All posts by nagaraj11081993

ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಮೊಕ್ಕಾಂ: 2 ದಿನಗಳಿಂದ ಹಿರಿಯ ಕಾಂಗ್ರೆಸ್ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ – Kannada News | Priyanka gandhi husband Robert Vadra found In Bengaluru Amide Karnataka power tussle

ಬೆಂಗಳೂರು, (ಫೆಬ್ರವರಿ 26): ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರ (Robert Vadra) ಬೆಂಗಳೂರಿನಲ್ಲಿ (Bengaluru) ಮೊಕ್ಕಾಂ ಹೂಡಿದ್ದು, ಕಳೆದ ಎರಡು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ ಹೊಡೆಯುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ರಾಬರ್ಟ್ ವಾದ್ರಾ, ನಿನ್ನೆ (ಫೆಬ್ರವರಿ 25) ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ರಂಜಾನ್ ಮಾಸ ನಿಮಿತ್ತ ಬೆಂಗಳೂರಿನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಖಾಸಗಿ ಹೊಟೆಲ್ ನಲ್ಲಿ ಹಿರಿಯ ನಾಯಕನ ಜೊತೆ ಮಾತುಕತೆ ನಡೆಸಿದ್ದರು. ಇನ್ನು ಕೆಲ ಹಿರಿಯ ನಾಯಕರು ಭೇಟಿಗೆ ಸಮಯ ಕೇಳಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ಇದು ಕಾಂಗ್ರೆಸ್ ಮನೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಅಧಿಕಾರಿ ಹಂಚಿಕ ಮುಸುಕಿನ ಗುದ್ದಾಟದ ನಡುವೆ ರಾಬರ್ಟ್ ವಾದ್ರಾ ನಿಗೂಢವಾಗಿ ಬೆಂಗಳೂರಿಗೆ ಬಂದು ಕೆಲ ನಾಯಕರ ಜೊತೆ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನ್ಯಾಯಾಂಗಕ್ಕೆ ಅಗೌರವ ತೋರುವ ಉದ್ದೇಶವಿಲ್ಲ; NCERT ಪಠ್ಯಪುಸ್ತಕ ವಿವಾದದ ತನಿಖೆಗೆ ಕೇಂದ್ರ ಸರ್ಕಾರ ಆದೇಶ – Kannada News | We Respect judiciary Education Minister Dharmendra Pradhan orders probe into NCERT textbook row

ನವದೆಹಲಿ, ಫೆಬ್ರವರಿ 26: ಸುಪ್ರೀಂ ಕೋರ್ಟ್ “ನ್ಯಾಯಾಂಗದಲ್ಲಿ ಭ್ರಷ್ಟಾಚಾರ” ಎಂಬ ವಿವಾದಾತ್ಮಕ ಅಧ್ಯಾಯವನ್ನು NCERT 8​​ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಬಗ್ಗೆ ನ್ಯಾಯಾಂಗ ನಿಂದನೆ ನೋಟಿಸ್‌ಗಳನ್ನು ನೀಡಿದ ನಂತರ ಪ್ರತಿಕ್ರಿಯಿಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸರ್ಕಾರವು ನ್ಯಾಯಾಲಯದ ನಿರ್ದೇಶನಗಳನ್ನು ಸಂಪೂರ್ಣವಾಗಿ ಪಾಲಿಸುತ್ತದೆ, ನಮ್ಮ ಸರ್ಕಾರಕ್ಕೆ ನ್ಯಾಯಾಂಗವನ್ನು ಅಗೌರವಿಸುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.

ನ್ಯಾಯಾಂಗದ ಬಗ್ಗೆ ಬಹಳ ಗೌರವವಿದೆ. ಆಗಿರುವ ಅಚಾತುರ್ಯವನ್ನು ತಕ್ಷಣ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಆದೇಶಿಸಲಾಗಿದೆ. 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಪಠ್ಯ ಸೇರಿಸಿದ್ದರಿಂದ ಸುಪ್ರೀಂ ಕೋರ್ಟ್ ಆ ಪುಸ್ತಕದ ಮೇಲೆ ಸಂಪೂರ್ಣ ನಿಷೇಧ ಹೇರಿತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ

ಈ ವಿಷಯವನ್ನು ತಮ್ಮ ಗಮನಕ್ಕೆ ತಂದ ತಕ್ಷಣ ತ್ವರಿತ ಕ್ರಮ ಕೈಗೊಳ್ಳಲು ಆದೇಶಿಸಿದ್ದೇನೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು. ಪುಸ್ತಕದ ಎಲ್ಲಾ ಪ್ರತಿಗಳನ್ನು ಹಿಂಪಡೆಯಲು ಮತ್ತು ಅವು ಶಾಲೆಗಳಿಗೆ ತಲುಪದಂತೆ ನೋಡಿಕೊಳ್ಳಲು NCERTಗೆ ಸೂಚಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ಅಧ್ಯಾಯವನ್ನು ಹೇಗೆ ತಯಾರಿಸಲಾಗಿದೆ ಮತ್ತು ಅನುಮೋದಿಸಲಾಗಿದೆ ಎಂಬುದರ ಕುರಿತು ತನಿಖೆ ನಡೆಸಲಾಗುವುದು ಎಂದು ಅವರು ಘೋಷಿಸಿದರು. ಇಂತಹ ದೋಷ ಮರುಕಳಿಸುವುದಿಲ್ಲ ಎಂದು ನ್ಯಾಯಾಂಗಕ್ಕೆ ಭರವಸೆ ನೀಡಿದ ಅವರು ಹೊಣೆಗಾರರೆಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾಸನ: 9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ – Kannada News | Sakleshpur Farmer Battles Canara Bank Over 9.34 Rupee Loan and Unreturned Change

ಹಾಸನ, ಫೆಬ್ರವರಿ 26: ಜಿಲ್ಲೆಯ ಸಕಲೇಶಪುರದಲ್ಲಿರುವ ಕೆನರಾ ಬ್ಯಾಂಕ್ ವಿರುದ್ಧ ಹಳೆ ಗ್ರಾಹಕರೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 15-20 ವರ್ಷಗಳಿಂದ ಬ್ಯಾಂಕಿನ ಗ್ರಾಹಕರಾಗಿರುವ ಮತ್ತು ಬೆಳೆ ಸಾಲಗಳಂತಹ ವ್ಯವಹಾರ ಮಾಡುತ್ತಿರುವ ರೈತನಿಗೆ, ಬ್ಯಾಂಕ್‌ನಿಂದ 9 ರೂಪಾಯಿ 34 ಪೈಸೆ ಬಾಕಿ ಸಾಲ ಪಾವತಿಸುವಂತೆ ಬೆನ್ನುಬಿದ್ದಿದೆ. ಇದೀಗ ಹತ್ತು ರೂ ಲೋನ್ ಕಟ್ಟಿರುವ ಗ್ರಾಹಕ ಚೊಕ್ಕಣ್ಣ ಗೌಡ 66 ಪೈಸೆ ವಾಪಸ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ನಿನ್ನೆ ಏಕಾಏಕಿ ಕರೆ ಮಾಡಿ 9 ರೂ 34 ಪೈಸೆ ಸಾಲ ಕ್ಲಿಯರ್ ಮಾಡಲು ಬ್ಯಾಂಕ್ ಸಿಬ್ಬಂದಿ ಸೂಚಿಸಿದ್ದಾರೆ. ಈ ಬೆನ್ನಲ್ಲೇ ಚೊಕ್ಕಣ್ಣ ಗೌಡ 10 ರೂ ಹಣ ಕೊಟ್ಟು ಸಾಲ ಕ್ಲಿಯರ್ ಮಾಡಿದ್ದಾರೆ. ರಸಿದಿಯಲ್ಲಿ 9 ರೂ 34 ಪೈಸೆ ಉಲ್ಲೇಖಿಸಿ 66 ಪೈಸೆ ವಾಪಸ್​ ಕೊಟ್ಟಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಸಾವಿರಾರು ಕೋಟಿ ಸಾಲ ಮಾಡಿ ಊರು ಬಿಟ್ಟವರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ, ಸಾಲ ಮಾಡಿ ವಾಪಸ್ ಕಟ್ಟುವ ಬಡ ರೈತರಿಗೆ ತೊಂದರೆ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

IND vs ZIM: 256 ರನ್ ಬಾರಿಸಿಯೂ ವಿಶ್ವ ದಾಖಲೆ ತಪ್ಪಿಸಿಕೊಂಡ ಟೀಂ ಇಂಡಿಯಾ

Source link

ಮುಷ್ಕರಕ್ಕೆ ಸಜ್ಜಾಗಿರುವ ಸರ್ಕಾರಿ ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ ಆರೋಗ್ಯ ಇಲಾಖೆ – Kannada News | Government Doctors Strike: Health department Warns of Legal Action, Urges Resolution

ಬೆಂಗಳೂರು, ಫೆಬ್ರವರಿ 26: ರಾಜ್ಯ ಸರ್ಕಾರದ ವಿರುದ್ಧ ವೈದ್ಯರು (Doctors) ಸಿಡಿದೆದ್ದಿದ್ದಾರೆ. ಆರೋಗ್ಯ ಇಲಾಖೆಯಲ್ಲಿನ ವೇತನ, ಮುಂಬಡ್ತಿ ಹಾಗೂ ನೇಮಕಾತಿ ಸೇರಿದಂತೆ 14 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಲಾಗಿದೆ. ಜೊತೆಗೆ ಮಾರ್ಚ್​​ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ. ಮುಷ್ಕರ ಹಿನ್ನೆಲೆ ಎಚ್ಚೆತ್ತ ಆರೋಗ್ಯ ಇಲಾಖೆ, ಮುಷ್ಕರ ಕೈಬಿಟ್ಟು ಕಾನೂನ ಅಡಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸಲಾಗಿದ್ದು, ಒಂದು ವೇಳೆ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತಂದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತಾ ಸೂಚನೆ ನೀಡಿದ್ದಾರೆ.

ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ಈ ಬಗ್ಗೆ ಆರೋಗ್ಯ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು ಹಾಗೂ ಇತರೆ ಸಿಬ್ಬಂದಿಗಳು ಸಾರ್ವಜನಿಕ ಆರೋಗ್ಯ ಸೇವೆಯ ನಿರಂತರತೆ ಹಾಗೂ ರೋಗಿಗಳ ಆರೋಗ್ಯ ಕಾಪಾಡುವ ಮಹತ್ವದ ವೃತ್ತಿಪರ ಮತ್ತು ನೈತಿಕ ಜವಾಬ್ದಾರಿಯನ್ನು ಹೊಂದಿರುವುದರಿಂದ, ಸಾಮೂಹಿಕ ಮುಷ್ಕರದಂತಹ ಕ್ರಮಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವುದನ್ನು ಮನಗಂಡು ಮುಷ್ಕರದಿಂದ ಹಿಂದೆ ಸರಿದು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ ತಮ್ಮ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಕಾನೂನಿನ ಅಡಿ ಲಭ್ಯವಿರುವ ಮಾರ್ಗಗಳನ್ನು ಬಳಿಸಿ ಬಗೆಹರೆಸುವುದು ಅಗತ್ಯವಾಗಿದ್ದು, ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ಉಂಟಾಗದಂತೆ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದೆಂದು ತಿಳಿಸಲಾಗಿದೆ.

ಇದನ್ನೂ ಓದಿ: ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್!

ಒಂದು ವೇಳೆ ಸಿಬ್ಬಂದಿಗಳು ಯಾವುದೇ ರೀತಿಯ ಮುಷ್ಕರ ನಿಮಿತ ಕೆಲಸದಿಂದ ಗೈರುಹಾಜರಾಗಿದ್ದಲ್ಲಿ ಮತ್ತು ಅದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದಲ್ಲಿ ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್​ ಎಚ್ಚರಿಕೆ ನೀಡಲಾಗಿದೆ.

ಡಿಮ್ಯಾಂಡ್ ಏನು?

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಸರಬರಾಜು ಆಗಬೇಕು. ವೃಂದ, ನೇಮಕಾತಿ ನಿಯಮ 3 ವರ್ಷಕ್ಕೊಮ್ಮೆ ತಿದ್ದುಪಡಿಯಾಗ್ಬೇಕು. ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನ ಪ್ರಕಟಿಸಬೇಕು. ಐದು ವರ್ಷಗಳಿಂದ ತಡೆ ಹಿಡಿಯಲಾದ ಮುಂಬಡ್ತಿಯನ್ನ ನೀಡಬೇಕು. ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ಮಾಡಬೇಕು. 6 ಸಾವಿರ ನೌಕರರಿಗೆ ಪ್ರತಿತಿಂಗಳ ಮೊದಲ ವಾರದಲ್ಲಿ ವೇತನ ಭತ್ಯೆ ನೀಡಬೇಕು. ಖಾಲಿ ಇರುವ ವೈದ್ಯರು, ಅರೆ ವೈದ್ಯರ ಹುದ್ದೆಯನ್ನ ಭರ್ತಿ ಮಾಡಬೇಕೆಂದು ಡಿಮ್ಯಾಂಡ್ ಇಟ್ಟಿದ್ದಾರೆ. ತಮ್ಮ ಬೇಡಿಕೆ ಈಡೇರದಿದ್ರೆ ಮಾರ್ಚ್​ 11 ರಿಂದ 15ರವರೆಗೆ ಒಪಿಡಿ ಬಂದ್​ಗೆ ಪ್ಲ್ಯಾನ್ ಮಾಡಿದ್ದಾರೆ. ಇದಕ್ಕೂ ರೆಸ್ಪಾನ್ಸ್ ಸಿಗದಿದ್ರೆ 2ನೇ ಹಂತದಲ್ಲಿ ಆಸ್ಪತ್ರೆಗೆ ಗೈರಾಗುವ ವಾರ್ನಿಂಗ್ ಕೊಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

4 ವರ್ಷದ ಮಗಳನ್ನು ಕೊಂದು ಏನೂ ಗೊತ್ತೇ ಇಲ್ಲವೆಂಬಂತೆ ನಾಟಕವಾಡಿದ ಭಾರತ ಮೂಲದ ವೈದ್ಯೆ – Kannada News | Indian Origin Doctor Called US Cops After Killing her 4 year old Daughter

ವಾಷಿಂಗ್ಟನ್, ಫೆಬ್ರವರಿ 26: ಅಮೆರಿಕದ ವೈದ್ಯರೊಬ್ಬರು ಫ್ಲೋರಿಡಾದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಅವರು ತನ್ನ 4 ವರ್ಷದ ಮಗಳನ್ನು ಈಜುಕೊಳದಲ್ಲಿ ಮುಳುಗಿಸಿ ಕೊಂದಿದ್ದರು. ಆರೋಪ ಹೊರಿಸಿ ಹಲವು ತಿಂಗಳುಗಳ ನಂತರ ಜೂನ್ 2025ರಲ್ಲಿ ನಡೆದ ಘಟನೆಯನ್ನು ತಿಳಿಸಲು ಭಾರತೀಯ ಮೂಲದ ವೈದ್ಯರೊಬ್ಬರು 911ಗೆ ಕರೆ ಮಾಡಿದ್ದಾರೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಒಕ್ಲಹೋಮ ಮೂಲದ ಮಕ್ಕಳ ತಜ್ಞೆ ಡಾ. ನೇಹಾ ಗುಪ್ತಾ ತಮ್ಮ ಪುಟ್ಟ ಮಗಳ ಸಾವನ್ನು ಮುಚ್ಚಿಹಾಕಲು ಫೋನ್ ಮಾಡಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

37 ವರ್ಷದ ನೇಹಾ ಗುಪ್ತಾ ಪೊಲೀಸರಿಗೆ ಫೋನ್ ಮಾಡಿ ತನ್ನ ಮಗಳು ಆರಿಯಾ ತಲಥಿ ಬಾಡಿಗೆ ಮನೆಯಿಂದ ಹೊರಬಂದು ಮಧ್ಯರಾತ್ರಿ ಈಜುಕೊಳಕ್ಕೆ ಬಿದ್ದಿದ್ದಾಳೆ. ಅವಳು ಈಜುಕೊಳದ ಆಳಕ್ಕೆ ಬಿದ್ದಿದ್ದಾಳೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಈ ಘಟನೆ ನಡೆದಾಗ ಮಕ್ಕಳ ವೈದ್ಯೆ ಮತ್ತು ಅವರ ಮಗಳು ಒಕ್ಲಹೋಮದಿಂದ ಫ್ಲೋರಿಡಾದ ಮಿಯಾಮಿಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: ದೆಹಲಿ: ಮನೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಮಹಿಳೆ, ಮೂವರು ಹೆಣ್ಣುಮಕ್ಕಳ ಶವ ಪತ್ತೆ

ಪೊಲೀಸರು ಬಂದ ನಂತರ ಗೋಳಾಡಿದ ಡಾ. ನೇಹಾ ಗುಪ್ತಾ, ನಾನು ಅವಳನ್ನು ಉಳಿಸಲು ಪ್ರಯತ್ನಿಸಿದೆ, ಆದರೆ ನನಗೆ ಈಜುವುದು ಹೇಗೆಂದು ತಿಳಿದಿಲ್ಲದ ಕಾರಣದಿಂದ ಆಕೆಯನ್ನು ಬದುಕಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. “ನಾವು ಮಲಗಿದ್ದೆವು, ನನಗೆ ಏನೋ ಶಬ್ದ ಕೇಳಿಸಿತು. ಅವಳು ಈಜುಕೊಳದಲ್ಲಿ ಬಿದ್ದಿದ್ದಳು. ನಾನು ಅವಳನ್ನು ಉಳಿಸಲು ಪ್ರಯತ್ನಿಸಿದೆ, ಆದರೆ ನನಗೆ ಈಜುವುದು ಹೇಗೆಂದು ತಿಳಿದಿಲ್ಲ. ಹಾಗಾಗಿ ಅವಳನ್ನು ಹೊರಗೆ ತರಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮನೆಕೆಲಸದಾಕೆಯೇ ವಿಲನ್; ಮಾಲೀಕರ ಮನೆಯಲ್ಲಿ ನಕಲಿ ಇಡಿ ದಾಳಿ ನಡೆಸಿ ಲಕ್ಷಗಟ್ಟಲೆ ಹಣ ದೋಚಿದ ಮಹಿಳೆ!

ಆದರೆ, ಶವಪರೀಕ್ಷೆಯ ಸಮಯದಲ್ಲಿ ಆ ಹುಡುಗಿಯ ಶ್ವಾಸಕೋಶ ಅಥವಾ ಹೊಟ್ಟೆಯಲ್ಲಿ ನೀರು ಕಂಡುಬಂದಿಲ್ಲ. ಅವಳನ್ನು ಕೊಳದಲ್ಲಿ ಹಾಕುವ ಮೊದಲೇ ಅವಳು ಸತ್ತಿದ್ದಾಳೆಂದು ಬಯಲಾಯಿತು. ತನಿಖಾಧಿಕಾರಿಗಳು ಅವಳನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದಾದ ನಂತರ ನೇಹಾ ಗುಪ್ತಾ ಅವರನ್ನು ಬಂಧಿಸಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರ್ಕಾರವನ್ನ ಬಡಿದೆಬ್ಬಿಸಿದ ಉದ್ಯೋಗಾಕಾಂಕ್ಷಿಗಳು: 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಒಪ್ಪಿಗೆ – Kannada News | Karnataka Cabinet approves fill 56 thousand new Jobs after Dharwad Protest

ಬೆಂಗಳೂರು, (ಫೆಬ್ರವರಿ 26): ಮೊನ್ನೆ ವಿದ್ಯಾಕಾಶಿ  ಧಾರವಾಡದಲ್ಲಿ  ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ (Dharwad Protest)  ದೇಶದಲ್ಲಿ ಭಾರೀ ಸದ್ದು ಮಾಡಿದೆ.  ಹೀಗಾಗಿ ಇದನ್ನು ಸಿದ್ದರಾಮಯ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇಂದು (ಫೆಬ್ರವರಿ 26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ನಡೆದೆ. ನೇಮಕಾತಿಗೆ ಇರೋ ಸಾಧಕ ಭಾಧಕಗಳ ಬಗ್ಗೆ ಚರ್ಚಿಸಿದ್ದು, ಅಂತಿಮವಾಗಿ ಮೀಸಲಾತಿ ಮಿತಿ 50% ಮೀರದಂತೆ ಒಳಮೀಸಲಾತಿಯೊಂದಿಗೆ ನೇಮಕಾತಿಗೆ ತೀರ್ಮಾನಿಸಿದೆ. ಹೌದು…ಕರ್ನಾಟಕದ ವಿವಿಧ ಇಲಾಖೆಗಳ 56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಇದರಿಂದ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಫಲಸಿಕ್ಕಂತಾಗಿದೆ.

Source link

25 ದಿನಗಳ ಸಂಭ್ರಮದಲ್ಲಿ ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ ಸಿನಿಮಾ – Kannada News | Siddu Moolimani starrer Seat Edge Kannada movie completes 25 days

ಕನ್ನಡ ಚಿತ್ರರಂಗದಲ್ಲಿ ಪ್ರತಿ ವಾರ ಹಲವು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅವುಗಳ ನಡುವೆ 25 ದಿನಗಳನ್ನು ಪೂರೈಸುವುದು ಸುಲಭವಲ್ಲ. ಸಿದ್ದು ಮೂಲಿಮನಿ (Siddu Moolimani), ರವೀಕ್ಷಾ ಶೆಟ್ಟಿ ಜೋಡಿಯಾಗಿ ನಟಿಸಿದ ‘ಸೀಟ್ ಎಡ್ಜ್’ ಸಿನಿಮಾ ಜನವರಿ 30ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಪೂರ್ಣಗೊಳಿಸಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ರಾಜ್ಯಾದ್ಯಂತ ಸುಮಾರು 10ಕ್ಕೂ ಹೆಚ್ಚಿನ ಕಡೆಗಳಲ್ಲಿ ನಾಲ್ಕನೇ ವಾರ ಪೂರೈಸಿ ಐದನೇ ವಾರದತ್ತ ಮುನ್ನಡೆಯುತ್ತಿದೆ ಎಂದು ‘ಸೀಟ್ ಎಡ್ಜ್’ (Seat Edge) ಚಿತ್ರತಂಡ ಹೇಳಿದೆ.

ಟೈಟಲ್, ಟೀಸರ್ ಮತ್ತು ಹಾಡುಗಳ ಮೂಲಕ ‘ಸೀಟ್ ಎಡ್ಜ್’ ಸಿನಿಮಾ ಕೌತುಕ ಮೂಡಿಸಿತ್ತು. ರಾಜ್ಯದಾದ್ಯಂತ 100ಕ್ಕೂ ಹೆಚ್ಚಿನ ಪರದೆಗಳಲ್ಲಿ ಏಕಕಾಲದಲ್ಲಿ ತೆರೆ ಕಂಡಿತ್ತು. ಹಲವು ಕಡೆಗಳಲ್ಲಿ ಹೌಸ್​ಫುಲ್ ಆಗಿದ್ದು ಚಿತ್ರತಂಡದ ಸಂಭ್ರಮಕ್ಕೆ ಕಾರಣ ಆಯಿತು. ‘ರಾಜ್ಯದ ಎಲ್ಲಾ ಭಾಗಗಳ ಪ್ರೇಕ್ಷಕರಿಗೂ ಸೀಟ್ ಎಡ್ಜ್ ಇಷ್ಟವಾಗುತ್ತಿದೆ. ಸಿನಿಮಾದಲ್ಲಿನ ಹಾರರ್, ಕಾಮಿಡಿಗೆ ನೋಡುಗರು ಎಂಜಾಯ್ ಮಾಡುತ್ತಿದ್ದಾರೆ. ಪ್ರೇಕ್ಷಕರು ಕೊಟ್ಟ ಬೆಂಬಲ ಮತ್ತು ಸಹಕಾರದಿಂದ ಯಶಸ್ವಿಯಾಗಿ 25 ದಿನಗಳ ಪ್ರದರ್ಶನ ಪೂರ್ಣಗೊಳಿಸಲು ಸಾಧ್ಯವಾಗಿದೆ’ ಎಂದು ಸಿದ್ದು ಮೂಲಿಮನಿ ಹೇಳಿದ್ದಾರೆ.

ನಾಯಕಿ ರವೀಕ್ಷಾ ಶೆಟ್ಟಿ ಅವರಿಗೂ ಜನರ ಪ್ರತಿಕ್ರಿಯೆ ಕಂಡು ಖುಷಿಯಾಗಿದೆ. ‘ಸಿನಿಮಾ ವೀಕ್ಷಿಸಿದ ಬಹುತೇಕರು ಇದು ಶೀರ್ಷಿಕೆಗೆ ತಕ್ಕಂತೆಯೇ ಸೀಟ್ ಎಡ್ಜ್​ನಲ್ಲಿ ಕುಳಿತು ನೋಡುವ ಅನುಭವ ನೀಡಿದೆ ಎಂದಿದ್ದಾರೆ. ಸಿನಿಮಾದ ಕಥೆ, ಹಾಡು, ಡ್ಯಾನ್ಸ್, ಕಾಮಿಡಿ, ಹಾರರ್, ಥ್ರಿಲ್ಲರ್ ಅಂಶಗಳನ್ನು ಪ್ರೇಕ್ಷಕರು ಎಂಜಾಯ್ ಮಾಡುತ್ತಿದ್ದಾರೆ. ಇಂಥದ್ದೊಂದು ಸಿನಿಮಾದ ಪಾತ್ರವಾಗಿರುವುದಕ್ಕೆ ನಾನು ಖುಷಿಯಾಗಿದ್ದೇನೆ’ ಎಂದು ರವೀಕ್ಷಾ ಶೆಟ್ಟಿ ಹೇಳಿದ್ದಾರೆ.

ಈ ಸಿನಿಮಾಗೆ ಗಿರಿಧರ ಟಿ. ವಸಂತಪುರ ಅವರು ಬಂಡವಾಳ ಹೂಡಿದ್ದಾರೆ. ಚೇತನ್ ಶೆಟ್ಟಿ ಅವರು ನಿರ್ದೇಶನ ಮಾಡಿದ್​ದಾರೆ. ‘ಥಿಯೇಟರಿನಲ್ಲಿ ನಮ್ಮ ನಿರೀಕ್ಷೆಗೂ ಮೀರಿದ ಸ್ಪಂದನೆ ಪ್ರೇಕ್ಷಕರಿಂದ ಸಿಕ್ಕಿದೆ. ಜನರಿಗೆ ಇಷ್ಟವಾಗುವಂತಹ ಸಿನಿಮಾ ಮಾಡಿದ್ದೇವೆ ಎಂಬ ಖುಷಿ ನಮಗಿದೆ. ಇದು ನಮಗೆ ಮರೆಯಲಾಗದ ಅನುಭವ ಹಾಗೂ ನೆನಪುಗಳನ್ನು ಕೊಟ್ಟಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Seat Edge Movie Review: ನಗಿಸುತ್ತಾ ಹೆದರಿಸುವ ‘ಸೀಟ್ ಎಡ್ಜ್’ ಸಿನಿಮಾ

ಇದೇ ಚಿತ್ರತಂಡ ಇನ್ನೊಂದು ಸಿನಿಮಾ ನಿರ್ಮಾಣಕ್ಕೆ ಸಜ್ಜಾಗುತ್ತಿದೆ. ‘ಮನಸ್ಸಿಗೆ ಮುಟ್ಟುವಂಥ ಸಿನಿಮಾಗಳನ್ನು ಮಾಡಿದರೆ, ಖಂಡಿತ ಪ್ರೇಕ್ಷಕರು ನೋಡುತ್ತಾರೆ ಎಂಬ ಭರವಸೆ ನಮಗೆ ಈ ಚಿತ್ರದಲ್ಲಿ ಸಿಕ್ಕಿದೆ. ಮುಂದೆ ಇದೇ ತಂಡದ ಜೊತೆಗೆ ಮತ್ತೊಂದು ಹೊಸ ಸಿನಿಮಾದ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲಿಯೇ ಘೋಷಣೆ ಮಾಡಲಿದ್ದೇವೆ’ ಎಂದು ನಿರ್ಮಾಪಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನ ಈ ಭಾಗದ ಜನರಿಗೆ ಸಿಹಿಸುದ್ದಿ: ಟ್ರಾಫಿಕ್ ದಟ್ಟಣೆಗೆ ಸಿಗಲಿದೆ ಶೀಘ್ರ ಮುಕ್ತಿ – Kannada News | Elevated rotary flyover Plan In Maruti Sevanagara connecting Banaswadi and Outer Ring Road for heavy Traffic

ಬೆಂಗಳೂರು, (ಫೆಬ್ರವರಿ 26): ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವು ಭಾಗಗಳಲ್ಲಿ (Bengaluru) ವಿಪರೀತ ಟ್ರಾಫಿಕ್ ಸಮಸ್ಯೆ (Traffic) . ಅದರಂತೆ ಬಾಣಸವಾಡಿ ಹಾಗೂ ಔಟರ್​ ರಿಂಗ್ ರೋಡ್​​ಗೆ ಸಂಪರ್ಕ ಕಲ್ಪಿಸುವ ಮಾರುತಿ ಸೇವಾನಗರ ಸಹ ಒಂದು. ಈ ಭಾಗದಲ್ಲಿ ವಾಹನ ದಟ್ಟಣೆ ವ್ಯಾಪಕವಾಗಿದ್ದು, ವಾಹನ ಸವಾರರು ರೋಸಿ ಹೋಗಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ), ಇದಕ್ಕೆ ಮುಕ್ತಿ ನೀಡಲು ಮುಂದಾಗಿದೆ. ಹೌದು… ಬಾಣಸವಾಡಿ ಮುಖ್ಯ ರಸ್ತೆಯ ಐಒಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣ ಯೋಜನೆ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಿಟ್ಟಿನಲ್ಲಿ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಬಿ-ಸ್ಮೈಲ್ ಹಾಗೂ ಕೆ-ರೈಡ್ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿದ್ದಾರೆ.

ಎಲಿವೇಟೆಡ್ ಮೇಲ್ಸೇತುವೆ ಪ್ಲ್ಯಾನ್

ಅಂದಾಜು 380 ಕೋಟಿ ರೂ. ವೆಚ್ಚದಲ್ಲಿ 3 ರಿಂದ 4 ಕಿಲೋ ಮೀಟರ್ ಉದ್ದದ ಎಲಿವೇಟೆಡ್ ಮೇಲ್ಸೇತುವೆ ನಿರ್ಮಿಸಲು ಫ್ಲ್ಯಾನ್ ನಡೆದಿದೆ. ಈ ಎಲಿವೇಟೆಡ್ ಮೇಲ್ಸೇತುವೆ ಏನಾದರೂ ನಿರ್ಮಾಣವಾದರೆ ಮಾರುತಿ ಸೇವಾನಗರದ ಟ್ರಾಫಿಕ್ ದಟ್ಟಣೆಗೆ ಮುಕ್ತಿ ದೊರೆಯಲಿದೆ. ಇದನ್ನೇ ಸಾರ್ವಜನಿಕರು ಕಾಯುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸವಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಮಾರುತಿ ಸೇವಾನಗರ-ಬಾಣಸವಾಡಿ-ಕಮ್ಮನಹಳ್ಳಿ-ಬೈಯ್ಯಪ್ಪನಹಳ್ಳಿ ಸುತ್ತಮುತ್ತ ಸದ್ಯ ವಾಹನ ಸಂಚಾರ ದುಸ್ತರವಾಗಿದೆ. ಸದ್ಯ ಇರುವ ಮೇಲ್ಸೇತುವೆ ಅವೈಜ್ಞಾನಿಕವಾಗಿದ್ದು, ವ್ಯವಸ್ಥಿತ ಪ್ಲಾನ್​ ಇಲ್ಲದ ಹಿನ್ನೆಲೆ ಕಿರಿದಾಗಿದೆ. ಹೀಗಾಗಿ ಸದಾ ಮಿತಿಮೀರಿದ ಟ್ರಾಫಿಕ್ ಇಲ್ಲಿ ವಾಹನ ಸವಾರರಿಗೆ ನರಕಕೂಪವಾಗುತ್ತಿದೆ. ಹೀಗಾಗಿ ಶೀಘ್ರವೇ ಈ ಹೊಸ ಮೇಲ್ಸೇತುವೆ ಕಾರ್ಯ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬೈಯ್ಯಪ್ಪನಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಹೆಚ್ಚುವರಿ 2-ಲೇನ್ ರೈಲ್ವೆ ಮೇಲ್ಸೇತುವೆ ನಿರ್ಮಾಣದ ಕುರಿತು ಕೂಡ ಕೆ-ರೈಡ್ ಮತ್ತು ಬಿ-ಸ್ಮೈಲ್ ಅಧಿಕಾರಿಗಳು ಚರ್ಚಿಸಿದ್ದಾರೆ. ಒಟ್ಟಾರೆ ಮಾರುತಿ ಸೇವಾನಗರದಲ್ಲಿ ಉದ್ಭವಿಸಿರುವ ಟ್ರಾಫಿಕ್ ಜಂಜಾಟಕ್ಕೆ ಮುಕ್ತಿ ಸಿಕ್ಕರೆ, ಸಾವಿರಾರು ಮಂದಿ ನಿಟ್ಟುಸಿರು ಬಿಡಲಿದ್ದಾರೆ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 5:39 pm, Thu, 26 February 26

Source link

IND vs ZIM: ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ – Kannada News | Abhishek Sharma T20 WC 2026 Comeback: Half Century vs Zimbabwe Marks Form Return

2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು ಎದುರಿಸಿ ಒಂದೇ ಒಂದು ರನ್ ಗಳಿಸಲು ವಿಫಲರಾದರು. ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಔಟಾಗಿದ್ದ ಅಭಿಷೇಕ್, ಪಾಕಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ, ನಾಲ್ಕು ಎಸೆತಗಳನ್ನು ಎದುರಿಸಿ ರನ್ ಗಳಿಸಲು ವಿಫಲರಾಗಿದ್ದರು. ನೆದರ್ಲ್ಯಾಂಡ್ಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ಕೇವಲ ಮೂರು ಎಸೆತಗಳನ್ನು ಎದುರಿಸಿ ನಿರಾಶೆ ಮೂಡಿಸಿದ್ದರು.

Source link