All posts by nagaraj11081993

Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..! – Kannada News | Auqib Nabi has taken 104 wickets in the last two Ranji Trophy seasons

ಬರೋಬ್ಬರಿ 67 ವರ್ಷಗಳ ಬಳಿಕ ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ರೂವಾರಿ ಆಖಿಬ್ ನಬಿ. ಏಕೆಂದರೆ ಇಡೀ ಟೂರ್ನಿಯುದ್ದಕ್ಕೂ ಜಮ್ಮು-ಕಾಶ್ಮೀರ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದೇ ನಬಿ.

ಅದರಲ್ಲೂ ಫೈನಲ್​ ಪಂದ್ಯದಲ್ಲಿ 5 ವಿಕೆಟ್ ಉರುಳಿಸುವ ಮೂಲಕ ಕರ್ನಾಟಕ ತಂಡವನ್ನು ಮೊದಲ ಇನಿಂಗ್ಸ್​ನಲ್ಲಿ 293 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಪರಿಣಾಮ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಜಮ್ಮು-ಕಾಶ್ಮೀರ ತಂಡ ರಣಜಿ ಟೂರ್ನಿಯಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ವಿಶೇಷ ಎಂದರೆ ಈ ಬಾರಿಯ ಟೂರ್ನಿಯಲ್ಲಿ 10 ಪಂದ್ಯಗಳನ್ನಾಡಿರುವ ನಬಿ ಕಬಳಿಸಿದ್ದು ಬರೋಬ್ಬರಿ 60 ವಿಕೆಟ್​ಗಳು. ಅಂದರೆ ರಣಜಿ ಟೂರ್ನಿ ಇತಿಹಾಸದಲ್ಲೇ 60 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್​ ಕಬಳಿಸಿದ ಮೂವರು ವೇಗಿಗಳಲ್ಲಿ ಆಖಿಬ್ ನಬಿ ಕೂಡ ಒಬ್ಬರಾಗಿದ್ದಾರೆ.

ಇದಕ್ಕೂ ಮುನ್ನ ಅಂದರೆ, 2024-25 ರ ಸೀಸನ್​ನಲ್ಲಿ ಆಖಿಬ್ ನಬಿ ಬರೋಬ್ಬರಿ 44 ವಿಕೆಟ್ ಕಬಳಿಸಿದ್ದರು. ಪರಿಣಾಮ ಜಮ್ಮು-ಕಾಶ್ಮೀರ ತಂಡವು ಕ್ವಾರ್ಟರ್ ಫೈನಲ್​ವರೆಗೆ ತಲುಪಿತ್ತು. ಈ ಬಾರಿ ತನ್ನ ಕರಾರುವಾಕ್ಕಾದ ದಾಳಿಯನ್ನು ಮತ್ತಷ್ಟು ಮೊನಚುಗೊಳಿಸಿದ್ದ ನಬಿ ಜಮ್ಮು-ಕಾಶ್ಮೀರ ತಂಡಕ್ಕೆ ರಣಜಿ ಕಿರೀಟ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಈ ಬಾರಿಯ ರಣಜಿ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ 8 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ  ಕಳೆದ 18 ಪಂದ್ಯಗಳಲ್ಲಿ ಆಖಿಬ್ ನಬಿ 13 ಬಾರಿ 5 ವಿಕೆಟ್ ಪಡೆದಿದ್ದಾರೆ. ಅಷ್ಟೇ ಅಲ್ಲದೆ 2 ಸೀಸನ್​ಗಳ ಮೂಲಕ ರಣಜಿ ಟೂರ್ನಿಯಲ್ಲಿ 100 ಕ್ಕೂ ಅಧಿಕ ವಿಕೆಟ್ ಪಡೆದ ಆರನೇ ಬೌಲರ್ ಎನಿಸಿಕೊಂಡಿದ್ದಾರೆ.

ಈ ಎಲ್ಲಾ ಸಾಧನೆಗಳೊಂದಿಗೆ ರಣಜಿ ಟೂರ್ನಿಯಲ್ಲಿ ಸಂಚಲನ ಸೃಷ್ಟಿಸಿರುವ ಆಖಿಬ್ ನಬಿ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

 

Source link

ಓಮನ್ ಬಿಟ್ಟು ಉಳಿದ ಗಲ್ಫ್ ದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಆ ಒಂದು ರಾಷ್ಟ್ರ ಬಿಟ್ಟಿದ್ದೇಕೆ? – Kannada News | Iran attacks most of the Gulf nations, except Oman, interesting reason behind it

ನವದೆಹಲಿ, ಮಾರ್ಚ್ 1: ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಮೇಲೆ ಯುದ್ಧ (Iran War) ನಡೆಸುತ್ತಿವೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿವೆ. ಗಲ್ಫ್ ಪ್ರದೇಶದಲ್ಲಿರುವ ಹೆಚ್ಚಿನ ದೇಶಗಳ ಪ್ರಮುಖ ಸ್ಥಳಗಳನ್ನು ಇರಾನ್ ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ. ದುಬೈ, ದೋಹಾ ಇತ್ಯಾದಿ ನಗರಗಳು ಇರಾನ್ ದಾಳಿಗೆ ಒಳಗಾಗಿವೆ. ಬಹ್ರೇನ್, ಸೌದಿ, ಯುಎಇ, ಕತಾರ್ ಮೊದಲಾದ ದೇಶಗಳು ಇರಾನ್ ಪ್ರತಿದಾಳಿಗೆ ಸಿಲುಕಿವೆ. ಅಧ್ಯಕ್ಷ ಆಯತೊಲ್ಲಾ ಖೊಮೇನಿ ಹತ್ಯೆಗೆ ಇರಾನ್ ಪ್ರತೀಕಾರ ತೀರಿಸಿಕೊಳ್ಳಲು ಹೊರಟಿದೆ. ಆದರೆ, ಓಮನ್ ಹೊರತುಪಡಿಸಿ ಉಳಿದ ಗಲ್ಫ್ ದೇಶಗಳ ಮೇಲೆ ಇರಾನ್ ದಾಳಿ ಮಾಡಿದೆ. ಅಮೆರಿಕದ ನೆಲೆಗಳಿರುವ ಈ ದೇಶಗಳು ಇರಾನ್​ನ ಮುಯ್ಯಿಗಳ ಪಟ್ಟಿಯಲ್ಲಿವೆ. ಆದರೆ, ಓಮನ್ ಮಾತ್ರ ಇದಕ್ಕೆ ಅಪವಾದ.

ಓಮನ್ ಮೇಲೆ ಇರಾನ್ ದಾಳಿ ಯಾಕಿಲ್ಲ?

ಓಮನ್ ಮತ್ತು ಇರಾನ್ ನಡುವೆ ಆಪ್ಯಾಯಮಾನವಾದ ಸಂಬಂಧ ಶುರುವಾಗಿ ಸುಮಾರು ಐದು ದಶಕಗಳು ಗತಿಸಿವೆ. 20ನೇ ಶತಮಾನದ ಇಪ್ಪತರ ದೇಶಕದಲ್ಲಿ ಓಮನ್​ನಲ್ಲಿ ಸುಲ್ತಾನ್ ಖಾಬೂಸ್ ಬಿನ್ ಸಯಿದ್ ಅವರ ಆಡಳಿತ ಇತ್ತು. ಅಂದಿನ ಸೋವಿಯತ್ ರಷ್ಯಾ ಪ್ರೇರಿತ ಮಾರ್ಕ್ಸ್​ವಾದಿ ಹೋರಾಟಗಾರರು ಓಮನ್ ಸುಲ್ತಾನನ ಆಡಳಿತ ವಿರುದ್ದ ದೊಡ್ಡ ದಂಗೆ ಎಬ್ಬಿಸಿದ್ದರು. ಅದನ್ನು ದೋಫರ್ ದಂಗೆ ಎಂದು ಕರೆಯಲಾಗುತ್ತದೆ.

ಆಗ ಇರಾನ್ ದೇಶವು ತನ್ನ ಸೇನೆಯನ್ನು ಕಳುಹಿಸಿ ಓಮನ್ ಸುಲ್ತಾನನಿಗೆ ನೆರವು ಕೊಡುತ್ತದೆ. ಅಂದು ಈ ಎರಡು ದೇಶಗಳ ಮಧ್ಯೆ ಸ್ವಾಭಾವಿಕ ಮಿತ್ರತ್ವ ಏರ್ಪಟ್ಟಿತ್ತು. ಕುತೂಹಲ ಎಂದರೆ ಆಗ ಇರಾನ್​ನಲ್ಲಿ ಆಡಳಿತದಲ್ಲಿದ್ದದ್ದು ಅಮೆರಿಕನ್ ಪರವಾಗಿದ್ದ ಶಾ ಅವರು. ಓಮನ್ ಮೇಲೆ ಸೋವಿಯತ್ ನಿಯಂತ್ರಣ ತಪ್ಪಿಸಲು ಅಮೆರಿಕವು ಇರಾನ್​ನ ಶಾ ಮೂಲಕ ಪರೋಕ್ಷವಾಗಿ ಮಧ್ಯಪ್ರವೇಶಿಸಿತ್ತು.

ಇದನ್ನೂ ಓದಿ: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಭಾರತಕ್ಕೆ ಶಾಕ್​​: ಕಚ್ಚಾ ತೈಲ ದರ ಏರಿಕೆ ಸಾಧ್ಯತೆ?

ಮತ್ತೂ ಕುತೂಹಲ ಎಂದರೆ, 1979ರಲ್ಲಿ ಇರಾನ್​ನಲ್ಲಿ ಕ್ರಾಂತಿ ಉಂಟಾಗಿ ಇಸ್ಲಾಮಿಕ್ ಪ್ರಭುತ್ವದ ಸ್ಥಾಪನೆಯಾಯಿತು. ಅಮೆರಿಕದ ನಿಯಂತ್​ರಣದಲ್ಲಿದ್ದ ಹೆಚ್ಚಿನ ಗಲ್ಫ್ ರಾಷ್ಟ್ರಗಳು ಇರಾನ್​ನಿಂದ ದೂರ ಉಳಿದವು. ಆದರೆ, ಓಮನ್ ಮಾತ್ರ ತನ್ನ ಮಿತ್ರತ್ವ ಮುಂದುವರಿಸಿತು. ಆಡಳಿತಗಳು ಬದಲಾದವರೂ ಈ ಮಿತ್ರತ್ವ ಭಾವ ಬದಲಾಗಲಿಲ್ಲ. ಅಮೆರಿಕದ ಒತ್ತಡ ಮತ್ತು ಇರಾನ್ ಹಿತಾಸಕ್ತಿ ಎರಡನ್ನೂ ಓಮನ್ ಸಮತೋಲಿತ ರೀತಿಯಲ್ಲಿ ನಿಭಾಯಿಸಿಕೊಂಡು ಬಂದಿದೆ. ಇರಾನ್ ಮತ್ತು ಪಾಶ್ಚಿಮಾತ್ಯ ಶಕ್ತಿಗಳ ಮಧ್ಯೆ ಓಮನ್ ಸಂಪರ್ಕ ಸೇತುವಾಗಿ ನಿಂತಿದೆ.

ಇರಾನ್​ಗೆ ಓಮನ್ ಬಹಳ ಮುಖ್ಯ…

ಮೆಡಿಟರೇನಿಯನ್ ಸಮುದ್ರದಲ್ಲಿ ಹಾರ್ಮುಜ್ ಸ್ಟ್ರೇಟ್ ಎನ್ನುವ ಬಹಳ ಮುಖ್ಯವಾದ ಜಲಮಾರ್ಗ ಇದೆ. ಬಹಳ ಕಿರಿದಾದ ಮಾರ್ಗ. ಆದರೆ, ಜಗತ್ತಿನ ವ್ಯಾಪಾರದ ಮುಖ್ಯಪಾಲು ಸರಕುಗಳು ಈ ಮಾರ್ಗದಲ್ಲೇ ಹಡುಗಗಳ ಮೂಲಕ ಸಾಗಣೆ ಆಗುತ್ತವೆ. ಈ ಹಾರ್ಮುಜ್ ಮಾರ್ಗದ ಆ ಬದಿ ಈ ಬದಿಯಲ್ಲಿ ಇರಾನ್, ಓಮನ್, ಯುಎಇ ದೇಶಗಳಿವೆ. ಹೀಗಾಗಿ, ಈ ದೇಶಗಳ ಮಧ್ಯೆ ತಾಳಮೇಳ ಸರಿಯಾಗಿ ಇರಬೇಕಾದ್ದು ಅನಿವಾರ್ಯ.

ಹಾಗೆಯೇ, ಅಮೆರಿಕದ ನಿಷೇಧ ಎದುರಿಸುತ್ತಿರುವ ಇರಾನ್ ದೇಶಕ್ಕೆ ತನ್ನ ಸರಕುಗಳನ್ನು ಬೇರೆ ದೇಶಗಳ ಮಾರುಕಟ್ಟೆಗೆ ಕಳುಹಿಸಲು ಓಮನ್ ಅಗತ್ಯ ಇದೆ. ಓಮನ್ ಮುಖಾಂತರ ಅದು ಸರಕುಗಳನ್ನು ಹೊರಕಳುಹಿಸಲು ಅವಕಾಶ ಇದೆ.

ಇದನ್ನೂ ಓದಿ: Ali Khamenei Death: ಸರ್ವೋಚ್ಛ ನಾಯಕ ಖಮೇನಿ ಹತ್ಯೆಯನ್ನು ದೃಢಪಡಿಸಿ, 40 ದಿನಗಳ ಶೋಕಾಚರಣೆ ಘೋಷಿಸಿದ ಇರಾನ್

ಓಮನ್ ವಿಚಾರದಲ್ಲಿ ಮೆಚ್ಚುಗೆಯಾಗುವ ಅಂಶವೆಂದರೆ ಅದರ ವಿದೇಶ ನೀತಿಯದ್ದು. ಇರಾನ್ ಅಥವಾ ಯಾವುದೇ ದೇಶದೊಂದಿಗೆಯಾಗಲೀ ಓಮನ್ ಕದ್ದುಮುಚ್ಚಿ ವ್ಯವಹಾರ ನಡೆಸಿಲ್ಲ. ಶಾಂತಿ ವಾತಾವರಣವೇ ಅದರ ವಿದೇಶಾಂಗ ನೀತಿಯ ಗುರಿ. ಹೀಗಾಗಿ, ಇರಾನ್ ಸೇರಿದಂತೆ ಬಹುತೇಕ ಎಲ್ಲಾ ದೇಶಗಳೊಂದಿಗೆ ಓಮನ್ ಉತ್ತಮ ಸಂಬಂಧ ಇಟ್ಟುಕೊಳ್ಳಲು ಯಶಸ್ವಿಯಾಗಿದೆ.

ಇನ್ನಷ್ಟು ವಿದೇಶ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಬಿಡುಗಡೆಗೂ ಮುನ್ನವೇ ವಿಮರ್ಶೆ ತಿಳಿಸಿದ ನಟಿ ಯಾಮಿ ಗೌತಮ್ – Kannada News | Aditya Dhar wife Yami Gautam shares the first review of Dhurandhar 2 even before its release

ಭಾರಿ ನಿರೀಕ್ಷೆ ಹುಟ್ಟುಹಾಕಿರುವ ‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈ ಸಿನಿಮಾಗೆ ಅಧಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾ ಹೇಗಿರಬಹುದು ಎಂಬ ಕುತೂಹಲ ಪ್ರೇಕ್ಷಕರಿಗೆ ಇದೆ. ಈ ಸಿನಿಮಾದ ಬಿಡುಗಡೆಗೂ ಮುನ್ನವೇ ನಟಿ ಯಾಮಿ ಗೌತಮ್ ಅವರು ವಿಮರ್ಶೆ (Dhurandhar 2 First Review) ತಿಳಿಸಿದ್ದಾರೆ. ನಿರ್ದೇಶಕ ಆದಿತ್ಯ ಧಾರ್ ಅವರ ಪತ್ನಿ ಆಗಿರುವ ಯಾಮಿ ಗೌತಮ್ (Yami Gautam) ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ‘ಧುರಂಧರ್ 2’ ಸಿನಿಮಾ ಹೇಗಿದೆ ಎಂಬುದರ ಬಗ್ಗೆ ಮಾತನಾಡಿದ್ದಾರೆ.

‘ನಾನು ಈಗಾಗಲೇ ಧುರಂಧರ್ 2 ಸಿನಿಮಾವನ್ನು ನೋಡಿದ್ದೇನೆ. ಅದು ಅದ್ಭುತಗಿಂತಲೂ ಹೆಚ್ಚಾಗಿದೆ. ನೋಡಿದ ಬಳಿಕ ನಾನು ಎಮೋಷನಲ್ ಆದೆ. ಅಂದು ನಾನು ವಿಮಾನದಲ್ಲಿ ಪ್ರಯಾಣ ಮಾಡಬೇಕಿತ್ತು. ಹಾಗಾಗಿ ಆದಿತ್ಯ ಧಾರ್ ಅವರಿಗೆ ಏನನ್ನೂ ಹೇಳಲು ಸಾಧ್ಯವಾಗಲಿಲ್ಲ. ಅಂದು ನಾನು ಒಂದು ಸ್ಕ್ರಿಪ್ಟ್ ಓದಬೇಕಿತ್ತು. ಅದು ಕೂಡ ಆಗಲಿಲ್ಲ. ನಾನು ಏನನ್ನೋ ನೋಡಬೇಕಿತ್ತು. ಅದು ಸಹ ನನ್ನಿಂದ ಸಾಧ್ಯವಾಗಲಿಲ್ಲ’ ಎಂದು ಸಿನಿಮಾ ನೋಡಿದ ಬಳಿಕ ಪರಿಣಾಮ ಹೇಗಿತ್ತು ಎಂಬುದನ್ನು ಯಾಮಿ ಗೌತಮ್ ಅವರು ವಿವರಿಸಿದ್ದಾರೆ.

‘ಸಂದರವಾದ ಸೂರ್ಯಾಸ್ತ ನೋಡುತ್ತಾ ನಾನು ಕುಳಿತೆ. ವಿಮಾನ ಇಳಿದ ಬಳಿಕ ಆದಿತ್ಯ ಅವರಿಗೆ ಏನು ಹೇಳಲಿ ಅಂತ ನಾನು ಯೋಚಸುತ್ತಿದೆ. ಸಿನಿಮಾ ಬಗ್ಗೆ ನನ್ನ ಭಾವನೆ ಏನಿದೆ ಎಂಬುದನ್ನು ಪದಗಳಲ್ಲಿ ಹೇಳಬೇಕಿತ್ತು. ಆದಿತ್ಯ ಅವರು ಈ ದೇಶವನ್ನು ಮತ್ತು ಪ್ರೇಕ್ಷಕರನ್ನು ಪ್ರೀತಿಸುತ್ತಾರೆ. ಈ ಸಿನಿಮಾ ಮಾಡಲು ಅವರು ತುಂಬಾ ಕಷ್ಪಪಟ್ಟಿದ್ದಾರೆ. ಪ್ರೇಕ್ಷಕರು ಎಂದೂ ಮರೆಯಲಾಗದ ಅನುಭವವನ್ನು ಧುರಂಧರ್ 2 ಸಿನಿಮಾ ನೀಡುತ್ತದೆ’ ಎಂದಿದ್ದಾರೆ ಯಾಮಿ ಗೌತಮ್.

‘ಪ್ರತಿಯೊಬ್ಬ ಭಾರತೀಯನೂ ಹೆಮ್ಮಪಡುವಂತಹ ಸಿನಿಮಾ ಧುರಂಧರ್ ಆಗಲಿದೆ ಅಂತ ನಾನು ಮೊದಲೇ ಹೇಳಿದ್ದೆ. ಆ ನಂಬಿಕೆ ನನಗೆ ಯಾವಾಗಲೂ ಇತ್ತು. ಮೊದಲು ನಾನು ಈ ಸಿನಿಮಾದ ಸ್ಕ್ರಿಪ್ಟ್ ಓದಿದಾಗ ನಾನು ಆರ್ಟಿಕಲ್ 370 ಸಿನಿಮಾದ ಶೂಟಿಂಗ್​ನಲ್ಲಿದೆ. ಅದು ಕೇವಲ 40 ಪುಟ ಇತ್ತು. ಆದರೆ ಓದಿದ ಬಳಿಕ ನನಗೆ ಕಣ್ಣೀರು ಬಂದಿತ್ತು’ ಎಂದು ಯಾಮಿ ಗೌತಮ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾ ನೋಡಲು ದುಬೈನಿಂದ ಭಾರತಕ್ಕೆ ಬರಲಿರುವ ಪ್ರೇಕ್ಷಕರು

‘ಧುರಂಧರ್ 2’ ಸಿನಿಮಾದಲ್ಲಿ ಯಾಮಿ ಗೌತಮ್ ಕೂಡ ಅತಿಥಿ ಪಾತ್ರ ಮಾಡಿದ್ದಾರೆ ಎಂಬ ಅನುಮಾನ ಇದೆ. ಆ ಬಗ್ಗೆ ಚಿತ್ರತಂಡದವರು ಮೌನ ಮುರಿದಿಲ್ಲ. ಯಾಮಿ ಗೌತಮ್ ಕೂಡ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಆದರೆ ‘ನಿಮ್ಮೆಲ್ಲರನ್ನೂ ಅಲ್ಲಿ ಭೇಟಿ ಆಗುತ್ತೇನೆ’ ಎಂದು ಹೇಳುವ ಮೂಲಕ ಇನ್ನಷ್ಟು ಕುತೂಹಲ ಹುಟ್ಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲಿವ್-ಇನ್ ಸಂಗಾತಿಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಡಿಎಂಕೆ ಕಾರ್ಯಕರ್ತ – Kannada News | Tamil Nadu Man Linked to DMK Youth Wing Arrested in Toddler Assault and Murder Case

ಬಂಧನ-ಸಾಂದರ್ಭಿಕ ಚಿತ್ರImage Credit source: ipleaders

ಕೃಷ್ಣಗಿರಿ, ಮಾರ್ಚ್​ 01: ಡಿಎಂಕೆ ಕಾರ್ಯರ್ತನೊಬ್ಬ ಲಿವ್-ಇನ್ ಸಂಗಾತಿ(Live-in Partner)ಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಪೆರಿಯನಾಯಗಂ ತನ್ನ ಸಂಗಾತಿ ಪ್ರಿನ್ಸಿಯ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಆಕೆ ಗಂಡ ಸೂರ್ಯನಿಂದ ಬೇರೆಯಾಗಿದ್ದಳು. ತಾಯಿ ಇಲ್ಲದ ಸಮಯದಲ್ಲಿ ಪೆರಿಯನಾಯಗಂ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ವೈವಾಹಿಕ ಭಿನ್ನಾಭಿಪ್ರಾಯಗಳ ನಂತರ, ಪ್ರಿನ್ಸಿ ತನ್ನ ತಾಯಿಯೊಂದಿಗೆ ಅಂಚೆಟ್ಟಿ ಗ್ರಾಮದಲ್ಲಿ ವಾಸಿಸುತ್ತಿದ್ದರು, ಆದರೆ ಸೂರ್ಯ ಆಗಾಗ ತನ್ನ ಮಗಳನ್ನು ಭೇಟಿ ಮಾಡಲು ಬರುತ್ತಿದ್ದರು.

ಫೆಬ್ರವರಿ 11 ರಂದು, ಮಗು ಪ್ರಜ್ಞೆ ತಪ್ಪಿತ್ತು, ನಂತರ ಆಕೆಯ ತಾಯಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಅಲ್ಲಿ ಆಕೆ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಘಟನೆಯ ಬಗ್ಗೆ ಶಂಕಿಸಿ ಸೂರ್ಯ ದೂರು ದಾಖಲಿಸಿದ್ದು, ಪೊಲೀಸ್ ತನಿಖೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಮಗುವಿನ ಖಾಸಗಿ ಭಾಗಗಳಲ್ಲಿ ಗಾಯಗಳಾಗಿದ್ದು, ಇದು ಲೈಂಗಿಕ ದೌರ್ಜನ್ಯವನ್ನು ಸೂಚಿಸುತ್ತದೆ.

ತನಿಖಾಧಿಕಾರಿಗಳು ನಂತರ ಪ್ರಿನ್ಸಿ ಪೆರಿಯನಾಯಗಂ ಜೊತೆ ಸಂಬಂಧ ಹೊಂದಿದ್ದಾಳೆಂದು ಹೇಳಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಪೆರಿಯನಾಯಗಂ ತನ್ನ ತಾಯಿಯ ಅನುಪಸ್ಥಿತಿಯಲ್ಲಿ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮತ್ತಷ್ಟು ಓದಿ: ಲಿವ್ ಇನ್ ಸಂಗಾತಿಯ ಕೊಂದು ದೇಹವನ್ನು ಟ್ರಂಕ್​ನಲ್ಲಿ ಹಾಕಿ ಸುಟ್ಟ ವ್ಯಕ್ತಿ, ಸಿಕ್ಕಿಬಿದ್ದಿದ್ಹೇಗೆ?

ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಪ್ರತಿಕ್ರಿಯಿಸಿದ ವಿರೋಧ ಪಕ್ಷವಾದ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಆಡಳಿತಾರೂಢ ಡಿಎಂಕೆ ಸರ್ಕಾರದ ಮೇಲೆ ತೀವ್ರ ದಾಳಿ ನಡೆಸಿತು.

ಮಹಿಳೆಯರು ಮತ್ತು ಮಕ್ಕಳ ಮೂಲಭೂತ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗದ ಸರ್ಕಾರವು ಅಧಿಕಾರದಲ್ಲಿ ಉಳಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 10:59 am, Sun, 1 March 26

Source link

Iran Israel War: ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ? – Kannada News | Iran Israel Conflict: Kannadigas Stranded in Dubai, Bahrain Amidst Flight Chaos

ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ?

ಬೆಂಗಳೂರು, ಮಾರ್ಚ್​ 01: ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ Iran Israel War ಮಧ್ಯಪ್ರಾಚ್ಯದ ಹಲವು ದೇಶಗಳಿಗೆ ವ್ಯಾಪಿಸಿದ್ದು, ಭದ್ರತಾ ಆತಂಕ ಹೆಚ್ಚಿಸಿದೆ. ವಿಮಾನ ಸಂಚಾರದಲ್ಲಿ ವ್ಯತ್ಯಯದ ಪರಿಣಾಮವಾಗಿ ದುಬೈ, ಬಹ್ರೇನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರತೀಯರು, ವಿಶೇಷವಾಗಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಬಹ್ರೇನ್ ಮತ್ತು ದುಬೈ ನಗರಗಳು ಭದ್ರತಾ ಕ್ರಮಗಳು ಕಠಿಣಗೊಂಡಿದ್ದು, ವಿಮಾನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಈ ಬೆಳವಣಿಗೆಯಿಂದಾಗಿ ವಿದೇಶ ಪ್ರವಾಸದಲ್ಲಿದ್ದ ಮತ್ತು ಉದ್ಯೋಗ ನಿಮಿತ್ತ ತೆರಳಿದ್ದ ಅನೇಕ ಕನ್ನಡಿಗರು ಅಲ್ಲಿ ಸಿಲುಕಿಕೊಂಡಿದ್ದಾರೆ.

ಬಹ್ರೇನ್​ನಲ್ಲಿ ಸಿಲುಕಿದವರೆಷ್ಟು?

ಬಹ್ರೇನ್ ರಾಜಧಾನಿ ಮನಾಮಾ ನಗರದಲ್ಲಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದ ಪಂಜು, ಜಮುನ, ಸುರೇಂದ್ರ ಪ್ರಸಾದ್, ರತೀಶ್ ಹಾಗೂ ಮೈಸೂರು ಮೂಲದ ನೇತ್ರಾವತಿ ಸೇರಿದಂತೆ ಒಟ್ಟು ಆರು ಮಂದಿ ಕನ್ನಡಿಗರು ಸಿಲುಕಿದ್ದಾರೆ. ತಾವು ವಾಸಿಸುತ್ತಿರುವ ಕಟ್ಟಡದ ಪಕ್ಕದಲ್ಲೇ ಬಾಂಬ್ ಸ್ಫೋಟವಾಗುತ್ತಿರುವುದಾಗಿ ಅವರು ತಿಳಿಸಿದ್ದು, ಅವರ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ತಮ್ಮವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ದುಬೈನಲ್ಲಿ ಸಿಲುಕಿ ಕನ್ನಡಿಗರ ಪರದಟ!

ದುಬೈನಲ್ಲಿ ಕೂಡ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಪ್ರವಾಸದ ವೇಳೆ ಅಲ್ಲೇ ಸಿಲುಕಿಕೊಂಡಿದ್ದಾರೆ. ಅವರು ಉಳಿದಿದ್ದ ಹೋಟೆಲ್ ಸಮೀಪ ಮಿಸೈಲ್ ದಾಳಿ ನಡೆದಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಶಾಸಕ ಬಿ. ನಾಗೇಂದ್ರ ಅವರು ಮುಖ್ಯಮಂತ್ರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರೊಂದಿಗೆ ಮಾತನಾಡಿ ದುಬೈನಲ್ಲಿ ಸಿಲುಕಿರುವ ಜನರ ಕುರಿತು ಮಾಹಿತಿ ನೀಡಿದ್ದಾರೆ. ಮಾರ್ಚ್ 2ರವರೆಗೆ ವಿಮಾನ ಹಾರಾಟ ಇರುವುದಿಲ್ಲವೆಂದು ತಿಳಿಸಲಾಗಿದೆ.

ಇದನ್ನೂ ಓದಿ ಇರಾನ್-ಇಸ್ರೇಲ್ ಯುದ್ಧ, ಮಂಗಳೂರು–ಗಲ್ಫ್ ವಿಮಾನ ಸೇವೆಗಳಲ್ಲಿ ವ್ಯತ್ಯಯ, ರದ್ದಾದ ಫ್ಲೈಟ್ ವಿವರ ಇಲ್ಲಿದೆ

ಬಳ್ಳಾರಿಯಿಂದ ಫೆಬ್ರವರಿ 24ರಂದು ದುಬೈ ಪ್ರವಾಸಕ್ಕೆ ತೆರಳಿದ್ದ 35 ಮಂದಿ ಪ್ರವಾಸಿಗರು ವಾಪಸ್ಸಾಗಬೇಕಿದ್ದ ವೇಳೆಯಲ್ಲಿ ಯುದ್ಧ ಭೀತಿ ಹಿನ್ನೆಲೆಯಲ್ಲಿ ಅಲ್ಲೇ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ರೀತಿ ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಯ ಒಟ್ಟು 50 ಮಂದಿ ಪ್ರವಾಸಿಗರು ವಿಮಾನ ರದ್ದಾದ ಪರಿಣಾಮ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಣಕಾಸಿನ ತೊಂದರೆಗೂ ಒಳಗಾಗಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಗಿರೀಶ್ ಕೆರೂರು, ಫ್ರಾನ್ಸ್ ಮೂಲದ IDEMIA ಕಂಪನಿಯಲ್ಲಿ ಟೆಕ್ನಿಕಲ್ ಮ್ಯಾನೇಜರ್ ಆಗಿದ್ದು, ದುಬೈ ಮಾರ್ಗವಾಗಿ ಪ್ಯಾರಿಸ್ ತೆರಳಬೇಕಾಗಿತ್ತು. ಆದರೆ ವಿಮಾನ ರದ್ದಾದ ಕಾರಣ ಅವರು ಅಬುಧಾಬಿಯ ಯಾಸ್ ಪ್ಲಾಜಾ ಹೋಟೆಲ್‌ನಲ್ಲಿ ತಂಗಿದ್ದಾರೆ. ಸದ್ಯ ಸುರಕ್ಷಿತರಾಗಿದ್ದರೂ, ಯಾವಾಗ ವಿಮಾನ ಸಂಚಾರ ಪುನರಾರಂಭವಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲವೆಂದು ತಿಳಿಸಿದ್ದಾರೆ.

ಒಟ್ಟಾರೆ ಲಭ್ಯ ಮಾಹಿತಿಯ ಪ್ರಕಾರ ಬಹ್ರೇನ್‌ನಲ್ಲಿ 6 ಮಂದಿ, ದುಬೈನಲ್ಲಿ ಬಳ್ಳಾರಿ ಮೂಲದ 35 ಮಂದಿ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಯ 50 ಮಂದಿ ಸೇರಿದಂತೆ ಕನಿಷ್ಠ 90ಕ್ಕೂ ಹೆಚ್ಚು ಕನ್ನಡಿಗರು ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಭಾರತೀಯ ವಿದೇಶಾಂಗ ಇಲಾಖೆ ಸಹಾಯವಾಣಿ ಆರಂಭಿಸಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಸಿಲುಕಿರುವ ಕನ್ನಡಿಗರನ್ನು ಶೀಘ್ರ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂಬುದು ಕುಟುಂಬಸ್ಥರ ಒತ್ತಾಯವಾಗಿದೆ.

ಇದನ್ನೂ ಓದಿ ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು ಏರ್​ಪೋರ್ಟ್​ನಲ್ಲಿ 15 ವಿಮಾನಗಳು ರದ್ದು

ಯುದ್ಧದ ಹಿನ್ನೆಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 15 ವಿಮಾನಗಳು ರದ್ದಾಗಿವೆ. ವಿದೇಶಗಳಿಂದ ಆಗಮಿಸಬೇಕಿದ್ದ 09 ಹಾಗೂ ಬೆಂಗಳೂರಿನಿಂದ ನಿರ್ಗಮಿಸಬೇಕಿದ್ದ 06 ವಿಮಾನಗಳು ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ದುಬೈ, ಅಬುಧಾಬಿ, ಜಿದ್ದಾ, ದೋಹಾ, ಡಮಾಮ್ ಹಾಗೂ ರಿಯಾದ್ ಸಂಪರ್ಕಿತ ಪ್ಲೈಟ್ಗಳು ರದ್ದಾಗಿವೆ. ಎಮಿರೇಟ್ಸ್, ಕತಾರ್ ಏರ್ವೇಸ್, ಏರ್ ಇಂಡಿಯಾ ಎಕ್ಸ್ಪ್ರೆಸ್, ಇಂಡಿಗೋ ಮತ್ತು ಎತಿಹಾದ್ ಏರ್ವೇಸ್ ವಿಮಾನಗಳು ಸೇವೆ ನಿಲ್ಲಿಸಿವೆ. ಆಗಮಿಸಬೇಕಿದ್ದ ವಿಮಾನಗಳಲ್ಲಿ 1,533 ಪ್ರಯಾಣಿಕರು ಹಾಗೂ ನಿರ್ಗಮಿಸಬೇಕಿದ್ದ ವಿಮಾನಗಳಲ್ಲಿ 806 ಮಂದಿ ಟಿಕೆಟ್ ಬುಕ್ ಮಾಡಿದ್ದು, ರದ್ದತಿ ಬಗ್ಗೆ ಮುಂಚಿತವಾಗಿ ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:21 am, Sun, 1 March 26

Source link

ಯುದ್ಧಕ್ಕೆ ನನ್ನ ಸೈನಿಕರು ಸಿದ್ಧರಾಗಿದ್ದಾರೆ… ಟೀಮ್ ಇಂಡಿಯಾಗೆ ಎಚ್ಚರಿಕೆ..! – Kannada News | All my soldiers are ready for battle: Daren Sammy

“ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧರಾಗಿದ್ದಾರೆ”… ಹೀಗಂದಿರುವುದು ಮತ್ಯಾರೂ ಅಲ್ಲ, ವೆಸ್ಟ್ ಇಂಡೀಸ್ ಕೋಚ್ ಡ್ಯಾರೆನ್ ಸ್ಯಾಮಿ. ಹೀಗೆ ವಿಂಡೀಸ್ ಪಡೆ ಸಿದ್ಧರಾಗಿರುವುದು ಭಾರತ ತಂಡವನ್ನು ಎದುರಿಸಲು ಎಂಬುದು ವಿಶೇಷ. ಮಾರ್ಚ್ 1 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್​ಗೇರಲಿದೆ.

ಈ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ವೆಸ್ಟ್ ಇಂಡೀಸ್ ಕೋಚ್ ಡ್ಯಾರೆನ್ ಸ್ಯಾಮಿ, ಟೀಮ್ ಇಂಡಿಯಾವನ್ನು ಎದುರಿಸಲು ನನ್ನ ಪಡೆ ಸಿದ್ಧರಾಗಿದ್ದಾರೆ.  ತಂಡವು ಯಾವುದೇ ಸವಾಲನ್ನು ಎದುರಿಸಲು ಸಜ್ಜಾಗಿದ್ದಾರೆ. ಮಾರ್ಚ್ 1 ರಂದು ನಡೆಯಲಿರುವ ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧರಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಭಾರತ ತಂಡವನ್ನು “ಗೋಲಿಯಾತ್” (ಬಲಿಷ್ಠ ತಂಡ) ಗೆ ಹಾಗೂ ತಮ್ಮ ತಂಡವನ್ನು “ಡೇವಿಡ್” ಗೆ ಹೋಲಿಸಿದ ಸ್ಯಾಮಿ,  2016ರಲ್ಲಿ ಡೇವಿಡ್ (ವೆಸ್ಟ್ ಇಂಡೀಸ್) ಹೇಗೆ ಗೋಲಿಯಾತ್ (ಭಾರತ) ಅನ್ನು ಸೋಲಿಸಿತ್ತೋ ಅದೇ ಇತಿಹಾಸ ಮರುಕಳಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡೇವಿಡ್ ಮತ್ತು ಗೋಲಿಯಾತ್ ಬೈಬಲ್‌ನ (1 ಸ್ಯಾಮ್ಯುಯೆಲ್ 17) ಪ್ರಸಿದ್ಧ ಕಥೆಯಾಗಿದ್ದುಇದು ಸಣ್ಣ ದುರ್ಬಲ ವ್ಯಕ್ತಿ (ಡೇವಿಡ್) ತನ್ನ ಬುದ್ಧಿವಂತಿಕೆ ಮತ್ತು ನಂಬಿಕೆಯಿಂದ ಬಲಿಷ್ಠದೈತ್ಯ ಯೋಧನನ್ನು (ಗೋಲಿಯಾತ್) ಸೋಲಿಸುವ ಅಸಾಧ್ಯ ವಿಜಯವನ್ನು ಚಿತ್ರಿಸುತ್ತದೆ. ಈ ಕಥೆಯು ಸಾಂಕೇತಿಕವಾಗಿ ಪ್ರಸ್ತಾಪಿಸುವ ಮೂಲಕ ವೆಸ್ಟ್ ಇಂಡೀಸ್ ತಂಡವು ಬಲಿಷ್ಠ ಟೀಮ್ ಇಂಡಿಯಾವನ್ನು ಬಗ್ಗು ಬಡಿಯಲಿದೆ ಎಂದು ಡ್ಯಾರೆನ್ ಸ್ಯಾಮಿ ಹೇಳಿದ್ದಾರೆ.

ಅಂದಹಾಗೆ ಇದೇ ಈಡನ್ ಗಾರ್ಡನ್ಸ್ ಮೈದಾನದಲ್ಲಿ 2016 ರಲ್ಲಿ ಡ್ಯಾರೆನ್ ಸ್ಯಾಮಿ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ಗೆದ್ದಿತ್ತು. ಆ ನೆನಪುಗಳು ತಂಡಕ್ಕೆ ಹೆಚ್ಚಿನ ಶಕ್ತಿ ನೀಡಲಿವೆ. ಹೀಗಾಗಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ವಿಂಡೀಸ್ ಪಡೆಯಿಂದ ಪ್ರಚಂಡ ಪ್ರದರ್ಶನವನ್ನು ನಿರೀಕ್ಷಿಸಬಹುದು ಎಂದಿದ್ದಾರೆ.

ಇದನ್ನೂ ಓದಿ: PAK vs SL: ವಿವಾದಾತ್ಮಕ ತೀರ್ಪಿನಿಂದ ಸೋತ ಶ್ರೀಲಂಕಾ

ಇದೇ ವೇಳೆ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ ಅವರ ಉತ್ತಮ ಬ್ಯಾಟಿಂಗ್ ಫಾರ್ಮ್ ಮತ್ತು ತಂಡದ ಆಳವಾದ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ  ಹೆಮ್ಮೆ ವ್ಯಕ್ತಪಡಿಸಿದ ಸ್ಯಾಮಿ, ಟೀಮ್ ಇಂಡಿಯಾ ಬೌಲರ್​ಗಳ ವಿರುದ್ಧ ನಮ್ಮ ಬ್ಯಾಟರ್​ಗಳು ಅಬ್ಬರಿಸುವುದನ್ನು ನಿರೀಕ್ಷಿಸಬಹುದು. ಈ ಮೂಲಕ ಭಾರತ ತಂಡಕ್ಕೆ ಸೋಲುಣಿಸಿ ನಾವು ಸೆಮಿಫೈನಲ್​ಗೆ ಪ್ರವೇಶಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Published On – 10:26 am, Sun, 1 March 26

Source link

Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ – Kannada News | Anchors in Tears on Iranian TV as Reports Say Supreme Leader Khamenei Is Dead

ಟೆಹ್ರಾನ್, ಮಾರ್ಚ್​ 01: ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಶೀಘ್ರದಲ್ಲೇ ಇರಾನ್ ಇದಕ್ಕೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿಯ ಪ್ರಕಾರ, ಅವರ ಮಗಳು, ಮೊಮ್ಮಗ ಮತ್ತು ಅಳಿಯ ಸೇರಿದಂತೆ ಅವರ ನಾಲ್ವರು ಸಂಬಂಧಿಕರು ಸಹ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Athiratha Maharatha: ಅತೀರಥ ಮಹಾರಥರು ಎಂದರೆ ಯಾರು ಗೊತ್ತಾ? ಸಂಪೂರ್ಣ ವಿವರ ಇಲ್ಲಿದೆ – Kannada News | Unveiling the True Meaning of Athiratha and Maharatha: Ancient Warrior Ranks

ಪ್ರಾಚೀನ ಯುದ್ಧಗಳ ಸಂದರ್ಭದಲ್ಲಿ ಬಳಕೆಯಲ್ಲಿದ್ದ ಅತಿರಥ ಮಹಾರಥ ಪದಗಳ ನಿಜವಾದ ಅರ್ಥವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇವು ಯುದ್ಧದಲ್ಲಿ ಭಾಗವಹಿಸುವ ಯೋಧರ ಶಕ್ತಿ ಮತ್ತು ಕಾರ್ಯಕ್ಷಮತೆಯನ್ನು ಅಳೆಯುವ ಮಾನದಂಡಗಳಾಗಿದ್ದವು. ಯುದ್ಧದಲ್ಲಿ ಯೋಧನೊಬ್ಬ ಏಕಕಾಲದಲ್ಲಿ ಎಷ್ಟು ಎದುರಾಳಿಗಳೊಂದಿಗೆ ಹೋರಾಡಬಲ್ಲನು ಎಂಬುದರ ಆಧಾರದ ಮೇಲೆ ಈ ಶ್ರೇಣಿಗಳನ್ನು ವರ್ಗೀಕರಿಸಲಾಗಿದೆ. ಒಟ್ಟು ಐದು ವಿಭಾಗಗಳಿದ್ದು, ಅವು ಕ್ರಮವಾಗಿ ರಥ, ಅತಿರಥ, ಮಹಾರಥ, ಅತಿಮಹಾರಥ ಮತ್ತು ಮಹಾಮಹಾರಥ.

ಮೊದಲನೆಯದಾಗಿ, ರಥ ಎಂಬ ಪದವು ಏಕಕಾಲದಲ್ಲಿ 5,000 ಜನರೊಂದಿಗೆ ಯುದ್ಧ ಮಾಡುವ ಸಾಮರ್ಥ್ಯವಿರುವ ಯೋಧನನ್ನು ಸೂಚಿಸುತ್ತದೆ. ಶಿಶುಪಾಲ, ಶಕುನಿ, ಸೋಮದತ್ತ ಮತ್ತು ಶಿಖಂಡಿಯಂತಹ ಪಾತ್ರಗಳು ಈ ವರ್ಗಕ್ಕೆ ಸೇರುತ್ತಾರೆ.

ಎರಡನೆಯದು, ಅತಿರಥ. ಈ ಶ್ರೇಣಿಯ ಯೋಧನು ಒಬ್ಬ ರಥನ ಸಾಮರ್ಥ್ಯಕ್ಕಿಂತ 12 ಪಟ್ಟು ಹೆಚ್ಚು ಶಕ್ತಿಯನ್ನು ಹೊಂದಿರುತ್ತಾನೆ. ಅಂದರೆ, ಅತಿರಥನು ಏಕಕಾಲದಲ್ಲಿ 60,000 ಜನರೊಂದಿಗೆ ಯುದ್ಧ ಮಾಡುವ ಸಾಮರ್ಥ್ಯವನ್ನು ಹೊಂದಿರುತ್ತಾನೆ. ಲವ-ಕುಶರು, ದ್ರುಪದರು ಮತ್ತು ದುರ್ಯೋಧನನಂತಹ ಪ್ರಬಲ ಯೋಧರು ಈ ವರ್ಗಕ್ಕೆ ಸೇರುತ್ತಾರೆ.

ಮೂರನೆಯದಾಗಿ, ಮಹಾರಥ. ಇವರು ಅತಿರಥನಿಗಿಂತ 12 ಪಟ್ಟು ಹೆಚ್ಚು ಶಕ್ತಿಶಾಲಿಗಳು. ಒಬ್ಬ ಮಹಾರಥನು ಒಂದೇ ಸಮಯದಲ್ಲಿ 7,20,000 ಜನರೊಂದಿಗೆ ಯುದ್ಧ ಮಾಡುವ ಸಾಮರ್ಥ್ಯವನ್ನು ಹೊಂದಿರುತ್ತಾನೆ. ಸಾಕ್ಷಾತ್ ಭಗವಾನ್ ಶ್ರೀರಾಮ, ಶ್ರೀಕೃಷ್ಣ ಮತ್ತು ಅರ್ಜುನನಂತಹ ದೈವಿಕ ಮತ್ತು ಪರಾಕ್ರಮಿ ವೀರರು ಈ ಮಹಾರಥ ಶ್ರೇಣಿಯಲ್ಲಿ ಗುರುತಿಸಲ್ಪಟ್ಟಿದ್ದಾರೆ.

ಇದನ್ನೂ ಓದಿ: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಗೆ ಡಬಲ್ ಧಮಾಕ!

ನಾಲ್ಕನೆಯದು, ಅತಿಮಹಾರಥ. ಈ ಯೋಧರು ಮಹಾರಥರಿಗಿಂತ 12 ಪಟ್ಟು ಅಧಿಕ ಸಾಮರ್ಥ್ಯಶಾಲಿಗಳು. ಅಂದರೆ, ಅತಿಮಹಾರಥರು ಏಕಕಾಲದಲ್ಲಿ 86,40,000 ಜನರೊಂದಿಗೆ ಹೋರಾಡಬಲ್ಲರು. ಹನುಮ ಮತ್ತು ಪರಶುರಾಮರಂತಹ ಅವತಾರಿಗಳು ಮತ್ತು ಅತಿಮಾನುಷ ಶಕ್ತಿಯುಳ್ಳವರು ಈ ಉನ್ನತ ವರ್ಗಕ್ಕೆ ಸೇರುತ್ತಾರೆ.

ಐದನೆಯ ಶ್ರೇಣಿ ಮಹಾಮಹಾರಥ. ಈ ವರ್ಗವು ಅತ್ಯುನ್ನತ ಯೋಧ ಸಾಮರ್ಥ್ಯವನ್ನು ಸೂಚಿಸುತ್ತದೆ, ಇದು ಅತಿಮಹಾರಥರಿಗಿಂತಲೂ ಹೆಚ್ಚಿನ ಶ್ರೇಷ್ಠತೆಯನ್ನು ಪ್ರತಿನಿಧಿಸುತ್ತದೆ.

ಹೀಗೆ, ಅತಿರಥ ಮಹಾರಥ ಎಂಬ ಪದಗಳು ಕೇವಲ ಸುಮ್ಮನೆ ಬಳಸುವ ಶಬ್ದಗಳಲ್ಲ, ಬದಲಿಗೆ ಅವು ಮಹಾ ಪುರುಷರ ಅಸಾಧಾರಣ ಶಕ್ತಿ ಮತ್ತು ಪರಾಕ್ರಮವನ್ನು ಸೂಚಿಸುವ ಐತಿಹಾಸಿಕ ಮತ್ತು ಪೌರಾಣಿಕ ಪದಗಳಾಗಿವೆ. ಈ ಪದಗಳ ನಿಜವಾದ ಅರ್ಥವನ್ನು ಅರಿತುಕೊಂಡು, ನಾವು ಅವುಗಳನ್ನು ಸಕಾರಾತ್ಮಕವಾಗಿ ಬಳಸಬೇಕು. ಏಕೆಂದರೆ, ನಮ್ಮ ಮಾತುಗಳು ನಮ್ಮ ಜೀವನ, ನಮ್ಮ ಮಕ್ಕಳು ಮತ್ತು ಕುಟುಂಬದ ಮೇಲೆ ಆಳವಾದ ಪ್ರಭಾವ ಬೀರುತ್ತವೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ! – Kannada News | Ali Khamenei Death: Alipur in Karnataka Mini Iran Mourns Iran’s Supreme Leader; Recall His Visit

ಅಯತೊಲ್ಲಾ ಅಲಿ ಖಮೇನಿImage Credit source: TV9 Network

ಚಿಕ್ಕಬಳ್ಳಾಪುರ, ಮಾರ್ಚ್​ 1: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ನಡೆಸಲು ತೀರ್ಮಾನಿಸಿದ್ದಾರೆ. ಅಲಿಪುರ ಗ್ರಾಮವನ್ನು ‘ಮಿನಿ ಇರಾನ್’ ಎಂದೇ ಕರೆಯಲಾಗುತ್ತದೆ. 1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅವರು ಅಲಿಪುರ ಗ್ರಾಮಕ್ಕೆ ಆಗಮಿಸಿದ್ದರು. ಈ ಬಗ್ಗೆ ಸ್ಥಳೀಯರಲ್ಲಿ ನೆನಪು ಇನ್ನೂ ಹಸಿರಾಗಿದೆ. ಗ್ರಾಮದಲ್ಲಿರುವ ಮಸೀದಿಯಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದ್ದನ್ನು ಹಿರಿಯರು ಸ್ಮರಿಸುತ್ತಿದ್ದಾರೆ. ಅಲಿಪುರದ ಸುಮಾರು 20 ಸಾವಿರ ಜನರು ಖಮೇನಿ ಅವರನ್ನು ಧರ್ಮಗುರುವೆಂದು ಗೌರವಿಸುತ್ತಾರೆ.

ಅವರ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಯೂ ಅಲಿಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದೆ. ಹತ್ಯೆ ಸುದ್ದಿಯಿಂದ ದುಃಖಿತರಾದ ಶಿಯಾ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಬಿಕ್ಕಿ ಬಿಕ್ಕಿ ಅತ್ತ ದೃಶ್ಯಗಳು ಕಂಡುಬಂದವು.

ವಿಡಿಯೋ ನೋಡಿ

ಇಂದು ಮಧ್ಯಾಹ್ನ 3 ಗಂಟೆಗೆ ಅಲಿಪುರ ಗ್ರಾಮದಲ್ಲಿ ಬೃಹತ್ ಶೋಕಾಚರಣೆ ಮೆರವಣಿಗೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮದಲ್ಲಿ ಸ್ವಯಂಪ್ರೇರಿತ ಬಂದ್ ಜಾರಿಯಲ್ಲಿದ್ದು, ಜನರು ಶಾಂತಿಯುತವಾಗಿ ಶೋಕಾಚರಣೆ ಮಾಡುತ್ತಿದ್ದಾರೆ.

ಇದಲ್ಲದೆ, ಇರಾನ್‌ನಲ್ಲಿ ಸಿಲುಕಿರುವ ತಮ್ಮ ಬಂಧು ಬಳಗ ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಗ್ರಾಮಸ್ಥರು ಪ್ರಾರ್ಥನೆ ಸಲ್ಲಿಸಿದರು. ಅಯತೊಲ್ಲಾ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಮುದಾಯದವರು ಕಂಬನಿ ಮಿಡಿದರು.

ಅಲಿ ಖಮೇನಿ ಅಲೀಪುರ ಮಸೀದಿಗೆ ಭೇಟಿ ನೀಡಿದ್ದ ಸಂದರ್ಭದ ಸಂಗ್ರಹ ಚಿತ್ರ

ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಇರಾನ್‌ನ ಸರ್ವೋಚ್ಚ ನಾಯಕರಾಗಿ ಸತತ ಅಧಿಕಾರ ಚಲಾಯಿಸಿದ್ದ ಖಮೇನಿ, ಶಿಯಾ ಮುಸ್ಲಿಂ ಸಮುದಾಯದ ಅತ್ಯಂತ ಪ್ರಭಾವಿ ಧರ್ಮಗುರುಗಳಲ್ಲಿ ಒಬ್ಬರಾಗಿದ್ದರು. ಸದ್ಯ ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ಸೇನಾ ದಾಳಿಯಲ್ಲಿ ಹತರಾಗಿದ್ದಾರೆ. ಖಮೇನಿ ಸಾವಿನ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲಿಗೆ ಸಂದೇಶ ಪ್ರಕಟಿಸಿದ್ದಾರೆ. ನಂತರ ಇರಾನ್ ಮಾಧ್ಯಮಗಳೂ ಖಮೇನಿ ಸಾವನ್ನು ದೃಢಪಡಿಸಿದ್ದವು. ಅಂತಿಮವಾಗಿ ಇರಾನ್ ಸರ್ಕಾರ ಕೂಡ ಸಾವನ್ನು ದೃಢಪಡಿಸಿದ್ದು, ಪ್ರತೀಕಾರ ಕೈಗೊಳ್ಳುವುದಾಗಿ ಶಪಥ ಮಾಡಿದೆ.

ಇದನ್ನೂ ಓದಿ: ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆ, ಮುಂದಿನ ನಾಯಕ ಯಾರಾಗಬಹುದು?

ಏತನ್ಮಧ್ಯೆ, ಇರಾನ್ ಮುಂದಿನ ನಾಯಕನ ಆಯ್ಕೆ ಬಗ್ಗೆಯೂ ಚರ್ಚೆಗಳಾಗುತ್ತಿವೆ. ಸಂಭಾವ್ಯ ಉತ್ತರಾಧಿಕಾರಿಗಳಲ್ಲಿ, ಖಮೇನಿ ಎರಡನೇ ಮಗ ಮೊಜ್ತಬಾ ಖಮೇನಿ ಅತ್ಯಂತ ಸಂಭಾವ್ಯ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಹೇಳಿಕೆಗಳು ಇನ್ನಷ್ಟೇ ಪ್ರಕಟವಾಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:24 am, Sun, 1 March 26

Source link

World Civil Defence Day 2026: ವಿಶ್ವ ನಾಗರಿಕ ರಕ್ಷಣಾ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | World Civil Defence Day 2026: What is the purpose behind celebrating World Civil Defence Day?

ವಿಶ್ವ ನಾಗರಿಕ ರಕ್ಷಣಾ ದಿನImage Credit source: vecteezy

ಈ ಪ್ರಪಂಚದಲ್ಲಿ ಹಲವಾರು ಅನಿಶ್ಚಿತ ಘಟನೆಗಳು ಸಂಭವಿಸುತ್ತಿರುತ್ತವೆ. ಕೆಲವೊಮ್ಮೆ ಪ್ರಕೃತಿ ವಿಕೋಪಗಳು ಸಂಭವಿಸಿದರೆ, ಇನ್ನೂ ಕೆಲವೊಮ್ಮೆ ಭಯಾನಕ ಅಪಘಾತ, ಯುದ್ಧಗಳು ಸಂಭವಿಸುತ್ತವೆ. ಇಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿವಿಲ್‌ ಡಿಫೆನ್ಸ್‌ (Civil Defence) ಸಿಬ್ಬಂದಿಗಳು ತಮ್ಮ ಜೀವದ ಬಗ್ಗೆ ಕಿಂಚಿತ್ತೂ ಚಿಂತಿಸದೆ ನಾಗರಿಕ ರಕ್ಷಣೆಗಾಗಿ ಧಾವಿಸುತ್ತಾರೆ. ಇಂತಹ ಧೈರ್ಯಶಾಲಿ ಹಿರೋಗಳ ತ್ಯಾಗ, ಸೇವೆಯನ್ನು ಗೌರವಿಸಲು, ಮತ್ತು ಜನಸಾಮಾನ್ಯರಲ್ಲಿ ಭದ್ರತೆಯ ಭಾವನೆಯನ್ನು ಮೂಡಿಸಲು, ವಿಪತ್ತುಗಳ ಸಂದರ್ಭದಲ್ಲಿ ಆತ್ಮರಕ್ಷಣೆ ಮತ್ತು ಸುರಕ್ಷತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್‌  1 ರಂದು ವಿಶ್ವ ನಾಗರಿಕ ರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿಶ್ವ ನಾಗರಿಕ ರಕ್ಷಣಾ ದಿನದ ಇತಿಹಾಸವೇನು?

ವಿಶ್ವ ನಾಗರಿಕ ರಕ್ಷಣಾ ದಿನವನ್ನು 1990 ರಲ್ಲಿ ಅಂತರರಾಷ್ಟ್ರೀಯ ನಾಗರಿಕ ರಕ್ಷಣಾ ಸಂಸ್ಥೆ (ICDO) ಪ್ರಾರಂಭಿಸಿತು. ಮಾರ್ಚ್ 1, 1972 ರಂದು ಅಂತರಾಷ್ಟ್ರೀಯ ನಾಗರಿಕ ರಕ್ಷಣಾ ಸಂಸ್ಥೆಯಾಗಿ ICDO ಸ್ಥಾಪನೆಯಾದ ದಿನದ ಸ್ಮರಣಾರ್ಥ ಈ ದಿನವನ್ನು ಆಯ್ಕೆ ಮಾಡಲಾಗಿದೆ. ಅಂದಿನಿಂದ ಪ್ರತಿವರ್ಷ ಮಾರ್ಚ್‌ 1 ರಂದು ವಿಶ್ವ ನಾಗರಿಕ ರಕ್ಷಣಾ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ನಾಗರಿಕ ರಕ್ಷಣೆ ಎಂದರೆ ಯುದ್ಧಕಾಲದಲ್ಲಿ ನೆರವು ನೀಡುವುದು ಮಾತ್ರವಲ್ಲ, ಭೂಕಂಪಗಳು, ಪ್ರವಾಹಗಳು, ಬೆಂಕಿ ಅಥವಾ ಸಾಂಕ್ರಾಮಿಕ ರೋಗಗಳು (COVID-19 ನಂತಹ) ನಂತಹ ಬಿಕ್ಕಟ್ಟಿನ ಪರಿಸ್ಥಿತಿಯ ಸಮಯದಲ್ಲಿ ಜನರನ್ನು ರಕ್ಷಿಸುವುದಾಗಿದೆ.

ವಿಶ್ವ ನಾಗರಿಕ ರಕ್ಷಣಾ ದಿನದ ಮಹತ್ವವೇನು?

  • ಈ ದಿನವು ತುರ್ತು ಪರಿಸ್ಥಿತಿಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಜಾಗೃತಿ ಮೂಡಿಸುತ್ತದೆ.
  • ತುರ್ತು ಸಂದರ್ಭಗಳಲ್ಲಿ ನಾಗರಿಕರನ್ನು ರಕ್ಷಿಸುವ ಸಿವಿಲ್‌ ಡಿಫೆನ್ಸ್‌ ಸಿಬ್ಬಂದಿಗಳ ಕಾರ್ಯ, ತ್ಯಾಗವನ್ನು ಹೆಚ್ಚಾಗಿ ಗುರುತಿಸಲಾಗುವುದಿಲ್ಲ, ಆದ್ದರಿಂದ ಅವರ ಕೆಲಸಕ್ಕೆ ಧನ್ಯವಾದ ಹೇಳಲು ಈ ದಿನವನ್ನು ಆಚರಿಸಲಾಗುತ್ತದೆ.
  • ನಾವು ತರಬೇತಿ ಪಡೆದರೆ, ನಮ್ಮ ಸ್ವಂತ ಜೀವಗಳನ್ನು ಮತ್ತು ನಮ್ಮ ನೆರೆಹೊರೆಯವರ ಜೀವಗಳನ್ನು ಉಳಿಸಬಹುದು ಎಂದು ವಿಶ್ವ ನಾಗರಿಕ ರಕ್ಷಣಾ ದಿನವು ನಮಗೆ ಕಲಿಸುತ್ತದೆ.

ಇದನ್ನೂ ಓದಿ: ಫೆಬ್ರವರಿ 28 ರಂದೇ ಏಕೆ ವಿಜ್ಞಾನ ದಿನವನ್ನು ಆಚರಿಸುವುದು? ಇದರ ಹಿನ್ನೆಲೆಯನ್ನು ತಿಳಿಯಿರಿ

ಸಮಾಜಕ್ಕೆ ನಾಗರಿಕ ರಕ್ಷಣಾ ಪಡೆಯ ಕೊಡುಗೆ:

ನಾಗರಿಕ ರಕ್ಷಣಾ ಪಡೆ ಸ್ವಯಂಸೇವಕರು ಪ್ರಪಂಚದಾದ್ಯಂತ ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದಾರೆ. ಪ್ರವಾಹವಾಗಲಿ, ಭೂಕುಸಿತ ಸಂಭವಿಸಲಿ ಅಥವಾ ಯಾವುದೇ ತುರ್ತು ಪರಿಸ್ಥಿತಿ ಸಂಭವಿಸಲಿ, ಈ ಸ್ವಯಂಸೇವಕರು ಸರ್ಕಾರಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತಾರೆ. ವಿಪತ್ತು ಸಂಭವಿಸಿದಾಗ, ಸರ್ಕಾರಿ ಸಹಾಯ ಬರುವ ಮೊದಲು ಸ್ಥಳೀಯ ಸಿವಿಲ್‌ ಡಿಫೆನ್ಸ್‌ ಸಿಬ್ಬಂದಿಗಳು ನಾಗರಿಕರ ರಕ್ಷಣೆಗೆ ಪ್ರತಿಕ್ರಿಯಿಸುತ್ತಾರೆ. ಕೊರೊನಾ ಅವಧಿಯಲ್ಲಿ, ಇಡೀ ಜಗತ್ತೇ ಲಾಕ್‌ಡೌನ್ ಆದಾಗ, ನಾಗರಿಕ ರಕ್ಷಣಾ ಪಡೆ ಸಿಬ್ಬಂದಿ ಬೀದಿಗಿಳಿದು ಆಹಾರ ವಿತರಣೆ, ನೈರ್ಮಲ್ಯೀಕರಣ ಮತ್ತು ರೋಗಿಗಳಿಗೆ ಸಹಾಯ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇಂದು ಇಂತಹ ಸ್ವಯಂ ಸೇವಕರನಿಸ್ವಾರ್ಥ ಸೇವೆಗೆ ನಮನ ಸಲ್ಲಿಸುವ ದಿನ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link