ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ ಆರೋಪ: ಮುಸ್ಲಿಂ ಯುವಕನಿಂದ ಕ್ಷಮೆಯಾಚನೆ
ಮಡಿಕೇರಿ, ಮಾರ್ಚ್ 31: ಕೊಡಗು ಜಿಲ್ಲೆಯಲ್ಲಿ ದೈವ ಮತ್ತು ದೈವ ನರ್ತಕರನ್ನು ಅವಹೇಳನ ಮಾಡಿದ ಘಟನೆ ಸಂಬಂಧ ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಯುವಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬೆನ್ನಲ್ಲೇ ಆರೋಪಿ ಫೈಜಲ್ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆಯಾಚಿಸಿದ್ದಾರೆ. ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಮಾಡಿರಲಿಲ್ಲ. ವಿವಾಹವೊಂದರ ನಂತರ ಖಾಸಗಿಯಾಗಿ ಮಾತನಾಡಿದ ಮಾತುಗಳು ವೈರಲ್ ಆಗಿಬಿಟ್ಟವು. ಇದರಿಂದ ಯಾವುದೇ ಸಮುದಾಯಕ್ಕೆ ನೋವಾಗಿದ್ದರೆ, ತಾವು ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ. Source link