All posts by nagaraj11081993

ಎಸ್​ಐಆರ್​ ಬಂಗಾಳದ ಚುನಾವಣೆ ಫಲಿತಾಂಶವನ್ನೇ ಬದಲಾಯಿಸಿದೆ; ಸುಪ್ರೀಂ ಕೋರ್ಟ್​ನಲ್ಲಿ ಟಿಎಂಸಿ ಆರೋಪ – Kannada News | TMC Says West Bengal SIR Deleted Votes impacted Election Results Supreme Court Seeks Fresh Plea

ನವದೆಹಲಿ, ಮೇ 11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದ ಹೆಸರುಗಳ ಡಿಲೀಟ್ ಮಾಡುವಿಕೆ ರಾಜ್ಯದ ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರಿದೆ ಎಂಬ ಹೇಳಿಕೆಗಳ ಕುರಿತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರು ಹೊಸ ಅರ್ಜಿಗಳನ್ನು ಸಲ್ಲಿಸಲು ಸ್ವತಂತ್ರರು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಸ್​ಐಆರ್ ವಿರುದ್ಧ ಮಮತಾ ಬ್ಯಾನರ್ಜಿಗೆ ಮತ್ತೊಮ್ಮೆ ಹೊಸ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ.

ಟಿಎಂಸಿ ಪರವಾಗಿ ಹಾಜರಾದ ಹಿರಿಯ ವಕೀಲ ಕಲ್ಯಾಣ್ ಬ್ಯಾನರ್ಜಿ ನ್ಯಾಯಾಲಯಕ್ಕೆ ತಿಳಿಸಿದ್ದು, ಕನಿಷ್ಠ 31 ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್ಐಆರ್ ಪ್ರಕ್ರಿಯೆಯ ಸಮಯದಲ್ಲಿ ತೆಗೆದುಹಾಕಲಾದ ಮತದಾರರ ಸಂಖ್ಯೆಗಿಂತ ಗೆಲುವಿನ ಅಂತರ ಕಡಿಮೆಯಾಗಿದೆ ಎಂದು ಆರೋಪಿಸಿದ್ದಾರೆ. ಒಬ್ಬ ಟಿಎಂಸಿ ಅಭ್ಯರ್ಥಿ ಕೇವಲ 862 ಮತಗಳಿಂದ ಸೋತಿದ್ದಾರೆ, ಆ ಕ್ಷೇತ್ರವೊಂದರಲ್ಲೇ 5,000ಕ್ಕೂ ಹೆಚ್ಚು ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅವರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಸಹಿಸುವುದಿಲ್ಲ; ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವಿನ ಒಟ್ಟಾರೆ ಮತಗಳ ವ್ಯತ್ಯಾಸವು ಸುಮಾರು 32 ಲಕ್ಷ ಮತಗಳಾಗಿದ್ದು, ಮತದಾರರ ಹೆಸರುಗಳನ್ನು ತೆಗೆದುಹಾಕುವುದನ್ನು ಪ್ರಶ್ನಿಸುವ 35 ಲಕ್ಷಕ್ಕೂ ಹೆಚ್ಚು ಮೇಲ್ಮನವಿಗಳು ಇನ್ನೂ ವಿಲೇವಾರಿಗೆ ಬಾಕಿ ಇವೆ ಎಂದು ಅವರು ವಾದಿಸಿದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠವು ಈ ವಿಷಯವನ್ನು ವಿಚಾರಣೆ ನಡೆಸಿತು. ಸೋಲಿನ ಅಂತರವು ಡಿಲೀಟ್ ಮಾಡಲಾದ ಮತದಾರರ ಸಂಖ್ಯೆಗಿಂತ ನಿಜವಾಗಿಯೂ ಕಡಿಮೆಯಿದ್ದರೆ, ಬಾಧಿತ ಪಕ್ಷಗಳು ನ್ಯಾಯಾಲಯದ ಮುಂದೆ ಸೂಕ್ತ ಅರ್ಜಿಯನ್ನು ಸಲ್ಲಿಸಲು ಮುಕ್ತವಾಗಿವೆ ಎಂದು ಪೀಠವು ಹೇಳಿದೆ.

ಇದನ್ನೂ ಓದಿ: West Bengal CM: ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ; ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿ, 207 ಸ್ಥಾನಗಳಲ್ಲಿ ಜಯ ಗಳಿಸಿತು. ಈ ಮೂಲಕ ಟಿಎಂಸಿಯ 15 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿತು. ಟಿಎಂಸಿ ಕೇವಲ 80 ಸ್ಥಾನಗಳನ್ನು ಪಡೆದುಕೊಂಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಉಪೇಂದ್ರ’ ಸಿನಿಮಾ ಮರುಬಿಡುಗಡೆ: ಸರಿಯಾದ ಉತ್ತರ ನೀಡಿದರೆ 1 ಕೋಟಿ ರೂ. ಬಹುಮಾನ – Kannada News | Upendra Kannada movie re release contest 1 Crore Prize Money details

ಕನ್ನಡ ಚಿತ್ರರಂಗದಲ್ಲಿ ಡಿಫರೆಂಟ್ ಸಿನಿಮಾ ಎನಿಸಿಕೊಂಡ ‘ಉಪೇಂದ್ರ’ (Upendra) ಚಿತ್ರ ಈಗ ಮತ್ತೆ ಸುದ್ದಿಯಲ್ಲಿದೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿದ್ದ ಈ ಸಿನಿಮಾ ಮತ್ತೆ ತೆರೆಗೆ ಬರಲಿದೆ. ಇತ್ತೀಚೆಗೆ ಹಳೆಯ ಸಿನಿಮಾಗಳನ್ನು ಮರುಬಿಡುಗಡೆ ಮಾಡುವ ಟ್ರೆಂಡ್ ಜೋರಾಗಿದೆ. ಆದ್ದರಿಂದ ‘ಉಪೇಂದ್ರ’ ಸಿನಿಮಾವನ್ನು ಮರು ಬಿಡುಗಡೆ ಮಾಡಲು ಪ್ಲ್ಯಾನ್ ಸಿದ್ಧವಾಗಿದೆ. ಈ ಬಾರಿ ಪ್ರೇಕ್ಷಕರಿಗೆ ನಗದು ರೂಪದಲ್ಲಿ ಭರ್ಜರಿ ಬಹುಮಾನ ಸಿಗಲಿದೆ ಎಂಬುದು ವಿಶೇಷ.

ಈ ಬಾರಿ ಸಿನಿಮಾ ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ‘ISH MYRA Producer’ ಕಂಪನಿಯ ಪರಮೇಶ್ವರ್ ಬಿ. ಅವರು ಪ್ರೇಕ್ಷಕರಿಗೆ ಬಂಪರ್ ಆಫರ್ ನೀಡಿದ್ದಾರೆ. ಜೂನ್ 4ರಂದು ರಾಜ್ಯದಾದ್ಯಂತ ಸುಮಾರು 100 ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಈ ಚಿತ್ರ ನೋಡುವ ಪ್ರೇಕ್ಷಕರಿಗೆ ಪ್ರತಿ ಶೋ ಮುಗಿದ ನಂತರ 10 ನಿಮಿಷಗಳ ಕಾಲ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಲಿದೆ.

ಆಯಾ ಶೋನಲ್ಲಿ ಕೇಳಲಾಗುವ ಪ್ರಶ್ನೆಗೆ ಸರಿಯಾದ ಉತ್ತರ ನೀಡಿದ ಪ್ರೇಕ್ಷಕರಿಗೆ, ಆ ನಿರ್ದಿಷ್ಟ ಶೋನ ಒಟ್ಟು ಕಲೆಕ್ಷನ್ ಹಣವನ್ನು ಬಹುಮಾನವಾಗಿ ನೀಡಲಾಗುತ್ತದೆ. ಸಿನಿಮಾ ಪ್ರದರ್ಶನದ 25ನೇ ದಿನದಂದು ಕೇಳಲಾಗುವ ಪ್ರಶ್ನೆಗೆ ನಿಖರ ಉತ್ತರ ನೀಡುವ ಒಬ್ಬ ಅದೃಷ್ಟಶಾಲಿ ಪ್ರೇಕ್ಷಕನಿಗೆ ಬರೋಬ್ಬರಿ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಪರಮೇಶ್ವರ್ ಘೋಷಿಸಿದ್ದಾರೆ.

ಈ ಸಾಹಸಮಯ ಯೋಜನೆಯ ಹಿಂದಿರುವ ಪ್ರಮುಖ ಉದ್ದೇಶಗಳನ್ನು ಕೂಡ ಪರಮೇಶ್ವರ್ ಹಂಚಿಕೊಂಡಿದ್ದಾರೆ. ಪ್ರಸ್ತುತ ಸಂಕಷ್ಟದಲ್ಲಿರುವ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಮರಳಿ ಕರೆತರುವುದು. ಇಂದಿನ ತಲೆಮಾರಿನ ಪ್ರೇಕ್ಷಕರಿಗೆ ಹಾಗೂ ಯುವ ಸಿನಿಮಾ ಮೇಕರ್‌ಗಳಿಗೆ ಕನ್ನಡ ಚಿತ್ರರಂಗದ ಮೈಲಿಗಲ್ಲು ಚಿತ್ರಗಳನ್ನು ಪರಿಚಯಿಸುವುದು. ಸಿನಿಮಾ ಬಿಡುಗಡೆಯಿಲ್ಲದ ಸಮಯದಲ್ಲಿ ಚಿತ್ರಮಂದಿರಗಳಿಗೆ ಚೈತನ್ಯ ತುಂಬುವುದು ಉದ್ದೇಶ ಎಂದು ಹೇಳಲಾಗಿದೆ.

ಇದನ್ನೂ ಓದಿ: ‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಏನಿದು ಉಪೇಂದ್ರ ಪ್ಲ್ಯಾನ್?

ಈ ವಿಶೇಷ ಮರುಬಿಡುಗಡೆಗೆ ‘ಉಪೇಂದ್ರ’ ಚಿತ್ರದ ಮೂಲ ನಿರ್ಮಾಪಕರಾದ ಶಿಲ್ಪಾ ಶ್ರೀನಿವಾಸ್ ಅವರು ಸಮ್ಮತಿ ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಮತ್ತೊಂದು ಸುದ್ದಿಗೋಷ್ಠಿಯಲ್ಲಿ ಸ್ವತಃ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ನಿರ್ಮಾಪಕರು ಭಾಗವಹಿಸಿ, ಯೋಜನೆಯ ಸಂಪೂರ್ಣ ನಿಯಮ ಮತ್ತು ವಿವರಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತದ ಆರ್ಥಿಕ ಬೆಳವಣಿಗೆಯ ದರ ಶೇ. 6ಕ್ಕೆ ಇಳಿಕೆ? ಎಚ್‌ಎಸ್‌ಬಿಸಿ (HSBC) ಭವಿಷ್ಯವಾಣಿ ಮತ್ತು ಆರ್‌ಬಿಐ ಬಡ್ಡಿ ದರ ಏರಿಕೆ ಸಾಧ್ಯತೆ – Kannada News | HSBC Warns: India’s GDP Growth May Plunge to 6% by FY27 Amid Energy & Climate Crises

ಭಾರತದ ಆರ್ಥಿಕ ಬೆಳವಣಿಗೆImage Credit source: Shutterstock

ಮುಂಬೈ, ಮೇ 11: ಜಾಗತಿಕ ಹಣಕಾಸು ಸಂಸ್ಥೆಯಾದ ಎಚ್‌ಎಸ್‌ಬಿಸಿ (HSBC) ಭಾರತದ ಆರ್ಥಿಕತೆಯ ಬಗ್ಗೆ ಆತಂಕಕಾರಿ ವರದಿಯೊಂದನ್ನು ನೀಡಿದೆ. 2026-27ರ ಹಣಕಾಸು ವರ್ಷದಲ್ಲಿ (FY27) ಭಾರತದ ಒಟ್ಟು ಆಂತರಿಕ ಉತ್ಪನ್ನ (GDP) ಬೆಳವಣಿಗೆಯ ದರವು ಕೇವಲ ಶೇ. 6ಕ್ಕೆ ಕುಸಿಯಬಹುದು ಎಂದು ಅಂದಾಜಿಸಿದೆ. ಈ ಹಿಂದೆ ನೀಡಿದ್ದ ಅಂದಾಜುಗಳನ್ನು ಪರಿಷ್ಕರಿಸಿರುವ ಎಚ್‌ಎಸ್‌ಬಿಸಿ, ಇಂಧನ ಬಿಕ್ಕಟ್ಟು ಮತ್ತು ಅನಿಶ್ಚಿತ ಹವಾಮಾನದ (ಮಳೆ ಕೊರತೆ) ಕಾರಣದಿಂದಾಗಿ ಭಾರತದ ಆರ್ಥಿಕ ವೇಗ ಕುಂಠಿತಗೊಳ್ಳಲಿದೆ ಎಂದು ತಿಳಿಸಿದೆ.

ಹೆಚ್ಚುತ್ತಿರುವ ಹಣದುಬ್ಬರವನ್ನು ನಿಯಂತ್ರಿಸಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಈ ಹಣಕಾಸು ವರ್ಷದಲ್ಲಿ ಎರಡು ಬಾರಿ ರೆಪೊ ದರಗಳನ್ನು (Repo Rate Hikes) ಏರಿಕೆ ಮಾಡುವ ಸಾಧ್ಯತೆಯಿದೆ ಎಂದು ಬ್ಯಾಂಕ್ ಅಂದಾಜಿಸಿದೆ. ಇದು ಸಾಲಗಳ ಮೇಲಿನ ಬಡ್ಡಿದರ ಹೆಚ್ಚಳಕ್ಕೆ ಕಾರಣವಾಗಬಹುದು.

ಜಾಗತಿಕ ಮತ್ತು ಹವಾಮಾನ ಕಾರಣಗಳು

ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯಿಂದಾಗಿ ತೈಲ ಬೆಲೆ ಏರಿಕೆ ಮತ್ತು ‘ಎಲ್ ನಿನೊ’ ಪ್ರಭಾವದಿಂದಾಗಿ ಮಳೆಯ ಕೊರತೆಯು ದೇಶದ ಕೃಷಿ ಹಾಗೂ ಗ್ರಾಮೀಣ ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗಿದೆ.

ಇದನ್ನೂ ಓದಿ: ಎಐನಿಂದ ಉದ್ಯೋಗಗಳು ಹೋಗೋದು ಸುಳ್ಳಾ? ಕೆಲಸ ಸೇರುವ ಸಮಯ ಇದು ಎನ್ನುತ್ತಾರೆ ಜೆನ್ಸೆನ್ ಹುವಾಂಗ್

ಬೆಲೆ ಏರಿಕೆ ಮತ್ತು ಬೇಡಿಕೆಯ ಕೊರತೆಯಿಂದಾಗಿ ದೇಶದ ಸಣ್ಣ ಉದ್ಯಮಗಳು ಮತ್ತು ಗ್ರಾಮೀಣ ಕುಟುಂಬಗಳು ಹೆಚ್ಚಿನ ಆರ್ಥಿಕ ಒತ್ತಡಕ್ಕೆ ಒಳಗಾಗಬಹುದು ಎಂದೂ ವರದಿ ಎಚ್ಚರಿಸಿದೆ.

2025-26ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 7.4ರಷ್ಟು ಹೆಚ್ಚಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಇದರ ಬೆಳವಣಿಗೆ ಶೇ. 6ಕ್ಕೆ ಸೀಮಿತಗೊಂಡರೆ ಆರ್ಥಿಕತೆಯ ಓಟಕ್ಕೆ ಹಿನ್ನಡೆ ಬಂದಂತಾಗಬಹುದು. ಆದರೆ, 2026-27ಕ್ಕೆ ಭಾರತದಿಂದ ಇಷ್ಟು ಕಡಿಮೆ ಜಿಡಿಪಿ ಬೆಳವಣಿಗೆ ನಿರೀಕ್ಷಿಸಿರುವ ಸಂಸ್ಥೆ ಎಚ್​ಎಸ್​ಬಿಸಿ ಮಾತ್ರವೇ. ಆರ್​ಬಿಐ ಶೇ. 6.9 ಬೆಳವಣಿಗೆ ನಿರೀಕ್ಷಿಸಿದೆ. ಇತರ ಅಂತರರಾಷ್ಟ್ರೀಯ ಏಜೆನ್ಸಿಗಳು ಕೂಡ ಹೆಚ್ಚಿನ ಆರ್ಥಿಕ ಪ್ರಗತಿಯನ್ನು ಅಂದಾಜಿಸಿವೆ.

ಇದನ್ನೂ ಓದಿ: ಮೋದಿ ಕರೆಗೆ ಏರ್​ಟೆಲ್ ಮುಖ್ಯಸ್ಥರ ಬೆಂಬಲ; ಭಾರತದಲ್ಲಿ ಹೂಡಿಕೆ ಹೆಚ್ಚಿಸುವಂತೆ ಭಾರತೀಯ ಉದ್ಯಮಗಳಿಗೆ ಸುನೀಲ್ ಮಿತ್ತಲ್ ಕರೆ

ಡಿಸೆಂಬರ್, ಮಾರ್ಚ್​ನಲ್ಲಿ ರಿಪೋ ದರ ಏರಿಕೆ?

ಅಕ್ಟೋಬರ್​ನಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರಗಳನ್ನು ಏರಿಸುವ ಸಾಧ್ಯತೆ ಇದೆ ಎಂದು ಎಚ್​ಎಸ್​ಬಿಸಿ ಹೇಳಿದೆ. ಹಣದುಬ್ಬರ ಏರಿಕೆ ಸಾಧ್ಯತೆ ಇರುವುದರಿಂದ ಆರ್​ಬಿಐ ಈ ಕ್ರಮ ತೆಗೆದುಕೊಳ್ಳಬಹುದು. ಆದರೆ, ಜೂನ್​ನಲ್ಲಿ ನಡೆಯುವ ಎಂಪಿಸಿ ಸಭೆಯಲ್ಲಿ ರಿಪೋ ದರ ಏರಿಕೆ ಸಾಧ್ಯತೆ ಇಲ್ಲ ಎಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

PBKS vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Punjab Kings vs Delhi Capitals IPL 2026 Live Cricket Score PBKS vs DC Match on 11th May latest news in Kannada

ಐಪಿಎಲ್ 2026 ರ 55 ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. 19 ನೇ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಶ್ರೇಯಸ್ ಅಯ್ಯರ್ ಪಂಜಾಬ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಕ್ಷರ್ ಪಟೇಲ್ ದೆಹಲಿ ತಂಡದ ನಾಯಕರಾಗಿದ್ದಾರೆ. ಪಂಜಾಬ್ ಈ ಪಂದ್ಯವನ್ನು ಗೆದ್ದು ಪ್ಲೇಆಫ್‌ಗೆ ಹತ್ತಿರವಾಗುವ ಅವಕಾಶವನ್ನು ಹೊಂದಿದೆ. ಏತನ್ಮಧ್ಯೆ, ದೆಹಲಿ ತಂಡವು ತಮ್ಮ ಕೊನೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.

Source link

PBKS vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Punjab kings vs delhi capitals ipl 2026 live cricket score pbks vs dc match on 11th may latest news in kannada

ಐಪಿಎಲ್ 2026 ರ 55 ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. 19 ನೇ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಶ್ರೇಯಸ್ ಅಯ್ಯರ್ ಪಂಜಾಬ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಕ್ಷರ್ ಪಟೇಲ್ ದೆಹಲಿ ತಂಡದ ನಾಯಕರಾಗಿದ್ದಾರೆ. ಪಂಜಾಬ್ ಈ ಪಂದ್ಯವನ್ನು ಗೆದ್ದು ಪ್ಲೇಆಫ್‌ಗೆ ಹತ್ತಿರವಾಗುವ ಅವಕಾಶವನ್ನು ಹೊಂದಿದೆ. ಏತನ್ಮಧ್ಯೆ, ದೆಹಲಿ ತಂಡವು ತಮ್ಮ ಕೊನೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.

Source link

ಬೆಂಗಳೂರಿನ ಕನಸಿನ ಯೋಜನೆಗೆ ಸಿಕ್ತು ವೇಗ: 153 ಮೆಟ್ರೋ ಕೋಚ್‌ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ – Kannada News | Bengaluru Suburban Rail Project: K RIDE Signs Deal with ICF to Procure 153 Metro Coaches

ಬೆಂಗಳೂರು, ಮೇ 11: ಬೆಂಗಳೂರಿನ (Bangaluru) ಮಹತ್ವಾಕಾಂಕ್ಷಿ ಉಪನಗರ ರೈಲು ಯೋಜನೆಗೆ (Suburban Rail Project) ಮಹತ್ವದ ವೇಗ ದೊರೆತಿದ್ದು, 153 ಹವಾನಿಯಂತ್ರಿತ ಮೆಟ್ರೋ ಮಾದರಿಯ ಬೋಗಿಗಳನ್ನು ಪೂರೈಸಲು ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಜೊತೆ ಕರ್ನಾಟಕ ರೈಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸ್ (ಕೆ-ರೈಡ್) 1,513.75 ಕೋಟಿ ರೂ ವೆಚ್ಚದ ಒಪ್ಪಂದ ಮಾಡಿಕೊಂಡಿದೆ.

ಮುಖ್ಯಾಂಶಗಳು

  • 1,513.75 ಕೋಟಿ ರೂ ಬೃಹತ್ ಕಾರ್ಯಾದೇಶ
  • 153 ಹವಾನಿಯಂತ್ರಿತ ‘ಬ್ರಾಡ್-ಗೇಜ್ ಮೆಟ್ರೋ ಮಾದರಿಯ ಬೋಗಿಗಳು ಒದಗಿಸಲು ಒಪ್ಪಂದ
  • ಮುಂದಿನ 18 ತಿಂಗಳೊಳಗೆ ಬೋಗಿಗಳ ಪೂರೈಕೆ ಮಾಡುವುದು

ಇದನ್ನೂ ಓದಿ: ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗೆ ಕೇಂದ್ರ ಒಪ್ಪಿಗೆ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಬಂಪರ್ ಕೊಡುಗೆ

ಒಟ್ಟು 1,513.75 ಕೋಟಿ ರೂ ಮೊತ್ತದ ಕಾರ್ಯಾದೇಶವನ್ನು ಮೇ 6ರಂದು ಐಸಿಎಫ್‌ಗೆ ನೀಡಲಾಗಿದೆ. ಯೋಜನೆಯ ಕಾರಿಡಾರ್-2 ಮತ್ತು ಕಾರಿಡಾರ್-4ಕ್ಕೆ ಬ್ರಾಡ್-ಗೇಜ್ ಮೆಟ್ರೋ ಮಾದರಿಯ 153 ಬೋಗಿಗಳನ್ನು ಪೂರೈಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ.

ಒಪ್ಪಂದದ ಪ್ರಕಾರ ಮುಂದಿನ 18 ತಿಂಗಳೊಳಗೆ ಐಸಿಎಫ್ ಸಂಸ್ಥೆ ಕಡ್ಡಾಯವಾಗಿ ಬೋಗಿಗಳ ಪೂರೈಕೆ ಆರಂಭಿಸಬೇಕಿದೆ. ಏಕೆಂದರೆ ಕಾರಿಡಾರ್-2 ವ್ಯಾಪ್ತಿಯ ಚಿಕ್ಕಬಾಣಾವರ ಟು ಯಶವಂತಪುರ ಮಾರ್ಗವನ್ನು ನಿಗದಿತ ಸಮಯದಲ್ಲಿಯೇ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ. ಶೀಘ್ರದಲ್ಲೇ ಉಭಯ ಸಂಸ್ಥೆಗಳ ನಡುವೆ ಅಧಿಕೃತ ಒಡಂಬಡಿಕೆಗೆ (ಎಂಒಯು) ಸಹಿ ಬೀಳಲಿದೆ.

ಕಾರ್ಯಾದೇಶದ ಪ್ರಮುಖ ಅಂಶಗಳು

ಚೆನ್ನೈನ ಐಸಿಎಫ್‌ಗೆ ನೀಡಲಾದ ಈ ಸಮಗ್ರ ಗುತ್ತಿಗೆಯು ಕೇವಲ ಬೋಗಿಗಳ ನಿರ್ಮಾಣವನ್ನಷ್ಟೇ ಅಲ್ಲದೆ, ಈ ಕೆಳಗಿನ ಜವಾಬ್ದಾರಿಗಳನ್ನು ಒಳಗೊಂಡಿದೆ.

  • ರೈಲು ಬೋಗಿಗಳ ವಿನ್ಯಾಸ ಮತ್ತು ಸಂಪೂರ್ಣ ಉತ್ಪಾದನೆ
  • ಗುಣಮಟ್ಟ ಪರಿಶೀಲನೆ, ಜೋಡಣೆ, ಪರೀಕ್ಷೆ ಹಾಗೂ ಕಾರ್ಯಾರಂಭ
  • ಆರ್‌ಡಿಎಸ್‌ಒನಿಂದ ಅಗತ್ಯವಿರುವ ಶಾಸನಬದ್ಧ ಅನುಮೋದನೆಗಳನ್ನು ಪಡೆಯುವುದು
  • ಸಿಗ್ನಲಿಂಗ್, ವಿದ್ಯುತ್ ಪೂರೈಕೆ, ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ಗುತ್ತಿಗೆಗಳೊಂದಿಗೆ ಸುಗಮ ಸಮನ್ವಯ
  • ಕಾರಿಡಾರ್‌ಗಳ ಯಶಸ್ವಿ ಕಾರ್ಯಾಚರಣೆಗೆ ಕಡ್ಡಾಯವಾಗಿರುವ ವಿಶ್ವಾಸಾರ್ಹತೆ, ಲಭ್ಯತೆ, ನಿರ್ವಹಣೆ ಮತ್ತು ಸುರಕ್ಷತಾ ಮಾನದಂಡಗಳ ಪೂರೈಕೆ ಮಾಡುವುದು

ಇದನ್ನೂ ಓದಿ: ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ: ರಾಜ್ಯಾದ್ಯಂತ ರೈಲು ಸಂಚಾರ ಬಂದ್ ಮಾಡುವ ಎಚ್ಚರಿಕೆ ನೀಡಿದ ಕರವೇ

ಈ ಬೃಹತ್ ಕಾರ್ಯಾದೇಶದಿಂದ ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಗೆ ಮತ್ತಷ್ಟು ವೇಗ ದೊರೆಯುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ; ಪ್ರಧಾನಿ ಮೋದಿ ಮನವಿಯ ಬಳಿಕ ಸರ್ಕಾರ ಸ್ಪಷ್ಟನೆ – Kannada News | No Shortage Of Petrol and Diesel Petroleum Ministry Reassures After PM Modis Energy Conservation Appeal

ನವದೆಹಲಿ, ಮೇ 11: ಜಾಗತಿಕ ಪೂರೈಕೆ ಅಡಚಣೆಗಳ ನಡುವೆಯೂ ಇಂಧನ, ಎಲ್‌ಪಿಜಿ ದಾಸ್ತಾನುಗಳು ಸಾಕಷ್ಟು ಇವೆ ಎಂದು ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ ನೀಡಿದೆ. ಹಾಗೇ, ಇಂಧನವನ್ನು ಕಡಿಮೆ ಪ್ರಮಾಣದಲ್ಲಿ ಬಳಸಲು ನಾಗರಿಕರಿಗೆ ಮನವಿ ಮಾಡಿದೆ. ದೆಹಲಿಯಲ್ಲಿ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ (ಮಾರುಕಟ್ಟೆ ಮತ್ತು ತೈಲ ಸಂಸ್ಕರಣಾಗಾರ) ಸುಜಾತಾ ಶರ್ಮಾ, ಗ್ರಾಹಕರಿಗೆ ನಿರಂತರ ಇಂಧನ ಪೂರೈಕೆಯನ್ನು ಒದಗಿಸಲು ಸರ್ಕಾರ ಹಲವಾರು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು.

“ಭಾರತ ಸರ್ಕಾರ ಹಲವಾರು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಸಾಮಾನ್ಯ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಇಂಧನ ಸರಬರಾಜುಗಳನ್ನು ಮಾಡಲಾಗುತ್ತಿದೆ” ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ (ಮಾರುಕಟ್ಟೆ ಮತ್ತು ತೈಲ ಸಂಸ್ಕರಣಾಗಾರ) ಸುಜಾತಾ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಕರೆಗೆ ಏರ್​ಟೆಲ್ ಮುಖ್ಯಸ್ಥರ ಬೆಂಬಲ; ಭಾರತದಲ್ಲಿ ಹೂಡಿಕೆ ಹೆಚ್ಚಿಸುವಂತೆ ಭಾರತೀಯ ಉದ್ಯಮಗಳಿಗೆ ಸುನೀಲ್ ಮಿತ್ತಲ್ ಕರೆ

“ಇರಾನ್ ಯುದ್ಧ ಪ್ರಾರಂಭವಾದಾಗಿನಿಂದ ಇತ್ತೀಚಿನ ದಿನಗಳಲ್ಲಿ ಮನೆಗಳಿಗೆ ವಿತರಿಸಲಾದ ಎಲ್‌ಪಿಜಿ ಸಿಲಿಂಡರ್‌ಗಳ ಸ್ಥಿತಿಯನ್ನು ವಿವರಿಸಿದ ಶರ್ಮಾ, “ಕಳೆದ ಮೂರು ದಿನಗಳಲ್ಲಿ 1 ಕೋಟಿ 14 ಲಕ್ಷ ಬುಕಿಂಗ್‌ಗಳಾಗಿದೆ. 1 ಕೋಟಿ 26 ಲಕ್ಷ ಎಲ್‌ಪಿಜಿ ಸಿಲಿಂಡರ್‌ಗಳನ್ನು ಮನೆಗಳಿಗೆ ತಲುಪಿಸಲಾಗಿದೆ. ಅದೇ ರೀತಿ, ಕಳೆದ ಮೂರು ದಿನಗಳಲ್ಲಿ ಕಮರ್ಷಿಯಲ್ ಎಲ್‌ಪಿಜಿ ಮಾರಾಟವು 17,000 ಟನ್‌ಗಳನ್ನು ಮೀರಿದೆ. ಆಟೋ ಎಲ್‌ಪಿಜಿ ಮಾರಾಟವು ಸಹ 762 ಟನ್‌ಗಳನ್ನು ಮೀರಿದೆ.” ಎಂದು ಸುಜಾತಾ ಶರ್ಮಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲಿಯಂ ಉತ್ಪನ್ನಗಳನ್ನು ಎಚ್ಚರಿಕೆಯಿಂದ, ಮಿತವಾಗಿ ಬಳಸುವಂತೆ ನಾಗರಿಕರಿಗೆ ಮನವಿ ಮಾಡಿದ್ದರು. ಸಾಂಕ್ರಾಮಿಕ ರೋಗದ ಸಮಯದಲ್ಲಿರುವಂತೆ ವರ್ಕ್ ಫ್ರಂ ಹೋಂ, ಆನ್‌ಲೈನ್ ಮೀಟಿಂಗ್ ಮತ್ತು ವರ್ಚುವಲ್ ಸಭೆಗಳಿಗೆ ಆದ್ಯತೆ ನೀಡುವ ಬಗ್ಗೆಯೂ ಅವರು ಒತ್ತಿ ಹೇಳಿದ್ದರು.

“ಪೆಟ್ರೋಲ್ ಮತ್ತು ಡೀಸೆಲ್ ಜಾಗತಿಕವಾಗಿ ತುಂಬಾ ದುಬಾರಿಯಾಗಿರುವುದರಿಂದ ನಾವು ವಿದೇಶಿ ವಿನಿಮಯವನ್ನು ಉಳಿಸುವತ್ತ ಆದ್ಯತೆ ನೀಡಬೇಕು. ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸಲು ಖರ್ಚು ಮಾಡುವ ವಿದೇಶಿ ಕರೆನ್ಸಿಯನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶೃಂಗೇರಿ ಅಂಚೆ ಮತ ವಿವಾದ: ಮರಳಿ ಶಾಸಕ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್ – Kannada News | Sringeri postal vote controversy: Congress Rajegowda Talks after supreme court Stay On High court Order

ನವದೆಹಲಿ, (ಮೇ 11): ಶೃಂಗೇರಿ (sringeri) ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ‘ಯಥಾಸ್ಥಿತಿ’ ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದೆ. ಇನ್ನು ಅಂಚೆ ಮತ ಮರು ಎಣಿಕೆ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ ನೀಡಿದ್ದಕ್ಕೆ ರಾಜೇಗೌಡ ಅವರು ಫುಲ್ ಖುಷ್ ಆಗಿದ್ದಾರೆ.

ಈ ಬಗ್ಗೆ ನವದೆದೆಹಲ್ಲಿ ಮಾತನಾಡಿ ರಾಜೇಗೌಡ , ಹೈಕೋರ್ಟ್ ಆದೇಶ ಮತ್ತು ನಂತರದ ಪ್ರಕ್ರಿಯೆಗೆ ತಡೆ ನೀಡಿದ್ದು, ಸುಪ್ರೀಂಕೋರ್ಟ್​ನಲ್ಲಿ‌ ನನಗೆ ನ್ಯಾಯ ಸಿಕ್ಕಿದೆ. ಅಂಚೆ ಮತ ಎಣಿಕೆಯಲ್ಲಿ 2 ಮತ ನನ್ನ ಪರವಾಗಿ ಬಂದಿತ್ತು. ನನ್ನ ಮತಗಳು ಹೆಚ್ಚಾಗುವ ಬದಲು ಕಡಿಮೆ‌ ತೋರಿಸಲಾಗಿತ್ತು. ಈ‌ ಹಂತದಲ್ಲಿ ‌ಅಕ್ರಮವಾಗಿದೆ ಎಂದು ಅನುಮಾನ ಇತ್ತು. ಹೀಗಾಗಿ ನಾನು ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದ ನ್ಯಾಯ ಸಿಕ್ಕಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ

Source link

Video: ಬೆಂಗಳೂರಿನಲ್ಲಿ ಯೋಗ್ಯ ಜೀವನಕ್ಕೆ ತಿಂಗಳಿಗೆ 51,000 ರೂ ಬೇಕೇ ಬೇಕು; ಅಮೆಜಾನ್ ಉದ್ಯೋಗಿ ಹೀಗೆಂದಿದ್ದೇಕೆ? – Kannada News | Bengaluru: Amazon employee says he spends Rs 51,000 per month to live a decent life in Bengaluru

ಬೆಂಗಳೂರು, ಮೇ 11: ಇಂದಿನ ದುಬಾರಿ ದುನಿಯಾದಲ್ಲಿ ಬದುಕೋದೇ ಕಷ್ಟ. ಅದಲ್ಲದೇ, ಲಕ್ಷ ಲಕ್ಷ ಸಂಬಳ ಬರ್ತಾ ಇದ್ರು ತಿಂಗಳ ಕೊನೆಯಲ್ಲಿ ದುಡ್ಡು ಉಳಿಯಲ್ಲ ಎಂದು ಹೇಳೋದನ್ನು ಕೇಳಿದ್ದೀರಬಹುದು. ಅಮೆಜಾನ್‌ ಉದ್ಯೋಗಿಯೊಬ್ಬರು ಬೆಂಗಳೂರಿನಲ್ಲಿ (Bengaluru) ತಮ್ಮ ಮಾಸಿಕ ಖರ್ಚು ವೆಚ್ಚಗಳ ಬಗ್ಗೆ ಮಾತನಾಡಿದ್ದಾರೆ. ಯೋಗ್ಯ ಜೀವನಕ್ಕಾಗಿ ತಿಂಗಳಿಗೆ 50 ಸಾವಿರಕ್ಕೂ ಹೆಚ್ಚು ಹಣ ಖರ್ಚು ಮಾಡುವುದಾಗಿ ರಿವೀಲ್‌ ಮಾಡಿದ್ದಾರೆ. ಈ ವಿಡಿಯೋ ಆನ್‌ಲೈನ್‌ನಲ್ಲಿ ಚರ್ಚೆ ಹುಟ್ಟುಹಾಕಿದೆ.

ಕಾರ್ತಿಕ್ ಸಿಂಗ್ ಪರಿಹಾರ್ (trainlikekartik) ಎಂಬ 26 ವರ್ಷದ ಯುವಕ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಇದು ಬೆಂಗಳೂರಿನಲ್ಲಿ ನನ್ನ 10 ವರ್ಷಗಳ ಅನುಭವ ಎಂಬ ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೋದಲ್ಲಿ ಉತ್ತಮ ಜೀವನವನ್ನು ಕಾಪಾಡಿಕೊಳ್ಳಲು ತಿಂಗಳಿಗೆ ಸುಮಾರು 51,000 ರೂ ವೆಚ್ಚವಾಗುತ್ತದೆ ಎಂದು ಹೇಳಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ

ಹೆಚ್ ಎಸ್ ಆರ್ ಲೇಔಟ್‌ನಲ್ಲಿ 1ಬಿ ಹೆಚ್ ಕೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದು 20,000 ರೂ ಬಾಡಿಗೆ ಪಾವತಿಸುತ್ತೇನೆ. ಬೆಂಗಳೂರಿನ ಇತರ ಭಾಗಗಳಿಗೆ ಭೇಟಿ ನೀಡಿದ ನಂತರ, ಹೆಚ್‌ಎಸ್‌ಆರ್‌ನಲ್ಲಿ ಹಣಕ್ಕೆ ಮನೆ ಯೋಗ್ಯವಾಗಿದೆ ಎಂದು ನಾನು ಭಾವಿಸುತ್ತೇನೆ. ಬಾಡಿಗೆಯ ಹೊರತಾಗಿ, ಸೋಫಾ, ಫ್ರಿಡ್ಜ್ ಮತ್ತು ಹಾಸಿಗೆ ಸೇರಿದಂತೆ ಪೀಠೋಪಕರಣಗಳ ಬಾಡಿಗೆಗೆ 4,000 ರೂ ಆಗುತ್ತದೆ ಎಂದು ಹೇಳಿದ್ದಾರೆ.

ವಾರಕ್ಕೆ ಸುಮಾರು 1,000 ರೂ ದಿನಸಿಗಾಗಿ ಖರ್ಚು ಮಾಡುತ್ತೇನೆ, ಇದರಿಂದಾಗಿ ಮಾಸಿಕ ಪಡಿತರ ಖರ್ಚು 4,000 ರೂ ಆಗುತ್ತದೆ. ಆಫೀಸಿನಲ್ಲಿ ಊಟ ತಿಂಡಿಗಾಗಿ ತಿಂಗಳಿಗೆ 5,000 ರೂ ಆಗುತ್ತದೆ. ವಾರಾಂತ್ಯದಲ್ಲಿ ಕನಿಷ್ಠ ಒಂದು ಅಥವಾ ಎರಡು ಬಾರಿ ಹೊರಗೆ ಊಟ ಮಾಡುತ್ತೇನೆ. ವಾರಾಂತ್ಯಕ್ಕೆ ಸುಮಾರು 1,000 ರೂ ಖರ್ಚು ಮಾಡುತ್ತೇನೆ. ಅಂದರೆ ಮಾಸಿಕ ವೆಚ್ಚಗಳಿಗೆ ಹೆಚ್ಚುವರಿಯಾಗಿ 4,000 ರೂ ಸೇರುತ್ತದೆ ಎಂದಿದ್ದಾರೆ.

ಪೆಟ್ರೋಲ್‌ಗೆ ತಿಂಗಳಿಗೆ ಸುಮಾರು 1,500 ರೂ ಖರ್ಚು ತಗಲುತ್ತದೆ. ಜಿಮ್ ಸದಸ್ಯತ್ವಕ್ಕೆ ವಾರ್ಷಿಕ ಮೊತ್ತ 16,000 ರೂ ಅಂದರೆ ತಿಂಗಳಿಗೆ ಸುಮಾರು 1,300 ರೂ ವೆಚ್ಚ ಬರುತ್ತದೆ. ಬಟ್ಟೆಗಾಗಿ 2,000 ರೂ, ಪ್ರಯಾಣಕ್ಕಾಗಿ ತಿಂಗಳಿಗೆ 10,000 ರೂ ಮೀಸಲಿಡುತ್ತೇನೆ. ವಿದ್ಯುತ್ ಬಿಲ್ ತಿಂಗಳಿಗೆ ಸುಮಾರು 500 ರೂ ಬರುತ್ತದೆ. ಬೆಂಗಳೂರಿನಲ್ಲಿ 26 ವರ್ಷದ ಯುವಕನಾಗಿ ಯೋಗ್ಯ ಜೀವನವನ್ನು ನಡೆಸಲು ತಿಂಗಳಿಗೆ ಖರ್ಚು ಮಾಡುವ ಒಟ್ಟು ಮೊತ್ತ 51,000 ರೂ ಎಂದು ಹೇಳಿರುವುದನ್ನು ಕಾಣಬಹುದು.

ಇದನ್ನೂ ಓದಿ: ಬೆಳ್ಳಂದೂರಿನಿಂದ ಏರ್​​ಪೋರ್ಟ್​​ಗೆ ತೆರಳಲು ಮೂರುವರೆ ಗಂಟೆ!: ಬೆಂಗಳೂರು ಟ್ರಾಫಿಕ್​​ ಭೀಕರತೆ ತೆರೆದಿಟ್ಟ ಯುವತಿಯ ವಿಡಿಯೋ ವೈರಲ್​​

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಹೆಚ್ ಎಸ್ ಆರ್ ನಲ್ಲಿ ಬಾಡಿಗೆ ದುಬಾರಿಯಾಗಿದೆ, ಆದರೆ ಸ್ಥಳವು ಖಂಡಿತವಾಗಿ ವಾಸಕ್ಕೆ ಯೋಗ್ಯವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮೆಟ್ರೋ ನಗರಗಳಲ್ಲಿ ಹಣವನ್ನು ಉಳಿಸುವುದು ತುಂಬಾ ಕಷ್ಟಕರ ಎಂದು ಹೇಳಿದ್ದಾರೆ. ಮತ್ತೊಬ್ಬರು, ಪ್ರಯಾಣ ಮತ್ತು ಜೀವನಶೈಲಿಯ ವೆಚ್ಚಗಳು ಮೂಲಭೂತ ಅಗತ್ಯಗಳಲ್ಲ, ವೈಯಕ್ತಿಕ ಆಯ್ಕೆಗಳು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಐನಿಂದ ಉದ್ಯೋಗಗಳು ಹೋಗೋದು ಸುಳ್ಳಾ? ಕೆಲಸ ಸೇರುವ ಸಮಯ ಇದು ಎನ್ನುತ್ತಾರೆ ಜೆನ್ಸೆನ್ ಹುವಾಂಗ್ – Kannada News | Jensen Huang tells youth that AI won’t replace them, but someone using AI better than they will

ನವದೆಹಲಿ, ಮೇ 11: ಟೆಕ್ ಕಂಪನಿಗಳು ಕಳೆದ ಕೆಲ ತಿಂಗಳಿಂದ ಲಕ್ಷದಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿವೆ. ಕಳೆದ ಐದಾರು ವರ್ಷಗಳಿಂದಲೂ ಈ ಟ್ರೆಂಡ್ ಇದೆ. ಕೋವಿಡ್ ಕಾರಣವೊಡ್ಡಿ ಲೇ ಆಫ್ ಮಾಡಲಾಯಿತು, ಕಾಸ್ಟ್ ಕಟ್ಟಿಂಗ್ ಎಂದು ಹೇಳಿ ಮಾಡಲಾಯಿತು. ಈಗ ಎಐ ಕಾರಣ ನೀಡಲಾಗುತ್ತಿದೆ. ಎಐ ಪ್ರಬಲವಾಗಿ ಬೆಳೆಯುತ್ತಿರುವುದು ಹೌದು. ಆದರೆ, ಎಐನದ್ದೇ ಕಾರಣಕ್ಕೆ ಉದ್ಯೋಗಗಳು ನಶಿಸುತ್ತಿವೆಯಾ? ಟೆಕ್ ಪಂಡಿತರ ನಡುವೆಯೇ ಭಿನ್ನಾಭಿಪ್ರಾಯಗಳಿವೆ. ಇಲಾನ್ ಮಸ್ಕ್ ಅವರಂತಹ ದೊಡ್ಡ ಟೆಕ್ ಉದ್ಯಮಿಗಳೇ ಎಐನಿಂದ ಕೆಲಸ ಹೋಗುತ್ತೆ ಎಂತಿದ್ದಾರೆ. ಆದರೆ, ಇನ್ನೂ ಕೆಲವರು, ಎಐನಿಂದ ಕೆಲಸ ಹೋಗೋದು ನಿಜ. ಆದರೆ, ಹೊಸ ರೀತಿಯ ಉದ್ಯೋಗಗಳ ಸೃಷ್ಟಿಯಾಗುತ್ತೆ ಎಂತಿದ್ದಾರೆ. ಈ ಎರಡನೇ ವರ್ಗದವರ ಮಾತಿಗೆ ಎನ್​ವಿಡಿಯಾ ಸಂಸ್ಥಾಪಕ ಜೆನ್ಸೆನ್ ಹುವಾಂಗ್ (NVidia founder Jensen Huang) ಧ್ವನಿಗೂಡಿಸಿದ್ದಾರೆ.

ಅಮೆರಿಕದ ಪಿನ್ಸೆಲ್ವಿನೇಯಾದ ಕಾರ್ನೆಜೀ ಮೆಲ್ಲಾನ್ ಯೂನಿವರ್ಸಿಟಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ತೈವಾನ್ ಮೂಲದ ಅಮೆರಿಕನ್ ಉದ್ಯಮಿ ಜೆನ್ಸೆನ್ ಹುವಾಂಗ್, ಯುವಜನರಿಗೆ ಕೆಲಸ ಮಾಡಲು ಇದು ಪ್ರಶಸ್ತ ಸಮಯ ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಕರೆಗೆ ಏರ್​ಟೆಲ್ ಮುಖ್ಯಸ್ಥರ ಬೆಂಬಲ; ಭಾರತದಲ್ಲಿ ಹೂಡಿಕೆ ಹೆಚ್ಚಿಸುವಂತೆ ಭಾರತೀಯ ಉದ್ಯಮಗಳಿಗೆ ಸುನೀಲ್ ಮಿತ್ತಲ್ ಕರೆ

‘ನಿಮ್ಮ ಕನಸುಗಳನ್ನು ಸಾಕಾರಗೊಳಿಸುವ ಸಮಯ ಈಗ ಬಂದಿದೆ. ಇದಕ್ಕಿಂತ ಹೆಚ್ಚು ಪ್ರಶಸ್ತ ಸಮಯ ಸಿಕ್ಕಲ್ಲ’ ಎಂದು ಶಕ್ತಿಶಾಲಿ ಜಿಪಿಯುಗಳನ್ನು ತಯಾರಿಸುವ ಎನ್​ವಿಡಿಯಾ ಕಂಪನಿಯ ಸಂಸ್ಥಾಪಕರು ಅಭಿಪ್ರಾಯಪಟ್ಟಿದ್ದಾರೆ.

ವಿವಿಧ ವರ್ಗಗಳ ಮಧ್ಯೆ ಇದ್ದ ತಂತ್ರಜ್ಞಾನ ಅಂತರವನ್ನು ಎಐ ತಗ್ಗಿಸುತ್ತಿದೆ ಎಂದು ಹೇಳಿದ ಹುವಾಂಗ್, ಎಲ್ಲಾ ರೀತಿಯ ಜನರು ಏನಾದರೂ ಉಪಯುಕ್ತವಾದುದನ್ನು ನಿರ್ಮಿಸಲು ಎಐ ಅವಕಾಶ ಕೊಡುತ್ತದೆ. ಇದರಿಂದ ಯುವಜನರಿಗೆ ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಹೊಸ ಅವಕಾಶಗಳು ತೆರೆದುಕೊಳ್ಳುತ್ತವೆ ಎಂದು ನಿರೀಕ್ಷಿಸಿದ್ದಾರೆ.

ಇದನ್ನೂ ಓದಿ: ಚಿನ್ನದ ಮೇಲೆ ಆಮದು ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ ತರುವ ಸುದ್ದಿ

ಎಐನಿಂದ ನಿಮ್ಮ ಕೆಲಸ ಹೋಗೋದಿಲ್ಲ…

ಕಾರ್ನೆಜೀ ಮೆಲ್ಲೋನ್ ಯೂನಿವರ್ಸಿಟಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಜೆನ್ಸೆನ್ ಹುವಾಂಗ್, ಎಐ ನಿಮ್ಮ ಕೆಲಸ ಕಿತ್ತುಕೊಳ್ಳುವುದಿಲ್ಲ. ಆದರೆ, ನಿಮಗಿಂತ ಚೆನ್ನಾಗಿ ಎಐ ಅನ್ನು ಬಳಸುವವರು ನಿಮ್ಮ ಕೆಲಸ ಕಸಿಯುತ್ತಾರೆ ಎಂದು ಹುವಾಂಗ್ ಎಚ್ಚರಿಸಿದ್ದಾರೆ.

ಇದೇ ವೇಳೆ, ಎಐನಿಂದಾಗಿ ಯಾರಿಗೂ ಕೆಲಸವೇ ಇರುವುದಿಲ್ಲ ಎಂದು ಹೇಳುವ ಕೆಲ ಟೆಕ್ ನಾಯಕರ ಅನಿಸಿಕೆಗಳಿಗೆ ಜೆನ್ಸೆನ್ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಮಾತುಗಳು ಸರಿಯಲ್ಲ. ನನ್ನಂತೆ ಸಿಇಒಗಳಾಗಿರುವವರಿಂದ ಈ ಮಾತುಗಳು ಬರುತ್ತಿವೆ. ಸಿಇಒ ಆದಾಕ್ಷಣ ದೇವರಾದರಂತೆ ತಿಳಿದುಬಿಡುತ್ತಾರೆ. ಒಂದು ವಿಚಾರ ತಿಳಿಯುವ ಮುನ್ನವೇ ಎಲ್ಲಾ ತಿಳಿದಿದೆ ಎಂದು ಭಾವಿಸಿಬಿಡುತ್ತಾರೆ ಎಂದು ಎನ್​ವಿಡಿಯಾ ಸಿಇಒ ಜೆನ್ಸೆನ್ ಹುವಾಂಗ್ ಲೇವಡಿ ಮಾಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link