All posts by nagaraj11081993

ಪ್ರಯಾಣಿಕರೇ ಇತ್ತ ಗಮನಿಸಿ: ಮೋದಿ ಆಗಮನ ಹಿನ್ನೆಲೆ ಇಂದು ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ – Kannada News | PM Modi in Bengaluru: Traffic Diversions on Kanakapura Road Today; Check Alternate Routes and Timings

ಬೆಂಗಳೂರು, ಮೇ 9: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಮುಖ್ಯಾಂಶಗಳು

  • ಪ್ರಧಾನಿ ಭೇಟಿ ಹಿನ್ನೆಲೆ ಬೆಂಗಳೂರು-ಕನಕಪುರ ಮಾರ್ಗದಲ್ಲಿ ಸಂಚಾರ ಸಂಪೂರ್ಣ ಬದಲಾವಣೆ.
  • ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬದಲಿ ರಸ್ತೆ ಬಳಸಲು ಪೊಲೀಸರ ಸೂಚನೆ.
  • ಆಶ್ರಮದಲ್ಲಿ ಹೊಸ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ ಮೋದಿ.

ಕನಕಪುರ ರಸ್ತೆ ಸಂಚರಿಸುವವರಿಗೆ ಪರ್ಯಾಯ ಮಾರ್ಗ

ಬೆಂಗಳೂರಿನಿಂದ ಕನಕಪುರದ ಕಡೆಗೆ ಸಂಚರಿಸುವ ವಾಹನಗಳು ಬೆಂಗಳೂರು-ಕೆಂಗೇರಿ-ಬಿಡದಿ-ರಾಮನಗರ ಮೂಲಕ ಕನಕಪುರ ತಲುಪಲು ಸೂಚಿಸಲಾಗಿದೆ. ಅದೇ ರೀತಿ ಕನಕಪುರದಿಂದ ಬೆಂಗಳೂರಿಗೆ ಬರುವ ವಾಹನಗಳು ಕನಕಪುರ-ಹಾರೋಹಳ್ಳಿ-ಕಗ್ಗಲಿಪುರ ರಸ್ತೆ-ಬನ್ನೇರುಘಟ್ಟ ಮಾರ್ಗವಾಗಿ ನಗರ ಪ್ರವೇಶಿಸಬೇಕಿದೆ.

ನೈಸ್ ರಸ್ತೆಯಲ್ಲೂ ಸಂಚಾರ ನಿರ್ಬಂಧ

ನೈಸ್ ರಸ್ತೆಯಲ್ಲೂ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ಸಂಚಾರ ನಿರ್ಬಂಧವಿರಲಿದ್ದು, ತುಮಕೂರು ರಸ್ತೆಯಿಂದ ಕನಕಪುರ ಕಡೆ ಹೋಗುವವರು ಸಿಎಂಟಿಐ ಜಂಕ್ಷನ್ ಬಳಿ ಬಲ ತಿರುವು ಪಡೆದು ಡಾ. ರಾಜ್‌ಕುಮಾರ್ ಪುಣ್ಯಭೂಮಿ ರಸ್ತೆ ಮೂಲಕ ಸಂಚರಿಸಬೇಕು.

ಆರ್ಟ್ ಆಫ್ ಲಿವಿಂಗ್‌ನಲ್ಲಿ ಮೋದಿ ಕಾರ್ಯಕ್ರಮ

ಬೆಳಗ್ಗೆ 11 ಗಂಟೆಗೆ ಹೆಚ್‌ಎಎಲ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಊದಿಪಾಳ್ಯ ಗ್ರಾಮದ ಬಳಿ ಇರುವ ಆಶ್ರಮಕ್ಕೆ ಮೋದಿ ಆಗಮಿಸಲಿದ್ದಾರೆ. ಆಶ್ರಮದ 45ನೇ ವರ್ಷಾಚರಣೆ ಮತ್ತು ಗುರೂಜಿಯವರ ಜನ್ಮದಿನದ ಸವಿನೆನಪಿಗಾಗಿ ನಿರ್ಮಿಸಲಾದ ಭವ್ಯ ಹೊಸ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.30ರ ವರೆಗೆ ಆಶ್ರಮದಲ್ಲಿ ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಮೇ 10ರಂದು ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ: ಮಾಹಿತಿ ಇಲ್ಲಿದೆ

ಪ್ರಧಾನಿ ಆಗಮನದ ಹಿನ್ನೆಲೆ ಹೆಚ್‌ಎಎಲ್ ಗೇಟ್ ನಂ. 30ರ ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ. 30ರ ವರೆಗೆ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರ ಹಾಗೂ ಪಾರ್ಕಿಂಗ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರ್ ಎಸ್.ಎಂ.ವಿ ಕಾಲೇಜು ಮೈದಾನ ಹಾಗೂ ಹೆಚ್‌ಎಎಲ್ ಬಸ್ ಯಾರ್ಡ್‌ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:48 am, Sun, 10 May 26

Source link

Minister D. Sudhakar Passes Away: ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ! – Kannada News | Karnataka Minister D. Sudhakar Passes Away at 65 in Bengaluru’s KIMS Hospital

ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ!

ಚಿತ್ರದುರ್ಗ, ಮೇ 10: ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ.

ಮೊದಲು ಮೊಣಕಾಲು ಸಂಬಂಧ ಆಪರೇಷನ್​ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

(ಮಾಹಿತಿ ಅಪ್ಡೇಟ್ ಆಗುತ್ತಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಈ ರಾಶಿಯವರು ಇಂದು ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವರು – Kannada News | Horoscope May 10 Sunday 2026; Dina Rashi Bhavishya Today, Checkout the details here

ಮೇಷ ರಾಶಿ:

ಇಷ್ಟದವರ ಭೇಟಿಗೆ ಅವಕಾಶವಿದ್ದರೂ ಆಗದು. ಯಾವುದೇ ನೆಪ ಹೇಳದೆ ಚಟುವಟಿಕೆಯಿಂದ ಇರಲು ಪ್ರಯತ್ನಿಸಿ. ಹೊಸದೊಂದು ಗೆಳೆತನವಾಗಿ. ಅಧ್ಯಯನದಿಂದ ನಿಮ್ಮನ್ನು ಚಂಚಲವಾಗಿಸುವ ಅನಗತ್ಯ ವಾದಗಳನ್ನು ಬಿಡಿ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಯಾವುದೇ ನಿರ್ಬಂಧಗಳನ್ನು ಕೂಡಲೇ ಒಪ್ಪುವುದಿಲ್ಲ.

ವೃಷಭ ರಾಶಿ:

ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ಬಹಳ ಏಕಾಗ್ರತೆಯಿಂದ ಇರಬೇಕು. ಹೊಸಬರ ಜತೆಗೆ ಅತಿಯಾದ ಸಲುಗೆ ಬೇಡ. ನಿಮ್ಮ ಮಿತಿಯನ್ನು ಅರಿತು, ಯಾರಿಗಾದರೂ ಮಾತು ನೀಡಿ. ಕುಟುಂಬ ವ್ಯವಸ್ಥೆ ಸರಿಯಾಗಲು ಕೆಲವನ್ನು ಬಿಟ್ಟುಕೊಡಬೇಕಾದೀತು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ನಿಮಗಿಂತ ಭಿನ್ನವಾದ ವ್ಯಕ್ತಿಗಳ ಬಗ್ಗೆ ಯೋಚಿಸದೇ ನಿಮ್ಮ ನಿಲುವೇ ಸರಿಯಂತೆ ವರ್ತಿಸುವಿರಿ.

ಮಿಥುನ ರಾಶಿ:

ಮೂಲಸ್ಥಾನದಿಂದ ದೂರ ಹೋಗುವ ಸಾಧ್ಯತೆ ಇದೆ. ಕ್ರೀಡಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು. ಸ್ವಾವಲಂಬನೆಯ ಕಾರಣಕ್ಕೆ ನಿಮ್ಮಲ್ಲೊಂದು ಹೊಸ ಆತ್ಮವಿಶ್ವಾಸ ಮೂಡಲಿದೆ. ಆಪ್ತರ ಭೇಟಿಯು ನಿಮಗೆ ಸಂತೋಷವನ್ನು ಕೊಡಲಿದೆ. ಹಿಂದಿನ ಹೂಡಿಕೆಗಳು ಬಹಳ ಆದಾಯವು ಸಿಗಲಿದೆ. ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ.

ಕರ್ಕಾಟಕ ರಾಶಿ:

ನಿಮ್ಮ ಅಂದಿನ ಸ್ಥಿತಿಯನ್ನು ನೆನೆಸಿಕೊಂಡು ಹೆಮ್ಮೆಪಡಲಿದ್ದೀರಿ. ಯಾರಿಗೂ ಹೇಳಿಕೊಳ್ಳಲು ಸಾಧ್ಯವಾಗದಂಥ ಮಾನಸಿಕ ತೊಳಲಾಟಕ್ಕೆ ಸಿಲುಕಿಕೊಳ್ಳುತ್ತೀರಿ. ಶತ್ರುಗಳಿಂದ ನಿಮಗೆ ಸಿಗಬೇಕಾದುದು ಸಿಗಲಿದೆ. ಸಂಗಾತಿ ಜತೆಗೆ ಉತ್ತಮ ಸಮಯ ಕಳೆಯುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಸಂಗಾತಿಯನ್ನು ನೀವು ಮರೆತು ವ್ಯವಹರಿಸುವಿರಿ. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿ ಇರುವುದು.

ಸಿಂಹ ರಾಶಿ:

ಇಂದು ನಿಮ್ಮಿಂದ ಆದ ಸಹಾಯವನ್ನು ಮಾಡಲಿದ್ದೀರಿ. ಸೋದರಿಯರ ಜತೆಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮಾರ್ಗದರ್ಶನದ ಕೊರತೆಯಿಂದ ನಿಮ್ಮ ದಿಕ್ಕು ತಪ್ಪಲಿದೆ. ಚರ್ಮದ ಸಮಸ್ಯೆ ಇರುವವರು ಆಹಾರ ಸೇವನೆ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ನಿಮ್ಮದಾದ ಚಿಂತನೆ, ಕಾರ್ಯದಿಂದ ಯಶಸ್ಸನ್ನು ಪಡೆಯಲು ನೀವು ಬಹಳ ಸಮಯ ಕಾಯಬೇಕಾಗಬಹುದು.

ಕನ್ಯಾ ರಾಶಿ:

ಇಂದಿನ ನಿಮ್ಮ ಕೆಲಸವು ಶಿಸ್ತಿನಿಂದ ಇದ್ದರೂ ನಿಮ್ಮ ಜೊತೆಗಾರರು ಅದನ್ನು ಮೂದಲಿಸಲಿದ್ದಾರೆ. ಪರಸ್ಪರ ಸಂವಹನದಿಂದ ಮಾನಸಿಕ ಭಿಮ್ನತೆ ದೂರಾಗಬಹುದು. ಸ್ವಾರ್ಥದ ಹಣೆಪಟ್ಟಿ ನಿಮ್ಮ ಹೆಸರಿಗೆ ಬೀಳಬಹುದು. ಯಾವುದೇ ಸ್ಪಷ್ಟನೆ ನೀಡಿದರೂ ಪ್ರಯೋಜನ ಆಗುವುದಿಲ್ಲ. ಅದನ್ನು ಸರಿಯಾಗಿ ಮುಂದುವರಿಸುವುದು ನಿಮ್ಮ ಕೈಯಲ್ಲಿದೆ. ಯಾರ ಮೇಲೂ ಆಪಾದನೆ ಬೇಡ. ಸಂತಾನ ಬಗ್ಗೆ ಕುಟುಂಬದಿಂದ ಒತ್ತಡ ಬರಬಹುದು.

ತುಲಾ ರಾಶಿ:

ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ವಿಫಲತೆಯನ್ನು ನಕಾರಾತ್ಮಕವಾಗಿ ಸ್ವೀಕರಿಸುವುದು ಬೇಡ. ಯಾವುದೇ ಸಾಲಕ್ಕೆ ಪ್ರಯತ್ನಿಸಿದ್ದಲ್ಲಿ ಅದು ದೊರೆಯುವ ಸಾಧ್ಯತೆಗಳು ಗೋಚರಿಸುತ್ತವೆ. ತೀರಾ ಆಪ್ತರಿಗೆ ಸಹಾಯದ ಅಗತ್ಯ ಬೀಳುತ್ತದೆ. ಹಣಕಾಸು ನಿರ್ವಹಣೆ ಮತ್ತು ಸಕಾರಾತ್ಮಕ ಕ್ರಮಗಳು ಏಳಿಗೆಗೆ ದಾರಿ ಮಾಡಿಕೊಡುತ್ತದೆ. ನಿಮ್ಮ‌ ರಕ್ಷಣೆಯ ಬಗ್ಗೆ ಕಾಳಜಿ ಇರಲಿ.

ವೃಶ್ಚಿಕ ರಾಶಿ:

ನಿಮ್ಮ ಸಾಮರ್ಥ್ಯದಿಂದ ವ್ಯವಹಾರದಲ್ಲಿ ದೊಡ್ಡ ಪ್ರಮಾಣದ ನಷ್ಟವನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಮಾತಿನ ಮೂಲಕ ಇತರರನ್ನು ಮೋಡಿ ಮಾಡಲಿದ್ದೀರಿ. ಯಾರನ್ನೂ ಮಟ್ಟಹಾಕುವ ಕೆಲಸಕ್ಕಿಂತ ನಿಮ್ಮ ಬೆಳವಣಿಗೆಯ ಬಗ್ಗೆ ಒತ್ತು ಇರಲಿ. ಗೊತ್ತಿರಬೇಕಾದ ಎಷ್ಟೋ ವಿಚಾರಗಳು ಗೊತ್ತಲ್ಲವೆಂದು ಬೇಸರ ಪಡಬೇಕಾಗಿಬರಬಹುದು. ನಿಮ್ಮ ಕೆಲಸವಾಗಲು ಯಾರನ್ನಾದರೂ ದೂರ ಮಾಡುವಿರಿ. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುವರು.

ಧನು ರಾಶಿ:

ನಿಮ್ಮ ಅಗತ್ಯತೆಗಳ ಯಾದಿಯು ತುಂಬಾ ದೊಡ್ಡದಿದ್ದು ಅದನ್ನು ಪೂರೈಸಲು ಸತತ ಪ್ರಯತ್ನವನ್ನು ಮಾಡುವಿರಿ. ಹಿಂದೆ ಸಹಾಯ ಮಾಡಿದ ವ್ಯಕ್ತಿಗಳು ಈಗ ನಿಮ್ಮ ನೆರವಿಗೆ ಬರಲಿದ್ದಾರೆ. ನಿಮ್ಮ ಶಕ್ತಿಯ ಪ್ರದರ್ಶನವನ್ನು ಇಂದು ಮಾಡುವಿರಿ. ಹಗಲಿರುಳು ದುಡಿಯುವ ನಿಮ್ಮ ಗುಣ ಮೇಲಧಿಕಾರಿಗಳ ಗಮನಕ್ಕೆ ಬಂದು, ಮೆಚ್ಚುಗೆಯ ಮಾತುಗಳನ್ನಾಡಲಿದ್ದಾರೆ. ಇಂದು ನಿಮ್ಮ ಶತ್ರುಗಳು ಅಸಮಾಧಾನಗೊಳ್ಳುವರು. ಇಂದು ಪೋಷಕರ ಬಗ್ಗೆ ವಿಶೇಷ ಕಾಳಜಿ ವಹಿಸಿ.

ಮಕರ ರಾಶಿ:

ಹಗುರವಾದ ಮಾತುಗಳು ನಿಮಗೆ ಅಪಮಾನವನ್ನು ಮಾಡುವುದು. ನಿದ್ರೆಯಿಲ್ಲದೇ ಮನಸ್ಸು ಕಿರಿಕಿರಿಯನ್ನು ಅನುಭವಿಸುವುದು. ಎಲ್ಲವೂ ಸರಿಯಾಗಿ ಇರಬೇಕು ಎಂಬ ಪ್ರಯತ್ನ ಸರಿ. ಆದರೆ ಅದಕ್ಕಾಗಿ ಎಲ್ಲರನ್ನೂ ದೂಷಿಸುವುದು ಉತ್ತಮ ನಾಯಕತ್ವವಾಗದು. ವಿಷಾದದ ವಾತಾವರಣದಿಂದ ಹೊರಬರಲು ಕಷ್ಟವಾಗುವುದು. ಏನನ್ನೂ ಹೇಳದೇ ನಿಮ್ಮಷ್ಟಕ್ಕೆ ಗಮನಿಸಿ. ಇಂದು ಅನಗತ್ಯ ವಸ್ತುಗಳಿಗಾಗಿ ವ್ಯರ್ಥವಾಗಿ ಖರ್ಚಾಗಬಹುದು. ಅದನ್ನು ತಪ್ಪಿಸಿಕೊಳ್ಳುವುದು ಉತ್ತಮ.

ಕುಂಭ ರಾಶಿ:

ಇಂದು ನಿರುದ್ಯೋಗಿಗಳ ದುಃಖ ದೂರಾಗಲಿದೆ. ಸರ್ಕಾರಿ ಕಾಗದ ಪತ್ರಗಳನ್ನು ಯಾರಿಗೆ ತೋರಿಸುವ ಮುನ್ನ ಒಮ್ಮೆ ಅದರಲ್ಲಿರುವ ಅಂಶಗಳನ್ನು ಕೇಳುತ್ತಿರುವ ವ್ಯಕ್ತಿಗಳ ಹಿನ್ನೆಲೆ ತಿಳಿದುಕೊಳ್ಳಿ. ನಿಮ್ಮ ಅತ್ಯುತ್ಸಾಹದಿಂದ ಮಹತ್ತರ ಮಾಹಿತಿಗಳು ಅಪಾತ್ರರಿಗೆ ಹಂಚಿಕೆಯಾಗಲಿದೆ. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ. ಯಾರೂ ಇರದ ಪ್ರದೇಶದಲ್ಲಿ ನೀವೇ ದೊಡ್ಡವರಾಗುವಿರಿ. ಎಂದೋ ಸ್ಥಗಿತಗೊಂಡ ಕೆಲಸವನ್ನು ಪೂರ್ಣ ಮಾಡುವಿರಿ.

ಮೀನ ರಾಶಿ:

ಹೊಸ ಯೋಜನೆಗಳಲ್ಲಿ ವಿಘ್ನ ಕಂಡುಬರುತ್ತಿದೆ. ನಿಶ್ಚಿತ ಆದಾಯದಲ್ಲಿ ಗಣನೀಯ ಇಳಿಕೆಯಾಗಿ, ಚಿಂತೆಗೆ ಕಾರಣವಾಗುತ್ತದೆ. ಅಲಂಕಾರಕ್ಕೆ ಸಮಯವನ್ನು ಕೊಡುವಿರಿ. ದೇವಾಲಯದ ಪಾರುಪತ್ತೆದಾರರಿಗೆ ಹೊಸ ಸವಾಲುಗಳು ಎದುರಾಗಲಿವೆ. ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ದ್ವಂದ್ವ ಎದುರಾಗುವುದು. ರಾಜಕಾರಣಿಗಳು ಸಮಾರಂಭಗಳಿಗೆ ಭಾಗವಹಿಸುವರು. ಸರ್ಕಾರದ ಕಡೆಯಿಂದ ಆಗುವ ನಿಮ್ಮ ಕೆಲಸವನ್ನು ಪ್ರಭಾವಿ ವ್ಯಕ್ತಿಗಳ ಮೂಲಕ ಮುನ್ನಡೆಸುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಬ್ರಹ್ಮ, ಕರಣ : ತೈತಿಲ, ಸೂರ್ಯೋದಯ – 05 – 59 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:07 – 18:42, ಯಮಗಂಡ ಕಾಲ 12:21 – 13:56, ಗುಳಿಕ ಕಾಲ 15:31 – 17:07

-ಲೋಹಿತ ಹೆಬ್ಬಾರ್ – 8762924271 (what’s app only)

Source link

RR vs GT: ಗುಜರಾತ್ ಸಾಂಘಿಕ ಪ್ರದರ್ಶನಕ್ಕೆ ಮಣಿದ ರಾಜಸ್ಥಾನ – Kannada News | IPL 2026: GT Dominates RR in Match 52, Climbs to 2nd Spot; Gill, Sudarshan Shine

ಐಪಿಎಲ್ 2026 ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ 7ನೇ ಗೆಲುವಿನೊಂದಿಗೆ 14 ಅಂಕಗಳನ್ನು ಕಲೆಹಾಕಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇತ್ತ ರಾಜಸ್ಥಾನ್ 5ನೇ ಸೋಲಿನೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಬರೋಬ್ಬರಿ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡು 152 ರನ್​ಗಳಿಗೆ ಆಲೌಟ್ ಆಗುವ ಮೂಲಕ 77 ರನ್​ಗಳ ಹೀನಾಯ ಸೋಲು ಅನುಭವಿಸಿತು.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಆರಂಭದಿಂದಲೇ ಆಕ್ರಮಣಕಾರಿ ಧೋರಣೆ ಅನುಸರಿಸಿತು. ನಾಯಕ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ರಾಜಸ್ಥಾನ ಬೌಲರ್‌ಗಳ ಮೇಲೆ ಒತ್ತಡ ಹೇರಿ ಮೊದಲ ವಿಕೆಟ್‌ಗೆ 118 ರನ್‌ಗಳ ಅದ್ಭುತ ಪಾಲುದಾರಿಕೆಯನ್ನು ಹಂಚಿಕೊಂಡರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು ತ್ವರಿತ ರನ್ ಗಳಿಸಿ ತಂಡಕ್ಕೆ ಬಲವಾದ ಅಡಿಪಾಯ ಹಾಕಿದರು.

ಶುಭ್​ಮನ್ ಗಿಲ್ ಕೇವಲ 44 ಎಸೆತಗಳಲ್ಲಿ 84 ರನ್ ಗಳಿಸಿ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಇತ್ತ ಸಾಯಿ ಸುದರ್ಶನ್ ಕೂಡ 36 ಎಸೆತಗಳಲ್ಲಿ 55 ರನ್​ಗಳ ಕೊಡುಗೆ ನೀಡಿದರು. ಆದಾಗ್ಯೂ ಜೋಸ್ ಬಟ್ಲರ್ ಮಧ್ಯಮ ಕ್ರಮಾಂಕದಲ್ಲಿ ಹೆಚ್ಚಿನ ಪರಿಣಾಮ ಬೀರದೆ 10 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು. ಅಂತಿಮ ಓವರ್‌ಗಳಲ್ಲಿ ಅಬ್ಬರಿಸಿದ ವಾಷಿಂಗ್ಟನ್ ಸುಂದರ್ ಕೇವಲ 20 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಒಳಗೊಂಡ ಅಜೇಯ 37 ರನ್ ಗಳಿಸಿದರು. ರಾಹುಲ್ ತೆವಾಟಿಯಾ ಕೂಡ ನಾಲ್ಕು ಎಸೆತಗಳಲ್ಲಿ 14 ರನ್‌ಗಳ ತ್ವರಿತ ಇನ್ನಿಂಗ್ಸ್ ಆಡಿದರು. ರಾಜಸ್ಥಾನ್ ರಾಯಲ್ಸ್ ಪರ ಬ್ರಿಜೇಶ್ ಶರ್ಮಾ ಎರಡು ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ಯಶ್ ರಾಜ್ ಪುಂಜಾ ತಲಾ ಒಂದು ವಿಕೆಟ್ ಪಡೆದರು.

ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ಕೂಡ ಅಬ್ಬರದ ಆರಂಭ ಪಡೆಯಿತು. ಎಂದಿನಂತೆ ವೈಭವ್ ಸೂರ್ಯವಂಶಿ ಬೌಂಡರಿಗಳ ಮಳೆಗರೆದರು. ಆದರೆ ವೈಭವ್ ಆರ್ಭಟಕ್ಕೆ ಸಿರಾಜ್ ಬ್ರೇಕ್ ಹಾಕಿದರು. ವೈಭವ್ 16 ಎಸೆತಗಳಲ್ಲಿ 36 ರನ್ ಬಾರಿಸಿ ಔಟಾದರು. ಈ ವಿಕೆಟ್ ಪತನದ ಬಳಿಕ ರಾಜಸ್ಥಾನ್ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು. ನಾಯಕ ಜೈಸ್ವಾಲ್​ 3 ರನ್​ಗೆ ಔಟಾದರೆ, ಜುರೇಲ್ 24, ಹೆಟ್ಮಾಯರ್ 6, ಫೆರೆರಾ 4, ಶುಭಂ ದುಬೆ 15 ರನ್​ಗೆ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ರಾಜಸ್ಥಾನದ ಸೋಲು ಖಚಿತವಾಯಿತು.

Published On – 11:11 pm, Sat, 9 May 26

Source link

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು – Kannada News | Vijay Raghavendra talks about his Rudrabhishekam movie

ವಿಜಯ್ ರಾಘವೇಂದ್ರ (Vijay Raghavendra) ನಟನೆಯ ‘ರುದ್ರಾಭಿಷೇಕಂ’ ಸಿನಿಮಾದ ಹಾಡೊಂದು ಇಂದು (ಮೇ 09) ಬಿಡುಗಡೆ ಆಯ್ತು. ಸಿನಿಮಾ ತಂಡ ವಿಜಯ್ ಅವರಿಗೆ ‘ನ್ಯಾಚುರಲ್ ಸ್ಟಾರ್’ ಎಂಬ ಬಿರುದು ನೀಡಿ ಗೌರವಿಸಿತು. ಆದರೆ ಅದನ್ನು ವಿನಯದಿಂದ ನಿರಾಕರಿಸಿದ ವಿಜಯ್ ರಾಘವೇಂದ್ರ, ನಾನು ‘ಚಿನ್ನಾರಿ ಮುತ್ತ’ನಾಗಿಯೇ ಇರುತ್ತೀನಿ ಎಂದರು. ವಿಜಯ್ ರಾಘವೇಂದ್ರ ಅವರು ‘ರುದ್ರಾಭಿಷೇಕಂ’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಇರುವುದಾಗಿ ಹೇಳಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಬಲಿಗಾಗಿ ಕಾದಿವೆ ಅಪಾಯಕಾರಿ ಗೋಡೆಗಳು? ಜೋರು ಮಳೆ ಬಂದ್ರೆ ಕುಸಿಯುವುದು ಗ್ಯಾರಂಟಿ – Kannada News | Dangerous Walls Turning Deadly; Structures May Collapse if Heavy Rains Hit

ಬೆಂಗಳೂರು, ಮೇ 09: ಇತ್ತೀಚೆಗೆ ನಗರದಲ್ಲಿ ಸುರಿದ ಮಳೆಗೆ ಬೋರಿಂಗ್ ಆಸ್ಪತ್ರೆಯ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದರು. ಘಟನೆಯ ಬಳಿಕ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳು ಕಾಟಾಚಾರಕ್ಕೆ ಸಮೀಕ್ಷೆ ನಡೆಸಿ ಗೋಡೆಗಳ ಪರಿಶೀಲನೆ ಮಾಡಿದ್ದರು. ಆದರೆ ಕೆಲವು ಗೋಡೆಗಳು ಕುಸಿಯುವ ಹಂತದಲ್ಲಿದ್ದರೂ ಅಧಿಕಾರಿಗಳು ಅತ್ತ ಕಡೆ ಗಮನ ಹರಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿವೆ ಅಪಾಯಕಾರಿ ಗೋಡೆಗಳು: GBA ನಿರ್ಲಕ್ಷ್ಯ ಏಕೆ?
  • ಬಿರುಕು ಬಿಟ್ಟ ಕಾಂಪೌಂಡ್‌ಗಳಿಂದ ಆತಂಕ
  • ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳುವಂತೆ ಆಗ್ರಹ

ಬಿರುಕು ಬಿಟ್ಟಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯ

ನಗರದಲ್ಲಿ ಗೋಡೆಗಳು ಬಲಿಗಾಗಿ ಕಾದುಕುಳಿತಿವೆ. ಯಾವುದೇ ಕ್ಷಣದಲ್ಲಾದರೂ ಕುಸಿಯುವ ಸ್ಥಿತಿಯಲ್ಲಿವೆ. ಗೋಡೆಗಳು, ಕಾಂಪೌಂಡ್​ಗಳು ಬಿರುಕು ಬಿಟ್ಟಿದ್ದರೂ ಜಿಬಿಎ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಆಸ್ಪತ್ರೆ, ಕಾಲೇಜು, ಶಾಲೆಗಳ ಕಾಂಪೌಂಡ್ ಗೋಡೆಗಳು ಬಿರುಕು ಬಿಟ್ಟಿದ್ದರೂ ಯಾವುದೇ ಅಧಿಕಾರಿಗಳು ಪರಿಶೀಲಿಸುತ್ತಿಲ್ಲ. ಇದಕ್ಕೆ ಉದಾಹರಣೆಯೆಂದರೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಬಳಿ ಇರುವ ಕಾಲೇಜಿನ ಕಾಂಪೌಂಡ್. ಗೋಡೆ ನಿರ್ಮಿಸಿ ಹಲವು ವರ್ಷಗಳೇ ಕಳೆದಿದ್ದು, ಸದ್ಯ ಕುಸಿಯುವ ಹಂತದಲ್ಲಿದೆ. ಆದರೂ ಸಂಬಂಧಪಟ್ಟವರು ಗೋಡೆಯ ಕಡೆ ತಿರುಗಿಯೂ ನೋಡುತ್ತಿಲ್ಲ.

ಇದನ್ನೂ ಓದಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ದುರಂತ: ಐದು ವರ್ಷದ ಮಗು ಸಾವು

ದುರ್ಘಟನೆ ಸಂಭವಿಸಿ ಪರಿಹಾರ ನೀಡುವುದಕ್ಕಿಂತ ಮೊದಲೇ ಎಚ್ಚೆತ್ತುಕೊಂಡು ಈ ರೀತಿಯ ಅಪಾಯಕಾರಿ ಗೋಡೆಗಳನ್ನು ಮೊದಲು ತೆರವು ಮಾಡಬೇಕಿದೆ. ಜಿಬಿಎ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಈ ರೀತಿ ಗೋಡೆಗಳು ಬಿರುಕು ಬಿಟ್ಟ ಸ್ಥಿತಿಯಲ್ಲಿದ್ದರು ಕೂಡ ಒಬ್ಬ ಅಧಿಕಾರಿಗಳು ಈ ಕಡೆ ಗಮನ ಹರಿಸುತ್ತಿಲ್ಲ.

ಸೂಕ್ತ ಕ್ರಮಕ್ಕೆ ಸ್ಥಳೀಯರು ಒತ್ತಾಯ

ಇನ್ನು ಗೋಡೆಯ ಪಕ್ಕದಲ್ಲೇ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ. ಪಾದಚಾರಿ ಮಾರ್ಗದಲ್ಲಿ ಜನರು ಓಡಾಡುತ್ತಿದ್ದಾರೆ. ಮಳೆ ಬಂದರೆ ಸಾಕು ಈ ಗೋಡೆಗಳು ಕುಸಿದು ಬೀಳುವ ಆತಂಕವಿದೆ. ಹಾಗಾಗಿ ಅನಾಹುತ ಸಂಭವಿಸುವ ಮೊದಲೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹೊಸ ಮನೆ ಕಟ್ಟುವ ಆಸೆ ಮಣ್ಣುಪಾಲು; ಗೋಡೆ ಕುಸಿದು ಮಾಲೀಕ ಸ್ಥಳದಲ್ಲೇ ಸಾವು!

ಒಟ್ಟಾರೆ ಅಧಿಕಾರಿಗಳು ಕೂಡಲೇ ಈ ರೀತಿಯ ಅಪಾಯಕಾರಿ ಗೋಡೆಗಳನ್ನು ಪರಿಶೀಲಿಸಿ ತೆರವುಗೊಳಿಸಿ, ಹೊಸ ಗೋಡೆಗಳನ್ನು ನಿರ್ಮಿಸುವ ಮೂಲಕ ಮುಂದಾಗಬಹುದಾದ ದುರ್ಘಟನೆಗಳನ್ನು ತಪ್ಪಿಸಬೇಕಿದೆ.

ವರದಿ: ನಟರಾಜ್ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹವಾಮಾನ ಬದಲಾವಣೆಯಿಂದ ರೋಗನಿರೋಧಕ ಶಕ್ತಿ ಕುಂದದಂತೆ ನೋಡಿಕೊಳ್ಳಲು ಈ ಸಲಹೆಯನ್ನು ತಪ್ಪದೆ ಪಾಲಿಸಿ – Kannada News | Seasonal Weather Shifts: How to Boost Immunity Naturally

ದೇಶದ ಹಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ತೀವ್ರ ಬಿಸಿಲು, ಮತ್ತೊಮ್ಮೆ ಮಳೆ ಮತ್ತು ತಣ್ಣನೆಯ ಗಾಳಿ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ಇಂತಹ ಹವಾಮಾನ ಬದಲಾವಣೆಗಳಿಂದ ದೇಹದ ರೋಗನಿರೋಧಕ ಶಕ್ತಿ (Immunity) ಕುಂದುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಶೀತ, ಕೆಮ್ಮು, ಜ್ವರ ಮತ್ತು ವಿವಿಧ ಸೋಂಕುಗಳ ಅಪಾಯ ಹೆಚ್ಚಾಗಬಹುದು. ವೈದ್ಯರ ಪ್ರಕಾರ, ಹವಾಮಾನ ಪದೇಪದೇ ಬದಲಾಗುವಾಗ ದೇಹವು ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳಲು ಹೆಚ್ಚು ಶ್ರಮಪಡಬೇಕಾಗುತ್ತದೆ. ಇದರಿಂದ ಇಮ್ಯುನಿಟಿ ಶಕ್ತಿ ಮೇಲೆ ಒತ್ತಡ ಉಂಟಾಗಿ ದೇಹ ಬೇಗ ದುರ್ಬಲಗೊಳ್ಳಬಹುದು. ಸಾಕಷ್ಟು ನಿದ್ರೆ ಮಾಡದೇ ಇರುವುದು, ಕಡಿಮೆ ನೀರು ಕುಡಿಯುವುದು ಮತ್ತು ಪೌಷ್ಟಿಕ ಆಹಾರ ಸೇವಿಸದೇ ಇರುವುದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು. ಹಾಗಾದರೆ ಇಮ್ಯುನಿಟಿ ಕಡಿಮೆಯಾದಾಗ ದೇಹದಲ್ಲಿ ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ, ಈ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಇಮ್ಯುನಿಟಿ ದುರ್ಬಲವಾದಾಗ ಕಾಣಿಸುವ ಲಕ್ಷಣಗಳು:

ತಜ್ಞರ ಪ್ರಕಾರ, ಪದೇಪದೇ ಶೀತ ಮತ್ತು ಕೆಮ್ಮು ಕಾಣಿಸಿಕೊಳ್ಳುವುದು, ಬೇಗ ದಣಿವಾಗುವುದು, ಗಂಟಲು ನೋವು ಹಾಗೂ ದೇಹದಲ್ಲಿ ನೋವು ಕಾಣಿಸುವುದು ದುರ್ಬಲ ರೋಗನಿರೋಧಕ ಶಕ್ತಿಯ ಲಕ್ಷಣಗಳಾಗಿರಬಹುದು. ಗಾಯ ನಿಧಾನವಾಗಿ ಗುಣಮುಖವಾಗುವುದು, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರುವುದು ಮತ್ತು ದಿನಪೂರ್ತಿ ಸುಸ್ತಾಗಿರುವುದು ಕೂಡ ಗಮನಿಸಬೇಕಾದ ಸೂಚನೆಗಳಾಗಿವೆ.

ಇದನ್ನೂ ಓದಿ: ಆರೋಗ್ಯವಾಗಿರಲು ಮಾತ್ರೆ ತಗೋಳೋದು ಬಿಟ್ಟು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವತ್ತ ಗಮನಕೊಡಿ!

ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

  • ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸಮತೋಲನ ಆಹಾರ ಸೇವನೆ ಅತ್ಯಗತ್ಯ. ತಾಜಾ ಹಣ್ಣು, ತರಕಾರಿ ಮತ್ತು ವಿಟಮಿನ್‌ ಸಮೃದ್ಧ ಆಹಾರ ದೇಹವನ್ನು ಬಲವಾಗಿಡಲು ಸಹಾಯ ಮಾಡುತ್ತದೆ. ದಿನದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಸರಿಯಾಗಿ ನಿದ್ರೆ ಮಾಡುವುದು ಅಗತ್ಯ.
  • ಇದರ ಜೊತೆಗೆ, ನಿಯಮಿತ ವ್ಯಾಯಾಮ, ಸ್ವಚ್ಛತೆ ಮತ್ತು ಹವಾಮಾನಕ್ಕೆ ತಕ್ಕ ಬಟ್ಟೆ ಧರಿಸುವುದು ಮುಖ್ಯ. ಅತಿಯಾಗಿ ಜಂಕ್ ಫುಡ್ ಸೇವನೆ ಮತ್ತು ಅಸಮರ್ಪಕ ದಿನಚರಿಯನ್ನು ತಪ್ಪಿಸುವುದು ಬಹಳ ಉತ್ತಮ.
  • ಆರೋಗ್ಯ ತಜ್ಞರ ಪ್ರಕಾರ, ಪದೇಪದೇ ಅನಾರೋಗ್ಯ ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಸರಿಯಾದ ಜೀವನಶೈಲಿ ಮತ್ತು ಆರೋಗ್ಯಕರ ಅಭ್ಯಾಸಗಳಿಂದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಿಂದಿಗೆ ಹಾರಿದ ರಾಜ್ ಬಿ ಶೆಟ್ಟಿ, ಮೊದಲ ಸಿನಿಮಾದ ಟ್ರೈಲರ್ ಬಿಡುಗಡೆ – Kannada News | Raj B Shetty’s first Hindi movie trailer released

ರಾಜ್ ಬಿ ಶೆಟ್ಟಿ (Raj B Shetty) ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ನಿರ್ದೇಶಕರು. ನಿರ್ಮಾಪಕರಾಗಿಯೂ ದೊಡ್ಡ ಯಶಸ್ಸನ್ನು ‘ಸು ಫ್ರಂ ಸೋ’ ಸಿನಿಮಾದ ಮೂಲಕ ಗಳಿಸಿದ್ದಾರೆ. ‘ಒಂದು ಮೊಟ್ಟೆಯ ಕತೆ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳ ಮೂಲಕ ಹೊಸ ಅಲೆಯನ್ನೇ ಎಬ್ಬಿಸಿದ್ದ ರಾಜ್ ಬಿ ಶೆಟ್ಟಿ ಅವರು ನಟನಾಗಿ ಕನ್ನಡ ಮಾತ್ರವಲ್ಲದೇ ಪರ ಭಾಷೆಗಳಲ್ಲಿಯೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಈಗಾಗಲೇ ಮಲಯಾಳಂನ ಕೆಲ ಸಿನಿಮಾಗಳಲ್ಲಿ ನಟಿಸಿರುವ ಬಂದಿರುವ ರಾಜ್ ಬಿ ಶೆಟ್ಟಿ ಇದೀಗ ಹಿಂದಿಗೆ ಕಾಲಿಟ್ಟಿದ್ದಾರೆ.

ರಾಜ್ ಬಿ ಶೆಟ್ಟಿ ಅವರು ಹಿಂದಿಯಲ್ಲಿ ನಟಿಸಿರುವ ಮೊದಲ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಉತ್ತರ ಭಾರತದ ಸಿನಿಮಾ ಪ್ರೇಮಿ ಇನ್​ಫ್ಲ್ಯುಯೆನ್ಸರ್​​ಗಳು ರಾಜ್ ಬಿ ಶೆಟ್ಟಿಯ ಮೇಲೆ ಕಣ್ಣಿಟ್ಟಿದ್ದಾರೆ. ರಾಜ್ ಬಿ ಶೆಟ್ಟಿ, ‘ಬಂದರ್’ ಹೆಸರಿನ ಹಿಂದಿ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಟ್ರೈಲರ್​​ನಲ್ಲಿ ರಾಜ್ ಬಿ ಶೆಟ್ಟಿ ಸಹ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

‘ಬಂದರ್’ ಭಿನ್ನ ಕತೆಯ ಸಿನಿಮಾ ಎಂಬುದು ಸಿನಿಮಾದ ಟ್ರೈಲರ್​​ನಿಂದಲೇ ತಿಳಿದು ಬರುತ್ತಿದೆ. ಸಿನಿಮಾದ ಮುಖ್ಯ ಪಾತ್ರದಲ್ಲಿ ಖ್ಯಾತ ಬಾಲಿವುಡ್ ನಟ ಬಾಬಿ ಡಿಯೋಲ್ ನಟಿಸಿದ್ದಾರೆ. ಟ್ರೈಲರ್​, ಕತೆಯ ಸುಳಿವುನ್ನು ಬಿಟ್ಟುಕೊಡುತ್ತಿಲ್ಲವಾದರೂ ಕತೆಯಂತೂ ಬಹಳ ಭಿನ್ನವಾಗಿರುವುದು ತಿಳಿದು ಬರುತ್ತಿದೆ. ಸೆಲೆಬ್ರಿಟಿ ಒಬ್ಬ ಡೇಟಿಂಗ್ ಆಪ್​​ನಿಂದಾಗಿ ಜೈಲು ಸೇರುವ ಕತೆಯನ್ನು ಸಿನಿಮಾ ಒಳಗೊಂಡಿದೆ.

ರಾಜ್ ಬಿ ಶೆಟ್ಟಿ ಅವರ ‘ಗರುಡ ಗಮನ’ ದಲ್ಲಿದ್ದ ರೀತಿಯ ಪಾತ್ರದಲ್ಲಿಯೇ ಕಾಣಿಸಿಕೊಂಡಿರುವಂತಿದೆ. ಶೆಟ್ಟರು ಜೈಲಿನಲ್ಲಿ ಸಹ ಖೈದಿಯೊಬ್ಬನ ಜೊತೆಗೆ ಖುಷಿಯಿಂದ ಡ್ಯಾನ್ಸ್ ಮಾಡುತ್ತಿರುವ ಸಣ್ಣ ದೃಶ್ಯದ ತುಣುಕು ಟ್ರೈಲರ್​​ನಲ್ಲಿದೆ. ವಿಲನ್ ಗುಂಪಿನ ಸದಸ್ಯರಾಗಿ ರಾಜ್ ಬಿ ಶೆಟ್ಟಿ ನಟಿಸಿದಂತಿದೆ.

ಸಿನಿಮಾವನ್ನು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶಿಸಿದ್ದಾರೆ. ಸಹ ನಿರ್ದೇಶಕ ಸಾಕ್ಷಿ ಮೆಹ್ತಾ ಅವರದ್ದು. ಕತೆ ಬರೆದಿರುವುದು ಸುದೀಪ್ ಶರ್ಮಾ, ಅಭಿಷೇಕ್ ಬ್ಯಾನರ್ಜಿ. ಸಿನಿಮಾನಲ್ಲಿ ಬಾಬಿ ಡಿಯೋಲ್, ರಾಜ್ ಬಿ ಶೆಟ್ಟಿ, ‘ದಂಗಲ್’ ನಟಿ ಸಾನ್ಯಾ ಮಲ್ಹೋತ್ರಾ, ಇಂದ್ರಜಿತ್ ಸುಕುಮಾರನ್ ಇನ್ನೂ ಹಲವು ಪ್ರತಿಭಾವಂತ ನಟರು ನಟಿಸಿದ್ದಾರೆ. ಸಿನಿಮಾ ಜೂನ್ 5 ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾಡುತ್ತಿದೆ ‘ಕೊಲೆಯ ನೆನಪು’ ಈ ಬಾರಿ ಜಾರ್ಜ್ ಕುಟ್ಟಿಯ ಪ್ಲ್ಯಾನ್ ಏನು? – Kannada News | Mohanlal starrer Drishyam 3 movie trailer released

‘ದೃಶ್ಯಂ’ (Drishyam) ಸಿನಿಮಾ ಭಾರತ ಸಿನಿಮಾ ಇತಿಹಾಸದಲ್ಲೇ ಅತಿ ಹೆಚ್ಚು ರೀಮೇಕ್​​ಗಳನ್ನು ಕಂಡ ಸಿನಿಮಾ. ಮಾತ್ರವಲ್ಲದೆ, ಭಾರತೀಯ ಚಿತ್ರರಂಗದ ಅತ್ಯುತ್ತಮ ಕ್ರೈಂ ಥ್ರಿಲ್ಲರ್ ಸಹ ಹೌದು. ಆ ಸಿನಿಮಾದ ಭಿನ್ನತೆ, ಸರಳತೆಗೆ ಪ್ರೇಕ್ಷಕರು ಫಿದಾ ಆಗಿದ್ದರು. ಮೋಹನ್​​ಲಾಲ್ ನಟಿಸಿ, ಜಿತು ಜೋಸೆಫ್ ನಿರ್ದೇಶನ ಮಾಡಿದ್ದ ಈ ಸಿನಿಮಾದ ಎರಡನೇ ಭಾಗ 2022 ರಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಿತ್ತು. ಇದೀಗ ಈ ಸಿನಿಮಾದ ಮೂರನೇ ಭಾಗ ನಿರ್ಮಾಣವಾಗಿದ್ದು, ಬಿಡುಗಡೆಗೆ ರೆಡಿಯಾಗಿದೆ. ಇದೀಗ ಈ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲ ಉಂಟು ಮಾಡಿದೆ.

ಈಗ ಬಿಡುಗಡೆ ಆಗಿರುವ ‘ದೃಶ್ಯಂ 3’ ಟ್ರೈಲರ್‌ನಲ್ಲಿ ಜಾರ್ಜ್‌ಕುಟ್ಟಿ ತನ್ನ ಹಿಂದಿನ ಕೃತ್ಯಗಳ ಬಗ್ಗೆ ಪಶ್ಚಾತ್ತಾಪ ಪಡುತ್ತಿರುವುದು ಕಂಡುಬರುತ್ತದೆ. ತನ್ನ ಮಕ್ಕಳು ತನ್ನನ್ನು ಒಬ್ಬ ಅಪರಾಧಿ ಎಂದು ಭಾವಿಸುತ್ತಿರಬಹುದೇ ಎಂಬ ಆತಂಕ ಅವನನ್ನು ಕಾಡುತ್ತಿದೆ. ಪೊಲೀಸರಿಂದ ತನ್ನ ಕುಟುಂಬವನ್ನು ರಕ್ಷಿಸಲು ಹೂತಿದ್ದ ಸತ್ಯಗಳು ಈಗ ಮತ್ತೆ ಮುನ್ನೆಲೆಗೆ ಬರುತ್ತಿದ್ದು, ಈ ಬಾರಿ ತನ್ನನ್ನು ಮತ್ತು ತನ್ನ ಕುಟುಂಬವನ್ನು ಕಾನೂನಿನಿಂದ ತಪ್ಪಿಸಲು ಜಾರ್ಜ್‌ಕುಟ್ಟಿ ಈ ಬಾರಿ ಯಾವ ರೀತಿಯ ಹೊಸ ತಂತ್ರಗಳನ್ನು ರೂಪಿಸುತ್ತಾನೆ ಎಂಬುದು ಕಥೆಯ ಮುಖ್ಯ ಎಳೆಯಾಗಿದೆ.

ನಿರ್ದೇಶಕ ಜೀತು ಜೋಸೆಫ್ ಈ ಭಾಗದಲ್ಲಿ ಕಥೆಯನ್ನು ಮತ್ತಷ್ಟು ರೋಚಕಗೊಳಿಸಿದ್ದಾರೆ. ಟ್ರೈಲರ್‌ನಲ್ಲಿ ತೋರಿಸಿರುವಂತೆ, ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಜಾರ್ಜ್‌ಕುಟ್ಟಿ ಮಾಡುವ ಪ್ರತಿಯೊಂದು ನಡೆ ಕೂಡ ಅನಿರೀಕ್ಷಿತ ತಿರುವುಗಳಿಂದ ಕೂಡಿದೆ. ತನ್ನ ಕುಟುಂಬದ ಮೇಲಿನ ಪ್ರೀತಿ ಮತ್ತು ಸಮಾಜದಲ್ಲಿ ಗೌರವ ಉಳಿಸಿಕೊಳ್ಳುವ ಹೋರಾಟದ ನಡುವೆ ಅವನು ಸಿಲುಕಿಕೊಂಡಿದ್ದಾನೆ. ಆದರೆ ಈ ಬಾರಿ ಪೊಲೀಸರ ಜೊತೆಗೆ ಪತ್ರಕರ್ತರು ಇನ್ನೂ ಕೆಲವರು ಜಾರ್ಜ್ ಕುಟ್ಟಿಯ ಹಿಂದೆ ಬಿದ್ದಿದ್ದಾರೆ.

ಇದನ್ನೂ ಓದಿ: ‘ದೃಶ್ಯಂ 3’ ಟೀಸರ್: ಜಾರ್ಜ್ ಕುಟ್ಟಿಗೆ ಮೊದಲ ಬಾರಿ ಭಯವಾಗಿದೆ

ಮೋಹನ್ ಲಾಲ್ ಅವರು ಜಾರ್ಜ್‌ಕುಟ್ಟಿಯ ಪಾತ್ರದಲ್ಲಿ ಎಂದಿನಂತೆ ಅದ್ಭುತವಾಗಿ ನಟಿಸಿದ್ದು, ಅವರ ಮುಖದಲ್ಲಿನ ಆತಂಕ ಮತ್ತು ಸ್ಥಿತಪ್ರಜ್ಞೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಚಿತ್ರದ ಮೊದಲ ಎರಡು ಭಾಗಗಳು ಸೂಪರ್ ಹಿಟ್ ಆಗಿರುವುದರಿಂದ, ಈ ಮೂರನೇ ಭಾಗದ ಮೇಲೆ ಚಿತ್ರರಂಗದಲ್ಲಿ ಮತ್ತು ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆಗಳಿವೆ. ಪೊಲೀಸರು ಜಾರ್ಜ್‌ಕುಟ್ಟಿಯನ್ನು ಈ ಬಾರಿ ಹೇಗೆ ಹಿಡಿಯುತ್ತಾರೆ ಅಥವಾ ಅವನು ಮತ್ತೆ ತನ್ನ ಬುದ್ಧಿವಂತಿಕೆಯಿಂದ ಪಾರಾಗುತ್ತಾನೆಯೇ ಎಂಬ ಪ್ರಶ್ನೆಗೆ ಸಿನಿಮಾ ಉತ್ತರ ನೀಡಲಿದೆ. ಟ್ರೈಲರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಲಯಾಳಂ ಚಿತ್ರರಂಗದ ಈ ಕ್ರೈಮ್ ಥ್ರಿಲ್ಲರ್ ಸಿನಿಮಾ ನೋಡಲು ಸಿನಿಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾ ಮೇ 21 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ: ವ್ಯಾಪಾರಿಗಳಿಂದ ತೀವ್ರ ಆಕ್ರೋಶ – Kannada News | Ilkal Footpath Shop Demolition Sparks Heated Protests by Traders

ಬಾಗಲಕೋಟೆ, ಮೇ 09: ಇಳಕಲ್ ನಗರದಲ್ಲಿ ಫುಟ್‌ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆಯು ಆರಂಭಗೊಂಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ನಗರದಲ್ಲಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕಾರ್ಯಾಚರಣೆಯನ್ನು ನಗರಸಭೆ ಅಧಿಕಾರಿಗಳು ಹಮ್ಮಿಕೊಂಡಿದ್ದರು.  ಆದರೆ, ಈ ಕ್ರಮದಿಂದ ತಮ್ಮ ಜೀವನೋಪಾಯಕ್ಕೆ ಧಕ್ಕೆಯಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ ವ್ಯಾಪಾರಿಗಳು, ನಗರಸಭೆ ಅಧಿಕಾರಿಗಳೊಂದಿಗೆ ತೀವ್ರ ವಾಗ್ವಾದಕ್ಕಿಳಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅಂಗಡಿಗಳನ್ನು ತೆರವುಗೊಳಿಸದಂತೆ ಮನವಿ ಮಾಡಿಕೊಂಡರೂ ಅಧಿಕಾರಿಗಳು ಕ್ರಮ ಕೈಗೊಂಡಾಗ, ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅಂಗಡಿಗಳನ್ನು ತೆರವುಗೊಳಿಸಿದರೆ, ತಾವು ವಿಷ ಕುಡಿದು ಸಾಯಬೇಕಾಗುತ್ತದೆ. ತಮ್ಮ ಸಾವಿಗೆ ನಗರಸಭೆ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ವ್ಯಾಪಾರಿಗಳ ಪ್ರತಿಭಟನೆ ತೀವ್ರಗೊಂಡು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಲಕ್ಷಣಗಳು ಕಂಡುಬಂದ ಬೆನ್ನಲ್ಲೇ ಇಳಕಲ್ ನಗರ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದು, ಬಳಿಕ ಅವರ ಭದ್ರತೆಯಲ್ಲಿಯೇ ಕಾರ್ಯಾಚರಣೆ ಮುಂದುವರಿದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link