Headlines

nagaraj11081993

ಬೆಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಮೇ 10ರಂದು ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ: ಮಾಹಿತಿ ಇಲ್ಲಿದೆ – Kannada News | Bengaluru Traffic Alert: PM Modi Visit May 10; Check Route Changes and Restrictions

ಬೆಂಗಳೂರು, ಮೇ 09: ನಾಳೆ (ಮೇ 10) ಬೆಂಗಳೂರಿಗೆ ಪ್ರಧಾನ ಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆ ನರೇಂದ್ರ ಮೋದಿಯವರು ಭಾಗಿಯಾಗಲಿರುವ ಕಾರ್ಯಕ್ರಮದ ಸ್ಥಳದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹೆಚ್ಎಎಲ್ ಗೇಟ್ ನಂ.30ರ ಮುಂಭಾಗ ನಾಳೆ ಮುಂಜಾನೆ 5ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಮಾರಂಭ ನಡೆಯಲಿದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಠಿಯಿಂದ ಕೆಲವು ಮಾರ್ಪಾಡು ಮಾಡಿರೋದಾಗಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಚಾರ ನಿರ್ಬಂಧಿತ ಪ್ರದೇಶಗಳು ಸಂಚಾರ ಸಲಹೆ /Traffic Advisory” pic.twitter.com/amj0UcucFu — DCP SOUTH…

Read More

ದುಬಾರಿ ಎಲೆಕ್ಟ್ರಿಕ್ ಕಾರು ಖರೀದಿಸಿದ ಕಿರುತೆರೆ ನಟಿ ಮೋಕ್ಷಿತಾ ಪೈ – Kannada News | Mokshitha Pai Buys Mahindra XUV400 EV Car Post Big Boss Jagaddhatri Actress Invests

ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಮೋಕ್ಷಿತಾ ಪೈ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ತಮ್ಮ ಕನಸಿನ ಹೊಸ ಕಾರನ್ನು ಮನೆಗೆ ತಂದಿದ್ದು, ಈ ಸಂಭ್ರಮದ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಜಗದ್ಧಾತ್ರಿ’ ಹೆಸರಿನ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮೊದಲು ಈ ಕಾರು ಅವರ ಮನೆಗೆ ಬಂದಿದೆ. ಇತ್ತೀಚೆಗೆ ಪೆಟ್ರೋಲ್​-ಡೀಸೆಲ್ ಕಾರುಗಳ ಬದಲು ಎಲೆಕ್ಟ್ರಿಕ್ ಕಾರುಗಳತ್ತ ಜನರು ಹೆಚ್ಚು ಒಲವು ತೋರಿಸುತ್ತಿದ್ದಾರೆ. ಮೋಕ್ಷಿತಾ…

Read More

ವಿಜಯ್​ಗೆ ಸಿಗಲಿದೆಯಾ ವಿಸಿಕೆ ಬೆಂಬಲ; ಸುಳಿವು ನೀಡಿದ ಎಐಎಡಿಎಂಕೆ ನಾಯಕ ಪಳನಿಸ್ವಾಮಿ – Kannada News | VCK chief Thirumavalavan will officially announce stance on support to TVK by evening

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಈಗಾಗಲೇ ಕಾಂಗ್ರೆಸ್, ಸಿಪಿಐ, ಸಿಪಿಎಂ ಪಕ್ಷ ಬೆಂಬಲ ಘೋಷಿಸಿರುವುದರಿಂದ 116 ಶಾಸಕರು ವಿಜಯ್ ಕಡೆಗಿದ್ದಾರೆ. ಆದರೆ, ಬಹುಮತಕ್ಕೆ ಇನ್ನೂ 2 ಸ್ಥಾನಗಳ ಅಗತ್ಯವಿದೆ. ಇದೀಗ ವಿಸಿಕೆ ತನ್ನ ಬೆಂಬಲ ನೀಡುತ್ತದೆಯೇ? ಇಲ್ಲವೇ? ಎಂಬುದು ಇಂದು ಸಂಜೆಯೊಳಗೆ ಗೊತ್ತಾಗಲಿದೆ. ಇಂದು ಸಂಜೆ 4 ಗಂಟೆಯ ಬಳಿಕ ತಮ್ಮ ಬೆಂಬಲ ಯಾವ ಪಕ್ಷಕ್ಕೆ ಎಂಬುದನ್ನು ಘೋಷಿಸುವುದಾಗಿ ವಿಸಿಕೆ ತಿಳಿಸಿದೆ. ಹೀಗಾಗಿ, ಇಂದು ಸಂಜೆಯೊಳಗೆ ತಮಿಳುನಾಡಿನ ಸರ್ಕಾರ ರಚನೆಯ ಬಿಕ್ಕಟ್ಟು…

Read More

ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ ಬಗ್ಗೆ ಸಚಿವ ಮುನಿಯಪ್ಪ ಹೇಳಿದ್ದಿಷ್ಟು – Kannada News | KH Muniyappa Speaks on Roster Point Issue in Internal Reservation Posts

ಬೆಂಗಳೂರು, ಮೇ 09: ಕರ್ನಾಟಕ ಸರ್ಕಾರವು ನಾಗಮೋಹನ್‌ದಾಸ್ ವರದಿಯನ್ನು ಆಧರಿಸಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಚಾರಿತ್ರಿಕ ನಿರ್ಧಾರವನ್ನು ಕೈಗೊಂಡಿದೆ. ದಶಕಗಳಿಂದ ಬಾಕಿ ಉಳಿದಿದ್ದ ರೋಸ್ಟರ್ ಬಿಂದುವಿನ ಸಮಸ್ಯೆಗಳು ಮತ್ತು ಗೊಂದಲಗಳಿಗೆ ಈ ನಿರ್ಧಾರವು ಸ್ಪಷ್ಟ ಪರಿಹಾರವನ್ನು ನೀಡುವ ಗುರಿ ಹೊಂದಿದೆ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 4೦ ವರ್ಷದ ಸಂಘಸಂಸ್ಥೆಗಳ ದಲಿತ ಸಂಘ ಸಮಿತಿಗಳ ಹೋರಾಟಕ್ಕೆ ಫಲ ಸಿಕ್ಕಿದೆ. ರೋಸ್ಟರ್ ಬಿಂದುವಿನ ಸಮಸ್ಯೆಗಳನ್ನು ಪರಿಹರಿಸಲು ಹೊಸ ಸೂತ್ರವನ್ನು ಅಳವಡಿಸಲಾಗಿದೆ. 15…

Read More

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ: ಆರೋಪಿಯೂ ಸೇರಿ ಇಬ್ಬರ ಸ್ಥಿತಿ ಗಂಭೀರ – Kannada News | Hubballi Acid Attack: 6 Month Old Baby and 4 Others Injured in Domestic Dispute

ಹುಬ್ಬಳ್ಳಿ, ಮೇ 09: ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯ ತಾರಿಹಾಳದ ವಾಜಪೇಯಿ ನಗರದಲ್ಲಿ ನಡೆದಿದೆ. ನಾದಿನಿಯರ ಫೋಟೋ ತೆಗೆದ ವಿಚಾರಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋದ ಪರಿಣಾಮ ಸುರೇಶ್​ ಎಂಬಾತ ಕುಟುಂಬದ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ 6 ತಿಂಗಳ ಮಗುವಿನ ಮುಖ, ಬಾಯಿಗೂ ಆ್ಯಸಿಡ್​​ ತಗುಲಿದ್ದು, ರಾಜೇಶ್ವರಿ (24) ಎಂಬವರ ಸ್ಥಿತಿ ಚಿಂತಾಜನಕವಾಗಿದೆ. ಕ್ಷುಲ್ಲಕ…

Read More

ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ – Kannada News | Mysore Pak, Grand Meal Prepared for Fans at BS Yediyurappa Abhimanotsava

ಚಿತ್ರದುರ್ಗ, ಮೇ 09: ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವ ಹಿನ್ನೆಲೆ ಮಾದಾರ ಚೆನ್ನಯ್ಯ ಮಠದ ಸಮೀಪ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ಪ್ರವೇಶ ದ್ವಾರಗಳನ್ನು ಏಳು ಸುತ್ತಿನ ಕೋಟೆಯ ಮಾದರಿಯಲ್ಲಿ ನಿರ್ಮಿಸಲಾಗಿದ್ದು, ನರೇಂದ್ರ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಅವರ ಕಟೌಟ್‌ಗಳು ರಾರಾಜಿಸುತ್ತಿವೆ. ಕಾರ್ಯಕ್ರಮಕ್ಕೆ ಬಿ.ಎಸ್.ವೈ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಉಪಹಾರ ಮತ್ತು ಭೋಜನ ವ್ಯವಸ್ಥೆ ಮಾಡಲಾಗಿದೆ. 1,250ಕ್ಕೂ ಹೆಚ್ಚು ಬಾಣಸಿಗರು…

Read More

Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ – Kannada News | BSY Abhimanotsava Live: Grand Celebration in Chitradurga

ಚಿತ್ರದುರ್ಗ, ಮೇ 09: ಕೋಟೆ ನಾಡು ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ‘ಅಭಿಮಾನೋತ್ಸವ’ಕ್ಕೆ ಸಾಕ್ಷಿಯಾಗುತ್ತಿದೆ. ಮಾದಾರ ಚನ್ನಯ್ಯ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಬೃಹತ್ ವೇದಿಕೆಯು ಏಳುಸುತ್ತಿನ ಕೋಟೆಯ ಮಾದರಿಯಲ್ಲಿದ್ದು, ಬಿಎಸ್ ವೈ ಮತ್ತು ಅಮಿತ್ ಶಾ ಅವರ ಬೃಹತ್ ಭಾವಚಿತ್ರಗಳಿಂದ ಕಂಗೊಳಿಸುತ್ತಿದೆ. ಬಿ.ವೈ.ವಿಜಯೇಂದ್ರ ಸೇರಿದಂತೆ ಲಕ್ಷಾಂತರ ಅಭಿಮಾನಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

IPL 2026: ಇಬ್ಬರು ಔಟ್, ಮತ್ತಿಬ್ಬರು ಇನ್: ಹೀಗಿರಲಿದೆ RCB ಪ್ಲೇಯಿಂಗ್ ಇಲೆವೆನ್ – Kannada News | RCB are likely to make major changes in their playing XI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾಯ್​ಪುರ್​ನಲ್ಲಿ ನಾಳೆ (ಮೆ.9) ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್​ಸಿಬಿ ಕಳೆದ ಎರಡು ಮ್ಯಾಚ್​ಗಳಲ್ಲೂ ಸೋಲನುಭವಿಸಿದೆ. ಈ ಸೋಲಿಗೆ ಮುಖ್ಯ ಕಾರಣ ಆರ್​ಸಿಬಿ ತಂಡದ ಕಳಪೆ ಬ್ಯಾಟಿಂಗ್. ಅದರಲ್ಲೂ ರೊಮಾರಿಯೊ ಶೆಫರ್ಡ್ ಹಾಗೂ ಜಿತೇಶ್ ಶರ್ಮಾ…

Read More

ಯಶಸ್ವಿ ಜೈಸ್ವಾಲ್ ಮತ್ತು ಶಫಾಲಿ ವರ್ಮಾಗೆ ‘ನಾಡಾ’ ನೋಟಿಸ್ – Kannada News | NADA Issues Notices to Yashasvi Jaiswal and Shafali Verma

ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆಗಳಾದ ಯಶಸ್ವಿ ಜೈಸ್ವಾಲ್ ಮತ್ತು ಶಫಾಲಿ ವರ್ಮಾ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉದ್ದೀಪನ ಮದ್ದು ಸೇವನೆ ತಡೆ ಘಟಕದ (NADA) ಅಧಿಕಾರಿಗಳು ನಡೆಸುವ ಡೋಪಿಂಗ್ ಪರೀಕ್ಷೆಗೆ ಗೈರಾಗಿರುವ ಕಾರಣ, ಈ ಇಬ್ಬರಿಗೆ ನಾಡಾ ನೋಟಿಸ್ ಜಾರಿ ಮಾಡಿದೆ. ಏನಿದು ಘಟನೆ? ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆಯ (NADA) ನಿಯಮದಂತೆ, ‘ನೋಂದಾಯಿತ ಪರೀಕ್ಷಾ ಪೂಲ್’ನಲ್ಲಿರುವ ಕ್ರೀಡಾಪಟುಗಳು ತಾವು ಇರುವ ಸ್ಥಳದ ಮಾಹಿತಿಯನ್ನು ಮೊದಲೇ ನೀಡಬೇಕಾಗುತ್ತದೆ. ಆದರೆ, ನಿಗದಿಪಡಿಸಿದ ಸಮಯದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು…

Read More

ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ಮೂವರು ಗಂಭೀರ, ಹಲವರಿಗೆ ಗಾಯ – Kannada News | Wedding Party Bus Overturns on Lake Bund Near Soraba; Major Tragedy Averted, 3 Seriously Injured

ಶಿವಮೊಗ್ಗ, ಮೇ 09: ಕೆರೆಯ ಏರಿ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿಯಾಗಿರುವ ಘಟನೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ. ಸಿದ್ದಾಪುರದಿಂದ ಹಾನಗಲ್‌ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಆನವಟ್ಟಿ – ಸೊರಬ ಮಾರ್ಗವಾಗಿ ಸಂಚರಿಸುವ ವೇಳೆ ಅಪಘಾತಕ್ಕೀಡಾಗಿದೆ. ಕೆರೆ ಏರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಮಗುಚಿ ಬಿದ್ದಿದೆ. ಅದೇಷ್ಟವಶಾತ್​​ ದೊಡ್ಡ ಅನಾಹುತ ತಪ್ಪಿದ್ದು, ಘಟನೆಯಲ್ಲಿ ಮೂವರು ಗಂಬೀರ ಗಾಯಗೊಂಡಿದ್ದಾರೆ. ಬಸ್​​ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು,…

Read More