Headlines

nagaraj11081993

ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ – Kannada News | BMTC Bus Breaks Down on Railway Track Near Anekal, Major Accident Averted After Traffic Chaos

ಆನೇಕಲ್, ಮಾರ್ಚ್​ 2: ಬೆಂಗಳೂರಿನ ಆನೇಕಲ್ ಸಮೀಪದ ರೈಲ್ವೆ ಗೇಟ್ ಬಳಿ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ನಡೆದಿದೆ. ಆನೇಕಲ್‌ನಿಂದ ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಸ್ಸು ರೈಲು ಹಳಿಯ ಮೇಲೆ ಸಾಗುತ್ತಿದ್ದಂತೆಯೇ ಕೆಟ್ಟ ನಿಂತಿತು. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕಿಲೋ ಮೀಟರ್​​​ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಅದೃಷ್ಟವಶಾತ್, ರೈಲ್ವೆ ಪಾಸಿಂಗ್ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

ನಾಕೌಟ್​ನಲ್ಲಿ ನಾಲ್ಕು ತಂಡಗಳು: ಇಲ್ಲಿದೆ ವೇಳಾಪಟ್ಟಿ

T20 World Cup 2026:  20 ತಂಡಗಳೊಂದಿಗೆ ಶುರುವಾದ ಟಿ20 ವಿಶ್ವಕಪ್​ನಲ್ಲಿ ಈಗ ಉಳಿದಿರುವುದು ಕೇವಲ 4 ತಂಡಗಳು ಮಾತ್ರ. ಇನ್ನುಳಿದ 16 ತಂಡಗಳ ವಿಶ್ವಕಪ್​ ಅಭಿಯಾನ ಅಂತ್ಯವಾಗಿದೆ. ಈ ನಾಲ್ಕು ತಂಡಗಳು ನಾಕೌಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಸೆಮಿಫೈನಲ್​​​ನಲ್ಲಿ ಕಣಕ್ಕಿಳಿಯಲಿದೆ. ಸೆಮಿಫೈನಲ್ ಪಂದ್ಯಗಳು ಮಾರ್ಚ್ 4 ಮತ್ತು 5 ರಂದು ನಡೆಯಲಿದ್ದು, ಇಲ್ಲಿ ಭಾರತ, ಇಂಗ್ಲೆಂಡ್, ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಅಂದರೆ ಗ್ರೂಪ್- 1 ರಿಂದ ಸೆಮಿಫೈನಲ್​ಗೇರಿರುವ ತಂಡಗಳು ಗ್ರೂಪ್-2 ನಿಂದ…

Read More

ಬೆಂಗಳೂರಿನಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಿದ್ದತೆ: ಪರಿಸರ ಹೋರಾಟಗಾರರ ಆಕ್ರೋಶ – Kannada News | Mass Tree Felling Planned Near Sir M. Visvesvaraya Railway Station in Bengaluru Sparks Environmental Outrage

ಸರ್​​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​​ ಹೊರಬಾಗದ ನೋಟImage Credit source: tv9 ಬೆಂಗಳೂರು, ಮಾರ್ಚ್​ 2: ಬೈಯಪ್ಪನಹಳ್ಳಿ ಬಳಿಯ ಸರ್​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​ನಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ ಬರೋಬ್ಬರಿ 269 ಮರಗಳನ್ನು ಕಡಿಯಲು ರೈಲ್ವೆ ಇಲಾಖೆ (Indian Railways) ಮುಂದಾಗುತ್ತಿದೆ. ಇದಕ್ಕೆ ಪರಿಸರ ಹೋರಾಟಗಾರರಿಂದ ಆಕ್ಷೇಪ ವ್ಯಕ್ತವಾಗಿದೆ. ಬೈಯಪ್ಪನಹಳ್ಳಿಯಲ್ಲಿರುವ ಎಸ್ಎಂವಿಟಿ ರೈಲ್ವೆ ನಿಲ್ದಾಣದಲ್ಲಿರುವ 269 ಮರಗಳು ಹತ್ತಾರು ವರ್ಷಗಳ ಹಳೆಯದ್ದಾಗಿವೆ. ಅವುಗಳು ಬೃಹತ್ ಮರಗಳಾಗಿದ್ದು, ಹಾಗಾಗಿ ಯಾವುದೇ ಕಾರಣಕ್ಕೂ ಅವುಗಳನ್ನು ಕಡಿಯಬಾರದು ಎಂದು ಪರಿಸರ ಹೋರಾಟಗಾರರು ಆಕ್ರೋಶ…

Read More

ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ – Kannada News | Rashmika Mandanna And Vijay Devarakonda Attend Allu Sirish Wedding program

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ವಿವಾಹ ಆದರು. ಈ ಮದುವೆ ಬಳಿಕ ಅವರು ಅಲ್ಲು ಅರ್ಜುನ್ ಮನೆ ಮದುವೆಗೆ ಭೇಟಿ ನೀಡಿದ್ದಾರೆ. ಇದಕ್ಕೆ ಕಾರಣ, ಅಲ್ಲು ಸಿರಿಶ್ ಮದುವೆ. ಹೌದು, ಅಲ್ಲು ಸಿರಿಶ್ ಮದುವೆ ಶಾಸ್ತ್ರಗಳು ಅದ್ದೂರಿಯಾಗಿ ನಡೆಯುತ್ತಿವೆ. ಈ ಸಂದರ್ಭದಲ್ಲಿ ರಶ್ಮಿಕಾ ಹಾಗೂ ವಿಜಯ್ ತೆರಳಿ, ನವ ದಂಪತಿ ಆಗಲಿರುವ ಜೋಡಿಗೆ ಶುಭ ಕೋರಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ಮುಂದುವರೆಯಬಹುದು, ಟ್ರಂಪ್ ಹೇಳಿದ್ದೇನು? – Kannada News | Trump on US Iran War: Duration, Israel’s Role and Epic Fury Operations

ವಾಷಿಂಗ್ಟನ್, ಮಾರ್ಚ್​ 02: ಇರಾನ್(Iran) ಜೊತೆ ನಡೆಯುತ್ತಿರುವ ಸಂಘರ್ಷದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಹೇಳಿಕೆ ನೀಡಿದ್ದಾರೆ. ಸಂಘರ್ಷ ಮುಂದಿನ ನಾಲ್ಕು ವಾರಗಳವರೆಗೆ ಮುಂದುವರೆಯಬಹುದು ಎಂದು ಅವರು ಹೇಳಿದ್ದಾರೆ. ಇದು ನಾಲ್ಕು ವಾರಗಳು ಅಥವಾ ಅದಕ್ಕಿಂತ ಮುಂಚೆಯೂ ಅಂತ್ಯಗೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಯುದ್ಧದಲ್ಲಿ ಪ್ರಾಣ ಕಳೆದುಕೊಂಡ ಅಮೇರಿಕದ ಸೈನಿಕರಿಗೆ ಅವರು ಗೌರವ ಸಲ್ಲಿಸಿದರು. ಭಾನುವಾರ ಪ್ರತಿಷ್ಠಿತ ಡೈಲಿ ಮೇಲ್‌ಗೆ ನೀಡಿದ ಸಂದರ್ಶನದಲ್ಲಿ, ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ಯುಎಸ್ ಮಿಲಿಟರಿ ಕಾರ್ಯಾಚರಣೆ ಇನ್ನೂ…

Read More

ಮತ್ತೆ ಸಂಡೂರಿನಲ್ಲಿ ಗಣಿ ವಿಸ್ತರಣೆ ಆತಂಕ: ಸುಪ್ರೀಂ ಕೋರ್ಟ್ ಅದೇಶ ಮೀರಿ ಹೆಚ್ಚುವರಿ ಗಣಿಗಾರಿಕೆಗೆ ನಡೆಯುತ್ತಿದೆಯಾ ಸಿದ್ಧತೆ? – Kannada News | Mining Expansion Fears in Sandur: Allegations of Excess Iron Ore Extraction Beyond Supreme Court Limit in Ballari

ಮತ್ತೆ ಸಂಡೂರಿನಲ್ಲಿ ಗಣಿ ವಿಸ್ತರಣೆ ಆತಂಕImage Credit source: tv9 ಬಳ್ಳಾರಿ, ಮಾರ್ಚ್ 2: ಗಣಿನಾಡು ಎಂದೇ ಪ್ರಸಿದ್ಧಿಯಲ್ಲಿರುವ ಬಳ್ಳಾರಿಯ (Ballari) ಸಂಡೂರಿನಲ್ಲಿ (Sandur) ಮತ್ತೆ ಗಣಿ ವಿಸ್ತರಣೆ ಭೀತಿ ತಲೆದೋರಿದೆ. ಅರಣ್ಯ ಪ್ರದೇಶದ ಹೆಚ್ಚುವರಿ ಭೂಮಿಯನ್ನು ಗಣಿಗಾರಿಕೆಗೆ ನೀಡಲು ಸದ್ದಿಲ್ಲದೆ ಸಿದ್ಧತೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಹೆಚ್ಚಿಸಿದೆ. ಸಂಡೂರಿನ ಸ್ವಾಮಿಮಲೈ ಅರಣ್ಯ ವ್ಯಾಪ್ತಿಯ ದೇವದಾರಿ ಅರಣ್ಯ ಪ್ರದೇಶದಲ್ಲಿ ಸುಮಾರು 1,000 ಎಕರೆ ಹಾಗೂ ರಾಮಗಡ ಅರಣ್ಯ ಪ್ರದೇಶದಲ್ಲಿ…

Read More

200 ರನ್​ ಕಷ್ಟವೇನಲ್ಲ… ಒಳ್ಳೆಯವರಿಗೆ ಒಳ್ಳೆದೇ ಆಗುತ್ತೆ…! – Kannada News | Suryakumar yadav post match presentation after IND vs WI Match

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. 196 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಜೇಯ 97…

Read More

ಅಬ್ಬಬ್ಬಾ.. ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಪಡೆದ ಸಂಭಾವನೆ ಇಷ್ಟೊಂದಾ? – Kannada News | Toxic Movie Hype: Yash, Kiara Advani and 5 Heroines! Pan India Budget and Remuneration Details

ಟಾಕ್ಸಿಕ್ ಚಿತ್ರವು ಪ್ರಸ್ತುತ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾಗಿದೆ. ಈ ಸಿನಿಮಾದ ಬಗ್ಗೆ ಈಗಾಗಲೇ ಭಾರಿ ಹೈಪ್ ಸೃಷ್ಟಿ ಆಗಿದೆ. ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿ ನಟಿಸುತ್ತಿದ್ದು, ಒಟ್ಟು ಐದು ನಾಯಕಿಯರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಾಲಿವುಡ್ ಬ್ಯೂಟಿ ಕಿಯಾರಾ ಅಡ್ವಾಣಿ ಕೂಡ ಇದರಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇಲ್ಲಿಯವರೆಗೆ ಬಿಡುಗಡೆಯಾದ ಪೋಸ್ಟರ್‌ಗಳು, ಗ್ಲಿಂಪ್ಸ್‌ಗಳು ಮತ್ತು ಟೀಸರ್‌ಗಳು ಗಮನ ಸೆಳೆದಿವೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್‌ದಾಸ್ ನಿರ್ದೇಶನ ಇದೆ. ಈ ಸಿನಿಮಾ…

Read More

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್​ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು? – Kannada News | Indian Railways Lower Berth Policy: Senior Citizen Upper Berth Sparks Clarification

ನವದೆಹಲಿ, ಮಾರ್ಚ್​ 02: ಭಾರತೀಯ ರೈಲ್ವೆ(Indian Railways) ಹಿರಿಯ ನಾಗರಿಕರಿಗೆ ಬರ್ತ್​ಗಳನ್ನು ಹೇಗೆ ನಿಗದಿಪಡಿಸುತ್ತದೆ ಎಂಬುದರ ಕುರಿತು ಎಕ್ಸ್​​ನಲ್ಲಿ ಮಾಡಲಾದ ಪೋಸ್ಟ್​ ಚರ್ಚೆಗೆ ನಾಂದಿ ಹಾಡಿದೆ. ಪ್ರಯಾಣಿಕರೊಬ್ಬರು ತಾವು ಟಿಕೆಟ್ ಬುಕ್ ಮಾಡಿದಾಗ  ಬೇರೆ ಸೀಟುಗಳು ಲಭ್ಯವಿದ್ದರೂ 82 ವರ್ಷದ ಮಹಿಳೆಗೆ ಕೂಡ ಅಪ್ಪರ್ ಬರ್ತ್​ ನಿಗದಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಈಗ ಅದೇ ಕೆಳಗಿನ ಬರ್ತ್‌ಗಳನ್ನು ಪ್ರೀಮಿಯಂ ತತ್ಕಾಲ್‌ನಲ್ಲಿ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್​ನಲ್ಲಿ ತಿಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ, 45ವರ್ಷಕ್ಕಿಂತ…

Read More

ಯುದ್ಧ ಭೀತಿ: ಇದು ಅಲ್ಲಾಹ್​ನ ಕೋಪ ಎಂದ ಕಿರುತೆರೆ ನಟ – Kannada News | Iran Israel Conflict: Ajaz Khan Links War to Allah’s Wrath Amidst Middle East Tension

ಸದ್ಯ ಯುದ್ಧ ಭೀತಿ ಶುರುವಾಗಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ (Iran) ವಿರುದ್ಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ದಾಳಿಗೆ ಇರಾನ್ ಪ್ರತಿ ದಾಳಿ ನಡೆಸುತ್ತಿದೆ. ಈ ದಾಳಿಗಳಲ್ಲಿ ಇರಾನ್‌ನ ಧಾರ್ಮಿಕ, ರಾಜಕೀಯ ಮತ್ತು ಮಿಲಿಟರಿ ನೆಲೆಗಳನ್ನು ಗುರಿಯಾಗಿಸಲಾಗಿತ್ತು. ಇಸ್ರೇಲ್, ಕತಾರ್, ಕುವೈತ್, ಬಹ್ರೇನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ವಿರುದ್ಧವೂ ಇರಾನ್ ಪ್ರತೀಕಾರ ತೀರಿಸಿಕೊಂಡಿತು. ಈ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವು ಪ್ರಪಂಚದಾದ್ಯಂತ ಜನರಲ್ಲಿ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿಸಿದೆ. ಈಗ ಪ್ರಸಿದ್ಧ…

Read More