Headlines

nagaraj11081993

Ranji Final 2025-26: 5 ವಿಕೆಟ್​ಗಳ ಗೊಂಚಲು ಪಡೆದ ಪ್ರಸಿದ್ಧ್ ಕೃಷ್ಣ – Kannada News | Ranji Final 2025 26: JK Scores 584, Prasidh Krishna’s Fifer Steals Hubballi Show!

ಹುಬ್ಬಳ್ಳಿಯಲ್ಲಿ ನಡೆದ 2025-26 ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಜೆಕೆ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ 584 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಆಡುತ್ತಿರುವ ಜಮ್ಮು ಮತ್ತು ಕಾಶ್ಮೀರ ತಂಡವು, ಅನುಭವಿ ಬೌಲಿಂಗ್ ವಿಭಾಗವನ್ನು ಹೊಂದಿರುವ ಕರ್ನಾಟಕ ತಂಡವನ್ನು ಸಮರ್ಥವಾಗಿ ಎದುರಿಸಿತು. ತಂಡದ ಪರ ಶುಭಂ ಪುಂಡಿರ್ ಶತಕ ಬಾರಿಸಿದರೆ, ನಾಯಕ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ! – Kannada News | Lunar Eclipse 2026: Astrological Predictions for Virgo by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣದ ಕನ್ಯಾ ರಾಶಿಯವರ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಕನ್ಯಾ ರಾಶ್ಯಾಧಿಪತಿ ಬುಧ ಗ್ರಹಣವನ್ನು ವೀಕ್ಷಿಸುತ್ತಿದ್ದಾನೆ. ಉತ್ತರ, ಹಸ್ತಾ, ಚಿತ್ತಾ ನಕ್ಷತ್ರದವರಿಗೆ ಇದು ಅನ್ವಯಿಸುತ್ತದೆ. ಗ್ರಹಣವು 12ನೇ ಮನೆ, ದುಃಸ್ಥಾನದಲ್ಲಿ ಸಂಭವಿಸುವುದರಿಂದ ಕನ್ಯಾ ರಾಶಿಯವರು ಬಹಳಷ್ಟು ಜಾಗ್ರತೆಯಿಂದ ಇರಬೇಕು. ಅಧಿಕ ಖರ್ಚು, ಕಣ್ಣಿನ ಸಮಸ್ಯೆ, ರಕ್ತದೊತ್ತಡದ ಸಮಸ್ಯೆ, ನಿದ್ರಾಹೀನತೆ, ಆತಂಕ, ಮತ್ತು ಆತುರದ ನಿರ್ಧಾರಗಳಿಂದ ದೂರವಿರುವುದು…

Read More

‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ತಡೆ: ಹೈಕೋರ್ಟ್ ನೀಡಿದ ಕಾರಣವೇನು? – Kannada News | This is the reason why High Court stayed the release of The Kerala Story 2

ಲವ್ ಜಿಹಾದ್ ಕುರಿತ ಕಥೆ ಹೊಂದಿರುವ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಈ ವಾರ ಬಿಡುಗಡೆ ಆಗುತ್ತಿಲ್ಲ. ಫೆಬ್ರವರಿ 27ರಂದು ರಿಲೀಸ್ ಮಾಡಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಈ ಸಿನಿಮಾದ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಚಿತ್ರತಂಡಕ್ಕೆ ಆಘಾತ ಆಗಿದೆ. ಚಿತ್ರದ ಟೀಸರ್ ಬಿಡುಗಡೆ ಆದ ಬಳಿಕ ಅನೇಕರಿಂದ ವಿರೋಧ ವ್ಯಕ್ತವಾಗಿತ್ತು. ಕೆಲವರು ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದರು. ವಿಚಾರಣೆ ನಡೆಸಿರುವ ಕೇರಳ…

Read More

ನಕಲಿ ಪ್ರಶ್ನೆಪತ್ರಿಕೆ ಹಾವಳಿ: ವಿದ್ಯಾರ್ಥಿಗಳೇ ನಂಬಿ ಮೋಸ ಹೋಗದಿರಿ ಎಂದ KSEAB – Kannada News | KSEAB Alerts Students Against Fake 2nd PUC Question Papers

ಬೆಂಗಳೂರು, ಫೆಬ್ರವರಿ 26: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಕೌಂಟ್​​ಡೌನ್​​ ನಡುವೆ ಕೆಲವು ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆಗಳನ್ನು ಹಂಚುತ್ತಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ, ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಪ್ರಶ್ನೆಪತ್ರಿಕೆ ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಂಬಂಧಪಟ್ಟವರನ್ನು ಪತ್ತೆಹಚ್ಚಲು ಸೈಬರ್ ಪೊಲೀಸರಿಗೆ ದೂರು ನೀಡೋದಾಗಿಯೂ ತಿಳಿಸಿದ್ದಾರೆ. ಕರ್ನಾಟಕ ಬೋರ್ಡ್ SSLC ಪರೀಕ್ಷೆಗಳು ಮಾರ್ಚ್ 18ರಿಂದ ಆರಂಭವಾಗಲಿದ್ದರೆ,…

Read More

ಮತ್ತೆ ಕಾಡಾನೆ ಕಿರಿಕ್: ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನ ತಡೆದು ನಿಲ್ಲಿಸಿದ ಒಂಟಿ ಸಲಗ – Kannada News | Wild elephant Stops Buses in Ambikanagar And bommanahalli Road at Uttara Kananda

ಕಾರವಾರ, (ಫೆಬ್ರವರಿ 26): ಚಾಮರಾಜನಗರ ಮಾತ್ರವಲ್ಲ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಕಾಡಾನೆ (Wild elephant) ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡಾನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದ ನಿಲ್ಲಿಸಿದೆ. ಹೌದು..ಉತ್ತರ ಕನ್ನಡ ಜಿಲ್ಲೆಯ ಅಂಬಿಕಾನಗರ–ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂಟಿ ಸಲಗ ರಸ್ತೆಯಲ್ಲಿ ನಿಂತು ಸಾರಿಗೆ ಬಸ್ ಅನ್ನ​ ಅಡ್ಡಹಾಕಿ ತಡೆದು ನಿಲ್ಲಿಸಿದೆ. ಇದರಿಂದ ಬಸ್​​ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಬಳಿಕ ಬಸ್​​ ಚಾಲಕ ಮೇಲಿಂದ ಮೇಲೆ ಹಾರ್ನ್ ಮಾಡಿದ್ದರಿಮದ ಕಾಡಾನೆ ರಸ್ತೆ ಬಿಟ್ಟು ಸೈಡಿಗೆ ತೆರಳಿದ್ದು,…

Read More

Viral News: ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾವು! – Kannada News | 9 Year Old Girl Dies Of Heart Attack in Rajasthan School During Playtime

ಜೈಪುರ, ಫೆಬ್ರವರಿ 26: ರಾಜಸ್ಥಾನದ ಗೋಟನ್‌ನಲ್ಲಿರುವ ಖಾಸಗಿ ಶಾಲೆಯ ಆಟದ ಮೈದಾನದಲ್ಲಿ ಆಟವಾಡುತ್ತಿದ್ದಾಗ 9 ವರ್ಷದ ಬಾಲಕಿ ಹೃದಯಾಘಾತದಿಂದ (Heart Attack) ಕುಸಿದುಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಆಕೆ ಆಡುವಾಗ ಕುಸಿದುಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟ ಮಗುವನ್ನು 5ನೇ ತರಗತಿಯ ವಿದ್ಯಾರ್ಥಿನಿ ದಿವ್ಯಾ ಎಂದು ಗುರುತಿಸಲಾಗಿದೆ. ಫೆಬ್ರವರಿ 23ರಂದು ಬೆಳಿಗ್ಗೆ 7.48ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬೆಳಗಿನ ಪ್ರಾರ್ಥನೆಗೆ ಇನ್ನೂ ಸಮಯವಿತ್ತು. ಹೀಗಾಗಿ ಹಲವಾರು ಮಕ್ಕಳು ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದರು. ದಿವ್ಯಾ…

Read More

ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮಲ್ಲಿಕಾರ್ಜುನ ಮುತ್ಯಾನ ಬಗ್ಗೆ ಹೇಳಿದ್ದಿಷ್ಟು – Kannada News | Mallikarjuna Mutya POCSO Case: Video statement released by girl’s parents

ಯಾದಗಿರಿ, ಫೆಬ್ರವರಿ 26: ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ವಿರುದ್ಧ ಪೋಕ್ಸೋ ಕೇಸ್​ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ಪರಾರಿಯಾಗಿರುವ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಬೆನ್ನಲ್ಲೇ ಇತ್ತ ಮಹಾರಾಷ್ಟ್ರದ ಸೊಲ್ಲಾಪುರದಿಂದ ಅಪ್ರಾಪ್ತ ಬಾಲಕಿ‌ ಪೋಷಕರಿಂದು ಕೂಡ ವಿಡಿಯೋ ಹೇಳಿಕೆ ಬಿಡುಗಡೆ ಮಾಡಲಾಗಿದೆ. ನಮ್ಮ ಕುಟುಂಬ ಮಲ್ಲಿಕಾರ್ಜುನ ಮುತ್ಯಾ ಅವರ ಭಕ್ತರೇ ಇದ್ದೇವೆ. ಸುಮಾರು ಮೂರು ನಾಲ್ಕು ವರ್ಷದಿಂದ ಮಲ್ಲಿಕಾರ್ಜುನ ದರ್ಶನಾಶೀರ್ವಾದ ಪಡೆಯಲು ಹೋಗುತ್ತೇವೆ. ಮಗಳ ಹುಟ್ಟುಹಬ್ಬಕ್ಕೆ ಆಶೀರ್ವಾದ ಪಡೆಯಲು ಕುಟುಂಬಸ್ಥರು ಅಪ್ಪಾಜಿ‌…

Read More

ಅನಿಲ್ ಅಂಬಾನಿಗೆ ಇನ್ನಷ್ಟು ಸಂಕಷ್ಟ; ನಿನ್ನೆ 3,716 ಕೋಟಿ ರೂ ಆಸ್ತಿ ಮುಟ್ಟುಗೋಲು; ಈಗ ಸಿಬಿಐನಿಂದ ಹೊಸ ಕೇಸ್ ದಾಖಲು – Kannada News | Anil Ambani faces fresh charges, as CBI files case based on complaint by Bank of Baroda

ನವದೆಹಲಿ, ಫೆಬ್ರುವರಿ 26: ರಿಲಾಯನ್ಸ್ ಗ್ರೂಪ್​ನ ಮುಖ್ಯಸ್ಥ ಅನಿಲ್ ಅಂಬಾನಿ (Anil Ambani) ಅವರ ಸಂಕಷ್ಟ ನಿಲ್ಲುತ್ತಿಲ್ಲ. ಬುಧವಾರ ಅನಿಲ್ ಅಂಬಾನಿ ಅವರ ಮುಂಬೈ ನಿವಾಸವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದ ಬೆನ್ನಲ್ಲೇ ಇವತ್ತು ಸಿಬಿಐನಿಂದ ಅವರ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ. 2013ರಿಂದ 2017ರ ಅವಧಿಯಲ್ಲಿ ಬ್ಯಾಂಕ್ ಆಫ್ ಬರೋಡಾಗೆ 2,223.17 ಕೋಟಿ ರೂ ವಂಚನೆ ಎಸಗಿದ ಆರೋಪದಲ್ಲಿ ಅನಿಲ್ ಅಂಬಾನಿ ಹಾಗು ಆರ್​ಕಾಂ ಕಂಪನಿ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ….

Read More

Event Calendar March 2026: ಮಾರ್ಚ್‌ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳಿವು – Kannada News | Event Calendar March 2026: What are the national and international days celebrated in the month of March?

ಮಾರ್ಚ್‌ ಈವೆಂಟ್‌ ಕ್ಯಾಲೆಂಡರ್Image Credit source: Pinterest ಪ್ರತಿ ತಿಂಗಳಲ್ಲೂಸಹ  ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಒಂದಷ್ಟು ವಿಶೇಷ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ.  ಹೌದು ಒಂದೊಂದು ಉದ್ದೇಶ ಹಾಗೂ ಧ್ಯೇಯವಾಕ್ಯವನ್ನು ಇಟ್ಟುಕೊಂಡು ಜಾಗೃತಿ ಮೂಡಿಸುವಂತಹ ಸಲುವಾಗಿ ಈ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. ಇನ್ನೇನೂ ಮಾರ್ಚ್‌ (March)  ತಿಂಗಳು ಆರಂಭವಾಗುತ್ತಿದ್ದು, ವರ್ಷದ ಈ ಮೂರನೇ ತಿಂಗಳಲ್ಲಿ ನಿದ್ರಾ ದಿನದಿಂದ ಹಿಡಿದು ವಿಶ್ವ ಅರಣ್ಯ ದಿನದವರೆಗೆ ಯಾವೆಲ್ಲಾ ರಾಷ್ಟ್ರೀಯ, ಅಂತಾರಾಷ್ಟ್ರೀಯ ಜಾಗೃತಿ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತವೆ ಎಂಬುದರ ಸಂಪೂರ್ಣ ವಿವರವನ್ನು…

Read More

Viral: ಬೆಂಗಳೂರಿನಲ್ಲಿ 38 ಲಕ್ಷ ರೂ ಆಫರ್, ದುಬೈನಲ್ಲಿ ತಿಂಗಳಿಗೆ 5 ಲಕ್ಷ ರೂ ಸಂಬಳ; ವೃತ್ತಿ ಆಯ್ಕೆಯ ಬಗ್ಗೆ ಸಲಹೆ ಕೇಳಿದ ಟೆಕ್ಕಿ – Kannada News | Bengaluru: 38 lakh annual offer in Bengaluru, Rs 5 lakh monthly salary in Dubai: Techie seeks advice on career choice

ಬೆಂಗಳೂರು, ಫೆಬ್ರವರಿ 26: ಉದ್ಯೋಗ (job) ಎಲ್ಲರಿಗೂ ಅತ್ಯವಶ್ಯಕ. ಕೈಯಲ್ಲಿ ಕೆಲಸವಿದ್ದರೆ ಮಾತ್ರ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯ. ಆದರೆ ಎರಡು ಉದ್ಯೋಗ ಅವಕಾಶಗಳು ಬಂದಾಗ ಯಾವುದನ್ನು ಆಯ್ಕೆ ಮಾಡಿಕೊಳ್ಳುವುದು ಎನ್ನುವ ಗೊಂದಲ ಮೂಡುತ್ತದೆ. ಇದೀಗ 27 ವರ್ಷದ ಬೆಂಗಳೂರಿನ (Bengaluru) ಟೆಕ್ಕಿಗೆ ಇದೇ ರೀತಿ ಆಗಿದ್ದು, ಹೀಗಾಗಿ ಅವರು ನೆಟ್ಟಿಗರ ಸಲಹೆ ಕೇಳಿದ್ದಾರೆ. 38 ಲಕ್ಷ ರೂ ಆಫರ್‌ನೊಂದಿಗೆ ಭಾರತದಲ್ಲಿಯೇ ಇರಬೇಕೇ ಅಥವಾ ತಿಂಗಳಿಗೆ ಸರಿಸುಮಾರು 5.19 ಲಕ್ಷ ರೂ ಸಂಬಳಕ್ಕೆ ದುಬೈಗೆ ಹೋಗಬೇಕೇ ಎಂದು ಕೇಳಿದ್ದಾರೆ….

Read More