All posts by nagaraj11081993

ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ – Kannada News | BMTC Bus Breaks Down on Railway Track Near Anekal, Major Accident Averted After Traffic Chaos

ಆನೇಕಲ್, ಮಾರ್ಚ್​ 2: ಬೆಂಗಳೂರಿನ ಆನೇಕಲ್ ಸಮೀಪದ ರೈಲ್ವೆ ಗೇಟ್ ಬಳಿ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ನಡೆದಿದೆ. ಆನೇಕಲ್‌ನಿಂದ ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಸ್ಸು ರೈಲು ಹಳಿಯ ಮೇಲೆ ಸಾಗುತ್ತಿದ್ದಂತೆಯೇ ಕೆಟ್ಟ ನಿಂತಿತು. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕಿಲೋ ಮೀಟರ್​​​ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಅದೃಷ್ಟವಶಾತ್, ರೈಲ್ವೆ ಪಾಸಿಂಗ್ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಕೌಟ್​ನಲ್ಲಿ ನಾಲ್ಕು ತಂಡಗಳು: ಇಲ್ಲಿದೆ ವೇಳಾಪಟ್ಟಿ

Source link

ಬೆಂಗಳೂರಿನಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಿದ್ದತೆ: ಪರಿಸರ ಹೋರಾಟಗಾರರ ಆಕ್ರೋಶ – Kannada News | Mass Tree Felling Planned Near Sir M. Visvesvaraya Railway Station in Bengaluru Sparks Environmental Outrage

ಸರ್​​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​​ ಹೊರಬಾಗದ ನೋಟImage Credit source: tv9

ಬೆಂಗಳೂರು, ಮಾರ್ಚ್​ 2: ಬೈಯಪ್ಪನಹಳ್ಳಿ ಬಳಿಯ ಸರ್​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​ನಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ ಬರೋಬ್ಬರಿ 269 ಮರಗಳನ್ನು ಕಡಿಯಲು ರೈಲ್ವೆ ಇಲಾಖೆ (Indian Railways) ಮುಂದಾಗುತ್ತಿದೆ. ಇದಕ್ಕೆ ಪರಿಸರ ಹೋರಾಟಗಾರರಿಂದ ಆಕ್ಷೇಪ ವ್ಯಕ್ತವಾಗಿದೆ. ಬೈಯಪ್ಪನಹಳ್ಳಿಯಲ್ಲಿರುವ ಎಸ್ಎಂವಿಟಿ ರೈಲ್ವೆ ನಿಲ್ದಾಣದಲ್ಲಿರುವ 269 ಮರಗಳು ಹತ್ತಾರು ವರ್ಷಗಳ ಹಳೆಯದ್ದಾಗಿವೆ. ಅವುಗಳು ಬೃಹತ್ ಮರಗಳಾಗಿದ್ದು, ಹಾಗಾಗಿ ಯಾವುದೇ ಕಾರಣಕ್ಕೂ ಅವುಗಳನ್ನು ಕಡಿಯಬಾರದು ಎಂದು ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ಮರಗಳನ್ನು ಕಡಿಯಲು ಮುಂದಾದರೆ ರೈಲು ನಿಲ್ದಾಣದ ಎದುರು ಬೃಹತ್ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಆದರೆ, ರೈಲ್ವೆ ಇಲಾಖೆ ಮಾತ್ರ ಯಾವುದನ್ನೂ ಲೆಕ್ಕಿಸದೆ ಮರಗಳನ್ನು ಕಡಿಯಲು ಸಿದ್ದತೆ ಮಾಡಿಕೊಂಡಿದೆ.

ರೈಲ್ವೆ ಕೋಚ್​ಗಳ ತಪಾಸಣೆ ಮತ್ತು ನಿರ್ವಹಣೆ ಮಾಡುವುದಕ್ಕಾಗಿ ರೈಲ್ವೆ ಡಿಪೋ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಮುಂದಾಗಿದೆ. ಇಲಾಖೆ ಉದ್ದೇಶಿಸಿರುವ ಅದೇ ಜಾಗದಲ್ಲಿ 269 ಮರಗಳಿವೆ. ಹೀಗಾಗಿ ಆ ಮರಗಳನ್ನು ಕಡಿದು ಕಾಮಗಾರಿ ಮಾಡಲು ರೈಲ್ವೆ ಇಲಾಖೆ ತೀರ್ಮಾನ ಮಾಡಿದೆ. ಇದಕ್ಕೆ ಈಗ ಸ್ಥಳೀಯರಿಂದಲೂ ಅಸಮಾಧಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೂ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ

ಒಟ್ಟಿನಲ್ಲಿ, ಅಭಿವೃದ್ಧಿ ಅನ್ನೋ ಹೆಸರಿನಲ್ಲಿ ಮರಗಳನ್ನು ಕಡಿಯುತ್ತಾ ಹೋದರೆ ಗಾರ್ಡನ್ ಸಿಟಿ ಹೋಗಿ ಕಾಂಕ್ರೀಟ್ ಜಂಗಲ್ ಆಗುವುದರಲ್ಲಿ ಅನುಮಾನವಿಲ್ಲ ಎಂಬ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ – Kannada News | Rashmika Mandanna And Vijay Devarakonda Attend Allu Sirish Wedding program

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ವಿವಾಹ ಆದರು. ಈ ಮದುವೆ ಬಳಿಕ ಅವರು ಅಲ್ಲು ಅರ್ಜುನ್ ಮನೆ ಮದುವೆಗೆ ಭೇಟಿ ನೀಡಿದ್ದಾರೆ. ಇದಕ್ಕೆ ಕಾರಣ, ಅಲ್ಲು ಸಿರಿಶ್ ಮದುವೆ. ಹೌದು, ಅಲ್ಲು ಸಿರಿಶ್ ಮದುವೆ ಶಾಸ್ತ್ರಗಳು ಅದ್ದೂರಿಯಾಗಿ ನಡೆಯುತ್ತಿವೆ. ಈ ಸಂದರ್ಭದಲ್ಲಿ ರಶ್ಮಿಕಾ ಹಾಗೂ ವಿಜಯ್ ತೆರಳಿ, ನವ ದಂಪತಿ ಆಗಲಿರುವ ಜೋಡಿಗೆ ಶುಭ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ಮುಂದುವರೆಯಬಹುದು, ಟ್ರಂಪ್ ಹೇಳಿದ್ದೇನು? – Kannada News | Trump on US Iran War: Duration, Israel’s Role and Epic Fury Operations

ವಾಷಿಂಗ್ಟನ್, ಮಾರ್ಚ್​ 02: ಇರಾನ್(Iran) ಜೊತೆ ನಡೆಯುತ್ತಿರುವ ಸಂಘರ್ಷದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಹೇಳಿಕೆ ನೀಡಿದ್ದಾರೆ. ಸಂಘರ್ಷ ಮುಂದಿನ ನಾಲ್ಕು ವಾರಗಳವರೆಗೆ ಮುಂದುವರೆಯಬಹುದು ಎಂದು ಅವರು ಹೇಳಿದ್ದಾರೆ. ಇದು ನಾಲ್ಕು ವಾರಗಳು ಅಥವಾ ಅದಕ್ಕಿಂತ ಮುಂಚೆಯೂ ಅಂತ್ಯಗೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಯುದ್ಧದಲ್ಲಿ ಪ್ರಾಣ ಕಳೆದುಕೊಂಡ ಅಮೇರಿಕದ ಸೈನಿಕರಿಗೆ ಅವರು ಗೌರವ ಸಲ್ಲಿಸಿದರು.

ಭಾನುವಾರ ಪ್ರತಿಷ್ಠಿತ ಡೈಲಿ ಮೇಲ್‌ಗೆ ನೀಡಿದ ಸಂದರ್ಶನದಲ್ಲಿ, ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ಯುಎಸ್ ಮಿಲಿಟರಿ ಕಾರ್ಯಾಚರಣೆ ಇನ್ನೂ ನಾಲ್ಕು ವಾರಗಳವರೆಗೆ ಇರುತ್ತದೆ ಎಂದರು. ಇದು ದೊಡ್ಡ ದೇಶ, ಆದ್ದರಿಂದ ಇದು ನಾಲ್ಕು ವಾರಗಳು ಅಥವಾ ಅದಕ್ಕಿಂತ ಕಡಿಮೆ ಸಮಯ ತೆಗೆದುಕೊಳ್ಳಬಹುದು ಎಂದರು.

ಇರಾನ್ ಕಡೆಯವರು ಮಾತನಾಡಲು ಬಯಸಿದ್ದರು, ಆದರೆ ಕಳೆದ ವಾರ ಅವರು ಆ ಪ್ರಯತ್ನ ಮಾಡಬೇಕಿತ್ತು ಎಂದು ಅವರು ವಿವರಿಸಿದರು. ಅವರು ಪ್ರಸ್ತುತ ಜನರಲ್‌ಗಳನ್ನು ಭೇಟಿ ಮಾಡುತ್ತಿದ್ದಾರೆ. , 48 ಉನ್ನತ ಇರಾನಿನ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಯುದ್ಧನೌಕೆಗಳು ನಾಶವಾಗಿವೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ನಿಜವಾಗಿಯೂ ಅಮೆರಿಕ ಹೇಳಿದ್ದಕ್ಕೆ ಇರಾನ್ ಒಪ್ಪುತ್ತಿರಲಿಲ್ಲವೇ? ಅದಕ್ಕೆ ಈ ಯುದ್ಧ ಪ್ರಾರಂಭವಾಯಿತೇ?

ಕಾರ್ಯಾಚರಣೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಕೊನೆಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಯುದ್ಧ ಕಾರ್ಯಾಚರಣೆಗಳು ಪ್ರಸ್ತುತ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿವೆ ಮತ್ತು ಕಾರ್ಯಾಚರಣೆಗಳು ಪೂರ್ಣಗೊಳ್ಳುವವರೆಗೆ ಮುಂದುವರಿಯುತ್ತವೆ.ನಮ್ಮ ಉದ್ದೇಶವು ತುಂಬಾ ಪ್ರಬಲವಾಗಿದೆ.

ಇರಾನ್ ಅನ್ನು ಯಾರು ಮುನ್ನಡೆಸಲು ಬಯಸುತ್ತಾರೆ ಎಂದು ಟ್ರಂಪ್ ಅವರನ್ನು ಕೇಳಿದಾಗ, ನನ್ನ ಬಳಿ ಮೂರು ಉತ್ತಮ ಆಯ್ಕೆಗಳಿವೆ, ಆದರೆ ಈಗ ನಾನು ಅವರಿಗೆ ಹೇಳುವುದಿಲ್ಲ ಎಂದು ಹೇಳಿದರು. ಕಳೆದ 36 ಗಂಟೆಗಳಲ್ಲಿ, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡೆಸಿದ ಸಶಸ್ತ್ರ ದಾಳಿಗಳು ಇರಾನ್ ಅನ್ನು ಧ್ವಂಸಗೊಳಿಸಿವೆ. ನೂರಾರು ಗುರಿಗಳು ನಿಮಿಷಗಳಲ್ಲಿ ನಾಶವಾದವು ಮತ್ತು ಒಂಬತ್ತು ಹಡಗುಗಳು ಮತ್ತು ಅವುಗಳ ನೌಕಾ ಕಟ್ಟಡಗಳು ಬೂದಿಯಾದವು.

ಇದಲ್ಲದೆ, ಈ ಇಸ್ರೇಲಿ ಮತ್ತು ಅಮೇರಿಕನ್ ದಾಳಿಗಳು ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಸಾವಿಗೆ ಕಾರಣವಾಯಿತು, ಇದು ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಇರಾನ್ ಇಸ್ರೇಲ್ ಮೇಲೆ ದಾಳಿ ಮಾಡಿತು ಮತ್ತು ಕೊಲ್ಲಿಯಲ್ಲಿರುವ ಯುಎಸ್ ನೆಲೆಗಳ ಮೇಲೆ ಪದೇ ಪದೇ ಬಾಂಬ್ ದಾಳಿ ಮಾಡಿತು.

ವೀಡಿಯೊ ಸಂದೇಶದಲ್ಲಿ, ಈ ಯುದ್ಧವು ಕೇವಲ ಅಧಿಕಾರಕ್ಕಾಗಿ ಅಲ್ಲ, ನ್ಯಾಯ ಮತ್ತು ಭದ್ರತೆಗಾಗಿ ಹೋರಾಟ ಎಂದು ಟ್ರಂಪ್ ಹೇಳಿದ್ದಾರೆ. ಕಳೆದ 36 ಗಂಟೆಗಳಲ್ಲಿ ಅಮೆರಿಕ ಮತ್ತು ಅದರ ಪಾಲುದಾರರು ಆಪರೇಷನ್ ಎಪಿಕ್ ಫ್ಯೂರಿಯನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದರು.

ಇದು ಜಗತ್ತು ಕಂಡ ಅತಿದೊಡ್ಡ ಮತ್ತು ಅತ್ಯಂತ ಸಂಕೀರ್ಣವಾದ ಮಿಲಿಟರಿ ಕಾರ್ಯಾಚರಣೆಯಾಗಿದೆ. ಇರಾನ್‌ನ ಕ್ರಾಂತಿಕಾರಿ ಗಾರ್ಡ್ ಸೌಲಭ್ಯಗಳು ಮತ್ತು ವಾಯು ರಕ್ಷಣಾ ವ್ಯವಸ್ಥೆಗಳು ಸೇರಿದಂತೆ ನೂರಾರು ಗುರಿಗಳನ್ನು ಈ ದಾಳಿಯಲ್ಲಿ ಗುರಿಯಾಗಿಸಲಾಗಿದೆ ಎಂದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮತ್ತೆ ಸಂಡೂರಿನಲ್ಲಿ ಗಣಿ ವಿಸ್ತರಣೆ ಆತಂಕ: ಸುಪ್ರೀಂ ಕೋರ್ಟ್ ಅದೇಶ ಮೀರಿ ಹೆಚ್ಚುವರಿ ಗಣಿಗಾರಿಕೆಗೆ ನಡೆಯುತ್ತಿದೆಯಾ ಸಿದ್ಧತೆ? – Kannada News | Mining Expansion Fears in Sandur: Allegations of Excess Iron Ore Extraction Beyond Supreme Court Limit in Ballari

ಮತ್ತೆ ಸಂಡೂರಿನಲ್ಲಿ ಗಣಿ ವಿಸ್ತರಣೆ ಆತಂಕImage Credit source: tv9

ಬಳ್ಳಾರಿ, ಮಾರ್ಚ್ 2: ಗಣಿನಾಡು ಎಂದೇ ಪ್ರಸಿದ್ಧಿಯಲ್ಲಿರುವ ಬಳ್ಳಾರಿಯ (Ballari) ಸಂಡೂರಿನಲ್ಲಿ (Sandur) ಮತ್ತೆ ಗಣಿ ವಿಸ್ತರಣೆ ಭೀತಿ ತಲೆದೋರಿದೆ. ಅರಣ್ಯ ಪ್ರದೇಶದ ಹೆಚ್ಚುವರಿ ಭೂಮಿಯನ್ನು ಗಣಿಗಾರಿಕೆಗೆ ನೀಡಲು ಸದ್ದಿಲ್ಲದೆ ಸಿದ್ಧತೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಹೆಚ್ಚಿಸಿದೆ. ಸಂಡೂರಿನ ಸ್ವಾಮಿಮಲೈ ಅರಣ್ಯ ವ್ಯಾಪ್ತಿಯ ದೇವದಾರಿ ಅರಣ್ಯ ಪ್ರದೇಶದಲ್ಲಿ ಸುಮಾರು 1,000 ಎಕರೆ ಹಾಗೂ ರಾಮಗಡ ಅರಣ್ಯ ಪ್ರದೇಶದಲ್ಲಿ 150 ಎಕರೆ ಸೇರಿ ಒಟ್ಟು 1,150 ಎಕರೆ ಅರಣ್ಯ ಭೂಮಿಯನ್ನು ಗಣಿಗಾರಿಕೆಗೆ ನೀಡಲು ಯತ್ನ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಭೂಮಿಯನ್ನು ಕುದುರೆಮುಖ ಐರನ್ ಓರ್ ಕಂಪನಿ (KIOCL) ಮತ್ತು ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL)ಗೆ ಲೀಸ್ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ?

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸಂಡೂರು ಭಾಗದಲ್ಲಿ ವರ್ಷಕ್ಕೆ 30 ಮಿಲಿಯನ್ ಟನ್‌ಗಳಷ್ಟು ಮಾತ್ರ ಅದಿರು ಗಣಿಗಾರಿಕೆಗೆ ಅವಕಾಶವಿದೆ. ಆದರೆ ಇದನ್ನು 50 ಮಿಲಿಯನ್ ಟನ್‌ಗಳಿಗೆ ಹೆಚ್ಚಿಸಲು ಪ್ರಯತ್ನ ನಡೆಯುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದೆ. ಇದು ನ್ಯಾಯಾಲಯದ ನಿಯಮ ಉಲ್ಲಂಘನೆಯಾಗಬಹುದು ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಸಂಡೂರಿನ ಅರಣ್ಯ ಪ್ರದೇಶದ ಒಟ್ಟು 32 ಸಾವಿರ ಹೆಕ್ಟೇರ್ ವ್ಯಾಪ್ತಿಯಲ್ಲಿ ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಈಗಾಗಲೇ ಗಣಿಗಾರಿಕೆಯಿಂದ ಗಣಿ ಧೂಳು, ಅಂತರ್ಜಲ ಸಮಸ್ಯೆ, ಆರೋಗ್ಯ ಸಮಸ್ಯೆಗಳು ಮತ್ತು ಪರಿಸರ ಹಾನಿ ಸೇರಿದಂತೆ ಹಲವು ಸಮಸ್ಯೆಗಳನ್ನು ಸ್ಥಳೀಯರು ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮತ್ತಷ್ಟು ಅರಣ್ಯ ಪ್ರದೇಶವನ್ನು ಗಣಿಗಾರಿಕೆಗೆ ನೀಡಿದರೆ ಲಕ್ಷಾಂತರ ಮರಗಳು ನಾಶವಾಗುವ ಸಾಧ್ಯತೆ ಇದೆ ಎಂದು ಜನರು ಎಚ್ಚರಿಸಿದ್ದಾರೆ.

ಸ್ಥಳೀಯರ ಅಭಿಪ್ರಾಯದಂತೆ, ಈಗಾಗಲೇ ಸಂಡೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಎಂಡಿಸಿ (NMDC) ಗಣಿಯಿಂದಲೇ ಅಗತ್ಯವಾದ ಅದಿರನ್ನು ಪಡೆದು ಕೈಗಾರಿಕೆಗಳನ್ನು ನಡೆಸಬಹುದು. ಕುದುರೆಮುಖ ಐರನ್ ಓರ್ ಕಂಪನಿ ಹಾಗೂ ವಿಐಎಸ್‌ಎಲ್ ಕಾರ್ಖಾನೆಗಳನ್ನು ಬಳ್ಳಾರಿ ಜಿಲ್ಲೆಯ ಕುಡುತಿನಿ ಭಾಗದಲ್ಲಿ ಸ್ಥಾಪಿಸಲು ರೈತರು ಸಾವಿರಾರು ಎಕರೆ ಭೂಮಿ ನೀಡಿರುವುದಾಗಿ ಹೇಳಲಾಗಿದೆ. ಆದ್ದರಿಂದ ಹೊಸ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದಕ್ಕೆ ಬದಲಾಗಿ ಈಗಿರುವ ಸಂಪನ್ಮೂಲಗಳನ್ನು ಬಳಸಿ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಯಾವುದೇ ಕಾರಣಕ್ಕೂ ಹೊಸ ಗಣಿಗಾರಿಕೆಗೆ ಅವಕಾಶ ನೀಡಬಾರದು. ಪರಿಸರ, ಅರಣ್ಯ ಮತ್ತು ಮುಂದಿನ ಪೀಳಿಗೆಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಕೈಗೊಳ್ಳಬೇಕು” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು? ಮಾಜಿ ಸಚಿವನಿಂದ 884 ಕೋಟಿ ನಷ್ಟ ವಸೂಲಿ?

ಒಟ್ಟಿನಲ್ಲಿ, ಸಂಡೂರಿನ ಹಸಿರು ಕಾಡುಗಳನ್ನು ಮತ್ತಷ್ಟು ಗಣಿಗಾರಿಕೆಗೆ ತೆರೆದುಕೊಟ್ಟರೆ ಸಸ್ಯ-ಪ್ರಾಣಿ ಸಂಕುಲಕ್ಕೆ ಭಾರೀ ಹಾನಿಯಾಗುವ ಸಾಧ್ಯತೆ ಇದೆ. ಅಭಿವೃದ್ಧಿಯ ಜೊತೆಗೆ ಪರಿಸರ ಸಂರಕ್ಷಣೆಯೂ ಸಮಾನವಾಗಿ ಮುಖ್ಯ ಎಂದು ಸ್ಥಳೀಯರು, ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

200 ರನ್​ ಕಷ್ಟವೇನಲ್ಲ… ಒಳ್ಳೆಯವರಿಗೆ ಒಳ್ಳೆದೇ ಆಗುತ್ತೆ…! – Kannada News | Suryakumar yadav post match presentation after IND vs WI Match

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು.

196 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಜೇಯ 97 ರನ್ ಬಾರಿಸಿದರು. ಈ ಮೂಲಕ ಭಾರತ ತಂಡವು 19.2 ಓವರ್​ಗಳಲ್ಲಿ 199 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಿದೆ.

ಈ ಗೆಲುವಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ತಂಡದ ಪ್ರದರ್ಶನಕ್ಕೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ. ಈ ಪಂದ್ಯವು ಒಂದು ಅದ್ಭುತ ಅನುಭವ. ಕ್ವಾರ್ಟರ್ ಫೈನಲ್​ ಆಗಿದ್ದ ಈ ಪಂದ್ಯದಲ್ಲಿ ನಾವು ಆಡಿದ ರೀತಿಯೇ ಅದ್ಭುತವಾಗಿತ್ತು. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ನಮ್ಮ ಹುಡುಗರು ವಹಿಸಿದ ಪಾತ್ರ ಅತ್ಯುತ್ತಮವಾಗಿತ್ತು. ಈ ಅದ್ಭುತ ಪ್ರದರ್ಶನದ ಫಲವಾಗಿ ನಾವು ಗೆದ್ದಿದ್ದೇವೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

ಇದೇ ವೇಳೆ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸೂರ್ಯ, ನೋಡಿ, ನಾನು ಯಾವಾಗಲೂ ಹೇಳುತ್ತೇನೆ, ಕಾಯುವ, ತಾಳ್ಮೆ ಹೊಂದಿರುವ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ . ನಾನು ಸಂಜುನನ್ನು ಭೇಟಿಯಾದಾಗಲೂ ಅದನ್ನು ಈಗ ಹೇಳಿದ್ದೆ. ಆದರೆ ಅದು ಅವರ ಕಠಿಣ ಪರಿಶ್ರಮ, ಅವರು ಆಡದಿದ್ದಾಗ ಹಿಂಬದಿಯಲ್ಲಿ ಹಿಂದೆ ಏನು ಮಾಡುತ್ತಿದ್ದಾರೆ, ಮತ್ತು ಅವರು ಅದರ ಫಲವನ್ನು ಪರಿಪೂರ್ಣ ಹಂತದಲ್ಲಿ ಪಡೆದಿದ್ದಾರೆ.

ನಿಜವಾಗಿಯೂ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಮಾಡಿದ ರೀತಿ ತಂಡವನ್ನು ಸಂಪೂರ್ಣವಾಗಿ ಗೆಲುವಿನತ್ತ ಕೊಂಡೊಯ್ದಿತು ಎಂದರೆ ತಪ್ಪಾಗಲಾರದು. ಹೀಗಾಗಿ ಈ ಗೆಲುವಿನ ಅವರ ಪಾತ್ರ ಪ್ರಮುಖವಾಗಿತ್ತು. ಮೊದಲೇ ಹೇಳಿದಂತೆ ಒಳ್ಳೆಯವರಿಗೆ ಒಳ್ಳೆದೇ ಆಗುತ್ತೆ ಎಂದು ನಾನು ನಂಬುತ್ತೇನೆ ಎಂದು ಟೀಮ್ ಇಂಡಿಯಾ ನಾಯಕ ಹೇಳಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಬೌಲರ್​ಗಳ ಪ್ರದರ್ಶನಕ್ಕೂ ಪ್ರಶಂಸೆ ವ್ಯಕ್ತಪಡಿಸಿದ ಸೂರ್ಯಕುಮಾರ್ ಯಾದವ್, ಎಲ್ಲರೂ ಯೋಜನೆಗಳ ಪ್ರಕಾರ ಬೌಲಿಂಗ್ ಮಾಡಿದ್ದಾರೆಂದು ನಾನು ಭಾವಿಸುತ್ತೇನೆ. ಈಡನ್‌ನಲ್ಲಿ ಇಬ್ಬನಿಯೊಂದಿಗೆ 200 ರನ್ ಚೇಸ್ ಮಾಡುವುದು ಕಷ್ಟವೇನಲ್ಲ. 200 ರನ್​ಗಳು ಯಾವಾಗಲೂ ಉತ್ತಮ ಸ್ಕೋರ್ ಎಂದು ನಮಗೆ ತಿಳಿದಿತ್ತು.

ಎರಡನೇ ಇನ್ನಿಂಗ್ಸ್‌ನಲ್ಲಿ ಪಿಚ್ ಆಗುವ ರೀತಿ, ಚೆಂಡು ಚೆನ್ನಾಗಿ ಬ್ಯಾಟ್‌ಗೆ ಬರುತ್ತದೆ ಎಂಬುದು ನಮಗೆ ಗೊತ್ತಿತ್ತು. ಅಲ್ಲದೆ ನಮ್ಮ ಬ್ಯಾಟರ್‌ಗಳು  ಸಣ್ಣ, ಸಣ್ಣ ಪಾಲುದಾರಿಕೆಗಳೊಂದಿಗೆ ಪ್ರತಿಕ್ರಿಯಿಸಿದ ರೀತಿ ಉತ್ತಮವಾಗಿತ್ತು. ಇದರಿಂದ ಪಂದ್ಯವನ್ನು ಆಳವಾಗಿ ತೆಗೆದುಕೊಂಡು ಹೋಗಲು ಸಾಧ್ಯವಾಗಿದೆ. ಈ ಮೂಲಕ 200 ರನ್​ಗಳನ್ನು ಬೆನ್ನತ್ತಿ ಗೆದ್ದಿದ್ದೇವೆ.

ಈ ಗೆಲುವಿನೊಂದಿಗೆ ಸೆಮಿಫೈನಲ್​ಗೆ ಪ್ರವೇಶಿಸಿರುವುದು ಖುಷಿಯ ವಿಷಯ. ನಾವು ಆಡಿದ ರೀತಿ, ಮೊದಲ ಪಂದ್ಯದಿಂದಲೇ, ಸೆಮಿಫೈನಲ್‌ಗೆ ಹೋಗುವ ಆ ಸ್ಥಾನಕ್ಕೆ ನಾವು ಅರ್ಹರು ಎಂದು ನಾನು ಭಾವಿಸುತ್ತೇನೆ. ಅದು ಕೂಡ ಮುಂಬೈನಲ್ಲಿ, ಆದರೆ ನಾವು ಈಗ ಅದರ ಬಗ್ಗೆ ಯೋಚಿಸುವುದಿಲ್ಲ. ವಿಶ್ರಾಂತಿ ಪಡೆಯುತ್ತೇವೆ. ನಾಳೆ ಮುಂಬೈಗೆ ಹೋಗಿ ತಲುಪಿದ ಬಳಿಕ ಸೆಮಿಫೈನಲ್​ ಬಗ್ಗೆ ಯೋಚಿಸಲು ಪ್ರಾರಂಭಿಸುತ್ತೇವೆ.

ಇದನ್ನೂ ಓದಿ: Sanju Samson: ಶತಕ ಮಿಸ್… ವಿರಾಟ್ ಕೊಹ್ಲಿ ದಾಖಲೆ ಉಡೀಸ್

ಇದೇ ವೇಳೆ ತವರಿನಲ್ಲಿ ಆಡುತ್ತಿರುವುದರಿಂದ ಒತ್ತಡದಲ್ಲಿದ್ದೇವೆ ಎಂಬುದನ್ನು ಒಪ್ಪಿಕೊಂಡಿರುವ ಸೂರ್ಯಕುಮಾರ್ ಯಾದವ್, ಆ ಒತ್ತಡವನ್ನು ನಾವು  ಹೇಗೆ ಅರ್ಥಮಾಡಿಕೊಳ್ಳುತ್ತೀವಿ, ಅದನ್ನು ಹೇಗೆ ತೆಗೆದುಕೊಳ್ಳುತ್ತೀವಿ ಎಂಬುದು ಮುಖ್ಯವಾಗುತ್ತದೆ. ಇದೀಗ ನಿರ್ಣಾಯಕ ಪಂದ್ಯದಲ್ಲಿ ನಾವು ಒತ್ತಡವನ್ನು ಮೀರಿ ಗೆಲುವು ಸಾಧಿಸಿದ್ದೇವೆ. ತವರಿನಲ್ಲಿನ ಪಂದ್ಯಗಳಲ್ಲಿ ಇಂತಹ ಪ್ರದರ್ಶನವೇ ಮುಖ್ಯವಾಗುತ್ತದೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

ಈ ಮೂಲಕ ಸೆಮಿಫೈನಲ್​ನಲ್ಲೂ ಒತ್ತಡವನ್ನು ಮೀರಿ ಭಾರತ ತಂಡ ಗೆಲುವು ದಾಖಲಿಸುವ ವಿಶ್ವಾಸವನ್ನು ಸೂರ್ಯಕುಮಾರ್ ಯಾದವ್ ವ್ಯಕ್ತಪಡಿಸಿದ್ದಾರೆ.

Source link

ಅಬ್ಬಬ್ಬಾ.. ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಪಡೆದ ಸಂಭಾವನೆ ಇಷ್ಟೊಂದಾ? – Kannada News | Toxic Movie Hype: Yash, Kiara Advani and 5 Heroines! Pan India Budget and Remuneration Details

ಟಾಕ್ಸಿಕ್ ಚಿತ್ರವು ಪ್ರಸ್ತುತ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾಗಿದೆ. ಈ ಸಿನಿಮಾದ ಬಗ್ಗೆ ಈಗಾಗಲೇ ಭಾರಿ ಹೈಪ್ ಸೃಷ್ಟಿ ಆಗಿದೆ. ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿ ನಟಿಸುತ್ತಿದ್ದು, ಒಟ್ಟು ಐದು ನಾಯಕಿಯರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಾಲಿವುಡ್ ಬ್ಯೂಟಿ ಕಿಯಾರಾ ಅಡ್ವಾಣಿ ಕೂಡ ಇದರಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇಲ್ಲಿಯವರೆಗೆ ಬಿಡುಗಡೆಯಾದ ಪೋಸ್ಟರ್‌ಗಳು, ಗ್ಲಿಂಪ್ಸ್‌ಗಳು ಮತ್ತು ಟೀಸರ್‌ಗಳು ಗಮನ ಸೆಳೆದಿವೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್‌ದಾಸ್ ನಿರ್ದೇಶನ ಇದೆ. ಈ ಸಿನಿಮಾ ಭಾರಿ ಹೈಪ್ ಸೃಷ್ಟಿಸಿದೆ. ಬಾಲಿವುಡ್ ತಾರೆ ಕಿಯಾರಾ ಅಡ್ವಾಣಿ ಸೇರಿದಂತೆ ಒಟ್ಟು ಐದು ನಾಯಕಿಯರು ಇದರಲ್ಲಿ ಪ್ರಮುಖ ಪಾತ್ರದಲ್ಲಿದ್ದಾರೆ ಎಂಬುದು ವಿಶೇಷ.

ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್‌ಗಳು ಜಂಟಿಯಾಗಿ ನಿರ್ಮಿಸುತ್ತಿವೆ. ಸುಮಾರು 500 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ನಿರ್ಮಿಸಲಾಗುತ್ತಿದೆ. ಈ ಚಿತ್ರದಲ್ಲಿ ಯಶ್ ಎದುರು ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಎಂಬ ಐದು ನಾಯಕಿಯರು ನಟಿಸಿದ್ದಾರೆ.

ಆದರೆ, ಇದರಲ್ಲಿ ಕಿಯಾರಾ ಅಡ್ವಾಣಿ ವಿಶೇಷ ಆಕರ್ಷಣೆಯಾಗಲಿದ್ದಾರೆ. ಕೆಲವು ಸಮಯದಿಂದ ಚಿತ್ರಗಳಿಂದ ದೂರವಿದ್ದ ಕಿಯಾರಾ ಈಗ ಟಾಕ್ಸಿಕ್ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಅವರು ಬಹಳ ದಿನಗಳಿಂದ ಸರಿಯಾದ ಬ್ರೇಕ್ ಗಾಗಿ ಕಾಯುತ್ತಿದ್ದಾರೆ. ಈ ಚಿತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ . ಈ ಚಿತ್ರದ ಹಾಡು ಇಂದು ರಿಲೀಸ್ ಆಗಲಿದೆ. ಇತ್ತೀಚೆಗೆ ಬಿಡುಗಡೆಯಾದ ಫೋಟೋಗಳಲ್ಲಿ ಕಿಯಾರಾ ಇನ್ನಷ್ಟು ಸುಂದರವಾಗಿ ಕಾಣುತ್ತಿದ್ದಾರೆ. ಆದರೆ, ಈ ಚಿತ್ರಕ್ಕಾಗಿ ಕಿಯಾರಾ ತೆಗೆದುಕೊಂಡ ಸಂಭಾವನೆ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ.

ಇದನ್ನೂ ಓದಿ: ಮಾರ್ಚ್ 2ಕ್ಕೆ ‘ಟಾಕ್ಸಿಕ್’ ಮಾರ್ಚ್ 3ಕ್ಕೆ ‘ಧುರಂಧರ್’, ಮಾರ್ಚ್ 8ಕ್ಕೆ ಮತ್ತೆ ‘ಟಾಕ್ಸಿಕ್’

ಟಾಕ್ಸಿಕ್ ಚಿತ್ರಕ್ಕಾಗಿ ಕಿಯಾರಾ 15 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಇದು ಅವರ ವೃತ್ತಿಜೀವನದ ಅತ್ಯಧಿಕ ಸಂಭಾವನೆ ಎಂದು ವರದಿಯಾಗಿದೆ. ಗೇಮ್ ಚೇಂಜರ್ ಚಿತ್ರಕ್ಕಾಗಿ ಅವರು ಸುಮಾರು 7 ಕೋಟಿ ರೂ. ಮತ್ತು ವಾರ್ 2 ಚಿತ್ರಕ್ಕಾಗಿ 13 ಕೋಟಿ ರೂ ಪಡೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್​ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು? – Kannada News | Indian Railways Lower Berth Policy: Senior Citizen Upper Berth Sparks Clarification

ನವದೆಹಲಿ, ಮಾರ್ಚ್​ 02: ಭಾರತೀಯ ರೈಲ್ವೆ(Indian Railways) ಹಿರಿಯ ನಾಗರಿಕರಿಗೆ ಬರ್ತ್​ಗಳನ್ನು ಹೇಗೆ ನಿಗದಿಪಡಿಸುತ್ತದೆ ಎಂಬುದರ ಕುರಿತು ಎಕ್ಸ್​​ನಲ್ಲಿ ಮಾಡಲಾದ ಪೋಸ್ಟ್​ ಚರ್ಚೆಗೆ ನಾಂದಿ ಹಾಡಿದೆ. ಪ್ರಯಾಣಿಕರೊಬ್ಬರು ತಾವು ಟಿಕೆಟ್ ಬುಕ್ ಮಾಡಿದಾಗ  ಬೇರೆ ಸೀಟುಗಳು ಲಭ್ಯವಿದ್ದರೂ 82 ವರ್ಷದ ಮಹಿಳೆಗೆ ಕೂಡ ಅಪ್ಪರ್ ಬರ್ತ್​ ನಿಗದಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಈಗ ಅದೇ ಕೆಳಗಿನ ಬರ್ತ್‌ಗಳನ್ನು ಪ್ರೀಮಿಯಂ ತತ್ಕಾಲ್‌ನಲ್ಲಿ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್​ನಲ್ಲಿ ತಿಳಿಸಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ, 45ವರ್ಷಕ್ಕಿಂತ ಮೇಲ್ಪಟ್ಟ ಮಹಿಳಾ ಪ್ರಯಾಣಿಕರಿಗೆ ಲೋವರ್ ಬರ್ತ್​ ಹಂಚಿಕೆಗೆ ಸಂಬಂಧಿಸಿದ ನಿಯಮಗಳನ್ನು ಸ್ಪಷ್ಟಪಡಿಸಿದೆ. ಭಾರತೀಯ ರೈಲ್ವೆಯ ಸೀಟು ಕಾಯ್ದಿರಿಸುವಿಕೆ ವ್ಯವಸ್ಥೆಯಲ್ಲಿ, ಯಾವುದೇ ಆಯ್ಕೆ ನೀಡದಿದ್ದರೂ ಕೂಡ, ಹಿರಿಯ ನಾಗರಿಕರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಮಹಿಳಾ ಪ್ರಯಾಣಿಕರಿಗೆ ಸ್ವಯಂ ಚಾಲಿತವಾಗಿ ಕೆಳ ಬರ್ತ್​ ಹಂಚಿಕೆ ಮಾಡುವ ಅವಕಾಶವಿದೆ.

ಇಂಟರ್ನೆಟ್​ ಮೂಲಕ ಕಾಯ್ದಿರಿಸಿದ ಟಿಕೆಟ್‌ಗಳನ್ನು ಬುಕ್ ಮಾಡುವ ಸಮಯದಲ್ಲಿ, ಕೆಳ ಬರ್ತ್ ಲಭ್ಯವಿದ್ದರೆ ಮಾತ್ರ ಬುಕಿಂಗ್ ಅನ್ನು ಆಯ್ಕೆ ಮಾಡಲು ಅವಕಾಶವಿದೆ ಎಂದು ತಿಳಿಸಲಾಗಿದೆ.
ಅಂತಹ ಸಂದರ್ಭದಲ್ಲಿ ಕೆಳ ಬರ್ತ್ ಲಭ್ಯವಿದ್ದರೆ ಮಾತ್ರ ಟಿಕೆಟ್ ಬುಕ್ ಮಾಡಲಾಗುತ್ತದೆ. ಇದಲ್ಲದೆ, ಭಾರತೀಯ ರೈಲ್ವೆಯಲ್ಲಿ, ಕಾಯ್ದಿರಿಸಿದ ಟಿಕೆಟ್​ಗಳನ್ನು ಮೊದಲು ಬಂದವರಿಗೆ ಮೊದಲು ಸೇವೆ ಆಧಾರದ ಮೇಲೆ ಬುಕ್ ಮಾಡಬಹುದು ಮತ್ತು ಆಯ್ಕೆಯ ಬರ್ತ್ ಲಭ್ಯತೆಗೆ ಒಳಪಟ್ಟಿರುತ್ತದೆ.

ಸ್ವಲ್ಪ ದಿನಗಳ ಹಿಂದೆ ಟಿಟಿಇ ಒಬ್ಬರು ಈ ಕುರಿತು ಮಾತನಾಡಿರುವುದು ವೈರಲ್ ಆಗಿತ್ತು, ಲೋವರ್ ಬರ್ತ್​ ಪಡೆಯಬೇಕೆಂದರೆ ಏನು ಮಾಡಬೇಕು ಎಂದು ಮಾಹಿತಿ ನೀಡಿದ್ದರು. ನೀವು ಎಂದಾದರೂ ರೈಲು ಟಿಕೆಟ್ ಬುಕ್ ಮಾಡುವಾಗ ಲೋವರ್ ಬರ್ತ್ ಆದ್ಯತೆ ಆಯ್ಕೆ ಮಾಡಿಕೊಂಡಿದ್ದರೂ ಅಪ್ಪರ್ ಬರ್ತ್ ಪಡೆದಿದ್ದೀರಾ?, ನೀವೊಬ್ಬರೇ ಅಲ್ಲ ಸಾಕಷ್ಟು ಪ್ರಯಾಣಿಕರಿಗೆ ಇದರ ಅನುಭವವಾಗಿದೆ.ಹಿರಿಯ ನಾಗರಿಕ ಪ್ರಯಾಣಿಕರಲ್ಲಿ ಈ ರೀತಿಯ ಘಟನ ಹೆಚ್ಚಾಗಿದೆ.

ಮತ್ತಷ್ಟು ಓದಿ: ದಾವಣಗೆರೆ-ಬೆಂಗಳೂರು ಪ್ರಯಾಣಕ್ಕೆ ಎರಡೂವರೆ ಗಂಟೆ ಸಾಕು! ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಮುಂದಿನ ವರ್ಷ ಸಿದ್ಧ

ನೀವು ಲೋವರ್ ಬರ್ತ್ ಬಯಸಿದರೆ, ಒಂದು ಪಿಎನ್‌ಆರ್‌ನಲ್ಲಿ ಕೇವಲ ಎರಡು ಟಿಕೆಟ್‌ಗಳನ್ನು ಬುಕ್ ಮಾಡಿ. ನೀವು ಮೂರು ಅಥವಾ ನಾಲ್ಕು ಟಿಕೆಟ್‌ಗಳನ್ನು ಒಟ್ಟಿಗೆ ಬುಕ್ ಮಾಡಿದಾಗ, ವ್ಯವಸ್ಥೆಯು ಅದನ್ನು ಗುಂಪು ಬುಕಿಂಗ್ ಎಂದು ಪರಿಗಣಿಸುತ್ತದೆ ಮತ್ತು ಲೋವರ್ ಬರ್ತ್ ಆದ್ಯತೆಯನ್ನು ತೆಗೆದುಹಾಕಲಾಗುತ್ತದೆ. ಅಂದರೆ ಕಡಿಮೆ ಟಿಕೆಟ್‌ಗಳು, ಹೆಚ್ಚು ಲಾಭ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಯುದ್ಧ ಭೀತಿ: ಇದು ಅಲ್ಲಾಹ್​ನ ಕೋಪ ಎಂದ ಕಿರುತೆರೆ ನಟ – Kannada News | Iran Israel Conflict: Ajaz Khan Links War to Allah’s Wrath Amidst Middle East Tension

ಸದ್ಯ ಯುದ್ಧ ಭೀತಿ ಶುರುವಾಗಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ (Iran) ವಿರುದ್ಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ದಾಳಿಗೆ ಇರಾನ್ ಪ್ರತಿ ದಾಳಿ ನಡೆಸುತ್ತಿದೆ. ಈ ದಾಳಿಗಳಲ್ಲಿ ಇರಾನ್‌ನ ಧಾರ್ಮಿಕ, ರಾಜಕೀಯ ಮತ್ತು ಮಿಲಿಟರಿ ನೆಲೆಗಳನ್ನು ಗುರಿಯಾಗಿಸಲಾಗಿತ್ತು. ಇಸ್ರೇಲ್, ಕತಾರ್, ಕುವೈತ್, ಬಹ್ರೇನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ವಿರುದ್ಧವೂ ಇರಾನ್ ಪ್ರತೀಕಾರ ತೀರಿಸಿಕೊಂಡಿತು. ಈ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವು ಪ್ರಪಂಚದಾದ್ಯಂತ ಜನರಲ್ಲಿ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿಸಿದೆ. ಈಗ ಪ್ರಸಿದ್ಧ ಟಿವಿ ನಟ ಅಜಾಜ್ ಖಾನ್ ಈ ಸಂಘರ್ಷಕ್ಕೆ ಪ್ರತಿಕ್ರಿಯಿಸಿದ್ದಾರೆ. ಇದು ಮುಸ್ಲಿಮರ ಮೇಲಿನ ಅಲ್ಲಾಹನ ಕೋಪ ಎಂದು ಅವರು ಹೇಳಿದರು.

‘ಪ್ರಪಂಚದಾದ್ಯಂತ ಏನಾಗುತ್ತಿದೆ ಎಂದು ನೀವು ನೋಡುತ್ತೀರಿ. ರಮಝಾನ್ ತಿಂಗಳಲ್ಲಿ ಅಮೆರಿಕ ಮತ್ತು ಇಸ್ರೇಲ್ ಎಂಬ ಇಬ್ಬರು ಖಳನಾಯಕರು ಯಾವುದೇ ಆಲೋಚನೆಯಿಲ್ಲದೆ ಇರಾನ್ ಮೇಲೆ ಬಾಂಬ್ ದಾಳಿ ಮಾಡಿವಎ. ಇರಾನ್ ಕೋಪಗೊಂಡು, ಅರಬ್ ಜನರ ಮೇಲೆ ಬಾಂಬ್ ದಾಳಿ ಮಾಡಿತು. ಇರಾನ್‌ನ ಕೋಪ ಸರಿ ಎಂದು ನಾನು ಭಾವಿಸುತ್ತೇನೆ. ಮುಸ್ಲಿಮರಿಗೆ ಅನ್ಯಾಯವಾಗುತ್ತಿದ್ದರೂ, ಅರಬ್ ಜನರು ಮೌನವಾಗಿದ್ದಾರೆ. ಆದ್ದರಿಂದ, ಅವರನ್ನು ನಿದ್ರೆಯಿಂದ ಎಬ್ಬಿಸುವುದು ಅಗತ್ಯವಾಗಿತ್ತು. ಧನ್ಯವಾದಗಳು ಇರಾನ್.. ನೀವು ಅವರನ್ನು ಎಬ್ಬಿಸಿದ್ದೀರಿ’ ಎಂದು ಅವರು ಹೇಳಿದ್ದಾರೆ.

‘ಅಲ್ಲಾಹನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಅದಕ್ಕಾಗಿಯೇ ಪ್ರಪಂಚದಾದ್ಯಂತ ಮುಸ್ಲಿಮರ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ಪವಿತ್ರ ರಂಜಾನ್ ತಿಂಗಳಲ್ಲಿ ಎಲ್ಲಾ ಮುಸ್ಲಿಂ ರಾಷ್ಟ್ರಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಇದು ಮುಸ್ಲಿಮರ ಮೇಲಿನ ಅಲ್ಲಾಹನ ಕೋಪ. ಪ್ರಾರ್ಥಿಸಿ, ಪರಸ್ಪರ ಬೆಂಬಲಿಸಿ, ಒಳ್ಳೆಯ ಕಾರ್ಯಗಳನ್ನು ಮಾಡಿ, ದಾನ ನೀಡಿ, ಬಡವರಿಗೆ ಸಹಾಯ ಮಾಡಿ, ಹಣವು ಸಮಾಧಿಗೆ ಹೋಗುವುದಿಲ್ಲ’ ಅಜಾಜ್ ಹೇಳಿದ್ದಾರೆ.

ಇದನ್ನೂ ಓದಿ: ಇರಾನ್​, ಇಸ್ರೇಲ್ ಯುದ್ಧ: ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ನೆರವಿಗೆ ನಿಂತ ರಾಜ್ಯ ಸರ್ಕಾರ

ಇರಾನ್ ತನ್ನ ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮವನ್ನು ಕೈಬಿಡುವಂತೆ ಒತ್ತಾಯಿಸಲು ಅಮೆರಿಕ ಮತ್ತು ಇಸ್ರೇಲ್‌ನಿಂದ ನಿರಂತರ ಒತ್ತಡವಿತ್ತು. ಆದರೆ, ಇರಾನ್ ಇದಕ್ಕೆ ಒಪ್ಪುತ್ತಿಲ್ಲ. ಕ್ಷಿಪಣಿ ಅಭಿವೃದ್ಧಿ ಕಾರ್ಯಕ್ರಮವನ್ನು ಸಹ ತಡೆಯಬೇಕೆಂಬ ಅಮೆರಿಕ ಬೇಡಿಕೆ ಇಟ್ಟಿದ್ದು, ಇದಕ್ಕೆ ಇರಾನ್ ಒಪ್ಪಿಲ್ಲ. ಇದರ ಕುರಿತು ಒಮಾನ್‌ನಲ್ಲಿ ಮಾತುಕತೆಗಳು ನಡೆಯುತ್ತಿದ್ದವು. ಅವು ಮುಕ್ತಾಯಗೊಳ್ಳುವ ಮೊದಲು, ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು ಪ್ರಾರಂಭಿಸಿದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:56 am, Mon, 2 March 26

Source link