Headlines

nagaraj11081993

ಪಾಕಿಸ್ತಾನದ ಪ್ರತಿಯೊಬ್ಬ ಆಟಗಾರನಿಗೂ 50 ಲಕ್ಷ ರೂ. ದಂಡ..! – Kannada News | PCB set to take a fine of 50 Lakh from each pakistan player

T20 World Cup 2026: ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪಾಕಿಸ್ತಾನ್ ತಂಡದ ಆಟಗಾರರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB)  50 ಲಕ್ಷ ರೂ. ದಂಡ ವಿಧಿಸಲು ನಿರ್ಧರಿಸಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಹೀನಾಯ ಪ್ರದರ್ಶನ ನೀಡಿರುವ ಹಿನ್ನಲೆ ಆಟಗಾರರಿಗೆ ದಂಡದ ಶಿಕ್ಷೆ ವಿಧಿಸಿ ಬಿಸಿ ಮುಟ್ಟಿಸಲು ಪಿಸಿಬಿ ಮುಂದಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನ್ ತಂಡವು ಈ ಬಾರಿಯ ವಿಶ್ವಕಪ್​ನಲ್ಲಿ ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಈ ವೇಳೆ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ…

Read More

ಭಾರತದ ದಾಳಿಗೆ ಕುಸಿದು ಬಿದ್ದು ಹೇಗ್ಹೇಗೋ ಎದ್ದು ನಿಂತಿದ್ದ ಪಾಕ್​ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ದಾಳಿ – Kannada News | Afghanistan Attacks Pakistan’s Nur Khan Airbase, Previously Hit by India

ನೂರ್ ಖಾನ್ ಏರ್​ಬೇಸ್ Image Credit source: Dinkar Singh Rawat-X Account ಇಸ್ಲಾಮಾಬಾದ್, ಮಾರ್ಚ್​ 02: ಆಪರೇಷನ್ ಸಿಂಧೂರ್(Operation Sindoor) ಸಮಯದಲ್ಲಿ ಭಾರತ ನಡೆಸಿದ ದಾಳಿಯಿಂದ ಕುಸಿದುಬಿದ್ದು, ಹೇಗ್ಹೇಗೋ ಎದ್ದು ನಿಂತಿದ್ದ ಪಾಕಿಸ್ತಾನದ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ಕೂಡ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದ ನೂರ್ ಖಾನ್ ವಾಯುನೆಲೆಯ ಮೇಲೆ ಅಫ್ಘಾನಿಸ್ತಾನ ವಾಯುದಾಳಿ ನಡೆದಿದೆ. ಕಳೆದ ಮೇ ತಿಂಗಳಿನಲ್ಲಿ ಭಾರತವು ಇದೇ ವಾಯುನೆಲೆ ಮೇಲೆ ದಾಳಿ ನಡೆಸಿತ್ತು….

Read More

ಅಮ್ಮಾ ಅವ್ನು ನನ್ನ ಬಳಿ ಕೆಟ್ಟದಾಗಿ ನಡೆದುಕೊಂಡ ಎಂದು ದೂರು ಕೊಟ್ಟಿದ್ದಕ್ಕೆ, ಬಾಲಕಿಯನ್ನೇ ಕತ್ತು ಸೀಳಿ ಕೊಂದ ಅಪ್ರಾಪ್ತ – Kannada News | Bihar Minor Kills 9 Year Old Girl for Complaining About His Drug Fueled Misbehavior

ಪಾಟ್ನಾ, ಮಾರ್ಚ್​ 02: ಮಾದಕದ್ರವ್ಯ ಸೇವಿಸಿ ತನ್ನ ಬಳಿ ಕೆಟ್ಟದಾಗಿ ನಡೆದುಕೊಂಡಿದ್ದ ಅಪ್ರಾಪ್ತನ ಬಗ್ಗೆ  ಮನೆಯಲ್ಲಿ ದೂರು ಕೊಟ್ಟಿದ್ದಕ್ಕೆ ಕೋಪಗೊಂಡ ಬಾಲಕ 9 ವರ್ಷದ ಬಾಲಕಿಯ ಕತ್ತು ಸೀಳಿ ಕೊಲೆ(Murder) ಮಾಡಿರುವ ಘಟನೆ ಬಿಹಾರದ ಕಟಿಹಾರ್​ನಲ್ಲಿ ನಡೆದಿದೆ. ಕರಣದ ಆರೋಪಿಯೂ ಅಪ್ರಾಪ್ತ ವಯಸ್ಕನಾಗಿದ್ದು, ಆತನನ್ನು ಬಂಧಿಸಲಾಗಿದೆ. ಕೊಲಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂದಲ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಒಂದು ದಿನ ಹಿಂದೆ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ನಂತರ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು…

Read More

ರಾಜಕೀಯದ 2ನೇ ಇನ್ನಿಂಗ್ಸ್ ಆರಂಭಿಸುವ ಮುನ್ನ ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ – Kannada News | Anant Kumar Hegde Visits Sirsi Marikamba Temple Ahead of Political Second Innings, To Address Hindu Convention on March 8

ಕಾರವಾರ, ಮಾರ್ಚ್​ 2: ಲೋಕಸಭೆ ಚುನಾವಣೆಯ ಟಿಕೆಟ್ ಕೈ ತಪ್ಪಿದ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಇದ್ದ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಇದೀಗ ರಾಜಕೀಯ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿರುವ ಸೂಚನೆ ನೀಡಿದ್ದಾರೆ. ಅದಕ್ಕೂ ಮುನ್ನ ಉತ್ತರ ಕನ್ನಡ ಜಿಲ್ಲೆಯ ಶಕ್ತಿ ದೇವತೆಯಾದ ಶಿರಸಿ ಮಾರಿಕಾಂಬಾ ದೇವಿಯ ಆಶೀರ್ವಾದ ಪಡೆದರು. ಶಿರಸಿಯಲ್ಲಿ ನಡೆಯುತ್ತಿರುವ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯ ಸಂದರ್ಭ ಸೋಮವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ಪತ್ನಿಯೊಂದಿಗೆ ದೇವಸ್ಥಾನಕ್ಕೆ…

Read More

ಹುಬ್ಬಳ್ಳಿ ಜನರೇ ಎಚ್ಚರ… ಹೆಸ್ಕಾಂ ಎಂದು ಹೇಳಿಕೊಂಡು ಮನೆಗೆ ಬರ್ತಾರೆ ನಕಲಿ ಬಿಲ್ ಕಲೆಕ್ಟರ್ – Kannada News | Caught! Hubballi’s Fake HESCOM Collector Nabbed by Alert Public

ಹುಬ್ಬಳ್ಳಿ, ಮಾ.2: ಹುಬ್ಬಳ್ಳಿಯ ಆನಂದ ನಗರದಲ್ಲಿ ವಂಚನೆಯ ವಿಭಿನ್ನ ಹಾದಿ ತುಳಿದಿದ್ದ ಖದೀಮನೊಬ್ಬ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಪೊಲೀಸರ ಅತಿಥಿಯಾಗಿದ್ದಾನೆ. ತಾನು ಹೆಸ್ಕಾಂ (HESCOM) ಬಿಲ್ ಕಲೆಕ್ಟರ್ ಎಂದು ಸುಳ್ಳು ಹೇಳಿ ಮನೆಮನೆಗೆ ಹೋಗಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಕಲೆಕ್ಟರ್‌ನನ್ನು ಜನರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದ ನಗರದಲ್ಲಿ ಈ ಘಟನೆ ನಡೆದಿದೆ. ಖದೀಮನು ಖಾಕಿ ಸಮವಸ್ತ್ರ ಧರಿಸಿ, ತಾನು ವಿದ್ಯುತ್ ಬಿಲ್ ವಸೂಲಿ ಮಾಡಲು ಬಂದಿರುವುದಾಗಿ ನಂಬಿಸಿದ್ದಾನೆ. ಮನೆ…

Read More

ಬೆಂಚ್​ನಲ್ಲಿ ಕೂತು ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾರನ್ನು ನೋಡಿದ್ದೇನೆ..! – Kannada News | IND vs WI: Sanju Samson credits Virat Kohli and Rohit Sharma

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಬರೋಬ್ಬರಿ 195 ರನ್​ ಕಲೆಹಾಕಿದ್ದರು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದ್ದರು. ಸಂಜು ಸ್ಯಾಮ್ಸನ್ ಅವರ…

Read More

ಬೆಂಚ್​ನಲ್ಲಿ ಕೂತು ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾರನ್ನು ನೋಡಿದ್ದೇನೆ..! – Kannada News | Ind vs wi sanju samson credits virat kohli and rohit sharma

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಬರೋಬ್ಬರಿ 195 ರನ್​ ಕಲೆಹಾಕಿದ್ದರು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದ್ದರು. ಸಂಜು ಸ್ಯಾಮ್ಸನ್ ಅವರ…

Read More

ತಾಯ್ನಾಡಿನಲ್ಲಿ ಯುದ್ಧದ ಕಾರ್ಮೋಡ: ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ – Kannada News | Davangere Wrestling: Iran’s Mirza, India’s Raviraj Draw at Duggamma Fair

ದಾವಣಗೆರೆ, ಮಾ.2: ಇಲ್ಲಿನ ದೇವತೆ ದುಗ್ಗಮ್ಮನ ಜಾತ್ರೆಯ ಅಂಗವಾಗಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್‌ನ ಮಿರ್ಜಾ ಪೈಲ್ವಾನ್ ಪ್ರೇಕ್ಷಕರ ಮನ ಗೆದ್ದಿದ್ದಾರೆ. ತಮ್ಮ ತಾಯ್ನಾಡಿನಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದರೂ, ದಾವಣಗೆರೆಯ ಮಣ್ಣಿನ ಅಖಾಡದಲ್ಲಿ ಬೆವರಳಿಸಿದ ಮಿರ್ಜಾ, ಭಾರತೀಯರ ಪ್ರೀತಿ ಮತ್ತು ಕ್ರೀಡಾಭಿಮಾನವನ್ನು ಹಾಡಿ ಹೊಗಳಿದ್ದಾರೆ. ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಫೈನಲ್ ಪಂದ್ಯವು ಭಾರೀ ಕುತೂಹಲ ಮೂಡಿಸಿತ್ತು. ಮಹಾರಾಷ್ಟ್ರದ ಪುಣೆಯ ಖ್ಯಾತ ಕುಸ್ತಿಪಟು ರವಿರಾಜ್ ಹಾಗೂ ಇರಾನ್‌ನ ಮಿರ್ಜಾ ನಡುವೆ ನಡೆದ ಈ ಕಾಳಗದಲ್ಲಿ…

Read More

‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ಮೊದಲ ದಿನ 75 ಲಕ್ಷ, ನಂತರ ಎರಡು ದಿನ ಮ್ಯಾಜಿಕ್ – Kannada News | The Kerala Story 2: Box Office Rises Amid Love Jihad Controversy and Court Battle

‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದವು. ಈಗ ‘ದಿ ಕೇರಳ ಸ್ಟೋರಿ 2’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಕೂಡ ಸಾಕಷ್ಟು ವಿವಾದಗಳನ್ನು ಸೃಷ್ಟಿಸಿದೆ. ಈ ಚಿತ್ರದ ರಿಲೀಸ್​​ಗೆ ಕೋರ್ಟ್ ತಡೆನೀಡಿತ್ತು. ಆ ಬಳಿಕ ತೆರವನ್ನು ತೆಗೆಯಲಾಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 75 ಲಕ್ಷ ರೂಪಾಯಿ ಮಾತ್ರ. ಆದರೆ, ಶನಿವಾರ ಹಾಗೂ ಭಾನುವಾರ ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ಧೂಳೆಬ್ಬಿಸಿದೆ….

Read More

ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ – Kannada News | BMTC Bus Breaks Down on Railway Track Near Anekal, Major Accident Averted After Traffic Chaos

ಆನೇಕಲ್, ಮಾರ್ಚ್​ 2: ಬೆಂಗಳೂರಿನ ಆನೇಕಲ್ ಸಮೀಪದ ರೈಲ್ವೆ ಗೇಟ್ ಬಳಿ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ನಡೆದಿದೆ. ಆನೇಕಲ್‌ನಿಂದ ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಸ್ಸು ರೈಲು ಹಳಿಯ ಮೇಲೆ ಸಾಗುತ್ತಿದ್ದಂತೆಯೇ ಕೆಟ್ಟ ನಿಂತಿತು. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕಿಲೋ ಮೀಟರ್​​​ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಅದೃಷ್ಟವಶಾತ್, ರೈಲ್ವೆ ಪಾಸಿಂಗ್ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More