All posts by nagaraj11081993

ಬೆಂಗಳೂರಿಗರಿಗೆ ಗುಡ್​​ನ್ಯೂಸ್​​: ನಮ್ಮ ಮೆಟ್ರೋ ಯೆಲ್ಲೋ ಲೈನ್​​ನಲ್ಲಿ ನಾಳೆಯಿಂದ 8ನೇ ರೈಲು ಸಂಚಾರ – Kannada News | Namma Metro Yellow Line to Get 8th Train from February 27

ಯೆಲ್ಲೋ ಲೈನ್​​ ಮೆಟ್ರೋImage Credit source: Google

ಬೆಂಗಳೂರು, ಫೆಬ್ರವರಿ 26: ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಸಂಚರಿಸಲಿರುವ ಬಿಇಎಂಎಲ್ ಸಂಸ್ಥೆ ತಯಾರಿಸಿದ ಮೂರನೇ ಡ್ರೈವರ್​ಲೆಸ್​ ರೈಲಿನ ಸೆಟ್ ಯಶಸ್ವಿಯಾಗಿ ಕೊತ್ತನೂರು ಡಿಪೋವನ್ನು ತಲುಪಿರುವ ಸುದ್ದಿಯ ನಡುವೆ ಬಿಎಂಆರ್​​ಸಿಎಲ್​​ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​​ನ್ಯೂಸ್​​ ಕೊಟ್ಟಿದೆ. ಯೆಲ್ಲೋ ಲೈನ್ ಮೆಟ್ರೋ ಮಾರ್ಗದಲ್ಲಿ ನಾಳೆಯಿಂದ 8ನೇ ರೈಲು ಸಂಚಾರ ಮಾಡಲಿದೆ ಎಂದು ಪ್ರಕಟಣೆ  ತಿಳಿಸಿದೆ.

ಪ್ರಕಟಣೆಯಲ್ಲಿ ಏನಿದೆ?

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು 2026ರ ಫೆಬ್ರವರಿ 27ರಿಂದ ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಒದಗಿಸುತ್ತಿದೆ. ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯ ವೇಳೆಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ರೈಲುಗಳು ಸಂಚರಿಸಲಿವೆ. ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಎಲ್ಲಾ ದಿನಗಳಲ್ಲಿ ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ಟರ್ಮಿನಲ್‌ ನಿಲ್ದಾಣಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್​​ಸಿಎಲ್​​ ತಿಳಿಸಿದೆ.

ಇದನ್ನೂ ಓದಿ: ಪಿಂಕ್ ಲೈನ್ ಮೆಟ್ರೋ; ಕೋತ್ತನೂರು ಡಿಪೋಗೆ ಮೂರನೇ ರೈಲು ಸೆಟ್ ಆಗಮನ

2025ರ ಆಗಸ್ಟ್ 10ರಂದು ಯೆಲ್ಲೋ ಲೈನ್​​ ಉದ್ಘಾಟನೆಯಾಗಿದ್ದು, ಆಗಸ್ಟ್​​ 11ರಿಂದ ವಾಣಿಜ್ಯ ಸಂಚಾರವನ್ನು ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಆರಂಭಿಸಿತ್ತು. 19.15 ಕಿಮೀ ವಿಸ್ತೀರ್ಣವಿರುವ ಈ ಮಾರ್ಗದಲ್ಲಿ ಸದ್ಯ 7 ಮೆಟ್ರೋ ರೈಲುಗಳು ಮಾತ್ರ ಸಂಚಾರ ನಡೆಸುತ್ತಿದ್ದು, 8ನೇ ರೈಲಿನ ಸೇರ್ಪಡೆಯಿಂದ ರೈಲುಗಳ ಸಂಚಾರದ ನಡುವಿನ ಸಮಯ ಮಾತ್ರವಲ್ಲದೆ, ಪ್ರಯಾಣಿಕರ ದಟ್ಟಣೆಯೂ ಇಳಿಕೆಯಾಗುವ ನಿರೀಕ್ಷೆ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಯ ಮೊದಲ ಫೋಟೋ ವೈರಲ್ – Kannada News | Rashmika Mandanna and Vijay Deverakonda share the first photo of their marriage

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಮದುವೆ ಆಗಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹ ನಡೆದಿದೆ. ಮದುವೆ ಫೋಟೋ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗಾಗಿ ರಶ್ಮಿಕಾ (Rashmika Mandanna) ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರೋಶ್ ವಿವಾಹದ ಫೋಟೋಗಳು (Virosh Marriage Photo) ಕ್ಷಣಾರ್ಧದಲ್ಲಿ ವೈರಲ್ ಆಗಿವೆ. ಸತಿ-ಪತಿ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ತೆಲುಗು ಸಂಪ್ರದಾಯದಂತೆ ವಿರೋಶ್ ಮದುವೆ ನಡೆದಿದೆ. ಈ ಮದುವೆಗೆ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಅಂದಾಜು 100 ಮಂದಿ ಮಾತ್ರ ಈ ಮದುವೆಗೆ ಹಾಜರಿ ಹಾಕಿದ್ದಾರೆ ಎನ್ನಲಾಗಿದೆ. ತೀರಾ ಇತ್ತೀಚಿನ ದಿನಗಳ ತನಕ ಮದುವೆ ವಿಷಯವನ್ನು ಗೌಪ್ಯವಾಗಿ ಇಟ್ಟಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಈಗ ಫೋಟೋ ಶೇರ್ ಮಾಡಿದ್ದಾರೆ.

ಹಲವು ವರ್ಷಗಳಿಂದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಡೇಟಿಂಗ್ ಮಾಡುತ್ತಿದ್ದರು. ‘ಗೀತ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ಅವರ ನಡುವೆ ಪ್ರೀತಿ ಚಿಗುರಿತ್ತು. ಆ ಬಗ್ಗೆ ಇಡೀ ಜಗತ್ತಿಗೆ ಅನುಮಾನ ಇದ್ದರೂ ಕೂಡ ಅವರು ಬಹಿರಂಗವಾಗಿ ಏನನ್ನೂ ಹೇಳಿಕೊಂಡಿರಲಿಲ್ಲ. ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತ ಸೇರಿದಂತೆ 40 ದೇಶಗಳಿಂದ ಕೋಳಿ ಮಾಂಸ ಮತ್ತು ಮೊಟ್ಟೆ ಆಮದು ನಿಷೇಧಿಸಿದ ಸೌದಿ – Kannada News | Saudi Arabia bans poultry meat and eggs import from India and 39 other countries

ರಿಯಾಧ್, ಫೆಬ್ರುವರಿ 26: ಭಾರತ ಸೇರಿದಂತೆ 40 ದೇಶಗಳಿಂದ ಕೋಳಿ ಮಾಂಸ ಮತ್ತು ಮೊಟ್ಟೆ (Poultry meat and eggs) ಆಮದು ಮಾಡಿಕೊಳ್ಳುವುದನ್ನು ಸೌದಿ ಆಡಳಿತ (Saudi Arabia) ನಿಷೇಧಿಸಿದೆ. ಹಕ್ಕು ಜ್ವರ ಮತ್ತಿತರ ಪ್ರಾಣಿಜನ್ಯ ಕಾಯಿಲೆಗಳು ಹರಡುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಸೌದಿಯ ಆಹಾರ ಪ್ರಾಧಿಕಾರವಾದ ಎಸ್​ಎಫ್​ಡಿಎ ಈ ನಿಷೇಧ ಕ್ರಮ ಜರುಗಿಸಿದೆ.

‘ಸ್ಥಳೀಯ ಮಾರುಕಟ್ಟೆಯಲ್ಲಿ ಆಹಾರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಮತ್ತು ಸಾರ್ವಜನಿಕರ ಆರೋಗ್ಯ ರಕ್ಷಿಸುವ ಗುರಿಯೊಂದಿಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಎಸ್​ಎಫ್​ಡಿಎ ಹೇಳಿಕೆ ನೀಡಿದೆ.

ಭಾರತವಲ್ಲದೆ, ಚೀನಾ, ಬಾಂಗ್ಲಾದೇಶ, ಇಂಡೋನೇಷ್ಯ, ಇರಾನ್, ಯುಕೆ ಮತ್ತಿತರ ದೇಶಗಳಿಂದ ಪೂರೈಕೆಯಾಗುವ ಕೋಳಿ ಮಾಂಸ ಮತ್ತು ಮೊಟ್ಟೆಗಳಿಗೆ ಸೌದಿ ಪ್ರವೇಶ ಸಿಗುವುದಿಲ್ಲ.

ಇದನ್ನೂ ಓದಿ: ಭಾರತ-ಇಸ್ರೇಲ್ ನಡುವೆ ಹಲವು ಒಪ್ಪಂದಗಳಿಗೆ ಸಹಿ; ಶೀಘ್ರದಲ್ಲೇ ಎಫ್​ಟಿಎ ಏರ್ಪಡುವ ಸಾಧ್ಯತೆ

ಜಾಗತಿಕವಾಗಿ ಹಕ್ಕಿ ಜ್ವರ ಇತ್ಯಾದಿ ಪ್ರಾಣಿಜನ್ಯ ರೋಗಗಳು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. 40 ದೇಶಗಳ ಈ ಆಮದುಗಳ ಮೇಲೆ ಪೂರ್ಣ ನಿಷೇಧ ಹಾಕಲಾಗಿದ್ದರೆ, ಅಮೆರಿಕ, ಆಸ್ಟ್ರೇಲಿಯಾ, ಫ್ರಾನ್ಸ್ ಮೊದಲಾದ 16 ದೇಶಗಳ ಮೇಲೆ ಪಾಕ್ಷಿಕವಾದ ನಿರ್ಬಂಧಗಳನ್ನು ತರಲಾಗಿದೆ. ಅಂದರೆ, ಈ ದೇಶಗಳಲ್ಲಿರುವ ನಿರ್ದಿಷ್ಟ ಪ್ರದೇಶಗಳಿಂದ ಬರುವ ಕೋಳಿ ಮಾಂಸ ಮತ್ತು ಮೊಟ್ಟೆಗಳಿಗೆ ನಿಷೇಧ ಇರುತ್ತದೆ.

ಅನುಮೋದಿತ ವಿಧಾನಗಳನ್ನು ಅನುಸರಿಸುವ ಉತ್ಪನ್ನಗಳಿಗೆ ತಡೆ ಇಲ್ಲ…

ವೈರಸ್​ಗಳನ್ನು ಹರಡದಂತೆ ನಿಯಂತ್ರಿಸಬಲ್ಲ ಹೀಟ್ ಟ್ರೀಟ್ಮೆಂಟ್ ಮತ್ತಿತರ ಅನುಮೋದಿತ ವಿಧಾನಗಳನ್ನು ಬಳಸುವಂತಹ ಪೌಲ್ಟ್ರಿ ಫಾರ್ಮ್​ಗಳಲ್ಲಿ ತಯಾರಾದ ಕೋಳಿ ಮಾಂಸ, ಮೊಟ್ಟೆ ಮತ್ತಿತರ ಉತ್ಪನ್ನಗಳಿಗೆ ನಿಷೇಧ ಇರುವುದಿಲ್ಲ. ಈ ರೀತಿಯ ಪೌಲ್ಟ್ರಿ ಫಾರ್ಮ್​ಗಳು ತಮ್ಮ ದೇಶದ ಪ್ರಾಧಿಕಾರಗಳಿಂದ ಮಾನ್ಯಗೊಂಡಿರಬೇಕು. ಎಲ್ಲಾ ಆರೋಗ್ಯ ನಿಯಮಾವಳಿಗಳನ್ನು ಪಾಲಿಸಿರಬೇಕು ಎನ್ನುವ ನಿಯಮ ಇದೆ.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆಗೆ 7 ವರ್ಷ; 22ನೇ ಕಂತಿನ ಹಣ ಸದ್ಯದಲ್ಲೇ

ಸೌದಿ ನಿಷೇಧದಿಂದ ಭಾರತಕ್ಕೆಷ್ಟು ನಷ್ಟ?

ಭಾರತದಿಂದ ಕೋಳಿ ಮಾಂಸ ಮತ್ತು ಮೊಟ್ಟೆ ಸೌದಿ ಅರೇಬಿಯಾಗೆ ಬಹಳ ಹೆಚ್ಚು ರಫ್ತಾಗುವುದಿಲ್ಲ. ಡೈರಿ ಉತ್ಪನ್ನಗಳು, ಮೊಟ್ಟೆ, ಜೇನು ಮತ್ತಿತರ ಉತ್ಪನ್ನಗಳು 2024ರಲ್ಲಿ ಭಾರತದಿಂದ ಸೌದಿಗೆ ರಫ್ತಾಗಿದ್ದು 64 ಮಿಲಿಯನ್ ಡಾಲರ್. ಅಂದರೆ ಸುಮಾರು 500 ಕೋಟಿ ರೂ. ಇದರಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆಯ ರಫ್ತು ಪ್ರಮಾಣ ಇನ್ನೂ ಕಡಿಮೆ. ಹೀಗಾಗಿ, ಸೌದಿಯ ಈ ನಿಷೇಧ ಕ್ರಮದಿಂದ ಭಾರತಕ್ಕೆ ಕೆಲವೇ ಕೋಟಿ ರೂನಷ್ಟು ರಫ್ತು ಅವಕಾಶ ಕೈತಪ್ಪಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IND vs ZIM: ನಿರ್ಣಾಯಕ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs Zimbabwe T20 WC Super 8: Chennai Showdown! Toss, Squads and Semifinal Quest

ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ 2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನಲ್ಲಿ ಆತಿಥೇಯ ಟೀಂ ಇಂಡಿಯಾ ಹಾಗೂ ಜಿಂಬಾಬ್ವೆ ತಂಡಗಳು ಮುಖಾಮುಖಿಯಾಗಿವೆ. ಇದು ಭಾರತದಲ್ಲಿ ಟೀಂ ಇಂಡಿಯಾ ವಿರುದ್ಧ ಜಿಂಬಾಬ್ವೆಯ ಮೊದಲ ಟಿ20 ಪಂದ್ಯವಾಗಿದೆ. ಸೂಪರ್ 8 ಸುತ್ತಿನಲ್ಲಿ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದ್ದು, ಉಭಯ ತಂಡಗಳು ಆಡಿರುವ ಮೊದಲ ಪಂದ್ಯದಲ್ಲಿ ಸೋತಿವೆ. ಹೀಗಾಗಿ ಸೆಮಿಫೈನಲ್ ಕನಸು ಜೀವಂತವಾಗಿರಬೇಕೆಂದರೆ, ಈ ಪಂದ್ಯದ ಗೆಲುವು ಎರಡೂ ತಂಡಗಳಿಗೆ ಅವಶ್ಯಕವಾಗಿದೆ. ಅದರಲ್ಲೂ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ತವರಿನಲ್ಲಿ ತನ್ನ ಪ್ರತಿಷ್ಠೆ ಉಳಿಸಿಕೊಳ್ಳಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿದೆ.

ಟಾಸ್ ಗೆದ್ದ ಜಿಂಬಾಬ್ವೆ

ಇನ್ನು ಈ ನಿರ್ಣಾಯಕ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಜಾ ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಜಿಂಬಾಬ್ವೆ ತಂಡದಲ್ಲಿ ಒಂದು ಬದಲಾವಣೆಯಾಗಿದ್ದರೆ, ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳಾಗಿವೆ. ಇಂದಿನ ಪಂದ್ಯದಿಂದ ರಿಂಕು ಸಿಂಗ್ ಹಾಗೂ ವಾಷಿಂಗ್ಟನ್ ಸುಂದರ್ ಹೊರಗುಳಿದಿದ್ದರೆ, ಸಂಜು ಸ್ಯಾಮ್ಸನ್ ಹಾಗೂ ಅಕ್ಷರ್ ಪಟೇಲ್ ಆಡುತ್ತಿದ್ದಾರೆ.

ಮುಖಾಮುಖಿ ದಾಖಲೆ

ಇದು ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಜಿಂಬಾಬ್ವೆಯ ಎರಡನೇ ಮುಖಾಮುಖಿಯಾಗಲಿದೆ. 2022 ರ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಮೆಲ್ಬೋರ್ನ್‌ನಲ್ಲಿ ನಡೆದ ಆ ಪಂದ್ಯವನ್ನು ಭಾರತ 71 ರನ್‌ಗಳಿಂದ ಗೆದ್ದುಕೊಂಡಿತ್ತು. ಆ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ 61 ರನ್ ಬಾರಿಸಿದ್ದರು. ಹಾಗೆಯೇ ಜಿಂಬಾಬ್ವೆ ತಂಡವು ಭಾರತದ ವಿರುದ್ಧ ಭಾರತದ ನೆಲದಲ್ಲಿ 24 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 19 ಏಕದಿನ ಪಂದ್ಯಗಳು ಮತ್ತು ಐದು ಟೆಸ್ಟ್ ಪಂದ್ಯಗಳು ಸೇರಿವೆ.

ಉಭಯ ತಂಡಗಳು

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ಜಿಂಬಾಬ್ವೆ ತಂಡ: ತಡಿವಾನಾಶೆ ಮಾರುಮಣಿ (ವಿಕೆಟ್‌ಕೀಪರ್), ಬ್ರಿಯಾನ್ ಬೆನೆಟ್, ಡಿಯೋನ್ ಮೈಯರ್ಸ್, ರಿಯಾನ್ ಬರ್ಲ್, ಸಿಕಂದರ್ ರಜಾ (ನಾಯಕ), ಟೋನಿ ಮುನ್ಯೊಂಗಾ, ತಶಿಂಗಾ ಮುಸೆಕಿವಾ, ಬ್ರಾಡ್ ಇವಾನ್ಸ್, ಟಿನೊಟೆಂಡಾ ಮಪೋಸಾ, ಬ್ಲೆಸಿಂಗ್ ಮುಜರಬಾನಿ, ರಿಚರ್ಡ್ ನಾಗರವಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:49 pm, Thu, 26 February 26

Source link

ಮಲೆನಾಡಿಗರ ದಶಕಗಳ ಕನಸು ನನಸು ಮಾಡಿದ ಕೇಂದ್ರ ಸರ್ಕಾರ – Kannada News | Akashavani Bhadravati FM Upgraded to 10kW: Malenadu Radio Dream Realized in Shivamogga

ಶಿವಮೊಗ್ಗ, ಫೆಬ್ರವರಿ 26: ಆಕಾಶವಾಣಿ ಭದ್ರಾವತಿ ಕೇಂದ್ರದ ಎಫ್​ಎಂ (FM) ಪ್ರಸಾರ ಕೇಂದ್ರ ಮೇಲ್ದರ್ಜೆಗೇರಿಸಲಾಗಿದೆ. 10 ಕಿಲೋವ್ಯಾಟ್ ಎಫ್​ಎಂ ಟ್ರಾನ್ಸ್‌ಮೀಟರ್ ಲೋಕಾರ್ಪಣೆಗೊಳಿಸಿರುವುದು ದಶಕಗಳ ಕನಸು ನನಸಾದಂತಾಗಿದೆ. ಮಲೆನಾಡು ಎಫ್​​ಎಂ ಎಂದೇ ಖ್ಯಾತಿ ಪಡೆದಿದ್ದ ಆಕಾಶವಾಣಿ ಭದ್ರಾವತಿ ಕೇಂದ್ರ 1 ಕಿಲೋವ್ಯಾಟ್‌ದಿಂದ 10 ಕಿಲೋವ್ಯಾಟ್ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಿರುವ ಈ ಎಫ್​ಎಂ ಕೇಂದ್ರದ ಬಾನುಲಿ ಈಗ ಎಲ್ಲೆಡೆ ಕನ್ನಡಿರಿಗೆ ಪಸರಿಸುವಂತಾಗಿದೆ.

10 ಕಿಲೋವ್ಯಾಟ್ ಎಫ್.ಎಂ. ಟ್ರಾನ್ಸ್‌ಮೀಟರ್ ಲೋಕಾರ್ಪಣೆ

ಮಲೆನಾಡಿಗರ ಬಹು ದಶಕಗಳ ಕನಸು ನನಸಾದಂತಾಗಿದೆ. ಭದ್ರಾವತಿ ಆಕಾಶವಾಣಿ ಭದ್ರಾವತಿ ರೇಡಿಯೋ ಬಾನುಲಿ ಈಗ ಎಲ್ಲೆಡೆ ಪಸರಿಸುವಂತಾಗಿದೆ. ಇದು ಮಲೆನಾಡಿನ ರೇಡಿಯೋ ಕೇಳುಗರಿಗೆ ಹರ್ಷವನ್ನುಂಟು ಮಾಡಿದೆ. ಅದರಂತೆ ಇಂದು 10 ಕಿಲೋವ್ಯಾಟ್ ಎಫ್.ಎಂ. ಟ್ರಾನ್ಸ್‌ಮೀಟರ್ ಲೋಕಾರ್ಪಣೆ ಮಾಡಲಾಯಿತು.

ಇದನ್ನೂ ಓದಿ: ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಆತಂಕ

ಶಿವಮೊಗ್ಗದ ವಿದ್ಯಾನಗರದಲ್ಲಿರುವ ನೂತನ ಎಫ್.ಎಂ. ಕೇಂದ್ರವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ಸಚಿವ ಡಾ. ಎಲ್ ಮುರುಗನ್ ಲೋಕಾರ್ಪಣೆಗೊಳಿಸಿದರು. ಮಲೆನಾಡು ಎಫ್‌.ಎಂ. ಎಂದೇ ಖ್ಯಾತಿ ಪಡೆದಿದ್ದ ಆಕಾಶವಾಣಿ ಭದ್ರಾವತಿ ಕೇಂದ್ರ ಈಗ 1 ಕಿಲೋವ್ಯಾಟ್‌ದಿಂದ 10 ಕಿಲೋವ್ಯಾಟ್ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲಾಗಿದ್ದು, ಶಿವಮೊಗ್ಗದಲ್ಲಿ ಡಿ.ಡಿ. ಚಂದನದ ಟವರ್​ನ್ನು ಇದೀಗ ಎಫ್.ಎಂ. ಕೇಂದ್ರಕ್ಕೆ ಬಳಸಿಕೊಂಡು ಮೇಲ್ದರ್ಜೆಗೇರಿಸಲಾಗಿದೆ.

ಅಲ್ಲದೇ, ಶಿವಮೊಗ್ಗದ ಪಾರ್ಕ್​ಗಳಲ್ಲಿ ಎಫ್.ಎಂ. ರೇಡಿಯೋ ಅಳವಡಿಕೆ ಕಾರ್ಯ ಪೈಲೆಟ್ ಪ್ರಾಜೆಕ್ಟ್ ಆಗಿ ತೆಗೆದುಕೊಳ್ಳಲಾಗುವುದೆಂದು ಕೇಂದ್ರ ಸಚಿವರು ಘೋಷಣೆ ಮಾಡಿದ್ದು, ಶಿವಮೊಗ್ಗ ಬಳಿಕ ಇಡೀ ದೇಶದಲ್ಲಿ ಈ ಯೋಜನೆ ಅಳವಡಿಸಲಾಗುವುದು. ನಮ್ಮ ಇಲಾಖೆ ಮೂಲಕವೇ ಪಾರ್ಕ್​ಗಳಲ್ಲಿ ಎಫ್.ಎಂ. ರೇಡಿಯೋ ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವರು ಘೋಷಿಸಿದ್ದಾರೆ.

ಎಲ್ಲೆಲ್ಲಿ ಪ್ರಸಾರ?

ಅದರಂತೆ, ಎಫ್.ಎಂ. ಪ್ರಸಾರ ಕೇಂದ್ರ ಮೇಲ್ದರ್ಜೆಗೇರಿಸುವುದರಿಂದ ಪ್ರಯೋಜನ ಮತ್ತು ಅನುಕೂಲಗಳು ಬಹಳಷ್ಟಿದ್ದು, ಪ್ರಸ್ತುತ ಭದ್ರಾವತಿಯಲ್ಲಿ ಇರುವ 1 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಟ್ರಾನ್ಸ್​ಮೀಟರ್ ವ್ಯಾಪ್ತಿ 100 ಮೀಟರ್ ಇದ್ದು, ನೂತನ ಅಧಿಕ ಸಾಮರ್ಥ್ಯದ ಟ್ರಾನ್ಸ್​ಮೀಟರ್ ಅಳವಡಿಕೆಯಿಂದ ವ್ಯಾಪ್ತಿ 150 ಮೀಟರ್ ಎತ್ತರದಲ್ಲಿ ಬರುತ್ತದೆ. ಅಂದರೆ ಪ್ರಸಾರ ಸಾಮರ್ಥ್ಯ 10 ಪಟ್ಟು ಹೆಚ್ಚಾಗಲಿದೆ. ಈಗ ಪ್ರಸಾರವಾಗುತ್ತಿರುವ ವ್ಯಾಪ್ತಿಯು ಶಿವಮೊಗ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿದ್ದು, ಇನ್ನು ಮುಂದೆ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಗದಗ, ಚಿತ್ರದುರ್ಗ ವ್ಯಾಪ್ತಿ ಮತ್ತು ಹಾಸನ, ಉಡುಪಿ, ಉತ್ತರ ಕನ್ನಡ ಹಾಗೂ ತುಮಕೂರು ಜಿಲ್ಲೆಯ ಕೆಲ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕೂಡ ಪ್ರಸಾರ ಲಭ್ಯವಾಗಲಿದೆ.

ಇದನ್ನೂ ಓದಿ: ಬೀದಿ ನಾಯಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ: ಒಂದೇ ದಿನ 36ಕ್ಕೂ ಅಧಿಕ ಮಂದಿ ಮೇಲೆ ದಾಳಿ

ಒಟ್ಟಾರೆ ಎಫ್.ಎಂ. ಪ್ರಸಾರ ಸೇವೆ ಆರಂಭದಿಂದ ಸಾಮಾನ್ಯ ಕೀಪ್ಯಾಡ್ ಸೇರಿದಂತೆ ಅಂಡ್ರಾಯ್ಡ್ ಮೊಬೈಲ್​​ನಲ್ಲೂ ನ್ಯೂಸ್ ಆನ್ ಏರ್‌ಆಪ್‌ನಲ್ಲಿ ಜಗತ್ತಿನಾದ್ಯಂತ ಕೇಳಬಹುದಾಗಿದೆ. ಇದಲ್ಲದೆ ಕಾರ್ ರೇಡಿಯೋದಲ್ಲಿ ಸುತ್ತಮುತ್ತಲಿನ 80-100 ಕಿಲೋಮೀಟರ್​ವರೆಗೆ ಪ್ರಸಾರದ ವ್ಯಾಪ್ತಿ ಲಭ್ಯವಾಗಿರುವುದು ಮಲೆನಾಡಿಗರಿಗೆ ಸಂತಸದ ವಿಷಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿಮಾನ ಪ್ರಯಾಣಿಕರಿಗೆ ಒಳ್ಳೆ ಸುದ್ದಿ; ಟಿಕೆಟ್ ಮರುಪಾವತಿಯ ನಿಯಮದಲ್ಲಿ ಮಹತ್ವದ ಬದಲಾವಣೆ – Kannada News | Good news for flyers DGCAs Big Relief For Passengers new norms for ticket refund Check details

ನವದೆಹಲಿ, ಫೆಬ್ರವರಿ 26: ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಭಾರತದ ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ವಿಮಾನ ಟಿಕೆಟ್ ಮರುಪಾವತಿಯ ಮಾನದಂಡಗಳನ್ನು ಪರಿಷ್ಕರಿಸಿದೆ. ಈ ಹೊಸ ಬದಲಾವಣೆಯಿಂದ ರದ್ದತಿ ಮತ್ತು ವಿಮಾನದ ವೇಳಾಪಟ್ಟಿಗಳಲ್ಲಿನ ಬದಲಾವಣೆಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಹೊಸ ನಿಯಮದ ಪ್ರಕಾರ ಪ್ರಯಾಣಿಕರು ಬುಕಿಂಗ್ (Flight Booking) ಮಾಡಿದ 48 ಗಂಟೆಗಳ ಒಳಗೆ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು ಸಾಧ್ಯವಾಗುತ್ತದೆ. ಅದಕ್ಕಾಗಿ ಅವರು ಯಾವುದೇ ಹೆಚ್ಚುವರಿ ಶುಲ್ಕಗಳನ್ನು ಪಾವತಿಸಬೇಕಾಗಿಲ್ಲ. ವಿಮಾನಯಾನ ಸಂಸ್ಥೆಗಳು 14 ಕೆಲಸದ ದಿನಗಳಲ್ಲಿ ಮರುಪಾವತಿಯನ್ನು ಪೂರ್ಣಗೊಳಿಸಬೇಕು. ಟಿಕೆಟ್‌ಗಳನ್ನು ಬುಕ್ ಮಾಡಿದ 24 ಗಂಟೆಗಳ ಒಳಗೆ ಸರಳವಾದ ಹೆಸರು ತಿದ್ದುಪಡಿಗಳಿದ್ದರೆ ಅದಕ್ಕೆ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಇಂಡಿಗೋ ವಿಮಾನದ ಅಡಚಣೆಯಿಂದ ಭಾರತೀಯ ವಾಯುಯಾನ ವಲಯವು ತೊಂದರೆಗೊಳಗಾದಾಗ ಈ ರೀತಿ ಟಿಕೆಟ್ ರದ್ದತಿ, ಟಿಕೆಟ್ ಹೆಸರು ಬದಲಾವಣೆ, ದಿನಾಂಕ ಬದಲಾವಣೆಯ ಸಮಸ್ಯೆಗಳು ಬಹಳ ತೀವ್ರಗೊಂಡವು. ಇದೀಗ ಇವುಗಳಿಗೆ ಪ್ರಯಾಣಿಕರು ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಇದನ್ನೂ ಓದಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ 5 ಗಂಟೆಗೂ ಹೆಚ್ಚು ಕಾಲ ಇಂಡಿಗೋ ವಿಮಾನದೊಳಗೆ ಸಿಲುಕಿಕೊಂಡ ಪ್ರಯಾಣಿಕರು

ಇನ್ಮುಂದೆ, ಪ್ರಯಾಣಿಕರು 48 ಗಂಟೆಗಳ ನಂತರ ಟಿಕೆಟ್‌ಗಳನ್ನು ರದ್ದುಗೊಳಿಸಿದರೆ ಅಥವಾ ಬದಲಾಯಿಸಿದರೆ ಅವರು ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಅವರು ವಿಮಾನಯಾನ ಸಂಸ್ಥೆಗಳೊಂದಿಗೆ ನೇರವಾಗಿ ಟಿಕೆಟ್‌ಗಳನ್ನು ಬುಕ್ ಮಾಡಿದರೂ ಸಹ ಕೆಲವು ಷರತ್ತುಗಳನ್ನು ಹೊರತುಪಡಿಸಿ ರದ್ದತಿಯ ಸಮಯದಲ್ಲಿ ಅವರು ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಅಲ್ಲದೆ, ಬುಕಿಂಗ್ ಮಾಡಿದ 24 ಗಂಟೆಗಳ ಒಳಗೆ ಪ್ರಯಾಣಿಕರು ಹೆಚ್ಚುವರಿ ಶುಲ್ಕಗಳಿಲ್ಲದೆ ಹೆಸರಿನಲ್ಲಿ ಕಾಗುಣಿತ ದೋಷ ಅಥವಾ ಇತ್ಯಾದಿ ಸಣ್ಣಪುಟ್ಟ ತಪ್ಪನ್ನು ವಿಮಾನಯಾನ ಸಂಸ್ಥೆಗಳು ಸರಿಪಡಿಸಲಿವೆ. ಆದರೆ, ಇದು ವಿಮಾನಯಾನ ಸಂಸ್ಥೆಯ ಸ್ವಂತ ವೆಬ್‌ಸೈಟ್‌ನಲ್ಲಿ ಮಾಡಿದ ಬುಕಿಂಗ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಪ್ರಯಾಣಿಕರು ಟ್ರಾವೆಲ್ ಏಜೆಂಟ್‌ಗಳು ಅಥವಾ ಮೂರನೇ ವ್ಯಕ್ತಿಯ ಪೋರ್ಟಲ್‌ಗಳ ಮೂಲಕ ಟಿಕೆಟ್‌ಗಳನ್ನು ಖರೀದಿಸಿದರೆ ಅದಕ್ಕೆ ಈ ನಿಯಮ ಅನವಯವಾಗುವುದಿಲ್ಲ. ಆದರೂ ವಿಮಾನಯಾನ ಸಂಸ್ಥೆಗಳು 14 ಕೆಲಸದ ದಿನಗಳಲ್ಲಿ ಮರುಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಣ್ಣುಗಳ ಮೇಲ್ಭಾಗದಲ್ಲಿ ನೋವು ಕಂಡುಬರುವುದಕ್ಕೆ ಕಾರಣವೇನು? ಇದು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯ ಸಂಕೇತವೇ? – Kannada News | Eye Pain and Headaches: When to Worry

ಕಣ್ಣುಗಳ ಮೇಲೆ ನೋವು ಕಂಡುಬರುವುದು ಇತ್ತೀಚಿನ ದಿನಗಳಲ್ಲಿ ಬಹಳ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಅನೇಕರು ಅದನ್ನು ತಲೆನೋವಿಗೆ (Headache) ಸಂಬಂಧಿಸಿದ ಸಮಸ್ಯೆ ಎಂದು ಭಾವಿಸುತ್ತಾರೆ. ಹಾಗಾಗಿ ನೋವು ಹೆಚ್ಚಾದಾಗ ಅದಕ್ಕೆ ಸಂಬಂಧಿಸಿದ ವೈದ್ಯರ ಸಲಹೆ ಪಡೆಯುತ್ತಾರೆ. ಅನೇಕರು, ಸಿಟಿ ಸ್ಕ್ಯಾನ್ ಅನ್ನು ಸಹ ಮಾಡುತ್ತಾರೆ, ಆದರೆ ವರದಿಯಲ್ಲಿ ಯಾವುದೇ ಸಮಸ್ಯೆಗಳು ಕೂಡ ಕಂಡುಬರುವುದಿಲ್ಲ. ಕಣ್ಣುಗಳ ಮೇಲೆ ಕಂಡುಬರುವ ನೋವು ದುರ್ಬಲ ಕಣ್ಣುಗಳಿಂದ ಹಿಡಿದು ಮೈಗ್ರೇನ್‌ವರೆಗೆ ಯಾವುದರ ಲಕ್ಷಣ ಕೂಡ ಆಗಿರಬಹುದು ಎಂದು ವೈದ್ಯರು ಹೇಳುತ್ತಾರೆ. ಹಾಗಾಗಿ ಯಾರಿಗಾದರೂ ಈ ರೀತಿಯ ಸಮಸ್ಯೆ ಕಂಡುಬರುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಇವುಗಳ ಬಗ್ಗೆ ತಿಳಿದುಕೊಂಡು ಮೊದಲ ಹಂತದಲ್ಲಿಯೇ ಅದನ್ನು ತಡೆಗಟ್ಟುವ ಮಾರ್ಗವನ್ನು ಕಂಡುಕೊಳ್ಳಿ.

ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ಹಿರಿಯ ನಿವಾಸಿ ಡಾ. ದೀಪಕ್ ಸುಮನ್ ಹೇಳುವ ಪ್ರಕಾರ, ಕಣ್ಣುಗಳ ಮೇಲೆ ತಲೆಯ ಭಾಗದಲ್ಲಿ ನೋವು ಕಂಡುಬರುವುದಕ್ಕೆ ಪ್ರಮುಖ ಕಾರಣ ಕನ್ನಡಕದ ಪಾಯಿಂಟ್ ಬದಲಾಗಿರಬಹುದು. ಆಗಾಗ ದೃಷ್ಟಿ ದುರ್ಬಲಗೊಳ್ಳುತ್ತದೆ, ಆದರೆ ವ್ಯಕ್ತಿ ಕನ್ನಡಕದ ಪ್ರಿಸ್ಕ್ರಿಪ್ಷನ್ ಅನ್ನು ಬದಲಾಯಿಸುವುದಿಲ್ಲ. ಈ ಕಾರಣದಿಂದಾಗಿ, ಕಣ್ಣುಗಳ ಮೇಲೆ ಒತ್ತಡವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದು ದೃಷ್ಟಿಯ ಮೇಲೆ ಪರಿಣಾಮ ಬೀರುತ್ತದೆ, ಇದು ಹಣೆಯವರೆಗೆ ವಿಸ್ತರಿಸಿ ನೋವಿಗೆ ಕಾರಣವಾಗುತ್ತದೆ. ಜೊತೆಗೆ ತಲೆಯಲ್ಲಿ ಭಾರ, ನೋವು ಮತ್ತು ಕೆಲವು ಸಂದರ್ಭಗಳಲ್ಲಿ, ದೃಷ್ಟಿ ಮಂದವಾಗುವುದಕ್ಕೂ ಕೂಡ ಕಾರಣವಾಗಬಹುದು.

ಇದನ್ನೂ ಓದಿ: ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?

ಮೆದುಳಿಗೆ ಸಂಬಂಧಿಸಿದ ಸಮಸ್ಯೆ ಯಾವಾಗ ಬರಬಹುದು?

ಕಣ್ಣುಗಳ ಮೇಲೆ ಮಾತ್ರ ನೋವು ಕಂಡುಬರುತ್ತಿದ್ದರೆ ಅದು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯನ್ನು ಉಂಟುಮಾಡುವುದು ಬಹಳ ವಿರಳ. ಆದರೆ ಇವುಗಳ ಜೊತೆಗೆ ಕೆಲವು ಇತರ ಲಕ್ಷಣಗಳು ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡಬಾರದು. ಅಂದರೆ ಹಣೆಯಿಂದ ಕತ್ತಿನ ಹಿಂಭಾಗದವರೆಗೆ ವಿಸ್ತರಿಸುವ ತಲೆನೋವು, ತಲೆತಿರುಗುವಿಕೆ, ದೇಹದ ಯಾವುದೇ ಭಾಗದಲ್ಲಿ ಹಠಾತ್ ಮರಗಟ್ಟುವಿಕೆ ಅಥವಾ ಪದೇ ಪದೇ ವಾಂತಿ ಮಾಡುವುದು. ಈ ಎಲ್ಲಾ ಲಕ್ಷಣಗಳು ಕಂಡುಬಂದರೆ, ಅದು ದೃಷ್ಟಿಗೆ ಸಂಬಂಧಿಸಿದ ಸಮಸ್ಯೆಯಲ್ಲ ಆದರೆ ಮೆದುಳಿಗೆ ಸಂಬಂಧ ಪಟ್ಟ ಸಮಸ್ಯೆ ಎಂದು ಸ್ಪಷ್ಟವಾಗಿ ತಿಳಿಯಬಹುದು. ಇಂತಹ ಲಕ್ಷಣಗಳು ಸಾಮಾನ್ಯವಾಗಿ ಮೆದುಳಿನಲ್ಲಿ ಊತ ಅಥವಾ ಗೆಡ್ಡೆಯಿಂದ ಉಂಟಾಗುತ್ತವೆ. ಹಾಗಾಗಿ ಈ ರೀತಿಯ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ.

ಕಣ್ಣಿನ ಸಮಸ್ಯೆಯನ್ನು ತಡೆಗಟ್ಟಲು ಸಲಹೆಗಳು:

  • ಪ್ರತಿ 6 ತಿಂಗಳಿಗೊಮ್ಮೆ ಕಣ್ಣುಗಳನ್ನು ಪರೀಕ್ಷಿಸಿಕೊಳ್ಳಿ.
  • ಮೊಬೈಲ್ ಮತ್ತು ಟಿವಿ ನೋಡುವುದನ್ನು ಕಡಿಮೆ ಮಾಡಿ.
  • ಸರಿಯಾದ ಆಹಾರ ಸೇವನೆ ಮಾಡುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ZIM T20 WC Live Score: ಭಾರತ- ಜಿಂಬಾಬ್ವೆ ನಡುವೆ ನಿರ್ಣಾಯಕ ಪಂದ್ಯ – Kannada News | India vs Zimbabwe T20 World Cup 2026 Live Cricket Score IND vs ZIM Today Match Match at Chennai live cricket score and updates in Kannada

LIVE NEWS & UPDATES

  • 26 Feb 2026 06:04 PM (IST)

    India vs Zimbabwe Live Score: ಮುಖಾಮುಖಿ ದಾಖಲೆ

    ಜಿಂಬಾಬ್ವೆ ತಂಡವು ಭಾರತದ ವಿರುದ್ಧ ಭಾರತದ ನೆಲದಲ್ಲಿ 24 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 19 ಏಕದಿನ ಪಂದ್ಯಗಳು ಮತ್ತು ಐದು ಟೆಸ್ಟ್ ಪಂದ್ಯಗಳು ಸೇರಿವೆ. ಜಿಂಬಾಬ್ವೆ ಕೊನೆಯ ಬಾರಿಗೆ ಭಾರತದಲ್ಲಿ ಭಾರತವನ್ನು ಎದುರಿಸಿದ್ದು ಮಾರ್ಚ್ 2002 ರಲ್ಲಿ, ಏಕದಿನ ಪಂದ್ಯದಲ್ಲಿ.

  • 26 Feb 2026 06:02 PM (IST)

    India vs Zimbabwe Live Score: ಎರಡನೇ ಮುಖಾಮುಖಿ

    ಇದು ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಜಿಂಬಾಬ್ವೆಯ ಎರಡನೇ ಮುಖಾಮುಖಿಯಾಗಲಿದೆ. 2022 ರ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಮೆಲ್ಬೋರ್ನ್‌ನಲ್ಲಿ ನಡೆದ ಆ ಪಂದ್ಯವನ್ನು ಭಾರತ 71 ರನ್‌ಗಳಿಂದ ಗೆದ್ದುಕೊಂಡಿತು, ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ 61 ರನ್ ಬಾರಿಸಿದ್ದರು.

ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಜಿಂಬಾಬ್ವೆ ಪರಸ್ಪರ ಮುಖಾಮುಖಿಯಾಗುತ್ತಿವೆ. ಇದು ಭಾರತದಲ್ಲಿ ಟೀಂ ಇಂಡಿಯಾ ವಿರುದ್ಧ ಜಿಂಬಾಬ್ವೆಯ ಮೊದಲ ಟಿ20 ಪಂದ್ಯವಾಗಿದೆ. ಈ ಪಂದ್ಯವು ಉಭಯ ತಂಡಗಳಿಗೂ ಹೆಚ್ಚಿನ ಮಹತ್ವದ್ದಾಗಿದೆ. ಏಕೆಂದರೆ ಸೂಪರ್ 8 ಸುತ್ತಿನ ಮೊದಲ ಪಂದ್ಯದಲ್ಲಿ ಉಭಯ ತಂಡಗಳು ಸೋತಿರುವುದರಿಂದ ಈ ಪಂದ್ಯವನ್ನು ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಗೆದ್ದ ತಂಡಕ್ಕೆ ಸೆಮಿ ಫೈನಲ್ ಕನಸು ಜೀವಂತವಾಗಿರಲಿದೆ. ಹೀಗಾಗಿ ಎರಡೂ ತಂಡಗಳು ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿವೆ.

Published On – Feb 26,2026 6:01 PM

Source link

SA vs WI: ವಿಂಡೀಸ್ ಮಣಿಸಿ ಸೆಮಿಫೈನಲ್​ಗೇರಿದ ಆಫ್ರಿಕಾ; ನಿಟ್ಟುಸಿರು ಬಿಟ್ಟ ಟೀಂ ಇಂಡಿಯಾ

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಸುತ್ತಿನಲ್ಲಿ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿತ್ತು. ಮೊದಲ ಪಂದ್ಯದಲ್ಲಿ ಎರಡು ತಂಡಗಳು ಗೆಲುವು ಸಾಧಿಸಿದ್ದರಿಂದ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್​ನಲ್ಲಿ ಸ್ಥಾನ ಖಚಿತವಾಗುತ್ತಿತ್ತು. ಹೀಗಾಗಿ ಉಭಯ ತಂಡಗಳ ನಡುವೆ ನಡೆದ ಈ ಪಂದ್ಯವನ್ನು ದಕ್ಷಿಣ ಆಫ್ರಿಕಾ ತಂಡ ಏಕಪಕ್ಷೀಯವಾಗಿ ಗೆದ್ದುಕೊಳ್ಳುವ ಮೂಲಕ ಸೆಮಿಫೈನಲ್ ಟಿಕೆಟ್ ಪಡೆದುಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ವಿಂಡೀಸ್ 176 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 16.1 ಓವರ್​ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತು.

Source link

ಉಡುಪಿ: ಕರಾವಳಿಯಲ್ಲಿ ಉಪ್ಪು ನೀರು ತಡೆಯುವ ಕಿಂಡಿ ಅಣೆಕಟ್ಟು ನಿರ್ವಹಣೆಯೇ ಸವಾಲು – Kannada News | Udupi Water Crisis: Kindi Annekattu Management Fails, Saltwater Threatens Fresh Supply

ಉಡುಪಿ, ಫೆಬ್ರವರಿ 26: ಕರಾವಳಿ ಜಿಲ್ಲೆಯ ಉಡುಪಿಯಲ್ಲಿ (Udupi) ಈ ಬಾರಿ ಅತೀ ಹೆಚ್ಚು ಮಳೆಯಾಗಿದೆ. ಬೇಸಿಗೆ ಬಂದರೆ ಕುಡಿಯುವ ನೀರಿಗೆ (Water) ಸಮಸ್ಯೆ ಎದುರಾಗುವುದಿಲ್ಲ ಅಂದುಕೊಂಡ್ರೆ ಅದು ಹುಸಿಯಾಗಿದೆ. ಈಗಾಗಲೇ ಹಲವು ಕಡೆ ನೀರಿನ‌ ಸಮಸ್ಯೆ ಆರಂಭವಾಗಿದೆ. ಸರಿಯಾದ ನೀರಿನ‌ ನಿರ್ವಹಣೆ ಇಲ್ಲದೆ ಇರುವುದೇ ಸಮಸ್ಯೆಗೆ ಮೂಲ ಕಾರಣ. 600 ಕಿಂಡಿ ಅಣೆಕಟ್ಟುಗಳಲ್ಲಿ ಬಹುತೇಕ ಸಿಹಿ ನೀರಿನ ಮೂಲವಾಗಿ ಉಳಿದಿಲ್ಲ.

600ಕ್ಕೂ ಹೆಚ್ಚು ಕಡೆಗಳಲ್ಲಿ ಕಿಂಡಿ ಅಣೆಕಟ್ಟು

ಕರಾವಳಿಯಲ್ಲಿ ನದಿಗಳು ಸಮುದ್ರ ತೀರ ಪ್ರದೇಶದಲ್ಲಿ ಹರಿಯುವುದರಿಂದ ಉಪ್ಪು ನೀರಿನ ಸಮಸ್ಯೆ ಹೆಚ್ಚು. ಹಾಗಾಗಿ 600ಕ್ಕೂ ಹೆಚ್ಚು ಕಡೆಗಳಲ್ಲಿ ಕಿಂಡಿ ಅಣೆಕಟ್ಟುಗಳನ್ನು ಮಾಡಲಾಗಿದೆ. ಆದರೆ ಈ ಪುಟ್ಟ ಅಣೆಕಟ್ಟುಗಳ ನಿರ್ವಹಣೆ ನಿಜಕ್ಕೂ ಸವಾಲಾಗಿದೆ. ಮರದ ಹಲಗೆಗಳನ್ನು ಹಾಕಿ ನೀರಿನ ಹರಿವು ತಡೆಯುವ ಕಿಂಡಿ ಅಣೆಕಟ್ಟುಗಳ ನಿರ್ವಹಣೆ ಕಷ್ಟ ಸಾಧ್ಯವಾಗಿದೆ. ಹಾಗಾಗಿ ಆಧುನಿಕ ತಂತ್ರಜ್ಞಾನ ಕಿಂಡಿ ಅಣೆಕಟ್ಟುಗಳಿಗೆ ಅಳವಡಿಸಬೇಕಿದೆ.

ಇದನ್ನೂ ಓದಿ: ಹೀಗೆ ಕಲುಷಿತಗೊಂಡರೆ ಸೌಪರ್ಣಿಕಾ ನದಿ ಉಳಿಯುತ್ತಾ? ಸಮಗ್ರ ವರದಿ ಸಲ್ಲಿಸುವಂತೆ ಹಸಿರು ನ್ಯಾಯಮಂಡಳಿ ಆದೇಶ

ಕರಾವಳಿಯಲ್ಲಿ ಕಿಂಡಿ ಅಣೆಕಟ್ಟುಗಳ ಅದ್ವಾನ, ಉಪ್ಪು ನೀರು ತಡೆಯುವ ಕಿಂಡಿ ಅಣೆಕಟ್ಟು ನಿರ್ವಹಣೆಯೇ ಸವಾಲು ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಅಣೆಕಟ್ಟಿಗೆ ಹಲಗೆ ಹಾಕುವ ಪರಿಶ್ರಮ ಸಕಾಲದಲ್ಲಿ ಹಲಗೆ ಹಾಕದಿದ್ದರೆ ಉಪ್ಪು ನೀರಿನ ಸಮಸ್ಯೆ ಶುರುವಾಗುತ್ತದೆ. ಪಶ್ಚಿಮ ಕಡಲಿಗೆ ಹೊಂದಿಕೊಂಡಿರುವ ನದಿಗಳಲ್ಲಿ ಉಪ್ಪುನೀರಿನ ಹರಿವು ಉಪ್ಪು ನೀರು ತಡೆಗೆ ಕಿಂಡಿ ಅಣೆಕಟ್ಟು ಅನಿವಾರ್ಯ ಮಳೆಗಾಲ ಆರಂಭವಾಗುತ್ತಿದ್ದಂತೆ ಹಲಗೆ ತೆಗೆಯಬೇಕು ಇಲ್ಲದಿದ್ದರೆ ಮತ್ತೊಂದು ಸಮಸ್ಯೆ ಶುರುವಾಗುತ್ತದೆ.

ಕಿಂಡಿ ಅಣೆಕಟ್ಟುಗಳ ನಿರ್ವಹಣೆ ಸವಾಲು

600 ಕಿಂಡಿ ಅಣೆಕಟ್ಟುಗಳು ಇದ್ದರೂ ಜಿಲ್ಲೆಯಲ್ಲಿ ಅದರ ನಿರ್ವಹಣೆ ಸವಾಲಾಗಿದೆ. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳೇ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಕಿಂಡಿ ಅಣೆಕಟ್ಟುಗಳಲ್ಲಿ ಮರದ ಹಲಗೆ ಜೋಡಿಸಿ ಮಣ್ಣು ಸೇರಿಸಿ ಕಟ್ಟುವ ಕಾರಣಕ್ಕೆ ಸಿಹಿನೀರಿಗೆ ಉಪ್ಪು ನೀರು ಮಿಶ್ರಿತವಾಗಿ ಕುಡಿಯುವುದಕ್ಕೆ, ಕೃಷಿಗೆ ಯೋಗ್ಯವಲ್ಲದ ನೀರಾಗಿ ಪರಿವರ್ತನೆ ಆಗುತ್ತೆ. 600 ಕಿಂಡಿ ಅಣೆಕಟ್ಟು 420 ಫೈಬರ್ ಅಳವಡಿಕೆ ಅಣೆಕಟ್ಟುಗಳು ಅದ್ರೂ 240 ಕಿಂಡಿ ಅಣೆಕಟ್ಟು ಸಮುದ್ರ ಹತ್ತಿರವಿರುವ ಅಣೆಕಟ್ಟು ಸಾಂಪ್ರದಾಯಿಕ ಕ್ರಮದಲ್ಲಿ ಮರದ ಹಲಗೆ ಜೋಡಿಸಿ ನಿರ್ಮಾಣ ಮಾಡಲಾಗುತ್ತಿದೆ. ಹಾಗಾಗಿ ಉಪ್ಪು ನೀರು ಮಿಶ್ರಣಗೊಂಡು ನೀರು ಉಪಯೋಗಕ್ಕೆ ಇಲ್ಲದೆ, ಬೇಸಿಗೆಯಲ್ಲಿ ನೀರಿನ ಸಮಸ್ಯೆಗೆ ಕಾರಣವಾಗುತ್ತಿದೆ.

ಇದನ್ನೂ ಓದಿ: Bengaluru Air Quality: ಬೆಂಗಳೂರಿನ ಗಾಳಿಯ ಮಟ್ಟ ಕಳಪೆ, ಮಂಗಳೂರು, ಉಡುಪಿ ಅತ್ಯಂತ ಉತ್ತಮ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕಾದರೆ ಅಧುನಿಕ ತಂತ್ರಜ್ಞಾನ ಕಿಂಡಿ ಅಣೆಕಟ್ಟುಗಳಿಗೆ ಅಳವಡಿಸಬೇಕು. ಸಣ್ಣ ನೀರಾವರಿ ಇಲಾಖೆ ಹೊರತಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಣೆಕಟ್ಟು ನಿರ್ವಹಣೆ ಸಮಿತಿ ರಚನೆ ಮಾಡಬೇಕು. ಅಣೆಕಟ್ಟು ಯೋಗ್ಯ ನಿವರ್ಹಣೆ ಒಂದಿಷ್ಟು ಅನುದಾನವನ್ನು ಮೀಸಲು ಇಟ್ಟರೆ ಸರ್ಕಾರದ ಕುಡಿಯುವ ನೀರಿಗಾಗಿ ಒನ್​​ ಟು ಡಬ್ಬಲ್ ಖರ್ಚು ಮಾಡುವ ಪ್ರಮೇಯ ಕೂಡ ತಪ್ಪುತ್ತೆ. ಈ ಬಗ್ಗೆ ಸರ್ಕಾರ ಜಿಲ್ಲಾಡಳಿತ ಸಣ್ಣ ನೀರಾವರಿ ಇಲಾಖೆ ಗಮನ ಹರಿಸಿ ಸೂಕ್ತ ಕ್ರಮಕೈಗೊಂಡರೆ ಬಹುತೇಕ ನೀರಿನ ಸಮಸ್ಯೆಗೆ ಸುಲಭವಾಗಿ ಪರಿಹಾರ ಸಿಗುವುದು ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link