Headlines

nagaraj11081993

ಮಗು ಹುಟ್ಟುವ ಮುನ್ನವೇ ಶ್ರವಣ ಸಾಮರ್ಥ್ಯ ಪತ್ತೆಹಚ್ಚಲು ಏಮ್ಸ್‌ನ ಹೊಸ ಪ್ರಯತ್ನ! – Kannada News | Detecting Hearing Loss in Fetal Stage

ಸಾಮಾನ್ಯವಾಗಿ ಕೆಲವು ಆಸ್ಪತ್ರೆಗಳಲ್ಲಿ ಶಿಶುಗಳ ಜನನದ ನಂತರ ಶ್ರವಣ ತಪಾಸಣೆ (ನಿಯೋನೇಟಲ್ ಹಿಯರಿಂಗ್ ಸ್ಕ್ರೀನಿಂಗ್) ನಡೆಯದೇ ಇರುವುದರಿಂದ, ಮಗುವಿಗೆ ಸರಿಯಾಗಿ ಕೇಳುತ್ತಿದೆಯೇ ಇಲ್ಲವೇ ಎಂಬುದು ಸಮಯಕ್ಕೆ ಸರಿಯಾಗಿ ಪತ್ತೆಯಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿ ಏಮ್ಸ್ (AIIMS) ಆಸ್ಪತ್ರೆಯವರು ಗರ್ಭದಲ್ಲಿಯೇ ಮಗುವಿನ ಶ್ರವಣ ಸಾಮರ್ಥ್ಯವನ್ನು ಗುರುತಿಸುವ ದಿಶೆಯಲ್ಲಿ ಮಹತ್ವದ ಪ್ರಯತ್ನ ಆರಂಭಿಸಿದ್ದಾರೆ. ಏಮ್ಸ್‌ನ ಡಾ. ಕಪಿಲ್ ಸಿಕ್ಕಾ ಈ ಬಗ್ಗೆ ಕೆಲವು ಮಾಹಿತಿ ಹಂಚಿಕೊಂಡಿದ್ದು ಗರ್ಭದಲ್ಲಿರುವ ಮಗುವಿನ ಕೇಳಿಸಿಕೊಳ್ಳುವ ಸಾಮರ್ಥ್ಯವನ್ನು ಜನನಕ್ಕೂ ಮುನ್ನವೇ ಪರೀಕ್ಷಿಸುವ ವಿಧಾನಗಳ ಕುರಿತು ಸಂಶೋಧನೆ…

Read More

ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಕಾಲೇಜು ಬಳಿ ಹೊತ್ತಿ ಉರಿದ KSRTC ಬಸ್​​​ – Kannada News | Chikkamagaluru KSRTC Bus Engine Fire Near Junior College; No Fatalities

ಚಿಕ್ಕಮಗಳೂರು, ಮಾ.3: ಕಾಫಿನಾಡಿನ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಬಳಿ ಇಂದು (ಮಾ.3) ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್​​​​​​ ಸಂಚರಿಸುತ್ತಿದ್ದಾಗಲೇ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಈ ಬಸ್ ಇಂದು ಮಧ್ಯಾಹ್ನ ಜಿಲ್ಲಾ ಕೇಂದ್ರದಿಂದ ಹಾಸನಕ್ಕೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಬಸ್ ನಿಲ್ದಾಣದಿಂದ ಹೊರಟು ಜೂನಿಯರ್ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಇಂಜಿನ್ ಭಾಗದಲ್ಲಿ ಏಕಾಏಕಿ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಸುಳಿವು…

Read More

ಟಾಕ್ಸಿಕ್ ಅಬ್ಬರ: ‘ತಬಾಹಿ’ ಹಾಡು ಟ್ರೆಂಡ್, ಯಾವ ಭಾಷೆಯಲ್ಲಿ ಅಧಿಕ ವೀಕ್ಷಣೆ? – Kannada News | Toxic movie Tabahi song which language gets highest views on YouTube

ಇಡೀ ದೇಶವೇ ಕಾತರದಿಂದ ಕಾಯುತ್ತಿರುವ ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ‘ಟಾಕ್ಸಿಕ್‘ (Toxic: A Fairy Tale for Grown-ups) ಚಿತ್ರದ ಮೊದಲ ಹಾಡು ‘ತಬಾಹಿ’ ನಿನ್ನೆ (ಮಾರ್ಚ್ 03) ಬಿಡುಗಡೆ ಆಗಿದೆ. ಹಾಡಿನ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಅದರಲ್ಲೂ ಕೇವಲ ಲಿರಿಕಲ್ ವಿಡಿಯೋ ಮಾತ್ರವೇ ಬಿಡುಗಡೆ ಮಾಡಿರುವುದಕ್ಕೆ ಯಶ್ ಅಭಿಮಾನಿಗಳು ನಿರಾಸೆ ವ್ಯಕ್ತಪಡಿಸಿದ್ದಾರೆ. ಹಾಗಿದ್ದರೂ ಸಹ ಯೂಟ್ಯೂಬ್​​ನಲ್ಲಿ ಕೋಟ್ಯಂತರ ಮಂದಿ ಹಾಡನ್ನು ನೋಡಿದ್ದಾರೆ. ಐದು ಭಾಷೆಗಳಲ್ಲಿ ಸಿನಿಮಾದ ಹಾಡು ಬಿಡುಗಡೆ ಆಗಿದ್ದು, ಯಾವ…

Read More

ಎಲೆಕ್ಷನ್​​​ಗೆ 2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್​​ವೈ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | BJP Leader Angry On BS Yediyurappa For Announced Davanagere Candidate Name For Upcoming Karnataka Assembly Poll

ದಾವಣಗೆರೆ, (ಮಾರ್ಚ್ 03): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮತ್ತೆ ಅಸಮಾಧಾನ ಸ್ಫೋಟಕಗೊಂಡಿದೆ. ಈ ಬಾರಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರ ನಡೆಯಿಂದಲೇ ಅಸಮಾಧಾನ ಭುಗಿಲೆದ್ದಿದೆ. ಹೌದು..  ವಿಧಾನಸಭೆ ಚುನಾವಣೆ (Karnataka Assembly Election) ಇನ್ನೂ ಎರಡು ವರ್ಷ ಇರುವಾಗಲೇ ಬಿಎಸ್ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಹೊನ್ನಾಳಿಯಲ್ಲಿ ನಡೆದ ರೇಣುಕಾಚಾರ್ಯ ಜನ್ಮ ದಿನ ಕಾರ್ಯಕ್ರಮದಲ್ಲಿ ಪಕ್ಕದ ಹರಪನಹಳ್ಳಿ ಸೇರಿ ದಾವಣಗೆರೆ (Davanagere) ಜಿಲ್ಲೆಯ ಬಹುತೇಕ ಕ್ಷೇತ್ರಗಳಿಗೆ…

Read More

ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?: ನೆಹರು ತಾರಾಲಯದ ನಿರ್ದೇಶಕರು ಹೇಳಿದ್ದೇನು? – Kannada News | Lunar Eclipse Explained: The Science Behind the Red and Copper Coloured Moon

ಚಂದ್ರ ಗ್ರಹಣದ ವೇಳೆ ಚಂದ್ರನು ಕೆಂಪು ಅಥವಾ ತಾಮ್ರದ ಬಣ್ಣದಲ್ಲಿ ಗೋಚರಿಸುವುದು ಒಂದು ವಿಸ್ಮಯಕಾರಿ ವಿದ್ಯಮಾನ. ಇದನ್ನು ರಕ್ತಚಂದ್ರ ಅಥವಾ ಬ್ಲಡ್ ಮೂನ್ ಎಂದು ಕರೆಯಲಾಗುತ್ತದೆ. ಭೂಮಿಯ ನೆರಳಿನಲ್ಲಿ ಚಂದ್ರ ಇರುವುದರಿಂದ, ಸಾಮಾನ್ಯವಾಗಿ ಕಪ್ಪಾಗಿ ಕಾಣಿಸಬೇಕು. ಆದರೆ, ಭೂಮಿಯ ವಾತಾವರಣವು ಸೂರ್ಯನ ಬೆಳಕನ್ನು ಚಂದ್ರನ ಮೇಲೆ ವಕ್ರೀಭವನಗೊಳಿಸುತ್ತದೆ. ಸೂರ್ಯನ ಬಿಳಿ ಬೆಳಕಿನಲ್ಲಿರುವ ಏಳು ಬಣ್ಣಗಳಲ್ಲಿ ಕೆಂಪು ಮತ್ತು ಹಳದಿ ಮಿಶ್ರಿತ ಬಣ್ಣಗಳು ವಾತಾವರಣದ ಮೂಲಕ ಬಾಗಿ ಚಂದ್ರನ ಮೇಲೆ ಬೀಳುತ್ತವೆ. ಈ ಬೆಳಕು ನಮ್ಮ ಕಣ್ಣುಗಳಿಗೆ ಪ್ರತಿಫಲಿತವಾದಾಗ,…

Read More

ಈ ಊರಲ್ಲಿ ಹೋಳಿ ಆಚರಣೆ ಫುಲ್​​ ಡಿಫರೆಂಟ್​​: ಕತ್ತಿ ಹಿಡಿದು ಕಾಮಣ್ಣನ ಕಾಯುತ್ತಾರೆ ಗ್ರಾಮಸ್ಥರು! – Kannada News | Unique Holi in Mulamuttal, Dharwad: Villagers Guard Kamanna with Weapons!

ಧಾರವಾಡ, ಮಾರ್ಚ್​​ 03: ಹೋಳಿ ಹಬ್ಬದ ಆಚರಣೆ ಪ್ರದೇಶಗಳಿಗೆ ಅನುಗುಣವಾಗಿ ಬದಲಾಗೋದು ಎಲ್ಲರಿಗೂ ಗೊತ್ತಿರುವ ವಿಚಾರ. ಧಾರವಾಡದ ಮುಳಮುತ್ತಲ ಗ್ರಾಮ ಗ್ರಾಮದಲ್ಲಿಯೂ ವಿಭಿನ್ನ ರೀತಿಯಲ್ಲಿ ಬಣ್ಣದ ಹಬ್ಬದ ಆಚರಣೆ ನಡೆಯುತ್ತೆ. ಬಣ್ಣದೋಕುಳಿಯ ಬದಲಾಗಿ ತಮ್ಮೂರಿನ ಕಾಮದೇವನ ಮೂರ್ತಿಯನ್ನು ಯಾರಾದರೂ ಕದ್ದೊಯ್ಯಬಾರದು ಎಂದು ಗ್ರಾಮಸ್ಥರೆಲ್ಲ ತಮ್ಮ ತಮ್ಮ ಮನೆಯಲ್ಲಿರೋ ಆಯುಧಗಳೊಂದಿಗೆ ಕಾಮಣ್ಣನ ರಕ್ಷಣೆಗೆ ನಿಲ್ಲೋದು ಇಲ್ಲಿಯ ವಿಶೇಷ. ಗ್ರಾಮದ ಗರಡಿ ಮನೆಯ ಮುಂಭಾಗದಲ್ಲಿ ಸುಮಾರು 12 ಅಡಿ ಎತ್ತರ ಮಂಟಪವನ್ನ ನಿರ್ಮಿಸಿ, ಸುತ್ತಲೂ ಕಟ್ಟಿಗೆಯ ಭದ್ರತೆಯೊಂದಿಗೆ ಕಾಮಣ್ಣನನ್ನು ಪ್ರತಿಷ್ಠಾಪಿಸಲಾಗುತ್ತದೆ….

Read More

ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್; ಇದು ರಿಟೈರ್ಮೆಂಟ್​ಗೂ ಸೈ, ಹೆಲ್ತ್​ಕೇರ್ ವೆಚ್ಚಕ್ಕೂ ಸೈ; ಹೇಗೆ ಕೆಲಸ ಮಾಡುತ್ತೆ ಈ ಹೈಬ್ರಿಡ್ ಸ್ಕೀಮ್? – Kannada News | NPS Swasthya Equity Plus scheme by PFRDA and ICICI PF Management Ltd

ಪೆನ್ಷನ್ ಫಂಡ್ ನಿಯಂತ್ರಕ ಪ್ರಾಧಿಕಾರವಾದ ಪಿಎಫ್​ಆರ್​ಡಿಎ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಪಿಒಸಿ (ಪ್ರೂಫ್ ಆಫ್ ಕಾನ್ಸೆಕ್ಟ್) ಸ್ಕೀಮ್ ಅಡಿಯಲ್ಲಿ ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ ಸ್ಕೀಮ್ (NPS Swasthya Equity Plus) ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಐಸಿಐಸಿಐ ಪೆನ್ಷನ್ ಫಂಡ್ ಮ್ಯಾನೇಜ್ಮೆಂಟ್ ಫಂಡ್ ಸಹಯೋಗದಲ್ಲಿ ಪಿಎಫ್​ಆರ್​ಡಿಎ ಈ ಸ್ಕೀಮ್ ಅನ್ನು ನಡೆಸುತ್ತದೆ. ಇದು ರಿಟೈರ್ಮೆಂಟ್​ಗೆ ಬೇಕಾದ ದೀರ್ಘಾವಧಿ ಹೂಡಿಕೆ ಮಾಡಲು ಹಾಗೂ ಆರೋಗ್ಯಪಾಲನೆ ವೆಚ್ಚ ಭರಿಸಲು ಅವಕಾಶ ಕೊಡುವ ಹೈಬ್ರಿಡ್ ರಿಟೈರ್ಮೆಂಟ್ ಸ್ಕೀಮ್ ಆಗಿದೆ. ಎನ್​ಪಿಎಸ್…

Read More

ಹೊಸ ಹುಡುಗನ ಜತೆ ಸೇರಿ ಹಳೇ ಪ್ರೇಮಿ ಹತ್ಯೆ ಮಾಡಿದ ಕನ್ನಡದ ನಟಿ; ಭೀಕರ ಕೊಲೆ – Kannada News | Kannada actress Bindu aka Urvashi arrested in boyfriend murder case in Bengaluru

ಬೆಳ್ಳಿತೆರೆಯ ಮೇಲೆ ಮಿಂಚುವ ಕನಸು ಕಂಡಿದ್ದ ನಟಿಯೊಬ್ಬಳು, ನಿಜ ಜೀವನದಲ್ಲಿ ಕ್ರೂರ ಕೊಲೆಗಾತಿಯಾಗಿ ಬದಲಾದ ಕಥೆಯಿದು. ಪ್ರೀತಿ, ವಂಚನೆ ಮತ್ತು ರಕ್ತಸಿಕ್ತ ಅಂತ್ಯದ ಈ ಟ್ರಯಾಂಗಲ್ ಲವ್ ಸ್ಟೋರಿ ಈಗ ಇಡೀ ಸ್ಯಾಂಡಲ್‌ವುಡ್ ಬೆಚ್ಚಿಬೀಳುವಂತೆ ಮಾಡಿದೆ. ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದ ನಟಿ (Kannada Actress) ಬಿಂದು ಅಲಿಯಾಸ್ ಊರ್ವಶಿ, ಈಗ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಜೈಲು ಪಾಲಾಗಿದ್ದಾಳೆ. ‘ಭಜರಂಗಿ’, ‘ರಂಗೋಲಿ’, ‘ಪೊಲೀಸ್ ಕ್ವಾರ್ಟರ್ಸ್’, ‘ಕಾಲಭೈರವ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಬಿಂಧು (Bindu), ಇತ್ತೀಚೆಗೆ ಬಿಡುಗಡೆಯಾದ…

Read More

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಭಾರತದಿಂದ ಅಧಿಕೃತ ಹೇಳಿಕೆ ಬಿಡುಗಡೆ; ಗಲ್ಫ್​ನಲ್ಲಿ ಭಾರತೀಯರ ಸುರಕ್ಷತೆ ಕುರಿತು ಕಾಳಜಿ – Kannada News | India’s official statement on West Asia conflict, says safety of Indian citizen is its utmost priority

ನವದೆಹಲಿ, ಮಾರ್ಚ್ 3: ಇಸ್ರೇಲ್-ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧದ (Iran war) ಕುರಿತು ಭಾರತ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದೆ. ಇರಾನ್ ಮತ್ತು ಗಲ್ಫ್​ನಲ್ಲಿ ಬಿಕ್ಕಟ್ಟು ಶುರುವಾಗಿರುವುದು ಹಾಗೂ ಅದರಿಂದ ಸಾವು ನೋವುಗಳಾಗಿ ಸಹಜ ಬದುಕು ಅಸ್ತವ್ಯಸ್ತಗೊಳ್ಳುತ್ತಿರುವುದಕ್ಕೆ ಭಾರತ ಆತಂಕ ವ್ಯಕ್ತಪಡಿಸಿದೆ. ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಕೋಟಿ ಸಂಖ್ಯೆಯ ಭಾರತೀಯರ ಸುರಕ್ಷತೆ ಬಗ್ಗೆ ಚಿಂತೆ ವ್ಯಕ್ತಪಡಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿಕೆ ಬಿಡುಗಡೆ ಮಾಡಿದ್ದು, ಎಲ್ಲಾ ಕಡೆಗಳಿಂದ ಮಾತುಕತೆಗಳಾಗಿ, ಬಿಕ್ಕಟ್ಟು ಅಂತ್ಯಗೊಳ್ಳುವಂತಾಗಲಿ ಎಂದು…

Read More

Video: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ – Kannada News | A little boy who sent his mother off to school with a caring word

ಪುಟಾಣಿಗಳೇ (little kids) ಹಾಗೆ, ತುಂಟಾಟ ಮಾಡೋದರಲ್ಲಿ ಎತ್ತಿದ ಕೈ. ಅದಲ್ಲದೇ ಶಾಲೆಗೆ ಹೋಗಲು ವಿಷಯದಲ್ಲಿ ಸ್ವಲ್ಪ ಹಿಂದೇಟು ಹಾಕುತ್ತಾರೆ. ಆದರೆ ಈ ಹೆತ್ತವರು ಪುಲಾಯಿಸಿ ಶಾಲೆಗೆ ಕಳಿಸಿ ಕೊಡುತ್ತಾರೆ. ಆದರೆ ಈ ಪುಟಾಣಿ ಮಾತ್ರ ಶಾಲೆಗೆ (school) ಹೋಗಲ್ಲ ಎಂದು ಹಠ ಮಾಡಿಲ್ಲ. ಶಾಲೆಗೆ ಕಳಿಸಿಕೊಡಲು ಬಂದ ಅಮ್ಮನನ್ನು  ಪುಟಾಣಿಯೊಂದು ಮುದ್ದಾಗಿ ಕಳಿಸಿಕೊಟ್ಟಿದೆ. ಮನೆಗೆ ಹೋಗಿ ನೀನು ಟಿವಿ ನೋಡು ಎನ್ನುವ ಪುಟಾಣಿಯ ಮುದ್ದು ಮಾತು ನೆಟ್ಟಿಗರ ಗಮನ ಸೆಳೆದಿದೆ. ಈ ವಿಡಿಯೋ ಸದ್ಯ ಸೋಶಿಯಲ್…

Read More