All posts by nagaraj11081993

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ! – Kannada News | Bangalore Air Pollution Crisis: Bengaluru Air quality is dropping fast, Better AQI elsewhere

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ!

ಬೆಂಗಳೂರು, ಮಾರ್ಚ್​ 01: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರನ್ನು ಹೊರತುಪಡಿಸಿ ಉಳಿದೆಡೆ ಇಂದು ವಾಯು ಗುಣಮಟ್ಟದಲ್ಲಿ ಸುಧಾರಣೆ ಬಂದಂತಿದ್ದು, ಹಲವು ಜಿಲ್ಲೆಗಳ AQI 100ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 155ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಅದೇ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಹಲವೆಡೆಯ ವಾಯು ಗುಣಮಟ್ಟ 100ಕ್ಕಿಂತ ಕಡಿಮೆಯಿದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –155
  • ಮಂಗಳೂರು-100
  • ಮೈಸೂರು –151
  • ಬೆಳಗಾವಿ – 90
  • ಕಲಬುರ್ಗಿ-93
  • ಶಿವಮೊಗ್ಗ – 80
  • ಬಳ್ಳಾರಿ – 110
  • ಹುಬ್ಬಳ್ಳಿ- 94
  • ಉಡುಪಿ –87
  • ವಿಜಯಪುರ –119

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಫರ್ಹಾನ್ ಪರಾಕ್ರಮಕ್ಕೆ ವಿಶ್ವ ದಾಖಲೆಯೇ ಉಡೀಸ್ – Kannada News | Sahibzada Farhan Creates New World Record in T20 World Cup 2026

ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್​ಝಾದ ಫರ್ಹಾನ್ (Sahibzada Farhan) ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್​ಗಳ ಸುರಿಮಳೆಗೈಯ್ಯುವ ಮೂಲಕ. ಈ ಸಿಕ್ಸರ್​ಗಳೊಂದಿಗೆ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

Source link

ಚಿಕ್ಕಮಗಳೂರು: ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್, ಜನರು ಕಂಗಾಲು – Kannada News | Wild Elephant Herd Creates Panic in Chikkamagaluru’s Gonibeedu Hobli; Over 30 Elephants Camp Near Villages

ಚಿಕ್ಕಮಗಳೂರು, ಮಾರ್ಚ್ 1: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಮಾರ್ಗವಾಗಿ ಬಂದಿರುವ ಈ ಹಿಂಡು ಕಳೆದ ನಾಲ್ಕು ದಿನಗಳಿಂದ ವಿವಿಧ ಗ್ರಾಮಗಳ ಸುತ್ತಮುತ್ತ ಬೀಡುಬಿಟ್ಟಿದೆ. ಕಸ್ಕೆಬೈಲು ಗ್ರಾಮದ ಸಮೀಪ ರಸ್ತೆಯಲ್ಲೇ ಕಾಡಾನೆಗಳು ತಂಗಿರುವುದರಿಂದ ವಾಹನ ಸವಾರರು ಭಯಭೀತರಾಗಿದ್ದಾರೆ. ಅಲ್ಲದೆ ಕಾಫಿ ತೋಟಗಳಲ್ಲಿಯೂ ಕಾಡಾನೆಗಳ ಸಂಚಾರ ಕಂಡುಬಂದಿದ್ದು, ಕಾರ್ಮಿಕರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಬೀಟಮ್ಮ, ಭುವನೇಶ್ವರಿ ಹಾಗೂ ಭೀಮಾ ಗ್ಯಾಂಗ್ ಎಂದು ಗುರುತಿಸಲ್ಪಟ್ಟಿರುವ ಈ ಕಾಡಾನೆಗಳ ಹಿಂಡು ಕಸ್ಕೆಬೈಲು, ಕಲ್ಲುಗುಡ್ಡ, ಗಡಿ ಚೌಕ, ಕಮ್ಮರಗೋಡು ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಓಡಾಟ ನಡೆಸುತ್ತಿವೆ. ಹಿಂಡಿನಿಂದ ಬೇರ್ಪಟ್ಟ ಕೆಲವು ಆನೆಗಳು ಅಲೆದಾಡುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಮೂಡಿಗೆರೆ ಅರಣ್ಯ ವಲಯ ಅಧಿಕಾರಿಗಳು ಸ್ಥಳದಲ್ಲೇ ಶಿಬಿರ ಹೂಡಿ ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ. ಗ್ರಾಮಸ್ಥರು ಅನಾವಶ್ಯಕವಾಗಿ ಹೊರಗೆ ಸಂಚರಿಸಬಾರದು, ರಾತ್ರಿ ವೇಳೆಯಲ್ಲಿ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇಶಾದ್ಯಂತ ಅನ್ನದಾನ ಮಾಡಿ, ಸಿಹಿ ಹಂಚಲಿರುವ ರಶ್ಮಿಕಾ, ವಿಜಯ್ ದೇವರಕೊಂಡ – Kannada News | Newlywed Vijay Devarakonda and Rashmika Mandanna to distribute sweets across India

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಕುಟುಂಬದ ಸದಸ್ಯರು ಮತ್ತು ಕೆಲವೇ ಕೆಲವು ಆಪ್ತರು ಈ ಮದುವೆಗೆ ಸಾಕ್ಷಿಯಾದರು. ಅಭಿಮಾನಿಗಳನ್ನು ಆಹ್ವಾನಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ ಕೂಡ ತಮ್ಮ ಮದುವೆಯ ಖುಷಿಯನ್ನು ಫ್ಯಾನ್ಸ್ ಜೊತೆ ಹಂಚಿಕೊಳ್ಳಲು ಈ ಜೋಡಿ ನಿರ್ಧರಿಸಿದೆ. ದೇಶಾದ್ಯಂತ ಇರುವ ಅಭಿಮಾನಿಗಳಿಗೆ ಸಿಹಿ ಹಂಚಿ, ವಿವಿಧ ಸ್ಥಳಗಳಲ್ಲಿ ಅನ್ನದಾನ ಮಾಡಲು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Devarakonda) ಮುಂದಾಗಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಈ ದೇಶದ ಸುಂದರವಾದ ಜನರೇ.. ನಮ್ಮ ಈ ಪ್ರೀತಿ ಮತ್ತು ಪಯಣದಲ್ಲಿ ನೀವು ಯಾವಾಗಲೂ ಜೊತೆಯಾಗಿದ್ದೀರಿ. ನಿಮ್ಮೆಲ್ಲರ ಜೊತೆ ನಮ್ಮ ಮದುವೆಯನ್ನು ಸಂಭ್ರಮಿಸುವುದು ನಮಗೆ ಖುಷಿ ನೀಡುತ್ತದೆ. ಸಿಹಿ ಮತ್ತು ಆಹಾರದ ಜೊತೆ ಭಾರತ ಎಲ್ಲವನ್ನೂ ಸಂಭ್ರಮಿಸುತ್ತದೆ. ಹಾಗಾಗಿ ಮಾರ್ಚ್ 1ರಂದು ನಾವು ಮಿಠಾಯಿ ತುಂಬಿದ ಟ್ರಕ್​ಗಳನ್ನು ದೇಶಾದ್ಯಂತ ಕಳಿಸುತ್ತಿದ್ದೇನೆ’ ಎಂದು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಬರೆದುಕೊಂಡಿದ್ದಾರೆ.

‘ದೇಶದ ವಿವಿಧ ದೇವಸ್ಥಾನದಲ್ಲಿ ನಾವು ಅನ್ನದಾನ ಮಾಡಲು ದೇಣಿಗೆ ನೀಡುತ್ತಿದ್ದೇವೆ. ನಿಮ್ಮೆಲ್ಲರ ಆಶೀರ್ವಾದ ಬಯಸುತ್ತಿದ್ದೇನೆ’ ಎಂದು ಪೋಸ್ಟ್ ಮಾಡಿರುವ ಅವರು, ಯಾವ ದೇವಸ್ಥಾನಗಳಲ್ಲಿ ಅನ್ನದಾನ ನಡೆಯಲಿದೆ ಎಂಬ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಬೆಂಗಳೂರಿನ ಶಿವೋಹಂ ದೇವಸ್ಥಾನ, ಕೊಡಗಿನ ಪಾದಿ ಇಗ್ಗುತ್ತಪ್ಪ ದೇವಸ್ಥಾನ, ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ, ಬೆಂಗಳೂರಿನ ರಾಧಾಕೃಷ್ಣ ದೇವಸ್ಥಾನದಲ್ಲಿ ಅನ್ನದಾನ ಮಾಡಲಾಗುವುದು.

ಕರ್ನಾಟಕದ ಮೈಸೂರು, ಕೊಡಗು ಮತ್ತು ಬೆಂಗಳೂರಿನಲ್ಲಿ ಸಿಹಿ ವಿತರಣೆ ಮಾಡಲಾಗುವುದು. ಅದೇ ರೀತಿ ಬೇರೆ ಬೇರೆ ರಾಜ್ಯಗಳ ಕೆಲವು ದೇವಸ್ಥಾನಗಳಲ್ಲಿ ಅನ್ನದಾನ ಮತ್ತು ಪ್ರಮುಖ ನಗರಗಳಲ್ಲಿ ಸಿಹಿ ಹಂಚಲಾಗುವುದು ಎಂದು ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಮಾಹಿತಿ ನೀಡಿದ್ದಾರೆ. ಈ ಜೋಡಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ವಿಜಯ್ ದೇವರಕೊಂಡ ತಾಳಿ ಕಟ್ಟುವಾಗ ರಶ್ಮಿಕಾ ಮಂದಣ್ಣ ಆನಂದ ಭಾಷ್ಪ

‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ನಡುವೆ ಪ್ರೀತಿ ಚಿಗುರಿತು. ಅದನ್ನು ಅವರು ಗುಟ್ಟಾಗಿ ಇಟ್ಟಿದ್ದರು. ಆದರೂ ಗಾಸಿಪ್ ಹಬ್ಬಿತ್ತು. ಈಗ ಅವರ ಪ್ರೀತಿಗೆ ಮದುವೆಯ ಮುದ್ರೆ ಬಿದ್ದಿದೆ. ಜೀವನದ ಹೊಸ ಅಧ್ಯಾಯವನ್ನು ಅವರು ಆರಂಭಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Ali Khamenei Death: ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆ, ಮುಂದಿನ ನಾಯಕ ಯಾರಾಗಬಹುದು? – Kannada News | Who Will Succeed Ali Khamenei Inside Iran’s Supreme Leader Selection Process

ಇರಾನ್, ಮಾರ್ಚ್​ 01: ಇರಾನ್​​ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(86) ಇಸ್ರೇಲ್-ಅಮೆರಿಕ(America) ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಘೋಷಿಸಿದ್ದಾರೆ. ಒಂದೊಮ್ಮೆ ಅವರ ಮಾತು ನಿಜವಾದಲ್ಲಿ ಮುಂದೆ ಇರಾನ್​​ ಅನ್ನು ಮುನ್ನಡೆಸುವ ನಾಯಕ ಯಾರು ಎನ್ನುವ ಪ್ರಶ್ನೆ ಮೂಡುತ್ತದೆ. ಕೆಲವು ದಿನಗಳ ಹಿಂದಷ್ಟೇ ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್​ ಎಚ್ಚರಿಕೆಯೊಂದನ್ನು ನೀಡಿದ್ದರು. ಅದರಲ್ಲಿ ಇರಾಕಿನ ಮಾಜಿ ನಾಯಕ ಸದ್ದಾಂ ಹುಸೇನ್​​ರಂತೆಯೇ ಅದೇ ಗತಿಯನ್ನು ಎದುರಿಸಬಹುದು ಎಂದು ಹೇಳಿದ್ದರು.ಇತ್ತೀಚಿನ ದಿನಗಳಲ್ಲಿ ಖಮೇನಿ ನಂತರ ಇರಾನ್‌ನ ಭವಿಷ್ಯದ ಬಗ್ಗೆ ಚರ್ಚೆ ತೀವ್ರಗೊಂಡಿದೆ.

ಖಮೇನಿ ನಂತರ ಇರಾನ್ ಅನ್ನು ಯಾರು ಮುನ್ನಡೆಸುತ್ತಾರೆ?

ಸಂಭಾವ್ಯ ಉತ್ತರಾಧಿಕಾರಿಗಳಲ್ಲಿ, ಸುಪ್ರೀಂ ಲೀಡರ್ ಅವರ ಎರಡನೇ ಮಗ ಮೊಜ್ತಬಾ ಖಮೇನಿ ಅವರು ಅತ್ಯಂತ ಸಂಭಾವ್ಯ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ.1969 ರಲ್ಲಿ ಜನಿಸಿದ ಮೊಜ್ತಬಾ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಮತ್ತು ಇರಾನ್‌ನ ಕ್ಲೆರಿಕಲ್ ಸ್ಥಾಪನೆ ಎರಡರೊಂದಿಗೂ ಆಳವಾದ ಸಂಬಂಧವನ್ನು ಹೊಂದಿದ್ದಾರೆ.
ಇರಾನ್-ಇರಾಕ್ ಯುದ್ಧದ ಅಂತಿಮ ಹಂತಗಳಲ್ಲಿ ಸೇವೆ ಸಲ್ಲಿಸಿದರು ಮತ್ತು ಈಗ ತೆರೆಮರೆಯಲ್ಲಿ ಬಲವಾದ ಪ್ರಭಾವ ಹೊಂದಿರುವ ಮಧ್ಯಮ ಶ್ರೇಣಿಯ ಧರ್ಮಗುರುವಾಗಿದ್ದಾರೆ.

ಮತ್ತೊಂದು ಪ್ರಮುಖ ಹೆಸರು ಅಲಿರೆಜಾ ಅರಾಫಿ, ಇವರು ಖಮೇನಿಯ ವಿಶ್ವಾಸಾರ್ಹ ಸಹಾಯಕರು. ಅರಾಫಿ ತಜ್ಞರ ಸಭೆಯ ಉಪಾಧ್ಯಕ್ಷರು, ಗಾರ್ಡಿಯನ್ ಕೌನ್ಸಿಲ್ ಸದಸ್ಯರು ಮತ್ತು ಕೋಮ್‌ನಲ್ಲಿ ಶುಕ್ರವಾರದ ಪ್ರಾರ್ಥನೆಯ ನಾಯಕ ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳನ್ನು ಹೊಂದಿದ್ದಾರೆ.
ಸುಪ್ರೀಂ ಲೀಡರ್ ಕಚೇರಿಯಲ್ಲಿ ರಾಜಕೀಯ ಭದ್ರತಾ ವಿಷಯಗಳನ್ನು ನೋಡಿಕೊಳ್ಳುವ ಅಲಿ ಅಸ್ಗರ್ ಹೆಜಾಜಿ ಕೂಡ ಈ ಪಟ್ಟಿಯಲ್ಲಿದ್ದಾರೆ. ಹೆಜಾಜಿ ಇರಾನ್‌ನ ಗುಪ್ತಚರ ವ್ಯವಸ್ಥೆಯಲ್ಲಿ ದೀರ್ಘಕಾಲ ತೊಡಗಿಸಿಕೊಂಡಿದ್ದಾರೆ ಮತ್ತು ಕಾರ್ಯತಂತ್ರದ ನಿರ್ಧಾರ ತೆಗೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.

ಮತ್ತಷ್ಟು ಓದಿ:

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ

ನ್ಯಾಯಾಂಗ ಮತ್ತು ಗುಪ್ತಚರ ವಲಯಗಳಲ್ಲಿ ದಶಕಗಳನ್ನು ಕಳೆದಿರುವ ಘೋಲಮ್ ಹೊಸೇನ್ ಮೊಹ್ಸೇನಿ ಎಜೆಯಿ ಮತ್ತೊಬ್ಬ ಸಂಭಾವ್ಯ ಉತ್ತರಾಧಿಕಾರಿ. ಅವರು ಈ ಹಿಂದೆ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಅವರ ಅಡಿಯಲ್ಲಿ ಇರಾನ್‌ನ ಗುಪ್ತಚರ ಸಚಿವರಾಗಿ ಸೇವೆ ಸಲ್ಲಿಸಿದ್ದರು ಮತ್ತು ಅಟಾರ್ನಿ ಜನರಲ್ ಮತ್ತು ನ್ಯಾಯಾಂಗ ವಕ್ತಾರರು ಸೇರಿದಂತೆ ಹಲವಾರು ಹಿರಿಯ ಕಾನೂನು ಹುದ್ದೆಗಳನ್ನು ಅಲಂಕರಿಸಿದ್ದಾರೆ.

ಇತರ ಸಂಭಾವ್ಯ ಸ್ಪರ್ಧಿಗಳಲ್ಲಿ ಖಮೇನಿಯವರ ಕಚೇರಿಯ ದೀರ್ಘಕಾಲೀನ ಮುಖ್ಯಸ್ಥ ಮೊಹಮ್ಮದ್ ಗೋಲ್ಪಾಯೆಗಾನಿ, ಮಾಜಿ ವಿದೇಶಾಂಗ ಸಚಿವರಾದ ಅಲಿ ಅಕ್ಬರ್ ವೆಲಾಯತಿ ಮತ್ತು ಕಮಲ್ ಖರಾಜಿ ಮತ್ತು ಮಾಜಿ ಸಂಸತ್ತಿನ ಸ್ಪೀಕರ್ ಅಲಿ ಲಾರಿಜಾನಿ ಸೇರಿದ್ದಾರೆ. ಎ

1979 ರ ಇಸ್ಲಾಮಿಕ್ ಕ್ರಾಂತಿ ಮತ್ತು ರಾಜಕೀಯ ಪಯಣ
ಅಲಿ ಖಮೇನಿಯವರ ರಾಜಕೀಯ ಜೀವನವು 1979 ರಲ್ಲಿ ಇರಾನ್‌ನಲ್ಲಿ ನಡೆದ ಐತಿಹಾಸಿಕ ಇಸ್ಲಾಮಿಕ್ ಕ್ರಾಂತಿಯೊಂದಿಗೆ ಪ್ರಾರಂಭವಾಯಿತು. ಅಯತೊಲ್ಲಾ ರುಹೊಲ್ಲಾ ಖಮೇನಿ ನೇತೃತ್ವದಲ್ಲಿ ಅಮೆರಿಕ ಬೆಂಬಲಿತ ಇರಾನ್‌ನ ಷಾ ಪದಚ್ಯುತಗೊಂಡಾಗ, ಅಲಿ ಖಮೇನಿ ಅವರ ಅತ್ಯಂತ ವಿಶ್ವಾಸಾರ್ಹ ಲೆಫ್ಟಿನೆಂಟ್‌ಗಳಲ್ಲಿ ಒಬ್ಬರಾಗಿದ್ದರು.

1981 ರಲ್ಲಿ, ಅವರು ಬಾಂಬ್ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದರು. ನಂತರ ಅವರು 1981 ರಿಂದ 1989 ರವರೆಗೆ ಇರಾನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. 1989 ರಲ್ಲಿ ಅಯತೊಲ್ಲಾ ರುಹೊಲ್ಲಾ ಖಮೇನಿಯವರ ಮರಣದ ನಂತರ, ಖಮೇನಿ ಅಧಿಕಾರ ವಹಿಸಿಕೊಂಡರು ಮತ್ತು ಇರಾನ್‌ನ ಸರ್ವೋಚ್ಚ ನಾಯಕರಾಗಿ ಆಯ್ಕೆಯಾದರು.

1989ರಿಂದ 2026 ರವರೆಗೆ ಖಮೇನಿಯ ಸಂಪೂರ್ಣ ಆಳ್ವಿಕೆ
1989 ರಲ್ಲಿ ಅಲಿ ಖಮೇನಿ ಸರ್ವೋಚ್ಚ ನಾಯಕರಾದಾಗಿನಿಂದ 2026 ರವರೆಗೆ, ಅವರ ಒಪ್ಪಿಗೆಯಿಲ್ಲದೆ ಇರಾನ್‌ನಲ್ಲಿ ಒಂದು ಎಲೆಯೂ ಅಲುಗಾಡಲಿಲ್ಲ. ಅವರ 37 ವರ್ಷಗಳ ಆಳ್ವಿಕೆಯಲ್ಲಿ, ಅಲಿ ಖಮೇನಿ ಇರಾನ್‌ನ ಮಿಲಿಟರಿ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗೆ ಅಪಾರ ಶಕ್ತಿಯನ್ನು ನೀಡಿದರು.

ನೇರ ಯುದ್ಧ ಮಾಡುವ ಬದಲು, ಮಧ್ಯಪ್ರಾಚ್ಯದಲ್ಲಿ ತನ್ನ ಪ್ರಭಾವವನ್ನು ವಿಸ್ತರಿಸಲು ಅವನು ಪ್ರಾಕ್ಸಿ ಪಡೆಗಳ ಜಾಲವನ್ನು ಸ್ಥಾಪಿಸಿದನು. ಅಲಿ ಖಮೇನಿ ಗಾಜಾದಲ್ಲಿ ಹಮಾಸ್, ಯೆಮನ್‌ನಲ್ಲಿ ಹೌತಿಗಳು ಮತ್ತು ಲೆಬನಾನ್‌ನಲ್ಲಿ ಹೆಜ್ಬೊಲ್ಲಾಗೆ ಹಣಕಾಸು ಮತ್ತು ಶಸ್ತ್ರಾಸ್ತ್ರಗಳನ್ನು ಒದಗಿಸಿದರು, ಈ ಪ್ರದೇಶದಾದ್ಯಂತ ಆಳವಾದ ಸಂಬಂಧಗಳನ್ನು ಸ್ಥಾಪಿಸಿದ್ದರು.

ಅಮೆರಿಕದೊಂದಿಗಿನ ಅಲಿ ಖಮೇನಿಯ ಪೈಪೋಟಿ
ಅಲಿ ಖಮೇನಿಯವರ ಇಡೀ ರಾಜಕೀಯ ಕಾರ್ಯಸೂಚಿಯು ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಅವರ ವಿರೋಧದ ಸುತ್ತ ಸುತ್ತುತ್ತಿತ್ತು. ಅವರು ಅಮೆರಿಕವನ್ನು “ಮಹಾ ಶೈತಾನ” ಎಂದು ಕರೆದರು. ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಪಾಶ್ಚಿಮಾತ್ಯ ದೇಶಗಳೊಂದಿಗೆ ಅಲಿ ಖಮೇನಿಯವರ ಸಂಘರ್ಷವು ತೀವ್ರ ಅಂತಾರಾಷ್ಟ್ರೀಯ ಆರ್ಥಿಕ ನಿರ್ಬಂಧಗಳಿಗೆ ಕಾರಣವಾಯಿತು ಮತ್ತು ಇರಾನ್‌ನ ಆರ್ಥಿಕತೆಯನ್ನು ದುರ್ಬಲಗೊಳಿಸಿತು. 2020 ರಲ್ಲಿ ಅಮೆರಿಕದ ಡ್ರೋನ್ ದಾಳಿಯಲ್ಲಿ ಅವರ ಅತ್ಯಂತ ಶಕ್ತಿಶಾಲಿ ಜನರಲ್ ಖಾಸೆಮ್ ಸೊಲೈಮಾನಿಯ ಹತ್ಯೆಯು ಈ ದ್ವೇಷವನ್ನು ಮತ್ತಷ್ಟು ಹೆಚ್ಚಿಸಿತು.

ಇಸ್ರೇಲ್ ಅನ್ನು ವಿಶ್ವ ಭೂಪಟದಿಂದಲೇ ಅಳಿಸಿಹಾಕುವುದಾಗಿ ಮತ್ತು ಅಮೆರಿಕವನ್ನು ಮಧ್ಯಪ್ರಾಚ್ಯದಿಂದ ಓಡಿಸುವುದಾಗಿ ಸರ್ವೋಚ್ಚ ನಾಯಕ ಖಮೇನಿ ಪ್ರತಿಜ್ಞೆ ಮಾಡಿದ್ದರು. ಈ ದ್ವೇಷವು ಅಂತಿಮವಾಗಿ ಫೆಬ್ರವರಿ 28, 2026 ರಂದು ಇರಾನ್ ಮೇಲೆ ಬೃಹತ್ ವಾಯುದಾಳಿಗೆ ಕಾರಣವಾಯಿತು.

ಖಮೇನಿ ಕುಟುಂಬದಲ್ಲಿ ಯಾರ್ಯಾರಿದ್ದಾರೆ
ಖಮೇನಿಯವರ ಪುತ್ರರು ಮುಸ್ತಫಾ, ಮೊಜ್ತಬಾ, ಮಸೌದ್ ಮತ್ತು ಮೈಸಮ್, ಆದರೆ ಅವರ ಪುತ್ರಿಯರು ಬೋಶ್ರಾ ಮತ್ತು ಹೋಡಾ. ಮುಸ್ತಫಾ ತಮ್ಮ ತಂದೆ ಖಮೇನಿ ಅವರೊಂದಿಗೆ ವಾಸಿಸುತ್ತಿದ್ದರೆ, ಮೊಜ್ತಬಾ ಮತ್ತು ಮಸೌದ್ ಉದ್ಯಮಿಗಳು. ಅವರ ಪುತ್ರಿಯರು ಹೋಡಾ ಫ್ಯಾಷನ್ ಡಿಸೈನರ್‌ಗಳಾಗಿದ್ದು, ಟೆಹ್ರಾನ್‌ನಲ್ಲಿ ಹೋಮ್ ಸಲೂನ್ ನಡೆಸುತ್ತಿದ್ದಾರೆ. ಖಮೇನಿಯವರ ಹಿರಿಯ ಮಗಳು ಬೋಶ್ರಾ ಗೃಹಿಣಿಯಾಗಿದ್ದು, ಖಮೇನಿಯವರ ಮುಖ್ಯಸ್ಥ ಮೊಹಮ್ಮದ್ ಗೋಲ್ಪಾಯೆಗಾನಿಯವರ ಮಗನನ್ನು ವಿವಾಹವಾಗಿದ್ದಾರೆ.

ಖಮೇನಿಯವರ ಕುಟುಂಬದ ಆಸ್ತಿ ಎಷ್ಟು?
ಖಮೇನಿ ಮತ್ತು ಅವರ ಕುಟುಂಬವು ಇರಾನ್‌ನಲ್ಲಿ ಶತಕೋಟಿ ಡಾಲರ್‌ಗಳಷ್ಟು ಸಂಪತ್ತನ್ನು ಸಂಗ್ರಹಿಸಿದೆ, ಆದರೆ ಇರಾನ್‌ನ ಹೆಚ್ಚಿನ ಕಾರ್ಮಿಕ ವರ್ಗವು ಬಡತನದಲ್ಲಿ ವಾಸಿಸುತ್ತಿದೆ. ಎನ್‌ಸಿಆರ್ ಇರಾನ್‌ನ ವರದಿಯ ಪ್ರಕಾರ, ಖಮೇನಿಯವರ ವೈಯಕ್ತಿಕ ಸಂಪತ್ತಿನ ಬಹುಪಾಲು ಅವರ ಪುತ್ರರು ಮತ್ತು ಪುತ್ರಿಯರ ಬಳಿ ಇದೆ. ಈ ಹಣವು ಯುನೈಟೆಡ್ ಕಿಂಗ್‌ಡಮ್, ಸಿರಿಯಾ ಮತ್ತು ವೆನೆಜುವೆಲಾದ ಬ್ಯಾಂಕುಗಳಲ್ಲಿದೆ ಎಂದು ವರದಿ ಹೇಳುತ್ತದೆ.

ಮೊಜ್ತಾಬಾ ಬಳಿ ತುಂಬಾ ಸಂಪತ್ತಿದೆ
ಖಮೇನಿಯವರ ಎರಡನೇ ಹಿರಿಯ ಮಗ ಮೊಜ್ತಬಾ ಖಮೇನಿ 3 ಬಿಲಿಯನ್‌ ಡಾಲರ್​​ಗಿಂತಲೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್, ಸಿರಿಯಾ, ವೆನೆಜುವೆಲಾ ಮತ್ತು ಹಲವಾರು ಆಫ್ರಿಕನ್ ದೇಶಗಳಲ್ಲಿನ ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿದ್ದಾರೆ. ಮೊಜ್ತಬಾದಲ್ಲಿ300 ಮಿಲಿಯನ್ ಡಾಲರ್ ಚಿನ್ನ ಮತ್ತು ವಜ್ರಗಳಿವೆ ಎಂದು ಅಂದಾಜಿಸಲಾಗಿದೆ. ಮೊಜ್ತಬಾ ಅತಿದೊಡ್ಡ ಶಾಪಿಂಗ್ ಸೆಂಟರ್, ಅತಿದೊಡ್ಡ ಕಟ್ಟಡ ಯೋಜನೆ, ತುರ್ತು ಪ್ರಯಾಣಕ್ಕಾಗಿ ಖಾಸಗಿ ವಿಮಾನ ಮತ್ತು ಹೆಲಿಕಾಪ್ಟರ್ ಮತ್ತು ಅತ್ಯಾಧುನಿಕ ಮರ್ಸಿಡಿಸ್-ಬೆನ್ಜ್ ವಾಹನಗಳನ್ನು ಹೊಂದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Horoscope Today 1st March​: ಇಂದು ಈ ರಾಶಿಯವರು ಅನವಶ್ಯಕ ದುಂದು ವೆಚ್ಚಗಳನ್ನು ನಿಯಂತ್ರಿಸಬೇಕು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ತ್ರಯೋದಶಿ ಮತ್ತು ಪುಷ್ಯ ನಕ್ಷತ್ರವನ್ನು ಒಳಗೊಂಡಿದೆ. ಶುಭ ಯೋಗ, ಕೌಲವ ಕರಣಗಳಿರುವ ಈ ದಿನದ ರಾಹುಕಾಲವು ಸಾಯಂಕಾಲ 4:08 ರಿಂದ 6:28 ರ ತನಕ ಇರುತ್ತದೆ. ಬೆಳಗಿನ ಜಾವ 11:03 ರಿಂದ 12:32 ರ ತನಕ ಸಂಕಲ್ಪ ಕಾಲವಿರುತ್ತದೆ.

ಮಾರ್ಚ್ ತಿಂಗಳ ಪ್ರಥಮ ದಿನವಾದ ಇಂದು ಯುಗಾದಿಯಿಂದ ಹೊಸ ವರ್ಷದ ಪ್ರಾರಂಭದ ಸೂಚನೆಯನ್ನು ನೀಡುತ್ತದೆ. ಈ ಮಾಸದಲ್ಲಿ ಚಂದ್ರಗ್ರಹಣವೂ ಸಂಭವಿಸಲಿದ್ದು, ಎಲ್ಲರಿಗೂ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸಲಿದ್ದಾರೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ – Kannada News | T20 World cup 2026 Semi Final Schedule

T20 World Cup 2026: ಟಿ20 ವಿಶ್ವಕಪ್​ 2026 ರ ಸೂಪರ್-8 ಸುತ್ತಿನ ಪಂದ್ಯಗಳು ಇಂದು ಪೂರ್ಣಗೊಳ್ಳಲಿದೆ. ದ್ವಿತೀಯ ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಈ ಬಾರಿ ಸೆಮಿಫೈನಲ್ ಆಡಲಿರುವ 4 ತಂಡಗಳಾವುವು ಎಂಬುದು ಖಚಿತವಾಗಲಿದೆ. ಅಂದರೆ ಈಗಾಗಲೇ ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ಸೆಮಿಫೈನಲ್​ಗೇರಿದ್ದು, ನಾಲ್ಕನೇ ತಂಡವಾಗಿ ಭಾರತ ಅಥವಾ ವೆಸ್ಟ್ ಇಂಡೀಸ್​ ನಾಕೌಟ್ ಹಂತಕ್ಕೇರಲಿದೆ.

ಅತ್ತ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಸೆಮಿಫೈನಲ್ ವೇಳಾಪಟ್ಟಿ ಕೂಡ ಪ್ರಕಟವಾಗಿದೆ. ಅಂದರೆ ಪಾಕ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದ್ದರೆ ಮೊದಲ ಸೆಮಿಫೈನಲ್ ಪಂದ್ಯವನ್ನು ಶ್ರೀಲಂಕಾದಲ್ಲಿ ಆಯೋಜಿಸಬೇಕಿತ್ತು.

ಇದೀಗ ಪಾಕ್ ಪಡೆ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಹಿನ್ನಲೆ ನಾಕೌಟ್ ಪಂದ್ಯಗಳು ಭಾರತದಲ್ಲೇ ನಡೆಯುವುದು ಖಚಿತವಾಗಿದೆ. ಅದರಂತೆ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಎಲ್ಲಿ ನಡೆಯಲಿದೆ ಎಂಬುದನ್ನು ಐಸಿಸಿ ಅಧಿಕೃತಗೊಳಿಸಿದೆ.

ಯಾವ ಸ್ಟೇಡಿಯಂಗಳಲ್ಲಿ ಸೆಮಿ ಕದನ?

  • ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯವಹಿಸಲಿದೆ.
  • ದ್ವಿತೀಯ ಸೆಮಿಫೈನಲ್ ಪಂದ್ಯವನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲಾಗುತ್ತದೆ.

ಫೈನಲ್ ಫೈಟ್ ಎಲ್ಲಿ?

ಮಾರ್ಚ್ 8 ರಂದು ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಸೆಮಿಫೈನಲ್ ವೇಳಾಪಟ್ಟಿ:

  • ಮಾರ್ಚ್ 4, ಮೊದಲ ಸೆಮಿಫೈನಲ್: ಸೌತ್ ಆಫ್ರಿಕಾ vs ನ್ಯೂಝಿಲೆಂಡ್ (ಈಡನ್ ಗಾರ್ಡನ್ಸ್ ಮೈದಾನ, ಕೊಲ್ಕತ್ತಾ)
  • ಮಾರ್ಚ್ 5, ದ್ವಿತೀಯ ಸೆಮಿಫೈನಲ್: ಇಂಗ್ಲೆಂಡ್ vs ಭಾರತ ಅಥವಾ ವೆಸ್ಟ್ ಇಂಡೀಸ್ (ವಾಂಖೆಡೆ ಸ್ಟೇಡಿಯಂ, ಮುಂಬೈ)

ಎಷ್ಟು ಗಂಟೆಗೆ ಮ್ಯಾಚ್ ಶುರು?

ಟಿ20 ವಿಶ್ವಕಪ್ ಎರಡು ಸೆಮಿಫೈನಲ್ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಶುರುವಾಗಲಿದೆ.

ಇದನ್ನೂ ಓದಿ: T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ

ಫೈನಲ್ ಪಂದ್ಯ ಯಾವಾಗ?

ಟಿ20 ವಿಶ್ವಕಪ್​ ಟೂರ್ನಿಯ ಮಹಾ ಫೈನಲ್ ಪಂದ್ಯವು ಮಾರ್ಚ್ 8, 2026 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕೂಡ ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಆರಂಭವಾಗಲಿದೆ.

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದು ಒಣ ಹವೆಯ ವಾತಾವರಣ – Kannada News | Bengaluru temperature: Heat wave alert in Bengaluru, clear sky in Bengaluru

ಬೆಂಗಳೂರಿನಲ್ಲಿ ಇಂದು ಒಣ ಹವೆಯ ವಾತಾವರಣ

ಬೆಂಗಳೂರು, ಮಾರ್ಚ್​ 01: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಮಾರ್ಚ್​ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಾಟ್ಸ್​ಆ್ಯಪ್ ಬಳಸೋ ಎಲ್ಲರೂ ತಿಳಿಯಲೇಬೇಕಾದ ಸುದ್ದಿ! ಇಂದಿನಿಂದಲೇ ಹೊಸ ನಿಯಮ, ಇಲ್ಲಿದೆ ವಿವರ – Kannada News | SIM Binding Mandatory for WhatsApp, Telegram: New Telecom Act 2023 Rules from March 1, Know details here

ಭಾರತದಲ್ಲಿ ಮೆಸೇಜಿಂಗ್ ಆ್ಯಪ್‌ಗಳ ಬಳಕೆಗೆ ಇಂದಿನಿಂದ (ಮಾರ್ಚ್ 1) ಹೊಸ ಮತ್ತು ಕಠಿಣ ನಿಯಮಗಳು ಜಾರಿಗೆ ಬರುತ್ತಿವೆ. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯು ‘ಟೆಲಿಕಾಂ ಕಾಯ್ದೆ 2023’ರ ಅಡಿಯಲ್ಲಿ ಸಿಮ್ ಬೈಂಡಿಂಗ್ ಎಂಬ ಹೊಸ ನಿಯಮವನ್ನು ಪರಿಚಯಿಸಿದೆ. ಇದರ ಪ್ರಕಾರ, ನಿಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಮ್ ಖಾತೆಗಳು ಕಾರ್ಯನಿರ್ವಹಿಸಲು ನಿಮ್ಮ ಮೊಬೈಲ್‌ನಲ್ಲಿ ಆ ನಂಬರ್‌ನ ಸಕ್ರಿಯ ಸಿಮ್ ಕಾರ್ಡ್ ಇರುವುದು ಕಡ್ಡಾಯ. ಸಿಮ್ ತೆಗೆದರೆ, ಸ್ಟಾಪ್ ಮಾಡಿದರೆ ಅಥವಾ ನಿಷ್ಕ್ರಿಯಗೊಂಡರೆ ನಿಮ್ಮ ಮೆಸೇಜಿಂಗ್ ಆ್ಯಪ್ ಖಾತೆಯು ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ.

ಸೈಬರ್ ಭದ್ರತೆಯನ್ನು ಹೆಚ್ಚಿಸಲು ಮತ್ತು ಆನ್‌ಲೈನ್ ವಂಚನೆಗಳನ್ನು ತಡೆಯಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿಯಮದಿಂದ, ಕದ್ದ OTP ಗಳನ್ನು ಬಳಸಿ ವಂಚನೆ ನಡೆಸುತ್ತಿದ್ದ ಸೈಬರ್ ಖದೀಮರಿಗೆ ಕಡಿವಾಣ ಬೀಳಲಿದೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಿಮ್ ಬೈಂಡಿಂಗ್ ಗಡುವನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದಲ್ಲದೆ, ಮಾರ್ಚ್ 1 ರಿಂದ ವಾಟ್ಸ್​ಆ್ಯಪ್ ವೆಬ್ ಮತ್ತು ಡೆಸ್ಕ್‌ಟಾಪ್ ಸೆಷನ್‌ಗಳು ಪ್ರತಿ ಆರು ಗಂಟೆಗಳಿಗೊಮ್ಮೆ ಸ್ವಯಂಚಾಲಿತವಾಗಿ ಲಾಗೌಟ್ ಆಗಲಿವೆ. ಕಚೇರಿ ಕೆಲಸಗಳಿಗೆ ವಾಟ್ಸ್​ಆ್ಯಪ್ ಬಳಸುವವರು ಪ್ರತಿ ಆರು ಗಂಟೆಗೊಮ್ಮೆ ತಮ್ಮ ಫೋನ್ ಮೂಲಕ QR ಕೋಡ್ ಸ್ಕ್ಯಾನ್ ಮಾಡಿ OTP ಪರಿಶೀಲನೆ ಮಾಡಬೇಕಾಗುತ್ತದೆ. ಈ ನಿಯಮಗಳಿಂದ ಸಾಮಾನ್ಯ ಬಳಕೆದಾರರು ಆತಂಕಪಡಬೇಕಿಲ್ಲ, ಆದರೆ ತಮ್ಮ ಪ್ರಾಥಮಿಕ ಮೊಬೈಲ್‌ನಲ್ಲಿ ಸಿಮ್ ಕಾರ್ಡ್ ಇರಿಸಿಕೊಳ್ಳುವುದು ಮತ್ತು ಆ್ಯಪ್‌ಗಳನ್ನು ಅಪ್ಡೇಟ್ ಮಾಡುವುದು ಅನಿವಾರ್ಯ. ಇನ್ನಷ್ಟು ವಿವರಗಳಿಗೆ ವಿಡಿಯೋ ನೋಡಿ.

ಇನ್ನಷ್ಟು ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Source link

Ali Khamenei Death: ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ – Kannada News | Trump Claims Khamenei Is Dead, Calls It Turning Point for Iran

ವಾಷಿಂಗ್ಟನ್, ಮಾರ್ಚ್​ 1:ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ali Khamenei ) ಇಸ್ರೇಲ್ ಮತ್ತು ಅಮೆರಿಕದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ, ಅಧ್ಯಕ್ಷ ಟ್ರಂಪ್ ಖಮೇನಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿದ್ದಾರೆ. ಖಮೇನಿ ಅವರ ಮರಣದ ನಂತರ, ಇರಾನ್ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಿದೆ.

ಪಶ್ಚಿಮ ಏಷ್ಯಾ, ವಿಶೇಷವಾಗಿ ಗಲ್ಫ್ ಪ್ರದೇಶವು ದಶಕಗಳಲ್ಲಿಯೇ ಅತ್ಯಂತ ಅಪಾಯಕಾರಿ ಹಂತದಲ್ಲಿದೆ. ಇರಾನ್ ಮೇಲೆ ನಡೆಯುತ್ತಿರುವ ಅಮೆರಿಕ-ಇಸ್ರೇಲಿ ದಾಳಿಗಳು, ಪ್ರಾದೇಶಿಕ ಪ್ರತೀಕಾರ ಮತ್ತು ಈಗ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಸಾವು ಇವೆಲ್ಲವೂ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಹೇಳಿಕೆಗಳು, ಇರಾನಿನ ಮಾಧ್ಯಮ ಪ್ರತಿಕ್ರಿಯೆಗಳು ಮತ್ತು ಬೀದಿ ಆಚರಣೆಗಳ ವೀಡಿಯೊಗಳು ಇವೆಲ್ಲವೂ ಇಡೀ ಜಗತ್ತನ್ನು ಅನಿಶ್ಚಿತ ಮತ್ತು ಅಪಾಯಕಾರಿ ಪರಿಸ್ಥಿತಿಗೆ ತಳ್ಳಿದೆ.

ಏತನ್ಮಧ್ಯೆ, ಇಸ್ರೇಲ್, ಗಲ್ಫ್ ರಾಷ್ಟ್ರಗಳು ಮತ್ತು ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸುತ್ತಿದೆ ಎಂಬ ವರದಿಗಳು ಸಹ ಹೊರಬರುತ್ತಿವೆ, ಆದರೆ ವಿಶ್ವಸಂಸ್ಥೆಯು ಶಾಂತಿಗಾಗಿ ಮನವಿ ಮಾಡುತ್ತಿದೆ.

ಮತ್ತಷ್ಟು ಓದಿ: ಇರಾನ್ ಸರ್ವೋಚ್ಚ ನಾಯಕನೇ ನಮ್ಮ ಟಾರ್ಗೆಟ್ ಎಂದ ಇಸ್ರೇಲ್; ಯಾರು ಈ ಖಮೇನಿ?

ಇಸ್ರೇಲ್ ಪ್ರಧಾನಿ ನೆತನ್ಯಾಹು ಇದೇ ರೀತಿಯ ಹೇಳಿಕೆಯನ್ನು ನೀಡಿದರು, ಆದರೂ ಅವರು ಟ್ರಂಪ್‌ಗಿಂತ ಹೆಚ್ಚು ಜಾಗರೂಕರಾಗಿ ಕಾಣಿಸಿಕೊಂಡರು. ಖಮೇನಿ ಈಗ ಜೀವಂತವಾಗಿಲ್ಲ ಎಂದು ಹಲವು ಸೂಚನೆಗಳು ಸೂಚಿಸುತ್ತವೆ ಎಂದು ನೆತನ್ಯಾಹು ಹೇಳಿದರು. ಇರಾನಿನ ಸರ್ಕಾರಿ ಮಾಧ್ಯಮವು ಖಮೇನಿ ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ. ಖಮೇನಿಯವರ ಸಾವಿನ ಕುರಿತಾದ ಹೇಳಿಕೆಗಳು ನಿಜವೋ ಸುಳ್ಳೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಒಂದು ತಪ್ಪು ನಡೆ ಇಡೀ ಜಗತ್ತನ್ನು ಪೂರ್ಣ ಪ್ರಮಾಣದ ಯುದ್ಧಕ್ಕೆ ತಳ್ಳಬಹುದಾದ ಮಹತ್ವದ ತಿರುವು ಪಡೆದುಕೊಂಡಿದೆ. ಮುಂಬರುವ ಗಂಟೆಗಳು ಈ ಸಂಘರ್ಷ ಇಲ್ಲಿಗೆ ಕೊನೆಗೊಳ್ಳುತ್ತದೆಯೇ ಅಥವಾ ಇತಿಹಾಸದಲ್ಲಿ ಅತ್ಯಂತ ಅಪಾಯಕಾರಿ ಅಧ್ಯಾಯವನ್ನು ಬರೆಯುತ್ತದೆಯೇ ಎಂಬುದನ್ನು ನಿರ್ಧರಿಸುತ್ತದೆ. ಇದು ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ನಿಖರವಾದ ಮಾಹಿತಿಯನ್ನು ಬಳಸಿಕೊಂಡು ನಡೆಸಲಾದ “ಸರ್ಜಿಕಲ್ ಸ್ಟ್ರೈಕ್” ಎಂದು ಇಸ್ರೇಲಿ ಗುಪ್ತಚರ ಮೂಲಗಳು ಹೇಳಿಕೊಂಡಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link