All posts by nagaraj11081993

ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ಪಾಕ್ ತಂಡದಲ್ಲಿ ಮೊದಲ ವಿಕೆಟ್ ಪತನ – Kannada News | Pakistan Cricket Overhaul: Alim Dar Resigns Amid T20 World Cup Failure and Player Fines

ಪ್ರತಿ ಐಸಿಸಿ (ICC) ಈವೆಂಟ್​ನಲ್ಲೂ ಕಳಪೆ ಪ್ರದರ್ಶನದ ಬಳಿಕ ಪಾಕಿಸ್ತಾನ ತಂಡದಲ್ಲಿ ಬದಲಾವಣೆಯ ಗಾಳಿ ಬೀಸುವುದು ಹೊಸತೆನಲ್ಲ. ಈ ಹಿಂದೆಯೂ ಐಸಿಸಿ ಪಂದ್ಯಾವಳಿಗಳನ್ನು ಸೋತ ಬಳಿಕ ಪಾಕ್ ತಂಡದ ಮುಖ್ಯ ಕೋಚ್​ನಿಂದ ಹಿಡಿದು, ನಾಯಕನನ್ನು ಸಾಕಷ್ಟು ಬಾರಿ ಬದಲಿಸಲಾಗಿದೆ. ಇದೀಗ 2026 ರ ಟಿ20 ವಿಶ್ವಕಪ್​ನ (T20 World Cup) ಸೂಪರ್ 8 ಹಂತದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಬಳಿಕ ಪಾಕ್ ಮಂಡಳಿ ತನ್ನ ಕೆಲಸ ಶುರು ಮಾಡಿದೆ. ಅದರಂತೆ ತಂಡದ ಪ್ರತಿಯೊಬ್ಬ ಆಟಗಾರನಿಗೂ 50 ಲಕ್ಷ ರೂ. ದಂಡ ವಿಧಿಸಿದೆ ಎಂದು ವರದಿಯಾಗಿದೆ. ಏತನ್ಮಧ್ಯೆ, ಪಾಕ್ ತಂಡದ ಆಯ್ಕೆ ಸಮಿತಿಯಲ್ಲಿದ್ದ ಅಲೀಮ್ ದಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ

ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಪ್ರಮುಖ ಸದಸ್ಯ ಮತ್ತು ಮಾಜಿ ಅಂತರರಾಷ್ಟ್ರೀಯ ಅಂಪೈರ್ ಅಲೀಮ್ ದಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಂಡ ವಿಶ್ವಕಪ್‌ನಿಂದ ಹೊರಬಿದ್ದ ಬಳಿಕ ಅಲೀಮ್ ದಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಅಕ್ಟೋಬರ್ 2024 ರಲ್ಲಿ ಆಯ್ಕೆ ಸಮಿತಿಯನ್ನು ಸೇರಿದ್ದ ಅಲೀಮ್ ದಾರ್ ಪಾಕಿಸ್ತಾನದ ವಿಶ್ವಕಪ್ ವೈಫಲ್ಯದ ನಂತರ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆದಾಗ್ಯೂ ಕೆಲವು ವರದಿಗಳ ಪ್ರಕಾರ, ಪಿಸಿಬಿಯೇ ಅಲೀಮ್ ದಾರ್ ಅವರನ್ನು ಈ ಹುದ್ದೆಯಿಂದ ತೆಗೆದುಹಾಕಿದೆ ಎಂದು ಹೇಳುತ್ತವೆ.

ಅಲೀಮ್ ದಾರ್ ರಾಜೀನಾಮೆ ನೀಡಿದ ನಂತರ, ಆಕಿಬ್ ಜಾವೇದ್ ಮತ್ತು ಅಸಾದ್ ಶಫೀಕ್ ಈಗ ಆಯ್ಕೆ ಸಮಿತಿಯ ಉಳಿದ ಸದಸ್ಯರಾಗಿದ್ದಾರೆ. ಪರಿಣಾಮವಾಗಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಶೀಘ್ರದಲ್ಲೇ ಆಯ್ಕೆ ಸಮಿತಿಗೆ ಹೊಸ ಸದಸ್ಯರನ್ನು ಆಯ್ಕೆ ಮಾಡಬಹುದು. ಇದರ ಜೊತೆಗೆ ತಂಡದ ಕಳಪೆ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಮತ್ತಷ್ಟು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ.

PAK vs SL: ಟಿ20 ವಿಶ್ವಕಪ್​ನಿಂದ ಹೊರಬಿದ್ದ ‘ಪ್ಯಾಕಿ’ಸ್ತಾನ; ಕಿವೀಸ್​ಗೆ ಸೆಮೀಸ್ ಟಿಕೆಟ್

ಪಾಕಿಸ್ತಾನ ತಂಡದ ಪ್ರದರ್ಶನ ಹೇಗಿತ್ತು?

ಪಾಕಿಸ್ತಾನ ತಂಡವು ತನ್ನ ಕೊನೆಯ ಸೂಪರ್ 8 ಪಂದ್ಯದಲ್ಲಿ ಶ್ರೀಲಂಕಾವನ್ನು ಕೇವಲ 5 ರನ್‌ಗಳಿಂದ ಸೋಲಿಸಿತ್ತಾದರೂ ಅದು ಪ್ರಯೋಜನಕ್ಕೆ ಬರಲಿಲ್ಲ. ಏಕೆಂದರೆ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಪಾಕ್ ತಂಡಕ್ಕೆ ದೊಡ್ಡ ಗೆಲುವಿನ ಅಗತ್ಯವಿತ್ತು, ಆದರೆ ಅದು ಸಿಗಲಿಲ್ಲ. ಇದಕ್ಕೂ ಮೊದಲು, ಗುಂಪು ಹಂತದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಕೊನೆಯ ಓವರ್‌ನಲ್ಲಿ ರೋಮಾಂಚಕ ಗೆಲುವು ಸಾಧಿಸಿತ್ತು. ನಂತರ ನಮೀಬಿಯಾ ಮತ್ತು ಯುನೈಟೆಡ್ ಸ್ಟೇಟ್ಸ್ ವಿರುದ್ಧ ಗೆದ್ದಿದ್ದ ಪಾಕ್, ಕೊಲಂಬೊದಲ್ಲಿ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ 61 ರನ್‌ಗಳ ಹೀನಾಯ ಸೋಲು ಅನುಭವಿಸಿತ್ತು. ನಂತರ, ನ್ಯೂಜಿಲೆಂಡ್ ವಿರುದ್ಧದ ಸೂಪರ್ 8 ಪಂದ್ಯ ಮಳೆಯಿಂದ ರದ್ದಾದರೆ, ಇಂಗ್ಲೆಂಡ್ ವಿರುದ್ಧದ ಸೋಲು ತಂಡದ ಭರವಸೆಯನ್ನು ಹುಸಿಗೊಳಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:07 pm, Tue, 3 March 26

Source link

ಮೂರನೇ ವ್ಯಕ್ತಿ ಜೊತೆ ಅಕ್ರಮ ಸಂಬಂಧ; ಗಂಡ, ಪ್ರಿಯಕರನಿಂದ ಮಹಿಳೆಯ ಬರ್ಬರ ಹತ್ಯೆ – Kannada News | Husband Killed Wife with her Lover Over Third Affair in Palnadu

ಪಲ್ನಾಡು, ಮಾರ್ಚ್ 3: ಆಂಧ್ರಪ್ರದೇಶದಲ್ಲಿ ಮಹಿಳೆಯೊಬ್ಬರು ತನ್ನ ಪತಿ ಮತ್ತು ಪ್ರಿಯಕರನಿಂದ ದಾರುಣವಾಗಿ ಕೊಲೆಯಾಗಿದ್ದಾರೆ. ಈ ಘಟನೆ ಫೆಬ್ರವರಿ 26ರಂದು ಪಲ್ನಾಡು ಜಿಲ್ಲೆಯ ರಾಜುಪಾಲಂ ಮಂಡಲದ ಉಪ್ಪಲಪಾಡುವಿನಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಈ ಗ್ರಾಮದ ಕೊಟ್ಟಿಗೆಯಲ್ಲಿ 44 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವುದು ಪತ್ತೆಯಾಗಿತ್ತು. ಆಕೆಯ ಶವವನ್ನು ಪರೀಕ್ಷಿಸಿದ ಸ್ಥಳೀಯರಿಗೆ ಇದು ಕೊಲೆ ಎಂದು ಗೊತ್ತಾಯಿತು. ಕೊನೆಗೆ ಆ ಮಹಿಳೆಯ ಮಗಳ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ತನಿಖೆ ವೇಳೆ ಆಕೆಯ ಪತಿ ಮತ್ತು ಪ್ರಿಯಕರ ಒಟ್ಟಿಗೆ ಸೇರಿ ಈ ಕೊಲೆ ಮಾಡಿದ್ದಾರೆ ಎಂದು ಕಂಡುಬಂದಿದ್ದು, ಇಬ್ಬರನ್ನೂ ಬಂಧಿಸಲಾಗಿದೆ.

ಉಪ್ಪಲಪಾಡುವಿನ ವೇಲ್ಪುಲ ಈಶ್ವರಯ್ಯ ಮತ್ತು ಮಲ್ಲೇಶ್ವರಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅವರು ಗ್ರಾಮದ ಹೊರಗೆ ವಾಸಿಸುತ್ತಿದ್ದರು. ಮಲ್ಲೇಶ್ವರಿ ಕೆಲವು ಸಮಯದಿಂದ ಅದೇ ಊರಿನ ವೇಲ್ಪುಲ ನಾಗೇಶ್ವರ ರಾವ್ ಅವರೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು. ಈ ವಿಷಯ ಆಕೆಯ ಪತಿ ಈಶ್ವರಯ್ಯ ಮತ್ತು ಅವರ ಕುಟುಂಬಕ್ಕೂ ತಿಳಿದಿತ್ತು. ನಾಗೇಶ್ವರ ರಾವ್ ಆಕೆಯ ಕುಟುಂಬಕ್ಕೆ ದುಡ್ಡು ಕೂಡ ಕೊಡುತ್ತಿದ್ದುದರಿಂದ ಈಶ್ವರಯ್ಯ ಈ ಸಂಬಂಧದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಲಿವ್-ಇನ್ ಸಂಗಾತಿಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಡಿಎಂಕೆ ಕಾರ್ಯಕರ್ತ

ಆದರೆ, ಇತ್ತೀಚಿನ ದಿನಗಳಲ್ಲಿ ಮಲ್ಲೇಶ್ವರಿ ಇನ್ನೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದರು. ಈ ವಿಷಯ ತಿಳಿದ ನಂತರ ಈಶ್ವರಯ್ಯ ಹಾಗೂ ನಾಗೇಶ್ವರ ರಾವ್ ಇಬ್ಬರಿಗೂ ಕೋಪ ಬಂದಿತ್ತು. ಫೆಬ್ರವರಿ 25ರಂದು ಹೊರಗೆ ಹೋಗಿದ್ದ ಮಲ್ಲೇಶ್ವರಿ ತಡರಾತ್ರಿ ಮನೆಗೆ ವಾಪಾಸ್ ಬಂದರು. ಅವರು ಮನೆಗೆ ಬಂದಾಗ ಈಶ್ವರಯ್ಯ ಮತ್ತು ನಾಗೇಶ್ವರ ರಾವ್ ಒಟ್ಟಿಗೆ ಕುಳಿತು ಮನೆಯಲ್ಲಿ ಮದ್ಯಪಾನ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಮಲ್ಲೇಶ್ವರಿಯ ನಡವಳಿಕೆಯನ್ನು ಪ್ರಶ್ನಿಸಿದರು. ಆಗ ಮಲ್ಲೇಶ್ವರಿ ಈಶ್ವರಯ್ಯ ಮತ್ತು ನಾಗೇಶ್ವರ ರಾವ್ ಜೊತೆ ಜಗಳವಾಡಿದರು. ಈ ಜಗಳದ ಸಮಯದಲ್ಲಿ ಕೋಪದಿಂದ ಅವರಿಬ್ಬರೂ ಮಲ್ಲೇಶ್ವರಿಯ ತಲೆಗೆ ಹೊಡೆದರು. ಆಕೆ ಪ್ರಜ್ಞೆ ಕಳೆದುಕೊಂಡರು. ಕುಡಿದ ಅಮಲಿನಲ್ಲಿದ್ದ ಅವರು ತಕ್ಷಣ ಆಕೆಯನ್ನು ಹತ್ತಿರದ ಕೊಟ್ಟಿಗೆಗೆ ಎಳೆದೊಯ್ದು, ಉಸಿರುಗಟ್ಟಿಸಿ ಕೊಲೆ ಮಾಡಿದರು. ನಂತರ, ಅವರು ಅಲ್ಲಿಂದ ಓಡಿಹೋದರು.

ಇದನ್ನೂ ಓದಿ: ಹೃದಯಾಘಾತವಲ್ಲ ಇದು ವ್ಯವಸ್ಥಿತ ಕೊಲೆ? ಪತ್ನಿಯ 3ನೇ ಮದುವೆಯಿಂದ ಬಯಲಾಯ್ತು ಪರಮೇಶ್ ಸಾವಿನ ರಹಸ್ಯ!

ಬೆಳಗಿನ ಜಾವ ಊರಿಗೆಲ್ಲ ಈ ವಿಷ ಗೊತ್ತಾಯಿತು. ಮಲ್ಲೇಶ್ವರಿಯ ಕೊಲೆ ಗ್ರಾಮದಲ್ಲಿ ಕೋಲಾಹಲ ಸೃಷ್ಟಿಸಿತು. ಆಕೆಯನ್ನು ಯಾರು ಕೊಂದಿರಬಹುದು? ಎಂದು ಎಲ್ಲರಿಗೂ ಆತಂಕ ಮತ್ತು ಕುತೂಹಲವಿತ್ತು. ಪೊಲೀಸರು ಮೊದಲು ಈಶ್ವರಯ್ಯನನ್ನು ವಶಕ್ಕೆ ಪಡೆದು ಪ್ರಶ್ನಿಸಿದಾಗ, ಅವರು ಎಲ್ಲವನ್ನೂ ಒಪ್ಪಿಕೊಂಡರು. ಕೊನೆಗೆ ಪೊಲೀಸರು ಈಶ್ವರಯ್ಯ ಮತ್ತು ನಾಗೇಶ್ವರ ರಾವ್ ಇಬ್ಬರನ್ನು ಬಂಧಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟದಲ್ಲಿ ವಿಪಕ್ಷ ಬಿಜೆಪಿಗೆ ಸಾಲು ಸಾಲು ಆಘಾತ: ಮುನಿರತ್ನ ಪ್ರಕರಣದಲ್ಲೂ ಭಾರೀ ಹಿನ್ನಡೆ – Kannada News | Munirathna Honeytrap: Court Orders Re investigation, CID’s ‘B’ Report Rejected

ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣ; ‘ಬಿ’ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

ಬೆಂಗಳೂರು, ಮಾರ್ಚ್​ 03:  ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದ ಡಾ. ಚಂದ್ರು ಲಮಾಣಿ ಸೇರಿದಂತೆ ಇನ್ನೋರ್ವ ಬಿಜೆಪಿಗ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್‌ (Muniratna Honeytrap case) ಪ್ರಕರಣದಲ್ಲಿ ಹಿನ್ನೆಡೆ ಅನುಭವಿಸಿದ್ದಾರೆ. ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಐಡಿ ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿ, ಮರು ತನಿಖೆ ನಡೆಸುವಂತೆ ಆದೇಶಿಸಿದೆ. ಈ ಮೂಲಕ ಪ್ರಕರಣ ಮತ್ತೆ ಚುರುಕುಗೊಂಡಿದ್ದು, ಶಾಸಕರಿಗೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.

ಮರು ತನಿಖೆಗೆ ಆದೇಶ

ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಸಲ್ಲಿಸಿದ್ದ ದೂರಿನ ತನಿಖೆ ಪೂರ್ಣಗೊಳಿಸಿದ ಎಸ್‌ಐಟಿ ಅಧಿಕಾರಿಗಳು ಸಾಕ್ಷಿಯ ಅಭಾವವೆಂದು ಉಲ್ಲೇಖಿಸಿ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಇದನ್ನು ಪ್ರಶ್ನಿಸಿ ನಾರಾಯಣಸ್ವಾಮಿ ಮರು ಅರ್ಜಿ ಸಲ್ಲಿಸಿದ್ದರು. ದೂರುದಾರರ ಪರ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ವಾದ ಮಂಡಿಸಿ, ಧ್ವನಿಮುದ್ರಣ ಸೇರಿದಂತೆ ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ಸಲ್ಲಿಸಲಾಗಿದೆ. ಆದರೂ ಪೊಲೀಸರು ಸಮರ್ಪಕ ತನಿಖೆ ನಡೆಸದೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ವಾದಗಳನ್ನು ಆಲಿಸಿ, ‘ಬಿ’ ರಿಪೋರ್ಟ್ ಅನ್ನು ರದ್ದುಗೊಳಿಸಿ, ಪ್ರಕರಣದ ಮುಂದಿನ ತನಿಖೆ ನಡೆಸುವಂತೆ ಸಿಐಡಿ ಎಸ್‌ಐಟಿಗೆ ನಿರ್ದೇಶನ ನೀಡಿದರು. ವಿಚಾರಣೆಯನ್ನು ಮಾರ್ಚ್ 30ಕ್ಕೆ ಮುಂದೂಡಲಾಗಿದೆ. ಈ ಆದೇಶದಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಇದನ್ನೂ ಓದಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಹನಿಟ್ರ್ಯಾಪ್ ಆರೋಪ: ಬೆಡ್ ರೂಂನಲ್ಲಿ ಕ್ಯಾಮರಾ ಇಡಲು ಯತ್ನಿಸಿದ್ದರೆಂದ ಸಂತ್ರಸ್ತೆಯ ಪತಿ

ಏನಿದು ಹನಿಟ್ರ್ಯಾಪ್ ಕೇಸ್?

ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಅವರು 2024ರ ಡಿಸೆಂಬರ್‌ನಲ್ಲಿ ನಂದಿನಿ ಲೇಔಟ್ ಠಾಣೆಗೆ ದೂರು ಸಲ್ಲಿಸಿದ್ದರು. ತಮ್ಮ ಹಾಗೂ ಪತ್ನಿ ಮಂಜುಳಾ ಅವರ ವಿರುದ್ಧ ಹನಿಟ್ರ್ಯಾಪ್ ಸಂಚು ರೂಪಿಸಿ, ತೇಜೋವಧೆ ಮಾಡಲು ಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದರು. ಅಲ್ಲದೆ, ಪತ್ನಿಯ ಕೊಲೆಗೆ ಷಡ್ಯಂತ್ರ ರೂಪಿಸಿ ಸುಪಾರಿ ನೀಡಲಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದರು. ಈ ಪ್ರಕರಣದ ತನಿಖೆಯನ್ನು ನಂತರ ಸಿಐಡಿ ಎಸ್‌ಐಟಿಗೆ ವರ್ಗಾವಣೆ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 11:05 am, Tue, 3 March 26

Source link

ಯಮುನಾ ಎಕ್ಸ್​​ಪ್ರೆಸ್​​ವೇನಲ್ಲಿ ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು

ಲಕ್ನೋ, ಮಾರ್ಚ್​ 03: ಉತ್ತರ ಪ್ರದೇಶದ ಯಮುನಾ ಎಕ್ಸ್​ಪ್ರೆಸ್​ ವೇಯಲ್ಲಿ ವ್ಯಾನ್​​ಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ. ಬೆಳಗಿನ ಜಾವ 4.20 ರ ಸುಮಾರಿಗೆ ಸದಾಬಾದ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. 13 ಪ್ರಯಾಣಿಕರನ್ನು ಹೊತ್ತ ವ್ಯಾನ್ ದೆಹಲಿಯ ಪ್ರೇಮ್ ನಗರದಿಂದ ರಾಜಸ್ಥಾನದ ಧೋಲ್ಪುರಕ್ಕೆ ತೆರಳುತ್ತಿದ್ದಾಗ ನೋಯ್ಡಾದಿಂದ ಗೋರಖ್ಪುರಕ್ಕೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಆನಂದ್ ಕುಶ್ವಾಹ ತಿಳಿಸಿದ್ದಾರೆ.

ವ್ಯಾನ್‌ನಲ್ಲಿದ್ದವರೆಲ್ಲರೂ ದೆಹಲಿಯ ಪ್ರೇಮ್ ನಗರದ ನಿವಾಸಿಗಳಾಗಿದ್ದು, ಧೋಲ್‌ಪುರಕ್ಕೆ ಪ್ರಯಾಣಿಸುತ್ತಿದ್ದ ಬೇರೆ ಬೇರೆ ಕುಟುಂಬಗಳಿಗೆ ಸೇರಿದವರಾಗಿದ್ದರು. ಈ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ವ್ಯಾನ್ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಓಡಿದ ವಕೀಲರು  – Kannada News | Bomb Scare: Kalaburagi District Court Evacuated After Email Threat

ಕಲಬುರಗಿ, ಮಾ.3: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಈ ಹಿನ್ನೆಲೆಯಲ್ಲಿ ವ್ಯಾಪಕ ಪರಿಶೀಲನೆ ನಡೆಸಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿಗಳ (ಡಿಸಿ) ಇ-ಮೇಲ್ ಐಡಿಗೆ ಈ ಬೆದರಿಕೆ ಸಂದೇಶ ಬಂದಿತ್ತು. ಸಂದೇಶ ಬಂದ ಕೂಡಲೇ ಡಿಸಿ ಅವರು ಈ ವಿಷಯವನ್ನು ನ್ಯಾಯಾಲಯದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಬೆದರಿಕೆ ಸಂದೇಶದ ಗಂಭೀರತೆಯನ್ನು ಮನಗಂಡು, ತಕ್ಷಣವೇ ಕೋರ್ಟ್ ಹಾಲ್‌ನಿಂದ ಎಲ್ಲರನ್ನೂ ಹೊರಗೆ ಕಳುಹಿಸಿ ಸಂಪೂರ್ಣ ಆವರಣವನ್ನು ತೆರವುಗೊಳಿಸಲಾಯಿತು. ನಂತರ, ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ಸಿಬ್ಬಂದಿ ನ್ಯಾಯಾಲಯದ ಆವರಣದಾದ್ಯಂತ ಕೂಲಂಕಷ ತಪಾಸಣೆ ನಡೆಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಯಿತು. ಈ ಘಟನೆಯ ಕುರಿತ ವೀಡಿಯೊದಲ್ಲಿ, ಹಾತ್ ಮ್ಯಾಡಮ್ ಮೀಡಿಯಾ ಡಿಸ್ಕಶನ್ ಎಂಬಂತಹ ಸಂಕ್ಷಿಪ್ತ ಸಂಭಾಷಣೆಯ ತುಣುಕೂ ಕೇಳಿಬರುತ್ತದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಸಭ್ಯವಾಗಿ ನಟಿಯರ ಫೋಟೋ, ವಿಡಿಯೋ ತೆಗೆದಿದ್ದಕ್ಕೆ ಕನ್ನಡ ಚಿತ್ರರಂಗ ಗರಂ – Kannada News | Kannada Film Industry express displeasure over indecent photos and videos of actresses

ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್, ಕಮೆಂಟ್ ಮತ್ತು ವೀವ್ಸ್ ಪಡೆಯುವ ಉದ್ದೇಶದಿಂದ ಜನರು ಇಲ್ಲಸಲ್ಲದ ಗಿಮಿಕ್ ಮಾಡುತ್ತಾರೆ. ಅದರಿಂದಾಗಿ ಕನ್ನಡ ಚಿತ್ರರಂಗದ (Kannada Film Industry) ನಟಿಯರಿಗೆ ತೊಂದರೆ ಆಗಿದೆ. ಸಿನಿಮಾ ಕಾರ್ಯಕ್ರಮಗಳನ್ನು ವರದಿ ಮಾಡಲು ಬಂದ ಕೆಲವರು ಅಸಭ್ಯ ರೀತಿಯಲ್ಲಿ ನಟಿಯರ ಫೋಟೋ ಮತ್ತು ವಿಡಿಯೋ ತೆಗೆದಿದ್ದಾರೆ. ಇದರಿಂದಾಗಿ ನಟಿಯರ ಗೌರವಕ್ಕೆ ಧಕ್ಕೆ ಉಂಟಾಗಿದೆ. ಈ ವರ್ತನೆಯ ವಿರುದ್ಧ ಕನ್ನಡ ಚಿತ್ರರಂಗದ ಹಲವು ಕಲಾವಿದರು ಗರಂ ಆಗಿದ್ದಾರೆ. ಸಪ್ತಮಿ ಗೌಡ (Sapthami Gowda), ಯುವ ರಾಜ್​ಕುಮಾರ್, ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಸೇರಿದಂತೆ ಹಲವರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೋಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ನಮ್ಮ ಕಲೆಯಿಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್‌ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ’ ಎಂದು ನಟಿಯರು ಆರೋಪಿಸಿದ್ದಾರೆ.

‘ಇಂತಹ ವರ್ತನೆ, ಕೆಲವರಿಂದ ನಡೆಯುತ್ತಿರುವುದಾದರೂ ಅದು ಅಸಭ್ಯ, ಅವಮಾನಕಾರಿ ಮತ್ತು ಸಂಪೂರ್ಣವಾಗಿ ಅಸ್ವೀಕಾರಾರ್ಹವಾಗಿದೆ. ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ. ನಾವು ಇಲ್ಲಿ ನಮ್ಮ ಸಿನಿಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್‌ ಮಾಡುವುದು ಮತ್ತು ಅಸಭ್ಯ ಕೋನಗಳಿಂದ ಬಳಸುವುದು ನಮ್ಮ ಗೌರವಕ್ಕೆ ಸ್ಪಷ್ಟ ಧಕ್ಕೆ. ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ, ಸಹಿಸುವುದಿಲ್ಲ’ ಎಂದು ಪೋಸ್ಟ್ ಮಾಡಲಾಗಿದೆ.

Instagram Story

‘ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಈ ಗಡಿರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮ ಧ್ವನಿ ಮುಂದುವರಿಯುತ್ತದೆ’ ಎಂದು ಕಲಾವಿದರು ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ: ‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ’; ರಾಗಿಣಿ ದ್ವಿವೇದಿ

ಈ ಮೊದಲು ಬಾಲಿವುಡ್​ನಲ್ಲಿ ಕೂಡ ಇದೇ ರೀತಿ ಆಗಿತ್ತು. ನಟಿಯರ ಫೋಟೋ ಮತ್ತು ವಿಡಿಯೋಗಳನ್ನು ಹಿಂಬದಿಯಿಂದ ಚಿತ್ರಿಸುವ ಪಾಪರಾಜಿಗಳ ವಿರುದ್ಧ ಅನೇಕ ಹೀರೋಯಿನ್​ಗಳು ಕಿಡಿಕಾರಿದ್ದರು. ಅದೇ ರೀತಿ ಈಗ ಕನ್ನಡ ಚಿತ್ರರಂಗದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತಮಿಳಿನ ಯುವ ಹೀರೋಗೆ ಜೋಡಿಯಾಗಲಿರುವ ರುಕ್ಮಿಣಿ ವಸಂತ್ – Kannada News | Rukmini Vasanth to act with Dhruva Vikram new movie

ರುಕ್ಮಿಣಿ ವಸಂತ್ (Rukmini Vasanth), ತಮ್ಮ ಪ್ರತಿಭೆ ಮತ್ತು ಸೌಂದರ್ಯದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ಹೆಜ್ಜೆ ಇರಿಸಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳು ರುಕ್ಮಿಣಿ ವಸಂತ್ ಅವರಿಗೆ ದೊಡ್ಡ ಮಟ್ಟಿಗಿನ ಗುರುತು, ಜನಪ್ರಿಯತೆ ತಂದುಕೊಟ್ಟಿರುವ ಜೊತೆಗೆ ಹಲವಾರು ಹೊಸ ಅವಕಾಶಗಳನ್ನು ಸಹ ತಂದುಕೊಟ್ಟಿದೆ. ಈಗಾಗಲೇ ಪರ ಭಾಷೆಯ ಕೆಲ ದೊಡ್ಡ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದು, ಇದೀಗ ತಮಿಳಿನ ಸ್ಟಾರ್ ಯುವ ನಾಯಕನ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸಲು ಸಜ್ಜಾಗಿದ್ದಾರೆ.

ರುಕ್ಮಿಣಿ ವಸಂತ್ ಅವರು, ತಮಿಳಿನ ಸ್ಟಾರ್ ಹಿರೋ ಚಿಯಾನ್ ವಿಕ್ರಂ ಅವರ ಪುತ್ರ ಧ್ರುವ ವಿಕ್ರಮ್ ಅವರೊಟ್ಟಿಗೆ ಹೊಸ ಸಿನಿಮಾನಲ್ಲಿ ನಟಿಸಲಿದ್ದಾರೆ. ಇದು ಧ್ರುವ ವಿಕ್ರಂ ಅವರ ನಾಲ್ಕನೇ ಸಿನಿಮಾ ಆಗಿದ್ದು, ಸಿನಿಮಾವನ್ನು ಹೊಸ ನಿರ್ದೇಶಕ ದೀಪಕ್ ರೆಡ್ಡಿ ನಿರ್ದೇಶನ ಮಾಡಲಿದ್ದಾರೆ. ಕಿರು ಚಿತ್ರವೊಂದನ್ನು ನಿರ್ದೇಶಿಸಿ ಗಮನ ಸೆಳೆದಿರುವ ದೀಪಕ್ ರೆಡ್ಡಿ ಈ ಸಿನಿಮಾ ಮೂಲಕ ಸಿನಿಮಾ ನಿರ್ದೇಶಕ ಎನಿಸಿಕೊಳ್ಳಲಿದ್ದಾರೆ.

ಧ್ರುವ್ ವಿಕ್ರಂ ಹಾಗೂ ರುಕ್ಮಿಣಿ ವಸಂತ್ ನಟಿಸಲಿರುವ ಈ ಸಿನಿಮಾ ಅಪ್ಪಟ ಪ್ರೇಮಕಥಾ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ಮತ್ತೊಬ್ಬ ನಾಯಕಿಯೂ ಇರಲಿದ್ದಾರಂತೆ. ಸಿನಿಮಾದ ಚಿತ್ರೀಕರಣ ಏಪ್ರಿಲ್ ತಿಂಗಳಲ್ಲಿ ಪ್ರಾರಂಭ ಆಗಲಿದ್ದು, ಸಿನಿಮಾಕ್ಕೆ ಖ್ಯಾತ ನಿರ್ಮಾಣ ಸಂಸ್ಥೆ ಆಗಿರುವ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡುತ್ತಿದ್ದಾರೆ. ಧ್ರುವ್, ಪ್ರಸ್ತುತ ತಮಿಳು ಚಿತ್ರರಂಗದ ಬಲು ಜನಪ್ರಿಯ ಯುವ ನಟರಾಗಿದ್ದು, ಇದು ಅವರ ನಾಲ್ಕನೇ ಸಿನಿಮಾ ಆಗಲಿದೆ.

ಇದನ್ನೂ ಓದಿ:ಟಾಲಿವುಡ್​ನ ಮತ್ತೋರ್ವ ಸ್ಟಾರ್ ಹೀರೋಗೆ ನಾಯಕಿ ಆದ ರುಕ್ಮಿಣಿ ವಸಂತ್

ರುಕ್ಮಿಣಿ ವಸಂತ್ ಪ್ರಸ್ತುತ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರುಕ್ಮಿಣಿ ವಸಂತ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಜೂ ಎನ್​​ಟಿಆರ್ ನಟನೆಯ ಹೊಸ ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಪ್ರಶಾಂತ್ ನೀಲ್ ನಿರ್ದೇಶಕ. ಇತ್ತೀಚೆಗೆ ಅವರೇ ಹೇಳಿಕೊಂಡಿದ್ದಂತೆ ಅವರಿಗೆ ಹಿಂದಿಯಿಂದ ಒಂದು ಆಫರ್ ಬಂದಿದ್ದು, ಆ ಸಿನಿಮಾ ಸಹ ಶೀಘ್ರವೇ ಪ್ರಾರಂಭ ಆಗಲಿದೆ. ಇವುಗಳ ಜೊತೆಗೆ ತಮಿಳಿನಲ್ಲಿ ಹೊಸ ಸಿನಿಮಾ ಒಂದನ್ನು ರುಕ್ಮಿಣಿ ವಸಂತ್ ಒಪ್ಪಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್​​: ಸ್ಥಳೀಯರಲ್ಲಿ ಆತಂಕ – Kannada News | Wild Elephants Spotted in Coffee Estate Near Gonibeedu, Chikkamagaluru

ಚಿಕ್ಕಮಗಳೂರು, ಮಾರ್ಚ್​ 03: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳಕ್ಕೆ ಬ್ರೇಕ್​​ ಬೀಳುವ ಯಾವುದೇ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತ ಮರಿಗಳೊಂದಿಗೆ ಕಾಡಾನೆಗಳ ಹಿಂಡು ಓಡಾಟ ನಡೆಸುತ್ತಿವೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಓಡಾಟ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಒಂದು ಕಡೆ ಭೀಮ, ಮತ್ತೊಂದು ಕಡೆ ಎರಡು ಮರಿಯಾನೆಗಳೊಂದಿಗೆ ಕಾಡಾನೆಗಳ ಹಿಂಡು ಸಂಚಾರ ಮಾಡುತ್ತಿವೆ. ಬೇಲೂರು -ಮೂಡಿಗೆರೆ ಗಡಿ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಳ ಹಿನ್ನೆಲೆ, ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ಡಿಸಿಎಂ ನಡೆ – Kannada News | DK Shivakumar To Host Dinner Party for MLAs On March 10th Amide Power Tussle In Karnataka Congress

ಬೆಂಗಳೂರು, (ಮಾರ್ಚ್ 03): ಕರ್ನಾಟಕ ರಾಜ್ಯ ಕಾಂಗ್ರೆಸ್​​ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಹೈಕಮಾಂಡ್ (High Command)​ ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್​ ಮೀಟಿಂಗ್ ಕರೆದಿದ್ದಾರೆ. ಹೌದು…ಇದೇ ಮಾರ್ಚ್ 10ರಂದು ಖಾಸಗಿ ಹೋಟೆಲ್​ನಲ್ಲಿ ಔತಣಕೂಟ ಆಯೋಜಿಸಿದ್ದಾರೆ. ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್​ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳಿಸುತ್ತಿರುವುದರಿಂದ ಈ ಡಿನ್ನರ್ ಪಾರ್ಟಿ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಔತನಕೂಟದ ಮೂಲಜ ಶಾಸಕರು, ಪರಿಷತ್ ಸದಸ್ಯರು ಹಾಗೂ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಇದಾಗಿದೆ ಎಂದು ವಿಶ್ಷೇಷಿಸಲಾಗಿದೆ.

ಇದನ್ನೂ ಓದಿ: 60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ

Source link

ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು – Kannada News | Easy mistakes made by investors during long term investment

ಭಾರತದಲ್ಲಿ ಹೂಡಿಕೆಗೆ ಹಣ ತೊಡಗಿಸುವವರ ಸಂಖ್ಯೆ ಕಡಿಮೆ. ತೊಡಗಿಸಿದರೂ ದೀರ್ಘಾವಧಿ ಹೂಡಿಕೆಯನ್ನು (Long-term investment) ಹೊಂದಿರುವವರು ಇನ್ನೂ ಕಡಿಮೆ. ಹಾಗೆಯೇ, ದೀರ್ಘಾವಧಿ ಹೂಡಿಕೆಯಲ್ಲಿ ಕಡಿಮೆ ತಪ್ಪುಗಳನ್ನು ಎಸಗುವವರ ಸಂಖ್ಯೆ ಮತ್ತೂ ಕಡಿಮೆ ಎಂದು ತಜ್ಞರು ಹೇಳುತ್ತಾರೆ. ದೀರ್ಘಾವಧಿ ಹೂಡಿಕೆಯಲ್ಲಿ ಜನರು ಬಹಳ ಸಾಮಾನ್ಯವಾಗಿ ಮಾಡುವ ಕೆಲ ತಪ್ಪುಗಳಿವೆ. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಚಾರ್ಟರ್ಟ್ ಅಕೌಂಟ್ ವೃತ್ತಿಪರರಾದ ನಿತಿನ್ ಕೌಶಿಕ್ ಅವರು ಎಕ್ಸ್​ನಲ್ಲಿ ಈ ವಿಚಾರದ ಬಗ್ಗೆ ಒಂದು ಪೋಸ್ಟ್ ಹಾಕಿದ್ದಾರೆ. ಹೂಡಿಕೆದಾರರು ಮಾಡುವ ಕೆಲ ಸುಲಭ ತಪ್ಪುಗಳನ್ನು ಎತ್ತಿ ತೋರಿಸಿದ್ದಾರೆ.

ಮಾರುಕಟ್ಟೆ ಕುಸಿಯುತ್ತಿದ್ದಂತೆಯೇ ಮಾರಿಬಿಡುವ ಪ್ರವೃತ್ತಿ

ಕಳೆದ ಒಂದು ವರ್ಷದಲ್ಲಿ ಷೇರು ಮಾರುಕಟ್ಟೆ ಹಿನ್ನಡೆಯಲ್ಲಿದೆ. ಬಹಳ ಜನರು ವ್ಯಾಕುಲಗೊಂಡು ಷೇರುಗಳನ್ನು ಮಾರುತ್ತಿರುವುದುಂಟು. ನಿತಿನ್ ಕೌಶಿಕ್ ಅವರು ಈ ಪ್ರವೃತ್ತಿಯನ್ನು ಎತ್ತಿತೋರಿಸಿ, ಬೇಡ ಎಂದಿದ್ದಾರೆ.

ಮಾರ್ಕೆಟ್ ಟ್ರೆಂಡ್ ಬೆನ್ನತ್ತುವ ಪ್ರವೃತ್ತಿ

ಈಗ ಇವಿ, ಎಐ ಇತ್ಯಾದಿ ಥೀಮ್​ಗಳು ಟ್ರೆಂಡಿಂಗ್​ನಲ್ಲಿವೆ. ಕೃತಕ ಬುದ್ಧಿಮತ್ತೆ ಕ್ಷೇತ್ರ ಸಿಕ್ಕಾಪಟ್ಟೆ ಉಬ್ಬುತ್ತಿದೆ. ಬಹಳ ಜನರು ತಮ್ಮ ಹೂಡಿಕೆಗಳನ್ನು ಎಐ, ಇವಿ ಸ್ಟಾಕ್​ಗಳತ್ತ ಬದಲಾಯಿಸುತ್ತಿದ್ದಾರೆ. ಆದರೆ, ಮಾರುಕಟ್ಟೆ ಉಬ್ಬಿದಾಗ ಖರೀದಿಸುವುದು, ಕುಗ್ಗಿದಾಗ ಮಾರುವುದು ಈ ಪ್ರವೃತ್ತಿಯು ದೀರ್ಘಾವಧಿ ಹೂಡಿಕೆಗೆ ಸರಿ ಹೊಂದುವುದಿಲ್ಲ ಎಂಬುದು ನಿತಿನ್ ಕೌಶಿಕ್ ಅವರ ಅನಿಸಿಕೆ.

ಇದನ್ನೂ ಓದಿ: ಬದುಕು ನಿರ್ವಹಿಸುವಷ್ಟು ಮಾಸಿಕ ಆದಾಯ ಸೃಷ್ಟಿಸುವುದು ಹೇಗೆ? ಬೆಲೆ ಏರಿಕೆ ಇತ್ಯಾದಿ ಅಂಶಗಳನ್ನೂ ಮರೆಯದಿರಿ; ಇಲ್ಲಿದೆ ಟಿಪ್ಸ್

ಎಮರ್ಜೆನ್ಸಿ ಫಂಡ್ ಹೊಂದಿಲ್ಲದೇ ಇರುವುದು

ದೀರ್ಘಾವಧಿ ಹೂಡಿಕೆದಾರರು ಮಾಡುವ ಮತ್ತೊಂದು ಸಾಮಾನ್ಯ ತಪ್ಪೆಂದರೆ ಎಮರ್ಜೆನ್ಸಿ ಫಂಡ್ ಹೊಂದಿಲ್ಲದೇ ಇರುವುದು. ಆರು ತಿಂಗಳಿಂದ ಒಂದು ವರ್ಷದವರೆಗೆ ಉದ್ಯೋಗ ನಷ್ಟ, ವೈದ್ಯಕೀಯ ತುರ್ತು, ಅಥವಾ ಅನಿರೀಕ್ಷಿತ ವೆಚ್ಚಗಳನ್ನು ಭರಿಸಲು ತುರ್ತು ನಿಧಿ ಇಟ್ಟುಕೊಳ್ಳುವುದು ಬಹಳ ಮುಖ್ಯ. ಇಲ್ಲದಿದ್ದರೆ ದೀರ್ಘಾವಧಿ ಹೂಡಿಕೆಗಳಲ್ಲಿ ಇರಿಸಿರುವ ಹಣವನ್ನು ಖರ್ಚು ಮಾಡಬೇಕಾಗುತ್ತದೆ.

ಎಕ್ಸ್​ಪೆನ್ಸ್ ರೇಶಿಯೋ ಹೆಚ್ಚಿರುವ ಫಂಡ್​ಗಳಲ್ಲಿ ಹೂಡಿಕೆ…

ಮ್ಯೂಚುವಲ್ ಫಂಡ್​ಗಳನ್ನು ಆಯ್ದುಕೊಳ್ಳುವಾಗ ಹೆಚ್ಚಿನ ಜನರು ಎಕ್ಸ್ಪೆನ್ಸ್ ರೇಶಿಯೋ ಕಡೆಗೆ ಗಮನ ಕೊಡುವುದಿಲ್ಲ. ಗಮನಿಸಿದರೂ ಅದನ್ನು ನಿರ್ಲಕ್ಷಿಸುತ್ತಾರೆ. ಶೇ. 2 ಅಥವಾ 1.5 ಎಕ್ಸ್​ಪೆನ್ಸ್ ರೇಶಿಯೋ ಮೇಲ್ನೋಟಕ್ಕೆ ದೊಡ್ಡದೆನಿಸುವುದಿಲ್ಲ. ಆದರೆ, ದೀರ್ಘಾವಧಿಯಲ್ಲಿ ಅದು ಬಹಳಷ್ಟು ಲಾಭವನ್ನು ತಿಂದುಹಾಕಬಹುದು. ಕೌಶಿಕ್ ಪ್ರಕಾರ ಅಷ್ಟು ಹೆಚ್ಚಿನ ಎಕ್ಸ್​ಪೆನ್ಸ್ ರೇಶಿಯೋ ಇದ್ದರೆ ಅಂತಿಮ ರಿಟರ್ನ್ಸ್​ನಲ್ಲಿ ಶೇ. 30ಕ್ಕಿಂತ ಹೆಚ್ಚಿನ ಪಾಲು ನಷ್ಟವಾಗಬಹುದು.

ಇದನ್ನೂ ಓದಿ: ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು…

ಮಾರುಕಟ್ಟೆ ಬಿದ್ದಾಗ ಹೂಡಿಕೆ ಮಾಡುತ್ತೇನೆ ಎನ್ನುವ ಭ್ರಮೆ

ಮಾರುಕಟ್ಟೆ ಕುಸಿದಾಗ ಹೂಡಿಕೆ ಮಾಡುತ್ತೇನೆ ಎಂದು ಹಣ ಇಟ್ಟುಕೊಂಡು ಕಾಯುವವರು ಬಹಳ ಇದ್ದಾರೆ. ಆದರೆ, ಇದು ಬಹಳ ದೊಡ್ಡ ತಪ್ಪು ಎನ್ನುತ್ತಾರೆ ಸಿಎ ನಿತಿನ್ ಕೌಶಿಕ್. ಮಾರುಕಟ್ಟೆ ಯಾವ ಕುಸಿಯುತ್ತೆ, ಯಾವಾಗ ಗರಿಷ್ಠ ಮಟ್ಟಕ್ಕೆ ಹೋಗುತ್ತದೆ ಎಂದು ಯಾರೂ ಕೂಡ ನಿಖರವಾಗಿ ಗುರುತಿಸಲು ಆಗುವುದಿಲ್ಲ. ದೀರ್ಘಾವಧಿ ಹೂಡಿಕೆಯಲ್ಲಿ ಯಾರೂ ಕೂಡ ಮಾರುಕಟ್ಟೆಯನ್ನು ಟೈಮ್ ಮಾಡಲು ಯತ್ನಿಸಬಾರದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 2:48 pm, Tue, 3 March 26

Source link