All posts by nagaraj11081993

ಅತ್ತಿಗೆ ರಶ್ಮಿಕಾ ಬಗ್ಗೆ ವಿಜಯ್ ಸಹೋದರ ಆನಂದ್ ದೇವರಕೊಂಡ ಹೇಳಿದ್ದೇನು? – Kannada News | Vijay Deverakonda brother Anand Deverakonda Insta post about Rashmika Mandanna

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ವಿವಾಹವಾಗಿದ್ದಾರೆ. ಇವರಿಬ್ಬರ ವಿವಾಹ ಉದಯಪುರದ ಐಟಿಸಿ ಮೆಮಂಟೋಸ್​​ನಲ್ಲಿ ಅದ್ಧೂರಿಯಾಗಿ ನಡೆದಿದೆ. ಎರಡೂ ಕುಟುಂಬದ ಆಪ್ತರು, ಬಹಳ ಆಪ್ತ ಸ್ನೇಹಿತರು ಸಂಬಂಧಿಗಳ ಎದುರು ಈ ಜೋಡಿ ಅಧಿಕೃತವಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ರಶ್ಮಿಕಾ ಅವರು ಇದೀಗ ಅಧಿಕೃತವಾಗಿ ದೇವರಕೊಂಡ ಮನೆ ಸೊಸೆ. ದೇವರಕೊಂಡ ಕುಟುಂಬದವರು ಹೊಸ ಸದಸ್ಯೆಯನ್ನು ಬಲು ಪ್ರೀತಿಯಿಂದ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

ವಿಜಯ್ ದೇವರಕೊಂಡ ಅವರ ತಾಯಿ ಮಾಧವಿ ದೇವರಕೊಂಡ ಅವರು ರಶ್ಮಿಕಾಗೆ ತಮ್ಮ ಕುಟುಂಬದಲ್ಲಿ ತಲೆ-ತಲಾಂತರಗಳಿಂದ ಬಂದಿದ್ದ ವಿಶೇಷ ಚಿನ್ನದ ಬಳೆಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಬಳೆಗಳನ್ನು ಪಡೆದ ರಶ್ಮಿಕಾ ಭಾವುಕರಾಗಿದ್ದಾರೆ. ಇದೀಗ ವಿಜಯ್ ದೇವರಕೊಂಡ ಅವರ ಸಹೋದರ ಆನಂದ್ ದೇವರಕೊಂಡ ಸಹ ತಮ್ಮ ಕುಟುಂಬಕ್ಕೆ ರಶ್ಮಿಕಾರನ್ನು ಸ್ವಾಗತಿಸಿದ್ದಾರೆ. ರಶ್ಮಿಕಾ ಬಗ್ಗೆ ವಿಶೇಷ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ವಿಜಯ್ ಮತ್ತು ರಶ್ಮಿಕಾರನ್ನು ಮದುವೆ ಮಂಟಪದಲ್ಲಿ ತಬ್ಬಿ ಹಿಡಿದಿರುವ ಚಿತ್ರವನ್ನು ಹಂಚಿಕೊಂಡಿರುವ ಆನಂದ್ ದೇವರಕೊಂಡ, ‘ನಾನು ಹೋದಲ್ಲೆಲ್ಲ ಹಲವಾರು ಬಾರಿ ಅಭಿಮಾನಿಗಳು ‘ಅತ್ತಿಗೆ ಹೇಗಿದ್ದಾರೆ’ ಎಂದು ಕಿರುಚುತ್ತಿದ್ದರು, ಆದರೆ ಅವರಿಗೆ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂಬುದು ನನಗೆ ಗೊತ್ತಾಗುತ್ತಿರಲಿಲ್ಲ. ಇಂದು ನನ್ನ ಅಣ್ಣ ಮದುವೆಯಾಗಿದ್ದಾನೆ. ಅತ್ಯಂತ ಸಕಾರಾತ್ಮಕ ಮತ್ತು ಸಹಾನುಭೂತಿಯ ವ್ಯಕ್ತಿಯನ್ನು ಅತ್ತಿಗೆಯಾಗಿ ನಾನು ಪಡೆದುಕೊಂಡಿದ್ದೇನೆ. ತಮ್ಮ ಜೀನದಾದ್ಯಂತ ಇವರಿಬ್ಬರು (ವಿಜಯ್-ರಶ್ಮಿಕಾ) ಹೀಗೆಯೇ ನಗುತ್ತಲೇ ಇರಲಿ, ನಗುತ್ತಲೇ ಜೀವನ ಪರ್ಯಂತ ಜೊತೆಯಾಗಿರಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ ಆನಂದ್ ದೇವರಕೊಂಡ.

ಇದನ್ನೂ ಓದಿ:Photo Gallery: ಮದುವೆ ಫೋಟೋ ಜೊತೆ ರಶ್ಮಿಕಾ ಮಂದಣ್ಣ ಎಮೋಷನಲ್ ಮಾತು

ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ಸಹ ತೆಲುಗು ಚಿತ್ರರಂಗದ ನಟರಾಗಿದ್ದು, ಕೆಲವು ಒಳ್ಳೆಯ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಅಣ್ಣನಂತೆ ಮಾಸ್ ಸಿನಿಮಾಗಳಲ್ಲಿ ನಟಿಸದೆ ತಮಗೆ ಹೊಂದಿಕೆ ಆಗುವಂಥಹ ಕಾಮಿಡಿ, ರೊಮ್ಯಾಂಟಿಕ್ ಸಿನಿಮಾಗಳನ್ನು ಆನಂದ್ ನಟಿಸುತ್ತಾ ಸಾಗುತ್ತಿದ್ದಾರೆ. ರಶ್ಮಿಕಾ ಅವರೊಟ್ಟಿಗೆ ಮೊದಲಿನಿಂದಲೂ ಆನಂದ್​​ಗೆ ಒಳ್ಳೆಯ ಗೆಳೆತನವಿದೆ. ಆನಂದ್ ಅವರು ತಮ್ಮ ಒಂದು ಸಿನಿಮಾದ ಪ್ರೀ ರಿಲೀಸ್ ಇವೆಂಟ್​​ಗೆ ರಶ್ಮಿಕಾರನ್ನೇ ಅತಿಥಿಯನ್ನಾಗಿ ಕರೆದಿದ್ದರು. ಅಂದು ಆನಂದ್ ಬಗ್ಗೆ ಭಾವುಕರಾಗಿ ರಶ್ಮಿಕಾ ಮಾತನಾಡಿದ್ದರು. ಒಟ್ಟಾರೆ ರಶ್ಮಿಕಾ, ಪ್ರೀತಿ ತುಂಬಿದ ಮನೆಗೆ ಸೊಸೆಯಾಗಿ ಕಾಲಿರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದಾವಣಗೆರೆ-ಬೆಂಗಳೂರು ಪ್ರಯಾಣಕ್ಕೆ ಎರಡೂವರೆ ಗಂಟೆ ಸಾಕು! ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಮುಂದಿನ ವರ್ಷ ಸಿದ್ಧ – Kannada News | Tumakuru–Chitradurga–Davanagere New Railway Line to Be Ready by 2027; Bengaluru Travel Time to Drop to 2.5 Hours

ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಮುಂದಿನ ವರ್ಷ ಸಿದ್ಧImage Credit source: tv9

ದಾವಣಗೆರೆ, ಫೆಬ್ರವರಿ 27: ಮಧ್ಯ ಕರ್ನಾಟಕದ ಜನತೆಯ ಬಹುಕಾಲದ ಕನಸು ಈಡೇರುವ ಹಂತಕ್ಕೆ ಬಂದಿದೆ. ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ 2027ರ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಭಾರತೀಯ ರೈಲ್ವೆ (Indian Railway) ಸ್ಪಷ್ಟಪಡಿಸಿದೆ. ಈ ಘೋಷಣೆಯಿಂದ ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ (Karnataka) ಜನರಲ್ಲಿ ಹರ್ಷ ವ್ಯಕ್ತವಾಗಿದೆ. ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ (V Somanna) ಗುರುವಾರ ದಾವಣಗೆರೆ ಜಿಲ್ಲೆಯ ತೋಳಹುಣಸೆಯಿಂದ ಚಿತ್ರದುರ್ಗ–ತುಮಕೂರು ನೇರ ರೈಲು ಮಾರ್ಗದ ಕಾಮಗಾರಿ ಪರಿಶೀಲನೆ ನಡೆಸಿದರು.

ತೋಳಹುಣಸೆಯಿಂದ ಆನಗೋಡು ರೈಲು ನಿಲ್ದಾಣದವರೆಗೆ ಮೋಟಾರ್ ಟ್ರಾಲಿಯಲ್ಲಿ ಸಂಚರಿಸಿ ಕಾಮಗಾರಿಯ ಪ್ರಗತಿಯನ್ನು ಸೋಮಣ್ಣ ಅವಲೋಕಿಸಿದರು. ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಇನ್ನೂ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣವಾಗಿಲ್ಲವೆಂದು ತಿಳಿದುಬಂದಿದೆ. ಈ ವಿಳಂಬದ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿ, ಮಾರ್ಚ್ 31ರೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

20 ವರ್ಷಗಳ ಹಿಂದೆ ಆರಂಭಗೊಂಡಿದ್ದ ಯೋಜನೆ

ತುಮಕೂರು–ಚಿತ್ರದುರ್ಗ–ದಾವಣಗೆರೆ ರೈಲು ಮಾರ್ಗ ಯೋಜನೆ ಸುಮಾರು 20 ವರ್ಷಗಳ ಹಿಂದೆ ಪ್ರಾರಂಭಗೊಂಡಿತ್ತು. ಯೋಜನೆಗೆ ಒಟ್ಟು ಸುಮಾರು 1200 ಎಕರೆ ಜಮೀನು ಅಗತ್ಯವಿದ್ದು, ಇದರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲೇ ಇನ್ನೂ ಸುಮಾರು 111 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗಿದೆ.

ಮೋಟಾರ್ ಟ್ರಾಲಿಯಲ್ಲಿ ಸಂಚರಿಸಿ ಕಾಮಗಾರಿ ಪ್ರಗತಿ ಪರಿಶೀಲಿಸಿದ ಸೋಮಣ್ಣ

ರೈಲ್ವೆ ಇಲಾಖೆಯ ಅಭಿವೃದ್ಧಿ ಕಾರ್ಯಗಳಿಗೆ ಈ ವರ್ಷ ದೇಶವ್ಯಾಪಿಯಾಗಿ 52,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕರ್ನಾಟಕದ ವಿವಿಧ ಯೋಜನೆಗಳಿಗೆ 7,800 ಕೋಟಿ ರೂ. ಮೀಸಲಾಗಿದೆ. ಜೊತೆಗೆ ರೈಲು ನಿಲ್ದಾಣಗಳ ಮೂಲಭೂತ ಸೌಕರ್ಯಗಳು ಹಾಗೂ ಶೌಚಾಲಯಗಳ ಅಭಿವೃದ್ಧಿಗಾಗಿ 2,093 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಸೋಮಣ್ಣ ತಿಳಿಸಿದರು.

ಹೊಸ ಮಾರ್ಗದಲ್ಲಿ ತೋಳಹುಣಸೆಯಿಂದ ಹೆಬ್ಬಾಳದವರೆಗೆ ಕಾಮಗಾರಿ ವೇಗವಾಗಿ ಸಾಗುತ್ತಿದೆ. ಭವಿಷ್ಯದ ಜನಸಂಖ್ಯೆ ಮತ್ತು ಪ್ರಯಾಣಿಕರ ಸಂಖ್ಯೆ ಗಮನದಲ್ಲಿಟ್ಟು ಕನಿಷ್ಠ 21 ಬೋಗಿಗಳ ರೈಲು ನಿಲುಗಡೆಗೊಳ್ಳುವಂತೆ ನಿಲ್ದಾಣಗಳನ್ನು ವಿಸ್ತರಿಸಲಾಗುತ್ತಿದೆ. ಆದರೆ ಕೆಲವೆಡೆ ಕಿಡಿಗೇಡಿಗಳು ಕಲ್ಲು ಎಸೆದು ಕಾಮಗಾರಿಗೆ ಅಡ್ಡಿಪಡಿಸುತ್ತಿರುವ ಬಗ್ಗೆ ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ವಂದೇ ಭಾರತ್ ರೈಲಿನ ವೇಳಾಪಟ್ಟಿ ಬದಲಾಯಿಸಲು ಆಗ್ರಹಿಸಿದರು. ಜೊತೆಗೆ ದಾವಣಗೆರೆ ಲಿಂಗೇಶ್ವರ ದೇವಸ್ಥಾನದ ಬಳಿ ಸೇವಾ ರಸ್ತೆ ನಿರ್ಮಾಣ, ದಾವಣಗೆರೆ–ಹುಬ್ಬಳ್ಳಿ–ಬೆಳಗಾವಿ ಮಾರ್ಗವಾಗಿ ಬೆಂಗಳೂರು–ಮುಂಬೈ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿದರು. ಈ ಯೋಜನೆಯಿಂದ ಮುಂಬೈ ವ್ಯಾಪಾರಿಗಳಿಗೆ ಹಾಗೂ ಮಧ್ಯ ಕರ್ನಾಟಕದ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ದಾವಣಗೆರೆ-ಬೆಂಗಳೂರು ಪ್ರಯಾಣ ಸುಗಮ

ಪ್ರಸ್ತುತ ದಾವಣಗೆರೆಯಿಂದ ಬೆಂಗಳೂರಿಗೆ ಬಸ್ ಮೂಲಕ ಪ್ರಯಾಣಿಸಲು ಕನಿಷ್ಠ 4 ರಿಂದ 5 ಗಂಟೆ, ಕಾರಿನಲ್ಲಿ 3 ರಿಂದ 4 ಗಂಟೆ ಸಮಯ ಬೇಕಾಗುತ್ತದೆ. ಆದರೆ ಈ ನೂತನ ರೈಲು ಮಾರ್ಗ ಪೂರ್ಣಗೊಂಡ ಬಳಿಕ ಸುಮಾರು 2 ಗಂಟೆ 30 ನಿಮಿಷಗಳಲ್ಲಿ ಬೆಂಗಳೂರು ತಲುಪಲು ಸಾಧ್ಯವಾಗಲಿದೆ. ಹೀಗಾಗಿ ಈ ಯೋಜನೆ ಮಧ್ಯ ಕರ್ನಾಟಕದ ಸಾರಿಗೆ ವ್ಯವಸ್ಥೆಗೆ ಕ್ರಾಂತಿಕಾರಿ ಬದಲಾವಣೆ ತರುವುದರಲ್ಲಿ ಸಂಶಯವೇ ಇಲ್ಲ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಸೆಂಟರ್: ವಿ ಸೋಮಣ್ಣ ಮಹತ್ವದ ಘೋಷಣೆ

ಒಟ್ಟಿನಲ್ಲಿ, ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗ ಪೂರ್ಣಗೊಂಡರೆ ದಾವಣಗೆರೆ–ಬೆಂಗಳೂರು ಸಂಪರ್ಕಕ್ಕೆ ಹೊಸ ವೇಗ ಸಿಗಲಿದ್ದು, ವ್ಯಾಪಾರ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಿಗೆ ಮಹತ್ತರ ಉತ್ತೇಜನ ದೊರೆಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:05 am, Fri, 27 February 26

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Heat wave alert in Bengaluru, light rain in few places of Karnataka

ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ

ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಯಾದಗಿರಿ, ರಾಯಚೂರು, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಶಿವಮೊಗ್ಗ,ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ, ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರಿನಲ್ಲಿಒಣ ಹವೆಯ ವಾತಾವರಣ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Afghanistan-Pakistan Conflict: ಪಾಕಿಸ್ತಾನ-ಅಫ್ಘಾನಿಸ್ತಾನದ ನಡುವೆ ಯುದ್ಧ ಸ್ಥಿತಿ, ದಾಳಿ, ಪ್ರತಿ ದಾಳಿ, ತಾಲಿಬಾನ್ ಕ್ರಮದಿಂದ ಬೆರಗಾದ ಪಾಕ್ – Kannada News | Violent Border Clashes Erupt Between Pakistan and Afghan Forces

ಇಸ್ಲಾಮಾಬಾದ್, ಫೆಬ್ರವರಿ 27: ಪಾಕಿಸ್ತಾನ(Pakistan) ಮತ್ತು ಅಫ್ಘಾನಿಸ್ತಾನ ನಡುವೆ ಯುದ್ಧದಂತಹ ಪರಿಸ್ಥಿತಿಗಳು ಎದುರಾಗುತ್ತಿವೆ. ಅಫ್ಘಾನಿಸ್ತಾನ ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 55 ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಕಾಬೂಲ್ ಹೇಳಿದೆ. ಪಾಕಿಸ್ತಾನ ಕೂಡ ತರಾತುರಿಯಲ್ಲಿ ಮತ್ತೆ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಅಫ್ಘಾನ್ ಸೈನಿಕರ ದಾಳಿಯ ನಂತರ, ಕಾಬೂಲ್, ಕಂದಹಾರ್ ಮತ್ತು ಪಕ್ತಿಯಾದಲ್ಲಿನ ತಾಲಿಬಾನ್ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ.

ಕೆಲವೊಮ್ಮೆ ಪಾಕಿಸ್ತಾನ ರಕ್ತದೊಂದಿಗೆ ಹೋಳಿ ಆಡುತ್ತಿದ್ದರೆ, ಕೆಲವೊಮ್ಮೆ ಅಫ್ಘಾನಿಸ್ತಾನ ಸೇಡಿನ ಬೆಂಕಿಯಲ್ಲಿ ಪಾಕಿಸ್ತಾನವನ್ನು ನಾಶಮಾಡುತ್ತಿದೆ. ಪಾಕಿಸ್ತಾನ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿತು.ಅಫ್ಘಾನಿಸ್ತಾನವು ಬಲವಾಗಿ ಪ್ರತಿದಾಳಿ ನಡೆಸಿದೆ. ಅಫ್ಘಾನಿಸ್ತಾನವು 55 ಪಾಕಿಸ್ತಾನಿ ಸೈನಿಕರನ್ನು ಕೊಂದಿದೆ.

ಇದು ಪಾಕಿಸ್ತಾನವನ್ನು ಕೆರಳಿಸಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಮಧ್ಯರಾತ್ರಿ ಬಾಂಬ್ ದಾಳಿಯನ್ನು ಕೂಡ ಅದು ಆತುರದಿಂದ ನಡೆಸಿದೆ. ಪಾಕಿಸ್ತಾನವು ಅಫ್ಘಾನ್ ತಾಲಿಬಾನ್ ಆಡಳಿತದ ವಿರುದ್ಧ ಆಪರೇಷನ್ ಗಜಬ್ ಲಿಲ್ ಹಕ್ ಅನ್ನು ಪ್ರಾರಂಭಿಸಿದೆ. ರಾತ್ರಿಯಿಡೀ ನಡೆದ ವಾಯುದಾಳಿಯ ಮೂಲಕ ಅಫ್ಘಾನಿಸ್ತಾನದಲ್ಲಿ 130 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಪ್ರಸ್ತುತ, ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿದೆ.

ಮತ್ತಷ್ಟು ಓದಿ: ‘ಸ್ಟಾಂಡ್​ಅಪ್’ ಕಾಮಿಡಿ; ಟ್ರಂಪ್ ಮುಂದೆ ಶಾಲಾ ಬಾಲಕನಾದ ಪಾಕಿಸ್ತಾನದ ಪ್ರಧಾನಿ

ಕಾಬೂಲ್, ಕಂದಹಾರ್‌ನಲ್ಲಿರುವ ಅಫ್ಘಾನ್ ತಾಲಿಬಾನ್ ರಕ್ಷಣಾ ಸ್ಥಾನಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ. ಪಾಕಿಸ್ತಾನದ ವೈಮಾನಿಕ ದಾಳಿಗಳು ಅಫ್ಘಾನ್ ತಾಲಿಬಾನ್ ಸರ್ಕಾರದ 27 ಔಟ್‌ಪೋಸ್ಟ್‌ಗಳನ್ನು ನಾಶಪಡಿಸಿದವು ಮತ್ತು ಪಾಕಿಸ್ತಾನ ಒಂಬತ್ತು ಔಟ್‌ಪೋಸ್ಟ್‌ಗಳನ್ನು ವಶಪಡಿಸಿಕೊಂಡಿತು.

ಪಾಕಿಸ್ತಾನದ ಇತ್ತೀಚಿನ ವೈಮಾನಿಕ ದಾಳಿಗಳಿಗೆ ಪ್ರತಿಯಾಗಿ ಪಾಕಿಸ್ತಾನದ ವಿರುದ್ಧ ಪ್ರತೀಕಾರದ ದಾಳಿ ನಡೆಸುತ್ತಿರುವುದಾಗಿ ಅಫ್ಘಾನಿಸ್ತಾನ ಗುರುವಾರ ರಾತ್ರಿ ಹೇಳಿಕೊಂಡಿದೆ. ಅಫ್ಘಾನ್ ಅಧಿಕಾರಿಗಳ ಪ್ರಕಾರ, ಗಡಿ ಪ್ರದೇಶದಲ್ಲಿನ ಕಾರ್ಯಾಚರಣೆಯ ಸಂದರ್ಭದಲ್ಲಿ ಇದುವರೆಗೆ 15 ಶತ್ರು ನೆಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯ ಸಮಯದಲ್ಲಿ ಹಲವಾರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಕೆಲವರನ್ನು ಜೀವಂತವಾಗಿ ಸೆರೆಹಿಡಿಯಲಾಗಿದೆ ಎಂದು ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್‌ನ ಉಪ ವಕ್ತಾರ ಹಮ್ದುಲ್ಲಾ ಫಿತ್ರಾತ್ ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾನುವಾರ ಅಫ್ಘಾನ್ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಗೆ ಪ್ರತಿಯಾಗಿ ಗುರುವಾರ ತಡರಾತ್ರಿ ತನ್ನ ಪಡೆಗಳು ಪಾಕಿಸ್ತಾನದ ಮೇಲೆ ಗಡಿಯಾಚೆಗಿನ ದಾಳಿ ನಡೆಸಿತ್ತು ಮತ್ತು ಒಂದು ಡಜನ್‌ಗೂ ಹೆಚ್ಚು ಪಾಕಿಸ್ತಾನಿ ಸೇನಾ ಠಾಣೆಗಳನ್ನು ವಶಪಡಿಸಿಕೊಂಡಿರುವುದಾಗಿ ಅಫ್ಘಾನಿಸ್ತಾನ ಹೇಳಿತ್ತು. ಫೆಬ್ರವರಿ 22 ರಂದು ಪಾಕಿಸ್ತಾನವು ಅಫ್ಘಾನಿಸ್ತಾನದಲ್ಲಿ ಟಿಟಿಪಿ ಅಡಗುತಾಣಗಳ ಮೇಲೆ ದಾಳಿ ಮಾಡಿತ್ತು, ಅಫ್ಘಾನಿಸ್ತಾನ ಪ್ರತೀಕಾರದ ಎಚ್ಚರಿಕೆ ನೀಡಿತು. ಗುರುವಾರ ತಡರಾತ್ರಿ ಅಫ್ಘಾನ್ ತಾಲಿಬಾನ್ ಪ್ರತಿದಾಳಿ ಆರಂಭಿಸಿತು.

ವಾಸ್ತವವಾಗಿ, ಅಫ್ಘಾನಿಸ್ತಾನದ ನಂಗರ್‌ಹಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ಪಾಕಿಸ್ತಾನಿ ಮಿಲಿಟರಿ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 13 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನದಲ್ಲಿನ ವಿಶ್ವಸಂಸ್ಥೆಯ ಸಹಾಯ ಮಿಷನ್ (UNAMA) ದೃಢಪಡಿಸಿದೆ.

ಇತ್ತೀಚಿನ ವೈಮಾನಿಕ ದಾಳಿಯಲ್ಲಿ 13 ಅಫ್ಘಾನ್ ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು UNAMA ವರದಿಯನ್ನು ಉಲ್ಲೇಖಿಸಿ ಅಫ್ಘಾನಿಸ್ತಾನದ ಪ್ರಮುಖ ಸುದ್ದಿ ಸಂಸ್ಥೆ ಖಾಮಾ ಪ್ರೆಸ್ ಬಹಿರಂಗಪಡಿಸಿದೆ. ಈ ದಾಳಿಗಳು ಫೆಬ್ರವರಿ 21-22ರ ರಾತ್ರಿ ನಂಗರ್‌ಹಾರ್‌ನ ಬೆಹ್ಸುದ್ ಮತ್ತು ಖೋಗ್ಯಾನಿ ಜಿಲ್ಲೆಗಳಲ್ಲಿ ನಡೆದಿವೆ.

ಅಕ್ಟೋಬರ್‌ನಲ್ಲಿ ನಡೆದ ಹಿಂಸಾತ್ಮಕ ಗಡಿ ಘರ್ಷಣೆಗಳ ನಂತರ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಸಂಬಂಧಗಳು ಹದಗೆಟ್ಟಿವೆ. ಇದರ ಪರಿಣಾಮವಾಗಿ ಎರಡೂ ದೇಶಗಳ ಸೈನಿಕರು ಮತ್ತು ನಾಗರಿಕರು ಸಾವನ್ನಪ್ಪಿದರು. ಕತಾರ್‌ನ ಮಧ್ಯಸ್ಥಿಕೆಯಲ್ಲಿ ಅಕ್ಟೋಬರ್ 19 ರಂದು ಕದನ ವಿರಾಮ ಘೋಷಿಸಲಾಯಿತು.ಈ ದಾಳಿಗಳನ್ನು ಪಾಕಿಸ್ತಾನ ನಡೆಸಿದೆ ಎಂದು ತಾಲಿಬಾನ್ ಆಡಳಿತ ಆರೋಪಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಶ್ಮಿಕಾ-ವಿಜಯ್ ಮದುವೆ ಉಡುಗೆಯ ವಿಶೇಷತೆಯೇನು? ವಿನ್ಯಾಸಕ್ಕೆ ಸ್ಪೂರ್ತಿಯೇನು? – Kannada News | What is the thought behind Rashmika and Vijay’s wedding dress design

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ವಿವಾಹ ನಿನ್ನೆ (ಫೆಬ್ರವರಿ 27) ನಡೆದಿದೆ. ಆಪ್ತೇಷ್ಟರ ಸಮ್ಮುಖದಲ್ಲಿ ವಿಜಯ್ ಮತ್ತು ರಶ್ಮಿಕಾ ಸತಿ-ಪತಿಗಳಾಗಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಇವರ ಅದ್ಧೂರಿ ಮದುವೆ ನಡೆದಿದೆ. ನಿನ್ನೆ ಮದುವೆಯ ಬಳಿಕ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರು ತಮ್ಮ ಮದುವೆಯ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇಬ್ಬರೂ ಸಹ ವಧು-ವರರಾಗಿ ಅದ್ಭುತವಾಗಿ ಕಾಣುತ್ತಿದ್ದರು. ರಶ್ಮಿಕಾ ಮತ್ತು ವಿಜಯ್ ಅವರ ಗ್ರೂಮ್-ಬ್ರೈಬಲ್ ಲುಕ್ ಸಖತ್ ವೈರಲ್ ಆಗುತ್ತಿದೆ. ಇವರಿಬ್ಬರ ಲುಕ್ ಹಿಂದೆ ಇರುವುದು ಒಬ್ಬರೇ ವ್ಯಕ್ತಿ, ಅವರ ಹೆಸರು ಅನಾಮಿಕಾ ಖನ್ನಾ.

ತಮ್ಮದೇ ಹೆಸರಿನ ಫ್ಯಾಷನ್ ಬ್ರ್ಯಾಂಡನ್ನು ಅನಾಮಿಕಾ ಖನ್ನಾ ಹೊಂದಿದ್ದು ಅದ್ಭುತವಾದ ವಿನ್ಯಾಸಗಳನ್ನು ಅವರು ಮಾಡಿದ್ದಾರೆ. ವಿಜಯ್-ರಶ್ಮಿಕಾ ಇಬ್ಬರ ಮದುವೆಯ ಲುಕ್ ಮಾತ್ರವಲ್ಲದೆ ಹಳದಿ, ಸಂಗೀತ್ ಇನ್ನೂ ಕೆಲವು ಕಾರ್ಯಕ್ರಮಗಳಿಗೂ ಸಹ ಅವರೇ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಅದರಲ್ಲೂ ಮದುವೆಗೆ ಅವರು ವಿನ್ಯಾಸ ಮಾಡಿರುವ ಉಡುಗೆಗಳಂತೂ ಅದ್ಭುತವಾಗಿದ್ದು, ಇಬ್ಬರ ಚಿತ್ರ ನೋಡಿದವರು ರಾಮ-ಸೀತೆಯನ್ನು ನೆನಪು ಮಾಡಿಕೊಂಡಿದ್ದಾರೆ. ಅಷ್ಟು ಅದ್ಭುತವಾಗಿ ಅವರ ಲುಕ್​ ಮೂಡಿ ಬಂದಿದೆ.

ಇಬ್ಬರ ಉಡುಗೆಗಳ ಹಿಂದಿನ ಕಲೆಯ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅನಾಮಿಕಾ, ‘ಕೆಂಪು ಬಣ್ಣದ ಅಂಚಿನ ಚೌಕಟ್ಟು ಹೊಂದಿರುವ ರಶ್ಮಿಕಾ ಮಂದಣ್ಣ ಅವರ ಲುಕ್ ಪವಿತ್ರ ಕಲಾತ್ಮಕತೆಯ ಆಚರಣೆಯಾಗಿದೆ. ದೇವಾಲಯದ ವಿಶಿಷ್ಟತೆಗಳನ್ನು ಸೀರೆಯ ಅಂಚಿನ ಮೇಲೆ ಸಂಕೀರ್ಣವಾಗಿ ಕಸೂತಿ ಮಾಡಲಾಗಿದೆ, ಹೈದರಾಬಾದ್‌ನ ಪಾರಂಪರಿಕ ದೇವಾಲಯದ ಕೆತ್ತನೆಗಳು ಮತ್ತು ಆಧ್ಯಾತ್ಮಿಕತೆಯನ್ನು ಈ ವಿನ್ಯಾಸ ಪ್ರತಿಧ್ವನಿಸುತ್ತದೆ. ಪ್ರಾಚೀನ ಚಿನ್ನವನ್ನು ಬಳಸಿ ಕೈಯಿಂದ ಮಾಡಿರುವ ಕಸೂತಿ ಅದ್ಭೂತ ಕಲಾತ್ಮಕತೆಯನ್ನು ನೀಡಿದೆ. ಸೀರೆಯನ್ ಕೇವಲ ಉಡುಗೆ ಮಾತ್ರ ಆಗಿಸದೆ ಭಕ್ತಿ ಮತ್ತು ಕರಕುಶಲತೆಯ ಕ್ಯಾನ್ವಾಸ್ ಆಗಿ ಪರಿವರ್ತಿಸಲಾಗಿದೆ. ಜೊತೆಗೆ ಸ್ತ್ರೀ ಶಕ್ತಿಯನ್ನು ಸಹ ಈ ಉಡುಗೆ ಪ್ರತಿನಿಧಿಸುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ:ವಿಜಯ್ ದೇವರಕೊಂಡ ತಾಳಿ ಕಟ್ಟುವಾಗ ರಶ್ಮಿಕಾ ಮಂದಣ್ಣ ಆನಂದ ಭಾಷ್ಪ

ಇನ್ನು ವಿಜಯ್ ದೇವರಕೊಂಡ ಅವರ ಉಡುಗೆ ಅವರ ಲುಕ್ ನ ಹಿಂದಿನ ಆಲೋಚನೆಯ ಬಗ್ಗೆ ಹೇಳಿರುವ ಅನಾಮಿಕಾ, ‘ಹೈದರಾಬಾದ್‌ನ ಜವಳಿ ಪರಂಪರೆಯಲ್ಲಿ ಬೇರೂರಿರುವ ವಿಜಯ್ ದೇವರಕೊಂಡ ಅವರ ವಿವಾಹ ಉಡುಪು ವನಸಿಂಗರಂ (ನೇಯ್ಗೆಯ ವಿಧಾನ) ನೇಯ್ಗೆಯಿಂದ ಮಾಡಿದ್ದಾಗಿದೆ. ದಂತದ ನುಣುಪಿನ ಧೋತಿಯನ್ನು ಸಿಂಧೂರ ಅಂಗವಸ್ತ್ರದೊಂದಿಗೆ ಜೊತೆ ಮಾಡಲಾಗಿದೆ. ಇದು ಅರಣ್ಯ ಮತ್ತು ದೇವಾಲಯದ ಕಲಾತ್ಮಕತೆಯಿಂದ ಕಸೂತಿ ಮಾಡಲ್ಪಟ್ಟಿದೆ. ಶಕ್ತಿ, ವಂಶಾವಳಿ ಮತ್ತು ಪವಿತ್ರ ವಾಸ್ತುಶಿಲ್ಪದ ಸಂಕೇತಗಳು ಅವರ ಉಡುಗೆಯಲ್ಲಿ ಪ್ರತಿನಿಧಿಸುತ್ತವೆ ಎಂದಿದ್ದಾರೆ. ವಿಜಯ್ ದೇವರಕೊಂಡ ಅವರು ನೇಕಾರರ ಸಮುದಾಯಕ್ಕೆ ಸೇರಿದವರೇ ಆಗಿರುವ ಕಾರಣ ಅದನ್ನು ಗಮನದಲ್ಲಿಟ್ಟುಕೊಂಡೇ ಅವರ ಉಡುಪನ್ನು ವಿನ್ಯಾಸ ಮಾಡಲಾಗಿದೆ.

ರಶ್ಮಿಕಾ ಮತ್ತು ವಿಜಯ್ ಅವರ ಉಡುಪಿನ ವಿನ್ಯಾಸವಂತೂ ಒಂದೇ ದಿನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿದೆ. ಅದರಲ್ಲೂ ವಿಜಯ್ ದೇವರಕೊಂಡ ಅವರ ಉಡುಗೆ, ಧರಿಸಿದ್ದ ಆಭರಣಗಳು, ಒಟ್ಟಾರೆ ಅವರ ಸ್ಟೈಲ್ ಅಂತೂ ಬಹಳ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ? – Kannada News | Daily Devotional: Why Blessings Are Traditionally Given with the Right Hand

ಬೆಂಗಳೂರು, ಫೆಬ್ರವರಿ​ 27: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿಬಲಗೈಯಿಂದ್ಲೇ ಆಶೀರ್ವಾದ ಮಾಡುವುದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸನಾತನ ಹಿಂದೂ ಸಂಸ್ಕೃತಿಯಲ್ಲಿ ಗುರುಗಳು, ಹಿರಿಯರು ಮತ್ತು ಮಠಾಧೀಶರು ನಮಸ್ಕಾರ ಮಾಡಿದಾಗ ಆಶೀರ್ವಾದ ನೀಡುವುದು ಒಂದು ಪದ್ಧತಿಯಾಗಿದೆ. ಈ ಆಶೀರ್ವಾದವನ್ನು ಸಾಮಾನ್ಯವಾಗಿ ಬಲಗೈಯಿಂದಲೇ ನೀಡಲಾಗುತ್ತದೆ. ದೇಹವನ್ನು ಎರಡು ಭಾಗಗಳಾಗಿ ವಿಂಗಡಿಸಿದಾಗ, ಬಲಭಾಗವನ್ನು ಸೂರ್ಯ ಭಾಗ ಮತ್ತು ಎಡಭಾಗವನ್ನು ಚಂದ್ರ ಭಾಗ ಅಥವಾ ವಾಮ ಭಾಗ ಎಂದು ಕರೆಯಲಾಗುತ್ತದೆ.

ಬಲಗೈಗೆ ಹೆಚ್ಚಿನ ಪ್ರಾಶಸ್ತ್ಯವಿದ್ದು, ಊಟ ಮಾಡುವುದು, ವಿಭೂತಿ ಅಥವಾ ಕುಂಕುಮ ಧರಿಸುವುದು, ಆರತಿ ಮಾಡುವುದು ಮುಂತಾದ ಕ್ರಿಯೆಗಳಿಗೆ ಇದನ್ನು ಹೆಚ್ಚಾಗಿ ಬಳಸಲಾಗುತ್ತದೆ. ಆಶೀರ್ವಾದ ನೀಡುವಾಗ ಬಲಗೈಯ ಬಳಕೆಯು ಸಕಾರಾತ್ಮಕ ಭಾವನೆಗಳನ್ನು ಸೃಷ್ಟಿಸುತ್ತದೆ. ನಮ್ಮ ದೇಹದ ಪಿಂಗಳ ನಾಡಿ ಬಲಭಾಗಕ್ಕೆ ಸಂಬಂಧಿಸಿದ್ದು, ಮೆದುಳಿನ ಎಡಭಾಗವು ದೇಹದ ಬಲಭಾಗವನ್ನು ನಿಯಂತ್ರಿಸುತ್ತದೆ. ಬಲಗೈಯಿಂದ ಮಾಡಿದ ಆಶೀರ್ವಾದವು ಶಕ್ತಿ, ಸೌರಾಂಶವನ್ನು ನೀಡಿ, ಎಲ್ಲಾ ರೀತಿಯಲ್ಲೂ ಶುಭಕರವಾಗಿರುತ್ತದೆ ಎಂದು ನಂಬಲಾಗಿದೆ. ಎರಡು ಕೈಗಳನ್ನು ಹೊಂದಿಲ್ಲದಿದ್ದಾಗ ಎಡಗೈಯಿಂದ ಆಶೀರ್ವಾದ ಮಾಡಿದರೂ, ಬಲಗೈಯ ಫಲವೇ ಲಭಿಸುತ್ತದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ – Kannada News | DK Shivakumar supporters dinner meeting inside information: Know What Happened in Meeting Amid Karnataka CM Change Buzz

ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಬದಲಾವಣೆ ಕುರಿತ ಚರ್ಚೆ ಮತ್ತೊಮ್ಮೆ ಜೋರಾಗಿರುವ ನಡುವೆಯೇ, ಗುರುವಾರ ರಾತ್ರಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉನ್ನತ ಮಟ್ಟದ ಔತಣಕೂಟ ಸಭೆ ನಡೆಸಿದ್ದಾರೆ. ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಸಭೆ ನಡೆದಿದ್ದರೂ, ನಾಯಕತ್ವದ ಬದಲಾವಣೆ ಕುರಿತ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ಬೆಂಬಲಿಗರು ಒಟ್ಟು ಸುಮಾರು 60ಕ್ಕೂ ಹೆಚ್ಚು ಶಾಸಕರನ್ನು ಸಂಪರ್ಕಿಸಿದ್ದರು. ಇವರಲ್ಲಿ ಬರೋಬ್ಬರಿ 40 ಮಂದಿ ಶಾಸಕರು ಔತಣಕೂಟದಲ್ಲಿ ಭಾಗವಹಿಸಿದ್ದಾರೆ. ಸುಮಾರು 20 ಮಂದಿ ಶಾಸಕರು ಮದುವೆ, ವಿದೇಶ ಪ್ರವಾಸ ಸೇರಿದಂತೆ ವಿವಿಧ ಕಾರಣಗಳಿಂದ ಗೈರಾಗಿದ್ದಾರೆ ಎನ್ನಲಾಗಿದೆ. ಗೈರಾದ ಶಾಸಕರನ್ನು ಮುಂದಿನ ಸಭೆಗೆ ಸೇರಿಸಲು ಬೆಂಬಲಿಗರು ಯೋಜನೆ ರೂಪಿಸಲಾಗುತ್ತಿದೆ.

ಸಿಎಂ ಗಾದಿ ಕುರಿತು ಗಂಭೀರ ಚರ್ಚೆ

ಔತಣಕೂಟ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತಂತೆ ಗಂಭೀರ ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ಹೈಕಮಾಂಡ್ ನಾಯಕರು ನಿರ್ಧಾರಕ್ಕೆ ಮುಂದಾಗದಿದ್ದರೆ ಗಟ್ಟಿಯಾದ ಹೆಜ್ಜೆ ಇಡುವ ಬಗ್ಗೆ ಕೆಲ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವ ಗೊಂದಲಕ್ಕೆ ಅಂತಿಮ ತೆರೆ ಎಳೆಯಬೇಕು. ಈ ಗೊಂದಲದ ವಾತಾವರಣದಿಂದ ಪಕ್ಷದ ಮೇಲೆ ದುಷ್ಪರಿಣಾಮ ಬೀಳುತ್ತಿದ್ದು, ರಾಜ್ಯದ ಜನತೆಗೆ ತಪ್ಪು ಸಂದೇಶ ಹೋಗುತ್ತಿದೆ ಎಂಬ ಮಾತುಗಳು ಸಭೆಯಲ್ಲಿ ಕೇಳಿಬಂದಿವೆ. ಮಾತು ಕೊಟ್ಟಿದ್ದರೆ, ಆ ಮಾತು ಉಳಿಸಿಕೊಳ್ಳಬೇಕು ಎಂಬ ಅಭಿಪ್ರಾಯವೂ ಕೆಲವರಿಂದ ವ್ಯಕ್ತವಾಗಿದೆ.

ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ

ಸಭೆಯಲ್ಲಿ ಮುಂದಿನ ರಾಜಕೀಯ ಹೆಜ್ಜೆಗಳ ಕುರಿತು ವಿಶ್ಲೇಷಣಾತ್ಮಕ ಚರ್ಚೆ ನಡೆದಿದ್ದು, ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರಗಾರಿಕೆಯೂ ರೂಪಿಸಲಾಗಿದೆ ಎನ್ನಲಾಗಿದೆ. ದೆಹಲಿಯ ವರಿಷ್ಠರು ಸ್ಪಷ್ಟ ನಿರ್ಧಾರ ಕೈಗೊಳ್ಳಲೇಬೇಕು ಎಂದು ಶಾಸಕರು ಪಟ್ಟು ಹಿಡಿದಿದ್ದಾರೆ.

ಅಧಿವೇಶನದ ಸಂದರ್ಭದಲ್ಲೇ ಶಕ್ತಿಪ್ರದರ್ಶನ ನಡೆಸುವ ಸಾಧ್ಯತೆಯೂ ತಳ್ಳಿಹಾಕಲಾಗದು ಎಂದು ಮೂಲಗಳು ತಿಳಿಸಿವೆ. ಬಜೆಟ್ ಅಧಿವೇಶನದ ವೇಳೆಯೇ ಮತ್ತೆ ಸಭೆ ಸೇರಲು ಯೋಜಿಸಲಾಗಿದೆ.

ದೆಹಲಿ ಯಾತ್ರೆಗೆ ಶಾಸಕರ ಸಿದ್ಧತೆ

ಡಿಕೆ ಶಿವಕುಮಾರ್ ಬೆಂಬಲಿಗರು ಶೀಘ್ರದಲ್ಲೇ ದೆಹಲಿ ಭೇಟಿ ಮಾಡುವ ಸಾಧ್ಯತೆ ಇದೆ. 70ಕ್ಕೂ ಹೆಚ್ಚು ಶಾಸಕರು ಒಟ್ಟಾಗಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನ ಕುರಿತ ನಿರ್ಧಾರಕ್ಕೆ ಒತ್ತಡ ಹೇರುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಮೊದಲು ಬೆಂಗಳೂರಿನಲ್ಲಿ ಮತ್ತೊಂದು ಸಭೆ ನಡೆಸಿ ನಂತರ ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿಪಡಿಸುವ ಯೋಚನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆ? ಬೆಂಗಳೂರಿನ ಖಾಸಗಿ ಹೊಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ!

ಒಟ್ಟಾರೆ, ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಗೊಂದಲ ಮತ್ತೊಮ್ಮೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ಬೆಳವಣಿಗೆಗಳು ಮತ್ತಷ್ಟು ಚುರುಕುಗೊಳ್ಳುವ ಸೂಚನೆಗಳು ಕಂಡುಬರುತ್ತಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 27 February​: ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ – Kannada News | Daily Horoscope for February​ ​​27th 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 27, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ ಏಕಾದಶಿ, ಆದ್ರ್ರಾ ನಕ್ಷತ್ರ, ಆಯುಷ್ಮಾನ್ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಮತ್ತು ಶುಭಕಾಲವನ್ನು ಗುರೂಜಿ ವಿವರಿಸಿದ್ದಾರೆ.

ಈ ದಿನ ಮಹಾಲಕ್ಷ್ಮಿಯ ಕೃಪೆಗೆ ಪಾತ್ರವಾಗುವ ವಿಶೇಷ ದಿನ ಹಾಗೂ ಅಮಲಕಿ ಏಕಾದಶಿ ಇರುವುದನ್ನು ಅವರು ತಿಳಿಸಿದ್ದಾರೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯ ಆದ್ರ್ರಾ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿರುವ ಸಂದರ್ಭದಲ್ಲಿ, ಪ್ರತಿಯೊಂದು ರಾಶಿಗೆ ಗ್ರಹಗಳ ಪ್ರಭಾವವು ಆರ್ಥಿಕ ಸ್ಥಿತಿ, ವೈವಾಹಿಕ ಜೀವನ, ಉದ್ಯೋಗ, ಆರೋಗ್ಯ, ಪ್ರಯಾಣ ಮುಂತಾದ ಕ್ಷೇತ್ರಗಳಲ್ಲಿ ಶುಭ ಹಾಗೂ ಅಶುಭ ಫಲಗಳನ್ನು ತರಲಿದೆ. ಪ್ರತಿಯೊಂದು ರಾಶಿಯವರಿಗೆ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಜಪಿಸಬೇಕಾದ ಮಂತ್ರಗಳನ್ನು ಬಸವರಾಜ ಗುರೂಜಿ ಸೂಚಿಸಿದ್ದಾರೆ.

 

 

 

Source link

ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ – Kannada News | Pregnant Woman Survives Golgappa Poisoning, Forest Abandonment by Boyfriend in Jharkhand

ಜಾರ್ಖಂಡ್, ಫೆಬ್ರವರಿ 27: ಆತನೇ ಎಲ್ಲಾ ಎಂದು ಪೋಷಕರನ್ನು ಬಿಟ್ಟು ಬಂದಿದ್ದ ಮಹಿಳೆಯನ್ನು ಆಕೆಯ ಪ್ರಿಯಕರನೇ ಹತ್ಯೆ(Murder)ಗೆ ಯತ್ನಿಸಿರುವ ಅಮಾನವೀಯ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಗರ್ಭಿಣಿ ಪ್ರೇಯಸಿಯನ್ನು ಕೊಲೆ ಮಾಡಲು ವ್ಯಕ್ತಿ ಯತ್ನಿಸಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಮಹಿಳೆಗೆ ಆರೋಗ್ಯ ತೋರಾ ಹದಗೆಟ್ಟಿದ್ದು, ರಕ್ತವಾಂತಿ ಮಾಡಿಕೊಂಡಿದ್ದಾಳೆ. ತನ್ನ ಮನೆಗೆ ತಲುಪುವ ಮೊದಲು ರಾತ್ರಿಯಿಡೀ ಕಾಡಿನಲ್ಲಿ ಅಡಗಿಕೊಂಡಿದ್ದಳು. ಈ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸುವಲ್ಲಿ ಆಕೆ ಕೊನೆಗೂ ಯಶಸ್ವಿಯಾಗಿದ್ದಾಳೆ.

26 ವರ್ಷದ ಸಾಕೇತ್ ಕೇಸರಿ ಮತ್ತು 23 ವರ್ಷದ ಮಹಿಳೆ ಆರು ವರ್ಷಗಳಿಂದ ಸಂಬಂಧದಲ್ಲಿದ್ದರು. ಒಂದು ವರ್ಷದ ಹಿಂದೆ ಅವರ ಮೊದಲ ಮಗು ಜನಿಸಿತ್ತು. ಗರ್ವಾ ಜಿಲ್ಲೆಯ ಸಮುದಾಯವು ಮಧ್ಯಪ್ರವೇಶಿಸಿ ಅವರನ್ನು ಬೇರೆ ಬೇರೆ ಮಾಡಿತ್ತು.

ಆದಾಗ್ಯೂ, ಕೇಸರಿ ಕೆಲವು ತಿಂಗಳ ನಂತರ ಆ ಮಹಿಳೆಯನ್ನು ಸಂಪರ್ಕಿಸಿದ್ದ. ಮತ್ತು ರಾಜಿ ಮಾಡಿಕೊಂಡಿದ್ದರು.ಮದುವೆ ಭರವಸೆ ನೀಡಿದ್ದ, ನಂತರ ಮತ್ತೆ ಆಕೆ ಗರ್ಭಿಣಿಯಾಗಿದ್ದಾಳೆ.ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಫೆಬ್ರವರಿ 21 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ, ಕೇಶರಿ ಮಹಿಳೆಗೆ ಕರೆ ಮಾಡಿ ಏನಾದರೂ ತಿನ್ನಬೇಕು ಅನ್ನಸ್ತಿದೆಯಾ ಎಂದು ಕೇಳಿದ್ದಾನೆ. ಗೋಲ್ಗಪ್ಪ ತಿನ್ನುವ ಬಯಕೆಯನ್ನು ಆಕೆ ವ್ಯಕ್ತಪಡಿಸಿದ್ದಾಳೆ.

ಮತ್ತಷ್ಟು ಓದಿ: ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಕೊಲೆಗೆ ಸಾಥ್ ಕೊಟ್ಟು ಡ್ರಾಮಾ ಮಾಡಿದ್ದ ಹೆಂಡ್ತಿ, ಮಗ!

ಹಾಗೆಯೇ ಗೋಲ್ಗಪ್ಪ ತಿಂದ ಬಳಿಕ ಆಕೆಗೆ ವಾಂತಿ ಶುರುವಾಗಿತ್ತು, ರಕ್ತವಾಂತಿ ಕೂಡ ಮಾಡಿಕೊಂಡಿದ್ದಾಳೆ. ನಂತರ, ಸಂಜೆ 4 ಗಂಟೆಗೆ, ಆರೋಪಿ ತನ್ನ ಗೆಳತಿಯ ವೈದ್ಯರ ಬಳಿಗೆ ಕರೆದೊಯ್ಯಲು ಮುಂದಾದ.ಆದರೆ, ಅವಳನ್ನು ವೈದ್ಯರ ಬಳಿಗೆ ಕರೆದೊಯ್ಯುವ ಬದಲು, ಅವನು ಆಕೆಯನ್ನು ತನ್ನ ಬೈಕ್‌ನಲ್ಲಿ ಕಾಡಿಗೆ ಕರೆದೊಯ್ದಿದ್ದ.

ಆಕೆಯನ್ನು ಸುಮಾರು 100 ಮೀಟರ್ ಕಾಡಿನೊಳಗೆ ಕರೆದೊಯ್ದು ಹಲ್ಲೆ ಮಾಡಿ, ಕತ್ತು ಹಿಸುಕಲು ಪ್ರಯತ್ನಿಸಿದ್ದಾನೆ, ದರಿಂದಾಗಿ ಮಹಿಳೆಯ ಕಣ್ಣಿಗೆ ಗಂಭೀರ ಗಾಯವಾಯಿತು ಮತ್ತು ಅವಳು ಪ್ರಜ್ಞೆ ತಪ್ಪಿದ್ದಳು. ಪ್ರಜ್ಞೆ ಮರಳಿದ ನಂತರ, ಅವಳು ಕಾಡಿನ ಇನ್ನೊಂದು ತುದಿಗೆ ದಾಟಲು ಯಶಸ್ವಿಯಾದಳು ಮತ್ತು ಅಪಾರ ಭಯದಿಂದ ಇಡೀ ರಾತ್ರಿ ಅಲ್ಲಿ ಅಡಗಿಕೊಂಡಳು. ಮರುದಿನ ಬೆಳಗ್ಗೆ, ಅವಳು ಹೇಗೋ ತನ್ನ ಮನೆಗೆ ತಲುಪಿ ತನ್ನ ಕುಟುಂಬಕ್ಕೆ ನಡೆದ ಘಟನೆಯನ್ನು ವಿವರಿಸಿದ್ದಾಳೆ.

ಮಹಿಳೆಯ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕೇಸರಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಪೊಲೀಸರು ಪ್ರಸ್ತುತ ಈ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆ? ಬೆಂಗಳೂರಿನ ಖಾಸಗಿ ಹೊಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ! – Kannada News | Sudden Political Buzz in Karnataka Congress: Over 40 DK Shivakumar Supporter MLAs Hold Dinner Meet in Bengaluru

ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ!Image Credit source: tv9

ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಆಗಾಗ ತೀವ್ರಗೊಂಡು ಮತ್ತೆ ತಣ್ಣಗಾಗುತ್ತಿದ್ದ ನಾಯಕತ್ವ ಬದಲಾವಣೆ ಗೊಂದಲ ಇದೀಗ ಮತ್ತೆ ಮುನ್ನೆಲೆಗೆ ಬರುತ್ತಿದೆಯಾ ಎಂಬ ಅನುಮಾನ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬಣಗಳ ನಡುವಿನ ಶೀತಲ ಸಮರಕ್ಕೆ ಹೊಸ ತಿರುವು ಸಿಕ್ಕಿದ್ದು, ಡಿಕೆಶಿ ಬೆಂಬಲಿಗ ಶಾಸಕರು ಶಕ್ತಿಪ್ರದರ್ಶನ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ರಾತ್ರಿ ನಡೆದ ಔತಣಕೂಟದಲ್ಲಿ ಡಿಕೆಶಿ ಬೆಂಬಲಿಗರೆಂದು ಗುರುತಿಸಲ್ಪಟ್ಟ 40ಕ್ಕೂ ಹೆಚ್ಚು ಶಾಸಕರು ಭಾಗವಹಿಸಿದ್ದಾರೆ. ಈ ಮೂಲಕ ತಮ್ಮ ಒಗ್ಗಟ್ಟನ್ನು ತೋರಿಸುವ ಪ್ರಯತ್ನ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಶಾಸಕರ ಶಕ್ತಿ ಪ್ರದರ್ಶನದ ಫೋಟೋ ವೈರಲ್

ಸಭೆಯಲ್ಲಿ ಸಚಿವರಾದ ಡಿ ಸುಧಾಕರ್, ಮಂಕಾಳ ವೈದ್ಯ, ಸಿಪಿ ಯೋಗೇಶ್ವರ್, ಟಿಬಿ ಜಯಚಂದ್ರ, ಎನ್‌ಎ ಹ್ಯಾರಿಸ್, ಗಣೇಶ್ ಹುಕ್ಕೇರಿ, ಕುಣಿಗಲ್ ರಂಗನಾಥ್, ಪ್ರಕಾಶ್ ಕೋಳಿವಾಡ ಸೇರಿದಂತೆ ಹಲವರು ಭಾಗವಹಿಸಿದ್ದರೆಂದು ತಿಳಿದುಬಂದಿದೆ. ಶಾಸಕರು ಒಟ್ಟಾಗಿ ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಚನ್ನಪಟ್ಟಣ ಶಾಸಕ ಸಿಪಿ ಯೋಗೇಶ್ವರ್ ಮಾತನಾಡಿ, ‘ಸುಮಾರು 35ರಿಂದ 40 ಜನ ಶಾಸಕರು ಸೇರಿದ್ದೇವೆ’ ಎಂದು ತಿಳಿಸಿದ್ದಾರೆ.

ನಾಯಕತ್ವ ಗೊಂದಲಕ್ಕೆ ಅಂತಿಮ ತೆರೆ ಎಳೆಯಬೇಕು: ಬಾಲಕೃಷ್ಣ

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಎಚ್‌.ಸಿ. ಬಾಲಕೃಷ್ಣ, ‘ನಾಯಕತ್ವ ಬದಲಾವಣೆ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ಕೈಗೊಳ್ಳಬೇಕು. ಸಿಎಂ ಬದಲಾಯಿಸುತ್ತಾರೋ, ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುತ್ತಾರೋ ಅದು ವರಿಷ್ಠರ ನಿರ್ಧಾರ. ಆದರೆ, ಈ ಗೊಂದಲಕ್ಕೆ ತೆರೆ ಎಳೆಯಬೇಕು. ಹೀಗೆ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಸರ್ಕಾರ ರಚಿಸುವುದು ಕಷ್ಟವಾಗಬಹುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದು ಯಾವ ಬಣದ ಸಭೆಯೂ ಅಲ್ಲ. ನನ್ನ ಹುಟ್ಟುಹಬ್ಬದ ನಿಮಿತ್ತ ಎಲ್ಲರನ್ನು ಊಟಕ್ಕೆ ಆಹ್ವಾನಿಸಿದ್ದೆ. ನಾವು ಎಲ್ಲರೂ ಕಾಂಗ್ರೆಸ್ ಶಾಸಕರೇ ಹೊರತು ಯಾರಾದರೂ ಪರ–ವಿರೋಧ ಎನ್ನುವ ಪ್ರಶ್ನೆಯೇ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆಯಾಗಿದೆ: ಶಿವಗಂಗಾ ಬಸವರಾಜ್

ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಮಾತನಾಡಿ, ಸುಳ್ಳು ಹೇಳಲು ಕಾರಣವಿಲ್ಲ. ಸುಮಾರು 40 ಜನ ಶಾಸಕರು ಸೇರಿದ್ದೇವೆ. ನಾಯಕತ್ವ ಬದಲಾವಣೆ ಕುರಿತ ಚರ್ಚೆಯಾಗಿದೆ. ಅಧಿಕಾರ ಹಂಚಿಕೆ ಹಾಗೂ ಗೊಂದಲಗಳಿಗೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಇದು ಕೇವಲ ಭೋಜನ ಕೂಟ: ರವಿ ಗಣಿಗ ಸ್ಪಷ್ಟನೆ

ಖಾಸಗಿ ಹೋಟೆಲ್ ಬಳಿ ಪ್ರತಿಕ್ರಿಯಿಸಿದ ಶಾಸಕ ರವಿ ಗಣಿಗ, ಇದು ಯಾವುದೇ ಅಧಿಕೃತ ಸಭೆಯಲ್ಲ. ಬಾಲಕೃಷ್ಣ ಅವರ ಹುಟ್ಟುಹಬ್ಬದ ಊಟ ಮಾತ್ರ. ನಾವು ಎಲ್ಲರೂ ಸ್ನೇಹಪೂರ್ವಕವಾಗಿ ಸೇರಿದ್ದೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಮತ್ತೆ ಚರ್ಚೆಗೆ

ಇತ್ತೀಚೆಗೆ ಸಿದ್ದರಾಮಯ್ಯ ಬಣದ ನಾಯಕರು ಪ್ರತ್ಯೇಕವಾಗಿ ಸಭೆ, ಔತಣಕೂಟಗಳನ್ನು ನಡೆಸುತ್ತಿರುವ ಹಿನ್ನೆಲೆ, ಡಿಕೆಶಿ ಬಣವೂ ತಮ್ಮ ಒಗ್ಗಟ್ಟು ಪ್ರದರ್ಶಿಸಿರುವುದು ವಿಶೇಷವಾಗಿದೆ. ಶಾಸಕರ ಫೋಟೋಗಳನ್ನು ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣಗಳಿಗೆ ಬಿಡುಗಡೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು: ಒಟ್ಟೊಟ್ಟಿಗೇ ಹಲವು ಮಹತ್ವದ ಬೆಳವಣಿಗೆ! ಮಂಗಳವಾರ ಏನೇನಾಯ್ತು ಗೊತ್ತೇ?

ಒಟ್ಟಾರೆ, ರಾಜ್ಯ ಕಾಂಗ್ರೆಸ್‌ನಲ್ಲಿ ‘ಸಿದ್ದು ವರ್ಸಸ್ ಡಿಕೆಶಿ’ ಬಣಗಳ ರಾಜಕೀಯ ಮತ್ತೆ ಮುನ್ನೆಲೆಗೆ ಬಂದಂತಾಗಿದ್ದು, ನಾಯಕತ್ವ ಗೊಂದಲಕ್ಕೆ ಹೈಕಮಾಂಡ್ ಯಾವಾಗ ಅಂತಿಮ ತೆರೆ ಎಳೆಯಲಿದೆ ಎಂಬುದು ಪ್ರಶ್ನೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link