Headlines

nagaraj11081993

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು – Kannada News | Mother Jumps into Well with Twin Children: Woman Rescued, Children Die

ಕೋಲಾರ/ಗದಗ, ಮಾರ್ಚ್​​ 02: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳ ಜೊತೆ ತಾಯಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 3 ವರ್ಷದ ಹರ್ಷಿತ್​ ಮತ್ತು ಹಿತೇಶ್ ಮೃತಪಟ್ಟಿದ್ದು, ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಉಷಾರನ್ನು ಪ್ರವಾಸಿ ಮಿತ್ರ ಸಿಬ್ಬಂದಿ ರಕ್ಷಿಸಿದ್ದಾರೆ. ಮೃತ ಪುಟಾಣಿಗಳಿಬ್ಬರೂ ಅವಳಿ-ಜವಳಿ ಎಂಬುದು ಗೊತ್ತಾಗಿದೆ. ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ….

Read More

‘ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ’: ಇರಾನ್ ಮೂಲದ ಪೈಲ್ವಾನ್ ಮಿರ್ಜಾ

ದಾವಣಗೆರೆ, ಮಾ.2: ಇರಾನ್ ದೇಶದ ಪೈಲ್ವಾನ್ ಮಿರ್ಜಾ ಅವರು ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ. ಇತ್ತ ಇರಾನ್-ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿದ್ದರೂ, ಪೂರ್ವ ನಿಗದಿಯಂತೆ ದಾವಣಗೆರೆಯ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುವ ಮೂಲಕ ಮಿರ್ಜಾ ಅವರು ಅದ್ಭುತ ಕ್ರೀಡಾ ಪ್ರೇಮ ಮೆರೆದಿದ್ದಾರೆ. ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರದ ಪುಣೆ ಮೂಲದ ಪೈಲ್ವಾನ್ ರವಿರಾಜ್ ಮತ್ತು ಇರಾನ್‌ನ ಮಿರ್ಜಾ ಮುಖಾಮುಖಿಯಾಗಿದ್ದರು. ಬರೋಬ್ಬರಿ 43 ನಿಮಿಷಗಳ ಕಾಲ ನಡೆದ ಈ ರೋಚಕ ಹೋರಾಟದಲ್ಲಿ ಇಬ್ಬರು ಪೈಲ್ವಾನರು…

Read More

ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ – Kannada News | Satish Jarkiholi Seeks Clear Leadership Direction Amid Karnataka Congress Internal Confusion

ದಾವಣಗೆರೆ, ಮಾರ್ಚ್​ 02: ಸದ್ಯದ ಸ್ಥಿತಿಯಲ್ಲಿ ಮುಂದುವರೆದರೆ ಮುಂದೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ಕಷ್ಟ ಎಂಬ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ಸಚಿವ ಸತೀಶ್​​ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ.  ಪಕ್ಷದಲ್ಲಿ ಸ್ಪಷ್ಟತೆಯ ಕೊರತೆಯಿಂದಾಗಿ ಕಾರ್ಯಕರ್ತರು, ಶಾಸಕರು ಮತ್ತು ಅಧಿಕಾರಿಗಳಲ್ಲಿ ಗೊಂದಲ ಉಂಟಾಗಿದೆ. ಈ ಪರಿಸ್ಥಿತಿ ಶೀಘ್ರವಾಗಿ ತಿಳಿಗೊಳ್ಳಬೇಕು. ಪಕ್ಷದ ಭವಿಷ್ಯದ ಬಗ್ಗೆ ಇರುವ ಅನಿಶ್ಚಿತತೆಯನ್ನು ನಿವಾರಿಸಲು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ನಿಂದ ಸ್ಪಷ್ಟ ನಿರ್ದೇಶನ ಬಂದರೆ ಮಾತ್ರ ಈ ಗೊಂದಲ…

Read More

ಯುದ್ಧದಿಂದ ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ ಗತಿ ಏನು? ದೇಶದಲ್ಲಿರುವ ಪೆಟ್ರೋಲ್ ಎಷ್ಟು ದಿನಕ್ಕೆ ಆಗುತ್ತೆ? – Kannada News | Indias strategic petroleum reserves know how many days they last if crude oil supply is stopped

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದೆ. ಇಸ್ರೇಲ್, ಇರಾನ್ ಸಂಘರ್ಷದಲ್ಲಿ (Middle East crisis) ಅಮೆರಿಕ ಅಖಾಡಕ್ಕೆ ಪ್ರವೇಶ ಮಾಡಿದೆ. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಸೇರಿದಂತೆ ಹಲವು ಪ್ರಮುಖ ಮುಖಂಡರನ್ನು ಅಮೆರಿಕ ಹಾಗೂ ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಕೊಂದು ಹಾಕಿವೆ. ಗಲ್ಫ್ ದೇಶಗಳಿಂದ ತೈಲ ಪೂರೈಕೆಗೆ ಅಡಚಣೆ ಆಗಿದೆ. ಜಾಗತಿಕವಾಗಿ ತೈಲ ಬೆಲೆ ಹೆಚ್ಚುವ ಮತ್ತು ಪೂರೈಕೆ ಮೊಟಕುಗೊಳ್ಳುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಒಂದು ವೇಳೆ, ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ…

Read More

ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ: ಶ್ರೀಮಂತರಿಗೂ ಫ್ರೀ ಕೊಡೋದು ಕಷ್ಟ ಎಂದ ಬಾಲಕೃಷ್ಣ – Kannada News | Congress MLA HC Balakrishna Questions Free Guarantee Schemes, Says Benefits to Rich Are a Burden on Government

ಬೆಂಗಳೂರು, ಮಾರ್ಚ್ 2: ಮಾಗಡಿ ಶಾಸಕ ಹೆಚ್​ಸಿ ಬಾಲಕೃಷ್ಣ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಆಗ್ರಹಿಸಿದ್ದಾರೆ. ಈ ಯೋಜನೆಗಳು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿವೆ ಎಂದು ಅವರು ಹೇಳಿದ್ದಾರೆ. ಉಳ್ಳವರಿಗೂ ಮತ್ತು ಆರ್ಥಿಕವಾಗಿ ಸದೃಢರಿಗೂ ಗ್ಯಾರಂಟಿ ಸೌಲಭ್ಯಗಳು ಲಭಿಸುತ್ತಿವೆ. ಇದರಿಂದ ಯೋಜನೆಗಳ ನಿಜವಾದ ಉದ್ದೇಶ ಈಡೇರುತ್ತಿಲ್ಲ ಮತ್ತು ಸರ್ಕಾರಕ್ಕೆ ಅನಗತ್ಯ ಹೊರೆ ಹೆಚ್ಚುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಬಡವರು ಮತ್ತು ಬಿಪಿಎಲ್ ಕಾರ್ಡುದಾರರಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಪ್ರಯೋಜನ ದೊರೆಯಬೇಕು. ಇದಕ್ಕಾಗಿ ಸರ್ಕಾರ ಹೊಸದಾಗಿ ಅರ್ಜಿಗಳನ್ನು…

Read More

ಭೀಕರ ಸ್ಫೋಟಕ್ಕೆ ಮನೆಗೆ ಮನೆಯೇ ಸರ್ವನಾಶ!: ಹೊಸ ಸಿಲಿಂಡರ್ ಜೋಡಣೆ ವೇಳೆ ಅವಘಡ – Kannada News | House Collapses in LPG Blast at Taluru Village in Ballari

ಬಳ್ಳಾರಿ, ಮಾರ್ಚ್​ 02: ಅಡುಗೆ ಸಿಲಿಂಡರ್​​ ಸ್ಫೋಟಗೊಂಡ ಪರಿಣಾಮ ಮನೆಗೆ ಮನೆಯೇ ಸರ್ವನಾಶವಾಗಿರುವ ಆಘಾತಕಾರಿ ಘಟನೆ ಬಳ್ಳಾರಿ ಜಿಲ್ಲೆ ಸಂಡೂರ ತಾಲೂಕಿನ ತಾಳೂರು ಗ್ರಾಮದಲ್ಲಿ ನಡೆದಿದೆ. ಸುಬಾನಿ ಸಾಬ್ ಎನ್ನುವವರ ಮನೆಯಲ್ಲಿ ಹೊಸ ಸಿಲಿಂಡರ್ ಜೋಡಣೆ ವೇಳೆ ಗ್ಯಾಸ್ ಸೋರಿಕೆಯಾಗಿ ಅವಘಡ ನಡೆದಿದ್ದು, ಗ್ಯಾಸ್ ಲೀಕ್​ ಆಗುತ್ತಿದ್ದಂತೆ ಮನೆಯಲ್ಲಿದ್ದ ಕುಟುಂಬಸ್ಥರು ಎಚ್ಚೆತ್ತು ಹೊರಬಂದ ಕಾರಣ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣ ಛಿದ್ರ ಛಿದ್ರವಾಗಿದ್ದು, ಪಕ್ಕದ ಮನೆಯ ಗೋಡೆಯೂ ಕುಸಿದು ಬಿದ್ದಿದೆ. ಮನೆ ಮಾಲೀಕ…

Read More

Tabaahi Song: ಭಟ್ಟರ ಸಾಹಿತ್ಯದಲ್ಲಿ ಬಂತು ಟಾಕ್ಸಿಕ್ ‘ತಬಾಹಿ’ ಸಾಂಗ್; ಹೇಗಿದೆ ನೀವು ಕೇಳಿ – Kannada News | Toxic Film Update: Yash’s ‘Tabahi’ Song Out, Music Composers and Cast Details

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಸಿನಿಮಾ ಬಗ್ಗೆ ಒಂದಲ್ಲ ಒಂದು ಅಪ್​​​ಡೇಟ್​ ನೀಡುತ್ತಲೇ ಬರಲಾಗುತ್ತಿದೆ. ಈಗ ಚಿತ್ರದ ‘ತಬಾಹಿ’ ಹಾಡು ರಿಲೀಸ್ ಆಗಿದೆ. ಹೋಳಿ ಹಬ್ಬಕ್ಕೂ ಒಂದು ದಿನ ಮೊದಲು ಈ ಸಾಂಗ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಈ ಹಾಡು ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿದೆ. ‘ಟಾಕ್ಸಿಕ್’ ಚಿತ್ರದಲ್ಲಿ ಮ್ಯೂಸಿಕ್​ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ಚಿತ್ರದಲ್ಲಿ ಒಟ್ಟೂ ಆರು ಹಾಡುಗಳು…

Read More

Video: ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ – Kannada News | Kuwait Diplomatic Zone Rattled by Smoke After Iran Linked Strikes

ಕುವೈತ್, ಮಾರ್ಚ್​ 02: ಇರಾನ್ ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ವೈಮಾನಿಕ ದಾಳಿ ನಡೆಸಿದೆ. ಕಳೆದ ಎರಡು ದಿನಗಳಿಂದ ಇರಾನ್, ಅಮೆರಿಕ ದಾಳಿ ಹಾಗೂ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಭಾನುವಾರ ಇರಾನ್‌ನಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಿದವು. , ಸುಪ್ರೀಂ ನಾಯಕ ಅಲಿ ಖಮೇನಿಯವರ ಹತ್ಯೆಯ ನಂತರ ಮಿಲಿಟರಿ ಕಾರ್ಯಾಚರಣೆ ವೇಗ ಪಡೆದಿದೆ.ಇರಾನ್ ಸೇನಾ ಕಮಾಂಡರ್‌ಗಳು ತಮ್ಮ ಸರ್ವೋಚ್ಚ ನಾಯಕನ ಹುತಾತ್ಮತೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಕುವೈತ್ ಮೇಲೆ ದಾಳಿ ನಡೆಸಿದ್ದಾರೆ.ಯುಎಇ ಸೇರಿದಂತೆ…

Read More

ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಪ್ರಕಟ – Kannada News | India vs Afghanistan Series Full schedule

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ಆಟಗಾರರು ಮಾರ್ಚ್ 28 ರಿಂದ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಐಪಿಎಲ್ ಮುಗಿಯೋದು ಮೇ 31 ರಂದು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ 4 ಪಂದ್ಯಗಳ ಸರಣಿ ಆಡಲಿದೆ. ಅದು ಸಹ ಅಫ್ಘಾನಿಸ್ತಾನ್ ವಿರುದ್ಧ ಎಂಬುದು ವಿಶೇಷ. ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 4 ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಂದು ಟೆಸ್ಟ್ ಪಂದ್ಯ ಹಾಗೂ…

Read More

ಬೆಂಗಳೂರಿನಿಂದ ವಿದೇಶಕ್ಕೆ ಹೋಗುವ, ಬರುವ ಒಟ್ಟು 24 ವಿಮಾನಗಳು ರದ್ದು: ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ – Kannada News | KIA Flight Cancellations: Middle East Route Impact and Stranded Kannadigas Due to War

ದೇವನಹಳ್ಳಿ, ಮಾ.2 : ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದ ವಾಯುನೆಲೆಗಳನ್ನು ಮುಚ್ಚಲಾಗಿದೆ. ಇದರ ನೇರ ಪರಿಣಾಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬೀರಿದ್ದು, ಇಂದು ಸಹ ಸರಣಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರಿನಿಂದ ವಿದೇಶಕ್ಕೆ ತೆರಳಬೇಕಿದ್ದ 09 ವಿಮಾನಗಳು ಹಾಗೂ ವಿದೇಶದಿಂದ ಆಗಮಿಸಬೇಕಿದ್ದ 15 ವಿಮಾನಗಳು ಸೇರಿದಂತೆ ಒಟ್ಟು 24 ವಿಮಾನಗಳ ಸಂಚಾರವನ್ನು ಇಂದು ರದ್ದುಗೊಳಿಸಲಾಗಿದೆ. ಅಬುಧಾಬಿ, ಜಿದ್ದಾ, ದೋಹಾ, ದುಬೈ ಮತ್ತು ಬಹ್ರೇನ್‌ ಸೇರಿದಂತೆ ಮಧ್ಯಪ್ರಾಚ್ಯದ…

Read More