nagaraj11081993

ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ ಆರೋಪ: ಮುಸ್ಲಿಂ ಯುವಕನಿಂದ ಕ್ಷಮೆಯಾಚನೆ

ಮಡಿಕೇರಿ, ಮಾರ್ಚ್​​ 31: ಕೊಡಗು ಜಿಲ್ಲೆಯಲ್ಲಿ ದೈವ ಮತ್ತು ದೈವ ನರ್ತಕರನ್ನು ಅವಹೇಳನ ಮಾಡಿದ ಘಟನೆ ಸಂಬಂಧ ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಯುವಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬೆನ್ನಲ್ಲೇ ಆರೋಪಿ ಫೈಜಲ್ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆಯಾಚಿಸಿದ್ದಾರೆ. ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಮಾಡಿರಲಿಲ್ಲ. ವಿವಾಹವೊಂದರ ನಂತರ ಖಾಸಗಿಯಾಗಿ ಮಾತನಾಡಿದ ಮಾತುಗಳು ವೈರಲ್ ಆಗಿಬಿಟ್ಟವು. ಇದರಿಂದ ಯಾವುದೇ ಸಮುದಾಯಕ್ಕೆ ನೋವಾಗಿದ್ದರೆ, ತಾವು ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಬೆಂಗಳೂರು ಕರಗ ಮಹೋತ್ಸವ: ಸಂಪಂಗಿಕೆರೆ ಶಕ್ತಿ ಪೀಠದಲ್ಲಿ ಹಸಿ ಕರಗ ನೋಡಲು ಭಕ್ತಸಾಗರ

ಬೆಂಗಳೂರು, ಮಾರ್ಚ್​​ 31: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ಇದರ ಮೊದಲ ಭಾಗವಾಗಿ ಇಂದು ಬೆಳಗ್ಗೆ ಸಂಪಂಗಿ ರಾಮನಗರದಲ್ಲಿರುವ ಸಂಪಂಗಿಕೆರೆಯ ಶಕ್ತಿಪೀಠದಲ್ಲಿ ಹಸಿ ಕರಗ ಶಕ್ತ್ಯೋತ್ಸವ ಅದ್ಧೂರಿಯಾಗಿ ಜರುಗಿದೆ. ಎ. ಜ್ಞಾನೇಂದ್ರ ಸ್ವಾಮಿಯವರು 16ನೇ ಬಾರಿಗೆ ಯಶಸ್ವಿಯಾಗಿ ಹಸಿ ಕರಗವನ್ನು ಹೊತ್ತಿದ್ದು, ರಾಜಬೀದಿಗಳಲ್ಲಿ ಸಂಚರಿಸಿ ಜಿಬಿಎ ಮುಖ್ಯ ಕಚೇರಿ ತಲುಪಿದರು. ಅಲ್ಲಿ ಪೂಜೆ ಸಲ್ಲಿಸಿ, ಕೆ.ಆರ್. ಮಾರುಕಟ್ಟೆ ರಸ್ತೆಯ ಮೂಲಕ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ತೆರಳಿದ್ದಾರೆ. ನಾಳೆ ಮಧ್ಯರಾತ್ರಿ ಚೈತ್ರ ಪೌರ್ಣಮಿಯಂದು ಹೂವಿನ…

Read More

Optical Illusion: ಈ ಚಿತ್ರದಲ್ಲಿ ಹುಲಿಗಳ ನಡುವೆ ಅಡಗಿರುವ ಜೀಬ್ರಾವನ್ನು ಕಂಡು ಹಿಡಿಯಬಲ್ಲಿರಾ

ಕೆಲವರಿಗೆ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಸೇರಿದಂತೆ ಒಗಟುಗಳನ್ನು ಬಿಡಿಸುವುದೆಂದರೆ ಖುಷಿಯೋ ಖುಷಿ. ಸಮಯ ಸಿಕ್ಕಾಗಲೆಲ್ಲಾ ಇಂತಹ ಒಗಟುಗಳನ್ನು ಬಿಡಿಸುವತ್ತ ಆಸಕ್ತಿ ಹೆಚ್ಚಿನವರು ತೋರಿಸುತ್ತಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಹುಲಿಗಳ ನಡುವೆ ಇರುವ ಜೀಬ್ರಾವನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ನೀವು ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ. ಈ ಚಿತ್ರದಲ್ಲಿ ಏನು ಕಾಣಿಸುತ್ತದೆ? ಈ ಇಲ್ಯೂಷನ್ ಚಿತ್ರವು ಟ್ರಿಕ್ಕಿ ಒಗಟಿನ ಚಿತ್ರವಾಗಿದೆ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಮೊದಲು…

Read More

ತೀವ್ರ ಗತಿಯಲ್ಲಿ ಕುಸಿದ ‘ಧುರಂಧರ್ 2’ ಗಳಿಕೆ; ಆ ದಾಖಲೆ ಮುರಿಯೋದು ಕಷ್ಟ?

‘ಧುರಂಧರ್ 2’ ಸಿನಿಮಾ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಡಿಸೆಂಬರ್‌ನಲ್ಲಿ ತಮ್ಮ ಮೊದಲ ಚಿತ್ರದೊಂದಿಗೆ ಆದಿತ್ಯ ಧರ್ 1,300 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದರು. ಕೆಲವೇ ತಿಂಗಳುಗಳ ನಂತರ, 1,000 ಕೋಟಿ ಕ್ಲಬ್‌ಗೆ ಪ್ರವೇಶಿಸುವ ಮೂಲಕ ಅವರು ಮತ್ತೊಮ್ಮೆ ಸುದ್ದಿ ಆಗಿದ್ದಾರೆ. ‘ಧುರಂಧರ್ 2’ ಚಿತ್ರವು ಕೇವಲ 12 ದಿನಗಳಲ್ಲಿ ಇಡೀ ಬಾಕ್ಸ್ ಆಫೀಸ್ ಅನ್ನು ಅಲುಗಾಡಿಸಿದೆ. ಎರಡನೇ ಶನಿವಾರ ಮತ್ತು ಭಾನುವಾರದಂದು ನಡೆದ ಕಲೆಕ್ಷನ್​​ಗೆ ಹೋಲಿಸಿದರೆ ಎರಡನೇ ಸೋಮವಾರ ಚಿತ್ರದ ಗಳಿಕೆ ಗಮನಾರ್ಹವಾಗಿ ಕುಸಿದಿದೆ. ‘ಧುರಂಧರ್…

Read More

Karnataka 1st PUC Results 2026 Declared: ಕರ್ನಾಟಕ ಪ್ರಥಮ ಪಿಯು ಫಲಿತಾಂಶ ಪ್ರಕಟ

ಬೆಂಗಳೂರು, ಮಾರ್ಚ್​ 31: ಕರ್ನಾಟಕ ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2026ನೇ ಸಾಲಿನ ಪ್ರಥಮ ಪಿಯುಸಿ (1st PUC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ಇದೇ ಫೆಬ್ರವರಿ-ಮಾರ್ಚ್​ ತಿಂಗಳಲ್ಲಿ ನಡೆದ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಫಲಿತಾಂಶ ಪ್ರಕಟಣೆಯಲ್ಲಿ ಕೊಂಚ ಬದಲಾವಣೆ ಈ…

Read More

Video: ಡ್ಯಾನ್ಸ್ ಮಾಡುತ್ತಾ ಬಂದು ಬಾಲಕನ ಕೆನ್ನೆಗೆ ಹೊಡೆದ ರೋಬೋಟ್

ಬೀಜಿಂಗ್, ಮಾರ್ಚ್​ 31: ಡ್ಯಾನ್ಸ್​ ಮಾಡುತ್ತಾ ಬಂದು ರೋಬೋಟ್ ಬಾಲಕನ ಕೆನ್ನೆಗೆ ಹೊಡೆದಿರುವ ಘಟನೆ ಚೀನಾದಲ್ಲಿ ನಡೆದಿದೆ. ಮಾರ್ಚ್​ 21ರಂದು ಚೀನಾದ ಶಾಂಕ್ಸಿಯಲ್ಲಿ ನಡೆದ ತಂತ್ರಜ್ಞಾನ ಪ್ರದರ್ಶನದಲ್ಲಿ ಈ ಘಟನೆ ನಡೆದಿದೆ.ರೋಬೋಟ್ ಯುನಿಟ್ರೀ ರೊಬೊಟಿಕ್ಸ್ ಅಭಿವೃದ್ಧಿಪಡಿಸಿದ G1 ಹ್ಯೂಮನಾಯ್ಡ್ ಮಾದರಿ ಎಂದು ಹೇಳಲಾಗುತ್ತಿದೆ. ಸುಮಾರು 35 ಕಿಲೋಗ್ರಾಂಗಳಷ್ಟು ತೂಕ ಮತ್ತು ಸುಮಾರು 13,500 ಡಾಲರ್ ಬೆಲೆಯ ಈ ಯಂತ್ರವನ್ನು ಪ್ರಾಥಮಿಕವಾಗಿ ಸಂಶೋಧನೆ, ಶೈಕ್ಷಣಿಕ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ನಿರ್ಮಿಸಲಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

Hanuman Jayanti 2026: ಹನುಮ ಜಯಂತಿ ಯಾವಾಗ? ಏಪ್ರಿಲ್ 1 ಅಥವಾ 2..? ಸರಿಯಾದ ದಿನಾಂಕ ಇಲ್ಲಿದೆ

ಭಾರತೀಯ ಸಂಸ್ಕೃತಿಯಲ್ಲಿ ಹನುಮ ಜಯಂತಿಯು ಕೇವಲ ಒಂದು ಹಬ್ಬವಲ್ಲ; ಅದು ಅಚಲ ಭಕ್ತಿ ಮತ್ತು ಅಪ್ರತಿಮ ಸಾಹಸದ ಸಂಕೇತ. ಹನುಮಂತನನ್ನು ಭಕ್ತಿ, ಶಕ್ತಿ, ಧೈರ್ಯ ಮತ್ತು ಕರ್ಮ ಜ್ಞಾನದ ಮೂರ್ತರೂಪವೆಂದು ಪೂಜಿಸಲಾಗುತ್ತದೆ. ವಾಯುದೇವನ ಮಗನಾದ್ದರಿಂದ ಅವನನ್ನು “ಮಾರುತಿ”, “ಆಂಜನೇಯ” ಮತ್ತು “ಪವನಸುತ” ಎಂಬ ದಿವ್ಯ ನಾಮಗಳಿಂದ ಕರೆಯಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚೈತ್ರ ಮಾಸದ ಹುಣ್ಣಿಮೆ ತಿಥಿಯು ಏಪ್ರಿಲ್ 1 ರ ಬೆಳಗ್ಗೆ7.06 ರಿಂದ ಶುರುವಾಗಿ ಏಪ್ರಿಲ್ 2 ರ ಬೆಳಗ್ಗೆ 7. 41ಕ್ಕೆ ಕೊನೆಗೊಳ್ಳುವುದು. ಆದ್ದರಿಂದ…

Read More

ಚುನಾವಣಾ ಪ್ರಚಾರಕ್ಕೆ ಬಸನಗೌಡ ಯತ್ನಾಳ್​ಗೆ ಸ್ವಾಗತ ಎಂದರೇ ಬಿಎಸ್ ಯಡಿಯೂರಪ್ಪ!

ಬೆಂಗಳೂರು, ಮಾರ್ಚ್ 31: ಮುಂಬರುವ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಉಪಚುನಾವಣೆ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿದ್ದು, ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಶ್ರೀನಿವಾಸ್ ದಾಸ್ ಕರಿಯಪ್ಪ ಪರವಾಗಿ ಮತ್ತು ಬಾಗಲಕೋಟೆಯಲ್ಲಿ ವೀರಣ್ಣ ಚಾರಂತಿಮಠ್ ಪರವಾಗಿ ಪ್ರಚಾರಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಅವರು ಮಾತನಾಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ…

Read More

ಎರಡನೇ ಬಾರಿ ತಾಯಿ ಆಗುತ್ತಿದ್ದಾರೆ ಹರ್ಷಿಕಾ; ಗುಡ್ ನ್ಯೂಸ್ ಹೇಳಿದ ಭುವನ್

ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರು 2024ರ ಅಕ್ಟೋಬರ್​ನಲ್ಲಿ ಹೆಣ್ಣು ಮಗುವನ್ನು ಬರಮಾಡಿಕೊಂಡರು. ಮಗುವಿಗೆ ತ್ರಿದೇವಿ ಎಂದು ಹೆಸರು ಇಟ್ಟಿದ್ದರು. ಈಗ ಇವರು ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಪ್ಯಾರಿಸ್ ಐಫಿಲ್ ಟವರ್ ಎದುರು ನಿಂತು ಹರ್ಷಿಕಾ ಹಾಗೂ ಭುವನ್ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮೊದಲ ಮಗಳು ಕೂಡ ಇದ್ದಾಳೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಹರ್ಷಿಕಾ-ಭುವನ್ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ‘ಈ ಸೆಪ್ಟೆಂಬರ್‌ನಲ್ಲಿ ನಮ್ಮ ತಾರಾಗಣಕ್ಕೆ ಹೊಸ…

Read More

Nail Polish: ಉಗುರುಗಳಿಗೆ ವಿಧವಿಧದ ಬಣ್ಣ ಹಚ್ಚುವ ಮುನ್ನ ಈ ವಿಷ್ಯ ತಿಳಿದಿರಲಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಸನಾತನ ಹಿಂದೂ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದಲೂ ಸೌಂದರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ. ಕೃತಯುಗ, ತ್ರೇತಾಯುಗ, ದ್ವಾಪರಯುಗ ಮತ್ತು ಇಂದಿನ ಯುಗದಲ್ಲೂ ಸೌಂದರ್ಯವು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ. ಈ ಸೌಂದರ್ಯದ ಒಂದು ಭಾಗವೇ ಉಗುರುಗಳಿಗೆ ಬಣ್ಣ ಹಚ್ಚುವುದು, ಇದನ್ನು ನಾವು ನೈಲ್ ಪಾಲಿಶ್ ಎಂದು ಕರೆಯುತ್ತೇವೆ. ಈ ಅಭ್ಯಾಸವು ಮುಖ್ಯವಾಗಿ ಮಹಿಳೆಯರಲ್ಲಿ ಹೆಚ್ಚು ಪ್ರಚಲಿತವಿದ್ದರೂ, ಕೆಲವೊಮ್ಮೆ ಪುರುಷರೂ ಇದನ್ನು ಬಳಸುವುದನ್ನು ಕಾಣಬಹುದು. ಆದರೆ, ಇದು ಕೇವಲ ಸೌಂದರ್ಯಕ್ಕೆ ಸೀಮಿತವಲ್ಲ, ನಮ್ಮ ಜ್ಯೋತಿಷ್ಯ ಶಾಸ್ತ್ರ ಮತ್ತು ಸಾಮುದ್ರಿಕ ಶಾಸ್ತ್ರದ…

Read More