All posts by nagaraj11081993

ಇರಾನ್​ ಮಧ್ಯಂತರ ಪರಮೋಚ್ಛ ನಾಯಕನ ಹೆಸರು ಘೋಷಣೆ, ಯಾರು ಈ ಅಲಿರೆಜಾ ಅರಾಫಿ? – Kannada News | Khamenei Confidant An Seminary Chief: Who Is Alireza Arafi of Iran Interim Supreme Leader?

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ (US-Israel Strikes On Iran )ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ದ ಆರಂಭವಾಗಿದ್ದು, ಈ ನಡುವೆ ಇರಾನ್, ಅಲಿ ಖಮೇನಿ (Ali Khamenei) ಸ್ಥಾನಕ್ಕೆ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ (Ayatollah Arafi) ಅವರನ್ನ ಮಧ್ಯಂತರ ಪರಮೋಚ್ಛ ನಾಯಕ ಎಂದು ಘೋಷಣೆ ಮಾಡಿದೆ. ಇರಾನ್​ನ ಗಾರ್ಡಿಯನ್ ಕೌನ್ಸಿಲ್​ ಸದಸ್ಯರಾಗಿರುವ ಅಲಿರೆಜಾ ಅರಾಫಿ, ಆಯತೊಲ್ಲಾ ಅಲಿ ಖಮನೈಗೆ ಆಪ್ತರಾಗಿದ್ದಾರೆ.

ಇರಾನ್‌ ಸಂವಿಧಾನಿಕ ಪ್ರಕ್ರಿಯೆಯ ಅಡಿಯಲ್ಲಿ ಆಯ್ಕೆ ಮಾಡಿ ಅವರಿಗೆ ಈ ಇರಾನ್‌ ನಾಯಕತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲು ತಾತ್ಕಾಲಿಕ ನ್ಯಾಯಮಂಡಳಿಯನ್ನು ನೇಮಿಸಿದ್ದು, ಇದರ ಮುಖ್ಯ ನ್ಯಾಯಶಾಸ್ತ್ರಜ್ಞ ಸದಸ್ಯರಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಕಾರ್ಯನಿರ್ವಹಿಸಲಿದ್ದಾರೆ. ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಮತ್ತು ಮುಖ್ಯ ನ್ಯಾಯಮೂರ್ತಿ ಘೋಲಮ್‌ಹೊಸೇನ್ ಮೊಹ್ಸೆನಿ ಎಜೆಯ್ ಸಹ ಮಂಡಳಿಯಲ್ಲಿದ್ದಾರೆ. ಅಲ್ಲದೆ, ಇವರು ಇರಾನ್‌ ನ ಮುಂದಿನ ಸರ್ವೋಚ್ಚ ನಾಯಕನ್ನನ್ನು ಆಯ್ಕೆ ಮಾಡುವ ಕಾರ್ಯ ನಿರ್ವಹಿಸಲಿದ್ದಾರೆ. ಈ ಮೂಲಕ ಇಲ್ಲಿಯವರೆಗೂ ಇರಾನ್‌ ನಲ್ಲಿ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಹಕ್ಕನ್ನು ಅಲಿರೆಜಾ ಹೊಂದಿದ್ದಾರೆ.

ಇದನ್ನೂ ಓದಿ: ಆಯತುಲ್ಲಾ ಖಮೇನಿ ಮೇಲೆ ದಾಳಿಗೆ ಶನಿವಾರ ಬೆಳಗಿನ ಸಮಯ ಆರಿಸಿದ್ದು ಯಾಕೆ? ಬೇರೆ ಇದ್ದ ಪ್ಲಾನ್ ಬದಲಾಗಿದ್ದು ಯಾಕೆ?

ಯಾರು ಈ ಮಧ್ಯಂತರ ಸುಪ್ರೀಂ ಲೀಡರ್‌ ಅಲಿರೆಜಾ?

ಖಮೇನಿ ಸಾವಿನ ಬಳಿಕ ತಕ್ಷಣವೇ ಮತ್ತೊಬ್ಬ ನಾಯಕನನ್ನು ಘೋಷಣೆ ಮಾಡಿದೆ. ಆದರೆ, ಇದಕ್ಕೂ ಮೊದಲೇ ತುರ್ತು ಪರಿಸ್ಥಿತಿಯಲ್ಲಿ ಇರಾನ್‌ ಸರ್ಕಾರವನ್ನು ಮುನ್ನಡೆಸುವ ಶಕ್ತಿ ಬೇಕು ಎಂಬುದನ್ನು ಮೊದಲೇ ಅರಿತಿದ್ದ ಖಮೇನಿ, ಗಾರ್ಡಿಯನ್ ಕೌನ್ಸಿಲ್​ ಸದಸ್ಯರಾಗಿದ್ದ ತಮ್ಮ ಆಪ್ತ ಅಲಿರೆಜಾ ಅವರನ್ನು ಆಯ್ಕೆ ಮಾಡಿದ್ದಾರೆಂಬ ಸುದ್ದಿ ಹರಡುತ್ತಿದ್ದವು. ಇದೀಗ ಖಮೇನಿ ಹತ್ಯೆ ಬೆನ್ನಲ್ಲೇ ಇರಾನ್‌ ನ ಮಧ್ಯಂತರ ಸುಪ್ರೀಂ ಲೀಡರ್‌ ಆಗಿ ಇರಾನ್‌ ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ ಅವರನ್ನ ಆಯ್ಕೆ ಮಾಡಲಾಗಿದೆ.

1959ರಲ್ಲಿ ಜನಿಸಿದ ಅಲಿರೆಜಾ ಅರಾಫಿ, ಇರಾನ್‌ನ ಧಾರ್ಮಿಕ ಸ್ಥಾಪನೆಯಲ್ಲಿ ಪ್ರಮುಖರಾಗಿದ್ದು, ಮಧ್ಯಂತರ ಸುಪ್ರೀಂ ಲೀಡರ್‌ ಆಗುವುದಕ್ಕೂ ಮುನ್ನ ಇರಾನ್‌ ಸರ್ಕಾರದಲ್ಲಿ ಇರಾನ್‌ನ ರಾಷ್ಟ್ರವ್ಯಾಪಿ ಇಸ್ಲಾಮಿಕ್ ಸೆಮಿನರಿ ವ್ಯವಸ್ಥೆಯ ನಿರ್ದೇಶಕರು, ಪ್ರಬಲ ಗಾರ್ಡಿಯನ್ ಕೌನ್ಸಿಲ್‌ನ ಪರಿಶೀಲನಾ ಸದಸ್ಯರು ಮತ್ತು ತಜ್ಞರ ಸಭೆಯ ಹಾಲಿ ಸದಸ್ಯರು ಹೀಗೆ ಏಕಕಾಲಕ್ಕೆ 3 ಅತ್ಯಂತ ಶಕ್ತಿಯುತ ಹುದ್ದೆಯಲ್ಲಿದ್ದರು.

ಕೋಮ್‌ನ ಸಾಂಪ್ರದಾಯಿಕ ಕ್ಲೆರಿಕಲ್ ರಚನೆಯಲ್ಲಿ ಆಳವಾಗಿ ಹುದುಗಿದ್ದರೂ, ಅರಾಫಿ ಸ್ವಲ್ಪ ವಿಭಿನ್ನವಾದ ಆಡಳಿತ ವ್ಯವಸ್ಥೆಯ ಒಳಗಿನವರನ್ನು ಪ್ರತಿನಿಧಿಸುತ್ತಾರೆ.ಇರಾನ್‌ ನಲ್ಲಿ ಅರೇಬಿಕ್ ಮತ್ತು ಇಂಗ್ಲಿಷ್ ಎರಡರಲ್ಲೂ ನಿರರ್ಗಳವಾಗಿ ಮಾತನಾಡುವ ಬಹುಭಾಷಾ ಪಂಡಿತರಾಗಿದ್ದು, ತಾಂತ್ರಿಕವಾಗಿಯೂ ಸಹ ಪ್ರಾವಿಣ್ಯತೆಯನ್ನು ಹೊಂದಿದ್ದಾರೆ. ಅಲ್ಲದೆ, ಜಾಗತಿಕವಾಗಿ ತನ್ನ ಸೈದ್ಧಾಂತಿಕ ಸಂದೇಶವನ್ನು ಹರಡಲು ಆಡಳಿತವು ಕೃತಕ ಬುದ್ಧಿಮತ್ತೆಗೆ ಹೊಂದಿಕೊಳ್ಳುವ ಅಗತ್ಯತೆಯ ಬಗ್ಗೆಯೂ ಉತ್ತಮ ನಿಲುವನ್ನು ಹೊಂದಿದ್ದು, ಇರಾನ್‌ ನಲ್ಲಿ ಇವರನ್ನು ಹೆಚ್ಚು ವಿದ್ಯಾವಂತರೆಂದು ಪರಿಗಣಿಸಲಾಗುತ್ತದೆ.

ಇನ್ನು, ಉದ್ವಿಗ್ನತೆಯ ಸಮಯದಲ್ಲಿ ಅಲಿರೆಜಾ ಅರಾಫಿಯನ್ನು ಮಧ್ಯಂತರ ಸುಪ್ರೀಂ ನಾಯರನ್ನಾಗಿ ಆಯ್ಕೆ ಮಾಡಿರುವುದು ಸೈದ್ದಾಂತಿಕವಾಗಿ ಸಂಕೇತದಂತಿದೆ. ಈ ಹಿಂದೆ ಇರಾನ್‌ ನ ಇಸ್ಲಾಮಿಕ್‌ ಗಣರಾಜ್ಯದ ಸಿದ್ಧಾಂತವನ್ನು ವಿದೇಶಗಳಿಗೆ ರಫ್ತು ಮಾಡಲು ಮೀಸಲಾಗಿರುವ ಬೃಹತ್ ಧಾರ್ಮಿಕ ಕೇಂದ್ರವಾದ ಅಲ್-ಮುಸ್ತಫಾ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.

ಸದ್ಯ ಅಮೆರಿಕ-ಇಸ್ರೇಲ್‌ ಜಂಟಿಯಾಗಿ ತಮ್ಮ ರಾಷ್ಟ್ರದ ಮೇಲೆ ಯುದ್ದ ಸಾರಿದ್ದು, ಇದನ್ನು ಹೇಗೆ ನಿಭಾಯಿಸುತ್ತಾರೆ? ಯುದ್ಧದಿಂದ ತಮ್ಮ ದೇಶವನ್ನು ರಕ್ಷಣೆ ಮಾಡುವ ಸವಾಲು ಈ ಹೊಸ ಸುಪ್ರೀಂ ಲೀಡರ್‌ ಅಲಿರೆಜಾ ಮೇಲಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 8:23 pm, Sun, 1 March 26

Source link

SA vs ZIM: ಸತತ 7ನೇ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾಗೆ ಸೆಮಿಫೈನಲ್ ಎದುರಾಳಿ ಯಾರು? – Kannada News | 2026 T20 World Cup: South Africa Dominates Super 8, Unbeaten Run to Semis

2026 ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ಗೆಲುವಿನ ಓಟ ಸೂಪರ್ 8 ಸುತ್ತಿನಲ್ಲೂ ಮುಂದುವರೆದಿದೆ. ಗುಂಪು ಹಂತದಲ್ಲಿ ಮೂರು ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದ್ದ ಐಡೆನ್ ಮಾರ್ಕ್ರಾಮ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವು ಸೂಪರ್ 8 ಸುತ್ತಿನಲ್ಲೂ ಆಡಿದ ಮೂರು ಪಂದ್ಯಗಳನ್ನು ಗೆದ್ದಿದೆ. ಈಗಾಗಲೇ ಟೂರ್ನಿಯ ಸೆಮಿಫೈನಲ್ ತಲುಪಿರುವ ಆಫ್ರಿಕನ್ ತಂಡವು ಅಂತಿಮ ಸೂಪರ್ 8 ಪಂದ್ಯದಲ್ಲಿ ಜಿಂಬಾಬ್ವೆಯನ್ನು 5 ವಿಕೆಟ್‌ಗಳಿಂದ ಸೋಲಿಸಿ, ಈ ವಿಶ್ವಕಪ್‌ನಲ್ಲಿ ತನ್ನ 100% ಗೆಲುವಿನ ದಾಖಲೆಯನ್ನು ಉಳಿಸಿಕೊಂಡಿದೆ. ಗುಂಪು ಹಂತದಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾವನ್ನು ಸೋಲಿಸಿದ ಜಿಂಬಾಬ್ವೆ, ಸೂಪರ್ 8 ಸುತ್ತಿನಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ವಿಫಲವಾಗಿದೆ.

ದಕ್ಷಿಣ ಆಫ್ರಿಕಾಗೆ ಸತತ 7ನೇ ಗೆಲುವು

ಮಾರ್ಚ್ 1 ರಂದು ಭಾನುವಾರ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಜಿಂಬಾಬ್ವೆ ಮೊದಲು ಬ್ಯಾಟ್ ಮಾಡಿ 154 ರನ್ ಕಲೆಹಾಕಿತು. ದಕ್ಷಿಣ ಆಫ್ರಿಕಾದ ಬೌಲಿಂಗ್ ವಿರುದ್ಧ ಜಿಂಬಾಬ್ವೆಯ ಬ್ಯಾಟಿಂಗ್ ಆರಂಭದಿಂದಲೂ ಸಂಕಷ್ಟದಲ್ಲಿತ್ತು. ನಾಯಕ ಸಿಕಂದರ್ ರಜಾ ಮಾತ್ರ ತಂಡದ ಪರ ಏಕಾಂಗಿ ಹೋರಾಟ ನಡೆಸಿ 43 ಎಸೆತಗಳಲ್ಲಿ 73 ರನ್‌ಗಳ ಇನ್ನಿಂಗ್ಸ್ ಆಡಿದರು. ದಕ್ಷಿಣ ಆಫ್ರಿಕಾ ಪರ, ಯುವ ವೇಗಿ ಕ್ವೆನಾ ಎಂಫಕಾ 4 ಓವರ್‌ಗಳಲ್ಲಿ ಕೇವಲ 21 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರು.

ಆಫ್ರಿಕಾಗೆ ಕಳಪೆ ಆರಂಭ

ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾದ ಆರಂಭವೂ ಕೆಟ್ಟದಾಗಿತ್ತು. ಸಿಕಂದರ್ ರಜಾ ಇನ್ನಿಂಗ್ಸ್‌ನ ಮೊದಲ ಮತ್ತು ಮೂರನೇ ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾದ ಆರಂಭಿಕರಿಬ್ಬರನ್ನು ಔಟ್ ಮಾಡಿದರು. ಆದಾಗ್ಯೂ, ರಯಾನ್ ರಿಕಲ್ಟನ್, ಡೆವಾಲ್ಡ್ ಬ್ರೆವಿಸ್ ಮತ್ತು ಡೇವಿಡ್ ಮಿಲ್ಲರ್ ತ್ವರಿತವಾಗಿ ರನ್ ಗಳಿಸುವ ಮೂಲಕ ಜಿಂಬಾಬ್ವೆಯ ಮೇಲೆ ಒತ್ತಡ ಹೇರಿದರು. ಆಫ್ರಿಕನ್ ತಂಡವು ಕೇವಲ 101 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಳೆದುಕೊಂಡರೂ, ಗುರಿ ತುಂಬಾ ಹೆಚ್ಚಿರಲಿಲ್ಲ. ಟ್ರಿಸ್ಟಾನ್ ಸ್ಟಬ್ಸ್ ಮತ್ತು ಜಾರ್ಜ್ ಲಿಂಡೆ ಒಟ್ಟಾಗಿ ತಂಡವನ್ನು ಕೇವಲ 17.5 ಓವರ್‌ಗಳಲ್ಲಿ ಸುಲಭವಾಗಿ ಗುರಿಯತ್ತ ಕೊಂಡೊಯ್ದರು. ಇದು ಈ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾದ ಸತತ ಏಳನೇ ಗೆಲುವು.

ಸೆಮಿಫೈನಲ್‌ನಲ್ಲಿ ಆಫ್ರಿಕಾ ಎದುರಾಳಿ ಯಾರು?

ಈ ಗೆಲುವಿನೊಂದಿಗೆ, ದಕ್ಷಿಣ ಆಫ್ರಿಕಾ ಗುಂಪು 1 ರಲ್ಲಿ 6 ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಪಡೆದುಕೊಂಡು ಸೆಮಿಫೈನಲ್​ಗೆ ಲಗ್ಗೆ ಇಟ್ಟಿದೆ. ಸೆಮಿಫೈನಲ್​ನಲ್ಲಿ ಆಫ್ರಿಕಾ ತಂಡವು ಗುಂಪು 2 ರಲ್ಲಿ ಎರಡನೇ ಸ್ಥಾನ ಪಡೆದಿರುವ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಸತಿ ಶಾಲೆ ಮಾಲೀಕನಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಗಂಡನ ಕೃತ್ಯ ಮುಚ್ಚಿಡಲು ನಿತ್ಯ ಪಪ್ಪಾಯ ತಿನ್ನಿಸುತ್ತಿದ್ದ ಹೆಂಡ್ತಿ – Kannada News | Devanahalli Private Residential School Owner And His Wife Arrested for physical harassment On Students

ಬೆಂಗಳೂರು, (ಮಾರ್ಚ್ 01): ವಸತಿ ಶಾಲೆ ಮಾಲೀಕ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ (physical harassment) ಎಸಗಿ ಇದೀಗ ಜೈಲುಪಾಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural)  ಜಿಲ್ಲೆ ದೇವನಹಳ್ಳಿ (Devanahalli) ಪಟ್ಟಣದಲ್ಲಿ ನಡೆದಿದೆ. ಖಾಸಗಿ ವಸತಿ ಶಾಲೆ ಸಂಸ್ಥೆ ಮಾಲೀಕ ಧನಂಜಯ್ ಎನ್ನುವಾತ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಪೋಷಕರನ್ನು ಭೇಟಿ ಮಾಡದಂತೆ ಮಕ್ಕಳನ್ನು 15 ದಿನಗಳ ಕಾಲ ವಸತಿ ಶಾಲೆಯಲ್ಲಿ ಕೂಡಿ ಹಾಕಿದ್ದಾನೆ. ಇನ್ನು ಗಂಡನ ನೀಚ ಕೃತ್ಯವನ್ನು ಮುಚ್ಚಿ ಹಾಕಲು ಪತ್ನಿ ಶೈಲಜಾ ಸಹ ಬಾಲಕಿಗೆ ನಿತ್ಯ ಪರಂಗಿ ಹಣನ್ನು ತಿನ್ನಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಕ್ಕಳಿಗೆ ಪರೀಕ್ಷೆ ನೆಪದಲ್ಲಿ ಪೋಷಕರನ್ನ ಬೇಟಿ ಮಾಡಲು ಫೋನ್ ನಲ್ಲಿ ಮಾತನಾಡಲು ಬಿಡದೆ ಕೂಡಿ ಹಾಕಿದ್ದಾರೆ. ಜೊತೆಗೆ ನಡೆದ ವಿಚಾರ ಯಾರಿಗೂ ಹೇಳದಂತೆ ಆರೋಫಿಗಳಾದ ಧನಂಜಯ್ ಹಾಗೂ ಅವನ ಪತ್ನಿ ಶೈಲಜಾ ಬಾಲಕಿಗೆ ಪರಂಗಿ ಹಣನ್ನ ನಿತ್ಯ ತಿನ್ನಿಸಿ ಕಿರುಕುಳ ನೀಡಿದ್ದಾರೆ. ಇನ್ನೂ 15 ದಿನಗಳ ಕಾಲ ಕಿರಕುಳವನ್ನೆಲ್ಲ ಸಹಿಸಿಕೊಂಡಿದ್ದ ಮಕ್ಕಳು ನಿನ್ನೆ (ಫೆಬ್ರವರಿ 28) ಶಿಕ್ಷಕಿಯೊಬ್ಬರ ಫೋನ್ ನಿಂದ ಪೋಷಕರಿಗೆ ಕರೆ ಮಾಡಿ ಅಳುತ್ತಾ ತಮ್ಮ ಮೇಲಾದ ದೌರ್ಜನ್ಯವನ್ನು ಹೇಳಿದ್ದಾರೆ. ಕೂಡಲೇ ಪೋಷಕರು ಸಹ ಶಾಲೆಗೆ ದೌಡಾಯಿಸಿ ವಿಚಾರಿಸಿದಾಗ ಮಕ್ಕಳು ಹೇಳಿದ ಮಾತನ್ನು ಕೇಳಿ ಶಾಕ್ ಆಗಿದ್ದಾರೆ. ಬಳಿಕ ಪೋಷಕರು, ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಧನಂಜಯ್ ಹಾಗೂ ಆತನ ಪತ್ನಿ ವಿರುದ್ದ ದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಧನಂಜಯ್ ಹಾಗೂ ಪತ್ನಿ ಶೈಲಾಜಾಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್!

ವಾರ್ಡನ್​​ ರೂಮನಲ್ಲೇ ಕೃತ್ಯ

ಇನ್ನು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ವಿಚಾರ ಗೊತ್ತಾಗ್ತಿದ್ದಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲೇ ಮಾಲೀಕ ಧನಂಜಯ್ ವಾರ್ಡನ್ ರೂಮ್​​ನಲ್ಲೇ ಮಂಚ ಎಲ್ಲಾ ಹಾಕಿ ಹೈಫೈ ಮಾಡಿಕೊಂಡಿಕೊಂಡಿರುವುದು ಬೆಳಕಿಗೆ ಬಂದಿದ್ದು,  ಅದೇ ಕೊಠಡಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಅನಧಿಕೃತ ಹಾಸ್ಟೆಲ್ ನಡೆಸುತ್ತಿದ್ದ

ಶಾಲೆಯಲ್ಲಿ ಬಾಲಕಿಯರ ವಸತಿ ಶಾಲೆ ನಡೆಸಲು ಯಾವುದೇ ಅನುಮತಿ ಪಡೆಯದ ಆರೋಪ ಕೇಳಿ ಬಂದಿದ್ದು ಅಕ್ರಮವಾಗಿ ಹಾಸ್ಟೆಲ್ ನಡೆಸುತ್ತಿರುವುದು ಸಹ ತನಿಖೆಯಲ್ಲಿ ಬಯಲಾಗಿದೆ. ಇನ್ನೂ ಇಷ್ಟೆಲ್ಲ ನಡೆಯುತ್ತಿದ್ದರೂ ಬಿಇಒ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೈಲೆಂಟ್ ಇದ್ದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇನ್ನು ಈ ಬಗ್ಗೆ ಡಿಡಿಪಿಐ ಅವರನ್ನ ಕೇಳಿದರೆ ಇದು ನಮ್ಮ ವ್ಯಾಪ್ತಿಗೆ ಬರಲ್ಲ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುತ್ತೆ ಎಂದು ಜಾರಿಕೊಂಡಿದ್ದಾರೆ.

ಇನ್ನೂ ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನುವ ಸುದ್ದಿ ಹರಿದಾಡುತ್ತಿದ್ದಂತೆಯೇ  ಪೋಷಕರು ಶಾಲೆ ಬಳಿ ಬಂದು ಮಾಲೀಕನ ಕೃತ್ಯವನ್ನು ಖಂಡಿಸಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಸದ್ಯ ದೇವನಹಳ್ಳಿ ಪೊಲೀಸರು, ದಂಪತಿಯನ್ನು ಪೋಕ್ಸೋ ಪ್ರಕರಣದಲ್ಲಿ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಕಾಲೇಜು – Kannada News | Haveri: College Issues Hall Ticket to 2nd PUC Student After Bike Pawned Over Unpaid Fees

ಹಾವೇರಿ, ಮಾರ್ಚ್​​ 01: ಇತ್ತೀಚೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹಣಕ್ಕಾಗಿ ಶಿಕ್ಷಣ ನೀಡುತ್ತಿವೆ ಎಂಬ ಅನುಮಾನಗಳು ಮೂಡುತ್ತಿವೆ. ಏಕೆಂದರೆ ಇದಕ್ಕೆ ಸಾಕ್ಷಿಯೆಂಬಂತೆ ಘಟನೆಯೊಂದು ನಗರದಲ್ಲಿ ನಡೆದಿದೆ.  ಇಲ್ಲೊಂದು ಖಾಸಗಿ ಶಿಕ್ಷಣ ಸಂಸ್ಥೆ ಶುಲ್ಕ ಕಟ್ಟಿಲ್ಲ ಅಂತಾ ಆರೋಪಿಸಿ ವಿದ್ಯಾರ್ಥಿನಿಗೆ ಪ್ರವೇಶ ಪತ್ರ ನೀಡಿಲ್ಲ.‌ ಅಷ್ಟೇ ಅಲ್ಲದೆ ಮಧ್ಯಸ್ಥಿಕೆ ವಹಿಸಿದ ವ್ಯಕ್ತಿಯ ಬೈಕ್​​ ಅನ್ನು ಅಡವಿಟ್ಟುಕೊಂಡು ಬಳಿಕ ಹಾಲ್​ ಟಿಕೆಟ್​ (hall ticket) ನೀಡಿದ್ದಾರೆ. ಸದ್ಯ ಆಡಳಿತ ಮಂಡಳಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಕಿಯಿಂದ ದರ್ಪ 

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಬಿಎಜೆಎಸ್​​ಎಸ್​ ಕಾಲೇಜು ಆವರಣದಲ್ಲಿರುವ ಪಿಯುಸಿ ಡಿಬಿಎಸ್ ಮೆಡಿಕಲ್ ನೀಟ್ ಅಕಾಡೆಮಿ ಕಾಲೇಜ್​​​ನಲ್ಲಿ ಘಟನೆ ನಡೆದಿದೆ. ಸಾರಾ ಜೆಸ್ಸಿಕಾ ಪಿಯುಸಿ ವಿಜ್ಞಾನ ಭಾಗದಲ್ಲಿ ಓದುತ್ತಿದ್ದು, ಪರೀಕ್ಷೆ ಹಾಲ್ ಟಿಕೆಟ್ ನೀಡದೆ ಕಳೆದ ಒಂದು ವಾರದಿಂದ ಆಡಳಿತದ ಮಂಡಳಿ ಸತಾಯಿಸಿದೆ. ವಿದ್ಯಾರ್ಥಿನಿ ಭವಿಷ್ಯ ಹಾಳಾಗುತ್ತೆ, ಹಾಲ್ ಟಿಕೆಟ್ ನೀಡುವಂತೆ ಕೇಳಿದಾಗ ಸುನೀತಾ ಮೇಡಂ ಎನ್ನುವವರು ಎಲ್ಲಾ ಕಾಲೇಜಿನವರು ಪುಗಸಟ್ಟೆ ಕಲಿಸುತ್ತಾರಾ ಎಂದು ದರ್ಪ ತೋರಿದ್ದಾರೆ.

ಅಲ್ಲದೆ ಪ್ರಕರಣ ಮಧ್ಯಸ್ಥಿಕೆ ವಹಿಸಿದ ಶಿವಪುತ್ರ ಎಂಬುವವರ ಬೈಕ್ ಮತ್ತು ಮೊಬೈಲ್ ತೆಗೆದುಕೊಂಡಿದ್ದಾರೆ. ಕೊನೆಗೆ ಮೊಬೈಲ್ ಕೊಟ್ಟು ಬೈಕ್ ಇಟ್ಟುಕೊಂಡಿದ್ದಾರೆ. ಬಳಿಕ ಆಡಳಿತ ಮಂಡಳಿ ಸದಸ್ಯರು ವಿದ್ಯಾರ್ಥಿಗೆ ಹಾಲ್​ ಟಿಕೆಟ್ ನೀಡಿ ಪರೀಕ್ಷೆಗೆ ಅವಕಾಶ ನೀಡಿದ್ದಾರೆ.

ಇದನ್ನೂ ಓದಿ: ಶುಲ್ಕ ಬಾಕಿ ಆರೋಪ: ವಿದ್ಯಾರ್ಥಿನಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಲ್ ಟಿಕೆಟ್ ನಿರಾಕರಿಸಿದ ಕಾಲೇಜು

ಸುನೀತಾ ಡಿಬಿ ಮೇಡಂ ಸರ್ಕಾರಿ ಹಿರಿಯ ಉನ್ನತ್ತೀಕರಣ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಖಾಸಗಿ ಶಾಲೆಯಲ್ಲಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. 30 ಸಾವಿರ ಶುಲ್ಕಕ್ಕಾಗಿ ವಿದ್ಯಾರ್ಥಿನಿ ಕಣ್ಣೀರು ಹಾಕಿದ್ದು, ಸರ್ಕಾರಿ ಶಾಲೆಯ ಶಿಕ್ಷಕಿಗೆ ಖಾಸಗಿ ಶಾಲೆಯಲ್ಲಿ ಏನು ಕೆಲಸ ಎಂದು ಆಕ್ರೋಶ ವ್ಯಕ್ತವಾಗಿದೆ.

ಅಲ್ಲದೆ ಈ ಹಿಂದೆ ಈ ಶಾಲೆಯಲ್ಲಿ ಕೆಲಸ ಮಾಡಿದ ಶಿಕ್ಷಕರಿಗೆ ಸಂಬಳ ನೀಡಿಲ್ಲ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಲು ಸುನೀತಾ ‌ಮೇಡಂ ನಿರಾಕರಿಸಿದರು. ವಿದ್ಯಾರ್ಥಿನಿ ಸಾರಾ ತಂದೆ ರಾಜು ಪ್ರತಿಕ್ರಿಯಿಸಿದ್ದು, ಶುಲ್ಕವನ್ನ ಕಟ್ಟಿದ್ದೇನೆ. ಅದಕ್ಕೆ ಸರಿಯಾದ ರಸೀದಿ ನೀಡಲ್ಲ‌ ಎಂದರು. ಇನ್ನು ಈ ವಿಚಾರ ಬಿಇಒ ಶ್ಯಾಮಸುಂದರ್ ಗಮನಕ್ಕೆ ತರಲಾಗಿದ್ದು, ನೋಟಿಸ್ ನೀಡಿ ತನಿಖೆ ಮಾಡುತ್ತೇವೆ ಅಂದಿದ್ದಾರೆ.

ಇದನ್ನೂ ಓದಿ: ಪರೀಕ್ಷೆಗೆ ಹೆದರಿ ವಸತಿ ಶಾಲೆಯ ಕಾಂಪೌಂಡ್​​ ಹಾರಿ 5 ಮಂದಿ SSLC ವಿದ್ಯಾರ್ಥಿಗಳು ಪರಾರಿ!

ಒಟ್ಟಿನಲ್ಲಿ ಖಾಸಗಿ ಶಾಲೆಯ ಧನದಾಯಿ ಆಸೆಗಾಗಿ ವಿದ್ಯಾರ್ಥಿನಿ ಪ್ರವೇಶ ಪತ್ರ ನೀಡಿದೆ ಸತಾಯಿಸುತ್ತಿದ್ದಾರೆ. ಸ್ಥಳೀಯರು ಸುನೀತಾ ಮೇಡಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದು, ಸರ್ಕಾರಿ ಶಾಲೆಯ ಶಿಕ್ಷಕಿಯ ವಿರುದ್ಧ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ದಯವಿಟ್ಟು ಕಾಪಾಡಿ’: ಸಹಾಯಕ್ಕಾಗಿ ಮೋದಿಗೆ ಮೊರೆಯಿಟ್ಟ ಶಿವಣ್ಣನ ನಟಿ – Kannada News | Sonal Chauhan stranded Dubai appeals pm Modi’s help to get back to India

ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇರಾನ್ ಮೇಲೆ ಅಮೆರಿಕ (America) ಮತ್ತು ಇಸ್ರೇಲ್ ಜಂಟಿ ದಾಳಿ ಮಾಡುತ್ತಿವೆ. ಇರಾನ್ ಸಹ ಪ್ರತಿದಾಳಿ ಮಾಡುತ್ತಿದೆ. ಯುದ್ಧದ ಭೀತಿ ಮಧ್ಯಪ್ರಾಚ್ಯದ ಹಲವು ದೇಶಗಳನ್ನು ಆವರಿಸಿದ್ದು, ಅದರಲ್ಲಿ ಯುಎಇ ಸಹ ಒಂದಾಗಿದೆ. ಯುಎಇಯ ದುಬೈ, ಅಬುದಾಭಿ ಇನ್ನೂ ಕೆಲವು ನಗರಗಳಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಭಯದಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ವಿಮಾನ ಹಾರಾಟ ರದ್ದಾಗಿರುವ ಕಾರಣ ಭಾರತಕ್ಕೆ ಬರಲಾರದೆ ಒದ್ದಾಡುತ್ತಿದ್ದಾರೆ. ಇದೀಗ ದುಬೈನಲ್ಲಿ ಸಿಲುಕಿಕೊಂಡಿರುವ ನಟಿಯೊಬ್ಬರು ತಮ್ಮನ್ನು ಕಾಪಾಡುವಂತೆ ಪ್ರಧಾನಿ ಮೋದಿ ಅವರಲ್ಲಿ ಕೇಳಿಕೊಂಡಿದ್ದಾರೆ. ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ, ಬಾಲಿವುಡ್ ನಟಿ ಸೋನಲ್ ಚೌಹಾಣ್ ಅವರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ವಿಮಾನಯಾನ ಸೇವೆಗಳು ಸ್ಥಗಿತಗೊಂಡಿರುವುದರಿಂದ ತಾಯ್ನಾಡಿಗೆ ಮರಳಲು ಸಾಧ್ಯವಾಗದೆ, ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಕನ್ನಡದ ‘ಶಿವಲಿಂಗ’ ಸೇರಿದಂತೆ ಹಿಂದಿ, ತೆಲುಗು ಸಿನಿಮಾಗಳಲ್ಲಿಯೂ ಸಹ ನಟಿಸಿರುವ ನಟಿ ಸೋನಲ್ ಚೌಹಾಣ್ ಅವರು ದುಬೈನಲ್ಲಿ ಸಿಲುಕಿಕೊಂಡಿದ್ದು, ಯುದ್ಧ ಭೀತಿಯಿಂದ ತತ್ತರಿಸಿದ್ದಾರೆ. ಭಾರತಕ್ಕೆ ಬರಲಾರದೆ ಚಿಂತಿತರಾಗಿರುವ ನಟಿ ಸೋನಲ್, ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಿದ್ದು, ತಮ್ಮನ್ನ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಸೋನಲ್ ಚೌಹಾಣ್ ಅವರು ತಮ್ಮ ಪೋಸ್ಟ್‌ನಲ್ಲಿ,ಪ್ರಧಾನಿ ನರೇಂದ್ರ ಮೋದಿ ಅವರೇ, ನಾನು ಪ್ರಸ್ತುತ ದುಬೈನಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಮಧ್ಯೆ ಸಿಲುಕಿಕೊಂಡಿದ್ದೇನೆ. ವಿಮಾನಗಳನ್ನು ರದ್ದುಗೊಳಿಸಲಾಗಿದೆ ಮತ್ತು ಭಾರತಕ್ಕೆ ಮರಳಲು ಸ್ಪಷ್ಟ ಮಾರ್ಗವಿಲ್ಲ. ನಾನು ಸುರಕ್ಷಿತವಾಗಿ ಮನೆಗೆ ಮರಳಲು ಸರ್ಕಾರದ ಮಾರ್ಗದರ್ಶನ ಮತ್ತು ಬೆಂಬಲವನ್ನು ಬಯಸುತ್ತಿದ್ದೇನೆ. ಸರ್ಕಾರದಿಂದ ಯಾವುದೇ ಸಹಾಯ ಮತ್ತು ಸುರಕ್ಷಿತ ವಾಪಸಾತಿಗೆ ಮಾರ್ಗದರ್ಶನಕ್ಕಾಗಿ ನಾನು ತುಂಬಾ ಕೃತಜ್ಞಳಾಗಿರುತ್ತೇನೆ’ ಎಂದಿರುವ ನಟಿ, ತಮ್ಮ ಟ್ವೀಟ್ ಅನ್ನು ಪ್ರಧಾನಿ ಕಚೇರಿ (PMO) ಮತ್ತು ವಿದೇಶಾಂಗ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ:‘ನಾನು ಬಾಲಿವುಡ್ ಬಿಡಲು ಬಯಸಲಿಲ್ಲ, ನನ್ನನ್ನು ಬಲವಂತಪಡಿಸಲಾಯಿತು’; ಪ್ರಿಯಾಂಕಾ ಚೋಪ್ರಾ

ಸೋನಲ್ ಚೌಹಾಣ್ ಭಾರತೀಯ ಚಿತ್ರರಂಗದ ಜನಪ್ರಿಯ ನಟಿ ಮತ್ತು ಮಾಡೆಲ್ ಆಗಿದ್ದಾರೆ. 2008ರಲ್ಲಿ ಇಮ್ರಾನ್ ಹಶ್ಮಿ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಜನ್ನತ್’ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟರು. ಈ ಚಿತ್ರದ ‘ಜರಾ ಸಾ’ ಹಾಡಿನ ಮೂಲಕ ಅವರು ಸಖತ್ ಜನಪ್ರಿಯತೆ ಗಳಿಸಿದರು. ಕೇವಲ ಹಿಂದಿ ಮಾತ್ರವೇ ಅಲ್ಲದೆ ತೆಲುಗು ಮತ್ತು ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಕನ್ನಡದಲ್ಲಿ ಶಿವ ರಾಜ್‌ಕುಮಾರ್ ಅವರ ಜೊತೆ ‘ಶಿವಲಿಂಗ’ ಚಿತ್ರದ ಪ್ರಮುಖ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು. ತೆಲುಗಿನಲ್ಲಿ ಬಾಲಕೃಷ್ಣ ಅವರ ಜೊತೆ ‘ಲೆಜೆಂಡ್’ ಮತ್ತು ‘ಡಿಕ್ಟೇಟರ್’ ನಂತಹ ಚಿತ್ರಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ಅಭಿನಯದ ಅದ್ದೂರಿ ಚಿತ್ರ ‘ಆದಿಪುರುಷ್’ ನಲ್ಲಿ ಶೇಷನಾಗನ ಪತ್ನಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಯುದ್ಧ ಭೀತಿ ಇರುವ ಕಾರಣದಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ದುಬೈ ಸೇರಿದಂತೆ ಹಲವು ಅರಬ್ ರಾಷ್ಟ್ರಗಳ ವೈಮಾನಿಕ ಮಾರ್ಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಆಕಾಶದಲ್ಲಿ ಕ್ಷಿಪಣಿಗಳು ಸಂಚರಿಸುತ್ತಿರುವ ವಿಡಿಯೋಗಳು ಹರಿದಾಡುತ್ತಿದ್ದು, ಪ್ರವಾಸಿಗರಲ್ಲಿ ಭೀತಿ ಮೂಡಿಸಿದೆ.ಸೋನಲ್ ಅವರಂತೆ ಸಾವಿರಾರು ಭಾರತೀಯ ಪ್ರಜೆಗಳು ಅಲ್ಲಿ ಸಿಲುಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs WI: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ರಿಂಕು, ಕುಲ್ದೀಪ್​ಗೆ ಇಲ್ಲ ಅವಕಾಶ – Kannada News | IND vs WI T20 World Cup: Knockout Match for Semifinals; Playing XI and Head to Head

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ಸೂಪರ್ 8 ಪಂದ್ಯ ನಡೆಯುತ್ತಿದೆ. ಈ ಪಂದ್ಯವು ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ. ಏಕೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತದೆ. ಹೀಗಾಗಿ ಈ ಪಂದ್ಯ ಉಭಯ ತಂಡಗಳಿಗೂ ಒಂದು ರೀತಿಯ ನಾಕೌಟ್ ಪಂದ್ಯವಾಗಿದ್ದು ಸೋತ ತಂಡ ಟಿ20 ವಿಶ್ವಕಪ್​ನಿಂದ (T20 World Cup) ಹೊರಬೀಳಲಿದೆ.

ಟಾಸ್ ಗೆದ್ದ ಭಾರತ

ಇನ್ನು ಈ ಪಂದ್ಯದ ಟಾಸ್ ಈಗಾಗಲೇ ಮುಗಿದಿದ್ದು, ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ನಂತರ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಂದರೆ ಜಿಂಬಾಬ್ವೆ ವಿರುದ್ಧ ಕಣಕ್ಕಿಳಿದಿದ್ದ ತಂಡವೇ ಈ ಪಂದದಯದಲ್ಲೂ ಆಡಲಿದೆ. ಇತ್ತ ವೆಸ್ಟ್ ಇಂಡೀಸ್ ತಂಡದಲ್ಲಿ ಬದಲಾವಣೆ ಮಾಡಲಾಗಿದೆ.

ಮುಖಾಮುಖಿ ದಾಖಲೆ

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ ಇದುವರೆಗೆ 30 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ತಂಡವು 19 ಪಂದ್ಯಗಳನ್ನು ಗೆದ್ದಿದ್ದರೆ, ವೆಸ್ಟ್ ಇಂಡೀಸ್ 10 ಪಂದ್ಯವನ್ನು ಗೆದ್ದಿದೆ. ಉಳಿದಂತೆ 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಇದರರ್ಥ ಭಾರತ ತಂಡ, ವಿಂಡೀಸ್ ಮೇಲೆ ಸಂಪೂರ್ಣ ಮೇಲುಗೈ ಸಾಧಿಸಿದೆ ಎನ್ನಬಹುದು.

IND vs WI T20 WC Live Score: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಉಭಯ ತಂಡಗಳು

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರಿತ್ ಬುಮ್ರಾ, ವರುಣ್ ಚಕ್ರವರ್ತಿ

ವೆಸ್ಟ್ ಇಂಡೀಸ್ ತಂಡ: ಶೈ ಹೋಪ್ (ನಾಯಕ), ಶಿಮ್ರಾನ್ ಹೆಟ್ಮೈರ್, ರೋವ್ಮನ್ ಪೊವೆಲ್, ರೋಸ್ಟನ್ ಚೇಸ್, ಶೆರ್ಫೇನ್ ರುದರ್ಫೋರ್ಡ್, ಜೇಸನ್ ಹೋಲ್ಡರ್, ಮ್ಯಾಥ್ಯೂ ಫೋರ್ಡ್, ರೊಮಾರಿಯೊ ಶೆಫರ್ಡ್, ಗುಡಕೇಶ್ ಮೋತಿ, ಶಮರ್ ಜೋಸೆಫ್, ಅಕಿಲ್ ಹೊಸೈನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:52 pm, Sun, 1 March 26

Source link

Video: ಮೈಸೂರಿನ ಬೀದಿಯಲ್ಲಿ ಬಿರಿಯಾನಿ ಸವಿದು ಸ್ಥಳೀಯರ ಆತಿಥ್ಯಕ್ಕೆ ಮನಸೋತ ವಿದೇಶಿಗ – Kannada News | Mysore: A foreigner was delighted with the hospitality after tasting free biryani on the side of the road in Mysore.

ಮೈಸೂರು, ಮಾರ್ಚ್ 01: ಭಾರತಕ್ಕೆ ಬರುವ ವಿದೇಶಿಗರು (Foreigners) ಇಲ್ಲಿನ ಪ್ರವಾಸಿ ತಾಣಗಳು, ವಿವಿಧ ಆಹಾರಗಳನ್ನು ಇಷ್ಟ ಪಟ್ಟು ಸವಿಯುತ್ತಾರೆ. ಆಚಾರ ವಿಚಾರವನ್ನು ಇಷ್ಟ ಪಟ್ಟು ಇಲ್ಲೇ ಸೆಟಲ್ ಆಗ್ತಾರೆ.  ಅಷ್ಟೇ ಅಲ್ಲದೇ ಭಾರತೀಯರ ಒಳ್ಳೆಯ ಮನಸ್ಸಿಗೆ ಹಾಗೂ ಅತಿಥಿ ಸತ್ಕಾರಕ್ಕೆ ಮನಸೋಲುವುದಿದೆ. ಇದೀಗ ಭಾರತಕ್ಕೆ ಭೇಟಿ ನೀಡಿದ ವಿದೇಶಿಗರೊಬ್ಬರು ಹಂಚಿಕೊಂಡ ಹೃದಯಸ್ಪರ್ಶಿ ಅನುಭವವು ಎಲ್ಲರ ಗಮನ ಸೆಳೆದಿದೆ. ಮೈಸೂರಿನ (Mysore) ಬೀದಿಗಳಲ್ಲಿ ನಡೆದುಕೊಂಡು ಹೋಗುವಾಗ ವಿದೇಶಿಗರೊಬ್ಬರು ಅನಿರೀಕ್ಷಿತ ಕ್ಷಣವನ್ನು ಸೆರೆ ಹಿಡಿದ್ದಾರೆ. ಉಚಿತವಾಗಿ ಬಿರಿಯಾನಿ ನೀಡಿದ್ದು, ಭಾರತೀಯರ ಆತಿಥ್ಯಕ್ಕೆ ಮನಸೋತಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

lepanimusicc ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.  ಈ ವಿಡಿಯೋ ವಿದೇಶಿಗರೊಬ್ಬರು ಮೈಸೂರಿನ ಬೀದಿಗಳಲ್ಲಿ ಸುತ್ತಾಡಿದ್ದಾರೆ. ಈ ವಿಡಿಯೋದಲ್ಲಿ ಸ್ಥಳೀಯರೊಬ್ಬ ಉಚಿತವಾಗಿ ವಿದೇಶಿಗರೊಬ್ಬರಿಗೆ ಊಟ ಬಡಿಸುವುದನ್ನು ನೋಡಬಹುದು. ಈ ಕ್ಲಿಪ್‌ನ ಶೀರ್ಷಿಕೆಯಲ್ಲಿ ಭಾರತವು ಅದ್ಭುತವಾದ ಸ್ಥಳ. ನಾವು ಮೈಸೂರಿನ ಜನನಿಬಿಡ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಸುವಾಸನೆ ನನ್ನ ಮೂಗಿಗೆ ಬಡಿಯಿತು. ನಾವು ರಸ್ತೆಯ ಆಚೆ ನೋಡಿದೆವು. ಒಂದು ದೊಡ್ಡ ಪಾತ್ರೆಯ ಹಿಂದೆ ಇದ್ದ ಆ ವ್ಯಕ್ತಿ ನಗುವಿನೊಂದಿಗೆ, ಜನರಿಗೆ ಪ್ಲೇಟ್‌ ಬಿರಿಯಾನಿಯನ್ನು ಹಾಕುತ್ತಿದ್ದವ ನಮ್ಮತ್ತ ಕೈ ಬೀಸುತ್ತಿದ್ದ.

ವೈರಲ್ ವಿಡಿಯೋ ಇಲ್ಲಿದೆ

ಮೊದಲಿಗೆ ನಾನು ಹಿಂಜರಿದಿದ್ದೆ, ಆ ಬಳಿಕ ನಾವು ಹೋದೆವು. ನಾನು ಅವನ ಬಳಿ ಒಂದು ಪ್ಲೇಟ್‌ಗೆ ಎಷ್ಟು ಎಂದು ಕೇಳಿದೆ. ಅವನು ‘ಚಿಂತಿಸಬೇಡಿ, ತಿನ್ನಿರಿ’ ಎಂದು ಹೇಳಿದನು. ನನಗೆ ಒಂದು ಪ್ಲೇಟ್‌ ಬಿರಿಯಾನಿ ಬಡಿಸಿದ. ಅವನ ಸ್ನೇಹಿತ ನನಗೆ ಮೇಲೆ ಸ್ವಲ್ಪ ಚಿಕನ್ ಕರಿ ಬಡಿಸಿದನು. ನಾನು ಬೀದಿ ಬದಿಯಲ್ಲಿ ಕೆಲವು ಸ್ಥಳೀಯರ ಪಕ್ಕದಲ್ಲಿ ನಿಂತು ನನ್ನ ಜೀವನದಲ್ಲಿ ಹೊಟ್ಟೆ ತುಂಬುವ ರುಚಿಕರ ಬಿರಿಯಾನಿ ತಿಂದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಧೋಬಿ ಘಾಟ್‌ಗೆ ತೆರಳಿ ತನ್ನ ಮಕ್ಕಳಿಗೆ ಜೀವನ ಪಾಠ ಹೇಳಿಕೊಟ್ಟ ತಾಯಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಇದು ನಮಗೆ ತಿಳಿದಿರುವ ಭಾರತ, ಅಲ್ಲಿ ಅತಿಥಿಗಳನ್ನು ಕುಟುಂಬದವರಂತೆ ನೋಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ವಿದೇಶಿಗರು ಭಾರತವನ್ನು ಇಷ್ಟ ಪಡಲು ಇದುವೇ ಕಾರಣ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಇದು ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಶುದ್ಧ ಮಾನವೀಯತೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:42 pm, Sun, 1 March 26

Source link

ಚಿತ್ರದುರ್ಗ ಜಿಲ್ಲಾಡಳಿತ ಭವನ ವಿವಾದ: ಅವೈಜ್ಞಾನಿಕ ಕಟ್ಟಡವೆಂದು ರಿಜೆಕ್ಟ್; ಕೋಟ್ಯಂತರ ರೂ ನೀರಲ್ಲಿ ಹೋಮ – Kannada News | Chitradurga Admin Building Row: Rejected Site, New Plan Sparks Environmental Clash

ಚಿತ್ರದುರ್ಗ, ಮಾರ್ಚ್​​ 01: ಚಿತ್ರದುರ್ಗದಲ್ಲಿ (Chitradurga) ನೂತನ ಜಿಲ್ಲಾಡಳಿತ ಭವನ ಆಗಬೇಕೆಂಬುದು ದುರ್ಗದ ಜನರ ಬಹು ಕಾಲದ ಕನಸು. ಹಾಗಾಗಿ ಕಣಿವೆ ಪ್ರದೇಶದಲ್ಲಿ ಜಿಲ್ಲಾಡಳಿತ ಭವನ ಕಟ್ಟಡವೇನೋ ನಿರ್ಮಾಣವಾಗಿದೆ. ಆದರ  ಉದ್ಘಾಟನೆಗೂ ಮುನ್ನವೇ ಅವೈಜ್ಞಾನಿಕ ಕಟ್ಟಡ ಎಂಬ ಕಾರಣಕ್ಕೆ ಜಿಲ್ಲಾಡಳಿತವೇ ತಿರಸ್ಕರಿಸಿ ಮಾಡಿದ್ದು, ಬೇರೆಡೆ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ. ಆ ಮೂಲಕ ಕೋಟ್ಯಂತರ ರೂ ನೀರಲ್ಲಿ ಹೋಮ ಮಾಡಿದಂತಾಗಿದೆ. ಸದ್ಯ ಹೊಸ ವಿವಾದವೊಂದು ಸೃಷ್ಟಿ ಆಗಿದೆ.

ಕೋಟೆನಾಡು ಚಿತ್ರದುರ್ಗದಲ್ಲಿ ಒಂದೇ ಸೂರಿನಡಿ ಎಲ್ಲಾ ಕಚೇರಿಗಳು ಇರುವಂತ ಜಿಲ್ಲಾಡಳಿತ ಭವನ ನಿರ್ಮಾಣ ಆಗಬೇಕೆಂಬುದು ದುರ್ಗದ ಜನರ ಬಹುಕಾಲದ ಕನಸು. ಅಂತೆಯೇ 2020-21ರಲ್ಲಿ ಚಿತ್ರದುರ್ಗ ಬಳಿಯ ಕಣಿವೆ ಪ್ರದೇಶದಲ್ಲಿ ಜಾಗ ಗುರುತಿಸಿ ಜಿಲ್ಲಾಡಳಿತ ಭವನ ಕಟ್ಟಡ ಶುರು ಮಾಡಲಾಗಿತ್ತು. ಆರೇಳು ತಿಂಗಳ ಹಿಂದೆ ಕಟ್ಟಡ ಪೂರ್ಣಗೊಂಡಿದ್ದರೂ ಉದ್ಘಾಟನೆ ಭಾಗ್ಯ ಮಾತ್ರ ಕಂಡಿಲ್ಲ.

ಇದನ್ನೂ ಓದಿ: ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ವಿಳಂಬ: ಸಿಡಿದೆದ್ದ ರೈತರಿಂದ ನಾಳೆ ಬಂದ್‌ಗೆ ಕರೆ

ಅವೈಜ್ಞಾನಿಕ ಕಟ್ಟಡ, ಸೂಕ್ತ ಮೂಲಕ ಸೌಕರ್ಯಗಳ ಕೊರತೆ ಹಾಗೂ ನಗರದಿಂದ ಮೂರ್ನಾಲ್ಕು ಕಿ.ಮೀ ದೂರ ಎನ್ನುವ ಕಾರಣಕ್ಕೆ ಜಿಲ್ಲಾಡಳಿತವೇ ರಿಜೆಕ್ಟ್ ಮಾಡಿದೆ. ಉಸ್ತುವಾರಿ ಸಚಿವ ಡಿ ಸುಧಾಕರ್, ಶಾಸಕ ಕೆಸಿ ವಿರೇಂದ್ರ ಪಪ್ಪಿ ನಿರ್ಮಾಣವಾದ ಕಟ್ಟಡ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಬಿಟ್ಟುಕೊಡಲು ನಿರ್ಧರಿಸಿದ್ದು, ಈಗಾಗಲೇ ಹಸ್ತಾಂತರಿಸಿದ್ದಾರೆ. ಚಿತ್ರದುರ್ಗ ನಗರದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿ ಜಾಗದಲ್ಲಿ ಆರು ಎಕರೆ ಪ್ರದೇಶದಲ್ಲಿ ಹೊಸ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಪ್ಲ್ಯಾನ್​​ ಮಾಡಲಾಗಿದ್ದು, ತೋಟಗಾರಿಕೆ ಇಲಾಖೆ ಸಚಿವ ಎಸ್​​.ಎಸ್ ಮಲ್ಲಿಕಾರ್ಜುನ್​​​ ಕೂಡ ಸೈ ಎಂದಿದ್ದಾರೆ.

ಪರಿಸರ ಪ್ರಿಯರು ಹಾಗೂ ಬಿಜೆಪಿ ನಾಯಕರು ವಿರೋಧ

ಇನ್ನು ದುರ್ಗದ ಪರಿಸರ ಪ್ರಿಯರು ಹಾಗೂ ಬಿಜೆಪಿ ನಾಯಕರು ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ತೋಟಗಾರಿಕೆ ಇಲಾಖೆ ಪ್ರದೇಶದಲ್ಲಿ ನೂರಾರು ಗಿಡ ಮರಗಳಿವೆ, ಸಸಿಗಳನ್ನು ಬೆಳೆಸಲಾಗುತ್ತದೆ. ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಅಲ್ಲದೆ ರೈತರಿಗೆ ಅನುಕೂಲಕರವಾಗಿದೆ. ಆರು ಎಕರೆಯಷ್ಟು ಪ್ರದೇಶದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಸರಿಯಲ್ಲ. ಕಟ್ಟಡ ನಿರ್ಮಾಣಕ್ಕಾಗಿ ಗಿಡ ಮರಗಳಿಗೆ ಕೊಡಲಿ ಪೆಟ್ಟು ನೀಡಬೇಕಾಗುತ್ತದೆ. ಪರಿಸರ ಹಾನಿ ಮಾಡಿ ಕಟ್ಟಡ ನಿರ್ಮಾಣ ಅಗತ್ಯವಿಲ್ಲ ಎಂದಿದ್ದಾರೆ.

ಸಂಸದ ಗೋವಿಂದ ಕಾರಜೋಳ ಹೇಳಿದ್ದಿಷ್ಟು 

ಅಲ್ಲದೆ ಮುಂದಿನ 50 ವರ್ಷದ ಪ್ಲ್ಯಾನ್​ ಇಟ್ಟುಕೊಂಡು ಸೂಕ್ತ ಸ್ಥಳದಲ್ಲಿ ವಿಶಾಲವಾದ ಕಟ್ಟಡ ನಿರ್ಮಿಸಬೇಕು. ಈಗಾಗಲೇ ಹತ್ತಾರು ಕೋಟಿ ರೂ ಖರ್ಚು ಮಾಡಿ ಕಣಿವೆ ಪ್ರದೇಶದಲ್ಲಿ ನಿರ್ಮಿಸಲಾದ ಜಿಲ್ಲಾಡಳಿತ ಭವನ ಕಟ್ಟಡವನ್ನೇ ಬಳಸಬೇಕು. ಆಡಳಿತ ಭವನ ಮೆಡಿಕಲ್ ಕಾಲೇಜಿಗೆ ಸೂಕ್ತ ಆಗದು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲೊಂದು ವಿಶೇಷ ಗ್ರಾಮ: ಮಾರಮ್ಮ ಜಾತ್ರೆಗೆ ಪ್ರತಿ ರಸ್ತೆಗೆ ಮುಳ್ಳಿನ ಬೇಲಿ ಹಾಕಿ ದಿಗ್ಭಂಧನ

ಒಟ್ಟಾರೆ ಚಿತ್ರದುರ್ಗ ನಗರದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಈಗ ವಿವಾದ ಸೃಷ್ಟಿಸಿದೆ. ಜಿಲ್ಲಾಡಳಿತ, ಸರ್ಕಾರ ಮತ್ತು ಅಧಿಕಾರಿಗಳು ಸೂಕ್ತ ಪ್ಲ್ಯಾನ್​ ಇಲ್ಲದೆ ಹತ್ತಾರು ಕೋಟಿ ರೂ ವೆಚ್ಚದಲ್ಲಿ ಈಗಾಗಲೇ ಕಣಿವೆ ಬಳಿ ಕಟ್ಟಡ ನಿರ್ಮಿಸಿದ್ದಾರೆ. ಕಟ್ಟಡ ನಿರ್ಮಾಣದ ಬಳಿಕ ರಿಜೆಕ್ಟ್ ಮಾಡುತ್ತಿರುವುದು ವಿವಾದ ಹುಟ್ಟುಹಾಕಿದೆ. ಸರ್ಕಾರ ಮತ್ತು ಜಿಲ್ಲಾಡಳಿತ ಕೊನೆಯದಾಗಿ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs WI T20 WC Live Score: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ – Kannada News | India vs West Indies T20 World Cup 2026 Live Cricket Score IND vs WI Today Match at Eden Gardens Kolkata Live Cricket Score and Updates in Kannada

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯವು ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ ಏಕೆಂದರೆ ಈ ಪಂದ್ಯದಲ್ಲಿ ಯಾವ ತಂಡ ಗೆಲುವು ಸಾಧಿಸುತ್ತದೋ ಆ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗಲಿದೆ. ಸೋತ ತಂಡದ ಪ್ರಯಾಣ ಇಲ್ಲಿಗೆ ಅಂತ್ಯವಾಗುತ್ತದೆ. ಹೀಗಾಗಿ ಉಭಯ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನೀಡುವುದನ್ನು ನಿರೀಕ್ಷಿಸಲಾಗಿದೆ.

Source link

ಪಾಕಿಸ್ತಾನ ಆಯ್ತು, ಇರಾನ್ ದೇಶಕ್ಕೂ ಕೈಕೊಟ್ಟಿತಾ ಚೀನಾದ ಏರ್ ಡಿಫೆನ್ಸ್ ಸಿಸ್ಟಂ? – Kannada News | China’s air defence system HQ 9B in Iran allegedly failed to stop US air strikes

ನವದೆಹಲಿ, ಮಾರ್ಚ್ 1: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್​ನಿಂದ ವ್ಯಾಪಕ ಮಿಲಿಟರಿ ದಾಳಿ ಆಗಿದೆ. ಇರಾನ್ ಸರ್ವೇಚ್ಚ ನಾಯಕ ಆಯತುಲ್ಲಾ ಅಲಿ ಖಮೇನೀ (Ayatollah Ali Khamenei) ಸೇರಿದಂತೆ 200ಕ್ಕೂ ಹೆಚ್ಚು ಜನರು ದಾಳಿಯಲ್ಲಿ ಹತರಾಗಿದ್ದಾರೆ. ಈ ಮಧ್ಯೆ ಚೀನಾದ ಎಚ್​ಕ್ಯೂ-9ಬಿ (HQ-9B) ಎನ್ನುವ ಏರ್ ಡಿಫೆನ್ಸ್ ಸಿಸ್ಟಂನ ಸುದ್ದಿ ಚಾಲನೆಗೆ ಬಂದಿದೆ. ಸುದ್ದಿಯ ಪ್ರಕಾರ, ಇರಾನ್ ದೇಶ ಇತ್ತೀಚೆಗಷ್ಟೇ ಚೀನಾದ ಎಚ್​ಕ್ಯೂ-9ಬಿ ಅನ್ನು ಪಡೆದಿತ್ತು ಎನ್ನಲಾಗಿದೆ. ಇದು ನಿಜವೇ ಆದಲ್ಲಿ ಚೀನಾಗೆ ಮುಜುಗರ ತರಬಹುದಾದಂತಹ ಮತ್ತು ಕಳವಳಪಡಬೇಕಾದಂತಹ ಸಂಗತಿಯಾಗುತ್ತದೆ.

ಅಮೆರಿಕ ಮತ್ತು ಇಸ್ರೇಲ್​ನ ಜಂಟಿ ದಾಳಿಗಳನ್ನು ತಡೆಯಲು ಇರಾನ್​ಗೆ ಸಾಧ್ಯವಾಗಿಲ್ಲ. ಅಂದರೆ ಚೀನಾ ನೀಡಿದ ಎಚ್​ಕ್ಯೂ-9ಬಿ ಏರ್ ಡಿಫೆನ್ಸ್ ಸಿಸ್ಟಂ ಪೂರ್ಣ ವಿಫಲಗೊಂಡಿರಬಹುದು. ಅಥವಾ ಅಮೆರಿಕ ಇಸ್ರೇಲ್​ನ ಸಂಯೋಜಿತ ದಾಳಿ ಎದುರಿಸಲು ಇದು ವಿಫಲವಾಗಿರಬಹುದು.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಆಯಿಲ್ ಟ್ಯಾಂಕರ್ ಮೇಲೆ ಇರಾನ್ ದಾಳಿ; ತೈಲ ಹಡಗಿನಲ್ಲಿದ್ದರು 15 ಮಂದಿ ಭಾರತೀಯರು

ಆಪರೇಷನ್ ಸಿಂದೂರ್ ವೇಳೆಯೂ ಎಚ್​ಕ್ಯೂ-9ಬಿ ಏರ್ ಡಿಫೆನ್ಸ್ ಸಿಸ್ಟಂ ಮುನ್ನೆಲೆಗೆ ಬಂದಿತ್ತು. ಭಾರತದ ವಾಯು ದಾಳಿಗಳನ್ನು ತಡೆಯಲು ಈ ಚೀನೀ ಸಿಸ್ಟಂ ವಿಫಲವಾಗಿತ್ತು. ಈಗ ಮತ್ತೊಂದು ಯುದ್ಧ ಸಂದರ್ಭದಲ್ಲಿ ಅದರ ವೈಫಲ್ಯ ಕಂಡು ಬಂದಿರುವುದು ಗಮನಾರ್ಹ ಸಂಗತಿ.

ಚೈನಾ ಏರೋಸ್ಪೇಸ್ ಸೈನ್ಸ್ ಅಂಡ್ ಇಂಡಸ್ಟ್ರಿ ಕಾರ್ಪೊರೇಶನ್ ಸಂಸ್ಥೆ ಅಭಿವೃದ್ದಿಪಡಿಸಿದ ಎಚ್​ಕ್ಯೂ-9ಬಿ ಏರ್ ಡಿಫೆನ್ಸ್ ಸಿಸ್ಟಂ 2006ರಲ್ಲಿ ಮೊದಲ ಪರೀಕ್ಷೆಗೆ ಒಳಪಟ್ಟಿತು. ಇದು ರಷ್ಯಾದ ಎಸ್-300 ಪಿಎಂಯು ಮತ್ತು ಅಮೆರಿಕದ ಪೇಟ್ರಿಯಟ್ ಪ್ಯಾಕ್-2 ಸಿಸ್ಟಂ ಮಾದರಿಯಲ್ಲಿ ಚೀನಾ ತಯಾರಿಸಿದ ಸಿಸ್ಟಂ. ಇದರ ದಾಳಿ ಶ್ರೇಣಿ 260 ಕಿಮೀ ಇದೆ. 50 ಕಿಮೀ ಎತ್ತರದ ಗುರಿಯನ್ನೂ ಇದು ಮುಟ್ಟಬಲ್ಲುದು. ಶತ್ರುಗಳ ವಂಚಕ ಏರ್​ಕ್ರಾಫ್ಟ್​ಗಳನ್ನು ಪತ್ತೆ ಮಾಡುವ ಸಾಮರ್ಥ್ಯ ಇದಕ್ಕಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಆಯತುಲ್ಲಾ ಖಮೇನಿ ಮೇಲೆ ದಾಳಿಗೆ ಶನಿವಾರ ಬೆಳಗಿನ ಸಮಯ ಆರಿಸಿದ್ದು ಯಾಕೆ? ಬೇರೆ ಇದ್ದ ಪ್ಲಾನ್ ಬದಲಾಗಿದ್ದು ಯಾಕೆ?

ಗಮನಾರ್ಹ ಸಂಗತಿ ಎಂದರೆ, ಭಾರತದ ಗಡಿ ಭಾಗದಲ್ಲಿರುವ ಟಿಬೆಟ್, ಚೀನಾದ ರಾಜಧಾನಿ ನಗರಿಯಾದ ಬೀಜಿಂಗ್, ಆಯಕಟ್ಟಿನ ಪ್ರದೇಶವಾದ ಸೌತ್ ಚೀನಾ ಜಾಗಗಳಲ್ಲಿ ಎಚ್​ಕ್ಯೂ-9ಬಿ ಏರ್ ಡಿಫೆನ್ಸ್ ಸಿಸ್ಟಂಗಳನ್ನು ಅಳವಡಿಸಲಾಗಿದೆ. ತಜ್ಞರ ಪ್ರಕಾರ, ಇದು ಚೀನಾದ ಪ್ರಮುಖ ರಕ್ಷಣಾ ಕೋಟೆ ಎನಿಸಿದೆ. ಇಂಥ ಡಿಫೆನ್ಸ್ ಸಿಸ್ಟಂ ಆಪರೇಷನ್ ಸಿಂದೂರ್ ಮತ್ತು ಇರಾನ್ ಯುದ್ಧದಲ್ಲಿ ವಿಫಲವಾಗಿರುವುದು ಚೀನಾದ ದೌರ್ಬಲ್ಯವನ್ನು ಜಾಹೀರುಗೊಳಿಸಿದಂತಾಗಿರಬಹುದು.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link