Headlines

nagaraj11081993

ಮಧ್ಯ ಪ್ರಾಚ್ಯದಲ್ಲಿ ಯುದ್ಧ: ಪರದೇಶದಲ್ಲಿ ಸಿಲುಕಿ ಕನ್ನಡಿಗರ ಪರದಾಟ, ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ – Kannada News | Middle East War: Kannadigas Stranded Abroad Amidst Conflict, Govt Seeks Safe Return

ಬೆಂಗಳೂರು, ಮಾರ್ಚ್​​ 2: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿರುವ ಹಿನ್ನೆಲೆ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದವರು, ಉದ್ಯೋಗ ಸಂಬಂಧ ಕೆಲಸಗಳಿಗಾಗಿ ದುಬೈಗೆ ಹೋಗಿರುವ ಕನ್ನಡಿಗರು ಸ್ವದೇಶಕ್ಕೆ ಹಿಂತಿರುಗಲಾರದೆ ಪರದಾಟ ನಡೆಸುತ್ತಿದ್ದಾರೆ. ಏಕಾಏಕಿ ವಿಮಾನಗಳ ಹಾರಾಟ ರದ್ದುಗೊಂಡಿರುವ ಕಾರಣ ಆತಂಕಕ್ಕೆ ಒಳಗಾಗಿದ್ದಾರೆ. ಕ್ಷಣ ಕ್ಷಣಕ್ಕೂ ಯುದ್ಧದ ತೀವ್ರತೆ ಹೆಚ್ಚುತ್ತಿರುವ ಕಾರಣ ಜೀವ ಭಯ ಕಾಡತೊಡಗಿದ್ದು, ಈ ನಡುವೆ ಕನ್ನಡಿಗರು ಸೇರಿದಂತೆ ಸರ್ವ ಭಾರತೀಯರ ಸುರಕ್ಷಿತಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳೋದಾಗಿ ತಿಳಿಸಿದೆ. ಪ್ಯಾಮಿಲಿ ಜೊತೆ ಪ್ರವಾಸಕ್ಕೆ…

Read More

‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’ – Kannada News | Dhurandhar 2 vs Toxic: Can the Sequel’s Holi Trailer Overcome Yash’s Hype for March 19?

ಒಂದು ಸಿನಿಮಾ ಹಿಟ್ ಆಗಿ ಅದಕ್ಕೆ ಸೀಕ್ವೆಲ್ ಬರ್ತಿದೆ ಎಂದರೆ ಆ ಚಿತ್ರ ಹಿಟ್ ಆಗೋದು ಬಹುತೇಕ ಖಚಿತ ಎಂಬ ವಾತಾವರಣ ನಿರ್ಮಾಣ ಆಗಿದೆ. ‘ಬಾಹುಬಲಿ 2’, ‘ಕೆಜಿಎಫ್ 2’, ‘ಪುಷ್ಪ 2’ ಚಿತ್ರಗಳ ಮೂಲಕ ಇದು ಸಾಬೀತಾಗಿದೆ. ಈಗ ಮಾರ್ಚ್ 19ಕ್ಕೆ ‘ಧುರಂಧರ್ 2’ (Dhurandhar 2) ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ, ಈ ಚಿತ್ರಕ್ಕೆ ಪ್ರಚಾರ ಆರಂಭ ಆಗಿಲ್ಲ. ಇದು ರಣವೀರ್ ಸಿಂಗ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಯಶ್ ಎದುರು ಬರಲು ಸಾಕಷ್ಟು ಸಿದ್ಧತೆ…

Read More

ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್​ಮೇಲ್ ಮಾಡಿದ ಮಾಜಿ ಪ್ರಿಯಕರ, ಆತನ ಕೊಂದು, ಮುಖಕ್ಕೆ ಆ್ಯಸಿಡ್ ಹಾಕಿದ ಮಹಿಳೆ – Kannada News | Ballia Blackmail Murder: Woman Kills Ex Lover Over Private Videos, Disfigures Face

ಬಲ್ಲಿಯಾ, ಮಾರ್ಚ್​ 02: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು ಮಹಿಳೆಯೊಬ್ಬರು ಕೊಂದು, ಮುಖಕ್ಕೆ ಆ್ಯಸಿಡ್ ಹಾಕಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ. ವಿವಾಹಿತ ಮಹಿಳೆಯೊಬ್ಬರು, ಸಂಬಂಧ ಕೊನೆಗೊಳಿಸಲು ಪ್ರಯತ್ನಿಸಿದಾಗ ಆಕೆಗೆ ಬ್ಲ್ಯಾಕ್‌ಮೇಲ್ ಮಾಡಿದ್ದ, ಹಾಗಾಗಿ ಆಕೆ ತನ್ನ ಸಹೋದರ ಮತ್ತು ಅತ್ತಿಗೆಯ ಸಹಾಯದಿಂದ ಆತನನ್ನು ಕೊಲೆ(Murder) ಮಾಡಿದ್ದಾಳೆ. ತಮ್ಮ ಗ್ರಾಮಕ್ಕೆ ಬರುವಂತೆ ಕರೆದು, ಕತ್ತು ಹಿಸುಕಿ ಕೊಂದು, ನಂತರ ಗುರುತನ್ನು ಮರೆಮಾಚಲು ಆಸಿಡ್‌ನಿಂದ ಮುಖವನ್ನು ವಿರೂಪಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ…

Read More

ಕನ್ನಡಿಗರಷ್ಟೇ ಅಲ್ಲ ಯಾರೂ ಆತಂಕ ಪಡಬೇಕಿಲ್ಲ, ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಪ್ರಲ್ಹಾದ್ ಜೋಶಿ ಅಭಯ – Kannada News | No Need to Panic, All Indians Will Be Brought Back Safely from Iran Israel War Zone: Pralhad Joshi Assures

ನವದೆಹಲಿ, ಮಾರ್ಚ್ 2: ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಸೋಮವಾರ ತಿಳಿಸಿದ್ದಾರೆ. ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಉಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ….

Read More

ಸಂಜು ಸ್ಯಾಮ್ಸನ್ ಅಲ್ಲ, ಗೆಲುವಿಗೆ ಈತ ಕಾರಣ: ಗಂಭೀರ್ ಅಚ್ಚರಿಯ ಹೇಳಿಕೆ – Kannada News | Gautam Gambhir acknowledges Shivam Dube’s contribution

T20 World Cup 2026: ಟಿ20 ವಿಶ್ವಕಪ್ 2026ರ ಸೆಮಿಫೈನಲ್​ಗೆ ಟೀಮ್ ಇಂಡಿಯಾ ಲಗ್ಗೆಯಿಟ್ಟಿದೆ. ಅದು ಸಹ ಬಲಿಷ್ಠ ವೆಸ್ಟ್ ಇಂಡೀಸ್ ಪಡೆಯನ್ನು ಬಗ್ಗು ಬಡಿಯುವ ಮೂಲಕ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 195 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ…

Read More

ಬಬಲಾದಿ ಕಾಲಜ್ಞಾನ ನಿಜವಾಯಿತೇ?: ಯುದ್ಧ ಆಯಿತು, ಮುಂದೆ ಪ್ರವಾಹ, ಭಾರತಕ್ಕೆ ಗಡಿ ಆತಂಕ! – Kannada News | Kala Jnana Realized: Babaladi Mutt’s Warnings on Middle East War and Disasters

ವಿಜಯಪುರ, ಮಾ.2: ಉತ್ತರ ಕರ್ನಾಟಕದ ಅತಿ ಹೆಚ್ಚು ನಂಬಿಕಸ್ತ ಕಾಲಜ್ಞಾನ ಕೇಂದ್ರಗಳಲ್ಲೊಂದಾದ ಬಬಲಾದಿ ಶ್ರೀ ಸದಾಶಿವ ಮುತ್ಯಾರ ಮಠದ ಭವಿಷ್ಯವಾಣಿ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆ ನಡೆದ ಮಠದ ಜಾತ್ರೆಯಲ್ಲಿ ನುಡಿಯಲಾಗಿದ್ದ ಅಶುಭ ಮುನ್ಸೂಚನೆಗಳು ಈಗ ಅಕ್ಷರಶಃ ನಿಜವಾಗುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿವೆ. “ಗಡಿಯಲ್ಲಿ ಭೀತಿ ಎದುರಾಗಲಿದೆ, ಯುದ್ಧದ ಕಾರ್ಮೋಡ ಕವಿಯಲಿದೆ” ಎಂದು ಪೀಠಾಧಿಪತಿಗಳು ಸ್ಪಷ್ಟವಾಗಿ ಹೇಳಿದ್ದರು. ಇದು ಪ್ರಸ್ತುತ ಅಮೇರಿಕಾ-ಇರಾನ್-ಇಸ್ರೇಲ್ ನಡುವಿನ ಸಂಘರ್ಷಕ್ಕೆ ನೇರ ಸಾಕ್ಷಿಯಂತಿದೆ. “ಜಾಗತಿಕ ಮಟ್ಟದಲ್ಲಿ ದೊಡ್ಡ ಕೆಡಕಾಗಲಿದೆ, ದೊಡ್ಡ ದುಃಖದ…

Read More

ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಮದುವೆ ಆದರು. ಅವರ ವಿವಾಹ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿತು. ವಿವಾಹ ಆದ ಬಳಿಕ ರಶ್ಮಿಕಾ ಹಾಗೂ ವಿಜಯ್ ಒಟ್ಟಾಗಿ ತಿರುಪತಿ ತೆರಳಿದ್ದರು. ಈ ವೇಳೆ ಅಭಿಮಾನಿಗಳಿಗೆ ಸಿಹಿ ವಿತರಣೆ ಮಾಡಿದ್ದರು. ಸ್ವೀಟ್ ಬಾಕ್ಸ್ ಸಿಕ್ಕ ಫ್ಯಾನ್ಸ್ ಇದನ್ನು ಶೇರ್ ಮಾಡಿಕೊಂಡಿದ್ದಾರೆ.  ರಸಗುಲ್ಲಾ, ಲಾಡು ಸೇರಿ ಮೂರು ವಿಧದ ಸ್ವೀಟ್ ಇವೆ. ಈ ವಿಡಿಯೋ ನೋಡಿದ ಅನೇಕರು, ‘ಸ್ವೀಟ್​​ಗಿಂತ ಬಾಕ್ಸ್​​ಗೆ ಹೆಚ್ಚು ಖರ್ಚಾಗಿದೆ’ ಎಂದು ಅಣಕಿಸಿದ್ದಾರೆ. ಇನ್ನಷ್ಟು…

Read More

ಕೈಗಾ ಅಣು ವಿದ್ಯುತ್ ಯೋಜನೆಗೆ ಮೇಕ್​​ ಇನ್​ ಇಂಡಿಯಾ ಬಲ: 5 ಮತ್ತು 6ನೇ ಘಟಕಗಳಿಗೆ ಸ್ವದೇಶಿ ತಂತ್ರಜ್ಞಾನದ ರಿಯಾಕ್ಟರ್‌ಗಳ ಬಳಕೆ – Kannada News | Kaiga Nuclear Project Expansion: Indigenous Tech Boosts Karnataka’s Energy Security

ಬೆಂಗಳೂರು, ಮಾರ್ಚ್​​ 2: ರಕ್ಷಣಾ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿದ್ದ ಮೇಕ್​​ ಇನ್​ ಇಂಡಿಯಾ ಯೋಜನೆ ಈಗ ಅಣುಶಕ್ತಿ ಕ್ಷೇತ್ರಕ್ಕೂ ಕಾಲಿಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಯೋಜನೆಯ 5 ಮತ್ತು 6ನೇ ಘಟಕಗಳ ನಿರ್ಮಾಣ ಕಾಮಗಾರಿಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಈ ಘಟಕಗಳಲ್ಲಿ ಸ್ಥಾಪನೆಯಾಗುವ ರಿಯಾಕ್ಟರ್‌ಗಳು ಸಂಪೂರ್ಣ ಸ್ವದೇಶಿ ತಂತ್ರಜ್ಞಾನದಿಂದ ನಿರ್ಮಿತವಾಗಿವೆ ಎನ್ನುವುದು ವಿಶೇಷ. ಈ ಬಗ್ಗೆ ಮಾಹಿತಿ ನೀಡಿರುವ ಕೈಗಾ ಘಟಕದ ಸೈಟ್ ನಿರ್ದೇಶಕ ಬಿ. ವಿನೋದ್ ಕುಮಾರ್ , 700…

Read More

ಪತ್ನಿಗೆ ವಿಮೆ ಹಣ ಸಿಗಲಿ ಎಂದು ಸತ್ತಂತೆ ನಾಟಕವಾಡಿದ ಪತಿ, ಅಗಲುವಿಕೆಯ ನೋವು ತಾಳಲಾರದೆ ಮಕ್ಕಳ ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ – Kannada News | Insurance Fraud Triggers China Family Tragedy: Husband Fakes Death, Wife Kills Kids and Self

ಬೀಜಿಂಗ್, ಮಾರ್ಚ್​ 02: ಎಂಥಾ ವಿಪರ್ಯಾಸ ನೋಡಿ, ಹೆಂಡತಿ ಮಕ್ಕಳು ಸುಖವಾಗಿರಬೇಕು ಎಂದು ಪತಿ ಸತ್ತಂತೆ ನಾಟವಾಡಿದರೆ, ಅದೇ ನಿಜವೆಂದು ನಂಬಿ ಮನನೊಂದು ಪತ್ನಿ ಹಾಗೂ ಮಕ್ಕಳು ನಿಜವಾಗಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ. ಆಗ್ನೇಯ ಚೀನಾದ ಹುನಾನ್ ಪ್ರಾಂತ್ಯದ ಗ್ರಾಮೀಣ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತುಂಬಾ ಸಾಲ ಮಾಡಿಕೊಂಡಿದ್ದ, ಅದರಿಂದ ತಪ್ಪಿಸಿಕೊಳ್ಳಲು ಸತ್ತಂತೆ ನಾಟಕವಾಡಿದ್ದ. ತನ್ನ ಪತಿಯ ಹಠಾತ್ ಸಾವಿನ ಸುದ್ದಿಯಿಂದ ಆ ವ್ಯಕ್ತಿಯ ಪತ್ನಿ ದಂಗಾಗಿದ್ದಳು. ಆಕೆಯ ಪತಿಯ ಕಾರು ನದಿಯಲ್ಲಿ ಪತ್ತೆಯಾಗಿತ್ತು. ಆದರೂ…

Read More

ಅಂದು ಲೇವಡಿ ಮಾಡಿ, ಇಂದು ತಲೆಬಾಗಿ ನಿಂತ ಸೂರ್ಯ..! – Kannada News | SuryaKumar Yadav bowing down to Sanju Sanson after his match winning innings

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಮರಣೀಯ ಇನಿಂಗ್ಸ್ ಆಡಿದ್ದಾರೆ. ಈ ಇನಿಂಗ್ಸ್​ನೊಂದಿಗೆ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವನ್ನೂ ಸಹ ತಂದು ಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಬಾರಿಯ ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ಸ್ಯಾಮ್ಸನ್​ಗೆ ಅವಕಾಶ ಸಿಕ್ಕಿರಲಿಲ್ಲ. ಅದರಲ್ಲೂ ನಮೀಬಿಯ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದ ಕಾರಣ ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್…

Read More