All posts by nagaraj11081993

ಗಂಡನನ್ನ ತೊರೆದು ಬಂದ ಪ್ರೇಯಿಸಿಗೆ ಚಾಕುವಿನಿಂದ ಇರಿದ ಪ್ರಿಯಕರ: ಮಕ್ಕಳು ಅನಾಥ – Kannada News | Boy Friend Kills lover Who Came after quit Husband at Chikkaballapur

ಚಿಕ್ಕಬಳ್ಳಾಪುರ, (ಫೆಬ್ರವರಿ 27): ಮಹಿಳೆಯೋರ್ವಳು (Woman)  ಗಂಡನನ್ನು ತೊರೆದು ಪ್ರಿಯಕರನ (Lover) ಜೊತೆ ಹೋಗಿ ನೆಲೆಸಿದ್ದ ಮಹಿಳೆ ಹತ್ಯೆಯಾಗಿದ್ದಾಳೆ. ಹೌದು…ಪತಿಯನ್ನ ಬಿಟ್ಟು ಬಂದಿದ್ದ ಮಹಿಳೆಗೆ ಪ್ರಿಯಕರ ಚಾಕುವಿನಿಂದ ಇರಿದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾಳೆ. ಈ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು, ತೇಜಸ್ವಿನಿ(32) ಕೊಲೆಯಾದ ಮಹಿಳೆ.ತೇಜಸ್ವಿನಿ ಗಂಡನಿಂದ ದೂರವಾಗಿ ತನ್ನ ಎರಡು ಮಕ್ಕಳೊಂದಿಗೆ ಪ್ರತ್ಯೇಕ ವಾಸವಾಗಿದ್ದಳು. ಆದ್ರೆ, ಒಂದು ತಿಂಗಳ ಹಿಂದಷ್ಟೇ ಪ್ರಿಯಕರ ಸಂದೀಪ್ ಜೊತೆ ನೆಲೆಸಿದ್ದಳು. ಆದ್ರೆ, ಇಬ್ಬರ ನಡುವೆ ಅದೇನಾಯ್ತೋ ಏನೋ ಸಂದೀಪ್, 3 ದಿನದ ಹಿಂದೆ ತೇಜಸ್ವಿನಿಗೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಯಶಸ್ವಿನಿ ಇಂದು (ಫೆಬ್ರವರಿ 27) ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ತೇಜಸ್ವಿನಿ ಗಂಡನನ್ನ ಬಿಟ್ಟು ಇಬ್ಬರು ಮಕ್ಕಳೊಂದಿಗೆ ಪ್ರತ್ಯೇಕವಾಸವಾಗಿದ್ದು, ಹೋಟೆಲ್ ವೊಂದರಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಆದ್ರೆ, ಒಂದು ತಿಂಗಳ ಹಿಂದೆ ಅಷ್ಟೇ ತೇಜಸ್ವಿನಿ, ಸಂದೀಪ್ ಎಂಬುವವನ ಜೊತೆ ಹೋಗಿದ್ದು, ಅವನೊಂದಿಗೆ ವಾಸವಿದ್ದಳು. ಆದ್ರೆ, ಇಬ್ಬರ ನಡುವೆ ಏನಾಯ್ತೋ ಏನೋ ಕಳೆದ ಮೂರು ದಿನಗಳ ಹಿಂದೆ ಸುದೀಪ್, ಚಾಕುವಿನಿಂದ ತೇಜಸ್ವಿನಿ ಹೊಟ್ಟೆಗೆ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ತೇಜಸ್ವಿನಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ: 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ

ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲೇ ಜೀವನ್ಮರಣ ಮಧ್ಯೆ ಹೋರಾಟ ನಡೆಸುತ್ತಿದ್ದ ತೇಜಸ್ವಿನಿ ಇಂದು (ಫೆಬ್ರವರಿ 27) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ. ಹೀಗಾಗಿ ಅತ್ತ ತಂದೆ-ಈಗ ತಾಯಿಯನ್ನು ಕಳೆದುಕೊಂಡ ಎರಡು ಮಕ್ಕಳು ಅನಾಥವಾಗಿವೆ,

ಇನ್ನು ಈ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸರು, ಪ್ರಿಯಕರ ಸಂದೀಪ್ ಹಾಗೂ ತೇಜಸ್ವಿನಿ ಸ್ನೇಹಿತೆ ಅರುಣಾಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು, ಪ್ರಿಯಕರ ಸಂದೀಪ್ ಏಕೆ ಚಾಕುವಿನಿಂದ ಇರಿದಿದ್ದ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬರಬೇಕಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿದೇಶದಲ್ಲಿ ಧಾರವಾಡದ ಯುವಕನ ಚಮತ್ಕಾರ: ಇದು ಯೋಗದಿಂದ ಬದುಕೇ ಬದಲಾದ ಕಥೆ – Kannada News | Yoga Transformed Life: Dharwad Youth Becomes Vietnam’s Top Yoga Instructor

ರಾಘವೇಂದ್ರ ಕ್ಷತ್ರೀಯImage Credit source: tv9 kannada

ಧಾರವಾಡ, ಫೆಬ್ರವರಿ 27: ಆತ 25 ವರ್ಷದ ಯುವಕ. ತಾನು ಅನಾರೋಗ್ಯಕ್ಕೆ ತುತ್ತಾಗಿದ್ದ ವೇಳೆ ವೈದ್ಯರ ಸಲಹೆ ಮೇರೆಗೆ ಕಲಿತ ವಿದ್ಯೆಯೊಂದು ಇದೀಗ ಆತನನ್ನು ದೊಡ್ಡಮಟ್ಟಕ್ಕೆ ಬೆಳೆಸಿದೆ. ಇಡೀ ವಿಶ್ವವೇ ಇದೀಗ ಯೋಗದತ್ತ (Yoga) ಒಲವು ತೋರಿಸುತ್ತಿರೋವಾಗ ತಾನು ಅನಾರೋಗ್ಯದಿಂದ ಮುಕ್ತವಾಗುವುದರ ಜೊತೆಗೆ ನೂರಾರು ಜನರಿಗೆ ವಿದೇಶದಲ್ಲಿ ಯೋಗವನ್ನೂ ಕಲಿಸುತ್ತಿದ್ದಾರೆ. ಇಂದು ಯೋಗವೇ ಆತನಿಗೆ ಉದ್ಯೋಗವಾಗಿ ಪರಿವರ್ತನೆಯಾಗಿದೆ.

ಕಾಯಿಲೆಗೆ ಯೋಗವೇ ಮದ್ದು

ಧಾರವಾಡ ನಗರದ ಬೂಸಪ್ಪ ವೃತ್ತದ ಬಳಿಯ ನಿವಾಸಿಯಾಗಿರುವ ರಾಘವೇಂದ್ರ ಕ್ಷತ್ರೀಯ ಯೋಗದಲ್ಲಿ ಸಾಧನೆ ಮಾಡಿರುವ ಯುವಕ. ಎಂಬಿಎ ಪದವಿ ಪಡೆದಿರುವ ಇವರಿಗೆ 2018ರಲ್ಲಿ ಅನಾರೋಗ್ಯ ಕಾಡತೊಡಗಿತು. ಈ ವೇಳೆ ಅನೇಕ ವೈದ್ಯರಿಗೂ ತೋರಿಸಿದರೂ ಕಾಯಿಲೆ ವಾಸಿಯಾಗಲೇ ಇಲ್ಲ. ಈ ಸಂದರ್ಭದಲ್ಲಿ ಓರ್ವ ವ್ಯಕ್ತಿ ಯೋಗ ಮಾಡುವಂತೆ ಸಲಹೆ ನೀಡಿದರು. ಅವತ್ತು ಶುರು ಮಾಡಿದ್ದ ಯೋಗ ಇವತ್ತು ರಾಘವೇಂದ್ರನ ಯೋಗಾಯೋಗವೇ ಬದಲಾಗುವಂತೆ ಮಾಡಿತು.

ಇದನ್ನೂ ಓದಿ: ಬೆನ್ನು ನೋವು ಬರುವುದಕ್ಕೆ ಕಾರಣವೇನು? ಯೋಗದ ಮೂಲಕ ಅದನ್ನು ಪರಿಹರಿಸಿಕೊಳ್ಳುವುದು ಹೇಗೆ?

ಮೊದಲು ಒಂದು ವರ್ಷ ಯೋಗ ಮಾಡಿ, ಅದರಲ್ಲಿ ಪರ್ಫೆಕ್ಟ್ ಆದ ಬಳಿಕ ಮತ್ತೆ ಬೇರೆ ಉದ್ಯೋಗಕ್ಕೆ ಸೇರಿಕೊಂಡರು. ಆದರೆ ಅವರಿಗೆ ವಿಯಟ್ನಾಂಗೆ ಹೋಗುವ ಅವಕಾಶ ಸಿಕ್ಕಿತು. ಈ ವೇಳೆ ಅಲ್ಲಿಗೆ ಹೋಗಿ ಯೋಗವನ್ನು ಕಲಿಸಿಕೊಡುವುದನ್ನು ಶುರು ಮಾಡಿದರು. ಇವತ್ತು ರಾಘವೇಂದ್ರ ಯಾವ ಪರಿ ಅಲ್ಲಿ ಬೆಳೆದಿದ್ದಾರೆ ಎಂದರೆ ಆರೇಳು ನೂರು ಜನರಿಗೆ ಇವರು ಯೋಗ ಗುರುವಾಗಿದ್ದಾರೆ. ಸದ್ಯಕ್ಕೆ 300 ಜನರು ನಿತ್ಯವೂ ಇವರ ಬಳಿ ಯೋಗ ಕಲಿಯುತ್ತಿದ್ದಾರೆ. ಇದೀಗ ಯೋಗವೇ ಇವರ ಪಾಲಿನ ಉದ್ಯೋಗವಾಗಿದೆ. ವಿಯಟ್ನಾಂನಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಯೋಗಕ್ಕೆ ತುಂಬಾನೇ ಗೌರವವಿದೆ. ಹೀಗಾಗಿ ಇದನ್ನೇ ವೃತ್ತಿ ಮಾಡಿಕೊಂಡಿರುವ ರಾಘವೇಂದ್ರ ಕಳೆದ ಹಲವಾರು ವರ್ಷಗಳಿಂದ ಅಲ್ಲಿ ಯೋಗ ಮಾಸ್ಟರ್ ಆಗಿ ವೃತ್ತಿ ಮಾಡುತ್ತಿದ್ದಾರೆ.

ಆರಂಭದ ದಿನಗಳಲ್ಲಿ ರಾಘವೇಂದ್ರ, ಯೋಗ ತನ್ನ ಪಾಲಿಗೆ ಇಷ್ಟೊಂದು ದೊಡ್ಡ ಗೌರವ ತಂದು ಕೊಡುತ್ತೆ ಅಂದುಕೊಂಡಿರಲಿಲ್ಲ. ಆದರೆ ಯಾವಾಗ ಅವರು ವಿಯಟ್ನಾಂನಲ್ಲಿ ಯೋಗ ಕ್ಲಾಸ್ ಶುರು ಮಾಡಿದರೋ ಆಗ ಯೋಗ ಕಲಿಯಲು ಬರುವವ ಸಂಖ್ಯೆ ಹೆಚ್ಚುತ್ತಲೇ ಹೋಯಿತು.

ಯೋಗ ಕಲಿಯೋದಕ್ಕೂ ಮುನ್ನ ರಾಘವೇಂದ್ರ ದಢೂತಿ ಯುವಕನಾಗಿದ್ದ. ಸುಮಾರು 85 ಕೆಜಿಯಷ್ಟು ತೂಕವಿದ್ದ ಆತನಿಗೆ ಯೋಗ ಅನ್ನೋದು ದೊಡ್ಡ ಔಷಧವಾಗಿ ಪರಿಣಮಿಸಿತು. ನಿತ್ಯವೂ ಯೋಗ ಮಾಡುವ ಮೂಲಕ ಮೊದಲಿಗೆ ತನ್ನ ದೇಹದ ತೂಕವನ್ನು ಕಡಿಮೆ ಮಾಡಿಕೊಂಡು, ಅದರಿಂದಾಗುವ ಲಾಭವನ್ನು ಮನದಟ್ಟು ಮಾಡಿಕೊಂಡ ಬಳಿಕ ವಿಯಟ್ನಾಂಗೆ ಹಾರಿದ ರಾಘವೇಂದ್ರ, ಅಲ್ಲಿ ಭಾರತೀಯ ಯೋಗವನ್ನು ಕಲಿಸಿಕೊಡುತ್ತಿದ್ದಾರೆ.

ರಾಘವೇಂದ್ರ ಕ್ಷತ್ರೀಯ ಧಾರವಾಡಿಗರ ಹೆಮ್ಮೆ

ಇತ್ತೀಚಿನ ದಿನಗಳಲ್ಲಿ ಯೋಗ ವಿಶ್ವ ಮನ್ನಣೆ ಪಡೆದಿದೆ. ದೇಶದಲ್ಲಿ ಮೋದಿ ಸರಕಾರ ಬಂದ ಬಳಿಕ ವಿಶ್ವಮಾನ್ಯತೆಯನ್ನು ಪಡೆಯುವಲ್ಲಿ ಯೋಗ ಯಶಸ್ವಿಯೂ ಆಗಿದೆ. ಆದರೆ ಅದನ್ನು ಕಲಿಸುವವರ ಪೈಕಿ ಹೆಚ್ಚಿನವರು ಭಾರತೀಯರೇ ಆಗಿರೋದ್ರಿಂದ ರಾಘವೇಂದ್ರನಂಥ ಯೋಗ ಶಿಕ್ಷಕರಿಗೆ ಬೇಡಿಕೆ ಹೆಚ್ಚಾಗಿದೆ. ನಿತ್ಯವೂ ಐದು ಗಂಟೆಗಳ ಕ್ಲಾಸ್ ನೀಡುವ ರಾಘವೇಂದ್ರನಿಗೆ ಇದೀಗ ಅದೇ ಅನ್ನ ನೀಡುವ ವೃತ್ತಿಯಾಗಿದೆ. ರಾಘವೇಂದ್ರ ಕ್ಷತ್ರೀಯ ತಮ್ಮೂರಿನ ಯುವಕ ಅನ್ನೋದು ಧಾರವಾಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ.

ಇದನ್ನೂ ಓದಿ: 1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ

ಎಲ್ಲ ರೋಗಗಳಿಗೂ ಯೋಗ ಅನ್ನೋದು ಒಂದು ಮದ್ದು. ಇದು ದೈಹಿಕ ಶಿಸ್ತಿಯ ಜೊತೆಗೆ ಮಾನಸಿಕ ಒತ್ತಡಗಳನ್ನು ಕೂಡ ನಿವಾರಿಸಬಲ್ಲದು. ಹೀಗಾಗಿ ಇತ್ತೀಚಿನ ವರ್ಷಗಳಲ್ಲಿ ಎಲ್ಲ ದೇಶಗಳಲ್ಲಿ ಇದರ ಮಹತ್ವ ಹೆಚ್ಚಾಗುತ್ತಾ ಹೋಗುತ್ತಿದೆ. ಇಂಥ ದಿನಗಳಲ್ಲಿಯೇ ಧಾರವಾಡದ ಈ ಯುವಕ ಬೇರೆ ದೇಶದಲ್ಲಿ ಯೋಗದ ಬಗ್ಗೆ ಪ್ರಚಾರ ಮಾಡೋದಲ್ಲದೇ ಯೋಗ ಕಲಿಕೆಯನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿರುವುದು ಸಂತಸದ ಸಂಗತಿಯೇ ಸರಿ. ಒಟ್ಟಿನಲ್ಲಿ ತನ್ನ ಆರೋಗ್ಯ ಸುಧಾರಿಸಿಕೊಳ್ಳಲು ಕಲಿತ ವಿದ್ಯೆಯೊಂದು ಇಂದು ಆತನಿಗೆ ಅನ್ನ ನೀಡುವ ಉದ್ಯೋಗವಾಗಿದ್ದು ವಿಚಿತ್ರವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

3 ನಗರಗಳ ಹೆಸರು ಬದಲಾವಣೆ ಮಾಡಿದ ರಾಜಸ್ಥಾನದ ಮುಖ್ಯಮಂತ್ರಿ – Kannada News | Rajasthan CM Bhajanlal Sharma announces name change for 3 cities including Mount Abu

ಜೈಪುರ, ಫೆಬ್ರವರಿ 27: ರಾಜಸ್ಥಾನದಲ್ಲಿ ಏಕಕಾಲದಲ್ಲಿ ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ. ಸ್ಥಳಗಳು, ಜಿಲ್ಲೆಗಳು ಮತ್ತು ರಾಜ್ಯಗಳ ಹೆಸರುಗಳನ್ನು ಬದಲಾಯಿಸಲಾಗುತ್ತಿದೆ. ಇತ್ತೀಚೆಗೆ, ಕೇರಳವನ್ನು ಕೇರಳಂ (Keralam) ಎಂದು ಮರುನಾಮಕರಣ ಮಾಡಲಾಗಿದೆ. ಈಗ, ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ರಾಜಸ್ಥಾನದ ಹಲವಾರು ಸ್ಥಳಗಳ ಮರುನಾಮಕರಣಗಳನ್ನು ಘೋಷಿಸಿದ್ದಾರೆ. ಈ ಪ್ರಕಟಣೆಗಳು ಆಡಳಿತ ಮತ್ತು ಸಾಮಾಜಿಕ ವಲಯಗಳಲ್ಲಿ ಬಿಸಿ ಚರ್ಚೆಗೆ ನಾಂದಿ ಹಾಡಿವೆ.

ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವವುಳ್ಳ ಕೆಲವು ನಗರಗಳ ಮರುನಾಮಕರಣದ ಘೋಷಣೆ ಅತ್ಯಂತ ಗಮನಾರ್ಹವಾದುದು. ಹೆಚ್ಚುವರಿಯಾಗಿ, ಮಧ್ಯಾಹ್ನದ ಬಿಸಿಯೂಟ ಕಾರ್ಮಿಕರಿಂದ ಹಿಡಿದು ಪತ್ರಕರ್ತರು ಮತ್ತು ಶಾಸಕರವರೆಗೆ ವಿವಿಧ ವಲಯಗಳಿಗೆ ಪರಿಹಾರ ಮತ್ತು ಸವಲತ್ತುಗಳನ್ನು ಘೋಷಿಸಲಾಗಿದೆ. ಮೌಂಟ್ ಅಬುವನ್ನು ಅಬು ರಾಜ್ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಅದೇ ರೀತಿ, ಜಹಾಜ್‌ಪುರವನ್ನು ಯಜ್ಞಪುರ ಎಂದು ಮರುನಾಮಕರಣ ಮಾಡಲಾಗುವುದು. ಈ ಹೊಸ ಹೆಸರುಗಳು ಸ್ಥಳೀಯ ಸಾಂಸ್ಕೃತಿಕ ಗುರುತನ್ನು ಬಲಪಡಿಸುತ್ತವೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಕೇರಳ ಇನ್ಮುಂದೆ ಕೇರಳಂ; ರಾಜ್ಯದ ಹೆಸರು ಬದಲಾವಣೆಗೆ ಮೋದಿ ಸಂಪುಟ ಒಪ್ಪಿಗೆ

ಮಧ್ಯಾಹ್ನದ ಊಟ ಯೋಜನೆಗೆ ಸಂಬಂಧಿಸಿದ ನೌಕರರು ಮತ್ತು ಸಹಾಯಕರ ಗೌರವಧನದಲ್ಲಿ ಶೇ. 10ರಷ್ಟು ಹೆಚ್ಚಳವನ್ನು ಘೋಷಿಸಲಾಗಿದೆ. ಈ ನೌಕರರು ಬಹಳ ದಿನಗಳಿಂದ ವೇತನ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದರು. ಸರ್ಕಾರವು ಪತ್ರಕರ್ತರಿಗೂ ಮಹತ್ವದ ಘೋಷಣೆ ಮಾಡಿದೆ. ಪಿಂಚಣಿ ಮೊತ್ತವನ್ನು ಈಗ 15,000 ರಿಂದ 18,000 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಪತ್ರಕರ್ತರ ಸಂಘಟನೆಗಳ ಬೇಡಿಕೆಗಳ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮುಂದಿನ 3 ವರ್ಷಗಳಲ್ಲಿ 3,000 ಫ್ಲಾಟ್‌ಗಳನ್ನು ನಿರ್ಮಿಸುವ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಈ ಫ್ಲಾಟ್‌ಗಳನ್ನು ಸಿಬ್ಬಂದಿಗಾಗಿ ನಿರ್ಮಿಸಲಾಗುವುದು. ವಸತಿ ಮಂಡಳಿಯು ಈ ವಸತಿಗಾಗಿ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದೆ. ಶಾಸಕರಿಗೆ ಸೌಲಭ್ಯಗಳನ್ನು ಸಹ ಘೋಷಿಸಲಾಗಿದೆ. ಅವರ ಸಂಬಳವನ್ನು ಹೆಚ್ಚಿಸಲಾಗುವುದು. ಅವರು ತಮ್ಮ ಕೆಲಸವನ್ನು ಡಿಜಿಟಲ್ ರೂಪದಲ್ಲಿ ನಿರ್ವಹಿಸಬಹುದಾದ ಮೊಬೈಲ್ ಟ್ಯಾಬ್ಲೆಟ್‌ಗಳನ್ನು ಸಹ ಒದಗಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs WI: ಭಾರತ- ವಿಂಡೀಸ್ ಮಾಡು ಇಲ್ಲವೇ ಮಡಿ ಪಂದ್ಯ ಯಾವಾಗ ಎಲ್ಲಿ ನಡೆಯಲಿದೆ? – Kannada News | Ind vs WI Live Streaming When and Where to Watch India vs West Indies T20 World Cup Today Cricket Match Score in Kannada

2026 ರ ಟಿ20 ವಿಶ್ವಕಪ್ (T20 World Cup 2026) ಗೆಲ್ಲಲು ಟೀಮ ಇಂಡಿಯಾ ಮೂರು ಹೆಜ್ಜೆ ದೂರದಲ್ಲಿದೆ. ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಬೇಕೆಂದರೆ ಮುಂಬರುವ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಅದರಲ್ಲಿ ಒಂದು ಪಂದ್ಯವನ್ನು ಸೂಪರ್ 8 ಸುತ್ತಿನಲ್ಲಿ ಆಡಿರುವ ಭಾರತ ತಂಡ, ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ (India vs West Indies) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಏಕೆಂದರೆ ಈ ಪಂದ್ಯದ ವಿಜೇತರು ಸೆಮಿಫೈನಲ್‌ಗೆ ಟಿಕೆಟ್ ಪಡೆಯುತ್ತಾರೆ. ಆದ್ದರಿಂದ, ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲುವುದು ಅವಶ್ಯಕವಾಗಿದೆ.

ಸೂಪರ್ 8 ಸುತ್ತಿನಲ್ಲಿ ವೆಸ್ಟ್ ಇಂಡೀಸ್ ತಂಡ ಒಂದು ಪಂದ್ಯವನ್ನು ಗೆದ್ದು ಪಂದ್ಯವನ್ನು ಸೋತಿದ್ದು, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇತ್ತ ಟೀಂ ಇಂಡಿಯಾ ಕೂಡ ಒಂದು ಪಂದ್ಯದಲ್ಲಿ ಸೋತು, ಒಂದು ಪಂದ್ಯವನ್ನು ಗೆದ್ದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಭಾರತದ ನೆಟ್ ರನ್​ರೇಟ್​ಗಿಂತ ವೆಸ್ಟ್ ಇಂಡೀಸ್ ತಂಡದ ನೆಟ್ ರನ್​ರೇಟ್​ ಉತ್ತಮವಾಗಿರುವುದರಿಂದ ವಿಂಡೀಸ್ ಪಡೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಉಭಯ ತಂಡಗಳ ಮುಖಾಮುಖಿಯಲ್ಲಿ ಗೆಲ್ಲುವ ತಂಡಕ್ಕೆ ಸೆಮಿಫೈನಲ್‌ ಟಿಕೆಟ್ ದೊರೆಯಲಿದೆ. ಉಳಿದಂತೆ ಈ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ ತಂಡ ಈಗಾಗಲೇ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಮಾರ್ಚ್​ 1 ರಂದು ನಡೆಯಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯವನ್ನು ನಾವು ಸ್ಟಾರ್ ಸ್ಪೋರ್ಟ್ಸ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್​ನಲ್ಲೂ ಪಂದ್ಯವನ್ನು ವೀಕ್ಷಿಸಬಹುದು.

IND vs WI: ಭಾರತ- ವಿಂಡೀಸ್ ಪಂದ್ಯ ರದ್ದಾದರೆ ಯಾರಿಗೆ ಸೆಮಿಫೈನಲ್ ಟಿಕೆಟ್?

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಕುಲ್ದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಶ್ದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ.

ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ನಾಯಕಿ), ಶಿಮ್ರಾನ್ ಹೆಟ್ಮೆಯರ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋತಿ, ರೋವ್‌ಮನ್ ಪೊವೆಲ್, ಶೆರ್ಫೇನ್ ರುದರ್‌ಫೋರ್ಡ್, ಕ್ವೆಂಟಿನ್ ಸ್ಯಾಂಪ್ಸನ್, ಜೇಡನ್ ಸೀಲ್ಸ್, ರೊಮಾರಿಯೋ ಶೆಫರ್ಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಾಕ್ಸಿಕ್ ಅಲರ್ಟ್​: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್ – Kannada News | Yash Kiara Advani starrer Toxic movie first song Tabaahi to be released on 2 March

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದಿಂದ ಒಂದೊಂದು ಅಪ್​ಡೇಟ್ ಹೊರಬಂದಾಗಲೂ ಅಭಿಮಾನಿಗಳು ಥ್ರಿಲ್ ಆಗುತ್ತಿದ್ದಾರೆ. ಈಗಾಗಲೇ ಎರಡು ಟೀಸರ್​ಗಳು ಧೂಳೆಬ್ಬಿಸಿವೆ. ಈಗ ಮೊದಲ ಹಾಡು ಬಿಡುಗಡೆ ಮಾಡುವ ಸಮಯ ಹತ್ತಿರ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರಬಿದ್ದಿದೆ. ‘ಟಾಕ್ಸಿಕ್’ ಸಿನಿಮಾದ ಮೊದಲ ಸಾಂಗ್ ಮಾರ್ಚ್ 2ರಂದು ರಿಲೀಸ್ ಆಗಲಿದೆ. ಈ ಹಾಡಿನಲ್ಲಿ ಯಶ್ (Yash) ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿದ್ದಾರೆ. ಈ ಹಾಡು ಸಖತ್ ಹಾಟ್ ಮತ್ತು ರೊಮ್ಯಾಂಟಿಕ್ ಆಗಿರಲಿದೆ ಎಂಬುದನ್ನು ಪೋಸ್ಟರ್ ಮೂಲಕ ಸೂಚಿಸಲಾಗಿದೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಪಾತ್ರಕ್ಕೆ ನೆಗೆಟಿವ್ ಶೇಡ್ ಕೂಡ ಇರಲಿದೆ ಎಂಬುದರ ಸುಳಿವು ಟೀಸರ್​ನಲ್ಲಿ ಕಾಣಿಸಿದೆ. ಆ ಕಾರಣದಿಂದ ಹಾಡುಗಳು ಹೇಗಿರಬಹುದು ಎಂಬ ನಿರೀಕ್ಷೆ ಎಲ್ಲರಿಗೂ ಇದೆ. ಪ್ರತಿ ಬಾರಿಯೂ ಅಭಿಮಾನಿಗಳಿಗೆ ಯಶ್ ಒಂದಲ್ಲಾ ಒಂದು ಸರ್ಪ್ರೈಸ್ ನೀಡುತ್ತಲೇ ಇದ್ದಾರೆ. ಈಗ ಮೊದಲ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಲು ಸಕಲ ಸಿದ್ಧತೆ ಆಗಿದೆ.

‘ತಬಾಹಿ’ ಎಂಬುದು ಈ ಹಾಡಿನ ಹೆಸರು. ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿರ್ಶಾ ಅವರು ಈ ಗೀತೆಗೆ ಸಂಗೀತ ನೀಡಿದ್ದಾರೆ. ಹಾಡಿನ ಪೋಸ್ಟರ್​ನಲ್ಲಿ ಯಶ್ ಅವರು ಕಿಯಾರಾ ಅಡ್ವಾಣಿ ಅವರನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಇದೆ. ಈ ಪೋಸ್ಟರ್​​ನಲ್ಲಿ ಕಿಯಾರಾ ಮುಖ ಕಾಣಿಸಿಲ್ಲ. ಒಟ್ಟಿನಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಖಚಿತ.

‘ಜೀ ಮ್ಯೂಸಿಕ್’ ಮೂಲಕ ‘ಟಾಕ್ಸಿಕ್’ ಸಿನಿಮಾದ ಎಲ್ಲ ಭಾಷೆಯ ಹಾಡುಗಳು ರಿಲೀಸ್ ಆಗಲಿವೆ. ವಿಶಾಲ್ ಮಿಶ್ರಾ ಅವರು 4 ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಜೊತೆ ಸೇರಿ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ರವಿ ಬಸ್ರೂರು ಅವರು ಒಂದು ಹಾಡಿಗೆ ಸಂಗೀತ ನೀಡುವುದರ ಜೊತೆಗೆ ಹಿನ್ನೆಲೆ ಸಂಗೀತದ ಜವಾಬ್ದಾರಿ ನಿಭಾಯಿಸಿದ್ದಾರೆ. ಈ ಸಿನಿಮಾಗೆ ಒಟ್ಟು 5 ಮಂದಿ ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ

‘ತಬಾಹಿ’ ಹಾಡಿನ ಪೋಸ್ಟರ್ ನೋಡುತ್ತಿದ್ದಂತೆಯೇ ಯಶ್ ಅಭಿಮಾನಿಗಳ ಕೌತುಕ ಹೆಚ್ಚಾಗಿದೆ. ಸಾವಿರಾರು ಕಮೆಂಟ್​​ಗಳ ಮೂಲಕ ಜನರು ತಮ್ಮ ಎಗ್ಸೈಟ್​ಮೆಂಟ್ ತೋರಿಸಿದ್ದಾರೆ. ಈ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ನಿರ್ಮಾಣ ಮಾಡಿದೆ. ಮಾರ್ಚ್ 19ರಂದು ವಿಶ್ವಾದ್ಯಂತ ‘ಟಾಕ್ಸಿಕ್’ ರಿಲೀಸ್ ಆಗಲಿದೆ. ‘ಧುರಂಧರ್ 2’ ಚಿತ್ರಕ್ಕೆ ಫೈಟ್ ನೀಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Ranji Trophy Final: W,W,W,W,W.. ಆಕಿಬ್ ನಬಿ ದಾಳಿಗೆ ತತ್ತರಿಸಿದ ಕರ್ನಾಟಕ – Kannada News | Ranji Trophy 2025 26 Final: J&K Dominates Karnataka; Aqib Nabi’s Fiver Creates History

2025-26ರ ರಣಜಿ ಟ್ರೋಫಿಯ ಫೈನಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಕರ್ನಾಟಕ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಇಲ್ಲಿಯವರೆಗೆ ಪ್ರಾಬಲ್ಯ ಸಾಧಿಸಿದೆ. ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಆಡುತ್ತಿರುವ ಜಮ್ಮು ಮತ್ತು ಕಾಶ್ಮೀರ ಇತಿಹಾಸ ಸೃಷ್ಟಿಸುವ ಹಾದಿಯಲ್ಲಿದ್ದು, ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದೆ. ಜಮ್ಮು ಮತ್ತು ಕಾಶ್ಮೀರ ಬೌಲರ್ ಆಕಿಬ್ ನಬಿ ಮತ್ತೊಮ್ಮೆ ತಮ್ಮ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದು, ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್​ಗಳ ಗೊಂಚಲು ಪಡೆದು ಕರ್ನಾಟಕ ತಂಡವನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಮೊದಲ ಇನ್ನಿಂಗ್ಸ್​ನಲ್ಲಿ 23 ಓವರ್‌ಗಳನ್ನು ಬೌಲ್ ಮಾಡಿದ ಆಕಿಬ್ ನಬಿ ಕೇವಲ 54 ರನ್‌ ನೀಡಿ 5 ವಿಕೆಟ್‌ಗಳನ್ನು ಕಬಳಿಸಿದರು, ಅದರಲ್ಲಿ 7 ಮೇಡನ್ ಓವರ್​ ಕೂಡ ಸೇರಿತ್ತು. ನಬಿ ಉರುಳಿಸಿದ ಐದು ವಿಕೆಟ್​ಗಳಲ್ಲಿ, ಅನುಭವಿ ಕೆಎಲ್ ರಾಹುಲ್, ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಶತಕವೀರ ಮಾಯಾಂಕ್ ಅಗರ್ವಾಲ್ ಮತ್ತು ಶಿಖರ್ ಶೆಟ್ಟಿ ಸೇರಿದ್ದರು.

ಈ ರಣಜಿ ಆವೃತ್ತಿಯಲ್ಲಿ ಆಕಿಬ್ ನಬಿ ಆಡಿರುವ 10 ಪಂದ್ಯಗಳಲ್ಲಿ 60 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಒಟ್ಟು 12 ವಿಕೆಟ್‌ಗಳನ್ನು ಕಬಳಿಸಿದ್ದ ನಬಿ, ಸೆಮಿಫೈನಲ್‌ನಲ್ಲಿ ಒಂಬತ್ತು ವಿಕೆಟ್‌ಗಳನ್ನು ಉರುಳಿಸಿದ್ದರು. ಈಗ ಫೈನಲ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್​ಗಳನ್ನು ಉರುಳಿಸಿರುವ ಆಕಿಬ್ ನಬಿ, ಆದಷ್ಟು ಬೇಗ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಹೊಸ್ತಿಲಿನಲ್ಲಿದ್ದಾರೆ.

Source link

ಬಿಪಿ ಕಡಿಮೆಯಾದ್ರೂ ಹೃದಯಾಘಾತವಾಗುತ್ತಾ? ಏನ್ ಹೇಳುತ್ತೆ ಸಂಶೋಧನೆ? – Kannada News | Low Blood Pressure and Coronary Heart Disease: What You Should Know

ಸಾಮಾನ್ಯವಾಗಿ ಅಧಿಕ ರಕ್ತದೊತ್ತಡವು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ ಎಬುದು ತಿಳಿದ ವಿಚಾರ, ಆದರೆ ಹೊಸ ಸಂಶೋಧನೆಯ ಪ್ರಕಾರ, ಹೃದಯ ಸಂಬಂಧಿ ಕಾಯಿಲೆ ಇರುವವರಲ್ಲಿ, ಕಡಿಮೆ ರಕ್ತದೊತ್ತಡ (Low Blood Pressure) ಕೂಡ ಹೃದಯಾಘಾತದ (Heart Attack) ಅಪಾಯವನ್ನು ಹೆಚ್ಚಿಸುತ್ತದೆ. ಹೌದು, ಲಂಡನ್‌ನ ಇಂಪೀರಿಯಲ್ ಕಾಲೇಜಿನ ವಿಜ್ಞಾನಿಗಳು ಸೇರಿದಂತೆ ಅಂತರಾಷ್ಟ್ರೀಯ ಸಂಸ್ಥೆಗಳ ತಂಡ ಈ ಅಧ್ಯಯನ ನಡೆಸಿದ್ದು, ರಕ್ತದೊತ್ತಡ 100/80 ಎಂಎಂಎಚ್‌ಜಿ (mmHg) ಗಿಂತ ಕಡಿಮೆಯಿದ್ದವರಲ್ಲಿ, ಹೃದಯಾಘಾತದ ಅಪಾಯ ಹೆಚ್ಚಾಗಿ ಕಂಡುಬಂದಿದೆ ಎಂಬುದನ್ನು ಸಂಶೋಧಕರು ಕಂಡುಕೊಂಡಿದ್ದು, ಹೃದಯ ಸಂಬಂಧಿತ ಸಮಸ್ಯೆ ಇರುವವರು ತುಂಬಾ ಜಾಗರೂಕರಾಗಿರಬೇಕಾಗುತ್ತದೆ. ಜೊತೆಗೆ ಈ ರೀತಿ ಆಗುವುದಕ್ಕೆ ಕಾರಣವೇನು, ಕಡಿಮೆ ರಕ್ತದೊತ್ತಡ ಎಷ್ಟು ಅಪಾಯಕಾರಿ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಾಮಾನ್ಯ ರಕ್ತದೊತ್ತಡ ಹೇಗಿರಬೇಕು?

ಸಂಶೋಧನೆಯು ರಕ್ತದೊತ್ತಡ ಸುಮಾರು 120/80 ಎಂಎಂಎಚ್‌ಜಿ ಆಗಿರಬೇಕು. ರಕ್ತದೊತ್ತಡ 90/60 ಕ್ಕಿಂತ ಕಡಿಮೆಯಿದ್ದರೆ, ಅದನ್ನು ಕಡಿಮೆ ರಕ್ತದೊತ್ತಡ ಎಂದು ಪರಿಗಣಿಸಲಾಗುತ್ತದೆ. ಈ ಮಟ್ಟದ ರಕ್ತದೊತ್ತಡವು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ನಿಮ್ಮ ರಕ್ತದೊತ್ತಡ ಸಾಮಾನ್ಯವಾಗಿ ಈ ವ್ಯಾಪ್ತಿಯಲ್ಲಿದ್ದರೆ, ಅದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ದೆಹಲಿಯ ರಾಜೀವ್ ಗಾಂಧಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಡಾ. ಅಜಿತ್ ಜೈನ್ ಅವರು ಹೇಳುವ ಪ್ರಕಾರ, ಕಡಿಮೆ ರಕ್ತದೊತ್ತಡವು ಒಂದು ಪ್ರಮುಖ ಸಮಸ್ಯೆಯಾಗಿದ್ದು ಜನ ಸಾಮಾನ್ಯವಾಗಿ ಅಧಿಕ ರಕ್ತದೊತ್ತಡವನ್ನು ಅಪಾಯಕಾರಿ ಎಂದು ಪರಿಗಣಿಸುತ್ತಾರೆ. ಆದರೆ ಸಾಮಾನ್ಯ ಮಿತಿಗಿಂತ ಹೆಚ್ಚಿನ ಅಥವಾ ಕಡಿಮೆ ರಕ್ತದೊತ್ತಡವಿದ್ದರೆ ಅದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೈಬಿಪಿ, ಡಯಾಬಿಟಿಸ್ ಕಿಡ್ನಿಗೆ ಹಾನಿ ಮಾಡುತ್ತದೆಯೇ? ನೀವು ತಿಳಿಯಬೇಕಾದ ವಿಷಯಗಳಿವು!

ಕಡಿಮೆ ರಕ್ತದೊತ್ತಡ ಎಷ್ಟು ಅಪಾಯಕಾರಿ?

ರಕ್ತದೊತ್ತಡ ಕಡಿಮೆಯಾಗಲು ಪ್ರಾರಂಭಿಸಿದಾಗ, ಆಮ್ಲಜನಕ ಮೆದುಳಿಗೆ ಸರಿಯಾಗಿ ತಲುಪುವುದಿಲ್ಲ, ಇದು ಮೆದುಳಿನ ಕಾರ್ಯದ ಮೇಲೆ ಪರಿಣಾಮ ಬೀರುತ್ತದೆ. ಅದೇ ರೀತಿ, ಆಮ್ಲಜನಕ ಹೃದಯವನ್ನು ತಲುಪದಿದ್ದರೆ, ಅದು ಹೃದಯದ ಕಾರ್ಯದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಯಾವುದೇ ಕಾರಣವಿರಲಿ, ಆಮ್ಲಜನಕದ ಪೂರೈಕೆ ಇದ್ದಕ್ಕಿದ್ದಂತೆ ಕಡಿಮೆಯಾದರೆ, ಹೃದಯವು ಕೆಲಸ ಮಾಡುವುದನ್ನು ನಿಲ್ಲಿಸಬಹುದು, ಅದು ಸಾವಿಗೆ ಕಾರಣವಾಗಬಹುದು. ಹಾಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ – Kannada News | 6 dead several injured in bus accident in Balotra

ಜೈಪುರ, ಫೆಬ್ರವರಿ 27: ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಸರ್ವಾಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-25ರಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) 6 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಸ್ಲೀಪರ್ ಬಸ್ ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರೇಲರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬಸ್ ಜೋಧ್‌ಪುರದಿಂದ ಸಂಚೋರ್‌ಗೆ ಪ್ರಯಾಣಿಸುತ್ತಿದ್ದಾಗ, ಟ್ರೇಲರ್ ಜೋಧ್‌ಪುರದ ಕಡೆಗೆ ಹೋಗುತ್ತಿತ್ತು. ಬಸ್​ನ ಕೆಲವು ಭಾಗಗಳಲ್ಲಿ ರಕ್ತ ಹರಡಿಕೊಂಡಿದ್ದು, ಹಲವಾರು ಶವಗಳು ಒಳಗೆ ಸಿಲುಕಿಕೊಂಡಿರುವುದು ಕಂಡುಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ, ಹೇಳಿದ್ದೇನು? – Kannada News | Ranji Trophy Final: Jammu and Kashmir CM Omar Abdullah arrives in Hubballi for cheer up the team

ಹುಬ್ಬಳ್ಳಿ, (ಫೆಬ್ರವರಿ 27): ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ (Jammu Kashmir )ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯವನ್ನು ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ  (Jammu Kashmir CM Omar Abdullah) ಹುಬ್ಬಳ್ಳಿಗೆ (Hubballi) ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿಳಿದ್ದು, ನಾಳೆ (ಫೆಬ್ರವರಿ 28) ಕೊನೆ ದಿನದ ಆಟವನ್ನು ವೀಕ್ಷಿಸಿ ತಂಡಕ್ಕೆ ಚೇರಪ್ ಮಾಡಲಿದ್ದಾರೆ.

ಇನ್ನು ಇಂದು(ಫೆಬ್ರವರಿ 27) ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ ಓಮರ್ ಅಬ್ದುಲ್ಲಾ ಮಾಧ್ಯಮಗಳ ಜೊತೆ ಮಾತನಾಡಿದ್ದು, ನಮ್ಮ ತಂಡ ಮೊದಲ ಬಾರಿಗೆ ರಣಜಿ ಗೆಲ್ಲುವ ಹೊಸ್ತಿಲಲ್ಲಿದೆ. ನಮ್ಮ ತಂಡವನ್ನು ಪ್ರೋತ್ಸಾಹಿಸಲು ಹುಬ್ಬಳ್ಳಿಗೆ ಬಂದಿದ್ದೇನೆ. ಜಮ್ಮು-ಕಾಶ್ಮೀರ ತಂಡ ಈ ಹಂತಕ್ಕೆ ಬರಲ್ಲ ಅನ್ನುತ್ತಿದ್ದರು. ಆದ್ರೆ, ನಮ್ಮ ಆಟಗಾರರು ಉತ್ತಮವಾಗಿ ಆಡಿ ತೋರಿಸಿದ್ದಾರೆ. ಫೈನಲ್ ನಲ್ಲಿಯೂ ಉತ್ತಮ ಪ್ರದರ್ಶನವನ್ನ ನೀಡುತ್ತಿದ್ದಾರೆ. ಜಮ್ಮು-ಕಾಶ್ಮೀರದಲ್ಲೂ ಒಳ್ಳೇ ಕ್ರಿಕೆಟ್ ಆಟಗಾರರು ಇದ್ದಾರೆ. ಇದಕ್ಕೆ ರಣಜಿಯಲ್ಲಿ ತೋರಿದ ಪ್ರದರ್ಶನವೇ ಸಾಕ್ಷಿಯಾಗಿದ್ದು, ನಾವು ಖಂಡಿತವಾಗಿ ಟ್ರೋಫಿ ತೆಗೆದುಕೊಂಡು ಹೋಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನು ಓದಿ: Ranji Trophy Final: ತವರಿನಲ್ಲಿ ಎಡವಿದ ಕರ್ನಾಟಕ; ಚಾಂಪಿಯನ್ ಪಟ್ಟದತ್ತ ಜಮ್ಮುಕಾಶ್ಮೀರ

Source link

ಸಿಎಂ ಉದ್ಘಾಟಿಸಿದ್ರೂ ಬಳಕೆಯಾಗದ ಐದಂತಸ್ತಿನ ಭವನ: ಮಾದಪ್ಪನ ಭಕ್ತರ ಪಾಡು ಕೇಳೋರ್‍ಯಾರು? – Kannada News | Male Mahadeshwara: Vajramale Building Ready, But Devotees Still Await Accommodation

ಚಾಮರಾಜನಗರ, ಫೆಬ್ರವರಿ 27: ಮಾದಪ್ಪನ ಭಕ್ತರು ಕೋಟ್ಯಂತರ ಸಂಖ್ಯೆಯಲ್ಲಿದ್ದಾರೆ. ಹಬ್ಬ, ಹರಿದಿನ ಸೇರಿದಂತೆ ಅಮವಾಸ್ಯೆ ಬಂದರೆ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Betta) ಕಾಲಿಡಲು ಸ್ಥಳ ಇರುವುದಿಲ್ಲ. ತಂಗುವುದಕ್ಕೂ ಸ್ಥಳವಿರಲ್ಲ. ಈ ಸಮಸ್ಯೆ ಬಗೆ ಹರಿಸುವುದಕ್ಕೆ ಪ್ರಾಧಿಕಾರ ಮುಂದಾಗಿದೆ. 376 ಕೊಠಡಿಯ ವಜ್ರ ಮಲೆ ಕಟ್ಟಡ ಉದ್ಘಾಟಿಸಲಾಗಿದೆ. ಆದರೂ ಪ್ರಯೋಜನಕ್ಕೆ ಬಾರದ ರೀತಿಯಂತಾಗಿದೆ. ಪ್ರಾಧಿಕಾರದ ವಿಳಂಬ ನಡೆಗೆ ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಏಳು ಎಪ್ಪತ್ತೇಳು ಮಲೆಯ ಒಡೆಯ ಮಲೆ ಮಾದಪ್ಪನಿಗೆ ಭಕ್ತ ವೃಂದ ಅಪಾರ. ರಾಜ್ಯ ಅಷ್ಟೇ ಅಲ್ಲದೆ ಹೊರ ರಾಜ್ಯದಿಂದಲೂ ಮಾದಪ್ಪನ ದರ್ಶನ ಪಡೆಯಲು ಕೋಟ್ಯಂತರ ಸಂಖ್ಯೆಯಲ್ಲಿ ಬರುತ್ತಾರೆ. ಹೀಗೆ ಬರುವ ಭಕ್ತ ವೃಂದಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವುದು ಪ್ರಾಧಿಕಾರದ ಆದ್ಯ ಕರ್ತವ್ಯ. ಹಾಗಾಗಿ ದೂರದ ಊರಿನಿಂದ ಬರುವ ಭಕ್ತಾದಿಗಳು ವಿಶ್ರಮಿಸಲು ಕೊಠಡಿಗಳ ಕೊರತೆ ಇರುವ ಕಾರಣ 5 ಮಹಡಿಯಲ್ಲಿ 376 ಕೊಠಡಿಗಳು ಉಳ್ಳ ವಜ್ರ ಭವನ ನಿರ್ಮಾಣ ಮಾಡಲಾಗಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್ ದಿನ ಸ್ವತಃ ಸಿಎಂ ಸಿದ್ದರಾಮಯ್ಯ  ಉದ್ಘಾಟನೆ ಮಾಡಿದ್ದರು. ಆದರೂ ಇವರೆಗೆ ಭಕ್ತರ ವಾಸ್ತವ್ಯಕ್ಕೆ ನೀಡದೆ ಇರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಮಲೆ ಮಹದೇಶ್ವರನಿಗೆ ಮಹಾಮೋಸ: ಸಚಿವರ ಕೈಗೆ ರೆಡ್​​​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ಗುತ್ತಿಗೆದಾರರು

ಇನ್ನು ಈ ನೂತನ ವಜ್ರಮಲೆ ಭವನದಲ್ಲಿ ಬರೋಬ್ಬರಿ 8 ವಿವಿಐಪಿ ಕೊಠಡಿಗಳಿದ್ದು, ಕೇವಲ ಈ ಕೊಠಡಿಗಳಿಗೆ ಮಾತ್ರ ಎಸಿ ಸೇರಿದಂತೆ ಮಂಚ, ಸೋಫಾ ಹಾಗೂ ಎಲ್ಲಾ ರೀತಿಯ ಫರ್ನಿಚರ್​ಗಳನ್ನ ಅಳವಡಿಸಲಾಗುತ್ತಿದೆ. ಇನ್ನುಳಿದ ಸಾಮಾನ್ಯ ಕೊಠಡಿಗಳಿಗೆ ಇನ್ನು ಪೀಠೋಪಕರಣ ಅಳವಡಿಕೆ ಮಾಡುವ ಕೆಲಸ ಮಾಡಲಾಗುತ್ತಿದೆ.

ಇತ್ತೀಚೆಗೆ ಸ್ವತಃ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್ ಮಂಜುನಾಥ್​​ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದು, 11 ಕೋಟಿ ರೂ ವೆಚ್ಛದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಪೀಠೋಪಕರಣದಲ್ಲಿ ತೇಗ ಮರವನ್ನ ಬಳಸದೆ ಬಿಳಿ ಮರ ಬಳಸಿದ್ದನ್ನ ಕಂಡು ಸ್ವತಃ ಸಚಿವ ಕೆ ವೆಂಕಟೇಶ್ ಕೆಂಡಾಮಂಡಲರಾದರು. ಕಳಪೆ ಕಾಮಗಾರಿ ನಡೆಸದಂತೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಮನ್​ ಕಿ ಬಾತ್​​ ಪ್ರೇರಣೆ: ಸಿರಿಧಾನ್ಯದ ಹೋಟೆಲ್ ತೆರೆದ ಚಾಮರಾಜನಗರದ ಗೃಹಿಣಿ

ಆರಂಭ ಶೂರತ್ವದಂತೆ ಆರಂಭಿಸಿ ಬಳಿಕ ಕೆಲಸ ಆದಮೇಲೆ ಯಾರಿಗೂ ಪ್ರಯೋಜನಕ್ಕೆ ಬಾರದೆ ಇರುವ ರೀತಿ ಮಾಡಿದ ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ರಘು ನಡೆ ಈಗ ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link