಅಧಿಕೃತ ಮನೆ ಹಕ್ಕು! – Kannada News | Hakku Patra Distribution: Addressing Land Ownership Gaps in Karnataka

ಬೆಂಗಳೂರು, ಮೇ.12: ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ದಶಕಗಳಿಂದಲೂ ದಾಖಲೆರಹಿತ ವಸತಿ ಪ್ರದೇಶಗಳಾಗಿರುವ ಹಾಡಿ, ಹಟ್ಟಿ, ತಾಂಡಾ ಮತ್ತು ಕ್ಯಾಂಪ್‌ಗಳಿಗೆ ಅಧಿಕೃತ ಮಾನ್ಯತೆ ನೀಡುವ ಕಾರ್ಯಕ್ರಮವನ್ನು ಆದ್ಯತೆಯಾಗಿ ಕೈಗೊಂಡಿದೆ. ಈ ಪ್ರದೇಶಗಳಲ್ಲಿ ವಾಸಿಸುವ ಜನರು ಭೂ ದಾಖಲೆಗಳಿಲ್ಲದೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆಶ್ರಯ ಯೋಜನೆ, ಬ್ಯಾಂಕ್ ಸಾಲ, ಇ-ಸ್ವತ್ತು, ಮತ್ತು ಆಸ್ತಿ ಪರಬಾರೆ ಮಾಡುವಂತಹ ಹಕ್ಕುಗಳನ್ನು ಹೊಂದಿಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರವು ಕಾನೂನು ತಿದ್ದುಪಡಿ ಮಾಡಿ ಆರು ವರ್ಷಗಳಲ್ಲಿ (2017-2023) 1.06 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಿತ್ತು. ಆದರೆ, ಪ್ರಸ್ತುತ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಇದನ್ನು ಒಂದು ಪ್ರಮುಖ ಯೋಜನೆಯಾಗಿ ಪರಿಗಣಿಸಿ, ಕೇವಲ ಎರಡುವರೆ ವರ್ಷಗಳಲ್ಲಿ 2.20 ಲಕ್ಷ ಮನೆಗಳಿಗೆ ಹಕ್ಕುಪತ್ರಗಳನ್ನು ವಿತರಿಸಿದೆ. ಕೇಂದ್ರ ಸರ್ಕಾರದ ಜನಗಣತಿ ನಿರ್ದೇಶನದಿಂದಾಗಿ ಹೊಸ ಕಂದಾಯ ಗ್ರಾಮ ಸೃಜನೆಗೆ ತಾತ್ಕಾಲಿಕ ನಿರ್ಬಂಧವಿರುವುದರಿಂದ ಇನ್ನೂ 2 ಲಕ್ಷ ಹಕ್ಕುಪತ್ರಗಳ ವಿತರಣೆ ವಿಳಂಬವಾಗಿದೆ. ಜನಗಣತಿ ಮುಗಿದ ನಂತರ ಈ ಕಾರ್ಯವನ್ನು ಪೂರ್ಣಗೊಳಿಸಲಾಗುವುದು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮತ್ತೆ ಸನಾತನ ಧರ್ಮದ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್ – Kannada News | Udhayanidhi Stalin repeats controversial Sanatan dharm must be abolished comment in Tamil Nadu Assembly

ಚೆನ್ನೈ, ಮೇ 12: ತಮಿಳುನಾಡಿನಲ್ಲಿ ಮತ್ತೊಮ್ಮೆ ಸನಾತನ ಧರ್ಮದ ಸುತ್ತಲಿನ ವಿವಾದ ಸೃಷ್ಟಿಯಾಗಿದೆ. ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಇಂದು ಸದನದಲ್ಲಿ ಮತ್ತೆ ‘ಸನಾತನ ಧರ್ಮದ ನಿರ್ಮೂಲನೆ’ಯನ್ನು ಪ್ರತಿಪಾದಿಸಿದ್ದಾರೆ. ಈ ವೇಳೆ ಸದನದಲ್ಲಿ ಹಾಜರಿದ್ದ ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Joseph Vijay) ಮೌನವಾಗಿದ್ದರು.

“ಜನರನ್ನು ಬೇರ್ಪಡಿಸುವ ಸನಾತನವನ್ನು ನಿರ್ಮೂಲನೆ ಮಾಡಬೇಕು” ಎಂದು ಸ್ಟಾಲಿನ್ ತಮಿಳುನಾಡು ಚುನಾವಣೆಯ ನಂತರ ವಿಧಾನಸಭಾ ಅಧಿವೇಶನದ ಮೊದಲ ದಿನದಂದು ಹೇಳಿದ್ದಾರೆ. ಅವರ ಈ ಹೇಳಿಕೆಗಳು ಸನಾತನ ಧರ್ಮದ ಬಗ್ಗೆ ಅವರ ಹಿಂದಿನ ಹೇಳಿಕೆಗಳನ್ನು ಪ್ರತಿಬಿಂಬಿಸುತ್ತವೆ. ಅದರಲ್ಲಿ ಅವರು ಪ್ರಾಚೀನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳ ಜೊತೆ ಹೋಲಿಸಿದ್ದರು. ಅಂತಹ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಜನರನ್ನು ಒತ್ತಾಯಿಸಿದ್ದರು. ಈ ಹೇಳಿಕೆಗಳ ಬಳಿಕ ಸ್ಟಾಲಿನ್‌ಗೆ ದೊಡ್ಡ ಕಾನೂನು ತೊಂದರೆ ಎದುರಾಗಿತ್ತು. ಅವರ ವಿರುದ್ಧ ಹಲವಾರು ನ್ಯಾಯಾಲಯ ಪ್ರಕರಣಗಳು ದಾಖಲಾಗಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಲ್ಮಾನ್ ಖಾನ್ ತಂಗಿಯ ರೆಸ್ಟೋರೆಂಟ್; 1 ಪ್ಲೇಟ್ ಪಾಸ್ತಾ ಬೆಲೆ 5 ಸಾವಿರ ರೂಪಾಯಿ – Kannada News | Salman Khan sister Arpita Khan luxury restaurant Mercii menu prices Mumbai

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ತಂಗಿ ಅರ್ಪಿತಾ ಖಾನ್ ಶರ್ಮಾ ಅವರು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಲ್ಲಿದ್ದಾರೆ. ಆದರೆ ಇದು ಯಾವುದೇ ಸಿನಿಮಾಗೆ ಸಂಬಂಧಿಸಿದ ಕಾರಣಕ್ಕಾಗಿ ಅಲ್ಲ. ಬದಲಿಗೆ, ಅವರು ಮುಂಬೈನಲ್ಲಿ ಆರಂಭಿಸಿರುವ ಐಷಾರಾಮಿ ರೆಸ್ಟೋರೆಂಟ್‌ನ ದರ ಪಟ್ಟಿಗಾಗಿ ಎಂಬುದು ವಿಶೇಷ. ಮುಂಬೈನ ಪ್ರತಿಷ್ಠಿತ ಸಾಂತಾಕ್ರೂಜ್ ಪ್ರದೇಶದಲ್ಲಿ ಅರ್ಪಿತಾ ಖಾನ್ (Arpita Khan) Mercii ಎಂಬ ಯುರೋಪಿಯನ್ ಶೈಲಿಯ ಫೈನ್-ಡೈನಿಂಗ್ ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಇದರಲ್ಲಿನ ಆಹಾರದ ಬೆಲೆಗಳನ್ನು ನೋಡಿ ಸಾಮಾನ್ಯ ಜನರು ದಂಗಾಗಿದ್ದಾರೆ.

ಇತ್ತೀಚೆಗೆ ಈ ರೆಸ್ಟೋರೆಂಟ್‌ನ ಮೆನು ಕಾರ್ಡ್‌ನ ಕೆಲವು ಸ್ಕ್ರೀನ್‌ಶಾಟ್‌ಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿವೆ. ಸಾಮಾನ್ಯವಾಗಿ ಒಂದು ಉತ್ತಮ ರೆಸ್ಟೋರೆಂಟ್‌ನಲ್ಲಿ ಸಿಗುವ ಪಾಸ್ತಾ ಬೆಲೆ ನೂರಾರು ರೂಪಾಯಿಗಳಲ್ಲಿರುತ್ತದೆ. ಆದರೆ ಅರ್ಪಿತಾ ಅವರ ರೆಸ್ಟೋರೆಂಟ್‌ನಲ್ಲಿ ಒಂದು ಪ್ಲೇಟ್ ಯುರೋಪಿಯನ್ ಪಾಸ್ತಾ ಬೆಲೆ ಸುಮಾರು 5 ಸಾವಿರ ರೂಪಾಯಿ ಎಂದು ವರದಿಯಾಗಿದೆ.

ಅಷ್ಟೇ ಅಲ್ಲದೆ, ಇಲ್ಲಿನ ಬಹುತೇಕ ಖಾದ್ಯಗಳ ಬೆಲೆ ಒಂದು ಸಾವಿರ ರೂಪಾಯಿಗಿಂತಲೂ ಹೆಚ್ಚಿದೆ. ಕೆಲವು ವಿಶೇಷ ಖಾದ್ಯಗಳ ಬೆಲೆ 10 ಸಾವಿರ ರೂಪಾಯಿಗೂ ಮೀರಿದ್ದು, ಇದು ಮುಂಬೈನಲ್ಲೇ ಅತ್ಯಂತ ದುಬಾರಿ ಸೆಲೆಬ್ರಿಟಿ ರೆಸ್ಟೋರೆಂಟ್‌ಗಳಲ್ಲಿ ಒಂದೆನಿಸಿದೆ. ಈ ದುಬಾರಿ ದರಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.

‘ಇದರಲ್ಲಿ ಅಂತಹ ವಿಶೇಷವೇನಿದೆ? ಬಂಗಾರದ ತಟ್ಟೆಯಲ್ಲಿ ನೀಡುತ್ತಾರೆಯೇ?’ ಎಂದು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇನ್ನು ಕೆಲವರು, ‘ಇದು ಕೇವಲ ಕೋಟ್ಯಧಿಪತಿಗಳು ಮತ್ತು ಸೆಲೆಬ್ರಿಟಿಗಳಿಗಾಗಿ ಮಾಡಿರುವ ರೆಸ್ಟೋರೆಂಟ್. ಇಲ್ಲಿ ಸಾಮಾನ್ಯ ಜನರು ಹೋಗಲು ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ರಾಜ್ ಬಿ. ಶೆಟ್ಟಿ ನಟನೆಯ ಹಿಂದಿ ಸಿನಿಮಾಗೆ ಸಿಕ್ತು ಸಲ್ಮಾನ್ ಖಾನ್ ಬೆಂಬಲ

ವರದಿಗಳ ಪ್ರಕಾರ ಅರ್ಪಿತಾ ಖಾನ್ ಅವರ ಒಟ್ಟು ಆಸ್ತಿ 166 ಕೋಟಿ ರೂಪಾಯಿಗಳಾಗಿದ್ದು, ಅವರ ಕುಟುಂಬದ ಒಟ್ಟು ಆಸ್ತಿ 257 ಕೋಟಿ ರೂಪಾಯಿಗಳಾಗಿದೆ. ಇದರಲ್ಲಿ ಅವರ ಪತಿ ಆಯುಷ್ ಶರ್ಮಾ ಅವರ ಪಾಲು ಕೇವಲ ಶೇ.35ರಷ್ಟು ಮಾತ್ರ ಎಂದು ಹೇಳಲಾಗಿದೆ. ಅರ್ಪಿತಾ ಖಾನ್ ಅವರು ಸಲೀಂ ಖಾನ್ ಅವರ ದತ್ತುಪುತ್ರಿ. ಆದರೂ ಇಡೀ ಖಾನ್ ಕುಟುಂಬಕ್ಕೆ ಅರ್ಪಿತಾ ಎಂದರೆ ಪಂಚಪ್ರಾಣ. ಅದರಲ್ಲೂ ಸಲ್ಮಾನ್ ಖಾನ್ ಅವರಿಗೆ ಅರ್ಪಿತಾ ಅತಿ ಪ್ರಿಯವಾದ ಸಹೋದರಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link