nagaraj11081993

ತಾಹಿರ್ ಅನ್ವರ್ ಯಾರು? ಪಾಕಿಸ್ತಾನದಲ್ಲಿ ಮಸೂದ್ ಅಜರ್ ಸಹೋದರ ಅನುಮಾನಾಸ್ಪದವಾಗಿ ಸಾವು

ಇಸ್ಲಾಮಾಬಾದ್, ಮಾರ್ಚ್​ 31: ಪಾಕಿಸ್ತಾನ(Pakistan) ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನಾಯಕ ಮಸೂದ್ ಅಜರ್​ನ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಮೃತಪಟ್ಟಿದ್ದಾನೆ. ಬಹಾವಲ್ಪುರದಲ್ಲಿ ಆತನ ಅಂತ್ಯಕ್ರಿಯೆ ನಡೆದಿದೆ ಎಂದು ವರದಿಯಾಗಿದೆ. ಅವನ ಸಾವು ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ಸಂಘಟನೆ ಬಹಿರಂಗಗೊಳಿಸಿಲ್ಲ. ತಾಹಿರ್ ಅನ್ವರ್ ತನ್ನ ಸಹೋದರನ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‌ನೊಂದಿಗೆ ಸಹ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಸೋಮವಾರ ತಡರಾತ್ರಿ ಬಹಾವಲ್ಪುರದ ಜಾಮಿಯಾ ಮಸೀದಿ ಉಸ್ಮಾನ್ ವಾಲಿ ಬಳಿ ತಾರಿಕ್​ನನ್ನು ಸಮಾಧಿ ಮಾಡಲಾಗಿದೆ ಎಂದು ಸಂಘಟನೆಯ ಅಧಿಕೃತ…

Read More

NHAI Summer Internship 2026: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಇಂಟರ್ನ್‌ಶಿಪ್; ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ, ತಿಂಗಳಿಗೆ 20,000ರೂ. ಸ್ಟೈಫಂಡ್!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗಾಗಿ ಸಮ್ಮರ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಘೋಷಿಸಿದೆ. ದೇಶಾದ್ಯಂತ ನಡೆಯುತ್ತಿರುವ ಬೃಹತ್ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಬಯಸುವ ವಿವಿಧ ವಿಭಾಗಗಳ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಎರಡು ತಿಂಗಳ ಅವಧಿಯ ಈ ಇಂಟರ್ನ್‌ಶಿಪ್ ಕಾರ್ಯಕ್ರಮವು ಮೇ 4 ರಿಂದ ಜುಲೈ 5 ರವರೆಗೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 20,000 ರೂಪಾಯಿ…

Read More

ಆನ್​ಲೈನ್ ಪೋಸ್ಟ್ ಹಾಕುವಾಗ ಹುಷಾರ್; ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೂ ಬಿಸಿ; ಇದು ಸರ್ಕಾರದ ಪ್ರಸ್ತಾವಿತ ಐಟಿ ನಿಯಮಗಳ ಎಫೆಕ್ಟ್

ನವದೆಹಲಿ, ಮಾರ್ಚ್ 31: ಕೇಂದ್ರ ಸರ್ಕಾರ 2021ರ ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿ ಮತ್ತು ಡಿಜಿಟಲ್ ಮೀಡಿಯಾ ನೈತಿಕ ಸಂಹಿತೆ ನಿಯಮಗಳನ್ನು ಪರಿಷ್ಕರಿಸುತ್ತಿದೆ. ಈ ಸಂಬಂಧ ತಿದ್ದುಪಡಿ ತರುತ್ತಿದ್ದು ಅದರ ಕರಡು ನಿಯಮಗಳನ್ನು ನಿನ್ನೆ ಸೋಮವಾರ ಬಹಿರಂಗಪಡಿಸಿದೆ. ಸಾಮಾನ್ಯ ಸೋಷಿಯಲ್ ಮೀಡಿಯಾ ಬಳಕೆದಾರನ (social media user) ಮೇಲೆ ಪರಿಣಾಮ ಬೀರಲಿರುವುದು ಸೇರಿದಂತೆ ಕೆಲ ಪ್ರಮುಖ ಸಂಗತಿಗಳು ಈ ಪ್ರಸ್ತಾವಿತ ನಿಯಮಗಳಲ್ಲಿವೆ. ಗಮನಿಸಬೇಕಾದ ಹೊಸ ಐಟಿ ನಿಯಮಗಳಿವು… ಆನ್​ಲೈನ್​ನಲ್ಲಿ ಸಾಮಾನ್ಯ ಬಳಕೆದಾರರು ಹಾಕುವ ಪೋಸ್ಟ್​ಗಳು ಸೂಕ್ಷ್ಮವಿದ್ದರೆ, ಅವರಿಗೆ ಸರ್ಕಾರದಿಂದಲೇ…

Read More

ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮಂಗಳೂರು, ಮಾರ್ಚ್ 31: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿವರ: ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿನ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ, ಬಸ್ಸಿನ ಬಾಗಿಲು…

Read More

ಹುಬ್ಬಳ್ಳಿ, ರಾಯಚೂರಲ್ಲಿ ಕುಡಿಯುವ ನೀರಿಗೂ ಪರದಾಟ: ರಸ್ತೆ ತಡೆದು ಪ್ರತಿಭಟನೆ

ಹುಬ್ಬಳ್ಳಿ/ರಾಯಚೂರು, ಮಾರ್ಚ್​​ 31: ಬೇಸಿಗೆ ಆರಂಭವಾಗುತ್ತಿದ್ದಂತೆ ಕರ್ನಾಟಕದ ಹಲವೆಡೆ ನೀರಿನ ಸಮಸ್ಯೆ ತಲೆದೋರಿದ್ದು, ಹುಬ್ಬಳ್ಳಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗಿದೆ. ಹುಬ್ಬಳ್ಳಿಯ ಕಿಲ್ಲೆ ವಾರ್ಡ್‌ನಲ್ಲಿ ವಾರಕ್ಕೊಮ್ಮೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಸ್ಥಳೀಯರು ಪ್ರತಿದಿನವೂ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ರಸ್ತೆ ತಡೆದು ಸಾರ್ವಜನಿಕರು ಪ್ರತಿಭಟನೆ ನಡೆಸಿರುವ ಪ್ರಸಂಗ ನಡೆದಿದೆ. ಅತ್ತ ರಾಯಚೂರು ಜಿಲ್ಲೆಯ ಹಲವು ಭಾಗಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ, ಜಿಲ್ಲಾಧಿಕಾರಿಗಳು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ…

Read More

‘ಆ ಪಾತ್ರ ಮಾಡುವುದಿಲ್ಲ’: ದೊಡ್ಡ ಹಾಲಿವುಡ್ ಆಫರ್ ಕೈಬಿಟ್ಟಿದ್ದ ಹಿರಿಯ ನಟ

ಭಾರತದ ನಟ-ನಟಿಯರಿಗೆ ಹಾಲಿವುಡ್ (Hollywood)​ ಮೇಲೆ ವಿಪರೀತ ಮೋಹ. ಹಾಲಿವುಡ್ ಅವಕಾಶ ಎಂದರೆ ಸಾಕು ಹಿಂದೆ-ಮುಂದೆ ಯೋಚಿಸದೆ ಹಾರಿ ಬಿಡುತ್ತಾರೆ. ಹಾಲಿವುಡ್ ಸಹ ಭಾರತದ ಖ್ಯಾತ ನಟರನ್ನು ವಿಲನ್​​ಗಳಾಗಿ ಅಥವಾ ಸಾಧಾರಣ ಪೋಷಕ ನಟರ ಪಾತ್ರಗಳನ್ನೇ ನೀಡುವುದು ಹೆಚ್ಚು. ಪ್ರಿಯಾಂಕಾ ಚೋಪ್ರಾ, ಐಶ್ವರ್ಯಾ ರೈ ಸಹ ಹಾಲಿವುಡ್ ಸಿನಿಮಾಗಳಲ್ಲಿ ವಿಲನ್ ಪಾತ್ರಗಳನ್ನು ಮಾಡಿದ್ದಾರೆ. ಆದರೆ ಭಾರತದ ಹಿರಿಯ ನಟರೊಬ್ಬರು ಬಲು ದೊಡ್ಡ ಹಾಲಿವುಡ್ ಸಿನಿಮಾ ಅವಕಾಶವನ್ನು ನಿರಾಕರಿಸಿದ್ದರು. ಅದಕ್ಕೆ ನೀಡಿದ ಕಾರಣ ಹೆಮ್ಮೆ ಪಡುವಂಥಹದ್ದು. ನಾನಾ ಪಟೇಕರ್…

Read More

ಯಶ್ ಇಲ್ಲದೆ ಲಾಸ್ ಏಂಜಲೀಸ್​​ಗೆ ತೆರಳಿದ ‘ರಾಮಾಯಣ’ ಟೀಂ; ಪ್ರಚಾರದಲ್ಲಿ ಭಾಗಿ

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಯಲ್ಲಿ ರಿಲೀಸ್ ಆಗಲಿದೆ. ಮೊದಲ ಪಾರ್ಟ್​ ಈ ವರ್ಷ ತೆರೆಗೆ ಬಂದರೆ, ಎರಡನೇ ಭಾಗ 2027ರ ದೀಪಾವಳಿಗೆ ತೆರೆಗೆ ಬರಲಿದೆ. ಈ ಚಿತ್ರದ ಪ್ರಚಾರವನ್ನು ಇನ್ನೂ ಆರಂಭಿಸಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈಗ ಇದಕ್ಕೆ ಉತ್ತರವಾಗಿ ಸಿನಿಮಾ ತಂಡ ಪ್ರಚಾರ ಆರಂಭಿಸಿದೆ. ‘ರಾಮಾಯಣ’ ತಂಡ ಇತ್ತೀಚೆಗೆ ಲಾಸ್ ಏಂಜಲೀಸ್​​ಗೆ ತೆರಳಿತ್ತು. ಅಲ್ಲಿ ‘ರಾಮಾಯಣ’ ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿತ್ತು. ಆದರೆ, ಈ ಶೋನಲ್ಲಿ ಯಶ್ ಇರಲಿಲ್ಲ. ರಣಬೀರ್…

Read More

ಅಮೆರಿಕಾ ಅಜೆಂಡಾ ಏನು? ಯುಎಸ್ ಸೇನೆಗೆ ಭಾರತವೇಕೆ ನೆಲೆ ಕೊಟ್ಟಿಲ್ಲ ಗೊತ್ತೇ? ಇಲ್ಲಿದೆ ಮಾಹಿತಿ

ಅಮೆರಿಕಾದ ಸೇನಾನೆ ಲೆಗಳು ಜಗತ್ತಿನಾದ್ಯಂತ ವಿಸ್ತರಿಸಿದ್ದು, ಪ್ರಸ್ತುತ 70ಕ್ಕೂ ಹೆಚ್ಚು ದೇಶಗಳಲ್ಲಿ 750ಕ್ಕೂ ಅಧಿಕ ಸೇನಾ ನೆಲೆಗಳನ್ನು ಹೊಂದಿದೆ. ಈ ನೆಲೆಗಳು 195 ರಾಷ್ಟ್ರಗಳ ಮೇಲೆ 360 ಡಿಗ್ರಿ ಕಣ್ಗಾವಲು ಇಡುವ ಅಮೆರಿಕದ ಕಾರ್ಯಸೂಚಿಯ ಭಾಗವಾಗಿದೆ. 1898ರಲ್ಲಿ ಕ್ಯೂಬಾದಲ್ಲಿ ಮೊದಲ ವಿದೇಶಿ ನೆಲೆ ಸ್ಥಾಪಿಸಿದ ಅಮೆರಿಕಾ, ನಂತರ ಹಂತ ಹಂತವಾಗಿ ತನ್ನ ಸೇನಾನೆಲೆಗಳನ್ನು ಜರ್ಮನಿ, ಜಪಾನ್, ದಕ್ಷಿಣ ಕೊರಿಯಾ, ಮಧ್ಯಪ್ರಾಚ್ಯ ರಾಷ್ಟ್ರಗಳು ಸೇರಿದಂತೆ ಹಲವು ದೇಶಗಳಿಗೆ ವಿಸ್ತರಿಸಿದೆ. ಈ ನೆಲೆಗಳು ಮೈತ್ರಿ ರಾಷ್ಟ್ರಗಳ ರಕ್ಷಣೆಯ ಜೊತೆಗೆ ಶತ್ರುಗಳ…

Read More

‘ಗೃಹಸಚಿವರೇ ನೆಟ್ಟಗಿಲ್ಲ’ ಎಂದು ಎಕ್ಸ್​​ ಪೋಸ್ಟ್​​: ದಾಖಲಾಯ್ತು ಸುಮೋಟೋ ಕೇಸ್​

ಬೆಂಗಳೂರು, ಮಾರ್ಚ್​​ 31: ಗೃಹಸಚಿವರೇ ನೆಟ್ಟಗಿಲ್ಲ, ಅವರ ಕಾಲೇಜಿನ ಪ್ರೊಫೆಸರ್ ನೆಟ್ಟಗಿರ್ತಾನಾ? ಎಂದು ಎಕ್ಸ್​​​​​ ಖಾತೆ ಮೂಲಕ ಗೃಹ ಸಚಿವ ಡಾ. ಜಿ. ಪರಮೆಶ್ವರ್​​ ಕುರಿತು ಆಕ್ಷೇಪಾರ್ಹ ಪೋಸ್ಟ್​​​ ಸಂಬಂಧ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಹಿಂದೂ ಜಾಗೃತನಾಗು ಎಂಬ ಎಕ್ಸ್ ಖಾತೆಯಲ್ಲಿ ಈ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದ್ದು, ಉದ್ದೇಶಪೂರ್ವಕ ದ್ವೇಷ ಭಾವನೆ ಮೂಡಿಸುವ ಆರೋಪ ಸಂಬಂಧ ಐಟಿ ಆ್ಯಕ್ಟ್ ಹಾಗೂ BNS U/S 299ರಡಿ ಪ್ರಕರಣ ದಾಖಲಾಗಿದೆ. ಹಿಂಮದೂ ಮತ್ತು ಮುಸ್ಲಿಂ…

Read More

ಕೇರಳ ಚುನಾವಣಾ ಪ್ರಚಾರಕ್ಕೆ ಟ್ರಂಪ್​, ಷಿ ಜಿನ್​ಪಿಂಗ್​, ಪುಟಿನ್​!

ಕೇರಳ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್ ಬಂದಿದ್ದಾರೆ ನೋಡಿ. ಇದೇನಿದು ವಿಶ್ವ ನಾಯಕರು ಒಂದು ರಾಜ್ಯದ ಪ್ರಚಾರಕ್ಕೆ ಬಂದ್ಬಿಟ್ರಾ ಎಂದು ಆಲೋಚಿಸುತ್ತಿದ್ದೀರಾ, ಇಲ್ಲ ನಿಜವಾಗಿಗೂ ಬಂದಿಲ್ಲ ಆದರೆ ಎಐ ಅವರೆಲ್ಲರನ್ನೂ ವಿಶಿಷ್ಟ ಕೇರಳದ ಉಡುಗೆಯಲ್ಲಿ ಕರೆತಂದಿದೆ. ಡೊನಾಲ್ಡ್​ ಟ್ರಂಪ್, ಷಿ ಜಿನ್​ಪಿಂಗ್, ಪುಟಿನ್, ವೊಲೊಡಿಮಿರ್ ಝೆಲೆನ್ಸ್ಕಿ ಒಬ್ಬೊಬ್ಬರು ಒಂದೊಂದು ಪಕ್ಷಕ್ಕೆ ಬೆಂಬಲ ನೀಡಿ ಪ್ರಚಾರ ಮಾಡುತ್ತಿರುವಂತೆ ವಿಡಿಯೋವನ್ನು ರಚಿಸಲಾಗಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರನ್ನು ಕೂಡ ನೀವು ಕಾಣಬಹುದು….

Read More